ಒಟ್ಟು 6459 ಕಡೆಗಳಲ್ಲಿ , 126 ದಾಸರು , 3912 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾಕೆಲೋ ರಂಗಾ | ನಿನ್ನರಸಿಯೊಳುಮುನಿದಿರುವೆ | ಲೋಕವೀರೇಳು ರಕ್ಷಿಪ ಮುದ್ದು ರಂಗಾ ಪ ನಾಲ್ಕನೆಯ ಅವತಾರದಲಿ ಉಗ್ರವಾಗಿರೆ | ಆ ಕಮಲಜ ಮುಖ್ಯ ಬೆದರುತಿರಲು | ಲಕುಮಿ ತಾಕಂಡು ತೊಡೆಮೇಲೆ ಕುಳ್ಳಿರಲು | ಈ ಲೋಕದೊಳು ಶಾಂತನೆನಿಸಿದಳೊ ನಿನ್ನರಿಸಿ 1 ಗುಂಜೆಯಮಾಲೆ ಕೊರಳಿಗೆ ಹಾಕಿ ಗೋವಳರ | ಎಂಜಲ ತಿನುತ ಗೋಗಳ ಕಾಯುತಿರಲು | ಕಂಜನಯನೆಯು ಬಂದು ಸಕಲ ಶಿರಿಯಿಂದಲಿ | ರಂಜಿಸಿದಳೊ ಜಗದೊಳಗೆ ನಿನ್ನ ಅರಿಸಿ 2 ಇಂತರಿದು ನಾನಾಪರಿಯಿಂದ ನಿನ್ನ ಮೇಲೇ | ಸಂತತ ಉಪಕಾರ ಮಾಡಿರೆ ನೀನು | ಕಂತುಮಾತೆಯ ತಪ್ಪು ನೋಡುವರೇನೋ | ಆ- ನಂತನೇ ಏಳು ಮಹೀಪತಿನಂದನೊಡೆಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಾಕೇ ನಿನೀಪರಿ | ಶೋಕ ಸಂಶಯವೀವೆರಾಕೇಂದು ವದನನೆ | ಏಕಮೇವನೆ ಹರಿಯೇ ಪ ಮಾ ಕಮಲಾಸನದಿ | ವೌಕಸ ವಂದ್ಯನೆತೋಕನೆನಿಸಿ ಎನ್ನ | ಸಾಕುವುದೆಲೊ ಘನ್ನಅ.ಪ. ನಿನ್ನ ನಾಮಗಳನ್ನ | ಮನ್ನದಿ ನೆನೆಯದೆಮನ್ನ ಮಾಡಿದುದಕ್ಕೆ | ಯನ್ನ ನೀ ಪರಿಯಾ |ದಣ್ಣಿಸೋದೊಳಿತಲ್ಲ | ಮನ್ನ ನಾಮಕನಾಗಿಮನ್ನವನೀಯದೆ | ಅನ್ಯಾಯ ಗೈಯುತ 1 ಮಾಯಾ ವಿನುತ ಶ್ರೀ | ಕಾಂತ ಮೂರುತಿಯೇ |ಅಂತು ನಿನ್ನಯ ಪಾದಾ | ಕ್ರಾಂತನಾಗಿರುವೆನೊಸ್ವಾಂತರಂಗದಲ್ಲಿ | ಶಾಂತೀಶ ನೆಲೆಸಯ್ಯ 2 ಮಂದಿಯ ಕೈಯಲ್ಲಿ | ನಿಂದಿಸಿ ಕುಂದಿಸಿಮಂದ ಭಾಗ್ಯನ ಮನ | ಸಂದೇಹ ಕಳೆಯಯ್ಯಕಂದರ್ಪಪಿತ ಗುರು | ಗೋವಿಂದ ವಿಠಲಯ್ಯಕುಂದೆಣಿಸದೆ ಕೈಯ್ಯಾ | ಇಂದೆ ನೀ ಪಿಡಿಯಯ್ಯ 3
--------------
ಗುರುಗೋವಿಂದವಿಠಲರು
ಯಾಕೊ ಪಾರ್ಥನ ಹೆಸರು ಹೋಕೆ ಮಾತಿನ ಕೃಷ್ಣ ಸಾಕು ನೀ ನಮ್ಮ ಸರಿಯೇನೊ ಕೋಲಸಾಕು ನೀನಮ್ಮ ಸರಿಯೇನೊ ಬಲಿಯ ಮನೆಯ ಬಾಗಿಲ ಕಾಯ್ದು ಬದುಕಿದಿ ಕೋಲ ಪ. ಚಿಕ್ಕಂದಿನಾರಭ್ಯ ವತ್ಸಗಳನೆ ಕಾಯ್ದು ತುಚ್ಛನಾಗಿದ್ಯೊ ಜನರೊಳು ತುಚ್ಛನಾಗಿದ್ಯೊ ಜನರೊಳು ರುಕ್ಮಿಣಿಯಕೂಡಿ ಹೆಚ್ಚಿನವನೆಂದು ಹೆಸರಾದ್ಯೊ ಕೋಲ1 ಜನಿಸಿದಾಕ್ಷಣದಲ್ಲಿ ಜನನಿ ಜನಕರನಗಲಿದಿದನಗಳ ಕಾಯ್ದ್ಯೊ ವನವನ ದನಗಳ ಕಾಯ್ದ್ಯೊ ವನವನ ತಿರುಗಿದ್ದುಮನಕೆ ತಾರಯ್ಯ ಮರೆಯದೆ ಕೋಲ 2 ಬಡಿವಾರ ಬಂದ ಬಗಿ ಹೇಳೊ ಕೋಲ3 ಸತ್ಯಭಾಮೆ ನಿನ್ನ ಹೊಸ್ತಿಲ ಹೊಗಲಿಕ್ಕೆಅತ್ಯಂತ ಪದವಿ ಒದಗಿತುಅತ್ಯಂತ ಪದವಿ ಒದಗಿತು ಕೃಷ್ಣ ನಿನ್ನ ಹೆತ್ತವರ ಭಾಗ್ಯ ಅರಿವೆಯೆ ಕೋಲ4 ಹೆಂಡಿರ ಪುಣ್ಯದಿಂದ ಕಂಡೆಯಾ ಈ ಭಾಗ್ಯವ ಪಾಂಡಿತ್ಯವೆಲ್ಲೊ ಬಲವೆಲ್ಲೊಪಾಂಡಿತ್ಯವೆಲ್ಲೊ ಬಲವೆಲ್ಲೊ ಕೃಷ್ಣ ನಿನ್ನ ಪಂಡಿತರು ಕೇಳೋ ಹುಸಿಯಲ್ಲ ಕೋಲ5 ನಾರಿಯರ ಪುಣ್ಯದಿ ಏರಿದ್ಯೋ ರಥವಾಜಿ ಧೀರತನದಿಂದ ಗಳಿಸಿದ್ಯೊಧೀರತನದಿಂದ ಗಳಿಸಿದ ಗಳಿಕೆಯ ತೋರೊ ರಾಮೇಶ ನಮಗಿನ್ನು ಕೋಲ 6
--------------
ಗಲಗಲಿಅವ್ವನವರು
ಯಾಕೊಲ್ಲ ಯಾಕೊಲ್ಲ ನಲ್ಲೆ ಸಂಪದ ಇವ ಯಾಕೊಲ್ಲ ಯಾಕೊಲ್ಲ ಪ ಅಲ್ಲಬೆಲ್ಲವನೊಲ್ಲ ನಲ್ಲೆಯಾದರವೊಲ್ಲ ಒಲ್ಲನ್ಯಾಕವ್ವ ನಲ್ಲ ಇಲ್ಲದದಕೆ ಒಲ್ಲ ಅ.ಪ ಮೇಲು ಮಾಲು ಒಲ್ಲ ನೀಲದುಪ್ಪರಿಗೊಲ್ಲ ಶಾಲು ಸಕಲಾತೊಲ್ಲ ಶೀಲಮಂಚವನೊಲ್ಲ ಅಮೃತ ಉಂಡು ವೀಳ್ಯ ಮೆಲ್ಲಲು ಒಲ್ಲ ಬಾಲೆ ಯಾಕೊಲ್ಲ ಕೈಯೊಳಿಲ್ಲದದಕೆ ಒಲ್ಲ 1 ರತ್ನದುಂಗುರ ಒಲ್ಲ ಮುತ್ತಿನ್ಹಾರ ಒಲ್ಲ ಪುತ್ಥಳೀ ಚಿನ್ನ ಒಲ್ಲ ಕಸ್ತೂರಿಗಂಧ ಒಲ್ಲ ಉತ್ತಮ ಹಯವನ್ನು ಹತ್ತಿ ಮರೆಯ ಒಲ್ಲ ಮಿತ್ರೆ ಯಾತಕೊಲ್ಲ ಹತ್ತಿರಿಲ್ಲದದಕೊಲ್ಲ2 ಸತಿಯ ಸುತರನೊಲ್ಲ ಅತಿಭಾಗ್ಯವನೊಲ್ಲ ಕ್ಷಿತಿ ಅಧಿಕಾರನೊಲ್ಲ ಛತ್ರ ಚಾಮರನೊಲ್ಲ ಸತತ ಸೌಭಾಗ್ಯನೊಲ್ಲ ಮತಿಮಾನ್ಯವನೊಲ್ಲ ಮತಿಯುತೆ ಯಾತಕೊಲ್ಲ ಗತಿಯಿಲ್ಲದದಕೊಲ್ಲ 3 ಭೋಗಭಾಗ್ಯ ಒಲ್ಲ ರಾಗರಚನೆಯೊಲ್ಲ ಭೋಗದಾಸೆಗೆ ತಲೆದೂಗಿ ಒಲಿಯ ಒಲ್ಲ ತೂಗುಮಂಚವೇರಿ ತೂಗಿಸಿಕೊಳ್ಳಲೊಲ್ಲ ಸುಗುಣೆ ಯಾಕೊಲ್ಲ ಕೈಸಾಗದದಕೆ ಒಲ್ಲ 4 ಜಾಣತನದಿ ಧನಧಾನ್ಯಗಳಿಸಲೊಲ್ಲ ಜಾಣ ಜನರ ಕೂಡಿ ಮಾನ ಪಡೆಯಲೊಲ್ಲ ಜಾಣೆ ಏನಾಶ್ಚರ್ಯ ಏನು ಯಾಕೆ ಒಲ್ಲ ಪ್ರಾಣೇಶ ಶ್ರೀರಾಮ ತ್ರಾಣಕೊಡದದಕೊಲ್ಲ 5
--------------
ರಾಮದಾಸರು
