ಒಟ್ಟು 524 ಕಡೆಗಳಲ್ಲಿ , 71 ದಾಸರು , 462 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಕ್ತ ಜನೋದ್ಧಾರನ್ಯಾರೋ ದೇವನ್ಯಾರೋ ಪ ನಿಜಮುಕ್ತಿ ದಾಯಕನೆ ಕೇಶವ ಪಾದತೋರೋ ಅ.ಪ ಭಕ್ತಿ ಜ್ಞಾನ ವಿಚಾರಕೆನ್ನನು ಹೊಕ್ತಿಗೊಳಿಸೆಂತೆಂದು ಬೇಡುವೆ ಶಕ್ತಿರೂಪನು ತಾಳಿ ತಿರುಗಿ ವಿ ರಕ್ತನಾದಾಂತ ಪರಾತ್ಮನೆ 1 ಬಾಲಕೃಷ್ಣನೆ ಬಾರೊ ಭಕ್ತನು ಶೀಲ ಗೋಕುಲಪಾಲ ಶ್ರೀಹರಿ ಆಲಿಸೆನ್ನಯ ಬಿನ್ನಪದ ನಿಜ ನೀಲಮೇಘಶ್ಯಾಮ ರಂಗಾ 2 ಧರಣಿ ಚೆನ್ನಪುರೀಶ ನಿಮ್ಮಯ ಚರಣ[ಧೂಳಿಯ]ಕುರುಹು ತೋರಿದ ಗುರುವು ತುಲಶೀರಾಮನೆ ನಿಜ ಪರಮತತ್ವವಿಲಾಸ ದೇವ 3
--------------
ಚನ್ನಪಟ್ಟಣದ ಅಹೋಬಲದಾಸರು
ಭಕ್ತಿಯನು ಪಾಲಿಸುತ ಭಕ್ತರನು ಪಾಲಿಸುವ ಮುಕ್ತಿದಾಯಕ ಹರಿಯ ಸೇವೆಯನು ಮಾಳ್ಪೇ ಪ ಪಂಚೇಂದ್ರಿಯವ ಗೆದ್ದು ಪಂಚಾಮೃತಗಳಿಂದ ಕಂಚಿಪುರ ವಾಸಿಯ ಕಾಯವನು ತೊಳೆದೂ 1 ಆರು ಅಂಗಳ ಜೈಸಿ ಆರು ಶಾಸ್ತ್ರಗಳಿಂದ ಧಾರೆ ಪುರವಾಸಿಗೇ ಗಂಧ ಲೇಪಿಸುತಾ 2 ಚಾರು ವೇದಗಳಿಂದ ನಿತ್ಯ ಪುಷ್ಪವೇರಿಸುತ 3 ಎಂಟ ಕೀಳರ ಗೆದ್ದು ತುಂಟರೈವರ ಕೊಂದು ಬಂಟನಾಗುತ ಹರಿಯ ಮಹಿಮೆಯನು ಭಜಿಸಿ 4 ಶಾಪ ತಾಪವ ಕಳೆದು ತ್ರಿಪುರಾರಿ ವದ್ಯನಿಗೆ ಧೂಪದೀಪಗಳಿಂದ ಆರತಿಯ ಬೆಳಗೀ 5 ಅನುಮಾನವನು ತ್ಯಜಿಸಿ ಶ್ರೀ ಚೆನ್ನಕೇಶವನಿಗೆ ತನುಮನ ಧನದಿಂದ ಆತ್ಮವರ್ಪಿಸುವೇ 6
--------------
ಕರ್ಕಿ ಕೇಶವದಾಸ
ಭಜರೇ ಹನುಮಂತಂ | ಮಾನಸಭಜರೇ ಹನುಮಂತಂ ಪ ಕೋಮಲ ಕಾಯಂ ನಾಮ ಸುದೇವಂ |ಭಜ ಸಖಸಿಂಹಂ ಭೂಸುರ ಶ್ರೇಷ್ಠಂ1 ಮೂರ್ಖ ನಿಶಾಚರ ವನ ಸಂಹಾರಂ |ಸೀತಾ ದುಃಖ ವಿನಾಶಕಾರಂ 2 ಪರಮಾನಂದ ಗುಣೋದಯ ಚರಿತಂಕರುಣಾರಸ ಸಂಪೂರ್ಣ ಸುಭರಿತಂ3 ರಣರಂಗ ಧೀರಂ ಗುಣಗಂಭೀರಂದಾನವ ದೈತ್ಯಾರಣ್ಯ ಕುಠಾರಂ 4 ಗುರು ಚೆನ್ನಕೇಶವ ಕದಳೀ ರಂಗಂಸ್ಥಿರ ಸದ್ಭಕ್ತಂ ಮುಖ್ಯಪ್ರಾಣಂ 5
--------------
ಕನಕದಾಸ
ಭಜಿಸಿರೊ ಬಿಡದೆ ವಿರಾಜಮಾನರಾಗಿ ನಿತ್ಯ ಕುಜನರೊಳಾಡದಲೆ ನಿಜ ಭಕುತಿಯಿಂದ ಭುಜಬಲವುಳ್ಳ ಪರಜರಟ್ಟುವ ದಿ ಗ್ವಿಜಯ ಸತ್ಯಪೂರ್ಣರ ಸುಜನರೊಂದಾಗಿಪ ಭರದಿಂದ ಬಂದು ನಿಂದು ನಿರೀಕ್ಷಿಸಿ ನಿರ್ಮಳ ಕರಯುಗಳ ಮುಗಿದು ಶಿರವಾನಿಲ್ಲದೆ ಧರಣಿಯಾ ಮ್ಯಾಲೊಂದು ತೀವರ ಸಾಷ್ಟಾಂಗ ನಮ ಸ್ಕರಿಸಿ ಕೊಂಡಾಡಿ ನಿಂದಿರಲಾನರರಿಗೆಲ್ಲ ಪರಿಹರವೊ ಬಂದರಘಳಿಗೆಯಲಿ ದುರುಳರಿಗಾಯ್ತು ಮರಿಯದೆ ಚೆನ್ನಾಗಿ1 ನೆರೆನಂಬಿ ನಿಮ್ಮಯ ಗೋತುರ ಸಹಿತಕ್ಕೆ ಜ್ಞಾನಾಂ ಕುರವಾಗುವುದು ಇದು ಉರುಕಾಲ ಸಿದ್ಧವೆನ್ನಿ ತರತಮ್ಯ ತತ್ವ ತಾತ್ಪರಿಯ ವಿಧ ತಿಳಿದು ಸುರರು ಮೆಚ್ಚುತಲಿರೆ ಮುರರಿಪು ಚತುರ್ದಶ ಧರಣಿಗೆ ಪರನೆಂದು ಬಿರಿದನು ಎತ್ತಿ ಡಂಗುರವ ಹೊಯಿಸಿ ಡಿಂಗರರಿಗೆ ಸಚ್ಛಾಸ್ತ್ರ ಕೊಡುವ ಯತಿಶಿರೋಮಣಿ ಕರ್ನಾ 2 ಪಾದಾಂಬುಜಾತ ಕೃಷ್ಣಾ ತನು ಭವಸರಿತ ನಿವಾಸಾ ದಿವಿಜೇಶನಾಯುಧ ಕವಚದಿಂದಲಿ ತನ್ನವರನ ಪೊರೆದೆತ್ತಿ ನವವಿಧ ಬಗೆ ತೋರಿ ತವಕದಿ ಕೋಲುಪುರ ಪವಿತುರ ಸ್ಥಳದಲ್ಲಿ ರವಿಯಂತೆ ಪೊಳವರು ಭವದೋಷ ಕಳೆವುತಾ ಕವಿಗಳ ಮನೋಹರ ವಿಜಯವಿಠ್ಠಲನ ಶ್ರವಣ ಮನನ ಧ್ಯಾನವನು ಬಲ್ಲವರಾ3
--------------
ವಿಜಯದಾಸ
ಭಾಗೀರಥೀ ಜನಕಗೆ ಭಾಗವತಪ್ರಿಯಗೆ ಆಗ ನೀರೆರೆದರವಿಂದಲೋಚನನಿಗೆ ಗೋಪಿ 1 ಸಾಗರಶಯನನ ತೂಗಿ ತೊಟ್ಟಿಲೊಳಿಟ್ಟು ನಾಗಮುರಿಗೆ ವಂಕಿ ನಂದಗೋಪನ ಸುತಗೆ ಬೆರಳಿಗುಂಗುರ ಕೋಟಿಭಾಸ್ಕರತೇಜಗೆ ಹೊಳೆವೊ ಬಿಂದಲಿ ಗುಂಡು ಭುಜಕೀರ್ತಿ ಭೂಷಣ 2 ಮಲಕು ಮುತ್ತಿನ ಹಾರ ಪದಕ ಪಚ್ಚೆಯ ಕಾಂತಿ ಕೌಸ್ತುಭ ರತ್ನ ಥಳಥಳಿಸುವ ಕರ್ಣದಲ್ಲಿ ಬಾವುಲಿ ಚೌಕುಳಿ ಚಳತುಂಬು ಮುತ್ತಿನಬಟ್ಟು ಮುಂದಲೆಗೆ 3 ಹೊಸ ವಜ್ರದರಳೆಲೆ ಹುಲಿಯುಗುರು ತಾಯಿತ ಕುಸುಮನಾಭಗೆ ಕಿರುಗೆಜ್ಜೆ ಕಾಲಲಂದಿಗೆ ಮಿಸುಣಿ ಮಾಣಿಕ್ಯದುಡಿದಾರದಡ್ಡಿಕೆ ಕಟ್ಟಿ ಗೋಪಿ 4 ಕಂಜನಯ್ಯನ ನೋಡೆ ಕಂಗಳಿನ್ನೆರಡಿಲ್ಲ ಜಿಹ್ವೆ ಒಂದೆ ಸಾಲದೆನಗೆಂದು ಅಂಗಿಟೊಪ್ಪಿಗೆ ಹಾಕ್ಯಾಲಿಂಗನೆ ಮಾಡುತ ಸತಿ ತಾನಂದಾನಂದಭರಿತಳಾಗಿ5 ತನ್ನ ಮಗನ ಮುದ್ದು ತಾ ನೋಡಿ ಸಾಲದೆ ಹೊನ್ನ ಪುತ್ಥಳಿಯಂತೆ ಹೊಳೆವೊ ಕೂಸನು ಎತ್ತಿ ನಿನ್ನ ಮಗನ ಆಟ ನೀ ನೋಡೆಂದೆನುತಲಿ ತನ್ನ ಪತಿಯ ತೊಡೆಯಲ್ಲಿಟ್ಟು ನಲಿಯುತ 6 ಹೊನ್ನ ಪುತ್ಥಳಿಗೊಂಬೆ ಹೊಸ ಚಿನ್ನದರಗಿಳಿಯೆ ಹೊನ್ನು ತಾ ಗುಬ್ಬಿತಾರಮ್ಮಯ್ಯ ಎನುತಲಿ ಬಣ್ಣ ಬಣ್ಣದ ಆಟ ವರ್ಣಿಸುತಲಿ ನೀಲ- ವರ್ಣನ ತನ್ನ ತೋಳಿಂದಪ್ಪಿ ನಲಿಯುತ 7 ಸೃಷ್ಟಿಮಾಡುವರಿಲ್ಲೀ ಶಿವ ಬ್ರಹ್ಮರೊಡೆಯನ ಸೃಷ್ಟಿಕರ್ತನಾದನನ್ಹುಟ್ಟಿಸಿದ ನಾಭಿಯಿಂದಿವನು ಹೊಟ್ಟೆಲೀರೇಳು ಜಗವಿಟ್ಟು ಸಲಹುವ ಎಷ್ಟು ಸರ್ವೋತ್ತಮ ಈಗಿಲ್ಲ್ಯವತರಿಸಿದ 8 ಚತುರವದನಗೆ ವೇದ ತಂದಿಟ್ಟು ಸಾಗರ ಮಥಿಸಿ ಮಂದರವನು ಪೊತ್ತು ಅಮೃತವ ಹೀರಿ ಪೃಥಿವಿಯನು ತಂದ ಕೋರೆಯಲಂದ್ಹಿರಣ್ಯಾಕ್ಷನ ಹತವ ಮಾಡಿದ ತಾ ಭೂಪತಿ ಎಂದೆನಿಸಿದಿವನು 9 ಪರಮಭಕ್ತನು ಕರೆಯೆ ಬಿರುದು ಕಂಬದಿ ಬಂದು ಕರುಳ ಬಗೆದ ಪುಟ್ಟ ತÀರÀಳ ರೂಪವ ನೋಡಿ ಮರುಳಾಗಿ ಬಲಿ ಮೂರು ಚರಣ ದಾನ ನೀಡೆ ಬೆಳೆದು ಬ್ರಹ್ಮಾಂಡಕ್ಕೆ ಭುವನ ವ್ಯಾಪಿಸಿಕೊಂಡ10 ಕ್ಷತ್ರ ಸಂಹಾರಿ ತಾ ಎತ್ತಿ ಧನುವ ಸೀತಾ ಸೌ- ಮಿತ್ರಿಸಹಿತ್ವನದಲ್ಲಿ ಇರುತಿರಲಾಗ ಪತ್ನಿ ಒಯ್ಯಲು ಅಸುರನ್ಹತ್ತು ಶಿರಗಳ ತರಿದ ದುಷ್ಟ- ರಂತಕನೆ ನಿರ್ದುಷ್ಟ ಸಜ್ಜನಪ್ರಿಯ 11 ದೇವಾಧಿದೇವ ದೇವಕ್ಕಿ ಜಠರದಿ ಬಂದು ಮಾಯಾ- ಪೂತಣಿಯನ್ನು ಕೊಂದು ವಿಷಮೊಲೆನುಂಡು ಕಾಲಲಿ ಶಕಟನ ಕೆಡವಿದ ಯದುವೀರ ತಾ- ಗೋಪಾಲಕ ಗೋಪೀಸುತನೆಂದೆನಿಸಿಕೊಂಡ12 ವಿಪರೀತ ಮಾಯದಿ ತ್ರಿಪುರದ ಜನರಿಗೆ ದುರ್ಮತವ ಬೋಧಿಸಿ ಅಸುರಾರಿ ಮೋಹಕ ತೋರಿ ಚಪಲ ಚೆನ್ನಿಗ ಖಡ್ಗಪಿಡಿದು ತೇಜಿಯ- ನೇರಿ ಕಪಟನಾಟಕ ಕಲಿಮರ್ದನ ಕರಿಗ್ವರವಿತ್ತ13 ಜನ್ಮಕರ್ಮವು ಜರಾಮರಣಗಳಿವಗಿಲ್ಲ ಜಗದೋ- ಪರಬ್ರಹ್ಮನ ಪಾದಾಂಘ್ರಿಸ್ಮರಣಿ (ಣೆಯಿ?)ರೆ ಪರಮಾ- ದರದಿ ಕರೆದೊಯ್ವ ತನ್ನ (ಬಳಿಯ)ಲ್ಲೆ 14 ಏಸುಜನ್ಮದ ಫಲವಿನ್ನೆಷ್ಟು ಜನ್ಮದ ಸುಕೃತ ಈ ಸಮಯದಿ ಫಲಿಸಿತೀತ ಇಲ್ಲುದಿಸಿರಲು ದೋಷವರ್ಜಿತನೆ ಸಂತೋಷಭರಿತನಿವ ಭೀ- ಮೇಶಕೃಷ್ಣ ಯಶೋದೆ ಕೂಸೆಂದೆನಿಸಿಕೊಂಡ15
--------------
ಹರಪನಹಳ್ಳಿಭೀಮವ್ವ
ಭಾರತೀ ಪತಿನುತ ವಿಠಲ ನೀನಿವಳ ಉದ್ಧಾರ ಮಾಡುವುದು ಹರಿಯೇ ಪ ತಾರಕನು ನಿನಗನ್ಯ ಉಂಟೇ ಈರೇಳು ಲೋಕದಲಿ ಧೊರೆಯೇ ಅ.ಪ. ಜನ್ಮಜನ್ಮದಲಿ ಬಲುನೊಂದು ಸತ್ಪುಣ್ಯಗಳನೇ ಮಾಡಿಜನ್ಮಪೊಂದುತಲಿ ಸತ್ಕುಲದಿ ಸನ್ಮತದವನ ಕೈಯ ಪಿಡಿದು |ಸನ್ಮಧ್ವಮತ ದೀಕ್ಷೆಗಳ - ಒಮ್ಮನದಿ ತಾಳುತ್ತನಿಮ್ಮಡಿಯ ನಾಶ್ರಯಿಸಿ ಬಂದಿಹಳ ಸಲಹುವುದು 1 ತರತಮ ಜ್ಞಾನದಲಿ - ಉರುತರೋತ್ಸುಕತೆಯನುನಿರತ ಹರಿಗುರುಗಳಲಿ ಉರುತರದ ಭಕ್ತಿಯನೂ |ಹಿರಿಯರನು ವಿನಯದಿಂ ಪರಿಚರಿಪ ಮತಿಯನ್ನುಕರುಣಿಸೀ ಸಲಹಯ್ಯ ಮರುತಾಂತರಾತ್ಮಾ 2 ಪಂಚಭೇಧದ ಜ್ಞಾನ ಸಂಚಿಂತನೆಯನೇ ಕೊಟ್ಟುಮಿಂಚಿನಂದದಿ ತೋರೊ - ಹೃತ್ಪಂಕಜನಲೀಅಂಚೆವಹಪಿತ ನಿನ್ನ ಪದಕಮಲ ಭಜಿಪಳಿಗೆವಾಂಛಿತಾರ್ಥದನಾಗಿ - ಸಲಹ ಬೇಕಿವಳಾ 3 ಪತಿ ನೀನೆ ಎಂಬಂಥಮತಿಯಿತ್ತು ಭವಗಳನ ಉತ್ತರಿಸು ಹರಿಯೇ 4 ನಿನ್ನ ಪದ ಕಮಲದಲಿ ಜ್ಞಾನಭಕುತಿಗಳಿತ್ತುನನ್ನೆ ಯಿಂದಿವಳ ಚೆನ್ನಾಗಿ ಸಲಹೊ ಹರಿಯೇ |ಸನ್ನುತಿಸಿ ಪ್ರಾರ್ಥಿಸುವೆ - ಮನ್ನಿಸೆನ ಬಿನ್ನಪವಘನ್ನ ಮಹಿಮನೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಭಾರತೀಶ ಪ್ರಿಯ | ವಿಠಲ ಪೊರೆ ಇವಳ ಪ ನೆರೆನಂಬಿ ಬಂದಿಹಳ | ಪೊರೆಯೊ ಶ್ರೀಹರಿಯೇ ಅ.