ಒಟ್ಟು 494 ಕಡೆಗಳಲ್ಲಿ , 84 ದಾಸರು , 437 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾನವ ನಿನ್ನ ಹಣೆಬರೆಹವಲ್ಲದೆ ಇಲ್ಲ ಪ ಸಿರಿವಂತನ ಸ್ನೇಹವ ಮಾಡಿ ನಡೆದರು ಇಲ್ಲಪರಿಪರಿಯಲಿ ವಿದ್ಯೆಯ ಕಲಿತರಿಲ್ಲನರಿಯ ಬುದ್ಧಿಯಿಂದಲಿ ನಡೆದುಕೊಂಡರು ಇಲ್ಲಅರಿಯದೆ ಹಲವ ಹಂಬಲಿಸಿದರು ಇಲ್ಲ 1 ಕೊಂಡಾಡಿ ಕಾಡಿ ನೀ ಬೇಡಿಕೊಂಡರು ಇಲ್ಲಕಂಡ ಕಂಡವರಿಗೆ ಕೈ ಮುಗಿದರಿಲ್ಲಗಂಡುಗತ್ತರಿಯನು ಕೊರಳಿಗಿಟ್ಟರು ಇಲ್ಲ - ಪ್ರ-ಚಂಡನಾದರು ಇಲ್ಲ, ಪರಿಹಾಸ್ಯವೆಲ್ಲ 2 ಕಟ್ಟಾಳು ಕಡುಜಾಣನಾಗಿ ಪುಟ್ಟಿದರಿಲ್ಲಬೆಟ್ಟವನು ಕಿತ್ತು ತಂದಿಟ್ಟರಿಲ್ಲಸೃಷ್ಟಿಯೊಳು ಕಾಗಿನೆಲೆಯಾದಿಕೇಶವರಾಯಕೊಟ್ಟವರಿಗುಂಟು ಕೊಡದವರಿಗಿಲ್ಲ3
--------------
ಕನಕದಾಸ
ಮಾನವಾತ್ಮರೆ ನಿಮ್ಮ ಮಾನಸ ಪೂಜೆಯಿಂಮಾನವನಿಗೆ ಮೋಕ್ಷ ಸಾಧಿಸೀರಿ ಪ ರತ್ನ ನಿರ್ಮಿತ ಸುಚರಿತ್ರ ಮಂಟಪವನ್ನುಸತ್ಯಭಾಮೆಯ ಪತಿಗಿತ್ತು ಪೂಜಿಸುವೆ1 ಆಸನ ನೀಡುವೆ ಶೇಷಶಯನನೆ ಇಲ್ಲಿವಾಸ ಮಾಡಿ ಎನ್ನ ಸೇವೆ ಸ್ವೀಕರಿಸು2 ಧ್ಯಾನ ಮಾಡುವೆ ನಿನ್ನ ಗಾನ ಮಾಡುವೆ ನಿನ್ನಜ್ಞಾನ ಭೂಷಣ ಶೋಭಿತಾನನಾಂಬುಜ 3 ಧೃತ ವೇಣುಗೋಪಾಲ ಬಾರೋ ಮನಸಿಗೆ ತೋರೊಮೂರುತಿ ನಿನ್ನಯ ಸಮೀರ ಸಂಸ್ತುತನೆ 4 ಅಘ್ರ್ಯ ನೀಡುವೆ ನಾನು ಅನಘ್ರ್ಯ ವಸ್ತುಗಳಿಂದಸ್ವಘ್ರ್ಯಗ್ರಹಣ ಮಾಡೋ ಭರ್ಗ ಸೇವಿತನೆ 5 ಪಾದ್ಯ ನೀಡುವೆ ವೇದ ವೇದ್ಯ ಮಹಿಮನೇ ಮುನ್ನಾವದ್ಯ ಕಳೆದು ಭವದಿಂದ ಉದ್ಧರಿಸೆನ್ನ 6 ಆಚಮನವ ನೀಡುವೆ ಹೇ ಚತುರಾನನೇಶವಾಚಾಮಗೋಚರ ಮೋಚಕ ಹೇತು 7 ಸುದತಿ ಮೋಹನ ತವಮಧುಪರ್ಕವನೀವೆ ಮುದದಿ ಸ್ವೀಕರಿಸು 8 ಮತ್ತೆ ಆಚಮನವನಿತ್ತು ಪೂಜಿಪೆ ಕರವೆತ್ತಿ ಮುಗಿವೆ ಸರ್ವಭಕ್ತ ಪೋಷಕನೆ 9 ಗಂಗೆ ಯಮುನೆ ಗೋದಾ ತುಂಗೆ ಜಲವ ತಂದಿಹೆ ಅ-ನಂಗ ಜನಕ ಮಾಡೋ ಅಭ್ಯಂಗ ಸ್ನಾನ 10 ನಿರಿಗೆಗಳನೆ ಹಾಕಿ ಜರದ ಪೀತಾಂಬರ ಗ-ರುಡವಾಹನ ನೀನು ಧರಿಸು ಮಧ್ಯದಲಿ 11 ಹಾರ ಕಿರೀಟ ಕಾಂಚಿ ನೀರ ನೂಪುರ ಸು-ಕೇಯೂರ ನೂಪುರನೀವೆ ಧಾರುಣಿಪತಿಗೆ 12 ಸ್ವರ್ಣ ರಚಿಸಿದ ಸೂತ್ರವನು ಕೊಡುವೆ ಲಕ್ಷ್ಮೀರನ್ನ ಸೌರಭ ಗಂಧವನು ಸ್ವೀಕರಿಸು 13 ವಾಸುದೇವನೆ ದಿವ್ಯ ನಾಸಿಕೇಂದ್ರಿಯದಿಂದಈಸು ಧೂಪದ ಗಂಧ ವಾಸನೆ ಗ್ರಹಿಸೋ 14 ಮರುಗು ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆಸುಮಗಳ ಪರಿಮಳ ಧರಿಸೋ ಮಧ್ಯದಲಿ 15 ಹತ್ತು ಅಂಗಗಳಿಂದ ಉತ್ತಮ ಸುಧೂಪವಎತ್ತುವೆ ನಿನಗೆ ಸರ್ವೋತ್ತಮ ಹರಿಗೆ16 ಆಕಳ ಘೃತದ ಅನೇಕ ದೀಪಗಳ್ಹಚ್ಚಿಶ್ರೀಕರ ತವ ಮುಖಾವಲೋಕಿಸುತ್ತಿಹೆನು 17 ಏಕಾರತಿ ಗೋಪಿಪ್ರೀತನೆ ಬೆಳಗುವೆನಾಕ ನಾಯಕ ಸುರಲೋಕ ಸೇವಿತನೆ 18 ಆರು ವಿಧದ ಅನ್ನ ಸಾರು ಪಾಯಸ ಭಕ್ಷ್ಯಭೂರಿ ಶಾಕಗಳೀವೆ ನೀರಜಾಂಬಕನೆ 19 ಮಾರಜನಕನೆ ಮುತ್ತಿನಾರತಿ ಬೆಳಗುವೆಶ್ರೀರಾಮನೆ ನಿನ್ನ ಮೋರೆಯ ತೋರೊ20 ಛತ್ರ ಚಾಮರ ವ್ಯಜನ ದರ್ಪಣ ಪರ್ಯಂಕಕರ್ಪುರ ತಾಂಬೂಲವಿತ್ತು ಪೂಜಿಸುವೆ 21 ಹತ್ತಾರು ಉಪಚಾರ ಚಿತ್ರ ಚರಿತನೆ ನಿನಗೆಅರ್ಥಿಯಲಿ ಕೊಡುವೆನು ಮುಕ್ತಿ ನೀಡೆನಗೆ 22 ಇಂದಿರೇಶನೆ ನಿನ್ನ ಮುಂದೆ ತುತಿಪನೆ ನಿಂತುನಂದಬಾಲನೆ ಕೃಪೆಯಿಂದ ನೋಡೆನ್ನ 23
--------------
ಇಂದಿರೇಶರು
ಮುಗಿವೇನು ಕೈಯ್ಯಾ ಶಾಂತೇಶರಾಯಾ ರಘುರಾಮಾ ಪ್ರೀಯಾ ಪಾಲಿಸೆನ್ನ ಜೀಯಾ ಪ ಶರಧಿಯ ದಾಟಿ ಮುದ್ರೆಯನು ಕೊಟ್ಟೀ ದುರುಳರ ಮೆಟ್ಟಿ ಪುರಲಂಕೆ ಸುಟ್ಟೀ 1 ಭಂಡಿ ಅನ್ನವನುಂಡೂ ದೈತ್ಯನ ಚಂಡಾಪರಿ ಹಿಡಿಂಬನನು ಮುರಿದಿ 2 ದುಷ್ಟಮತವನು ಸುಟ್ಟೀ ಜ್ಞಾನತೀರ್ಥ ಧಿಟ್ಟ ಶ್ರೀ ಹನುಮೇಶವಿಠಲನ ದೂತಾ 3
--------------
ಹನುಮೇಶವಿಠಲ
ಮುದ್ದುಕೃಷ್ಣ ವಿಠಲ | ಕಾಪಾಡೋ ಇವನ ಪ ಅಧ್ವರೇಡ್ಯನೆ ದೇವ | ಬುದ್ಧಿ ಪ್ರದನಾಗೀ ಅ.ಪ. ತರಳನಿವ ಭಕ್ತಿಯುತ | ಕರಪಿಡಿದು ಸಲಹಯ್ಯಮರುತಮತ ಪರಿಕರಪು | ತರತಮಸುತತ್ವಾಅ |ವರಪಂಚ ಭೇದಗಳ | ಅರಿಪಾಗುವಂತೆಸಗಿಪೊರೆಯೊ ಕರುಣಾಮಯನೆ | ಕರಿವರದ ದೇವಾ 1 ಪಾದ | ಭಕುತಿಭಾಗ್ಯಗಳಾ |ತೋಕನಿಗೆ ಒದಗಿಸುತ | ಬೇಕಾದ ವರವಿತ್ತುಮೊಕಳತ್ರನೆ ಸಲಹೊ | ಸಾಕಾರ ಮೂರ್ತೇ 2 ಹರಿಸೇವೆ ಗುರುಸೇವೆ | ಹಿರೆಜನಂಗಳ ಸೇವೆಸಾರುತಾ ಭಕುತಿಯಲಿಂದ | ಚರಿಪಮನವಿತ್ತೂವಸಸು ಸಾಧನಗೈಸಿ | ಪೊರೆಯ ಬೇಕೆಂದೆನುತಮರುತಾಂತರಾತ್ಮಕನೆ | ಕರಮುಗಿದು ಬೇಡ್ದೆ 3 ಕಾಮಾದಿಷಡ್ರಿಪು | ಸ್ತೋಮಗಳ ಕಾಟವನುನೇಮದಾ ಕಡೆಗೊತ್ತಿ | ಪಾಮರನು ಇವನಾಭೂಮಗುಣಿ ನೀನಾಗಿ | ಪ್ರೇಮದಿಂ ಸಲಹಲ್ಕೆನಾಮಾಳ್ಪೆ ಭಿನ್ನಪವ | ಶ್ಯಾಮಸುಂದರನೇ 4 ಗಾವಲ್ಗಣಿವರದ | ತಾವಕಗೆ ತವನಾಮಸೇವೆಯನೆ ಕರುಣಿಸುತ | ಕಾಪಾಡೊ ಹರಿಯೇ |ಗೋವುಗಳ ಪಾಲಗುರು | ಗೋವಿಂದ ವಿಠ್ಠಲನೆನೀವೊಲಿಯದಿನ್ನಿಲ್ಲ | ದೇವದೇವೇಶಾ 5
--------------
ಗುರುಗೋವಿಂದವಿಠಲರು
