ಒಟ್ಟು 56123 ಕಡೆಗಳಲ್ಲಿ , 139 ದಾಸರು , 12212 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೇಳಕ್ಕಯ್ಯ ನಾ ಮಾಡಿದ ಮದುವೆ ಮನಸಿಗೆ ಬರುತ್ತದೆಕೇಳಕ್ಕಯ್ಯ ನಾ ಮಾಡಿದ ಮದುವೆ ಮನಸ್ಸಿಗೆ ಬರುತ್ತದೆ ಪ ಮುಂಡಕೆ ದಂಡೆಯ ಮಾಡಿಸಿದೆ ಮುಸುಕಲಿ ಸೋಭಾನ ಮಾಡಿದೆಮುಂಡಕೆ ರುಂಡವ ಕೂಡಿಸಿದೆ ಮಂಗಳಾರತಿ ಬೆಳಗಿಸಿದೆ 1 ಕೋತಿಯು ಅಲ್ಲಿ ಕುಣಿಯುತ್ತಿತ್ತು ಕೋಣವು ಮದ್ದಲೆ ಬಾರಿಸುತ್ತಿತ್ತುಕೋತಿಯ ಕಾಲನೆ ಮುರಿದೆ ಕೋಣನ ಮದ್ದಲೆ ಮುರಿದೆ2 ಹಾರುವವನನು ಕಟ್ಟಿ ಹಾಕಿಸಿದೆ ಹಾದಿಲಿ ದೀಪವ ಹಿಡಿಸಿದೆಮೂರು ಮನೆಯ ಮೇಲಟ್ಟದಲ್ಲಿ ಮೆರವಣಿಗೆಯನೆ ಮಾಡಿಸಿದೆ3 ಒಳ್ಳೆ ಬೀಗರ ಬೆಳ್ಳಿ ತಳಿಗೆಯಲ್ಲಿ ಎಲ್ಲರ ಒತ್ತೊತ್ತಾಗಿ ಕೂರಿಸಿದೆಬೆಲ್ಲದ ಪರಮಾನ್ನವನೆ ಉಣಿಸಿದೆ ಬೆಳ್ಳನೆ ಉಡುಗೊರೆ ಹೊದಿಸಿದೆ 4 ಗುಡ್ಡ ಮೂರ ಕೊನೆಯಲಿದ್ದ ಅಡ್ಡಗಲದೆ ದೇವರ ಮನೆಗೊಯ್ದುದೊಡ್ಡ ಚಿದಾನಂದ ಗುರುವಿಗೆ ನಾ ಅಡ್ಡಗೆಡವಿ ಮದುವೆ ಮಾಡಿಸಿದೆ5
--------------
ಚಿದಾನಂದ ಅವಧೂತರು
ಕೇಳಬಾರದೋ ಕರ್ಣದಿಂ ಕೇಳಬಾರದೋ ಪ ಕೇಳಬಾರದು ಕೀಳರಾಡುವ ಕೀಳುವಚನ ಕಾಲತ್ರಯದಿಅ.ಪ ಪರರ ಗುಣವ ಜರೆದು ತಮ್ಮ ಮರುಳಗುಣವ ಪಿರಿದೆನಿಪ ದುರುಳರೊಚನ ಕೇಳುತ್ತೊಡನೆ ಹರಿದು ಪೋಗ್ವುದು ಪೂರ್ವಪುಣ್ಯ 1 ಮರವೆ ಮಾಯ ದುರ್ವರ್ತನ ಸತತ ದುರಾಚಾರದಿ ಹೊರಳುವಂಥ ಪರಮನೀಚರ ಮಾತಿಗ್ಹೋಗಲು ನರಕ ತಪ್ಪದು ಕಡೆಯತನಕ 2 ಗುರುಹಿರಿಯರನು ನಿಂದಿಪ ನರಕಿಗಳ ಆವಾಸದಿರಲು ಶರಣರಸ ಕರುಣಾಭರಣ ಸಿರಿಯರಾಮ ಮರೆಯಾಗ್ವ 3
--------------
ರಾಮದಾಸರು
ಕೇಳಮ್ಮ ತಂಗಿ ಕೇಳಮ್ಮ ಪ ಕೇಳಿ ಪುರಾಣದಿ ಪೇಳಿದ ಕೃಷ್ಣನ ಲೀಲೆಯ ಪಾಡುತ ``ಬಾಳಮ್ಮ'' ಅ.ಪ ನಿಷ್ಟೆಯಿಂದಲಿ ಬಲು ಶಿಷ್ಟಳಾಗುತ ದುಷ್ಟರಿಂದ ದೂ``ರಾಗಮ್ಮ'' 1 ಹರಿದಾಸರಪದ ಹರುಷದಿ ಹಾಡುತ ಗುರು ಹಿರಿಯರ ಮನ ``ಕೊಪ್ಪಮ್ಮ'' 2 ಕಾಲ ಕಳೆಯದೆ ಶೀಲಮತಿ ನೀ “ನಾಗಮ್ಮ'' 3 ವಿದ್ಯೆಯ ಕಲಿತು ಬದ್ಧಿವಂತ | ಳಾ | ಗಿದ್ದರೆ ಸುಖ ಶತ “ಸಿದ್ಧಮ್ಮ'' 4 ವಂದಿಸಿ ತುಲಸಿ ವೃಂದಾವನ ಪೂಜಿಸು ಮುಂದೆ ನಿನಗೆ ``ಆನಂದಮ್ಮ'' 5 ಹೀನರ ಬೆರೆಯದೆ ಮೌನವ್ರತದಲಿ | ಜ್ಞಾನಿ ಜನರ ನೀ ``ನರಸಮ್ಮ'' 6 ಮೂಢ ಜನರ ಒಡನಾಡದೆ ಭಕ್ತಿಲಿ ಮಾಡುವ ಸಜ್ಜನರ ``ಸಂಗಮ್ಮ'' 7 ಧರ್ಮದಿಂದ ಸತ್ಕರ್ಮ ಮಾಡುತ ನಿರ್ಮಲಗೊಳಿಸಿ ಸಂತ ``ರಂಗಮ್ಮ'' 8 ಪವನ ಪಿತನ ಕಥಾಶ್ರವಣವೆ ಪುಣ್ಯವು ಭವ ವಿದು ಕತ್ತಲು ``ಕಾಳಮ್ಮಾ'' 9 ಸದನಕೆ ಬಂದಿಹ ಬುಧರಾವರಿಸಲು ಮಂದಬಲು ನಿನಗದ ``ರಿಂದಮ್ಮ'' 10 ಎಂದೆಂದಿಗು ಪರನಿಂದೆಯ ಮಾಡದೆ ಮಂದಿರದಿರುವದೆ ``ಚಂದಮ್ಮ'' 11 ಸಾರಿದ ಜನರಘದೂರಗೈದು ಹರಿ ತೋರುವ ನುಜಗುರು ``ಈರಮ್ಮ'' 12 ಅತ್ತಿಯ ಮನಿಗೆ ಹೆತ್ತವರಿಗೆ ಉತ್ತಮ ಕೀರ್ತಿ ``ತಾರಮ್ಮ'' 13 ಗೋವಿಪ್ರಾಳಿ ಸೇವಿಸುತಿರುವದೆ ಕೋವಿದರಿಗೆ ಬಲು ``ಜೀವಮ್ಮ'' 14 ಭಾವದೊಳಗೆ ಪರದೇವನೆ ಪತಿಯೆಂದು ಪಡಿ ``ಭೋಗಮ್ಮ'' 15 ಭೇದಜ್ಞಾನ ಸಂಪಾದಿಸು ಕ್ಷಮಿಸುವ ಶ್ರೀಧರ ನಿನ್ನಾಪ ``ರಾಧಮ್ಮ'' 16 ಕೋಪದಿ ಪರರಿಗೆ ತಾಪವ ಬಡಿಸಲು ಲೇಪವಾಗುವದು ``ಪಾಪಮ್ಮ'' 17 ಇಂಗಡಲಾತ್ಮಜನಂಘ್ರಿ ಸರೋಜಕೆ ಸತಿ ``ತುಂಗಮ್ಮ'' 18 ದಾಸಜನರ ಸಹವಾಸದೊಳಿರುವದೆ ಕಾಶಿಗಿಂತ ವಿ``ಶೇಷಮ್ಮ'' 19 ಕಲಿಯುಗದಲಿ ಸಿರಿನಿಲಯನ ನೆನೆದರೆ ಸುಲಭ ಮುಕ್ತಿ ತಿಳಿ ``ಕಂದಮ್ಮ'' 20 ಪತಿಯು ಸದ್ಗತಿಗೆ ಗತಿ ಎಂದರಿತಹ ಮತಿಯುತ ಸತಿಯೆ ``ಯವನಮ್ಮ'' 21 ಮಧ್ವಸಿದ್ಧಾಂತದ ಪದ್ಧತಿ ತಪ್ಪದೆ ಇದ್ದರೆ ಹರಿಗತಿ ``ಮುದ್ದಮ್ಮ'' 22 ಸೋಗಿಗೆ ನೀ ಮರುಳಾಗಿ ನಡೆದರೆ ಯೋಗಿ ಜನರ ಮನ ``ಕಲ್ಲಮ್ಮ'' 23 ಶೀಲೆ ಗುಣದಿ ಪಾಂಚಾಲೆಯು ಎಲ್ಲ ಬಾಲೆಯರೊಳು ``ಮೇಲಮ್ಮ'' 24 ನೇಮದಿ ನಡೆದರೆ ಪ್ರೇಮದಿ ಸಲಹುವ ಶಾಮಸುಂದರನು ``ಸತ್ಯಮ್ಮ'' 25
--------------
ಶಾಮಸುಂದರ ವಿಠಲ
ಕೇಳಿ ನಗಬಹುದು ಮಜಾತ್ಮರು | ಕೇಳಿ ನಗಬಹುದು | ಹೋಲಿಕೀಲ್ಯಾಡುವ ಜನದ ಜ್ಞಾನದ ನುಡಿ ಪ ದಂಭಮಾನದಲಿ | ಮನಸಿನ | ಹಂಬಲ ಘನವಿರಲಿ | ಥಂಬಿಸಿ ಕರ್ಮವ | ಸರ್ವಂ ಬ್ರಹ್ಮಮಯ | ವೆಂಬುದು ತೋರುವರಾ ನುಡಿಗಳಾ 1 ಆಶಾಪಾಶಗಳು | ವಿಷಯದಿ | ಲೇಸಿಗೆ ಬಿಗಿದಿರಲು | ನಾಶಿವ ನಾ ಬ್ರಹ್ಮನೆಂ | ದೊದರುತ ನಾನಾ | ವೇಷವ ಧರಿಸುವರಾ | ನುಡಿಗಳು 2 ಚಿನುಮಯ ನಿಜ ಸುಖವಾ | ಕಂಗಳ ಕೊನಿಯಲಿ ದೋರಿಸುವಾ | ಘನ ಗುರು ಮಹಿಪತಿ ಪ್ರಭು ಕರುಣಾನಂದ | ಅನುಭವಿಸಿದ ಲ್ಯಾಡುವ ನುಡಿಗಳಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳಿ ಬಂದೆ ಪ ಕೇಳಿ ಬಂದೆ ನಿನ್ನ ಮೊರೆಹೊಕ್ಕವರ ಕೈಯ್ಯಾ | ಇಳೆಯೊಳಗ ಬಿಡನೆಂಬ ಬಿರುದವ ನಾ1 ಸುಗ್ರೀವ ತಾ ಪುಗೆ ಒಡಲವನು ವಾಲಿಯನು | ನಿಗ್ರಹಿಸಿರಾಜ್ಯ ಪದವಿತ್ತನೆಂದು 2 ಶರಧಿ ಧಡಿಯಲಿ ವಿಭೀಷಣನು ಶರಣವನು | ಬರಲು ಧೃಡ ಸಂಪತ್ತು ನಿತ್ತನೆಂದು 3 ಖಂಡಿಸಿ ಕೌರವರ ಬಳಗವನು ಸೈನ್ಯವನು | ಪಾಂಡವರನು ಸ್ಥಾಪನೆ ಗೈದಾನೆಂದು 4 ಏನ್ನನು ಪೇಕ್ಷಿಸದಿರು ನೀನು ಕಾರಣನು | ಸನ್ನುತ ಮಹಿಪತಿ ಸುತ ಜೀವನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳಿಕೊ ಗುರುಬುದ್ಧಿ ಮನವೆ ಕೇಳಿಕೊ ಗುರುಬುದ್ಧಿ ಕೇಳಿ ನಡೆಯದಿದ್ದರೆ ನೀನು ಜನ್ಮಕ ಜಾರಿಬಿದ್ದಿ ಮನವೆ ಧ್ರುವ ವೇದಕ ನಿಲುಕದ ಹಾದಿಯದೋರುವ ಸದ್ಗರುವಿನ ಸುಬುದ್ಧಿ ಸಾಧಿಸಿ ನೋಡಲು ತನ್ನೊಳಗ ತಾ ಎದುರಿಡುವುದು ಸುಶುದ್ಧಿ ಭೆದಿಸದಲ್ಲದೆ ತಿಳಿಯದು ಎಂದಿಗೆ ಆದಿ ತತ್ವದ ನಿಜ ಶುದ್ಧಿ ಸುಬೋಧದಲಿ ಗೆದ್ದಿ 1 ತರಣೋಪಾಯಕೆ ಸಾಧನವೇ ಮುಖ್ಯ ಗುರುಬುದ್ಧಿಯ ವಿಶೇಷ ಪರಗತಿ ಸಾಧನ ಪಡೆದೇನಂದರೆ ಗುರು ಮಾತ ಉಪದೇಶ ದೋರುದು ತಾ ಹರುಷ ಭವ ಬಂಧಪಾಶ 2 ಗುರು ಘನಸೌಖ್ಯ ಸುರಮುನಿ ಜನರಿಗೆ ಬಲು ಅಗಮ್ಯದೋರುವದೆ ಆಠಕ್ಯ ತರಳ ಮಹಿಪತಿ ಮನವೆÀ ಕೇಳು ಗುರುರಾಯನ ಸುವಾಕ್ಯ ಪರ ಗೆಲಿಸುವದು ನಿಜಮುಖ್ಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೇಳಿದರೆನಗೇನು ಗೊತ್ತಿಲ್ಲ ಹೇಳುವದ್ಹುಟ್ಟನಾ ಕಲಿತಿಲ್ಲ ಪ ಹೇಳಿದ್ದೆ ಕೇಳಿ ನಾ ಮೂಲತಿಳಿದು ಭವ ಮಾಲನ ಭಜಿಸುವೆನಲ್ಲ ಅ.ಪ ವೇದಮೊದಲು ನಾನೋದಿಲ್ಲ ವೇದಮಂತ್ರ ಗೊತ್ತೆನಗಿಲ್ಲ ಮೇದಿನಿಯೊಳು ಹರಿಪಾದದಾಸರು ನಿ ವೇದಿಸಿದ ತೆರ ಸಾಧಿಪೆನಲ್ಲ 1 ನಿತ್ಯತತ್ತ್ವಗೊತ್ತೆನಗಿಲ್ಲ ಮತ್ತು ಆವಶಾಸ್ತ್ರ ಗತಿಯಿಲ್ಲ ಸತ್ಯರು ಪೇಳಿದ ನಿತ್ಯವಾಕ್ಯಗಳ ಚಿತ್ತವಿಟ್ಟರಿಯುತ್ತ ಸತ್ಯ ನಂಬಿಹೆನಲ್ಲ 2 ಛಂದಸ್ಸು ಲಕ್ಷಣ ನೋಡಿಲ್ಲ ಒಂದು ಪುರಾಣದರ್ಥ ಮಾಡಿಲ್ಲ ಬಂಧುಭಜಕರಾನಂದ ಶ್ರೀರಾಮನ ಬಂಧುರಂಘ್ರಿ ಸ್ಮರಣೊಂದೆ ಬಲ್ಲೆನಲ್ಲ 3
--------------
ರಾಮದಾಸರು
ಕೇಳಿದಾಗಲೇ ಹೇಳಬಹುದೇನೋ ಬ್ರಹ್ಮಾನುಭವಮಿದು ಪ ಹಾಳುವಾದವಲಾ ವಿಚಾರಿಸಲೇಳು ವ್ಯಸನಕೆ ಸಿಲ್ಕಿ ಕುಣಿಯುವ ಅ.ಪ ಖೂಳ ಕಪಟರಿಗೆಂತು ಅನುಭವಶಾಲಿಗಾಗಿಹ ಪರತರಾನ್ವಯ ಸುಳ್ಳಮಳ್ಳರಿಗಾಗದಹುದಣ್ಣ ವೇದಾಂತಸಾರಸ ಮೂಲ ಪ್ರಣವ ವಿಚಾರಕಹುದಣ್ಣ ಯಾರಾದಡಾಗಲೀ ನೀಲಜ್ಯೋತಿಯ ಕಾಣದೆ ಬರಿ ಶೂಲ ಶೀಲಕೆ ಸಿಲ್ಕಿ ಕುಣಿಯುತ ಆಲಿಸೆಂದು ನಮಸ್ಕರಿಸುತಿಹ ಜಾವಿದ್ಯದ ಪೋಲಿ ಜನಗಳು 1 ಪಂಡಿತರಿಗೇನದು ಕಂಡು ತಿಳಿಯಣ್ಣ ದೂರವಿಲ್ಲವು ಅಂಡದೊಳಗಿಹ ಪಿಂಡವೇ ಬ್ರಹ್ಮಾಂಡ ವೇದಾಂತಾರ್ಥ ಸಮ್ಮತಿ ಭಂಡರಿಗೆ ಬಹುಭಾಷೆಗಹುದೇನ ಕುಂಡಲೀಪುರ ತತ್ಪ್ರಯಾಣವು 2 ಓದಿ ವಿಕ್ರಯವನ್ನು ಮಾಡ್ಯಾರು ಓಂಕಾರ ಬೀಜದ ಹಾದಿಯನು ತಾವು ಕಾಣದೋಡ್ಯಾರೊ ರಾ ಜಾಧಿರಾಜರೂ ಕಾವಿ ಜಗಳವ ಕುಂತು ನೋಡ್ಯಾರು ವೇದಾಂತಿಗಳೂ ನಿಜ ಜ್ಞಾನಪುತ್ಥಳಿಯನ್ನು ಕಂಡ್ಯಾರು ಆದಿಮಧ್ಯಾಂತಗಳರಿಯದ ವಾದಿಗಳಿಗೆಂತಕ್ಕು ತತ್ವದ ಬೋಧೆಯೊಳಗಿಹುದು ಆದಿತತ್ವವು 3 ಕವಿಗಳೆಷ್ಟೋ ಕಷ್ಟಪಟ್ಯಾರು ಅವಸಾನಕರಂ ಭವದ ಬಲೆಯೊಳು ಕಟ್ಟಿಕುಟ್ಯಾರು ಆಗಲ್ಲಿ ಸುಜನರು ಜ್ಞಾ ನವೈರಾಗ್ಯವನು ಕೊಟ್ಯಾರು ಶಿವನು ತಾನೆಂತೆಂಬ ಅದ್ವೈತವನು ಆಡಲ್ಕಡಕಲಹುದೇ ಭುವನದೊಳು ಪಂಚಾಕ್ಷರೋ ನಿಜತ್ರಿಣೆಯಸತಿ ಮೋಕ್ಷೆಚ್ಛೆ ಕವಚಂ4 ನಾಗನಗರಿಪುರೀಶ ಕಾಣಣ್ಣ ಆಧ್ಯಾತ್ಮದನುಭವ ಕಾಗಿ ನಿನ್ನೊಳ ಹುಡುಕಬೇಕಣ್ಣ ಹಂಸಾಶ್ರಯದಿ ನಿನ್ನೊ ಳಗಿದೆಲ್ಲವು ಹುಡುಕಿ ನೋಡಣ್ಣ ಭೋಗಿಶಯನ ಶ್ರೀ ತುಲಸೀರಾಮನ ರಾಗವಿರಹಿತನಾಗಿ ಭಜಿಸಿದಡಾಗ ನಿನ್ನೊಳಗಂಕುರಿಪುದ 5
--------------
ಚನ್ನಪಟ್ಟಣದ ಅಹೋಬಲದಾಸರು
ಕೇಳಿದೆ ಏನೇ ಕೊಳಲ ದನಿಯ ಬಾಳಿಗೆ ಅಮೃತವ ಬೀರುವ ಸವಿಯ ಪ ಬೃಂದಾವನದಲಿ ನಂದಯಶೋದ ಕಂದನು ಮುರಳಿಯನೂದುತಿರೆ ಸುಂದರಿಯರು ಆನಂದದಿ ನರ್ತಿಸಿ ಇಂದಿರೆಯರಸನ ಹೊಗಳುವರು 1 ಕಿರುಗೆಜ್ಜೆಯ ದನಿ ಕಿಣಿಕಿಣಿಸುತಿರೆ ಕರದ ಕಂಕಣಬಳೆ ಗಣಗಣರೆನಲು ಚರಣದ ಕಡಗ ಝಣ್ ಝಣಿ ಝಣಿರೆನುತಿರೆ ಪರಮ ಸಂತೋಷದಲಿ ಹರಿಯರುಳುತಿರೆ 2 ಮರುಗ ಮಲ್ಲಿಗೆ ಪಾದರಿ ಸುಮ ಪರಿಮಳ ಭರಿತ ತಂಬೆಲರು ಪರಿಚರಿಸುತಿರೆ ಪರಮಾನಂದವೆ ಪುರುಷನಾಗಿರುವ ಮಾಂ ಗಿರಿಪತಿಯೊಲವನು ಪಡೆಯುವ ಗೆಳತಿ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೇಳಿದ್ಯಾ ಈ ಕೌತುಕ ಕೇಳಿದ್ಯಾ ಕೇಳಿದ್ಯಾ ಕೌತುಕವನ್ನು ಈಗ ಪ ಪೇಳುವೆ ನಾ ನಿಮಗಿನ್ನು ಆಹಾ ಜಾರ ಚೋರ ಕೃಷ್ಣ ಅ.ಪ. ಕರೆಯೆ ಬಂದಿಹನೊಬ್ಬ ಚೋರಾ ತನ್ನ ಕಿರಿಯಯ್ಯನಂತೆ ಅಕ್ರೂರಾ ಊರ ಹೊರ ಹೊಳಿಯಲಿ ಬಟ್ಟ ತೇರಾ ಆಹಾ ಹಿರಿಯನೆಂದು ಕಾಲಿಗೊರಗೋರಾ ರಾಮಕೃಷ್ಣರ ಭರದಿ ಅಪ್ಪಿಕೊಂಡು ಮರುಳು ಮಾಡಿದ ಸುದ್ದೀ 1 ಸೋದರಮಾವನ ಮನೆಯೋಳ್ ಬೆಳ - U್ಫದ ನಾಳಿನ ದಿನದೋಳ್ ಕೃಷ್ಣ ಪೋದರೆ ನೆರೆದ ಜನರೋಳ್ ಆಹಾ ಕಾದುವ ಮಲ್ಲರ ಮೇಲ್ಹಾರ ಬಿಲ್ಹಬ್ಬ ಸಾಧಿಸಿ ಸಮಯಕ್ಕೆ ಹೋದೆವೆಂಬ ಅರ್ತಿ 2 ಹುಟ್ಟಿದ ಸ್ಥಳವಂತೆ ಮಧುರೀ ಕಂಸ - ನಟ್ಟುಳಿಗಾಗಿ ತಾ ಬೆದರೀ ಇ - ಲ್ಲಿಟ್ಟಳಾತನ ತಂಗಿ ಚದುರೀ ತೋರಿ ಕೊಟ್ಟರೆ ತನ್ನನು ಬೆದರೀ ಆಹಾ ಇಷ್ಟು ಸ್ನೇಹವು ಶ್ರೀದವಿಠಲ ಮಾವನ ಭೆಟ್ಟಿಗಾಗಿ ಒಡಂಬಟ್ಟು ಹೋಗುವನಂತೆ 3
--------------
ಶ್ರೀದವಿಠಲರು
ಕೇಳಿದ್ಯಾ ಕೌತಕವನ್ನು ಕೇಳಿದ್ಯಾಪ ಕೇಳಿದ್ಯಾ ಕೌತಕವನ್ನು ನಾಕೇಳಿದೆ ನಿನಗಿಂತ ಮುನ್ನ ಆಹಾಚಾಳಿಕಾರ ಕೃಷ್ಣ ಪೇಳದೆ ಮಧುರೆಗೆಕೋಳಿ ಕೂಗದ ಮುನ್ನ ನಾಳೆ ಪಯಣವಂತೆಅ.ಪ. ಕರೆಯ ಬಂದಿಹನಂತೆ ಕ್ರೂರ ತಮ್ಮಕಿರಿಯಯ್ಯನಂತೆ ಅಕ್ರೂರ ಪುರಹೊರವಳಯದಿ ಬಿಟ್ಟು ತೇರ ಆಹಾಹಿರಿಯನೆಂದು ಕಾಲಿಗೆರಗಲು ರಾಮಕೃ-ಷ್ಣನ ಠಕ್ಕಿಸಿಕೊಂಡುಮರುಳುಮಾಡಿದ ಬುದ್ಧಿ 1 ಸೋದರ ಮಾವನ ಮನೆಗೆ ಬೆಳ-ಗಾದರೆ ನಾಳಿನ ಉದಯ ಪರ-ಮಾದರವಂತೆ ತ್ವರೆಯ ಅಲ್ಲಿ ತೋರಿದ ಮನಕೆ ನಾರಿಯ ಆಹಾಸಾದಿಮಲ್ಲ ಮೊದಲಾದ ಬಿಲ್ಲಹಬ್ಬಸಾಧಿಸಿಕೊಂಡು ಬರುವೆನೆಂದು ಸುದ್ದಿ 2 ಹುಟ್ಟಿದ ಸ್ಥಳವಂತೆ ಮಧುರೆ ಕಂಸ-ನಟ್ಟುಳಿಗಾರದೆ ಬೆದರಿ ತಂ-ದಿಟ್ಟ ತನ್ನ ತಂದೆ ಚದುರೆ ತೋರಿಕೊಟ್ಟಳು ಭಯವನ್ನು ಬೆದರಿ ಆಹಾಎಷ್ಟು ಹೇಳಲಿ ರಂಗವಿಠಲನು ಮಾವನಭೆಟ್ಟಿಗಾಗಿ ಒಡಂಬಟ್ಟು ಪೋಗುವ ಸುದ್ದಿ3
--------------
ಶ್ರೀಪಾದರಾಜರು
ಕೇಳಿಪೇಳಮ್ಮ ನಮ್ಮಮ್ಮ ಲಕುಮೀ ಪ ಕೇಳಿಪೇಳೆ ಹರಿಯಲಿ ಪೋಗಿ ಬಹಳ ಸೋಕಿನವ ಗೋಪಿಬಾಲೀಯರಿಗೆ ಮೆಚ್ಚಿ ಬಹು ಜಾಲವ ಮಾಡಿದ ಕೃಷ್ಣನ ಅ.ಪ. ಪ್ರಳಯ ಕಾಲದಲ್ಲಿ ಆಲದೆಲೆ ಮೇಲೆ ಮಲಗಿಪ್ಪನುಒಲುಮಿಗಳ ಒಲುಮಿಕಾಂತ ಲಲನೆ ನೀನು ಕಮಲಾದೇವಿ 1 ನಿತ್ಯಮುಕ್ತೆ ನಿತ್ಯತೃಪ್ತೆ ನಿತ್ಯಾವಿಯೋಗಿನಿ ಹರಿಗೆಭೃತ್ಯನಲ್ಲೆ ನಾನು ಸ್ವಲ್ಪ ಚಿತ್ತವಿಟ್ಟು ನೋಡೆ ತಾಯಿ 2 ನಿನ್ನ ಹೊರತು ಆತನನ್ನು ತೋರುವರ ಕಾಣೆನಮ್ಮಸನ್ನುತಾಂಗಿ ಸಾರಸಾಕ್ಷಿ ಎನ್ನೊಳು ಕರುಣವ ಮಾಡೇ 3 ಎಲ್ಲ ದಿವಿಜರಲ್ಲಿ ಪೋಗೆ ಬಲುಬಗೆ ಪೇಳಿಕೊಂಡೆಫುಲ್ಲನಾಭನಲ್ಲಿ ಒಂದು ಸೊಲ್ಲನಾಡೋ ಶಕ್ತಿಯಿಲ್ಲ 4 ಪಾದ ಬಾಲ್ಯದಿಂದ ಸೇರಿದ್ದಕ್ಕೆನೀರಜಾಕ್ಷನನ್ನು ತೋರೆ ಭಾರಿ ಫಲವಾಯಿತೆಂಬೆ 5 ನಿಮ್ಮ ಮಾತು ಮೀರ ಶೂರ ನಮ್ಮ ಮಾರಜನಕ ಕೃಷ್ಣಅಮರ ತರುವ ಕಿತ್ತಿ ನಿಮ್ಮ ಮನೆಯೊಳ ಹಚ್ಚಿದನಂತೆ 6 ಸುಂದರಿ ಸೌಭಾಗ್ಯವಂತೆ ಮಂದಿರದೋಳಿಪ್ಪನನ್ನುಇಂದಿರೇಶನನ್ನು ತೋರೆ ನಂದ ಬಾಲ ಮಹಿಳೆ ಅಂಬಾ 7
--------------
ಇಂದಿರೇಶರು
ಕೇಳಿರಿ ಕೌತುಕ ಪೇಳುವೆನೀಗ ಶೀಲ ಶ್ರೀ ಗುರುಗಳ ಕರುಣದಲಿ ಪ. ವ್ಯಾಳಶಯನ ರಂಗ ತಾಳಿ ಕರುಣಿಸಿದ ಮೇಲು ಮೇಲು ಭಕ್ತಿಯ ನೀಡುತಲಿ ಅ.ಪ. ಅರಿಯದ ದೇಶದಿ ಅರಿಯದ ಕಾಲದಿ ಅರಿಯದವಸ್ಥೆಯ ಅನುಭವವು ಸಿರಿಯರಸನ ವ್ಯಾಪಾರವಿದಲ್ಲದಡೆ ನರರಿಗೆ ಸಾಧ್ಯವೆ ನಾಡಿನೊಳು 1 ಸಂಭÀ್ರಮದಲಿ ಸಮಾರಂಭವು ಕಲೆತಿರೆ ಬೆಂಬಿಡದಲೆ ರಕ್ಷಿಸುತಿರಲು ಕುಂಭಿಣಿಯೊಳು ಸ್ಥಿರವಾದ ಪದವಿಗೆ ಅಂಬುಜನಾಭನ ಕರುಣವಿದು 2 ಅಗ್ನಿಗಳೆರಡು ಕಲೆತು ಶಾಂತವಾಗಿ ಭಗ್ನವಿಲ್ಲದ ಆನಂದ ತೋರೆ ವಿಘ್ನವಾಗದ ಕಾಲಗಳೊದಗುತ ಮಗ್ನಗೈಸಿತಾನಂದದಲಿ 3 ಚಲಿಸದ ವಸ್ತುಗಳ್ ಚಲಿಸಿತು ಮತ್ತೆ ಚಲನೆಯಿಲ್ಲದೆ ಸುಸ್ಥಿರವಾಯ್ತು ಬಲು ವಿಚಿತ್ರವು ಭೂತಲದೊಳಗಿದು ನಳಿನನಾಭನ ಸಮ್ಮತವು4 ಬಿಂಬನಾಗಿ ಹೃದಂಬರ ಮಧ್ಯದಿ ಸಂಭ್ರಮಗೊಳಿಸೆಲೊ ಶ್ರೀ ವರನೆ ನಿತ್ಯ ಇಂಬುಗೊಟ್ಟು ಕಾಯೊ ಬಿಂಬ ಶ್ರೀ ಗೋಪಾಲಕೃಷ್ಣವಿಠ್ಠಲ 5
--------------
ಅಂಬಾಬಾಯಿ
ಕೇಳಿರೈ ಶಿವಶರಣರು ಹೇಳಲಂಜಿಕೆ ಆವುದು ಪ ಭಾಳನೇತ್ರನ ಭಕ್ತರಿಂತು ನೋಡಿಕೊಳ್ಳಿರೈಅ ಮೂರುಲಿಂಗ ತನ್ನೊಳು ಮುಖ್ಯವಾಗಿರುವಾಗಬೇರೊಂದು ಲಿಂಗ ಬೆಲೆ ಮಾಡಿ ತಂದುತೋರುವಂಗೈಲಿಟ್ಟು ತೋಯ ಪುಷ್ಪವ ನೀಡಿಯಾರ ಮನಕೊಪ್ಪಿಸುವರೀ ಶೀಲವಂತರು 1 ಲಿಂಗವೊಂದು ತನ್ನೊಳು ಲೀನವಾಗಿರುವಾಗಅಂಗಭವಿಗಳು ಕೂಡಿ ಆಡಿಕೊಂಬರುಅಂಗದನುಭವದರ್ಥವನರಿಯದ ಇಂತಹಭಂಗಿ ಹುಚ್ಚರೆಲ್ಲ ಶಿವನ ಭಕ್ತರಹರೆ 2 ನಾಗಲಿಂಗ ತನ್ನೊಳು ನಾಟ್ಯವಾಡುತಲಿರಲುಆಗಮಿಸಿದ ಲಿಂಗವ ಬೆದಕಲೇತಕ್ಕೆಕಾಗಿನೆಲೆಯಾದಿಕೇಶವನೆ ನಾಗಶಯನನಾಗಿರಲು ಬೇರೊಂದನರಸಲೇತಕ್ಕೆ 3
--------------
ಕನಕದಾಸ
ಕೇಳಿರೋ ಈ ಮಾತ ಈ ಮಾತ ತಿಳಿದು ಕೋಳ್ಳಿರೊ ಸ್ವಹಿತ ಹೇಳುತಿಹ್ಯದು ವೇದಾಂತ ವೇದಾಂತ ಇಳಿಯೋಳಿದುವೆ ಸಿದ್ಧಾಂತ ಸಿದ್ಧಾಂತ 1 ಹಿಡಿಯಬ್ಯಾಡಿರೊ ಕಾಮ ಕ್ರೋಧ ಕ್ರೋಧ ಮಾಡಬ್ಯಾಡಿರೋ ಭೇದ ಭೇದಾ ಭೇದ ಈ ಡ್ಯಾಡಿರೊ ವಿವೇದ ವಿವೇದ ಬೋಧ ಸುಬೋಧ 2 ದೋರುತದೆ ತಾ ಸುಪಥ ತಾ ಸುಪಥ ಸುರ ಜನರ ಸನ್ಮತ ಸನ್ಮತ ದೋರುತಿಹ್ಯ ಗುರುನಾಥ ಶ್ರೀ ಗುರುನಾಥ ಪರಮಾನಂದ ಭರಿತ ಭರಿತ 3 ನೋಡಿರೊ ಈ ಖೂನ ಈ ಖೂನ ಮಾಡಿ ಸದ್ಗತಿ ಸಾಧನ ಸಾಧನ ಗುಹ್ಯ ನಿಜಧನ ನಿಜಧನ ದೃಢ ಭಕ್ತರ ಜೀವನ ಜೀವನ 4 ಈಹ್ಯ ಪರಿಪೂರ್ಣ ಪರಿಪೂರ್ಣ ಮಹಾಗುರು ಶ್ರೀ ಚರಣ ಶ್ರೀ ಚರಣ ಸಾಹ್ಯದೋರುವ ಸುಗುಣ ಸುಗುಣಮಹಿಪತಿ ಜೀವ ಪ್ರಾಣ ಸುಪ್ರಾಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು