ಒಟ್ಟು 454 ಕಡೆಗಳಲ್ಲಿ , 78 ದಾಸರು , 429 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಧವ ತೀರ್ಥಾ ಯತಿ ವಾಸಿಪ ವೃಂದಾವನದಲ್ಲಿ ಖ್ಯಾತಿ ಪ. ವಾಸುದೇವನ ಭಕ್ತ ಸುಜನಕೆ ಪ್ರೀತಿ ಸೂಸುತ ಪೊರೆಯುವ ಕರುಣಿ ಪ್ರತೀತಿ ಅ.ಪ. ಭದ್ರಾವತಿಯ ತೀರ ನರಸಿಂಹ ಕ್ಷೇತ್ರ ಭದ್ರಾವತೀ ಪುರ ಮಠದಿ ಸತ್ಪಾತ್ರಾ ಮುದ್ದಾದ ವೀರ ರಾಮನ ಪ್ರೀತಿ ಗಾತ್ರಾ ಪೊದ್ದಿಸಿಕೊಂಡಿಪ್ಪ ಶಿರದಿ ಪತಿತ್ರ 1 ಸ್ವಪ್ನದಿ ತೋರಿದ ಯತಿರೂಪದಿಂದ ವಪ್ಪದಿ ದರ್ಶನಕೆ ಬಾರೆಂದು ನುಡಿದಾ ಅಪ್ಪ ತಿಮ್ಮಪ್ಪನ ಸ್ತುತಿಯನಾಲಿಸಿದಾ ಬಪ್ಪ ನರ ದರ್ಶನಕೆ ಮುಂದೆ ನಿಲ್ಲಿಸಿದಾ2 ಎನ್ನಿಂದ ಸಾರೋದ್ಧಾರ ಪದವನ್ನು ಎನ್ನಲ್ಲೆ ನಿಂತು ತಾ ಬರಸಿದ ಘನ್ನ ತನ್ನ ದೇವತ್ವವ ತೋರ್ದ ಪ್ರಸನ್ನ ಇನ್ನಿಂಥ ಕರುಣಿಯ ಕಾಣೆ ನಾ ಮುನ್ನ 3 ಮಧ್ವಕರ ಸಂಜಾತ ಮಾಧವರಂತೇ ಶುದ್ಧ ಈ ಯತಿಕುಲ ಸಂಜಾತನಂತೇ ಭದ್ರಾವತೀ ಪುರದಲ್ಲಿ ವಾಸಂತೇ ಮುದ್ದು ಕೇಶವ ಮಾಧವಾತೀರ್ಥನಂತೆ 4 ಕಾಮಿತಾರ್ಥವ ನಂಬೆ ಕೊಡುತಿಪ್ಪನಂತೆ ಕಾಮಚಾರಿಗಳೀಗೆ ತೋರ್ಪನಲ್ಲಂತೆ ಸ್ವಾಮಿ ರಾಮನ ಜಪಮೌನ ವ್ರತವಂತೆ ಯೋಗಿ ಅವಧೂತನಂತೆ 5 ಭಾಗಾವತಾದಲ್ಲಿ ಬಹು ದೀಕ್ಷಾಯುತರು ಬಾಗಿದ ಜನರಿಗೆ ಪ್ರೇಮ ತೋರುವರು ಭಾಗವತವ ರಾಜಗ್ಹೇಳಿದರಿವರು ಬೇಗರಿತುಕೊಳ್ಳಿರಿ ಬಹುಗೋಪ್ಯಯುತರು 6 ನಂಬಿದ ಜನರಿಂದ ಹಂಬಲೊಂದಿಲ್ಲ ತುಂಬಿದ ಭಕ್ತಿ ಆತ್ಮಾರ್ಪಣೆ ಬಲ್ಲ ಸಂಬ್ರಹ್ಮದಿಂ ನಲಿವ ಗುರುಭಕ್ತಿ ಬೆಲ್ಲ ಕುಂಭಿಣಿ ಮೂಢರಿಗೀವನು ಬಲ್ಯಾ 7 ಎನ್ನ ಶ್ರೀ ಗುರು ತಂದೆ ಮುದ್ದುಮೋಹನ್ನ ಘನ್ನರ ಕೃಪೆಯಿಂದ ಈ ಮುನಿವರನಾ ಸನ್ನುತ ಸುಗುಣವ ಕಂಡ ನಾ ನಿನ್ನ ಚನ್ನ ಶ್ರೀ ಲಕ್ಷ್ಮೀ ನರಸಿಂಹ ತೋರ್ದರನಾ 8 ಸ್ವಾಪರೋಕ್ಷಿಯ ವೃಂದಾವನಸ್ಥಾ ಗೋಪ್ಯದಿ ವಾಸಿಪ ಮಹಿಮ ವಿಖ್ಯಾತಾ ಗೋಪಾಲಕೃಷ್ಣವಿಠಲನ ಕೃಪಾ ಪಾತ್ರಾ ಕಾಪಾಡು ತವ ದಾಸದಾಸರ ನಿರುತಾ 9
--------------
ಅಂಬಾಬಾಯಿ
ಮಾಧವ ಜಯ ಜಯ ರಾಘವ ರಾಮ ಖರಾರೇ ಪ ಜಯತು ಸೀತಾಧವ ಪಾವನ ಶೌರೇ ಅ.ಪ ಜಯತು ಪೀತಾಂಬರಧರ ಶಕಟಾರಿ ಜಯ ಕನಕಾಂಬರಧರ ವಿಕಟಾರಿ ಜಯ ಜಯ ಮುರಳೀಧರ ಕಂಸಾರಿ ಜಯ ಜಯ ಶರಧರ ದಶಶಿರವೈರಿ 1 ಜಯತು ಗೋಪೀಜನಪ್ರಿಯ ಗೋಪಾಲ ಜಯತು ತಪೋಬಲ ಮುನಿಜನಪಾಲ ಜಯತು ಜಯತು ಕೌಸ್ತುಭಮಣಿಮಾಲ ಜಯ ಜಯತು ಭೂಪಾಲ ಸುಶೀಲಾ 2 ಸನ್ನುತ ನಾಮ ಜಯ ಜಯಾನತ ಮುನಿಜನ ಪ್ರೇಮಾ ಜಯತು ಜಯತು ರಾಮ ಮಾಂಗಿರಿಧಾಮಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾಧವ ಪಾದ | ದಾಸ್ಯ ಬೇೀಡುವನ ಪ ಸನ್ನುತ ಹರಿಯೆ | ಭೂಮಗುಣ ಪೂರ್ಣಾ 1 ಮೂರೆರಡು ಭೇದಗಳ | ಸಾರವನೆ ತಿಳಿಸಿವಗೆತಾರತಮ್ಯ ಜ್ಞಾನ | ದರಿವನಿತ್ತೂಪಾರಗೈಭವದ ಕೂಪಾರವನು ಶ್ರೀ ಹರಿಯೇಮಾರುತಾಂತರ್ಯಾಮಿ | ಮಾರಮಣ ದೇವಾ 2 ಕರ್ಮ | ಜಾಲಗಳ ತವಪಾದಓತೈಪ ಭಾಗ್ಯವನೆ | ಪಾಲಿಸೋ ಹರಿಯೇ 3 ಬುದ್ಧಿಯೊಳು ನೀನಿಂತು ಮಧ್ವ ಸಿದ್ಧಾಂತಗಳವೃದ್ಧಿಗೈಸುತ ಹರಿಯೆ | ಸಿದ್ಧನೆನಿಸೋಅದ್ವಾನ ಇದ ಹೊರತು ಶುದ್ಧ ಸಾಧನ ಕಾಣೆಕೃದ್ಧಖಳ ಹರನೆ ಅನಿ | ರುದ್ಧ ಒಲಿ ಇವಗೇ 4 ಜೀವ ಅಸ್ವಾತಂತ್ರ | ದೇವ ನಿಜ ಸ್ವಾತಂತ್ರಈ ವಿಧದ ಸುಜ್ಞಾನ | ನೀ ವೊಲಿದು ಇತ್ತೂ |ಭಾವುಕರ ಪರಿಪಾಲ | ಮಾವಿನೋದಿಯೇ ಗುರು ಗೋವಿಂದ ವಿಠಲನೆ | ಭಾವದೊಳು ತೋರೋ 5
--------------
ಗುರುಗೋವಿಂದವಿಠಲರು
ಮಾನವ ಶಿಂಗಾರ್ಯರ ಸುತನಮೋ ನಮೋ ಪ ಮಂಗಳಕರ ಕುಲಿಶಾಂಗ ಮತಾಂಬುಧಿ ತಿಂಗಳಸುಗುಣಿತ ನಮೊ ನಮೊ ಅ.