ಒಟ್ಟು 10034 ಕಡೆಗಳಲ್ಲಿ , 132 ದಾಸರು , 5388 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬದುಕಿಸೀ ಪಶುಗಳನ್ನು ಭಗವಂತ ನೀನು ಪ ಬದುಕಿಸೀ ಪಶುಗಳ ಭವರೋಗ ವೈದ್ಯನೆ ಕದಲಿಸೀ ರೋಗವ ಕರುಣಿಗಳರಸನೆ ಅ.ಪ ಗೋವುಗಳೆಲ್ಲಾ ಹೊಟ್ಟೆ ನೋವಿಂ ಕಂಗೆಟ್ಟು ಮೇವನು ಬಿಟ್ಟವಿದಾವ ರೋಗವೋ ಕಾಣೆ 1 ಹೊಟ್ಟೆ ಕಳೆದು ಕೆಂಗೆಟ್ಟಧಾತುಗಳೆಲ್ಲಾ ಕೆಟ್ಟು ಜೀವಂಗಳ ಬಿಟ್ಟ ಬಿಡದ ಮುನ್ನ 2 ನಾಲಿಗೆ ನೀಡವು ಕಾಲು ಕೆಟ್ಟವು ಕಂ ಣ್ಣಾಲಿ ಕೆಂಪಾದವು ಮೂಲವೆ ತಿಳಿಯದು 3 ಗೋವುಗಳಿಗೆ ಭೂದೇವರುಗಳಿಗೆಲ್ಲ ದೇವ ನೀನಲ್ಲವೆ ದೇವಕೀ ತನಯನೆ 4 ಸತ್ತವರಿಗೆ ಜೀವವಿತ್ತ ಬದುಕಿಸಿದೆ ಮೃತ್ಯು ದೇವತೆ ನಿನ್ನ ತೊತ್ತಹಳಲ್ಲವೆ 5 ದಾಸನು ನಾನೆಂಬ ವಾಸಿಯುಳ್ಳರೆ ಬೇಗ ವಾಸಿಯ ಮಾಡಯ್ಯ ನೀ ಮೋಸವ ಮಾಡದೆ 6 ಇಷ್ಟದಿ ನೆನೆವರ ಕಷ್ಟವ ಕಳೆವ ಪುಲಿ ಬೆಟ್ಟದೊಳಿಹ ವರದ ವಿಠಲ ಕೃಷ್ಣನೀ 7
--------------
ವೆಂಕಟವರದಾರ್ಯರು
ಬಂದೆ ನಾ ನಿಂದೆ ಇಂದೇ | ವಂದಿಸಿದೆನೊ ವಂದೆ | ಮಾಧವ ತಂದೆ | ಆನಂದ ಇಂದಿರೇಶ ಬಂದೆ ಪ ಪುರುಹೂತ ಜಾತ ಸೂತ | ಸರಸಿಜ ತಾತಾ | ಪರಮ ಪುರುಷ ಖ್ಯಾತ | ಸರವಂದ್ಯ ದೈತ್ಯ ಘಾತಾ | ಹಾಹಾ ಚರಣವ ನಿರುತರ ನೆರೆನಂಬಿದೆ | ದು ಸ್ತರ ಭವಶರಧಿ ಉತ್ತರಿಸೊ ಉರಗಶಾಯಿ 1 ಮೂರ್ತಿ ವರದೇಶಾ ಶರಣರ ಪರಿತೋಷಾ | ತರತಮ್ಯ ಜ್ಞಾನ ಕೋಶ | ಹಹ | ಪುರಹರಗೀಕಾಶಿಪುರ ಕರುಣಿಸಿದ ಸುಂ | ದರಗಾತುರ ಗೋತುರ ಧರ ಧರಣೀಶಾ 2 ಅವಿಮುಕ್ತಿ ಕ್ಷೇತ್ರವಾಸಾ | ನವನವ ಗುಣಭೂಷಾ | ಅವಿಕಾರ ನಾನಾ ವೇಷಾ | ರವಿಜವನ ಪೊರೆವ ಮಿರುವ ಮಹಸತ್ಕಥಾ ಶ್ರವಣವೆ ಕೊಡು ಕೇಶವ ವಿಜಯವಿಠ್ಠಲಾ 3
--------------
ವಿಜಯದಾಸ
ಬಂದೆ ಭಗವತ್ಪಾದಯುಗಾರ ವಿಂದಕೆ ಮಿಳಿಂದನಾಗಿ ವಂದನೀಯರೆ ಯತಿಕುಲಾಬ್ಧಿ ಚಂದ್ರರ ಭುವನೇಂದ್ರತೀರ್ಥರೆ1 ಪರಮ ಪಾವನ ಭುವನೇಂದ್ರರ ಕರಸಂಜಾತ ವರದೇಂದ್ರರ ಕರಸರೋರುಹಭವರೆ ಮಹಾ ಕರುಣಾಂತಃಕರಣ ಧೀರರೆ2 ಸುಮತೀಂದ್ರಾದಿ ಯತೀಂದ್ರರ ವಿಮಲ ಹೃದಯಕಮಲಭಾಸ್ಕರ ಅಮಮ ನಿಮ್ಮ ಕಾಂಬ ಯೋಗ ಸುಕೃತ ಭೋಗಪೂಗ3 ಪೂರ್ಣಪ್ರಜ್ಞಾಚಾರ್ಯವರ್ಯ ಸನ್ನುತ ಮತಧೈರ್ಯ ಧುರ್ಯ ಧನ್ಯನಾದೆನು ನಾನಿಂದು ಸನ್ನಿಧಾನವನು ಕಂಡೆನು4 ಶ್ರೀಶ ಲಕ್ಷ್ಮೀನಾರಾಯಣ ವ್ಯಾಸ ರಘುಪತಿಯ ಚರಣೋ- ಪಾಸಕರೆ ಪಾವನರೆ ಕಾಶೀವiಠಾಧೀಶ್ವರರೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಬಂದೆನಿಲ್ಲಿಗೆ ಸಂದರುಶನಕ್ಕೆ ಬಂದೆನಿಲ್ಲಿಗೆನ್ನ ಮನದಿ ಬಂದು ನಿಲ್ಲೆಂದು ನಿನ್ನ ವಂದಿಸ್ವರವ ಬೇಡುವೆ ನಾ ನಂದನ ಸುಂದರ ಕೃಷ್ಣ ಬಂದೆನಿಲ್ಲಿಗೆ ಪ ಪಾಲಶರಧಿ ಆಲದೆಲೆಯಲ್ಯೋಗನಿದ್ರೆ ಮಾಡಿ ನಿನ್ನ ನಾಭಿಕಮಲನಾಳದಿಂದ ಆಗ ಅಜನ ಪಡೆದ ಹರಿಯೆ 1 ಸಾಗರವ ಬಿಟ್ಟು ನಾಗಶಯನ ಶೂರಸುತನಲ್ಲುದಿಸಿ ಯೋಗಿಗಳ ಹೃದಯಕಮಲ ಆಲಯವ ಮಾಡಿದ್ದ ದೊರೆಯೆ2 ಕಂದನಾಗಿ ಬಂದು ಕಾಳಿಂದಿ ದಾಟಿ ನಂದಗೋಕುಲ ವೃಂದಾವನದಿ ಗೋವುಕಾಯ್ದ ಇಂದಿರೇಶ ಅಜನಪಿತನೆ 3 ಅಷ್ಟಮಠದ ಯತಿಗಳಿಂದ ಮುಟ್ಟಿಪೂಜೆಗೊಂಬುವಂಥ ಶ್ರೇಷ್ಠರೊಳಗೆ ಶ್ರೇಷ್ಠ ನಿನ್ನುತ್ಕøಷ್ಟಮಹಿಮೆ ನೋಡಲೀಗ4 ಧ್ವಜ ವಜ್ರಾಂಕುಶ ರೇಖವುಳ್ಳ ಪದುಮಪಾದ ನೋಡಲೀಗ5 ದೊಡ್ಡ ಮುತ್ತು ವಜ್ರದ್ಹರಳಿನಡ್ಡಿಕೆ ಉಡಿದಾರ ಹೊಳೆಯೆ ಒಡ್ಯಾಣವನೆಯಿಟ್ಟ ಜಂಘÉ ಜಾನುದ್ವಯವ ನೋಡಲೀಗ6 ಉದರದಲ್ಲೀರೇಳುಲೋಕ ಅಡಗಿಸಿದನಂತಶಯನ ಪದುಮ ಪೊಕ್ಕಳಿಂದ ಬ್ರಹ್ಮನ ಪಡೆದ ಪರಮಾತ್ಮನ್ನ ನೋಡ7 ವಂಕಿ ಬಾಹುಪುರಿಗಳಿಂದ ಕಂಕಣ ಭೂಷಣಗಳೊಪ್ಪೆ ಕರವ ನೋಡ8 ನೀಲವರಣ ನಿನ್ನ ಬೆರಳು ಸಾಲು ಮಾಣಿಕ್ಯ ಮುದ್ರಿಕಿಂದ್ಹೊಳೆಯೆ ಲೀಲೆಯಿಂದ ಗಿರಿಯೆತ್ತಿದ ಗೋಪಾಲಕೃಷ್ಣ ನಿನ್ನ ನೋಡ 9 ವೈಜಯಂತಿ ತೋರ ಮುತ್ತಿನೆಳೆÀಗಳ್ಹೊಳೆವೋ ಶ್ರೀದೇವೇರಿಗಾಶ್ರಯವಾಗಿದ್ದಿ ್ವಶಾಲ ವಕ್ಷಸ್ಥಳವ ನೋಡ10 ಪಚ್ಚೆಪದಕ ಪಾರಿಜಾತ ಅಚ್ಚ ಮಲ್ಲಿಗೆ ತುಳಸಿಮಾಲೆ ಶ್ರೀ- ಕೌಸ್ತುಭ ಶೃಂಗಾರ ಕೊರಳ ಸಿರಿಯರಸು ನಿನ್ನ ನೋಡ11 ಮಧ್ವರಾಯರು ಕೈಯ ಬೀಸೆ ಎದ್ದು ಬಂದು ಹಡಗದಿಂದಿ ಲ್ಲಿದ್ದಾನುಡುಪಿಕ್ಷೇತ್ರದಿಯೆಂದು ಮುದ್ದುಕೃಷ್ಣನ ಮುಖವ ನೋಡ12 ಕ್ರೂರಕಂಸನ(ಅ)ಪ್ಪಳಿಸಿ ದ್ವಾರಾವತಿಯಲ್ಲಿದ್ದ ಅಷ್ಟಭಾರ್ಯೇರಿಂದ್ವಿ- ಹಾರ ಮಾಡಿದ್ವಾರಿಜಾಕ್ಷನ್ವದನ ನೋಡ 13 ಚಂದ್ರನಂತೆ ಹೊಳೆವೊ ಮುಖದಿ ದುಂಡು ಮುತ್ತಿನ ಮೂಗುತಿನಿಟ್ಟು ಕುಂದಣದ್ವಜ್ರ ಬಿಗಿದ ಕರ್ಣಕುಂಡಲವನ್ನು ನೋಡಲೀಗ14 ಕೇಸರಿ ಗಂಧ ಕಸ್ತೂರಿಯ ನಾಮ ತಿಲಕ ಒಪ್ಪೋವಜ್ರದರಳೆಲೆ ದೇವಕೀಸುತನ (ನೋಡ) 15 ಬಾಲಭಾಸ್ಕರ ಕೋಟಿಲಾವಣ್ಯರೂಪಗೆಲುವ ಕಾಂತಿ ಸಾಲುದೀವಿಗೆ ಸೊಬಗು ಕಮಲದಳಾಯತಾಕ್ಷ ಹರಿಯ ನೋಡ16 ಕೆಂಪುಹರಳು ಝಗ ಝಗಿಸುವೊ ಪಂಚರತ್ನದ ಕಿರೀಟ ಚಂಚಲಾಕ್ಷ ಹರಿಯ ಶಿರದಿ ಮುಂಚೆ ನೋಡಿ ಮುಗಿವೆ ಕೈಯ17 ಅಸುರರ್ವಂಚಿಸಮೃತ ಬೀರಿ ಪಶುವಾಹನಗೆ ಮೋಹ ತೋರಿ ಮೋಸದಿಂದ ಭಸ್ಮಾಸುರನ ನಾಶಮಾಡಿದ ನಾರಿ ನೋಡ18 ಲವಣಶರಧಿತೀರ ಮಧ್ವ ಸರೋವರದಲಿ ಶುದ್ಧಸ್ನಾನ ಪರಮ ಮಂತ್ರ ಜಪಿಸೋ ನಿನ್ನ ಶರಣು ಸುಜನಜನರ ನೋಡ19 ಉತ್ತಮ ವೈಕುಂಠ ಬಿಟ್ಟೀ ಉಡುಪಿಯಲ್ಲಿ ವಾಸವಾಗಿ ಭಕ್ತಜನರಭೀಷ್ಟಕೊಡುವೋ ನಿತ್ಯಮುಕ್ತ ನಿನ್ನ ನೋಡ20 ಶ್ರೀಶನೊಲಿಸಿದ್ಹನುಮ ಭಾರತೀಶನಾದ ಮಧ್ವರಾಯರ ದಾಸರ ದಾಸತ್ವಕೊಡು ಭೀಮೇಶಕೃಷ್ಣಂದಯದಿ ನೋಡ 21
--------------
ಹರಪನಹಳ್ಳಿಭೀಮವ್ವ
ಬಂದೆನೊ ರಂಗ ಬಂದೆನೊ ಹಿಂದಿನ ಸುಕೃತದಿ ತಂದೆ ನಿನ್ನ್ಹುಡುಕುತ ಪ ಹಲವು ಜನುಮಜನುಮಗಳಲಿ ತಿರುತಿರುಗಿ ತೊ ಳಲಿತೊಳಲಿ ಬಂದು ಬಳಲಿ ಮರುಗಿ ಹೊಲಸಿನ ಮಲಮೂತ್ರ ಕುಣಿಲಿ ಕೊರಗಿ ಎಲುವೊಂದು ಗಿರಿಯೋಪಾದಿಯಲಿ ಆಹ ಇಳೆಯೊಳು ಬಿದ್ದಿಹ್ಯವು ಬಲು ಬಲು ಹೊಲೆಬವಣೆ ಯಲಿ ನೋಯಲಾರದೆ ಕಳವಳಗೊಳುತ 1 ಜಡÀಸದೃಸ ಶರೀರಗಳ್ಹೊತ್ತು ಬಿಡದೆ ಎಡರು ತೊಡರಿನೊಳಗೆ ಬೆರೆತು ಕೆಡುವ ಪೊಡವಿಸುಖಕೆ ಮನವಿತ್ತು ದೃಢವನ್ಹಿಡಿಯದೆ ಮರೆವಿನಿಂ ಸಂಪತ್ತು ಆಹ ಒಡನೊಡನ್ಹುಟ್ಟ್ಹುಟ್ಟ ಕಡುಕಷ್ಟಬಡುವಂಥ ಸುಡಗಿಯ ತಡಿಯದೆ ಗಡಗಡ ನಡುಗತ್ತ 2 ನೋಡೆಲೊ ಕರುಣಾಂತರಂಗ ದಯವ ಮಾಡೆಲೊ ಸುಗುಣ ಶುಭಾಂಗ ಅಭಯ ನೀಡೆಲೊ ನಿರುತ ನೀಲಾಂಗ ದುರ್ಭವ ಕಡಿಯೆಲೊ ಭವಭಯಭಂಗ ಆಹ ತೊಡರು ಕಡೆಮಾಡಿ ಎನಗೆ ಮುಕ್ತಿ ನೀಡಿ ಸಲಹು ಎಂದು ಬೇಡುತ ಶ್ರೀರಾಮ 3
--------------
ರಾಮದಾಸರು
ಬಂದೆನ್ನ ಮನಮಂದಿರದಲಿ ನಿಲ್ಲೊ | ಹೇ ಶ್ರೀನಿವಾಸ ಬಂದೆನ್ನ ಮನಮಂದಿರದಲಿ ನಿಲ್ಲೊ ಪ. ಇಂದಿರೇಶ ವೈಕುಂಠದಿಂದ ನೀ ಬಂದು ಈಗ ಎನ್ನ ಹೃದಯ ಕಮಲದಿ ಅ.ಪ. ಜಗದಂತರಾತ್ಮ ನಿರ್ಮಲಾತ್ಮ | ನಿರ್ಗತ ದುರಿತಾತ್ಮ ನಿಗಮಾದಿಗಳೊಂದ್ಯ ನೀ ನಿತ್ಯಾತ್ಮ | ಜೀವಂತರಾತ್ಮ ಸುಗುಣವಂತ ನಿನ್ನ ಬಗೆ ಬಗೆ ಮಹಿಮೆಯ ಪೊಗಳಬಲ್ಲೆನೆ ನಾ ಖಗವಾಹನನೆ 1 ಅರಿಯೇನೋ ಅನ್ಯರ ಹರಿ ಸರ್ವೇಶ | ಹೃತ್ಕಮಲದಿ ವಾಸ ಪರಿಹಾರಗೈಸೊ ಈ ಭವಕ್ಲೇಶ | ನಂಬಿದೆ ಸರ್ವೇಶ ಅರಘಳಿಗೆ ನಿನ್ನಗಲಿರಲಾರೆನೊ ಸಿರಿಸಹಿತದಿ ನಿನ್ನರಮನೆಯಿಂದಲಿ 2 ಇಂದು | ನೀ ರಕ್ಷಕನೆಂದು ಕರಕರೆಗೊಳಿಪುದು ಧರ್ಮವೆ ನಿಂದು | ನೀ ಕಾಯಲಿಬೇಕಿಂದು ಸರಿಯಲ್ಲವು ಈ ತೆರದಲಿ ತೊರೆವುದು ಶರಣ ರಕ್ಷಕನೆಂಬೊ ಬಿರುದು ಪೊತ್ತಿಲ್ಲವೆ 3 ಎಂತೆಂತು ಸಹಿಸಲಿ ಈ ಭವಕ್ಲೇಶ | ಜೀವಾಂತರವಾಸ ಕಂತುಪಿತ ಎಣಿಪರೆÀ ಎನ್ನಯ ದೋಷ | ಸರಿಯಲ್ಲ ಸುರೇಶ ಇಂತು ನಿನಗೆ ಒಪ್ಪಿಸಿದರೊ ಗುರುಗಳು ಚಿಂತಿತಾರ್ಥ ನಿನಗೆನ್ನ ತರ ತಿಳಿಯದೆ 4 ಬೆಟ್ಟದ ಒಡೆಯ ಬೇಗನೆ ಬಾರೊ | ಹೃತ್ಕಮಲದಿ ತೋರೊ ಶ್ರೇಷ್ಠ ಶ್ರೀ ಗುರುಗಳ ಕರುಣವ ಬೀರೊ | ಸಲಹುವರಿನ್ಯಾರೊ ಮುಟ್ಟಿ ಭಜಿಪೆ ನಿನ್ನ ಶ್ರೇಷ್ಠ ಪದಂಗಳ ಸೃಷ್ಟೀಶ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಬಂದೆಯಾ ಕೃಷ್ಣಯ್ಯಾ ಬಂದೆಯಾ ಪ ಸುಂದರ ನರರೂಪದಿಂದಲೀ ಧರೆಯೊಳು ಅ.