ಒಟ್ಟು 4153 ಕಡೆಗಳಲ್ಲಿ , 125 ದಾಸರು , 2858 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ಷಮಾ ಸಮುದ್ರ ನಿನ್ನ ಸಮಾನರಿಲ್ಲರಮಾ ಬ್ರಹ್ಮಾದಿಗಳು ಪೊಗಳೆ ಪಉಮೆಯರಸ ನಿನ್ನ ಚರಣಮಹಿಮೆ ತನ್ನತರುಣಿಯೊಡನೆ ಹಗಲಿರುಳು ಪೇಳುವ ದಿವ್ಯ ಅ.ಪಅರಿಯದೆ ಅಜಮಿಳತರಳನಾರಗನೆಂದುಮರಣ ಕಾಲದಿ ಒದರೆಸರಸೀಜಾಕ್ಷನು ತನ್ನ ಪರಿವಾರದವರೆಂದುಸಿರಿದೇವಿಯೊಳು ಪೇಳಿ ತ್ವರಿತದಿ ರಕ್ಷಿಸಿದ 1ನಕ್ರನ ಬಾಧೆಗೆ ಸಿಕ್ಕಿದ ಗಜರಾಜಚಕ್ರಪಾಣಿಯ ಭಜಿಸೆಆ ಕ್ಷಣದಿ ತನ್ನ ಚಕ್ರಕಾಙÉÕಯ ಮಾಡಿಲಕ್ಷ್ಮೀದೇವಿಗ್ಹೇಳದೆ ಪಕ್ಷಿ ಹೆಗಲೇರಿ ಬಂದ 2ಹಿರಣ್ಯಕಶ್ಯಪು ತನ್ನತರಳಪ್ರಹ್ಲಾದನಿಗೆಪರಿಪರಿ ಬಾಧೆ ಪಡಿಸೆಹರಿಯ ತೋರೆಂದು ಆರ್ಭಟಿಸಿ ನುಡಿಯೆ ದೈತ್ಯನರಮೃಗರೂಪನಾಗಿ ಭರದಿ ಕಂಬದಿ ಬಂದ3ಪತಿಗಳೈವರು ಲಕ್ಷ್ಮೀಪತಿಯ ಧ್ಯಾನದೊಳಿರೆಮತಿಹೀನನೆಳೆತರಲುಗತಿನೀನಲ್ಲದೆ ಮತ್ತೆ ಹಿತರೊಬ್ಬರಿಲ್ಲವೆನೆಅತಿಬೇಗದಿಂದ ಧರ್ಮಸತಿಗೆ ಅಕ್ಷಯವಿತ್ತ 4ಇದರಂತೆ ತರಳಧ್ರÀುವ ಒದಗಿದ ತಾಪದಿಂದಪದುಮನಾಭನÀ ಭಜಿಸೆಮುದದಿಂದಾತಗೆ ಧ್ರುವಪದವಿಯನಿತ್ತು ಕಾಯ್ದೆಪದುಮನಾಭನೆ ನಿನಗೆದುರುಂಟೆ ತ್ರಿಜಗದಿ 5ಘಣಿಶಾಯಿ ನಿನ್ನಗುಣಮಹಿಮೆಯ ಪೊಗಳಲುಅಹಿಭೂಷಣನಿಗಳವೆಕ್ಷಣ ಬಿಡದಲೆ ನಿನ್ನ ಚರಣಸೇವೆಯ ಮಾಳ್ಪಸಿರಿದೇವಿ ಅರಿಯೆನೆಂದೆನಲು ನಿನ್ನಯಗುಣ6ಕರುಣಾಸಾಗರ ದೇವ ವಿಮಲಸ್ವರೂಪನೆ ಕಮಲನಾಭ ವಿಠ್ಠಲಶರಣಜನರ ಬಹುತ್ವರದಿಂದ ಬಂದು ಕಾಯ್ದಪರಮದಯಾಳೊ ನಿನ್ನ ಚರಣಕ್ಕೆ ನಮೋ ಎಂಬೆ7
--------------
ನಿಡಗುರುಕಿ ಜೀವೂಬಾಯಿ
ಗಂಗಾಪಿತ ರಾಘವ ನಂಬಿದೆ ಶ್ಯಾಮ-ಲಾಂಗ ನಿನ್ನಯ ಪಾದವ ||ಮಂಗಳೆ ರಮಣ ಭುಜಂಗಧರಾರ್ಚಿತಾ |ನಂಗಜ ಜನಕ ಪಾಲಿಸಿಂಗಡಲೊಡೆಯನೆ ಪಶಫರ, ಕಮಠ,ಕೋಲನೃಹರಿ ಬಾಲ |ನೃಪಕುಲ ಪವನ ವ್ಯಾಲ ||ವಿಪಿನಸಂಚರಾ ಕೃಷ್ಣ ವಿಪುಳಾಬುದ್ಧಕಲ್ಕಿ |ವಪುಧರ ಅನಿರುದ್ಧಕೃಪಣವತ್ಸಲ ಸ್ವರ್ಪಾ- ||ದಪನೆಹರಿಕಾಶ್ಯಪಿಯೊಳಗೆ ಸುರ ರಿಪುಹ | ಶಿವನ ಕ |ರಿಪನ ನರಪತಿ ದ್ರುಪದ ನಂದನೆಯ ಪೊರೆದೀಶ್ವರ |ಕಪಟನಾಟಕ ಕಪಿಲ ರೂಪಿ 1ಕುರು ಕುಲೋತ್ತಮನಾಗಾರದೊಳಗೆಕ್ಷೀರ|ಸುರಿದೆ ಗೋಕುಲ ವಿಹಾರ ||ವರವಿಪ್ರಜರ ತಂದೆ ಹರಚಾಪಹನನಈ |ಶರೀರವೇ ನಿನ್ನದು ಸರಿಬಂದದನು ಮಾಡೋ ||ಕರೆಕರೆಯ ಭವಶರಧಿಯೊಳು ಬಾ- |ಯ್ದೆರೆವೆ ರಕ್ಷಿಸುವರನು ಕಾಣೆನೊಬ್ಬರ ನಿನ್ನುಳಿ- ||ದುರಗ ಶಯನನೇ ಧರಿಜವಲ್ಲಭಕರುಣಿ ಕೇಶವ2ಜನನ ಮರಣ ದೂರ ಇಂದ್ರಾನುಜ |ಮುನಿ ಗೇಯಾ ಚಲಧರ ||ವನರುಹಭವಸಂಕ್ರಂದನವಂದ್ಯ ವೀತ ಆ |ವನಿ ಮುಖ ತನ್ಮಾತ್ರಾಗುಣ ಪ್ರಾಣೇಶ ವಿಠಲ ||ಪ್ರನಮಿತಾಘ ಕಕ್ಷಾನಲ ಕಂದರ್ಪನ ಪಿತನೆ |ನಿನ್ನನುಗರೊಳಗಿಡೋ ಮಣಿಯೇ ಅನ್ಯರಿ ||ಗನಘ ಪಾಲಿಪುದನವರತ ಯನ್ನನು ಬಿಡದಲೆ 3
--------------
ಪ್ರಾಣೇಶದಾಸರು
ಗಣೇಶ ಪ್ರಾರ್ಥನೆವಂದಿಪೆ ನಾ ನಿನ್ನನು ಸೊಂಡಿಲ ಗಣಪ ಧಬಂದೆನ್ನ ಸಲಹೊ ನೀನು ಪಪುಂಡರೀಕಾಕ್ಷನುದ್ದಂಡ ಪರಾಕ್ರಮಕೊಂಡಾಡಿಸುವಿ ವಕ್ರತುಂಡನೆಂಬರೊ ನಿನ್ನ ಅಪಪಾಶಾಂಕುಶಧರನೇ ವೂೀದಕಹಸ್ತಭಾಷಿಗ ನೀನಹುದೋಆಶಾಪಾಶಗಳಿಂದ ಘಾಸಿಗೊಂಡಿಹ ಮನಬೇಸರ ಕಳೆದೆಮ್ಮ ಪೋಷಿಪನನು ತೋರೊ 1ಗೌರಿಯ ವರಪುತ್ರನೆ ಪ್ರಾರ್ಥಿಸುವೆ ಶ್ರೀ-ಶೌರಿಯಪಾದಸ್ಮರಣೆಗೌರವದಿಂ ಮಾಳ್ಪ ಶೌರ್ಯ ಎನಗೆ ಕೊಟ್ಟುಮಾರಪಿತನಪಾದತೋರಿಸು ತವಕದಿ2ಅಂತರಂಗದ ಶತ್ರುಗಳಿಂದಲಿ ಮನಚಿಂತೆಗೆ ಗುರಿಗೈಸಿತೊಎಂತು ಈಭವದಾಂಟುವಂಥ ಪಥವ ಕಾಣೆಕಂತÀುಪಿತನಪಾದಚಿಂತನೆ ಕೊಡಿಸಯ್ಯ3ವಾನರನಿಕರದೊಳು ಶ್ರೇಷ್ಠನ ಪ್ರಭುವಾರಿಧಿಯನು ಬಂಧಿಸೆಆದಿಮೂರುತಿ ನಿನ್ನ ಆರಾಧಿಸಿದನೆಂಬಸೋಜಿಗಸುದ್ದಿಯು ಮೂರ್ಜಗದೊಳಗುಂಟು4ಕಮಲನಾಭವಿಠ್ಠಲ ಭಕ್ತರ ಹೃದಯಕಮಲದೊಳಗೆ ಶೋಭಿಪಮಿನುಗುವ ಮಧ್ವಮಂಟಪದೊಳು ರಾಜಿಪಸನಕಾದಿವಂದ್ಯನ ಕ್ಷಣ ಬಿಡದಲೆ ತೋರು 5
--------------
ನಿಡಗುರುಕಿ ಜೀವೂಬಾಯಿ
ಗುಮ್ಮನ ಕರೆಯದಿರೆ-ಅಮ್ಮ ನೀನು |ಗುಮ್ಮನ ಕರೆಯದಿರೆ ಪಸುಮ್ಮನೆ ಇರುವೆನು ಅಮ್ಮಿಯ ಬೇಡೆನು |ಮಮ್ಮು ಉಣ್ಣುತ್ತೇನೆ ಅಮ್ಮ ಅಳುವುದಿಲ್ಲ ಅ.ಪಹೆಣ್ಣುಗಳಿರುವಲ್ಲಿಗೆ-ಹೋಗಿ ಅವರ-|ಕಣ್ಣ ಮುಚ್ಚುವುದಿಲ್ಲವೆ ||ಚಿಣ್ಣರ ಬಡಿಯೆನು ಅಣ್ಣನ ಬೈಯೆನು |ಬೆಣ್ಣೆಯ ಬೇಡೆನು ಮಣ್ಣ ತಿನ್ನುವುದಿಲ್ಲ 1ಬಾವಿಗೆ ಹೋಗೆ ಕಾಣೆ-ಅಮ್ಮ ನಾನು-|ಹಾವಿನ ಮೇಲಾಡೆ ಕಾಣೆ ||ಆವಿನ ಮೊಲೆಯೂಡೆ ಕರುಗಳನ್ನು ಬಿಡೆ |ದೇವರಂತೆ ಒಂದು ಠಾವಲಿ ಕೊಡುವೆ 2ಮಗನ ಮಾತನು ಕೇಳಬೇಡ-ಗೋಪಿದೇವಿ-|ಮುಗುಳುನಗೆಯ ನಗುತ ||ಜಗದ ಒಡೆಯ ಶ್ರೀಪುರಂದರವಿಠಲನ |ಬಿಗಿದಪ್ಪಿಕೊಂಡಳು ಮೋಹದಿಂದಾಗ 3
--------------
ಪುರಂದರದಾಸರು
ಗುರುರಾಯರ ನಂಬಿರೋ-ಮಾರುತಿಯೆಂಬ ಪಗುರುರಾಯರ ನಂಬಿ ಬಿಡದೆ ಯಾವಾಗಲು |ದುರಿತವ ಕಳೆದು ಸದ್ಗತಿಯ ಪಡೆವರೆಲ್ಲ ಅ.ಪವನಧಿಯ ಮನೋವೇಗದಿಂದ ಲಂಘಿಸಿ ಮಹಿ-ತನುಜೆಯ ಶೋಕತಾಪವ ಕಳೆದು ||ವನವ ಬೇರೊಡನೆ ಕಿತ್ತೀಡಾಡಿ ಎದುರಾದದನುಜರ ಸದೆದು ಲಂಕೆಯ ತನ್ನ ಸಖಗಿತ್ತ 1ಕೌರವ ಬಕ ಹಿಡಿಂಬಕ ಕೀಚಕರೆಂಬ |ಕ್ರೊರಸಂತತಿಯೆಲ್ಲ ನುಗ್ಗಲೊತ್ತಿ ||ಘೋರಪಾತಕಿದುಶ್ಯಾಸನ ರಕುತವಹೀರಿ ಮುದದಿ ಮುರವೈರಿಯ ಭಜಿಸಿದ 2ಜೀವೇಶರೊಂದೆಂಬ ದುರ್ವಾದಿಗಳ ಕು-ಭಾವಶಾಸ್ರ್ತಗಳೆಲ್ಲ ತರಿದೋಡಿಸಿ ||ಕೋವಿದರಿಗೆ ಸದ್ಛಾಷ್ಯ ಸುಧೆಯನಿತ್ತುದೇವ ಪುರಂದರವಿಠಲ ಸೇವಕನಾದ 3
--------------
ಪುರಂದರದಾಸರು
ಗುರುವೇ ಶ್ರೀ ವಸುಧೇಂದ್ರ ಕರಜಾತ ಸದ್ಗುಣಸಾಂದ್ರ |ವರದೇಂದ್ರರಾಯ ಜಿತೇಂದ್ರ | ಮರುತ ಮತಾಬ್ಧಿ ಚಂದ್ರ ||ಶರಣು ನಿನ್ನಯ ಪದಸರಸಿಜಯುಗಗಳಿಗೆ |ಎರವುಮಾಡದೆ ಕಾಯೊಪರಮದಯಾಳು ಪದಾತಾಧರಿತ್ರೀ ಸುತೀನಾಥ ಶ್ರೀರಘುಪತಿ |ದೂತ ಭುವನದೋಳ್ ಖ್ಯಾತಿಯೋ ತವ ಸತ್ಕೀರುತಿ ||ಭೂತ ಭಯ ರೋಗವಾ ತಂದಟ್ಟುವಾ |ನಾಥ ರಕ್ಷಕ ಜಲಜಾತಾಂಬಕನೇ 1ದೋಷರಹಿತ ಯನ್ನಕ್ಲೇಶಹಿಂಗಿಸೊ ಸಂ |ನ್ಯಾಸಶಿರೋಮಣಿಯೆ ಮುನ್ನಾ ಆಶೆ ಬಿಡಿಸಿ ನಿನ್ನ ||ದಾಸನೆನಿಸಿಕೋ ಉದಾಸಿಸದಲೆ ಬಹು |ಘಾಸಿಮಾಡದೆ ರವಿಭಾಸ ಗುಣಾಢ್ಯ 2ಏನಾದರೇನು ಕೀಳು ಮಾನವರಾಶ್ರಯ ಧರೆಯೊಳು |ನಾನಿಚ್ಛಿಸೆನೊ ಕೃಪಾಳುಮಾನನಿನ್ನದು ಕೇಳು ||ನೀನೆವೆ ಗತಿಯೆಂದು ಧ್ಯಾನ ಮಾಡುವರಿಗೆ |ಪ್ರಾಣೇಶ ವಿಠಲನ ಕಾಣಿಸಿಕೊಡುವಿ 3
--------------
ಪ್ರಾಣೇಶದಾಸರು
ಗೋಕುಲ ಕೃಷ್ಣ ಗೋಪಿಸ್ತ್ರೀಯರ ಕೂಡೆ ||ಲೋಕ ಮೋಹನ ಲೀಲೆ ತೋರಿದನಲ್ಲಿ ||ಆ ಕನ್ಯೆಯರಿಗೆಲ್ಲ ಬೇಕಾದರೂಪ ತೋರಿ ||ಸಾಕಾರಿಯಾಗಿರೆ ಬಳಿಕೊಂದು ದಿವಸ 1ಸೀರೆ ಕುಪ್ಪಸ ತೊಟ್ಟು | ಹಾರ ಕಡಗವಿಟ್ಟು |ನಾರಿಯೊಬ್ಬಳುಕ್ಷೀರಮಾರುತ್ತ ಬರಲೂ ||ಕೇರಿ ಕೇರಿಗಳಲ್ಲಿ ಚರಿಸುತ್ತಲಿರೆ ಕಂಡು |ವಾರಿಜಾಕ್ಷನು ನಡೆತಂದು ತಾ ನಗುತ್ತ 2ನೀಲಕುಂತಳೆ ಗುಣಶೀಲೆ ಚಂದಿರಮುಖಿ |ಹಾಲ ಸುಂಕವ ಕೊಟ್ಟು ಪೋ | ಗವ್ವ ಚದುರೆ ||ಕೇಳಿಮಾನಿನಿಕ್ರೋಧ ತಾಳಿ ಕೃಷ್ಣನ ಕೂಡೆ |ಹಾಲ ಸುಂಕದ ಕಟ್ಟೆ ಯಾವುದಯ್ಯ ನಿನಗೆ 3ಎಂದು ನಿಂದಿಸಿ ಹಿಂದೆ ತಿರುಗಿ ಪೋಗಲು | ಕಂಡು |ನಂದಕಂದನು ತಾ | ಸೆರಗ ಪಿಡಿದು ತಾ ನಿಲಿಸೆ ||ಚಂದಿರಮುಖಿ ತಾನು ಸೆಣಸಿ ಕೃಷ್ಣನೊಳ್ ಸೋತುಕಂದಿ ಕುಂದುತ ಕೈಯ ಮುಗಿದು ಪೇಳಿದಳು 4ತಂದೆ ಸೆರಗ ಬಿಡು ಕಂದ ಸೆರಗ ಬಿಡು |ಇಂದೆನ್ನ ಗುರುವರ್ಯ | ಸೆರಗ ಬಿಡಯ್ಯ ||ತಂದೆಯು ನಾನಲ್ಲ | ಕಂದನಾನಲ್ಲವೊ | ನಿನ್ನ |ತಂದೆಗಳಿಯನೆಂದು ಭಾವಿಸೆ ತರುಣಿ 5ಮಾವ ಸೆರಗ ಬಿಡು |ಭಾವಸೆರಗ ಬಿಡು |ಸೇವಕಿ ನಿನಗೆ ನಾ ಸೆರಗ ಬಿಡಯ್ಯ ||ಮಾವನಲ್ಲವೊ | ಕೇಳೆ ಭಾವನಲ್ಲವೊ | ನಿನ್ನ ||ಮಾವನ ಮಗನು ನಾ ಕಾಣೆಂದ ಕೃಷ್ಣಾ 6ವಿಧ ವಿಧದಲಿ ಮಾತನಾಡುತಾ ಕೃಷ್ಣ |ಮದನತಾಪವ ಹೆಚ್ಚಿಸಿದನು ಮಾನಿನಿಗೆ |ಪದುಮಾಕ್ಷಿ ಭ್ರಮೆಗೊಂಡುಮದನತಾಪದಿ ನೊಂದು |ಮದನತಾತನನಪ್ಪಿ | ಮುದ್ದಿಸೆ ಕಂಡು 7ತಾಳು ತಾಳೆಲೆ ಸಖಿ ತಾಯಿ ತಂಗಿಗೆ ಸಮ |ಕೇಳು ಜಗದಿ ಪರದಾರಾಂಶ ಜನಕೆ ||ಲೋಲಲೋಚನ ಎನ್ನ ಗೋಳು ಗುಡಿಸದೀಗ |ಆಳು ನಿನ್ನಯ ಜನನಿಗೆ ಸೊಸೆ ಎಂದು ದಯದಿ 8ಇಂತೆಂದು ಕೃಷ್ಣನ ಎದೆಗೆ ಕುಚವನಿತ್ತು |ಸಂತೋಷದಿಂದಲಪ್ಪೀ ಸ್ಮರಿಸುತ್ತಲಿರಲುಕಂತುಜನಕೆ ಗೋವಿಂದಗೆ ದಾಸರೋಳೆಂತು |ಕೃಪೆಯೋ | ನಾರಿಗೊಲಿದಿಷ್ಟ ಸಲಿಸೆ ಗೋಕುಲ 9
--------------
ಗೋವಿಂದದಾಸ
ಗೋಪಾಲ ಶ್ರೀಕೃಷ್ಣ ಮೂರುತಿ ನೀನೇಕಾಪಾಡೆನ್ನನುಜಿಷ್ಣುಸಾರಥಿ ಪತಾಪತ್ರಯದೊಳ್ ನೊಂದೆ ತಪಗೈಯ್ಯಲರಿಯೆನು ನೀಕೃಪೆಯೊಳನುದಿನರೂಪತೋರಿಸು ದೇವಾ ಅ.ಪದೇವಕಿಯುದರದಿ ಜನಿಸಿಗೋಪಿದೇವಿಗೆ ತನಯನೆಂದೆನಿಸಿಜೀವ ಘಾತಕೆ ಬಂದ ಪೂತನಿಯಸು ಹೀರಿಗೋವುಗಳನು ಮೇಸಿದೆ 1ದೈತ್ಯರ ಕೊಂದು ಗೋವರ್ಧನವೆತ್ತಿದೇಕಾಮದಿ ಬಂದ ಬಾಲಕಿಯರನು ಕೂಡಿದೇಹಾವಿನ ಹೆಡೆಯ ಮೇಲೆ ನಲಿದು ಬಿಲ್ ಹಬ್ಬದಿಮಾವ ಕಂಸನ ಮುರಿದು ಕರುಣದಿತಾಯಿ ತಂದೆಯ ಸೆರೆಯ ಬಿಡಿಸಿದೆ 2ಶರಧಿಮಧ್ಯದಿ ಮನೆಮಾಡಿದೇಅಲ್ಲಿಭರದಿಂದಷ್ಟಮ ಸ್ತ್ರೀಯರಲಿ ಕೂಡಿದೇನರಮುರಶಾದ್ಯರ ಮುರಿದು ಷೋಡಶ ಸಹಸ್ರತರುಣಿಯರೊಡಗೂಡಿದೇ ಪಾರಿಜಾತತರುವ ನೀನೊಲಿದು ತಂದೆ ಪಾಂಡವರೊಳುಭರಿತ ಕೃಪೆಯ ತೋರಿದೆಧುರದಿಮಾಗಧಚೈದ್ಯ ಧರಣಿಪಾಲರ ಗೆಲ್ದುತರುಣಿ ದ್ರೌಪದಿಗ್ವರವ ಪಾಲಿಸಿನರಗೆ ಸಾರಥಿಯಾದೆ ಶ್ರೀಹರೀ 3ಸಂಧಾನವೆಸಗಿ ಪಾಂಡವರಕರ-ದಿಂದ ಕೊಲ್ಲಿಸಿದೆ ಕೌರವರಚಂದ ಧರ್ಮರಾಯಗೆ ಪಟ್ಟ ಕಟ್ಟಿಸೀನಿಂದಶ್ವಮೇಧಗೈಸಿ ನೀ ಸುರಗಣವೃಂದ ಸಂತಸ ಬಡಿಸಿ ಯಾದವಕುಲ ಮುಗಿಲದಿಂದಲಿಸುಂದರಾಂಗವ ಬಿಟ್ಟು ಕ್ಷೀರಸಿಂಧುವಿಗೈದೆಚಂದದಲಿ ಗೋವಿಂದದಾಸನೆಬಂದು ಮಂಗಲ ಮುಖವ ತೋರಿಸೋ 4
--------------
ಗೋವಿಂದದಾಸ
