ಒಟ್ಟು 442 ಕಡೆಗಳಲ್ಲಿ , 79 ದಾಸರು , 404 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾರು ಬಲ್ಲರು ವೆಂಕಟೇಶ ನಿನ್ನೊಳಿಹ ಚಾರು ಗುಣಶೀಲವೆಂಬ ವಾರಿಧಿಯ ಚಿಪ್ಪಿನೊಳು ಮೊಗೆದು ಬತ್ತಿಸುವಂಥ ವೀರನಾವನು ಜಗದೊಳು ಪ ಹದಿನಾಲ್ಕು ಲೋಕವನ್ನು, ನೀ ನಿನ್ನ ಉದರದೊಳಗಿರಿಸಿಕೊಂಡು ಉದಧಿಮಯವಾಗಿರ್ದ ಕಾಲದೊಳು ನಿನಗೊಂದು ಉದುರಿದೆಲೆಯೊಳು ನಿದ್ರೆಯಂತೆ 1 ಮಾಯೆ ಕಮಲಾಕರದೊಳು, ನಿನ್ನುದರ- ದಾಯತದಿ ತೋರಿ ನಿಲಲು ಮೋಹಿಸಲು ಆ ಕ್ಷಣದಿ ಕಾಯವಾಗಲು ಮೇಲೆ ಬಾಯಿ ನಾಲ್ಕಾಯಿತಂತೆ 2 ಅಲ್ಲಿ ತೋರಿದ ಸೊಲ್ಲನು, ಖಳನೋರ್ವ ನೆಲ್ಲವನು ಸೂರೆಗೊಳಲು ಮಲ್ಲನಾಗಿಯೆ ಜಲದಿ ಘಲ್ಲಿಸಿಯೆ ದೈತ್ಯನನು ಚೆಲ್ವಸಾರವ ಸೆಳೆದೆಯಂತೆ 3 ಅದರ ಆಧಾರದಿಂದ, ಸನಕಾದಿ- ಗುದಯವಾದುದುಯೆಲ್ಲವೂ ಮೊದಲ ಕಾಣದೆ ವೃಕ್ಷವದುರಿ ಬಿದ್ದುದ ನೋಡಿ ತುದಿಯೊಳಗೆ ಕದನವಂತೆ 4 ಒಳ ಹೊರಗೆ ನೀನೊಬ್ಬನೆ, ಹೊಳೆ ಹೊಳೆದು ಸುಳಿವ ಪರಿಯನು ಕಾಣದೆ ಮಲತಾಯಿ ಮಗನೊಳಗೆ ಕಲಹವಿಕ್ಕುವ ತೆರದಿ ಹೊಲಬುದಪ್ಪಿಯೆ ನಡೆವರಂತೆ 5 ಒಂದಿದರಿಂದೆರಡಾದುದು, ಮೂರಾಗಿ ಬಂದು ಇದಿರೊಳು ನಿಂದುದು ಒಂದು ಮಾತಿನೊಳೆರಡು ಸಂದೇಹಗಳ ತೋರಿ ಮಂದ ಬುದ್ಧಿಯ ಕೊಡುವೆಯಂತೆ 6 ಜಡವಾದ ಅಡವಿಯನ್ನು ಸಂಚರಿಸಿ ಒಡಲ ಹೊರೆವುದು ಕಡೆಯೊಳು ಎಡೆಯೊಳೊಪ್ಪಿಸಿ ಕೊಡುವಿಯಂತೆ 7 ನಂಬಿ ಬಂದವರ ನೀನು, ಮನದೊಳಗೆ ಹಂಬಲಿಸಿಕೊಂಡಿರುತಲೆ ಇಂಬಾಗಿ ಇಹಪರದಿ ಉಂಬ ಸಂಭ್ರಮವನ್ನು ಸಂಭವಿಸಿ ತೋರ್ಪೆಯಂತೆ 8 ಭೂಮಿಗೆ ವೈಕುಂಠವೆಂದು, ನಿಂತಿರುವ ಸ್ವಾಮಿಯೆನ್ನೆಡೆಗೆ ಬಂದು ಕ್ಷೇಮವನು ವರಾಹತಿಮ್ಮಪ್ಪ ಕರುಣದಿ ಕಾಮಿತಾರ್ಥವನೀಯೊ ಎಮಗೆ 9
--------------
ವರಹತಿಮ್ಮಪ್ಪ
ಯಾವ ಪರಿಯಲಿ ಒಲಿಸಿ ಪಡೆವೆ ಹರಿಯೊಲವನು ಭೂವಿವರವನು ಪೊತ್ತ ಮಹಶೇಷಗರಿದು ಪ ಸುರನದಿ ಜಲದೊಳಭಿಷೇಕವ ಮಾಡುವರೆ ಚರಣದಲಿ ಜನಿಸಿಹಳು ದೇವಗಂಗೆ ಮೆರೆವ ದಿವ್ಯಾಸನವನೀಯೆ ವಿಶ್ವಾಧಾರ ಧರಿಸಿ ಕೊಡಲಿಕೆ ವಸ್ತ್ರ ಪೀತಾಂಬರ 1 ಹೇಮರಚಿತಾಭರಣದಿಂದ ಮೆಚ್ಚಿಸಲವಗೆ ಕಾಮಿನಿಯೆ ಶ್ರೀಮಹಾಲಕ್ಷ್ಮಿದೇವಿ ಪ್ರೇಮದಿಂ ಶಾಲ್ಯಾನ್ನದಿಂದ ತೃಪ್ತಿ ನಿತ್ಯ ತೃಪ್ತ 2 ಕ್ಷೀರದಿಂ ಮೆಚ್ಚಿಸಲಿಕವಗೆ ಪಾಲ್ಗಡಲೆಮನೆ ಮಾರುತಾತ್ಮಜ ಕೋಣೆ ಲಕ್ಷ್ಮೀಶ ನಂಘ್ರಿಗೆ ನಮಸ್ಕಾರದಿಂ ಮೆಚ್ಚಿಸಲಿಕವ ಜಗದ್ವಂದ್ಯಾ 3
--------------
ಕವಿ ಪರಮದೇವದಾಸರು
ಯೋಗಿ ಭಾವ್ಯ ಪದ್ಮಮುಖದಿವ್ಯ ಲಕ್ಷಣಾಂಚಿತ ಪದಯುಗಳ 1ಚಂದ್ರ ಕುಲಾವತಂಸ ದ'ುತ ಕಂಸಪರಮಹಂಸ ಚಿದಾವರ್ಣ'ತೇಂದ್ರಮುಖ್ಯ 'ಹಗೇಂದ್ರ ವಾಹನೋಪೇಂದ್ರಕಾಳಿಯೋರಗ ಮದಹರಣ 2ಕಂಜದಳನಿಭಾಕ್ಷ ಸುಜನರಕ್ಷದನುಜಶಿಕ್ಷಾ ಪ್ರ'ೀಣ ಧನಂಜಯಾರ್ತಿಹರಮಂಜುಭಾಷಣ ನಿರಂಜನಾಗಣಿತನಿರುಪಮಲೀಲಾ 3ನಂದಕ ಪ್ರಹರಣ ಭೂರಿಕರಣಾವಾಲ್ಯಶರಣಾ ಗತಾವನನಂದನಂದನ ಸನಂದನಾದಿ ಮುನಿ ಬೃಂದವಂದ್ಯ ಸಕಲಜನ ಶರಣ್ಯಾ 4ದಂತಿರಾಜವರದಾ ರಾತ್ರಿ ಚರದಾವಾಗ್ನಿ ಶರದವ್ರಜಶ್ರೀಕಾಂತ ಮೌನಿಘನ ಚಿಂತನೀಯವೇದಾಂತವೇದ್ಯಕೋಸಲಪುರ ನಿಲಯಾ 5
--------------
ತಿಮ್ಮಪ್ಪದಾಸರು
ರಕ್ಷಿಸಿ ಪೊರೆಯೊ ದೇವನೆ ಪಕ್ಷಿವಾಹನನೆ ಸೂಕ್ಷ್ಮ ಸ್ಥೂಲದಿ ವ್ಯಾಪ್ತನೆ ಪ ಲಕ್ಷ್ಮಿರಮಣ ಪುರುಷೋತ್ತಮ ಪುರುಷನೆ ಕುಕ್ಷಿಯೊಳಗೆ ಜಗ ರಕ್ಷಿಸಿ ಪೊರೆವನೆ ಅಕ್ಷರೇಢ್ಯ ಕಮಲೇಕ್ಷಣ ಮಾಧವ ರಕ್ಷ ಶಿಕ್ಷಕ ಜಗದ್ರಕ್ಷಕ ಹರಿಯೆ ಅ.ಪ ವಿಶ್ವರೂಪನೆ ಶ್ರೀಹರಿ ವಿಶ್ವವ್ಯಾಪಕನೆ ವಿಶ್ವತೋ ಮುಖನೆ ಶ್ರೀಶನೆ ವಿಶ್ವನಾಟಕನೆ ದೇವನೆ ವಿಶ್ವೋದ್ಧಾರಕನೆ ವಿಶ್ವಮಯನೆ ಶ್ರೀ ವಿಶ್ವನೆ ವಿಶ್ವರೂಪ ತಾಯಿಗೆ ಬಾಯೊಳು ತೋದರ್À ವಿಶ್ವರೂಪ ಮೈದುನನಿಗೆ ತೋರಿದ ವಿಶ್ವರೂಪ ಸಭೆಯೊಳು ಭಕ್ತರಿಗೆ ತೋರ್ದ ವಿಶ್ವ ಮೂರುತಿಯೆ 1 ಹಿಂದಿನ ಕರ್ಮಫಲದಲಿ ಬಂದು ಈ ಭವದಿ ಕಂದಿ ಕುಂದಿದೆನೋ ವ್ಯಥೆಯಲಿ ಬಂಧ ಮೋಚಕನೆನುತಲಿ ಬಂದೆರಗುತಲಿ ತಂದೆ ನೀ ಪೊರೆಯಬೇಕೆನುತಲಿ ಮಂದರೋದ್ಧರ ಗೋವಿಂದ ನಿನ್ನಯ ಪಾದ ದ್ವಂದ್ವಕೆ ನಮಿಸುವೆ ಬಂಧನ ಬಿಡಿಸೆಂದು ಇಂದು ಮುಂದು ಎಂದೆಂದಿಗೂ ನೀ ಗತಿ ಇಂದಿರೆ ರಮಣ2 ಶ್ರಮವ ಪರಿಹರಿಸೊ ಶ್ರೀಶನೇ ಶ್ರೀನಿಕೇತನನೆ ಕಮಲ ಸಂಭವನ ತಾತನೆ ಕಮಲ ಲೋಚನನೆ ಕಮಲ ಪೊಕ್ಕಳಲಿ ಪಡೆದನೆ ಕಮಲ ಭವೇಂದ್ರಾದ್ಯಮರರು ಪೊಗಳಲು ಕಮಲನಾಭ ವಿಠ್ಠಲ ವಿಠ್ಠಲನೆಂದು ಕಮಲಪುಷ್ಪ ಮಾಲಾಲಂಕೃತ ಶೋಭಿತ ಕಮಲದಳಾಕ್ಷನೆ ಕಮನೀಯರೂಪ 3
--------------
ನಿಡಗುರುಕಿ ಜೀವೂಬಾಯಿ
ರಕ್ಷಿಸೋ | ಬೇಗನೆ ಬಂದು ರಕ್ಷಿಸೊ | ಪ ಕುಕ್ಷಿನಂಬಿದೆ ಕಲ್ಪಭೂಜ | ಆಹಾ ಪೇಕಿಸದೆನ್ನನು ಈಕ್ಷಿಸಿ ಕರುಣದಿ ಅ.ಪ ಕೇಶವ ಖಳಕುಲ ನಿಧನ | ನರ ಕೇಸರಿ ಶ್ರೀಹಯವದನ | ಗುರು ಪಾದ ನಳಿನ | ಸಮೀ ರಾಶನ ಪರ್ಯಂಕಶಯನ | ಆಹಾ ದಾಶರಥಿಯೆ ಭವದಾಶೆ ಬಿಡಿಸಿ ತವ | ದಾಸ ಜನರ ಸಹವಾಸದೋಳಿಟ್ಟನ್ನ 1 ಪಶುಪಾಲ ಮಿಸುನೀಯ ವಸನ | ಧ್ರುವ ಪಶುಪತಿ ಸುತ ಗುಣಪೂರ್ಣ | ದುಷ್ಟ ಶಿಶುಪಾಲ ಮದವಿಭಂಜನ | ಪಾಹಿ | ನಿರಂಜನ | ಆಹಾ | ವಸುಗರ್ಭನ ಪೆತ್ತ ಕುಸುಮದಳೇಕ್ಷಣ | ವಸುಮತಿಯೊಳು ಎನ್ನ ಪಿಸುಣನೆಂದೆನಿಸದೆ 2 ನಾಶರಹಿತ ವನಮಾಲ | ಧರ ಶ್ರೀಶಾಮಸುಂದರವಿಠಲ | ಗುಡಾ ಕೇಶ ವರದ ಸುಶೀಲ | ಪಾಕ | ಶಾಸನಾನುಜ ಗಾನಲೋಲ | ಆಹಾ | ಪೂಶರಪಿತ ಸ್ವಪ್ರಕಾಶ ಪರಮ | ವಿ ಲಾಸವ್ಯಾಸ ಮಹಿದಾಸ ಲೋಕೇಶನೆ 3
--------------
ಶಾಮಸುಂದರ ವಿಠಲ
ರಂಗನಾಥನ ನೋಡುವ ಬನ್ನಿ ಶ್ರೀ- ಪ ರಂಗನ ದಿವ್ಯ ವಿಮಾನದಲ್ಲಿಹನಅ.ಪ. ಕಮನೀಯಗಾತ್ರನ ಕರುಣಾಂತರಂಗನಕಾಮಿತಾರ್ಥವೀವ ಕಲ್ಪವೃಕ್ಷನಕಮಲದಳನೇತ್ರನ ಕಸ್ತೂರಿ ರಂಗನಕಾಮಧೇನು ಕಾವೇರಿ ರಂಗನ1 ವಾಸುಕಿಶಯನನ ವಾರಿಧಿನಿಲಯನವಾಸುದೇವ ವಾರಿಜನಾಭನವಾಸವಾದಿ ಭಕ್ತ ಹೃದಯಾಂಬುಜದಲ್ಲಿವಾಸವಾಗಿರುತಿಹ ವಸುದೇವಸುತನ2 ಮಂಗಳಗಾತ್ರನ ಮಂಜುಳಭಾಷನಗಂಗಾಜನಕ ಅಜಜನಕನಸಂಗೀತಲೋಲನ ಸಾಧುಸಮ್ಮತನರಂಗವಿಠಲ ರಾಜೀವನೇತ್ರನ 3
--------------
ಶ್ರೀಪಾದರಾಜರು
ರಮಣಿ ಮಂಜುಳವಾಣಿ ಕಮನೀಯ ಸುಶ್ರೋಣಿ ವಿಮಲ ಪಲ್ಲವಪಾಣಿ ಫಣಿಪವೇಣಿ ಮೀನಾಕ್ಷಿ ಯೀ ಚಿಂತೆ ನಿನಾಂತುದೇಂಕಾಂತೆ ಮೌನಮೇಂ ಮತಿವಂತೆ ಬಿರುಸದೆನಿತೆ ಕುಹಕರುಕ್ತಿಯ ಕೇಳಿ ಕಡುಕೋಪವನು ತಾಳಿ ಬಹುವಿಧದಿ ಬಳಲಿಸುವೆ ವಿಹಿತವೇನೆ ಹೆಬ್ಬುಲಿಯ ತೆರದಿಂದ ಬೊಬ್ಬಿರಿದು ಮತಿಯುಳಿದು ಅಬ್ಬರಿಸಿ ಕೂಗುವರೆ ಅಬ್ಜನೇತ್ರೆ ಕೈಪಿಡಿದ ರಮಣನೊಳು ಮುನಿಸೆ ತರುಣಿ ತಾಪಶಮನವ ಮಾಡು ನೋಡು ರಮಣಿ ಓಪನೆಂದೊಲಿದಾಡು ಕರವನೀಡು ಭೂಪಶೇಷಾದ್ರೀಶನತ್ತ ನೋಡು
--------------
ನಂಜನಗೂಡು ತಿರುಮಲಾಂಬಾ
ರಾಮ - ರಕ್ಕಸ ಸಂಕಲ ಭೀಮಮುನಿದರೆ ಲೋಕ ವಿರಾಮ | ಸಾಮಸನ್ನುತ ನಿಸ್ಸೀಮ ಪ ಕಾಮಿತಾರ್ಥ ಸುಮಹೋದಧೆ - ನಿಪ್ಕಾಮನ ಮಾಡೆಲೊ ವಾಮನ ಮೂರ್ತಿಅ.ಪ. ಧಾಮ ವೈರಿ ಸುತ್ರಾಮ ||ಕಾಮನಯ್ಯ ಕಮ | ನೀಯ ಮೂರುತಿಯೆಕಾಮಿಪೆ ನಿನ್ನನು | ಭೂಮ ಗುಣಾರ್ಣವ 1 ಪಾತಕ ಕಳೆಯೋ 2 ಬಾಲಾ - ಕೆಡಿಸಿದೆ ಗೋಪೆರ ಶೀಲಾ | ಜನನಿಗೆ ತೋರಿದೆ ಲೀಲಾವದನದಿ ಲೋಕ ವಿಶಾಲಾ | ಮಾವ ಕಂಸಗೆ ನೀ ಕಾಲಾ ||ಪಾಲು ಮೊಸರು ಬೆಣ್ಣೆ | ಲೀಲೆಯಿಂದಲಿ ಮೆದ್ದುಜಾಲತನದಿ ನಿಮ್ಮ | ಬಾಲರೆಂದ್ಹೇಳಿದೆ 3 ಶ್ರೀತಾಕೇಶಿ ನಿಷೂದನ ವೃಷ್ಟೀಶ | ಸೋಜಿಗವೇನಿದು ಸರ್ವೇಶಸಂತತ ಭಜಿಪರ ಅಘನಾಶ | ದಾಸ ಜನರ ಹೃತ್ತೋಷ ||ವಾಸವ ಮುಖ ದೇ | ವೇಶ ನಿನ್ನಯ ಪಾದಆಶ್ರಯ ದೊಳಗಿಟ್ಟು | ಪೋಷಿಸು ಎನ್ನ 4 ಕರ್ತಾ - ರಕ್ಷಿಸೆನ್ನ ತ್ರಿಜಗದ್ಭರ್ತ | ನೀ ಲೋಕೈಕ ಸಮರ್ಥಗುರು ಕರುಣದಿ ನಾನು ಕೃತಾರ್ಥ | ಒರೆವೆನೊ ನಾನೊಂದು ವಾರ್ತಾಆರ್ತೇಷ್ಟದ ಗುರು | ಗೋವಿಂದ ವಿಠಲಮೂರ್ತಿ ನೆಲಸೊ ಮಮ | ಹೃತ್ಕಮಲದಲಿ5
--------------
ಗುರುಗೋವಿಂದವಿಠಲರು
ರಾಮಚಂದ್ರ ಹರಿ ವಿಠಲ | ನೀನಿವನ ಸಲಹೋ ಪ ಕರ ಪಿಡಿದು | ಕಾಮಿತವನಿತ್ತುಅ.ಪ. ಕರ ಪಿಡಿಯಯ್ಯ | ಪ್ರಹ್ಲಾದ ವರದಾಮರುತ ಮತ ದೀಕ್ಷೆಯಲಿ | ದೃಢವಾದ ಮತಿಯಿತ್ತುವರಗಳನೆ ನೀಡುವುದು | ಮರುತಾಂತರಾತ್ಮಾ 1 ತಾರತಮ್ಯವ ತಿಳಿಸೊ | ಪಂಚ ಭೇಧವ ತಿಳಿಸೋಕಾರ್ಯ ಕಾರಣ ನೀನೇ | ಬೇಡುವೆನು ನಿನ್ನಾಹರಿಯು ಸರ್ವೋತ್ತಮನು | ಮರುತ ಜೀವೋತ್ತಮನುನಿರುತ ನೀ ಸುಜ್ಞಾನ | ಅರಿವನೀಯುತ ಸ್ವಾಮೀ2 ನಾನು ನನ್ನದು ಎಂಬ | ಸಂಸ್ಕಾರವನೆ ಕಳೆದುನೀನು ನೀನೇ ಎಂಬ | ಉಪಾಯ ಒಲಿಸೇಕಾಣಿಸೋ ಹೃದ್ಗುಹದಿ | ಗಾನಲೋಲನೆ ದೇವಕೊನೇರಿ ವಾಸ ಹರಿ | ಪ್ರಾರ್ಥಿಸುವೆ ನಿನ್ನಾ 3 ಪತಿ ಅದ್ವೈತ ಸಿರಿ ಜಾನಕೀ ಪತಿಯೇ 4 ಕರ | ಪಿಡಿದು ಉದ್ಧರಿಸುತಲಿಪೊರೆಯೊ ಗುರು ಗೋವಿಂದ | ವಿಠಲ ಕಾರುಣ್ಯ 5
--------------
ಗುರುಗೋವಿಂದವಿಠಲರು
ರಾಮನ ನಾಮವ ಪ್ರೇಮದಿ ಭಜಿಸಲು ರಾಮನು ವಲಿಯುವಾ ಬಿಡದೆ ಪಾಲಿಸುವಾ ಪ ಕಾಮಿತ ವರಗಳ ನೀಯುತ ಭಜಕರ ಸ್ವಾಮಿಯು ವಲಿದೆಮ್ಮ ನಿರುತ ಪಾಲಿಸುವಾ ಅ.ಪ. ತರಳರ ಮಾತಿಗೆ ಸೈಯೆಂದು ನುಡಿಯುತ್ತ ಪರಮ ಸಾಮ್ರಾಜ್ಯದ ಪದವಿಯ ಕೊಡುತ್ತಾ ಸರಳರ ಹೃದಯವ ನೀಕ್ಷಿಸಿ ಜವದೊಳು ಕರೆದು ಸಾಯುಜ್ಯದ ಪದವಿಯ ಕೊಡುವಾ 1 ದುರುಳರ ಸುಖಗಳಿಗಂತಕನಾಗುತ ಶರಣರ ಪಿಡಿದು ಶಿಷ್ಟರನು ಕಾಯುತ್ತ ಭರದಿಂದ ಸುಜನರ ಕಷ್ಟವ ತರಿವಾ 2 ಕೌಸಲೆ ಗರ್ಭದಿ ಬಂದ ಶ್ರೀಹರಿ ತಾನು ವಾಸುಕಿ ಭಾರವ ನಿಳುಹಲಿಕ್ಕೆ ವಾಸ ಮಾಡುವನೀಗ ವರ ದೂರ್ವಾಪುರದಲ್ಲಿ ದಾಸನ ಸಲಹುವ ಕೇಶವನೆಂಬ 3
--------------
ಕರ್ಕಿ ಕೇಶವದಾಸ
ರಾಮನಾಮವ ನುಡೀವೆ ಶ್ರೀರಾಮ ನಿನ್ನನು ಪಿಡೀವೆ ಪ ಧಾಮ ನೀ ಬಿಟ್ಟೇಳು ಸುರಧಾಮನಾ ಪಿಡಿ ಕೇಳು ಆಮ್ಯಾಲ ಪೇಳು ಕಾಮಿನೀಯಾತ್ಮಜರಗತಿ ಯಿನ್ನಾವುದೈ ಈ ಪರಿಯು ಮಾಡಲು ರಾಮರಾಮನುತಡಿಗಡಿಗೆ ನುಡಿದೀ ಮನೆಯೆ ಭವವೀಯವರಿವೆನು 1 ರಥಕೆ ಕುದುರೆಗಳೆರಡು ಭವರಥಕೆ ದಂಪತಿ ಜೋಡು ರಥ ನಡೆಸಿ ನೋಡು ಪಥವು ಗಮನಕೆ ಸುಲಭವಲ್ಲವೆ ಇತರ ಭಯವದಕೆನಿತಹುದು ಪೇಳ್ ಸತತನಿಲಸುತ ಗತಿಯ ತೋರಲು ಪತನೆಡರುಗಳ ಕಥೆಯನರಿಯಿಸು 2 ಪೆರ್ಮರವೆ ನೀ ಪುಟ್ಟಿ ಸಲೆಗಾರ್ನೆರಳು ಮಾಡಿಟ್ಟಿ ಮೂರ್ಲೋಕ ತೊಟ್ಟ ಶೇರಲದ ನರವಿರ್ಹಗಳು[?] ಹರಿಹರಿಯೆನುತ ಬಾಯ್ತೆರದು ನುಡಿಯಲು ಸುರತರು
--------------
ನರಸಿಂಹವಿಠಲರು
ಲಕ್ಷ್ಮಿ ನರಹರಿ ವಿಠಲ | ರಕ್ಷಿಸೋ ಇವಳ ಪ ತ್ರ್ಯಕ್ಷ ಬಿಂಬನೆ ಸ್ವಾಮಿ | ಪಕ್ಷಿವಹ ಕರುಣಾಕಟಾಕ್ಷ ದಿಂದೇಕ್ಷಿಸುತ | ಕಾಪಾಡೊ ಹರಿಯೇ ಅ.ಪ. ಅಕ್ಷಿ ಮೂರುಳ್ಳ ನಿಟಿ | ಲಾಕ್ಷನೈ ರೂಪದಲಿಅಕ್ಷಿ ಗೋಚರನಾಗಿ | ಸ್ವಚ್ಛ ತೈಜನನೇದೀಕ್ಷೆ ದಾಸತ್ವದಲಿ | ಲಕ್ಷ್ಯವಿಟ್ಟಿಹಳ ಉ-ಪೇಕ್ಷಿಸದೆ ದಯತೋರ್ದೆ | ಲಕ್ಷ್ಮಿ ನರಸಿಂಹಾ 1 ಮನ್ಯು ಸೂಕ್ತದಿಂ ಬ | ಹ್ಪನ್ನ ಭೊಕ್ತøವಿನಿಂದಚೆನ್ನಾಗಿ ಸೇವಿತನೆ | ಅನ್ನಂತ ಮಹಿಮಾಬಿನ್ನವಿಪೆ ನಿನಗೆ ಕಾ | ರುಣ್ಯ ಮೂರುತಿ ಹರಿಯೆಕನ್ಯೆಗಭಯದನೆ ಆ | ಪನ್ನ ಪರಿಪಾಲಾ 2 ಲೌಕಿಕದಿ ಬಹುಪರಿಯ | ಸೌಖ್ಯಗಳ ನೀನಿತ್ತುಪ್ರಾಕ್ಕು ಕರ್ಮವ ಕಳೆದು | ಕಾಪಾಡೊ ಹರಿಯೇ |ಚೊಕ್ಕ ಭಕ್ತಿ ಜ್ಞಾನ | ಅಕ್ಕರದಿ ತವಪದದಿಉಕ್ಕುವ ಪರಿಮಾಡು | ರಕ್ಕಸಾಂತಕನೇ 3 ನೀಚೋಚ್ಚ ತರತಮವು | ಪಂಚ ಬೇದವನರುಹಿಸಂಚಿತವ ದಹಿಸೂವ | ಹಂಚಿಕೆಯನಿತ್ತೂಅಂಚೆವಹಪಿತನೆ ಹೃ | ತ್ಪಂಕಜದಿ ನಿನಕಾಂಬಸಂಚಿಂತನೆಯ ನೀಯೊ | ಪಂಚ ಪ್ರಾಣಾತ್ಮಾ 4 ಪಾವಮಾನಿಯ ಪ್ರೀಯ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ಭಾವದಲಿ ತೋರೋ |ನೀವೊಲಿಯುತಿವಳಿನ್ನ | ಕಾವುದೆನೆ ಬಿನ್ನೈಪೆಗೋವಿದಾಂಪತಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲೋಲನೇಳುವದಕಿನ್ನ ಮುನ್ನ ಪ ತಾಳಮೇಳದವರೆಲ್ಲಿ ಬಂದು ದ್ವಾರ ದೊಳು ಸೇರಿ ಪಾಡುತಿಹರೊ ನಿಂದು 1 ಸುರರು ಸಭೆ ಯಲಿ ಬಂದಾಗಲೆ ಓಲೈಸುತಲಿಹರು 2 ತಡಮಾಡಬೇಡಯ್ಯ ನೀನು ನಿನ್ನ ಒಡೆಯನೆದ್ದು ನಿನ್ನನು ಕೂಗ್ಯಾನೊ 3 ಕಪಿಯಾಗಿ ನೀ ಪುಟ್ಟಬೇಕಂತೆ ತಾನು ವಿಪಿನವಾಸಕಾಗಿ ತೆರಳುವನಂತೆ 4 ಶರಧಿಯ ನೀ ದಾಟಬೇಕಂತೆ ಅಲ್ಲಿ ಸಿರಿಗೆ ಮುದ್ರೆಯ ನೀನೀಯಬೇಕಂತೆ 5 ದುರುಳನ ಪುರವ ನೀನುರುಹಬೇಕಂತೆ ಅವನ ಪರಿವಾರವೆಲ್ಲವ ನೀ ತರಿಯಬೇಕಂತೆ 6 ಕುಂತೀಲಿ ನೀ ಪುಟ್ಟಬೇಕಂತೆ ತಾನು ಕಂತುವಿಗೆ ಪಿತನಾಗುವನಂತೆ 7 ಮಗಧ ಮುಖ್ಯರ ನೀ ಸೀಳಬೇಕಂತೆ ದೇವ ಜಗಕೆ ಮಂಗಳವ ನೀ ಮಾಡಬೇಕಂತೆ 8 ದುರುಳ ದುಶ್ಶಾಸನನ ಇರಿಯಬೇಕಂತೆ ಅವನ ಕರುಳ ನಿನ್ನರಸಿಗೆ ಮುಡಿಸಬೇಕಂತೆ 9 ಮುದ್ದು ಭಾರತಿಯ ನೀ ಬಿಡಬೇಕಂತೆ ನೀನು ಹೊದ್ದು ಕಾವಿಬಟ್ಟೆ ಯತಿಯಾಗಬೇಕಂತೆ 10 ಅದ್ವೈತ ಮತವನು ನೀ ಖಂಡ್ರಿಸಬೇಕಂತೆ ಗುರು ಮಧ್ವಮುನಿಯೆಂದು ನೀ ಮೆರೆಯಬೇಕಂತೆ 11 ಬದರಿಕಾಶ್ರಮಕೆ ಪೋಗಬೇಕಂತೆ ಅಲ್ಲಿ ಬಾದರಾಯಣನಾಗಿ ತಾನಿರ್ಪನಂತೆ 12 ಹಿಂಗದೆ ಶ್ರೀಶನ ನೀ ನುತಿಸಬೇಕಂತೆ ಸಿರಿ ರಂಗೇಶವಿಠಲ ನಿನಗೊಲಿದಿಹನಂತೆ 13
--------------
ರಂಗೇಶವಿಠಲದಾಸರು
ವಂದಿಸಿ ಬೇಡುವೆ ನವಗ್ರಹರ ಕುಂದುಗಳೆಣಿಸದೆ ಬಂದು ರಕ್ಷಿಸಲೆಂದು ಪ ಭಾಸುರ ಸೂರ್ಯನು ಭಾಸಿಸಲಿ ತತ್ವವನು ಶ್ರೀ ಸಹೋದರ ಚಂದ್ರ ತೋಷವನು ಸೂಸಿ ಕೊಡಲಿ ಮಂಗಳವನು ಮಂಗಳ ಲೇಸಾದ ಪಾಂಡಿತ್ಯ ಪಂಡಿತನೀಯಲಿ 1 ಹಿಂಗದ ಗೌರವ ತುಂಗ ಶ್ರೀಗುರು ಕೊಡಲಿ ಕವಿ ಕೊಡಲಿ ಭಂಗವಿಲ್ಲದ ಸುಖಸಂಪತ್ತು ಶನಿ ಕೊಡಲಿ ಕಂಗೆಡಿಸುವ ರುಜೆ ರಾಹು ತಪ್ಪಿಸಲಿ 2 ಹಿಡಿದ ಕೆಲಸದಲ್ಲಿ ಹಿಡಿಸಲಿ ಜಯಧ್ವಜವ ಬಿಡದಲೆ ಧ್ವಜಿಯು ಸಡಗರದಿ ಕಡು ನವಗ್ರಹಗಳು ಪಿಡಿಗ್ರಹವಾಗಲಿ ಸಿರಿ ದೃಢದಿ ದಿನದಿನದಿ 3 ತರಣಿ ಕುಮಾರ ಮಣಿ ಹಾರ ದಾರಿದ್ರ್ಯದೂರ ಹರಿಸು ಅರಿಷ್ಟವ ಸುರಿಸು ಮನೇಷ್ಟವ ಎರಗುವೆ ಸಂಕಟಗೊಳಿಸದಿರುತ್ಕಟ 4 ಸಿರಿ ವಾದಿರಾಜರು ಒರೆದ ಗ್ರಹಸ್ತ್ರೋತ್ರವ ನಿರುತದಿ ಪಠಿಸಲು ಗ್ರಹ ಪೀಡೆಯು ಸರಿದು ತಾಂ ಪೋಪುದು ಅರಿಯ ನಿಗ್ರಹವಹುದು ತುರುಗಗ್ರೀವನ ದಯದಿ ಸರ್ವ ಸಂಪದಬಹುದು 5 ಗೀರ್ವಾಣ ಭಾಷೆಯಲಿರುವ ಈ ಸ್ತುತಿಯನ್ನು ಚಾರು ಕನ್ನಡ ಗೀತ ರೂಪದಿಂದ ಸಾರಿದ ಲಕ್ಷ್ಮೀನಾರಾಯಣ ಶರ್ಮನು ಕೋರುವ ಕೃಪೆಯನ್ನು ಸಾಧು ಸಜ್ಜನರನ್ನು 6 ನಮೋ ರವಿ ಸೋಮನೆ ನಮೋ ಕುಜಸೌಮ್ಯನೆ ನಮೋ ಗುರು ಭಾರ್ಗವ ನಮೋ ಶನೈಶ್ಚರನೇ ನಮೋ ರಾಹು ಕೇತುವೇ ನಮೋ ಮೃತ್ಯುದೈವವೇ ನಮೋ ಭೂತಗಣನಾಥ ನಮೋ ಲಕ್ಷ್ಮೀಕಾಂತ 7
--------------
ಲಕ್ಷ್ಮೀನಾರಯಣರಾಯರು
ವಂದಿಸುವೆನು ನಿನ್ನ ಅರವಿಂದಲೋಚನ- ದಿಂದ ನೋಡೊ ನೀ ಎನ್ನ ವಂದಿಸುವೆ ಅರವಿಂದಲೋಚನ- ದಿಂದ ನೋಡೊ ದಯಾಸಿಂಧು ಎನಿಸುವೆ ನಂದನಂದನನಾದ ಶ್ರೀ ಮುಕುಂದ ನೀ ಮುಚು- ಕುಂದ ವರದ ವಂದಿಸುವೆನು ನಿನ್ನ ಪ ಅಂಬರೀಷನು ಏನೋ ಮುಚುಕುಂದ ಮುನಿವರ- ನೆಂದು ರಕ್ಷಿಸುವೇನೊ ದ್ವಿಜ ತಂದವಲಕ್ಕಿ ತಿಂದ ಭಿಡೆಯಗಳೇನೊ ನೀನೆ ಸುರಧೇನು ಕಂದ ಧ್ರುವಪ್ರಹ್ಲಾದ ಕರೆಯಲು ಬಂದು ಭರದಿಂದವರ ಸಲಹಿದೆ ಮಂದಮತಿ ನಾ ಮ- ತ್ತೊಂದನರಿಯದೆ ವಂದಿಸುವೆ ನಿನ್ನ 1 ಗಜನು ಅಜಮಿಳನೇನೊ ಪಾದಾಂಬುಜ ಸ್ತುತಿಸ- ಲಜಸುತನು ನಾರದನೇನೊ ನಿಜ ಭಕುತಿಯಿಂದಿರಲ್ವಿದುರ ಉದ್ಧವನೇನೊ ನದಿಯಲ್ಲಿ ನಿನ್ನ ನಿಜಸ್ವರೂಪವ ತೋರಲಿಕ್ಕೆ ನಿನ್ನ ಬಾಂಧವಕ್ರೂರನೇ ನಾ ಕೇಳು ಘನ್ನ ಮಹಿಮ ಪ್ರಸನ್ನನಾಗಲಿಕ್ವಂದಿಸುವೆನು ನಿನ್ನ 2 ಸತ್ವರೊಳು ನಾನಲ್ಲ ಅಹಲ್ಯೆ ದ್ರೌಪದಿ ಭಕ್ತಿ ಮೊದಲೆನಗಿಲ್ಲ ಪಾಂಡವರ ದುರಿತಾಪತ್ತು ಕಳೆದ್ಯೊ ನೀಯೆಲ್ಲ ಕೇಳೆನ್ನ ಸೊಲ್ಲ ಭಕ್ತಾಧೀನನೆ ಭಯನಿವಾರಣ ಇಷ್ಟು ಭವಭಯ ಬಿಡಿಸಿ ಭೀಮೇಶಕೃಷ್ಣ ನಿನ್ನದಯ- ವಿಟ್ಟುಕರುಣಿಸೊ ವಂದಿಸುವೆನು ನಿನ್ನ 3
--------------
ಹರಪನಹಳ್ಳಿಭೀಮವ್ವ