ಒಟ್ಟು 1722 ಕಡೆಗಳಲ್ಲಿ , 107 ದಾಸರು , 1032 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಮಹರ ಒಬ್ಬ ತಾನೆ ಬಲ್ಲಾ | ರಾಮ ರಾಮ ಸೀತಾರಾಮ ರಾಮನಲ್ಲದಿಲ್ಲವೆಂದು ಪ ಕೈಯಲಿ ಕಿನ್ನರಿ ಧರಿಸಿ ಸಿರಿಮೊಗದಿಂದ | ಕೈಲಾಸಗಿರಿಯಲ್ಲಿ ಪಾರ್ವತಿ ಕೂಡ ಜಗ ದಯ್ಯನಯ್ಯ ಜಗದೊಡಿಯ ರಾಮನಲ್ಲದಿಲ್ಲೆಂದು 1 ಫಣಿಯಾಭರಣವು ಪೆಡೆಯೆತ್ತಿ ಇರಲು | ಮಣಿ ರುಂಡಮಾಲೆ ತೂಗಾಡಲು | ಕುಣಿದು ಕಣಕಾಲಿಂದ ಥಕ್ ಥಕ್ ಥೈ ರು ಪತಿ ಸರ್ವೋತ್ತಮ ರಾಮನಲ್ಲದಿಲ್ಲವೆಂದು 2 ಕಾಳಕೂಟದ ವಿಷಬಿಂದು ಮಾತುರನುಂಗೆ | ತಾಳಲಾರದೆ ತಳಮಳವಗೊಂಡು | ಕಾಳಿಮರ್ದನ ಕಮಲಾಯತಾಕ್ಷ ಎನ್ನ | ಪಾಲಿಸಿದ ಪರಮಾತ್ಮ ರಾಮನಲ್ಲದಿಲ್ಲವೆಂದು3 ಗಜಮುಖ ತಾಳವ ಪಿಡಿದು ತಥೈ ಎನ್ನಿ | ಅಜಸುತ ರಿಪು ಮದ್ದಳಿಯೆ ಮುಟ್ಟಿ | ಗಜ ಚರ್ಮಾಂಬರ ಗಾಯನವ ಮಾಡುತ-ತ್ರಿ | ಜಗಾಧಿಪತಿ | ವಿಷ್ಣು ರಾಮನಲ್ಲದಿಲ್ಲವೆಂದು 4 ಆರು ಮುಖದವ ಶಂಖವನ್ನು ಊದೆ | ಭೈರವ ನಾಗಸ್ವರವ ನುಡಿಸೆ | ಚಾರು ಪ್ರಥಮ ಭೂತ ತಲೆ ಚಪ್ಪಳಿಡೇ| ಧಾರಣಿಧರ ಸೀತಾರಾಮನಲ್ಲದಿಲ್ಲವೆಂದು 5 ಗೋರಾಜ ಸರಿಗಮಪದನಿಸ ಎಂದು ನಲಿಯೇ | ಉರಗಾದಿ ಮೂಷಕಾದಿ ಚಿಗಿದಾಡಲು | ವಾರಣದ ಗಂಗೆ ಸಿರದಲಿ ತುಳುಕಲು | ನಾರಾಯಣ ಪರದೈವ ರಾಮನಲ್ಲದಿಲ್ಲವೆಂದು 6 ತುಂಬುರನಾರಂದ ತಂದನ್ನಾತಾ ಎನ್ನೆ | ಅಂಬರದಿಂದ ಪೂಮಳೆಗೆರೆಯೆ | ಅಂಬುಜಪತಿ ಶಿರಿ ವಿಜಯವಿಠ್ಠಲ ವಿ ಶ್ವಂಭರಜಾಂಡಕರ್ತು ರಾಮನಲ್ಲದಿಲ್ಲವೆಂದು 7
--------------
ವಿಜಯದಾಸ
