ಒಟ್ಟು 415 ಕಡೆಗಳಲ್ಲಿ , 62 ದಾಸರು , 396 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುನಿಯ ನೋಡಿದಿರಾ ಮಾನವರಾ ಪ ಮಾಡಿರಿ ಪೂಜೆಯನು ನೀಡಿರಿ ಭಿಕ್ಷವನು ರೂಢಿಯೊಳಗೆ ಇವ ಗೂಢ ದೇವಾಂಶನು1 ಬೆಳಗಿರಿ ಆರುತಿಯ ಸುಲಲಿತ ಕೀರುತಿಯ ಇಳೆಯೊಳು ಪಾಡಿರಿ ಚೆಲುವ ಸನ್ಯಾಸಿಯ 2 ಶ್ರೀಶನ ತೋರುವನು ದೋಷವ ಕಳೆಯುವನು ದಾಸ ಜನರಿಗೆ ಇಂದಿರೇಶ ಸುಪ್ರೀಯನು 3
--------------
ಇಂದಿರೇಶರು
ಮುರಳಿ ವಿನೋದ ವಿಠಲ | ಪೊರೆಯ ಬೇಕಿವನಾ ಪ ದುರಿತ ದುಷ್ಕøತವೆಲ್ಲ | ದೂರ ಸಾಗಿಸುತಾ ಅ.ಪ. ಚಾರು ಯೌವನದಲ್ಲಿ | ಪರಿಪರಿಯ ಲೌಕಿಕದಿಮಾರಮಣ ಸ್ಮøತಿ ರಹಿತ | ಕರ್ಮವೆಸಗೀಜಾರಿ ಪೋಗಲು ಆಯು | ಆರಾಧ್ಯ ದೇವತೆಯಚಾರುತರ ಪೂಜಿಸಲು | ಸಾರಿ ಬಂದಿಹನಾ 1 ಹಿಂದೆ ಮಾಡಿರುವ ಬಹು | ಮಂದಿ ಜನಗಳ ಸೇವೆಇಂದಿರೇಶನೆ ನಿನ್ನ | ಸೇವೆ ಎಂದೆನಿಸೀಇಂದಿರಾರಾಧ್ಯ ಪದ | ಚೆಂದದಿಂ ಪೊರೆ ಇವನಮಂದರೋದ್ಧಾರಿ ಹರಿ | ಕಂದರ್ಪಪಿತನೇ2 ಧ್ಯಾನ ಯೋಗದಿ ಮನವ | ಸಾನುಕೂಲಿಸು ಇವಗೆಮಾನನಿಧಿ ಮಧ್ವಪದ | ರೇಣುನಾಶ್ರಯಿಸೀಗಾನದಲಿ ತವ ಮಹಿಮೆ | ಪೊಗಳಿಕೆಯನೆ ಇತ್ತು ಪ್ರಾಣಾಂತರಾತ್ಮಕನೆ | ಪಾಲಿಸೈ ಹರಿಯೆ 3 ದೇವಧನ್ವಂತರಿಯೆ | ಪಾವನಾತ್ಮಕ ನಿನ್ನಸೇವೆ ಗಯ್ಯುವವಗಿ | ನ್ನಾವ ದುರಿತಗಳೋಭಾವದಲಿ ಮೈದೋರಿ | ನೀವೊಲಿದು ತೋದರಂತೆದೇವ ತವ ದಾಸ್ಯವನು | ಇತ್ತಿಹೆನು ಹರಿಯೇ 4 ನಾರಸಿಂಹಾತ್ಮಕನೆ | ಕಾರುಣ್ಯದಲಿ ಹೃದಯವಾರಿರುಹ ಮಧ್ಯದಲಿ | ತೋರಿ ತವ ರೂಪ |ಪಾರುಗೈ ಭವವ ಗುರು | ಗೋವಿಂದ ವಿಠಲನೆಸಾರಿ ತವ ಪಾದವನು | ಪ್ರಾರ್ಥಿಸುವೆ ಹರಿಯೇ5
--------------
ಗುರುಗೋವಿಂದವಿಠಲರು
ಮೊದಲಕಲ್ಲು ಶೇಷದಾಸ ಸ್ತುತಿ ನೇತ್ರಗಳ ಸಾಫಲ್ಯಮಾಳ್ವ ಸುಗಾತ್ರರನು ಕಂಡೆ ಪ ಪಾತ್ರರಾದವರು ದಾಸರ ಕೀರ್ತಿಸಲು ಪಾಪಗಳು ನಿಲ್ಲವೊ ಅ.ಪ. ವೇದ ಶಾಸ್ತ್ರಗಳ ಪೇಳುತ ಮೋದದಿಂದಿಹರುವಾದ ಮಾಡುವರಲ್ಲಿ ಶಮದಮಾದಿ ಗುಣದವರುಮೋದ ತೀರ್ಥರ ಮತಾನುಸಾರವಬೋಧಿಸುತ ಪರಮಾನುಗ್ರಹ ಮಾಳ್ವರ 1 ವಾಸುದೇವನ ದಾಸರೊಳಗ್ರೇಸರರು ಇವರುಶ್ರೀಶನ ಶುಭಗುಣ ಕರ್ಮಂಗಳು ಚಿಂತಿಸುತಲಿಹರುಭೂಸುರಾಂಶರಲ್ಲಿದಾವ ಸುರೇಶರೋಶೇಷದಾಸರಾಗಿ ಇಹರು 2 ತಂದೆ ಶ್ರೀ ನರಸಿಂಹನ ಪದದ್ವಂದ್ವ ಭಜಿಸುವರುಬಂದ ಸಜ್ಜನವೃಂದ ಜನಕಾನಂದಗೈಸುವರುಇಂದಿರೇಶನ ಒಂದೆ ಮನದಿ ಆ-ನಂದಬಾಷ್ಪಗಳಿಂದ ಧೇನಿಪರು 3
--------------
ಇಂದಿರೇಶರು
ಯಾಕೆ ನಿರ್ದಯ ಮಾಡಿದೆ ರಂಗಯ್ಯ ನೀನ್ಯಾಕೆ ನಿರ್ದಯ ಮಾಡಿದೆ ಪ ವ್ಯಾಕುಲ ಪಡಲಾರೆ ನಿಮ್ಮ ಲೋಕವ ಸೇರಿಸು ಅ.ಪ ದುಷ್ಟರ ಮಧ್ಯದಲ್ಲಿ ನಾನಿರಲಾರೆ ಸೃಷ್ಟಿಗೀಶ್ವರನೆ ಕೇಳು ಮುಟ್ಟಿ ಭಜಸಿ ನಿಮ್ಮ ಪಾದಪದ್ಮದ ಭಕ್ತಿಯಿಟ್ಟೇನೆಂದರೆ ದುಷ್ಟ ಇಂದ್ರಿಯ ಬಿಡದೆನ್ನ 1 ಪಂಚೇಂದ್ರಿಯಗಳೆನ್ನ ಬಹುಬೇಗ ವಂಚನೆ ಮಾಡುತಿದೆ ಪಂಚಬಾಣನ ಪಿತ ಪರಮಪುರುಷ ರಂಗ ಅ ಕಿಂಚನಾದೆ ನಿನ್ನಂಘ್ರಿಯ ಸೇರಿಸು 2 ಸಂಸಾರವೆಂಬ ಸರ್ಪ ಕಚ್ಚಿ ವಿಷ ಕ್ಷಣದಲ್ಲಿ ತಲೆಗೇರಿತು ಪರಮ ಹಂಸರ ಸಂಗದೊಳಗೆಯಿರಿಸಿ ಎನಗೆ ಭರದಿಂದೇರಿದ ವಿಷ ತಿರುಗೆಸೋ ಶ್ರೀಹರಿ 3 ಸರ್ಪ ತುಂಬಿದ ಕೂಪದಿ ಬಿದ್ದಿಹೆನು ಎನ್ನಪ್ಪ ರಕ್ಷಿಸೊ ಬೇಗದಿ ಸರ್ಪಶಯನ ಶ್ರೀಅಪ್ರಮೇಯ ರಂಗ ಇನ್ನು ಕ್ಷಿಪ್ರದಿಂ ಮುಕ್ತಿಯ ಒಲಿದು ಪಾಲಿಸು ರಂಗ 4 ಅಮ್ಬುಜನಾಭನೆ ನಿಮ್ಮ ಪಾದದಧ್ಯಾನ ಒಂದು ನಿಮಿಷವಾದರು ಮಾಡಲೀಸದು 5 ಹಿಂದಿನ ಕರ್ಮಂಗಳು ಇಂದಿರೇಶ ನಿಂದಕರ ವಶವಾಯಿತು ಇಂದು ಧರ್ಮದಲಿರ್ದೆ ಬಂಧುಗಳ ವಶವಾಯ್ತು ಇನ್ನು ಬಂಧನವೇನಯ್ಯ ಮುಕ್ತ್ಯಾನಂದ ತೋರುವುದಕ್ಕೆ 6 ಎಂದಿಗಾದರೂ ಮುಕ್ತಿಯ ಕೊಡುವೆಯೆಂದಾನಂದ ಇಂದು ಈ ಸಂಸಾರ ಬಂಧನದೊಳಗೆ ನಾ ಒಂದು ನಿಮಿಷ ಜೀವಿಸಲಾರೆನು ರಂಗ 7 ಅಂದು ದ್ರೌಪದಿ ಧ್ರುವÀ ಗಜೇಂದ್ರನ ರಕ್ಷಿಸಲಿಲ್ಲವೆ ಬಂದು ಅಂಬರೀಷ ಅಜಾಮಿಳರ ಪ್ರಹ್ಲಾದನ ಕಂಬದಿಂದಲೆ ಬಂದು ಕಾಯ್ದ ಗೋವಿಂದ 8 ಭಕ್ತವತ್ಸಲನೆಂತೆಂಬೊ ಬಿರುದು ಈಗ ವ್ಯರ್ಥವಾಯಿತೆ ಶ್ರೀರಂಗ ಉತ್ತಮ ಗುರುಗಳು ಶ್ರೇಯೋನಿಧಿಗಳ ವಾಕ್ಯ ಸತ್ಯವ ಮಾಡಿ ಮುಕ್ತ್ಯಾನಂದ ಪಾಲಿಸು 9 ರಂಗನಾಥ ನೀ ಕೈ ಬಿಟ್ಟರೆ ಎನ್ನ ಲೋಕಮಾತೆ ಬಿಡುವಳೆ ಬೇಗ ಮುಕ್ತಿಪಥವ ಪಾಲಿಸುವಳು 10 ಮಾಡಬಾರದ ಮಾಡಿದೆ ಈ ಸಂಸಾರದೆ ನೋಡಬಾರದ ನೋಡಿದೆ ಆಡಬಾರದ ವಾರ್ತೆಗಳನಾಡಿದೆ ಇನ್ನು ಗಾಡನೆ ಮುಕ್ತಿಯ ನೀಡೊ ವೆಂಕಟರಮಣ 11
--------------
ಯದುಗಿರಿಯಮ್ಮ
