ಒಟ್ಟು 361 ಕಡೆಗಳಲ್ಲಿ , 69 ದಾಸರು , 311 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಿಡಿ ಮನವೇ ಸಂತರ ಸಂಗ ಪ ಹಿಡಿಮನವೇ ಸಂತರ ಸಂಗಾ | ಭವ ಭಯ ಭಂಗಾ | ಅಡಿಗಳಗೆರಗುತ ಸಾಷ್ಟಾಂಗಾ | ಪಡಕೋ ಚಿತ್ಸುಖದಂಗಾ 1 ಸಿಕ್ಕಿದು ಭಾಗವತರಣ | ಶರಣಾ | ಸಿಕ್ಕಲು ದಕ್ಕಿಸಿಕೋ ಕರುಣಾ | ಉಕ್ಕಲು ಜ್ಞಾನದಾ ನಿಜ ಸ್ಪರಣಾ | 2 ಗುಕ್ಕದವನೇ ತಾ ಹರಿಶರಣಾ | ಶರಣೆಂಬುದು ಸು¯ಭವಲ್ಲಾ | ಹರಿಮಯ ಕಾಂಬನು ಜಗವೆಲ್ಲಾ | ನೆರೆ ಹಮ್ಮ ಮಾತುಗಳುಳದಿಲ್ಳಾ | ಸರಿ ಸ್ತುತಿ ನಿಂದೆಗೆ ಬಗಿಬಲ್ಲಾ 3 ಎಲ್ಲರ ಮನದಂತಾನಾಗಿ | ನಿಲ್ಲುವ ಜನದೊಳು ನಿಜಯೋಗಿ | ಫುಲ್ಲನಾಭನ ಭಕುತಿಲಿ ಮುಣುಗಿ | ಬಲ್ಲವಿಕೆಯ ದೋರನು ಬಾಗೇ 4 ಏನೋ ಜ್ಞಾನಿಗಳಾನಂದಾ | ತಾನೇ ಬಲ್ಲನು ಶ್ರೀ ಗೋವಿಂದಾ | ಖೂನಕ ಸಾರಿದ ನುಡಿವಂದಾ | ಸ್ವಾನುಭವದೀ ಮಹಿಪತಿ ಕಂದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಿಡಿ ಹಿಡಿರಿಂದು ಸಿಕ್ಕಿದ ಕಳ್ಳನಾ ಬಿಡಬ್ಯಾಡಿರೆಂದಿಗೆ ಹಜ್ಜೆನೆಲಿಗೆ ತಾರನಾ | ಮೈಯ್ಯ ದೋರನಾ ಪ ಹೃದಯದೋಳಗಿನಾ ಗಂಟವ ಬಿಡುತಾ ಮುದದಿಕುಳ್ಳಿರಲಲ್ಲಿ ಬಂದು ನೋಡುತಾ ಇದರ ಚಿತ್ತ ಪೇಠಾರಿಗೆ ಕೈಯ್ಯಾನೀಡುತಾ ಒದಗಿಕದ್ದೊಯ್ದತಿರಗದೆ ಧನಿ ಮಾಡುತಾಧನಿ ಮಾಡುತಾ 1 ಖೂನ ತನ್ನಯ ಬಲ್ಲಾಸಾಧುಜನವಾ ಕಾಣುತಾರ್ಜಿತ ಶೆಳೆದು ಕೊಂಡು ಧನವಾ ಏನ ಹೇಳಲಿ ಬಿಡನು ಅವರ ಪ್ರಾಣವಾ ವನವಾಕೊಂಡು ಗೋಧನವಾ 2 ಅಡದಾರಿಯಾ ನಡದು ಹೋಗಿ ಬಿದ್ದನಾ ನಡುವೆ ತೊಳಲಿಸುವನು ವಿರುದ್ಧನಾ ಹಿಡಿ ಗುರು ಮಹಿಪತಿ ಪ್ರಭು ಪ್ರಸಿದ್ಧನಾ ಬಿಡದೆ ಭಂಡಾರಕಾಯಲಿಡುವ ಪ್ರಬುದ್ಧನಾ ವಾಜಿಲಿದ್ದನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹುಟ್ಟಿ ಹುಟ್ಟಿ ಹೊಂದಲಾರೆನಯ್ಯ ಕೃಷ್ಣನೆ ುೀಕಷ್ಟವನ್ನು ಬಿಡಿಸಿ ಕಾಯಬೇಕು ಕೃಷ್ಣನೆ ಪಇಷ್ಟು ದಿವಸ ನಿನ್ನನರಿಯದಿದ್ದೆ ಕೃಷ್ಣನೆ ನೀನುದ್ಟೃುಟ್ಟು ಹುಟ್ಟದಂತೆ ಮಾಡು ಕೃಷ್ಣನೆಅ.ಪಗರ್ಭದೊಳು ನವಮಾಸ ಸಿಕ್ಕಿ ಕೃಷ್ಣನೆ ನೊಂದೆನರ್ಭಕತ್ವದಲ್ಲಿ ಮುಗ್ಧನಾದೆ ಕೃಷ್ಣನೆನಿರ್ಬಂಧವಾುತು ವಿದ್ಯದಲ್ಲಿ ಕೃಷ್ಣನೆ ಮತ್ತೆನಿರ್ಭರದ ಪ್ರಾಯದಲ್ಲಿ ಬೆರೆತೆ ಕೃಷ್ಣನೆ 1ಮದಗಳೆಂಟರಿಂದ ಮೈಯ ಮರೆತೆ ಕೃಷ್ಣನೆ ಬೇಗಹುದುಗಿ ಕ್ಲೇಶವೈದರಲ್ಲಿ ಬಿದ್ದೆ ಕೃಷ್ಣನೆವೊದಗಿ ಪಾಶವೆಂಟರಿಂದ ಬಿಗಿದೆ ಕೃಷ್ಣನೆ ಹಮ್ಮುಇದಕೆ ಮೂಲವಾುತು ಕರ್ಮದಿಂದ ಕೃಷ್ಣನೆ 2ಅರಿಗಳರುವರಿಂದ ಕೊರಗುತಿಹೆನು ಕೃಷ್ಣನೆ ಮುಂದನರಿಯದವರ ಸಂಗವನ್ನು ಮಾಡಿ ಕೃಷ್ಣನೆಉರುಳಿಬಿದ್ದೆ ವಿಷಯಕೂಪದಲ್ಲಿ ಕೃಷ್ಣನೆ ುದನುಪರಿವ ಶಕ್ತಿಯನ್ನು ಕಾಣೆನಯ್ಯ ಕೃಷ್ಣನೆ 3ಮಾಯಾಕಾರ್ಯ ದೇಹವೆನ್ನದೆಂದು ಕೃಷ್ಣನೆ ಅದುಹೇಯವೆಂದು ಕಾಣದಾದೆನಯ್ಯ ಕೃಷ್ಣನೆ ನೋಯದಂತೆ ಪೋಷಣೆಯ ಮಾಡಿ ಕೃಷ್ಣನೆ ುೀಗ ನೋಯಲಾಗಿ ಭಯವು ಜನಿಸಿತಯ್ಯ ಕೃಷ್ಣನೆ 4ಹರಿವ ನದಿಯ ನಡುವೆ ಪರ್ಣ ಸಿಕ್ಕಿ ಕೃಷ್ಣನೆ ಸುಳಿಯಬೆರಸಿ ತಡಿಯ ತಾನು ಸೇರದಂತೆ ಕೃಷ್ಣನೆಕುರುಡ ಕೂಪವರಿಯದುರುಳುವಂತೆ ಕೃಷ್ಣನೆ ಕಾಲಶರಧಿಯಲ್ಲಿ ಮುಳುಗಿ ನೆಲೆಯ ಕಾಣೆ ಕೃಷ್ಣನೆ 5ಇರುಹೆ ಕಡೆಯು ಬ್ರಹ್ಮನಾದಿಯಾಗಿ ಕೃಷ್ಣನೆ ಲೋಕಮರುಳುಗೊಂಡು ಮಾಯೆುಂದ ಮರುಗಿ ಕೃಷ್ಣನೆ ಕೊರಗುತಿದೆ; ಮಾಯೆಯನ್ನು ದಾಟಿ ಕೃಷ್ಣನೆ ಬೇಗಪರಮನೊಳು ಬೆರೆಸಿ ಕೊರಗ ಬಿಡಿಸು ಕೃಷ್ಣನೆ 6ರಜ್ಜು ಸರ್ಪನಾಗಿ ತೋರಿ ಬೆದರೆ ಕೃಷ್ಣನೆ ಅದರಬೆಜ್ಜರವ ಪರಿವ ಮಂತ್ರವುಂಟೆ ಕೃಷ್ಣನೆರಜ್ಜುವೆಂದು ತಿಳಿವುದೊಂದೆ ಮಂತ್ರ ಕೃಷ್ಣನೆ ಹಾಗೆರಜ್ಜು ಸ್ಥಾನ ನಿನ್ನ ನಿಜವ ತೋರು ಕೃಷ್ಣನೆ 7ಕರ್ಮವೆ ಜನ್ಮಕ್ಕೆ ಹೇತುವೆನಲು ಕೃಷ್ಣನೆ ಅಂದುಬ್ರಹ್ಮವತ್ಸಪಾಲರಪಹರಿಸೆ ಕೃಷ್ಣನೆಕರ್ಮವಿತ್ತೆ ಬದುಲ ನಿರ್ಮಿಸಲು ಕೃಷ್ಣನೆ ಹಾಗೆಕರ್ಮವೆನ್ನದೀಗಲೆನ್ನ ಸಲಹು ಕೃಷ್ಣನೆ 8ದುರಿತ ದುಃಖದಿಂದ ನೋವ ಜನರ ಕೃಷ್ಣನೆ ಅವರದುರಿತಗಳ ನೂಕಿ ನಿನ್ನೊಳಿರಿಸು ಕೃಷ್ಣನೆತಿರುಪತೀಶ ದೇವ ವೆಂಕಟೇಶ ಕೃಷ್ಣನೆ ಮಾಯಾತೆರೆಯ ತೆಗೆದು ನಿನ್ನ ನಿಜವ ತೋರು ಕೃಷ್ಣನೆ 9ಓಂ ಸತ್ಯಸಂಕಲ್ಪಾಯ ನಮಃ
--------------
ತಿಮ್ಮಪ್ಪದಾಸರು
ಹುರುಡು ನಿನಗೆ ಥರವೇನೊ ಸ್ವಾಮಿ ಗರುಡವಾಹನ ಸುರಧೇನು ಪ. ಕುರುಡ ಕಾಣದೆ ಕೂಪದಲಿ ಬಿದ್ದರೆತ್ತದೆ ಮೊರಡುತನದಿ ಮುಖ ನೋಡುತ ನಗುವಂಥ ಅ.ಪ. ಜ್ಞಾನಮಾರ್ಗವ ಕಾಣದಿರುವ ದೀನ ಮಾನವನಿಗೆ ಮೋಹಭರವ ತಾನೆ ಕಲ್ಪಿಸಿ ತತ್ವದಿರುವ ಮುಚ್ಚಿ ನಾನಾ ಯೋಗಿಗಳಲ್ಲಿ ತರುವ ಮಾನವು ಸರಿಯೆ ಮಹಾನುಭಾವ ನಿನ್ನ ದೀನ ಬಂಧುತ್ವಕೆ ಹಾನಿ ಬಾರದೆ ಕೃಷ್ಣ 1 ಇಂದ್ರಿಯಾರ್ಥ ಸನ್ನಕರ್ಷವೆಂಬ ಬಂಧನದಲ್ಲಿ ಸಿಕ್ಕಿ ಬೀಳ್ವ ನಾನಾ ತಂದ್ರ ಸಾಗರ ಮುನಿಗಳ ಬಹು ಮಂಜನು ಮಾಯೆಯ ಗೆಲ್ವ ಹೊಂದಿಕೆಯನು ಸುಖ ಸಾಂದ್ರ ನೀನರಿಯೆಯ ಇಂದ್ರಾದಿಗಳನು ಎಂದೆಂದಿಗೂ ಸಲಹುವಿ 2 ಅದರಿಂದ ಸರ್ವಕಾಲದಲಿ ನೀನೆ ಒದಗಿ ಪೊಳೆವುತ್ತ ಮನದಲಿ ಪದಯುಗವಿರಿಸಿ ಶಿರದಲಿ ದಾಸಪದವ ಪಾಲಿಸು ಕರುಣದಲಿ ಭವ ವಂದ್ಯ ವೆಂಕಟಗಿರಿನಾಯಕ ಪದುಮಾಲಯೆ ಕೂಡಿ ಸದನದಿ ನೆಲೆಯಾಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ಹ್ಯಾಂಗಾದರು ಎನ್ನ ನೀ ರಕ್ಷಿಸ ಬೇಕೋ ಸಾಗರಶಯನ ಕೃಷ್ಣಾ ಪ ಭಾಗವತರ ಸಂಗ ಬೇಗದಿಂದಲಿ ಇತ್ತು ಹೋಗಲಾಡಿಸು ಭವವ ಶ್ರೀ ಕೃಷ್ಣ ಅ.ಪ ಬಾಲೇರ ಸಲುವಾಗಿ ಕೀಳು ಜನರಲ್ಲಿ ಶೀಲ ಜರಿದು ಯಾಚಿಸಿ ಕಾಳಿ ಮರ್ಧನ ನಿನ್ನ ಒಲುಮೆಯ ಪಡೆಯದೆ ಕಾಲ ಬಲಿಗೆ ಸಿಕ್ಕೆನೊ ಶ್ರೀ ಕೃಷ್ಣ 1 ಅಂಗಜನಾಟಕೆ ಹಗಲಿರುಳೆನ್ನದೆ ಪರ ಅಂಗನೆರ ಕೂಡಿ ಮಂಗಳಮಹಿಮ ತುರಂಗ ವದನ ದೇವ ಭಂಗಕ್ಕೆ ಗುರಿಯಾದೆನೊ ಶ್ರೀ ಕೃಷ್ಣ 2 ದುರುಳರ ಸಂಗವನೆಲ್ಲ ಜರಿದು ಶ್ರೀ ನರಹರೆ ಕಾರುಣ್ಯದಲಿ ಭಕ್ತನ ಅರಿಷಟ್ಕರನೆ ಕೊಂದು ಕರಿವರದನೆ ಘೋರ ನರಕಕ್ಕೆ ಭಯ ತಪ್ಪಿಸೋ ಶ್ರೀಕೃಷ್ಣ 3
--------------
ಪ್ರದ್ಯುಮ್ನತೀರ್ಥರು
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ)ಶ್ರೀನಿವಾಸಾಯ ನಮೋ ಪ.ಶ್ರೀನಿವಾಸಾಯ ಶತಭಾನುಪ್ರಕಾಶಾಯಶ್ರೀನಿವಾಸಾಯ ನಿಜ ಭಕ್ತಜನಪೋಷಾಯಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ.ದೋಷಗಂಧವಿದೂರ ಕೇಶಿಮುಖದಾನವ ವಿ-ನಾಶವಿಧಿಭವಸುಖನಿವಾಸ ವಾಸುಕಿಶಯನವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ-ಭೂಷ ಭೂತಾತ್ಮ ಭವಪಾಶಹರ ಪರತರ ದ-ಯಾ ಸಮುದ್ರ ವಿನಿದ್ರ ಭೂಶಯನ ಭೂರಿಪ್ರದಕೇಶವಾಯ ನಮೋನಮಃ 1ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತನಾರದಾದಿಮುನೀಂದ್ರವಾರಸನ್ನುತಪಾದನೀರರುಹದ್ವಂದ್ವನೆವಾರಿಜಾಸನಮುಖ್ಯಸುರರುತಿಳಿಯರು ನಿನ್ನಭೂರಿಮಹಿಮೆಗಳ ಸಾಕಾರವನು ಬಣ್ಣಿಸುವಧೀರನಾವನು ಮಹಾ ವೀರ ವಿಶ್ವಾಧಾರನಾರಾಯಣಾಯ ನಮೋ 2ವೇದವೇದ್ಯನೆ ದುರಿತಶೋಧನೆ ದೈತ್ಯಗಣ-ಛೇದಕನೆ ಸುರಸುಪ್ರಸಾದಕನೆ ಭಕ್ತಜನ-ಮೋದದಾಯಕ ಸ್ವಗತ ಭೇದವರ್ಜಿತಸಮಾನಾಧಿಕ್ಯರಹಿತ ಸತತಆದಿತ್ಯ ಶತಕೋಟಿತೇಜೋವಿರಾಜ ಮಹ-ದಾದಿಕಾರಣ ಮಧುವಿರೋಧಿ ಮಂಗಲಸುಖಾಂ-ಬೋಧಿ ಪದ್ಮಾಲಯವಿನೋದಿ ರಾಧಾರಮಣಮಾಧವಾಯ ನಮೋನಮಃ 3ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು-ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ-ನಂದ ಭರಿತ ಕಾಳಿಂದೀರಮಣ ರಾಮಚಂದ್ರಸನ್ನುತಮಹೇಂದ್ರವಂದಾರುಜನತ್ರಿದಶಮಂದಾರ ಕೋಮಲಿತವೃಂದಾವನವಿಹಾರ ಕಂದರ್ಪಜನಕ ಬಾ-ಳೇಂದುಶೇಖರಸಖ ಸನಂದನಾರ್ಚಿತ ಶ್ರೀಗೋವಿಂದಾಯತುಭ್ಯಂ ನಮಃ 4ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷಮುಷ್ಟಿಕಾಸುರವೈರಿ ಮುನಿಜನಮನೋಹಾರಿಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆತುಷ್ಟಿಯನು ನೀನಿತ್ತು ಸಲಹೊ ಸಾಮಜವರದಬೆಟ್ಟದೊಡೆಯನೆ ಕೃಪಾದೃಷ್ಟಿಯಿಂದಲಿನೋಡುವಿಷ್ಣವೇತುಭ್ಯಂ ನಮೋ 5ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತಬುಧಜನಪ್ರಿಯ ಭೂತಭಾವನ ಜಗನ್ನಾಥಪದುಮಾಕ್ಷ ಪಾಂಡವಪ್ರತಿಷ್ಠಾಪನಾಚಾರ್ಯಮದನಕೋಟಿಸ್ವರೂಪವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ-ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸವಿಧುಮಂಡಲಸ್ಥ ಸದ್‍ಹೃದಯಪಂಕಜವಾಸಮಧುಸೂದನಾಯ ನಮೋ 6ಅಕ್ರೂರವರದ ಸದತಿಕ್ರಮರ ಗೆಲಿದ ಹಯ-ವಕ್ತ್ರವೈಕುಂಠಾಖ್ಯ ಪುರವಾಸ ಜಗದೀಶಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನುಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ-ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿನಕ್ರಮದಹರನಾದ ಬ್ರಹ್ಮ ಗಂಗಾಪಿತತ್ರಿವಿಕ್ರಮಾಯ ನಮೋನಮಃ 7ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು-ದಾಮಸಖ ಪರಿಪೂರ್ಣಕಾಮ ಕೈರವದಳ-ಶ್ಯಾಮ ಕಲ್ಯಾಣ ನಿಸ್ಸೀಮ ಮಹಿಮನೆಸುಜನಸ್ತೋಮಸುರಕಾಮಧೇನುಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ-ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ-ರಾಮ ವಿಷ್ವಕ್ಸೇನ ವಿಶ್ವತೈಜಸಪ್ರಾಜÕವಾಮನಾಯ ನಮೋನಮಃ8ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ-ರಾಧಭಂಜನ ಭವಾಂಬೋಧಿಕುಂಭಜ ಭಜಕ-ರಾದವರನುದ್ಧರಿಪ ಬೋಧರೂಪನೆಚತುಷ್ಟಾದ ಪಾವನಚರಿತನೆಗಾಧಿಜಾಧ್ವರಪಾಲ ಗರುಡಧ್ವಜ ದಯಾಳುನಾದಬಿಂದು ಕಲಾತೀತ ರುಕ್ಮಿಣಿನಾಥಬಾದರಾಯಣನೆ ನಿರುಪಾಧಿ ಮಾಯಾತೀತಶ್ರೀಧರಾಯ ನಮೋನಮಃ 9ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ-ಕಾಶ ಪಾಲಿತನಿಖಿಳಭೂಸುರವ್ರಜ ಮಂದ-ಹಾಸಮುಖ ನವಕುಂದಭಾಸರದನವಿರಾಜದೂಷಣಾದ್ಯ ಸುರಹರನೆಈಶಪತಿಸೇವ್ಯಾಂಬರೀಶನೃಪವರದ ಪರ-ಮೇಶ ಕೋವಳಪೀತವಾಸ ಕರ್ದಮಶುಕಪ-ರಾಶರಾದ್ಯಮಿತಯೋಗೀಶರಕ್ಷಕಹೃಷೀಕೇಶಾಯ ತುಭ್ಯಂ ನಮೋ 10ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ-ಸಿದ್ಧ ಪೂಜ್ಯ ಪುಂಡರೀಕದಳಾಕ್ಷಬುದ್ಧಬುಧಜನಸುಲಭಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇತದ್ವೀಪವೈಕುಂಠಮಂದಿರತ್ರಯ ಸಾಧು-ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11ಸಾಮಗಾನವಿನೋದ ಸಾಧುಜನಸುಖಬೋಧಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತವ್ಯೋಮಯಾನವರೂಥ ಓಂಕಾರಭರಿತ ರಘುರಾಮಸಮರಂಗ ಭೀಮನಾಮಧಾರಕರ ಪರಿಣಾಮರೂಪಕ ಸುಜನ-ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣಭೌಮಪುರುಷೋತ್ತಮ ನಿಯಾಮಕನೆ ರಕ್ಷಿಸೈದಾಮೋದರಾಯ ನಮೋ 12ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯವೆಂಕಟಾಚಲಸದಾಲಂಕಾರ ಶೇಷಪರಿ-ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತಓಂಕಾರನಿಧನ ಸಾಮಕಭಕ್ತರಾನೇಕಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ13ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದುಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯಸೂಸಿಬಹ ಸಂಸಾರಸಾಗರದಿ ಮುಳುಗಿದೆನುನೀ ಸಲಹೊ ದೇವದೇವಭೂಸಲಿಲಪಾವಕಾಕಾಶಾದಿ ಭೂತಾಧಿ-ವಾಸ ರಾಕ್ಷಸವನಹುತಾಶ ನಾನಾ ರೂಪ-ವೇಷಧಾರಕ ನರಾವೇಶ ಪಾಲಿಸು ಎನ್ನವಾಸುದೇವಾಯ ನಮೋ 14ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ-ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ-ಬದ್ಧಕಮನೀಯರೂಪಸುತಪದುರಾಪಪ್ರದ್ಯುಮ್ನಾಯ ತುಭ್ಯಂ ನಮಃ 15ಉದ್ಧವಾದಿ ಸಮಸ್ತ ಭಾಗವತಜನಕಮಲ-ಮಧ್ಯಚರರಾಜಹಂಸಾಯ ಮಾನಸದಶ್ರದ್ಧೆಯಂ ಕೊಟ್ಟು ರಕ್ಷಿಸು ಧೊರೆಯೆಶ್ರೀಹರಿಯೆ ವೈದ್ಯನಾಥವಿಧಾತನೆಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ-ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆಹೊದ್ದಿದೆನು ಮೈದೋರು ಚಿನುಮಯಾತ್ಮಕನೆಅನಿರುದ್ಧಾಯ ತುಭ್ಯಂ ನಮಃ 16ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷಪರತರಾವ್ಯಯಲೋಕಭರಿತಮಂಗಲರಿತ ಗುರುತಮ ಗುಣಧ್ಯಕ್ಷನೆಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದಶರಭಂಗಮುನಿಪಾಲ ಶಮಿತದಾನವಜಾಲಧುರವಿಜಯ ವಿಜಯಮೈದುನ ಕೃಷ್ಣ ರಕ್ಷಿಸೈಪುರುಷೋತ್ತಮಾಯನ್ನಮೋ 17ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್-ವಿಶ್ವತೋಮುಖ ವಿಶ್ವತೋಬಾಹು ಕರುಣಾಕ-ಟಾಕ್ಷದಿಂ ನೋಡೆನ್ನಮ್ಯಾಲೆದಯಮಾಡು ಶ್ರೀವಕ್ಷಸ್ಥಲನಿವಾಸನೆಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ-ಮೋಕ್ಷದಾಯಕ ಯಜÕಮೂರ್ತಿ ರೂಪತ್ರಯ ಮ-ಹೋಕ್ಷಧ್ವಜನಂ ಮೋಹಿಸಿದ ಮೋಹಕಲ್ಪಅಧೋಕ್ಷಜಾಯ ನಮೋನಮಃ 18ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು-ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ-ಹಾರವಕುಲಿಶ ಶತಕೋಟಿಸದೃಶನಶಿರಪ್ರಕರಧೀರ ಪ್ರಹ್ಲಾದಾಭಿವರದಭೂರೀಕರರೂಪ ಭೂಮಕೀರ್ತಿಕಲಾಪಸಾರವಜ್ರಸ್ತಂಭದಿಂ ಬಂದ ನಂದ ಸುಕು-ಮಾರಮಾರ್ಕಾಂಡೇಯವರದ ಲೋಕಶರಣ್ಯನಾರಸಿಂಹಾಯ ನಮೋ 19ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ-ನ್ನಿಚ್ಛೆಯಿಂದಲಿ ಜಗವ ಪಾಲಿಸುವನಿರ್ಮಿಸುವ ಆಶ್ಚರ್ಯಕೃತಸಲೀಲಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ-ಕಚ್ಛಪನೆ ಕಾಳೀಯಮರ್ದನಮಹಿತಶ್ರೀಮದಚ್ಯುತಾಯ ನಮೋನಮಃ 20ಚೈದ್ಯಮಥನ ಮನೋಜÕಶುದ್ಧಾತ್ಮ ಸರ್ವಜÕಯುದ್ಧದಲಿ ಸೈಂಧವನ ಶಿರವ ಕೆಡಹಿಸಿ ಜಯವಹೊದ್ದಿಸಿದ ಪಾರ್ಥನಿಂಗೆಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ-ವಿದ್ದ ಮಾನಸವ ಪಾದದ್ವಯದೊಳಿರಿಸೈ ದ-ಯಾದ್ರ್ರಚಿತ್ತ ಸ್ವಭಕ್ತಸಂಸಾರಿ ಕಾಯೆಜನಾರ್ದನಾಯ ನಮೋನಮಃ 21ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದನಂದಗೋಪನ ಕಂದನೆನಿಸಿ ಬಾಲಕತನದಚಂದಮಂ ತೋರಿಸಿದ ಕುಬುಜೆಗಂಧಕೆ ಒಲಿದಸುಂದರೀರಮಣ ಜಯತುತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ-ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ-ನಿಂದಾದಿ ದೋಷಗಳ ಮಾಡಿ ಬಳಲುತ್ತಿಹರ್ಉಪೇಂದ್ರಾಯ ತುಭ್ಯಂ ನಮಃ 22ಸ್ಥಿರಚರಾತ್ಮಕ ಧೇನುಚರ ದೇವಕೀಜಠರ-ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥಪರಮತೇಜೋಮಯ ಪುರಾಣಪುರುಷೇಶ್ವರನೆದುರಿತದೂರ ಗಭೀರನೆನಿರತಿಶಯನಿಜನಿರ್ವಿಕಲ್ಪ ಕಲ್ಪಾಂತಸಾ-ಗರದಿ ವಟಪತ್ರಪುಟಶಯನ ಪುಣ್ಯಶ್ರವಣಪುರುಷನಾಮಕ ಪುಷ್ಕರಾಕ್ಷ ಶ್ರೀಕರನೆ ಜಯಹರಯೇ ನಮೋನಮಸ್ತೇ 23ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ-ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ-ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾದುಷ್ಟ ನರಕಾದಿದಾನವರ ಮರ್ದಿಸಿದ ಜಗ-ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ-ಶ್ರೇಷ್ಠನಂ ಘಾತಿಸಿದ ರಾಮಾನುಜನೆಹರೇ ಕೃಷ್ಣಾಯ ತುಭ್ಯಂ ನಮಃ 24ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ-ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು-ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ-ಶಿಕ್ಷಕ ಪರೀಕ್ಷಕನೆ ಪವನವಾಹನಲಕ್ಷ್ಮೀನಾರಾಯಣಾಯ ನಮೋ25
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಅಂದಿಂದ ನಾ ನಿನ್ನನೆರೆನಂಬಿದೆನೊ ಕೃಷ್ಣತಂದೆ ಗೋವಿಂದ ಮುಕುಂದ ನಂದನ ಕಂದ ಪಬಲವಂತ ಉತ್ತಾನಪಾದರಾಯನ ಕಂದಮಲತಾಯಿ ನೂಕಲು ಅಡವಿಯೊಳು ||ಜಲಜಾಕ್ಷ ನಿನ್ನ ಧ್ಯಾನದಿ ತಪವಿರಲಾಗಿಒಲಿದು ಧ್ರುವಗೆ ಪಟ್ಟಕಟ್ಟಿದ್ದಕೇಳಿ1ನಕ್ರರಿಗೆ ಗಜರಾಜ ಸಿಕ್ಕಿ ಸರಸಿಯೊಳುದುಕ್ಖದಿ ಶ್ರೀಹರಿ ಸಲಹೆನ್ನಲು ||ಚಕ್ರದಿ ನೆಗಳ ಕಂಠವ ತರಿದು ಭಕ್ತನಅಕ್ಕಸಪರಿದಾದಿಮೂಲನೆಂಬುದಕೇಳಿ2ದ್ರುಪದನ ಸುತೆಯ ದುಃಶ್ಯಾಸನ ಸಭೆಯೊಳುಕಪಟದಿ ಸೀರೆಯ ಸೆಳೆಯುತಿರೆ ||ಸುಪರ್ಣವಾಹನ ಕೃಷ್ಣ ಸಲಹೆಂಬಬಲೆಯನುಅಪಮಾನದಿಂದ ಕಾಯ್ದ ಹರಿಯೆಂಬುದನುಕೇಳಿ3ಹರಿನಾರಾಯಣನೆಂದು ಪ್ರಹ್ಲಾದ ಬರೆಯಲುದುರುಳದಾನವ ಅವನಿಗೆ ಮುನಿದು ||ಕರೆ ನಿನ್ನ ಒಡೆಯನ ಎಂದು ಗರ್ಜಿಸೆನರಹರಿಬಂದು ಒಡನೆಯೆ ಕಾಯ್ದನೆಂಬುದಕೇಳಿ4ಅಂಬರೀಷಗೆದೂರ್ವಾಸಶಾಪವ ಕೊಡೆಅಂಬುಜಲೋಚನ ಚಕ್ರದಿಂದ ||ಬೆಂಬತ್ತಿ ಮುನಿಯ ಶಾಪವ ಪರಿಹರಿಸಿದಕಂಬುಚಕ್ರಧರಹರಿಯೆಂಬುದಕೇಳಿ5ಛಲಬೇಡ ರಾಮನ ಲಲನೆಯ ಬಿಡು ಎಂದುತಲೆಹತ್ತರವಗೆ ಪೇಳಲು ತಮ್ಮನ ||ಬಳಲಿಸಿ ಹೊರಡಿಸೆ ಅವ ನಿನ್ನ ಮೊರೆಹೊಗಲುಸಲೆ ವಿಭೀಷಣಗೆ ಲಂಕೆಯನಿತ್ತುದನುಕೇಳಿ6ಸುರ-ನರ-ನಾಗಲೋಕದ ಭಕ್ತ ಜನರನುಪೊರೆಯಲೋಸುಗ ವೈಕುಂಠದಿಂದ ||ಸಿರಿಸಹಿತದಿ ಬಂದು ಶೇಷಾಚಲದಿ ನಿಂತಪುರಂದರವಿಠಲ ನಿನ್ನಯ ಚರಣವ ಕಂಡು 7
--------------
ಪುರಂದರದಾಸರು
ಆಕಳ ಕಾಯ್ದ ಗೋಕುಲವಾಸನುಆಕಳ ಕಾಯ್ದ ಗೋಕುಲವಾಸನನೇಕ ಗುಣನಿಧಿನಾಕೇಶವಿನುತಪುರದಲ್ಲಿದ್ದಂಥ ಕೇರಿಯ ಮಕ್ಕಳ ನೆರಹಿ ಯಾದವ ಪರಿವಾರವೆಲ್ಲನಳಿನಕೇತಕಿ ಎಳೆಯ ಮಾವಿನ ತಳಿಲ ವನದ ಒಳಗೆ ರಂಗನುತೊಂಡರೊಡಗೂಡಿಪುಂಡರೀಕಾಕ್ಷಗೋವಿಂದ ಕಾಳಿಯ ದಂಡೆಯಲ್ಲಿರಿಸಿಕಡು ತೃಷದಿ ಆ ಮಡುವಿನುದಕ ಕುಡಿದು ಗೋವುಗಳೆಲ್ಲ ನಡುಗಿ ಬೀಳಲುಹೊಕ್ಕ ಭರದಿ ದೇವಕಿ ಸುತನ ಸಿಕ್ಕಿಸಿಕೊಂಡು ಬಾಲಕೆ ಬಿಗಿಯಲುಇಂದಿರಾಪತಿ ಆನಂದದಿಂದಾಡಲು ಬಂದುಬೊಮ್ಮವಾಯುಉರಗಾಂಗನೆಯರ ಮೊರೆಯ ಲಾಲಿಸಿ ಕರುಣಿ ಅವರಿಗೆ ಗರುಡನ ಭಯಗರಳಭಯದಿ ಧರೆಗೆ ಬಿದ್ದಂಥ ತುರುಗಳಿಗೆಲ್ಲ ಸ್ಮರಣೆ ಬಪ್ಪಂತೆಮಂಗಳ ಮೂರುತಿ ಪೊಂಗೊಳಲೂದುತ್ತ ತಿಂಗಳಿನಂದದಿ
--------------
ಗೋಪಾಲದಾಸರು
ಆರು ಹಿತವರು ಮನವೆ ಮೂರು ಮಂದಿಗಳೊಳಗೆನಾರಿಯೋ ಧಾರಿಣೀಯೊಧನದಬಲು ಸಿರಿಯೊ ?ಪ.ಅನ್ಯರಲಿ ಜನಿಸಿರ್ದ ಅಂಗನೆಯ ಕರೆತಂದುತನ್ನ ಮನೆಯಲ್ಲಿ ಯಜಮಾನಿಯೆನಿಸಿಭಿನ್ನವಿಲ್ಲದೆ ಅರ್ಧ ದೇಹವೆನಿಸುವ ಸತಿಯುಕಣ್ಣಿನಲಿ ನೋಡಲಂಜುವಳು ಕಾಲನೊಯ್ವಾಗ 1ಮುನ್ನ ಶತಕೋಟಿ ರಾಯರುಗಳಾಳಿದ ನೆಲನತನ್ನದೆಂದು ಶಿಲೆಯ ಶಾಸನವ ಬರೆಸಿಬಿನ್ನಾಣದಿ ಮನೆಗಟ್ಟಿ ಕೋಟೆ - ಕೊತ್ತಳಿವಿಕ್ಕಿಚೆನ್ನಿಗನೆ ಅಸುವಳಿಯ ಊರ ಹೊರಗಿಕ್ಕುವರು 2ಉದ್ಯೋಗ - ವ್ಯವಹಾರ ನೃಪಸೇವೆ ಮೊದಲಾಗಿಕ್ಷುದ್ರತನ ಕಳವು ಪರದ್ರೋಹದಿಂದಬುದ್ಧಿಯಿಂದಲಿ ಧನವ ಗಳಿಸಿಕ್ಕಿ ಅಸುವಳಿಯಸದ್ಯದಲಿ ಆರುಂಬವರು ಹೇಳು ಮನುಜಾ 3ಶೋಕಗೈದಳುವವರುಸತಿ - ಸುತರು ಭಾಂದವರುಜೋಕೆ ತಪ್ಪಿದ ಬಳಿಕ ಅರ್ಥವ್ಯರ್ಥಲೋಕದಲಿ ಸ್ಥಿರವಾದ ಕೀರ್ತಿ ಅಪಕೀರ್ತಿಗಳುಸಾಕಾರವಾಗಿ ಸಂಗಡ ಬಾಹುವಲ್ಲದೇ ? 4ಅಸ್ಥಿರದ ದೇಹವನು ನೆಚ್ಚಿ ನೀ ಕೆಡಬೇಡಸ್ವಸ್ಥದಲಿ ನೆನೆಕಾಣೊ ಪರಮಾತ್ಮನಚಿತ್ತಶುದ್ದಿಯಲಿ ಶ್ರೀ ಪುರಂದರವಿಠಲನಭಕ್ತಿಯಿಂದಲಿ ನೆನೆದು ಮುಕ್ತಿಪಡೆ ಮನವೆ 5
--------------
ಪುರಂದರದಾಸರು