ಕಾಯ ಬಲು ಹೇಯವೊ | ಸಾಕು ಸಾಕು ಸಂಸಾರ ನೆಚ್ಚದಿರು ಎಚ್ಚರಿಕೆ ಪ ಊಧ್ರ್ವಾಧೋ ಭಾಗದಿಂದ ಕೂಡಿದಾ ರಕ್ತಶುಕ್ಲ | ಅರ್ಧರ್ಧ ಪ್ರವೇಸಿಯಾಗಿ | ವರ್ಧನಾಗಿ ಮಾಂಸ ಪಿಂಡಿಕೆಯಲಿ ಬೆಳೆದು | ಅರ್ಧವದೊಳಗೆ ಬಳುಲುವುದೇನೊ ಮಹಾ ಕಠೀಣಾ 1 ಸನ್ನಿರೋಧವಾದ ಪ್ರಾದೇಶದಲಿ ನೀನು | ಬನ್ನ ಬಡುವದು ಜನಕೆ ಅರಿಯನಲ್ಲಾ | ಮುನ್ನೆ ಇಂದ್ರನಿಗಾಗಿ ವರವಿತ್ತ ಸಂಪತ್ತು | ಇನ್ನು ನಿನ್ನ ಸುತ್ತ ಬಂದದೆ ತಿಳಿದುಕೋ 2 ವಾತ ಶೈತ್ಯಜ್ವರ ಕೆಮ್ಮು | ಸಪುತ ಧಾತುಗಳಿಂದ ಬರುವ ರೋಗ | ಕ್ಲೇಶ ಮೋಹಗಳೊಡನೆ | ಮಾಯಾ 3 ಕಾಮ ಮದ ಗರ್ವದಲಿ ಪುಂಜನಾಗಿ ದುರಳ ನಿ | ಜ ಮಗಳ ಕೂಡ ಬೆರದಾಡಿ ಬೆರೆದು | ರೋಮರೋಮ ವಿಷಯ ಪೂರ್ತಿಯಾಗಿ ಚರಿಸಿ | ಪಾಮರನಾಗಿ ಬಳಲದಿರು ಬಹು ಜೋಕೆ 4 ಸತಿ ಸುತರು ಮಿಕ್ಕಾದ ಬಂಧುಗಳು ನೆರೆನೆರೆದು | ಪ್ರತಿದಿವಸದಲಿ ಅಟ್ಟುವುದು ನೋಡು| ಮತಿ ಚಂಚಲವಾಗಿ ಸತ್ಕರ್ಮ ವೃತ್ತಿಗೆ | ಪ್ರತಿಕೂಲವಾಗುವದು ಪ್ರೀತಿಯಾಗದು ಮುಂದೆ 5 ಎಂತು ನೋಡಲು ವಿಷಯ ಅನುಭವಿಸಿದರು ಅದರ | ಅಂತು ಕಂಡವರಾರು ವಲ್ಲೆನೆಂದು | ಭ್ರಾಂತಿಯಿಂದಲಿ ತಿರುಗಿ ಬಯಲಾಗೋದಲ್ಲದೆ | ಚಿಂತೆ ಇಷ್ಟಷ್ಟು ಏನೆಂದು ಪೇಳಲಿ 6 ಯಲೋ ಮನವೆ ಸಾರಿ ಪೇಳಿದೆನು ಚನ್ನಾಗಿ ನೀ | ನೆಲೆ ಮಾಡಿಕೋ ಜ್ಞಾನ ಭಕುತಿ ವಿತ್ತಾ | ಸುಲಭ ದೇವರ ದೇವ ವಿಜಯವಿಠ್ಠಲರೇಯ | ಕೆಲಕಾಲ ನೆನೆದು ಸುಖಿಯಾಗು ಸುಜನರಾ ಕೇಳು 7
--------------
ವಿಜಯದಾಸ
