ಒಟ್ಟು 354 ಕಡೆಗಳಲ್ಲಿ , 70 ದಾಸರು , 319 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೊಡೀ ನಗಾರಿ ಮೇಲೆ ಕೈಯಾ ಕಡ ಕಡ ಪ ದೃಢಮತಿಯಲಿ ಕಡು ವಾದಿರಾಜರು ರುಜುಗುಣಪರೆಂದ್ಹೊಡೇ ಅ.ಪ. ಕಾಮನಯ್ಯನ ನೇಮದಿ ಸ್ಮರಿಸುವ ಕಾಮರಹಿತ ನಿಷ್ಕಾಮ ಕರೆವರೆಂದ್ಹೊಡೀ 1 ಅವನಿಯೊಳಗೆ ತಾ ಬಂಧುರ ಕುಲೇಂದ್ರಿನಿ ಗೊಲಿದವ ನಿಂದ್ಯಂದ್ಯರೆಂದೊಡಿ2 ಮೋದ ಮುನಿಯ ಮತ ಮೋದದಿ ಸಾಧಿಪ ಸದ್ವಾದಿರಾಜ ಗುರು ಮೋದತೀರ್ಥರು ಸಮರೆಂದ್ಹೊಡಿ 3 ಶೋಣಿತ ಶೂನ್ಯರಿವತೆಂದ್ಹೊಡಿ4 ಕಾಮಿನಿಗೋಸುಗ ಪ್ರೇಮದಿ ಕುಸುಮವ ತಂದಿಟ್ಟತುಳ ಭೀಮನ ಸರಿಸಮರಿವತೆಂದ್ಹೊಡಿ 5 ಸೀತೆಯಗೋಸುಗ ಸೇತುವೆಗಟ್ಟಿದ ರಘುನಾಥನ ಪ್ರೀತಿಯ ಘನವಾತನಪದ ಪೊಂದುವರೆಂದ್ಹೊಡಿ 6 ಇಂದಿರೇಶನ ಪದಮಂದಿರದಲಿ ಭಜಿಸುವ ನಂದಿವಾಹ ಮುಖವೃಂದ ವಂದ್ಯರೆಂದ್ಹೊಡಿ 7 ವೃಂದಾವನದೊಳು ಕೂತುಚ್ಛಂದದಿ ದ್ವಿಜರಿಗೆ ಬೋಧಿಪರಿವರೆಂದ್ಹೊಡಿ 8 ಕಂತುವಿನಲಿ ತಾನಿಂತು ಜಪಿಸುವ ತಂದೆವರದಗೋಪಾಲವಿಠಲನ ಪ್ರೀತಿಮಂತ್ರಿಯೆನಿಪವರೆಂದೊಡಿ 9
--------------
ತಂದೆವರದಗೋಪಾಲವಿಠಲರು
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ)ಶ್ರೀನಿವಾಸಾಯ ನಮೋ ಪ.ಶ್ರೀನಿವಾಸಾಯ ಶತಭಾನುಪ್ರಕಾಶಾಯಶ್ರೀನಿವಾಸಾಯ ನಿಜ ಭಕ್ತಜನಪೋಷಾಯಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ.ದೋಷಗಂಧವಿದೂರ ಕೇಶಿಮುಖದಾನವ ವಿ-ನಾಶವಿಧಿಭವಸುಖನಿವಾಸ ವಾಸುಕಿಶಯನವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ-ಭೂಷ ಭೂತಾತ್ಮ ಭವಪಾಶಹರ ಪರತರ ದ-ಯಾ ಸಮುದ್ರ ವಿನಿದ್ರ ಭೂಶಯನ ಭೂರಿಪ್ರದಕೇಶವಾಯ ನಮೋನಮಃ 1ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತನಾರದಾದಿಮುನೀಂದ್ರವಾರಸನ್ನುತಪಾದನೀರರುಹದ್ವಂದ್ವನೆವಾರಿಜಾಸನಮುಖ್ಯಸುರರುತಿಳಿಯರು ನಿನ್ನಭೂರಿಮಹಿಮೆಗಳ ಸಾಕಾರವನು ಬಣ್ಣಿಸುವಧೀರನಾವನು ಮಹಾ ವೀರ ವಿಶ್ವಾಧಾರನಾರಾಯಣಾಯ ನಮೋ 2ವೇದವೇದ್ಯನೆ ದುರಿತಶೋಧನೆ ದೈತ್ಯಗಣ-ಛೇದಕನೆ ಸುರಸುಪ್ರಸಾದಕನೆ ಭಕ್ತಜನ-ಮೋದದಾಯಕ ಸ್ವಗತ ಭೇದವರ್ಜಿತಸಮಾನಾಧಿಕ್ಯರಹಿತ ಸತತಆದಿತ್ಯ ಶತಕೋಟಿತೇಜೋವಿರಾಜ ಮಹ-ದಾದಿಕಾರಣ ಮಧುವಿರೋಧಿ ಮಂಗಲಸುಖಾಂ-ಬೋಧಿ ಪದ್ಮಾಲಯವಿನೋದಿ ರಾಧಾರಮಣಮಾಧವಾಯ ನಮೋನಮಃ 3ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು-ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ-ನಂದ ಭರಿತ ಕಾಳಿಂದೀರಮಣ ರಾಮಚಂದ್ರಸನ್ನುತಮಹೇಂದ್ರವಂದಾರುಜನತ್ರಿದಶಮಂದಾರ ಕೋಮಲಿತವೃಂದಾವನವಿಹಾರ ಕಂದರ್ಪಜನಕ ಬಾ-ಳೇಂದುಶೇಖರಸಖ ಸನಂದನಾರ್ಚಿತ ಶ್ರೀಗೋವಿಂದಾಯತುಭ್ಯಂ ನಮಃ 4ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷಮುಷ್ಟಿಕಾಸುರವೈರಿ ಮುನಿಜನಮನೋಹಾರಿಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆತುಷ್ಟಿಯನು ನೀನಿತ್ತು ಸಲಹೊ ಸಾಮಜವರದಬೆಟ್ಟದೊಡೆಯನೆ ಕೃಪಾದೃಷ್ಟಿಯಿಂದಲಿನೋಡುವಿಷ್ಣವೇತುಭ್ಯಂ ನಮೋ 5ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತಬುಧಜನಪ್ರಿಯ ಭೂತಭಾವನ ಜಗನ್ನಾಥಪದುಮಾಕ್ಷ ಪಾಂಡವಪ್ರತಿಷ್ಠಾಪನಾಚಾರ್ಯಮದನಕೋಟಿಸ್ವರೂಪವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ-ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸವಿಧುಮಂಡಲಸ್ಥ ಸದ್‍ಹೃದಯಪಂಕಜವಾಸಮಧುಸೂದನಾಯ ನಮೋ 6ಅಕ್ರೂರವರದ ಸದತಿಕ್ರಮರ ಗೆಲಿದ ಹಯ-ವಕ್ತ್ರವೈಕುಂಠಾಖ್ಯ ಪುರವಾಸ ಜಗದೀಶಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನುಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ-ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿನಕ್ರಮದಹರನಾದ ಬ್ರಹ್ಮ ಗಂಗಾಪಿತತ್ರಿವಿಕ್ರಮಾಯ ನಮೋನಮಃ 7ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು-ದಾಮಸಖ ಪರಿಪೂರ್ಣಕಾಮ ಕೈರವದಳ-ಶ್ಯಾಮ ಕಲ್ಯಾಣ ನಿಸ್ಸೀಮ ಮಹಿಮನೆಸುಜನಸ್ತೋಮಸುರಕಾಮಧೇನುಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ-ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ-ರಾಮ ವಿಷ್ವಕ್ಸೇನ ವಿಶ್ವತೈಜಸಪ್ರಾಜÕವಾಮನಾಯ ನಮೋನಮಃ8ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ-ರಾಧಭಂಜನ ಭವಾಂಬೋಧಿಕುಂಭಜ ಭಜಕ-ರಾದವರನುದ್ಧರಿಪ ಬೋಧರೂಪನೆಚತುಷ್ಟಾದ ಪಾವನಚರಿತನೆಗಾಧಿಜಾಧ್ವರಪಾಲ ಗರುಡಧ್ವಜ ದಯಾಳುನಾದಬಿಂದು ಕಲಾತೀತ ರುಕ್ಮಿಣಿನಾಥಬಾದರಾಯಣನೆ ನಿರುಪಾಧಿ ಮಾಯಾತೀತಶ್ರೀಧರಾಯ ನಮೋನಮಃ 9ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ-ಕಾಶ ಪಾಲಿತನಿಖಿಳಭೂಸುರವ್ರಜ ಮಂದ-ಹಾಸಮುಖ ನವಕುಂದಭಾಸರದನವಿರಾಜದೂಷಣಾದ್ಯ ಸುರಹರನೆಈಶಪತಿಸೇವ್ಯಾಂಬರೀಶನೃಪವರದ ಪರ-ಮೇಶ ಕೋವಳಪೀತವಾಸ ಕರ್ದಮಶುಕಪ-ರಾಶರಾದ್ಯಮಿತಯೋಗೀಶರಕ್ಷಕಹೃಷೀಕೇಶಾಯ ತುಭ್ಯಂ ನಮೋ 10ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ-ಸಿದ್ಧ ಪೂಜ್ಯ ಪುಂಡರೀಕದಳಾಕ್ಷಬುದ್ಧಬುಧಜನಸುಲಭಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇತದ್ವೀಪವೈಕುಂಠಮಂದಿರತ್ರಯ ಸಾಧು-ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11ಸಾಮಗಾನವಿನೋದ ಸಾಧುಜನಸುಖಬೋಧಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತವ್ಯೋಮಯಾನವರೂಥ ಓಂಕಾರಭರಿತ ರಘುರಾಮಸಮರಂಗ ಭೀಮನಾಮಧಾರಕರ ಪರಿಣಾಮರೂಪಕ ಸುಜನ-ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣಭೌಮಪುರುಷೋತ್ತಮ ನಿಯಾಮಕನೆ ರಕ್ಷಿಸೈದಾಮೋದರಾಯ ನಮೋ 12ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯವೆಂಕಟಾಚಲಸದಾಲಂಕಾರ ಶೇಷಪರಿ-ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತಓಂಕಾರನಿಧನ ಸಾಮಕಭಕ್ತರಾನೇಕಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ13ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದುಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯಸೂಸಿಬಹ ಸಂಸಾರಸಾಗರದಿ ಮುಳುಗಿದೆನುನೀ ಸಲಹೊ ದೇವದೇವಭೂಸಲಿಲಪಾವಕಾಕಾಶಾದಿ ಭೂತಾಧಿ-ವಾಸ ರಾಕ್ಷಸವನಹುತಾಶ ನಾನಾ ರೂಪ-ವೇಷಧಾರಕ ನರಾವೇಶ ಪಾಲಿಸು ಎನ್ನವಾಸುದೇವಾಯ ನಮೋ 14ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ-ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ-ಬದ್ಧಕಮನೀಯರೂಪಸುತಪದುರಾಪಪ್ರದ್ಯುಮ್ನಾಯ ತುಭ್ಯಂ ನಮಃ 15ಉದ್ಧವಾದಿ ಸಮಸ್ತ ಭಾಗವತಜನಕಮಲ-ಮಧ್ಯಚರರಾಜಹಂಸಾಯ ಮಾನಸದಶ್ರದ್ಧೆಯಂ ಕೊಟ್ಟು ರಕ್ಷಿಸು ಧೊರೆಯೆಶ್ರೀಹರಿಯೆ ವೈದ್ಯನಾಥವಿಧಾತನೆಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ-ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆಹೊದ್ದಿದೆನು ಮೈದೋರು ಚಿನುಮಯಾತ್ಮಕನೆಅನಿರುದ್ಧಾಯ ತುಭ್ಯಂ ನಮಃ 16ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷಪರತರಾವ್ಯಯಲೋಕಭರಿತಮಂಗಲರಿತ ಗುರುತಮ ಗುಣಧ್ಯಕ್ಷನೆಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದಶರಭಂಗಮುನಿಪಾಲ ಶಮಿತದಾನವಜಾಲಧುರವಿಜಯ ವಿಜಯಮೈದುನ ಕೃಷ್ಣ ರಕ್ಷಿಸೈಪುರುಷೋತ್ತಮಾಯನ್ನಮೋ 17ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್-ವಿಶ್ವತೋಮುಖ ವಿಶ್ವತೋಬಾಹು ಕರುಣಾಕ-ಟಾಕ್ಷದಿಂ ನೋಡೆನ್ನಮ್ಯಾಲೆದಯಮಾಡು ಶ್ರೀವಕ್ಷಸ್ಥಲನಿವಾಸನೆಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ-ಮೋಕ್ಷದಾಯಕ ಯಜÕಮೂರ್ತಿ ರೂಪತ್ರಯ ಮ-ಹೋಕ್ಷಧ್ವಜನಂ ಮೋಹಿಸಿದ ಮೋಹಕಲ್ಪಅಧೋಕ್ಷಜಾಯ ನಮೋನಮಃ 18ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು-ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ-ಹಾರವಕುಲಿಶ ಶತಕೋಟಿಸದೃಶನಶಿರಪ್ರಕರಧೀರ ಪ್ರಹ್ಲಾದಾಭಿವರದಭೂರೀಕರರೂಪ ಭೂಮಕೀರ್ತಿಕಲಾಪಸಾರವಜ್ರಸ್ತಂಭದಿಂ ಬಂದ ನಂದ ಸುಕು-ಮಾರಮಾರ್ಕಾಂಡೇಯವರದ ಲೋಕಶರಣ್ಯನಾರಸಿಂಹಾಯ ನಮೋ 19ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ-ನ್ನಿಚ್ಛೆಯಿಂದಲಿ ಜಗವ ಪಾಲಿಸುವನಿರ್ಮಿಸುವ ಆಶ್ಚರ್ಯಕೃತಸಲೀಲಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ-ಕಚ್ಛಪನೆ ಕಾಳೀಯಮರ್ದನಮಹಿತಶ್ರೀಮದಚ್ಯುತಾಯ ನಮೋನಮಃ 20ಚೈದ್ಯಮಥನ ಮನೋಜÕಶುದ್ಧಾತ್ಮ ಸರ್ವಜÕಯುದ್ಧದಲಿ ಸೈಂಧವನ ಶಿರವ ಕೆಡಹಿಸಿ ಜಯವಹೊದ್ದಿಸಿದ ಪಾರ್ಥನಿಂಗೆಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ-ವಿದ್ದ ಮಾನಸವ ಪಾದದ್ವಯದೊಳಿರಿಸೈ ದ-ಯಾದ್ರ್ರಚಿತ್ತ ಸ್ವಭಕ್ತಸಂಸಾರಿ ಕಾಯೆಜನಾರ್ದನಾಯ ನಮೋನಮಃ 21ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದನಂದಗೋಪನ ಕಂದನೆನಿಸಿ ಬಾಲಕತನದಚಂದಮಂ ತೋರಿಸಿದ ಕುಬುಜೆಗಂಧಕೆ ಒಲಿದಸುಂದರೀರಮಣ ಜಯತುತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ-ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ-ನಿಂದಾದಿ ದೋಷಗಳ ಮಾಡಿ ಬಳಲುತ್ತಿಹರ್ಉಪೇಂದ್ರಾಯ ತುಭ್ಯಂ ನಮಃ 22ಸ್ಥಿರಚರಾತ್ಮಕ ಧೇನುಚರ ದೇವಕೀಜಠರ-ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥಪರಮತೇಜೋಮಯ ಪುರಾಣಪುರುಷೇಶ್ವರನೆದುರಿತದೂರ ಗಭೀರನೆನಿರತಿಶಯನಿಜನಿರ್ವಿಕಲ್ಪ ಕಲ್ಪಾಂತಸಾ-ಗರದಿ ವಟಪತ್ರಪುಟಶಯನ ಪುಣ್ಯಶ್ರವಣಪುರುಷನಾಮಕ ಪುಷ್ಕರಾಕ್ಷ ಶ್ರೀಕರನೆ ಜಯಹರಯೇ ನಮೋನಮಸ್ತೇ 23ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ-ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ-ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾದುಷ್ಟ ನರಕಾದಿದಾನವರ ಮರ್ದಿಸಿದ ಜಗ-ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ-ಶ್ರೇಷ್ಠನಂ ಘಾತಿಸಿದ ರಾಮಾನುಜನೆಹರೇ ಕೃಷ್ಣಾಯ ತುಭ್ಯಂ ನಮಃ 24ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ-ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು-ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ-ಶಿಕ್ಷಕ ಪರೀಕ್ಷಕನೆ ಪವನವಾಹನಲಕ್ಷ್ಮೀನಾರಾಯಣಾಯ ನಮೋ25
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಮೂಲ್ಕಿಯ ಮಹಾಲಿಂಗೇಶನನ್ನು ನೆನೆದು)ಪಿಡಿಯೆನ್ನ ಕೈಯ ಜಗನ್ಮಯಪಿಡಿಯೆನ್ನ ಕೈಯ ಪ .ಪಿಡಿಯೆನ್ನ ಕೈಯ ನಿನ್ನಡಿದಾವರೆಯಲ್ಲಿದೃಢವಾದ ಮನವ ಬೆಂಬಿಡದೆನಗೀಯಯ್ಯ ಅ.ಪ.ಪಾಮರಮತಿಯ ಪಾಪಾತ್ಮರ ಸೀಮಾಧಿಪತಿಯಕಾಮುಕಪರದಾರಭ್ರಾಮಕತಾಮಸ-ಧಾಮನ ಕಪಟವಿಶ್ರಾಮ ಕುಧೀಮನವ್ಯೋಮಕೇಶಭಗತ್ಪದಾಶ್ರಿತನ ಮಮಕಾರದಲಿ ಪಾಲಿಸುಹೈಮವತಿಪತಿ ಕಾಮಹರ ಸುತ್ರಾಮವಂದಿತ ಸೋಮಶೇಖರ 1ದುಷ್ಟದುರ್ಜನನ ದುರಾಚಾರ ಭ್ರಷ್ಟಜೀವನನಮೆಟ್ಟಿದ ನೆಲಮುನಿಯುವನ ಕೃತಘ್ನ ಕ-ನಿಷ್ಟಕಾಯುಷ್ಯದ ಘಟ್ಟಿಚೇತನನೆನ್ನತಟ್ಟನೆ ದಯವಿಟ್ಟು ಸರ್ವಾಭೀಷ್ಟದಾಯಕನಾಗಿ ಕರುಣಾ-ದೃಷ್ಟಿಯಿಂದಲಿನೋಡುಸನ್ಮನವಿಷ್ಟರಸ್ಥ ಶಿವಾಷ್ಟಮೂರುತಿ2ಸತ್ಯಬಾಹಿರನ ಪ್ರಪಂಚ ಪ್ರ-ವೃತ್ತಿಯೊಳಿಹನಅತ್ಯಂತ ಪಾಪಿ ಕುಚಿತ್ತ ಮದಾಂಧನು-ನ್ಮತ್ತ ಮಾತಂಗವಿರಕ್ತಿವಿಹೀನನಎತ್ತಿ ಎನ್ನತ್ತಿತ್ತ ನೋಡದೆ ಮತ್ತೆಕಾವಸಮರ್ಥರಾರೈಸತ್ತ್ವನಿಧಿಸುರಮೊತ್ತ ಪೂಜಿತ ಮೃತ್ಯುಹರ ಶ್ರೀಕೃತ್ತಿವಾಸನೆ 3ಎಣಿಸಲು ಬೇಡ ಎನ್ನಪರಾಧ ಗಣಿತಕ್ಕೆ ಕೂಡಗುಣಗಣನಿಧಿ ಲಕ್ಷ್ಮೀನಾರಾಯಣಸಖದಣಿಯಲೊಲ್ಲೆ ದಯಮಾಡೆನಗೀಗಲೆಫಣಿಪಕುಂಡಲ ಪಾರ್ವತೀಪತಿ ಪ್ರಣತಜನಮಂದಾರ ನಿರ್ಮಲಪ್ರಣವರೂಪನೆ ಮೌಕ್ತಿಕಾಪುರ ಮಣಿಮಹಾಲಿಂಗೇಶ ಬೇಗನೆ4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