ಆರೆನ್ನ ಉಳುಹುವರೈ ರಂಗಘೋರಾರಣ್ಯ ಭವದಿ ಸಿಕ್ಕಿದೆ ರಂಗ ಪ.ಎಂಟು ಕಾಡಾನೆ ಎಂಟು ಕಡೆಯಲಿ ನಿಂತಿವೆಗಂಟನಿಕ್ಕಿವೆ ಮೂರು ದಳ್ಳುರಿಯಸುಂಟರಗಾಳ್ಯೆಬ್ಬರಿಸಲು ಗಿಡಗಂಟಿಲಿ ಬಿದ್ದೆ ನೀನಲ್ಲದೆನ್ನ 1ಹುಲಿಯೊಂದು ಗುಡುಗುಡಿಸುತಿದೆ ಭಯಂಕರಬಲು ತೋಳೆರಡು ಕೆಕ್ಕರಿಸುತಿವೆಸಲುಗೆಯ ಕೋತಿಯೊಂದಣಕಾಡುತಲಿದೆಮೇಲೆ ಕರಡಿಯು ಹತ್ತೆಳವುತಿದೆ 2ಕಾಳುರಗನ ಕಟ್ಟು ಮೈತುಂಬ ನನ್ನನಾಲಿಗೇಳದು ನಿನ್ನ ಕರೆಯಲಿಕೆ ನಿನ್ನಾಳಟ್ಟಿ ಕರೆಸಿಕೊಳ್ಳೆಲೆ ತಂದೆ ನಾಗೋಳಿಟ್ಟೆ ಪ್ರಸನ್ನವೆಂಕಟ ಬಂಧು 3
--------------
ಪ್ರಸನ್ನವೆಂಕಟದಾಸರು
ಇಕ್ಕೊಳ್ಳಕ್ಕೊ ಸಿಕ್ಕ ರಂಗನೋಡುಈಠಕ್ಕ ಮಾಡಿಹ ಬಹು ಕೇಡು ಪಪೆಟ್ಟಿಗೆಯೊಳು ದೇವರುಗಳು ಗಂಡಸ- |ರಿಟ್ಟಿರಲವ ಅಂಜದಾಲೆ ||ಮುಟ್ಟಿ ಮನೆಗೊಂದೊಂದೊಗೆದು ಮುರು-ಬಟ್ಟಿ ಮಾಡಿಬಿಟ್ಟನಲ್ಲೆ 1ತಾ ಕೆಡಿಸಿ ಒಡೆದಡಕಲಿ ಗಡಿಗೆಗಳನು |ಆಕಳ ಒಳಘೊಗಿಸಿಹ್ಯನೂ ||ಈ ಕರಕರೆಯರಿಯಳು ನಮ್ಮತೆಯೆಂ-ಬಾಕೆನ್ನನು ಕೊಲ್ಲುವಳಲ್ಲೆ 2ಅಡಕಲಿಯೊಳು ದೇವರ ತಾಳಿಯ ಸರ |ತುಡುಗು ಮಾಡಿ ತಕ್ಕೊಂಡು ||ಗಡಬಿಡಿ ಮಾಡೆಲ್ಲೊಗೆದನೊ ನಾ ಎ- |ಷ್ಠುಡುಕಿದರೂ ಸಿಗವಲ್ಲೆ3ನೆಲವಿಗೇರಿಸಿದ ಚಟ್ಟಿಗಿಗಳು ಒಂ- |ದಳುಕದೆ ಮೊದಲಂತಿಹವೆ ||ಇಳುಕಲು ಒಂದಕ್ಕೊಂದಕೆ ತೂತು |ಪಾಲ್ಗಳು ಈಸನಿಲ್ಲವಲ್ಲೆ 4ಅಡವಿಯ ದೇವರ ಹೆಸರಿಲಿ ತುಪ್ಪವ |ಮಡಿಯ ಮಾಡಿ ತುಂಬಿರಲು ||ಕುಡಿದು ಮುಚ್ಚಿ ಮೊದಲಪ್ಪಂದಿಟ್ಟಿಹ |ಕೊಡದೊಳು ಬರಿ ನೀರಲ್ಲೇ 5ಅಂಡಜವಾಹನಓಕಳಿ ಚಲ್ಲಿಹ |ಪುಂಡತನದಿ ಮಂಚದ ಮೇಲೆ ||ಭಂಡಿದು ಏನೆಂಧೇಳಲಿ ಮನೆಯೊಳು |ಗಂಡನ ಸಿಟ್ಟು ನೀ ಬಲ್ಲೆಲ್ಲೆ 6ಏನೆನರಿಯದವಳಿಗಿದು ಬಂದಿತು |ಕ್ಷೋಣಿಯೊಳಗೆ ಒಣಹರಲೆ ||ಮಾನನೀಯಳೆ ಈಪರಿಮಾಡಿ- |ದನಿಕೋ ಪ್ರಾಣೇಶ ವಿಠಲನೀಗ 7
--------------
ಪ್ರಾಣೇಶದಾಸರು
ಎಂಥ ಬಾಲಕೃಷ್ಣ ಗೋಪೇರಂತಃಚೋರಾನಂತನೆಕಂತುಪಿತ ಕೋಟಿ ಕಾಂತಿಯಲ್ಲಿ ಭ್ರಾಂತ ಮಾಡಿದನಿವ ಪ.ಬಾಲನಾದರೊಳಿತು ಒಳ್ಳೆ ಬಾಲೆಯರಮೊಳೆಮೊಲೆಗಾಲದ ಹಣ್ಣೆಂದು ನಖದಲಿ ಸೀಳಿ ನೋಡುವರೆಹೇಳಲೇನೆಂತೆನ್ನ ನಳಿತೋಳಲಪ್ಪಿ ತೊಂಡೆಹಣ್ಣಿಗ್ಹೋಲುವದೆಂದಧರನುಂಡ ತಾಳಬಹುದೇನಮ್ಮ 1ನಿಚ್ಚಟಮೈಯೊಳು ನಾವುನಿಚ್ಚಮೈಯ ತೊಳೆಯುವಾಗಬಚ್ಚಲೊಳು ಬಂದು ಕಣ್ಣಮುಚ್ಚಿ ಅಟ್ಟಹಾಸದಿಸಚ್ಚಿದಾನಂದಗೋಪಾಲ ವಚ್ಚೆರೆಗಂಗಳೆಯರಹುಚ್ಚುಮಾಡಿ ಹೋದನಿವನ ನೆಚ್ಚಬಹುದೇನಮ್ಮ 2ಹತ್ತಿಲಿದ್ದ ಸುಪ್ತ್ತಪುರುಷನ್ನೊತ್ತಿ ರತಿಕಳೆದೋರಿಚಿತ್ತ ಸೂರೆಗೊಂಬುದಾವ ಕೃತ್ಯವಮ್ಮ ರಂಗಗೆಸುತ್ತಿನವರರಿಯರೆಂದು ಚಿತ್ತವಾಯಿತಲ್ಲದೆಅತ್ತೆ ಮಾವ ಕಂಡರೆಮ್ಮ ತೊತ್ತು ಮಾಡಿ ಬಡಿವರೆ 3ಹಟನೆಂದು ಬಾಯೊಳು ಬಾಯಿಟ್ಟು ಮುದ್ದನಿಡಲುಬಟ್ಟಕುಚವಿಡಿದೆಮ್ಮ ರಟ್ಟು ಮಾಡಬಹುದೆದಿಟ್ಟ ಜಾರನಿಗೆ ಕೈಯ ಕಟ್ಟುವೆವೆಂದರೆ ಚೆಲ್ವಬಟ್ಟಗಲ್ಲ ಕಚ್ಚಿ ಕ್ಷತವಿಟ್ಟೋಡಿದ ನಮ್ಮಯ್ಯ 4ಚಿನ್ನನಾದರೇನು ಚೊಕ್ಕ ಚಿನ್ನದಂಥ ಗುಣವುಳ್ಳಚೆನ್ನಿಗನ ರೂಪಕೊಲಿದ ಕನ್ಯೆಯರು ಪೂರ್ವದಪುಣ್ಯವಂತರಲ್ಲದುಳಿದಿನ್ನಾರಿಗೆಲ್ಲಿ ಎಂದೂ ಪ್ರಸನ್ವೆಂಕಟೇಶ ಸಿಕ್ಕ ಇನ್ನು ಸುಖ ದಕ್ಕೀತೆ 5
--------------
ಪ್ರಸನ್ನವೆಂಕಟದಾಸರು
