ಒಟ್ಟು 693 ಕಡೆಗಳಲ್ಲಿ , 86 ದಾಸರು , 546 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುರಂದರ ದಾಸರೇ ನಿಮ್ಮ ಚರಣ ಸರಸಿಜ ನಂಬಿದೆ ಪ ಗುರುವ ರಹಿತರ ಮಾಡಿ ನಮ್ಮನು ಪೊರೆವ ಭಾರವು ನಿಮ್ಮದೆ ಅ ಒಂದು ಅರಿಯದ ಮಂದಮತಿ ನಾನಿಂದು ನಿಮ್ಮನು ವಂದಿಪೆ ಇಂದಿರೇಶನ ತಂದು ತೋರಿಸಿ ತಂದೆ ಮಾಡೆಲೊ ಸತ್ಕøಪೆ 1 ಪುರಂದರ ಗಡದೊಳಗೆ ನಿಂದು ನಿರುತ ದ್ರವ್ಯವÀ ಗಳಿಸಿದೆ ಕರವ ನೀಡಿ ಯಾಚಿಸೆ 2 ಪರಮ ನಿರ್ಗುಣ ಮನವರಿತು ಹರಿಗೆ ಸೂರೆಯ ನೀಡುತ ತರುಣಿ ಸಹಿತಾ ಹೊರಟನೆ 3 ಮಾರಜನಕನ ಸನ್ನಿಧಾನದಿ ಸಾರಗಾನವ ಮಾಡುವ ನಾರದರೆ ಈ ರೂಪದಿಂದಲಿ ಚಾರುದರುಶನ ತೋರಿದ 4 ಅಜಭವಾದಿಗಳರಸನಾದ ವಿಜಯವಿಠ್ಠಲನ ಧ್ಯಾನಿಪ ಭಜಿಪೆನೋ ಕೇಳ್ ಗುರುವರ 5
--------------
ವಿಜಯದಾಸ
ಪುರುಷರೈವರು ಕೂಡಿ ಹರುಷದಿ ಬರುತಿರೆ ಸರಸದಿ ಕೃಷ್ಣೆ ಕದವಿಕ್ಕೆ ಸರಸದಿ ಕೃಷ್ಣೆ ಕದವಿಕ್ಕೆ 1 ನಾಗವೇಣಿಯೆ ನೀನು ಸಾಗಿ ಮುಂದಕ್ಕೆ ಬಂದು ಬಾಗಿಲಿಕ್ಕಿದ ಬಗೆ ಪೇಳೆ 2 ಸರ್ಹ್ಯಾಗೆ ತೆಗೆಯಲಿ ಕದವನು ಹ್ಯಾಗೆ ತೆಗೆಯಲಿ ಕದವನು 3 ಹರದಿ ದ್ರೌಪದಿ ಕೇಳೆ ದೊರೆಯು ಧರ್ಮರು ನಾವು ತ್ವರಿತದಿ ಬಂದೆವು ತೆಗೆ ನೀನು 4 ದೊರೆಗಳಾದರೆ ರಾಜ್ಯ ಪರರಿಗೆ ಕೊಟ್ಟು ತಾ- ನಡವಿ ಯಾತಕೆ ತಿರುಗೀರಿ ಅಡವಿ ಯಾತಕೆ ತಿರುಗೀರಿ5 ಪಟ್ಟದರಸನ ಕೂಡ ಇಷ್ಟು ಮಾತುಗಳ್ಯಾಕೆ ಶ್ರೇಷ್ಠ ಭೀಮನು ನಾ ಬಂದೀನೆ ಶ್ರೇಷ್ಠ ಭೀಮನು ನಾ ಬಂದೀನೆ 6 ಶ್ರೇಷ್ಠನಾದರೆ ಕೈಯ್ಯೊಳ್ಹುಟ್ಟು ಹಿಡಿದು ರಾಜ- ಗಟ್ಟ್ಟಿ ಅಡಿಗೆ ಉಣೀಸ್ಹೋಗೋ ರಾಜ- ಗಟ್ಟಿ ಅಡಿಗೆ ಉಣೀಸ್ಹೋಗೋ 7 ಪುಂಡಕೌರವರಿಗೆ ಗಂಡನೆನಿಸುವಂಥ ಗಾಂಡೀವರ್ಜುನ ನಾ ಬಂದೀನೆ ಗಾಂಡೀವರ್ಜುನ ನಾ ಬಂದೀನೆ 8 ದುಂಡು ಹರಡಿನಿಟ್ಟು ಗೊಂಡ್ಯದ್ಹೆರಳನ್ಹಾಕಿ- ಕೊಂಡು ವಿದ್ಯವ ಕಲಿಸ್ಹೋಗೊ ಹಾಕಿ- ಕೊಂಡು ವಿದ್ಯವ ಕಲಿಸ್ಹೋಗೊ 9 ಸಕಲವಿದ್ಯೆಗಳಲ್ಲಿ ಕುಶಲ ಸಂಪನ್ನನಾದ ನಕುಲರಾಯನು ನಾ ಬಂದೀನೆ ನಕುಲರಾಯನು ನಾ ಬಂದೀನೆ 10 ಸಕಲವಿದ್ಯೆಗಳಲ್ಲಿ ಕುಶಲನಾದರೆ ತೇಜಿ ಕೆಲಸ ರಾಯರಿಗೆ ತಿಳಿಸ್ಹೋಗೊ ಕೆಲಸ ರಾಯರಿಗೆ ತಿಳಿಸ್ಹೋಗೊ 11 ಪಾವಕÀತನುಜೆ ಮಾದೇವಹಾರದವೇಣಿ ಸ(ಹ) ದೇವರಾಯನು ನಾ ಬಂದೀನೀಗ ಸ(ಹ)- ದೇವರಾಯನು ನಾ ಬಂದೀನೀಗ 12 ಗೋವ ಕಾಯುತಲಿ ಗೋಪಾಲಕನಾಗಿ ಕೊಳಲೂದಿ ಗೊಲ್ಲರೊಳಾಡಹೋಗೊ ಕೊಳಲೂದಿ ಗೊಲ್ಲರೊಳಾಡಹೋಗೊ 13 ಮಾತುಳಾಂತಕನಲ್ಲಿ ಮಾತು ಕಲಿತು ಬಂದಿ(ಲ್ಲಿ) ಸೋತೆವೆ ನಿನಗೆ ಸುಂದರಾಂಗಿ ಸೋತೆವೆ ನಿನಗೆ ಸುಂದರಾಂಗಿ 14 ಸೋತರೇನಾಯಿತು ದ್ಯೂತಪಗಡೆ ಬಿಟ್ಟು ಅ- ಜ್ಞಾತವಾಸವನೆ ಚರಿಸ್ಹೋಗೊ ಅ- ಜ್ಞಾತವಾಸವನೆ ಚರಿಸ್ಹೋಗೊ15 ತಿರುಗಿ ತಿರುಗಿ ಭಾಳ ಬಳಲಿ ಬಂದೆವೆ ನಾವು ಕರುಣವಿಲ್ಲವೆ ಕಮಲಾಕ್ಷಿ ಕರುಣವಿಲ್ಲವೆ ಕಮಲಾಕ್ಷಿ 16 ಭಾಳ ಬಳಲಿದೆವೆಂದು ಹೇಳಿಕೊಂಡರು ಕರು- ಣಾಳು ನಾನಲ್ಲ ಕರೆಯಲು ಕರು- ಣಾಳು ನಾನಲ್ಲ ಕರೆಯಲು 17 ಕಾಮನಯ್ಯನ ಕರುಣಕ್ಕೆ ಪಾತ್ರರೆ ನಾವು ಸಾಮಜಗಮನೆ ಸರಸ್ಯಾಕೆ ಸಾಮಜಗಮನೆ ಸರಸ್ಯಾಕೆ 18 ಹೇಮಮಾಣಿಕ್ಯದ ಕದವ ತೆಗೆದು ಪತಿಗಳಿಗೆ ಪ್ರೇಮದಿಂದೆರಗಿ ಕರೆದಳು ಪ್ರೇಮದಿಂದೆರಗಿ ಕರೆದಳು 19 ಆದರದಿಂದ ಕರೆಯಲರ್ಜುನ ಭೀಮ ಧರ್ಮ ಸಾದೇವ ನಕುಲ ಸಹಿತಾಗಿ ಸಾದೇವ ನಕುಲ ಸಹಿತಾಗಿ 20 ಪಂಚಪಾಂಡವರು ಬಂದು ಪರಮ ಸಂಭ್ರಮದಿಂದ ಮಂಚದ ಮ್ಯಾಲೆ ಕುಳಿತಾರೊ ಮಂಚದ ಮ್ಯಾಲೆ ಕುಳಿತಾರೊ21 ಥsÀಳಕು ಬೆಳಕಿನಿಂದ ಝಳಕು ಮಿಂಚುಗಳಂತೆ ಬಳುಕುತ ಬಾಳೆಸುಳಿಯಂತೆ ಬಳುಕುತ ಬಾಳೆಸುಳಿಯಂತೆ22 ಗಂಡರೈವರ ಮುಂದೆ ಗರುವಿಲೆ ನಿಂತಳು ದುಂಡುಮಲ್ಲಿಗೆ ಶಿರ ಬಾಗಿ 23 ಕರಕಮಲವ ಪಿಡಿದು ಕರೆದು ಸಾದೇವ ಕೃಷ್ಣೆ- ತುರುವಿಗ್ಹೂಮಾಲೆ ಮುಡಿಸಿದ ಕೃಷ್ಣೆ- ತುರುವಿಗ್ಹೂಮಾಲೆ ಮುಡಿಸಿದ 24 ಮುಖಬೆವರ್ವೊರೆಸುತ ನಕುಲರಾಯನು ಭಾಳ ಸುಖದಿ ಮುದ್ದಿಸಿದ ಮಡದಿಯ ಸುಖದಿ ಮುದ್ದಿಸಿದ ಮಡದಿಯ 25 ಅರ್ಜುನಾಗಲೆ ಮೋಹದಿಂದ ಮುಂಗುರುಳು ತಿದ್ದಿ ವಜ್ರದಾಭರಣನಿಡಿಸಿದ 26 ಭೀಮ ನಗುತ ಬಿಗಿದಪ್ಪಿ ದ್ರೌಪದಿಯ ಧರ್ಮ- ರಾಯನ ತೊಡೆಯಲ್ಲಿರಿಸಿದ ಧರ್ಮ- ರಾಯನ ತೊಡೆಯಲ್ಲಿರಿಸಿದ 27 ಧರ್ಮ ಮುತ್ತಿನ ಹಾರ ಪದಕ ಕೊರಳಿಗೆ ಹಾಕಿ ವರಮೋಹನಾಂಗಿ ಒಲಿಸಿದ ವರಮೋಹನಾಂಗಿ ಒಲಿಸಿದ 28|| ಸಿಂಧುಸುತನ ಮುಖಬಿಂಬ ಸೋಲಿಸುವಂಥ ಚಂದ್ರವದನೆ ಮುನಿಸ್ಯಾಕೆ ಚಂದ್ರವದನೆ ಮುನಿಸ್ಯಾಕೆ 29 ಮಾತಿನರಗಿಳಿಯೆ ನೀ ಜ್ಯೋತಿ ಮುತ್ತಿನ ಗೊಂಬೆ ಪ್ರೀತಿಪತಿಗಳ ನೀ ನೋಡೆ ಪ್ರೀತಿಪತಿಗಳ ನೀ ನೋಡೆ 30 ಪ್ರಾಣಪದಕವೆಂದು ತಿಳದೆವೈವರು ನಿನ್ನ
--------------
ಹರಪನಹಳ್ಳಿಭೀಮವ್ವ
ಪುಷ್ಯೋತ್ಸವ ಗೀತೆ ಮಕರಪುಷ್ಯದ ಶುದ್ಧ ಷಷ್ಟಿಯಲಿ ನಗರಶೋಧನೆ ಮಾಡಿ ಮಂತ್ರಿಯು 1 ಮೊದಲು ದಿವಸದಿ ಧ್ವಜವನೇರಿಸಿ ಭೇರಿಯಿಡೆ ಸುರರ ಕರೆದರು 2 ಯಾಗಶಾಲೆಯ ಪೊಕ್ಕು ರಂಗನು ಯಾಗಪೂರ್ತಿಯಾ ಮಾಡಿ ನಿಂದನು 3 ಯಾತ್ರದಾನವ ಬೇಡಿ ಹರುಷದಿ ಸೂತ್ರ ಧರಿಸಿದಾ ಧಾತ್ರಿಗೊಡೆಯನು 4 ಕಂದರ್ಪನಾಪಿತ ದರ್ಪಣಾಗ್ರದಿ ಹ ನ್ನೊಂದು ದಿನದಲಿ ನಿಂದ ಹರುಷದಿ 5 ಸೂರ್ಯಚಂದ್ರರು ಹಂಸಯಾಳಿ[ಸಹಿತ] ಏರಿ ಬಂದನು ಸಿಂಹ ಶರಭವ 6 ಸರ್ಪವಾಹನ ಕಲ್ಪವೃಕ್ಷವು [ಗರು ಡ] ಪಕ್ಷಿ ಹನುಮನ ಏರಿ ಬಂದನು 7 ಏಳು ದಿವಸದಿ ಚೂರ್ಣಾಭಿಷೇಕವ ಸೀಳೆಸಹಿತಲೆ ಗ್ರಹಿಸಿ ಮಿಂದನು 8 ಎಂಟು ದಿವಸದಿ ಏರಿ ತೇಜಿಯ ಬಿಟ್ಟನು ಪೇರಿ ತೇರಿನಿದಿರಲಿ 9 ಒಂಬತ್ತು ದಿನದಲಿ ಶೃಂಗರಿಸಿದಾರು ಸಂಭ್ರಮದಿಂದಲೆ ಬೊಂಬೆರಥವನು 10 