ಒಟ್ಟು 764 ಕಡೆಗಳಲ್ಲಿ , 81 ದಾಸರು , 697 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮಿಸು ಮನವೆ ನೃಹರಿ ರೂಪವಾ | ರೋಗ ಹರಣನಾ ಪ ಹರಣ | ಸುರಪ ಪಾಲಕನಾ ಅ.ಪ. ಸಕಲ ಸುರರ ದನುಜ ಭಾದಿಸೆ | ಹರಿಗೆ ಮೊರೆಯಿಡೇಅಕಳಂಕ ಮಹಿಮ ಅಭಯವಿತ್ತು | ಅವರ ಕಳುಹಿದಾ 1 ಸುರರು ಪಾಡಿದರೂ 2 ಪಿತನು ತನ್ನ ಸುತನ ಭಾದಿಸೆ | ಹರಿಯೆ ಚರಣವಾಸತತ ನಮಿಸಿ ಭಜಿಸಿ ಭರದಿ | ಕಂಬದಿ ಕರೆದನೂ 3 ಭೃತ್ಯನ್ವೊಚನ ಸತ್ಯ ಮಾಡೆ | ಸ್ತಂಭವ ಸೀಳುತಾವೃತ್ಯಸ್ತವಾಗೆ ಸಕಲರ್ ಹೃದಯ | ಘಡ ಘಡೀಸುತಾ 4 ದೈತ್ಯನುದರ ಬಗೆದು ಕರುಳ | ಮಾಲೆ ಧರಿಸುತಾನೃತ್ಯವಾಡಿ ತನ್ನ ಪ್ರಳಯ ರೂಪವ ತೋರಿದಾ 5 ಅಕ್ಷರಜ್ಞೆ ಲಕುಮಿ ದೇವಿ | ಪಕ್ಷಿವಾಹನನಾಲಕ್ಷಣ ವೀಕ್ಷಿಸಿ ಕುಕ್ಷಿಯ ಬಿಡುತ | ವತ್ಸನ ನೂಕಿದಳು 6 ಮೋದ ಪಡಿಸುತಾಸದಯದಿಂದ ಗೈದ ಅವನ | ಭಕ್ತ ಶ್ರೇಷ್ಟನಾ 7 ಪತಿ 8 ಭವ ಕೂಪಾ9
--------------
ಗುರುಗೋವಿಂದವಿಠಲರು
ನರಹರಿಯೆನಬಾರದೇ ನಾಲಿಗೆಯೊಳೂ ಪ ಕರ ಶಂಕು ಚಕ್ರ ಶ್ರೀಧರ ನಾರಾಯಣನೊಳ ಗಿರಲಿಕ್ಕೇನು ದೊರಕಾದೆ ನಾಲಿಗೆಯೊಳು1 ದಶರಥ ಸುತನಾಗಿ ವಸುಧೆ ಪಾಲಕನಾದಾ ಅಸಮೆನಂದೆನ ಭಾರದೆ ನಾಲಿಗೆಯೊಳೂ 2 ಕಾಮಜನಕ ರಂಗಾ ಪ್ರೇಮದಿಂದಲಿ ಕಾಯ್ವೊ ಸ್ವಾಮಿಯೆಂದೆನೆಬಾರದೆ ನಾಲಿಗೆಯೊಳು3 ಭರತ ಪುರೀಶ ಮತ್ಪರ ಮಾರ್ಯನೊಳು ಬಂದೂ ಬೆರೆಯಲೆನ್ನುತ ಸಾರಿದೆ ನಾಲಿಗೆಯೊಳು 4
--------------
ಚನ್ನಪಟ್ಟಣದ ಅಹೋಬಲದಾಸರು
ನರಿತಿಹರಾರಿಹರು || ಪರತರಪಾವನನು ಪ ಭಗವದ್ರೂಪನು| ತ್ರಿಗುಣಾತ್ಮಕನು| ಜಗದಾಧಾರಕನು || ಜಗನ್ನಿವಾಸನು| ಜಗದಾನಂದನು| ಜಗದೀಶನು ನೀನು 1 ಜಗನಿಯಾಮಕ | ಜಗದುದ್ಧಾರಕ | ತ್ರಿಜಗವಿರಾಜಿತನು|| ಅಗಣಿತಮಹಿಮನು| ನಿಗಮಗೋಚರ | ತ್ರಿಜಗದ್ವಂದಿತನು2 ಭಕ್ತಾನಂದನು| ಭಕ್ತಾಧೀನನು| ಭಕ್ತಪರಾಯಣನು 