ಒಟ್ಟು 378 ಕಡೆಗಳಲ್ಲಿ , 74 ದಾಸರು , 346 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿರಿರಮಣ ತವ ಚರಣಕೆರಗಿ ಬೇಡುವೆ ನಾನು ತ್ವರದಿ ಉದ್ಧರಿಸೋ ಈ ಭವದಿ ಬೇಗಾ ಪ ಪೊಟ್ಟಿಯೊಳಿರುವ ಶಿಶು ಕಷ್ಟವನೆ ಕೊಡಲು ಸಹ ಕೆಟ್ಹೋಗಲೆಂದು ತಾ ಬಯಸಳು ಸೃಷ್ಟಿ ನಿನ್ನೊಳಗಿರಲು ಹೊಟ್ಟೆಯೊಳಗಿರುವೆನು ಅಷ್ಟು ತಪ್ಪೇನು ಕ್ಷಮಿಸಿ ಪೊರೆವುದಾ ತೆರದಿ 1 ಜ್ಞಾನವಿಲ್ಲದೆ ಹರಿಯೇ ನಾನು ನೀನು ಸರಿಸ- ಮಾನರೆಂದರಿತು ನಾ ಮೋಸ ಹೋದೆ ನಾನು ನಿನ್ನಾಧೀನವಿರುವೆನೇ ಹೊರ್ತು ನೀ ನೆನ್ನಧೀನನೆಂದಿಗೂ ಅಲ್ಲವೊ ದೊರೆಯೇ 2 ಏಸು ಜನ್ಮಗಳಿಂದ ವೇಷವಾ ಧರಿಸಿ ಹನು- ಮೇಶ ವಿಠಲನೆ ನಾ ತೋರಿಸಿದೆನೋ ಕೇಶವಾ ಕೊಡು ನೀ ಸಂತೋಷವಾಗಿರೆ ಮುಕ್ತಿ ಬೇಸರಾಗಿರೆ ಇನ್ನು ವೇಷವನು ಬಿಡಿಸೊ 3
--------------
ಹನುಮೇಶವಿಠಲ
ಸುಮ್ಮನಹುದೆ ಬ್ರಹ್ಮಾನಂದದ ಸುಖವು ಧ್ರುವ ಘನಗುಡುವದೆ ನೆನದಾಗಲಿ ಖೂನದೋರುದು ಆವಾಗಲಿ ಜನರಂಜನಿ ಶೀಲೆ 1 ತನುವುತನ್ನಲ್ಲಿರಕ್ಕೆ ಪೂರ್ಣ ಘನಗುರುವಿಗೆ ತಾ ಅರ್ಪಿಸಿತೇನ ಜನಮಾಡುವುದು ಈ ಸಾಧನ ಅನುಮಾನದ ಖೂನ 2 ಅನುದಿನ ಹೊರಳ ಗುರು ಪಾದದಲಿ ನೀನೆ ಗತಿ ಎಂದೆನುತಲಿ ನೆನೆವನು ಬಾಯಲಿ 3 ಗುರುಗುಣಕೆ ಮೂರ್ಹಾದ್ಹೊಚ್ಚಿರಲಿ ತೋರಬಲ್ಲುದೆ ಸುಙÁ್ಞ ನದ ಕೀಲಿ ಬರಿಯ ಮಾತಿನ ಭಕ್ತಿಲಿ ಅರವಾಗುವದೆ ನೆಲಿ 4 ಠಕ್ಕ ತನಕೆ ಸಿಲ್ಕುದೆ ಸದ್ವಸ್ತು ಲೆಕ್ಕವಿಲ್ಲದೆ ಅಮೋಲಿಕಮಾತಿಲ್ಯಾಕೋ ಮಹಿಪತಿ ಭಾವವಿತ್ತು ಅಕ್ಕಿಸಿದೋ ಬೆರ್ತು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸುಮ್ಮನೇಕೆ ಪರದಾಡುವೆಯೊ ಪರ ಬೊಮ್ಮನ ಚರಣಕೆ ಶರಣು ಹೊಡಿ ನಮ್ಮನು ಸೃಜಿಸುವ ಪೊರೆಯುವ ಕೊನೆಯಲಿ ನಮ್ಮನೇ ನುಂಗುವ ಗುಮ್ಮನಿವ ನಮ್ಮ ಶರೀರದೊಳಿರುವ ಯಂತ್ರಗಳು ನಮ್ಮಧೀನವೆ ಯೋಚಿಸೆಲೊ ವಾತ ನಮ್ಮಾಕಾಂಕ್ಷೆಯೆ ಯೋಚಿಸೆಲೊ 1 ಮೂರಂತಸ್ಥಿನ ನೂರು ಸದನಗಳು ನೂರು ರೂಪಗಳು ನಿನಗಳವೆ ಚಾರು ಮನೋಹರ ಸತಿಯಳಿರಲು ಮನ ಕೋರಿಕೆಯವಳಲಿ ಶಾಶ್ವತವೆ ನೂರು ಎಕರೆ ಹೊಲ ಗದ್ದೆ ತೋಟಗಳು ಮೂರು ಲಕ್ಷಗಳು ಬೆಲೆಯಿರಲು ಮೂರು ಚಟಾಕಿನ ಅನ್ನ ಹೊರತು ಅದ ಮೀರಿ ನುಂಗುವುದು ನಿನಗಳವೇ 2 ಶೂರನು ನಾ ಬಲುಧೀರನು ನಾ ಅಧಿ ಕಾರಿಯು ನಾ ಈ ಜಗದೊಳಗೆ ಕೋರಿದ ಜನರನು ಸದೆಬಡಿಯುವೆ ಎನ ಗಾರು ಸಮರು ಈ ಧರೆಯೊಳಗೆ ಕೋರುವ ಸುಖಗಳನನುಭವಿಸುವ ಮಮ ಕಾರದ ಗತಿಯನು ಯೋಚಿಸೆಲೊ ಹೇರಳ ಗಜತುರಗಾದಿ ವಾಹನಗ ಳೇರಿದ ನೀ ಹೆಗಲೇರಿ ಹೋಗುವಿಯೊ 3 ಸಾಸಿರ ಸಾಸಿರ ಬಡ್ಡಿ ಬಾಚಿಗಳ ಬೇಸರವಿಲ್ಲದೆ ಗಳಿಸಿದೆಯೊ ಕಾಸಿನ ಲೋಭಕೆ ಮೂಸಲು ಬಾರದ ಕಾಸಕ್ಕಿ ಅನ್ನವ ನುಂಗಿದೆಯೊ ಲೇಶವು ಗಮನಕೆ ತರಲಿಲ್ಲ ಈ ಸವಿನುಡಿ ಬಲು ಹಳೆಯದೆಂದು ಆಕ್ರೋಶವ ಮಾಡದೆ ಯೋಚಿಸೆಲೊ 4 ಮಾಯವು ತಾ ಈ ಜಗತ್ತಿನ ಜೀವನ ರುಚಿ ತೋರುವುದು ಕಾಯವು ಶಾಶ್ವತವೆಂಬ ಭ್ರಾಂತಿಯಲಿ ಹೇಯ ವಿಷಯಗಳನುಣಿಸುವುದು ಪ್ರಾಯಶರೆಲ್ಲರು ಬಲ್ಲರಿದನು ಬರಿ ಬಾಯಲಿ ನುಡಿಯುವರೊ ಸತತ ಕಾಯವಚನಮನದಿಂದ ಪ್ರಸನ್ನನ ಮಾಯವನರಿತಾಚರಿಪರು ವಿರಳ 5
--------------
ವಿದ್ಯಾಪ್ರಸನ್ನತೀರ್ಥರು
ಸುಳಾದಿ ತಾಳ-ಝಂಪೆ ನೋಡುವರೆ ನೀರದಶ್ಯಾಮಸುಂದರ ಮೂರ್ತಿ ಪಾಡುವರ ಪರಮಪಾವನ್ನ ಕೀರ್ತಿ ಕೂಡುವರೆ ಕೇವಲಾನಂದ ಚಿನ್ಮಯಗಾತ್ರ ನೀಡುವರೆ ನಿಖಿಳಲೋಕೈಕಪಾತ್ರ ನೋಡಿ ನಮಿಸುವರುಂಟು ಪಾಡಿಹಿಗ್ಗುವರೂಟ ಕೂಡಿ ಸುಖಿಸುವರುಂಟು ನೀಡಿ ನಲಿವವರುಂಟು ನೋಡಿಸುತ ಪಾಡಿಸುತ ಕೂಡಿಸುತ ಬೇಡಿಸುತ ನಾಡದೈವಂಗಳ ಕೊಂಡಾಡಿಸದಲೆ ಬೇಡಿದಿಷ್ಟವ ಕೊಡುತ ಶ್ರೀದವಿಠಲ ದಯ - ಮಾಡಿ ನಮ್ಮನು ಪೊರೆವ ರೂಢಿಗೊಡೆಯ ನಾಡದೈವಂಗಳ ಕೊಂಡಾಡಿಸದಲೆ 1 ತಾಳ-ಮಟ್ಟ ಸಕಲ ಶ್ರುತಿನಿಕರಸಾರಹೋ ಶುಕಮಹಾಮುನೀಂದ್ರ ಸನ್ನುತ ಪ್ರಕಟ ಮಾಡಲ್ಯಾಕೆ ನಿನ್ನನು ಪರಮಪುರುಷ ಪ್ರಕಟಮಾಡಲ್ಯಾಕೆ ನಿನ್ನನು ಭಕ್ತವತ್ಸಲನೆಂಬೆನಲ್ಲದೆ ಮುಕುತವಂದ್ಯ ಶ್ರೀದವಿಠಲ ಯುಕುತಾಯುಕುತವೊಂದನರಿಯದೆ ಪ್ರಕಟಮಾಡಲ್ಯಾಕೆ ನಿನ್ನನು 2 ತಾಳ-ತ್ರಿವಿಡಿ ಆಯನುಭವ ಭಯ ಲಯವರ್ಜಿತ ನಯನೋತ್ಸಹಕಾರಕ ತಾರಕ ಜಯಮಂಗಳ ಮಂಗಳ ಮಂಗಳ ಮಾಯಾ ಮಾಮರ ದೇವರಾÀಟ ಸಯವೇ ಸೈ ಶ್ರೀದವಿಠಲ ನಿ ನ್ನಯ ಚರಣಕೆ ನಮಿಸುವೆ ನಮಿಸುವೆ ಜಯ ಮಂಗಳ ಮಂಗಳ ಮಂಗಳ ಮಾಯಾ ಮಾಮರ ದೇವರಾಟ 3 ತಾಳ-ಅಟ ಬಾರೋ ಬಾರೋ ಭವದೂರ ದೀನಜನ ಭಾರ ನಿನ್ನದಯ್ಯಾ ಅಯ್ಯಯ್ಯಾ ಸಾರಿದೆನೊ ನಾ ನಿನ್ನ ಸಾರಿದೆನೊ ನಿನ್ನ 4 ತಾಳ-ಆದಿ ಶ್ರೀರಮಣ ಶ್ರೀದವಿಠಲ ಸಂ - ಚಾರು ಚರಣಗಳ ಸಾರಿದೆನೊ ನಿನ್ನ ಶಿರಿಗುರವಿತ್ತೆ ಪರಮನ ಪೆತ್ತೆ ಗಿರಿಜೇಶಗೆ ನಿನ್ನ ಮೈ ಇತ್ತೆ ಶರಣಾಗತವತ್ಸಲ ಕರುಣಾಕರ ಶ್ರೀದವಿಠಲ ಸರಿಬಂದರೆ ಸಾಕುವದೆಮ್ಮನು ಶರಣಾಗತವತ್ಸಲ 5 ಜತೆ ಸೋಲು ಶ್ರೀದವಿಠಲ ಸೋಲು ಗೆಲುವು ನಿನ್ನ
--------------
ಶ್ರೀದವಿಠಲರು
ಸೇರಿದೆನು ಸೇರಿದೆನು ಜಗದೀಶನನರಕಜನ್ಮದ ಭಯವು ಎನಗೆ ಇನಿತಿಲ್ಲ ಪ ಮೂರ್ತಿ ಗಾತ್ರ ಕೃಷ್ಣನ ಮುಂದೆ1 ಹಸ್ತಗಳು ಮಂಟಪಶುದ್ಧಿಯನು ಮಾಡುತಿವೆಮಸ್ತಕವು ಹರಿಚರಣಕೆರಗುತಿದೆಕೋವಿಸ್ತಾರವಾದ ಪ್ರದಕ್ಷಿಣೆಯ ಮಾಡುತಿದೆಕಸ್ತೂರಿತಿಲಕವನು ಮೂಗು ಆಘ್ರಾಣಿಸುತಿದೆ 2 ಹರಿನಾಮಸ್ಮರಣೆಯನು ನುಡಿಯುತಿದೆ ಎನ್ನ ಜಿಹ್ವೆಹರಿಭಕುತಿ ಸುಧೆಯ ಪಾನಗಳಿಂದಲಿಹರಿಪ್ರೀತಿಯಾಗಿದೆ ನೋಡಿದರೆನ್ನ ದೇಹಸಿರಿಕೃಷ್ಣರಾಯನ್ನ ಮನಮಂದಿರದಿ ಕಂಡೆ 3
--------------
ವ್ಯಾಸರಾಯರು
ಸ್ಮರಿಸಿದದರಘನನಾಶನ ಸ್ಮರಿಸಿದವರಘನಾಶಸ್ಮರನಯ್ಯನಂಘ್ರಿ ಯುಗ ಸರಸಿಜವ ಪೂಜಿಸುವಗುರು ವಿಜಯರಾಯರ ಚರಣಾಬ್ಜ ಸಾರಿದವದುರಿತಾಬ್ಧಿ ಮೀರಿದವ ಹರಿಪುರವ ಸೇರಿದವನೊ ಪ ಅಘ ಬಂಧ ಪರಿಹರ ಮಾಡುತಾ ಜನರು 1 ಇನಿತು ಜನಸಮುದಾಯದೊಳು ಯಿರುತಿರ್ದ ಇಭವರದ ನನುದಿನವು ಗಾಯನದಿ ಕೊಂಡಾಡಿ ಮನಮುಟ್ಟಿವಿನಯಾತಿಶಯದಲ್ಲಿ ಗುರುವರ್ಯರಾ ಸೇವೆ ಘನವಾಗಿ ಮಾಡಿ ಮುದದಿ ||ತನುವೆತ್ತಿ ವರಸರಿತ ತೀರದಾ ಅಣು ಬದರಿಜನ ಶ್ರೇಷ್ಠರೊಳು ಹರಿಯ ದಾಸ ಪೆಸರಲಿ ಬಂದುಘನ ಯಾದವಾದ್ರಿ ಪಟ್ಟಣದೊಳಗೆ ಯಿದ್ದು ಬಗೆ ಜನನಿ ಅನುಜಾತಿ ಸಹಿತ 2 ಕೆಲವು ದಿನ ಸಂಸಾರ ಗಲಭಿಯೊಳು ಯಿರುತಿರ್ದುಜಲದೊಳಗೆ ಅಂಬುಜವು ಮಿಳಿತವಾಗಿದ್ದ ತೆರಹಳಿದು ದುಷ್ಟಾಸಿಯನು ಕಳೆದು ಕಡು ಮಮತೆಯನು ಪುಳಕೋತ್ಸ ಮನದಿ ತಾಳಿ ||ಜಲದೊಳುತ್ತಮವಾದ ಭಾಗೀರಥೀ ಯಾತ್ರಿಛಲ ಭಕುತಿಯಿಂದಲಿ ಮಾಡಿ ಮೋದದಿ ಹರಿಯಹಲವು ಬಗೆ ಲೀಲೆಯನು ಹರುಷದಿಂದಲಿ ಯಿನ್ನು ತಿಳಿದು ಗುರು ಕರುಣ ಬಲದಿ 3 ಮೂರ್ತಿ ಮನದೊಳು ಕಂಡು ಸುಖವನಧಿಯಲ್ಲಿ ಲೋಲ್ಯಾಡಿಕೊಳುತ ||ಅಲ್ಲಿಂದ ತೆರಳಿ ಗಿರಿಯಲ್ಲಿದ್ದ ವೆಂಕಟನಸಲ್ಲುವಾ ಭಕುತರೊಳು ಸಲೆ ಶ್ರೇಷ್ಠನೆಂದೆನಿಸಿಮಲ್ಲ ಮರ್ದನನಾದ ಮುರಹರನ ಮಹಿಮೆ ಮನ ಬಲ್ಲನಿತು ವಿಸ್ತರಿಸುತ ಜನರು 4 ಈ ತೆರದಿ ಇಭವರದನಾತುಮದೊಳಗೆ ತಂದುಭೂತಳದ ಬಲು ವಿಧದ ತೀರ್ಥಕ್ಷೇತ್ರಗಳಲ್ಲಿಪ್ರೀತಿಯಿಂದಲಿ ಪರಮ ಪುರುಷನ್ನ ಧೇನಿಸುತ ಖ್ಯಾತಿ ಮಹಿಯೊಳಗೆ ಮೆರದು ||ವಾತಜಾತನ ಮತದ ವೊಳಗಿಪ್ಪ ವೈಷ್ಣವರತಾತನೆಂದೆನಿಸಿ ಸುಖವ್ರಾತದೊಳಗಿಡುವಲ್ಲಿಚಾತುರ್ಯದಿಂದ ಬಲುದಾತನೆನಿಸುತಲಿ ಭವತೀತರನ ಮಾಡಿ ಪೊರವ ಜನರು 5 ಆ ಬಗೆಯಲೀ ಕಮಲನಾಭ ಕರುಣಿಸಿ ಯಿವರಈ ಭುವನದೊಳು ಯಿಟ್ಟು ಜನರ ವುದ್ಧರಿಸುವಲೋಭದಿಂದಲಿ ಸಕಲ ಸಜ್ಜನರ ಸನ್ಮಾರ್ಗ ಲಾಭದೊಳು ಸೇರಿಸಿದನೊ ||ತ್ರ್ರಿಭುವನದೊಡೆಯನ್ನ ಕಥೆಯ ತಿಳಿಸುವ ಜನಕೆಶೋಭಿಸುವ ಗಾಯನದ ಸೊಬಗಿನಿಂದಲಿ ಕೇಳಿಶ್ರೀಭೂರಮಣ ವೊಲಿದು ಪಾಲಿಸುವನಾಮೇಲೆ ಶೋಭನ ಗತಿಯ ನೀವನೊ 6 ಕಲುಷ ವಾಕು ವುಪಜೀವರಿಗೆ ಏಕ ಮನದಿಂದಿರುವದೇ ಈ ಕಲಿಯುಗದಲಿಸಾಕಾರ ಗುಣಪೂರ್ಣ ಶ್ರೀನಿವಾಸನು ಬಿಡದೆ ಸಾಕುವನು ಸಮ್ಮೊಗದಲಿ ಜನರು 7 ದೇವಮುನಿ ನಾರದನು ಜೀವಿಗಳನುದ್ಧರಿಪಭಾವದಲಿ ಯಮಪುರಿಯ ದೇವನಲ್ಲಿಗೆ ಪೋಗಿಸಾವಧಾನದಿ ಸಕಲ ಸತ್ಕಾರಕೊಳಗಾಗಿ ನೋವು ಬಡವರನೀಕ್ಷಿಸಿ || ಸಾವಧಾನದಿ ಕೇಳಿ ಕಲಶಾರುಣೀ ಭಕ್ತ- ರಾವಳಿಯ ಸಲಹುವ ದೇವ ದೇವೇಶನನುತಾ ವದರಿ ಕೂಗಲಾ ಜೀವರೆಲ್ಲರು ಕೇಳಿ ಪಾವಿತ್ರವನೆಗೈದರೊ ಜನರು 8 ಭವ ಸಿರಿ ಚರಣಕೆ ಜನರು 9 ಸಿರಿ ತರಣಿ ಶರಧಿ ಶಯನನ ತೋರುವ ಜನರು 10 ದಾನವಾಂತಕ ದನುಜರನ್ನು ಸಂಹರಿಸುವಾಜ್ಞಾನಪೂರ್ಣನು ಗುಪ್ತ ತಾನಾಗಿ ಜಗದೊಳಗೆಹಾನಿ ವೃದ್ಧಿಂಗಳಿಗೆ ಹೊರಗಾಗಿ ಜೀವಿಗಳ ಮಾಣದಲೆ ಪರಿಪಾಲಿಪ ||ಕ್ಷೋಣಿಯೊಳು ಭಕುತರಘ ಹಾನಿಗೈಸುವ ಬಗಿಗೆಈ ನಿರುದ್ಧಕೆ ಯಿವರಧೀನ ಮಾಡಿದ ನಮಗೆವೇಣುಗೋಪಾಲ ವಿಠಲರೇಯ ತಾನೊಲಿದು ಸ್ವಾನಂದವನೆ ವುಣಿಸುವ ಜನರು 11
