ಒಟ್ಟು 2613 ಕಡೆಗಳಲ್ಲಿ , 114 ದಾಸರು , 2097 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಓಡ್ಯಾಡುತ ನೀ ಒಲಿದೊಲಿದು ಮನೆಗೆ ಬಾರೊ ಮುಕುಂದ ನೋಡೆನ್ನನು ದಯಮಾಡದಿರುವುದೇನು ಚೆಂದ ಪ ನೀಲವರ್ಣನೆ ನೀರಜಾಕ್ಷ ನಿನ್ನಪಾರ ಗುಣವ ನಾ ಏನುವರ್ಣಿಸಲ್ಹೇಳೊ ಸಾಕ್ಷ ಇಂದಿರಾಪತಿ ನಿನ್ನ ಆಕಾರ ನೋಡುವೆ- ನೆಂದ್ಹುಟ್ಟಿತೆನಗೆ ಮಹಾಪೇಕ್ಷ 1 ಹಸ್ತಿ ವರದ ಕೇಳು ನಿನ್ನ ಚರಣಾಬ್ಜಗಳಿಗೆ ನಾ ಮಸ್ತಕ ಬಾಗುವೆ ಮುನ್ನ ತಿಳಿ ಭೃತ್ಯನೆಂದೆನ್ನ ಚಿತ್ತಕೆ ತಂದು ನೀ- ನಾಗ ಬೇಕೆನಗೆ ಪ್ರಸನ್ನ 2 ಉಟ್ಟಾಂಬರನಿರಿಜರವು ಭೂಷಣ ಹೊಸ ಪರಿಯು ವಕ್ಷಸ್ಥಳದಿ ನೋಡೋ ಸಿರಿಯು ಇಟ್ಟಿರೋ ಬಾಪುರಿಯು ಶ್ರೇಷ್ಠ ಭೀಮೇಶ- ಕೃಷ್ಣನೆ ಲೋಕನಾಳುವ ದೊರೆಯು 3
--------------
ಹರಪನಹಳ್ಳಿಭೀಮವ್ವ
ಕಂಜಾಕ್ಷ ಕಾಯಯ್ಯ ಕರುಣಾನಿಧಿಯೆ ಬಲಭಂಜನನನುಜನೆ ನೋಡೆನ್ನ ಪ . ಅಂಜದೆ ನಾ ನಿನ್ನ ಅಡಿಳಿಗೆರಗುವೆಕುಂಜರವರದನೆ ಕೂಡೆನ್ನ ಅ.ಪ. ನಿಖಿಳ ಸಂಪದ ತನ್ನಿಂ-ತಾನೆ ಬಹುದು ತಡವಿಲ್ಲಆ ನಳಿನಭವಾದ್ಯಮರರಿದಕೆ ಸಾಕ್ಷಿಭಾನುಸನ್ನಿಭ ಬಾರೊ ನಲ್ಲ1 ಬೋವ ನೀನಾದಂದು 2 ವೃಂದಾರಕೇಂದ್ರ ಶ್ರೀ ಹಯವದನ ಮುಕುಂದಮಂದರೋದ್ಧಾರ ಮತ್ತೊಂದರಿಯೆಇಂದಿರೆಯರಸ ಬಾ ಇಂದುವದನ ದೀನ-ಬಂಧುವೆ ಭಕ್ತರ ಸಿರಿಯೆ 3
--------------
ವಾದಿರಾಜ
ಕಂಜಾಕ್ಷ ಹರಿಯ ಕಂಡಲ್ಲದೆ ಈಪಂಜರದಿ ಈ ಗಿಣಿ ನಿಲ್ಲದೆ ಪ. ಬಾಲತÀನದಲ್ಲಿ ಮನೆಮನೆಯ ಪೊಕ್ಕುಪಾಲಕುಡಿದನು ಮನದಣಿಯಲಾಲಿಸಿದವನು ಇನ್ನು ಮುನಿಯಲೋಲಾಕ್ಷಿ ಬಿಡನ್ಯಾಕೀ ಗÀಸಣೆಯ 1 ಏಳುವರುಷದ ಶಿಶು ಪೋಗಿಆಲಸ್ಯ ಹಸುತೃಷೆÉಯ ನೀಗಿಶೈಲವಾಗಿ ನಿಂತಿದ್ದ ನಮಗಾಗಿಕಾಲಮ್ಯಾಲೆ ಬಿದ್ದನಿಂದ್ರ ಬಾಗಿ 2 ಕಾಳಿಂದಿಯ ಮಡುವಿನೊಳಾಡಿಕಾಳಿಯಾ ನಾಗಗೆÉ ಮದ ಹುಡಿಮೇಲೆ ಅವರೊಳು ಕೃಪೆಮಾಡಿಪಾಲಿಸಿದ ಕರುಣದಿ ನೋಡಿ3 ಪಾರಿಜಾತದ ಪೂಗಳ ತಂದುನಾರದ ಮುನೇಂದ್ರ ತಾನೆ ಬಂದುಸಾರಿದನಲ್ಲೆ ಗತಿ ನೀನೆಂದುನರ ಸುರರುಗಳಿಗೆ ಬಂಧು 4 ವೃಂದಾವನದೊಳಿವನ ಲೀಲೆ ಆ-ನಂದವನುಣಿಸಿತೆಲೆ ಬಾಲೆಎಂದವನ ಕತೆ ಕರ್ಣದೋಲೆ ಹಾ-ಗೆಂದು ಭಾವಿಸೆ ಪುಣ್ಯಶೀಲೆ 5 ಸಕಲ ಸುರರ ಶಿರೋರನ್ನಮುಕುತಿದಾಯಕ ಸುಪ್ರಸನ್ನಶ್ರೀಕೃಷ್ಣ ಅಟ್ಟಿದ ಉದ್ಧÀ್ದವನ್ನ ಬಂದುವಾಕು ಕೇಳಿ ಮನ್ನಿಸಿಯವನ6 ಚೆಲ್ವ ಹಯವದನನ್ನ ನೀರೆ ನಮ್ಮನಲ್ಲನವನಿಲ್ಲಿ ಬಾರದಿರೆಸುಲಭನ್ನ ಬೇಗ ಕರೆತಾರೆ ನಾ-ವೆಲ್ಲರವನಲ್ಲಿ ಹೋಹ ಬಾರೆ 7
--------------
ವಾದಿರಾಜ
ಕಟಹತರಿದಾರ್ಭಟದಿ ಭಕುತರಪಟಲ ಪಾಲಿಪ ರಘುವರಪ್ರೀಯಭಟನೆನಿಪ ಮರ್ಕಟ ಕುಲೋತ್ತಮಗುರು ಕುಲೋತ್ತಮನೆ ಭೂಸುರರ ಜಠರದೊಳುಮರಳಿ ನೀನವತರಿಸೀಹರಿವಿರೋಧಿಗಳನ್ನು ಮುರಿಯೆ ಸನ್ಯಾಸ ತಾಳಿಪರಮ ಗುರುಗಳೆನಿಸೀಗುರು ಇಂದಿರೇಶನೆ ಪರನೆಂದರುಹಿನಿಂದುವರ ಮಾಯಿಗಳ ಜಯಿಸೀ ಧಿಕ್ಕರಿಸೀಧರಣಿಯೊಳು ಸುಗುಣೇಂದ್ರಯತಿಗಳಕರದಿ ಪೂಜಿತ ಮೂಲರಾಮರದರುಶನದಿ ಸುಖ ಸುರಿಸಿ ಸರ್ವರಧರೆಯೋಳ್ ಪಾಮರ ನರರ ಪಾಲಿಪೆ
--------------
ಗುರುಇಂದಿರೇಶರು
ಕಡಲಶಯನ ಹರೇ ಉಡುಪತಿ ಕುಲದೊರೆ ಪ ಅಡಿಗೆರಗಿದೆ ನಿನ್ನ ನೀಡೆಲೊ ಕರಗಳ ಅ.ಪ ನಡೆಯುವ ಪದಗಳು ಎಡವದಿರುವುದೇನೊ ಕಡುಮಂದನಲಿ ದಯ ಸಡಿಲಿಸದಿರೊ ದೇವ 1 ಕಂದನು ಪುಟ್ಟಲು ಅಂಧನಾಗಿರೆ ಅದನು ಚೆಂದವಿಲ್ಲೆನುತ ಬೀಸುವಳೆ ಜನನಿ 2 ಹೇಯ ಸಂಸಾರದಿ ಗಾಯವ ಪೊಂದಿ ನಾ ನೋಯುತಿರುವೆನು ಉಪಾಯವ ಕಾಣದೆ 3 ಲೋಪಗಳಿಗೆ ಬಲು ಕೋಪಿಸದೆ ಅಯ್ಯೋ ಪಾಪವೆಂದೆನ್ನುತ ಕಾಪಾಡೆಲೋ ದೇವ 4 ಎನ್ನೊಳು ದಯದಿ ಪ್ರಸನ್ನನಾಗುವೆಯೆಂದು ಎನ್ನಮನದಿ ಸದಾ ಧ್ಯಾನಿಸುವೆನೋ ದೇವ 5
--------------
ವಿದ್ಯಾಪ್ರಸನ್ನತೀರ್ಥರು
ಕಂಡಿರ ಮಧುರ ನಾಥನ ಕಂಡವರು ಪೇಳಿ ದಮ್ಮಯ್ಯ ಪ ದುಂಡು ಮುಖದ ಮೋಹನಾಂಗನು ಕೊಂಡು ಪೋದನೆಮ್ಮ ಮನವ ಅ.ಪ ಮಲ್ಲಿಗೆ ತುಳಸಿ ಮಾಲತಿ ಎಲ್ಲಿ ಪೋದನು ಪೇಳಿ ಕೃಷ್ಣನು ವಲ್ಲಭನ ಚರಣಗಳಲಿ ನಿಮ್ಮನು ಸಲ್ಲಿಸಿದ ಹಂಗೆಮ್ಮೊಳಿದ್ದರೆ 1 ತೋರಿದೆರೆ ನಯನಾಭಿರಾಮನ ಸೇರುವೆ ಅವನಂಘ್ರಿಯುಗಳಕೆ ಭೂರಿ ತರದುಪಕಾರ ನಿಮಗೆ ಸ ತ್ಕಾರ ಬರುವುದು ವಿಧಿಭವರಿಂದ 2 ಪದ್ಮೆಯರಸನು ನಿಮ್ಮೊಳಿರುವ ಸುದ್ದಿ ಬಲ್ಲೆವು ತೋರದಿದ್ದರೆ ಪದ್ಮಸಂಭವ ಪಣೆಯ ಬರಹವ ತಿದ್ದಿ ಪೇಳಿರಿ ಪದ್ಮಗಳಿರ 3 ಪಾರಿಜಾತ ಸುಜಾತ ನಂದಕು ಮಾರ ಮಣಿಯೊಂದನು ಕೊಡಲಾರೆಯ ಹೇರು ವಿಧ ವಿಧ ರತ್ನ ಮಣಿಗಳ ಸೂರೆಗೈವ ಅಭೀಷ್ಠಪ್ರದಾತ 4 ಕೇಳಲೇನುಪಯೋಗವಿವರು ಪೇಳಲಾರರು ಸುದ್ದಿ ಎಮಗೆ ತಾಳಲೆಂತು ಪ್ರಸನ್ನ ಕೃಷ್ಣನೆ ಕೇಳೆಲೆಮ್ಮಯ ಮೊರೆಯ ದಯದಿ 5
--------------
ವಿದ್ಯಾಪ್ರಸನ್ನತೀರ್ಥರು
ಕಂಡು ಕಾಣಬೇಕು ಪಿಂಡ ಬ್ರಹ್ಮಾಂಡದೊಡೆಯನ ಧ್ರುವ ಹಿಂದು ಮಾತಾಡಿನ್ನೇನು ಕಂಡು ಕಾಣುವದೇ ಖೂನ ಮಂದಿಯ ಮರೆಯಲಿಹ್ಯ ಮಂಡಲೇಶನ 1 ಷಡರಸನ್ನದ ಖೂನ ಬಡಿಸಿಟ್ಟದೆ ನಿಧಾನ ಒಡಲು ತುಂಬಿದ ಪೂರ್ಣ ಒಡಂಬಡದು ಪ್ರಾಣ 2 ದಿಂಡಿಲಿಟ್ಟದೆ ವಸ್ತ್ರ ಥಂಡಥಂಡಾದ ವಿಚಿತ್ರ ಗಾತ್ರ ಬಡದು ಸಂತೃಪ್ತಿ 3 ಸಂದುಕದಲ್ಲಿಟ್ಟದೆ ವಸ್ತು ಸುಂದರವಾದ ಸಮಸ್ತ ಸಂಧಿ ಸಿಡದೆ ಸಾಭ್ಯಸ್ತ ಹೊಡೆದು ಮನ ಸ್ವಸ್ತ 4 ತುಂಬಿ ನಿಧಾನ ಕೊಟ್ಟು ಕೊಂಡಾದರೆ ಪೂರ್ಣಕಟ್ಟಿದು ಕಾಮನ 5 ಕೂಪಲ್ಯಾದೆ ಉದಕ ಅಪೂರ್ವದ ಅಮೋಲಕ ಅರ್ಪಿಸಿಕೊಳ್ಳದನಕ ತೃಪ್ತಿಹೊಂದದು ಲೋಕ 6 ಕೊಂಡಾಡು ಮಹಿಪತಿ ಪೂರ್ಣ ಉಂಡುಟ್ಟು ಘನ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡು ನಮಿಸಿದೆ ನಿನ್ನ | ಕಡಗೋಲ ಪಿಡಿ- ದುದ್ದಂಡ ದೇವವರೇಣ್ಯ ತಾಪತ್ರಯಗಳಘ ಹಿಂಡು ಓಡಿಸು ರನ್ನ ಪೊರೆ ಸುಪ್ರಸನ್ನ ಪ. ಕಂಡೆ ನಿನ್ನಯ ಬಾಲರೂಪವ ಪುಂಡರೀಕದಳಾಯತಾಕ್ಷನೆ ಕುಂಡಲೀಶಯ ನಿನ್ನ ಚರಣದಿ ದಂಡವಿಕ್ಕುವೆ ಗೋಪಿಬಾಲ ಅ.