3 ಶರಣಾಗತಪರಿ | ಪಾಲಕ | ನೀನು| ಕರುಣಾಸಾಗರನು|| ಪರಬ್ರಹ್ಮನು | ಪರಂಜ್ಯೋತಿಯು | ಪರಮಾತ್ಮನು ನೀನು4 ನಿನ್ನಯ ನಾಮೋ| ಚ್ಚರಿಸಿದ ಪಾಮರ | ಪಾವನನಾಗುವನು|| ನಾಮಾಮೃತವನು | ಸೇವಿಸೆ ಬ್ರಹ್ಮಾ| ನಂದವ ಪೊಂದುವನು5
--------------
ವೆಂಕಟ್‍ರಾವ್
ನಾ ನಿನ್ನ ನಂಬಿದೆನೊ ಗೋಪಾಲಕೃಷ್ಣ ನಿನ್ನ ನಾನಂಬಿದೆನೊ ಎನ್ನ ದಾನೆಂದೆಂಬ ಹಮ್ಮಿನವಶದಲಿ ಸುಮ್ಮನೆ ಮುಳುಗಿದೆನೋ ಶ್ರೀ ಹರಿಯೆ ನಿನ್ನನಾ ನಂಬಿದೆನೋ ಪ ಸಿರಿ ಸಹಿತಲಾಗಿ ಚಿನುಮಯಾತ್ಮಕ ಆನಂದ ಕಟಾಕ್ಷದಿ ತನಯ ನೆಂದೆನ್ನನು ಕಾಯೋ ಮುರಾರಿ 1 ದ್ರಷ್ಟವಾಗಿಹುದೆಲ್ಲ ಸಟೆಯಿದು ನಷ್ಟವಾಗಿಯೆ ಪೋಪುದೋ ಕಷ್ಟ ಸಂಸಾರದ ಬಟ್ಟೆಯು ಸ್ಥಿರವೆಂಬ ತೊಟ್ಟ ಮುರಿದು ಕಾಯೋ ಶಿಷ್ಟ ಮುರಾರಿ 2 ಆಸೆಯಂಬಂಗನೆಯ ನಾಶವಮಾಡಿ ಸಲಹೋ ಎನ್ನ ವಾಸುದೇವನೆ ನಿನ್ನ ದಾಸನ ಕರುಣದಿ ಪಾ ಲಿಸಿ ಕಾಯೋ ಲಕ್ಷ್ಮೀಶ ಮುರಾರಿ 3
--------------
ಕವಿ ಪರಮದೇವದಾಸರು
ನಾಗವೇಣಿಯೆ ಕರೆದು ತಾರೆ ನಾಗಶಯನನಾ ಪ ನಗಧರ ಪ್ರಿಯನೆನಿಪ ನಾಗವರದನಾ ಅ.ಪ ಜಲವಪೊಕ್ಕು ತಮ ನಲಿದ ಜಲರುಹಾಕ್ಷನಾ ಜಲಧಿ ಮಥನವನ್ನು ಗೈದ ಚೆಲುವರರಸನಾ 1 ಧರಣಿಪೊಯ್ದ ಖಳನ ಸೀಳ್ದ ನಳಿನನಾಭನಾ ಭರದಿ ಹೊಳೆವ ಕಂಬದಲ್ಲಿ ತರಳಗೊಲಿದನಾ 2 ಧರಣಿ ಈರಡಿಯ ಮಾಡಿ ಸುರರ ಪೊರೆದನಾ ಧರಣಿಪಾಲಕುಲವ ತರಿದ ಪರಶುರಾಮನಾ 3 ಧರಣಿಸುತೆಯನೊಯ್ದ ಖಳನ ಶಿರವನರಿದನಾ ತರಳತನದಿ ವೊರಳನೆಳೆದ ತರಳ ಕೃಷ್ಣನಾ 4 ತರುಣಿಯರ ವ್ರತವನಳಿದು ಪುರವಗೆಲಿದನಾ ಹರುಷದಿಂದ ತುರಗವೇರಿ ನಲಿವ ಸುಗುಣನಾ 5 ಸುರಪುರದಿ ನಲಿವಿನಿಂದ ನೆರೆದು ನಿಂದನಾ ಶರಣರಕ್ಷ ಲಕ್ಷ್ಮಿಯರಸ ಪರಮಪುರುಷನಾ 6
--------------
ಕವಿ ಲಕ್ಷ್ಮೀಶ
