ಒಟ್ಟು 44128 ಕಡೆಗಳಲ್ಲಿ , 139 ದಾಸರು , 10983 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಖಗವರನೇ ಪಾಲಿಸೋ ಪ ಪೆಗಲೊಳು ಹರಿಯನು | ಮಿಗೆ ಭಕುತಿಲಿ ಪೊತ್ತುನಗಧರ ಬಿಂಬವ | ನಗುತ ನಖದಿ ನೋಳ್ಪ ಅ.ಪ. ವೇದೋದಿತ ಕ್ರಿಯ | ಕಾದ್ಯಭಿಮಾನಿಯೆವೇದಮಯನೆ ಹರಿ | ಗಾದೆಯೊ ವಾಹನಸಾಧಿಸಿ ಶ್ರೀಹರಿ | ಪಾದಾಂಬುಜಗಳಹಾದಿಯ ತೋರೊ ಅ | ಗಾಧ ಮಹಾತ್ಮಾ 1 ಸಾಸಿರ ಬೃಹತಿಯ | ಸೂಸಿ ನೀ ಪೊಗಳುತಸಾಸಿರ ನಾಮನು | ಕೇಶವ ನೊಲಿಮೆಯಪೋಷಿತ ನಾಗಿಹೆ | ಆಶುಗ ಹೃದಯಾಕಾಶದೊಳಿರುತಿಹ | ಶ್ರೀಶನ ತೋರಿಸಿ 2 ಪಾವಮಾನಿಸುತ | ಪಾವಿಸಿ ಮನ್ಮನಭಾ5¥5 | ಗೋವಿಂದ ವಿಠಲನ |ಪಾವನ ನಾಮ ಸು | ಭಾವನ ಉಣಿಸುತಕೋವಿದ ಸಂಗತಿ | ಈವುದು ನೀ ಸದ 3
--------------
ಗುರುಗೋವಿಂದವಿಠಲರು
ಖಗವಾಹನಾ ಜಗಮೋಹನಾ ಪ ಕಮಲಾಸನಾ ನುತಪಾವನಾ ಸುರಜೀವನಾ ಸುಮಲೋಚನಾ ಅ.ಪ ಧರಣೀಧರಾ | ಮೃಗಕಂಧರಾ ಬಲಿಗೋಚರಾ | ದ್ವಿಜಮಾವರಾ ಭುವನೇಶ್ವರಾ | ಮುರಳೀಧರಾ 1 ತ್ರಿಪುರಾಂತಕಾ | ಕಲಿನಿವಾರಕಾ ಸುರನಾಯಕಾ | ವರದಾಯಕಾ ಸರಸಿಜಾಂಬಕಾ | ಶುಭಕಾರಕಾ ಕರುಣಾಬ್ಧಿ ಮಾಂಗಿರಿ ನಾಯಕಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಖರೆ ತವಧ್ಯಾನ ಹರಿ ಬೇಗ ಮಾಡೆನ್ನಗೆ ನಿಜಮನನ ಪ ಬಾಗಿವಂದಿಪೆ ನಾ ನಿಮ್ಮ ಚರಣ ಭವ ರೋಗ ದಯದಿ ಮಾಡು ನಿವಾರಣ ಅ.ಪ ಜಾಗರಮಾಡಿದರಹುದೇನು ನಿತ್ಯ ಭಾಗವತನೋದಿದರಹುದೇನು ಯಾಗಮಾಡಿದರಹುದೇನು ಮಹ ಯೋಗ ಬಲಿಸಿದರಹುದೇನು ಸೋಗು ಹಾಕಿ ಬೈರಾಗಿ ಆಗಿ ಇಳೆಯ ಭೋಗವ ತ್ಯಜಿಸಿದರಹುದೇನು 1 ಸ್ನಾನಮಾಡಿದರಹುದೇನು ಬಹು ದಾನಮಾಡಿದರಹುದೇನು ಮೌನಮಾಡಿದರಹುದೇನು ಕೌ ಪೀಣ ಧರಿಸಿದರಹುದೇನು ಜ್ಞಾನ ಬೋಧಿಸುತ ನಾನಾದೇಶಗಳ ಮಾಣದೆ ತಿರಿಗಿದರಹುದೇನು 2 ಜಪವಮಾಡಿದರಹುದೇನು ಬಲು ಗುಪಿತ ತೋರಿದರಹುದೇನು ತಪವ ಗೈದರಹುದೇನು ಮಹ ವಿಪಿನ ಸೇರಿದರೆ ಅಹುದೇನು ಚಪಲತನದಿ ಸದಾ ಅಪರೋಕ್ಷನುಡಿದು ನಿಪುಣನೆನಿಸಿದರೆ ಅಹುದೇನು 3 ಸಾಧುವೆನಿಸಿದರೆ ಅಹುದೇನು ಚತು ಸ್ಸಾಧನಮಾಡಿದರಹುದೇನು ವೇದ ಪಠಿಸಿದರೆ ಅಹುದೇನು ಅಣಿ ಮಾದಿ ಅಷ್ಟಸಿದ್ಧಿ ಅಹುದೇನು ಓದಿತತ್ತ್ವಪದ ಛೇದಿಸಿ ಬಿಡದೆ ಬೋಧಕನೆನಿಸಿದರೆ ಅಹುದೇನು 4 ಕೋಶನೋಡಿದರೆ ಅಹುದೇನು ಬಹು ದೇಶ ನೋಡಿದರೆ ಅಹುದೇನು ಆಸನಹಾಕಿದರಹುದೇನು ಮಂತ್ರ ಅ ಭ್ಯಾಸ ಮಾಡಿದರೆ ಅಹುದೇನು ದಾಸಪ್ರಿಯ ಭಯನಾಶ ಶ್ರೀರಾಮ ನಿಮ್ಮ ಧ್ಯಾಸವೊಂದಿರೆ ಮುಕ್ತಿ ಸಿಗದೇನು 5
--------------
ರಾಮದಾಸರು
ಖಳರನು ತರಿವಾ ಬಗಳಾಂಬೆಗೆಕಮಲದಾರತಿ ಬೆಳಗಿರೆ ಪ ಅರಿ ಎಂಬ ಶಬ್ಧವು ಕಿವಿಗೆ ಬೀಳಲುಸರಿದವು ಸರಿದವು ಖಡ್ಗದಿಂ ಕೆಂಗಿಡಿಭರದಿಂದರಿಯನೆ ತುಡುಕಿಯೆ ಮುಂದಲೆತರಿದಳಾಗಲೆ ತಲೆಯ ಬಗಳಾಂಬೆಮುರಿದಳಾಗಲೆ ತಲೆಯ ಬಗಳಾಂಬೆ1 ಕಡಿಯುತ ಅವುಡನು ಅರಿಯನು ದೃಷ್ಟಿಸಿಝಡಿಯುತ ಮುದ್ಗರ ಹಿಡಿದು ನಾಲಗೆಮೃಡಹರಿ ಬ್ರಹ್ಮರು ಅಹುದಹುದೆನೆಹೊಡೆದಳಾಗಲೆ ಅರಿಯ ಬಗಳಾಂಬಪುಡಿಯ ಮಾಡಿದಳರಿಯ ಬಗಳಾಂಬ 2 ಕಾಲಲಂದುಗೆ ಗೆಜ್ಜೆ ಕಂಠಾಭರಣವುಮೇಲೆ ಸರಿಗೆವೋಲೆ ಮೂಗುತಿ ಹೊಳೆಯಲುಲೋಲ ಚಿದಾನಂದ ರೂಪಿಣಿ ಬಗಳೆಯುಪಾಲಿಸಿದಳು ಭಕ್ತರ ಬಗಳಾಂಬಲಾಲಿಸಿದಳು ಭಕ್ತರ ಬಗಳಾಂಬ 3
--------------
ಚಿದಾನಂದ ಅವಧೂತರು