ಪ. ಜನನ ಮರಣದಿ ನೊಂದೆ | ಶ್ರೀ ಜಾನಕೀಪತೆ ಪ್ರಣತ ಜನರಿಗೆ ತಂದೆ | ನೀ ಕಾಯದಿದ್ದರೆ ಘನವೆ ನಿನಗಿದು ಎಂದೆ | ಪಾಲಿಪುದು ಮುಂದೆ ಜನಮ ಜನುಮದ ಕರ್ಮಗಳ ನಾ ಅನುಭವಿಸಿ ಪೂರೈಸಲಾಪೆನೆ ಘನಮಹಿಮ ದಯ ಮಾಡಿದಲ್ಲದೆ ಕೊನೆಯ ಕಾಣೆನು ವಿಷಯ ವಾಸನೆ ವನಜ ಸಂಭವ ಪವನ ರುದ್ರಾ ದ್ಯನಿಮಿಷಿರಿಗಿನಿತಿಲ್ಲ ಮಹಿಮೆಯು ನಿನಗೆ ವಿೂರಿದರುಂಟೆ ದನುಜದಲ್ಲಣ ದಯದಿ ಸಲಹೊ 1 ಕಾಮಪಿತ ಮಧ್ವೇಶ | ಸೌಂದರ್ಯ ಸಾರ ತಾಮಸರ ವಿಧ್ವಂಸ | ಸಜ್ಜನರ ಕಾಯುವ ಕೋಮಲಾಂಗನೆ ಶ್ರೀಶ | ಲಕ್ಷ್ಮೀ ನಿವಾಸ ಹೋಮಕುಂಡದಿ ಪುಟ್ಟಿದಾ ಸತಿ ಕಾಮಿಗಳ ಉಪಟಳಕೆ ಸಹಿಸದೆ ಶ್ರೀ ಮನೋಹರ ಕಾಯೊ ದ್ವಾರಕೆ ಧಾಮ ನೀ ಗತಿ ಎನುತವರಲೆ ಪ್ರೇಮದಿಂದಕ್ಷಯವನಿತ್ತ ನಾಮ ಮಂಗಳ ನಿರ್ಮಲಾತ್ಮಕ ಸೋಮಶತಪ್ರಭ ಸೌಮ್ಯರೂಪ ತ್ರಿ- ಧಾಮ ಭಕ್ತರ ಕಾಮಿತಾರ್ಥನೆ 2 ಆದಿಮಧ್ಯವಿದೂರ | ಆನಂದ ಪೂರ್ಣ ಸಾಧು ಮನದಿ ವಿಹಾರ | ಸರ್ವಜ್ಞರಾಯರ ಹಾದಿ ತೋರಿಸೊ ಧೀರ | ಸುಜ್ಞಾನಸಾರ ವೇದ ಶಾಸ್ತ್ರಗಳರ್ಥವರಿಯೆನು ಮಾಧವನೆ ಮಮಕಾರದಲಿ ನಾ ಹಾದಿ ತಿಳಿಯದೆ ನೊಂದೆ ಅಜ್ಞತೆ ಹೋದಡಲ್ಲದೆ ನಿನ್ನ ಕಾಣುವ ಮೋದ ಬರುವುದೆ ಮಧ್ವವಲ್ಲಭ ಭೇದ ಮತಿ ಕೊಡು ತಾರತಮ್ಯದಿ ನೀ ದಯದಿ ಒಲಿದೆನ್ನ ಮನದಲಿ ಆದರದಿ ನೆಲೆಸಿನ್ನು ಪೊಳೆಯೊ 3 ಕಡಲಶಯನನೆ ಶ್ರೀಶ | ಕಡಗೋಲ ಕೈ ಪಡುಗಡಲ ತೀರದಿ ವಾಸ | ಕಮಲೇಶ ನಾ ನಿ- ನ್ನಡಿಯ ಕಂಡೆನು ನಾಶ | ರಹಿತನೆ ಪ್ರಕಾಶ ಎಡೆಬಿಡದೆ ನಿನ್ನಸ್ಮರಿಪ ಧ್ಯಾನವ ಕೊಡುತ ಮಧ್ಯದಿ ತಡೆವ ಸಂಸೃತಿ ತಡೆದು ಸಂತ ಚಿಂತನೆಯ ದೃಢ ಒಡಲೊಳಗೆ ನೆಲೆಸಯ್ಯ ಬಿಡದೆ ಪತಿ ಸತಿ ಪಿತ ಕಡಲವಾಸನೆ ಕಡಲ ಬಂಧನ ಕಡಲ ಮಧ್ಯದಿ ಪುರವ ರಚಿಸಿದೆ ಕಡು ದಯಾಂಬಯಧೆ ಕಾಯೊ ಸತತ 4 ಅಷ್ಟಯತಿ ನುತಪಾದ | ಸುಖ ತೀರ್ಥ ಹೃದಯ ದೀಷ್ಟಿತನೆ ಸನ್ಮೋದ | ಸಜ್ಜನರ ಮನದಾ ಭೀಷ್ಟವೀವ ಪ್ರಮೋದ | ಕರುಣಿ ಸುಪ್ರಸೀದ ಕೊಟ್ಟೆ ಮನು ಮುನಿಗಳಿಗೆ ಜ್ಞಾನವ ತುಷ್ಟಿಪಡಿಸುತÀ ಸುರರ ಸುಧೆಯಲಿ ಕುಟ್ಟಿ ಅಸುರನ ಕೋರೆದಾಡಿಲಿ ಕುಟ್ಟಿ ಅರಸರ ಕಟ್ಟಿ ಜಟೆಯನು ಮಟ್ಟಿ ಕಂಸನ ಬಿಟ್ಟು ವಸನವ ದಿಟ್ಟ ಕಲ್ಕಿ ಗೋಪಾಲಕೃಷ್ಣ ವಿಠ್ಠಲನೆÀ ಶ್ರೀ ಉಡುಪಿಲೋಲ5
--------------
ಅಂಬಾಬಾಯಿ
ಕಂಡೆ ನಾ ಕಣ್ಣಾರೆನಾ | ಕಂಡೆನಾ ಪ ಕಂಡೆನು ಕರುಣಾಸಾಗರನ | ಕರ ದಂಡ ನಾಮಕೊಲಿದವನ | ಆಹಾ ದಂಡ ಧಂಡದ ಲೀಲೆ ತೋಂಡರೊಡನಾಡು ಮೂರ್ತಿ 1 vಟಿಟತಮತ್ಕೋಟಿ ಸನ್ನಿಭನ | ದೇವ | ತಟಿನಿಯ ಪದದಿ ಪೆತ್ತವನ | ಚಾರು ಕರವ ನಿಟ್ಟವನ | ನಿಜ ಭಟ ಜನರಿಗೆ ಮುಕ್ತಿ ಪ್ರದನ ||ಆಹಾ || ಜಠರದಿ ಜಗವಿಟ್ಟು ವಟದೆಲೆಯೊಳು ಮಲಗಿ ವಟುರೂಪದಲಿ ಪಾದಾಂಗುಟವನು ಮೆಲುವನ 2 ಭುವನದೊಳು ಸಂಚರಿಸುವನ | ಕೂರ್ಮ ಮಾನವ ಪಂಚಮುಖನ | ಋಷಿ ಕುಮಾರ ಕುವರರ ಕಡಿದವನ ಮಹಿ ಕರವ ಕುವಲಯ ಸಖ ಕುಲೋಧ್ಭವ ಭವಮಾರ್ಗಣ ಬವರದಿ ಹಯವೇರಿ ಯವನರ ಬಡಿದನ 3 ಲ್ಮೊಗನ ನಾಭಿಲಿ ಪಡೆದವನ | ರವಿ ಮಗನಿಗೆ ಮಗನಾದವನ ತನ್ನ ಪೊಗಳುವಂಥರಫÀ ಕಳೆಯವವನ ಆಹಾ ಜಗನ್ನಾಥದಾಸರಿಗೆ | ಸೊಗಸಾದ ಮೃಷ್ಟಾನ್ನ ಬಗೆ ಬಗೆ ಉಣಿಸಿದ ಖಗಪತಿ ಗಮನನ4 ಸಾಸಿರನಯನನುಜನ | ಮಹಿ ದಾಸ ಕಪಿಲದತ್ತಾತ್ರೇಯನ ವೇದ ವ್ಯಾಸ ವೃಷಭ ಹಯಮುಖನ ಭಾರ ಶ್ರೀಶ ಮಾನಸಮಂದಿರ ||ಆಹಾ || ಶ್ರೀಶ ತಂದೆ ವೆಂಕಟೇಶ ವಿಠಲಂಘ್ರಿ ದಾಸರ ಸತ್ಯಹವಾಸದಿಂದಲಿಯಿಂದು 4 ತಂದೆ ತಾಯ್ಗಳ ಸುಕೃತವೊ | ನಮ್ಮ ಒಂದೂರಾರ್ಯರ ಅನುಗ್ರಹವೋ | ಸ್ತಂಭ ಮಂದಿರ ರಾಯರ ದಯವೊ | ದಾಸ ವೃಂದ ಕೃತಾಶೇಷ ಫಲವೊ | ಆಹಾ ಇಂದು ಭಾಗದಿ ಭಕ್ತಾವೃಂದಕೆ ದರುಶನಾ ನಂದಗರೆವ ಶಾಮಸುಂದರ ವಿಠಲನ 5
--------------
ಶಾಮಸುಂದರ ವಿಠಲ
ಕಂಡೆ ನಾ ಬ್ರಹ್ಮಾಂಡಯೊಡೆಯ ಶ್ರೀ ವೆಂಕಟೇಶನ ಪ ಕಂಡೆ ನಾ ಭಕುತರ ಹಿಂಡುಗಳು ನೆರೆ ಕೊಂಡಾಡುತಲಿದೆ ಪದಪುಂಡರೀಕವ ನಾ ಅ.ಪ ತುಂಗ ಮಹಿಮ ಸತ್ಸಂಗವಿತ್ತು ಮನದಂತರ ವರಿ- ತಾಂಗೀರಸದೀ ಮಂಗಳ ಪೌರ್ಣಿಮೆಭಾರ್ಗವವಾಸರದಿ ಭಾರ್ಗವಿಪತಿ ನಿನ್ನನು ಗ್ರಹದಿ ನಗದೊಡೆಯ ಭಕ್ತ- ರಘಹರಿಸುತ ಪನ್ನಗಗಿರಿಯೊಡೆಯ ನಿನ್ನಯ ಗುಡಿಯನ್ನು ಬಗೆ ಬಗೆ ಸುತ್ತಿಪರ ಹಿಂಡನ್ನು ನಾ ಕಂಡೆನೋ ಜಾಗು ಮಾಡದೆ ಬಾಯಿಬೀಗವ ಕೈಕೊಂಡು ಸಾಗಿ ಕಾಸಾರದಿ ಸ್ನಾನ ಮಾಡಿಕೊಂಡು ಬಾಗಿ ವರಾಹದೇವರ ವಂದಿಸಿ ಬೇಗದಿ ಹರಕೆ ಕೈಕೊಂಡಿಹ ದೇವನ 1 ಮುಕ್ತರೊಡೆಯ ಪುರುಷೋತ್ತಮ ನಿನ್ನಯ ಭಕ್ತರ ವಿಪತ್ತುಗಳೆಲ್ಲ ಹರಿಸಿಶಕ್ತ್ಯಾನುಸಾರ ತ್ವ- ದ್ಭಕ್ತರೆಸಗುವ ಅತ್ಯಲ್ಪಭಕ್ತಿಯ ಸ್ವೀಕರಿಸಿ ಭಕ್ತಿಯಿಂದ ಪ್ರಾಕಾರದಿ ಸುತ್ತಲು ಹೊತ್ತಗಂಡದೀಪಸಾರುತಲಿ ನಿತ್ಯನೂತನ ನಿನ್ನ ಸ್ತುತಿಸುತಲೀ ಮತ್ತೆ ಉರುಳುತಲೀ ಉತ್ತಮಗತಿಪ್ರದ ವ್ಯಕ್ತನಹುದೊ ತ್ವ- ದ್ಭಕ್ತರ ಮನೋರಥ ಪೂರ್ತಿಮಾಡುವ ಭಕ್ತವತ್ಸಲನೆಂಬ ಬಿರುದು ಪೊತ್ತ ಸ- ರ್ವೋತ್ತಮ ಶ್ರೀ ಪುರುಷೋತ್ತಮ ನಿನ್ನನು2 ಬೊಮ್ಮಜನಕ ಪರಬೊಮ್ಮನೆ ನಿನ್ನಯ ಸನ್ಮಹಿಮೆಯ ನಾ ಒಮ್ಮನದೀ ಒಮ್ಮೆಯಾದರು ಮನ್ಮನದಲಿ ನಿನ್ನಯ ಸನ್ಮಂಗಳರೂಪವ ನಿಲ್ಲಿಸದೆ ಸುಮ್ಮನೆಕುಳಿತು ಇಮ್ಮನನಾಗಿರೆ ಘಮ್ಮನೆ ಎನ್ನನು ಒಳಕ್ವೈದೆ ಕಣ್ಮನದೆದುರಲಿ ನೀ ನಿಂದೆ ನೀನೆನ್ನಯ ತಂದೆ ಸನ್ಮುದದಿಂದೆ ಪಾಮರನೆಂದೆನ್ನ ಪ್ರೇಮದಿ ಕರುಣಿಸಿ ಸನ್ಮಹಿಮೆಯ ತೋರ್ದೆ ಜಗದೀಶ ಕಾಮಿತಜನರ ಕಲ್ಪದ್ರುಮ ನೀನೆಲೊ ಈ ಮೇಲುಗಿರೀಶ ಶ್ರೀ ವೆಂಕಟೇಶಾ ನಿನ್ನ3
--------------
ಉರಗಾದ್ರಿವಾಸವಿಠಲದಾಸರು
ಕಂಡೆ ನಿಂದಾನಂದೋಬ್ರಹ್ಮನ ಮಂಡಲೇಶನ ಧ್ರುವ ಪಿಂಡ ಬ್ರಹ್ಮಾಂಡ ತಂಡಕ ಜಡದ ಖಂಡಿತವಾಗ ಸುಪಂಡಿತರಾತ್ಮನ 1 ಸನ್ಮಾರ್ಗ ಸದ್ಗತಿ ಸಾಧನ ಸದ್ಗುರು ನಿಧಾನ ಸದ್ಬ್ರಹ್ಮಾಕರ ಸದ್ವಾಸನೆ ಪೂರಿಸಿ ಸದ್ಗೈಸುವ ಸದ್ಭಾವ ಬೋಕ್ತನ 2 ನಿಜಸುಖ ಭಾಸುವ ಮಹಿಪತಿಗೋಸುಗ ಭಾಸ್ಕರ ಕೋಟಿ ಪ್ರಕಾಶನ ಕಂಡೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಣ್ಣ ಮುಂದಿರುವ ವಿಷಯಾದಿ ಸುಖಕೆ ಪ ಮೊರೆವೆ ನರಕುರಿಯೆ ಅದನರಿತಿಹೆಯ ಮನವೆ 1 ಸನ್ನುತದ ನಿಜಸುಖದೊಳಿರಬಹುದು ಮನವೆ 2 ನರಕದೊಳ್ ಬಾಯ್‍ಕಳೆದರೊದಗುವುದೆ ಸುಖವು 3 ತಿರುತಿರುಗಿ ಬಳಲುತಿರೆ ಸುಖವಾಗಬಹುದೊ 4 ದ್ಗುರುವಾಗುತಿಹನಲ್ಲೊ ಅರಿತುಕೊ ಮನವೆ5 ಧ್ಯಾನಿಸುವ ಪುಣ್ಯಾತ್ಮರಿಗೆ ಗೋಚರಿಸಬಹುದು | ತಾನಾಗಿ ಶರಣರೊಳು ಕರುಣವಿಡಬಹುದು6 ಶರಧಿಯೊಳಗೋಲಾಡುತಿರು ನಿರುತ ಮನವೆ 7
--------------
ಸದಾನಂದರು
ಕಣ್ಣಿನಾಕರಿರಟ್ಟ ಸುಟ್ಟುಬೂದಿಯ ಮಾಡಿ ನಿನ್ನ ಈಕ್ಷಿಪ ಶುಭ್ರ ದೃಷ್ಟಿಯ ನೀಡೊ ಪ ಪುಣ್ಯಪುರುಷನೆ ಬಿಂಬಪೂರ್ಣ ಮಂಗಳ ಶೌರಿ ಧನ್ಯ ಮಾಡೆನ್ನ ಮುನ್ನ ನಿಲ್ಲಲಿ ಸÉಳಿಯೊ ಅ.ಪ ವಿಷಯಸುಖ ದುರ್ಗುಣದ ಪಂಕದಲಿ ಮನನೆನೆದು ವಿಷಕ್ರಿಮಿಯಂತಿಹದೊ ಇದಕೆ ಮದ್ದು ಸನ್ನುತ ಹರಿಯೆ ವಿರಜ ಮಾಡೊ ಮನವ 1 ಭಾವಸೂತ್ರಗಳಿಂದ ವಿಧಿಭವರೆ ಮೊದಲಾದ ಜೀವರನು ಆಡಿಸುವ ಶ್ರೀಶ ಎನ್ನ ಪಾವನ್ನ ಗುಣನಿಧಿಯೆ ಶ್ರೀ ವೇಣುಗೋಪಾಲ ದೇವ ಅಜಮಿಳಪಾಲ ಪೂತ ಭಾವದಿ ನಿಲಿಸೊ 2 ಕಾತುರವಪಡುತಿಹೆನೊ ಅಸುರಕರ್ಮದಿ ಸಿಕ್ಕಿ ಪಾತಕಿಗಳ ಸಹವಾಸ ಬಿಡಿಸಿ ಕಾಯೊ ಆತುಮಕೆ ಅತಿಮಿತ್ರ ಜಯೇಶವಿಠಲ ನಿನ್ನೊಲುಮೆಪಾತ್ರರಲಿ ಇಟ್ಟೆನ್ನ ಕಾಪಾಡು 3
--------------
ಜಯೇಶವಿಠಲ
ಕಣ್ಮನಕೆ ಆನಂದ ಇಂದಿನದಿ ಕೇಳೀ |ಮನ್ಮನೋರಥ ಮುಂದೆ | ಪೋಗಿ ಸೇರಿಹುದು ಪ ಮಧ್ವ ಸರಸಿಯ ತಟದಿ | ಮಧ್ವಮುನಿ ಸದ್ವಂದ್ಯಮಧ್ವೇಶ ಶಿರಿ ಕೃಷ್ಣ | ನರ್ಚಿಸುತ ನಿತ್ಯಮಧ್ವಮತ ಸಾಮ್ರಾಜ್ಯ | ಪೀಠದಲಿ ಭೂಷಿತರುವಿಶ್ವೇಶ ತೀರ್ಥರಿಗೆ | ವಂದಿಪೆನು ಸತತ 1 ಮಧ್ವ ಸಿದ್ಧಾಂತಗಳ | ಉತ್ಕರ್ಷ ಭೋದಿಸುತವಿದ್ವಜ್ಜನಾರಾಧ್ಯ | ಪಾಠಶಾಲಾವರ್ಧಂತಿ ಹತ್ತಾರು | ನಾಲ್ಕೊರ್ಷ ಉತ್ಸವದಿಅದ್ಯಕ್ಷ ವಿಶ್ವೇಶ | ತೀರ್ಥರನುಗ್ರಹಿಸೇ 2 ಅನಂತೇಶ ಸನ್ನಿಧಿಲಿ | ಅನುಮಾನ ತೀರ್ಥರಿಂದಾನಂತ ಸತ್ ಜ್ಞಾನ | ರಶ್ಮಿ ಸೂಸುತಲೀ |ಜ್ಞಾನ ಕಾರ್ಯವು ಗುರು | ಗೋವಿಂದ ವಿಠಲನಪ್ರೀಣನಕೆ ಜರುಗಿಹುದ | ನೋಡವನೆ ಧನ್ಯ 3
--------------
ಗುರುಗೋವಿಂದವಿಠಲರು
ಕಥಾಶ್ರವಣ ಮಾಡದೆ ನರದೇಹವ ವೃಥಾ ಕಳೆವದೆಂದಿಗು ಸಲ್ಲ ಪೃಥಾಸುತನ ಮಹರಥಾವನು ಸರ್ವಥಾ ಪೊರೆವ ಸಂಶಯವಿಲ್ಲ ಪ. ವಿಕಲಿ ಪ್ರವರ್ತನ ಲೋಲಿಕಾಗಮ ಕಲಾನುಕೃತ ದುಷ್ಕಾಲದಲಿ ಒಲಿವನು ನಿರ್ಮಲಗೊಳಿಸುತಲಿ ಸಲೀಲವೆ ಲಘುಕರ್ಮದಲಿ ಸುನೀಲವಕ್ಷ ಸ್ಥಳಾಂತರ ಶ್ರೀಲಲಾಮನನು ಕೊಂಡಾಡುತಲಿ 1 ಅಲ್ಪ ಸುಖವ ಸಂಕಲ್ಪಿಸುವರಿಗಹಿತಲ್ಪನೊಲಿಯ ತಾನೆಂದೆಂದು ನಾಲ್ವರಿ ಫಲಗಳನಿಪ್ಪನೆ ಸಂಸ್ಕøತಿಯಿಪ್ಪಂದದಿ ದಯದೋರೆಂದು ಒಪ್ಪಿಸಿ ಮತ್ತವನಿಪ್ಪುದನುಂಡು ನೀರಪ್ಪಣೆಯಲಿ ಸನ್ಮತಗೊಂಡು ಹಿಂಡು 2 ಸ್ಮರಣೆ ಮಾತ್ರದಿಂದಲವನು ಪಾಪವ ಕರಣವ ಶುದ್ಧೀಕರಿಸುತಲಿ ಸನ್ಮತಿ ಇರಿಸುವನು ಪುರು ಪುರುಷಾರ್ಥಕರ ಪದಪದ್ಮವನಿರಿಸಿ ಶಿರದಿ ಸತ್ಕರಿಸುವನು ಮನದಲ್ಲಿರಿಸಿದವರನನುಸರಿಸುವನು 3
--------------
ತುಪಾಕಿ ವೆಂಕಟರಮಣಾಚಾರ್ಯ