ನಾಟ್ಯವಾಡಿದ ನಮ್ಮ ನಾರಸಿಂಹನ ಭಕ್ತ ಶಿಷ್ಟೇಷ್ಟ ಜನಪ್ರಿಯ ಶ್ರೀ ಪಾರ್ವತೀಶ ಪ. ಪರಮ ಸಂತೋಷದಲಿ ಉದಯಸ್ತ ಪರಿಯಂತ ಸಿರಿವರ ರಾಮನ ಪರಮ ನಾಮಾಮೃತವ ತರುಣಿ ಗಿರಿಜೆಗೆ ಅರುಹಿ ಮರೆದು ತನುಮನವನ್ನು ಉರುತರದ ಭಕ್ತಿಯಿಂ ಪರಮ ವೈರಾಗ್ಯನಿಧಿ 1 ತರತಮ್ಯ ಜಗಸತ್ಯ ಹರಿಯು ಸರ್ವೋತ್ತಮನು ಸಿರಿಯು ಅನಂತರದಿ ವಾಯು ಜೀವೋತ್ತಮನು ಪರಮ ವೈರಾಗ್ಯ ಹರ ವೈಷ್ಣವೊತ್ತಮನೆನುತ ಉರವಣಿಸಿ ನುಡಿಯುವರ ನುಡಿ ಕೇಳಿ ಹರುಷದಿ 2 ಗೋಪಾಲಕೃಷ್ಣವಿಠಲ ತಾ ಪ್ರೀತಿಯಿಂದಲಿ ಗೋಪತನಯರನೆಲ್ಲ ಸಲಹಲೋಸುಗದಿ ಪಾಪಿ ಕಾಳಿಂಗನ ಫಣೆಯಲ್ಲಿ ಕುಣಿದುದು ಪರಿ ಎಂದೆನುತ ತಾ ಪ್ರೀತಿಯಿಂ ತೋರಿ 3
--------------
ಅಂಬಾಬಾಯಿ
ನಾನೇ ಭ್ರಮಿಸಿದೆನೋ ವಿಷಯ ಸಂಗ ನೀನೇ ನಲಿದಿತ್ತೆಯೋ ಪ. ಗಾನಲೋಲನೆ ಕೃಷ್ಣ ಏನೆಂಬುದರಿಯೆನೊ ಮೌನಿ ಜನಪ್ರಿಯ ಧ್ಯಾನಗಮ್ಯನೆ ರಂಗ ಅ.ಪ. ನೂಕುತ ದಿನ ಕಳೆದೆ ಕಾಕು ಯುಕುತಿಯಲ್ಲಿ ವ್ಯಾಕುಲ ಮನಕಿಲ್ಲ ಶ್ರೀಕಾಂತ ನಿನ್ನಿಚ್ಛೆ ಸುಖದುಃಖ ನಿಕರವ 1 ಆಟ ಪಾಟ ನೋಟವೂ ಊಟ ಕೂಟ ಕಾಟ ಕರ್ಮಗಳೆಲ್ಲವೂ ಹಾಟಕಾಂಬರ ನಿನ್ನಾಟವÉನ್ನಲುಭವ ದಾಟಿಸುವವೊ ತೆರೆ ಏಟಿಗೆ ಕೊಡುವುವೋ 2 ನರಕಕೆ ಕಾರಣವೋ ಹೇ ಶ್ರೀನರ ಹರಿ ನಿನ್ನ ಪ್ರೀತಿ ಕರವೋ ಸಂಚಿತ ಕರ್ಮ ಹರಿಸುತ ವರ ಸುಖ ಪಾಲಿಪ ಗುರುತಿನ ಪರಿಯೋ 3 ದೇಹಕ್ಕೆ ಹಿತಕರವೋ ಇಲ್ಲವೆ ಮನ ದಾಹಕ್ಕೆ ಮೃತ ಕರವೋ ದೇಹ ಮೋಹಾದಿಗಳಳಿದು ನಿಶ್ಚಲ ತತ್ವ ಶ್ರೀಹರಿ ತೋರುವ ತೆರವೊ ಒಂದರಿಯೆ 4 ಪಾಪಕ್ಕೆ ಹಿತಕರವೋ ಇಲ್ಲವೆ ಮನ ದಾಹಕ್ಕೆ ಮೃತ ಕರವೋ ದೇಹ ಮೋಹಾದಿಗಳಳಿದು ನಿಶ್ಚಲ ತತ್ವ ಶ್ರೀಹರಿ ತೋರುವ ತೆರವೊ ಒಂದರಿಯೆ 5 ಪಾಪಕ್ಕೆ ಕಾರಣವೋ ಈ ಕರ್ಮಗಳ ಳಾಪದುದ್ಧಾರಕವೋ ಗೋಪಾಲಕೃಷ್ಣವಿಠ್ಠಲನೆ ಮದ್ಗುರು ಬಿಂಬ ವ್ಯಾಪಾರದ್ವಯ ನಿಂದು ನೀ ಪ್ರೀತನಾಗಲೊ 6
--------------
ಅಂಬಾಬಾಯಿ
ನಾರಸಿಂಹನೆ ಘೋರರೂಪನೆ ತೋರು ಮೊಗವನು ಕರುಣದಿ ಚಾರುಗಾತ್ರನೆ ಭೀರು ತ್ರಾತನೆ ಸೇರಿಹೆನು ತವ ಚರಣದಿ ಪ ಘೋರತರ ಸಂಸಾರ ಶರಧಿಯ ತೀರ ಗಾಣೆನು ಧೀರನೆ ಪಾರಗಾಣಿಪೊದ್ಯಾರ ಕಾಣೆನುಯಾ ಭವರುಜಹಾರನೆ 1 ದಾನವನ ತಪಜ್ವಾಲೆಯಿಂದಲಿ ಮಾನುಷರು ಕಳವಳನೆಯಾ ಸೂನುತಾರಣ ನೆವದಿ ದಿವಿಜರ ಮಾನವನು ನೆರೆ ಕಾಯ್ದೆಯಾ 2 ದುಷ್ಟಸಂಹರ ಶಿಷ್ಟಪಾಲಕನೆಂಬ ಬಿರುದೆತ್ತಿಹುದಲಾ ಸೃಷ್ಟಿಗೀಶನೆ ಕಷ್ಟ ತೊಲಗಿಸೋ ಶಿಷ್ಟ ನರಸಿಂಹವಿಠ್ಠಲಾ 3
--------------
ನರಸಿಂಹವಿಠಲರು
ನಾರಸಿಂಹನೆ ಧೀರ | ನಂಬಿದೆನೊ ಪೊರೆಯೊ ಶ್ರೀ ರಮಾಪತಿ ವೀರ | ಕರಿಗಿರಿ ವಿಹಾರ ಪ. ಸಾರಿದೆನೊ ನಿನ್ನ ಪದವ ಅನುದಿನ ಸೇರಿಸೆನ್ನನು ಭಕ್ತಕೂಟದಿ ಗಾರು ಮಾಡುವುದುಚಿತವೇ ಹರಿ ಭವ ಸಮುದ್ರದಿ ಅ.ಪ. ತಾಪ | ನಾನಾರಿಗುಸುರಲೊ ಒಡಲ ದುಃಖವ ಭೂಪ | ನೀನಲ್ಲದಿಲ್ಲವೊ ಭವ ಶ್ರೀಪ | ತೋರದಿರು ಕೋಪ ಘುಡು ಘುಡುಸಿ ನೀ ಎನ್ನ ಬೆದರಿಸೆ ತಡೆವೆನೇ ನಿನ್ನ ಕೋಪದಗ್ನಿಗೆ ಬಿಂಕ ಎನ್ನೊಳು ತಡೆಯೊ ಎನ್ನ ದುರುಳತನಗಳ ಕಡುಕರುಣಿ ನೀನಲ್ಲವೆ ಹರಿ ಒಡಲೊಳಗೆ ಪ್ರೇರಕನು ನೀನೆ ನಡಸಿದಂದದಿ ನಡೆವೆನಲ್ಲದೆ ಒಡೆಯ ಎನ್ನ ಸ್ವತಂತ್ರವೇನೊ? 1 ದುರುಳತನದಲಿ ದೈತ್ಯ | ಭೂವಲಯವೆಲ್ಲವ ಉರವಣಿಸಿ ದುಷ್ಕುತ್ಯ | ಎಸಗುತಿರೆ ದುಃಖದಿ ಸುರರು ಮೊರೆಯಿಡೆ ಸತ್ಯ | ದೃಢಮನದಿ ಭೃತ್ಯ ಕರಕರೆ ಪಿತ ಬಡಿಸುತಿರಲು ದೊರೆಯೆ ನೀ ಪೊರೆ ಎಂದು ಮೊರೆಯಿಡೆ ಸರ್ವವ್ಯಾಪಕನೆಂದು ತೋರಲು ತ್ವರಿತದಲಿ ಕಂಭದಲಿ ಬಂದು ಸರಸಿಜವು ಕಂಗೆಡುವೊ ಕಾಲದಿ ಧರಿಸಿ ತೊಡೆಯ ಮೇಲಸುರ ಕಾಯವ ಕರುಳ ಬಗೆದು ಮಾಲೆ ಧರಿಸಿ ಪೊರೆದೆಯೊ ಸ್ತುತಿ ಕೇಳಿ ಬಾಲನ 2 ಅಜಭವಾದಿಗಳೆಲ್ಲ | ಸ್ತುತಿಸಿದರೆ ಮಣಿಯದ ಭುಜಗಶಾಯಿ ಶ್ರೀ ನಲ್ಲ | ನಾ ನಿನ್ನ ಸ್ತುತಿಸಿ ಭಜಿಸಲಾಪೆನೆ ಕ್ಷುಲ್ಲ | ಮಾನವನ ಸೊಲ್ಲ ನಿಜಮನವ ನೀ ತಿಳಿದು ಸಲಹೊ ಕಮಲ ತೋರಿ ಕುಜನನಲ್ಲವೊ ಹಿರಿಯರೆನಗೆ ಪಥ ತೋರುತಿಹರೊ ರಜ ತಮವ ದೂರಟ್ಟಿ ಶುದ್ಧದಿ ಭಜಿಸುವಂದದಿ ಕೃಪೆಯ ಮಾಡಿ ಸುಜನರೆನ್ನನು ಪಾಲಿಸುತ್ತಿರೆ ನಿಜದಿ ಗೋಪಾಲಕೃಷ್ಣವಿಠ್ಠಲ3
--------------
ಅಂಬಾಬಾಯಿ
ನಾರಾಯಣ ನಿನ್ನ ಚರಣ ಸೇವೆಯ ಬಿಟ್ಟು ಸಾರಸಾಕ್ಷನೆ ಪ್ರಾಣದಿರಲಾರೆ ಕ್ಷಣವೂ ಪ ದಾರಿಯೆನಗಿದೊಂದೇ ತೊರ್ಪದು ಸುಖನಿಧಿ ಬಾರಿಬಾರಿಗೂ ಹರಿ ದ್ಯಾನಾನಂದದೊಳಿಗೆ ಅ.ಪ ಅನ್ನವಸ್ತ್ರಂಗಳಿಗಾಗಿ ದುಡಿವದೊಂದು ಚೆನ್ನ ಪುತ್ರರ ರಕ್ಷಣೆಯೊಂದೆಡೆ ತನ್ನ ಮರ್ಯಾದೆ ಕುಂದುಗಳೆಂಬೊ ವ್ಯಸನದಿ ಭಿನ್ನಿಸಿ ತಾಪತ್ರಯ ಪಡುತಿರುವಿಲ್ಲಿ 1 ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಪ್ರೇಮ ಬಾಂಧವರಾಗೆನ್ನನಪ್ಪಿಹರೋ ಸ್ವಾಮಿ ನೀಯೆನ್ನನವರ ಧಾಳಿಗಿಡದಂತೆ ಸಾಮಜವರದ ಸಲಹೆಂದು ಸಂತೋಷದಿ 2 ಭಾಗೀರತಿಪಿತ ಭಾಗವತಪ್ರೀತ ಯೋಗಿಜನಂಗಳೊಳತಿ ಹಿತನೇ ಸಾಗರಶಯನನೆ ಭೋಗಿಗಳ ಪುಣ್ಯನೆ ಬಾಗುವ ಶರಣರ ಬಹುಭಾಗ್ಯನೇ 3 ನಾನಿಲ್ಲಿಗೆ ಬಂದ ಕಾರಣ ಕಾಣೆನೋ ದೀನಪಾಲಕ ಕಾರ್ಯಮಾಡಿಸೋಯನ್ನಿಂ ಏನಾದರು ಮಾಡು ತಪ್ಪಹೊರಿಸಬೇಡ ಶ್ರೀನಿಧಿ ಹೆಜ್ಜಾಜಿಕೇಶವ ಪಾಲಿಸು 4
--------------
ಶಾಮಶರ್ಮರು
ನಿಗಮ ಆಗಮಗೋಚರ ಜಗನ್ಮೋಹ ಜಗದೀಶ ಪಾಲಿಸು ಎನ್ನ ಪ ಖಗವರಗಮನ ಜಗದ ಜೀವನ ಪೊಗಳುವೆ ನಗಧರ ಅನಘನೆ ನಿನ್ನ ನಗೆ ಮೊಗದೋರೆನಗಗಲದೆ ಅನುದಿನ ನಗಜನಮಿತ ಮಿಗಿಲಗಣಿತ ಮಹಿಮ ಅ.ಪ ಕದನಕಂಠೀರವ ಉದಧಿಸದನ ಮಹ ಅಧಮಕುಲದ ಮದಸಂಹರ ಹದಿನಾರುಸಾವಿರ ಸುದತಿಯರ ಮನ ವಿಧ ವಿಧ ಸುಲಿದ ಸುಂದರ ಸದಮಲರಾಧೇಯ ಮದನಕದನದಿಂ ಕದಲದ ಆನಂದ ಮಂದಿರ ಕುದುರೆ ತಿರುವಿ ಪಾದಪದುಮದಾಸನ ಘೋರ ಕದನಗೆಲಿಸಿದ ಗಂಭೀರ ಯುದುಕುಲಪಾವನ ಮದನನಯ್ಯ ರಮಾ ಪದುಮಾವತಿಯ ಪಂಚಜೀವನಸದನ ಪದುಮವದನ ಸದಸದುಗುಣಗಳ ಸದ್ಹøದಯ ಉದಯ ಮುದ ವುದಯಾಗೆನ್ನೊದನದಿ1 ನಲಿದು ನಲಿದು ಪೊಂಗೊಳಲುನೂದುವ ಬಲುಚೆಲುವ ಚಿದ್ರೂಪನಾಟಕ ಒಲದು ಭಜಕಜನರ್ಹೊಲಬು ತಿಳಿವ ಚಿ ತ್ಕಳಾಭರಿತ ವಿಶ್ವವ್ಯಾಪಕ ಜಲಜಮಿತ್ರ ಕೋಟಿಕಳೆಕಿರಣಗಳಿಂ ಖಳಕುಲಭೀತ ಸುಫಲಪ್ರದ ಪರತರ ಇಳೆಮಂಡಲತ್ರಯ ಪಾಲಕ ಕಲಿಮಲಹರ ನಿರ್ಮಲನಿಜಚರಿತ ಮಲಿನ ಕಳೆದು ನಿರ್ಮಲನೆನಿಸೆನ್ನ ಒಲಿದುಪಾಲಿಸು ಸ್ಥಿರ ಚಲಿಸಿದಚಲಮನ ಸುಲಭಭಕುತ ಬಲ ವಿಲಿಸಿತಕರುಣಿ 2 ಸಿಡಿಲುಕೋಟಿಸಮ ಫಡಫಡಸ್ತಂಭವ ಒಡೆದು ಮೂಡಿದ ತ್ರಿವಿಕ್ರಮ ಕಡುರೋಷದಿ ಕೆಂಗಿಡಿಗಳನುಗುಳುವ ಕಡುಗಲಿಗಳಗಲಿ ನಿಸ್ಸೀಮ ಘುಡುಘುಡಿಸುತ ಆರ್ಭಟಿಸುತ ದುರುಳನ ಒಡಲಬಗಿದ ಕಡುಪರಾಕ್ರಮ ಗಡಗಡ ನಡುಗುವ ದೃಢತರ ಬಾಲನ ಪಿಡಿದು ಪೊರೆದ ಭಕ್ತ ಸುಖಧಾಮ ಉಡುಮಂಡಲ ವರಗಡರಿದ ಶಾಪವ ತಡೆಯದೆ ಹಡೆಹಾಯ್ಸ್ಹಿಡಿದೆಲೋಕವರ ಜಡಜಭವ ತೊಡರನು ಗಡ ಕಡಿದೆನ್ನಯ ನುಡಿಯೊಳೊಡೆದು ಮೂಡು ಒಡೆಯ ಶ್ರೀರಾಮ ಪ್ರಭು 3
--------------
ರಾಮದಾಸರು
ನಿಜ ಭಕ್ತಿ ತೋರಿದನು ಜಗಕೆ ಕೃಷ್ಣ್ಣಾ ವಿಜಯನಾ ಸತಿಯರಿಬ್ಬರ ನೆವದಿ ಮುದದೀ ಪ. ಹಸ್ತಿವರದನು ತಂಗಿಯರ ನೋಡಬೇಕೆಂದು ಹಸ್ತಿನಾಪುರಕೆ ಬಂದ್ಹರುಷದಿಂದ ಚಿತ್ತ ನಿರ್ಮಲದಿ ಪಾಂಡವರು ಪೂಜೆಸೆ ನಲಿದು ಭಕ್ತಿ ಭಾವಕೆ ಮೆಚ್ಚಿ ದ್ರೌಪತಿಗೆ ವಲಿದೂ 1 ಅಣ್ಣನೆಂಬುವ ಭಾವದಲಿ ಸುಭದ್ರೆಯು ಇರಲು ಘನ್ನ ಮಹಿಮನು ಎಂದು ದ್ರೌಪತಿಯು ತಿಳಿದೂ ಸ್ವರ್ಣಗರ್ಭನ ಪಿತನು ಈರೇಳು ಜಗದೊಡೆಯ ಎನ್ನ ಭಾಗದ ದೈವ ಸಲಹೆಂದು ನುತಿಸೇ 2 ಅಂತರಂಗದ ಭಕ್ತಿ ಆನಂದಮಯ ತಿಳಿದು ಕಂತುಪಿತ ಕರಗಿದಾ ಮಮತೆ ಪ್ರೇಮದಲಿ ಶಾಂತಚಿತ್ತಳೆ ತಂಗಿ ದ್ರೌಪತಿಯೆ ಬಾರೆನುತ ಇಂತು ನುಡಿನುಡಿಗೆ ಆಡಲು ಕರುಣೆಯಿಂದ 3 ಕೇಳಿ ಇದನು ಸುಭದ್ರೆ ತಾಳಲಾರದೆ ಅಜ್ಞ ಬಾಲೆ ನಿಜ ತಂಗಿ ನಾನಿರಲು ಐವರಿಗೆ ಲೋಲೆಯಾದವಳೆ ಬಲು ಮೇಲಾದವಳೆ ಎಂದು ಬಾಲಚಂದ್ರನ ಪೋಲ್ವ ಮುಖ ಬಾಡಿಸಿರಿಲೂ 4 ಕಂಡು ಕಮಲಾಕಾಂತ ವಡಹುಟ್ಟಿದಳ ಬೆಂಡಾದ ತೆರವ ಪೇಳೆನಲು ಖತಿಯಿಂದಾ ಪುಂಡರೀಕಾಕ್ಷ ಎನ್ನುಳಿದು ನಿಜ ಭಾವದಲಿ ಕಂಡವರ ಸುತೆ ನಿನಗೆ ಮಿಗಿಲಾದಳೆನಲೂ 5 ಸಚ್ಚಿದಾನಂದ ವಿಗ್ರಹ ನಗುತ ನೆನೆದನೊಂ ದಚ್ಚರಿಯ ಕೌತುಕವ ತೋರ್ವೆನೆಂದೂ ಅಚ್ಛಿದ್ರ ಅಕ್ಲೇಶ ಆನಂದಮಯ ತಾನು ಕ್ಲೇಶ ಪಡುತ ವರಲಿದನೂ 6 ಬಾರಮ್ಮಾ ತಂಗಿ ಸುಭದ್ರೆ ಬೆರಳಲಿ ರಕ್ತ ಸೋರುತಿದೆ ಬೇಗೊಂದು ಚಿಂದಿ ತಾರೆ ತಾರೆನಲು ಗಡಬಡಿಸಿ ಮನೆಯಲ್ಲ ಹುಡುಕತಲಿ ಬಟ್ಟೆ ಕಂಗೆಡುತಾ 7 ಎತ್ತ ನೋಡಿದರತ್ತ ಪಟ್ಟೆ ಪೀತಾಂಬರವು ಕಂಚುಕ ಮಕುಟ ಮೆರೆಯೇ ಚಿತ್ರದಾ ವಸನ ಅರಮನೆಯಲ್ಲಿ ತುಂಬಿರಲು ಮತ್ತದರ ಮಮತೆ ಅಣ್ಣನಿಗೆ ಅಧಿಕವಾಗೆ 8 ಬರಲಿಲ್ಲ ಸುಭದ್ರೆ ಬಾರಮ್ಮ ದೌಪದಿಯೆ ವರ ತಂಗಿ ಬೇಗ ಕೊಡೆ ಹರಕು ಬಟ್ಟೆ ಸುರಿಯುತಿದೆ ರಕ್ತ ಬೆರಳಿಂದ ನೋಡೆಂದನಲು ಕಿರುನಗೆಯ ನಗುತ ಶರಗ್ಹರಿದು ಕಟ್ಟಿದಳೂ 9 ಬಂದಳಾ ವೇಳೆಯಲಿ ಸುಂದರಾಂಗಿ ಸುಭದ್ರೆ ನಿಂದು ನೋಡಿದಳೂ ದ್ರೌಪತಿಯ ಕೃತಿಯಾ ಮಂದಗಮನೆಯು ನಾಚಿ ಮೊಗವ ತಗ್ಗಿಸಿ ನಿಲಲು ಇಂದಿರೇಶನು ಇದರ ವಿವರ ತೋರಿದನು 10 ಬೆರಗಾದ ಪರಿತೋರಿ ಸಿರಿಕೃಷ್ಣ ಕೇಳಿದನು ಜರತಾರಿ ಸೆರಗ್ಹರಿದು ಕಿರುನಗೆಯ ನಕ್ಕಾ ಪರಿ ಏನೆ ಎಲೆ ತಂಗಿ ನರಳುವೋ ಎನ ನೋಡಿ ಪರಿಹಾಸ್ಯವಾಯಿತೆ ನಿನಗೆ ಎಂತೆಂದಾ 11 ಅಣ್ಣಯ್ಯ ನಿನಗೆ ಮಿಗಿಲಾಯಿತೇ ಈ ಶೆರಗು ಎನ್ನ ಅಭಿಮಾನ ಕಾಯುವ ದೈವ ನೀನೂ ಘನ್ನ ಮಹಿಮಾಂಗ ನಿನಗಿನ್ನು ಕ್ಲೇಶಗಳುಂಟೆ ನಿನ್ನ ಲೀಲೆಗೆ ಹರುಷ ಉಕ್ಕಿತೆಂದನಲೂ 12 ಹೇ ನಾರಿ ನಾನನಾಥರಿಗೆ ನಾಥನು ಮುಂದೆ ನೀನಿತ್ತ ವಸನ ಅಕ್ಷಯವಾಗಲೆಂದು ಶ್ರೀನಾಥ ದ್ರೌಪದಿ ಸುಭದ್ರೆಯ ಮನ್ನಿಸಿ ಮೆರೆದಜ್ಞಾನಿ ಜನಪ್ರಿಯನು ಗೋಪಾಲಕೃಷ್ಣವಿಠಲಾ13
--------------
ಅಂಬಾಬಾಯಿ
