ಒಟ್ಟು 5952 ಕಡೆಗಳಲ್ಲಿ , 127 ದಾಸರು , 3928 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಮೃತ ನೀಡೆನಗೆ ಪ ಅಮೃತ ನೀಡಪಮೃತ್ಯುಕಳೆದು ಧ್ಯಾ ನಾಮೃತವೆಂಬ ಸಾಮ್ರಾಜ್ಯ ಸಂಪದವಿತ್ತು ಅ.ಪ ಜರಾ ಮರಣವ ಗೆಲಿಪ ಅಮೃತ ದುರಿತ ಪರ್ವತಲೋಪ ಭರದಿಗೈದು ಮಾಯಮರವೆ ಹರಿಗೆ ಸ್ಥಿರ ಪರಮಪಾವನ ಮಾಳ್ಪ ಹರಿಸ್ಮರಣಾನಂದ 1 ಭವಬಾಧೆಯ ಗೆಲಿಪ ಅಮೃತ ಜವನ ಭಯವ ಲೋಪ ಜವದಿಗೈದು ತ್ರಯ ಭುವನದೊಳ್ಮಿಗಿಲಾಗಿ ಧ್ರುವನು ನಿರುತಮಾಗಿ ಸವಿದ ಮಹದಾನಂದ2 ತಾಮಸಗಳನಳಿವ ಅಮೃತ ಪಾಮರತನ ತುಳಿವ ಆ ಮಹ ವೈಕುಂಠದ ವಿಮಲ ಪದವಿಯನು ಕ್ಷೇಮದೀಯುವ ಶ್ರೀರಾಮ ಪ್ರೇಮಾನಂದ 3
--------------
ರಾಮದಾಸರು
ಅಮ್ಮಮ್ಮ ಗೋಪಿಯೆನೆ ಏನೆಂಬೆ ಪರ ಬೊಮ್ಮ ಮಗನೆಂಬೊ ಧೈರ್ಯಕೆ ಪ. ಬೊಮ್ಮನಯ್ಯನ ಸಿರಿರಮ್ಮೆ ಪತಿಯ ಘನ ಪೆರ್ಮೆ ಗುಣಗಣನಿಲಯನ ಅ.ಪ. ಹೊಳೆವ ಶ್ರೀರೂಪು ವಟಪತ್ರದಲ್ಲಿ ಪ್ರಳಯಜಲಧಿಯ ಶಯನನ ಸೆಳೆಮಂಚದ ಮ್ಯಾಲೆ ಮಗ್ಗುಲೊಳಿಟ್ಟು ತನ್ನ ಗೋಪಿ 1 ಚರಾಚರಂಗಳ ಸೃಷ್ಟಿ ಸ್ವಯಿಚ್ಛೆಯಿಂದ ಪುರುಷರೂಪವ ಧರಿಸಿದ ಪರಮಮಂಗಳ ಮೂರುತಿಯ ತನ್ನ ಗೋಪಿ 2 ಕತ್ತಲೆಯನು ನುಂಗಿ ತತ್ವಂಗಳನು ಕೊಂಡು ಮತ್ತೆ ಬೊಮ್ಮಾಂಡದೊಳಗೆ ಪೊಕ್ಕು ತತ್ವಸಾರದಿಂದೊಪ್ಪುವ ಕೊಮರನ ಗೋಪಿ 3 ಅದಭ್ರಸೃಷ್ಟಿಗಳಿಗಗೋಚರನಾದ ಆದಿಮೂರುತಿ ¸ಚ್ಚಿದಾನಂದನ ಸದಾ ತನಯನೆಂದೆತ್ತಿ ಮುದ್ದಿಸಿ ಸುಖ ಗೋಪಿ 4 ಚತುರುಭುಜ ಶಂಖ ಚಕ್ರ ಗದೆ ಪದುಮ ಸುತಪ ಪ್ರಶ್ನೆಗೆ ವರವಿತ್ತ ಶ್ರುತಿಶಿರೋಮಣಿಯೆಂದರಿಯದೆ ತಾ ಗೋಪಿ 5 ಬೊಮ್ಮಕಲುಷಾನಂತ ಸಹಸ್ರಗಳ ನಿಮಿಷಮಾತ್ರದಿ ಪಡೆದನ ಬೊಮ್ಮಾಂಡವೆ ತನ್ನ ರೋಮಕೂಪದಲ್ಲಿಪ್ಪ್ಪ ರನ್ನವೆ ಮಗನೆಂದಳೆ ಗೋಪಿ6 ಅನ್ನಂತ ರವಿತೇಜಕಿರೀಟದ ಅನ್ನಘ್ರ್ಯ ಸರ್ವಾಭರಣ ಪೊನ್ನ ವಸ್ತ್ರವನ್ನುಟ್ಟ ಅದ್ಭ್ಬುತ ಬಾಲಕನ ಗೋಪಿ 7 ಅನ್ನಂತಾನಂತ ಜೀವಗಣಗಳು ಅನ್ನಂತಾನಂತ ಕರ್ಮಗಳು ಅನ್ನಂತಾನಂತ ಗಾಯತ್ರಿಗೆ ಕÀರ್ತೃ ವಿಷ್ಣು ಗೋಪಿ 8 ಅನ್ನಂತಾಸನ ಶ್ವೇತದ್ವೀಪ ವೈಕುಂಠ ದನ್ನವರತ ವಾಸವಾಗಿಪ್ಪನ ಅನ್ನಿಮಿಷರ ಯೋಚನೆಗೆ ಒಲಿದನ ಗೋಪಿ 9 ಧರ್ಮದÀ ವೃದ್ಧಿಗೆ ಧರ್ಮದ ಹಾನಿಗೆ ತನ್ನಿಚ್ಛೆಯಲವತರಿಸಿದ ಮಮ ಪ್ರಾಣಾಹಿ ಪಾಂಡವನೆನಿಸಿದ ಗೋಪಿ 10 ಉದ್ದಾಮ ಕಾಂಚೀದಾಮ ಕಂಕಣ ಶ್ರೀ- ಮುದ್ರೆಯ ಶ್ರೀವತ್ಸಕೌಸ್ತುಭಧರನ ಮಧ್ವಮುನಿಗೆ ತಾನೊಲಿದು ಬಂದನ ಗೋಪಿ 11 ಸರಸಿಜಬೊಮ್ಮಾಂಡ ಒಡೆದಾಗ ವಿರಿಂಚಿ ತೊಳೆದ ಪಾದೋದಕವ ಹರ ಸೇವಿಸಲಾಗ ಶಿವನ ಮಾಡಿದ ಹರಿಯ ಮಗನೆಂದಳೆ [ಗೋಪಿ] 12 ದೇವಕಿ ಉದರದಲ್ಲಿದ್ದಾಗ ಬ್ರಹ್ಮಾದಿ ದೇವರಿಂದಲ್ಲಿ ಕೀರ್ತಿಸಿಕೊಂಡು ಭಾವಕಿ ದೇವಕಿ ವಸುದೇವನಲ್ಲಿ ಪಿತೃ ಗೋಪಿ 13 ಶಿಶುರೂಪವ ತೋರಿದ ಬೊಮ್ಮನ ಕಂಡು ವಸುದೇವಗೆ ನದಿ ಎಡೆ ಬಿಡೆ ಸಾಸಿರನಾಮ ಚಿತ್ರವಾಗಿದ್ದ ಜಗ- ಗೋಪಿ 14 ಪಾಲಗಡಲಲ್ಲಿ ಪವಡಿಸಿಪ್ಪನ ಕಾಲಮೇಲೆ ಮಲಗಿಸಿಕೊಂಡು ನೀಲಮೇಘಶ್ಯಾಮಯೆಂದು ಬಣ್ಣಿಸುತಲಿ ಗೋಪಿ 15 ಆದಿದೇವನು ಬ್ರಹ್ಮಸೂತ್ರವ ಕಲ್ಪಿಸಿ ವೇದ ವಿಭಾಗವ ಮಾಡಿದನ ಆದರದಿಂತುಂತೆಂದು ಕಲಿಸಿ ಸಂ ಗೋಪಿ 16 ಭಾನುಶತಕೋಟಿತೇಜಪ್ರಕಾಶನ್ನ ಆನಂದವನೆ ನೋಡಿ ಮನ ಉಬ್ಬಿ ಆನಂದನಿಧಿಯ ತೊಡೆಯ ಮ್ಯಾಲೆಯಿಟ್ಟು ಗೋಪಿ 17 ಶೃಂಗಾರನಿಧಿಯನ್ನು ಬಾಯೆಂದು ಕರೆದು ರ- ಥಾಂಗಪಾಣಿಯನೆ ಎತ್ತಿಕೊಂಡು ತಿಂಗಳನೋಡಯ್ಯ ಕಂದ ಎಂದಾತನ ಗೋಪಿ 18 ಸನ್ನಕಾದಿಗಳಯ್ಯನ ಪಿತನ ಕರೆ ದೆನ್ನ ಮಾಣಿಕವೆಯೆಂದಪ್ಪಿಕೊಂಡು ಹೊನ್ನ ತಾ ಗುಬ್ಬಿಯೆಂದಾಡು ಎನ್ನಯ್ಯನೆ ಗೋಪಿ 19 ಗಂಭೀರವಾರಿಧಿಗೆ ಅಂಬಾ ಹೂಡಿದ ತೋಳು ಇಂದಿರೆಯನೆ ಅಪ್ಪಿದ ತೋಳು ಶಂಭರಾರಿಯ ಪಿತ ತೋಳನ್ನಾಡೈ ಎಂದು ಗೋಪಿ 20 ಪಾದ ಉ- ದ್ದಂಡ ಬಲಿಯಮೆಟ್ಟಿದ ಪಾದ ಪುಂಡರೀಕಾಯತವಾದ ಪಾದದಿ ಪ್ರ- ಗೋಪಿ 21 ನಿತ್ಯತೃಪ್ತನು ಹಸ್ತ (ಸಿದ?) ನೆಂದೆನುತಲೆ ಇತ್ತ ಬಾ ಹೊರೀಯೆಂದಾದರಿಸಿ ಹೊತ್ತಾರಿಂದಮ್ಮೆ ಉಣ್ಣದಿರಲು ಹೊಟ್ಟೆ ಗೋಪಿ 22 ಅಮ್ಮೆ ಉಂಬುವ ಪುಟ್ಟ ಬಾಯ ಮುದ್ದಿನ ಮಾ ರಮ್ಮೆಯನರಸುವನಚ್ಚರಿಯ ಅಮ್ಮೆ ನೋಡಿ ನಗುವ ಮುದ್ದು ಬಾಲಕನ ಪರ ಗೋಪಿ 23 ತಾಯ ಮೊಗವ ನೋಡುತ್ತಾಕಳಿಸುತ ಬಾಯಲ್ಲೀರೇಳುಲೋಕವ ತೋರೆ ಆಯತೆ ನೋಡಿ ಮರಳಿ ಕಂಗೆಟ್ಟು ವಿಶ್ವ- ಗೋಪಿ 24 ಜ್ಞಾನಘನನ ವಿಶ್ವತೋನಯನನ ಆನಂದಚರಿತ್ರನ ಅವ್ಯಕ್ತನ ಜ್ಞಾನಿಗಳ ಹೃತ್ಕಮಲದೊಳಿಹನ ಕಣ್ಣಮುಚ್ಚಿ ಗೋಪಿ 25 ಹಾಲ ಹರವಿಯ ಒಡೆದು ಬಂದು ಗೋ- ಪಾಲ ನೀನೆಲ್ಲಿಗೆ ಪೋದೆಯೆಂದು ಕಾಲಕರ್ಮಂಗಳಿಗೆ ಕಾರಣವಾದೋನ ಗೋಪಿ 26 ಜಗದುದರ ಜಂಘಿಸುತ ಅಡಿಯಿಡೆ ಮೃಗಲೋಚನೆ ಮೈಮರೆದಿರೆ ಅಗಣಿತಮಹಿಮನು ಚರಿಸುತ ಬರ ಗೋಪಿ 27 ಆಮ್ಮಹಾ ಮತ್ತಿಯ ಮರನ ಮುರಿದು ಸುರರು ಜಯವೆನ್ನೆ ಶ್ರೀಮಣಿ ಶಿವರಿಂದ ಕೀರ್ತಿಸಿಕೊಂಬ ಗೋಪಿ 28 ಕತ್ತಲೆಯೊಳಗಿದ್ದು ಅಂಜಿದ ಮಗನೆಂದು ಶ್ರುತಿಮಂತ್ರಗಳಿಂದುಚ್ಚರಿಸಿ ಮೃತ್ಯುಂಜಯನ ಪಿರಿಯನೆತ್ತಿಕೊಂಡು ಗೋಪಿ 29 ಶೇಷಶಾಯಿಯ ಹಾಸಿ ಮಲಗಿಸಿ ಚಾರು- ವೇಷನ್ನ ನಿದ್ರಿಗೈಸುವೆನೆಂದು ಸಾಸಿರಮುಖಭೂಷಣನ ಪಾಡುತ್ತ ಸಂ- ತೋಷದಿ ಮೈಮರೆದಳೆ ಗೋಪಿ30 ತ್ರಿಗುಣಾತೀತನ್ನ ಪೊಂದೊಟ್ಟಿಲೊಳ್ಮಲಗಿಸಿ ಜೋಗುಳ ಪಾಡುವ ಯಶೋದೆÉಯ ಎಸೆವ ನೀಲವಸ್ತ್ರನು ಪಾಡೆನ್ನೆ ಕೃಷ್ಣ ಅನು- ಗೋಪಿ 31 ಹರಿಯ ಹೊರಿಸುವಳಲ್ಯಲ್ಲಿ ನಿಮ್ಮಣ್ಣ ವರ ಸಿಂಹಾಸನವಾಗಿಪ್ಪನೆಂದು ಸಿರಿಯಕೂಡೇಕಾಂತದಲಿಪ್ಪನ್ನ ಗೋಪಿ 32 ಪಾದ ನಿಮ್ಮಣ್ಣನ ಶಿರದಲೊಪ್ಪಿದೆÀಯೆಲೆ ಕಂದ ಸುರವರರ ಭಾಗ್ಯನಿಧಿಯೆ ಬಲರಾಮ ಗೋಪಿ 33 ಕಣ್ಣಮುಚ್ಚಿದ ಕೃಷ್ಣನೆಂದು ತೊಟ್ಟಿಲ ಬಿಟ್ಟು ಪುಣ್ಯಾಂಗನೆ ಮೈಮರೆದಿರೆ ಅಣ್ಣ ಆಶನು ಬೆಣ್ಣೆಯ ಕಳಹೋದ ಚಿಣ್ಣನ ಕಾಣೆನೆಂದಳೆ ಗೋಪಿ34 ನೀಲಾಂಬರನ ಬೆನ್ನ ಮೆಟ್ಟಿ ನೆಲವಿನ ಮ್ಯಾಲಿನ ಬೆಣ್ಣೆಯ ಮೆಲ್ಲೆ ಕೃಷ್ಣ ಬಾಲಕಿಯರು ಕೂಡಿ ಕಳ್ಳ ಸಿಕ್ಕಿದನೆಂದು ಗೋಪಿ 35 ಹುಟ್ಟ್ಟದ ಬೆಳೆಯದ ಹಸುಳೆ ಅಣ್ಣನ ಬೆನ್ನ ಮೆಟ್ಟಿ ನೆಲವು ಜಗ್ಗಿದನೆಂದು ರಟ್ಟು ಮಾಡಿದಿರೆಲ್ಲ ನೋಡಿರವ್ವಾ ಎನ್ನ ಗೋಪಿ 36 ಕಂದನ ಎತ್ತಿಕೊಂಡು ರಾಜ್ಯದಂಗನೆಯರ ಮಂದಿರವನೆ ಪೊಕ್ಕು ಬರುತಿರೆ ಒಂದೊಂದು ಕೌತುಕವನೆ ಕಂಡಾನಂದ ಗೋಪಿ 37 ಶಶಿಮುಖಿಯಂಗಳದ ಹಾಲಹಳ್ಳ ಮೊಸರ ಮಡುವು ಬಾಗಿಲ ಮುಂದೆ ಪ್ರಸಾದವೆಲ್ಲ ಬೆಣ್ಣೆ ಫಲಿತವಾಗಿರೆ ಗೋಪಿ 38 ವಾರಿಧಿಯೊಳಗಿದ್ದ ಪನ್ನಗಶಾಯಿಯ ತೇರ ಮೇಲೆ ಇದ್ದ ಬಾಲಕನ ಮೂರುತಿ ಒಂದೆಂಬೋ ಅ- ಗೋಪಿ 39 ದ್ರೌಪದಿಗಕ್ಷಯವಿತ್ತನ ಗುರು ಸಾಂ- ದೀಪಗೆ ಸುತನ ತಂದಿತ್ತನ ಪ್ರೀತಿಯಿಂದಲಿ ಯಜ್ಞಪತ್ಯರಿಗೊಲಿದ ಸುಪ್ರ- ಗೋಪಿ 40 ಘಾತಪುತ್ರರ ಆರು ಮಂದಿಯ ತರಹೇಳಿ ಮಾತೆಯೆಚ್ಚರಿಸೆ ಅಂಗೀಕರಿಸಿ ಅತಿ ಬೇಗದಿಂದಣ್ಣನ ತಂದು ತೋರಿದ ಅ- ಗೋಪಿ 41 ಭಕುತ ಶ್ರುತದೇವ ಬಹುಳಾಶ್ವರಾಯಗೊಲಿ ದೇಕ ಕಾಲದಿ ರೂಪೆರಡಾಗಿ ಆ ಕರುಣಾಬ್ಧಿಯ ಮಾಯಾರೂಪಿÀನ ಪರಿ- ಗೋಪಿ 42 ಪೂತನಿ ಶಕಟವತ್ಸಾಸುರ ವೃಷಭÀನ ಪಾತಕಿ ಚಾಣೂರ ಕುಂಜರನ ಘಾತಿಸಿ ಕಂಸನ್ನ ರಂಟೆಯಾಡಿದ ಬಲು ಭೂತನ್ನ ಮಗನೆಂದಳೆ ಗೋಪಿ43 ಬಾಲತನದಲ್ಲಿ ಸಖನಾಗಿ ಬಂದು ಕು- ಚೇಲ ತಂದವಲಕ್ಕಿಯ ಧರಿಸಿ ಮೇಲುತನದಿಂದ ಸೌಭಾಗ್ಯವಿತ್ತ ಶ್ರೀ ಲೋಲನ್ನ ಮಗನೆಂದಳೆ ಗೋಪಿ&ಟಿbsಠಿ
--------------
ವಾದಿರಾಜ
ಅಯ್ಯಾಜಗದಯ್ಯಾ ಪ ಅಯ್ಯಾ ಜಗದಯ್ಯಾ ಜೀಯಾನಂದ ನಿಮ್ಮ ಮಹಿಮೆಯ ಅಜ ಭವಾದಿಗಳಿಗೆ ತಾಯಿಯ ಮರೆವ ಶಿಶುವಿನ ಪರಿದಣಿದೆನಾ ಪ್ರೀಯದಲಿ ಸಲಹವು ಅವಗುಣ ನೋಡದೇ 1 ಧರೆಯೊಳಗ ಸಕಲಪತಿತರನ್ನು ಉದ್ಧರಿಸಲ್ಕೆ ಪರಬೊಮ್ಮತಾನೊಂದು ರೂಪನಾಗಿ ಕರುಣದಿಂದಲಿ ಅವತರಿಸಿದನೆಂದೆನ್ನದೆ ನರನೆಂದು ಬಗೆವವನು ಗುರುತಲ್ಪಕಾ2 ಸಾಕಾರ ನಿಮೈಲನಾಗಿ ಕ್ರೀಡಿಸಿದರೆಯು ಏಕ ಮೇವಾದ್ವಿತಿಯು ಶೃತಿಯೆನುತಿರೇ ಕಾಕು ಬುದ್ದಿಯಲಿ ಪರತರ ವಸ್ತು ನಿಮಗೆಂದ ಧಿಕ ಉಂಟೆಂಬುವ ಸುರಾಪಾನಿಯು 3 ಗಗನದಂದಲಿ ಸಕಲಾತೀತನಾಗಿನೀ ಮಿಗಿಲೆನಿಸಿ ಸಂಸಾರ ಸ್ಥಿತಿಯಲಿರಲು ಅಗಣಿತತೆ ಗುಣಬಂದನವ ಕಲ್ಪಿಸುವ ಜಗದೊಳಗ ಬ್ರಹ್ಮತ್ಯಕಾರನವನು 4 ಎನಗ ತಾರಕ ವಸ್ತು ಇದೆಯೆಂದು ನಿಶ್ಚೈಸಿ ತನು ಮನರ್ಪಿಸಿ ನಿಮ್ಮ ಚರಣಾಬ್ಜಕೆ ಘನನಂಬಿ ಶರಣವನು ಪೊಕ್ಕುನೆಲೆಗೊಂಬುದಕೆ ಅನುಮಾನ ವಿಡಿವವನ ಸ್ವರ್ಣಸ್ತೇಯಾ5 ಇಂತು ಪರಿಯಾದಾ ನಾಲ್ವರ ಸಂಗಡದಲಿ ಅ ತ್ಯಂತ ಹರುಷದ ತಾವ ಬಾಳುತಿಹನು