ಕಾಯಬೇಕೆಲೋ ರಂಗಾ ಎನ್ನಾ | ನೀ ಕಾಯಬೇಕೆಲೋ ರಂಗಾ | ತೋಯಜಾಕ್ಷ ದಯಾನಿಧಿ ತರಣೋ | ಪಾಯದೋರೋ ಶುಭಾಂಗಾ ಪ ದುರಿತ ಸಮೂಹವ ಬಂದು | ಶಣಸುತ | ಹರಿದಂಜಿಸುತಿವೆಯಿಂದು | ನರಹರಿ ನಿನ್ನ ನಾಮದ ಘನಗರ್ಜನೆಯ |ಕೊಡು | ಮರಳು ಮಾನವನಿವನೆಂದು 1 ಕುಂದನಾರಿಸಿಯೆಲ್ಲಾ ನೋಡಲು | ಒಂದೆರಡೆನಲಿಕ್ಕಿಲ್ಲಾ | ಮಂದಮತಿ ಅವಗುಣ ರಾಶಿ ಪತಿತರ | ವೃಂದದೊಳೆನ್ನಧಿಕಲಾ2 ಕೊಂಬು ನೀಚನವಾದರೆ ಬಿರದಾ | ಡಂಬರ ನೀಚನಲ್ಲಾ | ಇಂಬುದೋರೆಲೆ ನಿನ್ನ ದಾಸರ ದಾಸ | ಎಂಬದೆನ್ನಧಿಕಾರವಿಲ್ಲಾ 3 ಬಿನ್ನಹವೆನ್ನ ಮುರಾರಿ | ಪಾಲಿಸಿ | ನಿನ್ನ ಚರಣವ ದೋರಿ | ಧನ್ಯಗೈಸೆಲೋ ಗುರುವರ ಮಹಿಪತಿ ಚಿನ್ನನೊಡಿಯ ಸಹಕಾರಿ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯೊ ಎನ್ನನು ದೇವ ಕಡೆ ಹಾಯಿಸೊ ಕಡಲೊಡೆಯ ಪ ಕಾಯಯ್ಯ ನೀ ಎನ್ನ ಕಮಲದಳಾಕ್ಷ ಅ ಒಂದು ಕಾಯಲಿ ನಾನು ಒಲಿದು ದಂಡಿಗೆಯಾದೆಎರಡು ಕಾಯಲಿ ನಾನು ವೀಣೆಯಾದೆಮೂರು ಕಾಯಲಿ ನಾನು ಮುದ್ದು ಕಿನ್ನರಿಯಾದೆನೀಟಾದ ಕಾಯಲಿ ನಾನು ನಾಗಸ್ವರವಾದೆ 1 ದಪ್ಪ ದಪ್ಪ ಕಾಯಲಿ ದರವೇಶಿಗಳಿಗಾದೆಮಿಕ್ಕ ಕಾಯಲಿ ನಾನು ಸನ್ನೇಸಿಗಳಿಗಾದೆಕೈತಪ್ಪಿ ಬಿದ್ದರೆ ಕದಿರಿಗೆ ಬಿಲ್ಲಾದೆಮತ್ತೆ ದೇವರ ಗುಡಿಗೆ ದೀಪವೇ ನಾನಾದೆ 2 ಚಿಕ್ಕಂದು ಮೊದಲು ನಾ ಸಾಸೂವೆ ಕಾಯಾದೆಚಿಕ್ಕ ಚಿನ್ಮಯಗೆ ಬುರುಡೆಯಾದೆಉಕ್ಕುವಾ ಹೊಳೆಯಲ್ಲಿ ತೆಪ್ಪವೇ ನಾನಾದೆಚೊಕ್ಕ ಕನಕಪ್ಪನ ಹಿಂದೆ ನಾ ತಿರುಪತಿಗೆ ಬಂದೆ3
--------------
ಕನಕದಾಸ