4 ಲೋಕನೀತಿ294ಅಂದೇನಿಂದೇನಯ್ಯ ಶ್ರೀಅರವಿಂದನಾಭನ ಹಗೆಯವ ಅಸುರಎಂದಿಗೆ ಮತಿ ಕವಲಿಲ್ಲದೆ ಹರಿಪದಹೊಂದಿದಗೆ ಮುಕ್ತಿಯವಸರ ಪ.ಅಂದಿಗೆ ಹರಿಮಹಿಮೆಗಳನ್ನು ಆನಂದದಿಂದ ಕೇಳದವ ದ್ವೇಷಿಇಂದಿಗೆ ಹರಿಕಥೆ ತಾತ್ವಿಕ ಜನರನುನಿಂದಿಸುವವನೆ ನಿಜದ್ವೇಷಿ 1ಸರ್ವಹ ಕೃಷ್ಣಾಕೃತಿಗೆ ವೈರ್ಯಾಗಿ ಬಹುಗರ್ವಿಪ ಕಂಸನು ಅತಿತಾಮಸಉರ್ವಿಲಿ ನರಹರಿ ಚರಣವರ್ಚಿಸದೆಶರ್ವಸರ್ವೋತ್ತಮನೆಂಬವತಾಮಸ2ವಾಸುದೇವನ ಪಾಶದಿ ಬಿಗಿಸುವೆನೆಂದುಆಶಿಸಿ ಕೆಟ್ಟ ಕೌರವ ಕುಮತಿದೋಷ ಧರ್ಮವನೆಲ್ಲ ಸರಿಮಾಡಿ ಶಾಕ್ತನಾಗ್ಯಾಸುರಿ[ಯ] ಪೂಜಿಪ ಹೊಲೆ ಕುಮತಿ 3ರುಕ್ಮಿಣಿ ದೇವಿಯೆ ಲಕ್ಷ್ಮಿಯೆಂದು ತಿಳಿಯದರುಕ್ಮನು ಮದಸೊಕ್ಕಿದ ಪಾಪಿಲೆಕ್ಕವರಿಯದೆ ಜೀವೇಶರು ಸಮರೆಂದುಲೆಕ್ಕಿಸುವವ ನರರೊಳು ಪಾಪಿ 4ಕೃತಕ ಹಕ್ಕಿಯನೇರಿ ತಾ ವಾಸುದೇವನೆಂದುಅತಿಕ್ಲೇಶವುಂಡ ಪೌಂಡ್ರಕ ಕಲಿಯುಸಕಳ ಜಗದೊಡೆಯ ಪ್ರಸನ್ವೆಂಕಟೇಶನಭೃತ್ಯನಾಗದೆಯೆ ನಾನೆಂದವ ಕಲಿಯು 5
--------------
ಪ್ರಸನ್ನವೆಂಕಟದಾಸರು
5 ತತ್ವವಿವೇಚನೆ371ಅಂಜನೆಸುತ ನಮೊ ಸ್ವಾಮಿಕಂಜಜಪದಪತಿ ಮೌಂಜಾಶ್ರಮಿ ಪ.ಪತಿತ ಪಾವನನಾಮಧೇಯ ಹನುಮಾಜೆÕಯಿಂದತೀತಾನಾಗತ ಅಜಾಂಡಜೆÕೀಯಾಮೃತ ಸಂಜೀವನಾದಿ ಚತುರೌಷಧ ತಂದೆಕ್ಷತಘಾತ ಪ್ಲವಗರ ಪ್ರತತಿ ರಕ್ಷಿಸಿದೆ 1ವ್ಯಾಘ್ರೇಶ್ವರಾಜಿತ ಸಮರ್ಥ ವಸುಧಾಹೃತಅಗ್ರಜಯಜ್ಞಾಧಿಕರ್ತಉಗ್ರ ಕೌರವಜನ ನಿಗ್ರಹ ಕೃಷ್ಣ ಮತಾಗ್ರಣಿ ಭೀಮ ಸಮಗ್ರ ಸುಜ್ಞಾನಿ 2ದುಷ್ಟೋಕ್ತಿ ಪೂರ್ವಪಕ್ಷಜಾರಿ ಭೇದೋಚ್ಚಾರಿವಿಷ್ಣುಪಕ್ಷ ಸಿದ್ಧಾಂತಸೂರಿಸೃಷ್ಟಿಲಿ ವರದ ವಾಸಿಷ್ಠ ಪ್ರಸನ್ವೆಂಕಟಾಧಿಷ್ಟನ ಪ್ರಿಯ ಮುನಿ ಶಿಷ್ಟರೊಡೆಯ ನೀ 3
--------------
ಪ್ರಸನ್ನವೆಂಕಟದಾಸರು
ಅಪಮಾನವಾದರೆ ಒಳಿತು |ಅಪರೂಪ ಹರಿನಾಮ ಜಪಿಸುವ ಮನುಜಗೆ ಪಮಾನದಿಂದಲಿ ಅಭಿಮಾನ ಪುಟ್ಟವುದು |ಮಾನದಿಂದಲಿ ತಪ ಹಾನಿಯಾಯಿತು ಹಾನಿಯಾಗುವುದು ||ಮಾನಿ ಕೌರವನಿಗೆ ಹಾನಿಯಾಯಿತು-ಅನು-|ಮಾನವಿಲ್ಲವು ಮಾನ-ಅಪಮಾನ ಸಮರಿಗೆ 1ಅಪಮಾನದಿಂದಲಿ ತಪವೃದ್ಧಿಯಾಹುದು |ಅಪಮಾನದಿಂ ಪುಣ್ಯ ಸಫಲವಾಗುವುದು ||ಅಪಮಾನದಿಂದಲಿನೃಪಧ್ರುವರಾಯಗೆ |ಕಪಟನಾಟಕ ಕೃಷ್ಣ ಅಪರೋಕ್ಷನಾದನು2ನಾನೇನ ಮಾಡಲಿ ಆರಲ್ಲಿ ಪೋಗಲಿ |ಕಾನನಚರರಾರಾಧ್ಯ ನೀನಿರಲು ||ದೀನರಕ್ಷಕ ನಮ್ಮ ಪುರಂದರವಿಠಲನೆ |ಏನು ಬೇಡೆನಗಪಮಾನವೆ ಇರಲಿ 3
--------------
ಪುರಂದರದಾಸರು
ಅರ್ಚನೆ ಮಾಡಿರಯ್ಯ ಶ್ರೀ ಭಗವದರ್ಚನೆ ಮಾಡಿರಯ್ಯಅರ್ಚನೆ ಮಾಡುವ ಅರ್ಚಕ ಬುಧರಿಗೆಅರ್ಚಿಪ ಪದದಲ್ಲಿಅಚ್ಯುತದೊರೆವನೆಂದುಪ.ಅಂತರಂಗದ ಶುದ್ಧಿಲಿ ತನ್ನ ಬಾಹ್ಯಂತರ ಪರಿಪೂರ್ಣನಚಿಂತಿಸಿ ಸರ್ವಸ್ವತಂತ್ರ ಶ್ರೀ ಹರಿವೇದತಂತ್ರೋಕ್ತ ಪಥದಿ ನಿರಂತರ ಮರೆಯದೆ 1ಪೃಥುಧ್ರುವ ಅಂಬರೀಶ ಸುಧರ್ಮಜ ದಿತಿಜೋದ್ಭವ ಅಕ್ರೂರಕೃತವರ್ಮ ಸಾತ್ಯಕಿ ಯದುಕುಲ ಸುರಖಷಿಯತಿತತಿ ಅರ್ಚಿಸಿ ಅತಿಧನ್ಯರಾದರೆಂದು 2ಅನಂತಮೂರ್ತಿಯೊಳು ತನಗೊಂದು ಧ್ಯಾನಕ್ಕೆ ತಂದುಕೊಂಡುಆನಂದತೀರ್ಥರ ಸಂತತಿಗಳಿಂದತಾನು ಇಷ್ಟನಾಗಿ ನಾರಾಯಣನಾತ್ಮನೆಂದು 3ಬ್ರಹ್ಮಸ್ತೋತ್ರದಿ ಸಹಸ್ರ ಸನ್ನಾಮಪೂರ್ವಕ ಸ್ತೋತ್ರದಿಶ್ರೀಮತ್ಪಂಚಸೂಕ್ತ ಪಂಚಾಮೃತ ಸ್ನಾನರಮ್ಯಾಯುಧ ಕೌಸ್ತುಭಮಣಿ ಮಾಲೆಯಿಂದ 4ಧ್ಯಾನಾವಾಹನ ಸ್ನಾನ ಸುಪಾದ್ಯಾಚಮನಾಘ್ರ್ಯ ಧೂಪದೀಪ ಪ್ರಸೂನ ತುಳಸಿ ಗಂಧಮೋಘ ನೈವೇದ್ಯದಿಂಮಾನಸಾರ್ಚನೆ ಪ್ರತ್ಯಕ್ಷಾಗಲಿ ಎಂತೆಂದು 5ವೀರಾವರ್ಣದ ಮಧ್ಯದಿ ಶ್ರೀ ಮಧುಕೈಟಭಾಂತಕ ಕೃಷ್ಣನಕೋಟಿಕಾಂಚನ ರತ್ನಾಭರಣವೈಜಯಂತಿಕಿರೀಟಕುಂಡಲದಾಮಹಾರ ನೂಪುರಗಳಿಂದ6ದಿವ್ಯಾಂಬರ ಭೂಷಣ ನವರತುನ ಭವ್ಯ ಮಂಟಪವಸನಅವ್ಯಾಕೃತಾಧ್ಯಕ್ಷ ಶ್ರೀಭೂಮುಕ್ತಾಮುಕ್ತಸೇವ್ಯಮಾನನಾಪಾದ ಮೌಳ್ಯಾಂತ ವೀಕ್ಷಿಸಿ7ಬಹು ನೀರಾಂಜನಗಳಿಂದ ಸದ್ವೇದೋಕ್ತ ಗಹಗಹನ ಸೂತ್ರಂಗಳಿಂದಅಹಿವರಶಯನಜ ಭವಾಹಿಪ ವಿಪ್ರವಂದ್ಯಮಹಿಮನನಂತನೆಂತೆಂದು ಪರವಶದಿಂದ 8ತಾಳದಂಡಿಗೆ ಜಾಗಟೆ ಶಂಖ ಮದ್ದಳೆ ಕಂಸಾಳೆಭೇರಿಆಲಾಬುತಂಬೂರಿಭಾಗವತಗಾನಮೇಳೈಸಿ ತುತೂರಿ ವಾಜಂತ್ರಿ ಘೋಷದಿಂದ 9ಅಲವಬೋಧರು ಪೇಳಿದ ಪೂಜಾವಿಧಿಗಳ ಪ್ರದಕ್ಷಿಣೆ ಪ್ರಮಾಣಲಲಿತ ಗೀತ ನೃತ್ಯ ಬಲು ಪ್ರೇಮದಲಿ ಮಾಡಿಹೊಳೆವ ಬಿಂಬಾತ್ಮನ ಕಾಂಬ ಲವಲವಿಕೆಯಿಂದ 10ಆತ್ಮ ಕರ್ತೃತ್ವನೀಗಿಸರ್ವಾಂತರಾತ್ಮ ಪರಮಾತ್ಮನೆಂದುಆತ್ಮ ಮತ್ತೆ ಜಾÕನಾತ್ಮ ಪ್ರೇರಕ ಪ್ರೇರ್ಯಾತ್ಮ ನಿವೇದನ ಭಕ್ತಿ ನವಕಗಳಿಂದ 11ಸರ್ವೇಂದ್ರಿಯ ಮನಸ್ಥ ಮುಖ್ಯಪ್ರಾಣನೋರ್ವ ನಿಯಂತ್ರಹರಿಸರ್ವ ಪ್ರೇರಕನೆಂಬೊ ವಿಜ್ಞಾನಮಾರ್ಗದಿಸರ್ವಕಾಲದಲಿ ಸರ್ವಸಮರ್ಪಣೆಯೆಂದು 12ಮಂದಜನರು ಭಕ್ತಿಲಿ ದೂರ್ವನೀರಿಂದೆ ಪೂಜೆಯ ಮಾಡಲುತಂದೆ ಪ್ರಸನ್ವೆಂಕಟಕೃಷ್ಣ ಕಾರುಣ್ಯಸಿಂಧುಪ್ರಸನ್ನಾತ್ಮಬಂಧು ಮುಕ್ತಿಯನೀವ13
--------------
ಪ್ರಸನ್ನವೆಂಕಟದಾಸರು
ಇಂತುಶ್ರುತಿ -ಸ್ಮøತಿ ಸಾರುತಿದೆ ಕೋ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಕಂತುಪಿನ ಗುಣಗಳ ತಿಳಿಯಬೇಕೆಂದು ಪ.ಮನವ ಶ್ರೀಹರಿಯ ಚರಣಕೆ ಸಮರ್ಪಿಸಬೇಕು |ತನುವ ತೊಂಡರಿಗಡ್ಡ ಕೆಡವಬೇಕು ||ವನಿತೆಯರ ಚೆಲುವಿಕೆಗೆ ಮರುಳಾಗದಿರಬೇಕು |ಘನತೆಯಲಿಹರಿಚರಣಸ್ಮರಿಸುತಿರಬೇಕು1ಕಂದರ್ಪನಟ್ಟುಳಿಗೆ ಕಳವಳಿಸದಿರಬೇಕು |ಇಂದ್ರಿಯಂಗಳನು ನಿಗ್ರಹಿಸಬೇಕು |ಚಂದಲೀಲೆಗಳಿಂಗೆ ಮನವೆಳಿಸದಿರಬೇಕು |ಇಂದಿರೇಶನ ಪದದ ಪಥವರಿಯಬೇಕು 2ಒಂಟಿಯಲಿ ಮುನಿಗಳಾಶ್ರಮದಿ ನೆಲೆಸಲುಬೇಕು |ಹೆಂಟೆ ಬಂಗಾರ ಸಮ ತಿಳಿಯಬೇಕು ||ಕಂಟಕದ ಭಯಗಳನು ನೀಗುತಿರಬೇಕು ವೈ - |ಕುಂಠ ಪುರಂದರವಿಠಲನೊಲಿಸಬೇಕು 3
--------------
ಪುರಂದರದಾಸರು
ಇದಿರಾರೊ-ಗುರುವೆ-ಸಮರಾರೊ ಪಮದನಜನಕಪ್ರಿಯ ಗುರುಮಧ್ವರಾಯಅ.ಪಸನ್ನುತಮಹಿಮ ಪ್ರಸನ್ನವದನ ನಿನ-ಗನ್ಯನಲ್ಲವೊ ನೀಯೆನ್ನ ರಕ್ಷಿಸಬೇಕೋ ||ನಿನ್ನ ನೋಡಿದವರ್ಧನ್ಯರಾಗುವರುಎನ್ನ ದಯಾಮೂರ್ತಿ ಮನ್ನಿಸಿ ನೋಡೋ 1ದುರ್ಜನರನು ಗರ್ಜೆನೆಯಿಂದ ಓಡಿಸಿಸಜ್ಜನರನು ಸಂರಕ್ಷಿಸಿದಾತನೆ |ಈ ಜಗದಲಿ ಮಧ್ಯಗೇಹರ ಪತ್ನಿಯಪೂಜ್ಯ ಜಠರದಲಿ ಜನಿಸಿದ ಧೀರ 2ವೇದಶಾಸ್ತ್ರಗಳಿಂದ ಮಾಯಿಗಳ ಖಂಡಿಸಿಸಾಧಿಸಿ ಹರಿಯೆ ಸರ್ವೋತ್ತಮನೆಂದು ||ಮೋದಭರಿತವಾದ ದಿವ್ಯಶಾಸ್ತ್ರವ ಗೈದಮೋದತೀರ್ಥ-ಪುರಂದರವಿಠಲದಾಸ3
--------------
ಪುರಂದರದಾಸರು
ಈ ಜೀವನಿಂದು ಫಲವೇನು |ರಾಜೀವಲೋಚನನ ಮರೆದಿಹ ತನುವಿನಲಿ ಪ.ಅರುಣನುದಯಲೆದ್ದು ಹರಿಸ್ಮರಣೆಯ ಮಾಡಿ |ಗುರು - ಹಿರಿಯರ ಚರಣಕಮಲಕೆರಗಿ ||ಪರಮಶುಚಿಯಾಗಿ ನದಿಯಲಿ ಮಿಂದು ರವಿಗಘ್ಯ |ವೆರೆಯದೆ ಮರೆಹ ಈ ಪಾಪಿತನುವಿನಲಿ 1ಹೊನ್ನಗಿಂಡಿಯಲಿ ಅಗ್ರೋದಕವನೆ ತಂದು |ಚೆನ್ನಾಗಿ ಹರಿಗೆ ಅಭಿಷೇಕ ಮಾಡಿ ||ರನ್ನದುಡಿಗೆಯುಡಿಸಿ ರತುನಗಳಳವಡಿಸಿ |ಕಣ್ಣಿರಲು ನೋಡಲರಿಯದ ಪಾಪಿತನುವಿನಲಿ 2ನಳನಳಿಸುವ ನಾನಾ ಪುಷ್ಪಗಳು ಶ್ರೀತುಳಸಿ |ಹೊಳೆವ ಕಿರೀಟ ಕೊರಳಲಿ ಪದಕ ||ನಳಿನಾಕ್ಷನಿಗೆ ಕರ್ಪುರದಾರತಿಯನೆತ್ತಿ |ಕಳೆಯ ನೋಡಲರಿಯದ ಪಾಪಿತನುವಿನಲಿ 3ವರಭಕ್ಷ್ಯಗಳುಪರಮಾನ್ನ ಶಾಲ್ಯನ್ನವು |ವರವಾದ ಮಧುಘೃತ ಕ್ಷೀರವನ್ನು ||ಸಿರಿನಾರಾಯಣಗೆ ಸಮರ್ಪಣೆ ಮಾಡಿ ತಾ - |ಎರಡು ಕೈಮುಗಿಯದ ಪಾಪಿತನುವಿನಲಿ 4ಉರಗಾದ್ರಿ - ಸ್ವಾಮಿಪುಷ್ಕರಣಿಗಳು ಮೊದಲಾದ |ಪರಿಪರಿ ತೀರ್ಥಗಳನೆಲ್ಲ ಮಿಂದು ||ತಿರುವೆಂಗಳಪ್ಪ ಶ್ರೀ ಪುರಂದರವಿಠಲನ |ಚರಣವನು ಭಜಿಸಲಯದ ಪಾಪಿತನುವಿನಲಿ 5
