ಒಟ್ಟು 9952 ಕಡೆಗಳಲ್ಲಿ , 132 ದಾಸರು , 5277 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಫಲಹಾರವ ಮಾಡೋ ಪದುಮಲೋಚನನೆ| ಒಲಿದು ಶ್ರೀ ಭೂದೇವಿ ಅರಸಿಯರೊಡನೆ ಪ ಕದಳೀ ಕಪಿಥ್ಥಶರ್ಕರ ಮೋದದಿಂದಲೀ| ಒದಗಿ ಬೆಂಡುಖರ್ಜೂರಿ ಘೃತಮೋಪ್ತದಿಂದಲಿ1 ಕಳೆದ ಸಿಗುರಿಯಾ ಕಬ್ಬಿನ ಪೇರು ಬದರಿಯಾ| ಬಲಿದ ಪರಿಮಳ ರುಚಿಗಳ ಒಪ್ಪನಿಂದಾ 2 ವಸುಧೆಯೊಳುಳ್ಳ ಸಕಲ ಫಲಸಾರವಾ| ಬಿಸಿಯಾದ ಪಲ್ಗೆನೆಯ ಮಧುಸಹಿತಾ 3 ಗುರುಮಹೀಪತಿಸ್ವಾಮಿ ಶರಣ ರಕ್ಷಕನೇಮಿ| ಸುರರಿಗಮೃತವೆರೆದಾನಂದ ಕರದಲಿ4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಫಲಾಹಾರವ ಮಾಡೊ ಪರಮಪುರುಷನೆ ಲಲನೆ ಲಕುಮಿಯ ಕರಕಂಜದಿಂದ ಪ. ಕದಳಿ ಕಾಮಾರೆ ಖರ್ಜುರ ಕಿತ್ತಳೆ ಕಂಚಿ ಬದರಿ ಬೆಳಲು ಬಿಕ್ಕೆ ಹಲಸು ದ್ರಾಕ್ಷಿಗಳು ಮಧುರಮಾವು ಮಾದಳ ತೆಂಗಿನಕಾಯಿ ತುದಿಮೊದಲಾದ ಪರಿಪರಿ ಫಲಗಳು 1 ಉತ್ತತ್ತೆ ಜೇನು ಅಂಜೂರ ಸೇಬು ದಾಳಿಂಬೆ ಮತ್ತಾದ ತುಮರೆ ಪರಗಿ ಕಾರೆ ಕವಳಿ ಕತ್ತರಿಸಿದ ಕಬ್ಬು ಜಂಬುನೇರಳೆಹಣ್ಣು ಒತ್ತಿದ ಬೇಳೆ ನೆನೆಗಡಲೆ ಕರ್ಬುಜೀಹಣ್ಣು 2 ಹಾಲು ಸಕ್ಕರೆ ಬೆಣ್ಣೆ ತುಪ್ಪ ಸೀಕರಣೆಯು ಸಾಲುರಸಾಯನ ಸವಿಯೆಳನೀರು ಮೂಲೋಕದೊಡೆಯ ಹಯವದನ ವೆಂಕಟರೇಯ ಪಾಲಿಸೊ ಲಕುಮಿಯ ಕರಕಂಜದಿಂದ 3
--------------
ವಾದಿರಾಜ
ಬಗಿಯಲಿ ಬ್ಯಾಡಣ್ಣಾ | ಮದದಲಿ ಪ ಒಳ್ಳೆವರಾ ನುಡಿಯಳ್ಹಲಿ ಮಾಡಿ | ಖುಳ್ಳತನದಲೆ ದಿನ ಹೋಗಾಡಿ 1 ಮಾನವ ಸರಿ ಬಗಿಬ್ಯಾಡ | ಹವಣಿಸಿ ಚರಣಕ ನಮಿಸೆಲೋ ಮೂಢಾ 2 ಶಿಷ್ಟಗೆರಗನು ದಾವನು ಬಾಗಿ | ಹುಟ್ಟುವ ಕಾಡ ಬೊಬ್ಬುಲಿ ಮರವಾಗಿ 3 ಸಣ್ಣ ದೊಡ್ಡವರೆನಬಾರದು ಕೇಳು | ಮನ್ನಣೆ ಗೆಲ್ಲಗವರೇ ಮೇಲು 4 ಗುರುವರ ಮಹಿಪತಿ ಸಾರಿದ ನಿಜವಚನಾ | ಧರೆಯೊಳಗಿದೆ ಪರಗತಿ ಸೋಪಾನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಂಟ ಪ ಕನಕಕಶಿಪು ತನಯ ತನ್ನ ಜನಕನ ಹಿಂಸೆ ತಡೆಯದೆಲೆ ದನುಜಹರನೆ ರಕ್ಷಿಸೆನಲು