ಕಾಯೊ ಕರುಣಾಕರನೆ ನೀಯನ್ನಾ ಕಾಯೋ ಆನಾಥರಕ್ಷಕ ದಯಾಸಿಂಧೂ ಪ. ಕಾಯೊಯನ್ನನು ಕರವಿಡಿದು ಕೃಪೆಯಿಂದ ನೀಯನ್ನಾ ಕಾಯೊದೇವರದೇವ ಶ್ರೀ ವೆಂಕಟೇಶ್ವರನೆ ಕಾಯೊ ಅ.ಪ. ನೀನಲ್ಲದೆ ಅನ್ಯತ್ರ ತಾಯಿ ತಂದೆಗಳಿಲ್ಲಾ ನೀನಲ್ಲದೆ ಬಂಧುಬಳಗವೆನಗಿಲ್ಲಾ ನೀ ಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 1 ತರುಳ ಕರಿಯಲು ಕಂಭದಿ ಬಂದು ಹಿರಣ್ಯಾಕ್ಷಕನ ಕರುಳ ತೆಗದು ವನಮಾಲೆ ಹಾಕಿ ನಿಂದೀ ನರಮೃಗರೂಪಿನಲಿ ಪ್ರಹ್ಲಾದಗೆ ವರವಿತ್ತೆ ನೀಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 2 ಜಲದೊಳಗೆ ನೆಗಳೆಯು ಹಿಡಿದು ಎಳೆಯುತ್ತಿರೆ ಬಹುಬಾಧೆಬಡಿಸೆ ನಿಮ್ಮ ನೆನೆಯಲು ನಿಲ್ಲದೆ ಬಂದೊದಗಿನೆಗಳೆಯನು ಶೀಳ್ದು ಕರಿರಾಜಗೊಲಿದು ರಕ್ಷಿಸಿದೊ ಶ್ರೀ ವೆಂಕಟೇಶ್ವರನೆ 3 ದುರುಳದುಶ್ಯಾಸ ದ್ರೌಪತಿ ಸೀರೆಯನು ಸೆಳೆಯೆ ಹರಿಣಾಕ್ಷಿ ಸಭೆಯೊಳಗೆ ಕೃಷ್ಣಾಯೆಂದುವದರೆ ಪರಿಪರಿ ವಸ್ತ್ರವನು ಕೊಟ್ಟೆ ಅಭಿಮಾನವನು ಕಾಯ್ದೊ ದೇವರದೇವ ಶ್ರೀ ವೆಂಕಟೇಶ್ವರನೆ 4 ಶಂಖಚಕ್ರಧರ ನಿನ್ನ ಚರಣವನು ನಂಬಿದೆ ಪಕ್ಷಿವಾಹನಸ್ವಾಮಿ ಕರುಣಾನಿಧೆ ಹೆಳವನಕಟ್ಟೆಯೊಳು ನಿಂದು ಭಕ್ತರನ್ನೆಲ್ಲಾ ಕಾಯ್ದ ದೇವರದೇವ ಶ್ರೀ ವೆಂಕಟೇಶ್ವರನೆ 5
--------------
ಹೆಳವನಕಟ್ಟೆ ಗಿರಿಯಮ್ಮ
ಕಾಯೋ ಸಿದ್ದೇಶಾ ಪ ಭಕ್ತಿಯ ಗುಣಂಗಳಿಲ್ಲಾ ವಿರಕ್ತಿಯ ಅಂಕುರವಿಲ್ಲಾ 1 ಸಾಧು ಜನಸಂಗ ಮಾಡೀ ನಿಜ ಬೋಧಾಮೃತ ಸವಿಯಲಿಲ್ಲಾ ವಾದ ಗುಣ ಹಿಂಗಲಿಲ್ಲಾ ಕಾಮ, ಕ್ರೋಧ ಸುಳಿಯಲಿ ಬಿದ್ದೆ2 ಪಂಥ ಪರಮಾರ್ಥದೋರೋ ಶ್ರೀ ಕಾಂತ ಗುರು ಮಹಿಪತಿ ಸುಖವ ನೀಡಬೇಕು ಸಿದ್ದೇಶಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾರಣನೇ ಇವನು ಎಲ್ಲಕ್ಕೂ ಕಾರಣನೇ ಇವನು ಪ ಕಾರಣನಿವನು ಸಾಧಾರಣನಲ್ಲನು ಮಾರಮಣನು ಕರುಣಾರಸಮಯನು ಅ.ಪ ಇಚ್ಛೆಯಿಂದಲಿ ತಾನು ಅಖಿಲ ಜಗ ತ್ಸøಷ್ಟಿಯ ಮಾಡುವನು ಸ್ವಚ್ಛನಾದರು ತನ್ನ ಮೆಚ್ಚಿಗೆಯಿಂದಲಿ ತುಚ್ಛನೆಂಬೊ ಶಬ್ದ ವಾಚ್ಯನಾಗಿರುವನು 1 ಎಲ್ಲವ ಬಲ್ಲವನು ಈಶನು ಇಲ್ಲದ ಸ್ಥಳವಿಲ್ಲ ಚಿಲ್ಲರೆ ದೈವಗಳೆಲ್ಲರು ಈತನ ಚೆಲ್ಲಾಟಗಳಿಗೆ ಉಲ್ಲಾಸಿಸುವರು 2 ಭಿನ್ನರೂಪಗಳಿಂದ ಜಗದೊಳು ತನ್ನ ಲೀಲೆಯ ತೋರ್ಪ ಸನ್ನುತ ಭಕುತಗೆ ಮನ್ನಣೆಯಿಂದ ಪ್ರ ಸನ್ನನಾಗಿ ಉನ್ನತ ಪದವೀಯಲು 3
--------------
ವಿದ್ಯಾಪ್ರಸನ್ನತೀರ್ಥರು
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ 2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ 3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳು ಶ್ರೀನಿವಾಸನು ಪಾಲಿಸುವನು ನಿತ್ಯದೊಳು5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳುಶ್ರೀನಿವಾಸನು ಪಾಲಿಸುವನು ನಿತ್ಯದೊಳು 5
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಲ ಕಳೆಯುವಿ ನಮ್ಮ ಐಕೂರಾರ್ಯರ ಸುವಾಕು ಕೇಳದೆ ಜೀವಿ ಪ ಮರುತಾಗಮ ಮರ್ಮವರಿಯದವರಿಗೆಲ್ಲಾ | ವರ ಭಾಗವತ ಗೀತಾ ಹರಿಕಥಾ ಮೃತ ತತ್ವ | ಯರಡೊಂದು ಕಾಲ ಕೃಪೆ ನೆಳಲಾಶ್ರಯಿಸದೆ 1 ಹರಿಮೂರ್ತಿ ಹರಿವ್ಯಾಪ್ತಿ ಹರಿಸತ್ಯ ಸುಚರಿತ್ರೆ | ಹರಿದಾಸರುಕ್ತಿ | ಹಿರಿದು ಕಿರಿದು ಭೇದ ನೆರೆ | ಸುರಹಸ್ಯವನರುಹಿ ಕಗ್ಗತ್ತಲೆ ಹರಿಸುವರಿವರೆ ನರ ನೀನಂಬದೆ2 ಮದಡ ಜನರಿಗೆಲ್ಲ ಪದಸುಳಾದಿಗಳನು | ಚತುರತನದಲಿಂದ | ವಿಧ ವಿಧ ವಿವರಿಸಿ | ಸದಮಲ ಸುಜ್ಞಾನ | ವದಗಿಸುವಂಥ ಈ ಬುಧರುಪದೇಶ ಮುದದಿ ಪಡೆಯದೆ 3 ಆಶೆ ಕ್ರೋಧಂಗಳ ಜಯಿಸುತ ಮನದಿಂದ ಕ್ಲೇಶಮೋದ ಸಮ ತಿಳಿದಿಹರೋ | ಯೇಸೇಸು ಕಾಲಕ್ಕೆ ಭೂಸುರೋತ್ತಮ ರಾದ | ಈ ಸುಗುಣರ ಸಹವಾಸ ದೊರೆವುದೆ 4 ಶ್ರೀ ಮುಖವಾಣಿಯು ಸಾಮಾನ್ಯವಲ್ಲವೋ ನೇಮದಿಂ ಕೇಳ್ವರ | ಶಾಮಸುಂದರ ಸುಧಾಮನಿಗೊಲಿದಂತೆ | ಪ್ರೇಮದಿಂ ಸಲಹುವ ನೀ ಮನದಲಿ ತಿಳಿ 5
--------------
ಶಾಮಸುಂದರ ವಿಠಲ
ಕಾಲ ವ್ಯರ್ಥ ಹರಿಯನೇಕ ಗುಣಗಳ ಪೊಗಳಿ ಪುರುಷಾರ್ಥ ಪ ಸತಿಸುತರ ನೆಚ್ಚಿ ಕೆಡಬ್ಯಾಡಾ ನಿನ್ನ ಸಂ- ಗತಿಲೇ ಬಾಹರು ಇದನು ತಿಳಿಯೋ ಕ್ಷಿತಿಪತಿಯ ನೆನೆಯದಿರಬ್ಯಾಡಾ ಲಕ್ಷ್ಮೀ ಪತಿಯೊಬ್ಬನೇ ಗತಿ ಎಂದು ತಿಳಿ ಗಾಢಾ 1 ಇಂದೆ ಇದ್ದವ ನಾಳೆಗಿಲ್ಲಾ ಅದ ರಿಂದ ಜಗದೀಶನನು ಹಿಂದೆ ಕಳೆದ ಆಯು ಬರೋದಿಲ್ಲಾ ಇನ್ನು ಮುಂದೆ ನರಜನ್ಮ ಬರುವುದು ಭರವಸಲ್ಲಾ 2 ಸತ್ತ ನಂತರ ಬಳಗ ನಿನ್ನ ತೀವ್ರ ಹೊತ್ತು ಹೊರಗ್ಹಾಕಿರೆನ್ನುವರೋ ತಿಳಿಯನ್ನಾ ಮಿಥ್ಯ ಸುಖಕೊಳಗಾಗದಿನ್ನಾ ಏಕ ಚಿತ್ತದಿಂ ಭಜಿಸೋ ಹನುಮೇಶ ವಿಠಲನಾ 3
--------------
ಹನುಮೇಶವಿಠಲ
ಕಾಲಮಹಿಮೆ ಕೇಳಿ ಜಗದಾಲೋಚನೆ ತಾಳೀ ಪ ಕೀಳು ಖೂಳರಿಗೆ ಮೇಲು ಹಾಸಿಗೆ ಮಂಚ ಬಾಲಾಜಿ ಭಜನೆ ಜನಕೆ ಜೋಳಿಗೆ ಯೀ ಪ್ರಪಂಚಾ 1 ಉತ್ತಮಪುರುಷರಿಗೆಲ್ಲ ತುತ್ತಿಗೆ ಮಾನಹೋಗಿ ಹೆತ್ತವ್ವೆ ಹೋಗೆ ಕಳ್ಳ ಚಿತ್ತರ್ಗೆ ಮಂಚಾ ತೂಗೆ 2 ಡಂಬಾಚಾರಿಗಳಿಗೆಲ್ಲಾ ಕೊಂಬು ಕುದುರೆಯಗಾಡಿ ಶಂಬೂನುತರೂ ಪಾಪಿಗಾಡಿಗಳ ಹಿಂದೆ ವೋಡೆ 3 ನಿಚ್ಚಾ ಮುತ್ತೈದೆರ್ಗೆಲ್ಲಾ ಅಂಜಿಕೆ ಅರುಶನವಿಲ್ಲಾ ಬಿಚ್ಚಾಲೆಯಿಲ್ಲದ ರಂಡೇರ್ಹೆಚ್ಚಿ ಹೀಗಾಯಿತಲ್ಲ 4 ದೋಷರಹಿತ ಹರಿದಾಸ ತುಲಸೀರಾಮಾ ದೇಶಿಕಾ ತನ್ನ ನಿಜದಾಸಾನ ಮಾಡಿಕೊಂಡಾ 5
--------------
ಚನ್ನಪಟ್ಟಣದ ಅಹೋಬಲದಾಸರು
ಕೀರ್ತನೆಗಳು ಅಪರಾಧಿ ನಾನಲ್ಲ ಅಪವಾದಯನಗಿಲ್ಲಾ ಪ. ಕಪಟನಾಟಕ ಕೃಷ್ಣ ಯನಗೆ ನೀನಪರಾಧಿ ಅ.ಪ. ನೀನು ಆಡಿಸಲು ಜೀವಗಳನುದಿನದ ಬೊಂಬೆ ಆನೆ ಬಲ್ಲೆನೆ ಬ್ಯಾರೆ ಪಥವನೊಂದಾ ನೀನಿಟ್ಟ ಸೂತ್ರದಂತಿರಲು ಕೈಕಾಲುಗಳು ನೀನು ಮುಗ್ಗಿಸಲು ಮುಗ್ಗುವ ಜೀವ ನಾನಾದೆ 1 ಒಂಬತ್ತು ಬಾಗಿಲುವುಳ್ಳ ಪಟ್ಟಣದೊಳಗೆ ತುಂಬಿದಿಪ್ಪತ್ನಾಲ್ಕು ಮೊನೆಯಾಳ್ಗಳ ನಂಬಿಸಿ ಕಾವಲು ನೀನು ಎನ್ನೊಳಗಿದ್ದು ಕಂಬುದಾ (?) ಯೇರಿ ಕೊಲಿಸುವುದು ನಿನಗನ್ಯಾಯ 2 ಅಂತರಾತ್ಮಕ ನೀನು ಒಳಗಿದ್ದಾ ಬರಿ ತಂತ್ರಿಯೆಂದೆನ್ನ ಕೊಲ್ಲಿಸುವರೇನೊ ಹೇಳೋ ಕಂತುವಿನ ಜನಕ ಲಕ್ಷ್ಮೀರಮಣ ಕಾಯಬೇ- ಕೆಂತೆಂದೆನ್ನ ಅಚಲಾನಂದವಿಠಲ ಪುರಂದರ ವಿಠಲ ಅಂಕಿತದಲ್ಲೂ ಇದೆ.
--------------
ಅಚಲಾನಂದದಾಸ
ಕೂಗಳತಿ ಎಂಬೊ ಸಂಶಯಸಲ್ಲಾಪ ಸಮಚಿತ್ತದಲ್ಲಿ ಇದ್ದು | ಸಮ ವಿಷಮ ತಿಳಿದೆದ್ದು | ಕುಮತ ಮತವನು ವದ್ದು | ಬಲು ಉಬ್ಬೆದ್ದು | ಕಮಲ ಪೀಠನ ಹೊದ್ದು | ಕ್ರಮಣಿ ಯೋಪಾದಿಯಲಿದ್ದು | ತಮಕ್ಕೆ ಹರಿನಾಮ ಮದ್ದು | ಶ್ರಮ ಕಳುಕದವಗೆ1 ಭಾಗವತರ ನೋಡಿ | ವೇಗ ಮನಸನು ಮಾಡಿ | ಬಾಗಿ ಸಿರವನೆ ನೀಡಿ | ನಲಿದು ಪಾಡಿ | ಯೋಗವಾಗದೆ ಕೂಡಿ | ಭೋಗವನು ಈಡಾಡಿ | ತೂಗಿ ಮೈಯಲಾಡಿ ಪುಣ್ಯದನವನಿಗೆ 2 ಹರಿ ಭಕುತಿಯ ಬೇಕು | ನರಹರಿಯ ಸ್ಮರಣೆ ಬೇಕು | ಹರಿಕಥಾ ಬೇಕು | ಹರಿ ಎನಲಿ ಬೇಕು | ಹರಿಯ ಭಜಿಸಲಿ ಬೇಕು | ಹರಿವೊಲಿಮೆ ಇರಬೇಕು | ಹರಿಯಲ್ಲದಿಲ್ಲೆಂದು ಹರಿದು ನುಡಿದವನಿಗೆ 3 ಆಸಿಯನು ಕಳೆದು | ದುರ್ವಾಸನೆ ಹಮ್ಮು ಕಳೆದು | ಕ್ಲೇಶವನು ಅಳಿದು | ತೋಷದಲಿ ಬೆಳೆದು | ದೋಷರಾಶಿಗೆ ಮುಳಿದು | ದೂಷಕರನೆ ಅಳಿದು | ಭೇಷಜವನೆ ಅಳಿದು | ದಾಸರ ಬಳಿಗೆ ಸುಳಿದವಗೆ 4 ಆಚಾರವನು ಪಿಡಿದು | ಸೂಚನೆ ಅರಿತು ನಡೆದು | ವಾಚಗಳ ಮಿತಿ ನುಡಿದು | ನಾಮಗುಡಿದು | ಸಿರಿ ವಿಜಯವಿಠ್ಠಲರೇಯನ | ಯೋಚನಿಂದಲಿ ಬಿಡದೆ | ದಿನವ ಹಾಕುವನಿಗೆ 5
--------------
ವಿಜಯದಾಸ
ಕೃಷ್ಣಾ ಎಣಿಕ್ಯಾಕೈಯ್ಯ ನಮ್ಮ ಕೂಡ ತುಟ್ಟಿ ಮಿಸುಕಬಾರದು ನೋಡಬ್ಯಾಡ ಇಷ್ಟರಮೇಲೆ ತಿಳಿಯದ ನಾ ಮೂಢ 1 ಅಂದು ಏನಾಗಿತ್ತೈಯ್ಯ ನಿಮ್ಮ ಬುಧ್ದಿ ಬಂದು ಗೊಲ್ಲರೊಡನೆ ಕೂಡ್ಯಾಕಿದ್ದಿ ಸಂಧಿಸ್ಯವರುಚ್ಚಿಷ್ಟವೆಂದು ನೀ ಮೆದ್ದಿ ಇಂದು ಬ್ಯಾರೆ ನೋಡಲಿಕ್ಕೆ ಮರದ ಸುದ್ದಿ 2 ಕುಬ್ಜೆ ಕೂಡಿಕೊಂಬಾಗ ನೋಡಲಿಲ್ಲಿ ನಿಜಪದಕ ಯೋಗ್ಯಳ ಮಾಡಲಿಲ್ಲಿ ಅಜಮಿಳನೆಷ್ಟೆಂದು ಅರಿಯಲಿಲ್ಲಿ ಸೋಜಿಗೆಲ್ಲಾನು ನಿಮ್ಮದು ನಾ ಬಲ್ಲೆ 3 ಸುಮ್ಮನಿರಬೇಕೆನ್ನ ನೀ ಕೂಡಿಕೊಂಡು ನಿಮ್ಮ ಮಾತು ಒಡಿಯದು ಉದ್ದಂಡು ಇಮ್ಮನಾಗದಲ್ಲಿಂದ ಮನಗಂಡು ಬ್ರಹ್ಮಾನಂದ ಕೊಂಡಾಡುವೆ ಘನನುಂಡು 4 ಹಿಂದೆ ಭಕ್ತರೇನು ತಾಂ ಕೊಟ್ಟರಯ್ಯ ಇಂದು ನಾ ಕೊಡುವದೇನು ಹೇಳಯ್ಯ ಕಂದ ಮಹಿಪತಿ ನಾ ನಿಮ್ಮ ನಿಶ್ಚಯ ಎಂದು ಬಿಡದೆ ಸಲಹೊ ನೀ ನಮ್ಮಯ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು