ಒಟ್ಟು 672 ಕಡೆಗಳಲ್ಲಿ , 89 ದಾಸರು , 554 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮಪುರುಷ ಪಾಲಿಪುದೈ ಸರಸಿಜಾಕ್ಷ ಸರ್ವರಕ್ಷ ಪ ಮಗುವಾದ ಧ್ರುವನು ಅಗಣಿತಗುಣ ನಿನ್ನನು ಹಗಲಿರುಳೂ ಮೃದುಪದವಂ ಬಿಗಿದಪ್ಪುತ ಧ್ಯಾನಿಸೆ 1 ಯೋಗಿಜನಾನಂದಕನೆ ಬೇಗದಿ ಮೈದೋರುತಲಿ ಭಾಗವತಪ್ರಿಯಪದವಂ ರಾಗದಿತ್ತೆ ಜಾಜೀಶ 2
--------------
ಶಾಮಶರ್ಮರು
ಪರಿಪರಿಯಲಿ ನೀ ಪಾಲಿಸೋ ನರಹರಿಯೆ ನಾನಾಪರಾಧಿ ಶ್ರೀ ನರಹರಿಯೇ ನಾನಪರಾಧಿ ಪ ಸತಿಸುತರು ಹಿತದವರೆಂದರಿತು ನಾ ಮತಿಯಗೆಟ್ಟು ಕ್ಷಿತಿಪತಿಯೇ ನಿನ್ನನು ಸ್ತುತಿಸದಾ ಅಪರಾಧಿ 1 ಪರ ನಿಂದೆಯಲ್ಲಿ ಗೋ- ವಿಂದ ನಿನ್ನನು ವಂದಿಸದಾ ಅಪರಾಧಿ 2 ತನುಮನಧನ ಕೊಟ್ಟಿರುವ ಶ್ರೀವರ ಹನುಮೇಶ ವಿಠಲನೆ ನಿನ್ನನು ನೆನೆಯದಾ ಅಪರಾಧಿ 3
--------------
ಹನುಮೇಶವಿಠಲ
ಪರಿಹರಿಸು ದಯಾನಿಧಿ ಶರಣರ ಸಂಕಟವಾ ಧರೆಯ ತಳದಿ ನಾ ಪರಮಧೀನನು ಮರೆಯದಿಯೋ ಪದವಾ ಪ ಜಲದೊಳಗೆ ಪೊಕ್ಕರೂ ನಿನ್ನ ಬಿಡುವನಲ್ಲಾ ಬಲುಬೆಟ್ಟದ ಬುಡದೊಳು ಕುಳಿತರು ಪಿಡಿವೆನಲ್ಲಾ ನೆಲವಿಡಿದು ಕೋರೆಯಲಿ ತೋರ್ದರು ಅರಿವೆನಲ್ಲಾ ಗಲವರೆಗೆ ಸಿಂಹಮೊಗ ಧರಿಸಿದರೂ ಸರಿ ಬೆಚ್ಚಿ ಬೆವರೋನಲ್ಲಾ 1 ಸರಿ ತಿರಕನಂತೆ ನೀ ತಿಳಿದರೂ ಬಿಡುವನಲ್ಲಾ ಕರತಳದಿ ಕೊಡಲಿಯ ಪಿಡಿದರೂ ಸರಿವನಲ್ಲಾ ನೆರೆ ಧರಿಸಿ ಜಟವನ ಪೊಕ್ಕರೂ ಬಿಡುವನಲ್ಲಾ ಕರದಿ ಚಕ್ರವ ಪಿಡಿದು ತೋರಲೆಂದೆಂದಿಗುಜ್ವಲನಲ್ಲಾ 2 ವಸನಗಳಿಲ್ಲದೆ ನುಸುಳನರಿದೆನಲ್ಲಾ ಎಸೆವ ಸಮತುರಗವೇರಿ ಪೋಗಲು ಬಿಡುವನಲ್ಲಾ ದಶರೂಪಿ ನಿನ್ನನು ಬಿಡುವ ಶರಣನಲ್ಲಾ ಕುಸುಮನಾಭ ಶಿರಿ ನರಸಿಂಹವಿಠ್ಠಲ ಆಲಿಸೆನ್ನ ಸೊಲ್ಲಾ 3