ಮೂರು ನಾಮಗಳ ಧರಿಸಿರುವ ಕಾರಣವೇನು ಸಾರಿ ಪೇಳಲೊ ಈಗಲೆ ಪ. ಶ್ರೀ ರಮಾಪತಿ ಶ್ರೀನಿವಾಸ ವೆಂಕಟರಮಣ ಯಾರು ಇಟ್ಟರೋ ನಿನಗೆ ಈ ಮೂರು ನಾಮ ಅ.ಪ. ಶುದ್ಧ ವೈಷ್ಣವರೆಲ್ಲ ಶುದ್ಧ ಮೂರುತಿ ಎಂದು ಕರವ ಮುಗಿದು ಎದ್ದು ನೋಡಲು ನಿನ್ನ ಫಣಿಯೋಳೀ ತರವಿರಲು ಮಧ್ವಮತ ದೈವವೆಂದಿನ್ನು ತಿಳಿಯುವರೆ 1 ಮೂರುರೂಪನು ನಾನು ಮೂರು ಲೋಕಗಳಿಹವು ಮೂರು ಮಾಳ್ಪೆನು ಜಗವ ಮೂರು ಗುಣದಿ ಮೂರು ತಾಪವ ಗೆದ್ದು ಮೂರು ಮಾರ್ಗದಿ ಭಜಿಸೆ ಪಾರು ಮಾಡುವೆನೆಂದು ತೋರುವ ಸೊಬಗೊ 2 ಸಾಲದೆ ನಿನಗೆ ಸೌಂದರ್ಯಕೆ ಒಂದು ತಿಲುಕ ಪಾಲಸಾಗರಶಾಯಿ ಚಲುವಮೂರ್ತಿ ಕಾಲಕಾಲಕೆ ಜನರ ದೃಷ್ಟಿ ತಗುಲುವುದೆಂದು ಲೀಲೆಯಿಂದಲಿ ಹೀಗೆ ಧರಿಸಿದೆಯ ಪೇಳೊ 3 ಮೂರೆರಡು ಎರಡೊಂದು ಇಂದ್ರಿಯವನರ್ಪಿಸಲು ತೋರುವನು ನಿಜರೂಪ ಭಕ್ತಗೆಂದು ಸಾರುತ್ತಿದ್ದರು ವಾಯು ಅರಿಯದೆ ಭಜಿಸಿದರೆ ಮೂರುನಾಮವೆ ಗತಿ ಎನ್ನುವ ಬಗೆಯೊ 4 ಶ್ರೀಲೋಲ ಗೋಪಾಲಕೃಷ್ಣವಿಠ್ಠಲ ನಿನ್ನ ಈ ಲೀಲೆ ಬಗೆಯನು ಅರಿವವರ್ಯಾರೊ ವ್ಯಾಳಶಯನ ವೆಂಕಟೇಶ ಎನ್ನ ಮನದಿ ಕಾಲಕಾಲಕೆ ನಿನ್ನ ರೂಪವನೆ ತೋರೋ 5
--------------
ಅಂಬಾಬಾಯಿ
ಮೂರ್ಖರ ವಡಂಬಡಿಸಲಾಗವದೆಂದೆಂದು ಪ ಮಳಲ ತಂದಿಕ್ಕಿ ಗಾಣದೊಳಗ ಸಾಯಸದಿಂದ | ಬಲಿದು ಎಣ್ಣೆಯ ತೆಗೆಯಲಿಬಹುದು 1 ಗಿರಿಗಳಂದದಿ ಬಹಥೆರೆಗಳ ಕಡಿಯುತ | ಶರಧಿಯದಾಟಿ ಹೋಗಲು ಬಹುದು 2 ಇಳೆಯೊಳು ತಿರುಗುತ ದೇಶ ದೇಶಗಳನು | ಮೊಲದಾ ಕೋಡವ ದೊರಕಿಸಬಹುದು 3 ತೋರುವ ಮೃಗಜಲ ಹಿಡಿದು ಪ್ರಾಶನ ಮಾಡಿ | ನೀರಡಕಿ ಶಾಂತ ಮಾಡಿಲಿಬಹುದು 4 ಮೊಸಳಿದಾಡಿಯೊಳಿಹ ಅಮೌಲಿಕ ರತ್ನ ತನ್ನ | ವಶವನೆ ಮಾಡಿಕೊಳ್ಳಲಿಬಹುದು 5 ಪರಿ | ಶಿರಸದಿ ಬೇಗ ಧರಿಸಲಿಬಹುದು 6 ಗುರುಮಹಿಪತಿಸುತ ಪ್ರಭು ಗುರುತಿಲ್ಲವರಾ | ನೆರಳಿಗೆ ದೂರ ಕೈ ಮುಗಿವನು 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮೂರ್ತಿ ಚಿನ್ಮಯಾತ್ಮಕ ರೂಪ ಸಂತತದಿ ನೆನೆವವರ ಸಲಹೊ ಕರುಣಿ ಪ. ತುಂಬಿ ಇರುತಿಹುದು ಎಂತು ನಿನ್ನಾಟ ಪೇಳ್ ನಿಗಮವೇದ್ಯ ಚಿಂತೆ ಎನಗೊಂದಿಲ್ಲ ಅಂತರಂಗದಿ ನೆಲೆಸಿ ಸಂತತದಿ ನಿನ ಧ್ಯಾನ ನೀಡೆಂಬೆನೊ 1 ದೇಶಾಧಿಪತಿಗಳಿಗೆ ಕೋಶ ತುಂಬದ ಚಿಂತೆ ದೇಶ ತಿರುಗುವನಿಗೆ ಹಣದ ಚಿಂತೆ ದೇಶಸ್ಥನಾದವಗೆ ರಾಜಭಟರಾ ಚಿಂತೆ ಕಾಶಿಯಲ್ಲಿರುವವಗೆ ಮನೆಯ ಚಿಂತೆ 2 ಜಾರಿಣಿಗೆ ವಿಟನೊಬ್ಬ ಬಾರದಿರುವ ಚಿಂತೆ ಚೋರನಿಗೆ ರವಿ ಮುಳುಗದಿರುವ ಚಿಂತೆ ಮಾರನಿಗೆ ಯೋಗಿಗಳ ಹೃದಯ ಭೇದಿಪ ಚಿಂತೆ ಪತಿ ಒಲುಮೆ ಪಡೆವ ಚಿಂತೆ 3 ಕರ್ಮತತ್ಪರರಿಗೆ ಹರಿಮರ್ಮವರಿಯದ ಚಿಂತೆ ಧರ್ಮಪುರುಷಗೆ ಕಲಿಬಾಧೆಯ ಚಿಂತೆ ವೇದಶಾಸ್ತ್ರಜ್ಞನಿಗೆ ವಾದಿಯ ಭಯ ಚಿಂತೆ ಹಾದಿ ನಡೆವಗೆ ದುಷ್ಟ ಜನರ ಚಿಂತೆ 4 ಸಾಧು ಸಜ್ಜನರಿಗೆ ಬಾಧೆ ಕೊಡುವರ ಚಿಂತೆ ಹಾದಿ ತಪ್ಪಿದ ಪಾಪಿಗೆ ಯಮನ ಚಿಂತೆ ವಾಣಿಜ್ಯತನದವಗೆ ಹಣವು ಗಳಿಸುವ ಚಿಂತೆ ಮಾನವಂತರಿಗೂನ ನುಡಿಯ ಚಿಂತೆ 5 ಇಂತೆಲ್ಲರಾ ಚಿಂತೆ ಇರಲಿ ಕೇಳ್ ಹರಿಯೆ ಚಿಂತೆ ಬಿಡಿಸೆನಗೆ ನೀನೊಲಿದು ದೊರೆಯೆ ಚಿಂತನೆಗೆ ಸಿಗದಿಹುದು ನಿನಗೆ ಸರಿಯೆ ಚಿಂತಿಪರಿಗೊಲಿವಂಥ ಸಿರಿಕಾಂತ ಹರಿಯೆ6 ಶಾಂತ ಮೂರುತಿ ಪರಮ ಕರುಣಾಳುವೆನ್ನುತಲಿ ಎಂತೆಂತೂ ಸಜ್ಜನರು ಸ್ತುತಿಪುದನು ಕೇಳುತಲಿ ಇಂತು ನಿನ ಪದವನಾನ್ಹಾರೈಸಿ ಬಂದರೂ ನಿಂತರೂ ಎದುರಲ್ಲಿ ನೀನೊಲಿಯಲಿಲ್ಲ 7 ಕರಮುಗಿದು ಎರಗಿದರೂ ಶಿರಬಾಗಿ ನಮಿಸಿದರೂ ಚರಣದಲಿ ತನುಮನ ಒಪ್ಪಿಸಿದರೂ ಕರಗಲಿಲವು ಮನಸು ಕರುಣಪುಟ್ಟಲು ಕಾಣೆ ಭರವಸೆಯು ನಿನ್ನಲ್ಲಿ ಮೂಡಲಿಲ್ಲ 8 ಶಿರದಿ ಕರವಿಡಲಿಲ್ಲ ತೊರೆದೆಯೊ ಜರಿದೆಯೊ ವರಭಕ್ತಿ ಸಾಲದೊ ಗುರುವಿಕೆಯೊ ದೊರೆತನವೊ ಅರಹೊಟ್ಟೆ ಜೀವಿಸುತ ಅರಿಯದೆ ಮತ್ತೊಂದು ಇರುಳು ಹಗಲಾಲ್ಪರಿವ ತೆರವು ತೋರದೊ ಮನಕೆ 9 ಸರಿಯಲ್ಲ ಸರಿಯಲ್ಲ ಕರುಣಾಳುವೆಂಬುವೋ ಬಿರುದುಳಿವ ತೆರವಿಲ್ಲ ಬಿಂಕಪಟ್ಟರೆ ಈಗ ಕರೆದು ಮನ್ನಿಸೊ ಪಾಂಡುರಂಗವಿಠ್ಠಲ ದೇವ ವರ ಪುಂಡಲೀಕಗೆ ಒಲಿದದ್ದು ನಿಜವಾಗೆ 10 ಪರಿಪರಿಯ ಭಕ್ತರನು ಪೊರೆದದ್ದು ನಿಜವಾಗೆ ಹರಿದಾಸ ಸಂತತಿಗೆ ಮನೆದೈವ ನಿಜವಾಗೆ ಸರಿಯಿಲ್ಲದಾ ದೈವ ನೀನೆಂದು ನಿಜವಾಗೆ ಹೊರವೊಳಗೆ ಒಂದಾಗಿ ಕರಪಿಡಿದು ಸಲಹಿನ್ನು 11 ಗುರುಕೊಟ್ಟ ವರಬಲದಿ ಶರಣು ಪೊಂದಿದೆ ನಿನಗೆ ಚರಣದಲಿ ಬಿದ್ದಿರುವೆ ಪರಮ ಪುರುಷನೆ ದೇವ ಸ್ಮರಪಿತನೆ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಣೆ ಮಾಡಿದ ಮೇಲೆ ಭವದ ಭಯ ಉಂಟೆ 12
--------------
ಅಂಬಾಬಾಯಿ
ಮೆಲ್ಲನೇಳಯ್ಯ ಮಣಿವೆ ಪ ನಲ್ಲುಲಿಗಳಿಂದ ಶುಕಪಿಕಗಳೆಚ್ಚರಿಸುತಿವೆ ಅ.ಪ ಅರುಣ ವರ್ಣದ ಗಗನಯೆಂಬ ಹರಿವಾಣವನು ಕರದಿ ಪಿಡಿದೆತ್ತೆ ನಿನಗಾರತಿಯ ಗೈಯಲು ತರಣಿ ನಿಂದಿರ್ಪ ತುಂಬುರು ನಾರದರು ಮುದದಿ ಪರಮಾತ್ಮ ಸುಪ್ರಭಾತಗಳ ಪೇಳುವರು 1 ಭೃತ್ಯ ದಿಕ್ಪಾಲಕರು ಅತ್ಯಧಿಕ ಭಕ್ತಿಯಿಂ ಕರವೆತ್ತಿ ಮುಗಿದು ನಿತ್ಯಕಾರುಣ್ಯ ಪರಿಪೂರ್ಣ ಸದ್ಭಕ್ತಗಣ ನುತ್ಯ ನೀನೇಳೆಂದು ನುತಿಸುತಿಹರು 2 ನಿನ್ನ ನಾಮವ ಭಜಿಸಿ ಪಾದಪೂಜೆಯ ಗೈದು ನಿನ್ನ ಕಾರುಣ್ಯ ದರ್ಶನಕೆ ಕಾದಿರುವಾ ಪನ್ನರೆಲ್ಲರ್ಗೆ ದರ್ಶನವ ನೀನೀಯಲು ಇನ್ನೇಕೆ ತಡ ಏಳು ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಥಾದೇವೊ ತಥಾ ಗುರೌ ಶ್ರುತಿ ಹೇಳಿದ ಸನ್ಮತಲಿರ್ಯೊ ಧ್ರುವ ವೃಥಾ ಅಭಾವ ನೀ ಹಿಡುವರೆ ಸ್ವತ:ಸಿದ್ಧವ ತಾಂ ಬಿಡುವರೆ ಸತ್ಸಂಗದಲಿ ನೋಡಿನ್ನಾರೆ ಚಿತ್ಸುಖ ಹೊಳೆವರು ಕಣ್ಣಾರೆ 1 ಮುಗಿಲಿಗೆ ಮತ್ತೆ ಮುಗಿಲುಂಟೆ ಹಗಲಿಗೆ ಹಗಲಾಗುದುಂಟೆ ಜಗ ಇಹುದಕೆ ಜಗಮುಂಟೆ ಹೀಗಾದ ಮ್ಯಾಲೆ ವಸ್ತು ಎರಡುಂಟೆ 2 ಅನುಭವಕಿದರಿಟ್ಟು ಬಾಹುದು ಖೂನ ಹೇಳವ್ಯಾವು ನೋಡು ವೇದ ದೀನ ಮಹಿಪತಿಗಿದೆ ಬೋಧ ಭಾನುಕೋಟಿತೇಜನೊಂದೇ ತಾನಾದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಯಮ ತನ್ನ ಪುರದಿ ಸಾರಿದನು ಎಮ್ಮ ಕಮಲನಾಭನ ದಾಸರ ಮುಟ್ಟದಿರಿಯೆಂದು ಪ. ಭುಜದಲೊತ್ತಿದ ಶಂಖಚಕ್ರಾಂಕಿತವನ್ನು ನಿಜ ದ್ವಾದಶನಾಮ ಧರಿಸಿಪ್ಪರಾ ತ್ರಿಜಗವಂದಿತ ತುಲಸಿಯ ಮಾಲೆ ಹಾಕಿದ ಸುಜನರಂಗಣವ ಪೊಗದೆ ಬನ್ನಿರೆಂದು 1 ಗೋಪಿಚಂದನ ಬಿಟ್ಟು ದೇಹಕ್ಕೆ ಭಸ್ಮವ ಲೇಪಿಸಿ ಹರಿಹರರೊಂದೆಂಬ ಪಾಪಿಗಾಳೆಳತಂದು ಕಣ್ಣು ಕಳಚಿ ಅಂಧ ತಾಮಸಿನೊಳಗ್ಹಾಕಿ ಕಲ್ಲು ದಬ್ಬಿರೊ ಎಂದು 2 ತಾಳದಂಡಿಗೆ ನೃತ್ಯಗೀತ ಸಮ್ಮೇಳದಿ ಊಳಿಗವನು ಮಾಳ್ಪ ಹರಿದಾಸರ ಕೇಳುತಲೊಮ್ಮೆ ಕರಗಳ ಮುಗಿದು ನ - ಮ್ಮಾಳುಗಳೆನುತ ಪೇಳದೆ ಬನ್ನಿರೆಂದು 3 ಗುರುಮುದ್ರೆಯವನು ತಾನೆಂದು ಪ್ರಾಣಿಗಳ ಮಂ- ದಿರಕೆ ಪೋಗಿ ಪೋಗಿ ನಿರ್ಬಂಧಿಸಿ ಬರಿದೆ ಬೈದು ಬಳಲಿಸುವ ಪಾಪಿಗಳ ಕೊರೆದು ಕುಟ್ಟಿತಂದು ಮುರಿದು ಕೊಲ್ಲಿರೊ ಎಂದು 4 ಅನ್ಯದೈವ ಅನ್ಯಮಂತ್ರ ತಂತ್ರವ ಬಿಟ್ಟು ಪನ್ನಗಶಯನನೆ ಗತಿಯೆನುತ ಉನ್ನತ ಹರಿದಿನ ವ್ರತವನಾಚರಿಪ ಪ್ರ- ಸನ್ನರ ಗುಣವ ಕೆಣಕದೆ ಬನ್ನಿರೆಂದು 5 ಚರ್ಮಕ್ಕೆ ಸಿಡಿ ಊರಿ ಬೇವಿನುಡುಗೆವುಟ್ಟು ಚಿಮ್ಮುತ ಚೀರುತ ಬೊಬ್ಬೆಗಳಿಡುತ ಕರ್ಮ ಕೂಗುರಿಯಾಗಿ ಪ್ರಾಣಹಿಂಸೆಯ ಮಾಳ್ಪ ಬ್ರಹ್ಮೇತಿಕೋರನ ಬ್ಯಾಗನೆ ಎಳತನ್ನಿ 6 ಕೇಶವ ಹರಿ ಅಚಲಾನಂದವಿಠಲನ್ನ ಶೇಷಗಿರಿಯ ತಿರುಮಲೇಶನ ದಾಸರ ದಾಸರ ದಾಸನೆಂದೆನಿಸುವ ದಾಸರ ಗುಣವ ಕೆಣಕದೆ ಬನ್ನಿರಿ ಎಂದು 7
--------------
ಅಚಲಾನಂದದಾಸ
ಯಾಕೆ ಪುಟ್ಟಿಸಿದಿ ನೀ ಸಾಕಲಾರದೆ ಜಗ-ದೇಕ ಕಾರಣಪುರುಷನೆ ಕೃಷ್ಣ ಪ ವಾಕು ಚಿಂತಿಸೆ ಇಂಥಕಾಕು ಮಾಡುವುದುಚಿತವೆ ಕೃಷ್ಣ ಅ.ಪ. ಒಡಲಿಗನ್ನವ ಕಾಣೆ ಉಡಲು ಅರಿವೆಯ ಕಾಣೆಗಡಗಡನೆ ನಡುಗುತಿಹೆನೋ ಕೃಷ್ಣಮಡದಿ ಮಾತೆಯರ ಬಿಟ್ಟು ಒಡಹುಟ್ಟಿದವರ ಬಿ -ಟ್ಟಡವಿ ಪಾಲಾದೆನಲ್ಲೋ ಕೃಷ್ಣಕುಡುತೆ ಕೊಡುವವರಿಲ್ಲ ನುಡಿಯ ಕೇಳುವರಿಲ್ಲಬಡತನವು ಕಂಗೆಡಿಸಿತೋ ಕೃಷ್ಣಕಡೆ ಹಾಯಿಸುವರ ಕಾಣೆ ನಡುಮಡುವಿನೊಳು ಕೈ ಬಿಡದೆ ದಡವನು ಸೇರಿಸೋ ಕೃಷ್ಣ 1 ಕೊಟ್ಟವರ ಸಾಲವನು ಕೊಟ್ಟು ತೀರಿಸದವರಪೊಟ್ಟೆಯೊಳು ಪುಟ್ಟಲಾಯ್ತೋ ಕೃಷ್ಣಎಷ್ಟು ಜನುಮದಿ ಮನಮುಟ್ಟಿ ಮಾಡಿದ ಕರ್ಮಕಟ್ಟೀಗ ಉಣಿಸುತಿಹುದೋ ಕೃಷ್ಣಸೃಷ್ಟಿಯೊಳಗೆನ್ನಂಥ ಕೆಟ್ಟ ಪಾಪಿಷ್ಠ ಜನಘಟ್ಟಿಸಲಿಲ್ಲವೇನೋ ಕೃಷ್ಣವಿಠ್ಠಲನೆ ನಿನ್ನ ಮನಮುಟ್ಟಿ ಭಜಿಸಿ ಹಿಂದೆಎಷ್ಟು ಜನ ಬದುಕಲಿಲ್ಲೋ ಕೃಷ್ಣ 2 ಆಳು ದೇಹವು ಗೇಣು ಕೀಳಾಗಿ ಪಲ್ಕಿರಿದುಖೂಳ ಜನರ ಮನೆಗೆ ಕೃಷ್ಣಹಾಳು ಒಡಲಿಗೆ ತುತ್ತು ಕೂಳಿಗೆ ಹೋಗಿ ಅವರವಾಲೈಸಲಾರೆನಲ್ಲೋ ಕೃಷ್ಣಬಾಳು ಈ ಪರಿಯಾದ ಮ್ಯಾಲೆ ಭೂಮಿಯಲಿ ಬಹುಕಾಲ ಕಳೆಯುವುದುಚಿತವೆ ಕೃಷ್ಣಆಲಸ್ಯ ಮಾಡದಲೆ ಈ ವ್ಯಾಳ್ಯದಲಿ ಅರಿತುಪಾಲಿಸಲು ಬಹು ಕೀರ್ತಿಯೋ ಕೃಷ್ಣ 3 ಸಿರಿ ಅರಸನೆಂದು ಶ್ರುತಿ ಸಾರುತಿದೆಬಂದುದೀಗೇನು ಸಿರಿಯೋ ಕೃಷ್ಣಒಂದೊಂದು ನಿಮಿಷ ಯುಗಕಿಂತಧಿಕವಾಗುತಿದೆಮುಂದೋರದ್ಹಾಂಗಾಯಿತೋ ಕೃಷ್ಣಸಂದೇಹವಿಲ್ಲ ಗೋವಿಂದ ಶ್ರೀಪದದಾಣೆತಂದೆ ನೀ ರಕ್ಷಿಸದಿರೆ ಕೃಷ್ಣಮುಂದೆ ಭಜಿಸುವರು ಹೀಗೆಂದು ವಾರುತೆ ಕೇಳಿಬಂದುದಪಕೀರ್ತಿ ಮಾತು ಕೃಷ್ಣ 4 ವತ್ಸರ ಈರೀತಿ ಕಾಲಕಳೆದೆನೋ ಕೃಷ್ಣವ್ಯರ್ಥವಾಯಿತು ಜನುಮ ಸಾರ್ಥಕಾಗದು ಕಣ್ಣುಕತ್ತಲೆಗವಿಸಿತಲ್ಲೋ ಕೃಷ್ಣಇತ್ತ ಬಾರೆಂತೆಂದು ಹತ್ತಿಲಿಗೆ ಕರೆದೊಂದುತುತ್ತು ಕೊಡುವರ ಕಾಣೆನೋ ಕೃಷ್ಣವಿಸ್ತರಿಸಲಾರೆ ಇನ್ನೆತ್ತ ಪೋಗಲೊ ನಿನ್ನಚಿತ್ತವ್ಯಾತಕೆ ಕರಗದೋ ಕೃಷ್ಣ 5 ಆರು ಗತಿ ನಿನಗಧಿಕರಾರು ಧಾರುಣಿಯೊಳಗೆತೋರಿಸೈ ಕರುಣನಿಧಿಯೆ ಕೃಷ್ಣಈರೇಳು ಲೋಕಕಾಧಾರವಾದವಗೆ ಬಲುಭಾರವಾದವನೆ ನಾನು ಕೃಷ್ಣಮೀರಿ ನುಡಿಯಲು ಹದಿನಾರೆರಡು ಪಲ್ಗಳುಬೇರು ಕಳಕಳಯಿತೋ ಕೃಷ್ಣತೋರು ಬಂಕಾಪುರದ ಧಾರುಣಿಪುರವಾಸವೀರ ನರಸಿಂಹದೇವ ಕೃಷ್ಣ 6 ಹರಿಯಾತ್ರೆ ಮಾಡಲಿಲ್ಲ ಹರಿಮೂರ್ತಿ ನೋಡಲಿಲ್ಲಹರಿದಾಸ ಸÀಂಗವಿಲ್ಲ ಕೃಷ್ಣಹರಿಸ್ಮರಣೆ ಮಾಡಲಿಲ್ಲ ಸುರನದಿಯ ಮೀಯಲಿಲ್ಲಧರಣಿ ಸಂಚರಿಸಲಿಲ್ಲ ಕೃಷ್ಣಅರಿತರಿತು ಮನ ವಿಷಯಕೆರಗಿ ಹರುಷವ ತಾಳಿಬರಿದಾಯಿತಾಯುವೆಲ್ಲ ಕೃಷ್ಣಮರುತಾಂತರ್ಗತ ಸಿರಿಯರಸ ಹರಿಯೆಂದುಹರುಷಾಬ್ದಿ ಮಗ್ನನಲ್ಲ ಕೃಷ್ಣ7 ಹರಿನಾರಾಯಣನೆಂದು ಕರವೆತ್ತಿ ಮುಗಿದೊಮ್ಮೆ ಮೈ ಮರೆದು ನಟಿಸಲಿಲ್ಲ ಕೃಷ್ಣಹರಿಸ್ಮರಣೆ ಸ್ಮರಿಸಿ ಸಿರಿತುಳಸಿ ಪುಷ್ಪವನುಕರವೆತ್ತಿ ನೀಡಲಿಲ್ಲ ಕೃಷ್ಣಸರ್ವಜ್ಞರಾಯರು ವಿರಚಿಸಿದ ಗ್ರಂಥವನುದರುಶನವೆ ಮಾಡಲಿಲ್ಲ ಕೃಷ್ಣಸ್ಮರಿಸಲಾರದ ಪಾಪ ಸ್ಮರಣೆಪೂರ್ವಕ ಮಾಡಿಸ್ಥಿರಭಾರನಾದೆನಲ್ಲೋ ಕೃಷ್ಣ 8 ದುರುಳಜನರೊಡನಾಡಿ ಹರಿಣಾಕ್ಷಿಯರ ಕೂಡಿಸರಿ ಯಾರು ಎಂದು ತಿರುಗಿ ಕೃಷ್ಣನಿರುತ ಕ್ಷುದ್ರವ ನೆನೆಸಿ ನೆರೆದೂರ ಮಾರಿ ಹೆಗ್ಗೆರೆಗೋಣನಂತೆ ತಿರುಗಿ ಕೃಷ್ಣಪರರ ಅನ್ನವ ಬಯಸಿ ಶರೀರವನೆ ಪೋಷಿಸಿಶಿರ ಒಲಿದು ಶಿಲೆಗೆ ಹಾಯಿದು ಕೃಷ್ಣಶರಣವತ್ಸಲನೆಂಬೊ ಬಿರುದು ಪಸರಿಸುವಂಥಕರುಣ ಇನ್ನೆಂದಿಗಾಹುದೊ ಕೃಷ್ಣ 9 ಉರಗ ಫಣಿ ತುಳಿಯಲೊಎರಡೊಂದು ಶೂಲಕ್ಹಾಯಲೊ ಕೃಷ್ಣಕೊರಳಿಗ್ಹಗ್ಗವ ಹಾಕಿ ಮರವೇರಿ ಕರಬಿಡಲೋಗರಗಸದಿ ಶಿರಗೊಯ್ಯಲೋ ಕೃಷ್ಣಕರುಣವಾರಿಧಿ ಎನ್ನ ಕರಪಿಡಿದು ಸಲಹದಿರೆಧರೆಯೊಳುದ್ಧರಿಪರ್ಯಾರೋ ಕೃಷ್ಣ 10 ಎಷ್ಟು ಹೇಳಲಿ ಎನ್ನ ಕಷ್ಟ ಕೋಟಿಗಳನ್ನುಸುಟ್ಟೀಗ ಬೇಯ್ಯುತಿಹವೋ ಕೃಷ್ಣಕಷ್ಟಬಟ್ಟ ಮಗನೆಂದು ದೃಷ್ಟಿ ನೀರೊರೆಸೆನ್ನಪೊಟ್ಟೆಯೊಳ್ಪಿಡಿವರ್ಯಾರೊ ಕೃಷ್ಣಕೃಷ್ಣನಾಮ ವಜ್ರಕ್ಕೆ ಬೆಟ್ಟ ದುರಿತವು ನೀಗಿಥಟ್ಟನೆ ಬಂದು ನೀನು ಕೃಷ್ಣಇಷ್ಟವನು ಸಲಿಸಿ ಗುಟ್ಟ್ಟಲಿ ಶ್ರೀರಂಗವಿಠಲ ಎನ್ನ ಕಾಯೋ ಕೃಷ್ಣ 11
--------------
ಶ್ರೀಪಾದರಾಜರು
ಯಾತಕಯ್ಯ ತೀರ್ಥಕ್ಷೇತ್ರಗಳುಶ್ರೀ ತುಲಸಿಯ ಸೇವಿಪ ಸುಜನರಿಗೆ ಪ. ಅಮೃತವ ಕೊಡುವ ಹರುಷದೊಳಿರ್ದಕಮಲೆಯರಸನಕ್ಷಿಗಳಿಂದಪ್ರಮೋದಾಶ್ರು ಸುರಿಯೆ ಕ್ಷೀರಾಬ್ಧ್ದಿಯೊಳುಆ ಮಹಾತುಲಸಿ ಅಂದುದಿಸಿದಳು 1 ಪರಿಮಳಿಸುವ ಮಾಲೆಯ ನೆವದಿ ಹರಿಯುದರದಲ್ಲಿಸಿರಿಯೊಲಿಹಳುತÀರುಣಿ ತುಲಸಿ ತಪ್ಪದೆಯವನಚರಣವ ರಮೆ ಭಜಿಸೆ ಭಜಿಪಳು2 ಪೂಜಿಸುವರ ಶಿರದಿ ನಿರ್ಮಾಲ್ಯಗಳವ್ಯಾಜದಿಂದ ಲಕ್ಷ್ಮಿಯ ಕೂಡೆ ಬಹಳುಈ ಜಗದೊಳು ತಾವಿಬ್ಬರಿದ್ದಲ್ಲಿಆ ಜನಾರ್ದನನಾಕ್ಷಣ ತಹಳು 3 ಒಂದು ಪ್ರದಕ್ಷಿಣವನು ಮಾಡಿದವರಹೊಂದಿಪ್ಪುದು ಭೂಪ್ರದಕ್ಷಿಣ ಪುಣ್ಯಎಂದೆಂದಿವಳ ಸೇವಿಸುವ ನರರಿಗೆಇಂದಿರೆಯರಸ ಕೈವಲ್ಯವೀವ 4 ತುಲಸಿಯ ನೆಟ್ಟವನು ಮತ್ತೆ ತನಗೆ ಇಳೆಯೊಳು ಪುಟ್ಟುವ ವಾರ್ತೆಯ ಕಳೆವಜಲವೆÀರೆದು ಬೆಳೆಸಿದ ಮನುಜರಕುಲದವರ ಬೆಳೆಸು ವೈಕುಂಠದಲ್ಲಿ 5 ತುಲಸಿಯೆ ನಿನ್ನ ಪೋಲುವರಾರುಮೂಲದಲ್ಲಿ ಸರ್ವತೀರ್ಥಂಗಳಿಹವುದಳದಲ್ಲಿ ದೇವರ್ಕಳ ಸನ್ನಿಧಾನಚೆಲುವಾಗ್ರದಿ ಸಕಲ ವೇದಗಳು 6 ತುಲಸಿ ಮಂಜರಿಯೆ ಬೇಕಚ್ಚುತಂಗೆದಳಮಾತ್ರ ದೊರಕಲು ಸಾಕವಗೆಸಲುವುದು ಕಾಷ್ಠಮೂಲ ಮೃತ್ತಿಕೆಯುಫಲವೀವನಿವಳ ಪೆಸರ್ಗೊಳಲು 7 ಕೊರಳಲ್ಲಿ ಸರ ಜಪಸರಗಳನ್ನುವರ ತುಲಸಿಯ ಮಣಿಯಿಂದ ಮಾಡಿಗುರುಮಂತ್ರವ ಜಪಿಸುವ ನರರುಹರಿಶರಣರ ನೆಲೆಗೆ ಸಾರುವರು8 ಎಲ್ಲಿ ತುಲಸಿಯ ಬನದಲ್ಲಿ ಲಕ್ಷುಮೀ-ವಲ್ಲಭನು ಸರ್ವಸನ್ನಿಹಿತನಾಗಿನೆಲಸಿಹನಿವಳೆಸಳೊಂದಿಲ್ಲದಿರೆಸಲ್ಲದವಂಗನ್ಯಕುಸುಮದ ಪೂಜೆ 9 ಎಲ್ಲ ಪಾಪಂಗಳೊಮ್ಮೊಮ್ಮೆ ಕೈಮುಗಿಯೆಎಲ್ಲಿ ಪೋಪುದು ದೇಶದೇಶಂಗಳಿಗೆನೆಲ್ಲಿ ಮಲ್ಲಿಗೆ ಮೊದಲಾದ ಸೈನ್ಯಅಲ್ಲೀಗಲು ನಮ್ಮ ಬನದಲೊಪ್ಪಿಹಳು 10 ಹರಿಪಾದಕೆ ಶ್ರೀತುಲಸಿಯೇರಿಸಿದನರರನು ಪರಮ ಪದಕೇರಿಸುವುದುನಿರುತದಿ ತುಲಸಿಯ ಕಂಡರವಗೆನರಕಗಳ ದರುಶನ ಮತ್ತಿಲ್ಲ 11 ಪಡಿ ಆಯಿತು ಗಡನ್ನಿವಳ ವೃಂದಾವನದಲ್ಲಿ ನೆಟ್ಟುಮನೆಮನೆ ಮನ್ನಿಸದವನ್ಯಾವ12 ಕನಸಿನಲಿ ಕಂಡಂತೆ ಇನ್ನೊಂದುಕೊನೆವೆರಸಿದ ಪುಷ್ಪದಿ ಜಪಿಸಿಅನುದಿನ ಹಯವದನನ್ನ ತೀರ್ಥವನು ಕೊಂಡು ನಾ ಧನ್ಯನಾದೆನು 13