ಪ. ಲೋಕೈಕ ದೇವನೆಂದು ಜ್ಞಾನಿಗಳೇಕಾಗಿ ಸಾರ್ವರಿಂದುಆಕಾರ ರಹಿತನ ಲೋಕ ಸಾಮಾನ್ಯರುಸ್ವೀಕರಿಸರು ಎಂದು ಸಾಕಾರನಾಗಿ 1 ಪೂರಾ ವಿಶ್ವದಲ್ಲೆಲ್ಲ ತುಂಬಾ ನಿಂತಿಹ ನಿನ್ನ _ನಾರು ನಂಬರು ಎಂತೆಂಬಕಾರಣ ಜಗಕೆ ತೋರರೆಲ್ಲಾ ಗುಣಸಾರ ಸಂಗ್ರಹಿಸಿ ನೀ ಧೀರ ಮಾನವನಾಗಿ2 ಜಗದೊಳಂದದ್ಭುತ ಶಕ್ತಿ ಇರುವುದೆಂ _ದುಗಮಿಕೆ ಜನದೊಳಾಸಕ್ತಿಜಗದೊಳು ಗದುಗಿನ ವೀರನಾರಾಯಣಬಗೆ ಬಗೆ ಮಹಿಮೆಯ ಸುಗುಣ ಮಾನವನಾಗಿ 3
--------------
ವೀರನಾರಾಯಣ
ಬಂದೆಯಾ ಬಂಧುವೆ ಭಾಗ್ಯದ ನಿಧಿಯೆ ಮಂದರದರ ನಿನ್ನ ಮಂದಿರಕ್ಕೆ ಪ ತಂದೆಯ ಮಮ ಹೃನ್ಮಂದಿರಕಾಗಲೇ ಬಂದೆಯೊ ಕರುಣಾಸಿಂಧುವೆ ಸ್ವಾಮಿ ಅ.ಪ ಆಗಮನುತ ನಿನ್ನಾಗಮನದಿ ಇನ್ನು ನೀಗಿತು ಚಿಂತೆಯು ನೀರಜನಯನ ಯಾಗ ಸಾಫಲ್ಯಕೆ ಸೂಚನೆಯಿದು ಮಹಾ ಭಾಗವತ ಪ್ರಿಯ 1 ಮುಂದಿನ ಕಾರ್ಯವ ನೀನೆ ವಹಿಪುದು ಎಂದೆಂದಿಗೂ ನೀನೆ ಗತಿಯು ನಂದನಂದನ ಗೋವಿಂದ ಮುಕುಂದನೆ ನಿಂದಿರಿಸಯ್ಯಾ ನಿನ್ನಾಜ್ಞೆಯಲೆಮ್ಮನು 2 ನಾಗಶಯನ ನಳಿನಾಯತ ಲೋಚನ ಯೋಗಿನಿಲಯ ಕಮಲಾಲಯವಾಸ ಯಾಗರಕ್ಷಕನೆ ಯಾಗ ಫಲಪ್ರದ ಬಾಗುವೆ ಚರಣಕೆ ಕರಿಗಿರೀಶನೆ 3
--------------
ವರಾವಾಣಿರಾಮರಾಯದಾಸರು
ಬಂದೆವಯ್ಯ ಗೋವಿಂದಶೆಟ್ಟಿ - ನಿಮ್ಮಹರಿವಾಣ ತೀರ್ಥಪ್ರಸಾದ ಉಂಟೆನಲಾಗಿ ಪ ಅಪ್ಪವು ಅತಿರಸ ತುಪ್ಪವು ಚಿನಿಪಾಲುಒಪ್ಪುವ ಸಕ್ಕರೆ ಯಾಲಕ್ಕಿಯುಅಪರೂಪವಾದ ಕಜ್ಜಾಯಗಳನೆಲ್ಲಛಪ್ಪನ್ನ ದೇಶಕ್ಕೆ ಮಾರುವ ಶೆಟ್ಟಿ1 ತುಂಬಿ ಮಿಕ್ಕ ಅನ್ನವ ಮಾರಿಸಿಒಡವೆಯ ಗಳಿಸುವ ಕಡುಲೋಭಿ ಶೆಟ್ಟಿ 2 ಶೇಷಗಿರಿಯಲ್ಲಿ ವಾಸ ಮಾಡಿಕೊಂಡುದೇಶದೇಶಕ್ಕೆ ಹೆಸರಾದ ಶೆಟ್ಟಿಕಾಸುಕಾಸಿಗೆ ಬಡ್ಡಿ ಗಳಿಸಿಕೊಂಬ ಆದಿಕೇಶವ ನಾರಾಯಣ ತಿಮ್ಮಶೆಟ್ಟಿ 3
--------------
ಕನಕದಾಸ