--------------
ಪುರಂದರದಾಸರು
ಉಡುಪಿಕೃಷ್ಣನ ನೋಡಿರಿ ಶ್ರೀಹರಿ ಚರಿತಸಡಗರವನು ಕೇಳಿರಿ ಪಪೊಡವಿಯೊಳು ಸಮರಿಲ್ಲ ಈತನಉಡುಪ ಮುಖ ಶ್ರೀ ಕೃಷ್ಟರಾಯನಕಡಲತಡಿಯಲಿ ನೆಲಸಿದಾತನಮೃಡಪುರಂದರೊಡೆಯ ದೇವನ 1ಮಧ್ವಸರೋವರ ಸ್ನಾನವ ಮಾಡುತ ಮನಶುದ್ದಭಾವದಿ ನಲಿದುಮಧ್ವಶಾಸ್ತ್ರÀವ ಸಾಧು ಸಜ್ಜನರಿಗೆ ಪೇಳ್ದಪದ್ಧತಿ ಮೀರದೆ ಶ್ರದ್ಧಾಭಕುತಿಯಿಂದ 2ಮಧ್ಯದಲ್ಲಿಹ ಅನಂತೇಶ್ವರನನುಶುದ್ಧ ಭಕುತಿಲಿ ನಮಿಸಿ ಸ್ತುತಿಸುತಮುದ್ದು ಕೃಷ್ಣನ ಹೆಜ್ಜೆ ಪಂಙ್ತಯಶ್ರದೆÀ್ಧ ಸಡಗರ ನೋಳ್ಪಸುಜನರು 3ಕಾಲಲಂದುಗೆ ಗೆಜ್ಜೆಯು ಕಯ್ಯೊಳು ಕಡ-ಗೋಲನೇಣನೆ ಪಿಡಿದುಬಾಲನಂದದಿ ಗೋಪಾಲರೂಪವ ತೋರ್ದಶ್ರೀ ಲಲಾಮನ ದಿವ್ಯ ಬಾಲಕೃಷ್ಣನರೂಪ4ಬಾಲಯತಿಗಳು ವೇಳೆ ವೇಳೆಗೆಬಾಲಕೃಷ್ಣನ ಪೂಜೆ ಮಾಡುತಬಾಲರೂಪವ ನೋಡಿ ಸುಖಿಪರುಶೀಲಗುಣಸುರವರನ ಸ್ತುತಿಪರು5ಮಧ್ವರಾಯರಿಗೊಲಿದು ಉಡುಪಿಯ ಮಣ್ಣ-ಗೆಡ್ಡೆಯೊಳಗೆ ಪೊಳೆದುಅದ್ವೈತಮತದ ಸದ್ದಡಗಿಸಿ ಮೆರೆದಂಥಮುದ್ದು ಸರ್ವಜÕರ ಆಜ್ಞಾಧಾರಕರೆಲ್ಲ 6ಶುದ್ಧ ತತ್ವಜÕರು ರಚಿಸಿದಪದ್ಧತಿಯ ಸಾಧಿಸುತ ಸಂತತಶ್ರದ್ಧೆಯೊಳು ಹರಿಕಾರ್ಯ ನಡೆಸುವಶುದ್ಧಯತಿಗಳ ಸೇವೆಗೊಲಿಯುವ 7ಪರಿಯಾಯದಿನ ಬರಲು ಶ್ರೀ ಹರಿಯನ್ನುಪರಿಪರಿವಿಧ ಪೂಜಿಸಿಪರಮವೈಭವದಿಂದ ಹರಿಯನ್ನುಕರತಂದುವರರಥÀವೇರಿ ಕುಳ್ಳಿರಿಸುವ ಭಕುತಿಯಲಿ 8ಪರಿಪರಿಯ ವಾದ್ಯಗಳು ಮೊಳಗಲುಸರುವ ಯತಿಗಳು ನೆರೆದು ಹರುಷದಿಪರಮಮಂಗಳಮೂರ್ತಿಕೃಷ್ಣನಹರುಷದಲಿ ಕೊಂಡಾಡಿ ಸುತ್ತಿಪರು 9ಕೊರಳಕೌಸ್ತುಭಮಾಲೆಯು ವೈಜಯಂತಿಯುಮುರುಡಿ ಸರಪಣಿ ಗೆಜ್ಜೆಯುಪರಿಪರಿ ರತ್ನಾಭರಣಗಳ್ಹೊಳೆಯುತಜರದ ಪೀತಾಂ¨Àರದಿಂದ ಶೋಭಿಪ ದಿವ್ಯ 10ಕನಕಕಸ್ತೂರಿ ತಿಲಕ ಫಣೆಯಲಿಮಿನುಗುತಿಹ ಸ್ತ್ರೀರೂಪಧರಿಸಿದಕನಕಪೀಠದಿ ಮೆರೆದ ಕಮಲ-ನಾಭವಿಠ್ಠಲನ ಸೇವಿಸುವ ಜನ11
--------------
ನಿಡಗುರುಕಿ ಜೀವೂಬಾಯಿ
ಎಂತು ನಿನ್ನ ಪೂಜೆ ಮಾಡಿ ಮೆಚ್ಚಿಸುವೆನೊ ಪಚಿಂತಾಯತನೆ ನಿನ್ನ ನಾಮ ಎನಗೊಂದು ಕೋಟಿ ಅ.ಪಪವಿತ್ರೋದಕದಿಪಾದತೊಳೆವೆನೆಂತೆಂದರೆ |ಪಾವನೆಯಾದ ಗಂಗೆ ಪಾದೋದ್ಭವೆ ||ನವಕುಸುಮವ ಸಮರ್ಪಿಸುವೆನೆಂದರೆ ಉದುಭವಿಸಿಹನುಅಜನಿನ್ನ ಪೊಕ್ಕುಳ ಹೂವಿನಲಿ1ದೀಪವನು ಬೆಳಗುವೆನೆ ನಿನ್ನಕಂಗಳುಸಪ್ತದ್ವೀಪಂಗಳೆಲ್ಲವನು ಬೆಳೆಗುತಿಹವೋ ||ಆಪೋಶನವನಾದರೀವೆನೆಂತೆಂಬೆನೆಆಪೋಶನವಾಯ್ತು ಏಳು ಅಂಬುಧಿಯು 2ಕಾಣಿಕೆಯಿತ್ತಾದರೂ ಕೈ ಮುಗಿವೆನೆಂದರೆರಾಣಿವಾಸವು ಸಿರಿದೇವಿ ನಿನಗೆ ||ಮಾಣದೆಮನದೊಳು ನಿನ್ನ ನಾಮಸ್ಮರಣೆಧ್ಯಾನವನು ದಯೆ ಮಾಡೋ ಪುರಂದರವಿಠಲ 3
--------------
ಪುರಂದರದಾಸರು
