ಒಟ್ಟು 4326 ಕಡೆಗಳಲ್ಲಿ , 124 ದಾಸರು , 2605 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಥಾಣುಮಹೇಶ್ವರ ತ್ರಿನಯನ ||ಶಂಕರ||ಮಾಣದೆಸಲಹೋ ರುದ್ರಾಣಿ ಮನೋಹರ ಪಪೂರ್ಣ ಕೃಪೆಯೊಳ್ ನಿನ್ನ | ಶರಣನೆಂದೆನಿಸೆನ್ನ ಅಬಾಣನಿಗೊಲಿದಾತಣ್ಗದಿರನಿಶೇಖರ |ಭೂತನಾಥನೆಭವ| ಭೀತಿವಿನಾಶನೆ |ಪಾತಕಹರಸುರ | ವ್ರಾತಾನಮಿತನೆ ಚಭೂತಳದೊಳಗೆ ಸರ್ವಾರ್ಥರಕ್ಷಕನೆಂದು |ಖ್ಯಾತಿಯ ತಳೆದ ಕಾತ್ಯಾಯನಿ ರಮಣಾ 1ರುದ್ರಚಮಕಗಳಿಂದ | ಲಭಿಷೇಕವಗೈದು |ಶ್ರದ್ಧೆಯೊಳರ್ಚಿಸಲಾರೇ | ಪತ್ರೆಯ ಕೊಯ್ದು |ರುದ್ರಾಕ್ಷಿಯು ಭಸ್ಮಲೇಪನ ಧರಿಸುತ |ಪ್ರದೋಷದ ವ್ರತವರಿಯೆನ್ನುದ್ಧರಿಸೊ 2ಸುಗುಣಶರಧಿಲಿಂಗ | ಪೂಜೆ ವಿನೋದಿತ |ಮೃಗದ ನೆವದಿ ಪಾರ್ಥಗೊಲಿದಕೈರಾತ|ಜಗದೀಶ್ವರನೆ ಗೋವಿಂದನಸಖನಿನ್ನ |ಮೊಗವ ತೋರಿಸುದಾಸಗೊಲಿದು ನೀ ದಯದಿ 3
--------------
ಗೋವಿಂದದಾಸ
ಸ್ನಾನ ಮಾಡಿರಯ್ಯ ಜಾÕನತೀರ್ಥದಲಿನಾನು ನೀನೆಂಬಹಂಕಾರವ ಬಿಟ್ಟು ಪ.ತನ್ನೊಳು ತಾನೆ ತಿಳಿದರೊಂದು ಸ್ನಾನಅನ್ಯಾಯಗಾರಿ ಕಳೆದರೊಂದು ಸ್ನಾನಅನ್ಯಾಯವಾಡದಿದ್ದರೊಂದು ಸ್ನಾನಚೆನ್ನಾಗಿ ಹರಿಯ ನೆನೆದರೊಂದು ಸ್ನಾನ 1ಪರಸತಿಯ ಬಯಸದಿದ್ದರೆ ಒಂದು ಸ್ನಾನಪರನಿಂದೆ ಮಾಡದಿದ್ದರೆ ಒಂದು ಸ್ನಾನಪರದ್ರವ್ಯ ಅಪಹರಿಸದಿರೆ ಒಂದು ಸ್ನಾನಪರತತ್ವತಿಳಿದುಕೊಂಡರೆ ಒಂದು ಸ್ನಾನ2ತಂದೆತಾಯಿಗಳ ಸೇವೆ ಒಂದು ಸ್ನಾನಮುಂದಿನಮಾರ್ಗ ತಿಳಿದರೊಂದು ಸ್ನಾನಬಂಧನವನು ಬಿಡಿಸಿದರೊಂದು ಸ್ನಾನಸಂಧಿಸಿ ತಿಳಿದುಕೊಂಡರೆ ಸೇತು ಸ್ನಾನ 3ಅತ್ತೆ ಮಾವನ ಸೇವೆಯೊಂದು ಸ್ನಾನಭರ್ತನ ಮಾತು ಕೇಳುವುದೊಂದು ಸ್ನಾನಕ್ಷೇತ್ರಪಾತ್ರರ ಸಹವಾಸ ಒಂದು ಸ್ನಾನಪಾರ್ಥಸಾರಥಿ ನಿಮ್ಮ ಧ್ಯಾನವೆ ಧ್ಯಾನ 4ವೇದ ಶಾಸ್ತ್ರಗಳನೋದಿದರೊಂದು ಸ್ನಾನಭೇದಾಭೇದ ತಿಳಿದರೊಂದು ಸ್ನಾನಸಾಧು ಸಜ್ಜನರ ಸಂಗ ಒಂದು ಸ್ನಾನಪುರಂದರವಿಠಲನ ಧ್ಯಾನವೆ ಸ್ನಾನ 5
--------------
ಪುರಂದರದಾಸರು
ಸ್ವಾಮಿ ಸತ್ಯಾಧಿರಾಜ ಮುನಿಗೆಣೆಗಾಣೆ ನಾಭೂಮಿಯ ಮೇಲೆ ಚತುರನಸಾಮಥ್ರ್ಯ ನೋಡಿರಿ ಭಕುತಿಯನರಿಯದಪಾಮರನನು ಬಾಗಿಸುವನ ಪ.ಗುರುಸತ್ಯಾಭಿನವರಾಯನ ಪಟ್ಟದಾನೆಯುಧÀರೆಯ ಮೇಲೋಡಾಡುವಂತೆಚರಿಸುತ ಖಳರನಂಜಿಸಿ ತಪ್ಪ ಕೈಕೊಂಡುಗುರುಪಾದಕೊಪ್ಪಿಸಿ ನಿಂತ 1ಕಲ್ಲು ಕರಗುವುದು ಕೆಚ್ಚು ಮಣಿವುದು ಇದೆಲ್ಲಿಯ ಗಾದೆಯೆಂದೆನಲುಕಲ್ಲೆದೆ ಮಾನಿಸರ ದ್ರವಿಸುವ ಕೆಚ್ಚೆದೆಕ್ಷುಲ್ಲರ ಮಣಿಸುವಕೇಳಿ2ಆಲಸ್ಯವೆ ಮೋಕ್ಷೋಪಾಯ ದಹನೆಂದುಕಾಲವ ಕಳೆಯನು ವ್ಯರ್ಥಮೂಲ ರಘುಪತಿ ಪಾದಾರವಿಂದವ ಮೇಲೆಮೇಲರ್ಚಿಪ ಸಮರ್ಥ 3ಜ್ಞಾನ ಭಕುತಿ ವೈರಾಗ್ಯಪ್ರಣವಜಪಧ್ಯಾನ ಮೌನ ಪರಿಪೂರ್ಣಆನಂದತೀರ್ಥ ಶಾಸ್ತ್ರಾಂಬುಧಿ ತಿಮಿಂಗಿಲದೀನರಸುರತರುಜಾಣ4ತಂದೆ ಸತ್ಯಾಭಿನವ ತೀರ್ಥ ಕರಜಾತಎಂದೆಂದು ಸುಜನರ ಪ್ರಿಯಇಂದಿರೆರಮಣ ಪ್ರಸನ್ವೆಂಕಟೇಶನಹೊಂದಿದ ಸದ್ಗುಣಗೇಹ5
--------------
ಪ್ರಸನ್ನವೆಂಕಟದಾಸರು
ಹಂಗಿಗನಾಗಬೇಡಾ | ಏ ಮನವೇ | ಹಂಗಿಗನಾಗಬೇಡಾ |ಆ ಯಮನಿಗೆ ಹಂಗಿಗನಾಗಬೇಡಾಪಕಾಮಕ್ರೋಧವು ಲೋಭಮದ ಮಾತ್ಸರ್ಯಗಳೆಂಬ |ವ್ಯಾಮೋಹಾದಿಗಳಿಗೆ ಸಿಲುಕಿ ಸುಮ್ಮನೆ ನೀನು1ಪರದಾರಾಂಶದಿ ಮನ | ವಿರಿಸಿ ಕಾಮಾದಿ ವ್ಯರ್ಥ |ಗುರುಹಿರಿಯರಜರೆ| ದಾಡಿ ಗರ್ವದಿ ನೀನು2ಸತಿಸುತರೆಂದೆಂಬ | ಮೋಹಪಾಶಕೆ ಸಿಕ್ಕಿ |ಅತಿಥಿ ಸತ್ಕಾರ ಮಾಡದೆ | ಲೋಭತ್ವದಿ ನೀನು3ಧರಣಿ ದಾನಾದಿಗಳ | ತನು ಶಕ್ತಿ ಮದದಿಂದ |ಪರರಿಗೆ ಕೇಡನ್ನೆ ಬಗೆವ ಮತ್ಸರದಿ ನೀ4ನೆಂಟರಿಷ್ಟರು ಸರ್ವ | ಮಂದಿ ಸೇವಕರೆಂದು |ತುಂಟತನದಿ ಗೋ|ವಿಂದನಾ ಪಾದಮರತು ನೀ5<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಹನುಮ ನಮ್ಮ ಕಾಮಧೇನು ಭೀಮ ನಮ್ಮ ಕಲ್ಪವೃಕ್ಷಆನಂದತೀರ್ಥಗುರು ಚಿಂತಾಮಣಿ ಪ.ಸೂತ್ರರಾಮಾಯಣ ಮಹಾವ್ಯಾಕರ್ಣ ಪಂಚರಾತ್ರ ಭಾರತಪುರಾಣ ಶ್ರುತ್ಯರ್ಥ ಸುಧಾರಸವಾವೇತ್ತøಜನಕಾ ಸಂತತಕಿಂಪುರುಷವರುಷದಿ ಉಣಲಿತ್ತನಾ ಸುಸ್ವರದಿ ಶ್ರೀರಾಮಪ್ರಿಯನು 1ರಾಜಸೂಯ ಮೂಲದಿಂದ ಶಾಖೋಪಶಾಖ ಸಧರ್ಮಸೋಜಿಗದ ಕರ್ಮಕುಸುಮ ಬ್ರಹ್ಮತ್ವಛಲದಿರಾಜಿಸುತ್ತ ಸಹಸ್ರಾಕ್ಷ ಸಖಮುಖ್ಯದ್ವಿಜರ್ಗೆ ಸುಖಬೀಜ ನಿಂತು ಹೊರೆದನು ಶ್ರೀಕೃಷ್ಣ ಪ್ರಿಯನು 2ಹಂತ ಭಾಷ್ಯಧ್ವಾಂತದಿ ವೇದಾಂತವಡಗೆಪೋಕಮಣಿಮಂತನ ಮುರಿದನು ಮೂವತ್ತೆರಡು ಲಕ್ಷಣದಿಕಾಂತಿಯಿಂದ ಪ್ರಸನ್ನವೆಂಕಟ ಕಾಂತನ್ನ ಪ್ರಕಾಶಿಸಿದಚಿಂತಿತಾರ್ಥ ನಮಗೀವ ಶ್ರೀವ್ಯಾಸಪ್ರಿಯನು ವೇದವ್ಯಾಸಪ್ರಿಯನು 3
--------------
ಪ್ರಸನ್ನವೆಂಕಟದಾಸರು
ಹನುಮ ನಮ್ಮ ತಾಯಿ ತಂದೆಭೀಮ ನಮ್ಮ ಬಂಧು ಬಳಗಆನಂದತೀರ್ಥರೆ ನಮ್ಮ ಗತಿಗೋತ್ರರು ಪ.ತಾಯಿ ತಂದೆ ಹಸುಳೆಗಳಿಗೆ ರಸಾಯನುಣಿಸಿ ಸಾಕುವಂತೆಆಯಾಸವಿಲ್ಲದೆ ಸಂಜೀವನವ ತಂದುಗಾಯಗೊಂಡ ಕಪಿಗಣವಪ್ರಿಯದಿಂದ ಪೊರೆದ ರಘುರಾಯನಂಘ್ರಿಗಳೆ ಸಾಕ್ಷಿ ತ್ರೇತಾಯುಗದಿ 1ಬಂಧು ಬಳಗದಂತೆ ಆಪದ್ಬಾಂಧವನಾಗಿ ಪಾರ್ಥರಿಗೆಬಂದ ಬಂದ ದುರಿತಗಳ ಪರಿಹರಿಸಿಅಂಧಕಜಾತರ ಕೊಂದುಅಂದೆ ಕೃಷ್ಣಾರ್ಪಣವೆಂದಾ ಯದುಕುಲೇಂದ್ರನಂಘ್ರಿಗಳೆ ಸಾಕ್ಷಿ ದ್ವಾಪರಾಂತ್ಯದಿ 2ಗತಿಗೋತ್ರರಂತೆ ಸಾಧುತತಿಗಳಿಗೆ ಸುಜ್ಞಾನವಿತ್ತುಮತಿಗೆಟ್ಟ ಇಪ್ಪತ್ತೊಂದು ಕುಭಾಷ್ಯಂಗಳಗತಿಗೆಡಿಸಿ ವೈಷ್ಣವರಿಗೆ ಸದ್ಗತಿಯ ತೋರಿದ ಪ್ರಸನ್ವೆಂಕಟಪತಿವ್ಯಾಸಾಂಘ್ರಿಗಳೆ ಸಾಕ್ಷಿ ಕಲಿಯುಗದಿ3
--------------
ಪ್ರಸನ್ನವೆಂಕಟದಾಸರು
ಹನುಮ ನಮ್ಮ ತಾಯಿತಂದೆ-ಭೀಮನಮ್ಮ ಬಂಧು ಬಳಗ |ಆನಂದ ತೀರ್ಥರೆಮಗೆ ಗತಿಗೋತ್ರವಯ್ಯ ಪತಾಯಿ ತಂದೆ ಹಸುಳೆಗಾಗಿ ಸಾಯ ಮಾಡಿ ಸಾಕುವಂತೆಆಯಾಸವಿಲ್ಲದೆ ಸಂಜೀವನ ತಂದೆ ||ಗಾಯಗೊಂಡ ಕಪಿಗಳನ್ನು ಸಾಯದಂತೆ ಪೊರೆದೆ ರಘುರಾಯನಂಘ್ರಿಗಳೆ ಸಾಕ್ಷಿ ತ್ರೇತಾಯುಗದಲ್ಲಿ 1ಬಂಧು ಬಳಗದಂತೆ ಆಪ್ಪದ್ಬಂಧುವಾಗಿ ಪಾರ್ಥನಿಗೆಬಂದ ದುರಿತಂಗಳ ಪರಿಹರಿಸಿ ||ಅಂಧಕಜಾತಕ ಕೊಂದು ನಂದನಂದನಿಗರ್ಪಿಸಿದ ಗೋ-ವಿಂದನಂಘ್ರಗಳೆ ಸಾಕ್ಷಿ ದ್ವಾಪರಯುಗದೆ 2ಗತಿಗೋತ್ರರಂತೆ ಸಾಧುಮತಿಗಳಿಂಗೆ ಗತಿಯನಿತ್ತುಮತಿಗೆಟ್ಟ ಇಪ್ಪತ್ತೊಂದು ಮತವ ಖಂಡಿಸಿ |ಮತಗೆಟ್ಟ ವೈಷ್ಣವರಿಗೆ ಗತಿಯ ತೋರಿದೆ ಪರಮಾತ್ಮಗತಿಪುರಂದರವಿಠಲ ಸಾಕ್ಷಿ ಕಲಿಯುಗದಲ್ಲಿ3