ಪ ತುಂಗಮಹಿಮ ದ್ವಿಜ ಪುಂಗವ ವಿಜಿತಾ ನಂಗ ಶರ ದಯಾಪಾಂಗ ನಮೋ || ಡಿಂಗರೀಕ ಜನಪಾಲ ನಮೊ ಭವ ಭಂಗ ವಿದಾರಣ ನಮೊ ನಮೊ 1 ಜಾತರೂಪ ಶಯ್ಯಾತ್ಮಜ್ಯಾತೆ ಹರಿ | ದೂತ ಪ್ರಹ್ಲಾದರನುಜ ನಮೊ || ಪೂತುರೆ ಘನ ಸತ್ವಾತಿಶಯದ ಪ್ರ ಖ್ಯಾತ ದಿನಪ ಪ್ರಸೂತ ನಮೊ 2 ಪಾತಕಾದ್ರಿಜೀಮೂತ ಭ್ರಾತ ಪಣಿ ಪುರಂದರ ಪೋತನಮೊ ಪೂತಗಾತ್ರ ಶುಭದಾತ್ರ ಭರಿಕ್ಷ ಣ್ಮಾತಿರಿಷ್ಯಶ್ವ ಸುಪ್ರೀತ ನಮೊ 3 ಮೌನಿವರ್ಯ ವರದೇಂದ್ರ ಪಾದಾಂಬುಜ ರೇಣು ವಿಭೂಷಿತ ಪಾಲಯಮಾಂ ಧೇನು ನಿಧೆ ದೇವಾಂಶಜ ಪರಮತ ಪಾವಕ ಪಾಲಯಮಾಂ 4 ಮಾನವಿ ಕ್ಷೇತ್ರನಿಕೇತನ ಸನ್ನುತ ಮಾನಿತ ಗುರುವರ ಪಾಲಯ ಮಾಂ ಧೇನುಪಲ ವಿಜಯರಾರ್ಯ ಕೃಪಾನ್ವಿತ ಧೀನೋದ್ಧರಣ ಫಾಲಯಮಾಂ ಮಾನದಿ ಕ್ಷೇತನಿಕೇತನ ಸನ್ನುತ ಮಾನಿತ ಗುರುವರ ಪಾಲಯಮಾಂ ಜ್ಞಾನನಿಧೆ ದೇವಾಂಶಜ ಪರಮತ ಪಾವಕ ಪಾಲಯ ಮಾಂ 5 ಶೌರಿಕಥಾಮೃತ ಸಾರಗ್ರಂಥ ಕೃತ ಸೂರಿ ಕುಲೋತ್ತುಮ ಜಯ ಜಯಭೋ ಧಾರುಣಿ ಸುರಪರಿವಾರ ನಮಿತ ಪದ ಚಾರುಸ್ತಂಭಾಲಯ ಜಯ ಜಯ ಭೀ 6 ಮಂದವೃಂದ ಮಂದಾರ ಭೂಜನತ ಬಂಧೋ ಭಯಾಪಹ ಜಯ ಜಯ ಭೋ ನಂದಜ ಶಾಮಸುಂದರಾಂಘ್ರಿ ಅರ ವಿಂದ ಮರಂದುಣಿ ಜಯ ಜಯ ಭೋ 7
--------------
ಶಾಮಸುಂದರ ವಿಠಲ
ಮಾನಿನಿ ಕರೆದ ಪ ನನ್ನ ಕರೆವ ನೋಡೆ ನಿನ್ನ ಕರೆವ ನೋಡೆಅನ್ಯ ಗೋಪಿಯರನೆಲ್ಲ ಕರೆಯುತಾನೆಮನ್ಮಥನಂಘ್ರಿ ಇನ್ನು ಬಿಟ್ಟಿರಲಾರೆಸನ್ನುತಾಂಗಿಯರೆಲ್ಲ ಸಾಗಿ ಬನ್ನಿ 1 ವೇಣುಸ್ವರವು ತಮ್ಮ ಮಾನಸದೊಳು ತುಂಬಿಕಾನ ಮೇಲೆ ಮಾಡಿ ಕೇಳುತಾವಖಾನ ಪುಲ್ಲನೆ ಬಿಟ್ಟುವ ವೃಂದಗೋಷ್ಟದಿ ನಿಂತುಸ್ಥಾನದೊಳಗೆ ಕಣ್ಣಿ ಕೀಳುತಾವ 2 ಇಂದು ಪಿಡಿದು ಪೋಗಿಆನಂದವಾಲನ ಮುಖ ಕಾಂಬೋಣಮ್ಮಾಆನಂದವಾಲನ ಮುಖ ನೋಡೋಣಮ್ಮಾ 3
--------------
ಇಂದಿರೇಶರು
