ಒಟ್ಟು 6084 ಕಡೆಗಳಲ್ಲಿ , 127 ದಾಸರು , 4047 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲೋಕನೀತಿಯ ಪದಗಳು ಚರಣಕಮಲ ಭಜಿಸೋ ಗೋಪಾಲಕೃಷ್ಣನ ಪ ತರುಣಿಯರ ಮನವನು ಮರುಳುಗೊಳಿಸಿದ ಪರಮ ಸುಂದರನ ಧರಿಯೊಳಗೆ ಭಾಸ್ಕರಪುರ ಸುಮಂದಿರನೆಂದು ಕರೆಸುವನ ಕರಿರಾಜವರದನ ಅ.ಪ ಕ್ಷೋಣೆ ಗೀರ್ವಾಣರಿಂದಲಿ ಪೂಜೆಗೊಂಬುವನಾ ಮಾನಸದಿ ತನ್ನನು ಧೇನಿಪರ ಸುರಧೇನು ಎನಿಸುವನಾ ಗಾನವನು ಕೇಳುವ ಧೇನು ವತ್ಸಗಳಿಂದ ಶೋಭಿತನಾ ವೇಣುಗೋಪಾಲನ 1 ವಂದನೆಯ ಮಾಳ್ಪರ ಬಂಧ ಬಿಡಿಶ್ಯಾನಂದ ನೀಡುವನಾ ಮಂದರದಿ ಗಣಪತಿ ಗಂಧವಾಹನರಿಂದ ವಂದಿತನಾ ಮಂದಜಾಸನ ಮುಖ್ಯ ಸುರಗಣದಿಂದ ಸೇವಿತನಾ ಸಿಂದೂರವರದನ 2 ಕೃಷ್ಣಾ ಅಷ್ಟಮಿಯ ಉತ್ಸವ ಮಾಳ್ಪ ಭಕುತರನಾ ಸೃಷ್ಟೀಶನಿವನೆಂದರಿಂದ ಮಹಿಮೆಯ ಪಾಡಿಪೊಗಳುವನಾ ಕಷ್ಟವನು ಪರಿಹರಿಸ್ಯವರ ಸಕಲಾಭೀಷ್ಠಗರಿಯುವನಾ ಪರಮೇಷ್ಠಿ ಜನಕನ 3 ಗರಿಯೆ ಗೋಗಳನಾ ಗಿರಿಯ ಧರಿಸಿದನಾ ಇದ ಕೃಷ್ಣನ್ನ ಪೂಜಿಸಲು ಒಲಿದನ 4 ಶರಣಾಗತ ಜನರ ಪೊರೆಯಲು ಬಂದುನಿಂತಿಹನಾ ಕಾ ರ್ಪರ ಕ್ಷೇತ್ರದಿ ಮೆರಿವ ತರುಪಿಪ್ಪಲ ಸುಮಂದಿರನ ಸುರವಿನುತ ಸಿರಿನರಹರಿಯ ರೂಪಾತ್ಮಕನು ಎನಿಸುವನು ತುರುಪಾಲ ಕೃಷ್ಣನ 5
--------------
ಕಾರ್ಪರ ನರಹರಿದಾಸರು
ಲೋಕಪಾಲನೆ ನಾಕವಂದ್ಯನೆ ಸಾಕುಬಿಡು ಚಲವಾ ಯಾಕೆ ಕೋಪ ದೀನ ನಾನೆಲೈ ಶ್ರೀಕರ ಸುಗುಣಾ ಪ ಕಾವರಿಲ್ಲವೋ ದೇವ ದೇವನೆ ಭಾವಜಾತಪಿತನೆ ಜೀವಕೋಟಿಯ ಜೀವರಾಶಿಯ ಪಾವನಾಂಗನೆ ಅ.ಪ ಪರರ ನಾನುಪರಿಚರಿಸಲಿಲ್ಲವೋ ದುರುಳಭಾವದಿ ಪರರ ಹಿಂಸೆಗೈದು ಎನ್ನ ಉದರ ಪೊರೆದೆನೋ 1 ವೇದಗಳ ನಾನೋದಿ ಅರಿಯೇ ಸಾಧು ಸಂಗಮ ಭೇದಗೈದೆ ಗರ್ವದಿಂದೆ ವೇದವೇದ್ಯನೆ 2 ಗಂಗಜನಕ ತುಂಗ ವಿಕ್ರಮ | ಮಂಗಳಾಂಗನೇ ಮಾಂಗಿರೀಶ ನಿನ್ನ ನಾಮಭೃಂಗವ ತೋರೈ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಲೋಕೇಶನೆನಿಪ ಶ್ರೀಗುರು ಸಿದ್ಧೇಶ್ವರಗೆ ಪ ನೀ ಕಮಲಮುಖಿ ಆಋವೈರಿಯ ನೇಕ ಮೈಯ್ಯಾಳು ಸುತ್ತಿಕೊಂಡು ವಿ ವೇಕವಿಲ್ಲದೆ ವಿಷವನುಂಡ ಪಿನಾಕಧರÀನಿಗೆ ಸೋಲುವರೆ ನೀ ಜಗವ ಮೋಹಿಪ ಮಾನಿನೀ ಮಣಿಯೇ ಅ.ಪ. ಶಿರದೊಳು ಶಶಿಯ ಕೆಂಜೆಡೆ ಇಹ ಜೋಗಿ ಸ್ಮರನ ದಹಿಸಿ ಭಸ್ಮ ಹಣೆಗಿಟ್ಟ ಯೋಗಿ ಇರುವರೆ ಸ್ಥಳವಿಲ್ಲದಂತೆ ತಾ ಪೋಗಿ ಮೆರೆವ ಸ್ಮಶಾನ ಮಂದಿರಕನುವಾಗಿ ಮರುಲು ಭೂತ ಪಿಶಾಚ ಯಕ್ಷರ ನೆರವಿಯಲಿ ಕುಣಿಕುಣಿದು ಬ್ರಹ್ಮನ ಶಿರವಿಡಿದು ತಿರಿದುಂಬ ಗೊರವಗೆ ಬರಿದೆ ತಿಳಿಯದೆ ಜಗವ ಮೋಹಿಪ ಮಾನಿನೀ ಮಣಿಯೇ 1 ಮಂಡೆಯೋಳ್ ಜಾನ್ಹವಿ ಶಶಿಯನ್ನೆ ಸೂಡಿ ರುಂಡಮಾಲೆಯ ಕೊರಳೊಳಗಿಟ್ಟಪಚಾಡಿ ಕುಂಡಲಿಗಳಾ ಧರಿಸಿರುವನ ನೋಡಿ ಖಂಡ ಪರಶುವೆಂದು ಅವನ ಕೊಂಡಾಡಿ ಧಿಂಡೆಯಾಗಿಹ ಪ್ರಾಯದವಳು ನೀ ನೀನವನನೊಲಿದೆ ಪ್ರ ಚಂಡೆ ಪಾರ್ವತಿ ಜಗವ ಮೋಹಿಪ ಮಾನಿನೀ ಮಣಿಯೇ 2 ಕರದಿ ತ್ರಿಶೂಲ ಧಮರುಗಳ ಧರಿಸಿರುವಾ ಕಂಚರ್ಮಾಂಬಕ ಪುಲಿದೊಗಲುಟ್ಟು ಮೆರೆವಾ ಹಿರಿಯತನಕೆ ವೃಷಭವನೇರಿ ಬರುವಾ ಶಿರಿಯ ಹೊಗಾಡಿ ಫಕೀರನಂತಿರುವಾ ವಿರಚಿಸಿದ ಲೀಲಾವಿನೋದದ ಪರತರ ಶ್ರೀ ಪ್ರಣವರೂಪನ ಗುರುವಿಮಲಾನಂದ ತೊಟ್ಟಿದ ಗುರು ಸಿದ್ಧೇ ಶ್ವರನೆಂದು ತಿಳಿಯದೆ ಜಗವ ಮೋಹಿಪ ಮಾನಿನೀಮಣಿಯೇ 3
--------------
ಭಟಕಳ ಅಪ್ಪಯ್ಯ
ವಂಚನೆಲ್ಲಿಹುದಯ್ಯ ವೈಕುಂಠಪತಿ ಗೊಂಚನೆಲ್ಲಿಹದಯ್ಯ ಪ ವಂಚನೆಲ್ಲಿಹ್ಯದು ವಿರಂಚಿತಾತನಿಗೆ ಕಿಂಚಿತ್ತು ಧ್ಯಾನಕ್ಕಾಗೊಂಚನಿಲ್ಲದೆ ಬಂದ ಅ.ಪ ಚರಣದಾಸರೆಂದು ಪಾಂಡವರ ತುರಗಕಾಯ್ದ ನಿಂದು ನರಗೆ ಬೆಂಬಲನಾಗಿ ತಿರುಗಿದ ಧುರದಲಿ ಜರ ಮರೆಯಾಗದೆ ಪರಮಕರುಣಾಕರ 1 ಜಾಗುಮಾಡುತಲಿವ ಭಕ್ತರ ಯೋಗಕ್ಷೇಮ ತಿಳಿವ ನೀಗದಂಥ ಮಹಾಭೋಗಭಾಗ್ಯವಿತ್ತು ಬಾಗಿಲ ಕಾಯ್ದನು ಸಾಗರನಿಲಯ 2 ಜಾರನೆನಿಸಿಕೊಂಡ ಒಲಿದು ಚೋರನೆನಿಸಿಕೊಂಡ ತೋರಿದವರ ಮನಸಾರ ವರವಿತ್ತು ಭೂ ಭಾರವಿಳುಹಿದ ನಮ್ಮ ಧೀರ ಶ್ರೀಗುರುರಾಮ 3
--------------
ರಾಮದಾಸರು
ವತ್ಸರ ಸಾರ್ಥಕವಾಗಲಿಪಾರ್ಥ ಸಖನ ಗುಣ ಕೀರ್ತಿಸುತಾ ಪ ಅರ್ಥಿಯಿಂದ ಹರಿಕೀರ್ತನೆ ಮಾಡಲುಆರ್ತೇಷ್ಟದ ಸಕಲಾರ್ಥವ ಕೊಡುವ ಅ.ಪ. ವತ್ಸರ ಸಾರಿತು ಹಿಂದೆಸಾರಿತು ನಮ್ಮಾಯುವು ಮುಂದೇ |ವಾರಿಜಾನಾಭನ ಸೇರಿ ಭಜಿಸಲುಸೇರಲಿಲ್ಲ ನಾವ್ ದಿನ ಒಂದೇ1 ತಂದೆ ವೆಂಕಟನ ಪ್ರೇಮದ ದಾಸರುಸಂದೇಶವನೆ ಕಳುಹಿಸದರೂಇಂದಿರೆಯರಸನ ಭಕ್ತ ವೃಂದದಿಛಂzಸÀದಿ ಭಜಿಸೆಂದರುಹಿದರೂ 2 ಇಂದಿನಿಂದಾದರು ಒಂದು ಗೂಡುತ ನಂದಕಂದನನು ಭಜಿಸುವ ಬನ್ನಿಸುಂದರ ಗುರು ಗೋವಿಂದ ವಿಠಲನದ್ವಂದ್ವ ಚರಣವನು ವಂದಿಸೆ ಬನ್ನಿ 3
--------------
ಗುರುಗೋವಿಂದವಿಠಲರು
ವಂದನೆಯ ಮಾಡುವೆ ಶ್ರೀಗುರುವಿಗೆ- ವಂದನೆಯ ಮಾಡುವೆÀ ಪ ವಂದನೆ ಮಾಡುವೆನಿಂದು ಯದುಶೈಲದೋಳ್ ಚಂದದೊಳಿರುತಿಹ ತಂದೆ ನಾರಾಯಣಗೆ ಅ.ಪ ಹರುಷದಿಂದಲಿ ಇನ್ನು ಹರಸಿ ಸಜ್ಜನರಿಗೆ ವರಗಳ ಕೊಡುತಿಹ ವರಲಕ್ಷ್ಮಿ ತಾಯಿಗೆ 1 ಹಿರಿದಾದ ದೈತ್ಯನ ಸೀಳಿ ಸಂತೋಷದಿ ಮೊರೆಹೊಕ್ಕ ಕಂದನ ಪೊರೆದ ನರಸಿಂಹಗೆ 2 ಪಾವನತರಮಾದ ದೇವಸಮೂಹವ ಕಾವ ಕೃಪಾನಿಧಿ ಕಲ್ಯಾಣಮ್ಮಗೆ 3 ವಿಸ್ಫುರಿತದಲ್ಲಿರ್ಪ ವೈರ್ಮುಡಿ ತಿರುಮಣ್ಣು ಸರ್ಪಶಯನಗರ್ಪಿಸಿದಂತ ಗರುಡಗೆ 4 ಶ್ರೀಲೋಲನಡಿಗಳ ಲೀಲಾಮೃತಗಳ ಶೀಲರಾಗಿ ಕುಡಿದ ಶ್ರೇಷ್ಠ ಆಳ್ವಾರ್ರಿಗೆ 5 ವರದವಿಠಲನ ಒಲಿದು ತಾ ಬಂದಿನ್ನು ಗಿರಿಯೊಳು ನೆಲೆಸಿದ ವರ ಗುರುಪೀಠಕೆ 6 ಪಂಕಜಾಕ್ಷನಪಾದಪಂಕಜ ನಂಬಿಹ ವೆಂಕಟಪುರದೊಳಗಿರುವ ವೈಷ್ಣವರಿಗೆ 7 ವಿಷ್ಣುವಿನಂಶದಿ ಪುಟ್ಟಿ ಸಂತೋಷದಿ ಸೃಷ್ಟಿಯನಾಳ್ವ ಶ್ರೀ ಕೃಷ್ಣಭೂಪಾಲಗೆ8 ಮರೆಯದೆ ಭಕ್ತರ ಕರುಣದಿಂದಲಿ ಕಾಯ್ವ ವರಮಹದೇವನ ಪುರದಶ್ರೀರಂಗಗೆ 9