--------------
ಪುರಂದರದಾಸರು
ಹನುಮಂತ ನೀ ಬಲು ಜಯವಂತನಯ್ಯ |ಅನುಮಾನವಿಲ್ಲ ಆನಂದತೀರ್ಥರಾಯ ಪರಾಮಸೇವಕನಾಗಿ ರಾವಣನ ಪುರವ ನಿರ್ಧೂಮವ ಮಾಡಿದೆ ನಿಮಿಷದೊಳಗೆ ||ಭೂಮಿಯ ಪುತ್ರಿಗೆ ಮುದ್ರೆಯುಂಗುರವಿತ್ತು |ಕ್ಷೇಮ ಕುಶಲವ ಶ್ರೀರಾಮ ಪಾದಕರ್ಪಿಸಿದೆ 1ಕೃಷ್ಣಾವತಾರದಿ ಭೀಮನಾಗಿ ಬಂದುದುಷ್ಟ ದೈತ್ಯರನೆಲ್ಲ ಸಂಹರಿಸಿದೆ |ದೃಷ್ಟಿಹೀನ ಧೃತರಾಷ್ಟ್ರನ ವಂಶವನುಕಷ್ಟವಿಲ್ಲದೆ ಕೊಂದು ಶ್ರೀಕೃಷ್ಣಪಾದಕರ್ಪಿಸಿದೆ 2ಪತಿತ ಸಂಕರ ಹುಟ್ಟಿ ಮತವೆಲ್ಲ ಕೆಡಿಸಲುಮತಿ ಹೀನರಾದ ಸಜ್ಜನರಿಗೆಲ್ಲ ||ಅತಿ ಬೇಗದಲಿ ಮಧ್ವಯತಿರೂಪಧರಿಸಿ ಸದ್ಗತಿಪಾಲಿಸಿದೆಪುರಂದರವಿಠಲನ ದಾಸ3
--------------
ಪುರಂದರದಾಸರು
ಹನುಮದ್ಭೀಮ ಮಧ್ವನಾಮ ಪ್ರಣತಕಲ್ಪದ್ರುಮಘನಕೃಪಾಳು ಭಕ್ತಚಿಂತಾಮಣಿ ಯೋಗೀಂದ್ರಲಲಾಮ ಪ.ಭಾರತಿಪತಿ ನಿಖಿಲವಿಶ್ವಾಧಾರ ಭಾವೀಬ್ರಹ್ಮಸಾರತತ್ತ್ವ ವೇದಾರ್ಥಕೋವಿದ ಧೀರಜೀವೋತ್ತಮ1ಭರ್ಗವಾಸವಾದಿ ದಿವಿಜವರ್ಗಸುಖಧಾಮನಿರ್ಗುಣೋಪಾಸಕ ಮೋಕ್ಷಮಾರ್ಗದರ್ಶಿನಿಷ್ಕಾಮ2ಸೂತ್ರನಾಮಕ ವಾಯುದೇವ ವಿಚಿತ್ರಕರ್ಮನಿಸ್ಸೀಮಕರ್ತಲಕ್ಷ್ಮೀನಾರಾಯಣನಭೃತ್ಯಸಾರ್ವಭೌಮ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹರಿಕಥಾ ಶ್ರವಣ ಮಾಡೊ - ನಿರಂತರಪರಗತಿಗಿದು ನಿರ್ಧಾರ ನೋಡೊ ಪ.ಸರಸಿಜನಾಭನ ಸರ್ವದಾ ಹೊಗಳುತದುರಿತದೊರಕೀಡಾಡೊ -ಮನುಜಾ1ಜಾÕನ - ಭಕುತಿ - ವೈರಾಗ್ಯವೀವ ನಮ್ಮಆನಂದತೀರ್ಥರ ಪಾಡೊ ಮನುಜಾ 2ಪರಮ ಪುರುಷ ಶ್ರೀ ಪುರಂದರವಿಠಲನಚರಣ ಕಮಲಗಳ ಕೂಡೊ - ಮನುಜಾ 3
--------------
ಪುರಂದರದಾಸರು
ಹರಿದಿನ ಇಂಥ ಹರಿದಿನ ಪ.ಹರಿದಿನದ ಮಹಿಮೆ ಹೊಗಳಲಗಾಧಪರಮಭಾಗವತರಾಚರಣೆಗಾಹ್ಲಾದÀದುರಿತದುಷ್ಕøತ ಪರ್ವತಕೆ ವಜ್ರವಾದಮರುತ ಸದ್ವ್ವ್ರತಕೆಲ್ಲ ಶಿರೋರತ್ನವಾದ ಅ.ಪ.ಭಕ್ತಿಗೆ ಮೊದಲು ವಿರಕ್ತಿ ಬೀಜವೆಂಬಸಕಲ ತಪದೊಳೆಲ್ಲ ಮೇಲೆನಿಸಿಕೊಂಬಮಖಕೋಟಿಗಧಿಕ ಫಲಸ್ಥಿರ ಸ್ತಂಭಮುಕ್ತಿ ಸೋಪಾನ ನಿಧಾನತ್ವವೆಂಬ 1ತ್ವಕ್ ಚರ್ಮ ಅಸ್ತಿ ಮಜ್ಜ ಮಾಂಸರುಧಿರಯುಕ್ತ ಸಪ್ತ ಧಾತುಗಳಿಹ ಶರೀರನಖಕೇಶ ಕಫ ಸ್ವೇದ ಮಲ ಮೂತ್ರಾಗರ ಈನಿಖಿಳಪಾವನ ಮಾಡುವ ನಿರಾಹಾರ2ವರವಿಪ್ರಕ್ಷತ್ರಿಯ ವೈಶ್ಯ ಶೂದ್ರ ಜನರುತರಳಯೌವನ ವೃದ್ಧ ನಾರಿಯರುಕಿರಾತಪುಲತ್ಸ್ಯಾಂದ್ರ ಹೂಣ ಜಾತಿಯವರುಹರಿವ್ರತ ಮಾತ್ರದಿ ಮುಕ್ತಿಯೈದುವರು 3ದ್ವಿಜಗೋವಧ ನೃಪರನು ಕೊಂದ ಪಾಪನಿಜಗುರು ಸತಿಯರ ಸಂಗದ ಪಾಪಅಜಲಪಾನದ ದಿನದುಂಡ ಮಹಾಪಾಪನಿಜನಾಶ ಮೋಕ್ಷ ಪ್ರಾಪ್ತಿಯು ಸತ್ಯಾಲಾಪ 4ಯಾಮಿನಿಯಲಿ ಅನಿಮಿಷದ ಜಾಗರವುಶ್ರೀ ಮದ್ಭಾಗವತ ಶ್ರವಣ ಗೀತಾಪಠಣಪ್ರೇಮವಾರಿಧಿಲಿ ಮುಳುಗಿ ಸಂಕೀರ್ತನೆಯುಧಾಮತ್ರಯದ ಸುಖಕಿದೇ ಕಾರಣವು 5ಅರ್ಧಕೋಟಿ ತೀರ್ಥಸ್ನಾನವೆಲ್ಲ ಅಜಸ್ರಪ್ರಯಾಗ ಕಾಶಿವಾಸವೆಲ್ಲ ಸಹಸ್ರ ಕೋಟಿ ಭೂಪ್ರದಕ್ಷಿಣೆಯೆಲ್ಲಸುಶ್ರದ್ಧೆ ಸಹ ಜಾಗರಕೆ ಸರಿಯಲ್ಲ 6ಪಂಚಮಹಾ ಪಾಪ ಪ್ರಪಾಪವವಗೆವಂಚಕ ಪಿಶುನ ಜನರ ಪಾಪವವಗೆಮಿಂಚುವ ಕ್ಷೇತ್ರವಳಿ ಪಾಪವವಗೆಪಂಚಕವ್ರತ ಪೆತ್ತ ವ್ರತ ಉಲ್ಲಂಘಿಪಗೆ 7ಸರ್ಪಶಯನಗೆ ನೀರಾಜನವೆತ್ತಿ ನೋಡಿಉಪವಾಸದಿ ಭಗವಜ್ಜನ ನೃತ್ಯವಾಡಿಚಪ್ಪಾಳಿಕ್ಕುತ ದಂಡಿಗೆ ಮುಟ್ಟಿ ಪಾಡಿತಪ್ಪೆ ನಾಯಿ ನರಕ ಫಲ ಕೈಗೂಡಿ 8ಶ್ರುತಿಪಂಚರಾತ್ರಾಗಮವು ಸಾರುತಿವೆಯತಿ ಮಧ್ವರಾಯರುಕುತಿ ಪೇಳುತಿವೆಕ್ರತುಪ್ರಸನ್ವೆಂಕಟ ಕೃಷ್ಣ ಮತವೆಕ್ಷಿತಿಪತಿ ಸುರರತಿಶಯದ ಸದ್ವ್ವ್ರತವೆ 9
--------------
ಪ್ರಸನ್ನವೆಂಕಟದಾಸರು
ಹರಿನಮ್ಮೊಗತನ ಮಾಡಲೀಸನೆ ಕೇಳಮ್ಮ ಇವನಚರಿಯವಾರ ಮುಂಧೇಳುವನೆ ಗೋಪ್ಯಮ್ಮ ಪತನ್ನೊಳು ತಾನೇ ರುದಿಸುತ ಬಂದ ಕಾಣಮ್ಮ | ಯಾಕೆನೆಕಣ್ಣಿನ ಬೇನೆ ಅತಿ ಕಠಿಣೆಂದಾ ಅವನಮ್ಮ |ಸಣ್ಣನಳುವಳೆ ಮೊಲೆ ಹಾಲ್ತಾ ಎಂದನಮ್ಮ | ನಿನ ಕ-ಯ್ಯನ್ನು ಮುಟ್ಟಿದಿರೆಂದುಮಾನಕೊಂಡನಮ್ಮ 1ತರುಗಳ ಬಾಲಕೆ ತರಳರ ಕೈ ಕಟ್ಟುವನಮ್ಮ | ಯನ್ನಕರದಲ್ಲಿ ಹಿಡಿ ಹಿಡಿಯೆಂದು ತೇಳಿಕ್ಕುವನಮ್ಮ ||ವರಗುವುದೆಲ್ಲಿ ನೀವೆಂದು ಕೇಳುವನಮ್ಮ | ನಿಮ್ಮಪುರುಷರು ಕಾಂಬುವಯಿಲ್ಲ ಎಲ್ಲೆಂಬುವನಮ್ಮ 2ಜೋಗೀ ರೂಪವ ತಾಳಿ ಮನೆಗೆ ಬಂದನಮ್ಮ | ನಾನುಬಾಗಿ ಸುತರಿಲ್ಲೆಂದವನ ಕೇಳಿದೆನಮ್ಮ ||ಹೋಗಲಿ ಎಲ್ಲರೂ ಮಂತ್ರವ ಕೊಡುವೆನೆಂದಮ್ಮಾ | ಕೃಷ್ಣನಾಗಿ ಇದುರಿಗೆ ನಿಂತ ಭಂಡು ಕೇಳಮ್ಮ3ನಾಕು ಬೆರಳ ತೋರಿ ತಲೆದೂಗುವನಮ್ಮ | ಇಂಥ-ದ್ಯಾಕೊ ಎಂದರೆ ಯೀಸೆ ಹಾಲ್ಕೊಡೆಂದನಮ್ಮ ||ಕಾಕುಬುದ್ಧಿಯೊಂದೆರಡೆ ಮೂರೇನಮ್ಮ | ಶ್ರೀ ಪಿ-ನಾಕಿಯಾಣೆ ಕರೆದು ಕೇಳೆ ಗೋಪ್ಯಮ್ಮ4ಮತಿಗೆಠ್ಠೆಣ್ಹುಡುಗರ ಕರೆದೊಯ್ದೋಣ್ಯೊಳಗಮ್ಮಾ | ನಾವುಸತಿಪುರುಷಾಗ್ಯಾಡುವ ಬಾ ಎಂಬೊನಲ್ಲಮ್ಮ ||ಪೃಥಿವಿಯ ಹುಡುಗರ ತೆರದರೆ ಚಿಂತಿಲ್ಲಮ್ಮ | ಇವನುಸುತರನು ಪಡೆವದು ಬಲ್ಲನೇ ಸುಳ್ಳಮ್ಮ 5ನವನೀತವ ಕೊಳ್ಳೆಂದೊದರುತ ಬಂದನಮ್ಮ | ನಾನುಹವರನ ಕಾಶಿಗೆ ಎಷ್ಟೆಂದು ಕೇಳಿದೆನೆಮ್ಮ ||ಖವ ಖವ ನಗುತಲಿ ಬದಿಬದಿಗೆ ಬಂದನಮ್ಮ | ತಕ್ಕೊಯುವತಿ ಇದರಷ್ಟೆಂದು ಕುಚ ಮುಟ್ಟುವನಮ್ಮ 6ಹಿತ್ತಲ ಕದಕೆ ಶೀ(ಕೀ)ಲ್ಯುಂಟೋ ಇಲ್ಲೆಂಬುವನಮ್ಮ | ನಮ್ಮ-ಅತ್ತೆಯ ಕಣ್ಣು ಹೋಗಲಿ ಎನಬೇಕೇನಮ್ಮ ||ಉತ್ತರ ಕೊಡದಿರೆ ಒಪ್ಪಿದೆ ಇದಕೆಂಬುವನಮ್ಮ | ಇಷ್ಟೊಂ-ದರ್ಥೆ ಪ್ರಾಣೇಶ ವಿಠಲಗೆ ಯಶೋದೆಯಮ್ಮ 7
--------------
ಪ್ರಾಣೇಶದಾಸರು
ಹರಿನೀ ಪಿಡಿದ ಕಲ್ಲವೆ ರತುನಹರಿನಿನ್ನಡಿಗಲ್ಲದವನೆ ಯವನಪ.ಹರಿನೀನೊಲಿದ ಕಪಿರಾಜ ವಿಧಿಯುಹರಿನೀನೊಲಿಯದಿರೆ ಕಪಿಗೆ ವಧೆಯುಹರಿನೀ ಗೆಲಿಸೆ ಪಾರ್ಥನಿಗೆ ಗೆಲುವುಹರಿನಿನ್ನ ಛಲದಿ ಕೌರವರಿಗಳಿವು1ಹರಿನೀ ಮೆಚ್ಚಿದರ್ಭಕರಾರ್ಯರುಹರಿನೀ ಮೆಚ್ಚದಾರ್ಯರೆ ಕಿರಿಯರುಹರಿನಿನ್ನುಚ್ಚರಿಪರು ಮಾನ್ಯರುಹರಿನಿನ್ನೆಚ್ಚರಿಲ್ಲದ ಜನರ್ಹುಚ್ಚರು2ಹರಿನೀ ಕನಕಗಿರಿಗಣುಕಲ್ಲೆನಿಪೆಹರಿನೀ ತೃಣವೆಟ್ಟ ಮಾಡುತಲಿಪ್ಪೆಹರಿನೀ ಘನಕೆ ಘನತರ ಮಹಿಮಹರಿನೀ ಪ್ರಸನ್ವೆಂಕಟಪ ಹೊರೆಯೆಮ್ಮ3