ಪ. ದಾಸ ದೀಕ್ಷೆಯ ಜ್ಞಾನ | ಲೇಸು ಪಡೆದವಳಲ್ಲಆಶೆಪಳು ತವದಾಸ್ಯ | ಮೇಶ ಮಧ್ವೇಶಆಶೆ ಮಾತ್ರಕೆ ಒಲಿದು | ಪೋಷಿಸಲಿ ಬೇಕಯ್ಯಹೇ ಸದಾಶಿವ ವಂದ್ಯ | ವಾಸ ವಾನುಜನೆ 1 ಪತಿಸುತರು ಬಾಂಧವರ | ಹಿತದಲ್ಲಿ ಮತಿಯಿತ್ತುಅತುಳ ವಿಭವದಿ ಮೆರೆಸಿ | ಕೀರ್ತಿಕೊಡಿಸೋಕೃತಿ ಪತಿಯೆ ತವಚರಣ | ಸತತ ನೆನೆಯುವ ಭಾಗ್ಯಪಥದಲ್ಲಿ ಇರಿಸಿ ಕೃತ | ಕೃತ್ಯಳೆಂದೆನಿಸೋ 2 ಉದಧಿ ಶಯನಾ |ಹದುಳದಲಿ ಮೂರೆರಡು | ಭೇದ ತರತಮಜ್ಞಾನವದಗಿಸುತ ಪೊರೆ ಇವಳ | ಮಧು ಮಥನ ಹರಿಯೇ 3 ನಿನ್ನ ನಾಮವ ಬಿಟ್ಟು | ಅನ್ಯ ಸಾಧನ ಕಾಣೆಚೆನ್ನ ಈ ಕಲಿಯುಗದಿ | ಅನ್ನಂತ ಮಹಿಮಾಘನ್ನ ದಯವನಧಿ ಆ| ಪನ್ನ ಜನರಕ್ಷಕನೆನಿನ್ನೊಲಿಮೆ ಉಳ್ಳನಕ | ಇನ್ನಾವ ಭಯವೋ 4 ಭಾವಜ್ಞ ನೀನಾಗಿ | ಪಾವಕಳೆ ಸಲಹೋ5
--------------
ಗುರುಗೋವಿಂದವಿಠಲರು
ಭಾರತೀಶ ಮದ್ಭಾರ ನಿನ್ನದಯ್ಯ | ಕರುಣದಿ ಪಿಡಿ ಕೈಯ್ಯಾ || ಪೂರೈಸೆನ್ನ ಮನೋಭಿಲಾಷೆ ಗುರುವೆ | ಭಜಕರ ಸುರತರುವೆದ್ಭ ಪ ಹರಿಭಕ್ತಾಗ್ರೇಸರನೆ ಹನುಮಂತಾ | ಹರನುತ ಬಲವಂತಾ | ತರಣಿಕುಲಜ ಶ್ರೀರಾಮನ ಕೈಯಿಂದ | ಬಲುಸಂಭ್ರಮದಿಂದಾ | ರಣದೊಳಗೋಲ್ಯಾಡಿ | ದುರುಳ ರಕ್ಕಸರ ದುಷ್ಟ ದನುಜರ | ತರಿದೆ ಲೋಕೈಕ ಸಮರ್ಥಾ 1 ಕುಂತಿ ಜಠರಾಂಭೋನಿಧಿ ಚಂದ್ರಮನೆ ರಾಜಾಗ್ರೇಸರನೆ | ಕಂತು ಜನತನಿಚ್ಛಾನುಸಾರವಾಗಿ | ರಣದೊಳಗೆ ಚೆನ್ನಾಗಿ | ನಿಂತು ದುಷ್ಟ ದುರ್ಯೋಧನಾದಿಗಳನು ಸಂಹರಿಸಿದಿ ನೀನು | ಬಲ್ಲರಯ್ಯ ಕರುಣದಿ ಪಿಡಿಯೊ ಕೈಯಾ 2 ನಡುಮನೆಯೆಂಬೊ ವಿಪ್ರನ ಮನೆಯಲ್ಲಿ | ಅವತರಿಸಿ ಚೆನ್ನಾಗಿ | ಮೃಡ ಸರ್ವೋತ್ತಮ ಹರಿಯೆ ತಾನೆಂದು | ಮಿಥ್ಯಾಜಗವೆಂದು | ನುಡಿವ ಜನರ ಮತಗಳನೆ ನಿರಾಕರಿಸಿ ಶಾಸ್ತ್ರವ ರಚಿಸಿ |ಒಡೆಯ ತಂದೆ ಶ್ರೀ ವಿಜಯವಿಠಲನ್ನ ಪೂಜಾಸಕ್ತನೇ 3
--------------
ವಿಜಯದಾಸ
ಭೀಮ ಶಾಮ ಕಾಮಿನಿಯಾದನು ಪ ಭೀಮ ಶಾಮ ಕಾಮಿನಿಯಾಗಲು ಪತಿ ಪುಲೋಮ ಜಿತುವಿನ ಕಾಮಿನಿ ಸಕಲ ವಾಮ ಲೋಚನೆಯ- ರಾಮೌಳಿ ಕೂಗುತಲೊಮ್ಮನದಿ ಪಾಡೆಅ.ಪ ದಾಯವಾಡಿ ಸೋತು ರಾಯ ಪಾಂಡವರು ನ್ಯಾಯದಿಂದ ಸ್ವಾಮಿಯ ಸೇವೆಯೆಂದು ಕಾಯದೊಳಗೆ ಅಸೂಯೆಪಡದಲೆ ಮಾಯದಲ್ಲಿ ವನವಾಯಿತೆಂದು ರಾಯ ಮತ್ಸ್ಯನಾಲಯದೊಳು ತಮ್ಮ ಕಾಜು ವಡಗಿಸಿ ಅಯೋನಿಜೆ ದ್ರೌಪ- ದೀಯ ವಡಗೂಡಿ ಆಯಾಸವಿಲ್ಲದೆ ಅಯ್ವರು ಬಿಡದೆ ತಾವಿರಲು 1 ಬಾಚಿ ಹಿಕ್ಕುವ ಪರಿಚಾರತನದಲಾ ಪಾಂಚಾಲಿಗೆ ಮತ್ಸ್ಯನಾ ಚದುರೆಯಲ್ಲಿ ಆಚರಣೆಯಿಂದ ಯಾಚಕರಂದದಿ ವಾಚವಾಡಿ ಕಾಲೋಚಿತಕೆ ನೀಚರಲ್ಲಿಗೆ ಕೀಚಕನಲ್ಲಿಗೆ ಸೂಚಿಸಲು ಆಲೋಚನೆಯಿಂದಲಿ ನಾಚಿಕೆ ತೋರುತಲಾ ಚೆನ್ನೆ ಪೋಗಲು ಕರ ಚಾಚಿದನು 2 ಎಲೆಗೆ ಹೆಣ್ಣೆ ನಿನ್ನೊಲುಮೆಗೆ ಕಾಮನು ಕಳವಳಿಸಿದ ನಾ ಗೆಲಲಾರೆನಿಂದು ವಲಿಸಿಕೊ ಎನ್ನ ಲಲನೆಯ ಕರುಣಾ- ಜಲಧಿಯೆ ನಾರೀ ಕುಲಮಣಿಯೆ ಬಳಲಿಸದಲೆ ನೀ ಸಲಹಿದಡೇ ವೆ- ಗ್ಗಳೆಯಳ ಮಾಡಿಪೆನಿಳೆಯೊಳೆನ್ನೆ-ಆ- ಖಳನಾ ಮಾತಿಗೆ ತಲೆದೂಗುತಲಿ ಅ- ನಿಳಜನೆನ್ನ ನೀ ಸಲಹೆಂದ 3 ಮೌನಿ ದ್ರೌಪದಿ ಮೌನದಲ್ಲಿ ಹೀನನಾಡಿದಾ ಊನ ಪೂರ್ಣಗಳು ಮನೋಭಾವವ ಧೇನಿಸಿ ನೋಡುತ್ತ ಹೀನಕೆ ತಿಳಿದಳು ಮನದಲಿ ದೀನವತ್ಸಲ ಕರುಣವು ಮೀರಿತು ಕಾನನದೊಳ್ಕಣ್ಣು ಕಾಣದಂತಾಯಿತು ಏನು ಮಾಡಲೆಂದು ಜಾಣೆಯು ಚಿಂತಿಸಿ ಅನಿಲಗೆ ಬಂದು ಮ-ಣಿದಳು4 ಚೆಲ್ವೆ ಕಂಗಳೇ ನಿಲ್ಲೆ ನೀ ಘಳಿಗೆ ಸಲ್ಲದೆ ಆತನ ಹಲ್ಲನು ಮುರಿದು ಹಲ್ಲಣವ ಹಾಕಿ ಕೊಲ್ಲುವೆ ನಾನೀಗ ತಲ್ಲಣಿಸದಿರೇ ಗೆಲ್ಲುವೆನೆ ಪುಲ್ಲನಾಭ ಸಿರಿನಲ್ಲನ ದಯವಿ- ದ್ದಲ್ಲಿಗೆ ಬಂದಿತು ಎಲ್ಲ ಕಾರ್ಯಗಳ ಸಲ್ಲಿಸಿ ಕೊಡುವನು ಬಲ್ಲಿದ ನಮಗೆ ಮಲ್ಲಿಗೆ ಮುಡಿಯಾ ವಲ್ಲಭಳೆ 5 ಎಂದ ಮಾತಿಗಾನಂದ ಮಯಳಾಗಿ ಬಂದಳಾ ಖಳನ ಮಂದಿರದೊಳು ನೀ- ನೆಂದ ಮಾತಿಗೆ ನಾನೊಂದನು ಮೀರೆನು ಕಪಟ ಸೈರಂಧಿರಿಯೂ ಕುಂದಧಾಭರಣವ ತಂದು ಕೊಡಲು ಆ- ನಂದದಿಂ ಪತಿಯ ಮುಂದೆ ತಂದಿಟ್ಟಳು ಮಂದರೋದ್ಧರನ ಚಂದದಿ ಪೊಗಳುತ ಇಂದು ಸುದಿನವೆಂದ ಭೀಮ6 ಉಟ್ಟ ಪೀತಾಂಬರ ತೊಟ್ಟ ಕುಪ್ಪಸವು ಇಟ್ಟತಿ ಸಾದಿನ ಬಟ್ಟು ಫಣಿಯಲ್ಲಿ ಕಟ್ಟಿದ ಮುತ್ತಿನ ಪಟ್ಟಿಸ ಕಿವಿಯಲ್ಲಿ ಇಟ್ಟೋಲೆ ತೂಗಲು ಬಟ್ಟ ಕುಚ ಘಟ್ಟಿ ಕಂಕಣ ರ್ಯಾಗಟೆ ಚೌರಿ ಅ- ದಿಟ್ಟಂಥ ಈರೈದು ಬೆಟ್ಟುಗಳುಂಗರ ಮುಟ್ಟೆ ಮಾನೆರಿ ದಟ್ಟಡಿವೊಪ್ಪತಿ ಕಟ್ಟುಗ್ರದ ಜಗ ಜಟ್ಟಿಗನು 7 ತೋರ ಮೌಕ್ತಿಕದ ಹಾರ ಸರಿಗೆ ಕೇ ಯೂರ ಪದಕ ಭಂಗಾರ ಕಾಳಿಸರ ವೀರ ವಿದ್ರುಮದ ಭಾಪುರಿ ಉ- ತ್ತಾರಿಗೆ ವರ ಭುಜಕೀರುತಿಯು ಮೂರೇಖೆಯುಳ್ಳ ಉದಾರ ನಾಭಿವರ ನಾರಿ ನಡು ಉಡುಧಾರ ಕಿಂಕಿಣಿ ಕ- ಸ್ತೂರಿ ಬೆರಸಿದ ಗೀರುಗಂಧವು ಗಂ- ಬೂರ ಲೇಪ ಶೃಂಗಾರದಲಿ8 ವಂಕಿ ದೋರ್ಯವು ಕಂಕಣ ಒಮ್ಮೆಯೀ- ಚಾಪ ಭ್ರೂ ಅಲಂಕಾರ ಭಾವ ಪಂಕಜಮಾಲೆ ಕಳಂಕವಿಲ್ಲದಲೆ ಸಂಕಟ ಕಳೆವ ಪಂಕಜಾಂಘ್ರಿ ಝಂಕಾರಕೆ ಲೋಕ ಶಂಕಿಸೆ ನಾನಾ- ಅಂಕುರ ವೀರ- ಕಂಕಣ ಕಟ್ಟಿದ ಬಿಂಕದಿಂದಲಾ- ತಂಕವಿಲ್ಲದೆಲೆ ಕಂಕಾನುಜ 9 ಕಂಬು ಕೊರಳು ದಾಳಿಂಬ ಬೀಜ ದಂತ ದುಂಬಿಗುರುಳು ನೀಲಾಂಬುದ ಮಿಂಚೆಂ- ದೆಂಬ ತೆರದಲಾ ಅಂಬಕದ ನೋಟ ತುಂಬಿರೆ ಪವಳ ಬಿಂಬಾಧರ ಜಂಬೀರ ವರ್ಣದ ಬೊಂಬೆಯಂತೆಸೆವ ತಾಂಬೂಲ ಗಿಳಿಯೆಂಬ ಗಂಭೀರ ಪುರುಷನು ಹಂಬಲಿಸಿದ ತಾ ಸಂಭ್ರಮದಿ 10 ಸಂಧ್ಯಾದೇವಿಯೊ ಇಂದ್ರನ ರಾಣಿಯೊ ಚಂದ್ರನ ಸತಿಯೋ ಕಂದರ್ಪನಾಕರ- ದಿಂದ ಬಂದ ಅರವಿಂದದ ಮೊಗ್ಗೆಯೊ ಅಂದ ವರ್ಣಿಪರಾರಿಂದಿನಲಿ ಇಂದು ರಾತ್ರಿ ಇದೆ ಎಂದಮರಮುನಿ ಸಂದೋಹ ಕೊಂಡಾಡೆ ಇಂದುಮುಖಿಯೊಡ ನಂದು ತಾ ನಾಟ್ಯದ ಮಂದಿರಕೆ ನಗೆ- ಯಿಂದ ಬಂದ ಕುಂತಿನಂದನನು11 ಭಂಡ ಉಡಿಯಲಿ ಕೆಂಡವೊ ಪರರ ಹೆಂಡರ ಸಂಗ ಭೂಮಂಡಲದೊಳೆನ್ನ ಗಂಡರು ಬಲು ಉದ್ದಂಡರು ನಿನ್ನನು ಕಂಡರೆ ಬಿಡರೋ ಹಂಡಿಪರೋ ಲಂಡ ಬಾಯೆಂದು ಮುಕೊಂಡು ಕೈದುಡುಕಿ ಅಂಡಿಗೆಳೆದು ಅಖಂಡಲನ ಭಾಗ್ಯ ಮಂಡೆ ಮೊಗ ಗಲ್ಲ ಡುಂಡು ಕುಚ ಮುಟ್ಟಿ ಬೆಂಡಾದನು 12 ಸಾರಿಯಲ್ಲ ಮಕಮಾರಿಯಿದೆನುತ ಶ- ರೀರ ವತಿ ಕಠೋರವ ಕಂಡು ಜ- ಝಾರಿತನಾಗಿ ನೀನಾರು ಪೇಳೆಂದು ವಿ- ಕಾರದ್ಯಬ್ಬರಿಸಿ ಕೂರ್ರನಾಗಿ ತೋರು ಕೈಯೆಂದು ಸಮೀರನು ಎದ್ದು ವಿ ಚಾರಿಸಿಕೋ ಎನ್ನ ನಾರಿತನವೆಂದು ವೀರ ಮುಷ್ಟಿಯಿಂದ್ಹಾರಿ ಹೊಡೆಯಲು ಕ್ರೂರನು ರಕ್ತವ ಕಾರಿದನು 13 ಹಾರಿ ಹೊಯ್ಯತಲೆ ಮೋರೆಲಿದ್ದ ಕಳೆ- ಸೂರೆಯಾಯಿತು ಪರನಾರೇರ ಮೋಹಿಸಿ ಪಾರಗಂಡವರುಂಟೆ ಶರೀರದೊಳಿದ್ದ ಮಾರುತೇಶ ಹೊರಸಾರಿ ಬರೆ ಧೀರ ಭೀಮರಾಯ ಭೋರಿಡುತ ಹಾರಿ ಕೋರ ಮೀಸೆಯನೇರಿಸಿ ಹುರಿಮಾಡಿ ನಾರಿಮಣಿ ಯಿತ್ತ ಬಾರೆಂದು ಕರೆದು ಸಾರಿದನು ನಿಜಾಗಾರವನು 14 ಸರಸವು ನಿನಗೆ ವಿರಸವು ಆಯಿತು ಕರೆಸೆಲೊ ಈ ಪುರದರಸಾ ಕಳ್ಳನ ನರಸಿಂಹನ ನಿಜ ಅರಸಿಗೆ ಮನವನು ಮಂದರ ಅರಸನೆ ಅರಸಿ ನೋಡುತಿರೆ ವರೆಸಿದನಾ ಜೀವ ದೊರಸೆಯ ಖೂಳನ ಬೆರೆಸಿ ಸವಾಂಗ ಸಿರಿ ವಿಜಯವಿಠ್ಠಲ ಅರಸಿನ ಲೀಲೆಯ ಸ್ಮರಿಸುತಲಿ 15
--------------
ವಿಜಯದಾಸ
ಭೂರಿ ಕರುಣಾಕರನೋ ಸಾರುವ ತೆರೆದೊಳು ತೋರಿಹ ಭಕ್ತರ ಪ. ಅಗಣಿತ ಮಹಿಮನ ಪೊಗಳುವೆ ನಾನೆಂತು ಬಗೆ ಬಗೆ ರೂಪದಿ ಸಿಗದೆಸಿಗುವ ಹಾಂಗೆ ಪೊಗಳಿಸಿಕೊಂಡು ತಾ ಝಗಝಗಿಸುತ ಬಹ ನಗೆಮೊಗ ಚೆನ್ನಿಗ ನಿಗಮಗೋಚರ ಕೃಷ್ಣಾ 1 ಭಕ್ತ ಪ್ರಹ್ಲಾದಗೆ ಅತ್ಯಧಿಕ ಹಿಂಸೆ ಯಿತ್ತ ಪಿತನ ಕೊಂದು ಇತ್ತ ಮುಕುತಿ ಅವ ನತ್ಯಪರಾಧವನೆತ್ಯಾಡಿದನೇ ಚಿತ್ತಜನೈಯ್ಯನು ಭಕ್ತವತ್ಸಲ ದೇವ 2 ಅಣುರೇಣು ತೃಣಕಾಷ್ಠ ಪರಿಪೂರ್ಣ ನೀನೆಂದು ಕ್ಷಣ ಬಿಡದಲೆ ಗಜರಾಜನು ಸ್ತುತಿಸೆ ಅನುವಿಲಿ ಚಕ್ರದಿ ನಕ್ರನ ಹರಿಸಲು ದಣಿದ ಹರಿಗೆ ಗಜರಾಜನೇನಿತ್ತನೋ 3 ಭಕ್ತರ ಮನದಘ ನಿತ್ಯದಿ ಕಳೆದನೋ ಅಶಕ್ತ ಅಜಮಿಳನೆಮ ಭೃತ್ಯರೆಳೆಯಲು ಇತ್ತು ನಾರಗನುಡಿ ಮತ್ತೆ ಯಮಭಟರ ಇತ್ತ ಮುಕುತಿ ದೇವ ಅತ್ಯಧಿಕ 4 ಮೂಗುತಿ ನೆವದೊಳು ಸಾಗಿಸಿ ಭಾಗ್ಯವ ಜಾಗರ ಮೂರುತೆ ಯೋಗಿಗಳರಸನು ಬಾಗಿಸಿ ತನ್ನವರಾಗಿಸಿ ದಾಸರ ಸರ್ವರ ಅನುರಾಗದಿ ಸಲಹುವ 5
--------------
ಸರಸ್ವತಿ ಬಾಯಿ
ಮಗನೆಂದಾಡಿಸುವಳು ಮೊಗ ನೋಡಿ ನಗುವಳು ಪ ಜಗದುದ್ಧಾರನ ಮೊಗ ಮೊಗದೊಳಿರಿಸಿಕೊಂಡು ಅ ಕಾಲಲಂದುಗೆ ಗೆಜ್ಜೆ ತೋಳ ಮಣಿಯ ದಂಡೆಫಾಲದ ಅರಳೆಲೆಯು ಕುಣಿಯೆನೀಲದುಡುಗೆಯುಟ್ಟ ಬಾಲನೆ ಬಾರೆಂದುಪಾಲುಣಿಸುವ ಪುಣ್ಯವೆಂತು ಪಡೆದಳಯ್ಯ 1 ಬಣ್ಣ ಸರವಲ್ಲಾಡೆ ವರ ರನ್ನ ನೇವಳದಹೊನ್ನ ಗಂಟೆಯು ಘಣ ಘಣರೆನಲುಪನ್ನಗಶಯನನೆ ಕುಣಿಯೊಮ್ಮೆ ಕುಣಿಯೆಂದುಕುಣಿಸಿ ನಗುವ ಪುಣ್ಯವೆಂತು ಪಡೆದಳಯ್ಯ 2 ಪೊಡವಿಯ ಈರಡಿ ಮಾಡಿದ ದೇವನಕುಡಿಬೆರಳನೆ ಕರದಲಿ ಪಿಡಿದುಅಡಿಯಿಡು ಮಗನೆ ಮೆಲ್ಲಡಿಯಿಡು ಎನುತಲಿನಡೆಗಲಿಸುವ ಪುಣ್ಯವೆಂತು ಪಡೆದಳಯ್ಯ 3 ಕುಕ್ಷಿಯೊಳು ಈರೇಳು ಜಗವನ್ನು ಸಲಹುವನರಕ್ಷಿಪರು ಉಂಟೆ ತ್ರೈಜಗದೊಳಗೆಪಕ್ಷಿವಾಹನ ನೀನು ಅಂಜಬೇಡ ಎನುತಲಿರಕ್ಷೆ ಇಡುವ ಪುಣ್ಯವನೆಂತು ಪಡೆದಳಯ್ಯ 4 ಶಂಖ ಚಕ್ರ ಗದಾ ಪದುಮಧಾರಕನಪಂಕಜ ಮಿತ್ರ ಶತಕೋಟಿ ತೇಜನಸಂಖ್ಯೆಯಿಲ್ಲದಾಭರಣಗಳ ತೊಡಿಸಿಯಲಂಕರಿಸುವ ಪುಣ್ಯವೆಂತು ಪಡೆದಳಯ್ಯ 5 ಸಾಗರಶಯನನ ಭೋಗೀಶನ ಮೇಲೆಯೋಗ ನಿದ್ರೆಯೊಳಿಪ್ಪ ದೇವನನುಆಗಮ ನಿಗಮಗಳರಸಿ ಕಾಣದ ವಸ್ತುವನುತೂಗಿ ಪಾಡುವ ಪುಣ್ಯವೆಂತು ಪಡೆದಳಯ್ಯ 6 ವಾಹನ ದೇವರ ದೇವನಹಚೆನ್ನಾದಿಕೇಶವನನೆಂತು ಪಡೆದಳಯ್ಯ7
--------------
ಕನಕದಾಸ
ಮಂಗಳಂ ಶ್ರೀರಾಮಚಂದ್ರಗೆ ಜಯ ಮಂಗಳಂ ಸೀತಾಸಮೇತನಿಗೆ ಪ. ಮಚ್ಛಾವತಾರಗೆ ವೇದವ ತಂದಗೆ ಕೂರ್ಮರೂಪದಿ ಜಲದೊಳು ಪೊಕ್ಕವಗೆ ಹಿರಣ್ಯಾಕ್ಷಸುರನ ಗೆಲಿಯೆ ಬಂದು ಮೆಚ್ಚೆ ವರಹರೂಪ ತೋರಿದಗೆ 1 ಛತ್ರಿಯ ಪಿಡಿದು ಭರತ ನಿಂದಿರಲಾಗ ಶತ್ರುಘ್ನ ಚಾಮರವನು ಬೀಸಲು ಮತ್ತೆ ಲಕ್ಷ್ಮಣ ಮಡುದೆಲೆ ಕೊಡುತಿರಲಾಗಿ ವಿಸ್ತಾರ ವೈಭೋಗ ರಘುರಾಮಗೆ 2 ತಮ್ಮ ಲಕ್ಷ್ಮಣ ಸಹ ಒಲ್ಮೆಯಿಂದಲಿ ಬಂದ ನಮ್ಮ ಶ್ರೀರಘುರಾಮಚಂದ್ರನಿಗೆ ಸನ್ಮಾನದಲಿ ರಾಮ ಸಾಗರಶಯನಾಗೆ ಚೆನ್ನ ಚುಂಚನಕಟ್ಟೆಸ್ಥಿರವಾಸಿಗೆ 3 ಎಡದ ಕರದಿ ಬಿಲ್ಲು ಬಲದ ಕರದಿ ಬಾಣ ಕರದ ಕಮಲದೊಳಗಿಪ್ಪವನಿಗೆ ಸಿರಿ ಸೀತೆಯ ಧರಿಸಿದ ಚದುರ ಶ್ರೀ ಕಲ್ಯಾಣ ಚಂದ್ರನಿಗೆ 4 ಹರುಷದಿ ದೇವತೆಗಳಿಗೊರವಿತ್ತಗೆ ದುರುಳ ರಕ್ಕಸರ ಸಂಹರಿಸಿದಗೆ ಪರಮ ಭಕ್ತನಿಗೆ ಸ್ಥಿರರಾಜ್ಯವನೆ ಕೊಟ್ಟ ಹಯವದನಮೂರ್ತಿ ಎಂದೆನಿಸಿದಗೆ 5
--------------
ವಾದಿರಾಜ
ಮಂಗಳದೇವಿಯರರಸಗೆ ತುಂಗಮಹಿಮ ತ್ರಿವಿಕ್ರಮಗೆ ಅಂಗನೆಯರು ಸಿರಿರಂಗಗಾರತಿಯನೆತ್ತಿದರೆ ಪ. ಶ್ರೀರುಕುಮಿಣಿ ಮೊದಲಾದ ನಾರಿಯರೆಲ್ಲರು ನೆರೆದು ವಾರಿಜದಳಲೋಚನಗಾರತಿಯನೆತ್ತಿದರೆ 1 ಮುತ್ತಿನ ಹರಿವಾಣದಲಿ ರತ್ನದ ಸಾಲ್ಗಳ ನೆರಪಿ ಚಿತ್ತಜನಯ್ಯಗೆ ಮುತ್ತ್ತಿನಾರತಿಯನೆತ್ತಿದÀರೆ 2 ಚಿನ್ನದ ಹರಿವಾಣದಲಿ ರನ್ನದ ಸಾಲ್ಗಳ ನೆರಪಿ ಚೆನ್ನಕೇಶವನಿಗೆ ಚಿನ್ನದಾರತಿಯನೆತ್ತಿದರೆ 3 ಹೃದಯದ ತಮವ ಗೆಲುವಗೆ ಸದುಗತಿಪಥವ ತೋರುವಗೆ ಸುದತಿಯರೆಲ್ಲರು ಮಂಗಳಾರತಿಯನೆತ್ತಿದರೆ 4 ಚಂದದ ಭೂಷಣಮಣಿಯೊಳು ನಂದಾದೀಪಗಳೆಲ್ಲ ಹೊಳೆಯೆ ಒಂದನಂತವ ಮಾಡಿಕೊಂಬಗಾರತಿಯನೆತ್ತಿದರೆ 5 ಕಂದರ್ಪಕೋಟಿಲಾವಣ್ಯಗೆ ಸೌಂದರ್ಯವಾದ ಮೂರುತಿಗೆ ಇಂದುಮುಖಿಯರೆಲ್ಲ ಮಂಗಳಾರತಿಯನೆತ್ತಿದರೆ 6 ಅಗಣಿತ ಗುಣಸಾಗರಗೆ ನಿಗಮವಂದಿತ ವೈಭವಗೆ ಅಘಕುಲದೂರಗೆ ಮಂಗಳಾರತಿಯೆನೆತ್ತಿದರೆ 7 ನಳಿತೋಳ್ಗಳ ನಸುನಗೆಯ ಹೊಳೆವ ಕಡಗ ಕಂಕಣದ ಸುಲಲಿತ ಕಾಂತಿಗೆ ಮಂಗಳಾರತಿಯೆತ್ತಿದರೆ 8 ಶೇಷವಂದಿತಪದಗೆ ಸುರೇಖಾದಿಗಳೊಡೆಯನಿಗೆ ಭಾಸುರಸುರಮಯಪೀಠಗಾರತಿಯನೆತ್ತಿದರೆ9 ಶ್ರೀಸತಿಯಪ್ಪಿಕೊಂಡಿಪ್ಪಗೆ ವಾಸುದೇವಾದಿವಿಗ್ರಹಗೆ ಕೇಶವ ನಾರಾಯಣಗಾರತಿಯನೆತ್ತಿದರೆ 10 ನಿಖಿಳ ಖಳರ ಸೀಳ್ದನಿಗೆ ಅಕುತೋಭಯನಿಗೆ ಮಂಗಳಾರತಿಯನೆತ್ತಿದರೆ 11 ಕೂರ್ಮ ವರಾಹನಿಗೆ ಕುತ್ಸಿತರೊಲ್ಲದ ಹರಿಗೆ ಚಿತ್ಸುಖರೂಪಗೆ ಮಂಗಳಾರತಿಯನೆತ್ತಿದರೆ12 ಶಂಕೆಯಿಲ್ಲದ ಹಯವದನಗೆ ಕಿಂಕರವರದ ಶ್ರೀಹರಿಗೆ ಪಂಕಜಮುಖಿಯರು ಮಂಗಳಾರತಿಯೆತ್ತಿದರೆ 13
--------------
ವಾದಿರಾಜ
ಮಗುವ ತಡೆಯಬಾರದೆ ಮಾನಿನಿಯರುಸುಗುಣ ಚೆನ್ನಿಗನೆಂಬ ಸೊಬಗುಳ್ಳ ಮಗುವ ಪ ನೀರೊಳಗೆ ಪೊಕ್ಕು ತಾ ಬೀರುತಿದೆ ಮಾತುಗಳಧರಣಿಧರ ತಳಕಿಳಿದು ಬಾರದಿದೆಕೊಘೋರ ಪಾತಕವೆಂಬ ಬೇರ ಮೆಲ್ಲುತಲಿದೆಕೊಬಾರಯ್ಯ ಎನೆ ಕೋಪವೇರುತಿಹ ಮಗುವ 1 ಬೇಡುತಿದೆ ದಾನವನು ನೀಡುತಿದೆ ಪಾದವನುರೂಢಿಪಾಲರ ಕಂಡು ಕೊಲ್ಲುತಿದೆಕೊಓಡುತಿದೆ ಮೃಗದೊಡನೆ ಆಡುತಿದೆ ಕಪಿಗಳೊಳುನೋಡಲ್ಕರಿನಾಗರ ಹಾವ ತುಳಿಯುತಿದೆಕೊ 2 ಇತ್ತ ಬಾರೆಂದೆನಲು ಬತ್ತಲೆ ನಿಲ್ಲುತಿದೆಕೊಮತ್ತೆ ತೇಜಿಯನೇರಿ ನಲಿಯುತಿದೆಕೊಹತ್ತೆ ಬಂದವರಿಗೆ ಅರ್ತಿಯನು ನೀಡುತಿಹನಿತ್ಯ ವೈಕುಂಠದಲಿ ನಲಿವ ಮಗುವ 3
--------------
ಕನಕದಾಸ
ಮಣಿಗಣ ಭೂಷಣ ಅಣಿಗಾಣೆನಿಮಗಿನ್ನು ಗಣರಾಯ ಗಣರಾಯ ಪ. ರುದ್ರ ಕುಮಾರನೆ ಸಿದ್ಧಿ ನಿನಾಯಕ ವಿದ್ಯವಪಾಲಿಸೊಬುದ್ಧಿದಾತನೆ ಅ.ಪ. ಆನೆಯ ಮುಖದವನ ಧೇನಿಸಿನಮಿಸುವೆ ಗಣರಾಯ1 ಶ್ರೀನಿವಾಸನ ಪ್ರಿಯ ನೀನಮ್ಮಗೆಲಿಸೆಂದು ಗಣರಾಯ2 ಹಸ್ತಿಯ ಮುಖದವಗೆ ಹಸ್ತವ ಮುಗಿದೆವಸ್ವಸ್ಥ ಮನಸು ಕೊಡು ವಿಸ್ತರ ಉದರನೆ ಗಣರಾಯ3 ಗಂಧ ಅಕ್ಷತೆ ಪುಷ್ಪ ತಂದೆ ದುರ್ವಾಂಕುರ ಚಂದದ ವಸ್ತ್ರಗಳ ಒಂದೊಂದು ಕೈಕೊಳ್ಳೊ ಗಣರಾಯ 4 ರನ್ನ ಮಾಣಿಕ ಬಿಗಿದ ಚಿನ್ನದಾಭರಣವ ನಿನ್ನ ಪೂಜೆಗೆ ತಂದೆ ಚೆನ್ನಾಗಿ ಕೈಕೊಳ್ಳೊ ಗಣರಾಯ 5 ಚಕ್ಕಲಿ ತರುಗುಮಿಕ್ಕಾಗಿ ಲಡ್ಡುಗೆ ಚಿಕ್ಕಗಣಪ ಉಂಡು ಚಕ್ಕನೆ ವರಕೊಡು ಗಣರಾಯ 6 ಚಲ್ವ ರಾಮೇಶನನೆಲೆಕಂಡ ಪುರುಷನೆಇಲಿವಾಹನ ನಮ್ಮ ಸಲುಭದಿ ಗೆಲಿಸಯ್ಯ7
--------------
ಗಲಗಲಿಅವ್ವನವರು