ಅಂತಿಜನ ಸಮನಾದ ಸರ್ವದ್ರೋಹಿಯವನು ಸಂತತ ಬುಧ ಜನರು ಯನುತಿರುವರು 6 ಎಂದೆಂದು ಈ ಪಂಚ ಮಹಾಪಾತಕಿಳಗಳ ಮುಖ ತಂದೆ ತೋರಿದಿರೆನ್ನ ನಯನಗಳಿಗೆ ಎಂದು ಬಿಡದೇ ಕಾಯೋ ಮಹಿಪತಿ ಸುತ ಪ್ರಾಣ ಛಂದದಲಿ ಮಂದಮತಿ ತನ ಹರಸಿಯನ್ನಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅರವಿಂದ ನೇತ್ರಾನಂದ ಗೋವಿಂದಾ ವರನಂದ ಕಂದಾ ಪೊರೆಯೈ ಮುಕುಂದಾ ಪ ಶ್ರೀಲಲಾಮ ರಾಮ ಬಾಲಕ ಸುಪ್ರೇಮಾ ಕಾಲಕಾಲಭೀಮ ಲೋಲ ರಂಗಧಾಮಾ 1 ಮಾನುಷಾವತಾರ ದೀನಪಾಲ ಶೂರ ಮಾರ ದಾನವ ಸಂಹಾರ 2 ಗಜರಾಜ ವರದ ಅಜಸುರ ವಿನೋದ ಭಜಕ ಹೃದಯಾಹ್ಲಾದ | ವಿಜಯ ಪದ್ಮಪಾದ 3 ಮಡುವಿನೊಳಿಹೆನಯ್ಯ ಪಿಡಿಯೆನ್ನ ಕೈಯ ಮೃಡನುತಾ ರಂಗಯ್ಯ ಪೊಡವಿಯರಸ ಜೀಯ 4 ವಾಮದೇವ ನುತ ಭೂಮಿಜಾಸೇವಿತ ರಾಮದಾಸನುತ ಕೋಮಲಾ ದಯಾಭರಿತ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಅರಿ ನಿನ್ನ ನಿಜವಾ ಆನಂದಘನವಾ ಚೈತನ್ಯದಿರವಾ ಮರಣರಹಿತವಾ ಆತ್ಮಾನುಭವ ಪ ಮನವಾಣಿ ಮೀರಿ ತನು ಮೂರ ಮೀರಿ ಕಲ್ಪನ ತೀರೀ ತಾ ನಿರ್ವಿಕಾರಿ ಅದೇ ನೀನು ತಿಳಿಯೈ ಇದು ನೀನಲ್ಲ 1 ಜಗವಿದು ಕನಸೋ ಪುಸಿಯೆಂದೆಣೆಸೋ ಮನದಿ ವಿವೇಕವ ಮಾಡಿ ನಿಶ್ಚಯಿಸೋ ಶಂಕರಬೋಧಾ ಇದುವೇ ಮೋದಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಅರಿ ನೀನೆ ವೇಲಾಪುರಿ ಶ್ರೀ ಚನ್ನರಾಯಾ ಪ ಪೊಳೆವ ನಂದನವನದಲಲರ್ದ ಮಾವಿನ ನೆಳಲ ಲಲರುವಾ ಸಿರಿತೋಳ ತಲೆಗಿಂಬನೊರಗೀ ಅಳಿಯ ಮೃದುಗಾನಕ್ಕೆ ತಲೆದೂಗುತಲೆ ನುಡಿದ ವಿಲಸಿತದ ಸರಸ ವಚನವ ಚೆನ್ನರಾಯಾ 1 ಬೆಳದಿಂಗಳೆರಕದಂದದ ಸಾರದ್ಹಂದರದಿ ಪೊಳೆವಿಂದುಕಾಂತದ ಜಗುಲಿಯೊಳೆನ್ನ ತಲೆಯ ಮಗ್ಗಲನೊರಗಿ ಸುಳಿವೆಲರಗಾಳಿಗಂಜಿಸುತ ಕಲೆಯರಿತು ಮೈಮರಸಿದುದ ಚನ್ನರಾಯಾ 2 ತನುಮಿಸುಕೆ ಬಹುವಿಧದಿ ಧ್ವನಿಗೈವ ಶಕುನಿ ಪೆಸ- ರಿನ ಮಂಚದಲಿ ಹಂಸತೂಲ ತಲ್ಪದಲಿ ಮನಸಿಜಾಗಮವರಿತು ಮನವ ಮೆಚ್ಚಿಸಿದೆ ಎ- ನ್ನಿನಿಯ ಶ್ರೀ ವೈಕುಂಠಪತಿ ಚೆನ್ನರಾಯಾ 3
--------------
ಬೇಲೂರು ವೈಕುಂಠದಾಸರು
ಅರಿತ ಗುರುಗಳನೀಗ ಹುಡುಕಿ ಹೊಂದು ಎಚ್ಚರಿಂದುಮರುಳ ಗುರುಗಳನೀಗ ಸೇರೆ ನರಕ ತಪ್ಪದೋ ಪ ಒಳ್ಳೆ ನಾವೆಯೊಳು ಕಲ್ಲು ಹಾಕಿ ನದಿಯನು ದಾಟಿಪುದುಕಲ್ಲಿಗೆ ಕಲ್ಲು ಕಟ್ಟಿ ಮುಂದೆ ನಡೆಯದು ಮುಳುಗಿಹೋಗುವುದೋ1 ಜಾರುವವನ ಕಾಲು ಹಿಡಿಯೆ ಜಾರುತ ನೀನು ಬೀಳುವೆಪೋರ ಗುರುವ ನಿಂತು ಸೇರೆ ಕೆಟ್ಟುಹೋಗುವೆ ಭವಕೆ ಸೇರುವೆ2 ತಾನು ಮೂರ್ಖ ಮೂರ್ಖನ ಕೂಡಲು ಇಹುದು ಕೇಡು ಮುಂದೆಜ್ಞಾನಿ ಚಿದಾನಂದ ಬಗಳೆ ಚರಣ ಹೊಂದೆ ಮುಕ್ತಿಯ ಅಂದೇ3
--------------
ಚಿದಾನಂದ ಅವಧೂತರು
ಅರಿತು ಕೊಳ್ಳಿರೊ ಬ್ಯಾಗ ಹರಿಯ ನಾಮಮೃತ ದೊರಕುವದಲ್ಲಿದು ನೋಡಿ ಸರ್ಕನೆ ಸರ್ವರಿಗೆಲ್ಲಾ ಧ್ರುವ ಗುರುಕರುಣ ಕೃಪೆಯಿಂದ ಪರಮ ದಿವ್ಯಾಮೃತವು ಸುರಿಸುರಿದು ಚಪ್ದರಿಸು ಸೂರ್ಯಾಡಿ ಸಾರಸವ 1 ಅನುದಿನ ಸೇವಿಸುವ ಅನುಭವಿಗಳೂಟ ಏನೆಂದು ಸುರಲಿ ನಾ ಆನಂದೋಬ್ರಹ್ಮವಾ 2 ಮಾನವ ಜನ್ಮ ಚಂದ ಮಾಡಿಕೊಳ್ಳಿರೊ ಬಂದ ಕೈಯಲಿ ಬ್ಯಾಗ 3 ಆಲಸ್ಯ ಮಾಡಬ್ಯಾಡಿ ವಾಲ್ಗೈಸಿಕೊಳ್ಳಲಿಕ್ಕೆ ಸುಲಲಿತವಾಗಿಹುದು ತಿಳಿದುಕೊಂಬವರಿಗೆ 4 ಇರಳ್ಹಗಲ ಪೂರ್ಣ ಸುರವುತಿಹ ಅಮೃತ ತರಳ ಮಹಿಪತಿ ಪ್ರಾಣ ದೊರೆವ ಸಂಜೀವನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅರಿತು ನೀ ಸಾಧಿಸು ಘನಪರಮಾರ್ಥಾ ಪ ಭೇದವರ್ಜಿತನಾಗಿ ಸ್ವಾದ ಸೇವಿಸಬೇಕು ಪಾದ ತೀರ್ಥಾ 1 ಭಕ್ತಿಭಾವಾರ್ಥ ವಿರಕ್ತಿಯಿಂದಾಗಬೇಕು ಮುಕ್ತಿಮಾನಿನಿಗೆ ತಾಂ ಕರ್ತಾ 2 ವರಸಚ್ಚಿದಾನಂದ ಬ್ರಹ್ಮದಿಂದೆಸೆವ ಗುರುವಿಮಲಾನಂದ ಸಮರ್ಥಾ 3
--------------
ಭಟಕಳ ಅಪ್ಪಯ್ಯ
ಅರಿತು ಭಜಿಪರ್ಯಾರಯ್ಯ ರಂಗಯ್ಯ ನಿನ್ನ ಪ ಸಿರಿದೇವಿಯು ಕಿರುಬೆರಳಲ್ಲಿರುವ ಸೊಬಗನ್ನುಅರಿಯಲಾರಳೊ ದೇವಅ ಇಂದಿರಾದೇವಿಯು ಅರಿಯಲಾರಳು ದೇವಬೃಂದಾರಕರೆಲ್ಲ ನಿಂದು ಯೋಚಿಪರುನಂದತೀರ್ಥರ ಮತದೊಳಗೆ ಬಂದವರೆಲ್ಲಎಂದಿಗಾದರು ಪರಮಾನಂದ ಪೊಂದುವರು1 ಮಾನವರು ಹೀನಮಾರ್ಗದೊಳು ಮುಳುಗಿಹರುಜ್ಞಾನಿಗಳು ನಿಂದು ಧ್ಯಾನಿಪರು ನಿನ್ನನೀನೆ ದಯಮಾಡಿ ಸಲಹೊ ಎನ್ನನು ಕೃಷ್ಣಕಾನನದೊಳು ಕಣ್ಣುಮುಚ್ಚಿ ಬಿಟ್ಟಿಹರೊ 2 ಜಲದೊಳಗಿನ ಕಪ್ಪೆ ಜಲದ ಸವಿಯರಿಯದುಜಲದ ಸುಗಂಧವ ಜಲವರಿಯದುನೆಲೆಯ ಕಂಡವರ್ಯಾರು ನೆಲೆಯಾದಿಕೇಶವನೆಸುಲಲಿತ ತತ್ತ್ವವನು ಸುಲಭ ಮಾರ್ಗದಿ ತೋರೊ 3