--------------
ರಂಗದಾಸರು
ವಂದಿಪೆ ಶ್ರೀಮನ್ನಾರಾಯಣಗೆ ವಂದಿಪೆ ಅಮ್ಮ ಲಕ್ಷ್ಮೀದೇವಿಗೆ ಪ ವಂದಿಪೆ ವಿಶ್ವಕ್ಸೇನರಿಗೆ ಕುಂದದಿರಲಿ ಎನ್ನ ಸನ್ಮತಿ ಎಂದು ಅ.ಪ ವಂದಿಪೆ ನಾ ಮೊದಲಾಳ್ವಾರರಿಗೆ ಅಂದದಿ ಹರಿಯ ತೋರಿಕೊಟ್ಟರಿಗೆ ಕಂದಮಿಳಲಿ ಸೊಲ್ವ ನುಡಿಗಳಿಗೆ ಪ್ರ- ಬಂಧದಿವ್ಯಗಳ ಬೆಳಗಿಸಿದವರಿಗೆ 1 ವಂದಿಪೆ ವಂದಿಪೆ ಆಚಾರ್ಯರಿಗೆ ಚಂದದಾ ಯತಿತ್ರಯರುಗಳಿಗೆ ಸುಂದರ ಶ್ರೀವೈಷ್ಣವ ತತ್ವಗಳನು ಹೊಂದಿಸಿ ಬಂಧಿಸಿ ಸ್ಥಾಪಿಸಿದವರಿಗೆ 2 ಇನ್ನು ವಂದಿಪೆ ಗುರುಪೀಠಕ್ಕೆ ಚೆನ್ನ ತಿರುನಾರಾಯಣಪುರಕೆ ಉನ್ನತ ರಂಗದಾಸಯತಿವರ್ಯಗೆ ಸನ್ನುತ ಪಿತಾನುಜ ಶಾಮದಾಸರಿಗೆ 3 ಸಾಜದಲೆನ್ನಲಿ ಅರಿವನು ಮೂಡಿಸಿ ಓಜನನಾಗಿಸೆ ಕೇಶವ ನಾಮದಿ ಆರ್ಜಿಸಿ ಉಪಾದಾನದಿ ಬಳಲಿದ ಪೂಜ್ಯಪಿತ ವೆಂಕಟರಂಗಾರ್ಯರಿಗೆ 4 ವಂದಿಪೆ ಕೊನೆ ಮೊದಲಿಲ್ಲದೆ ವಂದಿ- ಪೆಂ ದಾಸನ ಮಾಡಿದ ದೇವನಿಗೆ ತಂದೆ ಜಾಜಿಪುರಾಧೀಶನಿಗೆ ಮುದ- ದಿಂದ ಶ್ರೀ ಚೆನ್ನಕೇಶವಗೆ 5
--------------
ನಾರಾಯಣಶರ್ಮರು
ವಂದಿಪೆವು ತವಪಾದಪಂಕಜಕೆ ಶ್ರೀ ರಾಘವೇಂದ್ರ | ಇಂದು ಬಿನ್ನೈಸುವೆವು ನಿನ್ನಡಿಗೆ ಪ ಇಂದು ದಿನವಂಭತ್ತು ವದ್ಯದಿ | ವೆಂದು ತೋರುವ ಸುದಿನವೆಮಗೆಅ.ಪ ಕಾಲವನು ಬಣ್ಣಿಸಲು ಭಯವಹುದು | ಏನೆಂದು ಪೇಳಲಿ | ನಾಲಿಗೆಯು ಒಣಗುತ್ತಲಿಹುದು | ಮೇಲೆನಿಪ ಶಾಲ್ಯಾನ್ನವೀದಿನ | ಸಾಲದಾಯಿತು ಹಸಿವುತಾಳದೆ | ಕಾಲಪುರಕೈದುವೆವು ಗುರುವೇ 1 ಹಿಂದೆ ತಂಜಾಊರಿನಲಿ ಕ್ಷಾಮ | ವಂಜಿಸಲು ನಿನಬಳಿ | ಬಂದ ರಾಜನ ಮೊರೆಯ ಕೇಳುತಲಿ | “ಶ್ರೀ” ಬೀಜಮಂತ್ರವ ರಚಿಸಿ ಭಕುತರ | ದನ್ನ ವುಣಿಸಿದೆ ಜನಕೆ ಗುರುವೇ 2 ಧರ್ಮಮಾರ್ಗವೆ ಕಾಣದಂತಾಯ್ತು | ಎಲ್ಲೆಲ್ಲಿ ನೋಡಲ | ಧರ್ಮಕೃತಿಗಳೆ ಕಂಡುಬರುತಿಹವು | ಇಂದು ನಿರ್ಮಲಾತ್ಮಕ ನಿನ್ನ ಬಳಿಯಲಿ ಧರ್ಮಭಿಕ್ಷವ ಬೇಡುತಿಹರೈ3 ಅಖಿಲ ಸಜ್ಜನ ನಿಚಯ ಸಹಿತಾಗಿ ನೀನಿಲ್ಲೆ ನೆಲೆಸು | ಭಕುತರಿಷ್ಟಾರ್ಥವನು ನೀಡುತಲಿ | ಲಕುಮಿಯರಸನ ದಯದಿ ಶರಣರ | ಮುಕುತರಾಗುವ ತೆರದಿ ಹರಸೈ4 ದೇಶದೊಳು ಮಳೆಬೆಳೆಯು ಹುಲುಸಾಗಿ ಸೂಸಿಸಲಿನ್ನು | ದೇಶದೊಳು ಸುಖಶಾಂತಿ ಸ್ಥಾಪಿಸಲಿ | ಶ್ರೀಶಕೇಶವನಲ್ಲಿ ಭಕುತಿಯ | ಲೇಸೆನಿಪ ಧರ್ಮಾರ್ಥ ಮಾರ್ಗದಿ | ದಾಶೆಯಲಿ ಬಿನ್ನಹ ಗುರುವೇ 5
--------------
ಶ್ರೀಶ ಕೇಶವದಾಸರು
ವಂದಿಸುವೆ ಭಾರ್ಗವೀಶ ಸುಂದರಾಂಗ ಲೋಕಾಧೀಶ ಪ ವಂದ್ಯಮಾನ ಪಾದಕಮಲ ಇಂದಿರಾ ಮನೋವಿಹಾರ ಅ ಪ. ಅಷ್ಟಮೂರ್ತಿ ಕಷ್ಟಹರಣ ಕೃಷ್ಣಮೂರ್ತಿ ಶ್ರೀ ಕೇಶವ ದುಷ್ಟದನುಜ ಕುಲವಿನಾಶ ಸೃಷ್ಟಿಪಾಲದೇವಾಧೀಶ 1 ನಿನ್ನ ಪಾದವನ್ನು ಭಜಿಪೆ ಚೆನ್ನಕೇಶವ ಪಾಲಿಸೆನ್ನ ಇನ್ನೂ ಭವದಿ ಶೋಕಗೊಂಬೆ ನಿನ್ನ ಹೊರತಿನ್ಯಾರ ಕಾಣೆ 2 ಪುಟ್ಟ ಧ್ರುವಗೆ ಪಟ್ಟಗಟ್ಟಿ ದಿಟ್ಟತನದಿ ಪೊರೆದ ನೀನು ಕಷ್ಟದಿಂದಜಾಮಿಳನು ಕೂಗೆ ಇಷ್ಟವರವ ನಿತ್ತೆ ದೇವ 3 ಕಾನನದಿ ಸ್ನಾನಗೈದು ಜಪವ ಮಾಡಲಾರೆ ನಾನು ಧೇನುನಗರ ಪತಿಯೆ ನಿನ್ನ ಧ್ಯಾನದಿಂದ ಜ್ಞಾನವೆಂದು 4
--------------
ಬೇಟೆರಾಯ ದೀಕ್ಷಿತರು
ವಂದಿಸುವೆನು ನಾ ನರನಾರಯಣ ಭಕ್ತ ಪ- ರಾಧೀನ ನಾನಾರೂಪಿಯೆ ಪ ಈ ಜಗವನೆ ಎತ್ತಿದೆ ವರಾಹನಾಗಿ ಮೂಜಗವನೆ ಅಳೆದ ವಾಮನಮೂರ್ತಿ ಯಾಜಿಪರನು ಕಾಯೋ ಪ್ರಹ್ಲಾದ ಧ್ರುವರೊಲು ಹೇ ಜಗದೋದ್ಧಾರ ಭಕ್ತವತ್ಸಲ 1 ದೇವ ಶ್ರೀಪತಿಯಾಗಿ ಅಸುರರ ಕೊಂದೆ ದೇವಕಿಸುತನಾಗಿ ಕಂಸನ ವಧಿಸಿದೆ ದೇವಜರ ಮೈದುನನಾಗಿ ದೌರ್ಜನ್ಯ ಮುರಿದೆ ದೇವ ಜಾಜಿಪುರೀಶ ದಾಸೋತ್ತಮನೇ 2
--------------
ನಾರಾಯಣಶರ್ಮರು
ವಂದಿಸುವೆನು ನಿತ್ಯದೊಳು ವಂದಿಸುವೆನು ಪ ವಂದಿಸುವೆ ಗುರುಮಧ್ವರಾಯನಷ್ಟಾಂಗದೊಳು ನಿಂದಿರ್ದ ವೈಷ್ಣವಮತಚಂದ್ರವಾರಿಧಿಗೆ ಅ.ಪ ಕ್ರೋಧವರ್ಜಿತನಾಗಿ ವೈರಾಗ್ಯವನು ತೊಟ್ಟು ಬಾಧಿಸುವ ಇಂದ್ರಿಯಂಗಳನೆಲ್ಲ ಬಲಿದು ಆಧರಿಸಿ ಕ್ಷಮೆ ದಮೆ ಶಾಂತ ಸದ್ಗುಣದಿಂದ ಮಾಧುರ್ಯದೊಳು ಜನರ ಪ್ರೀತಿಕರನಾದವಗೆ 1 ಭಯವಿವರ್ಜಿತನಾಗಿ ಬಹುಲೋಭವನು ತೊರೆದು ಕ್ಷಯ ಮಾಡಿ ಮೋಹವನು ಹಿಂದುಗಳೆದು ನವವಿಧದ ಜ್ಞಾನವನು ದಶಲಕ್ಷಣಗಳಿಂದ ನಿಯತವತಿ ಕೈಕೊಂಡನಕ್ಷರ ತ್ರಯದೊಳು 2 ಏಳು ಕೋಟಿಯ ಮಹಾ ಮಂತ್ರ ಬಾಹ್ಯದ ಕೋಟೆ ನಾಲಿಗೆ ವಶಮಾಡಿ ನವದ್ವಾರಗಳು ಮೂಲಾಗ್ನಿಯಿಂ ಸುಟ್ಟು ದಶವಾಯುಗಳ ಕದವ ಸಾಲು ನಾದಗಳೆಂಬ ಕಹಳೆವಿಡಿದವಗೆ 3 ದಶವಿಧದ ಘೋಷಗಳ ಬಿಂದು ಪ್ರತಾಪದಿಂ ದಶಮನಾಗಿಯೆ ಮುಂದೆ ಡೆಂಕಣಿಯ ಹಾರಿ ಗಸಣಿಯನು ಬಿಟ್ಟು ಕಳೆಯಿಂದೇಳು ಧಾತುಗಳ ಎಸೆವ ದುರ್ಗಾಂತರಕೆ ತಾಗಲಿಟ್ಟವಗೆ 4 ಒಂದು ಮುಹೂರ್ತದಲಿ ವ್ಯಸನಗಳನು ಹೂಳಿ ಬಂಧಿಸಿಯೆ ಚಂದ್ರಾರ್ಕ ವೀಧಿಗಳ ಪ್ರಣವದೊಳು ಮುಂದೆ ಮೂಲಾಧಾರವೆಂಬ ಅರಮನೆ ಪೊಕ್ಕು ನಿಂದು ನಿಯಮದಿ ಸುಲಿದನದಿಷ್ಠಾನದರಮನೆಯ 5 ಪ್ರತ್ಯಾಹಾರದಿಂ ಮಣಿಹಾರಕದ ಮನೆಯ ಕಿತ್ತು ಕಿಚ್ಚಂ ಹಾಕಿ ಧ್ಯಾನ ಯೋಗದಿ ಬಂದ ಮತ್ತೆ ಸಂಶುದ್ಧ್ದವೆಂಬರಮನೆಯ ಕೋಲಾಹಲದಿ ಉತ್ತಮದ ಅಂಬಿಕಾ ಯೋಗದಿಚ್ಛೆಯೊಳು 6 ಜ್ಞಾನ ಮಂಟಪವೆಂಬ ರಾಜ ಮನೆಯೊಳು ನಿಂತು ಮನದೊಳು ಮೂಲ ಬಂಧದಿ ಆರು ಶಕ್ತಿಗಳ ಹೀನವಾಗಿಹ ಗುಣತ್ರಯವೆಂಬ ಗೊಲ್ಲರನು ವ- ಡ್ಯಾಣ ಬಂಧದಿ ಇರಿವುತಲಿ ಕ್ಷಿಪ್ರದಲಿ 7 ಖೇಚರಿಯ ಯೋಗದಿಂ ಕರಣ ಚತುಷ್ಟಯದ ನೀಚ ಪ್ರಧಾನಿಗಳ ನೆಗಳವನಿಕ್ಕಿ ಕಾಲ ಕರ್ಮದ ಕಣ್ಣುಗಳ ಕಿತ್ತು ಯೋಚನೆಯ ಮಾಡಿದನು ವೀರಾಸನದೊಳು 8 ಮಾಯಾ ಪ್ರಪಂಚವೆಂಬನ್ಯಾಯ ನಾಯಕರ ಕಾಯ ಉಳಿಸದೆ ಸವರಿ ವಾಸ್ತಿಯಿಂದನುಗೈದು- ಪಾಯದಿಂದಾರು ವಿಕಾರಗಳ ಕೈಗಟ್ಟಿ ಬಾಯ ಹೊಯ್ದ ಗುರುವಿಗೆರಗುವೆನು ನಾನು 9 ಇಪ್ಪತ್ತೊಂದು ಸಾವಿರವಾರು ನೂರಾದ ಉತ್ಪವನ ಉಶ್ವಾಸ ನಿಶ್ವಾಸಗಳನೆಲ್ಲ ತಪ್ಪಿಸದೆ ಕುಂಭಕದಿಂದ ಬಂಧಿಸಿಕೊಂಡು ಒಪ್ಪುವನು ಅರೆನೇತ್ರದಿಂದ ಬೆಳಗುವನು 10 ಮುನ್ನೂರ ಅರುವತ್ತು ವ್ಯಾಧಿಗಳ ಲವಳಿಯಿಂ ಬೆನ್ನ ಬೆಳೆಸಿ ಕಪಾಲ ಭೌತಿಯಿಂದಷ್ಟಮದ ವರ್ಣಾಶ್ರಮಂಗಳನು ಏಕವನು ಮಾಡಿಯೆ ನಿರ್ಣಯಿಸಿಕೊಂಡು ತಾ ನೋಡುವವಗೆ 11 ನುತಿಕರ್ಮದಿಂದಷ್ಟ ಆತ್ಮಕರ ಆಸನವ ಜೊತೆಗೂಡಿ ಜಾತ ಮಧ್ಯದ ದೃಷ್ಟಿಯಿಂದ ಅತಿವೇಗದೊಳು ನಡೆವ ಅವಸ್ಥಾತ್ರಯವೆಂಬ ಕೃತಿ ಕುದುರೆಗಳ ಯುಕುತಿಯಲ್ಲಿ ಪಿಡಿದವಗೆ 12 ನಾದದಿಂ ಪಂಚಕ್ಲೇಶ ಪ್ರಭುಗಳನು ಹೊಯ್ದು ಕಾದು ಇರುತಿಹ ಹರಿಗಳಾರು ಬಿಂದುವಿನಿಂ ಸಾಧಿಸುತ ಮಂತ್ರಭ್ರಮಣದಿಂದ ಮಲತ್ರಯದ ಆದಿ ಕರಣಿಕನನ್ನು ಹಿಡಿದವನಿಗೆ13 ದಾತೃತ್ವದಿಂ ಸತ್ಯಲೋಕವನು ತಾ ಕಂಡು ಕಾತರದಿ ಆಕಾರದುರ್ಗವನು ಹತ್ತಿ ಓತಿರುವ ತಿರಿಕೂಟವೆಂಬ ಬಾಗಿಲ ದಾಟಿ ಈ ತೆರದ ಮಹಾದುರ್ಗವನು ಕಂಡವಗೆ 14 ಅಣು ಮಾತ್ರ ಸೂಕ್ಷ್ಮದೊಳು ನೋಡಿ ತಾ ಜ್ಞಾನದೊಳು ಕುಣಿಯೊಳಗೆ ಆ ಪರಂಜ್ಯೋತಿ ಆಗಿರುತಿಪ್ಪ ಗುಣನಿಧಿಯು ವರಾಹತಿಮ್ಮಪ್ಪರಾಯನನು ಕಣು ಮನದಿ ದೃಢವಾಗಿ ನೋಡಿ ಸುಖಿಯಾದವಗೆ 15
--------------
ವರಹತಿಮ್ಮಪ್ಪ
ವಂದಿಸುವೆನೆಲೆ ತಾಯೆ ವಂದಿತಾಮರೆಯೆ ಪ. ಶ್ರೀಕಲಶಾಬ್ಧಿಕನ್ಯೆ ಸುರಕುಲಮಾನ್ಯೆ ಶ್ರೀಕರ ಗುಣಪೂರ್ಣೆ ಶೋಕಾಪಹರಣೆ ಲೋಕನಾಯಕೆ ಘನ್ನೆ ಪಾಕಶಾಸನಸುತೆ ಪವನಜಸೇವಿತೆ ಸಾಕೇತನಿಲಯೆ ಸರಾಗದಿ ರಕ್ಷಿಸು 1 ಆನತನುತ ಗೀರ್ವಾಣಿ ಅಂಬುಜಪಾಣಿ ಮಾನಿನೀಮಣಿ ಕಲ್ಯಾಣಿ ಭಯವಾರಿಣಿ ಭಾವಜಾತ ಜನನೀ ಭಾಗವತಾರ್ಚಿತೆ ಭಕ್ತಾಭಯಪ್ರದಾತೆ ಬಾಗುತೆ ಶಿರ ನಿನಗೇಗಳುಂ ಮನವಾರೆ 2 ಅರಿಯೆನು ನಿನಗೆಣೆಯಾರ ಕಾಣೆನು ಹಿತರ ಚರಣವ ನಂಬಿದೆ ಮನವಾರ ಪಿಡಿಯೆನ್ನ ಕರವ ಕರುಣದಿ ನೋಡೆನ್ನಿರವ ಪರಮಪಾವನ ಶೇಷಗಿರೀಶನ ಕರುಣಾರೂಪಿಣಿ ಜಗತ್ಕಾರಿಣಿ3
--------------
ನಂಜನಗೂಡು ತಿರುಮಲಾಂಬಾ
ವಂದೇ ವಂದೇ ವಂದೇ ನಾರಾಯಣ ಗುರುದೇವಾ ವಂದೇ ವಂದೇ ವಂದೇ ಪರಿಪೂರ್ಣ ಬ್ರಹ್ಮರೂಪ ಪರಮಾತ್ಮ ಜ್ಞಾನದೀಪ ತಾಪ ಪರಿಹರಿಪ ಜ್ಞಾನಿ ಭೂಪ ಶಿರವಿಡುವೆ ಚರಣಯುಗದೀ ಗುರುದೇವ ಎನ್ನಮನದಿ ಪರತತ್ವ ತಿಳಿವ ತೆರದಿ ಕರುಣಿಪುದು ನೀನೇ ಮುದದಿ ಜಾಗರಣ ಕನಸು ನಿದ್ರಾ ಆಗುಗಳನರಿಯುತಿರ್ದಾ ಈ ಗತಿಗಳೆಲ್ಲ ಮೀರ್ದಾ ಆ ಘನವೆ ನಿರ್ವಿಕಲ್ಪ ಅದೇ ನೀನು ಎಂದು ಪೇಳ್ದೀ ಇದು ಎಲ್ಲ ಮಿಥ್ಯವೆಂದಿ ಇದೊ ಮರಣಭಯವ ಕಳೆದಿ ನಿಜಬೋಧವಚನ ಬಲದಿ ಮರೆದಿರ್ದ ತತ್ವವಿದನು ಪರತತ್ವ ಶೋಧಕರನು ಬೊಧಿಸುತ ನೀ ನಿಜವನು ತೋರಿಸುತ ಕಾಯುವವನು ವರಜ್ಞಾನ ಜಗದಲೆಲ್ಲಾ ಮರೆದಾಡಿ ತಮವನೆಲ್ಲಾ ಪರಿಹರಿಸಲೆಂದು ನೀನೇ ಗುರುಶಂಕರನಿಗೆ ಪೇಳ್ದೀ ವಂದೇ ಶಂಕರಾ ಗುರುದೇವಾ ವಂದೇ ಶಂಕರ ಗುರುದೇವಾ ಪಾವನಚರಣಾ ತೋರೈ ಕರುಣಾ ಜ್ಞಾನಾಂಬುಧಿ ಪೂರ್ಣಾ ವಂದೇ
--------------
ಶಂಕರಭಟ್ಟ ಅಗ್ನಿಹೋತ್ರಿ
ವಂದೇ ಶ್ರೀ ಗೌರಿನಂದನ ಸುರನರ ವೃಂದವಂದಿತಚರಣ ಗಜಾನನ ಪ. ಶಂಕರೋಲ್ಲಾಸ ಪಾಶಾಂಕುಶಧರ ಕರ ಪಂಕಜ ಸುವಿರಾಜ ರವಿತೇಜ 1 ಜಂಭಾರಿಸಂನುತ ಜಾಹ್ನವೀಧರಸುತ ಲಂಬೋದರ ಸುಂದರ ಕೃಪಾಕರ 2 ಸುಕ್ಷೇಮಧಾಮ ಶ್ರೀ ಲಕ್ಷ್ಮೀನಾರಾಯಣನ ಪಕ್ಷೈಕಪಾವನ ಸುಧೀಷಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ವಂದ್ಯಗೆ ನಮೋ ನಮೋ ನಮೋ ನಮೋ ಪ ದೇಶಿಕವರ್ಯಗೆ ನಮೋ ನಮೋ ದೋಷವಿದೂರಿಗೆ ನಮೋ ನಮೋ ಭಾಸುರ ಚರಿತಗೆ ನಮೋ ನಮೋ 1 ವಸುಧೀಂದ್ರರ ಕರಜಾತನಿಗೆ ವಸುದಿಜೀವರ ಸಂಪ್ರೀತನಿಗೆ ದಶದಿಶೆಯೊಳು ವಿಖ್ಯಾತನಿಗೆ ಕಸವರಭಾಂಗ ಪ್ರಖ್ಯಾತನಿಗೆ 2 ಮರುತ ಮತಾಂಬುಧಿ ಸೋಮನಿಗೆ ತಿಮಿರ ತರಣಿ ನಿಭಗೆ ವರದೇಶ ವಿಠಲನ ಸ್ಮರಿಸುತ ಲಿಂಗಸು - ಗುರುಸುಕ್ಷೇತ್ರ ನಿವಾಸನಿಗೆ 3
--------------
ವರದೇಶವಿಠಲ