--------------
ವೇಣುಗೋಪಾಲದಾಸರು
ಸ್ವಸುಖ ನೋಡಿ ಸದ್ಗುರು ಕೃಪೆಯಿಂದ ವಿಶ್ವತೋಮುಖ ತೋರುವ ತಾಂ ಗೋವಿಂದ ಧ್ರುವ ಏನೆಂದ್ಹೇಳಲಯ್ಯ ಅನುಭವದ ಮಾತು ಖೂನಾಗ್ಯಾದೊಂದೇ ಶಾಶ್ವತ ಆನಂದೋಭರಿತ ಸ್ವಾನಂದ ಸುಖ ತಾನೆ ಆಗ್ಯದೆ ಸನ್ಮತ ಘನಬೆರೆದು ನೋಡುವದೀ ಸುಪಥ 1 ಮಲಕಿನ ಮನುಜರು ಮನವಿಡಬಲ್ಲರೇ ನಾಲ್ಕು ವೇದ ಸಾರುದಕ ಒಮ್ಮೆಯಾದರ ನಿಲುಕಿಸಿ ನಿಜ ನೋಡಿದರಸಾಧ್ಯ ಬೆಳಕೆ ಆಗ್ಯದ ನೋಡಿ ತಿಳಿಕೊಂಡರೆ 2 ಗುರುವಿನಿಂದಧಿಕಿಲ್ಲ ಅರಿತುಕೊಳ್ಳಿರೊ ಖೂನ ಪರಮಗತಿಯ ಸಾಧನ ಸುತತ್ವ ಜ್ಞಾನ ಬೆರೆದು ಮಹಿಪತಿ ಪೂರ್ಣ ಸದ್ಗುರು ಚರಣಕೆರಗಿ ಮನ ಪಡೆವದೀ ದಯಕರುಣಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ನೀನೆ ಸ್ವಹಿತ ಗುರುನಾಥ ಬ್ರಹ್ಮಾನಂದ ಸದ್ಘನ ಸದೋದಿತ ಧ್ರುವ ನೀನಹದೋ ಬಡವನಾಧಾರಿ ಸಾನುಕೂಲ ನೀನೆವೆ ಪರೋಪರಿ ಅನುದಿನದಲಿ ನೀ ಸಹಕಾರಿ ಮನೋಹರ ಮೂರುತಿ ನೀ ಶ್ರೀ ಹರಿ 1 ದಯಗುಣಕೆ ನಿಮ್ಮ ನಾ ಸರಿಗಾಣೆ ತಾಯಿ ತಂದೆ ಸಕಲ ಬಂಧು ನೀನೆ ತ್ರೈಲೋಕ್ಯವಂದ್ಯ ನೀ ದೇವನೆ ಶ್ರೇಯ ಸುಖದಾಯಕ ಎನ್ನ ನೀನೆ 2 ಶ್ರುತಿ ಸಾರುತಲ್ಯದ ನಿಮ್ಮ ಖ್ಯಾತಿ ಸ್ತುತಿ ಮಾಡಲೇನು ನಾ ಮಂದಮತಿ ಅತಿ ದೀನ ನಾ ನಿಮ್ಮ ಮಹಿಪತಿ ಪ್ರತಿಪಾಲಕಹುದೋ ನೀ ಶ್ರೀಪತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ಯಾತಕೆನ್ನೊಳುಪೇಕ್ಷೆ ಮಾಡುವಿ ದೀನನಾಥ ಸುಮ್ಮನೆ ನಿಂತು ನೋಡುವಿ ಪ. ನಡೆವನ ಕಣ್ಣ ಕಟ್ಟಿ ಕೆಡಹುವುದುಚಿತವೆ ಒಡೆಯ ನಿನ್ನಡಿಗಳ ಪೊಗಳುವ ಪಾಡಿ ನುಡಿವ ಕಾರ್ಯಕೆ ಬಾಡಿ ಬಳಲುತ ನಾ ನಿತ್ಯ ನೋಡುತ ಬಡವನ ಬಿಡದಿರು ಕಡಲಶಯನ ನಿಜ ಮಡದಿ ಸಹಿತನಾಗಿ ಶ್ರೀಶನೆ ಕೃಪೆ ಕಂಜಕರ ಶ್ರೀನಿವಾಸನೆ1 ಭಾವಜ ಪಿತ ನಿನ್ನ ಸೇವೆ ಮಾಳ್ಪರಿಗೆಂದು ನೋವ ನೀಡದೆ ಕಾವ ಬಿರುದನು ಭವ ಸಾರÀ ನೀ ಮರೆವುದು ನೀತಿಯೆ ಎನ್ನ ನೀ ವಿಧ ಮಾಳ್ಪುದು ಖ್ಯಾತಿಯೆ ಪಾವನ ಚರಿತ ಪುರಾಣ ಪುರುಷ ಮಹ ದೇವ ನೀ ಕರಪಿಡಿದೆನ್ನನು ಕರು- ಣಾವಲಂಬನವಿತ್ತು ಪೊರೆವುದು 