ಎಳ್ಳು ಕಾಳಿನಷ್ಟು ಭಕುತಿ ಎನ್ನೊಳಗಿಲ್ಲವಯ್ಯಬೆಳ್ಳಕ್ಕಿಯಂತೆ ನಿನ್ನ ಧ್ಯಾನವ ಮಾಡುವೆನಯ್ಯಾ ಪಗಂಡು ಮುಳುಗಹಕ್ಕಿಯಂತೆ ನೀರ ಕಂಡ ಕಡೆಗೆ ಮುಳುಗಿಮಂಡೆಶೂಲೆಯಲ್ಲದೆ ಗತಿಯು ಇಲ್ಲಮಂಡೆಮುಸುಕನಿಕ್ಕಿ ಮಂತ್ರ ಜಪಿಸುವೆನಯ್ಯ1ಗಾಣದೆತ್ತಿನಂತೆ ಕಣ್ಣಕಟ್ಟಿ ಪ್ರದಕ್ಷಿಣೆ ಮಾಡಿಕಾಣದೆ ನಾ ತಿರುಗಿದೆ ಕಂಡುದಿಲ್ಲಮಾಣಿಕ್ಯದ ರಾಶಿ ಅಡಿಗೆ ಕಂಗಳಯ್ಯನು ಪೋಗಿಆಣಿಕಾರಿಕೆ ಮಾಡಿದಂಥ ಈ ಕುಯುಕ್ತಿಯು 2ಇಕ್ಕಳವ ಕೈಯ ಪಿಡಿದುಕೊಂಡು ಕಾದ ಕಬ್ಬಿಣದಂತೆಸಿಕ್ಕಿಸಿಕೊಂಡಲ್ಲದೆ ಗತಿಯು ಇಲ್ಲಪೊಕ್ಕಳ ಪೂವಿನ ಶ್ರೀ ಪುರಂದರವಿಠಲನೆಮಕ್ಕಳಾಟಿಕೆಯ ಬಿಡೊ ರಕ್ಷಿಸೊ ಎನ್ನೊಡೆಯ 3
--------------
ಪುರಂದರದಾಸರು
ಏಕೆ ಮುರ್ಖನಾದೆ - ಮನುಜಾಏಕೆ ಮುರ್ಖನಾದೆ ? ಪ.ಏಕೆ ಮೂರ್ಖನಾದೆ ನೀನುಕಾಕು ಬುದ್ಧಿಗಳನು ಬಿಟ್ಟುಲೋಕನಾಥನ ನೆನೆಯೊ ಮನುಜಾ ಅಪಮಕ್ಕಳು ಹೆಂಡರು ತನ್ನವರೆಂದುರೊಕ್ಕವನು ಗಳಿಸಿಕೊಂಡುಸೊಕ್ಕಿಂದ ತಿರುಗುವರೇನೊ ಹೇ ಮನುಜಾ 1ಕಕ್ಕಸದ ಯಮದೂತರು ಬಂದುಲೆಕ್ಕವಾಯಿತು ನಡೆಯೆಂದರೆಸಿಕ್ಕವರೆಲ್ಲ ಬಿಡಿಸುವರೇನೊ ಹೇ ಮನುಜಾ 2ಅರಿಷಡ್ವರ್ಗದ ಆಟವ ಬಿಟ್ಟುಪುರಂದರವಿಠಲನ ಹೊಂದಲುಬೇಕುಹರಿಯನು ಸೇರುವ ಮಾರ್ಗವ ನೋಡೋ ಹೇ ಮನುಜಾ 3
--------------
ಪುರಂದರದಾಸರು
ಏನೆಂತೊಲಿದೆ ಇಂತವರಂತೆ ಕೆಡುಬುದ್ಧಿ - ಎನ್ನೊಳಿಲ್ಲಗುಣ |ಹೀನರಲ್ಲದ ದೀನ ಜನರ ಪಾಲಿಪ ಬುದ್ಧಿ ನಿನ್ನೊಳಿಲ್ಲ ಪತರಳ ಪ್ರಹ್ಲಾದನಂದದಿ ನಿನ್ನಯರೂಪ ಕೆಡಿಸಲಿಲ್ಲನರನಂತೆ ತನ್ನ ಬಂಡಿಯ ಬೋವನ ಮಾಡಿ ಹೊಡಿಸಲಿಲ್ಲ ||ಸುರನದೀಸುತನಂತೆ ಪಣೆಯೊಳು ಬಾಣವ ಸಿಡಿಸಲಿಲ್ಲದೊರೆ ಅಂಬರೀಷನಂದದಿ ಈರೈದು ಜನ್ಮವ ಪಡಿಸಲಿಲ್ಲ 1ನಾರದನಂತೆ ಕಂಡವರ ಕೊಂಡೆಯವ ನಾ ಪೇಳಲಿಲ್ಲ |ಪರಾಶರನಂತೆ ನದಿಯೊಳಂಬಿಗ ಹೆಣ್ಣ ಕೊಡಲಿಲ್ಲ ||ಆ ರುಕುಮಾಂಗದನಂತೆ ಸುತನ ಕೊಲ್ಲಲು ಧೃಢಮಾಡಲಿಲ್ಲಮಾರುತನಂತೆ ನೀನುಣುತಿದ್ದ ಎಡೆಯ ಕೊಂಡೋಡಲಿಲ್ಲ 2ವಿದುರನಂತೆ ನನ್ನ ಸದನವ ಮುರಿದು ನಾ ಕುಣಿಯಲಿಲ್ಲಮದಕರಿಯಂತೆ ಮಕರಿಯ ಬಾಯೊಳು ಸಿಕ್ಕಿ ಒದರಲಿಲ್ಲ ||ಹೆದರದೆ ಬಲಿಯಂತೆ ಭೂಮಿಯ ಧಾರೆಯನೆರೆಯಲಿಲ್ಲಸದರ ಮಾತುಗಳಾಡಿ ಶಿಶುಪಾಲನಂತೆ ನಾ ಜರೆಯಲಿಲ್ಲ3ಸನಕಾದಿ ಮುನಿಯಂತೆಅನುದಿನ ಮನದೊಳು ಸ್ಮರಿಸಲಿಲ್ಲಇನಸುತ ಕಪಿಯಂತೆ ವಂಚಿಸಿ ವಾಲಿಯ ಕೊಲಿಸಲಿಲ್ಲ ||ಬಿನುಗು ಬೇಡತಿಯಂತೆ ಸವಿದುಂಡ ಹಣ್ಣ ನಾ ತಿನಿಸಲಿಲ್ಲಘನ ಅಜಾಮಿಳನಂತೆ ಸುತನ ನಾರಗನೆಂದು ಕರೆಯಲಿಲ್ಲ4ವರ ಶೌನಕನಂತೆನಿತ್ಯ ಸೂತನ ಕಥೆ ಕೇಳಲಿಲ್ಲಪಿರಿದು ತುಂಬುರುನಂತೆ ನಾಟ್ಯ - ಸಂಗೀತವ ಪೇಳಲಿಲ್ಲ ||ಉರಗಾಧಿಪತಿಯಂತೆ ಉದರದೊಳಿಟ್ಟು ನಾ ತೂಗಲಿಲ್ಲಪಿರಿದು ಕುಚೇಲನ ತೆರನಂತೆ ಅವಲಕ್ಕಿ ಈಯಲಿಲ್ಲ 5ಭೃಗುಮುನಿಯಂತೆ ಗರ್ವದಿ ನಿನ್ನ ಎದೆಯನು ಒದೆಯಲಿಲ್ಲಅಗಣಿತ ಮಹಿಮ ನೀನಹುದೆಂದು ಧ್ರುವನಂತೆ ಪೊಗಳಲಿಲ್ಲ ||ಖಗರಾಜನಂತೆ ನಿನ್ನನು ಪೊತ್ತು ಗಗನದಿ ತಿರುಗಲಿಲ್ಲಅಗಜೆಯರಸನಂತೆ ಮಸಣದಿ ರಾಮನ ಸ್ಮರಿಸಲಿಲ್ಲ 6ಅವಹಿತದಲಿ ವಿಭೀಷಣನಂತೆ ಅಣ್ಣನ ಕೊಲಿಸಲಿಲ್ಲಯುವತಿ ದ್ರೌಪದಿಯಂತೆ ಪತ್ರಶಾಕವನುಣಬಡಿಸಲಿಲ್ಲ ||ತವೆ ಪುಂಡಲೀಕನಂದದಿ ಇಟ್ಟಿಗೆಯ ಮೇಲೆ ನಿಲಿಸಲಿಲ್ಲ ದೇವಇವರಂತೆಪುರಂದರ ವಿಠಲ ನಿನ್ನಯ ಕೃಪೆಯೆನ್ನೊಳಿಲ್ಲ7ಅಂಕಿತದಲ್ಲೂ ಇವೆ.)
--------------
ಪುರಂದರದಾಸರು