--------------
ವಾದಿರಾಜ
ಯಾರಯ್ಯ ನೀನ್ಯಾರಯ್ಯ ಪ ಸೋರುತಿರುವ ಸೌಂದರ್ಯದಿ ಮನವನು ಸೂರೆಯಗೊಂಬ ನೀನ್ಯಾರಯ್ಯ ಅ.ಪ ನಂದನ ಕಂದ ನೀನಾದರೆ ಗೋವ್ಗಳ ಮಂದೆಯ ಬಿಟ್ಟು ಬಂದಿಹುದೇಕೆ ಸಂದೇಹವು ತೋರುತಲಿವೆ ನಿನ್ನನು ಎಂದಾದರು ನಾ ಬಯಸಿದೆನೆ 1 ನೀರಿಗೆ ಬಂದೆನು ನಾನಿಲ್ಲಿ ಯಾರು ಪೇಳಿದರು ಎನ್ನ ಸುದ್ದಿ ಮಾರನ ತಾತ ನೀನಿರಬಹುದು ಯಾರ ಮಾತ ಕೇಳುವಳಲ್ಲ 2 ಬಿಂದಿಗೆ ಭಾರವು ಜಗಿಯುತಿದೆ ಮಂದಸ್ಮಿತವೆನ್ನ ಬಿಗಿಯುತಿದೆ ತಂದೆ ಪ್ರಸನ್ನ ಕೈಮುಗಿಯುವೆನು ಮಂದಿರ ಮಾರ್ಗವು ಸಿಗಲೆನಗೆ 3
--------------
ವಿದ್ಯಾಪ್ರಸನ್ನತೀರ್ಥರು
ಯಾವ ಸಂಭ್ರಮವಿದೇ ವಾರಿಜ ವದನೆ ಶ್ರೀವೇಣುಗೋಪಾಲ ಮನೆಗೆ ಬಂದಿಹನೇ ಪ ದೇವ ದೇವನು ನಿನ್ನ ಪೂಜೆಗೊಪ್ಪಿದನೇ ಯಾವ ವಾತ್ಸಲ್ಯವ ನಿನಗೆ ತೋರಿದನೇ ಅ.ಪ ಗಾನ ನೃತ್ಯಗಳಿಂದ ಒಲಿಸಿದೆಯೇನೇ ಜೇನು ಸಕ್ಕರೆ ಬೆಣ್ಣೆಗಳನಿತ್ತೆಯೇನೇ ಸಾನುರಾಗದಿ ಪೂಜೆ ಮಾಡಿದೆಯೇನೇ ನಾನೇನಗೈದರೆ ಅವನೊಲಿಯುವನೇ1 ಪರಿಮಳ ಗಂಧಕೆ ಮೈ ತೋರುವನೇ ಕೊರಳಿಗೆ ಹಾರವ ನೀಡಲೊಪ್ಪುವನೇ ಮುರಳಿಯ ಗಾನವನೊಲಿದು ಕೇಳುವನೇ ಪರಮಪುರುಷ ಬಾರೆಂದರೆ ಬಹನೇ 2 ಕರಗಳ ಮುಗಿದರೆ ಕರುಣಿಪನೇನೇ ಚರಣಕೆ ಮಣಿದರೆ ಒಲಿಯುವನೇನೇ ಪರಿಪರಿ ಹೊಗಳಲು ನಲಿಯುವನೇನೇ ವರದ ಮಾಂಗಿರಿರಂಗ ದಯೆ ತೋರನೇನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಕ್ಷಿಸೆನ್ನ ರಮಣ ಪಂಚಪರಣಾ ಜಗತ್ಪಾವನಾ | ಮೋಕ್ಷದಾಯಕ ಯಂತ್ರೋದ್ಧಾರಕ ಹನುಮಂತಾ ಪ ಗತಿಯ ಕಾಣೆನೊ ಸದಾ ಗತಿಯೊ ಎನ್ನ ಮನಸು | ನಿನ್ನ ನಾಮವ ಬೇಡಿದೆ | ಹಾಡಿ ಪಾಡಿದೇ | ಪ್ರತಿದಿನ ದಯ ಮಾಡಿದೆ ವರವನ ಬೇಡಿದೆ | ಅತಿಶಯದಿಂದಲಿ ವಿಪ್ರಜಿತು ವಿರೋಧಿಯ ವಿಪ್ರ1 ವೀಣಾರೋಚನಾ ವಿಜ್ಞಾನಾಭಿಮಾನಿ ನಿ | ದಾನ ತ್ರಿಜಗದ್ಗುರುವೆ ಸುರತರುವೇ | ಕರವ ಮುಗಿದು ಕರವೇ | ಧ್ಯಾನದಿಂದಲಿ ಬೆರವೆ ಸುತ್ಯನ್ಯರವೇ | ಜನನವ ಬಿಡಿಸೋದು ಗಾನವ ನುಡಿಸೋದು 2 ಭಾಷಿಸುವ ಮಾತಂಗ ಪರ್ವತದಲಿ ತುಂಗಾ | ವಾಸವ ವಿನುತ ಸತ್ವಕಾಯಾ | ನಿತ್ಯ ಜಪಿತಾ | ಲೇಸು ಸುದರುಶನ ತೀರ್ಥ ತೀರದಲ್ಲಿಪ್ಪಾ |ಶ್ರೀಶ ವಿಜಯವಿಠ್ಠಲನ ದಾಸನ ಮಾಡಿ ಮುನ್ನಾ 3
--------------
ವಿಜಯದಾಸ