ಒಟ್ಟು 6899 ಕಡೆಗಳಲ್ಲಿ , 128 ದಾಸರು , 4614 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಕ್ಷಿಸೊ ಸ್ವಾಮಿ ನೀ ಪಕ್ಷಿ ಸುವಾಹನ ಭಿಕ್ಷೆ ಸುನೀಡೊ ನೀ ಲಕ್ಷ ಸುಸಾಧನ ಅಕ್ಷಯಾನಂದ ನೀ ಲಕ್ಷುಮಿ ಜೀವನ ಪಕ್ಷ ನೀ ಪ್ರಾಣಕ ಈಕ್ಷಿಸಿದವನ 1 ಸೃಷ್ಟಿಗಧಿಕ ನೀ ವಿಷ್ಣು ಜನಾರ್ಧನ ಕಷ್ಟ ನೀ ಹಿಂಗಿಸೊ ದುಷ್ಟರ ಮರ್ದನ ಶಿಷ್ಟರ ಪಾಲಕ ಶ್ರೇಷ್ಠ ನಾರಾಯಣ ದೃಷ್ಟಿಸಿ ನೋಡೊ ನೀ ಕೃಷ್ಣ ಕೃಪಾಘನ2 ಈಶನೆಂದರಿಯದೆ ದೋಷದ ರಾಶಿ ನಾ ವಾಸನೆ ಪೂರಿಸೊ ದಾಸರ ದಾಸ ನಾ ಏಸು ತಾ ಜನ್ಮಕೆ ಬಂದು ಸೂಸಿದೆನೊ ಹೇಸಿತು ಜೀವನ ಸ್ಮರಿಸಬೇಕೆಂದು ನಾ 3 ನಿಮ್ಮನೆ ನೋಡಬೇಕೆಂದು ಬಂದೆ ನಾ ಘಮ್ಮನೆ ಪೂರಿಸೊ ಭಾವನೆ ಕಂದನ ತಮ್ಮನೆ ಬೇಡಿಕೊಂಬುದು ತಾ ವಂದನ ಅಮ್ಮ ನಮ್ಮಪ್ಪನೆ ಬಂಧು ನೀ ಎಂದೆ ನಾ 4 ಕಾಣದ ಪಾಮರ ಹೀನ ಸೂಕರ ಏನು ತಾ ಬಲ್ಲದು ಲೂನದ ಸೂಕರ ನೀನೆ ದಯಾನಿಧೆ ಜ್ಞಾನದ ಸಾಗರ ನ್ಯೂನ ನೋಡದೆ ತಾರಿಸೊ ಶ್ರೀಧರ 5 ಪಾರ ನೀ ಗೆಲಿಸೊ ದ್ವಾರಕಿನಾಥನೆ ಸಾರಿ ನೀ ಬೋಧವ ತಾರಿಸೊ ದಾತನೆ ತೋರಿ ನೀ ಪಾದವ ಬೀರು ಸ್ವಹಿತನೆ ಸಿರಿ ಲೋಲನೆ ನೀಕರುಣಿಸಿ ಮಾತನೆ 6 ಪಾಲಿಸೊ ಪ್ರಾಣವ ಬಾಲಮುಕುಂದನೆ ಲಾಲನೆ ನೋಡು ಗೋಪಾಲ ಗೋವಿಂದನೆ ತ್ಯಕ್ತ ನಾ ತಾಳು ನೀ ಸಚ್ಚಿದಾನಂದನೆ ಕೀಲನೆ ಹೇಳು ನೀ ಭಕ್ತಿಯ ವಂದನೆ 7 ದೇವರ ದೇವನೆ ಕಾವ ಕರುಣನೆ ಜೀವದ ಜೀವ ನೀ ಸ್ವಾಮಿ ಸರ್ವೇಶನೆ ಭಾವದ ಭಾವ ನೀ ಸಾವಿರ ನಾಮನೆ ಸೇವೆಗೆ ಯೋಗ್ಯನ ಮಾಡು ಸರ್ವೋತ್ಮನೆ 8 ಹಿಂಡ ದೈವಕೆ ಪ್ರಚಂಡ ಪರೇಶನೆ ಗಂಡು ಹೆಣ್ಣಿಗೆ ತಾ ಒಬ್ಬ ಸರ್ವೇಶನೆ ಮಂಡಿ ಮರೆಯಲಿಹನೆ ಮಹೇಶನೆ ಕಂಡುಕಾಂಬ ಸುಖದೋರು ದೇವನೆ 9 ವೇದಕ ನಿಲ್ಕದಾಭೇದ್ಯ ಪುರುಷನೆ ಸಾರ ಸುರಸನೆ ಅದಿಗಿಂದತ್ತಲ್ಯಾನಾದಿ ನಿರ್ವಿಶೇಷನೆ ಹಾದಿದೋರಿಕೊಡೊ ಭಕ್ತಿಗೊಂದೀಶನೆ 10 ಮಹಿಪತಿಗೆ ನೀ ಸ್ವಾಮಿ ಶ್ರೀನಾಥನೆ ಬಾಹ್ಯ ಅಂತ್ರಕೆ ನೀನೆವೆ ಸುದಾತನೆ ಸೋಹ್ಯದೋರಿಕೊಡೊ ಸಾಹ್ಯವುಳ್ಳಾತನೆ ತ್ರಾಹಿಯಂದವನ ಮಾಡು ಸನಾಥನೆ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ರಕ್ಷಿಸೋ | ಬೇಗನೆ ಬಂದು ರಕ್ಷಿಸೊ | ಪ ಕುಕ್ಷಿನಂಬಿದೆ ಕಲ್ಪಭೂಜ | ಆಹಾ ಪೇಕಿಸದೆನ್ನನು ಈಕ್ಷಿಸಿ ಕರುಣದಿ ಅ.ಪ ಕೇಶವ ಖಳಕುಲ ನಿಧನ | ನರ ಕೇಸರಿ ಶ್ರೀಹಯವದನ | ಗುರು ಪಾದ ನಳಿನ | ಸಮೀ ರಾಶನ ಪರ್ಯಂಕಶಯನ | ಆಹಾ ದಾಶರಥಿಯೆ ಭವದಾಶೆ ಬಿಡಿಸಿ ತವ | ದಾಸ ಜನರ ಸಹವಾಸದೋಳಿಟ್ಟನ್ನ 1 ಪಶುಪಾಲ ಮಿಸುನೀಯ ವಸನ | ಧ್ರುವ ಪಶುಪತಿ ಸುತ ಗುಣಪೂರ್ಣ | ದುಷ್ಟ ಶಿಶುಪಾಲ ಮದವಿಭಂಜನ | ಪಾಹಿ | ನಿರಂಜನ | ಆಹಾ | ವಸುಗರ್ಭನ ಪೆತ್ತ ಕುಸುಮದಳೇಕ್ಷಣ | ವಸುಮತಿಯೊಳು ಎನ್ನ ಪಿಸುಣನೆಂದೆನಿಸದೆ 2 ನಾಶರಹಿತ ವನಮಾಲ | ಧರ ಶ್ರೀಶಾಮಸುಂದರವಿಠಲ | ಗುಡಾ ಕೇಶ ವರದ ಸುಶೀಲ | ಪಾಕ | ಶಾಸನಾನುಜ ಗಾನಲೋಲ | ಆಹಾ | ಪೂಶರಪಿತ ಸ್ವಪ್ರಕಾಶ ಪರಮ | ವಿ ಲಾಸವ್ಯಾಸ ಮಹಿದಾಸ ಲೋಕೇಶನೆ 3
--------------
ಶಾಮಸುಂದರ ವಿಠಲ
ರಕ್ಷಿಸೋ ಪವಮಾನ ಸದ್ಗುರುವರಾ ಪ ಜೀವರ ಬಂಧಗಳಿಂದ ಎಲ್ಲ ಪಾವನ ಮಾಳ್ಪದರಿಂದ ದೇವ ಪಾವನಮೂರ್ತಿಯು ನಿನ್ನ ಮುಖದಿ ಜಗ ತ್ಪಾವನ ಮಾಳ್ಪುದರಿಂದ ಪವನನೆಂಬೋರೆ ನಿನ್ನ ಅ.ಪ ಜ್ಞಾನೈಶ್ವರ್ಯ ವೈರಾಗ್ಯ ನಿನಗೆ ನಿನ್ನ ಸ್ವರೂಪ ಸ್ವಭಾವಕೆ ಯೋಗ್ಯ ನಿಜ ಘನ್ನ ಮಹಿಮ ನಿನ್ನ ಭಾಗ್ಯ | ಆಹಾ ತನು ಚತುಷ್ಟಯದೊಳಗನವರತ ವ್ಯಾಪ್ತನೋ ಇನ್ನೂ ಮುನ್ನೂ ಜಗತ್ಕಾರ್ಯ ನಿನ್ನದೋ ದೇವಾ1 ಬೃಹತಿನಾಮಕ ಕರುಣಾಳು ನಿನ್ನ ದೇಹದಿ ಭಗವದ್ರೂಪಗಳೂ ನಿತ್ಯನೋಡುತ ಅನೇಕಂಗಳು | ಆಹಾ ಬೃಹತಿ ಛಂದಸ್ಸು ಅನ್ನವು ಶ್ರೀಹರಿಗೆ ಛಂದಸ್ಸಿನಿಂದಾಚ್ಛಾದಿತ ತ್ವದ್ಗಾತ್ರನೊ2 ಪ್ರಾಣಾಪಾನ ವ್ಯಾನೋದಾನ ಸಮಾನಾದಿ ಪಂಚಪ್ರಾಣ ಜೀವ ಶ್ರೇಣಿಗಳೊಳಗೆ ನೀ ಪ್ರವೀಣ ಜಗತ್ರಾಣ ನೀನಹುದೋ ಸದ್ಗುಣ |ಆಹಾ ಪ್ರಾಣಾಪಾನದಿಂದ ದೇಹದ ಸ್ಥಿತಿ ಕಾರ್ಯಕ್ಷಣ ತಪ್ಪಲು ಕುಣಪನೆಂದಪರೋ ಈ ದೇಹಕೆ3 ಇಪ್ಪತ್ತೊಂದು ಸಾವಿರದಾರುನೂರು ಶ್ವಾಸ ತಪ್ಪದೆ ಜೀವರು ಮಾಡಿ ಅಹರ್ನಿಶಿ ದೇಹವ ಧರಿಪರೋ ನಿನ್ನ ಒಪ್ಪಿಗೆಯಂತೆ ಸಾಧಿಪರೋ | ಹಾ ಅಹೋರಾತ್ರಿ ಶ್ವಾಸನಿಯಾಮಕ ಜೀವರ್ಗೆ ಅಯುಮಾನವ ನೀವ ಮಾತರಿಶ್ವದೇವಾ 4 ನಿನ್ನಂತರದಿ ಇಟ್ಟು ಅವಸ್ಥಾಭೋಗ್ಯವನಿತ್ತು ತ್ವರದಿ | ಆಹಾ ಪಾವನ ಮೂರ್ತಿಗೆ ಅರ್ಪಿಸುತ್ತ ಶ್ರೀಪತಿ ಕರವ ಮುಗಿದು ನಿಂದಿಹೆ 5 ಪರಿಶುದ್ದ ಸತ್ವಾತ್ಮಕವಾಗಿ ಇನ್ನು ನಿರುತ ಪೂರ್ಣಪ್ರಜ್ಞನಾಗೀ ಜೀವ ಸ ರ್ವರೊಳು ಶುಚಿತಮನಾಗಿ ಇರ್ಪ ಮಾರುತ ನಿನ್ನೊಳು ಅನುವಾಗಿ |ಆಹಾ ಹರಿಯು ನಿನ್ನ ಶುಚಿ ತನುವಿನೊಳಿದ್ದು ಶುಚಿಹೃತ್ ಎಂದು ತಾ ನಿಂದು ನಲಿವನಯ್ಯ6 ಅಂಡಾವರಣದ ಗುಣತ್ರಯ ಕಂಡಿಹೆ ವ್ಯಾಪ್ತಸದ್ಗುಣ ಉ ದ್ದಂಡ ಮಹದ್ರೂಪನೆ ಮಹಘನ್ನ ಇನ್ನು ಮೃಡನಾಪೇಕ್ಷ ಶತಗುಣ | ಆಹಾ ತನುರೂಪದೊಳೆಲ್ಲ ಅಣುರೂಪವಾಗಿಹೆ ತೃಣಮೊದಲು ಸರ್ವಜೀವರೊಳು ವ್ಯಾಪ್ತನೊ7 ಅಂದು ತ್ರಿಕೋಟಿರೂಪದಲಿ ನಿಂತು ನಿಂದ ತ್ರಿವಿಕ್ರಮಾವತಾರದಲೀ ಸೇವೇ ಆ ನಂದದಿ ಸಲಿಸುತ್ತಲಲ್ಲಿ ಇನ್ನು ನಿಂದು ಅಂ ಡದ ಬಹಿರ್ಭಾಗದಲಿ |ಆಹಾ ಅಂಡ ಖರ್ಪರ ಉದ್ದಂಡ ಮೂರುತಿಯೊ 8 ವಾಯುಕೂರ್ಮನಾಗಿ ನಿಂದೇ ಜಗದಾದ್ಯಭಾರವು ಎಲ್ಲ ನಿನ್ನಿಂದೇ ಎಂದು ಕಾಯಜಪಿತ ತರುವ ಮುಂದೇ ನಿನ್ನ ಗಾಯತ್ರೀಪತಿಯ ಪಟ್ಟಕೆಂದೇ | ಆಹಾ ಶ್ರೀಯರಸಾ ಶ್ರೀ ವೇಂಕಟೇಶಾತ್ಮಕ ಉರಗಾದ್ರಿವಾಸವಿಠಲನ ನಿಜದಾಸ 9
--------------
ಉರಗಾದ್ರಿವಾಸವಿಠಲದಾಸರು
ರಕ್ಷಿಸೋ ಶ್ರೀ ವೇದವ್ಯಾಸ | ಬದರಿನಿವಾಸ | ಆಶ್ರಿತ ಜನತೋಷ ಪ ಭೃತ್ಯ ಮತ್ಸ್ಯ | ವ್ಯಕ್ತನಾದನು ಹರಿ ಅವ್ಯಕ್ತ | ಕರೆಸಿದ ಸತ್ಯ | ವತಿಯಸುತ ಗೋಪ್ತ 1 ಕಾಲ ತಾಪ | ಬಟ್ಟರು ಜನ ಪ್ರಲಾಪ |ಶ್ರೀಪತಿ ತಾಳ್ದನು ರೂಪ | ವ್ಯಾಸ ರೂಪ | ದೋಷ ನಿರ್ಲೇಪ |ದ್ವೀಪದೊಳುದಿಸಿತೀರೂಪ | ಯಮುನಾ ಸಮೀಪ | ಪರಾಶರ ಜನೆನಿಪ 2 ಸೂತ್ರ ದಾತ | ಎನ್ನೊಳು ಪ್ರೀತ | ನಾಗು ಭಕ್ತಿ ಪ್ರದಾತ 3 ಜನಿತ | ಸಕಲ ಭಸ್ಮೀಭೂತ 4 ಭೋಗಾದಿಂ ಪ್ರಾರಬ್ಧ ಪೋಗಾಡಿದಂಥ | ಕಾರ್ಯಾಖ್ಯ ಬ್ರಹ್ಮಪ್ರಾಪ್ತ |ಯೋಗೀಜನ ಪ್ರಳಯೇಪಿ ಅಜನ ಪ್ರಾಪ್ತ | ಇತ್ಯಾದ್ಯವಸ್ಥಾದಿಯೊಳ್ಗತ |ಮಾರ್ಗಗಳು ಶೇಷ ಗರುಡಾದಿಯೋಳ್ಗತ | ಈ ಪರೀಯಿಂ ಸಮಸ್ತ |ಯೋಗೀ ಜನಂಗಳಿಗೆ ಆ ಅಜಸಮೇತ | ವಿರಜಾ ಸ್ನಾನ ಪ್ರಾಪ್ತ ||ಸ್ನಾನದಿಂದಲಿ ಲಿಂಗನಾಶ | ಮಾಡುವೆ ಶ್ರೀಶ | ಆದರವರು ನಿರ್ದೋಷ |ಅನಂತರ್ಹರಿ ಉದರ ಪ್ರವೇಶ | ಕೆಲವರು ಶ್ರೀಶ | ಆನಂದವೇ ವಪುಷ |ಜ್ಞಾನಿ ಇನ್ನಿತರರು ತದ್ದೇಶ | ದಲ್ಲಿವಾಸ | ಆನಂದಾನನುಭವ ಶ್ರೀಶ |ನಾನಾ ಪರಿಯೋಗ್ಯರ ಶ್ರೀಶ | ಪ್ರಳಯದಲ್ಲೀಶ | ಧರಿಸುವಸರ್ವೇಶ 5 ಪರಿ ಕಾರಣಂಗಳಿಂದ ನಿನ್ನ | ಇಚ್ಚಾಖ್ಯ ಆವರಣವಪಸಾರಿಸೀ |ತುಷ್ಟೀಯಿಂದಲಿ ಸ್ವಸ್ತಯೋಗ್ಯಸುಖವ | ಅಭಿವ್ಯಕ್ತಿಂಗಳಂ ಗೈಯ್ಯುವಾ |ಲಕ್ಷ್ಣ ಮುಕ್ತಿದ ಮಾಯೆ ಪತಿಯು ಆದ | ಶ್ರೀವಾಸುದೇವನ ದರ್ಶನ ||ವಾಸುದೇವನ ಕಂಡನಂತರ | ಮತಿವಂತರ | ಪೊಗಿಸುವಾಗಾರ |ಶ್ರೀಸಿತ ದ್ವೀಪಾದಿ ಆಗಾರ | ವರ ಮಂದಿರ | ವೈಕುಂಠಾಗಾರ | ಲೇಸಾಗಿ ಸ್ವಯೋಗ್ಯ ಸುಖಸಾರ | ಅತಿಪರತರ | ಅನುಭವಿಪ ವಿಸ್ತಾರ | ಆಶಾಮಾತ್ರದಿ ಸರ್ವ ಸುಖಸಾರ | ಸೃಷ್ಟ್ಯಾದಿ ಇತರ | ಇತ್ತು ತೋಷಿಪೆ ಅವರ 6 ಚಾರು ಕೌಪೀನ ಮದನ ದರ ಪೋಲ್ವಧದನ | ತುಳಸಿಯ ವನ | ಮಾಲೆಗಳ್ಹಸನ |ನಂದನಂದನ ನಿನ್ನ ಕರುಣ | ಗುಣಾಭರಣ | ತೊಡಿಸಯ್ಯ ಪ್ರಧನ 6 ಪ್ರೀಯಾ ಪ್ರೀಯ ಸರ್ವ ವಿಷಯಕೆಲ್ಲ | ನೀನೇ ಮೂಲನೆಂದು ತಿಳಿಸೋ |ಕಾಯಾ ವಾಚಕ ಮಾನಸೀಕ ಸರ್ವಾ | ಕರ್ಮಾದಿಗಳೆಲ್ಲವಾ ||ಜೀಯಾ ನಿನ್ನಯ ಚರಣಕಿತ್ತು ನಮಿಪ | ಬಿಂಬಕ್ರಿಯಾಜ್ಞಾನವಾ ||ರಾಯಾ ನೀನೆನಗಿತ್ತು ಪಾಲಿಸಯ್ಯ ಮುದದೀ | ನಿನ್ನನ್ನು ನಾ ಬೇಡುವೆ ||ತುತಿಪ ಜನರ ಸುರಧೇನು | ಕಾಮಿತವನೆ | ಕರುಣಿಪ ಕಲ್ಪದ್ರುಮನೆ |ಮತಿಗೆಟ್ಟ ಮನುಜನು ನಾನೆ | ನಿನ್ನ ಪಾದವನೆ | ನಂಬಿ ಬಂದಿಹೆ ನಾನೇ |ಹಿತದಿಂದ ನೀನೆನ್ನ ಕರವನೆ | ಪಿಡಿ ಎಂಬೆನೆ | ನಾ ಬೇಡುವೆ ನಿದನೆ |ಅತುಳ ಮಹಿಮ ಜಗದೀಶನೆ | ಮಧ್ವೇಶನೆ | ಗುರು ಗೋವಿಂದ ವಿಠಲನೆ 8
--------------
ಗುರುಗೋವಿಂದವಿಠಲರು
ರಕ್ಷಿಸೋಯನ್ನ ರಕ್ಷಿಸೋ ರಕ್ಷಿಸೋ ಬೇಗ ಉಪೇಕ್ಷಿಸದಲೆ ಜಲ ಜಾಕ್ಷ ಯನ್ನ ಮೊರೆ ಪಕ್ಷಿವಾಹನ ದೊರೆ ಪ ವಾರಿಧಿ ಮತ್ಸ್ಯಾವತಾರದಿ ಧರಿಸಿ ಪೊಕ್ಕು ಘೋರದೈತ್ಯನ ಕೊಂದು ಇನ್ನು ಚಾರು ಚರಿತ ವಿಸ್ತಾರ ಶೃತಿಗಳನು ವಾರಿಜಾಸನಗಿತ್ತ ವರದ ಜಗನ್ನಾಥ 1 ವರಕೂರ್ಮನಾಗಿ ಮಂದರಗಿರಿ ಪೊತ್ತು ನಿರ್ಜರರಿಗೆ ಸುಧೆಯನುಣಿಸಿ ಹರುಷದಲಿ ಕರುಣಿಸೋಯಂದರೆ ಕಠಿಣತ್ವ ವಹಿಸುವರೇ ಪರಮ ಪುರುಷ ನೀನು ಭಜಕರ ಕಾಮಧೇನು 2 ಧರೆಯ ಕದ್ದು ಒಯ್ದವನ ಕೋಪದಿ ಘನತರ ಕೋರೆಯಲಿ ಸೆಳದೆ ದನುಜಹರ ವರಾಹನಾದ ಶ್ರೀ ವತ್ಸಲಾಂಛನ ದೇವ ಶರಣಜನ ಮಂದಾರ ಶರನಿಧಿ ಗಂಭೀರ 3 ಗರುಡಗಮನ ಶ್ರೀ ಹರಿ ಸರ್ವೋತ್ತಮನೆಂಬ ತರುಳನ ತಂದೆಯ ತಾಮಸದಿ ಪರಿಪರಿಹಿಂಸೆಯ ಪಡಿಸುತಿರಲು ನರಹರಿ ರೂಪತೋರಿ ಪ್ರಹ್ಲಾದಗೊಲಿದ ಧೊರೆ 4 ಬಲಿಯದಾನವು ಬೇಡಿ ಬ್ರಹ್ಮಾಂಡ ಭಾಂಡವು ಅಳೆದು ಮೂರು ಪಾದದೊಳಗೆ ಮಾಡಿ ತುಳಿದವನ ಪಾತಾಳಕಿಳಿಯಲು ವಾಮನ ಬಲಭೇದಿ ಸನ್ನತ ಪಾಲಿಸೋ ಪ್ರಖ್ಯಾತ 5 ಪರಶುರಾಮ ಬಾಹು ಬಲದಿ ಸಕಲ ರಾಜರನೆಲ್ಲ ಗೆದ್ದು ಸುಸ್ಥಿರ ಮೂರ್ತಿ ಧುರದಿಂದ ಭೂಮಿ ಭೂಸುರರಿಗೇ ಧಾರೆಯ ನೆರೆದ ಶ್ರೀಮದನಂತ ನಿರತದಿ ಭಗವಂತ 6 ಅನಿಮಿಷರೊಡೆಯ ಶರಣು ಶರಣೆನುತ ರಾವಣನನು ಜನು ವಿಭೀಷಣನು ಬರಲು ಘನದಿ ಪಂಕ್ತಿ ಕಂಧರನ ಜಯಿಸಿ ಲಂ- ಇನಕುಲ ಪಾವನ 7 ಬಲದು:ಶಾಸನ ಸೀರಿಸೆಳಿಯೇ ದ್ರೌಪದಿ ಮನದಲಿ ಕಾಮಿತಾರ್ಥ ಫಲದಾಯಕ ಮಾನವ ರಕ್ಷಿಸೆಂದು ಸ್ತುತಿಸಲು ಪೊರೆದೆ ಹಲಧರಾನುಜ ಮುದದಿ 8 ಅಂಗಜ ಪಿತ ತ್ರಿಪುರಾಂಗನೆಯರ ವ್ರತ ಭಂಗಮಾಡಿದೆ ಹಿಂಗದಲೇ ಮಂಗಳಮಹಿಮ ಕೃಪಾಂಗ ಗಂಗೆಯನು ಪಾದ 9 ಚಲುವ ಕುದುರೆಯನೇರಿ ಕಲ್ಕಿಕಯ್ಯೊಳು ಖಂಡೆಯ ಪಿಡಿದು ಝಳಪಿಸುತ ಕಲುಷಾತ್ಮರೆಲ್ಲರ ಖಂಡಿಸಿ ಧರ್ಮವು ಪರಿಪಾಲನೆಮಾಳ್ಪ ಶ್ರೀ ಭೂದುರ್ಗಾಧಿಪಾ 10 ಪಾವನಚರಿತ ಕೃಪಾವನ ರಾಶಿ ಶ್ರೀ ದೇವಕೀಸುತ `ಹೆನ್ನೆಪುರೀಶ’ ದೀನ ದೇವೋತ್ತಮ ದೀನ ಬಾಂಧವ ವೃಂದಾವನ ನಿಲಯಾನಂದ ಸುಂದರಕಾಯಾ 11
--------------
ಹೆನ್ನೆರಂಗದಾಸರು
ರಕ್ಷೆಸೆನ್ನ ಈ ಕ್ಷಣದಲುಪೇಕ್ಷೆ ಮಾಡದೆ ಪಕ್ಷಿವಾಹನ ಪರಮಪುರುಷ ಲಕ್ಷ್ಮಿನಾಯಕ ಪ ಅಂದಂದಿಂದ ಕೈಯಹಿಡಿದು ಚಂದದಿಂದ ಎನ್ನಬಿಡದೆ ಇಂದು ನಿನ್ನ ದ್ವಂದ್ವ ಚರಣಕ್ಹೊಂದಿದ ದಾಸನು ಎಂದು 1 ಕಷ್ಟಿ ಇವನು ಎಂದು ಕರುಣ ದೃಷ್ಟಿಯನೆ ತೋರುಬೇಗ ಸೃಷ್ಟಿಗೊಡೆಯ ನಾದ ಶ್ರೀ ಕೃಷ್ಣಮೂರುತಿ ನೀನೆ ಗತಿ 2 ಇಂದು ಮಾಡಿದಂಥದೆಂಥಾ ದೋಷವೊ ಹರಿಯೆ ಇಂದು ಎನ್ನ ಬಾಧಿಸುವುದು ಏನು ಕಾರಣವೊ ಕೃಷ್ಣಾ 3 ಸಜ್ಜನರ ರಕ್ಷಕ ದೇವ ಸರ್ವಜನರ ಪೋಷಕ ನೀನೆ ದುರ್ಜನರ ಖಂಡಿಸಿದ ಮೂಜ್ಜಗ ಪಾಲಕ ನೀನೇ ಎಂದೂ 4 ಪುಂಡರೀಕವರದ ಭೂಮಂಡಲಾಧಿಪತಿಯೆನಿಸಿ ಮಹಿಮವುಳ್ಳದೇವ 5 ಭಾವಜನಯ್ಯ ಭವ ಸ್ತೋತ್ರ ಪ್ರೀಯಾ ಪೊರೆಯದಲಿರುವದು ದೇವಾ 6 ಗಂಗೆ ಜನಕ ಮಂಗಳಾಂಗ ಕರುಣಾಸಾಗರ ಘನಗಂಭೀರಾ ರಂಗ `ಹೆನ್ನವಿಠಲ' ಕೃಪಾಂಗ ದೇವೋತ್ತುಂಗ ಹರಿಯೆ7
--------------
ಹೆನ್ನೆರಂಗದಾಸರು
ರಂಗ ಬಾರೈಯ್ಯ ದೇವೋತ್ತುಂಗ ದಯಾಂತರಂಗ | ಅಂಗಜನಯ್ಯ ನರಶಿಂಗಾ ಸಾರಸಾಪಾಂಗ || ಮಂಗಳ ಮಹಿಮಾ ವಿಹಂಗ ಘೋರ ಭವಭಂಗರಹಿತ ರಣರಂಗ ವಿಜಯ || ಸನ್ನುತ ಶೃಂಗಾರಾಂಗ ರಮಾಂಗನಾಸಂಗ ಪ ಶತಕೋಟಿ ಭಾಸ್ಕರ ಯುತತೇಜ ಮರುತಾಂತರ್ಗತ | ಹರಿಮೃದು ಭಾಷಣ | ಕೌಸ್ತು ಭಾಭರಣ | ಜಿತದಿತಿಸುತಬಾಲ | ಶ್ರಿತಭಕ್ತ ಮಂದಾರ | ಪತಿತ ಪಾವನ ಶ್ರೀರಾಮ ಪಟ್ಟಾಭಿರಾಮ | ಅತುಲಿತ ಚರಿತ ಕಾಮಿತ ಫಲದಾಯಕ | ಶತ ಧೃತಿ ಜನಕಾಚ್ಯುತ ಸರ್ವೋತ್ತಮ | ಸತತವು ನೀನೇ ಗತಿಯೆಂದೆನುತಲಿ | ಹಿತದಿ ನಾನು ನಿಮ್ಮ ಸ್ತುತಿಸುತಲಿರುವೆನು 1 ನಂದನಂದನ ವೇಣುನಾದ ವಿನೋದ ಜಗದ್ವಂದ್ಯ ಶ್ರೀವತ್ಸಲಾಂಛನ ವಾಸುಕಿಶಯನ | ಮಂದಹಾಸ ಮುಚುಕುಂದವರದ ರಾಕೇಂದುವದನ | ಗೋವಿಂದ ಇಂದಿರಾನಂದ ಸಿಂಧು ಗಂಭೀರಾ | ಮುಕುಂದ ಧರಣೀಧರ ಕುಂದರದನ ಕಾಳಿಂದಿರಮಣ ಗಜೇಂದ್ರನ ಸಲಹಿದ ಛೆಂದದೆನ್ನ ಮೊರೆಯಿಂದಿಗೆ ಲಾಲಿಸೊ ಪರಮಾತ್ಮ ಸರಸಿಚೋದರ ಸಕಲಾಣುರೇಣು ಪರಿಪೂರ್ಣ 2 ನಿರುಪಮಧೀರ ಶರಣಾಗತ ರಕ್ಷಣ ಮಧುಸೂದನ ಸುರವರ ಪೂಜಿತ ಚರಣಾಂಭೋರುಹ ಕೃಪಾಕಾರ ಹರುಷದಲಿ 3
--------------
ಹೆನ್ನೆರಂಗದಾಸರು
ರಂಗ ಬಾರೊ ನರಸಿಂಗ ಬಾರೊ ಪ. ಸಾಸಿರ ಮೂರುತಿ ವಾಸವವಂದ್ಯನೆಸಾಸಿರನಾಮದೊಡೆಯನೆಸಾಸಿರನಾಮದೊಡೆಯನೆ ನರಹರಿಕೇಶವ ನಮ್ಮ ಮನೆದೈವ 1 ವಾರಣವಂದ್ಯನೆ ಕಾರುಣ್ಯರೂಪನೆಪುರಾಣಗಳಲ್ಲಿ ಪೊಗಳುವಪುರಾಣಗಳಲ್ಲಿ ಪೊಗಳುವ ನರಹರಿನಾರಾಯಣ ನಮ್ಮ ಮನೆದೈವ2 ಯಾದವಕುಲದಲ್ಲಿ ಸಾಧುಗಳರಸನೆಭೇದಿಸಿ ದನುಜರ ಗೆಲಿದನೆಭೇದಿಸಿ ದನುಜರ ಗೆಲಿದನೆ ನರಹರಿಮಾಧವ ನಮ್ಮ ಮನೆದೈವ 3 ದೇವೆಂದ್ರ ಮಳೆಗರೆಯೆ ಗೋವರ್ಧನ ಗಿರಿಯೆತ್ತಿಆ ಗಿರಿಯ ಶ್ರೀಕೃಷ್ಣ ಕೊಡೆಮಾಡಿಆ ಗಿರಿಯ ಶ್ರೀಕೃಷ್ಣ ಕೊಡೆಮಾಡಿ ಕಾಯಿದನೆಗೋವಿಂದ ನಮ್ಮ ಮನೆದೈವ 4 ಸೃಷ್ಟಿಗೆ ಕರ್ತನೆ ದುಷ್ಟಕಂಸನ ಗೆಲಿದುಶಿಷ್ಟಪರಿಪಾಲನೆನಿಸಿದಶಿಷ್ಟಪರಿಪಾಲನೆನಿಸಿದ ನರಹರಿವಿಷ್ಣುವೆ ನಮ್ಮ ಮನೆದೈವ5 ಮಧುವೆಂಬೊ ದೈತ್ಯನ ಮುದದಿಂದ ಗೆಲಿದನೆವಿದುರನ ಮನೆಯಲಿ ನಲಿದುಂಡವಿದುರನ ಮನೆಯಲಿ ನಲಿದುಂಡ ನರಹರಿಮಧುಸೂದನ ನಮ್ಮ ಮನೆದೈವ 6 ಚಕ್ರವ ಪಿಡಿದನೆ ಭೂಚಕ್ರವ ಗೆಲಿದನೆಅಕ್ರೂರನೊಡನೆ ಮಧುರೆಗೆಅಕ್ರೂರನೊಡನೆ ಮಧುರೆಗೆ ಪೋದ ತ್ರಿ-ವಿಕ್ರಮ ನಮ್ಮ ಮನೆದೈವ7 ಸಾಮವನೋದುತ್ತ ದಾನವ ಬೇಡುತ್ತನಾಮದ ಮಹಿಮೆ ಪೊಗಳುತ್ತನಾಮದ ಮಹಿಮೆ ಪೊಗಳುತ್ತ ನರಹರಿವಾಮನ ನಮ್ಮ ಮನೆದೈವ8 ಶ್ರೀಧರ ಎಸಿಸಿದ ಶ್ರೀವತ್ಸ ಲಾಂಛನಶ್ರೀಧರ ಗೋಪೀತನಯನೆ ಶ್ರೀಧರ ಗೋಪೀತನಯನೆ ನರಹರಿಶ್ರೀಧರ ನಮ್ಮ ಮನೆದೈವ 9 ಋಷಿಜನ ವಂದ್ಯನೆ ಬಿಸಜನಾಭನೆ ದೇವಋಷಿಜನರಿಗೆಲ್ಲ ಅಭಯವಋಷಿಜನರಿಗೆಲ್ಲ ಅಭಯವ ಕೊಡುವೋನೆಹೃಷಿಕೇಶನೆ ನಮ್ಮ ಮನೆದೈವ10 ಪದುಮಸಂಭವಪಿತ ಪದುಮದಾಮೋದರ[ಪದುಮ]ದಿಂದಭಯವ ಕೊಡುವೋನೆ[ಪದುಮ]ದಿಂದಭಯವ ಕೊಡುವೋನೆ ನರಹರಿಪದುಮನಾಭನೆ ನಮ್ಮ ಮನೆದೈವ 11 ನಾಮದ ಮಹಿಮೆಯ ಪ್ರೇಮದಿ ಪೊಗಳಲುಕಾಮಿತಾರ್ಥಗಳ ಕೊಡುವೋನೆಕಾಮಿತಾರ್ಥಗಳ ಕೊಡುವೋನೆ ನರಹರಿದಾಮೋದರ ನಮ್ಮ ಮನೆದೈವ 12 ಸಂಕಟಗಳ ತರಿವೋನೆ ಪಂಕಜನಾಭನೆಶಂಕೆಯಿಲ್ಲದೆ ಅಸುರರಶಂಕೆಯಿಲ್ಲದೆ ಅಸುರರ ಸಂಹರಿಸಿದಸಂಕರ್ಷಣ ನಮ್ಮ ಮನೆದೈವ 13 ವಸುದೇವತನಯನೆ ಶಿಶುಪಾಲನ ಗೆಲಿದನೆವಶವ ಮಾಡಿದೆಯೊ ತ್ರಿಪುರರವಶವ ಮಾಡಿದೆಯೊ ತ್ರಿಪುರರ ನರಹರಿವಾಸುದೇವ ನಮ್ಮ ಮನೆದೈವ14 ಶುದ್ಧಸ್ವರೂಪನೆ ಶುದ್ಧ ಭಕ್ತರನು ಸಲಹಯ್ಯಹದ್ದುವಾಹನನಾದ ದೇವನೆಹದ್ದುವಾಹನನಾದ ದೇವನೆ ನರಹರಿಪ್ರದ್ಯುಮ್ನ ನಮ್ಮ ಮನೆದೈವ 15 ವನಜಲೋಚನ ಹರಿ ವಿನಯ ಉಳ್ಳವನೆಧ್ವನಿಕೇಳಿ ಬಂದ ಕುಬುಜೆಯ ಧ್ವನಿಕೇಳಿ ಬಂದ ಕುಬುಜೆಯ ನರಹರಿಅನಿರುದ್ಧ ನಮ್ಮ ಮನೆದೈವ 16 ಪಾರಿಜಾತದ ಹೂವ ನಾರಿಗೆ ಇತ್ತನೆವೀರ ದಾನವರ ಗೆಲಿದನೆವೀರ ದಾನವರ ಗೆಲಿದನೆ ನರಹರಿಪುರುಷೋತ್ತಮ ನಮ್ಮ ಮನೆದೈವ 17 ಅಕ್ಷಯಪದವೀವ ಪಕ್ಷಿವಾಹನಸ್ವಾಮಿಕುಕ್ಷಿಯೊಳೀರೇಳು ಭುವನವಕುಕ್ಷಿಯೊಳೀರೇಳು [ಭುವನವನಾಳಿದ] ನರಹರಿ ಅ-ಧೋಕ್ಷಜ ನಮ್ಮ ಮನೆದೈವ18 ನರಕಾಸುರನ ಕೊಂದು ಹಿರಣ್ಯನ ಮರ್ದಿಸಿಕರುಳ ಬಗೆದು ವನಮಾಲೆ ಹಾಕಿಕರುಳ ಬಗೆದು ವನಮಾಲೆ ಹಾಕಿದ ಹರಿನರಸಿಂಹನೆ ನಮ್ಮ ಮನೆದೈವ19 ಅಚ್ಚ್ಚುತಾನಂತನೆ ಸಚ್ಚಿದಾನಂದನೆ[ಮಚ್ಚಾವತಾರದಿ] ನಲಿದನೆ[ಮಚ್ಚಾವತಾರದಿ] ನಲಿದನೆ ನರಹರಿಅಚ್ಚುತ ನಮ್ಮ ಮನೆದೈವ 20 ಜಾನಕಿರಮಣನೆ ದಾನವಾಂತಕನೆದೀನರಕ್ಷಕನೆ ಸಲಹಯ್ಯದೀನರಕ್ಷಕನೆ ಸಲಹಯ್ಯ ನರಹರಿಜನಾರ್ದನ ನಮ್ಮ ಮನೆದೈವ 21 ಅಪರಿಮಿತಮಹಿಮನೆ ವಿಪರೀತ ಚರಿತನೆ[ಗುಪಿತವೇಷಗಳ] ತಾಳಿದನೆ[ಗುಪಿತವೇಷಗಳ] ತಾಳಿದ ನರಹರಿಉಪೇಂದ್ರ ನಮ್ಮ ಮನೆದೈವ 22 ಹರನ ಭಸ್ಮಾಸುರನು ಮರಳಿ ಬೆನ್ನ್ಹತ್ತಲುತರುಣಿರೂಪವನು ತಾಳಿದÀನೆತರುಣಿರೂಪವನು ತಾಳಿದ ನರಹರಿ ಶ್ರೀ-ಹರಿಯೆ ನಮ್ಮ ಮನೆದೈವ 23 ಕೃಷ್ಣಾವತಾರದಲಿ ದುಷ್ಟರ ಗೆಲಿದನೆವೃಷ್ಣಿಯರ [ಕುಲತಿಲಕನೆ]ವೃಷ್ಣಿಯರ [ಕುಲತಿಲಕನೆ] ನರಹರಿ ಶ್ರೀ-ಕೃಷ್ಣನೆ ನಮ್ಮ ಮನೆದೈವ 24 ಇಪ್ಪತ್ತು ನಾಲ್ಕು ನಾಮಂಗಳ ಪಾಡುವೆನುಅಪ್ಪ ಕೇಶವನ ಚರಿತೆಯನುಅಪ್ಪ ಕೇಶವನ ಚರಿತೆಯನು ಪಾಡಲುಒಪ್ಪಿಸಿಕೊಳ್ಳುವ ಹಯವದನ25
--------------
ವಾದಿರಾಜ
ರಂಗ ಮಂಗಳಂ ಸದಾ ಬೃಂದಾವನ ವಿಹಾರಿ ಪ ಕುಂದ ದಂದದಂತಿಹ ದಂತ ಭಾಸಿತ 1 ತುಳಸಿ ರೂಪದ ಅಲಕಭಾಸಿತಾಮಲಕ ಸನ್ನಿಭ ತಿಲಕ ಭಾಸುರ 2 ಕುಂಡಲೋಜ್ವಲಾ ಖಂಡಸೋದರ ಜಂಡರಾಕ್ಷಸ ಖಂಡನಶೀಲ 3 ಧೇನುನಾಮಕ ನಗರನಾಯಕ ಮಾನಿನೀ ಪ್ರಿಯ ಶ್ರೀನರಹರೆ 4
--------------
ಬೇಟೆರಾಯ ದೀಕ್ಷಿತರು
ರಂಗ ರಂಗನಾಥ ಬೇಗ ಬಾರೋ ಪ ತುಂಗಮಹಿಮ ಬಂದು ಭವಭಂಗ ಮಾಡೋ ಅ.ಪ ಇಂದು ಬಂದೆ ಕುಂದುಎಲ್ಲಹಿಂದುದೂಡೋ ಮುಂದುಮಾಡಿ ಛಂದಭಕ್ತಿ ಕಂದನೆಂದು ಕೈಯ ಪಿಡಿಯೋ 1 ಬಂಧುವಲ್ಲೆ ನೀನೇ ಜಗಕೆ ನಂದಶಯಸ ಬಂಧಮೋಚಕಾ ಕಾವೆ ಪೇಳುಗೋವಿಂದಾ 2 ಬಿಂಬನೀನು ಹೌದು ಪ್ರತಿಬಿಂಬ ನಾನು ನನ್ನ ವ್ಯಾಪಾರ ಅಂಬೋದೇಕೋ ದೋಷಿಯೆಂತೆನ್ನಾ 3 ಹಂಬಲವ ಬಿಟ್ಟುಸಕಲ ನಂಬಿದೆನೋ ಸ್ವಾಮಿಯೆಂತೆಂದು ತುಂಬಿಶುಧ್ದ ಜ್ಞಾನ ಭಕುತಿ ಅಂಬುಜಾಕ್ಷಯಿಂಬು ನೀಡೈಯ್ಯಾ4 ಭುಕ್ತಿ ನೀನೇ ಪ್ರಾಣ ನೀನೆಸರ್ವಸ್ವ ಏನು ಇನ್ನು ಮಾಡಲಾಪೆ ನೀನೆವಲಿದು ಕಾಯಬೇಕೈಯ್ಯ5 ವಾಸುದೇವ ಪೂರ್ಣ ಸುದ್ಗುಣಾ ತೋಷಕಾಯ ಶ್ರೀಶನಿನ್ನ ದಾಸನೆಂದು ಒಪ್ಪಿಕೊಳ್ಳಯ್ಯ 6 ಏಕಾನೇಕರೂಪ ಸಕಲ ಲೋಕ ಸೃಜಿಸಿ ಅಳಿವೆ ಅನೀಕಾ ಬೇಕು ಎನಿಪೆ ಭಕ್ತರಲ್ಲಿ ಸಾಕಬೇಕು ಶ್ರೀಗೆ ನಾಯಕ 7 ಮೋದ ಪೂರ್ಣ ಬಾದರಾಯಣಾ ಆದಿಮಧ್ಯ ಅಂತ್ಯದೂರ ಸಾಧುಪ್ರಾಪ್ಯನೇಮ ವರ್ಜಿತಾ 8 ಶರಣು ಶರಣು ಮಧ್ವಸದನ ಶರಣು ಶರಣು ಬೃಹತಿಪ್ರತಿಪಾದ್ಯ ಶರಣು ಶರಣು “ಕೃಷ್ಣವಿಠಲ” ಶರಣು ರಂಗ ಕರುಣಾ ಸಾಗರ9
--------------
ಕೃಷ್ಣವಿಠಲದಾಸರು
ರಂಗಧಾಮ ಭುಜಂಗ ಶಯನ ಮಂಗಳಾತ್ಮಕನೆ ಶ್ರೀಶನೆ ಪ ಗಂಗಾಜನಕ ಉತ್ತುಂಗ ಮಹಿಮನೆ ಸಂಗರಹಿತನೆ ಭಂಗಹರಿಪನೆ ಅ.ಪ ಶ್ರೀಶ ನಿನ್ನನು ಪ್ರಾರ್ಥಿಪರಘ ಶೋಧಿಸೆನುತ ಶ್ರೀ ಸಮೇತರಾಗಿ ಭಕ್ತರ ಪೋಷಿಸೆನ್ನುತ ವಾಸುದೇವ ಅನಂತಮಹಿಮ ಶ್ರೀಶನೆನ್ನುತ ದಾಸರೆಲ್ಲರು ಘೋಷಿಸುವರು ಶೇಷಶಯನ ರಕ್ಷಿಸೆನುತ 1 ಸಾಧುಜನ ಹೃದಯವಾಸನೆನ್ನುತ ಪೇಳ್ವರೊ ಸಾಧನ ಜೀವರಿಗೆ ಪರಮಪ್ರಿಯನೆಂಬರೊ ಮೋದತೀರ್ಥ ಸುಧಾರಸ ಸೇವಿಸಿರೆಂಬರೋ ಆದಿ ಪುರುಷ ಅನಾದಿ ಅನಂತ ಮಹಿಮನೆಂಬರೊ2 ಅಕ್ಷಯಗುಣ ಪೂರ್ಣಸರ್ವರ ರಕ್ಷಿಸೆನ್ನುತಲಿ ಲಕ್ಷ್ಮಿಪತಿಯೆ ಪ್ರಾರ್ಥಿಸುವೆನು ಈಕ್ಷಿಸೆನುತಲಿ ಪಕ್ಷಿವಾಹನವೇರಿ ಮೆರೆವ ಅದೋಕ್ಷಜನೆನುತಲಿ ನಿತ್ಯ ನಿತ್ಯದಲಿ 3 ಶೋಭಿಪ ನಿನ್ನ ರೂಪ ಹೃದಯದಲಿ ಕಾಣಲು ಶೋಭಕೃತು ಸಂವತ್ಸರದಲಿ ನಿನ್ನ ಪಾಡಲು ಶೋಭನಂಗಳನ್ನೆ ಕೊಡುವ ಸ್ವಾಮಿ ಎನ್ನಲು 4 ಕಡಲಶಯನ ಮೃಡನ ಸಖನೆ ಬಿಡದೆ ರಕ್ಷಿಸು ತಡೆಯದೆ ನಿನ್ನ ಚರಣ ಸ್ಮರಣೆ ಬಿಡದೆ ಕರುಣಿಸು ಬಿಡದಲೇ ಬಹಮನದ ತಾಪವೆಲ್ಲ ನೀಗಿಸುಕಡಲೊಡೆಯನೆ ಕಮಲನಾಭ ವಿಠ್ಠಲ ಪಾಲಿಸು 5
--------------
ನಿಡಗುರುಕಿ ಜೀವೂಬಾಯಿ
ರಂಗನಟ್ಟುಳಿ ಕೇಳಿ ಗೋಪೆಮ್ಮಾ ರಸಗನಾಹಲ ವಂಗದಿಂದ ಕಾಡುವನಮ್ಮಾ ಬಾಲನೇ ಗೊಪಾಲನೇ ಪ ಹಾಲು ಮೊಸರು ಬೆಣ್ಣೆ ಮಾರಲು ಬಂದರಾ ಚಿಕ್ಕ ಬಾಲೆರ ನೋಡುತ ಮೊಗಚಂದಿರಾ ಅವರಾ ಶಾಲೆಯ ಸೆಳೆದು ಸುಮ್ಮನೇ ನಿಂದಿರಾ ಬಟ್ಟ ಮೊಲೆಯನು ಚಂಡು ಕುಡೆಂಬಾ ಮಂದರಾಧರ ಸುಂದರಾ 1 ನಾರೇರಾ ಸೀರೆಯಾ ಕದ್ದಾ ಪುಂಡನೇ ಮರ ನೇಚಾಳಿಸಿ ನುಡಿದ ಪ್ರಚಂಡನೇ ಕೈಯ್ಯ ದೋರಿಯರಡು ಎಂದು ಲಜ್ಜೆಯ ಕೊಂಡನೇ ಬಲು ಭಂಡನೇ 2 ಕಂಸನರಮನೆ ಬಲಗುಂದಿತೇ ನಂದ ನಂಶಕ ವಡೆತನ ಬಂದಿತೇ ಮುರ ದುರುಳ ತನವು ಸಂದಿತೇ ಇನ್ನು ಸಂಶಯಾತಕ ಮಹಿಪತಿ ಸುತ ವಂದಿತೇ ಮನಕ ಬಂದಿತೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಂಗನಾಥ ಪಾಲಿಸೆನ್ನ ಮಂಗಳಾಂಗ ಶ್ರೀಶ ಬೇಗ ಪ ನಿನ್ನ ಭಜನೆಯನ್ನು ಗೈವೆ ಪನ್ನಗಾರಿವಾಹ ಹರೆ ಸ್ವರ್ಣವಸನ ಭೂಷಿತಾಂಗ ಸನ್ನುತಾಂಗ ಧೀರಶೂರ 1 ದುಷ್ಟರನ್ನು ಶಿಕ್ಷಿಸುತ್ತ ಸೃಷ್ಟಿಗೊಡೆಯನೆನಿಸಿ ನೀನು ಇಷ್ಟ ವರಗಳನ್ನು ಕೊಟ್ಟು ಶ್ರೇಷ್ಟನೆನಿಸು ನಂಬಿದೆನು 2 ಕಾಮಿತಾರ್ಥ ಫಲಗಳೀವ ಕಾಮ ಜನಕ ದೇವನೆ ಧೇನುನಗರದಲ್ಲಿ ನೆಲಸಿ ನೇಮದಿಂದ ಪೂಜೆಗೊಂಬೆ 3
--------------
ಬೇಟೆರಾಯ ದೀಕ್ಷಿತರು
ರಂಗನಾಥ ಮಾಂ ಗಂಗಾಜನಕ ತುಂಗ ಮಹಿಮ ಮಂಗಳಾಂಗ ಪಾಹಿ ಪ ತಿಂಗಳ ತೇಜದಲಿ ಪೊಳೆಯುತ ಕಂಗೊಳಿಸುವ ಮುಕುಟ ಮಂಡಿತ ಬಂಗಾರದಾಭರಣ ಭೂಷಿತ ಶೃಂಗಾರದಿ ರಥವನೇರುತ ಮಂಗಳ ವಾದ್ಯಂಗಳುಲಿಯೆ ರಂಗನಾಥ ಪ್ರತಿವರ್ಷದಿ ತುಂಗಛತ್ರ ಚಾಮರ ವ್ಯಜ- ನಂಗಳ ವಿಭವದಿ ಬರುತಿರೆ ಕಂಗಳಿಂದ ನೋಳ್ಪ ಭಕ್ತ ಜಂಗುಳಿ ಪಾಲಿಸಲೋಸುಗ ಮಂಗಳಸಿರಿ ಜಾಲಹಳ್ಳಿ ಪುರನಿಲಯ ಪೊರೆ ಎನ್ನ1 ಹಿಂದಕೆ ಮುದಗಲ್ಲು ಪುರದಿ ಬಂದಿಹ ಉಪ್ಪಾರ ಜನದಿ ಬಂದು ಗೋಣಿಯೊಳಗೆ ಮುದದಿ ನಿಂದಿಯೊ ಪದಮೆಟ್ಟೆ ಬೆಟ್ಟದಿ ಅಂದಿನ ರಾತಿಯ ಸ್ವಪ್ನದಿ ಸಂದರ್ಶನವಿತ್ತು ಪುರದಿ ಮಂದಿರಕಾರ್ಯವ ಸೂಚಿಸ- ಲಂದು ರಾಯಗೌಡನಿಂದ ಬಂಧುರದಲಿ ನಿರ್ಮಿತ ಆ- ನಂದನಿಲಯ ಮಂದಿರ ಮು ಕುಂದನಂದ ಕಂದನೆ ಮದ್ ಹೃದಯದಲಿ ಸದಾತೋರೋ2 ವಾರಿಚರ ಮಂದರಧರ ಭೂ ಚೋರಮಥನ ಘೋರರೂಪನೆ ಚಾರು ಬ್ರಹ್ಮಚಾರಿ ವಾಮನ ಶೂರ ಪರಶುರಾಮನೆ ನಮೊ ಧಾರುಣಿ ಜಾವಲ್ಲಭ ಕಂ- ಸಾರಿ ವಸನದೂರನೆ ಹಯ ವೇರಿ ದುಷ್ಟ ದಿತಿಜರ ಭಯ ದೂರ ಮಾಡಿ ಕಾವದೇವ ಧಾರುಣಿಸುರ ಪರಿಪಾಲಕ ವಾರಿಜಭವ ನುತ ಕಾರ್ಪರಾ- ಗಾರವೀರ ನಾರಸಿಂಹ ನಮಿಸುವೆನು ರಮಾರಮಣ3
--------------
ಕಾರ್ಪರ ನರಹರಿದಾಸರು
ರಂಗನಾಥನ್ನ ಈ ಕಂಗಳಿಂದಲಿ ಕಂಡು ಹಿಂಡು ಪ. ಮಂಗಳಾತ್ಮಕ ದೇವ ಮಮ ಸ್ವಾಮಿ ಸಲಹೆಂದು ಅಂಘ್ರಿಗಳಿಗೆರಗಿ ನುತಿಪೇ ಸ್ತುತಿಪೇ ಅ. ಮಾಂಡವ್ಯರಿಗೆ ವಲಿದು ಶ್ರೀನಿಕೇತನ ದೇವ ಗಂಡಕೀಶಿಲೆ ರೂಪದಲ್ಲಿ ಅಂಡಜವಾಹನನು ಉದ್ಭವಿಸಿ ಸ್ವರ್ಣಾದ್ರಿ ಎಂಬ ಸುಕ್ಷೇತ್ರದಲ್ಲೀ ಹಿಂಡುಭಕ್ತರ ಸೇವೆ ಕೈಯಕೊಳುತ ಬದಿಯಲ್ಲಿ ನಿಂದು ವಿಗ್ರಹ ರೂಪದಲ್ಲೀ ಕಂಡು ಪುಳಕಾಂಕಿತದಿ ಕರುಣ ಮೂರ್ತಿಯ ನುತಿಸಿ ಕೊಂಡಾಡಿ ದಣಿದೆ ನಿಂದೂ ಇಂದೂ 1 ಶಂಖಚಕ್ರಾಂಕಿತದ ಚತುರ್ಭಜವು ಶ್ರೀವತ್ಸ ಪಂಕಜಾಕ್ಷಿಯರುಭಯದಿ ಶಂಕೆಯಿಲ್ಲದ ಭಕ್ತರಿಗೆ ವಲಿವ ಸೌಂದರ್ಯಾ ಲಂಕಾರ ಉಡಿಗೆ ಮುದದಿ ಪಂಕಜಾಸನ ಮುಖ್ಯದಿವಿಜಗಣ ಸೇವಿತನು ಕಿಂಕರರಿಗೊಲಿವ ದಯದೀ ವಂಖಿ ಬಾಪುರಿ ತೋಳು ಕಡಗ ಕಾಲ್ಗೆಜ್ಜೆಗಳು ಕಂಕಣ ಕಿರೀಟ ನಿಟ್ಟಾ ದಿಟ್ಟಾ 2 ಆಗಮವ ಅಜಗಿತ್ತು ಸುರರಿಗಮೃತವಿತ್ತು ಭೂದೇವಿ ಭಯ ಬಿಡಿಸಿದಾ ಬೇಗ ಕಂಬದಿ ಬಂದು ಮಗುವ ರಕ್ಷಿಸಿ ಬಲಿಯ ಯಾಗದಲ್ಲಿ ಭೂ ಬೇಡಿದಾ ನೀಗಿ ಕ್ಷತ್ರಿಯ ಕುಲ ದಶಶಿರಿನ ಸಂಹರಿಸಿ ಮಾಗಧನ ಬಲವ ಮುರಿದಾ ಅಂಬರ ಕಲ್ಕಿ ಗೋಪಾಲಕೃಷ್ಣವಿಠಲಾ ಮಾಗಡಿ ತಿರುಮಲೇಶಾ ಶ್ರೀಶಾ 3
--------------
ಅಂಬಾಬಾಯಿ