ಯಾಚಕ ಜನ್ಮಾ ಯಾಕೆ ಬರೆದನೊ ಬ್ರಹ್ಮಾ ನಾಚಿಕೆಯಾಗಿ ನಷ್ಟಾಗುವಂತೆ ಸ್ವಧರ್ಮಾ ಪ ಒಡಲಾಶೆಗಾಗಿ ಹೊಲೆಯನ ಹೊಗಳಬೇಕು ಕಡುಲೋಭಿಯಾದ ಅರಸನೋಲಗವೆ ಸಾಕು ಬಡತನವೆಂದು ಪರರ ಸೇರುವದೆ ಸಾಕು ಒಡಲು ಪರಾಕು 1 ತ್ಯಾಗದಿ ಕರ್ಣಾ ಭೋಗದಿ ದೇವೇಂಧ್ರನೆಂದು ಕೊಂಡಾಡಲು ಪೋಗಿ ಬಾ ನಾಳೆ ಎಂದು ಎನುತ ಪೇಳಲಾಗಿ ಬೈದಾಡುತ ಬಂದು ಬಳಲುತಿರಲಾಗ ಚಿತ್ತಕ್ಕೆ ತಂದು 2 ಪರ್ವತವನ್ನು ಕಂಡು ಕೈತಿಕ್ಕಿ ಕೋರಿದೆ ಬರಿದೆ ಇಂಥಾ ಗರ್ವದಿಂದುಕ್ಕಿ ಏರಿದೆ ಗುರುವಿಮಲಾನಂದ ಸರ್ವೋತ್ತಮನ ನೆನೆಯ ಬಾರದೇ 3
--------------
ಭಟಕಳ ಅಪ್ಪಯ್ಯ
ಯಾಚಿಸುವೆನು ನಿನ್ನನಿದಕೆ ಕರುಣಸಾಗರ ಗಮನ ಜಗತ್ಪಾಲ ಪ್ರಭುವರ ಪ ದೈನ್ಯರಾಹಿತ್ಯ ರಹಿತ ಜಾಡ್ಯರಹಿತವು ಪಾದ ಕಮಲರತಿ ಸದಾವಕಾಲವು 1 ಪ್ರಭುವೆ ನಿನ್ನ ಭೃತ್ಯನಾನಾದಿಕಾಲದಿ ಅಭಯವಿತ್ತು ಪಾಲಿಸೆನ್ನ ಹೇ ದಯಾನಿಧೆ 2 ತುಷ್ಟನಾದರೇನುರುಷ್ಟನಾರೇನೊಲೊ ಇಷ್ಟದೈವ ನಿನ್ನ ಹೊರತು ಗತಿಯ ಇಲ್ಲೆಲೊ 3 ತುಷ್ಟನಾದ ಬಳಿಕ ನೀನೆ ಹೇ ಕೃಪಾಕರ ಬಿಟ್ಟುನಿನ್ನ ಭಜೀಸಲ್ಯಾಕೆ ಯಿತರಕಾಯ್ವರ 4 ನೀನೆ ರೋಷವನ್ನು ತಾಳೆ ಸುಜನಬಂಧುವೆ ದೀನನನ್ನು ಕಾಯ್ವರಾರು ನೀನೆಯಲ್ಲವೆ 5 ದೋಷ ಕ್ಷಮಿಸುವಲ್ಲಿ ನಿನ್ನ ಪೋಲ್ವ ಅರಸರು ದೇಶಸರ್ವಗಳಲಿ ಪುಡುಕಲಲ್ಲೆ ದೊರಕರು 6 ಎನ್ನಸರಿ ಕೃತಘ್ನ ವಂಚನೀಯ ಮಾಳ್ಪನ ವನ್ನಜಾಭವಾಂಡದೋಳಾವಲ್ಲಿ ಕಾಣೆನಾ 7 ದೀನ ದಾಸ ನಿನಗೆ ನಾನು ಹೇ ಜಗತ್ಪತೆ ಮಾಣದೆಲ್ಲಿರಲ್ಲಿ ತೋರಿ ಪ್ರೇಮ ಸಾಮ್ಯತೆ 8 ಎನ್ನ ವಿಷಯ ಭಯವು ನಿನಗೆ ಲಕ್ಷವಾವುದು ಮನ್ನಿಸೆನ್ನ ಪೊರೆವ ಸರ್ವಭಾರ ನಿನ್ನದು 9 ಈಶಪೂರ್ಣಕಾಯ ನಿನಗಸಾಧ್ಯವಾವುದು ಆಶೆಯನ್ನದಾವಘನವು ನಿನಗೆ ತೋರ್ಪುದು 10 ದಾಸನಾಶೆಪೂರ್ತಿಸಲ್ಕಾಲಸ್ಯವುಚಿತವೋ? ಅಶಿಶಿಸುವನು ದಾಶಗೈವುದೇನು ನೀತವೋ? 11 ಲೋಕನಾಥ ಕರುಣ ಪೂರ್ಣನೇ ಪರಾತ್ಪರ ಯಾಕೆ ಯೊನ್ನೊಳಿನಿತು ನೀನು ನಿರ್ದಯಾಪರ 12 ಗರವತಾಯಿತನನುಜಗೀಯೆ ಅವುದೋಗತಿ ತರುಳನಲ್ಲಿ ಕರುಣಿಸುವದು ಕೃಷ್ಣ ಮೂರುತಿ 13 ದಾತ ಜ್ಞಾತನು ನಿನ್ನ ವಿನಹಾಭಿಷ್ಟಫಲದ ಕರ್ತೃ ಆವನು 14 ಲಕ್ಷ್ಮಿಪತಿಯ ಪೋಲ್ಪೋದಾರ ಸುಗುಣ ಶೀಲನ ಈಕ್ಷಿಸಲ್ಕೆ ಜಗದೊಳಾರನೆಲ್ಲಿ ಕಾಣೆನಾ 15 ನಿನ್ನ ಔದಾರ್ಯ ಸರ್ವರಲ್ಲಿ ಸಾಮ್ಯವು ಎನ್ನೊಳಿನಿತ್ತು ನಿನ್ನದ್ಯಾಕೆ ಕಾರ್ಪಣ್ಯವು 16 ಆರ್ತಬಂಧುವೆಂದು ನಿನಗೆ ಶರಣುಬಂದೆನು ಸಾರ್ಥಕವನು ಮಾಡುವಿಯೊ ಜರಿದೆ ಬಿರುದನು 17 ದೀನ ಬಂಧು ಕರುಣಸಿಂಧು ಸುಹೃದ್ಬಾಂಧವ ಹೀನ ಭವಾರ್ಣವದಿ ಮಗ್ನನಿರುವೆ ಭೂಧವ 18 ತಾರಿಸೈ ಭವಾಬ್ದಿಯಿಂದ ಇಂದಿರಾವರ ಸೂರಿಜನರ ಸಂಗವೆನ್ನಗೀಯೋಗಿರಿಧರ19 ಶ್ರೀನೃಸಿಂಹ ಸತತ ನೀನು ಸದಯ ಮೂರುತಿ ದೀನ ನನ್ನೊಳ್ಯಾಕೆ ನಿರ್ದಯವ ತೋರುತಿ 20 ಸಾಧುಗಳು ನಿರ್ಗುಣಿಗಳಲ್ಲಿ ದಯವÀ ಮಾಳ್ಪರು ಸಾದರದಲಿ ಸರ್ವರಲ್ಲಿ ಸದಯರಿಪ್ಪರು 21 ಧನ್ಯಜನಕೆ ನಿನ್ನನೀವುದೇನು ಅಚ್ಚರ ದ್ಯೆನ್ಯ ಬಡುವನನ್ನು ಪಾಲಿಸುವದು ಪರತರ 22 ಚಂದ್ರಚಾಂಡಾಲಗೃಹದ ಮೇಲೆಯಾದರು ಸುರತರು 23 ಈತೆರ ಶ್ರೀ ಪತಿಯೆ ಎನಗೆ ಪ್ರೀತನಾಗೆಲೋ ನೀತವಾಗಿ ಕರುಣದಿಂದ ಕರವಪಿಡಿಯಲೊ 24 ಪುನಃ ಪುನಃ ನಿನ್ನನಿದನೆ ಬೇಡಿಕೊಂಬೆನಾ ಮನದೊಳು ಪ್ರಸನ್ನನಾಗು ಜನಕಜಾರಮಣ25 ಪಂಚರಾತ್ರಾಗಮೋಕ್ತ ಈಸ್ತುತಿಯನು ವಿನುತ ಶ್ರೀ ರಾಮಚಂದ್ರನು 26 ಮುದದಿ ಮನಸಿನೊಳಗೆ ತಾನೆವದಗಿ ಪೇಳಿದ ಅದನೆ ಶ್ರೀವರದೇಶ ವಿಠಲ ನುಡಿಸಿ ಬರೆಸಿದ 27
--------------
ವರದೇಶವಿಠಲ
ಯಾತಕಯ್ಯ ತೀರ್ಥಕ್ಷೇತ್ರಗಳುಶ್ರೀ ತುಲಸಿಯ ಸೇವಿಪ ಸುಜನರಿಗೆ ಪ. ಅಮೃತವ ಕೊಡುವ ಹರುಷದೊಳಿರ್ದಕಮಲೆಯರಸನಕ್ಷಿಗಳಿಂದಪ್ರಮೋದಾಶ್ರು ಸುರಿಯೆ ಕ್ಷೀರಾಬ್ಧ್ದಿಯೊಳುಆ ಮಹಾತುಲಸಿ ಅಂದುದಿಸಿದಳು 1 ಪರಿಮಳಿಸುವ ಮಾಲೆಯ ನೆವದಿ ಹರಿಯುದರದಲ್ಲಿಸಿರಿಯೊಲಿಹಳುತÀರುಣಿ ತುಲಸಿ ತಪ್ಪದೆಯವನಚರಣವ ರಮೆ ಭಜಿಸೆ ಭಜಿಪಳು2 ಪೂಜಿಸುವರ ಶಿರದಿ ನಿರ್ಮಾಲ್ಯಗಳವ್ಯಾಜದಿಂದ ಲಕ್ಷ್ಮಿಯ ಕೂಡೆ ಬಹಳುಈ ಜಗದೊಳು ತಾವಿಬ್ಬರಿದ್ದಲ್ಲಿಆ ಜನಾರ್ದನನಾಕ್ಷಣ ತಹಳು 3 ಒಂದು ಪ್ರದಕ್ಷಿಣವನು ಮಾಡಿದವರಹೊಂದಿಪ್ಪುದು ಭೂಪ್ರದಕ್ಷಿಣ ಪುಣ್ಯಎಂದೆಂದಿವಳ ಸೇವಿಸುವ ನರರಿಗೆಇಂದಿರೆಯರಸ ಕೈವಲ್ಯವೀವ 4 ತುಲಸಿಯ ನೆಟ್ಟವನು ಮತ್ತೆ ತನಗೆ ಇಳೆಯೊಳು ಪುಟ್ಟುವ ವಾರ್ತೆಯ ಕಳೆವಜಲವೆÀರೆದು ಬೆಳೆಸಿದ ಮನುಜರಕುಲದವರ ಬೆಳೆಸು ವೈಕುಂಠದಲ್ಲಿ 5 ತುಲಸಿಯೆ ನಿನ್ನ ಪೋಲುವರಾರುಮೂಲದಲ್ಲಿ ಸರ್ವತೀರ್ಥಂಗಳಿಹವುದಳದಲ್ಲಿ ದೇವರ್ಕಳ ಸನ್ನಿಧಾನಚೆಲುವಾಗ್ರದಿ ಸಕಲ ವೇದಗಳು 6 ತುಲಸಿ ಮಂಜರಿಯೆ ಬೇಕಚ್ಚುತಂಗೆದಳಮಾತ್ರ ದೊರಕಲು ಸಾಕವಗೆಸಲುವುದು ಕಾಷ್ಠಮೂಲ ಮೃತ್ತಿಕೆಯುಫಲವೀವನಿವಳ ಪೆಸರ್ಗೊಳಲು 7 ಕೊರಳಲ್ಲಿ ಸರ ಜಪಸರಗಳನ್ನುವರ ತುಲಸಿಯ ಮಣಿಯಿಂದ ಮಾಡಿಗುರುಮಂತ್ರವ ಜಪಿಸುವ ನರರುಹರಿಶರಣರ ನೆಲೆಗೆ ಸಾರುವರು8 ಎಲ್ಲಿ ತುಲಸಿಯ ಬನದಲ್ಲಿ ಲಕ್ಷುಮೀ-ವಲ್ಲಭನು ಸರ್ವಸನ್ನಿಹಿತನಾಗಿನೆಲಸಿಹನಿವಳೆಸಳೊಂದಿಲ್ಲದಿರೆಸಲ್ಲದವಂಗನ್ಯಕುಸುಮದ ಪೂಜೆ 9 ಎಲ್ಲ ಪಾಪಂಗಳೊಮ್ಮೊಮ್ಮೆ ಕೈಮುಗಿಯೆಎಲ್ಲಿ ಪೋಪುದು ದೇಶದೇಶಂಗಳಿಗೆನೆಲ್ಲಿ ಮಲ್ಲಿಗೆ ಮೊದಲಾದ ಸೈನ್ಯಅಲ್ಲೀಗಲು ನಮ್ಮ ಬನದಲೊಪ್ಪಿಹಳು 10 ಹರಿಪಾದಕೆ ಶ್ರೀತುಲಸಿಯೇರಿಸಿದನರರನು ಪರಮ ಪದಕೇರಿಸುವುದುನಿರುತದಿ ತುಲಸಿಯ ಕಂಡರವಗೆನರಕಗಳ ದರುಶನ ಮತ್ತಿಲ್ಲ 11 ಪಡಿ ಆಯಿತು ಗಡನ್ನಿವಳ ವೃಂದಾವನದಲ್ಲಿ ನೆಟ್ಟುಮನೆಮನೆ ಮನ್ನಿಸದವನ್ಯಾವ12 ಕನಸಿನಲಿ ಕಂಡಂತೆ ಇನ್ನೊಂದುಕೊನೆವೆರಸಿದ ಪುಷ್ಪದಿ ಜಪಿಸಿಅನುದಿನ ಹಯವದನನ್ನ ತೀರ್ಥವನು ಕೊಂಡು ನಾ ಧನ್ಯನಾದೆನು 13
--------------
ವಾದಿರಾಜ
ಯಾತಕವನಿಯೊಳ್ ಜನಿಸಿದೆ ನಾನು ಸಾರ್ಥಕೇನು ನಾನು ಕೋತಿ ಸಾರ್ಥಕೇನು ಪ ಶರಧಿ ಹಾರಿ ಉರಿವಿಲಂಕೆಯನರಿವೆನೇನೊ ವಾರ್ತೆ ತಿರುಗಿ ಮಾರ್ಗವ ಮಾಡಿ ಮಾತೆಯ ತರುವೆನೇನೊ 1 ಕಿತ್ತು ಸಂಜೀವನವ ಬೆಟ್ಟಲ್ಲಿರಿಸುವೆನೇನೊ ರಾಮ- ರ್ಹತ್ತಿಸ್ವಾಹನನಾಗಿ ಖ್ಯಾತಿಪಡೆವೆನೇನೊ 2 ಇಂದಿರೇಶ ಕೊಡಲು ಪದವಿ ಒಲ್ಲೆಂಬೆನೇನೊ ರಾಮ- ರೆಂಜಲೆಲೆಗ್ಹಾರೈಸಿ ಕದ್ದೊಯ್ದುಂಬೆನೇನೊ 3 ಮುನ್ನ ಹರಿಯ ಸೇವೆಗೆಂದು ಜನಿಸಿದೆನೇನೊ ಧರೆಯೊಳ್ ಧರ್ಮ ಮೀರದೆ ನಡೆದು ಖ್ಯಾತಿ ಪಡೆವೆನೇನೊ 4 ರಾಜಸೂಯಯಾಗಾಶ್ವಮೇಧ ಸಾಧಿಸುವೆನೇನೊ ರಾಜ್ಯ ಭೇದಿಸಿ ಶತ್ರುಗಳಿಗೆ ಭಯವ ತೋರುವೆನೇನೊ 5 ಕ್ಲೇಶಮನಕಿಲ್ಲದೆ ವನವಾಸ ಸಹಿಸುವೆನೇನೊ ಅಜ್ಞಾತ- ವಾಸೊಂದುಕ್ಷಣ ಪರಿಯಂತರ ಚರಿಸುವೆನೇನೊ 6 ಭಿಕ್ಷೆತನಕೊಂಬೊ ಸಜ್ಜನರಿಗೆ ನಮಿಸುವೆನೇನೊ ಬೋರೆ- ವೃಕ್ಷಮೂಲದಲ್ಲಿ ಆವಾಸ ಬಯಸುವೆನೇನೊ7 ಪಾದಕ್ಕೆರಗುವೆ ಪ್ರಾಣೇಶ ನೀ ಪಾಲಿಸುವ್ಯೇನೊ ಜ್ಞಾನ ಆದಿಮೂರುತಿ ವೇದವ್ಯಾಸನ ಒಲಿಸುವೆನೇನೊ 8 ಬಿಟ್ಟು ಚಲಿಸದೆ ನಿನ್ನಲ್ಲೆ ಮನಸಿಟ್ಟೇನೇನೊ ವಾ- ಸಿಷ್ಠ ಭೀಮೇಶಕೃಷ್ಣನ ಭಜಿಸುತ್ತಿರುವೆನೇನೊ 9
--------------
ಹರಪನಹಳ್ಳಿಭೀಮವ್ವ
ಯಾತಕಿನ್ನಾಥನೆಂಬುವದೂ ಕರುಣಾಳು ಜಗ - ನ್ನಾಥದಾಸರ ಸೇರಿಕೊಂಬುವದೂ ಪ ಭೀತಕರ ಬಹು ಜನ್ಮಕೃತ ಮಹಾ ಪಾತಕಾದ್ರಿಗಳನು ಭೇದಿಸಿ ಮಾತುಳಾಂತಕನಂಘ್ರಿ ಕುಮುದ ನೀತ ಭಕ್ತಿಯ ನೀಡಿ ಸಲಹುವ ಅ.ಪ. ಘೋರಸಂಸಾರ ಪಾರಾವಾರ ದಾಟಿಸುವಾ ಲಕ್ಷ್ಮೀ ನಿತ್ಯ ಭಾರ ವಹಿಸಿರುವಾ ಮೂರು ಲೋಕೋದ್ಧಾರ ದುರಿತೌಘಾರಿ ಕೃಷ್ಣ ಕಥಾಮೃತಾಬ್ಧಿಯ ಸಾರ ತೆಗೆದು ಬೀರಿ ಕರುಣವ ಬೀರಿ ಸುಜನೋದ್ಧಾರ ಮಾಡಿದ 1 ವೇದಶಾಸ್ತ್ರ ಪುರಾಣವೆಲ್ಲವ ತೋರಲಿಟ್ಟಿಹರು ಬಹು ವಿಧ- ವಾದ ದುರ್ಮತವಾದಿಗಳ ಮಾರ್ಗದಿ ಕಟ್ಟಿಹರೊ ಮೋದತೀರ್ಥ ಮತಾನುಗತ ಸದ್ವಾದಪೂರ್ಣ ಪರಮಾತ್ಮದರ್ಶನ ಶ್ರೀದನೊಲಿದು ಕೃಪಾಕಟಾಕ್ಷ ಪ್ರಸಾದ ಒಲಿವ ವಿನೋದಗೊಳಿಸುತ2 ಶ್ರೀರಮಾಪತಿ ಸರ್ವಸುಗುಣಾಧಾರ ದಯದಿಂದಾ ಮುರಲಾ ಸೇರಿ ಬರುವದು ಸರ್ವಸಂಪತ್ಪಾರವಾನಂದ ಕಾರುಣಿಕತನದಿಂದಲಿಂತುಪಕಾರವ ಮಾಡಿ ದೀನ ಜನರಿಗೆ ಧೀರ ಶ್ರೀದವಿಠಲನ ತೋರಿದರು ನಿಜಭಕ್ತಜನರಿಗೆ 3
--------------
ಶ್ರೀದವಿಠಲರು
ಯಾತಕೆ ದಯಮಾಡಲೊಲ್ಲೆ ರಂಗಯ್ಯ - ಜಗ ಪ ನ್ನಾಥ ನಿನ್ನ ನಂಬಿದೆನಲ್ಲೊ ರಂಗಯ್ಯ ಅ ಚಿಕ್ಕಂದು ಮೊದಲೆ ನಾನು ರಂಗಯ್ಯ - ನೀನೆದಿಕ್ಕೆಂದು ನಂಬಿದೆನೊ ರಂಗಯ್ಯ1 ನೆಂಟರಿಷ್ಟರು ನೀನೆ ರಂಗಯ್ಯ - ನೀನೆಬಂಟರಿಗೆ ಬಂಟನಯ್ಯ ರಂಗಯ್ಯ2 ದಾಸರ ದಾಸನಯ್ಯ ರಂಗಯ್ಯ - ಕರ್ಮಪಾಶಗಳ ಮೋಚನೆ ಮಾಡೊ ರಂಗಯ್ಯ3 ಶೇಷಗಿರಿ ವಾಸ ರಂಗಯ್ಯ - ಆದಿಕೇಶವನೆ ರಕ್ಷಿಸೊ ರಂಗಯ್ಯ4
--------------
ಕನಕದಾಸ
ಯಾತಕೊ ಭಯ ಭೀತಿ ಚಪಲತೆಯು ನಿನ ಗ್ಯಾತಕೊ ಮೂಢಮಾನವ ಪ ಪಾತಕವಳಿ ಗುರುನಾಥನ ಕೃಪೆಯೊಳು ಭೂತಳದತಿಶಯದಾತನು ಕಾಣುವಾ ಅ.ಪ ಈತರದಿ ನೀ ಬಾರದಿರುವಿಯಲ ಮೂಢಮಾನವ ರಾತ್ರಿ ಬೆಳಕಿನೊಳೇಕವಾಗೋ ಭಲಾಸಿ ಶೀತೆಯ ಕೊಂಡೊಯ್ದಾತನ ತಮ್ಮಗೆ ಪ್ರೀತಿಲಿ ಸ್ಥಿರಪದವಿತ್ತನು ಚೀ ಚೀ ನಿನಗ್ಯಾತಕೋ 1 ಯಾತ್ರೆ ಮಾಡೆಲೊ ಕ್ಷೇತ್ರವನ್ನರಿತು ಮೂಢಮಾನವ ಸೂತ್ರ ಪಿಡಿದಲ್ಲಿ ಪಾತ್ರನಾಗೆಲೊ ಧಾತ್ರಿಯೊಳು ತುಲಶೀರಾಮನು ಮಾತ್ರ ತಾ ನಿಜ ಧೋತ್ರವ ತೊಡಿಸುವ ಯಾತಕೊ 2
--------------
ಚನ್ನಪಟ್ಟಣದ ಅಹೋಬಲದಾಸರು
ಯಾತರ ಭಯ ಶ್ರೀನಾಥನ ಪರಮ ಸುಪ್ರೀತಿಯ ಪಡೆದವಗೆ ಪ ವಿಧಿ ನಿಜಸುಖದಾತ ನೆಂದರಿತವಗೆ ಅ.ಪ ಬಂಧು ಜನರು ತನಗೊಂದಿಸಿದಾಕ್ಷಣ ಬಂದ ಭಾಗ್ಯವೇನೊ ಹಿಂದೆ ಮುಂದೆ ತನ್ನ ನಿಂದಿಸಿ ನುಡಿಯಲು ಕುಂದಾದದ್ದೇನೊ ಮಂದಿರದಲಿ ತಂದಿಟ್ಟಿರುವವಗೆ 1 ದುಸುಮುಸುಗುಟ್ಟುವ ಸತಿಸುತರಿಂದಲಿ ಹಸಗೆಟ್ಟದ್ದೇನೋ ಅಶನಾಚ್ಛಾದನ ತರಲಿಲ್ಲವೆನುತಲಿ ವ್ಯಸನ ಪಡುವುದೇನೊ ವಸುದೇವನಸುತನೊಶದೊಳಗಿರುವವಗೆ 2 ಘಾಸಿಯಿಂದಲಾಯಾಸ ಪಡುತ ಅವಾಸದೊಳಿದ್ದೇನೋ ಕಾಶಿ ಕಂಚಿ ಕಾಳಹಸ್ತಿ ಮೊದಲಾದ ದೇಶ ತಿರುಗಲೇನೋ ಸಂತೋಷದಲ್ಲಿರುವವನಿಗೆ 3
--------------
ಜಗನ್ನಾಥದಾಸರು
ಯಾತರ ಸುಖವಯ್ಯಾ ಇದು ಇನ್ಯಾತರ ಸುಖವಯ್ಯಾ ಪ ಶ್ರೀ ತರುಣೀಶನ ಮರೆತು ಸಂಸಾರದಿ ಬಾಳುವುದೆಂತೆನೆ ಅ.ಪ. ಹಣ ಉಳ್ಳ ಮನುಜಂಗೆ ಗುಣವುಳ್ಳ ಸತಿಯಿಲ್ಲ ಗುಣವುಳ್ಳ ಸತಿಯಿರೆ ಗುಣಡೊಂಕುಪತಿಯು ಅನುಕೂಲವಿರೆಎರಡು ತನಯರೊಬ್ಬರು ಇರರು ಗುಣಿಸಿ ನೋಡಲು ಎಲ್ಲು ನ್ಯೂನತೆ ಸರಿಯೈ 1 ವಿತ್ತವಿದ್ದರೆ ಹಿತರು ಬಂಧು ಬಳಗವೆಲ್ಲ ವಿತ್ತವಿಲ್ಲಾದಿರಲು ನಿಂದಿಸಿ ನಗುತಿಹರು ಬತ್ತಲೆ ಬಂದುದು ಬತ್ತಲೆ ಪೋಪುದು ಮತ್ತೆ ಮಮತೆ ಯಾಕೊ ಮಧ್ಯೆ ಮತ್ತಿದ್ದುದಕೆ 2 ಸಂತೆಯತೆರಸರಿ ಸತಿಸುತ ಪರಿಜನ ನಿಂತು ಪೋಪರು ತಮ್ಮಯ ಋಣತೀರೆ ಅಂತ್ಯವಿಲ್ಲ ಸಂಸಾರದ ಶರಧಿಗೆ ಸಂತಸಪ್ರದವೆಂಬ ಭ್ರಾಂತಿಯ ನೀಗಯ್ಯ 3 ಜನನ ಮರಣವೆಂಬ ದುಃಖವೆ ತಾಕಿರೆ ದಿನದಿನ ಪ್ರತಿದಿನ ರೋಗದ ಕಾಟಗಳು ಗುಣಿಸಿ ನೋಡಲು ಮತ್ತೆ ಮನಕೆ ನೆಮ್ಮದಿ ಇಲ್ಲ ಅನಿಲ ಮಂದಿರ ನೊಲಿಸಿ ಗುಣದೂರನಾಗಯ್ಯ 4 ಕಾಲನೆಡೆಗೆ ಜನ ಬೀಳ್ಪುದು ನೋಡಿಯು ಬಾಳು ಸ್ಥಿರವೆಂದು ಕೇಳಿಲಿ ಮುಳುಗುವುದೇ ಬಾಲ ಯೌವ್ವನ ಮತ್ತೆ ಮುಪ್ಪಿಲಿ ಬೀಳುವ ಸ್ಥೂಲ ಶರೀರವೆ ಗೋಳಿನ ಸೆರೆಮನೆಯೈ5 ಊಟ ತಿಂಡಿಗೆ ಮೇಲ್ನೋಟದ ಕೀಟಗೆ ಕರ್ಮ ಮೂಟೆಯ ಘಳಿಸುವರೇ ಭವ ಕಾಟಕ ದಾಟಲು ಘೋಟಕಾಸ್ಯನ ಪದವಾರಿಜ ಪಿಡಿಯೈಯ್ಯ 6 ಮಂದನಾಗದೆ ಬಹು ಮುಂದಿನ ಗತಿ ನೋಡು ವಂದಿಸಿ ಜಯತೀರ್ಥ ವಾಯ್ವಾಂತರ್ಗತ ಪತಿ ಕೃಷ್ಣವಿಠಲನ ಭಜಿಸಲು ಕುಂದುಗಳಿಲ್ಲದೆ ಶಾಶ್ವತಾನಂದವು ಕೇಳಯ್ಯ 7
--------------
ಕೃಷ್ಣವಿಠಲದಾಸರು
ಯಾತರ ಸುಖವೆಂದು ಸುರುವಿ ಈ ಭೂತದೊಳಗಿನ್ನು ಬಿನುಗುಮಾನವರಿಂಗೆ ಪ ನೆತ್ತಿಯ ಮೇಲೊಂದು ಕೆರೆಯುಂಟು ಅದು ತುಂಬಿ ಸುತ್ತಲು ಹರಿ ನೀರು ಹರಿದಾಡಿತು ಬತ್ತಿತು ಮೂಗಿನೊಳುಸುರನು ಕಿವಿಯನು ಕುತ್ತಿತು ಪರರೆಂದ ಮಾತು ಕೇಳಿಸದಂತೆ 1 ಘೃತ ಮಧು ಕೈಟಭಾರಿಯ ಮನೆಯೊಳಗುಂಟು ತೋಟದೊಳಿಹ ಬಾಳೆದಿಂಡು ಕುಂಡಿಗೆತಿಂದು ಪಾಟಿಸಿ ಸರ್ವಾಂಗವನು ಧಾತುಗೆಡಿಸಿಹುದು 2 ಶಯನ ವೆಂದರೆ ಪರರ ಸುಲಿಗೆಯಿಂದ ಭೂ ಶಯನವೇಶಯನ ನಿಶ್ಚಯವಾಯಿತು ನಯನ ಮೂರುಳ್ಳ ದೇವನ ಮಿತ್ರ ಶ್ರೀ ಲಕ್ಷ್ಮೀ ರಮಣನೊಬ್ಬನೆ ಬಲ್ಲ ನಾನೊಬ್ಬನು ಬಲ್ಲೆನು3
--------------
ಕವಿ ಪರಮದೇವದಾಸರು
ಯಾತರವನೆಂದುಸುರಲಿ - ಜಗನ್ನಾಥ ಮಾಡಿದ ಒಂದು ನರರೂಪವಯ್ಯ ಪ ಮುಟ್ಟು ಹುಟ್ಟಿನೊಳು ನೆಟ್ಟನೆ ನಾ ಬಂದೆತೊಟ್ಟಿದ್ದೆನಾಗ ತೊಗಲಬಕ್ಕಣಇಷ್ಟರೊಳಗೆ ಒಂದು ವಿವರವರಿಯದಂಥಭ್ರಷ್ಟಗೆ ನನಗಿನ್ಯಾತರ ಕುಲವಯ್ಯ 1 ಸೂತಕ ದುರ್ಗಂಧದ ಮಲಮೂತ್ರನಿಂದ ಠಾವಲಿ ತನ್ನ ನಿಜವರಿಯದೆಬಂದದ್ದು ಬಚ್ಚಲ ಗುಣಿ ತಿಂದದ್ದು ಮೊಲೆ ಮಾಂಸ - ಇಂಥಅಂಧಕಗೆ ನನಗಿನ್ಯಾತರ ಕುಲವಯ್ಯ 2 ಒಂಬತ್ತು ಎಜ್ಜದೊಳೊಸರುವ ಹೊಲಸದುತುಂಬಿ ತುಳುಕುವ ಕೊಡವಾಗಿರಲುಇಂಬಿಲ್ಲದೆ ಹೊಲೆಗೊಂಡ ಠಾವಿನಲಿ ಬಂದಂಥಡಂಬಕ ನನಗಿನ್ಯಾತರ ಕುಲವಯ್ಯ3 ಕರುಳು ಖಂಡ ನಾರುವ ಚರ್ಮರೋಹಿತನರಪಂಜರದೀ ಹುರುಳಿಲ್ಲದನರದೇಹ ಹೊತ್ತು ತಿರುಗುವಂಥತಿರುಕ ನನಗಿನ್ಯಾತರ ಕುಲವಯ್ಯ 4 ಹಚ್ಚಡದ ಮೇಲೆ ಲಚ್ಚಿಕೆಯಿಟ್ಟಂತೆಹೆಚ್ಚು ಕಡಮೆ ಎಂದು ಹೆಣಗಾಡುತನಿಚ್ಚ ಕಾಗಿನೆಲೆಯಾದಿಕೇಶವನಹುಚ್ಚಗೆ ನನಗಿನ್ಯಾತರ ಕುಲವಯ್ಯ 5
--------------
ಕನಕದಾಸ