ಖಾದಿ ಧರಿಸುವ ಜನಕೆ ಕ್ರೋಧವುಂಟೇ ಪ ಕ್ರೋಧ ಜೈಸಿದ ನರಗೆ ಕಲಹಗಳುಂಟೇ ಪಥ್ಯದಿಂದಿರುವವಗೆ ವ್ಯಾಧಿ ಭಯವೇ ನಿತ್ಯ ಉಪವಾಸಿಗೆ ಭತ್ತದಾ ವ್ಯಥೆಯುಂಟೇ ಚಿತ್ತ ಶುದ್ಧಿದ್ದವಗೆ ಮೈಲಿಗೆಯ ಪರವೇ 1 ಆಶೆ ಬಿಟ್ಟವನಿಗೆ ಅರಸರಾಭಯವುಂಟೆ ದಾಸನಾದವನಿಗೆ ದೋಷವುಂಟೆ | ದೇಶ ಉದ್ಧಾರಕಗೆ ಸೆರೆಮನೆಯ ಭಯವುಂಡೆ ಪೂಶರನ ಗೆದ್ದವಗೆ ಕಾಮಿನಿಯ ಭಯವೇ 2 ಗೀತಾರ್ಥ ತಿಳಿದವಗೆ ಪಾತಕದ ಭಯವುಂಟೆ ಶೀತೋಷ್ಣ ಸಹಿಸುವವಗೆ ಛಳಿ ಬಿಸಿಲು ಭಯವೆ | ನೀತಿ ಕೋವಿದರಿಗೆ ಜಾತಿ ಪಕ್ಷಗಳುಂಟೆÉ ದಾತನಿಗೆ ದುರ್ಭಿಕ್ಷು ಭೀತಿ ತಾವುಂಟೆ 3 ವಿದ್ಯಾಭಿಲಾಶೆಗೆ ತೇರ್ಗಡೆಯ ಭಯವುಂಡೆ ಉದ್ಯೋಗವಿದ್ದವಗೆ ಉದರ ಭಯವೇ ಯುದ್ಧ ಶೂರರಿಗೆಲ್ಲ ಮದ್ದುಗುಂಡಿನ ಭಯವೇ ಬುದ್ಧಿವಂತರಿಗೆಂದಿಗಪಮಾನ ಭಯವೇ 4 ನೇಮದಿಂದಲಿ ನಡೆವವಗೆ ಸೋಮಾರಿತನವುಂಟೆ ಭೂಮಾತೆ ಮಕ್ಕಳಿಗೆ ಕ್ಷಾಮವುಂಟೆ ಸಾಮಗಾನವಿಲೋಲ ಶಾಮಸುಂದರವಿಠಲ ನಾಮ ನೆನವವಗೆ ಯಮಧಾಮದಂಜಿಕೆಯೇ 5
--------------
ಶಾಮಸುಂದರ ವಿಠಲ
ಖುಲ್ಲ ಮಾತುಗಳು ನಿಲ್ಲದಾಯುಷ್ಕೀರ್ತಿ ಎಲ್ಲರೊಳು ಕೇಳಿ ಪ ಅರಸು ಸಣ್ಣವನೆಂದು ಸರಸವಾಡಲು ಸಲ್ಲ ಕರೆಸಿ ಕೇಳದ ಮಾತು ಆಡಸಲ್ಲ ಪರಸಖರ ಮನೆಯೊಳಗೆ ಇರಿಸಿಕೊಂಡಿರ ಸಲ್ಲ ಬೆರೆಸಿ ಬಹ ಪಾತಕರ ಅರಸುವರೆ ಸಲ್ಲ 1 ಹಗಲು ಕಳ್ಳನ ಕೈಯ ಜಗಳವಾಡಲು ಸಲ್ಲ ಹಗೆಯೊಡನೆ ಸ್ನೇಹವನು ಮಾಡಸಲ್ಲ ಜಗಳಗಂಟಿಕ್ಕುವನ ಮೊಗದೊಳಗೆ ನಗೆಯಿಲ್ಲ ಅಗಲಿ ಪೋಗುವೆನೆಂಬ ಮಗ(ನು) ಸೊಗ(ಸ)ಲ್ಲ 2 ಒಡೆಯನಿಲ್ಲದ ಊರು ಬಡವರಿಗೆ ಅಳವಲ್ಲ ಕಡು ಚೆಲ್ವೆ ಕುರುಡನಿಗೆ ಮಡದಿಯಹ ಸಲ್ಲ ನುಡಿಯ ತಿಳಿಯದೆ ಇಹನ ಸಾಕ್ಷಿಯನು ಇಡ ಸಲ್ಲ ದೃಢವಾದ ಮೂರ್ಖನೊಳು ಕದನ ಮಾತಿಲ್ಲ 3 ಹರಿದಾಸರೆನಿಸಿದರೆ ಪರಗತಿಯೊಳೆರವಿಲ್ಲ ಗುರುಹಿರಿಯರಾದವರ ಜರೆಯ ಸಲ್ಲ ಕರಕರೆಯ ಬದುಕಿನೊಳು ಬರುವ ಉಡುಗೊರೆಯಿಲ್ಲ ಪರಿ ಸಲ್ಲ 4 ಹರಿಯು ಮುನಿದರೆ ಮರೆಯೊಳಿರಿಸಿ ಕೊಂಬುವರಿಲ್ಲ ಹರಿಯೊಲಿದ ನರನೊಳಗೆ ಗೆಲುವ ಪರಿಯಿಲ್ಲ ವರಾಹ ತಿಮ್ಮಪ್ಪನಿರಲು ಬಲ್ಲ ನರನು ಹರಿದೂಷಕರ ಸರಿಯೊಳಗೆ ನಿಲ್ಲ 5
--------------
ವರಹತಿಮ್ಮಪ್ಪ
ಖೋಡಿಗುಣ ಜಗದಲ್ಲಿ ಹೂಡಿ ನೀ ನಲಿವಾಗ ನಾಡೆದ್ದು ಕುಣಿಯುವದೊ ನಾಸ್ತಿಕಾದಲ್ಲಿ ಪ ಮಾಡಿ ದುಪ್ಕ್ರಿಯ ಜಾಲ ಮತಿಭ್ರಷ್ಟತನದಲ್ಲಿ ನೋಡರೂ ಸನ್ಮಾರ್ಗ ಗಾಡಿಕಾರನೆ ಹರಿಯೆ ಅ.ಪ ಗತಿಸಿದಾ ತನುಗಳಲಿ ರತಿವಿಷಯಗಳ ಮಾಡಿ ಮತಿ ಮನಸು ದುರ್ಭಾವಗಳಲಿ ನೆಯದು ಮತ್ರ್ಯರನು ನೋಡಲತಿ ಭೀತಿ ಆಹುದೊ ಮನಕೆ 1 ನಾನಾಭಾವವ ಪೊಂದಿ ಹಾನಿವಶರಾಗಿಹರು ಜ್ಞಾನನಿಧಿ ತವಕರುಣಕೆರವಾಗಿ ನಡೆದು ನಾನಾ ದುಃಖದಿ ನರಳಿ ನರಕ ಯಾತನೆಗೊಂಬ ಜ್ಞಾನಹೀನರ ನೋಡಿ ನಡುಗುವೆನೊ ಹರಿಕಾಯೊ 2 ಕ್ವಚಿತು ಸಜ್ಜನ ತಾವು ಶುಚಿ ಮನದಿ ನಿನ್ನಲ್ಲಿ ರುಚಿಗೊಳಲು ಎತ್ತೆನಿಸೆ ಎದೆ ಬಿಚ್ಚುವಂತೆ ಹೆಚ್ಚಿ ಆದಿವ್ಯಾಧಿ ನುಚ್ಚು ಮಾಳ್ಪದೊ ಮನಸು ಸಚ್ಚಿದಾನಂದ ಹರಿ ಸಜ್ಜನಾಧಾರಿ ಧೊರಿ3 ವಿಧಿ ಲಕ್ಷ್ಮಿ ಸನ್ನತ ಮಹಿಮ ಬಂದ ಭಯಗಳು ನಿನ್ನ ಇಚ್ಛೆಯಿಂದ ಬಂದದಲ್ಲದೆ ಬೇರೆ ಒಂದು ಕಾರಣ ಕಾಣೆ ಸಿಂಧು ಕೊಡುವವ ನೀನೆ4 ತಾಮಸರ ವಿಕಾರ ದುಃಖರಸÀ ಸೃಜಿಸುವುದು ಸೌಮ್ಯ ಜನ ಸದ್ಭಾವ ಸುಖಸಾರ ಸೃಷ್ಟಿ ಕಾಮಧೇನು ಜಯೇಶವಿಠಲಯ್ಯ ನಿನ್ನ ಮಹ ನೇಮ ಇಂಥಾದ್ದೆ ಪತಿತ ಪಾವನ ಪಾಹಿ 5
--------------
ಜಯೇಶವಿಠಲ