ನಿಟಿಲಾಕ್ಷ ಪ. ಹರ ರುದ್ರಾಕ್ಷನೆ ಕರುಣದಿ ರಕ್ಷಿಸು ಅ.ಪ. ಅವನಿ ಪಾಲಕಗೆ 1 ದೂರೆಂದೆನಿಸಿದ | ಮಾರುತ ನಿಂದಲಿಸಾರತತ್ವ ಶ್ರುತ | ದೂರ್ವಾಸಾಭಿಧ 2 ಪರಿ | ಲೋಲಾಯತ ಮನಪಾಲಿಸು ಹರಿಯಲಿ | ಶೈಲಜೆ ರಮಣಾ 3 ದೈತ್ಯಾರಾಧಿತ | ದೈತ್ಯವರದ ಶಿವತೊತ್ತಿನ ಪಾಲಿಸಿ | ಮೃತ್ಯುಂಜಯಾಭಿದ4 ಗುಪ್ತ ಮಹಿಮ ಗುರು | ಗೋವಿಂದ ವಿಠಲನಭೃತ್ಯನ ಸುತನು | ಚಿತ್ತವ ಪಾಲಿಸು 5
--------------
ಗುರುಗೋವಿಂದವಿಠಲರು
ನಿತ್ಯ ಶುಭಮಂಗಳಂ ಪ ಜಗದೇಕ ವೀರನಿಗೆ ಜಗದುದರ ದೇವನಿಗೆ ಜಗವ ಬಾಯೊಳು ತೋರ್ದ ಮಹಮಹಿಮಗೆ ಜಗವ ಸೃಜಿಸಿದ ಹರಿಗೆ ಜಗವಪಾಲಿಪದೊರೆಗೆ ಜಗವ ಸಂಹರಿಸುವಗೆ ಜಯ ಮಂಗಳಂ ಅ.ಪ ವರಮುನಿಯ ತಾಡನದಿ ಹೊರಡೆ ಲಕ್ಷ್ಮಿಯು ಆಗ ಗಿರಿಗಿಳಿದು ಬಂದು ಹುತ್ತದೊಳಗಿರಲು ಪರಮೇಷ್ಠಿ ಅರಸಿಪಾಲ್ಗರಿಯೆ ಗೋಪಾಲಕನ ವರಕುಠಾರದ ಪೆಟ್ಟಿಗಂಜಿ ನಟಿಸಿದವಗೆ 1 ಗಿರಿಗಿರಿಯ ಸಂಚರಿಸಿ ಅಡವಿಮೃಗ ಬೆನ್ನಟ್ಟಿ ಪರಮಪದ್ಮಾವತಿಯ ಮನದಿ ಕಂಡು ದುರುಳ ಮಾತುಗಳಾಡಿ ಶಿಲೆಯತಾಡಿತನಾಗಿ ಕೊರವಂಜಿ ರೂಪದಿಂ ಕಣಿಯ ಹೇಳಿದಗೆ 2 ಆಕಾಶರಾಜನಿಗೆ ಅಳಿಯನೆನಸಿಕೊಂಡು ಆಕೆ ಪದ್ಮಾವತಿಯ ಕೂಡಿದವ ಬೇಕಾದ ವರಗಳನು ಕೊಡುತ ಭಕ್ತರ ಪೊರೆವಶ್ರೀಕಾಂತ ಕಮಲನಾಭವಿಠ್ಠಲಗೆ 3
--------------
ನಿಡಗುರುಕಿ ಜೀವೂಬಾಯಿ
ನಿತ್ಯ ಶುಭ ಮಂಗಳಂ ಭಯ ವಿನಾಶನದೇವ ಶ್ರೀನಿವಾಸನಿಗೆ ಪ. ಮಂಗಳಂ ಜಲಚರಗೆ ಮಂಗಳಂ ಗಿರಿಧರಗೆ ಮಂಗಳಂ ಭೂದೇವಿ ರಕ್ಷಕನಿಗೆ ಮಂಗಳಂ ನರಹರಿಗೆ ಮಂಗಳಂ ಮಾಣವಗೆ ಮಂಗಳಂ ಭಾರ್ಗವಗೆ ದಾಶರಥಿಗೆ 1 ಮಂಗಳಂ ಗೋಪಾಂಗನೆಯರ ಕಾಯ್ದವನಿಗೆ ಮಂಗಳಂ ತ್ರಿಪುರ ಸುರರಳಿದ ಹರಿಗೆ ಮಂಗಳಂ ಹಯವೇರಿ ಕಲಿಮುಖರ ಗೆಲಿದವಗೆ ಮಂಗಳಂ ಶ್ರೀಕೃಷ್ಣ ಶ್ರೀನಿವಾಸನಿಗೆ 2 ಆಪಾದಮೌಳಿ ಪಾವನರೂಪನಿಗೆ ಆಪನ್ನ ರಕ್ಷಕಗೆ ಆದಿರೂಪನಿಗೆ ಆಪದ್ಭಾಂಧವ ಶ್ರೀಗುರುಗಳಂತರ್ಗತಗೆ ಗೋಪಾಲಕೃಷ್ಣವಿಠ್ಠಲಮೂರ್ತಿಗೆ 3
--------------
ಅಂಬಾಬಾಯಿ