ಬಂಧಕವಾಗದ ಹಾಂಗೆ | ಕರ್ಮಛಂದಾಗಿ ಮಾಡಿಸೊ ಹರಿಯೆ ಪ ದಾತ | ನೀನೆನ್ನ ಸಲಹೊ ಸತ್ರಾಣ1 ಸತಿಸುತ ಧನಧಾನ್ಯ ಅಯ್ಯ | ಎನ್ನ | ಮತಿ ಭ್ರಮಣೆ ಮಾಡಿದ ಪರಿಯಪ್ರತಿಕ್ರಿಯೆ ನೀನೆಲ್ಲ ತಿಳಿಯ | ಎನ್ನ | ಹಿತದಿಂದ ಪಾಲಿಸೋ ಜೀಯಾ 2 ಸರ್ವ ಕರ್ಮವು ಕ್ರೀಯಗಳಲಿ | ಅಲ್ಲಿ ಸರ್ವಸ್ವಾಮ್ಯವು ನಿನ್ನದಿರಲಿಸರ್ವದ ನಾಮ ನಾಲಿಗೆಲಿ | ನಿಂತು | ಸರ್ವತ್ರ ಎನ್ನ ಪಾಲಿಸಲಿ 3 ಕಾರಕ ಕ್ರಿಯ ದ್ರವ್ಯವೆಂಬ | ಭ್ರಮೆ | ಮೂರುಗಳನು ಕಳೆಯೆಂಬಸಾರ ಪ್ರಾರ್ಥನೆ ಇದೆಯೆಂಬ | ಎನ್ನ | ದೂರ ವ5À್ಪುದು ಮಾಣು ಬಿಂಬ 4 ತನು ಕರಣ ವಿಷಯಾದಿಗಳು | ಜಡ | ಮನದಿಂದಾಗುವ 5iರ್Àುಗಳುಅಣು ಜೀವಕ್ಕಾರೋಪಗಳು | ಮಾಡಿ | ಜನನ ಮರಣದ ಭವಣೆಗಳು 5 ಇತ್ತೆ ನೀ ಸ್ವಾತಂತ್ರ ಎನಗೆ | ಎಂಬ | ಶಾಸ್ತ್ರದ ಸೊಲ್ಲಿನ ಬಗೆಸುತ್ತು ಹುಟ್ಟುವ ಪರಿಯಾಗೆ | ಕಾಯೊ | ಭಕ್ತವತ್ಸಲ ದಯಾವಾಗೆ6 ಕರ್ಮ | ಮರ್ಮವ ತಿಳಿಸಲೋ ಧೊರೆಯೆ |ನಿರ್ಮಲಾತ್ಮನೆ ಮೊರೆಯಿಡುವೆ | ಎನ್ನ | ಕರ್ಮವ ಸುಡುವುದು ಹರಿಯೆ7 ಕರ್ಮ | ಗುರು | ಪ್ರಾಣಾಂತರ್ಗತಗೀವ ಮರ್ಮಜ್ಞಾನಾನು ಸಂಧಾನ ಪರ್ಮ | ಇತ್ತು ನೀನಾಗಿ ಪಾಲಿಸೊ ಧರ್ಮ 8 ಭಾವ ಕ್ರಿಯ ದ್ರವ್ಯಾದ್ವೈತ | ಮೂರು | ಭಾವಗಳಿಂದನುಷ್ಠಾತಶ್ರೀವರ ಎನಿಸೆನ್ನ ತಾತ | ಗುರು | ಗೋವಿಂದ ವಿಠಲ ಸುಪ್ರೀತ 9
--------------
ಗುರುಗೋವಿಂದವಿಠಲರು
ಬಂಧುಗಳದಾರಿಗಾರಿದ್ದರೇನು - ಇಷ್ಟಬಂಧು ತ್ರೈಜಗಕೆ ಶ್ರೀಹರಿಯಲ್ಲದೆ - ಮಿಕ್ಕಬಂದುಗಳದಾರಿಗಾರಿದ್ದರೇನು ಪ ಬ್ರಹ್ಮೇತಿ ಬಂದು ಕಾಡಲಾಗಿ ರುದ್ರಾದಿಗಳೇನ ಮಾಡುತಿರ್ದರಾ ಶೈಲದೊಳಗೆ 1 ಪತಿ ಏನ ಮಾಡುತಿರ್ದನುಮಿಂಡಿ ಪೆಣ್ಣನು ಸಭೆಯಲ್ಲಿ ಸೀರೆ ಸುಲಿಯಲುಗಂಡರೈವರು ನೋಡಿ ಏನ ಮಾಡುತಿರ್ದರಯ್ಯ 2 ಮೃಗಚಕ್ರವರ್ತಿ ಬಹುವರನಾಗಿ ಪೋಗುತ್ತಿರೆಮಿಗೆ ಸತಿಸುತರೇನ ಮಾಡುತಿರ್ದರುಮೃಗಮಾನವಾಕಾರ ಕಾಗಿನೆಲೆಯಾದಿಕೇಶವನಲ್ಲದೆಮಿಗು ಬಂಧುಗಳದಾರಿಗಾರಿದ್ದರೇನು 3
--------------
ಕನಕದಾಸ
ಬನ್ನಿರಿ ಬನ್ನಿರಿ ದಾಸರೊಂದಾಗಿ ಚನ್ನ ಕೇಶವನರಮನೆಗೆ ಮುಂದಾಗಿ ಪ ಬನ್ನಿರಿ ಹರುಷದಿ ಪೋಗುವಾ ಬೇಗದಿ ಸನ್ನುತ ತಾತನ ಮೆನೆಯೊಳಗಿರುವಾ ಅ.ಪ. ನಿತ್ಯ ನೀಲಾಂಜನೆ ಪರಮ ಪಾವನನ ಭೃತ್ಯರ ಸಲಹುವ ಬರ ಶ್ರೀಧರನ ಪ್ರತ್ಯುಪಕಾರವ ಬೇಡದೆ ಸಲಹುವ ಸತ್ಯನಾರಾಯಣ ದೇವರ ಗುಡಿಗೆ 1 ನಗಧರ ರಂಗನ ಖಗವಾಹನನ ಜಗದೊಳು ಮೆರೆಯುವ ಗೋವಳ ಹರಿಯ ಅಗಣಿತಮದನನ ಸನಕ ವಂದಿತನ ಭೃಗಕುಲ ಶ್ರೇಷ್ಠನ ದೇವರ ಗುಡಿಗೆ 2 ತರಳರ ಸಲಹುವ ಭಜಕರ ಪೊರೆಯುವ ಪರಿಪರಿ ರೂಪದಿ ಮೆರೆಯುವ ಪರಿಯ ಪರಮಾತ್ಮನನ್ನು ಭಕ್ತಿಯಲಿ ಕೀರ್ತಿಸಲಾಗ ಸರಸದಿ ದಾಸರಿಗೊಲಿವ ಕೇಶವನ 3
--------------
ಕರ್ಕಿ ಕೇಶವದಾಸ
ಬಯಗುತನಕ ಆಟ ಕೂಟ ಊಟದ ಕೆಲಸ ಉಂಡ ಮೇಲೆ ಶಯನ ಪ ಬಯಲಾಯಿತು ಈ ಒಗತನವೆಲ್ಲ ರಕ್ಷಿಸಯ್ಯ ರಘುಕುಲ ತಿಲಕ ಅ ಪುರಾಣವಿಲ್ಲ ಪುಣ್ಯಕತೆಯಿಲ್ಲ ಪಾರಾಯಣದಿ ಮನಸಿಲ್ಲತರೋಣ ಬರೋಣ ತಿನ್ನೋಣ ಮಲಗೋಣ ಮತ್ತೇಳೋಣ 1 ಕಣ್ಣಿಗೆ ಜೋಂಪು ಹತ್ತುವತನಕ ಅನ್ಯವಿಷಯ ಮಾತುಕತೆಯಾಟಹೆಣ್ಣು ಹೊನ್ನು ಮಣ್ಣು ಮಮಕಾರದಿ ಒಳಹೊರಗಿಣುಕಾಟ2 ಹೀಗಾಗಿ ನಿನ್ನಲ್ಲಿಗೆ ಬಂದೆ ಇನ್ನಾದರೂ ಸಲಹೊ ಸಿರಿಕಾಗಿನೆಲೆಯಾದಿಕೇಶವ ಶಿರಬಾಗಿ ಬೇಡಿಕೊಂಬೆ 3
--------------
ಕನಕದಾಸ
ಬಯಲ ಜಾತ್ರೆಗೆ ನಡೆಹೋಗುವ ಬಾರದಲೆ ಅಲ್ಲಿರುವ ಪ ಶಾಂತಿ ಎಂದೆಂಬ ಕಂಟಲೆಗಳು ಶಮೆ ಹುರಿಗೆಜ್ಜೆ ಎತ್ತುಗಳುದಾಂತಿ ಎಂದೆಂಬ ಕಾವಡಿಗಳು ದಮೆ ಎಂಬ ಹೂಜೆಗಳು1 ಮಂಗಳವೆಂಬ ಬಾಲಕರು ಮುಕ್ತಿ ಎಂಬ ಮುತ್ತೈದೆಯರುಸಂಗ ಹರರಹ ವಿಟಗಾರರು ಸೈರಣೆ ಎಂಬ ಹಿರಿಯರು 2 ಸಂತೋಷವೆಂಬ ಅಂಗಡಿಗುಂಪು ಸಹಜದ ಹೂಕಂಪುಶಾಂತರೆನಿಪ ದೊರೆಗಳ ಗುಂಪು ಸುಖ ಛತ್ರಿಯ ತಂಪು 3 ಓಂಕಾರನಾದದ ನಗಾರಿ ವೀಣಾನಾದದ ತುತ್ತೂರಿಸಂಕಲ್ಪ ಸುಳ್ಳೆಂಬ ತಂಬೂರಿ ಸಾಮವೆನಿಸುವ ಭೇರಿ 4 ಅಮೃತ ಬಿಂದುವಿನ ಮೊಗೆಯುದಾರಿದಾರಿಗೆ ಸೋಹಂಸ್ಮರಣೆ ದೃಢ ಮನವದು ಚಡಿಯು 5 ಆನಂದ ವನಗಳ ಸಾರುತ ಆಯಾಸ ಕಳೆಯುತ್ತಸ್ವಾನಂದ ಗೋಪುರ ಕಾಣುತ ಸುಮ್ಮಾನವ ಪಡೆಯುತ6 ಮೃಢನಾಳ ದ್ವಾರವ ಪೋಗುತ ಮುಂದೆ ಚಂದ್ರನ ಕಾಣುತಅಡರಿದ್ವಿದಳ ಸದರೇರುತ ಅತ್ತತ್ತ ಸಾರುತ 7 ಕಮಲ ಪೀಠವನೇರುವರ ಮಹೇಶನೆನ್ನು ಅವರ8 ತುರೀಯವೆಂದೆಂಬ ಬಯಲಗೂಡಿ ತಾವು ಹೋಗುವ ನಾಡಿಹರ್ಷದ ಧೂಳ ದರ್ಶನ ಮಾಡಿ ಹಾಯಿಗುಡಾರ ಹೂಡಿ9 ಶಿಂಶುಮಾರವೇ ದೇವರ ಪೀಠ ಸಿದ್ಧವೆಂಬ ಕವಾಟಸಂಶಯವಿಲ್ಲದ ಎಡೆಯಾಟ ತತ್ಪುರುಷರ ಕೂಟ10 ಸೂರ್ಯ ಕೋಟಿಗೆ ಘನವುಒತ್ತೊತ್ತು ಪೂರ್ಣಾಭಿಷೇಕ ಓಂ ಎಂದೆಂಬ ಸ್ವರವು 11 ಸುವಾಸನೆ ಎಂದೆಂಬ ಧೂಪವು ಸುಂದರ ಪುಷ್ಪಗಂಧತಾವು ಮಾಡುವ ಭಾವದಲಿಂದ ತೃಪ್ತಿ ನೈವೇದ್ಯ ಚಂದ12 ಎರಡಿಲ್ಲದೇಕಾರ್ತಿ ಬೆಳಗುತ ಎಲ್ಲೆಡೆ ತಾ ಹೊಳೆಯುತಹೊರ ವೊಳಗೆಂಬುದ ಮರೆಯುತ ಹೇಮದ ತಗಡಾಗಿ ಇರುತ13 ಬೆಳಕ ಕಂಡಾರತಿ ಎತ್ತುತ ಬೆಳಗನು ಬೆಳಗುತ್ತತಿಳಿದು ಪ್ರದಕ್ಷಿಣೆ ಮಾಡುತ ತೋರುವುದು ಬ್ರಹ್ಮವದೆನ್ನುತ 14 ಭಯದ ವಿಸರ್ಜನೆ ಮಾಡುತ ಬಯಲಾಗಿಯೆ ತೋರುತಬಯಲ ಚಿದಾನಂದನಿಗೆರಗುತ್ತ ಬ್ರಹ್ಮನಾಗಿ ತಾನಿರುತ 15
--------------
ಚಿದಾನಂದ ಅವಧೂತರು
ಬರದು ಬಂದು ದೂರಬ್ಯಾಡರೇ ನೀವೆಲ್ಲಾ ಹರಿಯಾ ನೆಲೆ ತಿಳಿಯಲು ಅಳವಲ್ಲಾ ದುರಳತನ ನಡಿಗೆಂದು ಇವಸಲ್ಲಾ 1 ಮುನಿನೆಂದು ಗುರುತ ವಿಡ ಬ್ಯಾಡಿರಮ್ಮಾ ಮನುಜರಂತೆ ಲೀಲೆ ದೋರುವ ರೀಗಮ್ಮಾ ಮುನಿಮನೋಹರ ದಾಯಕ ಪರಬೊಮ್ಮ ಘನ ಪುಣ್ಯದಿಂದ ಶಿಶು ವಾದನಮ್ಮ 2 ಹುಟ್ಟುತಲಿ ಸ್ವಹಿತದ ನುಡಿಯಾಡಿ ನೆಟ್ಟ ನೆವೆಯ ಮುನಿಗೆ ಹಾದಿಬೇಡಿ ಮುಟ್ಟಿ ಗೋಕುಲಕ ಬಂದದಯ ಮಾಡಿ ಇಷ್ಟರೊಳು ತಿಳಿಯ ಬಾರದಿನ್ನು ನೋಡಿ 3 ಚಿಕ್ಕತನದಲಿ ಮೊಲೆಗುಡ ಬಂದಾ ರಕ್ಕಸಿಯ ಅಸು ಹೀರಿದಾವ ಕೊಂದಾ ಕಕ್ಕಸದ ಕಾಳಿಂಗ ನೆಳೆದು ತಂದಾ ಮಕ್ಕೂಳಾಟಿಕೆ ಇದೇನು ನೋಡಿಛಂದಾ4 ನಿರುತ ತಮ್ಮಾ ತಮ್ಮ ಮನಿಯೊಳಿಹನೆಂದು ಹರಿಯಗುಣ ಹೇಳುವಿರಿ ಎಲ್ಲ ಬಂದು ಅರಿತು ನೋಡಲು ಒಬ್ಬ ಬಹುರೂಪ ವಿಡಿದು ಚರಿಪಗುರು ಮಹಿಪತಿಸ್ವಾಮಿಯಿಂದ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು