ಒಟ್ಟು 2704 ಕಡೆಗಳಲ್ಲಿ , 115 ದಾಸರು , 2166 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದಿಗೆ ಕಾಂಬುವೆ ನಿನ್ನ ಚರಣವ ಪತಿ ಘನ್ನ ಪ ಪರಧನ ಪರಸತಿಯರನು ನಾ ಬಯಸುತ ಸಿರಿಯರಸ ನಿನ್ನ ಮರೆದು ಪರಮ ನೀಚನೆಂದೆನಿಸಿರುವೆ1 ಅರಿತು ಅರಿಯದಂತೆ ದುರಿತಗಳನು ಮಾಡಿ ಗುರು ಹಿರಿಯರನು ನಿಂದಿಸಿ ಗರುವದಿಂದಲಿ ಚರಿಸುತಿರುವೆ 2 ಸರುವಂತರ್ಯಾಮಿ ಕರುಣಾಕರನಾದ ಸಿರಿ ರಂಗೇಶವಿಠಲ ನಿನ್ನ ಅರೆಕ್ಷಣ ಸ್ಮರಿಸದಿರುತಿರುವೆ 3
--------------
ರಂಗೇಶವಿಠಲದಾಸರು
ಎಂದಿಗೆ ಪಾಲಿಪೆ ಎನ್ನ ಗೋ- ಪ ವಿಂದ ಮುಕುಂದ ಆ- ನಂದ ಮೂರುತಿಅ.ಪ ಚರಣಸೇವೆಯ ಕೊಡಿಸಿ ಪರಮಭಕ್ತರೊಳಿರಿಸಿ ದುರಿತರಾಸಿಗಳ ಪರಿಹರಿಸಿ 1 ತಾರದೆ ಸಂತೋಷದಿ ಮಾರಜನಕ ನಿನ್ನ ಧೇನಿಸುವಂತ 2 ಗುರುರಾಮವಿಠ್ಠಲ ನಿನ್ನ ಹೊರತು ಅನ್ಯರಿಲ್ಲ ಸಿರಿನಲ್ಲ 3
--------------
ಗುರುರಾಮವಿಠಲ
ಎಂದಿಗ್ಹ್ಯೋದೀತಯ್ಯಾ ಹರಿ ಹರೀ ಎಂದು ಮುಳುಗೀತಯ್ಯಾ ಪ ಎಂದಿಗ್ಹೋದೀತು ಸುಖ ಅಂದಗೆಡಿಪ ಮಹ ಮಂದಮತಿಯು ಎನ್ನಿಂದ ಬಿಟ್ಟು ದೂರ ಅ.ಪ ಕತ್ತಲ ಕಾಳಿದು ಎನ್ನನು ಸುತ್ತಿಕೊಂಡು ಸೆಳೆದು ಸತ್ಯಮರೆಸಿ ಸ್ಥಿರಚಿತ್ತ ಕೆಡಿಸಿ ಪಿಡಿ ದೆತ್ತಿ ಹಾಕುತಿದೆ ಮತ್ತೆ ಭವಬಂಧದಿ 1 ಮುಂದರಿಗೊಡದಿದು ನಿರುತದ ಅಂದವ ತಿಳಿಗೊಡದು ಬಂಧಿಸಿ ಬಲುಘೋರಾಂಧಕಾರ ಮುಚ್ಚಿ ಸಂದಿನೊಳ್ನೂಕೆನ್ನ ಕೊಂದು ತಿನ್ನುತಿದೆ 2 ತೆರೆದು ನೋಡಲೀಯದು ಕಣ್ಣಿಗೆ ಪರದೆಯ ಹಾಕುವುದು ನರಹರಿಶರಣರ ಕರುಣಮಂ ತಪ್ಪಿಸಿ ಪರಮ ಶ್ರೀರಾಮ ನಿಮ್ಮ ಚರಣ ದೂರೆನಿಪುದು 3
--------------
ರಾಮದಾಸರು
ಎಂದು ಕಾಣಬೇಕೋ ಹೀಂಗಾದ ಮೇ ಲೆಂದು ಕಾಣಬೇಕೋ ಪ ಎಂದು ಕಾಣಬೇಕು ಮಂದಮನವೇ ನೀ ಹೊಂದಿ ಭಜಿಸವಲ್ಲ್ಯಾಮಂದರಧರನಡಿ ಅ.ಪ ದುರಾಸೆ ತೊರಿವಲ್ಲಿ ನಿನ್ನ ದುರ್ಗುಣ ಬಿಡವಲ್ಲಿ ಅರಿವು ನಿಲ್ಲಿಸವಲ್ಲಿ ಮರುಳುಗುಣಳಿವಲ್ಲಿ ನಿರುತ ಭಜಿಸುವಲ್ಲಿ ನರಹರಿ ಚರಣ 1 ಸಂಶಯ ಬಿಡವಲ್ಲಿ ಮನದ ಹಿಂಸಗುಣಳಿವಲ್ಲಿ ಧ್ವಂಸ ಮಾಡುವಲ್ಲಿ ಸಂಸಾರದ ಬಲೆ ಹಿಂಸನೆ ನೆನೆವಲ್ಲಿ ಕಂಸಾರಿಯಪಾದ 2 ಕ್ಲೇಶ ನೀಗುವಲ್ಲಿ ವಿಷಯದಾಸೆ ತೊರೆಯವಲ್ಲಿ ವಾಸನಳಿಯುವಲ್ಲಿ ಮೋಸಬಿಡವಲ್ಲಿ ಪಾದ 3
--------------
ರಾಮದಾಸರು
ಎಂದು ಕಾಣ್ವೆನೊ ಇಂದಿರೇಶನ ದಿವ್ಯಚರಣ ಎಂದು ಕಾಣ್ವೆನು ಪ ಎಂದು ಕಂಡಾನಂದಿಸುವೆನು ಮಂದರೋದ್ಧರ ಸಿಂಧುಶಾಯಿಯ ಸುಂದರ ಪಾದಾರವಿದಂಗಳನು ನಿಂದು ಮನದಣಿ ನೇತ್ರದಿಂದ ಅ.ಪ ದನುಜಾರಿಯ ಘನಮಹಿಮೆ ಜನಕಜೆಯ ಪ್ರಾಣಪ್ರಿಯನ ಮಿನುಗುವ ದಿನಮಣಿಕೋಟಿತೇಜೋಮಯನ ಘನಕೋಮಲ ನಿಜರೂಪ ಕಣ್ಣಿಲಿಂ ನೋಡ್ಹಿಗ್ಗುವ ದಿನ 1 ಕರಿಯ ಕಾಯ್ದನ ಕರುಣದಿಂದ ತರುಣಿಗ್ವಂದನ ಶರಣೆನುತ ಮರೆಬಿದ್ದವಗೆ ಸ್ಥಿರಪಟ್ಟವ ಕರುಣಿಸಿದನ ಕಾಲ 2 ಪಕ್ಷಿಗಮನನ ಲಕ್ಷ್ಮೀನಾಥ ಸಹಸ್ರಾಕ್ಷಶಯನನ ಲಕ್ಷವಿಟ್ಟು ಭಕ್ತರನ್ನು ರಕ್ಷಿಸಿ ಭಕ್ತವತ್ಸಲನೆಂಬ ನೋಡುವ ಪದವಿ 3
--------------
ರಾಮದಾಸರು
ಎಂದು ಕಾಂಬುವೆ ನಿನ್ನ ಚರಣ ನಾರಾಯಣತಂದು ತೋರಯ್ಯ ನಾ ಬಂದೆನು ಶರಣ ಪ ನಿತ್ಯ ಒತ್ತುವ ಚರಣತೋರ ಗಂಗೆಗೆ ಜನ್ಮ ಕೊಟ್ಟಂಥ ಚರಣಮೂರು ಲೋಕವ ಹಿಡಿದ ಚರಣನಾರಿ ಅಹಲ್ಯೆಯ ಪೊರೆದ ಚರಣ 1 ಪ್ರ್ರಳಯ ಕಾಲದಿ ನೆಕ್ಕುತಿಹ ಚಿಕ್ಕ ಚರಣಇಳೆಗೆ ಸುಯೋಧನನಿಳಿಸಿದ ಚರಣಎಳೆಯ ಧ್ರುವ ತಾ ಕಂಡ ಚರಣತುಳಸಿ ವನದಲಿ ಕುಣಿದ ಚರಣಸುಳಿದು ಭಕ್ತರ ಪೊರೆವ ಚರಣ 2 ಅಖಿಲಾಂಡದ ಸೃಷ್ಟಿ ಸ್ಥಿತಿ ಲಯ ಕಾರಣಭಕುತರು ಕರೆಯಲೋಡುವ ದಿವ್ಯ ಚರಣಶಕಟ ದೈತ್ಯನ ಒದೆದ ಚರಣಯುಕುತಿ ಶಕುತಿಗೆ ಬರದ ಚರಣಯುಕುತಿ ಪಥವನು ತೋರ್ಪ ಚರಣಪ್ರಖರ ಗದುಗಿನ ವೀರನಾರಾಯಣ 3
--------------
ವೀರನಾರಾಯಣ
ಎಂದು ಕಾಂಬೆನು ಎನ್ನ ಸಲಹುವಬಂಧುಬಳಗ ನಮ್ಮಪ್ಪನ ತಿರುಪತಿಲಿಪ್ಪನವರಾಹ ತಿಮ್ಮಪ್ಪನ ಪ. ದಂಡಿಗೆಯ ಬಾರಿಸುತ ಶ್ರುತಿಗೂಡಿ-ಕೊಂಡು ಪಾಡುತ ಮನದಿ ಲೋಲ್ಯಾಡುತಕುಣಿಕುಣಿದಾಡುತ 1 ಬೆಟ್ಟದೊಡೆಯನ ಚರಣಕಮಲಕೆ ಶಿರ-ವಿಟ್ಟು ಕರಗಳ ಮುಗಿವೆ ನಾ ಕವಕವನಗುವೆ ನಾಎನ್ನೊಡೆಯನ ಪೊಗಳಿ ನಾ2 ಸ್ವಾಮಿಪುಷ್ಕರಿಣಿಯಲ್ಲಿ ಸ್ನಾನ ನೇಮ-ವ ಮಾಡುವೆ ಪುಣ್ಯಕ್ಷೇತ್ರವ ನೋಡುವೆಹಯವದನನ ಕೊಂಡಾಡುವೆ 3
--------------
ವಾದಿರಾಜ
ಎಂದು ಕಾಂಬೆನು ನಾನುಗೋ- ವಿಂದ ನಿನ್ನಯ ಪಾವನ್ನ ಪಾದವನ್ನು ನಾ ಪೊಂದಿಸೇವಿಸಿ ಆನಂದಪಡುವುದಕಿನ್ನು ಕರುಣಿಸೈ ಮುನ್ನ ಪ ಪೊಂದಿ ಮಹದಾನಂದ ಪಡೆಯಲು ಕಂದಿಕುಂದಿತು ತನುಮನೇಂದ್ರಿಯ ಇಂದೆ ತೋರಿಸೊ ಪಾದಕಮಲವ ಅ.ಪ ಬಾಲತನದಲಿ ನಾನು ಶ್ರೀಲೋಲ ನಿನ್ನಿಂದ ಪಾಲಿತನಾದೆನೊ ಬೆಲೆಯುಳ್ಳ ಆಯುವನೆಲ್ಲ ಕಳೆದು ಬಿಟ್ಟೆನು ನಾನು ಕೆಲಕಾಲದಲಿ ನಾ ಕಲುಶಕ್ರಿಯೆಗಳನ್ನು ಫಲವಿಲ್ಲದೆಸಗಿದೆನು ಎಲ್ಲರೊಳು ನೀ ನೆಲಸಿ ಜೀವರ ಎಲ್ಲಕರ್ಮವ ಮಾಡಿಸಿ ಫಲವೆಲ್ಲ ಅವರಿಗೆ ಇತ್ತು ನೀ ನಿರ್ಲಿಪ್ತನೆಂದು ತಿಳಿಯದಲೆ ಖುಲ್ಲಮಾನವರೊಡನೆ ಬೆರೆತು ಪುಲ್ಲಲೋಚನ ನಿನ್ನ ಮರೆದು ಇಲ್ಲ ಎನಗೆ ಎಣೆಯೆನುತ ನಾ ಬಲುಹೆಮ್ಮೆಯಿಂದಲಿ ದಿನಗಳ ಕಳೆದೇ ಇಲ್ಲನಿನಗೆಸರಿಯಿಲ್ಲ ನೀ ನಿಲ್ಲದಾಸ್ಥಳವಿಲ್ಲ ಜಗದಾ ಎಲ್ಲ ಕಾಲಗಳಲ್ಲಿ ಇಹ ಶ್ರೀನಲ್ಲ ನೀನೆಲ್ಲ ಬಲ್ಲೆಯೊ 1 ಬರಿದೇ ಕಾಲವ ಕಳೆದೇ ಶ್ರೀಹರಿಯೆ ನಿನ್ನಯ ಸ್ಮರಣೆಯನ್ನು ಮಾಡದೇ ಪರಿಪರಿಯ ತನುಮನ ಕ್ಲೇಶಗಳಿಗೊಳಗಾದೆ ನಾಮಸ್ಮರಣೆಯೊಂದಲ್ಲದೇ ಇನ್ನೆಲ್ಲಾ ಬರಿದೇ ಪರಮಕರುಣಾಶರಧಿ ಎಂಬುವ ಕರಿಧ್ರುವಬಲಿಮುಖ್ಯರೆಲ್ಲರ ಪೊರೆದ ಕೀರುತಿ ಕೇಳಿ ನಂಬಿದೆ ಶರಣಜನಮಂದಾರನೆಂದು ಅರಿಯೆ ನಾನವರಂತೆ ಸಾಧನ ಅರಿತು ಮಾಡುವ ಪರಿಯು ತಿಳಿಯದು ಬಿರುದು ಭಕ್ತಾಧೀನನೆಂದು ಹರಿಯೆ ನಿನ್ನಯ ಮರೆಯಹೊಕ್ಕೆನು ದುರಿತಶರಧಿಯೊಳಾಡುತಿರುವನ ಉ- ತ್ತರಿಸಲೊಂದೇ ನಾವೆಯಂತಿಹ ಚರಣಸ್ಮರಣೆಯಕೊಟ್ಟು ರಕ್ಷಿಸು ಪುರುಷಸೂಕ್ತಸುಮೆಯ ಜೀಯಾ2 ಶೇಷಗಿರಿಯವಾಸ ಶ್ರೀ ಶ್ರೀನಿವಾಸ ದೋಷರಹಿತ ಸರ್ವೇಶ ಮನೋ- ಕಾಶದಲಿ ಅನವರತ ನಿಲ್ಲೊ ಶ್ರೀಶಾ ಬಿಡಿಸೆನ್ನ ಭವಬಂಧ ಗ್ರಂಥಿಯ ಪಾಶಾ ಹರಿಸುವುದು ಕ್ಲೇಶಾ ಶ್ರೀಶ ನಿಗಗತಿಶಯವೆ ಎನ್ನಯ ವಿಷಯದಭಿಲಾಷೆಗಳ ಬಿಡಿಸೀ ದೋಷರಹಿತನ ಮಾಡಿಸೀ ಎನ್ನ ಪೋಷಿಸೋ ನಿನ್ನಸ್ಮರಣೆಯಿತ್ತು ದ್ವಾಸುಪ- ರ್ಣ ಶ್ರುತಿಗಳಿಂದಲಿ ಈಶ ದಾಸರ ಭಾವ ತಿಳಿಯದೆ ಮೋಸಹೋದೆನೊ ಬೋಧೆ ಇಲ್ಲದೆ ವಾಸುದೇವನೆ ರಕ್ಷಿಸೆನ್ನನು ಏಸುಕಾಲಕು ನೀನೆ ಗತಿ ಎಂದು ಆಸೆ ಮಾಡುವೆ ನಿನ್ನ ಕರುಣಕೆ ಬೇಸರದಲೆ ಮೊರೆಯ ಲಾಲಿಸಿ ಶ್ರೀಶ ಶ್ರೀ ವೆಂಕಟೇಶನೆ 3
--------------
ಉರಗಾದ್ರಿವಾಸವಿಠಲದಾಸರು
ಎಂದು ಕಾಂಬೆನು ಪಾಂಡುರಂಗ ಮೂರುತಿಯಾ ಇಂದು ಭಾಗನಿವಾಸ ನರನ ಸಾರಥಿಯ ಪ ಚಾರು ಚರಣಾಂಗುಲಿ ನಖರ ತರುಣೀಂದುಚ್ಛವಿ ತಿರಸ್ಕರಿಸುವ ಪ್ರಖರ ಕಿರುಗೆಜ್ಜೆ ಕಡಗ ನೂಪುರ ಪೆಂಡೆ ಶಫರ ತೆರಜಾನು ಜಂಘೆ ಭಾಸ್ಕರ ರತ್ನ ಮುಕುರ1 ರಂಭಾ ಪೋಲುವ ಊರು ಪೊಂಬಣ್ಣಾಂಬರವ ಕುಂಭೀ ಮಸ್ತಕದೊಲ್ ನಿತಂಬದಿ ಪೊಳೆವ ಕಂಬು ಮೇಖಳಕಂಜ ಗಂಭೀರ ನಾಭೀ ವಿಧಿ ಶಂಭು ಪೂಜಿತನ 2 ಲವಕುಕ್ಷಿತ್ರವಳಿ ಬಾರ್ಗವಿ ವಕ್ಷ ಉರವು ಕೌಸ್ತುಭ ವೈಜಯಂತಿಯ ಸುವಿಶಾಲ ವಕ್ಷದೊಳ್ ವಿವಿಧ ಹಾರಗಳು ನವನೀತ ಚೋರ ಶ್ರೀ ಪವಮಾನಾರ್ಚಿತನ 3 ಪದಕ ಸರಿಗೆಯ ಜಾಂಬೂನದ ಕಂಬುಕಂಠ ರದನೀಕರ ಬಾಹು ಚದುರ ಭುಜಕೀರ್ತಿ ಬದರ ಸಂಕಾಶಾ ಅಂಗದ ರತ್ನ ಕಟಕಾ ಪದಮಾರುಣ ಕರಯುಗ್ಮ ಕಟಿಯಲ್ಲಿಟ್ಟವನಾ4 ವಿಧುಬಿಂಬೋಪಮ ಚಲ್ವವದನ ಕೆಂದುಟಿಯಾ ಬಿದುರಾಭಾದಶನಾಲಿಂಗದನೊಳ್ ಕಿರುನಗೆಯಾ ಕದಪು ಕನ್ನಡಿ ನಾಸಾ ತುದಿ ಚಂಪಕ ತೆನೆಯಾ ಉದಕೇಜಾಯತ ನೇತ್ರಯದುವಂಶೋದ್ಭವನಾ 5 ಕುಂಡಲ ಕರ್ಣ ಸುಲಲಿತ ಭ್ರೂಯುಗಳ ಪೊಳೆವ ಬಾಲ ಶಶಾಂಕ ತಿಲಕಾಂಕಿತ ಫಾಲ ಅಳಿಬಾಲವೆನಿಪ ಕುಂತಳ ರತ್ನ ಚಕಿತ ಕಲಧೌತ ಮಕುಟ ದಿಗ್ವಲಯ ಬೆಳಗುವನ 6 ಮಾನವ ಹರಿಯಾ ವಟುಭಾರ್ಗವ ಕಾಕುಸ್ಥ ಶಠ ಕಂಸದ್ವಿಷನ ನಿಟೆಲಾಂಬಕ ಸಹಾಯ ಖಳಕಟಕಾರಿ ಭೀಮಾ ತಟವಾಸ ಜಗನ್ನಾಥವಿಠಲ ಮೂರುತಿಯ 7
--------------
ಜಗನ್ನಾಥದಾಸರು
ಎಂದು ಕಾಂಬೆನೆ ಯದುವರನಾ| ತಂದು ಲೋಲಿಸೆ ಸಖಿಜಿತ ರೂಪಸ್ಮರನಾ ಪ ಶಿರಿದೇವಿ ಪ್ರೀಯನ ಶರಣಾಶ್ರಯನಾ| ಭವ ಭವ ಮುಖರೊಡೆಯನಾ 1 ವಿಮಲೆ ಚರಣನಾ ಕಮಲೇಕ್ಷಣನಾ| ದುರಿತ ಕುಲದೀನೋದ್ಧರನಾ 2 ಹೇಮಾಂಬರನಾ ಶಾಮಸುಂದರನಾ| ಕಾಮಿತಾರ್ಥವ ನೀವ ಕರುಣಾ ಸಾಗರನಾ 3 ತಂದೆ ಮಹಿಪತಿಯಾ ನಂದನ ಸಾರಥಿಯಾ| ಹೊಂದಿದವ ಕಾಂಬಾನಂದ ಮೂರಿತಿಯಾ4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂದು ಕಾಂಬೆನೊ ರಾಘವೇಂದ್ರ ಗುರುಗಳನಾ | ಕಾಯ ಆನಂದ ನಿಧಿಯ ಪ ತಾಯಿಯಂದದಿ ನಮ್ಮ ಕಾಯುವ ಧಣಿಯಾ ನ್ಯಾಯ ಸದ್ಗುಣ ಪೂರ್ಣ ಮಾಯಿ ಜಗ ಹರಿಯಾ 1 ಮಾಯಾ ರಮಣನ ನಾಮ ಗಾಯನ ಪರನ ದಾಯಾದಿ ಕುಲವೈರಿ ಶ್ರೇಯ ಬಲಯುತನಾ2 ನರರೂಪ ಧರಿಸಿ ವಾನರÀ ಭಕ್ತವರನಾ ನರಶೌರಿ ಪ್ರೀಯ ದೀನರ ಕಾಯುತಿಹರಾ 3 ಜನರನ ಪೊರೆವನೆಂದೆನುತ ಭೂಮಿಯಲಿ ಜನಿಸಿದ ತನ್ನವನ್ನ ವನುತಿ ಸಹಿತದಲಿ 4 ದುರಿತ ವರೆಕೆ ತಾಮುರುತನಾಗಿಪ್ಪ ಗುರುವೆಂಬ ಸಿರಿಗೆ ಇವ ನಿರಂತರದಿ ಸುರಪಾ 5 ಭಕ್ತರ ಬಯಕೆ ಪೂರೈಪಾ ಸುರತರುವೇ ಶಕ್ತ ವಿರಕ್ತ ಹರಿಭಕ್ತ ಮದ್ಗುರುವೆ 6 ಭುವನದಿಂ ದಾಟಿಸೆ ನೌಕವಾಗಿಹಿನಾ ನವ ಭಕುತಿಯನೀವ ಕುವಿಕುಲ ವರನಾ 7 ಇವನೇ ಗತಿಯೆನೆ ಜ್ಞಾನ ತವಕದಿ ಕೊಡುವಾ 8 ನಿಂದಿಪ ಜನರಲ್ಲಿ ಪೊಂದಿಪ ಪ್ರೇಮ ವಂದಿಪ ಜನರಿಗೆ ಸತತ ಶ್ರೀ ರಾಮ 9 ಶ್ರೀನಿವಾಸ ಪುತ್ರ ಪರಮ ಪವಿತ್ರಾ ಜ್ಞಾನಿ ಜನರ ಮಿತ್ರ ವಿಹಿತ ಚರಿತ್ರಾ 10 ನಷ್ಟ ತುಷ್ಟಿಗೆ ಅಂಜಾ ದುಷ್ಟ ಶೇರಾ ಕಷ್ಟ ಕಳೆಯುವ ನಮ್ಮ ಕೃಷ್ಣ ಪಾರಿಜಾತ 11 ಪೊಳಲುರಿ ಸಖನಾ ಘನಪೊಳಿಯುವ ಪಾದಯುಗವಾ ಘಳಿಗಿ ಬಿಡದಲೆ ನೋಡುತ ನಲಿಯುತಿರುವಾ 12 ಅರಿದು ಈತನೇಯನ್ನ ಗುರುವೆಂಬಗೆ ರುದ್ರಾ ಧುರದೊಳು ಭೀಮ ಗುರುವಿಗತಾ ದಾರಿದ್ರ್ಯಾ 13 ಅನಿಮಿತ್ತ ಬಂಧು ಬ್ರಾಹ್ಮಣ ವಂಶಜಾ ಭವ ತ್ರಾತಾ 14 ತಪ್ಪು ನೋಡದಲೆ ಕಾಯುತಿಪ್ಪ ನಮ್ಮಪ್ಪ ಸರ್ಪ ತಲ್ಪನ ಧ್ಯಾನದಿಪ್ಪ ನಿಪ್ಪ 15 ಅರುಣಾಭಿ ಚರಣ ತಲೆಬೆರಳು ಪಂಕ್ತಿಗಳಾ ಸರಸಿಜ ಪೋಲ್ವ ಮೃದುತರ ಪಾದಯುಗಳಾ 16 ವಲಿದ ಭಕ್ತರಿಗಿಷ್ಟ ಸಲಿಸುವ ಪಾದ17 ಸಕಲ ರೋಗವ ಕಳೆವ ಅಕಳಂಕ ಪಾದ ಪಾದ 18 ಹರಿಯಂತೆ ಹರನೊಲ್ ಸಾಸಿರ ನಯನನಂತೆ ಶಿರಿಯಂತೆ ತೋರ್ಪ ಭಾಸ್ಕರ ನರನಂತೆ 19 ಸುಳಿರೋಮಗಳುಳ್ಳ ಚಲುವ ಜಾನುಗಳಾ ಎಳೆಬಾಳೆ ತೆರ ಊರು ಹೊಳೆವ ಸುಚೈಲ 20 ತಟಿತ ಸನ್ನಿಭವಾದ ಕಟಿಗಿಪ್ಪ ಸೂತ್ರ ನಟ ಶೇವಸಿವಲಿ ತಾನು ಪುಟಿಯು ಉದರಾ 21 ಎದೆಯಲಿಪ್ಪುದÀು ನಮ್ಮ ಪರಮೇಶನ ಮನೆಯೊ ವದಗಿ ಭಕ್ತರಿಗೆ ಕರುಣದಿ ಕಾಯ್ವ ಖಣಿಯೂ 22 ಹುತವಾಹನನಂತೆ ಭಾರತೀಕಾಂತನಂತೆ ಚತುರಾಶ್ಯ ಈ ಕ್ಷಿತಿಯಂತೆ ಇಹನಂತೆ23 ಹಸುವಿನಂದದಲಿ ಪಾಗಸನೊಳಿಹನ ವಸುಧಿಯೊಳಿಂತಿದೊಮ್ಮೆ ಪಸುಯನಿಸಿದನಾ 24 ಭೂಧರತನಂತೆ ವಸುಧರನಂತೆ ಭೂಧರನಂತೆ ಸೋದರನಂತೆ 25 ಚರ್ಚಿತ ಸುಂದರ ರೂಪ ಕಂಬು ಲೋಕ ಕಂಧರಾಯುತನ 26 ಕರೆದು ಭಕ್ತರಿಗಿಷ್ಟಗರಿಯುವ ಚೆಲ್ವಾ ವರ ರೇಖೆಯುತ ಶಿರಕರದಾ ವೈಭವನಾ 27 ಮಂಗಳದಾಯಕ ಅಂಗೈಯಿಯುಗಳಾ ಭಂಗಾರ ದುಂಗಾರ ಇಟ್ಟಿಪ ಬೆರಳು 28 ಕೆಂದುಟಿ ಮೊದನಾಗಿ ಇಂದಿಪ್ಪ ವದನಾ ಪೊಂದಿದ ದಂತಗಳಿಂದ ಸ್ವಾರಚನಾ29 ಹಸನಾದ ದೊಕರದಂತೆಸೆವ ಗಲ್ಲಗಳಾ ಬಿಸಜದಂತೆ ರಾಜಿಸುವ ನೇತ್ರಗಳಾ 30 ನಾಸಿಕದಲಿಪ್ಪ ಮೀಸಿ ದ್ವಂದ್ವಗಳಾ ದೇಶಾದಿ ಪಾಲ್ಮೂರು ವಾಸಿ ಕರ್ಣಗಳಾ 31 ಗಿಳಿಗೆ ವಾಚ್ಯಾಪದೊಳ ಹೊಳೆವಾ ಪುಚ್ಛಗಳಾ ತಿಲಕಾ ಮುದ್ರೆ ಪುಂಡ್ರಗಳುವುಳ್ಳ ಫಾಲಾ 32 ಹರಿಪಾದ ಜಲವನ್ನು ಧರಿಸಿದ ಶಿರವಾ ಶಿರಿಗೋವಿಂದ ವಿಠಲನ್ನಡಿಗೆಯರಗುವಾ ಶಿರವಾ33
--------------
ಅಸ್ಕಿಹಾಳ ಗೋವಿಂದ
ಎಂದು ಕಾಹು(ಣು?)ವೆ ಎನ್ನ ಮನೋಹರ ಎಂದಿ[ಗೆಕಾ] ಹುದಿನ್ನೆಂದಿಗೆ ಬಂದೆ ಭವಭವಭವವೀ ದುಃಖದಿ ನೊಂದೆನೊ ರಂಗನಂಘ್ರಿ ಚರಣವ ಪ. ಮಂಗಳಾಂಗನ ಮಾಧವನ ಕೋಟಿ ಅಂಗಜಜನಕವಿಲಾಸನ ಗಂಗಾಜನಕನ ಗರುಡವಾಹನ ತುಂಗವಿಕ್ರಮನಂಘ್ರಿ ಚರಣವ 1 ಕಂತುಜನಕನ ಕಮಲನಾಭನ ಸಂತತದ ಸರ್ವೇಶನ ಯಂತ್ರವಾಹಕ ಎನ್ನ ಒಡೆಯನ ಚಿಂತಾಯ[ಕ]ನ ಶ್ರೀ ಚೆಲುವಚರಣವÀ 2 ಪರಮಪುರುಷನ ಪುಣ್ಯನಾಮನ ಶರಣುಜನಸರ್ವೇಶನ ಕರುಣಿ ಹೆಳವನಕಟ್ಟೆರಂಗನ ಚರಣ[ವ]---------- 3
--------------
ಹೆಳವನಕಟ್ಟೆ ಗಿರಿಯಮ್ಮ
ಎಂದು ದೂರಮಾಡುವಿ ಎನ್ನ ಬಂಧನವನು ಸಿಂಧುಶಯನ ತಂದೆ ಈ ಭವದಂದುಗವನು ಸಹಿಸಲಾರೆ ಪ ಸತಿಪತಿಯ ರತಿಯ ಕಲಹದಿ ಪತನಾದಿಂದ್ರಿಯಿಂದೆ ನಾನು ಪೃಥಿವಿಮೇಲೆ ಬಿದ್ದು ಘನ ವ್ಯಥೆಯಬಡುವ ತಾಪತ್ರಯವ 1 ಮಂದಭಾಗ್ಯನಾಗಿ ಆಗಿ ನಾನಾ ಸಂದಿನೊಳಗೆ ಬಂದು ಬಂದು ಮಂದಿಸೇವೆಗೈದು ನರಕ ಬಂಧರುರುಳವಂಥ ಕೆಡುಕು 2 ಆಸೆದೆಳಸಿ ಪರರಾಸ್ತಿ ಮೋಸತನದಿ ಕದಿಸಿ ಯಮನ ಪಾಶದೊಳಗೆ ನೂಕುವಂಥ ಹೇಸಿ ಎನ್ನ ನಾಶಬುದ್ಧಿ 3 ಅವನಿಯೊಳು ಜನಿಸಿಬಿಟ್ಟ ಬವಣೆ ನೆನೆಸಿ ನೆನೆಸಿ ಎನಗೆ ಸವೆಯದಯ್ಯೋ ದು:ಖ ಈ ದು ರ್ಭವ ಪಾಪ ಸಂಕಟ 4 ದಾಸಜನರ ಪ್ರಾಣಪ್ರಿಯ ಶ್ರೀಶ ಶ್ರೀರಾಮ ನಿಮ್ಮ ಚರಣ ಧ್ಯಾಸ ಮರೆಗೆ ಬಳಲಿಸುವ ಹೇಸಿಭವದ ವಾಸನವ 5
--------------
ರಾಮದಾಸರು
ಎಂದು ನೀ ನೀಡುವಿಯೊ ಮನಶಾಂತಿ ಗೋವಿಂದನೆ ಎನಗೆ ಒಂದೂ ತೋರದೆ ಕವಿದಿಹುದೊ ಭ್ರಾಂತಿ ಪ ಒಂದು ಘಳಿಗೆ ನಿನ್ನ ಪೊಗಳುವೆನೆಂದರೆ ಬಂದೊದಗುವುದೊ ಕುಂದು ಸಹಸ್ರವು ಅ.ಪ ಅನುದಿನ ಗಣನೆಗೆ ಬಾರದ ನುಡಿಗೆ ಕೊನೆಮೊದಲುಗಳಿಲ್ಲದೆ ದಿನಗಳು ಕಳೆದುವು ದುರ್ವಿಷಯದಲಿ ಎಣೆಯಿಲ್ಲದೆ ಎನ್ನ ಮನದಲಿ ಬೇಸರ ಜನಿಸಿ ಕೊರೆಯುತಿದೆ ಅನವರತದಿ ನಿನ್ನ ಮನನದಿ ನಲಿಯಲು 1 ಮರುಳು ಮೋಸಗಳಲಿ ಚತುರತೆಯುಳ್ಳ ದುರುಳರು ಸಂತತ ಮುಖ ವರಳುವ ತೆರದಲಿ ಸಡಗರದಿಂದ ಒರಲುವ ವಚನಗಳ ತಿರುಳುಗಳೆಲ್ಲವನರಿತು ಮನ ತೆರಳದೆ ಸಹಿಸುತ ನರಳುತಿರುವೆನೊ2 ಬಗೆ ಬಗೆ ಮಾಡುತಲಿರುವ ದುರಾಶೆಯಗಲಿದೆ ಮನವನ್ನು ಹಗರಣ ಮಾಡಿದೆನೋ ಜೀವನವ ನಗೆಗೀಡಾದೆನು ನಾ ಹಗೆ ಪಡ್ವರ್ಗವನೊಗೆದು ತವಚರಣ ಯುಗಳದಲಿ ಮನವು ಪ್ರಸನ್ನವಾಗುವಂತೆ 3
--------------
ವಿದ್ಯಾಪ್ರಸನ್ನತೀರ್ಥರು
ಎದುರ್ಯಾರೋ ಗುರುವೇ ಸಮರ್ಯಾರೋ ಪ ವಿಧಿ ಪದ ಅರ್ಹನೆ | ಮಧುಸೂದನ ಸುತ ||ಅ. ಪ|| ಕೇಸರಿಯ ಸತಿಯಲಿ ಉದಿಸಿದ ವೀರ | ರವಿಜಗೊಲಿದಧೀರದಾಶರಥಿ - ಚರಣಕೆ ಮಣಿದ ಗಂಭೀರ | ವಾಲಿಯ ಸಂಹಾರ ||ಸಾಸಿರ ದೈವತ್ತು | ಗಾವುದ ಸಾಗರಗೋಷ್ಪದ ಗೈಯುತ | ವಸುಧಿಜೆಗೆರಗಿದ 1 ಹರಿಯ - ಸೇವಕತನ ಮಾದರಿಯ | ತೋರಿದ ಹೊಸ ಪರಿಯಅರಿಯಾ - ಲಂಕೆಯ ದಹಿಸಿದ ಪರಿಯ | ಸೇತು ಬಂಧನ ದೊರೆಯಾ ||ಅರಿ ಕುಲ ಸವರಿ ಸಂ | ಜೀವನ ಗಿರಿ ತಂದುಧುರವ ಜಯಿಸಿ ಹರಿ | ಮಡದಿಯ ತಂದಗೆ 2 ಪ್ರಥಮಾಂಗನು ಕುಂತಿಯ ಸುತನೆನಿಸೀ | ದೃಪದಾತ್ಮಜೆ ವರಿಸೀಅತಿಖ್ಯಾತ ಜರೆಸುತನನ ವಧಿಸೀ | ಕೌರವರನು ಅಳಿಸೀ ||ತತುವ ಮತವ ಸಂ | ಸ್ಥಾಪಿಸುತವನಲಿವಿತತ ಮಹಿಮ ಹರಿ | ರತಿಯನೆ ಪಡೆದಗೆ 3 ಅರಿ ಉರವನೆ ಬಗಿದೂನಾರೀಯ - ತುರಬನು ಬಿಗಿದೂ | ನರ ಮೃಗನಂತೆಸೆದೊ ||ನೀರೊಳು ಅಡಗಿದ | ಕೌರವ ಮೇಲ್ಬರೆಊರು ತಾಡನದಿಂದ | ಮಾರಕನಾದಗೆ 4 ಕಲಿಯೂ ಹೆಚ್ಚಿದ ಕಲಿಯುಗದಲ್ಲಿ | ಮಣಿಮಾನನು ಇಲ್ಲಿಮಲಿನವ ಮಾಡಲು ಬಲು ವೇದದಲೀ | ಕಲುಷಿತ ತರ್ಕದಲೀ||ಅಲವ ಬೋಧರಾಗಿ | ಹುಲುಮತವಳಿಯುತಕಲುಷಹ ಗುರು ಗೋ | ವಿಂದನೆ ಪರನೆಂದೆ 5
--------------
ಗುರುಗೋವಿಂದವಿಠಲರು