ಒಟ್ಟು 5214 ಕಡೆಗಳಲ್ಲಿ , 126 ದಾಸರು , 3313 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುಲಲಿತ ಮಧುಕರ ಕೊಳಲನೂದುವುದನು ಕಲಿಸಿದರಾರೇ ನಳಿನಮುಖೀ ರಾಧೇ ಪ ಬಲಿಸಂಹಾರನು ಲೋಕದ ನಾರಿಯ ರಲಸದೆ ಗಾನವ ಕಲಿಸಿದನೇನೇ ಅ.ಪ ಕರು ತುರುಗಳ ಬಳಿ ಸರಸವನಾಡುತ ಮುರಳಿಯನೂದುವ ಸರಸಿಜನಾಭ ಕರೆಕರೆದು ನಿನ್ನ ಬೆರಳಿಗುಂಗುರವಿಟ್ಟು ಸ್ವರಗಳ ಬೋಧಿಸಿ ನಲಿನಲಿದಿಹನೇನೇ 1 ಬೃಂದಾವನದಲಿ ನಂದಕುಮಾರನ ವಂದಿಸೆ ನಾರದ ಬಂದುಹಾಡಿದನೇ ಅಂದದ ಕಲಿಕೆಯ ತುಂಬುರ ನಿನಗಾ ನಂದದಿ ಗಾನವ ಕಲಿಸಿದನೇನೆ 2 ಅಂಗಜಪಿತನಿಗೆ ಮಂಗಳಗಾನವ ಅಂಗನೆ ಶಾರದೆ ಪಾಡಿದಳೇನೇ ಮಾಂಗಿರಿರಂಗ ಮಾತಂಗವರದನಂತ ರಂಗದರಾಣಿ ನೀ ಕಲಿಯೆಂದನೇನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸುಲಿದ ಬಾಳೆ ಹಣ್ಣು ಸುಟ್ಟು ತಿನ್ನಬೇಡಿರೊ ಹಳೆಯ ಜನರ ಅನುಭವಗಳ ಹಳಿಯಬೇಡಿರೊ ಬಿಳಿಯ ವಸ್ತುವೆಲ್ಲ ಕ್ಷೀರವಲ್ಲ ಕಾಣಿರೊ ಥಳಥಳಿಸುವುದೆಲ್ಲ ರಜತವಲ್ಲ ಕಾಣಿರೊ ಸಿರಿಯು ಬಂದ ಕಾಲದಲ್ಲಿ ಮೆರೆಯಬೇಡವೋ ಶಿರವು ಗಟ್ಟಿಯೆಂದು ಕಂಬ ಗುದ್ದಬೇಡವೊ ಮನಕೆ ತುಷ್ಟಿಕೊಡದ ಕಾರ್ಯಗಣನೆ ಬೇಡವೊ ಅನುವಿನಲ್ಲಿ ಪಿಡಿದ ಕಾರ್ಯ ಕೊನೆಯಗಾಣಿಸೊ ಹಾವು ಕೊಂದು ಹದ್ದುಗಳಿಗೆ ಹಾಕಬೇಡವೊ ಗೋವು ಕೊಂದು ಪಾದರಕ್ಷೆ ದಾನಬೇಡವೊ 10 ಅರಿಯದ ಜನರಲ್ಲಿ ಅಂತರಂಗಬೇಡವೊ ಪರರ ಗೋಪ್ಯ ತಿಳಿದರೆ ಬಹಿರಂಗಬೇಡವೊ ಜಂಭ ಕೊಚ್ಚಬೇಡವೊ ರಗಳೆ ರಂಪದಿಂದ ಪರರ ಒಲಿಸಬೇಡವೊ ಗೆದ್ದರಾ ಎತ್ತು ಬಾಲವನ್ನು ಹಿಡಿಯಬೇಡವೊ ಒದ್ದರೆ ಅದು ಹಲ್ಲುಗಳನು ಕಿರಿಯಬೇಡವೊ ಮೂರ್ಖ ಜನಗಳಲ್ಲಿ ವಾದ ಮಾಡಬೇಡವೊ ಮಕ್ಕಳೆದುರಿನಲ್ಲಿ ಗ್ರಾಮ್ಯವಚನ ಬೇಡವೊ ಬಳಿಕ ಮಾತನಾಡುವನು ಗೆಳೆಯನಲ್ಲಯ್ಯ ಕುಳಿತು ತಿನ್ನುವವನು ಸಾಹುಕಾರನಲ್ಲಯ್ಯ 20 ಗಂಟು ಜಗಳ ಕದನಗಳಲಿ ತಂಟೆಬೇಡಯ್ಯ ನಂಟರಿಷ್ಟರಲ್ಲಿ ಭಂಟನಾಗಬೇಡಯ್ಯ ನಾಕು ಜನರ ಮಾತ ಮೀರಿ ನಡೆಯಬೇಡÀಯ್ಯ ಪೋಕರಿ ಜನಗಳಲಿ ಮೂಕ ಬದಿರನಂತಿರೊ ಕಾಲದಲ್ಲಿ ಕೆಲಸಮಾಡಿ ಮುಗಿಸೆಲೊ ನಾಳೆ ನಾಳೆಯೆಂಬ ಕೆಲಸ ಹಾಳು ಕಾಣಿರೊ ಬಿಂಕದಿಂದ ಹರಿಗುರುಗಳ ಮರೆಯಬೇಡಯ್ಯ ಸಂಕಟ ಬಂದಾಗ ವೆಂಕಟೇಶ ಬರುವನೆ ಸಾಲ ಸೋಲ ಮಾಡಿ ದಾನ ಧರ್ಮ ಬೇಡಯ್ಯ ಕೇಳದಿರಲು ನೀತಿ ಹೇಳ ಹೋಗಬೇಡಯ್ಯ 31 ಪರರು ನೋಯುವಂಥ ಮಾತನಾಡಬೇಡಯ್ಯ ಉರಿವ ಒಲೆಗೆ ಉಪ್ಪುಕಾಳನೆರಚಬೇಡಯ್ಯ ನೆರೆಯು ಬಾಳುತಿರಲು ನೋಡಿ ಕರಗಬೇಡಯ್ಯ ಬರಿದೆ ಅಯ್ಯೊ ಪಾಪವೆನಲು ಮರುಕವಲ್ಲವೊ ದುರುಳ ಜನಗಳಲ್ಲಿ ಸರಳನಾಗಬೇಡಯ್ಯ ಹರಿಯ ಭಜನೆಯಲ್ಲಿ ಮನದಿ ನಾಚಬೇಡವೊ ತಿರುಕನಂತೆ ಜ್ಞಾನದ ಭಿಕ್ಷೆಯನು ಬೇಡೆಲೊ ತುರುಕನಂತೆ ಕಾಮದ ತಲೆ ಬಡಿದು ಜೀವಿಸೊ ಸಜ್ಜನಗಳು ಸಮ್ಮತಿಸುವ ಮಾರ್ಗದಲಿ ನಡಿ ದುರ್ಜನಗಳು ಪೇಳಿ ತೋರಿದೆಲ್ಲವನು ಬಿಡಿ40 ಫಲದ ಚಿಂತೆಯಿಲ್ಲದಂತೆ ಧರ್ಮಗಳಿಸಿರೊ ಫಲವು ಹರಿಯಧೀನ ಕೆಲಸ ಮಾತ್ರ ನಿನ್ನದೊ ಧ್ಯಾನ ಮಾಡದಿರಲೊ ಮನದಿ ದುಷ್ಟ ವಿಷಯದ ಧ್ಯಾನದಿಂದ ವಿಷಯದಲ್ಲಿ ಸಂಗ ಬರುವುದೊ ಸಂಗದಿಂದ ದುಷ್ಟಭೋಗ ಕಾಮ ಬರುವುದೊ ಭಂಗವಾದ ಕಾಮದಿಂದ ಕೋಪ ಬರುವುದೊ ಕೋಪದಿಂದ ಮನದಲಿ ವ್ಯಾಮೋಹ ಬರುವುದೊ ಈ ಪರಿಮೋಹದಲಿ ಸ್ಮರಣೆ ನಾಶಪಡುವುದು ಸ್ಮøತಿಯು ತಪ್ಪಿದವನ ಬುದ್ಧಿಮೃತಿಯು ಪೊಂದಲು ಕ್ಷಿತಿಯೊಳವಗೆ ಸರ್ವನಾಶವೆಂದು ನುಡಿಯಿದೆ 50 ಜ್ಞಾನಕೆ ಸಮ ಸಂಪತ್ತಿಲ್ಲ ಜನಕೆ ಲೋಕದಿ ಮೌನಕೆ ಸಮ ಗುಹ್ಯಕೆ ಪಾಲಕರಿಲ್ಲವೊ ಜ್ಞಾನ ಸರ್ವಕರ್ಮಗಳನು ದಹಿಸಿಬಿಡುವುದೊ ಜ್ಞಾನದಿಂದ ಪರಮಶಾಂತಿ ಪಡೆಯುಬಹುದೆಲೊ ಚಿರತನ ವರ್ಣಾಶ್ರಮಗಳ ಧರ್ಮ ಬಿಡದಿರೊ ಮಿತಿಯ ಮೀರಿ ಭೋಜನವನು ಮಾಡಬೇಡವೊ ಕಾಲ ಕಳೆಯಬೇಡವೊ ಲೋಕವ ಭಯಪಡಿಸಬೇಡ ನಡೆನುಡಿಗಳಲಿ ಲೋಕಕೆ ಭಯಪಡಲಿಬೇಡ ಧರ್ಮ ಪಥದಲಿ 60 ಶತುಮಿತ್ರರಲ್ಲಿ ಒಂದೆ ಭಾವ ಪಡೆಯೆಲೊ ಸ್ತೋತ್ರ ನಿಂದೆಗಳಿಗೆ ಹಿಗ್ಗಿ ಕುಂದಬೇಡವೊ ಭಕ್ತಜನರ ನಡೆನುಡಿಗಳ ನಿಂದಿಸದಿರೆಲೊ ಯುಕ್ತರವರು ಹಿರಿಯ ದಯಕೆ ಪಾತ್ರರಿವರೊ ಜಗವು ಸತ್ಯ ಬಗೆ ಬಗೆಯಲಿ ಸೊಗಸ ನೋಡೆಲೊ ಜಗಕೆ ಕರ್ತನೋರ್ವಗೆ ಕೈ ಮುಗಿದು ಬೇಡೆಲೊ ದೇಶಕಾಲ ಪಾತ್ರವರಿತು ದಾನ ಮಾಡೆಲೊ ಆಸೆ ಮೋಸಗಳಿಗೆ ಮನವ ಲೇಸು ಕೊಡದಿರೊ ಪರರ ಮನವು ಕೆದರದಂತೆ ನಿಜಹಿತ ನುಡಿಯು ಗುರುತರ ವಾಚನಿಕ ತಪವ ಮರೆಯಬೇಡವೊ 70 ಸರ್ವಕರ್ಮ ಫಲಗಳನ್ನು ಬಿಡುವನೆ ಯತಿಯು ಗರ್ವಮತ್ಸರಾದಿಗಳನು ಬಿಡುವುದೆ ಮತಿಯು ಶರಣು ಹೊಡೆಯೊ ಕರುಣಮಯನ ಚರಣಯುಗಳದಿ ಕರಗತವಾಗುವುದು ನಿನಗೆ ಇಹಪರ ಸುಖವು ಮಮತೆ ಬಿಟ್ಟು ಜಗದಿ ತಗಲಿ ತಗಲದೆ ಇರೆಲೊ ಕಮಲಪತ್ರಗಳಲಿ ಜಲದ ಕಣಗಳ ತೆರದಿ ಶುದ್ಧ ಧರ್ಮಲೇಶವು ತಲೆ ಕಾಯಬಲ್ಲದೊ ಪದ್ಮನಾಭ ಜನರ ಚಿತ್ತಶುದ್ಧಿ ನೋಡುವ ನಾನೆ ಬ್ರಹ್ಮನೆಂಬ ವಾದ ಬಾಳಬಲ್ಲದೆ ತಾನೆ ಬೀಳಲಿರುವ ಮರಕೆ ಕೊಡಲಿ ಏತಕೆ 80 ಜ್ಞಾನತೀರ್ಥಗಳಲಿ ಮುಳುಗಿ ಸ್ನಾನ ಮಾಡೆಲೊ ಜ್ಞಾನಕೆ ಜ್ಯೋತಿಗಳ ಬೆಳಕು ಕಾಣುತಿರುವುದೊ ದಾರುಣ ಸಂಸಾರ ಜಲದಿ ಪಾರುಗಾಣಲು ಧೀರನಾಗಿ ಈಜುವವಗೆ ತಾರಣ ಸುಲಭ ತಲೆಯ ಮೇಲೆ ಕೈಯನಿಟ್ಟು ಕೂಡ ಬೇಡವೊ ಬೆಳಸಿದಂತೆ ತರುಲತೆಗಳು ಫಲಕೊಡುವುದೊ ಮುಂದೆ ಇಟ್ಟ ಹೆಜ್ಜೆಗಳನು ಹಿಂದೆಗೆಯದಿರೊ ಮಂದಿಗಳಿಗೆ ಫಲದಲಿ ಸಂದೇಹ ಬೇಡವೊ ಹುಳಿಯ ರಕ್ತವಿರುವತನಕ ತಲೆಯು ಬಾಗದು ಕಾಲ ಸಾಲದೊ 90 ಪರರ ನುಡಿಗಳನ್ನು ಕದ್ದು ಕೇಳಬೇಡವೊ ಅರಿತು ನಿನ್ನ ಹರಿಯು ಗುದ್ದಿ ಬುದ್ಧಿ ಕಲಿಸುವ ಚಾಡಿಯಾಡ ಬೇಡ ಚಾಡಿ ಕೇಳಬೇಡವೊ ಸೇಡನು ತೀರಿಸುವ ಹೇಡಿಯಾಗಬೇಡವೊ ನಿನ್ನ ಮಾನದಂತೆ ಪರರ ಮಾನವೆಂದರಿಯೆಲೊ ಅನ್ನ ಹಾಕುವವರ ಹರಿಸಿ ಘನ್ನವೆನಿಸೆಲೊ ಕುಲವ ಶೋಧಿಸುತಲಿ ಕನ್ಯೆದಾನ ಮಾಡೆಲೊ ತಲೆಯ ಕ್ರಾಪು ಯೋಗ್ಯತೆಗೆ ಪ್ರಮಾಣವಲ್ಲವೊ ಕರವ ಪಿಡಿಯೆಲೊ ಥಳಕು ಬೆಳಕು ನೋಡಿ ಬಲೆಗೆ ಬೀಳ ಬೇಡವೊ 100 ಗಾಳಿಯು ಬಂದಾಗ ಬೇಗ ತೂರಿ ಕೊಳ್ಳಲೊ ಕಾಲದ ಸ್ಥಿತಿಯರಿತು ತಗ್ಗಿ ಬಗ್ಗಿ ನಡೆಯೆಲೊ ಮೇಲಿನ ದರ್ಜೆಯಲಿ ನಡೆದು ಕೇಳಬೇಡವೊ ನಾಲಗೆ ಚೆನ್ನಿರುವ ನರಗೆ ಜಗಳವಿಲ್ಲವೊ ಇರುಳು ಕಂಡ ಬಾವಿಗೆ ನೀ ಉರುಳಬೇಡವೊ ಶಕ್ತಿ ಇರುವ ಕಾಲದಲ್ಲಿ ಉತ್ತಮನೆನಿಸೊ ಶಕ್ತಿಯಲ್ಲಿದಾಗ ಇದ್ದು ಸತ್ತ ಪ್ರಾಯವೊ ಸ್ವೊತ್ತಮ ಜನರಲ್ಲಿ ನಿಯತ ಭಕ್ತಿ ಮಾಡೆಲೊ ಭಕ್ತಿಯಿಲ್ಲದವಗೆ ಮುಕ್ತಿಯಿಲ್ಲ ಕಾಣಿರೊ 110 ಪಾಪಿಯಾಗಬೇಡ ಇತರ ಜನರ ವಂಚಿಸಿ ಕೋಪ ಮಾಡಬೇಡ ಕೊಟ್ಟ ಋಣವ ಕೇಳಲು ಕೂಪ ಕೂರ್ಮದಂತೆ ಜಗವ ನೋಡಬೇಡವೊ ರೂಪುರಂಗುಗಳಿಗೆ ಮನವ ಸೋಲಬೇಡವೊ ಹಡೆದ ಮಕ್ಕಳುಗಳ ಕಾಲದಲ್ಲಿ ತಿದ್ದೆಲೊ ಗಿಡದಲಿ ಬಗ್ಗಿಸದ ಮರವು ಬಗ್ಗಲಾರದೊ ಕೊಡಲಿಯನ್ನು ಸೇರಿ ಮರದ ಕಾವಿನಂದದಿ ನಡತೆ ಕಲಿಸದಿದ್ದರವರು ಬುಡಕೆ ತರುವರೊ ಗಳಿಸಿದವನ ಧನವು ಬಳಸಿದವನಿಗೆಂದರಿಯೆಲೊ ಬಳಸಲು ನೀತಿಯಲಿ ಧನವ ಗಳಿಸಿ ಸುಖಿಸೆಲೊ 120 ತಿಳಿದು ಮರ್ಮ ಕಲಿ ಪುರುಷನ ನೆಲಕೆ ತುಳಿಯಿರಿ ಗುಹ್ಯ ತತ್ವ ಪೇಳಬೇಡವೊ ನಾಯಿಗಳಿಗೆ ಹವ್ಯದಾನ ಮಾಡಬೇಡವೊ ಕಾಯುವ ಗುರುಚರಣವೆ ಬಲುಶ್ರೇಯವೆನ್ನದೆ ಕರ್ಮ ಸುಡುವುದೆ ಉಣಲು ಬದುಕಬೇಡ ಜಗದಿ ಬದುಕಲು ಉಣೆಲೊ ಜನನ ಮರಣ ನಿಯತ ಕಾಲಗಳಲಿ ಬರುವವೊ ಕೊನೆ ಮೊದಲುಗಳಿಲ್ಲವು ಈ ಜಗಪ್ರವಾಹಕೆ ತನಗೆ ತಾನೆ ಬೀಳದು ಜಗದಾಖ್ಯ ವೃಕ್ಷವು 130 ತಾಳಿದವನು ಬಾಳುವನೆಂದರಿತು ನಡೆಯೆಲೊ ಗಾಳಿಗುದ್ದಿ ಕರಗಳನ್ನು ನೋಯಿಸದಿರೆಲೊ ಬಾಲನೆಂದು ಅರಿತು ಸತತ ಜ್ಞಾನವ ಗಳಿಸೆಲೊ ನಾಳೆಯ ದಿನ ನಂಬದಂತೆ ಧರ್ಮಗಳಿಸೆಲೊ ಹರಿಯುಕೊಟ್ಟ ಕಾಲದಲ್ಲಿ ಪರರ ರಕ್ಷಿಸೊ ಹರಿಯು ಕೊಡದ ಕಾಲದಲ್ಲಿ ಹರುಷ ಬಿಡದಿರೊ ದೂಷಕರನು ಎಂದಿಗು ನೀ ದ್ವೇಷಿಸದಿರೆಲೊ ಹೇಸಿಗೆಯನು ನಾಲಿಗೆಯಲಿ ತೆಗೆದುಬಿಡುವರೊ ಹಳ್ಳಕೆ ಬಿದ್ದವನಮೇಲೆ ಕಲ್ಲೆಸೆಯದಿರೊ ಟೊಳ್ಳು ಹರಟೆಗಾರನೆದರು ನಿಲ್ಲ ಬೇಡವೊ 140 ಒಳ್ಳೆಯ ಫಲಕೊಡುವ ಕಾರ್ಯಗಳು ಚಿಂತಿಸೊ ಜಳ್ಳು ಹುಲ್ಲಿಗಾಗಿ ಬೆವರು ಸುರಿಸಬೇಡವೊ ಬಿಂದು ಬಿಂದು ಸೇರಿ ಸಿಂಧುವಾಯಿತೊ ಹಿಂದಿನ ಮೊಳೆಯಿಂದ ದೊಡ್ಡ ವೃಕ್ಷವಾಯಿತೊ ಒಂದನು ಇನ್ನೊಂದು ಸೇರಿ ಕೋಟಿಯಾಯಿತೊ ಮಂದಿಗಳಿದನರಿತು ಪುಣ್ಯರಾಶಿ ಗಳಿಸಿರೊ ನೆರಳು ನೀರು ಕೊಟ್ಟ ಜನರ ಮರೆಯ ಬೇಡವೊ ಸರಿಯುತಿರುವ ಮಾರಿ ಮಸಣಿ ಕರೆಯಬೇಡವೊ ಅರಿಯದ ಅಜ್ಞಾನಿಯೊಡನೆ ಸರಸಬೇಡವೊ ತರುಗು ತಿನ್ನುವವನ ಕೇಳಬೇಡ ಹಪ್ಪಳ 150 ದೇಹಿಯೆಂದು ಬಂದವನಿಗೆ ನಾಸ್ತಿಯೆನದಿರೊ ಸಾಹಸವನು ಮಾಡದಿರೊ ಪ್ರಬಲ ಜನರಲಿ ಮೋಹಕೆ ತುತ್ತಾಗದಿರೆಲೊ ಪರಸತಿಯರಲಿ ದೇಹಕೆ ಬಲ ಶುದ್ಧಿ ಕೊಡುವ ನಿಯಮ ಬಿಡದಿರೊ ಭಾಗ್ಯಹೀನ ಬಡವನೆಂದು ಜರಿಯಬೇಡವೊ ಯೋಗ್ಯತೆಯನು ತಿಳಿಯಲು ಬಲು ಸುಲಭವಲ್ಲವೊ ಶ್ಲಾಘ್ಯವಾದ ಮೂಲಿಕೆಗಳನರಿಯೆ ಸುಲಭವೆ ಯೋಗ್ಯತೆಯನುಸರಿಸಿ ಬರುವ ಭಾಗ್ಯ ಬೇರಿದೆ ಖ್ಯಾತಿಗಾಗಿ ಆತ್ಮಸ್ತುತಿಯ ಮಾಡಬೇಡವೊ ಕೋತಿಯಂತೆ ಕುಣಿಯಬೇಡ ಸರಿಸಮರೊಳಗೆ 160 ಮೂತಿ ತಿರುಗಬೇಡ ಪರರ ಹಿತನುಡಿಗಳಿಗೆ ಸೋತ ಹಾಸ್ಯ ಮಾಡಬೇಡ ರಸಿಕ ಜನರಲಿ ಹಿರಿಯರು ಸಂದೇಹಪಡುವ ಮಾರ್ಗ ತ್ಯಜಿಸೆಲೊ ಬರಿಯ ಮಾತನಾಡಿ ಬೆನ್ನು ತಟ್ಟ ಬೇಡವೊ ಪರರ ಹಳ್ಳಕ್ಕಿಳಿಸಿ ಆಳ ನೋಡಬೇಡವೊ ಕರಕೆ ಸಿಕ್ಕಿದಾಗ ಹಲ್ಲು ಕಿರಿಯಬೇಡವೊ ಅರಳು ಹುಡುಕಬೇಡವೊ ಎದೆಯು ಒಡೆಯುವಂತೆ ಸುದ್ದಿ ಪೇಳಬೇಡವೊ ಬೀದಿಯಲಿರುವ ಜನಗಳ ಬೇಸರಿಸಬೇಡವೊ ಬೆದೆಯಲಿರುವ ದುರುಳನನ್ನು ಕೆಣಕಬೇಡವೊ 170 ಊರು ಕುರಿಯ ಕಾದು ಗೌಡನೆನಿಸಬೇಡವೊ ದೂರು ತರುವ ಜನರ ಕ್ಷಣದಿ ನಂಬಬೇಡವೊ ನಾರಿಯ ಸಾಹಸವ ನಂಬಿ ದುಡುಕಬೇಡವೊ ಎರಡು ಕರವು ಸೇರದೆ ಚಪ್ಪಾಳೆಯಾಗದು ಕುರುಡನು ತೋರಿಸುವುದೆಲ್ಲ ಮಾರ್ಗವಾಗದು ಕರಡಿಯು ಮೈಯಪರಚಲದು ಸೌಖ್ಯವಾಗದು ಗುರುಗಳ ಬಿಟ್ಟೋದಲು ಉಪದೇಶವಾಗದು ಹರಿಯಭಕುತಿ ಹರಿಯದಿರಲು ಗಾನವಾಗದು ಬರಿಯ ಸ್ವರಗಳುರುಳಿಸೆ ಕೀರ್ತನೆಯದಾಗದು 180 ಕರದಿ ತಟ್ಟೆ ಹೊಳೆಯುಂತಿರೆ ಪುರಾಣವಾಗದು ಕಿರಿಯ ಜನರ ಗುಣಗಾನವು ಭಜನೆಯಾಗದು ಅಕ್ಕಿಗಾಗಿ ಅಲೆವರೆಲ್ಲ ದಾಸರಾಗರು ಬೆಕ್ಕಿನಂತೆ ಕಣ್ಣು ಮುಚ್ಚಿ ಯತಿಗಳಾಗರು ಚಿಕ್ಕ ಜಿರಳೆ ಮೀಸೆಯಿರಲು ರಾಯರಾಗದು ಚಿಕ್ಕ ಕೊಳೆಯ ಚೌಕ ಧರಿಸೆ ಮಡಿಯದಾಗದು ಕದ್ದು ಅವಿತುಕೊಂಬರೆಲ್ಲ ಗರತಿಯಾಗರು ಮದ್ದು ಮಾಟ ಮಾಡುವವರು ಸುದತಿಯಾಗರು ಶುದ್ಧ ಧೈರ್ಯ ನಡತೆಯಿಂದ ನಿಂದ್ಯರಾಗರು ಬುದ್ಧಿ ಬದುಕು ಹೇಳುವವರು ದ್ವೇಷಿಯಾಗರು 190 ರೀತಿ ನೀತಿಗಳನು ಪರಗೆ ಹೇಳಲು ಸುಲಭ ಮಾತನಾಡಿದಂತೆ ಮಾಡಿ ತೋರುವರಿಹರೇ ತಾತನ ಕಾಲದಲ್ಲಿ ನುಡಿದ ಮಾತಿದಲ್ಲವು ಹೋತನ ಗಳಸ್ತನವಿದಲ್ಲ ಕೂತು ಕೇಳರಿ ಗಾದೆಗಳನು ವೇದವೆಂದು ಪೇಳಲುಚಿತವು ಮಾದರಿ ಅಣುಶಕ್ತಿಯಿಂದೆ ಗಾದೆ ಗಾದೆಗು ಪರಮ ಭಾಗವತರ ಚರಿತೆಯೋದಿ ನೋಡಿರಿ ಅರಿಯಬಹುದು ನುಡಿದ ನೀತಿಸಾರವೆಲ್ಲವ ನಾಡುನುಡಿಗಳೆಂದು ಮರೆಯಬೇಡವೆಂದಿಗು ಪಾಡಿದರೆ ಪ್ರಸನ್ನ ಹರಿಯು ನೀಡುವ ಫಲವ 200
--------------
ವಿದ್ಯಾಪ್ರಸನ್ನತೀರ್ಥರು
ಸುವ್ವಿ ಶ್ರೀ ದೇವಿರಮಣ ಸುವ್ವಿ ಸರ್ಪರಾಜಶಯನ ಹರಣ ಸುವ್ವಿ ನಾರಾಯಣ ಪ ಭವ್ಯಚರಿತ ದುರಿತವಿಪಿನ ಹವ್ಯವಾಹನ ಭವೇಂದ್ರಾದಿ ಸೇವ್ಯಮಾನ ಸುಪ್ರಸಿದ್ಧ ಸುಲಭsÀ ಮೂರುತಿ ಅವ್ಯಯಾಮಿತ ಸುಖಾತ್ಮ ದಿವ್ಯ ಮಹಿಮೆ ತುತಿಪೆ ಸುವಿವೇಕಿಗಳಿಗೆ ಕೊಡುವುದಮಿತ ಮೋದವ 1 ವಾಸವಾದ್ಯಮರ ವಾರಾಶಿ ಶಾರದೇಂದು ಮಧ್ವ ದೇಶಿಕಾರ್ಯ ಚಿತ್ತ ಸಿಂಹಪೀಠಮಧ್ಯಗ ದೇಶಕಾಲ ವ್ಯಾಪ್ತ ಸರ್ವೇಶ ಸಾರ್ವಭೌಮ ಶ್ರೀಮ ಹೀ ಸಮೇತ ಕೃಷ್ಣ ಕೊಡಲಿ ಎಮಗೆ ಮಂಗಳ 2 ಕಮಲ ಸಂಭವನ ವೇದ ತಮನು ಒಯ್ಯತಿರಲು ಲಕ್ಷ್ಮೀ ಶರಧಿ ಮಥನದಿ ಕಮಠ ರೂಪಿನಿಂದ ಸುರರಿಗಮೃತವಿತ್ತು ಕಾಯ್ದ ಅಖಿಳ ಸುಮನಸೇಂದ್ರ ಸ್ವಾಮಿ ಕೊಡಲಿ ಎಮಗೆ ಮಂಗಳ 3 ಕನಕ ಲೋಚನನ ಸದೆದು ಮನುಜಸಿಂಹ ವೇಷನಾದ ದ್ಯುನದಿ ಪಡೆದು ಜನನಿ ಕಡಿದು ವನವ ಚರಿಸಿದ ಜನಪ ಕಂಸನ್ನೊದೆದು ತಿರಿಪುರವನಿತೆಯರ ಸುವ್ರ್ರತ ವಿನುತ ಕಲಿ ದೇವರಾಜ ಎಮ್ಮ ಸಲಹಲಿ 4 ಪಾಹಿ ಪಾವನ ಚರಿತ್ರ ಪಾಹಿ ಪದ್ಮ ಪತ್ರನೇತ್ರ ನಿಗಮ ಗಾತ್ರ ಮಾಂ ಪಾಹಿ ಸಜ್ಜನಸುಮಿತ್ರ ಪಾಹಿ ದೋಷದೂರ ಸುಗುಣ ಪಾಹಿ ಜಗನ್ನಾಥ ವಿಠಲ ಜಯ ತ್ರಿಧಾಮಗ 5
--------------
ಜಗನ್ನಾಥದಾಸರು
ಸುವ್ವಿ ಸುವ್ವಿ ನಮ್ಮ ಶ್ರೀರಮಣಗೆ ಸುವ್ವಿ ಸುವ್ವಿ ಸುವ್ವಿ ನಮ್ಮ ಶ್ರೀರಮಣನೆನೆಸಿದ ವಿನೋದಿ ಹರಿ ಸರ್ವೋತ್ತಮಗೆ ಸುವ್ವಿಪ. ಹರಿಗೆ ಶರಣೆಂಬೆ ಸಿರಿಗೆ ಶರಣೆಂಬೆ ಪರಮೇಷ್ಠಿ ಗುರುಗಳಿಗೆ ಶರಣೆಂಬೆ ಸುವ್ವಿ ಪರಮೇಷ್ಠಿ ಗುರುಗಳಿಗೆ ಹರಿ ಪರನೆಂದು ಪೇಳ್ವ ಶ್ರೀಮದಾನಂದತೀರ್ಥರಿಗೆ ಸಾಸೀರ ಶರಣೆಂಬೆ 1 ವಾಸುದೇವ ಪರ ಸಂಕರ್ಷಣ ಅತಿಕ್ರೂರಸಂಹಾರಕಾರ ಸುವ್ವಿ ಸಂಕರ್ಷಣ ಅತಿಕ್ರೂರಸಂಹಾರಕಾರ ಪ್ರದ್ಯುಮ್ನ ಬೊಮ್ಮ ಕುಮಾರನಂತೆ ಸುವ್ವಿ 2 ಸೂಕರ ನರಹರಿ ಕಾಯ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣ ಸುವ್ವಿ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣನಾದ ಬೌದ್ಧ ಕಲ್ಕಿ ರೂಪ ಪ್ರಸಿದ್ಧವಂತೆ ಸುವ್ವಿ3 ಮುಖ್ಯಪ್ರಾಣ ಆವಲ್ಲಿ ನಾರಾಯಣ ಇವರಿಬ್ಬರ ಗುಣವನರಿಯದವನೆ ಸುವ್ವಿ ಇವರಿಬ್ಬರ ಗುಣವ ಅರಿಯದವನೆ ಗೌಣನೆಂಬರ್ಥದಲಿ ಬ್ರಹ್ಮಸೂತ್ರ [ದಂಬಂತೆ] ಸುವ್ವಿ4 ಆತ್ಮನು ಅತಂತ್ರ ಪರಮಾತ್ಮನು ಸ್ವತಂತ್ರ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ಸುವ್ವಿ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ವಾದಿ ಜ್ಞಾನಾನಂದಕ ಹರಿಗೆ ಸಮರಿಲ್ಲ ಸುವ್ವಿ 5 ಜಡದಲ್ಲಿ ಜೀವಾತ್ಮ ಜಡ ಜೀವರÀಲಿ ಪರಮಾತ್ಮ ಕ್ರೀಡೆಯಿಂದ ಏಕಾತ್ಮ ಬಿಡದಿಹ ಸುವ್ವಿ ಕ್ರೀಡೆಯಿಂದ ಏಕಾತ್ಮ ಬಿಡದಿಹುದು ವಾದಿ ದ್ವಾಸುಪರ್ಣ ವೆಂಬೋ ಶ್ರುತಿ ಲೇಸು ಲೇಸು ಸುವ್ವಿ 6 ಜಡ ಹರಿಗಳ ಭೇದ ಜೀವ ಜೀವಕೆ ಭೇದ ಜೀವೇಶ್ವರಗೆ ಭೇದ ಶರೀರ ಭೇದ ಸುವ್ವಿ ಜಡ ಜೀವರಿಗೆ ಭೇದ ಶರೀರ ಭೇದ [ವೆನ್ನಿ] ಜಡಜೀವ ಭೇದ ಪಂಚಭೇದಗಳು ಸುವ್ವಿ 7 ಪಂಚಭೇದಗಳೆಂಬ ಪ್ರಪಂಚದಲಿ ಸಕಲ ವೈಕುಂಠದೊಳಗಿನ ವಿವರ ಒಂದುಂಟು ಕೇಳು ಸುವ್ವಿ ವೈಕುಂಠÀದೊಳಗಿನ ವಿವರ ಒಂದುಂಟು ಕೇಳು ವಾದಿ ಸಾಕು ಸಾಕು ನಾಲ್ಕುವಿಧ ಮುಕ್ತಿಯುಂಟಲ್ಲಿ ಸುವ್ವಿ 8 ಶ್ರವಣಕೀರ್ತನ ಹರಿಸ್ಮರಣೆ ಸೇವನ ಪೂಜನ ವಂದನ ಹರಿದಾಸ್ಯ ಸಖ್ಯಮಾತ್ಮನಿವೇದನೆ ಸುವ್ವಿ [ಹರಿದಾಸ್ಯ ಸಖ್ಯಮಾತ್ಮ ನಿವೇದನೆಗಳು ತಮ್ಮ] ಅರ್ಥ ಕೂಡೊಂಬತ್ತುಭಕ್ತಿ ಸತ್ಯ ಉಂಟು ಸುವ್ವಿ 9 ಜೀವೇಶ[ನೊಂದು] ಹರಿನಿರ್ಗುಣನೆಂದು ಅಪೂರ್ಣ ಗುಣನೆಂದು ಬ್ರಹ್ಮಾದಿಗಳೊಂದು ಸುವ್ವಿ ಬ್ರಹ್ಮಾದಿಗಳೊಂದು ಸಮರಧಿಕಾರ ಅವತಾರ ಎಲ್ಲ ಒಂದೆ ಎಂಬುವಗೆ ಸುವ್ವಿ 10 ಅವತಾರವೆಲ್ಲ ಅಂಶವತಾರವೆಂದ ಹರಿಭಕ್ತರಲ್ಲಿ ಕೋಪ ಸುವ್ಯಕ್ತವಾಯಿತು ಸುವ್ವಿ ಕೋಪ ಸುವ್ಯಕ್ತವಾಯಿತು ವಾದಿ ಹರಿಭಕ್ತರೊಡನೆ ಕೋಪಂಗಳು ವ್ಯರ್ಥವಾಯಿತು ಸುವ್ವಿ 11 ಪಂಚಮಹಾಭೂತ ದೇಹ ಸಂಚಯರೆಲ್ಲ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಸುವ್ವಿ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಮುಕ್ತರ ದೇಹವೆಲ್ಲ ಸುಖದ ಸಂದೋಹವಂತೆ ಸುವ್ವಿ 12 ಶರೀರದಲ್ಲಿ ಎಪ್ಪತ್ತೆರಡು ಸಾವಿರ ನಾಡಿಗಳಲ್ಲಿ ಪಿರಿಯವಾದವು[ನೂರೊಂದು] ಐದು ಸುವ್ವಿ ಪಿರಿಯವಾದವು[ನೂರೊಂದು] ಐದು ಮೂರು ಒಂದು ಈ ಪರಿಯಾಗಿ ಇಪ್ಪುವಂತೆ ಸುವ್ವಿ 13 ಇಳಾನಾಡಿ ಸಾವಿರ ಸೀಳುಮಾಡಿ ಅದರೊಳು ಸೀಳುಮಾಡಿದರೇಳು ವಿರಳನಂತೆ ಸುವ್ವಿ ಸೀಳುಮಾಡಿದರೇಳು ವಿರಳನಂತೆ ನಾಡಿಯಲ್ಲಿ ರಕ್ತವರ್ಣನಾಗಿ ನಾರಾಯಣನಿಹ್ಯ ಸುವ್ವಿ 14 ಒಂದುನಾಡೀ ಪೆಸರು ಸುಷುಮ್ನನಾಡಿಯೆಂಬರು ಅದರಂತರ ಕಡೆಯಲಿ ರಂಧ್ರವಂತೆ ಸುವ್ವಿ ಅದರಂತರ ಕಡೆಯಲಿ ರಂಧ್ರÀ್ರವಂತೆ ನಾಡಿಯಲಿ ಕಮಲ ಮಧ್ಯದಲಿ ತಾ ವಿಮಲನಂತೆ ಸುವ್ವಿ 15 ನಾಡಿ ಮೂಲದೊಳು ನಾಲ್ಕುದಳದ ಕಮಲವುಂಟು [ನೀಲ]ವರ್ಣದಿಂದ ಸಂಪೂರ್ಣನಂತೆ ಸುವ್ವಿ [ನೀಲ]ವರ್ಣದಿಂದ ಸಂಪೂರ್ಣ[ನೀಲವರ್ಣ ಅನಿರುದ್ಧ] ನಲ್ಲಿ ತಾ ವಾಸನಂತೆ ಸುವ್ವಿ 16 ಪೊಕ್ಕುಳಲಿ ಆರುದಳ ಇಕ್ಕ್ಕು ರೀತಿಯಿಂದಲೇಳು [ಬಿಂಕನಾದ] ಸಂಕರ್ಷಣ ಮುಖ್ಯನಂತೆ ಸುವ್ವಿ [ಬಿಂಕನಾದ ಸಂಕರ್ಷಣ] ಮುಖ್ಯನಂತೆ ಜೀವಗೆ ಪಿಂಗಳ ವರ್ಣನಾಗಿ ಹಿಂಗದಿಹ ಸುವ್ವಿ 17 ಇಡಾನಾಡಿ [ಉದೀಚಿ] ಪಿಂಗಳ ದಕ್ಷಿಣದಲಿ ಪ್ರತೀಚಿ [ವಜ್ರಿಕೋ ಪೂರ್ವಾ ಅಂತೆ] ಸುವ್ವಿ ಪ್ರತೀಚಿ ವಜ್ರಿಕೋದೀಚಿ ಬ್ರಹ್ಮನಾಡಿ ಸುತ್ತಾ ಪಂಚನಾಡಿಗಳ ಪಂಚರೂಪಗಳೆ ಸುವ್ವಿ 18 ಎಂಟುದಳ ಕೆಂಪು ಉಂಟು ಹೃದಯ ಕಮಲದಲಿ ವೈಕುಂಠಪತಿ ಚತುರನ ಮಂಟಪವೆ ಸುವ್ವಿ ವೈಕುಂಠಪತಿ ಚತುರನ ಮಂಟಪದ ಮಧ್ಯದಲಿ ವಾಯು ಜೀವರಿಗೆ ಸಹಾಯನಂತೆ ಸುವ್ವಿ 19 ಕೂದಲ ಕೊನೆಯ ಹತ್ತು ಸಾವಿರ ವಿಧವನೆಮಾಡಿ ಜೀವ ಪರಿಮಾಣ ಒಂದೆ ಕಂಡ್ಯ ಸುವ್ವಿ ಜೀವ ಪರಿಮಾಣ ಒಂದೆ ಕಂಡ್ಯ ಚತುರನ ಅಂಗುಷ್ಟದÀಷ್ಟು ಜೀವ [ಅಂಶನಂತೆ] ಸುವ್ವಿ 20 ಸ್ಥೂಲಾಂಗುಷ್ಠ ಪರಿಮಾಣ ಪ್ರಾಜ್ಞನಾದ ನಾರಾಯಣ ಹೃದಯಕಮಲದ ಒಳಗೆ ವಿಮಲನಂತೆ ಸುವ್ವಿ ಹೃದಯಕಮಲದ ಒಳಗೆ ವಿಮಲನಂತೆ [ಜೀವಂಗಾ ರೂಪದಲಿ] ಹರಿ ತಾ ರಕ್ಷಿಪನಂತೆ ಸುವ್ವಿ 21 ಹೃದಯಾಕಾಶದಲಿ ಪ್ರಾದೇಶ ಪರಿಮಾಣ ಆದಿ ಪುರುಷನಿಹ್ಯ ಈ ವಿಧವಾಗಿ ಸುವ್ವಿ ಆದಿ ಪುರುಷನಿಹ್ಯ ಈ ವಿಧವಾಗಿ ಜೀವಗೆ ಗೃಹದೋಪಾದಿಯಲಿ ಹರಿ ರಕ್ಷಕನಂತೆ ಸುವ್ವಿ 22 ಕಂಠದೇಶದಲಿ ಉಂಟು ತೈಜಸಮೂರ್ತಿ ಕರ ಹತ್ತೊಂಬತ್ತು ಶಿರಗಳು ಸುವ್ವಿ ಕರ ಹತ್ತೊಂಬತ್ತು ಶಿರಗಳು ಮಧ್ಯದಲ್ಲಿ ಕರಿಮುಖ ಹಸ್ತಿಯಾಗಿಪ್ಪನಂತೆ ಸುವ್ವಿ 23 ಕಿರುನಾಲಗೆಯಲ್ಲಿ ಎರಡುದಳ ಕಮಲ ಅರವಿಂದ ಪದ್ಮದಲಿ ನಾರಾಯಣನಿಹ್ಯ ಸುವ್ವಿ ಅರವಿಂದ ಪದ್ಮದಲಿ ನಾರಾಯಣನಿಹ್ಯ ಹರಿಯು ರೂಪವೆಲ್ಲವಾಗಿ ಇಪ್ಪನಂತೆ ಸುವ್ವಿ 24 ದÀಕ್ಷಿಣಾಕ್ಷಿಯಲಿ ಲಕ್ಷಣ ವಿಶ್ವಮೂರ್ತಿ ಶಿಕ್ಷಕನಾಗಿ ಜೀವರ ವಂಶರಕ್ಷಕನಂತೆ ಸುವ್ವಿ ಜೀವರ ವಂಶರಕ್ಷಕನನ್ನೆ [ಜಾಗರವ ಕಾಣಿಸೋನಷ್ಟೆ] ವಾಣಿ ನಿಪುಣನಂತೆ ಸುವ್ವಿ 25 ಈ ದೇವರು ಪ್ರಾಜ್ಞನಾದ ಹರಿಯ ಕೂಡಿ ನಿದಾನಿಸಲು ಜೀವಂಗೆ ಸುಖತೇಜಸವು ಸುವ್ವಿ ನಿದಾನಿಸಲು ಜೀವಂಗೆ ಸುಖತೇಜಸವು ಅನೇಕಾಗಿ ತೈಜಸನಲ್ಲಿ ಸ್ವಪ್ನಭಾಗ್ಯ ಸುವ್ವಿ 26 ಹುಬ್ಬುಗಳ ಮಧ್ಯದಲಿ ಶುಭ್ರ ನಾಲ್ಕುದಳ ಕಮಲ ಅನಿರುದ್ಧ ನೀಲಾಭ್ರವರ್ಣ ಸುವ್ವಿ ಅನಿರುದ್ಧ ನೀಲಾಭ್ರವರ್ಣನಾಗಿ ಹರಿ ಅಲ್ಲಿ ಅದೃಶ್ಯವಾಗಿರುವನಂತೆ ಸುವ್ವಿ 27 ಶಿರದಲ್ಲಿ ಶುಭ್ರ ಹನ್ನೆರಡುದಳ ಕಮಲ ಅರುಣವರ್ಣನಾದ ನಾರಾಯಣನಿಹ್ಯ ಸುವ್ವಿ ಅರುಣವರ್ಣನಾದ ನಾರಾಯಣನಿಹ್ಯ ಹರಿಯು ಈ ಪರಿಯಲಿ ತಿಳಿದವರಧಿಕರಂತೆ ಸುವ್ವಿ 28 ಬ್ರಹ್ಮಹತ್ಯ ಶಿರಸ್ಕಂಚ ಸ್ವರ್ಣಸ್ತೇಯ ಭುಜದ್ವಯಂ ಸುರಾಪಾನ ಹೃದಾಯುಕ್ತಂ ಗುರುತಲ್ಪ ಸುವ್ವಿ ಸುರಾಪಾನ ಹೃದಾಯುಕ್ತಂ ಗುರುತಲ್ಪ ಕಟಿದ್ವಯಂ ಪಾದ ಪಾಪರೂಪಗಳೆ ಸುವ್ವಿ29 ಪಾತಕ ಪ್ರತ್ಯಂಗಗಳು ಉಪಪಾತಕ ರೋಮಂಗಳು ಪಾಪಪುರುಷ ರಕ್ತನೇತ್ರ ನೀಲಪುರುಷ ಸುವ್ವಿ ಪಾಪಪುರುಷ ರಕ್ತನೇತ್ರ ನೀಲಪುರುಷನಾಗಿ ವಾಸ ವಾಮಕುಕ್ಷಿಯಲಿ ನ್ಯಾಸವಂತೆ ಸುವ್ವಿ 30 ಪುರುಷ ಷೋಡಶನಾದ ಷಟ್ಕೋಣದಲ್ಲಿ ಪ್ರದ್ಯುಮ್ನನಿಹ್ಯ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ಸುವ್ವಿ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ದೇಹ ಪವಿತ್ರ [ವಾಸುದೇವರಲ್ಲಿ ಸುವ್ವಿ]31 ಹನ್ನೆರಡಂಗುಲಮೇಲೆ ಹನ್ನೆರಡುದಳ ಕಮಲ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ಸುವ್ವಿ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ತುರಿಯ ಸಿತದಳದಲ್ಲಿ ನಿಧಾನಿಸಲು ಸುವ್ವಿ 32 ಮುಖ್ಯಪ್ರಾಣನೆಂಬೊ ಗುರುವು ಹರಿಗೆ ಸಖ್ಯನಾದ ಬಂದ ದುಃಖ ಪರಿಹರಿಸಿ ಸುಖಬಡಿಸುವ ಸುವ್ವಿ ಬಂದ ದುಃಖ ಪರಿಹರಿಸಿ ಸುಖಬಡಿಸುವ ಮಾರುತನು ಹನುಮ ಭೀಮಸೇನ ರೂಪಗಳು ಸುವ್ವಿ 33 ಮೂರನೆ ಅವತಾರ ಆನಂದತೀರ್ಥರು ವೀರವೈಷ್ಣವರಿಗೆ ಆದಿಗುರುಗಳು ಸುವ್ವಿ ಪಾದ ನೆನೆದರೆ ಘೋರ ಸಂಸಾರವನು ನೀಗಿಸುವನು ಸುವ್ವಿ 34 ಘೋರ ಸಂಸಾರವನು ನೀಗಿಸುವ ಹಯವದನ ತನ್ನ ಪಾದದ ಸಮೀಪದಲಿಟ್ಟು ಸಲಹುವ ಸುವ್ವಿ ಪಾದದ ಸಮೀಪದಲಿಟ್ಟು ಸಲಹುವ ಹಯವದನ ಖೇದಗಳ ಬಿಡಿಸಿ ರಕ್ಷಿಸುವ ಸುವ್ವಿ 35
--------------
ವಾದಿರಾಜ
ಸುಳಾದಿ ಧ್ರುವತಾಳ ಜಿಹ್ವೆ ಸಿರಿ ಗೋಪಾಲವಿಠಲಮೂರ್ತಿಮಂತನಾಗಿ ಇಪ್ಪ ಎಲ್ಲ ಸ್ಥಳದಿ 1 ಮಠ್ಯತಾಳ ಧನವೋದನವು ಇನ್ನು ಧನದೊಳಗಿಪ್ಪನ್ನನೆನೆದು ತೆಗೆದುಕೊ ಶೋಧನಮಾಡಿ ನೋಡಿತನುವಿಗೆ ಕೆಲಸವಿಡು ತನುಬಂಧುಗಳ ನೋಡುಎಣಿಕೆಗೆ ತಂದು ಭಾಗವನು ಮಾಡು ನಾಲ್ಕುಎಣಿಸುತಲ್ಲಲ್ಲಿ ನೆನೆ ಎಲ್ಲ ಸ್ಥಳದಿಗುಣ ಹರಿಯದೆಂದು ಗುಪ್ತನಾಗಿ ಇನ್ನುಅಣುಘನಪರಿಪೂರ್ಣ ಗೋಪಾಲವಿಠಲಅನಿಮಿತ್ತ ಬಂಧ್ವೆಂಬ ಗುಣವುಂಟವನಿಗೆ2 ರೂಪಕತಾಳ ಒಂದು ಅರ್ಥವು ನಿನಗೆ ದೊರಕಿದಡಾಯಿತೆಚಂದದಿ ಚಿಂತಿಸು ಅನಂತಪರಿಯಲ್ಲಿಒಂದುಭಾಗ ದೇವಸಮುದಾಯಕ್ಕೆ ಕೊಡುಒಂದುಭಾಗ ಪಿತೃಗಳಿಗೆ ಇನ್ನು ಮಾಡುಒಂದುಭಾಗ ಪರಿವಾರ ಬಂಧುಗಳಿಗೆಚಂದದಿ ಕೊಟ್ಟು ಆನಂದ ಉಣುಕಂಡ್ಯನಂದಗೋಪನ್ನ ಕಂದ ಗೋಪಾಲವಿಠಲನ್ನಚಂದದಿ ನಿನ್ನ ಮನಮಂದಿರದೊಳು ತಿಳಿ 3 ಝಂಪೆತಾಳ ಜ್ಞಾನವೆ ಮುಖ್ಯಸಾಧನ ನಿನಗೆ ನೋಡುಏನು ಧನದಿಂದಾಗೊ ಕರ್ಮವದರೊಳಗುಂಟುಪ್ರಾಣಹಿಂಸರಹಿತಕರ್ಮ ಮಾಡು ನಿತ್ಯಶ್ರೀನಿವಾಸನು ಅದಕೆ ಮೆಚ್ಚುವನುಜ್ಞಾನಮಯಕಾಯ ಗೋಪಾಲವಿಠಲರೇಯಕಾಣಿಸುವ ನಿನಗೆ ಕರುಣವಮಾಡಿ ನಿರುತ 4 ತ್ರಿಪುಟತಾಳ ತನುವು ಮಂಟಪಮಾಡು ಮನವೆ ಪೀಠವ ಇಡುನೆನೆದು ಕುಳ್ಳಿರಿಸು ನಿನ್ನ ಒಳಗಿದ್ದ ಮೂರ್ತಿಯಧ್ಯಾನ ಆವಾಹನಾದಿಗಳ ನೆನೆದು ಅಲ್ಲಿಪ್ಪಅಣುಮಹಾಮೂರ್ತಿಗೆ ಅಭಿಷೇಕ ಮಾಡಿಸುಗುಣಮೂರರೊಳಗಿದ್ದ ಹರಿಯ ನೆನೆದುಜಿನಸು ವಸನಾಭರಣ ಧೂಪದೀಪವ ಮಾಡಿನೆನಸು ಗಂಧ ಪುಷ್ಪವನು ಮಿಕ್ಕಾದದ್ದೆಲ್ಲಗುಣ ಮೂರುವಿಧದ ಪದಾರ್ಥಗಳನ್ನೆಲ್ಲನಿನಗೆ ಒಂದು ಉದಕಮಾತ್ರ ದೊರಕಿದರೆಇನಿತು ಪರಿಯು ಎಲ್ಲ ಅದರಿಂದ ಚಿಂತಿಸೊಧನದ ಪೂಜೆಗೆ ಅತ್ಯಾಯಾಸಪಡಲಿಬೇಡಘನದೈವ ನಮ್ಮ ಗೋಪಾಲವಿಠಲರೇಯನಿನಗೆಷ್ಟುಪರಿಯಲ್ಲಿ ಪೊರೆವನವನ ತಿಳಿ 5 ಅಟ್ಟತಾಳ ಒಳಗೆ ಬಂದರೆ ನಿನ್ನ ಒಳಗೆ ಇರುತಲಿಪ್ಪಸುಳಿಯುತಿಪ್ಪ ನಿನ್ನ ಸುತ್ತ ಬಿಡದೆ ಬೆನ್ನಹಲವುಪರಿಕರ್ಮ ನಿನಗಾಗಿ ಮಾಡುತ್ತಚೆಲುವ ನಿರ್ಲಿಪ್ತನ್ನ ತಿಳಿಯದೆ ಕೆಡುವಿ ಯಾಕೆಸುಲಭವಾಗಿ ಕರತಳದಲ್ಲಿದ್ದಂಥಫಲವ ನೀ ಕಾಣದೆ ಬಲು ದಣಿಸುವುದೇನೊಗೆಳೆಯನಾಗಿ ಪಾರ್ಥಗೊಲಿದ ನಮ್ಮ ಸ್ವಾಮಿಚೆಲುವ ಗೋಪಾಲವಿಠಲರೇಯನ ನೀನುಗಳಿಗೆ ಮರೆಯಬೇಡ ಬಲುಪ್ರಿಯಾ ಬಲುಪ್ರಿಯಾ 6 ಆದಿತಾಳ ಸೂರ್ಯ ಅಧಿಷ್ಠಾನದಲ್ಲಿದ್ದುದೇವನ ಸ್ಮರಣೆಯು ಬರುತಿರಲಿ ಕಂಡ್ಯಾಕಾವನು ಬಿಡನಿನ್ನು ಗೋಪಾಲವಿಠಲ 7 ಜತೆ ಗೃಹಮೇಧಿ ಮಾಡಿ ನಿನ್ನ ಗೃಹದೊಳಗಿಪ್ಪಂಥಶ್ರೀಹರಿ ಗೋಪಾಲವಿಠಲನ್ನ ನೆನೆಕಂಡ್ಯಾ
--------------
ಗೋಪಾಲದಾಸರು
ಸುಳಾದಿ ಧ್ರುವತಾಳ ಶ್ರೀನಿವಾಸನೆ ನೀನು ಬ್ಯಾಗನೆ ಬಂದು ಸಾನುರಾಗದಿ ಸಂಸಾರ ಬಿಡಿಸೋ ಭಾನುಕೋಟಿ ಪ್ರಕಾಶಭಾಗ್ಯನಿಧಿಯೆನ್ನ ಮಾನವ ಕಾಯ್ವುದು ಮಂಗಳಾಂಗನೆ ಏನೇನು ಕಾರ್ಯಗಳು ನಿನ್ನಾಧೀನವಾಗಿರಲು ನಾನುನನ್ನದು ಎಂದು ಮಮತೆಯನೆ ಕೊಟ್ಟು ಅನ್ಯಾಯದಿಂದ ಎನ್ನzಣಿಸುವುದು ದಾನವಾಂತಕರಂಗ ಮುದ್ದುಮೋಹನವಿಠಲ ನೀನೆಗತಿಯೆಂದವಗೆ ನಿರ್ಭಯವೊ ಹರಿಯೆ 1 ಮಠ್ಯತಾಳ ಎನ್ನಪರಾಧಗಳು ಅನಂತವಿರುವದನ್ನು ನಿನ್ನಸ್ಮರಣೆ ಒಂದೆ ಸಾಕೊ ಹರಿಯೆ ಬನ್ನ ಬಡಿಸುವದ್ಯಾಕೊ ಮನ್ಮನದಲಿಪೊಳೆದು ಚೆನ್ನಾಗಿ ಸಲಹೋಘನ್ನಮಹಿಮಾ ಮುದ್ದುಮೋಹನವಿಠಲನೇ 2 ತ್ರಿವಿಡಿತಾಳ ಬಿಂಬನೆನೆಸಿಕೊಂಡು ಪ್ರತಿಬಿಂಬಗಳೊಳಗೆಕಾರ್ಯ ಅಂಭ್ರಣಿಸಹಿತವಾಗಿ ನೀಮಾಡಿ ಮಾಡಿ ಸೂವಿ ಅಂಬುಜನಾಭಾನೆ ಎನ್ನಾಡಂಭಕ ಭಕುತಿ ಬಿಡಿಸಿ ಸಂಭ್ರಮದಿಂದ ಕಾಯೊ ಕರುಣಾನಿಧೆ ಶಂಬರಾರಿಯಜನಕ ಮುದ್ದುಮೋಹನವಿಠಲ ಕಂಬದಿಂದಲಿ ಬಂದು ಭಕುತನ್ನಸಲಹಿದ ದೇವ 3 ಅಟ್ಟತಾಳ ಏನೇನುದಾನ ಅನಂತ ಮಾಡಲೇನು ಕಾನನದಲಿ ಪೋಗಿ ತಿರುಗಿತಿರುಗಿದಂತೆ ಜ್ಞಾನದಿಂದಲಿ ತಾರತಮ್ಯಾನುಸಾರ ನಿನ್ನ ಧ್ಯಾನವನ್ನ ಒಂದು ಕ್ಷಣವಾದರೂತೋರಿಸೊ ವಾನರ ವಂದ್ಯ ಮುದ್ದುಮೋಹನವಿಠಲ ನಾನಾವಿಧದಿಂದ ನಂಬಿದೆನೊ ಹರಿಯೇ4 ಆದಿತಾಳ ನೀನೆ ಅನಾಥಬಂಧು ನೀನೆ ಅದ್ಭುತಮಹಿಮ ನೀನೆ ಅಸುರಾಂತಕ ನೀನೆ ಅಮರಾದಿವಂದ್ಯ ನೀನೆ ಭವರೋಗ ವೈದ್ಯ ನೀನೆ ಭಕ್ತವತ್ಸಲ ನೀನೆ ಪರಿಪೂರ್ಣ ಸುಖ ನೀನೆ ಪರಂಜ್ಯೋತಿ ನೀನೆ ಪರಬ್ರಹ್ಮ ನೀನೆ ಪುರುಷೋತ್ತಮ ನೀನೆ ಪುಣ್ಯೈಶ್ವರ್ಯ ನೀನೆ ನಿರ್ಮಲ ಜ್ಞಾನ ನೀನೆ ಶಶಿ ಕೋಟಿಲಾವಣ್ಯ ನೀನೆ ಮುದ್ದುಮೋಹನ ವಿಠಲ ನೀನೆ ವೇಗದಿ ಬಂದು ನೀನೆ ರಕ್ಷಿಸು ಎನ್ನನು 5 ಜೊತೆ ಸ್ವಾಮಿ ಪುಷ್ಕರಣಿವಾಸ ಕಾಮಿತಫಲದಾನೆ ಶ್ರೀಮನೋಹರ ನಮ್ಮ ಮುದ್ದುಮೋಹನ ವಿಠಲ
--------------
ಮುದ್ದುಮೋಹನವಿಠಲದಾಸರು
ಸುಳಾದಿ ಧ್ರುವತಾಳ ಹರಿಪದವ ನೆನೆವಂಗೆ ನರಕದ ಭಯವಿಲ್ಲ ಹರಿಪದವ ನೆನೆವಂಗೆ ಮಾಯೆಯ ಭಯವಿಲ್ಲ ಹರಿಪದವ ನೆನೆವಂಗೆ ವಿಷದ ಭಯವಿಲ್ಲ ಹರಿಪದವ ನೆನೆವಂಗೆ ಭವದ ಭಯವಿಲ್ಲ ಹರಿಪದವ ನೆನೆವಂಗೆ ಜನನದ ಭಯವಿಲ್ಲ ಹರಿಪದವ ನೆನೆವಂಗೆ ಮರಣದ ಭಯವಿಲ್ಲ ಬರಿಯ ಮಾತೇ ಅಲ್ಲ ಅಕುತೋಭಯನೆಂದು ವರದ ಹಯವದನನ ಪದಪದುಮವ ನಂಬು 1 ಮಠ್ಯÀತಾಳ ಧ್ರುವನ ನೋಡು ಸುರಲೋಕದಿ ಭುವಿ ವಿಭೀಷಣನ್ನ ನೋಡಿರೊ ಅವನಿಯ ಕೆಳಗೆ ಬಲಿಯ ಉತ್ಸಹವ ನೋಡಿ ಮನುಜರೆಲ್ಲರು ಭುವನ ತೃತೀಯದವರೆ ಸಾಕ್ಷಿ ಹಯವದನನ ಭಜಕರಿಗೆ 2 ತ್ರಿಪುಟತಾಳ ಹತ್ತಾವತಾರದಿ ಭಕ್ತರ ಭಯಗಳ ಕಿತ್ತು ಭೃತ್ಯರ ಕಾಯ್ವ ಕಥೆÉಯ ಕೇಳ್ವರು ಮತ್ತೆ ಮೃತ್ಯುಗಳ ಭೀತÀನೆಂಬುವುದ್ಯಾಕೆ ಹೆತ್ತ ತಾಯಿಯಿಂದ ತತ್ವವ ಕೇಳಯ್ಯ ಕರ್ತೃ ಹಯವದನನೆ ಭಕ್ತರ ಭಯಕ್ಕೆ ಕತ್ತಲೆಗಿನನಂತೆ ಹತ್ತು ಎಂಬುದು ನಂಬು3 ಝಂಪೆತಾಳ ಕರಿಯ ಕಾಯ್ದವನ ಪಾದವ ನಂಬು ಉರಿಯ ನುಂಗಿದವನ ಪಾದವ ನಂಬು ಸಿರಿ ಹಯವದನನೆ ಭಕ್ತರ ಭಯ ಸಂ- ಹರಣನೆಂಬುದಕ್ಕಿನ್ನು ಸಂಶಯವಿಲ್ಲ 4 ರೂಪಕÀತಾಳ ದ್ರೌಪದಿಯ ಭಯ ಪರಿಹರಿಸಿದವನಾರೈ ಆ ಪರೀಕ್ಷಿತನ ಭವಭಂಜನನಾರೈ ತಾಪಸರಿಗಸುರರಿಂದ ಬಂದ ಪರಿಪರಿಯ ಆಪತ್ತುಗಳನೆಲ್ಲ ಖಂಡಿಸಿದನಾರೈ ಶ್ರೀಪತಿ ಹಯವದನನೊಬ್ಬನೆ ತನ್ನವರ ತಾಪತ್ರಯವ ಬಿಡಿಸಿ ತಕ್ಕೈಸಿಕೊಂಬ 5 ಅಟ್ಟತಾಳ ವಿಷನಿಧಿಯನೊಂದು ದಾಟಿ ವ್ಯಸನಗಳನೆಲ್ಲ ಖಂಡಿಸಿ ಬಿಸಜವನಿತೆಯ ಕಂಡು ಬಂದ ಅಸಮ ಹನುಮನ ನೋಡಯ್ಯ ಕುಸುಮವನು ತರಪೋಗಿ ಅಸುರರ ಕುಸುರಿದರಿದುದ ನೋಡಯ್ಯ ಬಿಸಜಾಕ್ಷ ಹಯವದನ ತನ್ನ ಹೆಸರುಗೊಂಡರೆ ಭಕ್ತರ ವಶÀಕ್ಕಿಪ್ಪುದು ಪಾರ್ಥನ ಯಶವ ಪಸರಿಸಿದ ಅಚ್ಚುತ 6 ಪೂರ್ವಕಾಲದಿ ತೀರದ ಕಥೆಗಳ ನಿ- ವಾರಿಸಿ ಜರಿದುದ ನರರೆಲ್ಲ ಕಾಣರೆ ಶರೀರವೆರಸಿದವರಿಗೆ ಸ್ವರ್ಗಗತಿಯುಂಟೆ ಕರುಣಾಕರ ಕೃಷ್ಣನ ಕಂಡವರಿಗೆ ಭಯವುಂಟೆ ಈರೇಳು ಲೋಕದೊಳಗೆ ಈ ಹಯವದನನಂತೆ ಶರಣಾಗತಜನರ ಸಲಹುವರುಳ್ಳರೆ 7 ಜತೆ ಸುರಾಸುರಚಕ್ರವರ್ತಿ ಅಸುರಮದಭೇದನ್ನ ಸಿರಿ ಹಯವದನನ್ನ ಚರಣವೆ ಗತಿಯೆನ್ನು
--------------
ವಾದಿರಾಜ
ಸುಳಾದಿ ರಾಗ :ಸಾರಂಗ ಧ್ರುವತಾಳ ಬಿನ್ನಪವ ಮಾಡುವೆ ಯಜ್ಞ ಶ್ರೀನಿವಾಸ ನಿನ್ನ ಶರಣಗೆ ಹಲವು ಹಂಬಲ ಸಲ್ಲ ಇನ್ನು ತಾನೊಮೊಮ್ಮೆ ಬಯಸಿದೇ ಭಕುತಿಗೆ ಅನ್ಯಥಾವಾಗದಂತೆ ಬಯಸಿಕೊಳಲಿ ಮನ ಚಿನ್ನರ್ಗೆ ಫಲವಿತ್ತೆ ಓದು ಪೇಳುವ ತೆರ ಚನ್ನಾಗಿ ನೀನೆವೇ ಫಲವನ್ನು ಒಲಿದಿತ್ತ ವಾಕು ಆದರಿಸೊ ವಾಸುದೇವವಿಠಲ 1 ಮಟ್ಟತಾಳ ತೋಂಡರ ಮಾತುಗಳ ಪುಸಿಗೊಳಿಸಲಿ ಬೇಡ ದಿಂಡೇರ ಕೈಯಿಂದ ನೋಯಗೊಳಿಸದಿರೊ ಅಂಡಜವಾಹನ ಬಿರುದು ನಿನ್ನದು ನೋಡು ಕೊಂಡಾಡುವೆ ವಾಸುದೇವವಿಠಲರೇಯ ತೋಂಡರ ಮಾತುಗಳ ಪುಸಿಗೊಳಿಸಲಿ ಬೇಡ 2 ತ್ರಿವಿಡಿ ತಾಳ ಆವಾವ ಆಶ್ರಮವನ್ನು ಒಲಿದಿತ್ತು ನೀನೇವೆ ಆವಾವ ಬಗೆಯಲ್ಲಿ ಸಾಧನ ಮಾಡಿಸೊ ಆವಾವ ಬಗೆಯಲ್ಲಿ ಬಲ್ಲ ಸರ್ವಜ್ಞನೆ ಆವಾವ ವಿಧದಿಂದ ಬಿನ್ನೈಪುದೇನೆಲೊ ಕಾವ ಕರುಣಿ ವಾಸುದೇವವಿಠಲರೇಯಾ ಆವಾವ ಬಗೆಗಳ ಬಿನ್ನೈಪುದೇನಯ್ಯಾ 3 ಅಟ್ಟತಾಳ ಕೊಡಗೈಯ್ಯ ದೊರೆ ಎಂದು ನಂಬಿಲ್ಲಿಗೆ ಬಂದ ಬಡನಡವಳ ನೀನು ಕಡೆಗೆ ನೋಡುವರೇನೊ ತೊಡರುಗಳಿದ್ದರು ಬಿಡಿಸುವ ಬಗೆ ಬಲ್ಲ್ಯೋ ತಡೆಕೊಡುವ ದೋಷ ಒಡೆಯ ನಿನ್ನೆದುರಿಗೆ ಅಡರಿ ನಿಲ್ಲುವದುಂಟೆ ಆವಾವ ಕಾಲಕ್ಕೆ ಪೊಡವಿಯ ತಳದಲ್ಲಿ ಪುಟ್ಟಿ ಸಾಧನಗಳು ಪಡಿಯಲಿಬೇಕೆಂಬ ಭಕುತ ಜನರುಗಳು ಕಡಿಮೇನೊ ಅವರೊಶ ಮಾಡಿಸೊ ಭಕ್ತರ ಬಿಡಿಯ ಬಿರುದಿನ ವಾಸುದೇವವಿಟ್ಠಲ 4 ಆದಿತಾಳ ಒಂದೊಂದು ಕೊಡಲು ಮತ್ತೊಂದು ಕೊಡಲಿ ಎಂದು ಸಂದಣಿಸುತಲಿವೆ ವಿಷಯಗಳೊಂದು ತಂದೆ ತಡಮಾಡಬೇಡವೊ ಅದರಿಂದ ಒಂದೆ ಸಾಧನ ಬಹಳಾಗುವದೊ ಇಂದಿರೇಶ ಬಯಸಿದೆ ನಿನ್ನಲ್ಲಿ ಬಂದು ಒದಗಿಸೊ ವಾಸುದೇವವಿಠಲ 5 ಜತೆ ಕರುಣಾಳು ಸ್ವಾತಂತ್ರ ವಾಸುದೇವವಿಠಲ ಸರ್ವಜ್ಞ ನಿನಗೆ ಮೊರೆ ಇಡೊದಿದೆ ಚಿತ್ರ 6
--------------
ವ್ಯಾಸತತ್ವಜ್ಞದಾಸರು
ಸುಳ್ಳೆಭ್ರಮಿಸಿ ಕೆಡಬೇಡವೋ ಹೇ ಮುಳ್ಳುಮನುಜ ಎಲ್ಲ ಮಿಥ್ಯೆಜಗದ ಬಾಳವ್ಯೋ ಪ ನಿಲ್ಲದಳಿಕೆ ಪೋಗ್ವುದಿದು ಜಲದಮೇಲಿನ ಲಿಖಿತತೆರದಿ ಪಾದ ದುರ್ಭವದ ಭಂಗವೋ ಅ.ಪ ಬಂಧುಬಳಗರೆಂಬರೆಲ್ಲರು ನಿನ್ನೊಳಿರುವತನಕ ತಿಂದು ಉಂಡು ಸೇವೆ ಮಾಳ್ಪರು ನೀನುಹೋಗುವಕಾಲ ಸಂದಿಸಲಾಗ ಆರುಬಾರರು ಹಿಂದೆ ಉಳಿವರು ಮಂದಗಮನೆ ಸತಿಯು ತನ್ನ ಮುಂದಿನ ಗತಿಗೆ ಅತ್ತುಕರೆದು ಮಿಂದು ಮುಟ್ಟುಚಟ್ಟು ತೊಳೆದು ಚಂದದ್ಹೋಳಿಗೆ ತುಪ್ಪ ಉಂಬಳು 1 ಜನರಗೋಣು ಮುರಿದು ಹಲವು ಹಂಚಿಕ್ಹಾಕಿ ಬಿಡದೆ ಬಿನುಗುಯೋಚನದನುದಿನವು ಶೋಧಮಾಡಿ ನಾನಾರೀತಿಯಲಿ ಗಳಿಸಿದ ಧನವು ನಿನಗೆ ಎರವು ಕನಿಕರಿಲ್ಲದೆ ಜವನದೂತರು ಹಣಿದು ಎಳೆದಾಡೊದೆಯುವಾಗ ಮನೆಯೊಳ್ಹೊಳಿದಳದೆ ಧನವು ಬಂದು ನಿನಗೆ ಸಹಾಯ ಮಾಳ್ಪುದೇನೋ 2 ಭೂಮಿಸೀಮೆ ತನ್ನದೆನುತ ಶಾಸನವ ಬರೆಸಿ ನೇಮವಿಲ್ಲದೆ ಕಷ್ಟಬಡುತ ನಿಜಸುಖವ ಮರೆದು ತಾಮಸದೊಳಗೆ ಮುಳುಗಿ ಕೆಡುತ ಪ್ರೇಮದೊರಲುತ ಭೂಮಿಗಧಿಕ ಭಕ್ತಜನರ ಪ್ರೇಮಮಂದಿರ ಸ್ವಾಮಿ ಶ್ರೀರಾಮ ಮುನಿದು ನೋಡಲಾಗ ಭೂಮಿ ಸೀಮೆ ಕಾಯ್ವುದೇನೋ 3
--------------
ರಾಮದಾಸರು
ಸೂತ್ರನಾಮಕಪ್ರಾಣ ಜಗತ್ರಾಣ ಸೂತ್ರನಾಮಕ ಜಗಸೂತ್ರನೆ ಹರಿಕೃಪಾ ಪಾತ್ರ ನೀನಹುದೋ ಸರ್ವತ್ರದಿ ನೀನೆ ಪ ದೇವಾ ನೀನಿಲ್ಲದಿರೆ ಜಗವೆಲ್ಲವು ತಾ ನಿರ್ಜೀವ ಜೀವ ಕೋಟಿಗಳೆಲ್ಲ ಕಾವ ಪಾವನಾತ್ಮಕ ಸಂಜೀವ ಲವಕಾಲ ಬಿಡದೆ ಎಮ್ಮೊಳಿರುವ ಭೋ ದೇವ ಅ.ಪ ಸಾಟಿ ಯಾರೆಲೆ ತ್ರಿಕೊಟಿರೂಪನೆ ನಿಶಾಚರ ಕುಲಕೆ ಕುಠಾರಿ ಅಜಾಂಡ ಖರ್ಪರದಿ ಸೃಷ್ಟಿಯೊಳು ಸಂಚಾರಿ ಪಟುತರ ತ್ರಿವಿಕ್ರಮ ಚಟುಲ ಮೂರುತಿ ಮನತಟದಲಿ ಭಜಿಸಿದ ಶ್ರೇಷ್ಠನೆ ನಿಜಪರಮೇಷ್ಠಿಪದವನು ತೊಟ್ಟು ಪಾಲಿಪೆ ನಿಂದು ಬ್ರಹ್ಮಾಂಡ ಪೊತ್ತು ಅಂದು ಜಗಭಾರ ವಹಿಸಿದೆಯೊ ದಯಾಸಿಂಧು ಎಂದೆಂದೂ 1 ಸರುವ ತತುವೇಶರ ವ್ಯಾಪಾರ ಧೀರ ನೀ ನಡೆಸೆ ಜಗಸಂಸಾರ ಕಾರಣನು ಜಗಕಾರ್ಯ ಕಾ ವೈರಾಗ್ಯ ಐಶ್ವರ್ಯ ನಿನ್ನಯ ಗುಣ ಸ್ವರೂಪತನುಕರಣೇಂದ್ರಿಯ ಕರ್ಮಫಲವನು ಜೀ ವರುಗಳಿಗುಣಿಪ ಅನಿಲರೂಪನೆ ತನುಗೋಳಕದಲಿ ನೀ ನೆಲ ಅಂದು ಸೃಷ್ಟಿಯೊಳು ಬಂದೂ ಪೊಂದಿ ಸರ್ವರೊಳು ನಿಂದು ಹಿಂದೂ ಇಂದೂ ಇನ್ನು ಮುಂದೂ ಕರುಣಾಸಿಂಧು ಎಂದೆಂದೂ 2 ಪ್ರಾಣಪ್ರಾತರ ಸಾಯಂಬೀತೆರ ಅಭಿಧಾನ ಗುಣಸ್ತವನ ಮಾಳ್ಪರೆಲ್ಲ ಸುರ ಗಣಾ ಮಣಿದು ಬೇಡುವರೆಲ್ಲ ಅನುದಿನಾ ಎಣೆಯುಂಟೆ ನೀನಮಿತ ಗುಣಗಣಾ ಶ್ರೀ ಮುಖ್ಯ ಪ್ರಾಣಾ ಜಗಬಂಧಕೆ ಮಹಾರಜ್ಜು ರೂಪ ನೀ ಚಿತ್ಸುಖಮಯ ವಪುಷ ಖಗಪ ಶೇಷ ಶಿವ ಶಕ್ರಾದೀ ಜಗ ಬದ್ಧವು ಕೇಶ ನಖಾಗ್ರ ಪರ್ಯಂತ ಚಿತ್ಸುಖ ಗಭೇದ ನೀ ಛಂದ ಶಾಸ್ತ್ರದಿ ತನು ತ್ವಗ್ರೋಮ ಉಷ್ಣಿಕ್ ಗಾಯತ್ರಿ ನರ ಮಾಂಸನುಷ್ಟುಪ್ ಅನುಷ್ಟಪು ಅಸ್ತಿಮಜ್ಜಾ ಜಗತೀ ಪಂಕ್ತಿ ಬೃಹತಿನಾಮಕ ಘನ್ನಾ ಉರಗಾದ್ರಿವಾಸ ವಿಠಲನ್ನ 3
--------------
ಉರಗಾದ್ರಿವಾಸವಿಠಲದಾಸರು
ಸೂತ್ರಾತ್ಮ ಜಾತ ನಮೋ | ಸಿರಿಹರಿಪೌತ್ರ ಕೃಪೆಯ ಪಾತ್ರ ನಮೋ ಪ ಪಾದ | ಕೀರ್ತನೆಗಾಗಿ ವೇದಶಾಸ್ತ್ರಕಭಿಮಾನಿ | ಸ್ತೋತ್ರಕ್ಕೆ ಪಾತ್ರನಾದೆ ಅ.ಪ. ಭವ | ಸರ್ಪಾರಿ ಎನಿಸುತ್ತಸರ್ಪಾಶಯ್ಯನು ಕೃಷ್ಣಂಗರ್ಪಿಸಿ ಮುದಭೀರ್ವೆ 1 ಪಾದ ಸ್ವೀಕೃತ ಹಸ್ತದ್ವಯಏಕಮೇವನ ವಾಹ | ನೀ ಕಾಯೊ ವಿಹಂಗಮ 2 ಸಿರಿ ಗುರುಗೋವಿಂದ ವಿಠಲಾರ್ಚಕ |ಭಾವಿ ಬ್ರಹ್ಮನ ಸುತ | ದೇವರಾಜ ನುತಸಾವಧಾನದಿ ಕಾಯೊ | ಮಾವಾರಿ ಸುಪ್ರೀತ 3
--------------
ಗುರುಗೋವಿಂದವಿಠಲರು
ಸೂರೆಮಾಡೆ ವರಗಳ ಹೊಸೂರ ದೇವತೆ ತೋರೆ ನಿನ್ನ ದಯವ ತುಂಬಿಕೊಂಡು ನಾ ಪೋಗುವೆನು ಮನೆಗೆ ಪ ಶೀಘ್ರದಿಂದ ನಿನ್ನ ಸಾಲಿಗ್ರಾಮವುಳ್ಳ ನೇತ್ರದಿಂದ ಅ- ನುಗ್ರ (ಹ) ಮಾಡಿ ನೋಡೆ ಎನ್ನ ಶಿರಬಗ್ಗಿಸ್ವಂದನೆ ಮಾಡುವೆನು 1 ರೇಣುಕಾಂಬ ನಿನ್ನ ಪಾದರೇಣು ತೋರೆ ಕರುಣದಿಂದ ಕಾಣೆ ನಿನ್ನ ಸರಿ ಲೋಕದೊಳಗೆ ಪಾಣಿ ಹಿಡಿಯೆ ಪಾಲಿಸೆನ್ನ 2 ಸತ್ಯವಂತೆ ಕಳೆಯೆ ಈ ತಾಪತ್ರಯ ದಾರಿದ್ರ್ಯ ದೋಷ ನಿತ್ಯದಲಿ ನಾ ನಿನ್ನ ಭಾಳ ಭಕ್ತಿಯಿಂದ ಬೇಡಿಕೊಂಬೆ3 ಬಾಳೆದಂಡಿಗೆ ಪಾಯಸ ನಿನ್ನ ಭಾಳ ಮಹಾತ್ಮ್ಯಗಳನೋಡಿ ಅ- ಕುಸುಮ ಕುಂಕುಮ ಬೇಡುವೆ ಪ್ರಸಾದವನ್ನು 4 ಜಮದಗ್ನಿಸತಿಯೆ ನೀ ಭೀಮೇಶಕೃಷ್ಣನಾದ ಭಾರ್ಗವ- ರಾಮನ ಮಾತೆಯೆ ಕರುಣದಿ ಕಾಮಿತಾರ್ಥವ ಕೊಟ್ಟು ಕಾಯೆ 5
--------------
ಹರಪನಹಳ್ಳಿಭೀಮವ್ವ
ಸೂರ್ಯ | ತತ್ವವಾದಿ ವದನ ಕುಮುದ ಚಂದ್ರಾ ಪ ಧೃತ - ಬಾದರಾಯಣ ವೇದ ಸೂತ್ರವ | ಮೋದದಲಿ ಪ್ರಕಾಶ ಗೊಳಿಸುತಸಾಧುಜನ ಸಂತೋಷ ಕಾರಣ | ಸಾಧು ಟೀಕಾಚಾರ್ಯ ನಮಿಸುವೆ ಅ.ಪ. ವಾಸರ ತಾನು ನೀರಡಿಸೀ ||ಆಶುಗತಿ ಅಶ್ವವನು ಏರಿರ | ಲಾಸರಿತು ಕಾಗಿನಿಯ ಜಲವನು ಲೇಸು ಪಶುವಂದದಲಿ ಕುಡಿದು ಪಿ | ಪಾಸೆ ಕಳೆದ ಸುಯೋಧ ಕಾಯೋ 1 ಈಕ್ಷಿಸುತೀ ಚರ್ಯದವನಾ | ಮುನಿ | ಅಕ್ಷೋಭ್ಯ ತೀರ್ಥ ಶ್ರೀಚರಣಾಪಕ್ಷಿವಾಹನನಾ ತೈಜಸನಾ | ಮಾತ | ಲಕ್ಷಿಸಿ ತಾನೋರ್ವ ಶಿಷ್ಯನಾತಕ್ಷಣದಿ ಕಳಿಸ್ಯವನನಲ್ಲಿಗೆ | ಪ್ರೇಕ್ಷಿಸಲು ಬರ ಬಂದು ಇಲ್ಲಿಗೆದೀಕ್ಷೆಯನು ಕೈಕೊಂಡು ದಶಮತಿ | ಪಕ್ಷ ಸಾಧಿಸಿ ಗತಿಯ ತೋರ್ದರೆ 2 ಸಾರಥಿ ಕೃಷ್ಣನೊಲಿಸೀ | ಜಯ | ತೀರ್ಥ ಕಾಗಿನಿ ತಟದಿ ನೆಲಿಸೀ|ಕಾರ್ತ ಸ್ವರವದು ಲೋಷ್ಠಸಮವೆನು | ತಾರ್ತ ಸಜ್ಜನ ಕ್ವೊರೆದು ಪ್ರೀತಿಲಿಮೂರ್ತಿ ಗುರುಗೋವಿಂದ ವಿಠಲನ | ವಾರ್ತೆ ಸಚ್ಛರಿತೆ ಯನು ಪೇಳಿದ 3
--------------
ಗುರುಗೋವಿಂದವಿಠಲರು
ಸೂರ್ಯ ಮಂಡಲ ಮಧ್ಯವರ್ತಿ | ಕಾರ್ಯ- ಕಾರಣ ಪ್ರಕೃತಿಗಳಿಗೆ ಚಕ್ರವರ್ತಿ-ವಿಜ್ಞಾನ ಸ್ಫೂರ್ತಿ-ವಿರಾಟಮೂರ್ತಿ ಪ ಪಾದ ತುರ್ಯನಾಮಕ ಲೋಕ- ಮರ್ಯಾದಾ ಸ್ಥಾಪಕ ಮಾದೇವಿರಮಣ-ಶತಕೋಟಿ ಕಿರಣ-ತೋರೋ ತವ ಚರಣ 1 ಅಮಿತ ನಿರಕ್ಷರ ಕುಕ್ಷಿಗಳ್ ನಿತ್ಯ ಮಾಡುವ ತ- ಪ್ಪಕ್ಷಮಿಸಬೇಕಪ್ಪ-ನಾವು ನಿನಗೆ ಕಪ್ಪ 2 ಕಮಲ ಸಂಭವ ಹೃದ್ಯ ನ್ಯಾಯಧರ್ಮಯುಕ್ತ ನಿಗಮಾಂತವೇದ್ಯ ಚೋದ್ಯ 3 ಹಾರ ಕಿರೀಟ ಕೇಯೂರ ಮಕರಕುಂಡಲ ಧಾರಿ ಸ್ವರ್ಣಮಯಾಂಗ ಧೃತ ಶಂಖ ಚಕ್ರ-ಶಿಕ್ಷಿತ ಶುಕ್ರ-ಪರಿಹರಿಸು ವಕ್ರ4 ವೃಷ್ಟಿಯ ಕೊಟ್ಟು ಸಂತುಷ್ಟಿ ಪೊಂದಿಸು ಜಗ ಜಟ್ಟಿ ಶ್ರೀ ಗುರುರಾಮವಿಠ್ಠಲ ಸ್ವಾಮಿ ಶಿಷ್ಟ ಜನಪ್ರೇಮಿ-ಸರ್ವಾಂತರ್ಯಾಮಿ5
--------------
ಗುರುರಾಮವಿಠಲ
ಸೂರ್ಯಾಂತರ್ಗತ ನಾರಾಯಣ ಪಾಹಿ ಆರ್ಯ ಮಾರುತಿ ಪಂಚಪ್ರಾಣ ಪ ಭಾರ್ಯಳೆಂದೊಡಗೂಡಿ ಸರ್ವಜೀವರೊಳಿದ್ದು ವೀರ್ಯ ಕೊಡುತಲಿರ್ದ ಶರ್ವಾದಿ ವಂದ್ಯಾತಿಅ.ಪ. ದ್ರುಪದನ ಸುತೆ ನಿನ್ನ ಕರೆಯೆ ಅಂದು ಕೃಪಣ ವತ್ಸಲ ಶೀರೆ ಮಳೆಯೇ ಅಪರಿಮಿತವು ನೀರ ಸುರಿಯೆ ಸ್ವಾಮಿ ಕುಪಿತ ದೈತ್ಯರ ಗರ್ವ ಮುರಿಯೇ ಜನಸೋ ಜನರ ವಿಪತ್ತು ಕಳೆದೆ ಈ ಪರಿಯ ದೇವರನೆಲ್ಲಿ ಕಾಣೆನೊ ತಪನಕೋಟ ಪ್ರಕಾಶ ಬಲ ಉಳ್ಳ ಕಪಿಲರೂಪನೆ ಜ್ಞಾನದಾಯಕ 1 ಹೃದಯ ಮಂಟಪದೊಳಗೆಲ್ಲ ಪ್ರಾಣ- ದದುಭುತ ಮಹಿಮೆಯ ಬಲ್ಲ ಸದಮಲನಾಗಿ ತಾವೆಲ್ಲ ಕಾರ್ಯ ಮುದದಿ ಮಾಡಿಸುವ ಶ್ರೀನಲ್ಲ ಹದುಳ ಕೊಡುತಲಿ ಬದಿಲಿ ತಾನಿದ್ದು ಒದಗಿ ನಿನಗೆಲ್ಲ ಮದುವೆ ಮಾಡಿದ ಪದುಮಜಾಂಡೋದರ ಸುದತಿಯ ಮುದದಿ ರಮಿಸೆಂದು ಒದಗಿ ಬೇಡುವೆ 2 ಎನ್ನ ಬಿನ್ನಪವನ್ನು ಕೇಳೊ ಪ್ರಿಯ ಮನ್ನಿಸಿ ನೋಡೊ ದಯಾಳೋ ಹೆಣ್ಣಬಲೆಯ ಮಾತು ಕೇಳೂ ನಾನು ನಿನ್ನವಳಲ್ಲವೇನು ಹೇಳೋ ನಿನ್ನ ಮನದನುಮಾನ ತಿಳಿಯಿತು ಕನ್ಯಾವಸ್ಥೆಯು ಎನ್ನದೆನ್ನದೆ ಚೆನ್ನ ಶ್ರೀನಿಧಿವಿಠಲ ಪ್ರಾಯದ ಕನ್ನೆ ಇವಳನು ದೇವ ಕೂಡಿಕೊ 3
--------------
ಶ್ರೀನಿಧಿವಿಠಲರು