ಯಾಕೆ ಮೈ ಮರೆತಿದ್ದೆ ಹೇಳೋ ಎಲೆ ಮರುಳೆ ಜೋಕÉ ತೀರೀತು ನಿನ್ನ ಬಾಳು ಪ ನಿಟ್ಟೆಲುಗಳಿಂದ ಕೈ ಕಾಲ್ಗಳೆಂಬುವನು ಮಾಡಿ ಚಿಟ್ಟೆಲುಗಳನು ಸಂದಕೂಡಿ ಪಟ್ಟಿನಲ್ಲಿ ತನುಪುರವ ಕಟ್ಟಿದರು ನರದಿಂದ ಪಟ್ಟಣವ ನಿರ್ಮಿತವ ಮಾಡಿ ಅಷ್ಟಪುರ ಕಲ್ಲಲ್ಲಿ ನವಕವಾಟವ ರಚಿಸಿ ದುಷ್ಟದುರ್ಜನರೆಲ್ಲ ಕೂಡಿ ಕಟ್ಟಿದರು ಜೀವನಿಗೆ ಇವರ ಕೂಡಾಡಿ 1 ರಕ್ತಮಾಂಸವು ಚರ್ಮಪೂಡಿ ಮತ್ತೆ ಮಲ ಮೂತ್ರ ಕ್ರಿಮಿ ಕೀಟ ರುಜೆಬಾಧೆಯಲಿ ವಿಸ್ತರದಲಿದಕೆÉ ನಲಿದಾಡಿ ವ್ಯರ್ಥದಲಿ ದಿನವ ನೀಗಾಡಿ ಅಸ್ಥಿರದ ದೇಹವನು ನಚ್ಚಿಭವ ಶರಧಿಯೊಳು ಕುಸ್ತರಿಸಿ ಬಿದ್ದು ಈಜಾಡಿ 2 ಹೊಲಸು ಹೆಬ್ಬಡಿಕೆ ನಾರುವನರಕ ಕೀವು ಕ್ರಿಮಿ ಯಲು ನರಂಗಳು ಮಜ್ಜೆ ಮಾಂಸ ಕೊಳಕು ನಾರುವ ಹಡಿಕೆಗೆಳಸುತಿಹ ನಾಯಂತೆ ಬಲಿದಿಹುದು ನಿನ್ನ ಮೇಲಂಶ ಬಳಲಿ ಬಸವಳಿದೆಲೋನ ಪುಂಸ ಕೊಳೆಯ ಮೇಧ್ಯದ ಪುಂಜ ತನುವಿದನು ನೆರೆನಂಬಿ ಫಲವಿಲ್ಲ ಹರಿಯಧ್ಯಾನಿಸೋ ಪರಮಹಂಸ 3 ಸತಿ ಹೊಂದುವರು ನಿನ್ನ ಕಣ್ಣಾರೆ ಕೇಳ್ವೆ ಕಿವಿಯಿಂದ ಗುರಿಯಾಗಿ ಇಂದಿರೇಶನ ಪೂಜಿಸಲು ನಾಕೈಯಾರೆ4 ಇದರೊಳಗೆ ಬಾಲ್ಯಕೆನೊರ್ಯ ಯೌವ್ವನವೆಂಬ ಉದಯಾಸ್ತಮಾನ ಪರಿಯಂತರವು ಸುದತಿ ಸುತರಲಿ ಮೋಹವಿರಿಸಿ ದಣಿಯದಿರು ಮನವ ನೆರೆನಿಲಿಸಿ ಲಕ್ಷ್ಮೀರಮಣನನು ಹೃದಯದೊಳುಸ್ಮರಿಸಿ 5
--------------
ಕವಿ ಪರಮದೇವದಾಸರು
ಯಾಕೆನಗೆ ವೈರಾಗ್ಯ ಪುಟ್ಟಲಿಲ್ಲವೊ ದೇವ ಏನು ಪಾಪಿಯೊ ಜಗದಲಿ ಪ. ಸಾಕು ಸಾಕೀ ವಿಷಯ ಚಿಂತನೆಯ ಬಿಡಿಸಿನ್ನು ಲೋಕನಾಯಕನೆ ಸ್ವಾಮಿ ಅ.ಪ. ಅಸನವಸನಗಳಿಗೆ ಆಲ್ಪರಿದು ಅನ್ಯರಿಗೆ ಬಿಸಜನಯನನೆ ಕಾಲಹರಣೆಯನೆಗೈದೆ ವಸುದೇವಸುತ ನಿನ್ನ ಅರಘಳಿಗೆ ನೆನೆಯದಲೆ ಹಸಿವು ತೃಷೆಯಿಂ ಬಳಲಿ ಬೆಂಡಾದೆನಯ್ಯಾ 1 ಇಂದ್ರಿಯಗಳೆಲ್ಲವನು ಬಂಧನದೊಳಗೆ ಇರಿಸಿ ಇಂದಿರೇಶನೆ ನಿನ್ನ ಧ್ಯಾನಿಸದಲೆ ಮಂದಮತಿಯಿಂದ ನಾ ಮಮಕಾರದಲಿ ಬಿದ್ದು ಮಂದ ಜನರೊಡನಾಡಿ ಮಾಯಕೊಳಗಾದೆ 2 ಭಕ್ತಿಮಾರ್ಗವ ಕಾಣೆ ಜ್ಞಾನ ಮೊದಲೆ ಅರಿಯೆ ಮುಕ್ತಿಗೊಡೆಯನೆ ಎನ್ನ ಮುದದಿಂದ ಸಲಹೊ ಯುಕ್ತಯುಕ್ತಿಗಳರಿಯೆ ಸುತ್ತುತಿಪ್ಪೆನೊ ಭವದಿ ಶಕ್ತ ನೀ ಒಳಗಿದ್ದು ಎನ್ನ ಕಾಡುವರೆ 3 ಕರ್ಮಮಾರ್ಗವ ತೊರೆದು ನಿರ್ಮಲದಲಿ ನಿನ್ನ ಒಮ್ಮೆಗಾದರೂ ಮನದಿ ನೆನೆಯಲಿಲ್ಲ ರಮೆಯರಸನೆ ಶ್ರೀ ಗುರುಗಳಂತರ್ಯಾಮಿ ಕರ್ಮತ್ರಯಗಳ ಕಡಿದು ಕರುಣದಲಿ ಕಾಯೊ4 ಪಾಪರಹಿತನೆ ಎನ್ನ ಪಾಪ ಕರ್ಮಗಳೆಲ್ಲ ಪರಿ ನುಡಿದೆ ನೀ ಪರಿಹರಿಸಿ ಕಾಯೋ ಗೋಪಾಲಕೃಷ್ಣವಿಠ್ಠಲನೆ ನೀನಲ್ಲದಲೆ ಈ ಪಾಪಿಯನು ಕಾಯ್ವರಾರೊ ಶ್ರೀ ಹರಿಯೆ5
--------------
ಅಂಬಾಬಾಯಿ
ಯಾತಕವನಿಯೊಳ್ ಜನಿಸಿದೆ ನಾನು ಸಾರ್ಥಕೇನು ನಾನು ಕೋತಿ ಸಾರ್ಥಕೇನು ಪ ಶರಧಿ ಹಾರಿ ಉರಿವಿಲಂಕೆಯನರಿವೆನೇನೊ ವಾರ್ತೆ ತಿರುಗಿ ಮಾರ್ಗವ ಮಾಡಿ ಮಾತೆಯ ತರುವೆನೇನೊ 1 ಕಿತ್ತು ಸಂಜೀವನವ ಬೆಟ್ಟಲ್ಲಿರಿಸುವೆನೇನೊ ರಾಮ- ರ್ಹತ್ತಿಸ್ವಾಹನನಾಗಿ ಖ್ಯಾತಿಪಡೆವೆನೇನೊ 2 ಇಂದಿರೇಶ ಕೊಡಲು ಪದವಿ ಒಲ್ಲೆಂಬೆನೇನೊ ರಾಮ- ರೆಂಜಲೆಲೆಗ್ಹಾರೈಸಿ ಕದ್ದೊಯ್ದುಂಬೆನೇನೊ 3 ಮುನ್ನ ಹರಿಯ ಸೇವೆಗೆಂದು ಜನಿಸಿದೆನೇನೊ ಧರೆಯೊಳ್ ಧರ್ಮ ಮೀರದೆ ನಡೆದು ಖ್ಯಾತಿ ಪಡೆವೆನೇನೊ 4 ರಾಜಸೂಯಯಾಗಾಶ್ವಮೇಧ ಸಾಧಿಸುವೆನೇನೊ ರಾಜ್ಯ ಭೇದಿಸಿ ಶತ್ರುಗಳಿಗೆ ಭಯವ ತೋರುವೆನೇನೊ 5 ಕ್ಲೇಶಮನಕಿಲ್ಲದೆ ವನವಾಸ ಸಹಿಸುವೆನೇನೊ ಅಜ್ಞಾತ- ವಾಸೊಂದುಕ್ಷಣ ಪರಿಯಂತರ ಚರಿಸುವೆನೇನೊ 6 ಭಿಕ್ಷೆತನಕೊಂಬೊ ಸಜ್ಜನರಿಗೆ ನಮಿಸುವೆನೇನೊ ಬೋರೆ- ವೃಕ್ಷಮೂಲದಲ್ಲಿ ಆವಾಸ ಬಯಸುವೆನೇನೊ7 ಪಾದಕ್ಕೆರಗುವೆ ಪ್ರಾಣೇಶ ನೀ ಪಾಲಿಸುವ್ಯೇನೊ ಜ್ಞಾನ ಆದಿಮೂರುತಿ ವೇದವ್ಯಾಸನ ಒಲಿಸುವೆನೇನೊ 8 ಬಿಟ್ಟು ಚಲಿಸದೆ ನಿನ್ನಲ್ಲೆ ಮನಸಿಟ್ಟೇನೇನೊ ವಾ- ಸಿಷ್ಠ ಭೀಮೇಶಕೃಷ್ಣನ ಭಜಿಸುತ್ತಿರುವೆನೇನೊ 9
--------------
ಹರಪನಹಳ್ಳಿಭೀಮವ್ವ
ಯಾತರವ ನಾನಯ್ಯ ಇಂದಿರೇಶ ಹೋತಾಹ್ವಯನೆ ನಿನ್ನಾಧೀನ ಜಗವೆಲ್ಲ ಪ ಕಾಲಗುಣಕರ್ಮ ಸ್ವಭಾವಗಳ ಮನ ಮಾಡಿ ಶ್ರೀಲೋಲ ನೀ ಸರ್ವರೊಳಗೆ ಇದ್ದು ಲೀಲೆಗೈಯುತ ಲಿಪ್ತನಾಗದೆ ನಿರಂತರದಿ ದಿವಿಜ ದಾನವ ತತಿಯ 1 ತಿಳಿಸಿಕೊಂಬುವ ನೀನೆ ಶ್ರುತಿತತಿಗಳೊಳಗಿದ್ದು ತಿಳಿಸುವವ ನೀನೆ ಉಪದೇಶಕರೊಳು ತಿಳಿವವನು ನೀನೆ ಬುದ್ಧ್ಯಾದಿಂದ್ರಿಯಗಳೊಳು ನಿಖಿಳ ವ್ಯಾಪಾರ ಮಾಡುತಲಿಪ್ಪೆ 2 ಅಗಣಿತ ಮಹಿಮೆ ಜಗಜ್ಜನ್ಮಾದಿಕಾರಣನೆ ತ್ರಿಗುಣವರ್ಜಿತ ತ್ರಿವಿಕ್ರಮ ತ್ರಿಧಾಮಾ ವಿನುತ ಜಗನ್ನಾಥ ವಿಠ್ಠಲ ನಿನ್ನ ಪೊಗಳಿ ಹಿಗ್ಗುವ ಭಾಗ್ಯಕೊಡು ಜನ್ಮ ಜನ್ಮಕೂ 3
--------------
ಜಗನ್ನಾಥದಾಸರು
ಯಾತರವ ನಾನೈಯ ಇಂದಿರೇಶ ಪ ಹೋತನ ಕೊರಳೊಳಗೆ ಮೊಲೆಯಿರ್ಪ ತೆರದಲಿ ಅ.ಪ ಗ್ರಾಸಕ್ಕಲ್ಲದೆ ನಾನು ದೇಶ ದೇಶಕೆ ಪೋಗಿ ವಾಸಪಗೆ ಸಮರೆಂದು ದೋಶಿಗಳ ಪೊಗಳೀ ಕಾಸುಗಳಿಸಲು ದಾಸ ವೇಷ ಹಾಕಿದ ಶೂರ ಏಸು ಜನ್ಮವು ಕಳಿಯೆ ನಾಶವಾಗದೊ ಆಶೆ 1 ನೇಮ ನಿಷ್ಠೆಗಳಾಟ ಪರರಿಗೋಸುಗ ಹೂಡಿ ಕೋಮಲಾಂಗಿಯರ ಮನ ಮೆಚ್ಚಿಸುತ ಜಗದೊಳಗೆ ಹೇಮದಾಶೆಗೆ ಸೂಳೆ ಪ್ರೇಮವನ್ನು ತೋರ್ಪಂತೆ ನಾಮಸವಿಯುಣ್ಣದೆಲೆ ಗಾಯನವ ಮಾಡುವೆನು 2 ವ್ಯಾಸಕೂಟದಿ ಬೇರೆ ದಾಸಕೂಟವು ಎಂಬ ದೋಷವಾದವ ಮಾಡಿ ವ್ಯಾಸದಾಸರ ದ್ರೋಹ ಗ್ರಾಸವಾದೆನು ನಾನು ಶಾಸ್ತ್ರವಾಹುದೆ ಬೇರೆ ಭಾಷೆ ಬೇರೆಯು ಆಗೆ ಶ್ರೀಶ ಹರಿಸೋ ಇದನು 3 ಮಾನವರ ಬಹುಮಾನ ಸಾನುರಾಗದಿ ಬಯಸಿ ನಾನು ಮೋದಿಸುವೆ ಹೀನ ಮತಗಳ ಹುಳುಕು ಪ್ರಾಣಪತಿಮತ ಮೇಲ್ಮೆಗಾನಮಾಡೆನು ದೃಢದಿ ಸ್ವಾನುಸಂಧಾನ ವಹೀನ ಜ್ಞಾನಿಯೊ ನಾನು4 ಖ್ಯಾತಿ ಜೀವನಕಾಗಿ ಶಾಸ್ತ್ರವೋದಿದ ಮೂಢ ನೀತಿ ಪೇಳುವೆ ಜನಕೆ ನೀತಿತೆರನಾನಡಿಯೆ ನಿತ್ಯ ನೇಮವುಯನಗೆ ಈತರದ ಹರಿದಾಸ ಮಾತರಿಶ್ವಗೆ ದೂರ 5 ದಾನ ಧರ್ಮಗಳಿಲ್ಲ ಮೌನ ಜಪ ತಪವಿಲ್ಲ ಹೀನಗುಣ ಬಿಡಲಿಲ್ಲ ನಾನುಯೆಂಬುವೆನಲ್ಲ ಸೊಲ್ಲು ಏನು ಬಿಡೆದಿಹೆನಲ್ಲ ನಿನ್ನ ನಂಬಿಹೆನಲ್ಲ ನೀನು ಬಿಡೆ ಮದ್ದಿಲ್ಲ6 ಇಂತುಟಾದರು ಮೆರೆವೆ ಹಂತ ನಿನ್ನಯ ಕೃಪೆಯೊ ಯೆಂತು ಪೇಳಲಿ ಜೀಯ ಸಂತ ಜಯಮುನಿ ವಾಯುವಂತರದಿ ನಲಿವಂಥ “ಶ್ರೀ ಕೃಷ್ಣವಿಠಲ”ನೆ ನಿನ್ನಂಥ ದೊರೆಯಿಲ್ಲ ಸರ್ವೋತ್ತಮನೆ ಶರಣೈಯ7
--------------
ಕೃಷ್ಣವಿಠಲದಾಸರು
ಯಾದವಗಿರಿವಾಸನಹುದೋ ಶ್ರೀ ನಾರಸಿಂಹಆದಿನಾರಾಯಣ ಅಚ್ಯುತನಹುದೊ ಪ ಪಾವಕ ಮೂರ್ತಿಕಳ್ಳ ದೈತ್ಯರ ಸಂಹಾರವ ಮಾಡಿದೆನಳಿನೋದ್ಭವನಯ್ಯ ಅಮರ ಚೆನ್ನಿಗರಾಯ 1 ಕಾಯ ಬೇಕೆಂದುನಟಿಸಿ ಕಂಬದಿ ಮೂಡಿ ನಗುವ ಭಕ್ತನ ನೋಡಿಸಟೆಯಲ್ಲ ಅಜಾಂಡಗಳೊಡೆವಂತೆ ಘರ್ಜಿಸೆಕುಟಿಲ ದಾನವನೋಡುವುದ ಕಂಡು ಎಳೆತಂದುಚಿಟಿಚಿಟಿ ಚಿಟಿರೆನ್ನಲು ಉಗುರಲಿ ಸೀಳಿಪುಟನೆಗೆದ ಪಾದದಲಿ ಬಲಿಯ ತಲೆಯನು ಮೆಟ್ಟಿ ನಟನೆಯಾಡುವ ವಿದ್ಯೆಯನೆಲ್ಲಿ ಕಲಿತೆಯೊ ಕಪಟನಾಟಕ ಸೂತ್ರಧಾರಿ ನೀನಹುದು ಕ್ಷತ್ರಿಯರಚಟುಲ ಛಲದಿ ಒಗೆದು ಕರುಳ ಬಗೆದು ತುಳಿದ-ದಟರನು ಸಂಹರಿಸಿದ ಚೆಲುವರಾಯ 2 ಅಂದು ಕೌಸಲ್ಯಾ ಗರ್ಭ ಚಂದ್ರಮನಾಗಿ ಬೆಳಗಿಕೊಂದೆ ರಾವಣ ಕುಂಭಕರ್ಣಾದಿಗಳನೆಲ್ಲಇಂದಿರೇಶನೆ ನಿನ್ನ ನಂಬಿದ ವಿಭೀಷಣನಿಗೆಎಂದಿಗೂ ಪಾರವಿಲ್ಲದ ಪದವಿಯನಿತ್ತೆಕಂದನಾಗಿ ಜನಿಸಿ ವಸುದೇವ ದೇವಕಿಯರಿಗೆನಂದಗೋಕುಲದೊಳು ನಿಂದ ಕಂಸನ ಕೊಂದೆಚಂದಿರನ ನೆರೆಪೋಲ್ವ ಉನ್ನತೋನ್ನತನಾಗಿಕೊಂದು ತ್ರಿಪುರಾಸುರರ ಅವರ ಸತಿಯರ ಕೆಡೆಸಿಒಂದೆ ನೆಗೆತಕೆ ನೆಗೆವ ಅಶ್ವವನೇರಿದೆ ವ-ಸುಂಧರೆಯ ಮೇಲೆ ಲೀಲೆಯಾಡುತ ಕೃತಯುಗದಿನಿಂದು ಯಾದವಗಿರಿಯ ಮೇಲೆ ತ್ರೇತಾಯುಗದಿಬಂದು ರಾಮನೆನಿಸಿಕೊಂಡೆ ದ್ವಾಪರ ಯುಗದಿಬಂದು ಕೃಷ್ಣನೆನಸಿಕೊಂಡೆ ಕಲಿಯುಗದೊಳುನಿಂದು ಚೆಲುವ ಚೆನ್ನಿಗರಾಯನಾದೆ ವರನಂದಿಯ ಚಂದದಿಂ ರಕ್ಷಿಸಿದೆ ಎನ್ನ ಕಾಯೊಇಂದಿರಾಪ್ರಿಯ ಬಾಡದಾದಿಕೇಶವ ರಾಯ3
--------------
ಕನಕದಾಸ
ಯಾರೆ ಹುಡುಗಿ ನೀನು ಬಂದವಳಿಲ್ಲಿಯಾರೆ ಹುಡುಗಿ ನೀನು ಪ ಯಾರೆ ಹುಡುಗಿ ನೀನು ಮೂರು ಬಾರಿಲಿ ಬಂದಿನೀರಜಾಂಬಕ ಕರವೀರದವಳೆ ನೀ 1 ಮಾನಿನಿ ಮಣಿಯೆ 2 ಏನು ಪೇಳಿದನಮ್ಮಾ ಅಚ್ಯುತಪ್ರಾಣದೇವನು ನಿಮ್ಮಾಏನು ಸೂಚಿಸಲೆಂದು ನೀನು ಪೇಳಿದರೀಗನಾನು ಶೋಧಿಸುವೆನೆ ದೀನರುದ್ಧಾರಳೇ 3 ಇಂದುಮುಖಿಯೆ ನೀನು ಸುಮ್ಮನೆನಿಂದ ಕಾರಣವೇನುಇಂದಿರೇಶನ ಸಖಿ ಒಂದು ಮಾತಾಡದೆ ನಿನ-ಗೊಂದಿಸುವ ಕರದಿಂದ ಮಹಾಸಕ 4
--------------
ಇಂದಿರೇಶರು
ಯೆಂದಿಗಾಹುದೋ ನಿನ್ನ ದರುಶನಾ | ಇಂದಿರೇಶ ಮುಕುಂದ ಕೇಶವಾ ಪ ಗಾನಲೋಲನೇ ದೀನ ವತ್ಸಲಾ || ಮಾನದಿಂದಲೀ ನೀನೆ ಪಾಲಿಸೋ 1 ಯಾರಿಗೆ ಮೊರೆಯಿಡುವೆ ಶ್ರೀ ಹರೀ || ಸಾರಿ ಬಂದು ನೀ ಈಗಲೇ ಪೊರೀ 2 ಗಜವ ಪಾಲಿಸೋ ಗರುವದಿಂದಲೀ || ಭುಜಗಶಯನ ಶ್ರೀ ವಿಜಯವಿಠಲಾ3
--------------
ವಿಜಯದಾಸ
ಯೆಂದು ಪಿಡಿಯುವಿ ಕೈಯ್ಯ ಇಂದಿರೇಶ ಚಲುವ ಕೃಷ್ಣನೆ ಪ ಮುಂದೆ ಹೋಗಲು ಬಂಧಮಾಡುತ ಕುಂದು ಅಳಿಯುತ ತಂದೆ ದಯೆತೊರಿ ಅ.ಪ ಮಂದ ನಾನಯ್ಯ ಕಂದಿ ಕುಂದಿದೆ ಭವದಿ ಕೇಳಯ್ಯ ಬಂಧು ಬಳಗವು ಯಾರು ಇಲ್ಲಯ್ಯ ನಿಂದು ಮುಂದಿನ ದಾರಿ ನಡೆಸಯ್ಯ ಜೀಯಾ ಅಂದು ಸಭೆಯೊಳು ಮಂದಗಮನೆಯ ಒಂದು ನೊಡದೆ ಬಂದು ಸಲಹಿದ ಸಿಂಧು ಶಯನಾನಂದ ಮೂರುತಿ ನಂದನಂದನ ಶ್ಯಾಮಸುಂದರ ಬಂಧು ಸರ್ವರ ಬಂಧಮೋಚಕ ಮಂದರಾದ್ರಿ ಧರನೆ ಯದುಕುಲ ಚಂದ್ರ ಶೋಭಾಸಾಂದ್ರ ಕೃಷ್ಣನೆ ಬಂದು ಚಂದದಿ ಸಲಹಿ ಎನ್ನನು 1 ಬಾಲತನದಲ್ಲಿ ಲೀಲೆಗೋಷ್ಠಿಲಿ ಮೆರೆದೆ ನಾನಲ್ಲಿ ಮೇಲೆ ಯೌವನ ಒಡನೆ ಬಂತಲ್ಲಿ ಲಲನೆ ಕೇಳಿಲಿ ಮುಳುಗಿ ಹೋದೆನು ಅಲ್ಲಿ ಮೆಲ್ಲಮೆಲ್ಲನೆ ಮುಪ್ಪು ಬಂತಲ್ಲಿ ಕಾಲಕಳೆದೆನು ಪಗಡೆ ಜೂಜಿನಲಿ ಮಲ್ಲಮರ್ದನ ಮಾತುಲಾಂತಕ ಚಲ್ವಸೂಕರ ಪುಲ್ಲಲೊಚನ ಪುಲ್ಲನಾಭನೆನಲ್ಲ ಸರ್ವರ ಬಿಂಬರೂಪನೆ ಎಲ್ಲ ಕಾಲದಿ ಎಲ್ಲಮಾಡುತ ನಿಲ್ಲದೆಜಗ ಸಾರ ಶ್ರೀ ನಲ್ಲ ನಿನ್ನಯ ಎಲ್ಲ ಬಲ್ಲವರಿಲ್ಲ ಎಲ್ಲಿಯೂ ಬುದ್ಧ ಕಲ್ಕಿಯೆ ಸೊಲ್ಲು ಲಾಲಿಸಿ ಒಲಿದು ಬಂದ ನಾರಸಿಂಹನೆ ಇಲ್ಲ ಸಮರು ಅಧಿಕರೈಯ್ಯ ಪೂರ್ಣದೇವನೆ2 ಮೂರು ತಾಪವ ಹರಿಪ ಬಗೆಯೇನೋ ವೈರಿ ಆರರ ಭರದಿ ತರಿ ನೀನೂ ಮೂರು ಋಣಗಳು ಉಳಿಯೆಗತಿಯೇನು ಮೂರು ಕರ್ಮದಿ ಬಿಡಿಸಿ ಹೊರೆಯನ್ನು ಭಕ್ತಸುರಧೇನು ಸಾರಸಜ್ಜನ ಪ್ರಾಪ್ಯ ಶುಭಗುಣ ಸಾರ ಕರುಣಾ ಪೂರ್ಣವಾರಿಧಿ ಮಾರಜನಕನೇ ಋಷಭಮಹಿದಾಸ ತೋರು ಜ್ಞಾನವ ಬಾದರಾಯಣ ಮೀರಲಾರೆನು ವಿಷಯವಾಸನೆ ಭಾರತೀಶನ ಒಡೆಯ ಕೃಷ್ಣನೆ ಭಾರ ನಿನ್ನದು ಎನ್ನ ಪೊರೆವದು ಮತ್ಸ್ಯ ವಾಮನ ಧೀರ ಧೃವನಾ ಪೊರೆದ ವರದನೆ ಬೀರಿ ಭಕ್ತಿ ಜ್ಞಾನ ವೈರಾಗ್ಯ 3 ಎನ್ನ ಯೋಗ್ಯತೆ ನೋಡಿ ಫಲವೇನು ನಿನ್ನ ಘನತೆ ತೋರಿ ಪೊರೆ ನೀನು ನಿನ್ನ ದಾಸನ ಮಾಡು ಎನ್ನನ್ನು ಅನ್ಯಹಾದಿಯ ಕಾಣೆ ನಾ ನಿನ್ನು ಬೆನ್ನು ಬಿದ್ದೆನು ಇನ್ನೂಮುನ್ನೂ ಮಾಧವ ವಿಶ್ವ ತೈಜಸ ಪ್ರಾಜ್ಞತುರಿಯ ಹಂಸ ವಿಷ್ಣುವೇ ಜ್ಞಾನ ಭೋಧಕ ಸನತ್ಕುಮಾರನೇ ಮೌನಿ ದತ್ತಾತ್ರೇಯ ಹಯಮುಖ ದೀನವತ್ಸಲ ಯಜ್ಞ ಧನ್ವಂತ್ರಿ ಶ್ರೀನಿವಾಸ ರಾಮ ಕಪಿಲನೆ ಜ್ಞಾನ ನಿಧಿ ಮುನಿ ನಾರಾಯಣನೆ ನೀನೆ ಅನಿರುದ್ಧಾದಿ ರೂಪನು ಧ್ಯಾನಗೊಚರ ಶಿಂಶುಮಾರನೆ ಸಾನುಕೂಲದಿ ನೀನೆ ವಲಿಯುತ ಕರ್ಮ ಸಂಚಯ4 ಆದಪೊದ ಮಾತು ಏಕ್ಕಯ್ಯ ಮಧ್ವರಾಯರ ಪ್ರೀಯ ಶೃತಿಗೇಯ ಮೋದದಾಯಕ ಮುಂದೆ ಸಲಹೈಯ್ಯ ಪಾದಪದ್ಮದಿ ಶರಣು ಅಲ್ಲದೆ ಏನು ಮಾಡಲಿ ಜೀಯ ಅಯ್ಯ ತಿದ್ದಿ ಮನವನು ಕದ್ದು ಅಘವನು ಒದ್ದು ಲಿಂಗವ ಶುದ್ಧಜ್ಞಾನದ ಸಾಧು ಜಯಮುನಿ ವಾಯುವಂತರ ಮಾಧವ ಶ್ರೀ ಕೃಷ್ಣವಿಠಲನೆ ಪಾದ ಮಧುಪರ ವೃಂದ ಮಧ್ಯದಿ ವೇದ ಸಮ್ಮತ ಗಾನ ಸುಧೆಯನು ಶುದ್ಧಭಕ್ತಿ ಜ್ಞಾನದೊಡಗೂಡಿ ಮೆದ್ದು ಪಾಡುತ ಕುಣಿವ ಭಾಗ್ಯವ ಮುದ್ದು ಕೃಷ್ಣನೆ ನೀನೆ ಎನಗಿತ್ತು 5
--------------
ಕೃಷ್ಣವಿಠಲದಾಸರು
ರಕ್ಷಿಸುವ ತಾಯಿತಂದೆ ರಘುಕುಲೋತ್ತಮ ರಾಮಚಂದ್ರ ಅಕ್ಷಯ ವಿತ್ತು ಭಕ್ತಜನರುಪೇಕ್ಷೆ ಮಾಡದೆ ಪ ಕಂದನೆಂದು ಖಳರ ಅನುಜರಂದದಿ ಕಾಯ್ದದೇವ ಸಿಂಧುಶಯನ ಶ್ರೀನಿವಾಸ ಶ್ರೀಧರಾಚ್ಯುತಾ ಎಳಿವೊ ವ್ಯಾಳ್ಯದಲ್ಲಿ ಬಂದು ಮಾನ ರಕ್ಷಿಸಿದಂಥಾ ಪರಮಪುರುಷ ಭಕ್ತವತ್ಸಲ 1 ಮತ್ತ ಸಲಹಬೇಕಂತ ಬಿರುದುವುಳ್ಳ ಧೀರ ಭಾನುಕೋಟಿತೇಜನಾ ಕರಿಯು ಕರಿಯೋ ಕಾಲದಲ್ಲಿ ಗರುಡನೇರಿ ಬಂದು ಪೊರೆದ ಕರುಣಾಸಾಗರ------ನಾಮನಯ್ಯನಾದ ದೀನಾ 2 ಇಂದು ಇರುವರೆಲ್ಲಾ ಅಂದು -- ಕರುಣಾವಿಟ್ಟು ಅತಿಶಯಾದಲಿ ಕುಂದು ಇಲ್ಲದೆ ಪಾಲಿಸು ಸ್ವಚ್ಛಂದದಿಂದ ಚ್ಯುತಿಯಿಲ್ಲದೆ ಇಂದಿರೇಶ `ಹೊನ್ನವಿಠ್ಠಲ ' ವಿಶ್ವಕರ್ತಾ ಬುಧವಂದ್ಯಾ3
--------------
ಹೆನ್ನೆರಂಗದಾಸರು
ರಂಗ ಬಾರನ್ಹ್ಯಾಗೆ ಮಾಡಲಂಬುಜಾಕ್ಷಿಯೆ ರಂಗ ಬಾರನ್ಹ್ಯಾಗೆ ಮಾಡಲೆ ಪ ತಾಪ ಹೋಗದು ಶೀತ ಕಳೆವೊ ಸೂರ್ಯನಂತೆ ದ್ವಾರಾವತಿಯ ನಿಲಯನಮ್ಮ 1 ಅಕ್ಕ ರುಕ್ಮಿಣಿಯಲ್ಲಿ ನಕ್ಷತ್ರಮಧ್ಯಚಂದ್ರನಂತೆ ಪೊಕ್ಕಳಿಂದಲಜನ ಪಡೆದ ಚಕ್ರಧಾರಿ ಅಕ್ಕರ ಪಡುವೊ 2 ಕರೆದುತಾಹೋರೊಬ್ಬರಿಲ್ಲ ಕರುಣಾನಿಧಿಯೆಂಬುವುದು ಸಲ್ಲ ತರುಣಿ ಸತ್ಯಭಾಮೆಗಧಿಕ ತಿಳಿದು ತನ್ನ ರುಕ್ಮಿಣಿಯಲ್ಲಿರುವ 3 ಉಂಗುರದ ಹರಳಿನಂತೆ ಹೊಂದಿಕೊಂಡು ರುಕ್ಮಿಣಿಯನ್ನು ಇಂದಿರೇಶ ಬಿಟ್ಟಿನ್ನೊಬ್ಬರ ಮಂದಿರಕ್ಕೆ ಬಂದಿಹನ್ಹ್ಯಾಗೆ 4 ಮಂದಮತಿಯು ಆದನೇನೆ ತಂದೆಯಾದ ಸತ್ರಾಜಿತನು ತಂದುಕೊಟ್ಟನೆನ್ನ ಈ ಸುಂದರಳಾದ ಸೌ(ಸವ?) ತಿ ಕೆಳಗೆ 5 ಅಕ್ರೂರಜಮಿಳಂಬರೀಷ ಚಿಕ್ಕಧ್ರುವ ಪ್ರಹ್ಲಾದ ಗಜನು ಭಕ್ತಿಯಿಂದ ಕರೆಯೆ ಕಣ್ಣೆತ್ತಿ ನೋಡನವರನೀಕಾಲಕ್ಕೆ 6 ಗಾಯನದಿ ಗಂಧರ್ವ ಬಂದು ನಾರದ ಸುದಾಮ ಬಂದು ಬೇಡಿಕೊಂಡು ಕರೆಯಲವರ ನೋಡಿ ಮುಂದಕೆ ಬರುವನಲ್ಲ 7 ಸೋಳ ಸಾವಿರ ಸತಿಯರೆಲ್ಲ ಭಾಳ ಚಿತ್ರಭೂಷಿತರಾಗಿ ಏಳು ಕೃಷ್ಣೇಳೆಂದು ನಾಲ್ಕು ತೋಳು ಪಿಡಿದು ಕರೆವೋಣೇನೆ 8 ನೀಲ ಜಾಂಬವಂತಿ ಹಚ್ಚಿದ್ಹಗಲು ಬತ್ತಿಯಂತೆ ಸುತ್ತುಗಟ್ಟಿ ಕರೆವೋಣೇನೇ 9 ಪುತ್ಥಳ್ಯಂತ ರುಕ್ಮಿಣಿ ತೊಡೆಯಲಿಟ್ಟು ಕುಳಿತನಿಂದಿರೇಶ ಬಿಟ್ಟರಾಕೆ ನಮ್ಮನು ಕಣ್ಣೆತ್ತಿ ನೋಡೋದಷ್ಟೆ ಹೊರತು 10 ಗೊಲ್ಲ ಸತಿಯರೆಲ್ಲ ತಮ್ಮಲ್ಲಿ ದಧಿಬೆಣ್ಣೆಗಳ ತಂದು ಮೆಲ್ಲು ಕೃಷ್ಣಯೆಂದು ಕರೆಯೆ ಫುಲ್ಲನೇತ್ರ ತೆಗೆದುಕೊಂಡ11 ಕುಬ್ಜೆ ಕರದಿ ಗಂಧ ಹಚ್ಚೇನೆಂದು ಕರೆಯೆ ಬೆನ್ಹತ್ತಿ ಬರುವನೇನೆ ಕೃಷ್ಣ 12 ಸಾಸಿರ್ಹೆಡೆಯ ಮಂಚವಿಳಿದು ಸರಸವಾದ ವಚನದಿಂದ ಭೀಷ್ಮೆ ಭಿಡಿಯವೇನೆ ಭೀಮೇಶಕೃಷ್ಣನ ಕರೆವೋದಕ್ಕೆ13
--------------
ಹರಪನಹಳ್ಳಿಭೀಮವ್ವ