ಪುನರ್ವಸುವಿನಲ್ಲಿ ಪುರುಷೋತ್ತಮನು ರಥ ವನೇರಲು ಪೊರಟುಬಂದನು11 ಸಿಂಧುಶಯನನ ಹಿಂದೆಬಂದರು 12 ಅಷ್ಟಪತಿಯನು ಅಷ್ಟು ಕೇಳುತಾ ಸೃಷ್ಟಿಗೀಶ್ವರ ರಥವನೇರಿದ 13 ಪತ್ನಿ ಸಹಿತಲೇ ಹತ್ತಿ ರಥವನು ಉತ್ತರಬೀದಿಯ ಸುತ್ತಿಬಂದನು 14 ಇಂದಿರಾಪತಿ ಇಳಿದು ರಥವನು ಚಂದ್ರಪುಷ್ಕರಿಣಿಯಲಿ ತೀರ್ಥವಿತ್ತನು 15 ಕರೆತಂದರು ಕರಿಯಮೇಲಿಟ್ಟು ಚ ದುರಂಗಗೆ ನಜರು ಕೊಟ್ಟರು 16 ಸಪ್ತಾವರಣವ ಶಬ್ದವಿಲ್ಲದೆ ಸುತ್ತಿಬಂದನು ಭಕ್ತವತ್ಸಲ 17 ಸುತ್ತಿ ಲಕ್ಷ್ಮೀಗೆ ಇತ್ತು ಸೇವೆಯ ಭಕ್ತ ಭಾಷ್ಯಕಾರರಿಗೆ ಒಲಿದು ನಿಂದನು 18 ತನ್ನ ಚರಿತೆಗಳನು ಕೇಳುತ ಪನ್ನಗಶಯನನು ಪರಮ ಹರುಷದಿ 19 ಬಂದ ಸುರರ ಆನಂದದಿಂದಲೇ ಮಂದಿರಕ್ಕೆ ತಾ ಕಳುಹಿ ರಂಗನು 20 ಬಿಚ್ಚಿ ಕಂಕಣ ನಿಂದ ಹರುಷದಿ ಅರ್ಥಿಯಿಂದಲೆ ಅಚ್ಚುತಾನಂತ 21 ಏರಿ ಆಳಂಪಲ್ಲಕ್ಕಿ ಹರುಷದಿ ಒ ಯ್ಯಾರದಿಂದ ಬಂದ ರಂಗನು 22 [ಮೋಕ್ಷ] ಕೊಡುವನು ಮುದ್ದುವೆಂಕಟರಂಗನು 23
--------------
ಯದುಗಿರಿಯಮ್ಮ
ಪೋಗುವೆನೆ ರಂಗ ಪೋಗುವೆನೆ ಕೃಷ್ಣ ಈಗ ಕರೆ ಬಂದಿದೆ ಮಧುರಾ ಪುರಕ್ಕೆ ಪ. ಮದಿಸಿದ ಕಂಸನು ಚದುರ ಅಕ್ರೂರನ ಮುದದಿ ಕಳಿಸಿದ ಮಧುರ ವೇಣಿಯೆ ಕೇಳೆ 1 ಬಿಲ್ಲು ಹಬ್ಬವಂತೆ ಮಲ್ಲರ ಗೆಲ್ಲಬೇಕಂತೆ ಸಖಿ ಪುಲ್ಲಲೋಚನ ಕೃಷ್ಣಾ ಇಲ್ಲಿ ನÀಮ್ಮನು ಬಿಟ್ಟು 2 ಕಂಗೊಳಿಸುವ ಬೆಳದಿಂಗಳ ಸೊಗವಿಲಿ ಪೊಂಗೊಳಲೂದೆಮ್ಮಂಗಕೆÉ ಹರುಷವಿತ್ತ3 ನಲಿವಿಲಿ ಮೀಸಲು ಬೆಣ್ಣೆಯನಿಡಲು ನಿಲುಕಿತ ಮೆದ್ದೆಮ್ಮ ಒಲವಿತ್ತುದ್ದರಿಸಿದ 4 ಗೋಕುಲವೇತಕೆ ಆ ಕಮಲಾಕ್ಷನಾ ಕಟಾಕ್ಷವಿಲ್ಲದೀಪರಿ ಸಹಿಪುದೆ 5 ಯಮುನೆಯ ತೀರದೊಳ್ ಎಮ್ಮಯ ವಸ್ತ್ರವ ಕ್ಷಮೆಯಿಂದಿತ್ತ ಕಮಲನಯನ ಕೃಷ್ಣ 6 ರಥಬಂದಿದೆ ನೋಡೆ ಅತುಳ ಮಹಿಮಗೆಂದು ಜತೆಯೊಳು ಬಲರಾಮ ಹಿತದಿ ಅಕ್ರೂರ ಸಹ 7 ಬಿಟ್ಟಿರಲಾರೆವೆ ಪುಟ್ಟ ಕೃಷ್ಣನ ಪಾದ ದಿಟ್ಟ ಶ್ರೀ ಶ್ರೀನಿವಾಸಗಿಷ್ಟವಂತೆ ಕೇಳೆ 8 ಭಕ್ತವತ್ಸಲನೆಮ್ಮ ಭರ್ತನೊಳನುರಾಗವಿತ್ತು ಬಾಳಿರೆಂದು ಇತ್ತು ವಚನವನ್ನು 9
--------------
ಸರಸ್ವತಿ ಬಾಯಿ
ಪ್ರದೋಷಕಾಲವಿದೀಗ ನೀ ಮರೆ- ಯದೇ ನೆನೆಯೊ ಶಿವನಾ ಶಂಕರನಾ ಪ ಸದಾ ಸಕಲ ಸುರರಿಂದ ಕೂಡಿ ತಕ ತಧಿಂ ಎನುತ ಕುಣಿಯುವ ಶಿವನೀಗಲೂ ಅ.ಪ ಸಕಲ ವಾದ್ಯಗಳೂ ಶಂಭೋ ಎಂಬ ಸುವಾದಗಳೂ ತುಂಬುರ ನಾರದರೂ ನುಡಿಸಿ ಹೇ- ರಂಬ ಜನಕ ವಿಶ್ವಂಭರ ಎಂದು ದಿ- ಗಂಬರನಾಗಿ ಚಿದಂಬರ ಕುಣಿಯುವ 1 ಭೂಷಣಗಳ ಮಾಡಿ ಭಿಕ್ಷವನೂ ಬೇಡಿ ತಾತನಾಗಿ ಮೆರೆದು ಹಿಮ ಶೈಲ- ಜಾತೆ ಸಹಿತ ಪ್ರಖ್ಯಾತನಾಗಿ ಭವ- ಭೀತಿ ಬಿಡಿಸಿ ದುಃಖೇತರ ಕೊಡುವನು 2 ಗಿರಿರಾಜಕುಮಾರಿ ಕೈಮುಗಿದು ತನಗರುಹು ತತ್ವವೆನಲು ಸುರರು ಭಲಾ ಎನಲು ಪರಮ ಗುಣಸಾಂದ್ರ | ಕೇಳು ದಿನ- ಪರಾತ್ಪರನು ಶ್ರೀ ಗುರುರಾಮವಿಠಲ ವರತಾರಕ ಮಂತ್ರವಿದೇ ಎಂದನು 3
--------------
ಗುರುರಾಮವಿಠಲ
ಪ್ರಸನ್ನ ಶ್ರೀ ಕಲ್ಕಿ ಅಮಿತ ವಿಕ್ರಮ ಕಲ್ಕಿ ಅನಘ ಲಕ್ಷ್ಮೀರಮಣ ಶರಣು ಮಾಂ ಪಾಹಿ ಕೃಷ್ಣ ನರಹರಿ ಕಪಿಲ ತಿಲಕ ವೇಂಕಟರಮಣ ಪ್ರಾಣ ಹೃದ್‍ವನಜಸ್ಥ ರಕ್ಷಮಾಂ ಸತತ ಪ ಶ್ರೀ ದುರ್ಗಾಭೂರಮಣ ವಿಷ್ಣು ರುದ್ರ ಬ್ರಹ್ಮ ಮಾಯಾ ಜಯಾ ಕೃತಿ ಕೂರ್ಮ 1 ಧನ್ವಂತರಿ ಶರಣು ಅಜಿತ ಸ್ತ್ರೀರೂಪನೇ ಘನಭೂಮಿಧರ ನಾರಸಿಂಹ ವಾಮನ ತ್ರಿಪದ ರೇಣುಕಾತ್ಮಜರಾಮ ವೇಣುಗೋಪಾಲ ನಮೋ ಬುದ್ಧ ಸುಜನಪ್ರಿಯ ಕಲ್ಕಿ 2 ವೃಷಭ ತಾಪಸ ಯಜ್ಞ ದತ್ತ ವಡವಾವಕ್ತರ ಕೃಷ್ಣ ಹರಿನಾರಾಯಣ ವೇದವ್ಯಾಸ ಶಿಂಶುಮಾರ ಸುಗುಣಾರ್ಣವನೆ ಶ್ರೀಶ ಸರ್ವಾಶ್ರಯ ಅನಂತ ಸುಖರೂಪ 3 ಭೂಲೋಕದಲಿ ಮಣಿಮಂತಾದಿ ಅಸುರರು ಶೀಲ ಹರಿಭಕ್ತರನ ಕಂಡು ಸಹಿಸದಲೆ ಬಾಲ ಶಶಿಶೇಖರನ ಸ್ತುತಿಸಿ ವರಗಳ ಪಡೆದು ಇಳೆಯಲಿ ಜನಿಸಿದರು ತತ್ವಜ್ಞಾನಿಗಳ ವೋಲ್ 4 ಸೂತ್ರ ವಿರುದ್ಧ ಭಾಷ್ಯಗಳ್ ಮಾಡಿ ವೇದೋಪನಿಷದ್‍ಗಳಿಗೆ ಅಪ ಅರ್ಥ ಪೇಳಿ ಸಾಧುಗಳ ಮನಕೆಡಿಸೆ ಮಧ್ವಾಖ್ಯ ಸೂರ್ಯನು ಉದಿಸಿ ಸಜ್ಜನರ ಹೃತ್ತಿಮಿರ ಕಳೆಯೆ 5 ಶ್ರೀಪತಿ ವಿಷಯಕ ಜ್ಞಾನ ಮರೆ ಮಾಡುವ ಇಪ್ಪತ್ತು ಮೇಲೊಂದು ಅಪದ್ದ ದುರ್ಭಾಷ್ಯ ಅಪವಿತ್ರ ಅಚರಣೆ ದುಸ್ತರ್ಕ ದುರ್ವಾದ ಈ ಪರಿಸ್ಥಿತಿಯ ನೆಟ್ಟಗೆ ಮಾಡಿದಾ ಮಾಧ್ವ 6 ಇಪ್ಪತ್ತಿ(ತ್ತು) ಎರಡನೇ ಭಾಷ್ಯಾ ಸಿದ್ಧಾಂತವ ಉಪನಿಷದ್ ದಶಕಕೆ ಸರಿಯಾದ ಭಾಷ್ಯಗಳ ಸಪ್ತ ತ್ರಿಂಶತ್ ಒಟ್ಟುಗ್ರಂಥ ಸುರಧೇನುವ ಅಪವರ್ಗಾನಂದ ಒದಗಿಸಿದ ಯೋಗ್ಯರಿಗೆ 7 ಸದ್ಧರ್ಮ ಆಚರಣೆ ಯೋಗ್ಯ ಉಪಾಸನಾ ಭಕ್ತಿ ಸವೈರಾಗ್ಯ ಜ್ಞಾನ ಉನ್ನಾಹ ಅಧಿಕಾರಿಗಳು ಈ ಪರಿಯಲಿ ಸುಖಿಸಲು ಕ್ಷಿತಿಯ ಜನರಿಗೆ ಲಭಿಸಿತು ಕ್ಷೇಮ 8 ಕಾಲವು ಜರುಗಿತು ದೈತ್ಯರು ನೋಡಿದರು ಮೆಲ್ಲಮೆಲ್ಲನೆ ಪುನಃ ವಿಷಮ ಮಾಡಿದರು ಶೀಲರ ಹಿಂಸಿಸಿ ಸದ್ಧರ್ಮ ಕೆಡಿಸಿದರು ಖಳರು ಕ್ರೌರ್ಯವ ವರ್ಧಿಸಿದರು ದಿನ ದಿನದಿ 9 ಮಹಾಭಯಂಕರ ದೈತ್ಯ ಸಮೂಹವ ಸಂಹನನ ಮಾಡಿದಳು ಮಹಾದುರ್ಗಾದೇವಿ ಬ್ರಾಹ್ಮಣಕುಲದಲಿ ಪ್ರಾದುರ್ಭವಿಸಿದ ದೇವಿ ಮಹಾದುರ್ಗಾ ಜಗದಾಂಬಾ ಶರಣು ಮಾಂಪಾಹಿ 10 ಮಾಸ ಋತು ವರುಷಗಳು ಕಾಲ ಪ್ರವಹಿಸಿತು ಜನಗಳು ಕಲಿಯುಗದ ಕಡೇ ಭಾಗ ಬರಲಾಗ ಹೀನ ಕರ್ಮಂಗಳಲಿ ಆಸಕ್ತರಾದರು 11 ಪುರಾಣಂಗಳಲಿ ಕಲಿಯಗದ ಸ್ಥಿತಿಗತಿಯು ವಿವರಿಸಿದಂತೆಯೇ ನೆನೆಯಲೂ ಭೀತಿ - ಕರ ಪಾಪಕರ್ಮದಲಿ ಜನರು ರತರಾಗಿರಲು ನರಪರ ಕ್ರೂರತನ ದಿನ ದಿನ ಹೆಚ್ಚಿತು 12 ಜ್ಞಾನಾದಿ ಸಂಪತ್ತು ಕಳಕೊಂಡ ಜನರು ವಿಷ್ಣು ದ್ವೇಷಿಗಳಾಗಿ ಬಹು ಬಹು ನೀಚ- ತನದಲಿ ಇರುತಿರಲು ದೇವತಾವೃಂದವು ನಿನ್ನ ಬೇಡಿದರು ಪುನಃ ಧರ್ಮಸ್ಥಾಪಿಸಲು 13 