ಕ್ಷಣದಿ ಬಂದು ಸಲಹಿದೈಯ್ಯಾ 1 ನಾರಿ ದ್ರುಪದನಂದನೆಯಳ ಸೀರೆ ಖಳನು ಸೆಳೆಯುತಿರಲು ವಾರಿಜಾಕ್ಷ ನಿನ್ನ ಸ್ಮರಿಸೆ ಯಾರು ಅರಿಯದಂತೆ ಬಂದೆ 2 ದಾಸಜನರ ಸಕಲ ಪಾಪ- ರಾಸಿಗಳನು ದಹಿಸೆ ಪೊರೆವೆ ಶ್ರೀಶ ನಿನ್ನ ಭಜಿಸಿದರೆ ರಂ- ಗೇಶವಿಠಲರೇಯ ನೀನು 3
--------------
ರಂಗೇಶವಿಠಲದಾಸರು
ಬಂಟನಾಗಿ ಬಾಗಿಲ ಕಾಯ್ವೆ ಹರಿಯ ಪ ವೈಕುಂಠದ ಸೊಂಪಿನ ದಾಸರ ಮನೆಯ ಅ ಹೊರಸುತ್ತು ಪ್ರಾಕಾರ ನಾ ಸುತ್ತಿ ಬರುವೆಬರುವ ಹೋಗುವರ ವಿಚಾರಿಸುತಿರುವೆಕರದಿ ಕಂಬಿಯ ಪೊತ್ತು ಅಲ್ಲಿ ನಿಂದಿರುವೆ ಶ್ರೀಹರಿಯ ಸಮ್ಮುಖದ ಓಲಗದೊಳಿರುವೆ 1 ತೊತ್ತು ತೊಂಡನಾಗಿ ಬಾಗಿಲ ಕಾಯ್ವೆಚಿತ್ರದ ಚಾವಡಿ ರಜವನು ಬಳಿವೆಮುತ್ತಿನ ರಂಗವಲ್ಲಿಯನಿಟ್ಟು ಬರೆವೆರತ್ನಗಂಬಳಿ ಹೊತ್ತು ಹಾಸುವೆನು 2 ವೇಳೆವೇಳೆಗೆ ನಾನೂಳಿಗವ ಮಾಡುವೆಆಲವಟ್ಟಿಗೆ ಚಾಮರವ ಬೀಸುವೆತಾಳದಂಡಿಗೆ ಭೃಂಗಿ ಮೇಳಗಳ ಕೂಡಿ ಶ್ರೀಲೋಲನ ಕೊಂಡಾಡಿ ಪಾಡುವೆನು 3 ಎಂಜಲ ಹರಿವಾಣಂಗಳ ಬೆಳಗುವೆಕಂಜನಾಭನ ಪಾದಕಮಲವ ತೊಳೆವೆರಂಜಿಪ ಕುಸುಮದ ಮಾಲೆ ತಂದಿಡುವೆಸಂಜೆಗೆ ಪಂಜಿನ ದಾಸನಾಗಿರುವೆ 4 ಮೀಸಲೂಳಿಗವ ನಾ ಮಾಡಿಕೊಂಡಿರುವೆಶೇಷ ಪ್ರಸಾದವ ಉಂಡುಕೊಂಡಿರುವೆಶೇಷಗಿರಿ ಕಾಗಿನೆಲೆಯಾದಿಕೇಶವನದಾಸರ ದಾಸರ ದಾಸರ ಮನೆಯ 5
--------------
ಕನಕದಾಸ
ಬಂಟರಾಗಿ ಬಾಗಿಲ ಕಾಯೋರು ಹರಿಯವೈಕುಂಠದಿ ರಂಗನಾಯಕನರಮನೆಯ ಪ. ಸುತ್ತ ವಿರಜಾನದಿ ಮತ್ತು ನಂದನ ವನಉತ್ತಮೋತ್ತಮ ವೈಕುಂಠಉತ್ತಮೋತ್ತಮ ವೈಕುಂಠದೊಳಗಿನ್ನುಮಿಂಚಿನಂತೆ ಹೊಳೆವೊ ಮುಕ್ತರು1 ಶ್ರೀದೇವಿ ತಾನು ಮುರಹರನ ಪುರದಾಗವಿರಜಾ ತಾನೆಂದು ಕರೆಸುತವಿರಜಾ ತಾನೆಂದು ಕರೆಸುತ ನಾನಾ ಪರಿಗಿಳಿ ಕೋಗಿಲಾಗಿ ಮೆರೆವೋಳು2 ಉತ್ತರ ದಿಕ್ಕಿನಲೆಥಳ ಥಳಿಸುವ ದ್ವಾರ ಮುತ್ತು ಮಾಣಿಕ್ಯ ಅಳವಟ್ಟಮುತ್ತು ಮಾಣಿಕ್ಯ ಅಳವಟ್ಟ ಹರಿಪುರರತ್ನದ ಝಲ್ಲೆ ಬಿಗಿದಾವೆÉ 3 ರಾಜಿ ಮಾಣಿಕ ಗೋಡೆ ಗಾಜಿನ ನೆಲಗಟ್ಟುಈ ಜೋಡು ದ್ರವ್ಯ ಎಲ್ಲಿಲ್ಲ ಈ ಜೋಡು ದ್ರವ್ಯ ಎಲ್ಲಿಲ್ಲ ಇದುನಮ್ಮ ಶ್ರೀದೇವಿಯರಸನ ಅರಮನೆ 4 ಕೇಶರ ಶ್ರೀಗಂಧ ಕಲವೆಲ್ಲ ಪರಿಮಳಬಿಸÀಜನೇತ್ರನರಮನೆಯಬಿಸಜನೇತ್ರೆಯರ ಮನೆಯಿಂದ ಕುಸುಮದ ವೃಷ್ಟಿಗರೆದಾವು5 ಉತ್ತರ ಪಾಲ್ಗಡಲೊಳು ಮುತ್ತು ಮಾಣಿಕರತ್ನಪಚ್ಚ ಕರ್ಪೂರ ಸುಳಿಗಾಳಿಪಚ್ಚ ಕರ್ಪೂರ ಸುಳಿಗಾಳಿ ಇದುನಮ್ಮ ಅಚ್ಯುತಾನಂತನರಮನೆಯ6 ಕೃಷ್ಣ ರಾಮೇಶನ ವಿಶಿಷ್ಠದ ವೈಕುಂಠಸೃಷ್ಟಿ ಮಾಡಿ ರಚಿಸಿದ ಸೃಷ್ಟಿ ಮಾಡಿ ರಚಿಸಿದ ನೋಡಲು ದೃಷ್ಟಿ ಸಾಲದು ಜನರಿಗೆ7
--------------
ಗಲಗಲಿಅವ್ವನವರು
ಬಟ್ಟ ಮುತ್ತಿನ ಸರವ ಕೊರಳೊಳಿಟ್ಟು ನೋಡುತಪುಟ್ಟ ಪುಟ್ಟ ಪಾದದಿಂದ ದಟ್ಟಡಿಯನಿಕ್ಕುತಅಟ್ಟಟ್ಟು ಕರೆದರೆ ಬಾರದೆ ಅಂಬೆಗಾಲನಿಕ್ಕಿ ಕೊಡವುತತಿಗೂಳುಗುಳೆಂದು ಮುಟ್ಟಿ ನಲಿದಾಡುತ ತಟ್ಟೆಗೆ ಮುಚ್ಚಿಗೆಯೆಂದುತಟ್ಟನೆ ಕೈಯನಿಡುತ ಪುಟ್ಟಮಕ್ಕಳೊಡನೆ ಚಂಡಾಡಿನಲಿದಾಡುವ ದಿಟ್ಟರಂಗಯ್ಯ 1 ರನ್ನ ದುಂಗುರ ಪದಕ ತಾಳಿಯನ್ನು ಹಾಕುವೆಸಣ್ಣ ಮಕ್ಕಳ ಕೂಡೆಲ್ಲಾ ಚಿನ್ನಿಕೋಲನಾಡುತಕನ್ನೆವೆಣ್ಣುಗಳ ಕಂಡು ಕಣ್ಣ ಸನ್ನೆ ಮಾಡುತಕಣ್ಣಮುಚ್ಚಾಲೆ ಆಟವ ಆಡಿ ನಲಿದಾಡುತ ತಾಹೊನ್ನ ಹಿಡಿ ಹೊನ್ನಾಟವನಾಡುತ ಶ್ರೀರಂಗಧಾಮ ಪನ್ನಗಶಯನ 2 ಕಾಲಿನಂದುಗೆ ಘಲಿರೆನೆ ನಳಿತೋಳನಾಡುತಬಾಲೆಯರ ಕೂಡೆ ಬಹು ಲೀಲೆಯ ಮಾತಾಡುತಶಾಲೆಗಳ ಸೆಳದು ಮರದ ಮೇಲೆ ಕುಳಿತು ನೋಡುತಹಾಲು ಬೆಣ್ಣೆ ಕಳ್ಳನೆಂಬ ದೂರುಗಳ ಕೇಳುತಲೋಲಾಕ್ಷಿಯರೊಳನಿಂಥಾ ಜಾಲಿಗಳ ಮಾಡುವ ಬಾಲಗೋಪಾಲ3 ಕಂಡು ನಿನ್ನನು ಪ್ರೇಮದೊಳಪ್ಪಿಕೊಂಡು ನೋಡುವೆಹಿಂಡು ಬೊಗರಿಲಿತ್ತಲಿಗ್ಗೆ ಚಂಡ ಕೊಡುವೆ ಬಾರಯ್ಯಭಂಡಿಯನೊದದ ಪಾದಪದುಮವನ್ನೇ ತಾರಯ್ಯಗುಂಡುವಾನಿಟ್ಟ ನಳಿ ತೋಳನೊಮ್ಮೆ ತೋರಯ್ಯಪುಂಡಲೀಕಾಕ್ಷಿಯರು ನಿನ್ನ ಕಂಡರೆ ಸೇರರೂ ಕೃಷ್ಣ4 ಕರದ ಕಂಕಣ ಝಣರೆನಲು ಮುಂಗುರಳ ತಿದ್ದುತಕರದ ಕಂಬಾಲಿನೆಲ್ಲವ ಸುರಿದು ಸೂರೆ ಮಾಡುತತರುಣಿಯರು ನೋಡಲವರ ಪುರುಷರಂತೆ ತೋರುತಸರಸವಾಕಿನಿಂದಲವರ ಮರುಳು ಮಾಡಿ ಕರವುತಸರಿಯ ಮಕ್ಕಳೊಡನೆ ಜೊಲ್ಲು ಸುರಿಸುತ ಮಾತಾಡುವಂಥಾ ಸರಸಗೋಪಾಲ 5 ಮರುಗ ಮಲ್ಲಿಗೆ ಸಂಪಗೆಯ ಪೂಸರವ ಮುಡಿಸುವೆಕೊರಳ ಮುತ್ತಿನ ಸರವ ನಿನಗೆ ಕರದು ಕೊಡುವೆಬಾರಯ್ಯ ಅರಳೆಲೆ ಮಾಗಾಯನಿಟ್ಟ ಸಿರಿಮುಖವತೋರಯ್ಯ ಪರನಾರಿಯರೊಡನಿಂಪಾಸರ ಛಂದವೇನಯ್ಯಪುರದ ನಾರಿಯರ ಕೂಡೆ ಸರಸವನಾಡು ಉಡುಪಿಪುರದ ಶ್ರೀಕೃಷ್ಣ 6 ಅಂದುಗೆ
--------------
ಕೆಳದಿ ವೆಂಕಣ್ಣ ಕವಿ
ಬಟ್ಟೆಯ ನೆವದಿಂದ ಬಂದು ತಟ್ಟ ಕವನೆ ಕಂಡು ಕಣ್ಣ ತೆರೆದ ಕೃಷ್ಣವೇಣಿ ನಿಮ್ಮ ಕಂಡೆ ದುಷ್ಟ ಮಾನವರ ಬಾಧೆಗೆ ಅಂಜಿ ಇತ್ತ ಬಂದೆ ಕಷ್ಟ ದುರಿತಗಳ ಕಳೆಯೆ ತಾಯೆ ಪ. ಭೋರಿಡುವ ಮಳೆಗೆ ಹಲ್ಲುಗಿಟಗರಿದು ಶೀತತಲೆ- ಗೇರಿ ಕಂಪಿಸಿ ನಡುಗುತ್ತ ಜಾರಿ ಕೆಸರೊಳು ಬಿದ್ದು ಮತ್ತೇಳುತಲಿ ದಾರಿಯನು ಕೇಳಿಕೊಳ್ಳುತ ಕ್ರೂರವಾಗಿದ್ದ ಜಾಲಿಯ ಮುಳ್ಳನೆ ತುಳಿದು ಹರಿ ನಾರಾಯಣ ಎನ್ನುತ ಹಾರೈಸಿ ನಿಮ್ಮ ದರುಶನಕ್ಕೆ ನಾ ಬಂದೆ ಘೋರ ದುರಿತವನು ಕಳೆಯೆ ತಾಯೆ 1 ನಿತ್ಯ ಕಲ್ಯಾಣಿ ನಿರ್ಜರಸ್ತೋತ್ರೆ ಶುಭಗಾತ್ರೆ ಪ್ರತ್ಯಕ್ಷ ವಿಷ್ಣುಜಾತೆ ಮಾತೆ ವಿಸ್ತರಿಸಲಾರೆ ಶ್ರೀ ವಿಷ್ಣು ಸಂಪ್ರೀತೆ ಸತ್ಪಾತ್ರ ಸಂಪೂಜಿತೆ ಪ್ರೀತೆ ಸತ್ತು ಹುಟ್ಟುವ ಜನ್ಮ ಕೋಟಲೆಯ ಖಂಡ್ರಿಸೆ ಪತಿತ ಪಾವನ ಚರಿತೆ ವ್ಯರ್ಥವಾಯಿತು ಜನ್ಮ ಸಾರ್ಥಕವ ಮಾಡಮ್ಮ ಮುಕ್ತಿಸಾಧನದಾತೆ ಮಾತೆ 2 ಸುರಗಂಗೆ ಕೃಷ್ಣಮಲಾಪಹಾರಿ ಮೂವರು ಕೂಡಿ ಬೆರೆದಿದ್ದ ಸಂಗಮದಲ್ಲಿ ಅರಿಸಿಣ ಅಕ್ಷತೆ ಗಂಧ ಕುಂಕುಮ ತಾಂಬೂಲಗಳ ಹರುಷದಿಂದರ್ಪಿಸುತಲಿ ಥರಥರದಿ ನೆರೆದ ಮುತ್ತೈದೆಯರೆಲ್ಲರು ಮರದ ಬಾಗಿನವ ಕೊಡುತಲಿ ಹರುಷದಿಂದಿಪ್ಪುದನು ಕಂಡೆ ಹೆಳವನಕಟ್ಟೆ ಅರಸು ರಂಗನ ಕೃಪೆಯಲ್ಲಿ ತಾಯೆ 3
--------------
ಹೆಳವನಕಟ್ಟೆ ಗಿರಿಯಮ್ಮ
ಬಡನಡುವು ಬಾಲೆಯರ ಕೂಡಿ | ಪಾ | ಲ್ಗಡಲೋಡಿಯನೊಡನೊಡನೆ | ಬಿಡದೆ ಆಡಿದರೊ ವಸಂತ ಪ ಪಾಲ್ಗೆನೆಗಧಿಕ ಮೃದುವಸನಮಂ ಉಟ್ಟ್ಟು ನು | ಣ್ಗೂದಲು ತಿದ್ದಿ ಪಲಪು ಬೈತಲೆ ಸೊಗಸು | ತುಂಬಿ ಕುಂಕುಮ ಮಿಗೆ | ಬಲ್ಕಸ್ತುರಿಯ ತಿಲಕ | ಅರೆರೆ | ಕಾಳ್ಗತ್ತಲೆ ಮೀರಿ ತೋರುತಿರೆ ತಿರ್ತಿತಿರಗಿ | ವಾಲ್ಗಣ್ನು ನೋಟ ವೈಯಾರ ಸೋಲ್ದುರುಬು ವಿ | ಶಾಲ್ಗೊಂಚಲು ಮುತ್ತುಸುತ್ತು ಸೂಸುತಲಿರೆ ಪೇಳ್ಗಾಣೆ ಪೆಂಗಳು ಶೃಂಗರಿಸುವ ಮದವೊ 1 ಸಣ್ಮೊಗ್ಗೆ ಜಗದ ವಿಚಿತ್ರ ಕಂಚುಕವು ಮೋ | ಹನ್ಮಾಲೆ ಪದಕ ನ್ಯಾವಳ ಸರಿಗೆಸರ ಮುತ್ತು | ವಾಲೆ ಪೊಂಪುಷ್ಟ ಬುಗುಡಿ ಥೋ | ರನ್ಮುತ್ತು ನಾಸಾಮಣಿ | ಅರರೆ | ಮನ್ಮನೋಹರವಾದ ಕಡಕ ಕಂಕಣ ಮುದ್ರೆ | ಸನ್ಮೋಹನಾಂಗಿಯರು ಸರ್ವಾಭರಣವಿಟ್ಟು | ಮನ್ಮಥನ ಹಿಡಿದೇಜಿ ಕುಣಿವಂತೆ ಮುಂದೊರಿದು | ಕಣ್ಣಂಚಿನಿಂದ ಜಗವೆಲ್ಲ ಬೆಳಗುತಲಿ 2 ಕರ್ಪುರದ ವೀಳ್ಯೆಯವ ಮೆಲುತ ನಾನಾ ಬಗೆ | ಅಗರು ಶಿರಿಗಂಧ | ಸಾರ್ಪರಿಮಳ ಸಕಲ ದ್ರವ್ಯದಿಂದೋಕುಳಿಯ | ಮಾರ್ಪೆಸರು ಬಾರದಂತೆ | ಅರೆರೆ | ಕರ್ಪಾಣಿಯೊಳಗೆ ದ್ವೀಪಾಂತರದ ತರ ನಿಲುವ | ದರ್ಪಣವ ಪಿಡಿದು ಸರ್ವಾಂಗ ನೋಡಿಕೊಳುತ | ದರ್ಪ ತಗ್ಗಿಸದಲೆ | ಪೊನ್ನುಡೆಗಳ ತುಡುಕಿ ಕಂ | ದರ್ಪನಪ್ಪನ ಮೇಲೆ ಗುಪ್ಪಿರರು ಮುದದೀ 3 ಮೇಲ್ಮೇಲು ಸೊಗಸು ಚನ್ನಿಗರಾಯನಿಲ್ಲ ನಿಲೂ ನೀಲ್ಮೇಘ ವರ್ಣಾನೆ | ಕಾಲ್ದೆಗೆದು ನಮ್ಮಮ್ಮ | ತೋಳ್ಮದವ ತೀರಿಸದೆ ಪೋಗದಿರು ಭಡಭಡಾ | ಕರವ ತೆಕ್ಕೊ | ಅರೆರೆ | ತಾಳ್ಮದತಿಗತಿಯಂತೆ ಹೆಜ್ಜೆಯ ನಿಡುತ | ಸತಿ | ಜಾಲ್ಮೊಗದು ವಾರಿಧಿಯ ಥೆರೆಯಂತೆ ಮೂದಲಿಸಿ | ಆಳ್ಮಾತಿಲಿಂದ ಹೈ ಎನುತ ಚಲ್ಲಿದರೂ4 ಪೆಣ್ಗಳಿರಾ ನಿಮಗೇಕೆ ಪ್ರಬಲತನವೆಂದೆನುತ | ಅಣ್ಗದಾ ಗೋವಳರ ನಡುವೆ ವಪ್ರ್ಪಿರ್ದಸು | ವಣ್ಮಾತ್ರ ಪರಮಾತ್ಮನೀಕ್ಷಿಸಿದ ಅವರವರ | ಕಣ್ಗೊರಳ ಕುಚ ತೊಡೆಗಳ | ಅರೆರೆ | ಹೃತ್ತಾಪ ಹರಿಸುವ | ಸಿರಿ | ಸರ್ರನೆ ಓಕಳಿ ಚಲ್ಲೆ | ಸಣ್ಗೊಲ್ಲತಿಯರು ಬೆರಗಾಗಿ ಮರಳೆÀ ಹರಿಯ | ಬೆಣ್ಗಳ್ಳನೆಂದು ಮುತ್ತಿದರು ಹಾಸ್ಯದಲಿ 6 ತೋರ್ಕೈಯ ಬಚ್ಚಿಡದೆ ಪಳ್ಳಿಗನೆ ಠಕ್ಕಿಸದೆ | ಮಾರ್ಕರೆದುಕೋ ನಿನ್ನ ಗೆಳೆಯರನ ಒಂದಾಗಿ | ಸೂರ್ಕುದೇಗಂತೆ ಸರ್ವೋದ್ಧಾರಗರದ ವೈ | ಜೀರ್ಕೋಳಲಿ ತೆರವಿಲ್ಲದೆ | ಅರೆರೆ | ಅರ್ಕನರ್ಕಕೆ ವಾರಿ ಇಂಗಿ ಪೋಗುವಂತೆ | ನರ್ಕಾಂತಕನ ಕಾಯದೊಳಗೆ ಓಕುಳಿಯಡಗೆ | ಅರ್ಕಾದ್ರಿಯಂತೆ ಶಿರಿ ಕೃಷ್ಣರಾಜಿಸುತಿರೆ | ತರ್ಕೈಪ ಭರದಿಂದ ನಾರಿಯರು ಇರಲು 7 ಹಸ್ತ ಲಾಘವ ನೋಡಿ ತಲೆದೂಗಿ ನಕ್ಕು ಸ | ಮಸ್ತ ನಾರಿಯರಿಟ್ಟು ಉಟ್ಟ ಮಂಗಳವಸನ | ವಸ್ತುಗಳು ಜಿಗಳುವಂತೆ ಓಕುಳಿಯಿಂದ | ವಿಸ್ತಾರವಾಗಿ ಉಗ್ಗೆ | ಅರೆರೆ | ಕಸ್ತೂರಿಮೃಗದಂತೆ ಸುಳಿಸುಳಿಯ ನಿಂದಿರ್ದ| ಹಸ್ತಿಗಮನಿಯರೊಡನೆ ಕ್ರೀಡೆಯನು ಪರಾತ್ಪÀರ | ವಸ್ತು ಲಕುಮಿಯ ರಮಣ ಆಡುತಿರೆ ನಾಲ್ಕೈದು | ಮಸ್ತಕಾದ್ಯರು ವಿಸ್ತರಿಸಲರಿದೆನಲು 8 ಸುಕ್ಕದೆ ಕುಚಗುಳುಬ್ಬಿ ಕಕ್ಕಸವಾಗೆ ಹೆಜ್ಜೆ | ಇಕ್ಕಲಾರದೆ ವಿರಹತಾಪದಿಂದೀಕ್ಷಿಸುತ | ವಖ್ಖಣಿಸುವ ಮಾತು ಹಿಂದಾಗುತಿರೆ ಕಲೆಗ | ಳುಕ್ಕೇರಿ ಬೆವರುತಿರಲು | ಅರೆರೆ | ಅಕ್ಕಕ್ಕೊ ಎಂದು ಅಕ್ಕೋಜಗೆಗೊಳ್ಳುತ್ತ ತಾ | ರಕ್ಕಿಯಂತೆ ಕೃಷ್ಣ ಸುತ್ತ ವಲ್ದರು | ಸಕ್ಕರೆದುಟಿ ಚಲುವ ಉಡುಪನಂತೆ ವಪ್ಪೆ | ದಕ್ಕಿವನಂತೆ ಸಂತರಿಸುತಲಿ ಇಂದೂ 9 ಬೆರ್ದೋಕಳಿಯನಾಡಿ ಸರಿ ಮಿಗಿಲು ಎನಿಸಿ ಕೆಲ | ಸಾರ್ದಿರ್ದ ನಾರಿಯರ ಶಿರವ ತಡವರಿಸಿ ಶತ | ಸಾರ್ದವೆಲೆ ಉಳ್ಳ ಉಡುಗೊರೆನಿತ್ತು ಮನ್ನಿಸಿ | ಮೀರ್ದಾಭರಣವ ತೊಡಿಸಿ | ಅರೆರೆ | ಸಾರ್ದೆಗೆದು ತರ್ಕೈಸಿ ಪ್ರೀತಿಯಿಂ ಬಡಿಸಿ ಮುರ ಮರ್ದನ ವಿಜಯವಿಠ್ಠಲ ಮೆರೆದ ಗೋಕುಲ ದೊರೆ | ಸುಜನ ಜನಸಂಗಾ 10
--------------
ವಿಜಯದಾಸ
ಬಡವರ ಭಾಗ್ಯನಿಧಿಯೆ ನಿನ್ನ ಅಡಿಗಳಿಗೆರಗುವೆ ಪ. ದೃಢಮತಿ ಕೊಡು ಎಂದು ಬಿಡದೆ ಧ್ಯಾನಿಸುವೆ ಅ.ಪ. ಗುರುಗಳ ಕರುಣವೊ ಹಿರಿಯರ ಬಲವೊ ನಾ ಚರಿಯ ದೇವಾದಿದೇವ 1 ತÀೃಷೆಯಿಂದ ನುಡಿವೆನೊ ನಿನ್ನ ವಶವಲ್ಲವೇ ನಾನು2 ಭಕ್ತರಹಂಕಾರ ಯುಕ್ತೀಲಿ ಕಳೆಯುವ ಶಕ್ತ ನೀನಲ್ಲದೆ ಮುಕ್ತೀಶ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಬಡಿ ಜಾಗಟೆ ಹೊಡಿ ನಗಾರಿ ಪಿಡಿ ತುತ್ತೂರಿಯನು ನಡಿ ಮುಂದೆ ಅಡಿ ಇಡು ಹೆದರದೆ ನುಡಿ ಹರಿಯನಾಮ ಪ. ಬಿಗಿ ನಡುವನು ಮುಗಿ ಕೈಯ್ಯನು ಒಗಿ ದುರಭಿಮಾನ ಚಿಗಿ ಭಕ್ತಿರಸ ಮುಖದಲಿ ನಗಿ ತೋರು ನಯದಿ 1 ಪರಿ ಪರಿ ಕರಿ ಕುಣಿಸು ಕಾಲ್ಕಿರಿ ಗೆಜ್ಜೆ ಭರ ಧರಿಯಲ್ಲಿ ಮೆಟ್ಟೆ 2 ಗಟ್ಟಿ ಮಾಡಿ ಮನ ತಟ್ಟಿ ಚಪ್ಪಾಳೆ ಮೆಟ್ಟಿ ಖಳರ ಎದÉಯ ಶ್ರೇಷ್ಠ ಮಧ್ವಮತ ಗುಟ್ಟು ದಾಸತ್ವವು ದುಷ್ಟರರಿಯರೆಂದು 3 ಶುದ್ಧ ಗುರುವು ತಂದೆ ಮುದ್ದುಮೋಹನರು ಉದ್ಧಾರವನೆ ಮಾಡಿ ವಿದ್ಯಾನಾಮ ಅನಿರುದ್ಧಾನಂಕಿತಗಳ ಬದ್ಧಾಗೀವರೆಂದು 4 ಕೆಟ್ಟ ಕರ್ಮಗಳ ಕಟ್ಟು ಹರಿದು ಮುಕ್ತಿ ಕೊಟ್ಟು ಪೊರೆವನೆಂದು 5
--------------
ಅಂಬಾಬಾಯಿ
ಬಡಿವಾರ ನಿಮ್ಮ ಕೀರ್ತಿಅರಿಯೆವೊಪಾರ್ಥ ಸಾಕೊ ನಿನಗೆಬಡಿವಾರ ಪ. ಬೀಗನಾಡಿದ ಬಲು ಬಿಂಕದ ಮಾತು ಕೇಳಿ ಸಾಗರಶಯನ ಮುರಿದೆದ್ದಸಾಗರಶಯನ ಮುರಿದೆದ್ದ ಅರ್ಜುನ ಹ್ಯಾಂಗಂದ್ಯೊ ನಿನ್ನ ಮನದಾಗ1 ಏನಲೊ ಅರ್ಜುನ ಈ ನುಡಿ ನಿನಗ್ಯಾಕೊನೀನು ನಿಮ್ಮವಳು ತಿರು ತಿರುಗಿನೀನು ನಿಮ್ಮವಳು ತಿರು ತಿರುಗಿ ಮಾರಿದರೆಕಾಣಿಯ ಬೆಲೆಯ ಹೋಲಲಾರೆ2 ದಶರಥರಾಯನ ಭಾಗ್ಯ ವರ್ಣಿಸಲು ವಶವಲ್ಲಹೊಸದಾಗಿ ಇವಳು ಹೋಗಲಿಕ್ಕೆಹೊಸದಾಗಿ ಇವಳು ಹೋಗಲಿಕ್ಕೆ ಎನಗೆ ಈ ದೆಶೆಗೇಡಿ ಬಂದು ದಣಿಸಲಿಲ್ಲ 3 ಹಿಂದೆ ಇವಳಿಂದಲೆ ನೊಂದೆನೋ ಅನ್ನಕ್ಕೆ ಸಂದೇಹವಾಗಿ ಅಡವಿಯಸಂದೇಹವಾಗಿ ಅಡವಿಯ ತಿರುಗಿಸಿದವಳಿಗೆ ಅಂದಣ ಆನೆ ಬರಲುಂಟೆ 4 ಕಾಲ ಲಕ್ಷಣವೆಲ್ಲಿ ಅಡಗಿತ್ತೆ 5 ಅಕ್ಷ ಮ್ಯಾಲಂತರದಿ ವೃಕ್ಷದಲ್ಲಿದ್ದಾಗ ಲಕ್ಷ ಕಷ್ಟಗಳ ಬಡುವಾಗಲಕ್ಷ ಕಷ್ಟಗಳ ಬಡುವಾಗ ಇವಳ ಕೈಯ ಲಕ್ಷಣವೆಲ್ಲಿ ಅಡಗಿತ್ತೆ 6 ಬಡಿವಾರ ಬಮ್ಮ ವರ್ಣಿಸಲಾರ ಹೆಮ್ಮಿ ನೋಡಿದರೆ ವಿಪರೀತಹೆಮ್ಮಿ ನೋಡಿದರೆ ವಿಪರೀತ ಎಲೊ ಪಾರ್ಥಸುಮ್ಮನೆ ಯಾಕೆ ಮುನಿಸಾಗಿ 7 ಕೇಳಿ ನಿಮ್ಮವರ ಕೀರ್ತಿ ಭಾಳೆ ವಿಸ್ತಾರವಾಗಿ ಹೇಳಲು ಲಜ್ಜೆ ಬರತದೆ ಹೇಳಲು ಲಜ್ಜೆ ಬರ ತದೆ ನಮ್ಮ ಅಮ್ಮನ ತಾಳುವಿಕೆಯಿಂದ ಉಳಿದಾರೊ 8 ನಾರು ವಸ್ತ್ರವನುಟ್ಟು ನಾರಿ ಸಂಚರಿಸುವಾಗವೀರ ರಾಮೇಶ ಜರಿದಾಗ ವೀರ ರಾಮೇಶ ಜರಿದ ಕಾಲಕ್ಕೆ ಇವಳ ಮೋರೆ ಲಕ್ಷಣವು ಅಡಗಿತು9
--------------
ಗಲಗಲಿಅವ್ವನವರು
ಬಂತವ್ವಾ ತಂಗಿ ಬಂತವ್ವಾ ಈ ಗೊಂದು ಮಾತು ನೆನಪು ಬಂತವ್ವಾ ಪ ಅಂತರಂಗದೊಳು ಕಂತುಜನಕ ತನ್ನ ಚಿಂತಿಪರ್ಹಂತೆಲಿ ನಿಂತಿಹ್ಯನಂತೆ ಅ.ಪ ಮರುಳು ಬುದ್ಧಿಯನು ನೀಗವ್ವ ಬರೆ ತಿರುತಿರುಗಿ ಮರುಗಬೇಡವ್ವ ಕರಿರಾಜ ದ್ವರದನು ತರುಣಿಯ ಪೊರೆದನು ಸರಸದಿ ಪಾಂಡವರ ನೆರಳಾಗಿ ನಿಂತನು 1 ಹಂಚಿಕೆ ಪೇಳುವೆ ನಿನಗವ್ವ ನಿನ್ನ ವಾಂಛಲ್ಯ ಗುಣವೊಂದು ಕಳೆಯವ್ವ ಕಿಂಚಿತ್ತು ಮನದೊಳು ವಂಚನಿಲ್ಲದೆ ವಿ ರಂಚಿಪಿತನ ನಂಬಿ ಭಜಿಸವ್ವ 2 ಸುಳ್ಳೆ ಕಳವಳಿಸುವುದ್ಯಾಕವ್ವ ತಿಳಿ ನಳಿನಾಕ್ಷನ ಘನ ಮಹಿಮ್ಯವ್ವ ಹೊಲಸು ದೇಹದಾಸೆ ನೀಗಿದ ಭಕ್ತಗೆ ಸುಲಭನು ಶ್ರೀರಾಮ ಕೇಳವ್ವ 3
--------------
ರಾಮದಾಸರು
ಬತ್ತಿಗೆ ಹತ್ತದ ಜ್ಯೋತಿಯು ನಡು ನೆತ್ತಿಯೊಳಿಂ ಬಿಟ್ಟು ಜತನ ಮಾಡಣ್ಣಾ ಪ ತೈಲ್ಯವು ಸರಿಯಾಗದು ನೋಡು ಅಶುದ್ಧ ಮೈಲಿಗೆಯಿದ್ದರೆ ಕಳದೀತು ಕೈಲಾಸಪತಿಯ ಧ್ಯಾನವ ಮಾಡು ಬಟ್ಟ ಬೈಲಲ್ಲಿ ಬೆಳಗಾಗುತಿದೆ ಮುಂದೆ ನೋಡು 1 ಕತ್ತಲೆ ಬೆಳಕಲ್ಲಿ ಉಳಿಯದು ಮಾಯಾ ಮೃತ್ಯುಪಾಶಗಳಲ್ಲಿ ಸುಳಿಯದು ನಿತ್ಯ ನಿರ್ಮಲವೆಂಬ ಗೆಲವದು ಪರ ವಸ್ತುವಿನೊಳಗೆ ಕೂಡಿರುವುದು ಅಣ್ಣಾ 2 ನಿಂದಿಹ ನಿಜಕೆ ತಾ ನಿಲುವದು ಪರ ದ್ವಂದ್ವಾಕಾರಗಳೆಲ್ಲ ಗೆಲುವದು ಕುಂದು ದುಷ್ಕರ್ಮವ ಕೊಲುವದು ವಿಮಲಾ ನಂದನ ಚರಣಕೆ ಸಲುವದು ಅಣ್ಣಾ 3
--------------
ಭಟಕಳ ಅಪ್ಪಯ್ಯ
ಬಂದ ದುರಿತಗಳೆಲ್ಲ ಪರಿಹರಿಸಿ ಪೊರೆವದು ಪ ಎಷ್ಟು ಪರಿಯಲಿ ನಿನ್ನ ಎಷ್ಟು ನಾ ಮೊರೆ ಇಡಲು ಕಷ್ಟವನು ಕಳೆವ ಭರ ಕಾಣಲಿಲ್ಲ ದೃಷ್ಟಿಲಿ ನೋಡದೆ ಹೋಗಿ ದಣಿಸುವ 1 ಸಾರ್ಥಕವು ಏನು ಎನ್ನ ಸಲಹದಿರಲು ಕೀರ್ತಿವಂತನು ಎನಿಸಿಕೊಂಡು ಕಾಯದಿರೆ ಅಪಕೀರ್ತಿ ಬಾರದೆ ನಿನಗೆ ಅಧಿಕ ಜನರೊಳಗೆ 2 ಧಾರುಣಿಯೊಳಧಿಕರಿನ್ನಾರು ನಿನಗಿನ್ನು ತೋರು ಮಾರಜನಕನಾದ ಮಹಾಮಹಿಮನೆ ಧೀರ 'ಹೊನ್ನಯ್ಯ ವಿಠ್ಠಲ’ ದೀನ ರಕ್ಷಕನೆಂದು ಸಾರುತದೆ ನಿಮ್ಮ ಕೀರ್ತಿ ಸಕಲ ಲೋಕದಲಿ 3
--------------
ಹೆನ್ನೆರಂಗದಾಸರು