--------------
ನರಸಿಂಹವಿಠಲರು
ಪಾಂಡುರಂಗನೆ ಪಾಲಿಸೆನ್ನನು ಬೇಡಿಕೊಂಬೆನು ವರವ ನೀಡಯ್ಯ ನೀನು ಪ. ಸುರರು ನಿರುತ ನಿನ್ನನು ಬಿಡರು ಕರಗಳನೆ ಜೋಡಿಸುವರು ವರಗಳನೆ ನೀಡೆಂಬರು ಭರದಿ ಹದಿನಾಲ್ಕು ಜಗದ ಉದರದಿ ಇಂಬಿಟ್ಟ ಭೋಜ ಸಿರಿಸ್ತುತಿಗೆ ಸಿಲ್ಕ ರಾಜವರ ರವಿಶತರ ತೇಜ ಭೀಮರಥಿಯ ತೀರದಲ್ಲಿ ಮಹಾನಂದ ಭರಿತ ನಂದನ ಕಂದ ಪೂರ್ಣಸುಖವನ್ನೆ ಕೊಟ್ಟು ಅನುದಿನ ಸೇರಿಸೊ ವೈಕುಂಠ 1 ಇಂದು ನಾ ಮಾಡ್ದ ಪುಣ್ಯ ಬಂದು ಕೈಸೇರಿತಿನ್ನ ಸುಂದರಾಂಗನೆ ಎನ್ನ ಬಂಧ ಪರಿಹರಿಸಿ ಬೇಗದಿಂದ ಉದ್ಧರಿಸೋ ಈಗ ನಂದನ ಕಂದ ರಂಗ ಬಂಧುವೇ ಪಾಂಡುರಂಗ ಕಮಠ ವರಹ ವೇಷಧಾರಕನೆ ನಾರಸಿಂಹನೆ ದೈತ್ಯಸಂಹಾರಿ ಗಂಗಾಪದಧಾರಿ ಕ್ಷತ್ರಿಯ ಕುಲವೈರಿ ಪೊಗಳಲು ಜೀಯಾ ಶೇಷಗೊಶವಲ್ಲವಯ್ಯಾ 2 ಪುಟ್ಟ ಧ್ರುವರಾಯಗಿನ್ನ ಕೊಟ್ಟೆ ಸ್ಥಿರ ಪಟ್ಟವನ್ನ ಎಷ್ಟು ವರ್ಣಿಸಲಿ ನಿನ್ನ ಇಷ್ಟ ಫಲದಾಯಕನ್ನ ಇಟ್ಟಿಗೆ ಪೀಠನಿಲಯ ದಿಟ್ಟ ಶ್ರೀ ಕೃಷ್ಣರಾಯ ಕಷ್ಟಪರಿಹರಿಸು ಗೋಪಾಲಕೃಷ್ಣವಿಠ್ಠಲ ಜೀಯ ಪಾಡಲಿ ಹಗಲಿರುಳು ಕೊಡದಿರು ವಿಠ್ಠಲಯ್ಯ ಬಲವಂತÀ ರಕ್ಷಿಸೆನ್ನ ವಸಂತ ಶ್ರೀದ ಕೈಯ ಮುಗಿವೆ ಸರ್ವದಾ 3
--------------
ಅಂಬಾಬಾಯಿ
ಪಾದ - ಮೋದದಿ ಭಜಿಸಿದ ಮನುಜನೆ ಬಲು ಧನ್ಯನೋ ಪ ಬೋಧ ಪಾದ ಸೇವಕರಾದ ಮಹಸುಸ್ವಾದಿ ಪುರದೊಳು | ವೇದ ವಿನುತನ ಸ್ತುತಿಸಿ ಮೋದಿಪ ಅ.ಪ. ವಾಗೀಶ ಮುನಿಪ ಸದಾಗಮಜ್ಞನ ವರ | ವೇಗದಿಂದಲಿ ಫಲಿಸಲುಜಾಗು ಮಾಡದೆ ಗೌರಿ ತತ್ಪತಿ | ರಾಗ ರಹಿತರು ನಿನ್ನನೊಪ್ಪಿಸೆ |ರೋಗಹರ ಹಯವದನ ಪದವನು | ರಾಗದಿಂದಲಿ ಭಜಿಪ ಯತಿ 1 ತಿಮಿರ ತಾಮರಸ ಬೋಧ ಶಾಸ್ತ್ರವ | ಪ್ರೇಮದಿಂದಲಿ ಪೇಳ್ದಯತಿವರ 2 ಮೂರ್ತಿ ಪ | ರಾಕ್ರಮನಿಂ ತರಿಸೀಚಕ್ರಿಯನೆ ನಿಲಿಸ್ಯುತ್ಸವದಿ ಸುರಪನ | ವಿಕ್ರಮದ ಆಳ್ಬಂದು ಕರೆಯಲು |ಉತ್ಕ್ರಮಣ ತೊರೆದವರ ಕಳುಹುತ | ವಿಕ್ರಮನ ಪದಕೆರಗಿನಿಂದ3 ನಿಗಮವೇದ್ಯನ ಬಗೆಬಗೆಯಲಿ ಸಂಸ್ಕøತ | ಮಿಗಿಲು ಪ್ರಾಕೃತ ಪದ್ಯದೀಸುಗುಣಮಣಿಮಯ ಮಾಲೆಗಳ ಪ | ನ್ನಗನಗೇಶನ ಕೊರಳೂಳರ್ಪಿಸಿ |ಚಿಗಿ ಚಿಗಿದು ಆನಂದದಿಂದಲಿ | ದೃಗು ಜಲದಿ ಹರಿಪದವ ತೊಳೆದ 4 ಸುರನದಿ ನದಿಧರರಾದಿ ಸ್ಥಾಪಿಸುತಲ್ಲಿ | ಎರಡೆರಡೊಂದು ವೃಂದಾವನವಾ | ಸ್ಥಿರಪಡಿಸಿ ಶ್ರೀವ್ಯಾಸ ಸಮ್ಮುಖ | ವರ ನರೇಯಣ ಭೂತಬಲದಲಿಇರಿಸಿ ಗುರು ಗೋವಿಂದ ವಿಠಲನ | ನಿರುತ ಧ್ಯಾನಾನಂದಮಗ್ನ5
--------------
ಗುರುಗೋವಿಂದವಿಠಲರು
ಪಾದ ನನ್ನದಯ್ಯಾ ಚನ್ನಕೇಶವ ಪ ಲಕ್ಷ್ಮೀಕಾಂತ ಜಾಜಿಪುರೀಶ ನೀನೆ ಕಾಯಬೇಕಯ್ಯಾ ಅ.ಪ ಮನೆಯಾಸೆ ಬಲು ಬಾಧಿಸುತಿದೆ ತನು ಮಡದಿಮಕ್ಕಳ ಮೋಹವೆಂದಿದೆ ಮನದ ಚಪಲತೆ ಸಾಧಿಸು ತಂದೆ ಇನಿತಾಸೆ ಬಿಡಿಸು ಬುದ್ಧನಂತೆ 1 ನಿನ್ನನೆ ನೆನೆವಂತೆ ಮಾಡು ಕೇಶವನೆ ಜನ್ಮವಿದು ಸಾಕು ಕರೆಯೋ ಮಾಧವನೆ ನಿನ್ನ ಪಾದದಲಿಟ್ಟು ಪಾಲಿಸು ಮಧುಸೂದ ನನೆ ಜಾಜಿಪುರಿಯ ಕೇಶವ ಶೆಲ್ವಪಿಳ್ಳೆ 2
--------------
ನಾರಾಯಣಶರ್ಮರು
ಪಾದ ಮಾಡಿದೆನೆ ಸಾಷ್ಟಾಂಗ ಬೇಡಿದೆನೆ ಮನದಭೀಷ್ಟ ಪ. ನೀಡು ಕೊಲ್ಲಾಪುರದ ನಾಡಿಗೊಡೆಯಳೆ ಲಕುಮಿ ಮಾಡಮ್ಮ ಕೃಪೆಯ ಬೇಗಾ ಈಗಾ ಅ.ಪ. ಬಂದೆನೇ ಬಹುದೂರ ನಿಂದೆನೇ ತವಪದ ದ್ವಂದ್ವ ಸನ್ನಿಧಿಯಲೀಗ ವಂದನರಿಯೆನೆ ನಿನ್ನ ಚಂದದಿ ಸ್ತುತಿಪೊದಕೆ ಮಂದಮತಿಯಾಗಿಪ್ಪೆನÉೀ ತಂದೆ ಮುದ್ದುಮೊಹನ್ನ ಗುರು ಕರುಣ ಬಲದಿಂದ ಇಂದು ನಿನ್ನನು ಕಂಡೆನೇ ಮುಂದೆನ್ನ ಮಾನಾಭಿಮಾನ ನಿನಗೊಪ್ಪಿಸಿದೆ ಸಿಂಧುಸುತೆ ಪಾಲಿಸಮ್ಮಾ ದಯದೀ 1 ಉತ್ತರಾಯಣ ಪುಣ್ಯ ದಿನದಿ ನಿನ್ನನು ಕಂಡೆ ಮುಕ್ತರಾಧೀಶೆ ಕಾಯೆ ಉತ್ತಮಾಭರಣ ನವರತ್ನ ಪದಕವು ದಿವ್ಯ ನತ್ತು ಧರಿಸಿದ ಚಲ್ವಳೇ ಮುತ್ತೈದೆಯರು ಮತ್ತೆ ಭಕ್ತ ಸಂದಣಿ ಇಲ್ಲಿ ಎತ್ತನೋಡಲು ಕಂಡೆನೇ ಸತ್ಯ ಸಂಕಲ್ಪ ಶ್ರೀ ಹರಿಯ ಪಟ್ಟದ ರಾಣಿ ಚಿತ್ತಕ್ಕೆ ತಂದು ಕಾಯೆ ಮಾಯೆ 2 ರೂಪತ್ರಯಳೆ ನಿನ್ನ ವ್ಯಾಪಾರ ತಿಳಿಯಲು ಆ ಪದ್ಮಭವಗಸದಳಾ ಶ್ರೀಪತಿಯ ಕೃಪೆ ಯಿಂದ ಸೃಷ್ಟಿಸ್ಥಿತಿಲಯಗಳನು ವ್ಯಾಪಾರ ಮಾಳ್ಪ ಧೀರೆ ಕೃಪೆಯ ನೀ ಮಾಡದಲೆ ಉಭಯ ಸುಖವೆತ್ತಣದು ಭೋಪರೀ ನಂಬಿದರಿಗೆ ಗೋಪಾಲಕೃಷ್ಣವಿಠ್ಠಲನ ಹೃದಯದಿ ತೋರಿ ನೀ ಪಾರುಗೊಳಿಸೆ ಭವದೀ ದಯದೀ 3
--------------
ಅಂಬಾಬಾಯಿ
ಪಾದ ವಂದಿಸುವ ಎನ್ನ ಮಂದಿರದಲ್ಲಿ ನಿಲ್ಲೆ ಕೇಳುವದೆನ ಸೊಲ್ಲೆ ಪ ಭವ ಸಿಂಧೂವಿನೊಳು ಬಹು ನೊಂದು ನಿನ್ನ ಬೇಡಿಕೊಂಬೆ ಪಾಲಿಸು ಜಗದಂಬೆ1 ಇಂದಿರೇಶನರಾಣಿ ಮಂದಭಾಗ್ಯನ ಕರುಣ - ದಿಂದಲಿ ಎನ್ನ ನೋಡೆ ನೀ ನಲಿದಾಡೆ 2 ಮಂದಜಾಸನ ಜನನಿ ಸುಂದರ ಸುಗುಣಿ ನಿನ್ನ ಕಂದನು ನಾನಮ್ಮ ಶಿರಿಯೆ ನೀ ಸುಖ ಸುರಿಯೆ 3 ಎಂದಿಗು ಎನ್ನನು ಪೊಂದಿದ ಈ ಭವ ಬಂಧನ ಬಿಡಿಸೆಂದೆ ನಿನ್ನನು ಬೇಡಿಕೊಂಡೆ 4 ದಾತ ಗುರುಜಗನ್ನಾಥ ವಿಠಲನ ಪ್ರೀತಿಯಿಂದ ಎನಗೆ ತೋರೆ, ನೀ ಎನ್ನ ಮನೆಗೆ ಬಾರೆ 5
--------------
ಗುರುಜಗನ್ನಾಥದಾಸರು
ಪಾದಾವ ಕಂಡೆ ಕೇಶವ ಪಾದಾವ ಕಂಡೆ ಪ ಇಷ್ಟು ದಿನ ಕಷ್ಟಬಟ್ಟು ಶಿಷ್ಟ ಹೆಂಡತಿಯ ನೀಗಿ ಭ್ರಷ್ಟ ಮನಕೆ ತುಷ್ಟಿ ಇಲ್ಲದೆ ಇಷ್ಟ ಪುತ್ರರ ಕೂಡಿ ಬಂದು ಪಾದಾವ ಕಂಡೆ 1 ಬಡಲಾರದ ಭವಣಿ ಬಿಟ್ಟು ಕಡುಪಾಪಿ ಎಂದೆನಿಸಿಕೊಂಡು ಬಡತನದಲ್ಲೆ ಬಾಳಿಕೊಂಡು ಅಡಿಗಡಿಗೆ ನಿನ್ನನ್ನೆ ನೆನೆಯುತ ಪಾದಾವ ಕಂಡೆ 2 ಸರಿಬಂದದ್ದು ನೀನೇ ಮಾಡಿದಿ ಮರೆಯೆ ಹರಿ ನಿನ್ನುಪಕಾರ ಭರದಿ ಎನ್ನ ಕೈಯ ಪಿಡಿದು ಪೊರೆಯಯ್ಯ ನರಸಿಂಹ ವಿಠಲ ಪಾದಾವ ಕಂಡೆ 3
--------------
ನರಸಿಂಹವಿಠಲರು
ಪಾಮರ ಜನರಿಗೆಲ್ಲ ಪ ಕಾಮಮದ ಮತ್ಸರಗಳಿಂದಲಿ ತಾಮಸೌಘಕೆಅ.ಪ ಸ್ನಾನ ಮೌನ ಜಪತಪಗಳನರಿಯದೆ ಸ್ವಾಮಿ ನಿನ್ನನು ಮುಟ್ಟಿ ಪೂಜಿಸದೆ ಸೀಮೆಯರಿಯದ ಕಾಮಕರ್ಮದಿ ನೇಮವಿಲ್ಲದ ಕ್ಷುದ್ರಸ್ವಾರ್ಥದಿ ತಾಮಸರ ಸಂಸರ್ಗದಿಂದ ವಿ ರಾಮವರಿಯದ ಜನರ ಪಾಲಿಗೆ 1 ಜ್ಞಾನ ಭಕ್ತಿ ವೈರಾಗ್ಯಗಳರಿಯದೆ ಜ್ಞಾನಿಜನರ ಸಂಗವ ಬಯಸದೆ ಹೀನದುಷ್ಕರ್ಮಗಳ ಮಾಡುತ ನಾನು ತಾನೆಂಬ ಕೊಬ್ಬಿಲಿ ಜಾನಕೀಪತಿ ನಿನ್ನ ಮಹಿಮೆಯ ಕಾಣದಿಹ ದುಷ್ಕರ್ಮಿಜನರಿಗೆ 2 ಶ್ರೀನಿಧಿ ನೀ ಕರುಣಿಸಿ ರಕ್ಷಿಸದಿರೆ ದೀನಜನರ ಪಾಲಿಪರಾರೋ ಸಾನುರಾಗದಿ ಬೇಡಲರಿಯದ ಜ್ಞಾನಹೀನರ ತಪ್ಪನೆಣಿಸದೆ ನೀನೆ ಕೈಪಿಡಿದೆತ್ತಿ ರಕ್ಷಿಸು ಮಾನನಿಧಿ ರಘುರಾಮವಿಠಲ 3
--------------
ರಘುರಾಮವಿಠಲದಾಸರು
ಪಾಲಿಸಯ್ಯಾ ಫಣಿಗಿರಿವಾಸಜೀಯಾ ಪ. ಪಾಲಿಸೈ ಪಾಲಾಬ್ಧಿಶಾಯಿ ಸುಳೀನೀರದನಿಭಶರೀರ ಶ್ರೀ ಕಾಲ ಕಾಮಿತಫಲಪ್ರದಾಯಕ ಅ.ಪ. ಮುನ್ನ ಮಾಡಿದ ಕರ್ಮದಿಂದಲಿ ಬನ್ನಪಟ್ಟೆನು ಶ್ರೀಹರಿ ಇನ್ನು ನಿನ್ನಯ ಚರಣಯುಗವನು ನಿರ್ಣಯದಿ ನಂಬಿದ ಪರಿ ಉನ್ನತೋನ್ನತವಪ್ಪ ತೆರದಲಿ ಮನ್ನಿಪುದು ನೀ ಕೃಪೆದೋರಿ ಬನ್ನ ಪಡುವುದು ಸಾಕು ಸಂತತ ನಿನ್ನನೆ ನೆರೆನಂಬಿದೆನು ಹರಿ 1 ವಾತಪಿತ್ತಕಫಾದಿ ರೋಗದ ವ್ರಾತದಿಂದ ಬಲು ನೊಂದೆನು ಧಾತುಬಲವತಿ ತಗ್ಗಿ ಉಷ್ಣೋಪೇತದಿಂದಲಿ ಬೆಂದೆನು ಚಾತುರ್ಥಿಕ ಜ್ವರಾತಿಶಯದಲಿ ಶೀತಸ್ಥಾನದಿ ನಿಂದೆನು ಈ ತೆರದ ಕಷ್ಟಗಳು ಬಾರದ ರೀತಿಯಲಿ ಪರಿಹರಿಸು ಸಂತತ 2 ನಿನ್ನನೆ ಮರೆಹೋಗುವ ತೆರದಲಿ ನಿನ್ನ ಸ್ಮರಣೆಯ ಮಾಡುವ ನಿನ್ನ ಭಕ್ತರ ಮೇಳದಲಿ ಸಂಪನ್ನನಾಗುತ ಕೂಡುವ ನಿನ್ನ ಮೂರ್ತಿಯ ನೊಡುವದು ಮತ್ತೆನ್ನ ಕಾಮಿತ ಬೇಡುವ ನಿನ್ನನೇ ಧ್ಯಾನಿಸುವ ಮತಿಸಂಪನ್ನವನು ನೀನಿತ್ತು ಕರುಣದಿ3 ಮಾರುತಿಯ ಚರಣಾರವಿಂದದದಿ ಸೇರಿ ನಿನ್ನನು ಧರೆಯಲಿ ಭೂರಿ ಮಹಿಮೆಯ ವರ್ಣಿಸುವ ಸಾಕಾರ ಮತಿಯನು ಎನ್ನಲಿ ಪ್ರೇರಿಸುತ ಕರುಣಾರಸಾಮೃತ ಬೀರಿ ಭೀತಿಯ ಪರಿಹರಿಸುತ್ತಲಿ4 ಕೊಂಚ ಧನವನು ಕೊಟ್ಟು ಎನಗೆ ಪ್ರಪಂಚವಹ ಗೃಹ ಗೈದಿಸಿ ಮುಂಚೆಮಾಡಿದ ಪಾಪವನು ನಿರ್ಲಚದಿಂದಲೆ ಛೇದಿಸಿ ಮಿಂಚಿಯೆನ್ನೊಳು ಮೋದಿಸಿ ಪಂಚಬಾಣನ ಪಿತನೆ ಮಂಗಳ ವಾಂಛಿತವನೆನಗಿತ್ತು ವಿಭವದಿ5 ಕಷ್ಟದಲಿ ನಿನ್ನ ಧ್ಯಾನ ಬಾರದು ತುಷ್ಟಿಯಲಿ ನಾ ಧ್ಯಾನಿಪೆ ಇಷ್ಟವೇ ನೀನಿತ್ತೆಯಾದರೆ ಕಷ್ಟಗಳ ನಾ ದೂಷಿಪೆ ಶ್ರೇಷ್ಠ ಕಾರ್ಕಳ ಪುರದಿ ಭಕ್ತರ ಒಟ್ಟುಗೂಡುತ ತೋಷಿಪೆ ಭ್ರಷ್ಟಲೋಭದ ಬಂಧುಗಳು ಎನ್ನೊಳಿಷ್ಟವಾಗುವ ತೆರದಿ ದ್ರವ್ಯವ6 ಕಾಲಭೈರವ ಪೇಳಿದಂದದಿ ನಾಲಿಗೆಯೊಳು ತಪ್ಪು ನೋಡದೆ ಪಾಲಿಸುತ ಇಷ್ಟಾರ್ಥವನು ಕೈ ಮೇಳವಿಸು ತಪ್ಪು ನೋಡದೆ ನೀಲಗಿರಿ ಸಮನಾಗಿ ಕಾರ್ಕಳದಾಲಯವ ನೀ ಮಾಡಿದೆ ಪಡುತಿರುಪತಿ ಪುರೇಶನೆ 7
--------------
ತುಪಾಕಿ ವೆಂಕಟರಮಣಾಚಾರ್ಯ
ಪಾಲಿಸೆನಗೀ ಜ್ಞಾನ ಪಾಲಸಾಗರಶಾಯಿ ಶ್ರೀ ಲೋಲ ನೀ ನಿತ್ಯದಿ ಪ. ಶೀಲಗುಣ ನಿನ್ನ ಏನು ಬೇಡುವುದಿಲ್ಲೊ ಕಾಲರೂಪನೆ ನಿನ್ನನು | ಇನ್ನು ಅ.ಪ. ಒಂದು ಅಸ್ವತಂತ್ರ ಒಂದು ಸರ್ವಸ್ವತಂತ್ರ ಒಂದು ಮನೆಯೊಳಗೆ ಇದ್ದು ಒಂದೆರಡು ಲೋಕಕ್ಕೆ ಒಂದೆ ದೈವನು ಎನಿಸಿ ಒಂದೊಂದರಲಿ ಇರುವ ಒಂದು ಅಪೇಕ್ಷಿಸದೆ ಒಂದೆರಡು ಗುಣದಿಂದ ಒಂದೆರಡು ಮಾಳ್ಪ ಜಗವ ಇಂದಿರೇಶನೆ ನಿನ್ನ ಈ ವಿಧದ ವ್ಯಾಪಾರ ಒಂದೊಂದು ಮನಕೆ ತೋರೋ | ಸ್ವಾಮಿ 1 ಎರಡು ಮಾರ್ಗಗಳಿಹವು ಎರಡು ಕರ್ಮಗಳಿಂದ ಎರಡು ವಿಧ ಸಮ ತಿಳಿದರೆ ಎರಡು ರೂಪಗಳನು ಒಂದಾಗಿ ಭಾವಿಸುತ ಎರಡೊಂದು ಜೀವ ತಿಳಿದು ಎರಡು ಫಲ ಅನುಭವಿಸಿ ಎರಡು ಹರಿಗರ್ಪಿಸುತ ಎರಡು ವಿಧ ಕರ್ತನೆಂದು ಎರಡು ಎಪ್ಪತ್ತು ಸಹಸ್ರನಾಡಿಗಳಲ್ಲಿ ಎರಡು ರೂಪದಲಿರುವ ಪೊರೆವ 2 ಮೂರು ಅವಸ್ಥೆಯಲಿ ಮೂರು ತಾಪವ ಸಹಿಸಿ ಮೂರು ಮಾರ್ಗದಲಿ ನಡೆದು ಮೂರೆಂಟು ಇಂದ್ರಿಯವ ಮೂಲರೂಪದಿ ಲಯಸಿ ಮೂರಾರು ವಿಧ ಭಕ್ತಿಯಲಿ ಮೂರೈದು ನುಗ್ಗೊತ್ತಿ ಮೂರು ಮೂರು ಅರಿಯ ಮೂರು ಶುದ್ಧಿಯಲಿ ಗೆದ್ದು ಮೂರಾರು ಎರಡೊಂದು ಖೋಡಿ ಮತಗಳ ಮುರಿಸಿ ಮಾರುತಿಯ ಮತದಿ ನೆಲಸಿ | ತಿಳಿಸಿ 3 ವಿೂನ ಕೂರ್ಮನೆ ವರಹ ಶ್ರೀ ನಾರಸಿಂಹನೆ ದಾನಯಾಚಕ ಭಾರ್ಗವ ವಾನರರಿಗೊಲಿದನೆ ವೇಣುಹಸ್ತರೂಪಿ ಮಾನವಿಲ್ಲದ ಕಲ್ಕಿಯೆ ಶ್ರೀನಿವಾಸನೆ ನಿನ್ನ ನಾನಾವಿಧ ರೂಪಗಳು ನಾನು ವರ್ಣಿಸಲು ಅಳವೆ ಮಾನಾಭಿಮಾನದೊಡೆಯನೆ ಕೃಷ್ಣ ಕೈಪಿಡಿಯೊ ಭಾನುಪ್ರಕಾಶ ಹರಿಯೆ | ಸಿರಿಯೆ 4 ಶಿರದಲ್ಲಿ ಕಿರೀಟ ಫಣೆಯಲ್ಲಿ ತಿಲುಕವು ಮೆರೆವ ಕುಂಡಲದ ಕದಪು ಕಿರುನಗೆಯ ಪಲ್ಗಳು ಕೊರಳಲ್ಲಿ ಹಾರಗಳು ಕರದಲ್ಲಿ ಆಯುಧಗಳು ಸಿರಿ ಭೂಮಿ ಎಡಬಲದಿ ಸುರನದಿಯ ಪೆತ್ತಪಾದ ಸಿರಿರಮಣ ಗೋಪಾಲಕೃಷ್ಣವಿಠ್ಠಲ ಎನಗೆ ಪರಿ ಪರಿಯ ರೂಪ ತೋರೊ ಸ್ವಾಮಿ 5
--------------
ಅಂಬಾಬಾಯಿ
ಪಾಲಿಸೆನ್ನ ಪಂಕಜಾಕ್ಷ ಪತಿತಪಾವನ ನೀಲಮೇಘಶ್ಯಾಮ ರಮಾಲೋಲ ಜಗನ್ಮೋಹನಾ ಪ ಭವವಿದಾರ ಭಯವಿದೂರ ಭಾರ್ಗವೀವರ ಭವ ಸುರೇಶವಂದಿತಾಂಘ್ರಿಯುಗಳ ಶ್ರೀಧರ 1 ನಿನ್ನನೇ ಮರೆಹೊಕ್ಕೆ ನಾನನ್ಯಭಾವದೆ ಪನ್ನಗಾದ್ರಿನಿಲಯ ಸಲಹು ಸಾನುರಾಗದೆ ಪಾಲೆಸೆನ್ನ 2
--------------
ನಂಜನಗೂಡು ತಿರುಮಲಾಂಬಾ
ಪಾಲಿಸೆನ್ನನು ನಿರುತ ಪವನರಾಯ | ಫಾಲಲೋಚನ ನಮಿತ ಪಾವನ್ನಕಾಯ ಪ ಅಭಿನಮಿಸಿ ಭಜಿಪರಿಗೆ ಉಭಯ ಕಷ್ಟವ ಕಳೆದಿ | ಶುಭವಿಭವನೆಗರಿದು ಪೊರಿಯುವಲ್ಲಿ | ಪ್ರಭುವನಧಿ ನಿನ್ನಂಥ ಪ್ರಬಲ ಪ್ರಭುಗಳ ಕಾಣಿ ಸನ್ನುತ ಮಹಿಮ ಅಭಿಗಾರಪುರವಾಸ 1 ನಿನ್ನನೆ ನೆರೆನಂಬಿ ನಿನ್ನನೆ ಧ್ಯಾನಿಸುತ ನಿನ್ನ ಸನ್ನಿಧಿಯಲ್ಲಿ ನೆಲೆಸಿಪ್ಪೆ ನಾ | ಬಿನ್ನಪವ ಲಾಲಿಸಿ ಬನ್ನಗಳ ಪರಿಹರಿಸಿ ನಿನ್ನೊಡೆಯನಂಘ್ರಿಯಲಿ ಘನ್ನ ಭಕುತಿಯ ಕೊಟ್ಟು 2 ಭೂಮಿಜಾತೆಯ ರಮಣ ಶಾಮಸುಂದರ | ಬದರಿ ಧಾಮ ಮೂರುತಿತ್ರಯ ಪ್ರೇಮ ಪಾತ್ರ | ಕಾಮಿತಪ್ರದ ಹನುಮ ಭೀಮ ಗುರುಸುಖತೀರ್ಥ ಯಾಮ ಯಾಮಕೆ ಹರಿಯ ನಾಮ ಜಿಂಹ್ವೆಯೊಳಿಟ್ಟು 3
--------------
ಶಾಮಸುಂದರ ವಿಠಲ
ಪಾಲಿಸೇ ಪದ್ಮಾಲಯೇ ಪಾಲಿಸೆ ಪ. ಪಾಲಿಸು ನಿನ್ನನೆ ಓಲೈಸಿತಿರುವೀ ಬಾಲೆಯರಭಿಮತ ಪಾಲಿಸುತೊಲವಿಂಅ.ಪ. ಅಂಬುಜನಾಭನ ರಾಣಿ ನಿನ್ನ ನಂಬಿದೆ ಪಲ್ಲವರಾಣಿ ಚನ್ನೆ ಕಂಬುಕಂಧರೆ ಫಣಿವೇಣಿ ಎನ್ನ ಬೆಂಬಿಡದಿರು ಕಲ್ಯಾಣಿ ಜನನೀ ಜಂಭಾರಿ ಪೂಜಿತೆ ಶಂಬರಾರಿಯಮಾತೆ ಶಂಭುವಂದಿತ ಪಾದಾಂಬುಜಕ್ಕೆರಗುವೆ 1 ಘನ ಸತ್ಯವ್ರತ ಪಿಡಿದರಿಯೆ ತಾಯೇ ಮತ್ತೇಭಗಾಮಿನಿ ಮರೆಹೊಕ್ಕೆ ನಿನ್ನನೇ ನಿತ್ಯಸತ್ಯದಿ ನಿನ್ನ ಭಜಿಸುವೆ ಜನನೀ 2 ಘೋರ ಋಣದ ಭಾದೆ ಕಳೆದು ಎನ್ನ ಪಾರುಗಾಣಿಸು ಮೋದವಡೆದು ಮುನ್ನ ದುರಿತವಿದೆನ್ನನು ಬಿಡದು ತಾಯೆ ವರಶೇಷಗಿರಿ ದೊರೆಯರಸಿ ನಿನ್ನಡಿತಾವರೆಗೆನ್ನನಾರಡಿಯೆನಿಸೆಂದು ಬೇಡುವೆ3
--------------
ನಂಜನಗೂಡು ತಿರುಮಲಾಂಬಾ