ಏನು, ಬರೆದೆಯೊ ಬ್ರಹ್ಮ ಎಂತು ನಿರ್ದಯನು-ಅಭಿ |ಮಾನವನು ತೊರೆದು ಪರರನು ಪೀಡಿಸುವುದ ಪಬಲ್ಲಿದರ ಮನೆಯ ಬಾಗಿಲ ಕಾಯ್ದು ಬೇಸತ್ತು |ಸೊಲ್ಲುಸೊಲ್ಲಿಗೆಅವರಕೊಂಡಾಡುತ ||ಇಲ್ಲ ಈ ವೇಳೆಯಲಿ ನಾಳೆ ಬಾ-ಎನಲಾಗಿ |ಅಲ್ಲವನೆ ತಿಂದ ಇಲಿಯಂತೆ ಬಳಲುವುದ 1ಗೇಣೊಡಲ ಹೊರೆವುದಕೆ ಹೋಗಿ ನರರೊಳು ಪಂಚ-|ಬಾಣ ಸಮರೂಪ ನೀನೆಂದು ಪೊಗಳೆ ||ಮಾಣು ಎನ್ನಾಣೆ ನೀ ನಾಳೆ ಬಾ ಎಂದೆನಲು |ಗಾಣತಿರುಗುವ ಎತ್ತಿನಂತೆ ಬಳಲುವುದ2ಹಿಂದೆ ಬರೆದಾ ಬರೆಹ ಏನಾದರಾಗಲಿ |ಮುಂದೆನ್ನ ವಂಶದಲಿ ಪುಟ್ಟುವರಿಗೆ ||ಸಂದೇಹಬೇಡ ಶ್ರೀಪುರಂದರವಿಠಲನೇ |ಕಂದರ್ಪನಯ್ಯ ಉಡುಪಿಯ ಕೃಷ್ಣರಾಯ 3
--------------
ಪುರಂದರದಾಸರು
ಏನುಚೋದ್ಯಶ್ರೀನಿಧೆಹರಿಮಾನಿನಿಶ್ರೀದೇವಿ ಭೂದೇವಿರಮಣಪಸೃಷ್ಟಿಕರ್ತನೆಂದು ಪೇಳ್ವರು ಪಾಂಡವರ ಮನೆಯಬಿಟ್ಟಿ ಬಂಡಿಬೋವನೆಂಬೋರು ಪಾಂಚಾಲಿಗೆ ಒದಗಿದಕಷ್ಟಕಳೆದÀು ಪೊರೆದನೆಂಬೊರೊಕೆಟ್ಟದಾನವರ ಅಟ್ಟುಳಿಯ ಕಳೆದುದುಷ್ಟಕಂಸನವಧೆಯ ಸ್ಪಷ್ಟ ಪೇಳುತಿಹರೊ 1ಗಜನ ಸಲಹಿ ಪೊರೆದನೆಂಬೊರೊ ನೆಗಳೆಯನು ಸೀಳಿತ್ರಿಜಗದೊಡೆಯ ಶ್ರೀಶನೆಂಬೊರೊ ಪ್ರಹ್ಲಾದ ಧೃವಗೆನಿಜಸೌಭಾಗ್ಯ ಇತ್ತೆ ಎಂಬೊರೊವಿಜಯಸಾರಥಿಯ ವಿಶ್ವರೂಪ ತೋರಿಸುಜನರನ್ನು ಪೊರೆದ ನಿಜವ ಪೇಳುತಿಹರು 2ವತ್ಸಾಸುರನ ಮಡುಹಿದೆಂಬೊರೊ ಅಡವಿಯಲಿ ಕಾಡ-ಕಿಚ್ಚನುಂಗಿ ಬೆಳೆದಿ ಎಂಬೊರೊ ತಾಯಿಗೆ ಬಾಯೋಳಹೆಚ್ಚಿನ್ವಿಷಯ ತೋರ್ದಿ ಎಂಬೊರೊಕಚ್ಚ ಬಂದ ಘಣಿಯ ಮೆಟ್ಟಿ ತುಳಿದು ಜಲವಸ್ವಚ್ಛಗೈದನೆಂದಾಶ್ಚರ್ಯ ಪೇಳುತಿಹರೊ 3ಕರಡಿ ಮಗಳು ಮಡದಿಯೆಂಬೊರೊ ಪುಷ್ಪವನು ತರಲುತೆರಳಿ ಯುದ್ಧ ಮಾಡ್ದನೆಂಬೊರೊ ದೇವೇಂದ್ರನ ಗೆಲಲುತರುಣಿ ಸಮರಗೈದಳೆಂಬೊರೊಮುರಳಿನಾದದಿಂದ ತರುಣಿಯರ ಮನವಮರುಳುಗೈದನೆಂದು ಪರಿಪರಿ ಪೇಳುವರೊ 4ಕೆಟ್ಟದ್ವಿಜನ ಪೊರೆದಿ ಎಂಬೊರೋ ವನವನವ ಚರಿಸಿಸುಟ್ಟ ದಾಸಗೊಲಿದೆ ಎಂಬೊರೋ ಒಪ್ಪಿಡಿಯ ಗ್ರಾಸವಕೊಟ್ಟದ್ವಿಜನ ಪೊರೆದಿಯೆಂಬೊರೊಅಟ್ಟಹಾಸದಿ ತಂದ ರುಕ್ಮಿಣಿಯ ತನ್ನಪಟ್ಟದರಸಿಯೆಂದು ಸ್ಪಷ್ಟ ಪೇಳುತಿಹರೊ 5ಶಿಲೆಯ ಸತಿಯಗೈದನೆಂಬರೊ ಅಡವಿಗಳ ಚರಿಸಿಬಲುಕಪಿಗಳ ಕೂಡ್ದನೆಂಬೊರೊ ಭಯ ಭಕ್ತಿಗೆ ಮೆಚ್ಚಿಫಲದ ಎಂಜಲ ಸವಿದನೆಂಬೊರೊ ಮೆಚ್ಚಿಸುಲಭದಿಂದ ದೈತ್ಯಕುಲವನೆಲ್ಲ ಸವರಿಛಲದ ದಶಶಿರನ ವಧೆಯ ಪೇಳುತಿಹರೊ 6ಪುಟ್ಟಬ್ರಹ್ಮಚಾರಿ ಎಂಬೋರೊ ಬಲಿರಾಜನ ಬೇಡಿಕೊಟ್ಟದಾನ ಕೊಂಡನೆಂಬೋರೊ ಈರಡಿಯನಳೆದುಮೆಟ್ಟಿ ಸಿರವ ತುಳಿದನೆಂಬೋರೊಎಷ್ಟು ಪೇಳಲಿ ನಿನ್ನ ಶ್ರೇಷ್ಠಗುಣಗಳನ್ನುದಿಟ್ಟ ಕಮಲನಾಭ ವಿಠ್ಠಲ ಸರ್ವೇಶ 7
--------------
ನಿಡಗುರುಕಿ ಜೀವೂಬಾಯಿ
ಒಂದೇ ನಾಮದೊಳಡಗಿದುವೊ ಆ -ನಂದದಿಂದುಸುರುವಅಖಿಳ ವೇದಗಳುಪಒಂದೇ ನಾಮವು ಪ್ರಹ್ಲಾದನ ಕಾಯ್ತು - ಮ -ತ್ತೊಂದೆ ನಾಮವೆ ಅಜಮಿಳನ ಸಲಹಿತು ||ತಂದೆ ತಾಯಿಯ ಬಿಟ್ಟ ಕಂದ ಧ್ರುವರಾಯಗಾ -ನಂದಪದವನಿತ್ತ ಅದ್ಭುತಗುಣವೆಲ್ಲ 1ಮಚ್ಛ್ಯಾದ್ಯಾನಂತಾವತಾರ ಅಷ್ಟಾದಶಸ್ವಚ್ಛ ಪುರಾಣಗಳಮೃತದಸಾರ ||ಕಚ್ಛಪನಾಗಿ ತ್ರೈಜಗಕೆ ಆಧಾರ ತ -ನ್ನಿಚ್ಛೆಯಿಂದಲಿ ತಾನು ಮಾಳ್ಪ ವ್ಯಾಪಾರ 2ಒಬ್ಬರೀತಗೆ ಸಮರಿಲ್ಲ ತ -ನ್ನಬ್ಬರದಿಂದಲಿ ಸಲಹುವನೆಲ್ಲ ||ಕಬ್ಬು ಬಿಲ್ಲನ ಪಿತಪುರಂದರ ವಿಠಲ ವೈದರ್ಭಿಯ ರಮಣನ ವರಸುಗುಣಗಳೆಲ್ಲ 3
--------------
ಪುರಂದರದಾಸರು