ಒಟ್ಟು 1148 ಕಡೆಗಳಲ್ಲಿ , 88 ದಾಸರು , 890 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಗನ್ನಾಥದಾಸರು ತಂಗಿ ನೀ ಕೇಳಿದ್ಯಾ ಅಂಗನಾಮಣಿ ರಂಗನೊಲಿದ ಭಾಗವತರ ಮಹಿಮೆಗಳ ಪ ಶ್ರವಣಾದಿ ನವವಿಧ ಸವಿಯ ಭಕುತಿಯಿಂದ ಪ್ರವೀಣನೆನಿಸಿ ಮಾಧವನ ಧ್ಯಾನಿಪ ಖ್ಯಾತಿ 1 ಅಮಿತ ಮಹಿಮನಂಘ್ರಿ ಕಮಲಾಖ್ಯಪರ ಖ್ಯಾತಿ 2 ಶ್ರೀದವಿಠಲನ ಪಾದಭಜಕರಾದ ಸಾಧುವರ್ಯರ ಸುಬೋಧ ಬಣ್ಣಿಪರಾರೆ 3
--------------
ಶ್ರೀದವಿಠಲರು
ಜಡಮತಿಗಡ ಕಡಿದೀಡ್ಯಾಡಿ ಪಡಿರೋ ಸನ್ಮಾರ್ಗವ ಹುಡುಕ್ಯಾಡಿ ಪ ಗಡಗಡಸದೃಢದಯಿಡುತೋಡೋಡಿ ಪಡಿರೋ ಕಡು ಅನಂದ್ವೊಯ್ಕುಂಠ ನೋಡಿ ಅ.ಪ ಚಿಂತೆ ಭ್ರಾಂತಿಗಳ ದೂರಮಾಡಿ ನಿ ಶ್ಚಿಂತರಾಗಿರೋ ಮನ ಮಡಿಮಾಡಿ ಶಾಂತಿತೈಲ್ಹೊಯ್ದು ಜ್ಞಾನಜ್ಯೋತಿಕುಡಿ ಚಾಚಿ ನಿಂತು ನೋಡಿರೋ ಹರಿಪುರದಕಡೆ ಅಂತ್ಯ ಪಾರಿಲ್ಲದಾತ್ಯಂತ ಪ್ರಕಾಶದಿಂ ನಿಂತು ಬೆಳಗುತಾರೋ ಆನಂತಸೂರ್ಯರು ಕೂಡಿ 1 ಬೋಧಾದಿಮಯ ಮಹದ್ವಾರಗಳು ಮತ್ತು ವೇದ ನಿರ್ಮಯ ಪುರಬೀದಿಗಳು ಆದಿಅಂತಿಲ್ಲದಷ್ಟ ಭೋಗಗಳು ವಿ ನೋದ ಮುಕ್ತಿ ಕಾಂತೇರಾಟಗಳು ವೇದವೇದಾಂತ ಅಹ್ಲಾದದಿಂ ಪೊಗಳುವ ಸುಜನ ಮಹದಾದಿಪದವಿಗಳು2 ಸೇವಿಪ ಸುರಮುನಿಗಣಗಳು ಕೋವಿದ ನಾರದಾದಿ ಗಾನಗಳು ರಂಭೆ ನಾಯಕಿಯರ ಮಹನರ್ತನಗಳು ಸಾವಿರಮುಖಪೀಠದ್ಹೊಳೆವ ಶ್ರೀರಾಮನ ಪಾವನಪಾದಕಂಡು ಸಾವ್ಹುಟ್ಟು ಗೆಲಿರೆಲೋ 3
--------------
ರಾಮದಾಸರು
ಜನ್ಮವ್ಯರ್ಥವಾಯಿತು ಶಾಙ್ರ್ಗಧನ್ವ ನಿನ್ನನಂಬದೆ ಪ ಮನ್ಮಥನಾಟದಲ್ಲಿ ಮರೆತು ಹೋಗಿಕಾಲ ನಾಕಳದೇ ಅ.ಪ ಹೊಟ್ಟೆಗೋಸಗ ಕಾಡಿಬೇಡಿ ನಿಷ್ಟುರಗಳನಾಡುತಾ ಕೆಟ್ಟವನಿವನೆನಿಸಿ ಕೊಂಡು ಕೀರ್ತಿಶೂನ್ಯನಾಗುತಾ 1 ನಿತ್ಯಕರ್ಮಮಾಡದೆ ಗೃಹಕೃತ್ಯದಲ್ಲಿ ಬಳಲುವೆ ಸತ್ಯವೆಂಬುದು ಸ್ವಪ್ನದಲ್ಲಿಯು ಸಾಧ್ಯವಾಗದು ಜನರಿಗೆ2 ಸುಳ್ಳು ಹೇಳುವವನ ಜನರು