ಗೋವಿಂದ ಗೋವಿಂದ ಗೋವಿಂದ ನನ್ನತಾಯಿ ತಂದೆ ಗೋವಿಂದ ಪ.ತಿರುಗಿ ಭವದಲಿ ಗೋವಿಂದ ವೃಥಾಮರುಗಿ ಬಳಲಿದೆನೊ ಗೋವಿಂದಕರಗಿ ತಾಪದಿ ಗೋವಿಂದ ಸಿಡಿಲೆರಗಿಸಿಕೊಂಡೆನೊ ಗೋವಿಂದ 1ಎಚ್ಚರ ಹಾರಿತು ಗೋವಿಂದ ನಾಮೆಚ್ಚಿದೆ ವಿಷಯಕೆ ಗೋವಿಂದಹುಚ್ಚು ಮಾಡಿತು ಮನ ಗೋವಿಂದ ನಿನ್ನುಚ್ಚರಣಡಗಿತು ಗೋವಿಂದ 2ಆಸೆಯ ಬಿಡಿಸೈ ಗೋವಿಂದ ನಿನ್ನದಾಸರೊಳಿರಿಸೈ ಗೋವಿಂದಪ್ರಸನ್ನವೆಂಕಟ ಗೋವಿಂದಭವಘಾಸಿಯ ತಪ್ಪಿಸು ಗೋವಿಂದ 3
--------------
ಪ್ರಸನ್ನವೆಂಕಟದಾಸರು
ಗೋವಿಂದ ನಮೋ ಗೋವಿಂದ ನಮೋ ಗೋವಿಂದ - ನಾರಾಯಣ |ಗೋವರ್ಧನ ಗಿರಿಯೆತ್ತಿದ ಗೋವಿಂದ - ನಮ್ಮ ರಕ್ಷಿಸೊ ಪ.ಅರ್ಥವಾರಿಗೆ ಪುತ್ರರಾರಿಗೆ ಮಿತ್ರಬಾಂಧವರಾರಿಗೆ |ಕರ್ತು ಯಮನವರೆಳೆದು ಒಯ್ಯಲು ಅರ್ಥ- ಪುತ್ರರು ಕಾಯ್ವರೆ 1ಮಂಚ ಬಾರದು ಮಡದಿ ಬಾರಳು ಕಂಚುಗನ್ನಡಿ ಬಾರದು |ಸಂಚಿತಾರ್ಥವ ದ್ರವ್ಯಬಾರದು ಮುಂಚೆ ಮಾಡಿರಿ ಧರ್ಮವ 2ಒಡವೆಯಾಸೆಗೆ ಒಡಲ ಕಿಚ್ಚಿಗೆ ಮಡದಿ ಬೆನ್ನಲ್ಲಿ ಬಾಹಳು |ಬಿಡದೆ ಯಮನವರೆಳದು ಒಯ್ಯಲು ಎಡವಿಬಿದ್ದಿತು ನಾಲಗೆ 3ಪ್ರಾಣವಲ್ಲಭೆ ತನ್ನ ಪುರುಷನ ಕಾಣದೆಯೆ ನಿಲಲಾರಳು |ಪ್ರಾಣ ಹೋಗಲು ಮುಟ್ಟಲಂಜುವಳುಜಾಣೆ ಕರೆದರೆ ಬಾರಳು 4ತಂದು ಬಂದರೆ ತನ್ನ ಪುರುಷಗೆ ಬನ್ನಿ ಬಳಲಿದಿರೆಂಬಳು |ಒಂದು ದಿನದಲಿ ತಾರದಿದ್ದರೆ ಹಂದಿನಾಯಂತೆ ಕೆಲೆವಳು 5ಉಂಟುಕಾಲಕೆ ನಂಟರಿಷ್ಟರು ಬಂಟರಾಗಿಯೆ ಕಾಯ್ವರು |ಕಂಟಕರು ಯಮನವರು ಎಳೆವಾಗ ನಂಟರಿಷ್ಟರು ಬಾರರು 6ದಿಟ್ಟತನದಲಿ ಪಟ್ಟವಾಳಿದ ಮೆಟ್ಟಿ ದಿತಿಜರಸೀಳಿದ |ಮುಟ್ಟಿ ಭಜಿಸಿರೊ ಶ್ರೀ ಪುರಂದರವಿಠಲೇಶನ ಚರಣವ 7
--------------
ಪುರಂದರದಾಸರು
ಘನಾನಂದ ನಿಬಿಡವು ತಾನೇ ತಾ |ಮನಬುದ್ಧಿಗಳು ಏನಿಲ್ಲಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಮಹಾಮಾಯಾಮಾಯಾಅವ್ಯಾಕೃತಿ |ಆಹಿರಣ್ಯಗರ್ಭವಿರಾಟಲ್ಲ1ಸ್ಥೂಲ ಸೂಕ್ಷ್ಮ ಕಾರಣ | ಮಹಾಕಾರಣಜಾಗ್ರತ್, ಸ್ವಪ್ನ, ಸುಷುಪ್ತಿಉನ್ಮನಿಬೆಳಕೆಲ್ಲ ||ಇದ್ದದ್ದು ಶಂಕರನ ಸುಖವಲ್ಲವೆ |ವಿದ್ಯಾ ಅವಿದ್ಯೆಯ ಕಲಕಿಲ್ಲ ||
--------------
ಜಕ್ಕಪ್ಪಯ್ಯನವರು
ಚಂಡಳಹುದೋ ನೀನುಕದನಪ್ರಚಂಡಳಹುದೋ ನೀನುದಿಂಡೆಯರನ್ನು ಖಂಡಿಸಿ ತುಂಡಿಪಚಂಡವಿಕ್ರಮಮಾರ್ತಾಂಡಮಂಡಿತ ದೇವಿಪಭುಗು ಭುಗು ಭುಗಿಲೆಂದು ಮಧು ಕೈಟಭೆಂಬುವರುನೆಗೆ ನೆಗೆ ನೆಗೆಯುತ ರಣಕೆ ಬರಲು ಪೋಗಿಜಿಗಿ ಜಿಗಿ ಜಿಗಿದವರ ನೀನು ಯುದ್ಧವ ಮಾಡಿನೆಗೆದುರೆ ಖಡ್ಗವನು ಝಡಿದು ಧಗ ಧಗಧಗಿಸುವ ಚಕ್ರವನು ಇಡಲು ಶಿರವುಜಿಗಿಯೆ ಚರ್ಮವ ಸೀಳಿ ಮಾಡಿದೆ ಭೂಮಿಯ ನೀನು1ಛಟ ಛಟಾಕೃತಿಯಿಂದ ಮಹಿಷಾಸುರನ ಬಲನಟ ನಟ ನಟಿಸುತ ಪಟು ಭಟರಿದಿರಾಂತುಘಟಿಸಿ ರಣಕೆ ಬರಲು ಫಲ್ಗಳ ಕಟಕಟನೆ ಕಡಿದು ನಿಲ್ಲಲು ಅಸುರ ಬಲಸೆಟೆದು ಹಿಂದಾಗುತಲಿರಲು ಸುರಕಟಕನಿಮ್ಮನ್ನು ಹೊಗಳಿ ಕೊಂಡಾಡಲು2ಘುಡು ಘುಡು ಘುಡಿಸುತ್ತ ಮಹಿಷಾಸುರನು ಬರೆದಢ ದಢನೆ ಪೋಗಿ ಹೊಡೆದು ನಿನ್ನಯಪಾದದಡಿಯೊಳವನ ಕೆಡಹಿ ಚದುರ ಬೀಳೆ-ಕಡಿದು ಕಂಡವ ಕೊಡಹಿ ನಿಲ್ಲಲು ಸುರರೊಡೆಯ ನೆಲ್ಲರ ನೆರಹಿನಿಲ್ಲಲು ನೀನುಬಿಡದೆ ಅಭಯವಿತ್ತು ಹರುಷದಿ ವಾರಾಹಿ3ಶುಂಭನಿಶುಂಭರೆಂಬ ರಾಕ್ಷಸರುಪಟಳಅಂಬುಜಾಂಡಕೆ ರಂಭಾಟವದು ಹೆಚ್ಚೆಜಂಭಾರಿದಿವಿಜರೆಲ್ಲ ನಿಲ್ಲದೆ ದೂರಬೆಂಬಿಡದ್ಹೇಳಲೆಲ್ಲ ಕೇಳಿಯೆ ಉ-ಗ್ರಾಂಬಕಳಾಗಿ ನಿಲ್ಲೆ ಅಸುರ ಕಾದಂಬ ನಿನ್ನನುಕಂಡು ಬೆದರಿ ವೋಡಿದರೆಲ್ಲ4ಆರು ನೀನೆಂದು ಶುಂಭನ ದೂತ ವಿಚಾರಿಸೆ ಕೇಳಿಯೆ ಎಮ್ಮರಸನಿಗೆನಾರಿ ನೀ ಸತಿಯಳಾಗು ಜಾಗತ್ಯಕ್ಕೆವೀರ ಶುಂಭನ ಸೊಬಗು ಬಣ್ಣಿಸುವೊಡೆಮೂರು ಲೋಕಕೆ ಹೊರಗು ಬಾ ಎನೆ ನೀನುಚೋರಗುತ್ತರ ವಿತ್ತೆ ಹೇಳ್ವೆನೇನದ ಬೆರಗು5ಕೇಳು ಶುಂಭನ ದೂತ ಖೇಳ ಮೇಳದಿ ನಾನುಕೀಳು ಸಪ್ತದಿಯಾಡ್ದೆ ಈರೇಳು ಲೋಕದಲಿತೋಳು ಸತ್ವವು ಬಲಿದು ಸಮರದಲಿಸೋಲಿಸೆನ್ನನು ಪಿಡಿದು ಒಯ್ಯಲು ಅವರಾಳು ಆಗಿಯೆ ನಡೆದು ಬಹೆನು ಪೋಗಿಖೂಳರ ಕರೆದು ತಾ ರಣಕೆಂದು ನುಡಿದು6ಅಂಬವಚನವಶುಂಭಕೇಳಿಸುಗ್ರೀವನೆಂಬ ನಿಶಾಚರ ಶುಂಭನಲ್ಲಿಗೆ ಪೋಗಿಶಾಂಭವಿಯಾಡಿದುದ ಶಬ್ದವ ಕೇಳ-ಲಂಬುದಿಯ ನೀಂಟುವುದ ವಡಬಾನಳ-ನೆಂಬವೋಲ್ ಕೋಪವ ತಾಳ್ದು ಬರಲು ಸರ್ವಸಂಭ್ರಮದಲಿ ನೋಡಿ ಎದ್ದು ನೀ ನಿಂದುದನು7ಸರಸರನೆ ಶುಂಭಾಸುರನ ಬಲ ಬರೆ ಕಂಡುಗರಗರನೆ ಹಲ್ಲ ಕೊರೆದು ಅವನ ದಂಡಸರಕುಗೊಳ್ಳದೆ ಛೇದಿಸಿ ಸುಭಟವೀರರಿರವನೆಲ್ಲಾ ಶೋಧಿಸಿಶುಂಭನಿಶುಂಭರಶೋಣಿತಕಾರಿಸಿ ಸುರರಿಗಿತ್ತೆಸ್ಥಿರವಪ್ಪ ಸೌಭಾಗ್ಯದವರ ನೀ ಪಾಲಿಸಿದೆ8ದುಷ್ಟ ಜನರೆಲ್ಲ ಸುಟ್ಟು ಭಸ್ಮಮಾಡಿಶಿಷ್ಟ ಜನರ ಪ್ರಾಣಗುಟ್ಟು ನೀನೆಂತೆಂಬರನಟ್ಟಿ ದಟ್ಟಿಸಿದೆ ಪರಾಂಬ ಭಕ್ತರ ಅ-ಭೀಷ್ಟ ಪಾಲಿಪ ಜಗದಾಂಬ ದುರ್ಜನರಘ-ರಟ್ಟಳಹುದೇ ತ್ರಿಪುರಾಂಬ ರಕ್ಷಿಸು ಎನ್ನಶಿಷ್ಟ ಚಿದಾನಂದಅವಧೂತಬಗಳಾಂಬ9
--------------
ಚಿದಾನಂದ ಅವಧೂತರು
ಚತುರ್ದಶಿಯ ದಿನ(ಹನುಮಂತನನ್ನು ಕುರಿತು)ರಂಭೆ : ಇವನ್ಯಾರೆ ದೂರದಿ ಬರುವವ ಇವನ್ಯಾರೆ ಪ.ಇವನ್ಯಾರೆ ಮಹಾಶಿವನಂದದಿ ಮಾ-ಧವನ ಪೆಗಲೊಳಾಂತು ತವಕದಿ ಬರುವವ 1ದಾಡೆದಂತಮಸಗೀಡಿರುವದು ಮಹಾಕೋಡಗದಂತೆ ಸಗಾಢದಿ ಬರುವವ 2ಕಡಲೊಡೆಯನು ಮೃದುವಡಿಯಡರಿಸಿ ಬಿಡದಡಿಗಡಿಗಾಶ್ರೀತರೊಡಗೂಡಿ ಬರುವವ 3ಊರ್ವಶಿ : ನಾರಿ ಕೇಳೆಲೆಗೆ ವೈಯಾರಿ ನೀ ಮುದದಿನಾರಾಯಣನಿಗೀತ ಬಂಟನಾದಾದರಿದಿವೀರ ರಾಮವತಾರದಿ ಹಿಂದೆ ಹರಿಯಚಾರಕನಾಗಿ ಸೇವೆಯ ಗೈದ ಪರಿಯಕ್ರೂರ ದಶಾಸ್ಯನ ಗಾರುಗೆಡಿಸಿನೃಪವೀರನ ಪೆಗಲಿನೊಳೇರಿಸಿ ದೈತ್ಯರಭೂರಿವಧೆಗೆ ತಾ ಸಾರಥಿಯಾದವಕಾರುಣೀಕ ಮಹಾವೀರ್ಹನುಮಂತ 1ಆಮೇಲೆ ವೀರಾವೇಶದಿ ವಾರಿಧಿಯನುರಾಮನಪ್ಪಣೆಯಿಂದ ದಾಟಿದನಿವನುಭೂಮಿಜೆಗುಂಗುರ ಕೊಟ್ಟ ನಂತರದಿಕಾಮುಕರನು ಸದೆಬಡಿದನಾ ಕ್ಷಣದಿಹೇಮಖಚಿತ ಲಂಕಾಮಹಾನಗರವಹೋಮವ ಗೈದು ಸುತ್ರಾಮಾರಿಗಳ ನಿ-ರ್ನಾಮಿಸಿ ಸೀತೆಗೆ ತಾ ಮಣಿಯುತ ಚೂ-ಡಾಮಣಿ ತಂದ ಮಹಾಮಹಿಮನು ಇವ 2ವಾರಿಮುಖಿ ನೀ ಕೇಳಿದರಿಂದ ಬಂದವೀರ ಹನುಮಂತನನೇರಿ ಗೋವಿಂದಸ್ವಾರಿಗೆ ಪೊರಟ ಚಾತುರ್ದಶಿ ದಿವಸಆರತಿಯನು ಕೈಕೊಳ್ಳುವ ಶ್ರೀನಿವಾಸಭೇರಿಮೃದಂಗ ಮಹಾರವದಿಂದ ಸ-ರೋರುಹನಾಭ ಮುರಾರಿ ಶರಣರುದ್ಧಾರಣಗೈಯುವ ಕಾರಣದಿಂದ ಪಾ-ದಾರವಿಂದಗಳ ತೋರಿಸಿ ಕೊಡುವ 3ಬಳಿಕ ಪಲ್ಲಂಕಿ ಏರಿದ ಕಾಣೆ ನಾರಿನಲವಿಂದ ವೇದಘೋಷವ ಕೇಳ್ವಶೌರಿಜಲಜಭವಾದಿ ನಿರ್ಜರರಿಗಸಾಧ್ಯಸುಲಭನಾದನು ಭಕ್ತಜನಕಿದುಚೋದ್ಯಸುಲಲಿತ ಮಂಟಪದೊಳೊ ನೆಲಸುತ ನಿ-ಶ್ಚಲಿತಾನಂದ ಮಂಗಲದ ಮಹೋತ್ಸವಗಳನೆಲ್ಲವ ಕೈಕೊಳುತಲಿ ಭಕ್ತರಸಲಹುವ ನಿರುತದಿ ಮಲಯಜಗಂಧಿನಿ 4ಶ್ರೀಕಾಂತ ಬಳಿಕ ಭಕ್ತರ ಒಡಗೂಡಿಏಕಾಂತ ಸೇವೆಯಗೊಂಡ ಕೃಪೆಮಾಡಿಸಾಕಾರವಾಗಿ ತೋರುವ ಕಾಣೆ ನಮಗೆಬೇಕಾದ ಇಷ್ಟವ ಕೊಡುವ ಭಕ್ತರಿಗೆಶ್ರೀಕರ ನಾರಾಯಣ ಶ್ರೀನಿವಾಸ ಕೃ-ಪಾಕರ ವಿಬುಧಾನೇಕಾರ್ಚಿತ ರ-ತ್ನಾಕರಶಯನ ಸುಖಾಕರ ಕೋಟಿ ವಿ-ಚಾರಕ ಭಾಸತ್ರಿಲೋಕಾಧಿಪನಿವ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಚಂದ್ರಗಾವಿಯನುಟ್ಟು ದುಂಡು ಮುತ್ತನೆಕಟ್ಟಿ|ಪೆಂಡೆಯರುಳಿಯನಿಟ್ಟು ||ಕೆಂದಾವಿನ ಹಾಲ ಹರವಿಯ ಹೊತ್ತುಕೊಂಡು |ಬಂದಾಳು ಬೀದಿಗಾಕೆ ಪಹಾಲು ಮಾರುವ ಧ್ವನಿ ಲಾಲಿಸಿ ರಂಗಯ್ಯ |ಮೇಲಿನ ಕೇರಿಯಲಿ ||ನಾಳೆ ನಮ್ಮನೆಯಲಿ ವೀಳೆ-ಪ್ರಸ್ತಗಳುಂಟು |ಹಾಲು ನಿಲ್ಲಿಸೆಂದನು 1ಕೊಂಡವನು ನೀನಲ್ಲ ಡಂಭಕರ ಮಾತೇಕೊ |ಗಂಡನುಳ್ಳವಳ ಕೂಡ ||ಮಂಡಲವಾಳುವ ಅರಸಿನ ಮುಂದೆ ಹೇಳಿ |ದಂಡವ ತೆರಸುವೆನೊ 2ಅಡವಿಹಂಬುಗಳಿಗೆ ಹೆಡಿಗೆ ಸುಂಕವು ಇಲ್ಲ |ತಡೆದವ ನೀನಾರೊ? ||ನಡೆ ಊರ ಮುಂದಕೆ ತಳವಾರರೈದಾರೆ |ಗಡನೆ ಪೇಳುವೆನೆಂದಳು 3ಬಲ್ಲೆ ಬಲ್ಲೆನೆ ನಿನ್ನ ಬಗೆಯ ಮಾತುಗಳೆಲ್ಲ |ಎಲ್ಲಿಹ ತಳವಾರನೆ ||ಅಲ್ಲದಿದ್ದರೆ ಬಂದು ವೀಳ್ಯವ ತಕ್ಕೊಂಡು |ಅಲ್ಲಲ್ಲಿ ದೊರದಿರೆ 4ಕೋಲು ಕೈಯಲಿ ಪಣೆಯಲಿ ಸಿರಿನಾಮವು |ಆಲದ ಮರದಡಿಯೆ ||ಕಾಲಮೊದಲು ಹಾಲ ಮಾರಿದ ಸುಂಕರೆ |ನಿಲ್ಲೆಂದು ಸೆರಗ ಪಿಡಿದ 5ಅಪ್ಪ ಸೆರಗ ಬಿಡೊ, ಅಣ್ಣ ಸೆರಗ ಬಿಡೊ |ಅಪ್ಪಯ್ಯ ಸೆರಗ ಬಿಡೊ ||ಅಪ್ಪನು ನಾನಲ್ಲ, ಅಣ್ನನು ಅಲ್ಲ ನಿ-|ಮ್ಮಪ್ಪನ ಅಳಿಯ ಕಾಣೆ 6ಮಾವ ಸೆರಗ ಬಿಡೊ,ಭಾವಸೆರಗ ಬಿಡೊ |ಭಾವಯ್ಯ ಸೆರಗ ಬಿಡೊ ||ಮಾವನು ನಾನಲ್ಲ, ಭಾವನು ನಾನಲ್ಲ |ಮಾವನ ಮಗನು ಕಾಣೆ 7ಅಣ್ಣ ಸೆರಗ ಬಿಡೊ, ತಮ್ಮ ಸೆರಗ ಬಿಡೊ |ಅಣ್ಣಯ್ಯ ಸೆರಗ ಬಿಡೊ ||ಅಣ್ಣಯ್ಯ ನಾನಲ್ಲ, ತಮ್ಮನು ಅಲ್ಲ ನಿ-|ಮ್ಮಣ್ಣನಭಾವಕಾಣೆ8ಕಂದ ಸೆರಗ ಬಿಡೊ, ತಂದೆ ಸೆರಗ ಬಿಡೊ |ಕಂದಯ್ಯ ಸೆರಗ ಬಿಡೊ ||ಕಂದನು ನಾನಲ್ಲ, ತಂದೆಯು ನಾನಲ್ಲ |ಕಂದನ ತಂದೆ ಕಾಣೆ 9ನೆತ್ತಿಮೇಲಿನ ಕೊಡ ಎತ್ತಿ ಈಡಾಡುತ |ಎತ್ತಿಕೊಂಡಳು ಕೃಷ್ಣನ ||ಭಕ್ತರ ಸಲಹುವ ಪುರಂದರವಿಠಲ |ವತ್ಸವೆಂಕಟರಾಯನ10
--------------
ಪುರಂದರದಾಸರು
ಚಿತ್ತಶುದ್ಧಿಯಿಲ್ಲದವನವ ಜ್ಞಾನಿಯೆ - ಪುಣ್ಯಪಾತಕಗಳನರಿಯದವ ಮನುಜನೆ ಕೃಷ್ಣ ಪ.ಮಾರಿ ಮನೆಯೊಳಗಿರಲು ಸಹಕಾರಿಯೆನಬಹುದೆ ?ಊರೊಳಗಿನಾ ಕಳ್ಳ ಅವ ಸುಜನನೆ ?ಜಾರತನವೆಸಗುವಳು ಕುಲವನಿತೆಯಹುದೆ - ಸಂಸಾರದೆಚ್ಚವಿಲ್ಲದವ ಸುಗಣನೆ ? 1ಶ್ವಾನ ಬೂದಿಯಲಿರಲು ಶಿವಭಕ್ತನನೆಬಹುದೆ ?ಕಾನನದೊಳಿಹ ಕಾಗೆ ವನವಾಸಿಯೇ ?ಗಾಣ ತಿರುಗುವ ಎತ್ತಿಗದು ಪ್ರದಕ್ಷಣೆಯೆ ಬಕಧ್ಯಾನವನು ಮಾಡಲದು ಮೌನವೇ ಕೃಷ್ಣಾ ? 2ತೋಳ ಅಡವಿಯಲಿರಲು ಅದು ದಿಗಂಬರನಹುದೆ ?ಗಾಳಿಯಂಬುವ ಉರುಗ ಉಪವಾಸಿಯೇ ?ಆಲವದು ಜಡೆಬಿಡಲುಪರಮ ಋಷಿಯಹುದೆ - ಬಲುಕಾಲಉಳಿದ ಹದ್ದು ತಾ ಹಿರಿಯದೆ ?3ಬಂಧನದೊಳಿಹ ವ್ಯಾಘ್ರವನು ತಪಸಿಯೆನಬಹುದೆ ?ಸಿಂಧುಜವು ಎನೆ ವಿಷಯ ಶೀತಕರನೆ ?ಅಂಧಕನು ಕಣ್ಮಚ್ಚಲದು ಧ್ಯಾನವೇ, ಗಜವುಮಂದಗತಿಯಾದರದು ಸ್ಮರಣೆಯೆ ಕೃಷ್ಣಾ ? 4ಮರಣಕ ಗಂಟಲನು ಮಾಡಲದು ಮಂತ್ರವೆ ?ಗಂಡು ನೀರಲಿ ಮುಳುಗಲದು ಸ್ನಾನವೇ ?ಪುಂಡರೀಕಾಕ್ಷ ಶ್ರೀ ಪುರಂದರವಿಠಲನತೊಂಡನಾಗದ ನರನ ಬಾಳು ಬಾಳುವೆಯೆ ? 5
--------------
ಪುರಂದರದಾಸರು