--------------
ಕನಕದಾಸ
ಅರಿತುಕೊಳ್ಳಿರೋ ನಿಮ್ಮ ಆತ್ಮವಸ್ತುವನುಪರಮ ಗುರು ಕರುಣದಿ ನೀವು ನಿಮ್ಮನು ಪ ಬಿದಿಗೆ ಚಂದ್ರನು ಆವುದೆಂದು ಕೇಳಲಿಕೆಅದಕೋ ಶಾಖಾಗ್ರ ಎಂದೆನಲು ಅರಿದಂತೆವಿಧಿಸಿ ಗುರುಮುಖದಿ ವಿವರಿಸಿ ಕಂಡು ಅರಿದುಸದಯಲಾನಂದ ತಾವೆಂದು ಭಾವಿಪುದು 1 ಊರು ಆವುದು ಎಂದು ಕೇಳುತಿರಲಿಕೆಊರದಕೋ ಗುಡ್ಡದ ಮೇಲೆನಲು ಅರಿದಂತೆಧೀರ ಗುರು ಮುಖದಿ ದಿಟ್ಟಿಸಿ ಕಂಡು ಅರಿತುಸಾರ ಸಂಪತ್ತು ತಾವೆಂದು ಧ್ಯಾನಿಪುದು 2 ಅರಸು ಅವನು ಎಂದು ಕೇಳುತಿರಲಿಕೆಅರಸ ಅಲ್ಲಿಹನೆಂದು ನಡೆವವನೆ ಅರಿತಂತೆಪರಮ ಗುರು ದಯದಿ ಪಾಟಿಸಿ ಕಂಡು ಅರಿದುಪರಮ ಗುರು ಚಿದಾನಂದ ತಾವೆಂದು ಭಾವಿಪುದು 3
--------------
ಚಿದಾನಂದ ಅವಧೂತರು
ಅರಿವರಾರೆಲೋ ನಿನ್ನ ಅಗಮ್ಯ ಚರಿತ ಚರಣದಾಸರ ಪರಮ ಆನಂದಭರಿತ ಪ ದೇವರುಂಟೆಂಬ ಕೆಲವಾಧಾರಪುಟ್ಟಿಸಿದಿ ದೇವರಿಲ್ಲೆಂಬ ಹಲವು ಆಧಾರ ತೋರಿಸಿದಿ ಜೀವಬ್ರಹ್ವೈಕ್ಯೆಂಬುಪಾಯಗಳ ಸ್ಥಾಪಿಸಿದಿ ಆವರೀತಿಗು ಕಾವದೇವ ನಾನೆಂದಿ 1 ಜೀವವೆ ಮಾಯೆಯೆಂದು ಕಾಯವೆ ಕರ್ಮವೆಂದು ಭಾವಿಗಳ ಕೈಯಿಂದ ಬರೆಸಿದೆಯೋ ನಿಂದು ಜೀವಜೀವರಲಿ ಜಡ ಜೀವ ಬೇರೆನಿಸಿದಿ ಜೀವಜೀವರ ಜೀವ ಚೈತನ್ಯರೂಪ 2 ವೇದ ಸುಳ್ಳೆಂಬ್ಹಲವು ವಾದಿಗಳ ನಿರ್ಮಿಸಿದಿ ವೇದ ಅಹುದೆಂಬ ನಿಜವಾದಿಗಳ ಪುಟ್ಟಿಸಿದಿ ನಾದಬ್ರಹ್ಮವುಯೆಂಬ ಹಾದಿ ರಚಿಸಿದಿ ಸರ್ವಸಾಧನಕೆ ಒಲಿದು ಪ್ರಸನ್ನ ನೀನಾದಿ 3 ಬಗೆಬಗೆಯ ವಚನದಿಂ ಬಗೆಬಗೆಯ ನಿಗಮದಿಂ ಬಗೆಬಗೆಯ ರೂಪದಿಂ ನಿಗವಿಟ್ಟು ಸರ್ವರನು ಬಗೆಗೊಂಡು ಬೆಳಗುವೆಯೊ ಜಗಭರಿತನಾಗಿ 4 ಅವಸಾಧನವೊಲ್ಲೆ ಜಾವಜಾವಕೆ ನಿಮ್ಮ ದಿವ್ಯಸ್ಮರಣೆಯ ಎನ್ನ ಭಾವದೊಳು ನಿಲಿಸಿ ದೇವದೇವರ ದೇವ ದೇವ ಶ್ರೀರಾಮ ತವ ಸೇವಕನೆನಿಸೆನ್ನ ಕಾಯೊ ಕೈಪಿಡಿದು 5
--------------
ರಾಮದಾಸರು
ಅರಿವಿನ ಅರಿವಾ ತಿಳಿ ಜೀವಾ ಆನಂದರೂಪದ ಸಿರಿಯಾ ಅದೇ ನೀನು ಜೀವಾ ಜೀವಾ ಅದೇ ನೀನು ಜೀವಾ ಪ ಅನಿಸಿಕೆಯಡಗಲು ಉಳಿಯುವ ಸತ್ಯವೆ ನೀನಿಹೆ ನೀನಿಹೆ ಮನಸಿನ ತೋರಿಕೆಅಡಗುವಿಕೆಗಳಿಂ ಬೇರಿಹೆ ಬೇರಿಹೆ ಈ ನಾನೆಂಬುದು ಮನಸಿನದು ಆನಾನೆ ನೀನಾಗಿರುವಿ ಅದೇ ನಿಜವು ಜೀವಾ 1 ಪರಿ ನೋಡು ನೀ ನೋಡು ನೀ ನಾನಾವಿಧಗಳು ಪುಸಿಯಾಗಿಹವೈ ದೂಡು ನೀ ದೂಡು ನೀ ಆನಂದಾತ್ಮನೆ ನೀನಿರುವೀ ಆನಂದದಿಂದಲಿ ತಿಳಿಯೈಶಂಕರಾನಂದಬೋಧಾ ತಿಳೀನೀನೆ ನಿನ್ನೋಳ್ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಅರುಣಾನುಜ ವೈರಿಯಾ ಭರಣನ ಮಿತ್ರನ ತೋರೇ ಪ ಉರಗಾ ಹರಿಧ್ವಜಪಿತನಾ | ಅರಿಪಿತ ಸಂಹಾರಕನಾ | ಗಿರಿಜಾವಲ್ಲಭರಿಯನಾ | ಶರಗರ್ಭನನುತನ ತೋರೆ 1 ಶೂರರಾಯನಂದನಾ | ಅರಸಿ ಯಣ್ಣನ ಮದನನಾ | ಮೈರೋಚನ ಆತ್ಮಜನಾ | ವರದನ ತಂದು ತೋರೆ 2 ಗಿರಿ ರಿಪುತನು ಸಂಭವನಾ | ಅರಸಿಯಣ್ಣನನುಜನಾ | ಗುರುವರ ಮಹಿಪತಿ ಪ್ರೀಯನಾ | ಹರಿಣಾನೇತ್ರನೀ ತೋರೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅರೋಗಣೆಯ ಮಾಡೋ ವಾರಿಜರಮಣಾ| ಸಾರಿದವರಿಗೆ ಅಭಯವನೀವಕರುಣಾ ಪ ಪೊಂಬ್ಹರಿವಾಣದಿ ರನ್ನಬಟ್ಟಲುಗಳು| ಅಂಬುಜಾನನರಿಸಿ ಲಕುಮಿಯವೆರಸಿ 1 ಪರಿಪರಿ ಮಾವಿನ ತನಿವಣ್ಗಳ ನೋಡಿ| ಮೆರೆವ ಸುದ್ರಾಕ್ಷ ದಾಳಿಂಬರ ಸವಿಯಾ 2 ಶಾಲ್ಯೋದನ್ನದಿ ಸುಘೃತ ಪರಿಪರಿಯ ವಿ| ಶಾಲ ಶಾಖಂಗಳ ಸವಿಯನೆ ಕೊಳುತಾ 3 ಪಂಚ ಭಕ್ಷ್ಯವು ಕೆನೆವಾಲು ಸೀಕರಣಿಯು| ಮುಂಚೆ ಶರ್ಕರದ ಪಾಯಸ ಪರಿಪರಿಯ 4 ದಧ್ಯೋದನ್ನದಲುಹಗಾಯಿ ಸ್ವಾದಿಸುತಾ| ಸದ್ವಿದ್ಯದ ಮನ ಕಲ್ಪತರುವೆಲ್ಲಾ 5 ಪತ್ರಸುಮನ ಫಲತೋಯಭಕ್ತರುಕೊಟ್ಟ| ರರ್ಥಿಲಿ ಕೊಂಬೊ ದಯಾಳುತನದಲ್ಲಿ6 ತಂದೆ ಮಹೀಪತಿ ನಂದನ ಸಾರಥಿ| ಎಂದೆಂದು ಸ್ಮರಣೆಗೊದಗಿ ಮುದ್ದು ಮುಖದಿ7
--------------
ಕಾಖಂಡಕಿ ಶ್ರೀ ಕೃಷ್ಣದಾಸರು