ಒಟ್ಟು 421 ಕಡೆಗಳಲ್ಲಿ , 64 ದಾಸರು , 340 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುಕೃತ ವಮ್ಮರಂಗನ ಕಾಂತೆಯರದಮ್ಮಅನಂತ ದೇಶಗಳು ಇವನಂತ ತಿಳಿಯವುಈ ಕಾಂತೆಯರುಒಲಿದರೆಂತು ಪೇಳಮ್ಮ ಪ. ಪಟ್ಟಾವಳಿ ಕೊಟ್ಟರು ರಂಗಗೆ ಇಟ್ಟರು ದಿವ್ಯ ಮುಕುಟವಇಟ್ಟರು ದಿವ್ಯ ಮುಕುಟ ಮುತ್ತಿನಹಾರ ಗಟ್ಟಿ ಕಂಕಣದ ಕೆಲದೆಯರು1 ಕೇಶರ ಬೆರೆಸಿದ ಮೀಸಲ ಶ್ರೀಗಂಧವಶ್ರೀಶನ ಸತಿಯರು ಹಿಡಕೊಂಡುಶ್ರೀಶನ ಸತಿಯರು ಹಿಡಕೊಂಡುರಂಗಗೆ ಲೇಪಿಸೆವೆಂಬೊ ಭರದಿಂದ2 ಸಾರ ತುಳಸಿಯು ಬೆರೆದ ಪಾರಿಜಾತದ ಮಾಲೆವಾರಿಜ ಮುಖಿಯರು ಹಿಡಕೊಂಡವಾರಿಜ ಮುಖಿಯರು ಹಿಡಕೊಂಡುರಂಗಗೆ ಏರಿಸೆವೆಂಬೊ ಭರದಿಂದ3 ಪಚ್ಚಮಾಣಿಕ ಬಿಗಿದ ಹೆಚ್ಚಿನ ಸರಗಳುಮಚ್ಛನೇತ್ರಿಯರು ಹಿಡಕೊಂಡುಮಚ್ಛನೇತ್ರಿಯರು ಹಿಡಕೊಂಡುರಂಗಗೆ ಏರಿಸೆವೆಂಬೊ ಭರದಿಂದ4 ಕೊರಳಲಿ ಸರಮಾಲೆ ಅರಳಿದ ಮುಖ ಕಮಲಎರಳೆ ನೋಟದಲಿ ಚಲುವನಎರಳೆ ನೋಟದಲಿ ಚಲುವ ಚನ್ನಿಗರಾಯನ ತರುವಳಿನೋಡಿ ಹರುಷಾಗಿ 5 ಹಸ್ತದಿ ಹಣಿಮ್ಯಾಲೆ ಕಸ್ತೂರಿ ಬಟ್ಟಿಟ್ಟುಉತ್ತಮ ತಿಲಕ ರಚಿಸುತಉತ್ತಮ ತಿಲಕ ರಚಿಸುತರಂಗನ ಹತ್ತಿರ ನಿಂತ ಕೆಲವರು6 ಇನ್ನೋರ್ವಳು ಬಂದು ಕನ್ನಡಿ ತೋರುತಕರ್ಣ ಕುಂಡಲವ ಸರಿಸುತಕರ್ಣ ಕುಂಡಲವ ಸರಿಸುತ ರಾಮೇಶನ ಚನ್ನಾಗಿ ನೋಡಿ ಸುಖಿಸುತ 7
--------------
ಗಲಗಲಿಅವ್ವನವರು
ಸುರನರ ವರಗುರು | ಸುರನರ ಪ. ಸುರನರ ವರಗುರು ನಿನ್ನಾ | ದಿವ್ಯ ಚರಣಕ್ಕೆ ಎರಗುವೆ ನಿನ್ನಾ | ಆಹ ಕರುಣದಿಂದೀಕ್ಷಿಸಿ ವರಮತಿ ಪಾಲಿಸಿ ಹರಿಯ ಶ್ರೀ ಚರಣಕ್ಕೆ ಎರಗಿಸು ಮನವನೂ ಅ.ಪ. ಹಣ್ಣೆಂದು ನುಂಗೆ ಪೋದುದಕೇ | ಓದಿ ತಣ್ಣಗೆ ಮಾಡಿದ ಮನಕೇ | ಹರಿ ಯನ್ನು ಓಲೈಸಲು ಮರಕೇ | ಅಡರಿ ಹೆಣ್ಣನ್ನೆ ತೊರೆದನು ವ್ರತಕೇ | ಆಹ ಸಣ್ಣ ರೂಪದಿ ಪುರವನ್ನು ಶೋಧಿಸಿ | ಮುಡಿ ಹೊನ್ನು ಸಲ್ಲಿಸಿ ವಾರ್ತೆಯನ್ನು ಪೇಳಿದ ಧೀರ 1 ರಕ್ಕಸಿಯೊಳು ಪ್ರೇಮದಾಟಾ | ದನುಜ ಗಿಕ್ಕಿದ ಕೂಳಿಗಾರಾಟ | ಅಣ್ಣ ತಕ್ಕೊಂಡ ಎಡೆಯಲ್ಲಿ ಊಟ | ಬಲು ಸೊಕ್ಕಿದರೊಡನೆ ಕಾದಾಟ | ಆಹ ಮಕ್ಕಳ ಕೊಯ್ದವ ನಿಕ್ಕಿದಸ್ತ್ರಕೆ ತಲೆ ಇಕ್ಕದೆ ಪುರವಾಳ್ದ ರಕ್ಕಸಾಂತಕ ದೂತ 2 ಗುರುವಿಗೆ ವರೆದು ತತ್ವಾರ್ಥ | ಮತ್ತೆ ಧರೆಯಲ್ಲಿ ಚರಿಸಿದ ವ್ಯಾಪ್ತಾ | ಮುನಿ ವರರೊಳು ಬಲು ಶ್ರೇಷ್ಠನೀತಾ | ಪೇಳ್ದ ಪರಿಶುದ್ಧ ವೇದ ಭಾವಾರ್ಥ | ಆಹ ಸುರರುಷಿ ಪೂಜಿಪ ಹರಿಗಿರಿಯಲಿ ಸತ್ಯ ವರಸೂನು ಚರಣದಿ ಗುರುಭಕ್ತಿರತ ವ್ರತ 3 ದುಡಿದು ಸ್ವಾಮಿಗೆ ಪ್ರತಿಫಲವಾ | ಬೇಡ ಕೊಂಡ ವ್ರತವಾ | ಗಿರಿ ವಡೆದನು ಕೈ ಜಾರೆ ಶತವಾ ಮಾಡಿ ಗೋಪಿ ಚಂದನವಾ | ಆಹ ಕಡಲ ತೀರದಿ ತನ್ನ ವಡೆಯನ್ನ ನಿಲ್ಲಿಸಿ ಅಡರಿದ ಹಿಮಗಿರಿ ದೃಢಕಾಯ ಹರಿಪ್ರೀಯ 4 ಎಷ್ಟು ವರ್ಣಿಸಲಳವಿವನಾ | ಮಹ ಗುಟ್ಟು ಮಂತ್ರವ ಸಾಧನವನಾ | ಮೂರು ಬಟ್ಟೆ ಮಾಡುವ ನಂಬಿದವನಾ | ಜ್ಞಾನ ಕೊಟ್ಟು ಕಾಯುವ ಕರುಣಿ ಮಾನ್ಯಾ | ಆಹ ದಿಟ್ಟ ಗೋಪಾಲಕೃಷ್ಣವಿಠ್ಠಲ ಬ್ರಹ್ಮನ ಪಟ್ಟ ಕಟ್ಟುವನೆಂದು ಘಟ್ಟಿ ಮನದಲಿಪ್ಪ 5
--------------
ಅಂಬಾಬಾಯಿ
ಸುಳ್ಳಿನೊಳಗೆ ನಾ ಬಲು ಸುಳ್ಳ ನನ್ನ ಸುಳ್ಳೆ ನನಗೊಳುಪಿಲ್ಲ ಪ ಸುಳ್ಳು ಹೇಳುವೆನು ಅಳತಿಲ್ಲ ಇದು ಎಳ್ಳಷ್ಟಾದರು ಸುಳ್ಳಲ್ಲ ಅ.ಪ ಸೂಜಿಗಡತರ್ಹೊಗೆಯೇಳ್ವುದ ಕಂಡೆ ಅಗ್ನಿ ಮೂಜಗಡರಿ ಸುಡುವುದು ಕಂಡೆ ಸೋಜಿಗ ಕಂಡೆನು ಉರಿಯೊಳು ಮತ್ತೊಂದು ಬೀಜ ಮೊಳೆತು ತೆನೆಯಾದದ್ದ ಕಂಡೆ 1 ಸಾಸಿವೆಕಾಳಷ್ಟು ಬಟ್ಟಲ ಕಂಡೆ ಇಡೀ ದೇಶ ಅದರೊಳಗಿಟ್ಟಿದ್ದ್ದು ಕಂಡೆ ಹಾಸ್ಯದ ಮಾತಲ್ಲ ತಿರುಗಿ ನೋಡಿ ನಾ ದೇಶದೊಳಗೆ ಆ ಬಟ್ಟಲ ಕಂಡೆ 2 ಮೈಯೆಲ್ಲ ತೂತಿನ ತಿದಿಯ ಕಂಡೆ ಅದು ವಾಯುತುಂಬಿ ಬಾತದ್ದು ಕಂಡೆ ದೀವಿಗೆಯಿಲ್ಲದೆ ಬೆಳಗದುಕಂಡೆ ಮತ್ತು ಕಿವುಡ ಮೂಕರ ಏಕಾಂತ ಕಂಡೆ 3 ಉರಿವುದ ಕಂಡೆನು ಬೆಂಕಿಲ್ಲದೆ ಅದು ಆರಿದ್ದಕಂಡೆನು ನೀರಿಲ್ಲದೆ ಹೊರುವುದ ಕಂಡೆನು ಕೂಲಿಲ್ಲದೆ ಮತ್ತು ಇರಿದುಕೊಲ್ವದು ಕಂಡೆ ಕತ್ತಿಲ್ಲದೆ 4 ಮೇಲಕೆ ಬೇರಿಳಿದ್ವøಕ್ಷ ಕಂಡೆನಲ್ಲಿ ಟೊಂಗೆ ನೆಲಕೆ ಬೆಳೆದದ್ದು ಕಂಡೆ ಕಣ್ಣಿಲಿ ಚಲಿಪದು ಕಂಡೆನು ಎಲ್ಲಿಗೆ ಬೇಕಲ್ಲಿ ಇದರ ಕೀಲಿಕಂಡೆ ಶ್ರೀರಾಮನ ಬಲ್ಲಿ 5
--------------
ರಾಮದಾಸರು
ಸೃಷ್ಟಿಯೊಳಗೆಲ್ಲ ದುಷ್ಟರ ಪ್ರಭೆಯಾಗಿ ನಿಷ್ಠರುದೋರದಂತಾದರು ಮಾ ಧ್ರುವ ಭ್ರಷ್ಟರು ಬೂಟಿಕಿ ಶಿಷ್ಠರೆ ಕೈಕೊಂಡು ನಿಷ್ಠರಿಗಾಟ್ಲಿ ತಂದರು ಮಾ ತುಟ್ಟಿಲೆ ಮಿಸುಕದೆ ಗುಟ್ಟಿಲಿದ್ದವರ ಬಟ್ಟೆಗ್ಯಳದಿನ್ನು ತಾಹರು ಮಾ ಹೊಟ್ಟೆಯೊಳು ಹೊಕ್ಕು ಕಟ್ಟಲೆ ಕುಳಿತಿನ್ನು ನೆಟ್ಟ ನೇರಿಷ್ಟ ನೇಮಿಸುರು ಮಾ ಇಟ್ಟ ತೊಟ್ಟವರನು ಕೆಟ್ಟದೃಷ್ಟಿಲೆ ನೋಡಿ ದಿಟ್ಟತನದಿ ಪ್ರಾಣಕೊಂಬರು ಮಾ 1 ಕೊಟ್ಟು ಹಣಹೊನ್ನು ಇಟ್ಟದ್ದು ಬೇಡಲು ಕುಟ್ಟಿ ಅವನಬಾಯಿ ಹಾರರು ಮಾ ತುಟ್ಟಿಲೆ ವಂದಾಡಿ ಹೊಟ್ಟಲೆ ವಂದಿಟ್ಟು ನೆಟ್ಟನೆ ಘಾಸಿಮಾಡರು ಮಾ ಗಂಟುಳ್ಳವರ ಕಂಡು ಕಟ್ಟಿದಂಡಗಳನ್ನು ನಷ್ಟತನದಿ ಹೊಟ್ಟೆ ಹೊರುವರು ಮಾ ಬಟ್ಟಿಲೆ ತೋರಲು ಬಿಟ್ಟಿಯ ಹಿಡಿದಿನ್ನು ಹೆಟ್ಟಿ ಅವನ ಮುಂದೆ ನಡೆಸುರು ಮಾ 2 ಶುದ್ದಿಯು ಇಲ್ಲದೆ ರಾಜ್ಯಾಧಿಪತಿಗಳು ಇದ್ದು ಇಲ್ಲದಂತಾದರು ಮಾ ಮಂದಮತಿಗಳು ಅಂದಣವೇರಿನ್ನು ಬುದ್ಧಿವಂತರೀಗ್ಹೀನತಂದರು ಮಾ ಮುದ್ರಾಧಾರಿಗಳೆಲ್ಲ ಕ್ಷುದ್ರದೃಷ್ಟಿಯು ಮಾಡಿ ಕ್ಷುದ್ರತನದಿ ಕೆಡುತಿಹರು ಮಾ ಸಿದ್ಧಸಾಧಕರೆಲ್ಲ ಗುದ್ದನೇ ಹೊಕ್ಕರು ಇದ್ದರೆ ಬುದ್ಧಿಹೀನರು ಮಾ 3 ಉಳಿಯಮುಟ್ಟಿದ ದೈವ ಉಳಿಯದೇ ಹೋದವು ಉಳಿಗಾಲ ವಿಲ್ಲದಂತಾಯಿತು ಮಾ ತಿಳಿವಳಿಕುಳ್ಳವರೆಲ್ಲ ತಲೆಮುಸಕ್ಹಾಕಿನ್ನು ಕಳ್ಳರೆ ಸಾಜರು ಆದರು ಮಾ ಒಳ್ಳೆಯವರ ನುಡಿ ಎಳ್ಳಷ್ಟು ಮಾಡುತ ಸುಳ್ಳರು ನಿಜನುಡಿವೆಂಬುರು ಮಾ ಉಳ್ಳವರು ಖಳಬುದ್ಧಿ ಕೈಕೊಂಡು ಇಳೆಯೊಳು ಧರ್ಮವ ಜರೆದರು ಮಾ 4 ಸಾಧುಸಜ್ಜನರೆಲ್ಲ ಭೇದವ ಅಡಗಿಸಿ ಮೇಧಿನಿಯಲು ಗುಪ್ತರಾದರು ಮಾ ಇದ್ದರ ಘನಸುಖ ಸಿದ್ಧರ ನೆರೆಯಲಿ ಬುದ್ಧಿಹೀನರು ತಾವು ಅರಿಯರು ಮಾ ಸದ್ಗುರು ಕೃಪೆಯಿಂದ ಸದ್ಬ್ರಹ್ಮದ ನೆಲೆಯ ಸತ್ ಶಿಷ್ಯಮಹಿಪತಿ ತಿಳಿದನು ಮಾ ಎಂದಿಗೆ ಬೇಡಿನ್ನು ದುರ್ಜನರ ಸಂಗವು ತ್ರಾಹಿ ತ್ರಾಹಿ ತ್ರಾಹಿ ಎಂದನು ಮಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸೈಯೆ ಸೈಯೆ ಸೈಯೆ ಸೈಯೆ ರುಕ್ಮಿಣಿ ಕೈ ಹೊಯಿದು ಇದಕೆ ನಗುವರೊಸೈಯೆ ಸೈಯೆ ಸತ್ಯಭಾಮೆ ಧ್ಯನನೀವೆ ನೀತಿ ಸೈಯೆ ಪ. ಮಂದ ಗಮನೆಯರ ಮಾತು ಒಂದೊಂದು ಬಲರಾಮ ಕೇಳಿ ಬಂದನು ಭಾಳ ನಗುತಲೆ ಬಂದನು ಭಾಳ ನಗುತಲೆಭಾಳೆ ಪುಣ್ಯ ಬಂದೊದಗಿತೆಂದು ಕೈ ಹೊಯಿದು ಸೈಯೆ ಸೈಯೆ 1 ಎಷ್ಟು ಉಪವಾಸ ಮಾಡಿ ಇಷ್ಟು ಸಿದ್ಧಿ ಪಡೆದೆಕಷ್ಟ ಬಟ್ಟಿದ್ದೆ ಬಹುಕಾಲ ಕಷ್ಟ ಬಟ್ಟಿದ್ದೆ ಬಹುಕಾಲ ಭೀಷ್ಮನ ಹೊಟ್ಟಿಯ ಪುಣ್ಯ ಒದಗಿತು ಸೈಯೆ ಸೈಯೆ 2 ಸತ್ಯ ಭಾಮೆಯ ಪುಣ್ಯ ಅತ್ಯಂತ ಒದಗಿತುಹಿತ್ತಲಿನ ತುಳಸಿ ಬಲು ತಾಳಹಿತ್ತಲಿನ ತುಳಸಿ ಬಲು ತಾಳ ಇದರಮ್ಯಾಲೆ ಹೆತ್ತವರ ಪುಣ್ಯ ಒದಗಿತ ಸೈಯೆ ಸೈಯೆ3 ಅರಸರ ಮಕ್ಕಳು ನಿಮಗೆ ಬಿರುಸು ಮಾತುಗಳೆಷ್ಟುಸರಸಾಡೊ ಬಗೆಯ ಅರಿಯದೆ ಸರಸಾಡೊ ಬಗೆಯ ಅರಿಯದೆ ಸಭೆಯೊಳು ಸುರಿಸೋರೆ ಇಂಥ ವಚನವ ಸೈಯೆ ಸೈಯೆ 4 ಸೊಲ್ಲು ಕೇಳರಿಯಳು ಎಲ್ಲ ವಿದ್ಯೆಯಲಿ ಕುಶಲರೆಎಲ್ಲ ವಿದ್ಯೆಯಲೆ ಕುಶಲರೆ ನೀವು ಬಲ್ಲಿರೆ ಇದರ ಬಗೆಯಲ್ಲ ಸೈಯೆ ಸೈಯೆ 5 ಬಿಡದೆ ಕೂಗುವದೆಷ್ಟು ಹೊಡೆಯೊ ಭೇರಿಗಳೆಷ್ಟುಇಂಥನುಡಿಯ ಸುಭದ್ರೆ ಅರಿಯಳುಇಂಥನುಡಿಯ ಸುಭದ್ರೆ ಅರಿಯಳುಸಭೆಯೊಳು ನುಡಿವರೆ ಇಂಥ ವಚನವ ಸೈಯೆ ಸೈಯೆ 6 ಜಾತಿಗಾರರಂತೆ ಮಾತಿಲೆ ಕುಶಲರು ಭೂತಳದೊಳಗೆ ಪ್ರತಿಯಿಲ್ಲಭೂತಳದೊಳಗೆ ಪ್ರತಿಯಿಲ್ಲ ರಾಮೇಶನ ಪ್ರೀತಿಯ ಮಡದಿಯರು ಹೌಂದ ಹೌಂದ ಸೈಯೆ ಸೈಯೆ7
--------------
ಗಲಗಲಿಅವ್ವನವರು
ಸ್ವಾಮಿ ವೆಂಕಟರಮಣ ಭೂಮಿಪಾಲಕ ದೇವ ಸಂಜೀವ ಪ ಸುರರು ಅಸುರರೆಲ್ಲ ಶರಧಿಯ ಮಥಿಸಲು ಸಿರಿಯು ಜನಿಸಿ ಬಂದು ಹರಿಯ ಸೇರಿದಳು 1 ಸತಿ ಕುಸುಮಮಾಲೆಯನು ಅತಿ ಹರುಷದಿ ಜಗತ್ಪತಿಗೆಯಿಕ್ಕಿದಳು 2 ವಾರಿಧಿಯಾಕ್ಷಣ ಧಾರೆಯನೆರೆಯಲು ವಾರಿಜಾಂಬಕ ಲಕ್ಷ್ಮಿ ಒಡನೆ ನಿಂದಿರಲು 3 ಫಣ್ಭಿಹ್ತ್ರ1ಸೆಮಣಿಯೊಳು ರಮಣಿಯನೊಡಗೊಂಡು ಗುಣನಿಧಿಯು ಒಪ್ಪಿರಲು ತರುಣಿಯರೆಲ್ಲ 4 ಪಚ್ಚವ ಧರಿಸಿ ನವ ಸ್ವಚ್ಛವಾಗಿಯೆ ತುಳಿದು ಅಚ್ಯುತ ಮಹಾಲಕ್ಷ್ಮಿಗಚ್ಚಬೇಕೆನುತ 5 ಸಣ್ಣ ಮಲ್ಲಿಗೆ ಎಣ್ಣೆ ಬಣ್ಣವಾದರಿಸಿನವ ಪುಣ್ಯವಂತೆಗೆ ಕೈಗರ್ಣವ ಕೊಡಲು 6 ಸಿರಿ ತನ್ನ ತಲೆಗೆ ಪ್ರೋಕ್ಷಿಸಿಕೊಳಲು ಹರಿಯು ಮೆಚ್ಚಿದನು 7 ಗಟ್ಟಿಯಾದರಿಸಿನವ ಬಟ್ಟಲೆಣ್ಣೆಯಗೂಡಿ ಮುಟ್ಟಲಂಜಿಯೆ ನಿಲಲು ಸೃಷ್ಟಿಪಾಲಕನ 8 ಅಂಗೈಯ ಅರಿಸಿಣವ ಮುಂಗೈಗೆ ಒರಸುತ್ತ ರಂಗನ ಸಿರಿಮೊಗವ ಕಂಗಳಿಂದೀಕ್ಷಿಸುತ 9 ಅಭಯ ಹಸ್ತವನಿತ್ತ ತ್ರಿಭುವನದೊಡೆಯನು ಅಬುಜಲೋಚನೆ ಮುಖಾಂಬುಜಕೆ ತಿಮುರಿದಳು 10 ಸತಿ ಕೈಯ ಅರಿಶಿಣವ ಪತಿಯಾದಿಕೇಶವನ ನುತಿಸಿ ಊರಿದಳು 11 ಸಿರಿಯೆನೆತ್ತಿದ ಕೈಯ ಹರಿ ತಾನು ತೋರಿಸಲು ಸಿರಿ ನಾರಾಯಣ ಎಂದು ಅರಿಶಿಣವ ತಿಮುರೆ 12 ಶಂಖವ ಧರಿಸಿದ ಪಂಕಜಾಕ್ಷನೆ ವಿಷ್ಣು ವೆಂಕಟೇಶನ ಕರಪಂಕಜಕೆ ತಿಮುರೆ 13 ಕದನದೊಳ್ ಖಳರನು ಸದೆದು ಮರ್ದಿಸಿ ಗೆಲಿದು ಮಧುಸೂದನ ಶ್ರೀವತ್ಸದೆದೆಯ ತೋರೆನುತ 14 ಚಕ್ರವ ಪಿಡಿದು ಪರಾಕ್ರಮಿಯೆನಿಸಿಯೇ ಅಕ್ರೂರಗೊಲಿದ ತ್ರಿವಿಕ್ರಮಗೆ ತಿಮುರೆ 15 ವಾಮನನನಾಗೆ ಶ್ರಮವನು ಪಟ್ಟೆನುತ ಭೂಮಿಯ ಅಳೆದ ಪಾದವಿತ್ತಲು ತಾರೆನುತ16 ಕಾದಲನು ಕಾಣುತ್ತ ಪಾದವನಿತ್ತನು ಶ್ರೀಧರನೆನುತಲಿ ಅರಸಿನವ ತಿಮುರೆ 17 ವಾಮಪಾದವ ಕಂಡು ಭಾಮಿನಿ ತಾರೆನೆಲು ಸೋಮಸನ್ನಿಭ ಹೃಷಿಕೇಶ ತಾನಿತ್ತ 18 ಪದ್ಮಬÁಂಧವ ತೇಜ ಪದ್ಮಸಂಭವ ಪೂಜ ಪದ್ಮನಾಭಗೆ ಪದ್ಮಗಂಧಿ ತಾ ತಿಮುರೆ 19 ಆ ಮಹಾ ನಾಮದ ದಾಮೋದರನ ಕಂಡು ಭಾವೆ ಮಹಾಲಕ್ಷುಮಿ ವೀಳ್ಯವ ಕೊಡಲು 20 ವಾಸುದೇವನು ತನ್ನ ಅರಸಿ ಮಾಲಕ್ಷ್ಮಿಗೆ ಪೂಸಿದನರಿಸಿನದ ಎಣ್ಣೆಯ ಮೊಗಕೆ 21 ಪಂಕಜಾಕ್ಷನ ಕಂಡು ಕಂಕಣದ ಹಸ್ತವನು ಕುಂಕುಮದೆಣ್ಣೆಯ ಸಂಕರ್ಷಣ ತಿಮುರೆ 22 ಬುದ್ಧಿವಂತೆಯ ಎಡದ ಮುದ್ದು ಹಸ್ತವ ನೋಡಿ ಉದ್ಧರಿಸಿ ನವ ಪ್ರದ್ಯುಮ್ನ ನಗುತ 23 ಅನಿರುದ್ಧ ನಗುತಲೆ ಘನಕುಚಮಂಡಲಕೆ ಅರಿಸಿನವ ತಿಮುರೆ 24 ಪುರುಷರೊಳು ಉತ್ತಮನು ಹರುಷವನು ತಾಳಿಯೆ ಅರಸಿ ಮಹಾಲಕ್ಷುಮಿಗೆ ಅರಿಸಿನವ ತಿಮುರೆ 25 ಅಧೋಕ್ಷಜನು ತನ್ನ ತುದಿವೆರಳ ಅರಿಸಿನವ ಪದುಮನೇತ್ರೆಯ ಪದದೊಳಗೆ ಮಿಡಿದಿರ್ದ 26 ನಾರಸಿಂಹನು ಸತಿಯ ಮೋರೆಯಿಂದಾರಭ್ಯ ಓರಣವಾಗಿಯೇ ಅರಿಸಿನವ ತಿಮುರೆ 27 ನೆಚ್ಚಿಯೆ ಹರಿ ತಾನು ಅಚ್ಚ ಕರ್ಪೂರದೆಲೆಯ ಅಚ್ಯುತ ಕೊಡಲು 28 ಮನದಿ ಲಜ್ಜಿತೆಯಾಗಿ ಘನಮಹಿಮ ಮುನಿವಂದ್ಯ ತನಗೆ ವಲ್ಲಭ ನಿಜನಾದನೆನುತ 29 ಆ ಪರಮಹಿಮನು ರೂಪಸಂಪನ್ನ ದ- ಯಾಪರನಾಗಿಯೆ ಉಪೇಂದ್ರ ತಾನೊಲಿದು 30 ಹರಯೆಂಬ ನಾಮದಿ ಹರದಿ ಮಾಲಕ್ಷ್ಮಿಯ ವರಸಿದ ಶ್ರೀಹರಿಯು ಹರದಿಯರ್ಪೊಗಳೆ31 ಬೆಟ್ಟದೊಡೆಯನೆನಿಸಿ ದೃಷ್ಟಿಗೋಚರವಾದ ಶ್ರೀಕೃಷ್ಣ ಮಾಲಕ್ಷುಮಿಗೆ ಆರತಿಯ ತಿಮುರೆ 32 ವರಮಹಾಲಕ್ಷುಮಿಗೆ ವರಾಹತಿಮ್ಮಪ್ಪಗೆ ಅರಸಿನದೆಣ್ಣೆಯ ರಚಿಸಿದ ಪರಿಯು 33
--------------
ವರಹತಿಮ್ಮಪ್ಪ
ಹಯವದನನ ಪಾದದ್ವಯವ ನೆನೆಯದವ ಜಯಿಸುವನೆಂತೋ ಸಂಸ್ಮøತಿ ಫಲವ ಪ. ಕಾಗೆಯಂತಾದರು ಬಿದ್ದರು ಎದ್ದರು ಯೋಗದೊಳಿದ್ದರು ಬಿದ್ದವನೆ ಆಗಮವನು ತಂದು ಅಜನಿಗೆ ಬೋಧಿಸಿ- ದಾ ಗುಣನಿಧಿಯನರ್ಚಿಸದವನು 1 ಬೂದಿಗೆ ವಾದಿಸಿ ಮಣ್ಣಮೇಲುಣ್ಣಲು ಸಾಧಿಪುದೇನವ ಶ್ರವ ಶ್ರಾವಕ ವ್ರತವ ಬೂದಿಯ ಮಾಡಿದ ಮಣ್ಣಿನ ಗಂಡನ ಹಾದಿಯನೊಲ್ಲದ ಹಂಚುನರ2 ಉಟ್ಟದ ಬಿಟ್ಟು ತನ್ನಟ್ಟಲು ಬಟ್ಟೆಯ ಕಷ್ಟ ತಾ ಬಟ್ಟು ಕಂಗೆಟ್ಟನೈಸೆ ಸೃಷ್ಟಿಸಿ ಸಲಹುವ ಹಯವದನನ ಪರಿ- ತುಷ್ಟಿಗೆ ಪುಟ್ಟದ ದುಷ್ಟಪಶು3
--------------
ವಾದಿರಾಜ
ಹರಿ ನಿನ್ನ ದಾಸರ ಸೇವೆಯ ಕರುಣಿಸೆನಗೆ ಸುರಪತಿಯ ನಾನೊಲ್ಲೆನೈ ಪ ಸ್ಮರನ ಹಾವಳಿ ಬಿಡಿಸಿ ಗುರುಭಕ್ತಿಯನು ಕೊಟ್ಟು ನಿರುತವು ನಿನ್ನ ನಾ ಸ್ಮರಿಸುವಂದದಿ ಮಾಡು ಅ.ಪ ಎಷ್ಟು ಸ್ಥಿರ ಮಾಡಿದಾಗ್ಯು ಎನ್ನ ಮನ ಬಟ್ಟ ಕುಚೆಯರ ಬಲೆಗೆ ಸಿಲುಕುತಲಿ ಬಿಟ್ಟು ನಿನ್ನಯ ಧ್ಯಾನ ಕೆಟ್ಟುಪೋಗುತಲಿದೆ ದಿಟ್ಟ ನಿನ್ನ ಮಗನ ಬಲುಹಿನ್ನೆಷ್ಟೆಂದು ಪೇಳಲೊ 1 ಕುಸುಮಗಂಧಿಯರ ಓರೆನೋಟವೆಂಬ ಮಸೆದ ಕಣೆಯ ತಾನು ಪೂಡುತಲಿ ಎಸೆ ಮೋಹತಿಗೆ ನಾ ಸೈರಿಸಲಾರೆನೋ ಬಿಸಜನಾಭನೆ ನಿನ್ನ ಸುತಗೆ ಪೇಳೋ ಬುದ್ಧಿ 2 ಅಂಗನೆಯರ ಸವಿ ನುಡಿಗಳಿಗೆ ನಾ ಮರುಗಿ ಭೃಂಗದಂತವರ ಬಲೆಗೆ ಬೀಳದಂತೆ ಸಂಗ ಸುಜನರಲ್ಲಿ ಇತ್ತು ಕಾಯೊ ದೇವ ಅಂಗಜಪಿತ ಶ್ರೀ ರಂಗೇಶವಿಠಲನೇ 3
--------------
ರಂಗೇಶವಿಠಲದಾಸರು
ಹರಿಕಥಾಮೃತಸಾರದ ಫಲಶ್ರುತಿ ಶ್ರೀ ಮದಶ್ವಗ್ರೀವನೊಲುಮೆಗೆ ಧಾಮರೆನಿಪ ಶ್ರೀ ವಾದಿರಾಜರುಪ್ರೇಮದಲ್ಲಿ ಜಗನ್ನಾಥದಾಸರ ಸ್ವಪ್ನದಲಿ ಬಂದುಶ್ರೀ ಮನೋರಮನರಿಪ ತತ್ವ ಸು ಸೌಮನದ ಮಾಲಿಕೆಯನಿತ್ತು-ದ್ದಾಮ ಗ್ರಂಥವ ರಚಿಸಿರೆನುತಲಿ ನುಡಿದ ಕಾರಣದೀ ಪ ಭಾಗವತ ಗಾರುಡ ಭವಿಷ್ಯೋತ್ತರ ಪುರಾಣಚಾರು ವಿಷ್ಣು ರಹಸ್ಯ ಪಂಚರಾತ್ರಾಗಮ ವಾಯುಸಾರ ಗುರವೃತ್ಪ್ರವೃತ್ತವು ಈರ ಸಂಹಿತಾದಿತ್ಯವಾಗ್ನೇಯಪಾರ ರಸಗಳ ತೋರ್ಪ ಶ್ರೀ ಗುರು ಮಧ್ವ ಶಾಸ್ತ್ರದಲೀ 1 ಸಾರ ಕ್ರೋಢೀಕರಿಸಿ ದೀನೋ-ದ್ಧಾರಗೋಸುಗ ಹರಿಕಥಾಮೃತ ಸಾರವನು ರಚಿಸೀಸ್ಥೈರ್ಯ ಮಾನಸದಿಂದ ಭಾವೀ ಭಾರತೀಪತಿ ವಾದಿರಾಜರಭೂರಿ ತೋಷಕೊಪ್ಪಿಸುತಲಾಪಾರ ಮುದ ಪಡೆದೂ 2 ಸಾಸಿರಾರ್ಥಗಳೊಂದು ಪದಕವಕಾಶವಿರುವೋ ಶ್ರೀದ ವಿಷ್ಣುಸಾಸಿರದ ನಾಮವನು ಯೋಚಿಸಿ ಇಹರು ಗ್ರಂಥದಲೀಈಸು ರಹಸ್ಯವನರಿತು ಪಠಪಗೆ ಏಸು ದೂರವೊ ಮುಕ್ತಿಬರಿದಾ-ಯಾಸ ಬಟ್ಟುದರಿಂದ ಫಲವೇನಿಲ್ಲವೀ ಜಗದೀ 3 ಹ ಯೆನಲು ಹರಿಯೊಲಿಯುವನು ತಾ ರಿ ಯೆನಲು ರಿಕ್ತತ್ವ ಹರಿಸುವಕ ಯೆನಲು ಕತ್ತಲೆಯೆಂಬಾಜ್ಞಾನವನು ಪರಿಹರಿಪಾಥಾ ಯೆನಲು ಸ್ಥಾಪಿಸುವ ಜ್ಞಾನ ಮೃಯೆನಲು ಮೃತಿಜನಿಯ ಬಿಡಿಸುವತ ಯೆನಲು ಹರಿ ತನ್ನ ಮೂರ್ತಿಯ ತೋರುವನು ನಿತ್ಯಾ 4 ಸಾ ಯೆನಲು ಸಾಧಿಸುವ ಮುಕ್ತೀ ರ ಯೆನಲು ರತಿಯಿತ್ತು ರಮಿಪನುಕಾಯ ವಾಙ್ಮನದೆಂಟು ಅಕ್ಕರ ನುಡಿದರದರೊಳಗೇಶ್ರೀಯರಸು ವಿಶ್ವಾದಿ ಅಷ್ಟೈಶ್ವರ್ಯ ರೂಪದಿ ನಿಂತು ತಾ ಪರ-ಕೀಯನೆನಿಸದೆ ಇವನ ಮನದೊಳು ರಾಜಿಪನು ಬಿಡದೇ 5 ಅನಿರುದ್ಧ ಧರ್ಮವು ದೊರಕಿಸುವ ಪರಮ್ಹರುಷದಲ್ಲಿ ಸ-ತ್ವರ ಕಥಾಯೆನೆ ಕೃತಿರಮಣನರ್ಥಗಳ ಹನಿಗರೆವಾವರ ಅಮೃತಯೆನಲಾಗ ಶ್ರೀ ಸಂಕರುಷಣನು ಕಾಮವನು ಯೋಜಿಪಸರಸ ಸಾರೆನೆ ವಾಸುದೇವನು ಮೋಕ್ಷ ಕೊಡುತಿಪ್ಪಾ 6 ನಿತ್ಯ 7 ಚಾರುತರದೀ ಹರಿಕಥಾಮೃತ ಸಾರಕೃತ ಋಷಿ ಭಾರದ್ವಾಜರುಸಾರ ಹೃದಯದಿ ನಿಂತು ಸಕಲ ಸು ಶಾಸ್ತ್ರದಾಲೋಕಾಸಾರಿ ಸಾರಿಗೆ ಮಾಡಿ ಮಾಡಿಸಿ ಸೂರೆಗೊಟ್ಟಾನಂದ ಚಿನ್ಮಯಪಾರವಾರಾಶಯನ ಶ್ರೀ ಕಮಲಾಪತಿ ವಿಠಲಾ 8
--------------
ಕಮಲಪತಿವಿಠ್ಠಲರು
ಹರಿಯೆ ಪೊರೆಯೊ ಪರತರ ಮರೆಯ ಹೊಕ್ಕೆ ಕರುಣಾಕರ ಶ್ರೀಕರ ಪ ಸರುವತಾಪದಿಂದ ಗೆಲಿಸಿ ಸರುವವಿಷಯದಿದ ಉಳಿಸಿ ಪರಮ ನಿಮ್ಮ ಕರುಣ ಬರೆಸಿ ಕರವ ಪಿಡಿದು 1 ಘೋರ ಭವಕಡಲವ ಘೋರ ಬಟ್ಟು ಈಸಿಸಭವ ಸೈರಿಸದೆ ನಿಮ್ಮ ಪಾದವ ಸೇರಿದೆ ಸಲಹು ಪರಮಕರುಣ ಸಿರಿಯರಮಣ2 ಮಾಯಮೋಹಗಳ ಬಿಡಿಸಿ ಕಾಯಕರ್ಮಗಳನು ಕೆಡಿಸಿ ತೋಯಜಾಕ್ಷೆನ್ನಯ್ಯ ರಾಮ ಸಿಂಧು 3
--------------
ರಾಮದಾಸರು
ಹವಣಿಕಿಲಿ ನೀ ಮಾಡು ಸುವಿಚಾರ ಸಾಧನ ಪ ಬಟ್ಟೆ ಬಹುಕ್ಲೇಶವನುಪರಸಿ ಕುವರನ ಕರುಣಾ..........ನಿನ್ನ ನೀನರಿತುಕೋ ...................................................................................ಶ್ವೇತಾ ವಿಮೋರ್ಛಿತಕಿನ್ನುನಿದ್ರಿತ ಕಿಮರ ಮಾತಾಭೂಮಿ ನೀ ಪತಿತ |ರುಕ್ಮವಿಭೂಷಣ ರಹಿತ ಶಾಂತಾ ದಾಂತವಿವಸ್ವಾಂತಬೌದ್ಧೇಯ ಮುನಿಕಾಂತ ||
--------------
ರುಕ್ಮಾಂಗದರು
ಹಸಿದು ನಾ ಬಳಲಲೇಕೋ ಈಸಮಯದಲ್ಲಿ ಬಿಸಿಯೂಟ ಮಾಡುವೆನು ಪ ಹಸನಾದ ಶೇಷಶಯನ ನಾಮದಡುಗೆಯು ವಸುಮತೀಧವ ನಾಮರಸಾಯನವಿರೆ ಅ.ಪ ಹರಿ ಹರಿ ಪರಮಾನ್ನವು ದುರಿತಾರಿ ಶೌರಿ ಕರಿಗಡುಬು ಗರುಗೊಬ್ಬಟ್ಟು ನರಸಿಂಹ ವಾಮನ ಅಂಬೊಡೆ ಹೂರಿಗೆಗಳು ಕರಿವರದ ರವೆಯುಂಡೆ ಸಜ್ಜಿಗೆಯಿರಲು 1 ದುಷ್ಟಮರ್ದನನೆನ್ನುವ ಇಷ್ಟವಾದ ಹುಳಿಸಾರು ಮೊಸರುಗಳು ವಾಸುದೇವ ಸಣ್ಣಕ್ಕಿಯನ್ನವು ಮಾಧವ ಬೆಣ್ಣೆಕಾಯ್ಸಿದ ತುಪ್ಪವಿದೆ 2 ನಾರಾಯಣನೆನ್ನುವ ಸಾರವಾದ ಹುಳಿಯನ್ನ ಮೊಸರನ್ನವು ಸಾರಸಾಕ್ಷ ಶ್ರೀಶ ಕ್ಷೀರ ಸಕ್ಕರೆಯಿದ್ದು ಮಾರಜನಕನೆಂಬ ಹಪ್ಳಳುಪ್ಪಿನಕಾಯಿರೆ3 ಪರಿಪರಿಯನ್ನಗಳು ಸರಿಯಾಗಿ ಭಕ್ಷ್ಯ ಕರಿದೆಡೆ ಮಾಡಿರಲು ಅರಿತು ಸವಿಯನೋಡಿ ಮರೆಯದೆ ಭುಂಜಿಸಿ ನಿರುತ ನಿಜಾನಂದ ಪಡೆಯದೆ ಬರಿದೆ 4 ಗೋಪಾಲನೆಂದೆಂಬೊ ಸೀಪಿನ ಎಳನೀರು ಸೀ ಪಾನಕವಿಹುವು ತಾಪತ್ರಯಹರ ಹೆಜ್ಜಾಜಿಕೇಶವ ಆಪದುದ್ಧಾರಕನೆಂಬಮೃತವುಣದೆ 5
--------------
ಶಾಮಶರ್ಮರು
ಹಾಲು ಮಾರಲು ಪೋದೇವಮ್ಮ ಗೋಕುಲದೊಳ- ಗ್ಹಾಲು ಮಾರಲು ಪೋದೆವಮ್ಮ ಹಾಲು ಮಾರುವ ಧ್ವನಿ ಆಲಿಸಿ ಕೇಳುತ ಬಾಲಕೃಷ್ಣ ಬಹು ಲೀಲೆ ಮಾಡುತ ಬಂದಪ ಹಸಿರು ಜರದ ಸೀರೆಯನುಟ್ಟು ಕುಸುರಿಕಂಕಣ ಎಸೆವೊ ಹವಳದ ಹಿಂಬಳೆ ಕಟ್ಟು ಮೊಸರಿನ ಕುಂಭ ಕÀುಸುಮ ಮಲ್ಲಿಗೆಯ ಮುಡಿಯಲ್ಲಿಟ್ಟು ಶಶಿವದನೆಯರೆಲ್ಲ ಚೆಂದದಿ ಬರುತಿರೆ ಕುಸುಮನಾಭ ಮುಸುಗೆಳೆದು ಮೊಸರು ಸುರಿದ1 ಬಣ್ಣ ಬಣ್ಣದ ಸೀರೆಯನುಟ್ಟು ಮುತ್ತಿನ ಬಟ್ಟು ಹೊಳೆವೊ ಕಸ್ತೂರಿ ತಿಲಕವನಿಟ್ಟು ಹಾಲಿನಕುಂಭ ಸಣ್ಣಮಲ್ಲಿಗೆ ಮುಡಿಯಲಿಟ್ಟು ಚೆನ್ನಾರ ಚೆಲುವೇರು ಚೆಂದದಿ ಬರುತಿರೆ ಕಣ್ಣು ಸನ್ನೆಮಾಡಿ ಕರೆದು ಮುದ್ದಿಡುವ 2 ಮುಂದೆ ಮುಂದಾಗಿ ಹೋಗುತಿರಲು ಹಿಂದ್ಹಾಲಿನ್ಹರವಿ- ಗೊಂದೊಂದ್ಹರಳು ಮೀಟುತಿರಲು ಧಾರೆಗೆ ಬಾಯಾ- ನಂದದಿಂದೊಡ್ಡಿ ಕುಡಿಯುತಿರಲು ಸÀಂದಣಿಯೊಳು ನಾವು ಒಂದರಿಯದಲೆ ಬಂದಿಳುಹಲು ಬರೀ ಗಡಿಗೆ ಕಾಣಮ್ಮ 3 ಕಡಗೋಲಿಂದೊಡೆದÀು ಗಡಿಗೆಯನು ಬಡವರ ಬೆಣ್ಣೆ ಒಡಲಿಗೆ ಕದ್ದು ತಿಂಬುವುದೇನು ಕಂಡರೆನಗಂಡ ಬಡಿದÀರಿನ್ನೇನು ಮಾಡುವೆ ನೀನು ಗಡಿಬಿಡಿ ಮಾಡುತ ಕತ್ತಲ ಮನೆಯೊಳು ತÀುಡುಗನಂತೆ ತಿರುಗಾಡುವ ತಾನು 4 ಸಿಟ್ಟು ಮಾಡುವುದ್ಯಾತಕಮ್ಮ ಶ್ರೀ ರಮಣನ ಬಿಟ್ಟು ಬಾಹುವುದೆ ಲೇಸಮ್ಮ ಭೀಮೇಶಕೃಷ್ಣನ ಕಟ್ಟಿ ಹಾಕುವುದೆ ಲೇಸಮ್ಮ ಪಟ್ಟುಮಾಡಿ ಪರಹೆಂಗಳೇರೊಳು ಕ- ಣ್ಣಿಟ್ಟ ಮ್ಯಾಲೆ ಒಂದಿಷ್ಟಾದರು ಬಿಡ5
--------------
ಹರಪನಹಳ್ಳಿಭೀಮವ್ವ
ಹೇಗಿದ್ದು ಹೇಗಾದೆಯೊ ಆತ್ಮಯೋಗೀಶನಾನಂದಪುರದಲಿರುವುದ ಬಿಟ್ಟು ಪ ಬಸಿರ ಹಳ್ಳಿಗೆ ಬಂದು ಮಾಸನೂರಲಿ ನಿಂದುಕುಸುಕಾಡಿ ನುಡಿದು ನೆಲಬಟ್ಟೆವಿಡಿದುಕಿಸುಕದರಿವೆಯ ಪೊದ್ದು ಮಲಮೂತ್ರದಲಿ ಬಿದ್ದುವಸುಧೆಯಲಿ ದಿನಗಳೆದೆಯಲ್ಲ ಆತ್ಮ 1 ಎಳಗೆರೆಯಲಿ ಆಡಿ ಯೌವನದೂರಿಗೆ ಬಂದುಥಳಥಳಿಪ ಹಸ್ತಾದ್ರಿ ನೆಳಲ ಸೇರಿಅಳಲು ಸುತ ಬೆಳೆದು ದಾರಿದ್ರ್ಯ ಪೇಟೆಗೆ ಬಂದುಹಳೆಯ ಬೀಡಿಗೆ ಪಯಣವೇ ಆತ್ಮ 2 ಗನ್ನಗತಕದ ಮಾತು ಇನ್ನು ನಿನಗೇತಕೋಮುನ್ನ ಮಾಡಿದ ಕರ್ಮಭರದೊಡಲಿದೆಉನ್ನತದ ಕಾಗಿನೆಲೆಯಾದಿಕೇಶವ ಸುಪ್ರ-ಸನ್ನ ಮೂರುತಿಯ ಭಜಿಸೆಲೊ ಆತ್ಮ 3
--------------
ಕನಕದಾಸ
ಹೊಂದಿಕೊಂಡಿರಬೇಕು ಮನವೆ ಘನಚೈತನ್ಯಸಂದೋಹನಾದ ದೇಶಿಕನ ಪಾದಾಬ್ಜದೊಳು ಪರಾಗವನು ನೆರೆಬಿಟ್ಟು ರತಿಯ ಮನದಲಿ ನೆಟ್ಟುಭಾಗವತನಾಗದರೊಳು ಭಕ್ತಿಯುಟ್ಟುಭೋಗವಾಂಛೆಯ ಬಿಟ್ಟು ಬೋಧಿಸುತಲೊತ್ತಟ್ಟುಯೋಗ ರಾಜ್ಯವ ಕಟ್ಟು ಯುಕ್ತಿುಂ ಸುಖಬಟ್ಟು 1ಯಮ ನಿಯಮಗಳ ಮಾಡಿ ಏಕಾಗ್ರತೆಯೊಳಾಡಿಸಮ ಚಿತ್ತದೊಳ್ಪಾಡಿ ಸೌಖ್ಯವನು ಬೇಡಿಕ್ರಮದಿ ಸಾಧನೆಗೂಡಿ ಕಾಯ ದಂಡನೆ ಮಾಡಿವಿಮಲ ವೇದಾಂತ ವಿದ್ಯವನೊಲಿದು ನೋಡಿ2ಭೇದ ಬುದ್ಧಿಯನುಳಿದು ಭಿಕ್ಷಾನ್ನದೊಳ್ಬೆಳೆದುವಾದ ವಿದ್ಯವ ಕಳೆದು ವಸ್ತುವೆಂದರಿದೂಸಾಧನಗಳೊಳ್ಮೆರೆದು ಸಂಸ್ಕøತಿ ಪಥವ ತರಿದುಸಾಧು ಗೋಪಾಲಾರ್ಯ ಗುರುವಿನೊಳ್ಬೆರೆದೂ 3
--------------
ಗೋಪಾಲಾರ್ಯರು