ಒಳ್ಳೆವನಿವನೆಂಬರು ಬಲ್ಲ ಹಿರಿಯರಾಡುವ ನುಡಿ ಭಕ್ತಿಯಿಂದನಂಬರು 3 ಖಲರು ನಡಿಯಲಾರದೆಯಿದು ಕಲಿಯುಗವೆಂದು ನಿಂದಿಸೀ ಕೊಲೆಗೆ ಗುರಿಯಾಗಿ ಕಾಮ ಕ್ರೋಧಗಳಿಂದ ಬಂಧಿಸಿ 4 ಹೀನ ವಿದ್ಯಗಳೆಚ್ಚಿತು ಸುಜ್ಞಾನಬೋಧೆ ತಗ್ಗಿತು ಸ್ವಾನುಭವಕೆ ಹಾನಿಕರ ನಿಧಾನಿಸೇ ಧರ್ಮ ಕುಗ್ಗಿತು 5 ದುರ್ಗುಣಿಗಳ ತೃಪ್ತಿಪಡಿಸೆ ಭರ್ಗಗಾದರು ಸಾಧ್ಯವೇ ನಿರ್ಗಮಿಸುವಧ್ಹ್ಯಾಗೆ ನಾವಿನ್ನಿರುವುದು ಭೂಮಿಭಾರವೆ6 ಲೇಶ ಸಾಧನವಾಗುವದಿಲ್ಲ ಆಸೆ ಅಧಿಕವಾದುದರಿಂದ ಘಾಶಿಪಡುವದಲ್ಲದೆ ದೇಹಾಯ್ಸವೇಕೆ ಪಡುವೆನಾಂ 7 ಮಾನವಿಲ್ಲ ಜ್ಞಾನವಿಲ್ಲ ಮಮತೆಯೆಂಬೋದು ಬಿಡದಲ್ಲಾ ಹೀನಾರನಾಸೇವಿಸಲಾರೆ ಹಿತವ ಕಾಣೆ ಸಿರಿನಲ್ಲಾ8 ಇರುಳು ಹಗಲು ನಿನ್ನ ದಿವ್ಯ ಚರಣಸೇವೆ ಪಾಲಿಸೊಗುರುರಾಮ ವಿಠಲನೆ ಪಾಮರರ ಬಿನ್ನಹ ಲಾಲಿಸೊ9
--------------
ಗುರುರಾಮವಿಠಲ
ಜಯ ಜಯ ಮಂಗಳಜಯ ಮಂಗಳ ಶುದ್ಧಾದೈತನಿಗೆ ಪ ಅಗಣಿತ ಮಹಿಮಗೆ ಅಕ್ಷಯರೂಪಗೆಅಖಂಡ ಸಹಜಾನಂದನಿಗೆಝಗಿ ಝಗಿತಾತ್ಮಗೆ ಝಳುಕಿಸಿ ಕರ್ಣದಿಝಣನಾದವ ಕೇಳ್ವನಿಗೆಸೊಗಯಿಸಿ ಚಂದ್ರನ ಶತಕೋಟಿಯಪ್ರಭೆ ಸಾರವ ಸವಿಸವಿದುಣ್ಣುವಗೆಬಗೆ ಆನಂದದಿ ಸುಖಿಸುವ ದೇವಗೆಭಾಸ್ಕರ ತೇಜಃಪುಂಜನಿಗೆ1 ನಿತ್ಯಾನಂದಗೆ ನಿರ್ಮಲರೂಪಗೆನಿಶ್ಚಲ ಪರಬ್ರಹ್ಮಾತ್ಮನಿಗೆನಿತ್ಯಶುದ್ಧಗೆ ನಿಜನಿರ್ಮಾಯಗೆನಿಜಬೋಧ ಜ್ಞಾನೈಕ್ಯನಿಗೆಪ್ರತ್ಯಗಾತ್ಮಗೆ ಪೂರ್ಣಬ್ರಹ್ಮನಿಗೆಪರಮ ಪರತರ ಪಂಡಿತಗೆನಿತ್ಯತೃಪ್ತಗೆ ನಿಗಮಾಗಮನಿಗೆನಿಶ್ಚಿಂತಾತ್ಮ ನಿಸ್ಪøಹಗೆ 2 ಕೈಯಲಿ ಪಿಡಿದಿಹ ಜಪಮಾಲೆಯಸರ ಕರ್ಣಕುಂಡಲವಿಟ್ಟಿಹಗೆಮೈಯೊಳು ಪೊದ್ಹಿಹ ಕಾಷಾಯಂಬರಮಿರುಪಿನ ಕೌಪೀನವುಟ್ಟಿಹಗೆಮೈಯೊಲೆದಾಡುವ ಸ್ವಾತ್ಮಾನಂದದಿನಲಿವ ಸದ್ಗುಣ ಶಾಂತನಿಗೆಮೈಯನೆ ಸದ್ಗತಿ ಭಕ್ತರಿಗೀಯುವವ್ಯಾಪಿತ ಜೀವನ್ಮುಕ್ತನಿಗೆ3 ಆರವಸ್ಥೆಯ ಧರಿಸಿಯೆ ಜಗದಲಿಅನಂತರೂಪ ತಾನಾಗಿಹಗೆಮೀರಿಯೆ ಸದ್ಗುಣ ನಿರ್ಗುಣ ರೂಪವಮೆರೆದಿಹ ಮುಮುಕ್ಷಾಂಗನಿಗೆತೋರುವ ತ್ವಂಪದ ತತ್ತ್ವಮಸಿಪದತೋರಿ ವಿರಾಜಿಪ ತುಷ್ಟನಿಗೆಧೀರೋದ್ಧಾರಗೆ ದೀನರನಾಥಗೆದೃಶ್ಯಾದೃಶ್ಯ ವಿದೂರನಿಗೆ 4 ನಿರುಪಮ ನಿರಮಯ ನಿಜ ನಿರ್ಲಿಪ್ತಗೆನಿರ್ಭಯ ನಿರ್ವಿಕಲ್ಪನಿಗೆಪರಮಪುರುಷಗೆ ನಿಗಮೋದರನಿಗೆಪರಮಾರೂಢಾ ಮಾರ್ಗನಿಗೆಗುರುಚಿದಾನಂದ ಅವಧೂತಾತ್ಮಗೆಗುಣನಿಧಿ ತುರಿಯಾತೀತನಿಗೆಸ್ಥಿರಸಿದ್ಧ ಪರ್ವತದಾಸ ಶ್ರೀಪುರುಷಗೆಬಗಳಾ ಶ್ರೀಗುರು ರೂಪನಿಗೆ 5
--------------
ಚಿದಾನಂದ ಅವಧೂತರು
ಜಯ ಜಯ ಮಹಿಪತಿ ಆನಂದ ಮೂರುತಿ ಗುರುರಾಯಾ ಪ ಪರಮ ಪುರುಷ ಮಹಾದೀನೋದ್ಧರಣಾ | ದುರಿತ ನಿವಾರಣ ಪತಿತ ಪಾವನಾ | ಶರಣ ಜನರ ಪಾಲನಾ ಕರುಣಾ ಸಾಗರಾ 1 ಬೋಧ ಶರಾಸನ ಧರಿಸಿ | ಅಗಣಿತ ದುಷ್ಟ ಗುಣವ ಮರ್ದಿಸಿದೆ | ಭಕುತ ಹೃತ್ಪಂಕಜ ಸಂಚಾರಾ ಆಗಮ ಸನ್ಮತನೇ 2 ಜನನ ಮರಣ ಆಂಕುರ ಕುಠಾರ | ಜಾತಕ ಜಲಧರನೇ | ಅನುದಿನ ಕೃಷ್ಣನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯ ಜಯ ಶ್ರೀ ಸದ್ಗುರುನಾಥ ದಯಗುಣದಲಿ ನಿಸ್ಸೀಮ ನೀ ಪ್ರಖ್ಯಾತ ಧ್ರುವ ಸ್ವಯಂಭು ಸ್ವತಂತ್ರ ಸ್ವಪ್ರಕಾಶ ಸ್ವಯಂಜ್ಯೋತಿಸ್ವರೂಪ ಸ್ವವಿಕಾಸ ದ್ವೈತಾದ್ವೈತಕೆ ಸಹಿತ ಸ್ವವಿಲಾಸ ಶ್ರೇಯ ಸುಖದಾಯಕನಹುದೋ ನೀ ಪರೇಶ 1 ಸ್ವಭಾವ ಸ್ವಸಿದ್ಧ ಸರ್ವಾಧಾರ ಸ್ವಭಾಸ ಸ್ವತೇಜ ಸಹಜ ನಿರ್ಧಾರ ಸ್ವಬೋಧ ಸ್ವಬ್ರಹ್ಮ ಸಾಕ್ಷಾತಾರ ಸ್ವಭಕ್ತಜನರಿಗೆ ನೀನೆ ಸಹಕಾರ 2 ಸ್ವಾನಂದ ಸದೋದಿತ ಸ್ವಯಂ ಭಾನು ಸ್ವಾನಭವಲಾದಯ್ಯ ತಾನೆ ತಾನು ಅನುದಿನ ಭೋರ್ಗರೆವ ನೀ ಕಾಮಧೇನು ದೀನಮಹಿಪತಿ ಸ್ವಾಮಿ ನೀನೆ ನೀನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯ ಸ್ವರಸತಿ ಜಯವರ ಪೂರಣಮತಿ ತ್ರಯಲೋಕ್ಯದಲಿ ಖ್ಯಾತಿ ಜಯ ಸುಕೀರ್ತಿ ಧ್ರುವ ವಿದ್ಯಾವರದಾಯಿನಿ ಸಿದ್ಧಿಗೆ ಶಿಖಾಮಣಿ ಬುದ್ಧಿ ಪ್ರಕಾಶಿನಿ ಸದ್ಭೂಷಿಣಿ 1 ಕರಕಮಲದಲಿ ವೀಣೆ ಸುರಸ ಅಮೃತವಾಣಿ ವರವಿದ್ಯದಲಿ ದಾನಿ ಸುಪ್ರವೀಣೆ 2 ಪ್ರಸನ್ನವದನಿ ವಿಶ್ವದಲಿ ನೀ ಪೂರ್ಣೆ ಹಂಸವಾಹಿನಿ ಪೂರ್ಣಿ ಸ್ವಸಿದ್ಧಿಣಿ 3 ಸದಾ ಸದ್ಗುರುಸ್ತುತಿ ಒದುಗುವ್ಹಾಂಗ ಸ್ಫೂರ್ತಿ ಇದೇ ಮಹಿಪತಿ ಕುರ್ತಿ ಬೋಧಿಸುವ ಮತಿ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯಜನನೀ ಶಾರದೆ ಜನನಮೃತಿಭಯಭಿದೆ ಪ. ನಯವಿದೆ ತ್ರಿಜಗನ್ಮಯೆ ವೀಣಾವಿನೋದೆ ಅ.ಪ. ಭಕ್ತಿಜ್ಞಾನ ಮಾನದೆ ಭಗವತ್ಪ್ರಾಪ್ತ ಪ್ರಸಾದೆ ಮುಕ್ತಿಶಕ್ತಿಪ್ರದೆ ನಿಜ ಭೃತ್ಯವತ್ಸಲೆ ಪ್ರಬುದ್ಧೆ 1 ವೇದಾರ್ಥತತ್ವಪ್ರಬೋಧೆ ಆದಿತೇಯಾನತಪದೆ ಶ್ರೀಧರೆ ಸದಾನಂದೆ ಸಾಧು ಸೌಭಾಗ್ಯನಿಧೆ 2 ಅನಘ ಲಕ್ಷುಮಿನಾರಾಯಣನ ಭಕ್ತ ಪ್ರಹ್ಲಾದ ಸನಕನುತೆ ಸನ್ನುತೆ ಘನಪಾಪಾಪಹ್ನುತೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜಯತು ಸೀತಾರಾಮ ರಾಮ ಚರ- ಣಾರವಿಂದದ ಭಕ್ತಿ ದೃಢವಾಗಿ ಕೊಡು ಜಯ ರಾಮ ರಾಮ ಕ್ರೂರಕಾಮಾದಿಗಳ್ಸೂರೆಗೊಂಬರು ಸೀತಾರಾಮ ರಾಮ ರಾವ- ಣಾರಿ ನೀನಲ್ಲದೆ ಯಾರಿಲ್ಲ ಗತಿ ಜಯ ರಾಮ ರಾಮ 1 ಬುದ್ಧಿ ಜ್ಞಾನ ಶಕ್ತಿ ಸಿದ್ಧಿದಾಯಕ ಸೀತಾರಾಮ ರಾಮ ಗುಣ- ವೃದ್ಧಿಕಾರಣ ಭಕ್ತಿಶ್ರದ್ಧೆಯ ಕೊಡು ಜಯ ರಾಮ ರಾಮ ಬಿದ್ದೆನಜ್ಞಾನಸಮುದ್ರಮಧ್ಯದಿ ಸೀತಾರಾಮ ರಾಮ ಎನ್ನ- ನುದ್ಧರಿಸುವರೆ ಪ್ರಸಿದ್ಧ ನೀನೆ ಜಯ ರಾಮ ರಾಮ 2 ನಿನ್ನ ನಾಮವೆ ಪ್ರಸನ್ನ ಪಾವನ ಸೀತಾರಾಮ ರಾಮ ಸ- ರ್ವೋನ್ನತ ಮಹಿಮವರೇಣ್ಯ ಶಾಶ್ವತ ಜಯ ರಾಮ ರಾಮ ನಿನ್ನಾಧೀನವು ನಿಖಿಲ ಜಗವು ಸೀತಾರಾಮ ರಾಮ ಪರಿ- ಪೂರ್ಣಾತ್ಪೂರ್ಣವರೇಣ್ಯ ಶಾಶ್ವತ ಜಯ ರಾಮ ರಾಮ 3 ಸ್ವಾಂತರಂಗಭಕ್ತಿಚಿಂತಾಮಣಿ ಸೀತಾರಾಮ ರಾಮ ಆತ್ಮ- ತಂತ್ರನಿಯಂತ್ರ ಸರ್ವಾಂತರಾತ್ಮಕ ಜಯ ರಾಮ ರಾಮ ಭ್ರಾಂತಿ ತ್ಯಜಿಸುವುದಕೆಂತುಪಾಯವು ಸೀತಾರಾಮ ರಾಮ ಏ- ಕಾಂತಸ್ಮರಣೆಯ ನಿರಂತರ ಕೊಡು ಜಯ ರಾಮ ರಾಮ 4 ಸೀತಾರಾಮ ರಾಮ ದುಷ್ಟ- ರಕ್ಕಸಾಳಿಯ ಸೊಕ್ಕಡಗಿತು ಜಯ ರಾಮ ರಾಮ ಕರ್ಕಶಕಲಿಕಾಲ ಮಿಕ್ಕಿ ಬಂದುದು ಸೀತಾರಾಮ ರಾಮ ಮನ- ಸೊಕ್ಕಿ ಮೋಹದ ಬಲೆಗೆ ಸಿಕ್ಕಿಬಿದ್ದುದು ಜಯ ರಾಮ ರಾಮ 5 ದಾಸಜನರ ಹೃದಯಸ್ಥಿತ ಸೀತಾರಾಮ ರಾಮ ಶ್ರೀನಿ- ವಾಸ ನಿನ್ನವರಭಿಲಾಷೆಯ ಕೊಡು ಜಯ ರಾಮ ರಾಮ ಸೀತಾರಾಮ ರಾಮ ಸಾಧು- ವಾಸಸಂತೋ ಪ್ರಕಾಶವ ಕೊಡು ಜಯ ರಾಮ ರಾಮ 6 ಜ್ಞಾನವಜ್ಞಾನವು ಭಾನುತಿಮಿರ ಸೀತಾರಾಮ ರಾಮ ಸತ್ಯ- ಜ್ಞಾನ ಭಕ್ತಿಭಾಗ್ಯ ನೀನಿತ್ತು ಪೊರೆ ಜಯ ರಾಮ ರಾಮ ಹೀನರೈವರು ಸ್ವಾಧೀನಗೊಂಬರು ಸೀತಾರಾಮ ರಾಮ ಪವ- ಮಾನವಾಹನ ನಿನ್ನ ಧ್ಯಾನವ ಕೊಡು ಜಯ ರಾಮ ರಾಮ 7 ಚಿತ್ತಕೆ ನಿಲವಿಲ್ಲ ಚಿಂತೆ ಹಲವು ಸೀತಾರಾಮ ರಾಮ ತವ ಭೃತ್ಯನಾಗಿರುವ ಸದ್ಭಕ್ತಿಯ ಕೊಡು ಜಯ ರಾಮ ರಾಮ ಸೀತಾರಾಮ ರಾಮ ಪರ- ವಸ್ತುತ್ವದೇಕಾಸಕ್ತಿಯ ಕೊಡು ಜಯ ರಾಮ ರಾಮ 8 ಆಧಿವ್ಯಾಧಿ ಭವಾಂಬೋಧಿಕುಂಭಜ ಸೀತಾರಾಮ ರಾಮ ತವ ಪಾದಾಂಭೋಜಪ್ರಸಾದಪಾಲಿಸು ಜಯ ರಾಮ ರಾಮ ಸಾಧುಸಂಗಸುಖಬೋಧೆಯ ಕೊಡು ಸೀತಾರಾಮ ರಾಮ ಕಲಿ- ಬಾಧೆ ಪರಿಹರಿಪ ಹಾದಿ ತೋರಿಸು ಜಯ ರಾಮ ರಾಮ 9 ಧ್ಯಾನವಿರಲಿ ಎನ್ನ ಮಾನಸದಲಿ ಸೀತಾರಾಮ ರಾಮ ವಿಷ ಯಾನುಭವದಿ ಬಲು ಹಾನಿಯಾದೆನು ಜಯ ರಾಮ ರಾಮ ದೀನಜನರ ಕಾಮದೇನು ರಘುವರ ಸೀತಾರಾಮ ರಾಮ ಖಲ- ದಾನವಾರಣ್ಯಕೃಶಾನು ಮಾನದ ಜಯ ರಾಮ ರಾಮ 10 ದುಷ್ಟರ ಸಂಗದಿಂದೆಷ್ಟೊ ನೊಂದೆನು ಸೀತಾರಾಮ ರಾಮ ಸುವಿ- ಶಿಷ್ಟರ ಸಂಗವ ಕೊಟ್ಟು ಸಲಹೊ ಜಯ ರಾಮ ರಾಮ ಭ್ರಷ್ಟ ಪ್ರಕೃತಿಯನ್ನು ಕುಟ್ಟಿ ಕಳಚು ಸೀತಾರಾಮ ರಾಮ ಪರ- ಮೇಷ್ಟ್ಯಾದಿ ಸುಮನಸರಿಷ್ಟದಾಯಕ ಜಯ ರಾಮ ರಾಮ 11 ತನ್ನ ಕೇಡು ತಾನರಿಯದಾದೆ ಸೀತಾರಾಮ ರಾಮ ಸುಪ್ರ- ಸನ್ನ ನಿನ್ನ ಸ್ಮರಣೆಯನಿತ್ತು ಪೊರೆ ಜಯ ರಾಮ ರಾಮ ಹಣ್ಣೆಂದು ದೀಪವ ತಿನ್ನ ಪೋದೆನು ಸೀತಾರಾಮ ರಾಮ ಹೆಣ್ಣು ಹೊನ್ನಿಗಾಗಿ ಪರವನ್ನು ಮರೆತೆ ಜಯ ರಾಮ ರಾಮ 12 ನಿತ್ಯ ನಿನ್ನ ದಾಸ್ಯವಿತ್ತು ರಕ್ಷಿಸು ಸೀತಾರಾಮ ರಾಮ ಯಾವ- ಚ್ಚಿತ್ತ ತವ ಧ್ಯಾನದಿ ತೃಪ್ತಿಯಾಗಲಿ ಜಯ ರಾಮ ರಾಮ ಸತ್ಯಾತ್ಮರ ಸಂಗಸತ್ವ ವರ್ಧಿಸು ಸೀತಾರಾಮ ರಾಮ ಪರ- ಮಾರ್ಥವಿಚಾರ ಸತ್ತತ್ತ್ವವರುಹು ಜಯ ರಾಮ ರಾಮ 13 ಕರ್ತಾಕಾರಯಿತನು ಭರ್ತಾರನು ಸೀತಾರಾಮ ರಾಮ ಪುರು- ಷಾರ್ಥರೂಪ ತವ ಭಕ್ತಿ ಪ್ರಾರ್ಥನೆ ಜಯ ರಾಮ ರಾಮ ಪ್ರತ್ಯಗಾತ್ಮ ಮನೋವೃತ್ತಿಯೊಳಿರು ಸೀತಾರಾಮ ರಾಮ ಸ್ವಾಮಿ- ಭೃತ್ಯನ್ಯಾಯದಿ ನಿಯಮಿಸುತ್ತ ನಡೆಸು ಜಯ ರಾಮ ರಾಮ 14 ಸೀತಾರಾಮ ರಾಮ ವಾಯು- ಸಖಸ್ಪರ್ಧಾತ್ಮಕ ಸಾಧುಪ್ರಕೃತಿಪಾಲಿಸು ಜಯ ರಾಮ ರಾಮ ಸೀತಾರಾಮ ರಾಮ ಬ್ರಹ್ಮಾ- ದ್ಯಖಿಳ ಚೇತನಾತ್ಮಕ ಸರ್ವೋತ್ತಮ ಜಯ ರಾಮ ರಾಮ 15
--------------
ತುಪಾಕಿ ವೆಂಕಟರಮಣಾಚಾರ್ಯ
ಜಯತುಲಸೀರಾಮಾ ಜಗದಭಿರಾಮಾ ಭಯನಗಸುತ್ರಾಮ ಭರತÀಪುರೀಧಾಮ ಪವೆಂಕಟಲಕ್ಷಾಂಬ ಉದರಾಬ್ಧಿ ಸೋಮಕಿಂಕರಾಶ್ರಿತಪ್ರೇಮ ಕ'ಸಾರ್ವಭೌಮ 1ಪತಿತಜನೋದ್ಧರಿತ ಪ್ರಥಮಾಶ್ರಮರತರತಿಪತಿಗುಣಜಿತರಮ್ಯ ಸುಭಾತ 2ವರಸಕಲಾಗಮಶಾಸ್ತ್ರಾರ್ಥ ಪ್ರ'ೀಣನಿರ್ಮಲಧೀಷಣ ನೀರಜಲೋಚನ 3ರಾಮಕೃಷ್ಣೋತ್ಸವ ನೇಮಧುರೀಣಕಾ'ುತಫಲಪ್ರದ ಕರುಣಾಭರಣಾ 4ಅಥಿತಿ ಅಭ್ಯಾಗತ ಆದರಣೇ'ತಬುಧವರಪೂಜಿತ ಭು'ಪ್ರಖ್ಯಾತ 5ನಿರತಾನ್ನದಾನ ನಿಖಿಲಾವಧಾನಪರಮಾರ್ಥಜ್ಞಾನ ಪರಿಬೋಧಮಾನ 6ತಾಮರತುಲಸೀದಾಮ (ಶುಭಾಂಗಾ)ಶ್ರೀರಂಗಸ್ವಾ'ುದಾಸ ಭವತಿ'ುರಪತಂಗಾ 7
--------------
ಮಳಿಗೆ ರಂಗಸ್ವಾಮಿದಾಸರು
ಜಯದೇವ ಜಯದೇವ ಜಯದೀನದಯಾಳಾ ಜಯಜಯ ಶ್ರೀಗುರು ಮಹಿಪತಿ ಭವತಾರಕ ಲೀಲಾ ಪ ಮರವಿನ ಕತ್ತಲಿಯೊಳಗೆ ಮುಂದುಗಾಣದಲಿರಲಿ ಅರವಿನದೀಪವ ಹೆಚ್ಚಿ ದೋರುತಲೀ ಸ್ಥಿರವನು ಗೊಳ್ಳದ ಚಿತ್ತವ ಭಜನಿಗೆಲಿಸುತಲಿ ಹರಿಸಿದ ವಿದ್ಯದಗೃಂಥಿಯ ಸಂಶಯ ಬಿಡಿಸುತಲಿ 1 ಪರಿಪರಿಯಿಂದಲಿಗರದು ಬೋಧನಾಮೃತನುಡಿಯಾ ಅರಹಿಸಿಯೋಗದ ಮಾರ್ಗವ ಸಾಂಖ್ಯದನಿಲ್ಲ ಕಡಿಯಾ ಕರಣೀಂದ್ರಿಯಗಳ ವಡದಾಸ್ವಾನಂದದಯಡಿಯಾ ಕರುಣಿಸಿ ವಿಶ್ವಂಭರಿತದ ತೋರಿದೆ ಇತ್ಥಡಿಯಾ 2 ನಿನಗುತ್ತೀರ್ಣವಕಾಣದೇ ತನುವಾರತಿ ಮಾಡೀ ಮನವೇದೀಪವು ಸದ್ಭಾವನೆ ಆಜ್ಯನೀಡಿ ಅನುದಿನ ಬೆಳಗುವ ನಂದನುಮಹಿಮೆಯ ಕೊಂಡಾಡಿ ಚಿನುಮಯಸುಖದೊಳು ಬೆರೆದಾಹಂಭ್ರಮ ಈಡಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವಿ ಜಯದೇವಿ ಜಯಭಗವದ್ಗೀತೆ | ಶ್ರಯ ಸುಖದಾಯಕಮಾತೇ ಶೃತಿ ಸ್ಮøತಿ ವಿಖ್ಯಾತೇ ಪ ಮೋಹ ಕಡಲೋಳಗರ್ಜುನ ಮುಳುಗುತ ತೇಲುತಲಿ | ಸೋಹ್ಯವ ಕಾಣದೆತನ್ನೊಳು ತಾನೇ ಮರೆದಿರಲೀ| ಬೋಧ ಪ್ರತಾಪದಲೀ| ಮಹಾ ಸುಜ್ಞಾನದ ತೆಪ್ಪದಿ ದಾಟಿಸಿದವನಿಯಲಿ 1 ಅಂದಿಗಿಂದಿಗೆ ಋಷಿ ಮುನಿ ಸಜ್ಜನ ಮೊದಲಾಗಿ | ಕುಂದದಿ ಪಂಡಿತರೆಲ್ಲರು ಮತಿ ಯುಕ್ತಿಯಲೊದಗಿ | ಸುಂದರ ಟೀಕೆಯ ಮಾಡುತ ಪಾಡುತ ಅನುವಾಗಿ | ಚಂದದಿ ನಿಂತರು ಅನುಭವದಲಿ ವಿಸ್ಮಿತರಾಗಿ 2 ಆವನು ಭಾವದಿ ಪೂಜಿಸಿ ಓದಿಸಿ ಕೇಳುವನು| ಸಾವಿರ ಸಾಧನವೇತಕೆ ಜೀವನ್ಮುಕ್ತವನು | ದೇವಮನುಜರಿಗೆ ತಿಳಿಯದು ಪದಪದ ಮಹಿಮೆಯನು | ಆವಗು ಸ್ಮರಿಸುವ ಮಹೀಪತಿ ನಂದನು ನಿಮ್ಮವನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಲಜಾಕ್ಷ ಯಾಚಿಸುವೆ ಚಲುವ ಚರಣ ತೋರೋ ಸುಲಭದಿ ಹಯವದನ ಪ [ಶಶಿಯೊಲಿರುವದರಿಧರ] ಅಕ್ಷ ಸುಬೋಧ ಪುಸ್ತಕಧರ ವಸುಮತಿ ರಮಣನೆ ನಿನ್ನ ಸಾಸಿರ ನಾಮದಲಿ ಸೋಸಿಲಿ ನಾ ಪ್ರಾರ್ಥಿಸುವೆ 1 ವರವಾದಿ ಜಯದ ವಿಮುಕ್ತಿ ಪ್ರದಾತ ಅನುದಿನ ನಿನ್ನ ಆರೆರಡು ಅ ಕ್ಷರದ ಮಂತ್ರವನೂ ಪ್ರೇಮದಿ ನಾ 2 ಮುಖದೊಳ್ ಸಕಲಾಗಮ ವಿದ್ಯಾ ಸುಘೋಷ ಮಾಡಿ ಆ ಕಮಲಜ ಭವಮುಖರಿಂದ ಅಮೃತದಲಿ [ಸ್ತುತಿಸಿಹ ಅಭಿಷಿಕ್ತನೆ] ನೀನೆನಿಸಿ ನರಹರೆ 3
--------------
ಪ್ರದ್ಯುಮ್ನತೀರ್ಥರು
ಜಲಧಿ | ನಿಮ್ಮ ಮೊರೆಹೊಕ್ಕವರ ಕಾಯ್ದು ಪೊರೆಯುವಿರಿ ದಯದಿ ಪ. ಅರಿಯರು ಜಗದೊಳಗೆ ನರರು ನಿವಿ್ಮೂ ಮಹಿಮೆ ಕರಕರೆಪಡುತಿಹರು ಭವದೊಳಗೆ ಪರಮ ನಮ್ರತೆಯಿಂದ ಚರಣಕೆರಗಲು ಬಂದು ಉರುತರದ ಕಾರುಣ್ಯದಿಂದ ಪೊರೆಯುವಿರಿ 1 ಇಲ್ಲವೊ ಆಸೆ ಆಡಂಬರದ ದ್ರೌವ್ಯದಲಿ ಎಲ್ಲೆಲ್ಲಿ ನೊಡಲು ತತ್ವಬೋಧೆ ಉಲ್ಲಾಸದಿಂದ ಸಜ್ಜನರಿಗರುಹುತ ಮೋದ ಎಲ್ಲೆ ಕಾಣಿಸದಂಥ ಆನಂದವೀವ ಗುರು 2 ತಂದೆ ಮುದ್ದುಮೋಹನವಿಠ್ಠಲನೆಂದೆಂಬ ಬಹು ಚಂದದ ಅಂಕಿತದಿ ಜಗದಿ ಉದಿಸಿ ಮಂದರಿಗೆ ಸುಜ್ಞಾನ ತಂದು ರಕ್ಷಿಸುವಂಥ ಒಂದೊಂದು ಮಹಿಮೆಗಳ ಪೇಳಲೆನ್ನೊಶವೆ 2 ಅನಾದಿಯಿಂದಲಿ ಹೀನ ದೆಸೆಯೊಳಗಿದ್ದು ನಾನಾ ಜನ್ಮದಿ ಬಂದು ಕರ್ಮದಲಿ ತೊಳಲಿ ದೀನತ್ವವೈದುವ ಮಾನವನ ಕರುಣಿಸಿ ಸಾನುರಾಗದಿ ಹರಿಯ ಪದಕೆ ಸೇರಿಸುವಂಥ 3 ಸೃಷ್ಟಿ ಸ್ಥಿತಿ ಲಯಗಳಿಗೆ ಕರ್ತ ಹರಿ ಎಂತೆಂದು ಶ್ರೇಷ್ಠ ಕನಿಷ್ಠದ ಅರ್ಥ ತತ್ವ ತಿಳಿಸಿ ಕಷ್ಟ ಬಿಡಿಸುವ ಜಗತ್ಕರ್ತ ಒಬ್ಬನೆ ಹರಿಯು ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನೆನುವ 5
--------------
ಅಂಬಾಬಾಯಿ
ಜಿಜ್ಞಾಸುವಿನ ಲಕ್ಷಣಾ ಕೇಳು ನೀಕ್ಷಣಾ ಪರಮಸುಖಾಕಾಂಕ್ಷಕನಾ ಬಾಳಿನ ವಿಷಯದಿ ಬೇಸರಗೊಳು ತಾ ವಿರತಿಯಿಂದರುವಾ ಬೋಧ ಕೇಳ್ವನಿವಾ ಚಿತ್ತದಿ ಭಕ್ತಿಭಾವನಾ ತಾಳುತ ಸಾಧನಾ ಮಾಡುತಲಿಹನಿವ ಕಾಣಾ ಆತ್ಮಾನಾತ್ಮನಿವೇಕ ವಿಚಾರ ಕೇಳುತ ತನ್ನೊಳಗÉೀ ಮಿಥ್ಯಾರೊಪಿತ ಜೀವಭಾವನನಾ ಜರÉಯುತ ಮನದೊಳಗೇ ಮಾಡುವ ಸುವಿಚಾರಾ ಇವನೆ ಧೀರ ಪರಮಸುಖಕಾಂಕ್ಷಕನಾ ವಿಷಯದಿ ಹರಿಯುವ ಮನವÀನೆಳೆÀದು ಬೋಧದೊಳಗಿರುವಾ ಮೋದ ಹೊಂದುವ ತಾ ಶ್ರೀ ಗುರುಶಂಕರನಾ ಆನಂದರೂಪನಾಬೆರೆತು ನಾ ಸುಖಿಸುವನಾ
--------------
ಶಂಕರಭಟ್ಟ ಅಗ್ನಿಹೋತ್ರಿ