--------------
ಪ್ರಸನ್ನವೆಂಕಟದಾಸರು
ಹರಿಮಂದಿರಹರಿಮಂದಿರ ಈ ಸ್ಥಳವುಹರುಷದಿ ಚಿಂತಿಪರಿಗೆ ಪಹರಿಹರ ಬ್ರಹ್ಮಾದಿಗಳು ಪೊಗಳುತಿರೆಸುರಮುನಿ ನಾರದ ಋಷಿಗಳು ಸ್ತುತಿಸಲುಸುರರುಪುಷ್ಪ ವೃಷ್ಟಿಯ ಕರೆಯಲು ಅ-ಪÀ್ಸರಸ್ತ್ರೀಯರುನರ್ತನ ಮಾಡುವ ಸ್ಥಳಅ.ಪಸಿರಿನಾರಾಯಣ ಶೇಷಶಯನದಲಿಶಯನಿಸಿ ನಿದ್ರಿಸುತಿರೆಸಿರಿಭೂದುರ್ಗಾಂಬ್ರಣಿಯರು ಸೇವಿಸಲುನಾಭಿ ಕಮಲದಲಿಸರಸಿಜೋದ್ಭವ ಸ್ತುತಿಸುತ ಧ್ಯಾನಿಸಲುಕರಜೋಡಿಸಿ ಸುಜನರು ನಮೋ ನಮೋ ಎನೆಭರದಿ ಜಾಗಟೆಭೇರಿತಾಳ ತುತ್ತೂರಿಯುಕರದಿ ಶಂಖು ಗಂಟೆ ನಾದ ಮೊಳಗೆಹರಿಭಜನೆ ಮಾಡುತ ತದ್ಧಿಮಿಕೆನ್ನುವ ಸ್ಥಳ 1ಹರಿವೈಕುಂಠದಿ ಸಿರಿಯೊಡಗೂಡಿರಲುಭೃಗುಮುನಿ ತಾಡನದಿಸಿರಿದೇವಿ ಕೋಪಿಸಿ ಹರಿಯನು ಬಿಡಲುಸಿರಿಇಲ್ಲದೆ ಒಬ್ಬನೆ ಇರಲಾಗದೆ ವೆಂಕಟಗಿರಿಗಿಳಿತರಲುಸರಸಿಜಾಕ್ಷ ಕರಿಬೇಟೆಯ ನಾಡುತಬರುತ ಪದ್ಮಾವತಿಯನು ಮೋಹಿಸಿಕೊರವಿರೂಪತಾಳುತ ಕಣಿ ಹೇಳಲುಭರದಿ ಕಲ್ಯಾಣವು ನಡಸಿದ ಸ್ಥಳವಿದು 2ಸುರರುಅಸುರರು ಶರಧಿಯ ಮಥಿಸಿರಲುಅಮೃತವನೆ ಕಂಡುಹಿರಿ ಹಿರಿ ಹಿಗ್ಗುತ ನುಗ್ಗೆ ದಾನವರುಶ್ರೀಹರಿತಿಳಿದು ತ್ವರದಿಂದ ಮೋಹಿನಿರೂಪ ತಾಳಿಬಿರಿಬಿರಿ ನೋಡುತಲಿರೆ ದಾನವರುಸುರರಿಗೆ ಅಮೃತವನುಣಿಸುತ ಮೋಹಿನಿಪರವಶದಲಿ ಮೈ ಮರತಿರೆ ಅಸುರರುಸುರರಿಗೆ ಅಭಯವ ನೀಡಿದ ಸ್ಥಳವಿದು 3ವಿಶ್ವಾಸದಿ ತಪಗೈದ ಸುರನ ನೋಡಿಮಹದೇವರು ಒಲಿದುಭಸ್ಮಾಸುರ ಬೇಡಿದ ವರಗಳ ಕೊಡಲುನಿಜ ನೋಡುವೆನೆಂದು ಭಸ್ಮಾಸುರ ಬೆನ್ನಟ್ಟುತ ಬರುತಿರಲುವಿಶ್ವವ್ಯಾಪಕಹರಿತಾ ತಿಳಿದುತಕ್ಷಣ ಸ್ತ್ರೀ ರೂಪವ ಧರಿಸುತ ಬರೆಭಸ್ಮಾಸುರ ತನ್ಹಸ್ತದಿ ಮೃತಿಸಲುಭಕ್ತರನುದ್ಧರಿಸಿದ ಈ ಸ್ಥಳವು 4ಲೋಕ ಲೋಕದ ಜನರೆಲ್ಲರು ಕೂಡಿಪ್ರಜಾ ಕಂಟಕನಾದಮೂಕಾಸುರನನು ಗೆಲ್ಲಲು ಸಾಗದಲೆಶ್ರೀಕಾಂತನ ಪ್ರಾರ್ಥಿಸೆಮೂಕಾಂಬಿಕೆ ನಾಮದಿಂದಲಿ ಪ್ರಜ್ವಲಿಸಿಮೂಕಾಸುರನನು ವಧಿಸಿದ ಶ್ರೀ ಕೋಲಾ-ಪುರದಲಿ ವಾಸಿಸುತಲಿ ಸಂತತಶ್ರೀಕರ ಕಮಲನಾಭ ವಿಠ್ಠಲಏಕಾಂತದಿ ಭಕ್ತರ ಸಲಹಿದ ಸ್ಥಳವಿದು 5
--------------
ನಿಡಗುರುಕಿ ಜೀವೂಬಾಯಿ
ಹರಿಯ ನಂಬದ ನರನು ಗೂಡರಿತು ಇರದ ವಾನರನು ಶ್ರೀಹರಿಯ ಹೊಗಳದ ಕವಿಯು ಭೂಸುರರುಣ್ಣಿಸದ ಹವಿಯು ಪ.ಕರುಣವಿಲ್ಲದ ಅರಸ ಕಾಳೋರಗನಾಡುವ ಸರಸಮಾನಕಿಲ್ಲದ ಮಂತ್ರಿ ತಾ ಗರಹೊಡಕ ಕುಮಂತ್ರಿ 1ಮೆಚ್ಚು ನುಂಗುವ ದೊರೆಯು ಮೀವ ಬಚ್ಚಲಿನ ದೊಡ್ಡಹರಿಯು ಕೈಮುಚ್ಚಿ ನೀಡದ ದಾನ ಹುಸಿರಚನೆ ನಿಧಾನ 2ಧರುಮಕೆ ಕೂಡದ ಸತಿಯು ಯಮಪುರದಾರಿ ಸಂಗತಿಯು ಬಲುಚರಿಗ ಮತ್ಸರಿತನಯಅವ ಅರಗದ ಅಗ್ಗಣಿಯ3ಮೂರ್ಖನ ಗೆಳೆತನ ಜರ್ಜರಿತ ತಂತುವಿತಾನ ಒಣಕರಕರಿ ಕಲಹದ ನೆರೆಯು ಸಾಸಿರ ತೇಳಗಗಚ್ಚಿದ ಸರಿಯು 4ವಂಚಿತವಾದಿ ಬಂಧು ಪ್ರಾಣ ಮುಂಚಿಸುವ ವಿಷಬಿಂದು ಬಹುಕಾಂಚನದಾಸೆ ಬಳಗ ಪ್ರಪಂಚದಳತೆಕೊಳಗ5ಕೊಡದಿಟ್ಟ ಕೊಡಹಣವು ಸುಡುವ ಅಡವಿಲಿ ಬಿದ್ದ ಹೆಣವು ಬಾಯಿಬಡಕನ ಒಡಂಬಡಿಕೆ ಛಿದ್ರಿಡಿದ ಮಣ್ಣಿನ ಮಡಿಕೆ 6ಬ್ರಾಹ್ಮರಿಗುಣಿಸದಸದನದುರ್ಬೊಮ್ಮ ರಕ್ಕಸನ್ವದನಮದ್ಹಮ್ಮಿನಣ್ಣಗಳ ವಿದ್ಯಾ ಮಾಯಮ್ಮನ ಮಹನೈವೇದ್ಯ 7ಓದಿ ಮಲತ ಗುರುಶಿಷ್ಯ ಸದ್ಭೋಧಾಮೃತಪರಿಹೇಯ ಆಪ್ತಾಧಾರಿಲ್ಲದ ಅರಸೆ ಗ್ರಾಮಾದರಿಸುವ ಆಳರಸೆ 8ವೇತ್ತøವಿವರ್ಜಿತ ಸಭೆಯು ಲೋಕತ್ರಯದಲ್ಲಿ ಅಶುಭವು ಕಂಠತ್ರಾಣಿಲ್ಲದ ಗಾನ ಮುದಿ ಎತ್ತೆಳೆದಾಡುವಗಾಣ9ಹುಸಿನುಡಿವ ದೈವಜÕ ತಾ ಹಡದ ಮಗನಿಂದ ಅವಜÕ ದುರ್ವಸುಕಾಂಕ್ಷೆಯ ಭೇಷಜನು ಮಾನಿಸರ ಉಂಬ ಮಾಯಿ ದನುಜನು10ಶ್ರವಣ ಮನನ ಧ್ಯಾನವನು ಬಿಟ್ಟವನೆ ಜೀವಚ್ಛವನುಮಾಧವಪ್ರಸನ್ವೆಂಕಟಮೂರ್ತಿತನ್ನವರಿಗೆ ಕೊಡುವನುಅರ್ಥಿ11
--------------
ಪ್ರಸನ್ನವೆಂಕಟದಾಸರು