ಗÀಣೇಶ ಪ್ರಾರ್ಥನೆ ಗಜಮುಖ ವಂದಿಸುವೆ ಕರುಣಿಸಿ ಕಾಯೊ ಪ.ಗಜಮುಖ ವಂದಿಪೆ ಗಜಗೌರಿಯ ಪುತ್ರಅಜನ ಪಿತನ ಮೊಮ್ಮಗನ ಮೋಹದ ಬಾಲಅ.ಪ.ನೀಲಕಂಠನ ಸುತ ಬಾಲಗಣೇಶನೆಬಾರಿ ಬಾರಿಗೆ ನಿನ್ನ ಭಜನೆ ಮಾಡುವೆನಯ್ಯ 1 ಪರುವತನ ಪುತ್ರಿ ಪಾರ್ವತಿಯ ಕುಮಾರಗರುವಿಯಾ ಚಂದ್ರಗೆ ಸ್ಥಿರಶಾಪ ಕೊಟ್ಟನೆ 2 ಹರಿಹರರು ನಿನ್ನ ಚರಣ ಪೂಜೆಯ ಮಾಡಿದುರುಳ ಕಂಟಕರನು ತರಿದು ಬಿಸುಡಿದರಯ್ಯ 3 ಮತಿಗೆಟ್ಟ ರಾವಣ ಪೂಜಿಸದೆಸೀತಾಪತಿ ಕರದಿಂದಲಿ ಹತವಾಗಿ ಪೋದನು 4 ವಾರಿಜನಾಭ ಶ್ರೀ ಹಯವದನನ ಪದಸೇರುವ ಮಾರ್ಗದ ದಾರಿಯ ತೋರಿಸೊ5
--------------
ವಾದಿರಾಜ
ಗಂಗಾ ಗಂಗಾ ಎಂದು ನಿನ್ನ ಸಾನ್ನಿಧ್ಯದಲ್ಲಿಯೇಇರುವೆನೋ? ಸುಖದಿ ಗಂಗಾ ಪಧರೆಗೊಪ್ಪುವ ಹಾರ'ದೆಂಬಂದದಿಮೆರೆಯುತ್ತಿರುವಾ ಪರಮಪಾವನೆಯೆ 1ಸುರಲೋಕಕೆ ಹತ್ತುವದನು ಸೂಚಿಸುತಿರುವ ಪತಾಕೆಯ ಪರಿಯಳೊಪ್ಪಿರುವ2ಹರಿಚರಣಾಂಬುಜದಿಂದ ಹೊರಡುತಹರನಶಿರಸ್ಯಂ ಹರಿಯುತಾ ಇರುವ 3ಮುಳುಗಿದವರ ಪಾಪಗಳನೆಲ್ಲವನುತೊಳೆಯುವ ಚಿನ್ಮಯೆ ಕಲಿಮಲಾಪಹರೆ 4
--------------
ಹೊಸಕೆರೆ ಚಿದಂಬರಯ್ಯನವರು
ಗಂಗಾ ಜನಕ ವಿಠಲ | ಅಂಗನೆಯ ಪೊರೆಯೋ ಪ ಮಂಗಳಾಂಗನೆ ದೇವ | ರಂಗ ಭವಹಾರೀ ಅ.ಪ. ವೈರಾಗ್ಯ ಭಾಗ್ಯಗಳ | ಹಾರೈಸುವಂತೆಸಗೋಸಾರಸುಖ ಸಾಂದ್ರ ಹರಿ | ಮಾರಮಣ ದೇವಾ |ಘೋರ ಭವವೆನಿಪ ಕೂ | ಪಾಠ ದಾಟಿಸೊ ಹರಿಯೆಕಾರುಣ್ಯ ಶರಧಿತವ | ಓರೆ ನೋಟದಲೀ1 ಗಣನೆಗೊಳಗಾಗದಿಹ | ಜನನ ಮರಣವು ಬರಲಿತನು ಮನದ ಸಂತಾಪ | ಅಣು ಬೃಹತು ಇರಲೀಗುಣ ಪೂರ್ಣ ಶ್ರೀಹರಿಯೆ | ಗಣನೆಗದು ಸಿಗದ ತೆರಅನನುತನೆ ನಿನ್ನ ಕಾರುಣ್ಯ ಒಂದಿರಲೀ 2 ಅಂಗನೆಗೆ ಸ್ವಪ್ನದಲಿ | ಗಂಗೆ ಮೀಯಿಸಿ ಬಾಲಸಂಗದಲಿ ಧವಳಾಖ್ಯ | ಗಂಗೆ ಸೋಪಾನಾಭಂಗ ವಿಲ್ಲದೆ ಯೇರಿ | ಮಂಗಳಾಂಗೆರ ಕಂಡುಶಿಂಗರದಿ ಪೂಜಿಸಿಹ | ಅಂಗನಾ ಮಣಿಯಾ 3 ಉಚ್ಚ ನೀ ಚಂಗಳನು | ಸ್ವಚ್ಛ ತಿಳಿಸುತ್ತಿವಳಕೃಚ್ಛ್ರಕೇ ಒಲಿಯುತ್ತ | ಲಕ್ಷ್ಮೀ ರಮಣಾಅಚ್ಚ ಭಕುತಿ ಜ್ಞಾನ | ನಿಚ್ಚಳದ ಮನವಿತ್ತುಸಚ್ಚಿದಾನಂದಾತ್ಮ | ಉಚ್ಚಳೆಂದೆನಿಸೋ 4 ವಿಷ್ಣು ಪದಿಧರಸಖನೆ | ದಶರಥಾತ್ಮಜ ಹರಿಯೆಯಶವಂತೆ ಗೃಹಿಣಿ ತವ | ಎಸೆವಪದ ಬಿಸಜವನು ಹಸನು ಸೇರಿಸೊಗುರೂ ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗಂಗಾ ಭಾಗೀರಥೀ ಮಂಗಳಾಂಗಿ ಅಳಕನಂದನ ನೀ ಮಹಾ ಸುಂದರಾಂಗಿ ಸಿಂಧುರಾಜನ ರಾಣಿ ಸಿರಿಯು ಸಂಪತ್ತು ಕೊಡು ಕಂಗಳಿಂದಲಿ ನೋಡಿ ಕರುಣಿಸೆನ್ನ ಪ ಕಾಶಿ ಪಟ್ಟಣದಲಿ ವಾಸವಾಗಿ ಸರಸ್ವತಿಯನು ಕೂಡಿ ನೀ ಸರಸವಾಗಿ ಸೋಸಿಲಿಂದಲಿ ಸೂರ್ಯಪುತ್ರಿ ಯಮುನೆಯನು ಕೂಡಿ ಉ- ಲ್ಲಾಸದಿದ್ಹರಿದು ವಾರ್ಣಾಸಿಗ್ಹೋಗಿ 1 ಹಾಲಿನಂತೆ ಹರಿವೊ ಗಂಗೆ ನೀನು ನೀಲದಂತಿದ್ದ ಯಮುನೆಯನು ಕೂಡಿ ಲೀಲೆಯಿಂದಲಿ ಸರಸ್ವತಿಯನು ಕೂಡಿ ಓಲ್ಯಾಡುತ ಬಂದೆ ಒಯ್ಯಾರದಿಂದ 2 ಭಗೀರಥನ ಹಿಂದೆ ನೀ ಬಂದೆ ಓಡಿ ಸಗರನ ಸುತರ ಉದ್ಧಾರ ಮಾಡಿ ಜಗವ ಪಾವನ ಮಾಡೋ ಜಾಹ್ನವಿಯೆ ನೀ ಎನ್ನ ಮಗುವೆಂದು ಮುಂದಕೆ ಕರೆಯೆ ತಾಯಿ 3 ಬಿಂದುಮಾಧವ ವೇಣುಮಾಧವನ್ನ ಆ- ನಂದ ಭೈರವ ಕಾಳ ಭೈರವನ್ನ ಚಂದದಿಂದ್ವಿಶ್ವನಾಥನ್ನ ಗುಡಿಮುಂದೆ ಹೊಂದಿ ಹರಿದ್ಹನುಮಂತ ಘಾಟಿನ್ಹಿಂದೆ 4 ಪೊಡವಿ ಮ್ಯಾಲಿಂಥ ಸಡಗರದಿ ಹರಿದು ಕಡಲಶಯನನ್ನ ಕಾಲುಂಗುಷ್ಠದ ಮಗಳು ಕಡಲರಾಣಿಯೆ ಕಯ್ಯ ಪಿಡಿಯೆ ನೀನು 5 ಮರದ ಬಾಗಿಣ ಕುಂಕುಮರಿಷಿಣವು ಗಂಧ ಪರಿಪರಿಯಿಂದ ಪೂಜೆಯಗೊಂಬುವಿ ಸ್ಥಿರವಾದ ಮುತ್ತೈದೆತನ ಜನುಮ ಜನುಮಕ್ಕು ವರವ ಕೊಟ್ಟು ವೈಕುಂಠವನು ತೋರಿಸೆ 