2 ದುರುಳ ಭಾವನೆಯಿಂದ ಸರಿದು ಹೋಗುವ ಪಂಚ ಕರಣಕೆ ನೀನರಸನಲ್ಲವೆ ಭಕ್ತಾ- ಭರಣಕೆ ನಿನ್ನೊಳಿರಿಸು ಮಾರ್ಗವನಂತ:- ಕರಣಕೆ ತರಿದು ಪಾಪಗಳನು- ದ್ಧರಿಸೆನ್ನ ವೆಂಕಟಗಿರಿವರ ದೀನಾರ್ತಿ ಚಕ್ರಧರ ಸಕಲಾನಂದ ಕಾರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಹಣವನರಸುವರೆಲ್ಲ ಗುಣವನರಸುವರೆ ಮಣಿಯನರಸುವ ಕೆಲರು ಹಣಕೆ ಬಾಯ್ ಬಿಡರೆ ಪ ನೀಡುವವನೊಬ್ಬನಿರೆ ಬೇಡವೆಂಬುವರಿಹರೆ ನೀಡಲೊಲ್ಲದ ನರನ ನೋಡುವವರಿಹರೆ ಬೀಡು ಹೆಚ್ಚಳಸಿರಿಯ ನೀಡೆನಗೆ ತನಗೆಂಬ ನಾಡಿಗರ ಗಡಣವನು ಎಣಿಸಲಳವೇ 1 ಕಲಿಯುಗದ ನೀತಿಯೋ ಬಲುದುರಾಸೆಯ ಬಲೆಯೋ ಸಲೆ ಬೆಳೆದಸೂಯೆಯೋ ಕಲಿತ ದುರ್ನೀತಿಯೋ ಜಲಜಾಕ್ಷನನೀ ದುಶ್ಶೀಲ ಪ್ರವಾಹದಲಿ ಅಲೆಯಬಿಡಬೇಡಯ್ಯ ಮಾಂಗಿರಿಯ ರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹನುಮ-ಭೀಮ-ಮಧ್ವರು ಅಸುರರನು ಅಳಿಯ ಬಂದೆನು ನಾನು ನಿನ್ನ ವೈರಿದಶರಥರಾಮನಾಳೆಂದ ಪ. ಹೊಸಕಪಿಯೆ ನೀನು ಬಂದುದೇನುಕಾರಣವೆನಲುದಿ[ಶೆÀ]ಗೆ ಬಲ್ಲಿದ ಹನುಮ ನಾ ಕೇಳೊ ನಿ-ನ್ನಸುರ ಪಡೆಯ ಮಡುಹಬಂದೆ ನಿನ್ನಎಸೆವ ಪಾದದಲೊದೆಯ ಬಂದೆ ವನದಸಸಿಯ ಕಿತ್ತೀಡ್ಯಾಡಿ ನಿಂದೆ ನಿನ್ನದಶಶಿರವ ಕತ್ತರಿಸಿ ಎಸೆವ ರಾಮರ ಮಡದಿಹಸುಳೆ ಸೀತೆಯ ಅರಸಲು ಬಂದೆ 1 ಎನ್ನ ವೈರಿಗಳು ಇನ್ಯಾರೆಂದು ರಾವಣನುಹೊನ್ನಕುಂಡಲದ ಹನುಮನೆ ಕೇಳೊಮುನ್ನವರ ಸಾಹಸವಯೇನೆಂಬೆ ಅವರಪರ್ಣಶಾಲೆಯ ಹೊಕ್ಕು ಬಂದೆ ರಾಮ-ಕನ್ಯೆ ಸೀತಾಂಗನೆಯ ತಂದೆತನ್ನ ಬಿಲ್ಲ ತಾ ಹೊತ್ತು ತಿರುಗುವುದ ಕಂಡೆ 2 ಇನ್ನು ಹೆಮ್ಮೆಮಾತ್ಯಾತಕೊ ಕಪಿಯೆಕಚ್ಚಿ ಕೀಳಲೋ ಕಣ್ಣು ಹತ್ತುತಲೆಯನೆ ಹಿಡಿದುನುಚ್ಚುನುರಿ ಮಾಡಿ ಕೊ[ಲ್ಲಲೊ]ನಿನ್ನ ಇಷ್ಟುಹೆಚ್ಚಿನ ಮಾತ್ಯಾಕೊ ನಿನಗೆ ಬಹಳಕಿಚ್ಚು ತುಂಬಿತು ಕೇಳೋ ಎನಗೆ ಒಂದುಮೆಚ್ಚು ಹೇಳುವೆನೊ ರಾಮರಿಗೆಅಚ್ಚುತನ ಬಣಕೆ ಮೀಸಲಾಗಿರು ನೀನು 3 ವಿಧಿ ಕಾಲಮ[ಣೆ]ಯಾಗಿಬೆನ್ನಬಿಡದಿಹ ಪರಿಯ ನೋಡೊ 4 ಎನ್ನ ಸೋದರಮಾವ ವಾಲಿಯನು ಕೊಂದೀಗತಮ್ಮ ಸುಗ್ರೀವಗೊಲಿದು ವರವಿತ್ತುನಿನ್ನ ಕೊಂಡೊ[ಯ್ದ]ನೆಂಬುವರೊ ನಿನ್ನಚಿನ್ನನ ತೊಟ್ಟಿಲಿಗೆ ಕಟ್ಟುವರೊ ನಿನ್ನಹೊನ್ನತುಂಬೆಂದು ಆಡ್ಸುವರೊನಿನ್ನ ಶಿರವರಿದು ವಿಭೀಷಣಗೆÀ ಪುರವ ಕೊಡಬೇಕೆನುತಎನ್ನೊಡೆಯ ಬರುತಾನೆ ತಾಳೊ ಎಂದ 5 ಎತ್ತಿಹಿಡಿವ ಕೈಪಂಜು ಲೆಕ್ಕವಿಲ್ಲ ನಾ ಹಿಡಿದವಕತ್ತಿ ಇಪ್ಪÀತ್ತು ಕಾಣೋ ಕಪಿಯೆಎತ್ತಿ ಕಡಿವೆನು ಬಾಹುದಂಡ ಬೆ-ನ್ನ್ಹ್ಹತ್ತಿ ಬಡಿಯದೆ ಬಿಡೆನು ಕಂಡ್ಯಾ ನಿನ್ನಚಿತ್ತದಲಿ ತಿಳಿದುಕೊಳ್ಳೆಂದಮತ್ತೆ ನಾ ತಾಳಿ ಕೈಗಾಯಿದೆನಲ್ಲದೆ ಬಾಯಬತ್ತಿಸದೆ ಬಿಡುವೆನೇನೋ ಕಪಿಯೆ 6 ಮತ್ತ ರಾವಣ ನೀನು ಹೊತ್ತಿದ ಭೂಮಿ ಹಣತಿಸುತ್ತಣ ಸಮುದ್ರವೆ ತೈಲಎತ್ತಿ ಹಿಡಿವಳು ಸೀತೆ ದೀಪ ನಮ್ಮಚಿತ್ತದೊಲ್ಲಭನ ಪ್ರತಾಪ ನಿನ್ನಲಂಕಪಟ್ಟಣವು ಸುಡುವಂತೆ ಶಾಪಹತ್ತು ತಲೆ ಹುಳ ಹಾರಿಬಂದು ಬ್ಯಾಗಸುತ್ತಿ ಬೀಳುವುದು ದೀಪದೊಳಗೆ7 ಹೆಚ್ಚಿನ ಮಾತಿಷ್ಟು ಇವಗ್ಯಾಕೆ ಹಿಡಿತಂದುಕಿಚ್ಚು ಹಚ್ಚಿರೊ ಬಾಲಕೆ ಎಂದ ಆಗಪೊಚ್ಚಸೀರೆಗಳ ಸುತ್ತಿದರು ತ್ವರಿತಅಚ್ಚ ಎಣ್ಣೆಯಲಿ ತೋಯಿಸಿದರು ಬಾಲಹೆಚ್ಚಿಸಲು ಕಂಡು ಬೆದರಿದರುಕಿಚ್ಚು ಹಚ್ಚಲು ರಕ್ಕಸರ ಗಡ್ಡಮೀಸೆ ಸಹಎಚ್ಚರಿಸಿ ಸುಟ್ಟ ಲಂಕಾಪುರವ8 ಮುಖ್ಯಪ್ರಾಣ ವರದ ಮೆರದ 9
--------------
ವಾದಿರಾಜ
ಹರಿದಾಡುವಂಥ ಮನವ ನಿಲಿಸುವುದು ಬಲುಕಷ್ಟ ಪ ಉರಿಯನಪ್ಪಲು ಬಹುದು ಗರಳವನು ಕುಡಿ ಬಹುದು ಕರಿಯ ದಾಡೆಗೆ ಸಿಕ್ಕು ಮರಳಿ ಜೀವಿಸ ಬಹುದು 1 ಗಗನ ಕೇಣಿಯ ಸಾರ್ಚಿ ಮುಗಿಲ ಮುಟ್ಟಲು ಬಹುದು ಅಗಜೆಯರಸನ ಉರಿಯ ನಯನ ಕಾನಲು ಬಹುದು ಹೊಗರು ಧೂಮವ ಹಿಡಿದು ಹಸುಬೆ ತುಂಬಲು ಬಹುದು 2 ಮಳಲ ಗಾಣಕೆಯಿಕ್ಕಿ ತೈಲಗಾಣಲು ಬಹುದು ಹುಲಿಯ ಹಿಡಿದು ಕಟ್ಟಿ ಹಾಲ ಕರೆಯಲು ಬಹುದು ಬಿಳಿಗಲ್ಲ ಬೆಣ್ಣೆವೋಲ್ ಜಗಿದು ನುಂಗಲು ಬಹುದು 3 ಅಸಿಯ ಧಾರೆಯ ಮೇಲೆ ನಾಟ್ಯ ವಾಡಲು ಬಹುದು ವಿಷದ ಉರುಗನ ಕೂಡೆ ಸರಸವಾಡಲು ಬಹುದು 4 ಮರುತ ಸುತನ ಕೋಣೆ ವಾಸ ಲಕ್ಷ್ಮೀಶನ ದುರಿತ ನಾಶನವಹುದು ಮರಳಿ ಜನ್ಮಕೆ ಬಾರದಂಥ ಪದವಿಯಹುದು5
--------------
ಕವಿ ಪರಮದೇವದಾಸರು
ಹರಿದಾಸರ ಸಂಗಕೆ ಸರಿಯುಂಟೆ ಗುರು ಕರುಣಕೆ ಇನ್ನು ಪಡಿಯುಂಟೆ ದೇವ ಪ ದಾವಾನಲವ ತÀಪ್ಪಿಸಿ ಕಾಡಾನೆಯದÉೀವಗಂಗೆಗೆ ತಂದು ಹೊಗಿಸಿದಂತೆಆವರಿಸಿರುವ ಷಡ್ವರ್ಗ ತಪ್ಪಿಸಿ ಎನ್ನಶ್ರೀವರನ ಕರುಣಾರಸದಿ ತೋಯಿಸುವ 1 ಪಾದ ಸನ್ನಿಧಿಯ ಸೇರಿಸುವ 2 ಬಲೆಯ ಹಾರಿದ ಎಳೆ ಹುಲ್ಲೆಯ ಮರಿಗಳಿಗೆಒಲಮೆಯಿಂದಲಿ ತಾಯ ತೋರಿಸಿದಂತೆಬಲು ಇಂದ್ರಿಯಗಳ ಸೆರೆಯ ಬಿಡಿಸಿ ಎನ್ನನಳಿನನಾಭನ ಸನ್ನಿಧಿಯ ತೋರಿಸುವ 3 ಪಾದ ಸಂದರುಶನವನ್ನೀವ 4 ಭವಾಬ್ಧಿ ನಡುವೆ ಸಿಕ್ಕಿದ ಎನ್ನಪಿಡಿದು ಶ್ರೀಕೃಷ್ಣನಂಘ್ರಿಗಳ ಸೇರಿಸುವ 5
--------------
ವ್ಯಾಸರಾಯರು
ಹರಿಯ ಪಟ್ಟದರಾಣಿ ನಿಮ್ಮ ಸಿರಿಚರಣಕ್ಕೆ ನಾ ಶರಣೆಂಬೆಧರಣಿ ಒರೆಸಮ್ಮ ದುರಿತಘಮ್ಮ ಹರಿಸುದಮ್ಮ ಪ. ಧನಧಾನ್ಯವಿತ್ತು ಮತ್ರ್ಯರ ಪೊರೆವೆ ಎಂದೆಂದುಮನೆಗಿಂಬುಕೊಟ್ಟು ರಕ್ಷಿಸಿದೆದಿನದಿನದಿ ಚರಣವಿಟ್ಟರೆ ನೊಂದುಕೊಳೆ ನಿನ್ನಗುಣಕೆ ಭೂದೇವಿ ಸರಿಗಾಣೆ ಸಕಲಮುನಿ-ಜನರ ಪೊರೆವುದು ನಿಮ್ಮಾಣೆ ನಾರಾಯಣ ಬಂದುನಿನ್ನ ಸಲಹುವ ಪ್ರವೀಣೆ1 ನಿತ್ಯ ಸಮಸ್ತಪರ್ವತಭಾರವ ನೀ ತಾಳ್ವೆಉತ್ತಮ ತ್ರಿವಿಕ್ರಮನ ರಥೋತ್ಸವವೆ ಮೊದಲಾದಪವಿತ್ರಾಂಕುರಾರ್ಪಣಕೆ ನೀ ಬಂದು ವರಿಯಸುತ್ತಿನ ಪವಳಿಯೊಳಗೆ ನಿಂದು ನಮಗೆಮುಕ್ತಿ ಪದವೀವುದಕೆ ಬಾ ಕೃಪಾಸಿಂಧು 2 ಕೊಂಡ ಸಿರಿ ಹಯವದನಹರಿಯಕರ ಕರಿಭೇರುಂಡ ಸಿರಿಗೆ ಸರಿಯೆನಿಸಿನಿನ್ನನ್ನು ಪೊರೆಯುತಲಿಹನು ಕಂಡಾ3
--------------
ವಾದಿರಾಜ
ಹರಿಯೆನೀನು ಒಲಿದಮೇಲೆ ಪರರ ಭಯವುಂಟೇ ಪ ಪÀರುಷವೇದಿ ಸೋಂಕಿದ ಕಬ್ಬಿಣ ಹೊನ್ನಲ್ಲವೇ ಸುರನದಿ ಭಾಗೀರಥಿಯೊಳು ಮಿಂದೂ ಪಾಪಿಯೇ1 ಗರುಡದೇವನಿದಿರೊಳು ಉರಗಬಾಧೆಯಿರುವುದೇ ಧರೆಯೊಳ್ ರವಿಯು ಉದಯನಾಗೆ ರಾತ್ರಿ ನಿಲ್ವುದೇ2 ಗುರುವಿನ ದಯೆಯಿರುವರೇ ಕುಲದವರೇಂ ಗಯ್ಯುವರು ಉರಿವ ಕಿಚ್ಚಿನಿದಿರೊಳಗೆ ಚಳಿಯ ಭೀತಿಯೇ 3 ಸಂಜೀವನ ಪಿಡಿದವಂ ಮರಣಕೆ ತಾನಂಜುವನೇ ಕಂಜನಯನ ಕಾಯ್ವನಿರಲು ಶನಿಯು ಹಿಂಸಿಪನೇ 4 ರಾಜತನ್ನವನಾಗಿರಲ್ ವಿರಾಜಿಸುತ್ತಲಿರುವನೈ ಜಾಜೀಶ ಕೇಶವನೇ ನಾನು ನಿನ್ನವನೈ 5
--------------
ಶಾಮಶರ್ಮರು