ಮಾರಮಣಾ ಹರಿ ಗೋವಿಂದಾ ಬಾರೋ ಕೊಂಡಾಡಿ ಪಡೆವೆನಾನಂದ ಪ ನಾರದಾದಿ ಮುನಿ ಬೃಂದಾನಂದ ಬಾರೋ ಭಕ್ತಕುಮುದೇಂದು ಮುಕುಂದಾ ಅ.ಪ ನಾನಾ ಜನುಮಗಳೊಳಗುದಿಸಿದೆವಯ್ಯ ಏನೆಂದು ಪೇಳಲಿ ನಿನಗೆ ಜೀಯ ನೀನೆನಗಿತ್ತಾ ತನುಗಳನಳೆಯಲು ಏನಪೇಳಲೈ ಭೂಮಿಗೆ ನಾಲ್ಮಡಿ ಸಾನುರಾಗದಿ ಜನನಿಯಿತ್ತಾ ಘೃತ ಪಾನಕ್ಷೀರ ವಾರಿಧಿಗಿಮ್ಮಡಿಯೋಳ್ ಬಾ 1 ನೋಡಿ | ಮನಕರಗದೆ ರುಕುಮಿಣಿ ರಮಣಾ ಮೃಡ ವಂದಿತ ಸರಸಿಜ ಚರಣಾ ಪಾಡೀ ಕೊಂಡಾಡುತಿರ ದೇಕೆ ನಿಷ್ಕರುಣಾ ಬೇಡಿದರ್ಗೆ ಕೈನೀಡುತೆ ದಾನವ ಮಾಡಲಿಲ್ಲವದರಿಂದ ದರಿದ್ರತೆ ಪೀಡಿಸವೈ ನಾ [ಮಾಡಿದ] ಪಾತಕವಾರ್ಜಿಸಿ ಜನುಮಂಗಳ ಪಡೆದೆನೊ ಬಾ 2 ಸುನಾಮ ನಮಿಸುವೆ ಸುಗುಣ ವಿರಾಮ ಸನ್ನುತ ವರಮಾಧವ ಕೋಮಲಾಂಗ ಸೋಮಶೇಖರಾಧಿಪ ಸುಮಚರಣವ ನೋಳ್ಪೆನೋ ಬಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾಲಕೌಸ್ತುಭ ಸತ್ಯಭಾಮಲೋಲ ನೀಲಶಾಮಸುಂದರ ಕಾಲಕಾಲದಿ ಬಿಡದೆ ಎನ್ನ ಪಾಲಿಸಭವನೆ ಪ ಭುವನವೀರೇಳು ಸೂತ್ರಧಾರ ಭವದರೋಗಕ್ವೈದ್ಯ ಭಕ್ತಭಯ ಪರಿಹಾರ ಸತ್ಯ ಬುವಿಜಾಮನೋಹರ 1 ಕೋಮಲಾಂಗ ಭಜಕಜನರ ಕಾಮಿತಾರ್ಥ ಕೊಡುವ ಸುರ ಕಾಮಧೇನು ಕಲ್ಪವೃಕ್ಷ ಸ್ವಾಮಿ ದಯಾಕರ 2 ಸಾರ ಮಾಯಾಮೋಹವಿದೂರ ಕೇಶವ 3 ಪರಕೆ ಪರಮ ಪರಾತ್ಪರ ಮರಣರಹಿತ ಮಾರಮಣ ಉರಗಶಾಯಿ ಪರಮಪುರುಷ ಶರಣು ಸುಖಕರ 4 ನಿಗಮವೇದ್ಯ ನಿರುಪಮಾತ್ಮ ಅಗಣಿತಗಣಿತಗಮ್ಯಚರಿತ ಸುಗುಣ ಶಾಂತಾಕಾರ ಮೂರು ಜಗದ ಪಾಲಯಾ 5 ಸಕಲವಿಘ್ನದೂರ ನಿನ್ನ ಭಕುತಿಯಿಂದ ಭಜಿಸಿಬೇಡ್ವೆ ಮುಕುತಿಸಂಪದ ನೀಡಿ ಸಲಹು ಭಕ್ತವತ್ಸಲ 6 ಕಂದಮಾಡಿದಪರಾಧಗಳ ತಂದೆ ದಯದಿ ಕ್ಷಮಿಸಿ ಬಂದ ಬಂಧಗಳನು ಪರಿಹರಿಸಯ್ಯ ಸಿಂಧುಮಂದಿರ 7 ನಾನಾಯೋನಿಯೊಳಗೆ ಪುಟ್ಟಿ ಜ್ಞಾನಗೆಟ್ಟು ಬಳಲುವಂಥ ಹೀನ ಬವಣೆ ತಪ್ಪಿಸಯ್ಯ ದೀನಪಾಲ 8 ನಿರುತ ನಿನ್ನ ಚರಣದೆಡೆಗೆ ಬರುವ ಸುಲಭಮಾರ್ಗ ಆವು ದ್ವರವ ಪಾಲಿಸೊಲಿದು ಎನಗೆ ಕರುಣಸಾಗರ 9 ದೋಷದಾರಿದ್ರ್ಯಗಳೆಲ್ಲ ನಾಶಗೈದು ಹರಿಯೆ ನಿಮ್ಮ ದಾಸನೆನಿಸುದ್ಧಾರಮಾಡು ದೋಷನಾಶನ 10 ಮರೆಯಬಿದ್ದ ತರಳನನ್ನು ಕರುಣದೃಷ್ಟಿಯಿಂದ ನೋಡಿ ಸರ್ವಭಯ ಪರಿಹಾರಮಾಡು ಹರಿಸರ್ವೋತ್ತಮ 11 ನಿನ್ನ ಒಲವು ಬಲವು ಎನಗೆ ಅನ್ಯಬಲವ ಒಲ್ಲೆಸ್ವಾಮಿ ಮನ್ನಿಸಬೇಕಿನ್ನು ಮಗನ ಸನ್ನುತಾಂಗನೆ 12 ನಂಬಿ ಭಜಿಪ ಬಕ್ತಜನರ ಇಂಬುದಾಯಕ ನೀನು ಇಂಬುಗೊಟ್ಟು ಸಲಹು ಎನ್ನ ಅಂಬುಜಾಕ್ಷನೆ 13 ಏನುತಪ್ಪು ಇರಲು ನೀನೆ ದಯದಿ ಕ್ಷಮಿಸಿ ಇನ್ನು ನಾನಾಬೇನೆ ಕಳೆದು ಕಾಯೊ ಜಾನಕೀಶನೆ 14 ಚಾರುವೇದ ಪೊಗಳುವಂಥಪಾರ ನಿನ್ನ ದಿವ್ಯಮೂರ್ತಿ ತೋರಿಧನ್ಯನೆನಿಸು ಎನ್ನ ನಾರಸಿಂಹನೆ 15 ಭಾರ ನಿನ್ನದಯ್ಯ ಬಂದ ಘೋರ ತಾಪತ್ರಯಂಗಳಿಂದ ಪಾರುಮಾಡಿ ಕಾಯುವುದು ಕಾರುಣ್ಯ ನಿಧೆ 16 ಪ್ರಾಣಹಾರಿ ಹೋಗಲು ನಿನ್ನ ಧ್ಯಾನವಗಲದಂತೆ ಎನಗೆ ತ್ರಾಣಪಾಲಿಸಯ್ಯ ಮೊದಲು ಧ್ಯಾನದಾಯಕ 17 ದಾಸನರಿಕೆ ದಯದಿ ಪೂರೈಸಿ ಕಾಯಬೇಕು ದೇವ ಘಾಸಿಗೈಯದೆ ರಕ್ಷಿಸಯ್ಯ ದಾಸಪ್ರಿಯನೆ 18 ಕೆಟ್ಟಶಕುನರಿಷ್ಟ ಸ್ವಪ್ನ ತಟ್ಟಬೇಕೆ ನಿನ್ನ ಪಾದ ನಿಷ್ಠೆಯಿಂದ ಭಜಿಪರ್ಗೆ ಸೃಷ್ಟಿಕರ್ತನೆ 19 ನಿತ್ಯ ನಿರ್ಮಲಾತ್ಮ ನಿನ್ನ ನಿತ್ಯಭಕ್ತಿ ಸುಖವನಿತ್ತು ಸತ್ಯಸಂಧನೆನಿಸು ಎನ್ನ ಸತ್ಯರಾಧಾರ 20 ಮರವೆ ತರಿದು ಹರಿಯೆ ನಿಮ್ಮ ಕರುಣ ನೀಡಿ ಮರಣ ಭಯವ ಪರಿಹರಿಸಯ್ಯ ಸಿರಿಯವಲ್ಲಭ 21 ಭಾನುಕೋಟಿಪ್ರಕಾಶ ನಿನ್ನ ಧ್ಯಾನಿಸಿ ಮರೆಹೊಕ್ಕೆ ನಾನಾಬೇನೆ ಗೆಲಿಸಿ ಕಾಯೊ ದಾನವಾಂತಕ 22
--------------
ರಾಮದಾಸರು
ಮೂರ್ತಿ ಶ್ರೀಗಣರಾಯಗೆ ಪ ಶರ್ವಾಣಿಸುತ ಚತುರ್ದಶ ವಿದ್ಯದಾಗರ | ಸರ್ವಗುಣಾಂಬುಧಿ ಗಜಮುಖಗೆ | ಊರ್ವಿಯೊಳಗೆ ತನ್ನ ಚರಣವ ನೆನೆವರ | ನಿರ್ವಿಘ್ನದಲಿ ಕಾವ ದಯಾನಿಧಿಗೆ 1 ರನ್ನ ಮುಕುಟ ದಿವ್ಯ ಕುಂಡಲಧಾರಿಗೆ | ಪನ್ನಗ ಭೂಷಣ ಚತುರ್ಭುಜಗೆ | ಸನ್ನುತ ಪರಶಾಂಕುಶವನು ಪಿಡಿದಗೆ | ಮೂಷಕ ವಾಹನಗೆ 2 ಸಮಚರಣಾಂಬುಜ ಸುರವರವಂದ್ಯಗೆ | ಕಮಲಸಕನ ತೇಜ ಗೆದ್ದವಗೆ | ವಿಮಲ ಮತಿಯ ನೀವ ಸಿದ್ದಿಧೀರೇಶಗೆ | ನಮೋಎಂಬೆ ಮಹೀಪತಿ ಸುತಪ್ರಿಯಗೆ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮೃಡ ಶಂಭೋ | ಪ ಅದ್ರಿಧರ ಪ್ರಿಯ ಅದ್ರಿ ಕೃತಾಲಯ | ಅದ್ರಿಜಾಮಾತಾದ್ರಿ ರಿಪುನುತ | ಪತಿ ಪಾಪಾದ್ರಿ ಕುಲಿಶಕನ | ಕಾದ್ರಿಶರಾಸನ ಮುದ್ರಿತ ಪಾಣೇ1 ಉನ್ನತದಿಂದಲಿ ಮನ್ಮಥ ಬರಲುದ | ಹನ್ಮಾಡಿದ ಷಣ್ಮುಖ ಜನಕನೆ | ಸನ್ನುತ ಲೀಲಾ | ಜನ್ಮರಹಿತ ಘನ ಚಿನ್ಮಯ ರೂಪಾ || 2 ಬರಿಸಿದೆ ಗಂಗೆಯ ನಿರಿಸಿದೆ ಜಡೆಯೊಳು | ಧರಿಸಿದೆ ಚಂದ್ರನ ಮೆರೆಸಿದೆ ಭಕ್ತರ | ಗುರುಮಹೀಪತಿ ಯಂಕುರಿಸಿದ ಬಾಲನ | ಸಿರಸದಲಿಡು ನಿಜ ಪರಸದ ಕೈಯಾ | 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮೋಕ್ಷವಿಲ್ಲಾ | ಗುರು ಕೃಪೆ ವಿನಾ ಪ ಮಾನ್ಯ ಸ್ವದೇಶದಿ ಧನ್ಯ ವಿದೇಶದ | ಉನ್ನತ ಕುಲದುತ್ಪನ್ನ ನೋಡಲು | ಸನ್ನುತ ಕರ್ಮಗಳನ್ನಸುವ ಸಂ | ಪನ್ನನು ಗುಣದಲಿ ಮುನ್ನಾಗೇನು 1 ಪುಸ್ತಕ ಹಿಡಿಯಲು ವಸ್ತು ಬೃಹಸ್ಪತಿ | ವಿಸ್ತರಿಸ್ಹೇಳುವ ಶಾಸ್ತ್ರದರ್ಥವ | ದುಸ್ತರ ಯೋಗದ ನಿಸ್ತರಿಸುವ ಘನ | ಪ್ರಸ್ತುತ ತಪಸಭ್ಯಸ್ತ್ರಾಗೇನು 2 ಸುಂದರಿ ಮಾನಿನಿಗೊಂದೇ ಮಂಗಳ | ಹೊಂದದೇ ಆಭರಣೆಂದೇನು ಫಲ | ಇಂದಿರೆ ಪತಿ-ವಲುವಂದದಿ ಭಾವದಿ | ತಂದೆ ಮಹಿಪತಿಗೊಂದಿಸದನಕಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಾಕೆ ಕೃಪೆ ಬಾರದೋ ನಿನಗ್ಯಾಕೆ ದಯಬಾರದೊ ಪ ಲೋಕರಕ್ಷಕ ದುಷ್ಟಕಾಲಶಿಕ್ಷಕ ನಿನಗ್ಯಾಕೆ ಅ.