6 ಮಧ್ಯಾಹ್ನದಲಿ ಮಲಕರ್ಣಿಕೆಯ ಸ್ನಾನ ಶುದ್ಧವಾಗಿ ಪಂಚಗಂಗೆಯಲಿ ಭವ ಸ- ಮುದ್ರವನು ದಾಟಿಸೆ ಭಾಗೀರಥಿ 7 ಸುಕೃತ ಒದಗಿತೆಂದು ಗಂಗ ಭೆÀಟ್ಟಿಯಾಗೊ ಪುಣ್ಯ ಬಂದಿತಿಂದು ಚಕ್ರತೀರ್ಥದ ಸ್ನಾನ ಸಂಕಲ್ಪದ ಫಲವ ಕೊಟ್ಟು ರಕ್ಷಿಸು ತಾಯಿ ತರಂಗಿಣಿ 8 ಸಾಸಿರ ಮುಖದಿ ಶರಧಿಯನು ಕೂಡಿ ಹೋಗಿ ಬಾ ಊರಿಗೆ ಭಕ್ತಿಮುಕ್ತಿ ನೀಡಿ ನೀನು ಭೀಮೇಶ ಕೃಷ್ಣನಲಿ ಹುಟ್ಟಿದ್ದು ಪಾದವನು ತೋರೆನ್ನ ಪೊರೆಯಬೇಕೆ 9
--------------
ಹರಪನಹಳ್ಳಿಭೀಮವ್ವ
ಗಂಗಾಜನಕಗೆ ಮಂಗಳಾರುತಿಯನೆತ್ತಿ ಮಂಗಳಾಂಗಿಯರು ಸಂಗೀತ ಪಾಡುತ ಪ ಅನಿಮಿಷೇಶನು ಆನಂದಾತ್ಮಾ ಪ್ರಾಕೃತನು ಅನಿಲವಾಸಾನಂತಾನಂತಾನಂತನಂತರೂಪನು 1 ಲಕ್ಷ್ಮೀವಾಸನು ಕುಕ್ಷಿಯೊಳ್ ಬ್ರಹ್ಮಾಂಡಧರನು ಲಕ್ಷಣಗ್ರಜನು ಸುಕ್ಷೇಮದಿಂದಿಡುವ ನಾಮ 2 ಕರುಣಪೂರ್ಣನು ಸ್ಮರಿಪರ ಭವವಿದೂರ ಸರಿಮಿಗಿಲಿಲ್ಲದ ಸಿರಿವಿಠಲ ನಾಮಧೇಯ 3
--------------
ಸಿರಿವತ್ಸಾಂಕಿತರು
ಗಂಗಾಧರ ಸ್ಮರತ್ರಿಪುರಹರ ದೇವಪ ಅಂಗಜಹರ ಭಸಿತಾಂಗ ಮಹಾಲಿಂಗ ತುಂಗಮಹಿಮ ಮೃಗಾಂಶಮೌಳಿ ಶಿವ ಅ.ಪ ಭೂತೇಶ ಸದ್ಯೋಜಾತ ಪ್ರದ್ಯುಮ್ನಸುತೆಯಸುತ ಮತಿಯ ಪ್ರದಾತ ಸದಮಲಮೂರುತಿ ಹೃದಯಸದನದೊಳು ವಿಧಿಪಿತನಂಘ್ರಿಯ ಸ್ಮರಣೆಯ ಕರುಣಿಸು 1 ಪ್ರಮಥಶ್ರೇಷ್ಠರ ಸಂಸೇವಿತ ಸುಮನಸರ ಪ್ರೀತ ಹೈಮವತಿಯ ಪ್ರೀತಾ ರಮಾರಮಣಗೆ ಅತಿಭಕುತಾ ನೀ ಮನೋಭಿಮಾನಿಯೆ ಖ್ಯಾತಾ ತಾಮಸರೊಳು ತಮಸಾಧನ ಮಾಡಿಸಿ ನೀ ಮೋಹಿಪ ದೇವ ಶೂಲಿ ಕಪಾಲಿ 2 ಶುಕದೂರ್ವಾಸಸ್ವರೂಪ ಜೈಗೀಷರೂಪ ವೈಕಾರಿಕಾದಿ ತ್ರೈರೂಪ ಲೋಕನಾಥÀ ಶ್ರೀವೆಂಕಟೇಶನ ಹೃತ್ಕಮಲದಿ ನಲಿಸುವ ಫಾಲನೇತ್ರ ಶಿವ 3
--------------
ಉರಗಾದ್ರಿವಾಸವಿಠಲದಾಸರು
ಗಂಗಾನದಿ ಬಾರೆ ಬಾರಮ್ಮ ಜಾನ್ಹವೀದೇವಿಹರಿಭಕುತರ ಕಾಯಿ ಪ ಬಾರೆ ಬಾರೆ ಪುರವೈರಿ ಸಿರಸ್ಥಿತೆಮೂರು ಲೋಕಗಳ ವಾರಣ ಮಾಡುವಿ ಅ.ಪ. ನೀರಜ ಶುಭವಸ್ತ್ರೆಸಾರಸಾಯತ ಸುಂದರ ನೇತ್ರೇಚಾರು ಸುರಗಿ ಮುತ್ತಿನ್ಹಾರ ಕುಂಡಲನೊಸ-ಲ್ಹೀರ ಮಸ್ತಕವಿದು ಸಾರಸಭೂಷೆ 1 ಹರಿಯಾ ಸ್ನಾನೋದಕದಲಿ ನೀನಿರುವಿವರ ವೀಳ್ಯದಲಿರುವಿಹರಿಯಾ ತರುಣಿಯನೆ ನೀ ಪಡೆದಿರುವಿ2
--------------
ಇಂದಿರೇಶರು
ಗಂಗಾನದಿ ಮಂಗಳಂ ಜಯತು ಭಾಗೀರಥಿಗೆ ಜಯ ಮಂಗಳಂ ಯಮುನೆ ಸರಸ್ವತಿಗೆ ಪ ವಾಮನರೂಪಿಲಿ ದಾನವ ಬೇಡಿ ಪ್ರೇಮದಿಂ ಪಾದವ ಮೇಲಕ್ಕೆ ನೀಡಲು ನೇಮದಿಂ ತಡೆದು ಬ್ರಹ್ಮಾಂಡದಿಂದ ಸುಮ್ಮಾನದಿಂ ಪೊರಟು ಬಂದ ದೇವಿಗೆ 1 ಹರಿಯ ಪಾದದಲಿ ಉದ್ಭವಿಸಿದ ಗಂಗೆಗೆ ಹರನ ಶಿರದಲ್ಲಿ ವಾಸವಾದವಳಿಗೆ ಧರಿಣಿಗೆ ಇಳಿದು ಬಂದ ದೇವಿಗೆ 2 ಭಾಗೀರಥಿ ಎಂಬೊ ಪೆಸರು ಪೊತ್ತು ಅವನ ಭಾಗಿಗಳಿಗೆ ಮೋಕ್ಷವನಿತ್ತು ಹರುಷದಿ ಯೋಗಿಗಳು ಸ್ತುತಿಪ ಗಂಗಾದೇವಿಗೆ 3 ಜಾಹ್ನವಿ ಎನಿಸಿದೆ ಜಗದೊಳಗೆ ಜನರಿಗೆ ಜನನ ಮರಣ ಕೊಡದೆ ಬಿಡಿಸಿ ಜಾಣತನದಿ ಮುಕ್ತಿ ಕೊಡುವವಳಿಗೆ 4 [ದೃಡದಿ ] ಬಲಭಾಗದಿ ಭಗೀರಥಿ ಬರುತಿರೆ ಯೆಡದ ಭಾಗದಲಿಯಮುನೆ ಬರುತಿರಲು ನಡುವೆ ಸರಸ್ವತಿ ತ್ರಿವೇಣಿಯೆಂದೆನಿಸಿ ಪೊಡವಿಗಧಿಕವಾಗಿ ಮೆರೆಯುವ ದೇವಿಗೆ 5 ಬಂದು ಭಾಗೀರಥಿಗೆ ವಂದನೆಗಳ ಮಾಡಿ ತಂದು ಪುಷ್ಪವ ತುಳಸಿ ಕ್ಷೀರವನು ಚಂದದಿಂ ಪೂಜೆಮಾಡಿ ವೇಣಿಮಾಧವಗೆ ಅಂದು ವಂದಿಸಿದವರಿಗೆ 6 ಸೃಷ್ಟಿಯ ಮೇಲುಳ್ಳ ಜನರೆಲ್ಲರು ಬಂದು ಇಷ್ಟಾರ್ಥಗಳನು ಕೊಡುವೆನೆಂದೆನುತಲೆ ಪಾದ ತೋರಿಸುವಳು 7
--------------
ಯದುಗಿರಿಯಮ್ಮ