ಪ ಪಕ್ಷಿವಾಹನನೆನಿಸಿ ಲಕ್ಷಿಸದಿರಲು ಲೋಕದಿ ಲಕ್ಷಣವೆಲ್ಲವು ಶುಭಲಕ್ಷಣ ಮೂರುತಿ ನಿನಗ್ಯಾಕೇ 1 ಕುಕ್ಷಿಯೊಳೀ ಜಗವನಿಟ್ಟು ರಕ್ಷಿಸುವ ಲಕ್ಷ್ಮೀಪತಿ ದಕ್ಷಿಣ ಶೇಷಾದ್ರಿವಾಸ ರಕ್ಷಿಸು ನಿನಗ್ಯಾಕೇ ಕೃಪೆ 2 ವಾಸವಸನ್ನುತ ಶ್ರೀನಿವಾಸ ನಿನ್ನದಾಸನೊಳು ದೋಷವನೆಣಿಸದೆ ಕಾಯೊ ದೋಷರಹಿತನೆ ನಿನಗ್ಯಾಕೆ 3 ಶುಭ ದೃಷ್ಟಿಯಿಂದ ನೋಡಿ ಎನ್ನ ಕಷ್ಟವ ಬಿಡಿಸಿ ಮನದಿಷ್ಟವ ಪಾಲಿಸು 4 ವಾರಣವರದಭವ ತಾರಣ ಚರಣ ಗುಣ ಪು ರಾಣ ವರದವಿಠಲ ಕಾರುಣಿಕರರಸ ನಿನಗ್ಯಾಕೇ 5
--------------
ವೆಂಕಟವರದಾರ್ಯರು
ಯಾಕೆ ಕೃಪೆ ಬಾರದೋ-ಲೋಕರಕ್ಷಕ ನಿನಗ್ಯಾಕೇ ಪ ಲೋಕ ರಕ್ಷಕ ದುಷ್ಟಕಾಕ ಶಿಕ್ಷಕ ನಿನಗ್ಯಾಕೇ ಅ.ಪ. ಪಕ್ಷಿವಾಹನನೆಸಿ ಲಕ್ಷಿಸದಿರಲು ಲೋಕದಿ ಶುಭ ಲಕ್ಷಣ ಮೂರುತಿ ನಿನಗ್ಯಾಕೆ ಕೃಪೆ 1 ಕುಕ್ಷಿಯೊಳೀ ಜಗವನಿಟ್ಟು ರಕ್ಷಿಸುವ ಲಕ್ಷ್ಮೀಪತಿ ದಕ್ಷಿಣಶೇಷಾದ್ರಿವಾಸ ರಕ್ಷಿಸುವ ನಿನಗ್ಯಾಕೇಕೃಪೆ 2 ಸನ್ನುತ ಶ್ರೀನಿವಾಸ ನಿನ್ನ ದಾಸನೊಳು ದೋಷವೆಣಿಸದೆ ಕಾಯೊದೋಷರಹಿತನೆ ನಿನಗ್ಯಾಕೇ 3 ಶುಭ ದೃಷ್ಟಿಯಿಂದ ನೋಡಿಯನ್ನ ಕಷ್ಟವ ಬಿಡಿಸಿ ಮನದಿಷ್ಟವ ಪಾಲಿಸು 4 ಭವ ತಾರಣ ಚರಣಗುಣ ಪೂರಣ ವರದ ವಿಠಲ ಕಾರುಣಿಕರರಸನಿನಗೆ5
--------------
ಸರಗೂರು ವೆಂಕಟವರದಾರ್ಯರು
ಯಾಕೆ ನಿರ್ದಯನಾದೆ ಲೋಕೇಶ ಪ್ರಭುವೆ ಸಾಕಲಾರದೆ ಎನ್ನ ನೂಕಿ ಭವದೊಳಗೆ ಪ ನಿನ್ನ ನಾಮಸ್ಮರಣೆ ಮಾಡದಲೆ ಹಗಲಿರುಳು ಅನ್ಯ ವಿಷಯಗಳಿಂದ ನೊಂದು ಬಳಲಿದೆನೊ ನಿನ್ನ ಧ್ಯಾನವ ಮಾಳ್ಪಚ್ಛಿನ್ನ ಭಕ್ತರೊಳಿರಿಸಿ ಚನ್ನಾಗಿ ಸಲಹೊ ಪ್ರಸನ್ನ ಮಾಧವನೆ 1 ಆಪನ್ನ ಜನರನು ಪೊರೆದೆ ಸನ್ನುತಾಂಗನೆ ದೇವ ಸರ್ವವ್ಯಾಪಕನೆ ಪನ್ನ ಗಾರಿವಾಹನ ಪ್ರಸನ್ನ ಶ್ರೀಹರಿ ಶೌರಿ ಎನ್ನ ಕಡೆಹಾಯಿಸಯ್ಯ ಜೀಯ 2 ಅಕ್ಷಯ ಫಲಪ್ರದ ಪಕ್ಷಿವಾಹನ ಕೃಷ್ಣ ಕುಕ್ಷಿಯೊಳು ಜಗವನಿಂಬಿಟ್ಟ ಶ್ರೀ ಹರಿಯೆ ರಕ್ಷ ಶಿಕ್ಷಕ ಜಗದ್ರಕ್ಷ ಪಾಂಡವ ಪಕ್ಷ ಈಕ್ಷಿಸಿ ಎನ್ನನುದ್ಧರಿಸಿ ಸಲಹದಲೆ3 ಪರಿಪರಿಯ ಕಷ್ಟಗಳ ಪರಿಹರಿಸಿ ಭವದೊಳಗೆ ದುರಿತದೂರನೆ ಕಾಯೊ ಶರಣ ಜನರ ಪರಿಸರನೊಡೆಯ ನಳನಾಮ ಸಂವತ್ಸರದಿ ಕರೆಕರೆಯ ಕಷ್ಟಗಳ ಬಿಡಿಸಿ ಸಲಹದಲೆ4 ಕನಕಗರ್ಭನ ಪಿತನೆ ಕಮಲನಾಭ ವಿಠ್ಠಲ ಮಿನಗುತಿಹ ದಿವ್ಯ ಸೌಂದರ್ಯ ಮೂರುತಿಯೆ ಸನಕಾದಿ ಮುನಿವಂದ್ಯ ಕ್ಷಣ ಬಿಡದೆ ಸ್ಮರಿಸುವರ ಇನಕುಲೇಂದ್ರನೆ ದೇವ ಬಿಡದೆ ಸಲಹದಲೆ5
--------------
ನಿಡಗುರುಕಿ ಜೀವೂಬಾಯಿ
ಯಾಕೆ ಬಾರನೇ ರಂಗಯ್ಯ ಯಾಕೆ ಬಾರನೇ | ಲೋಕವೀರೇಳು ವ್ಯಾಪಕ ಸುಖವವಿರಲು ಮನೆಗೆ ಧ್ರುವ ಸ್ಮರನ ಬಾಣದ ಮೊನಿಗೆ | ಗುರಿಯಮಾಡಿ ತಾಯೆನೆಗೆ | ಸಾರುವರೇ ಎನ್ನಗಲಿ ತರಳೆಯಂದರುವುತಲಿ 1 ಕಡೆಗೆ ಕರುಣಾಳು ನಮ್ಮ ವಡಿಯಾನೊಳೂ ತಪ್ಪಿಲ್ಲಮ್ಮಾ | ಪೊಡವಿಲೆ ಪೆಣ್ಣೊಡಲೆ ವಿಡಿಯಬಾರದು ಬಾಲೆ 2 ಎನ್ನ ಮನಾ ಎನೊಲ್ಲದು ಕಣ್ಣಿಗೆ ನಿದ್ರೆಬಾರದು | ಸನ್ನುತ ಮಹಿಪತಿ ಪ್ರೀಯಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಯಾವದು ಸುಖವೇ ಮತ್ಯಾನಂದವೇ ಪ ಈ ಉಡುಪಿಯ ಯಾತ್ರೆ ಮಾಡಿದ ಮನುಜಗೆ ಅ.ಪ. ಮನದಲಪೇಕ್ಷಿಸೆ ಅವನಿಗೆ ಹದಿನಾಲ್ಕು ಕನಕನ ಚಿತ್ತನಾಗಿ ಗೋಕುಲದಿಂದ ಸ ಜ್ಜನ ಮಾರ್ಗದಲಿ ಗುಣವಂತನೆನಿಸಿಕೊಂಬ 1 ಒಂದು ಹೆಜ್ಜೆಯನಿಟ್ಟು ಸಾಗಿ ಬರುತಲಿರೆ ಅಂದೆ ಸುರರೊಳು ಗಣನೆ ಎನ್ನೆ ಒಂದಕ್ಕೆ ನೂರಾರು ಯಾಗ ಮಾಡಿದ ಫಲ ತಂದು ಕೊಡುವ ಅಜನಾದಿಕಲ್ಪ ಪರಿಯಂತ2 ಅರ್ಧ ಮಾರ್ಗದಿ ಬರಲು ಬಂದು ನಿಲ್ಲಲು ಅವರ ಸಾಗರದಿ ಕೋಟಿ ಸ್ನಾನ ಮಾಡಲು ಊಧ್ವರೇತಸ್ಥನಾಗಿರ್ದ ಫಲವಕ್ಕೆ ಪರಿಯಂತ 3 ಸನ್ನುತ ಸಾಧನವನು ಮಾಡಲು ಸನ್ನುತರ ತೆಗೆದು ಜ್ಞಾನ ಭಕುತಿ ಸಂ ಪನ್ನವಿರಕುತಿಗೆ ಯತಿಗಾದಿ ಮುಖನಾದ4 ಕರವ ಜೋಡಿಸಿ ನಿಂದು ದೃಷ್ಟಿಯಿಂದಲಿ ನೋಡಿದವನೆ ಮುಕ್ತಾ ಮುಟ್ಟಿ ಭಜಿಸುವರ ಸತ್ಪುಣ್ಯ ವಿಜಯವಿಠ್ಠಲನಾತನೆ ಬಲ್ಲ ಅರುಹಲಳವಲ್ಲ 5
--------------
ವಿಜಯದಾಸ