ಯದಾಯದಾಹಿ ಸದ್ಧರ್ಮಕ್ಕೆ ಹಾನಿಯು ಅಧರ್ಮಕ್ಕೆ ವೃದ್ಧಿಯು ಆಗುವದೋ ಆಗಾಗ ಸಾಧುಗಳ ರಕ್ಷಣೆಗೆ ಪಾಪಿಗಳ ಹನನಕ್ಕೆ ಸದ್ಧರ್ಮ ಸ್ಥಾಪನೆಗೆ ಅವತಾರ ಮಾಳ್ಪಿ 14 ಭೂಮಿಯಲಿ ಸುಪವಿತ್ರ ಶಂಭಳ ಗ್ರಾಮದಲಿ ಬ್ರಾಹ್ಮಣ ಮಹಾತ್ಮ ವಿಷ್ಣು ಯಶಸ್ ಭವನದಲಿ ಅಮಿತ ಪೌರುಷಜ್ಞಾನ ಆನಂದಮಯ ನೀನು ವಿಮಲ ಕಲ್ಕ್ಯವತಾರ ಮಾಡಿದಿ ಮಹೋಜ 15 ಕ ಎಂದರಾನಂದ ಕಲ್ಕೆಂದರೆ ಜ್ಞಾನ ಆನಂದ ರೂಪ ಶೂಲಿ ವಜ್ರಿಗಳಿಗೆ ಸುಖಜ್ಞಾನ ಬಲ ಕೊಡುವ ಠಲಕನಮೋ ಪಾಪಹರ ಸೌಭಾಗ್ಯದಾತ 16 ಲೋಕವಿಲಕ್ಷಣ ಸುಪ್ರಭಾಶ್ವ ಏರಿ ನಿಖಿಳ ದುರ್ಮತಿ ಭೂಪಾಲ ಚೋರರನ್ನ ಅಖಿಳ ಪಾಪಿಗಳ ಅಧರ್ಮ ಆಚರಿಸುವರ ಶ್ರೀಕಾಂತದ್ವೇಷಿಗಳ ಕತ್ತರಿಸಿ ಕೊಂದಿ 17 ಸತ್ಯವ್ರತ ಸುರವೃಂದ ವಸುಮತಿ ಪ್ರಹ್ಲಾದ ಶತಮಖ ಪ್ರಜೆಗಳು ವಿಭೀಷಣ ಸುಗ್ರೀವ ಪಾರ್ಥಸುಧಾಮ ರಕ್ಷಕನೇ ಸುರಬೋಧಕನೇ ಸತ್ಯಧರ್ಮರ ಕಾಯ್ವ ಕರುಣಾಳು ಕಲ್ಕಿ 18 ಜ್ಞಾನಸುಖ ಭೂಮದಿ ಗುಣಪೂರ್ಣ ನಿರ್ದೋಷ ವಿಷ್ಣು ಪರಮಾತ್ಮ ಹರಿ ಉದ್ದಾಮ ಬ್ರಹ್ಮ ಪೂರ್ಣಪ್ರಜ್ಞಾರ ಹೃಸ್ಥ ವನಜಭವಪಿತ ಕಲ್ಕಿ ಪ್ರಸನ್ನ ಶ್ರೀನಿವಾಸ ಶರಣು ಮಾಂಪಾಹಿ 19 -ಇತಿ ಕಲ್ಕ್ಯಾವತಾರ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಣದೇವ ನೀ ಕಾಯೊ ಕರುಣಿ ಸತತ ಪಾಲಿಸು ಸುಖದಾತ ಪ. ಪ್ರಣಾಪಾನವ್ಯಾನೊದಾನತೋಷ ಭಾರತೀಶ ಅ.ಪ. ತ್ರಿವಿಧ ಜೀವರ ಶ್ವಾಸ ನಿಯಾಮಕನೆ ಶ್ರೀ ಹರಿ ಸೇವಕ ನೀನೆ ಭವ ಇಂದ್ರಾದಿಗಳಿಂದಲಿ ವಂದಿತನೆ ಭಾರತಿಗತಿ ಪ್ರಿಯನೆ ತ್ರಿವಿಧ ಶ್ವಾಸ ಜಪ ನಿರ್ಲಿಪ್ತದಿ ಜಪಿಸಿ ಜೀವರ ಗತಿಗೈಸಿ ನವವಿಧ ಭಕ್ತಿಯ ಹರಿಚರಣದಿ ನಿರುತ ಚರಿಸುವ ಮತಿದಾತ 1 ತತ್ವಾಧೀಶರ ಪ್ರೇರಕ ಮಹಪ್ರಾಣ ಜೀವರ ಸುತ್ರಾಣ ವ್ಯಾಪ್ತಜಗದಿ ಶ್ರೀ ಹರಿ ಲಕುಮಿಯ ಸಹಿತ ಬಳಿತ್ಥಾ ಸೂಕ್ತ ಸ್ತುತ ಸತ್ವ ಗುಣದ ಜೀವರ ಸದ್ಗತಿದಾತ ಸುಜ್ಞಾನ ಪ್ರದಾತ 2 ತ್ರೇತೆಯಲ್ಲಿ ಶ್ರೀ ರಾಮದಾಸ್ಯ ಚರಿಸಿ ದಶಶಿರನನು ಮುರಿಸಿ ಮಾತೆ ಕೊಟ್ಟ ಭಿಕ್ಷಾನ್ನ ಉಂಡು ಸುಖಿಸಿ ಬಕ ಹಿಡಿಂಬಕರೊರಸಿ ಪಾತಕಿ ಮಾಯವಾದಿ ಜೈಸಿ ಸದ್ಗ್ರಂಥವ ರಚಿಸಿ ಖ್ಯಾತ ಗೋಪಾಲಕೃಷ್ಣವಿಠ್ಠಲ ಪ್ರಿಯ ನಮೋ ಚಳ್ಳಕೆರೆನಿಲಯ 3
--------------
ಅಂಬಾಬಾಯಿ
ಫಲವಿದು ಬಾಳ್ದ್ದುದಕೆ ಪÀ ಸಿರಿ ನಿಲಯನ ಗುಣಗಳ ತಿಳಿದು ಭಜಿಸುವುದೆ ಅ.ಪ. ಸ್ವೋಚಿತ ಕರ್ಮಗಳಾಚರಿಸುತ ಬಹು ನೀಚರಲ್ಲಿಗೆ ಪೋಗಿ ಯೊಚಿಸದೆ ಖೇಚರವಾಹ ಚರಾಚರ ಬಂಧಕ ಮೋಚಕನಹುದೆಂದ್ಯೋಚಿಸುತಿಪ್ಪುದೆ 1 ನಿಚ್ಚ ಸುಭಕುತಿಯಲಚ್ಯುತನಂಘ್ರಿಗ ತುಚ್ಚ ವಿಷಯಗಳ ಇಚ್ಛಿಸದೆ ಯ ದೃಚ್ಛಾಲಾಭದಿಂ ಪ್ರೋಚ್ಚನಾಗುವುದೆ 2 ಮನೋವಾಕ್ಕಾಯದನುಭವಿಸುವ ದಿನ ದಿನದಿ ವಿಷಯ ಸಾಧನಗಳಿಗೂ ಅನಿಶಾಂತರ್ಗತ ವನರುಹದಳ ಲೋ ಚನಗರ್ಪಿಸಿ ದಾಸನು ನಾನೆಂಬುದೇ 3 ವಾಸವ ಮುಖ ವಿಬುಧಾಸುರ ನಿಚಯಕೆ ಈ ಸಮಸ್ತ ಜಗಕೀಶ ಕೇಶವಾ ನೀಶ ಜೀವರೆಂಬ ಸುಜ್ಞಾನವೆ 4 ಪಂಚ ಭೇದಯುತ ಪ್ರಪಂಚವು ಸತ್ಯ ವಿ ಭವ ಮುಖ ಬಲಿ ವಂಚಕಗೆ ಸಂಚಲ ಪ್ರತಿಮೆ ಅಚಂಚಲ ಪ್ರಕೃತಿಯು ಸಂಚಿಂತಿಸಿ ಮುದ ಲಾಂಭಿತನಹುದೆ 5 ಪಂಚ ಋತುಗಳಲಿ ಪಂಚಾಗ್ನಿಗಳಲಿ ಪಂಚ ಪಂಚರೂಪವ ತಿಳಿದು ಪಂಚ ಸುಸಂಸ್ಕಾರಾಂಚಿತನಾಗಿ ದ್ವಿ ಪಂಚ ಕರಣದಲಿ ಪಂಚಕನರಿವುದೆ 6 ಹೃದಯದಿ ರೂಪವು ವದನದಿ ನಾಮವು ಉದರದಿ ನೈವೇದ್ಯವು ಶಿರದಿ ಪದ ಜಲ ನಿರ್ಮಾಲ್ಯವನೆ ಧರಿಸಿ ಕೋ ಸದನ ಹೆಗ್ಗದವ ಕಾಯುವುದೆ 7 ಪಾತ್ರರ ಸಂಗಡ ಯಾತ್ರೆ ಚರಿಸುತ ವಿ ಧಾತೃ ಪಿತನ ಗುಣ ಸ್ತೋತ್ರಗಳಾ ಶ್ರೋತ್ರದಿ ಸವಿದು ವಿಚಿತ್ರಾನಂದದಿ ಗಾತ್ರವ ಮರೆದು ಪರತ್ರವ ಪಡೆವುದೆ 8 ಹಂಸ ಮೊದಲು ಹದಿನೆಂಟು ರೂಪಗಳ ಸಂಸ್ಥಾನವ ತಿಳಿದನುದಿನದಿ ಸಂಸೇವಿಸುವ ಮಹಾಪುರುಷರ ಪದ ಪಾಂಸುವ ಧರಿಸಿ ಅಸಂಶಯನಪ್ಪುದೆ 9 ವರ ಗಾಯಿತ್ರೀ ನಾಮಕ ಹರಿಗೀ ರೆರಡಂಘ್ರಿಗಳ ವಿವರವ ತಿಳಿದು ತರುವಾಯದಿ ಷಡ್ವಿಧ ರೂಪವ ಸಾ ಅನುದಿನ ಧ್ಯಾನಿಸುತಿಪ್ಪುದೆ 10 ಬಿಗಿದ ಕಂಠದಿಂ ದೃಗ್ಭಾಷ್ಪಗಳಿಂ ನಗೆ ಮೊಗದಿಂ ರೋಮಗಳೊಗೆದು ಮಿಗೆ ಸಂತೋಷದಿಂ ನೆಗೆದಾಡುತ ನಾ ಲ್ಮೊಗನಯ್ಯನ ಗುಣ ಪೊಗಳಿ ಹಿಗ್ಗುವುದೆ 11 ಗೃಹಕರ್ಮವ ಬ್ಯಾಸರದಲೆ ಪರಮೋ ತ್ಸಹದಲಿ ಮಾಡುತ ಮೂಜಗದ ಮಹಿತನ ಸೇವೆ ಇದೆ ಎನುತಲಿ ಮೋದದಿ ಅಹರಹರ್ಮನದಿ ಸಮರ್ಪಿಸುತಿಪ್ಪುದೆ12 ಕ್ಲೇಶಾನಂದಗಳೀಶಾಧೀನ ಸ ಮಾಸಮ ಬ್ರಹ್ಮ ಸದಾಶಿವರೂ ಈಶಿತವ್ಯರು ಪರೇಶನಲ್ಲದೆ ಶ್ವಾಸ ಬಿಡುವ ಶಕ್ತಿ ಲೇಸಿಲ್ಲೆಂಬುದೆ 13 ಏಕೋತ್ತರ ಪಂಚಾಶದ್ವರ್ಣಗ ಳೇಕಾತ್ಮನ ನಾಮಂಗಳಿವು ಸಾಕಲ್ಯದಿಯಿವರರಿಯರೆಂಬುದೆ 14 ಒಂದು ರೂಪದೊಳನಂತ ರೂಪವು ಪೊಂದಿಪ್ಪವು ಗುಣಗಳಾ ಸಹಿತ ಇಂದು ಮುಂದೆಂದಿಗು ಗೋ ವಿಂದಗೆ ಸರಿಮಿಗಿಲಿಲ್ಲೆಂತೆಂಬುದೆ 15 ಮೇದಿನಿ ಪರಮಾಣಂಬು ಕಣಂಗಳ ನೈದಬಹುದು ಪರಿಗಣನೆಯನು ಮಾಧವನಾನಂದಾದಿ ಗುಣಂಗಳ ನಾದಿ ಕಾಲದಲಿ ಅಗಣಿತವೆಂಬುದೆ 16 ಹರಿಕಥೆ ಪರಮಾದರದಲಿ ಕೇಳುತ ಮರೆದು ತನುವ ಸುಖ ಸುರಿವುತಲೀ ಉರುಗಾಯನ ಸಂದರುಶನ ಹಾರೈ ಸಿರುಳು ಹಗಲು ಜರಿ ಜರಿದು ಬಾಳ್ವುದೆ 17 ಆ ಪರಮಾತ್ಮಗೆ ರೂಪದ್ವಯವು ಪ ರಾಪರ ತತ್ತ್ವ ಗಳಿದರೊಳಗೆ ಸ್ತ್ರಿ ಪುಂ ಭೇದದಿ ಈ ಪದ್ಮಜಾಂಡವ ವ್ಯಾಪಿಸಿಹನೆಂದೀಪರಿ ತಿಳಿವುದೆ 18 ವಿಷಯೇಂದ್ರಿಯಗಳಲಿ ತದಭಿಮಾನಿ ಸುಮ ನಸರೊಳು ನಿಂದು ನಿಯಾಮಿಸುತಾ ವಾಸುದೇವ ತಾ ವಿಷಯಂಗಳ ಭೋಗಿಸುವನೆಂದರಿವುದೆ 19 ಮೂಜಗದೊಳಗಿಹ ಭೂ ಜಲ ಖೇಚರ ಈ ಜೀವರೊಳೊ ಮಹೌಜಸನ ಪೂಜಿಸುತನುದಿನ ರಾಜಿಸುತಿಪ್ಪುದೆ 20 ಗುಣಕಾಲಾಹ್ವಯ ಆಗಮಾರ್ಣವ ಕುಂ ಭಿಣಿ ಪರಮಾಣ್ವಾಂಬುಧಿಗಳಲಿ ವನಗಿರಿ ನದಿ ಮೊದಲಾದದರೊಳಗಿಂ ಧನಗತ ಪಾವಕನಂತಿಹನೆಂಬುದೆ 21 ಅನಳಾಂಗಾರನೊಳಿದ್ದೋಪಾದಿಯ ಲನಿರುದ್ಧನು ಚೇತನರೊಳಗೆ ಕ್ಷಣ ಬಿಟ್ಟಗಲದೆ ಏಕೋ ನಾರಾ ಯಣ ಶ್ರುತಿ ಪ್ರತಿಪಾದ್ಯನು ಇಹನೆಂಬುದೆ 22 ಪಕ್ಷಗಳಕ್ಷಿಗಳಗಲದಲಿಪ್ಪಂ ತ್ಯಕ್ಷರ ಪುರುಷನಪೇಕ್ಷೆಯಲಿ ಕುಕ್ಷಿಯೊಳಬ್ಜಜ ತ್ರ್ಯಕ್ಷಾದ್ಯಮರರ ಈಕ್ಷಿಸಿ ಕರುಣದಿ ರಕ್ಷಿಪನೆಂಬುದೆ 23 ಕಾರಣ ಕಾರ್ಯಾಂತರ್ಗತ ಅಂಶವ ತಾರಾವೇಶಾಹಿತ ಸಹಜಾ ಪ್ರೇರಕ ಪ್ರೇರ್ಯಾಂಹ್ವಯ ಸರ್ವತ್ರ ವಿ ಕಾರವಿಲ್ಲದಲೆ ತೋರುವನೆಂಬುದೆ 24 ಸ್ತುತಿಸುತ ಲಕ್ಷ್ಮೀ ಪತಿಗುಣವ ಕೃತಿಪತಿ ಸೃಷ್ಟಿ ಸ್ಥಿತಿಲಯ ಕಾರಣ ಇತರ ಸರ್ವ ದೇವತೆಗಳಿಗಿನಿತಿಲ್ಲೆಂಬುದೆ25 ಪವನ ಮತಾನುಗರವ ನಾನಹುದೆಂ ದವನಿಯೊಳಗೆ ಸತ್ಕವಿ ಜನರ ಭವನಂಗಳಲಿ ಸಂಚರಿಸುತ ಸುಕಥಾ ಶ್ರವಣವ ಮಾಡುತ ಪ್ರವರನಾಗುವುದೆ26 ಪನ್ನಗಾಚಲ ಸನ್ನಿವಾಸ ಪಾ ವನ್ನಚರಿತ ಸದ್ಗುಣಭರಿತಾ ಜನ್ಯಜನಕ ಲಾವಣ್ಯೇಕನಿಧಿ ಜ ಗನ್ನಾಥವಿಠಲಾನಾನ್ಯಪನೆಂಬುದೆ 27
--------------
ಜಗನ್ನಾಥದಾಸರು
ಫಲಹಾರವ ಮಾಡೋ ಪದುಮಲೋಚನನೆ| ಒಲಿದು ಶ್ರೀ ಭೂದೇವಿ ಅರಸಿಯರೊಡನೆ ಪ ಕದಳೀ ಕಪಿಥ್ಥಶರ್ಕರ ಮೋದದಿಂದಲೀ| ಒದಗಿ ಬೆಂಡುಖರ್ಜೂರಿ ಘೃತಮೋಪ್ತದಿಂದಲಿ1 ಕಳೆದ ಸಿಗುರಿಯಾ ಕಬ್ಬಿನ ಪೇರು ಬದರಿಯಾ| ಬಲಿದ ಪರಿಮಳ ರುಚಿಗಳ ಒಪ್ಪನಿಂದಾ 2 ವಸುಧೆಯೊಳುಳ್ಳ ಸಕಲ ಫಲಸಾರವಾ| ಬಿಸಿಯಾದ ಪಲ್ಗೆನೆಯ ಮಧುಸಹಿತಾ 3 ಗುರುಮಹೀಪತಿಸ್ವಾಮಿ ಶರಣ ರಕ್ಷಕನೇಮಿ| ಸುರರಿಗಮೃತವೆರೆದಾನಂದ ಕರದಲಿ4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಂದ ಶ್ರೀ ಹರಿ ಬಂದ ಪ ಬಂದ ಬಂದ ಮುಚುಕುಂದ ಪರದ ಅರ- ವಿಂದನಯನ ಗೋವಿಂದ ಪರಾತ್ವರ ಕಂದನೆನ್ನ ಮನ ಮಂದಿರಕೀಗಲೆ ನಂದವ ನೀಡುತ ಇಂದಿರೆಸಹಿತದಿ ಅ.ಪ. ಪೊತ್ತವ ಬಂದ ಅಜಿತನುಬಂದ ಚಾರುವರಾಹನು ಭೂಸಹಬಂದ ಪೋರನ ಸಲಹಿದ ಘೋರನು ಬಂದ ಭಾರ್ಗವ ಬಂದ ಕೌರವವಂಶಕುಠಾರನು ಬಂದ ಕಲ್ಕಿಯು ಬಂದ 1 ಉಸುರಲು ಹಯಮುಖಬಂದ ದತ್ತನುಬಂದ ನೀಡಲು ಯಜ್ಞನುಬಂದ ಸಾಧುಹರಿನಾರಾಯಣ ಬಂದ ಶಿಂಶುಮಾರನು ಬಂದ ಧನ್ವಂತ್ರಿಯು ಬಂದ 2 ಶ್ರೀ ವಿಷ್ಣುವು ಬಂದ ಉಲ್ಲಾಸದಿ ಬಂದ ಸಂತೋಷನು ಬಂದ ತೈಜಸ ಕರುಣದಿ ಬಂದ ಮುಕ್ತೇಶನು ಬಂದ ಪರಾದ್ಯನಂತನು ಬಂದ 3 ಜಗನೂಕೂವ ಬಂದ ಪುರುಹೂತ ವಿನುತ ಸಕಲಾರ್ತಿಹರ ತಾ ಬಂದ ವೈರಾಜ್ಯನು ಬಂದ ಶೃತಿ- ನೀಕ ಸುವಂದಿತನಿರುಪಮ ಬಂದ ವಾಕುಮನಕೆ ಸಾಕಲ್ಯಸಿಗದ ಪುಣ್ಯ- ವಿವರ್ಜಿತ ಭಗಲೋಕೈಕ ವಂದ್ಯ ನಿಜಭಕ್ತಗಣ ಜಯಪರಾಕುನುಡಿಯುತಿರೆ ಮೆಲ್ಲ ಮೆಲ್ಲಗೆ4 ಸರ್ವಸಾಕ್ಷಿಗಭೀರ ಪರಾಕು ಸ್ವತಂತ್ರನೆ ಪರಾಕು ಸರ್ವರಪಾಲಿಪ ಸರ್ವರ ರಕ್ಷಿಪ ಸರ್ವಚರಾಚರಭಿನ್ನ ಪರಾಕು ಪ್ರತಿಪಾದ್ಯಪರಾರು ಸರ್ವಕಾಲದಲಿ ಸರ್ವದೇಶದೊಳು ಸರ್ವದೆಶೆಯೊಳು ಸಮನೆ ಪರಾಕು ಪರಾಕು 5 ನಿತ್ಯಾನಿತ್ಯಜಗಜ್ಜನಕ ಸರ್ವೋತ್ತಮ ಸತ್ಯಸಂಕಲ್ಪ ಪರಾಕು ನಿಖಿಳಪ್ರದಾಯಕ ಪರಾಕು ಭೃತ್ಯಾನುಗ್ರಹ ಕಾರಕಶೀಲ ಸದಾಪ್ತತಮ ವಿಶ್ವಾತ್ಮನೆಪರಾಕು ನಿತೈಶ್ಪರ್ಯ ಕೀತ್ರ್ಯಾತ್ಮಕ ಸರ್ವಾತತ ಬಲವಿಖ್ಯಾತಪರಾಕು ನೀತ ಜ್ಞಾನಾನಂದ ಪರಿಪೂರ್ಣನಿತ್ಯತೃಪ್ತ ಮಹಾಂತ ಪರಾಕು ಪರಾಕು 6 ಪರಾಕು ರೂಪಾತ್ಮ ಪರಾಕು ಪುರುಷ ಸೂಕ್ತ ಸುಗೇಯ ಪ್ರಖ್ಯಾತ ಮಹಾಮಹಿಮ ಪರಾಕು ನಾಮಕ ಪರಾಕು ಸುನಾಮ ಓಂಕಾರಾಧಿಪ ಪರಾಕು ವಿಭೂತಿ ಪರಾಕು 7 ಪ್ರೇಮ ಚೊಕ್ಕ ಸೃಷ್ಟಿಗೈವನಿತ್ಯಸುನೇಮ ಕರುಣಾಮಣಿ ಶ್ರೀಕಾಮ ಅಕ್ಕರೆಯಲಿ ಜಗಕಾವ ನಿಸ್ಸೀಮ ಮುಕ್ಕಣ್ಣ ವಿಧಿಸಿರಿ ಸಾರ್ವಭೌಮ ವಿನುತ ಗುಣಲಲಾಮ ಸುನಾಮ ಮೇಘಶ್ಯಾಮ 8 ಸುಂದರ ಬಂದ ಸೃಷ್ಠಿಸ್ಥಿತಿಲಯಗೈವ ಮು- ವೃಂದಕಳೆದು ನಿಜ- ಸುಧಾರ್ಣವ ಬೃಹತೀನಾಮಗ ಮಂದಸ್ಮಿತ ವದನವ ತೊರುವ ಈತನು ಸ್ಯಂದನವೇರಿಹ ಜಯಮುನಿಹೃದಯಗ ಮಧ್ವರಮಾವರ ಶ್ರೀಕೃಷ್ಣವಿಠಲನು ಭವ ಪರಿವಾರದ ಕೂಡಿಯೆ ಬಂದಾ 9
--------------
ಕೃಷ್ಣವಿಠಲದಾಸರು
ಬಂದನಿಂದು ರಾಘವೇಂದ್ರನು ಆನಂದದಿಂದಲಿ ಬಂದನಿಂದು ರಾಘವೇಂದ್ರನು ಪ. ಕಂದರಾದ ಭಕ್ತ ಜನರ ಚಂದದಿಂದ ಪೊರೆವೆನೆಂದು ಅ.ಪ. ಪರಿಪರಿಯ ವೈಭವವನು ಪಡಲಿಬೇಕೆಂದು ಕರದು ತರಲು ಕರಕರಿಯ ಕರದು ಮನವ ನೋಡಬೇಕೆಂದು 1 ಕರುಣಾನಿಧಿ ಎಂದೆನಿಸಿ ನಿನಗೆ ಥರವೆ ಇದು ಎಂದು ಪರಿಪರಿಯಲಿ ಸ್ತುತಿಸುತಿರಲು ಸ್ಥಿರವಾರದಿ ಹರುಷ ತೋರಲು 2 ಬಂದ ಬುಧರಿಂದ ಪೂಜೆನಂದಗೈಸ ಬೇ ಕೆಂದು ತುಂಗಜಲವ ತರುತಿರÉ ಬಂದ ಮಾಯದಿಂದ ಹರಿಯು 3 ದ್ವಿಜರ ಹಸ್ತಜಲವ ಶ್ರೀನಿವಾಸ ಬೇಡಲು ದ್ವಿಜರು ಕೊಡಲು ಗುರುಗಳನ್ನು ಪೂಜೆಗೈದೆನೆಂದು ನುಡಿದ 4 ಈ ತೆರದ ಕೌತುಕವ ಶ್ರೀನಾಥ ತೋರುತ ಆ ತಕ್ಷಣದಿ ಮಾಯವಾಗೆ ರೀತಿಯಿಂದ ಪೂಜೆಗೈಯ್ಯಲು 5 ಮಂತ್ರಾಲಯದ ಮಂದಿರನಿಗೆ ಪಂಚಾ ಮೃತದಿಂದ ಸಂತೋಷದಲಿ ಪೂಜೆ ಗೈದು ಪಂಚಮೃಷ್ಟಾನ್ನ ಬಡಿಸೆ6 ಶ್ರೀನಿವಾಸ ಸಹಿತ ಶ್ರೀ ರಾಘವೇಂದ್ರರು ಸಾನುರಾಗದಿ ಸೇವೆಕೊಂಡು ನಾನಾ ವಿಧದ ಹರುಷಪಡಿಸೆ 7 ಎನ್ನ ಮನಕೆ ಹರುಷಕೊಡಲು ನಿನ್ನ ಭಜಿಸುವೆ ನಿನ್ನ ಮನಕೆ ಬಾರದಿರ್ದೊಡೆ ಮುನ್ನೆ ಪೋಗಿ ಬಾರೆಂದೆನಲು 8 ತುಂಗಮಹಿಮ ರಾಘವೇಂದ್ರರ ಮಂಗಳದ ಪುತ್ರ ಕಂಗಳೀಗೆ ತೋರಿ ಅಂತ ರಂಗದಲ್ಲಿ ಹರುಷವಿತ್ತು 9 ಶ್ರೀ ಗುರುಗಳ ಕರುಣದಿಂದ ರಾಘವೇಂದ್ರನು ಭಾಗವತರ ಪೊರೆವೆನೆಂದು ಯೋಗಿ ಶೇಷಾಂಶ ಸಹಿತ 10 ಇಂತು ರಾಘವೇಂದ್ರ ಗುರು ತಾ ಶಾಂತನಾಗುತ ಶಾಂತ ಗೋಪಾಲಕೃಷ್ಣವಿಠ್ಠಲನ ಅಂತರಂಗದಿ ತೋರ್ವೆನೆಂದು 11
--------------
ಅಂಬಾಬಾಯಿ
ಬಂದರು ಹರಿಯ ವಾಲಗಕೆ ಭಕ್ತ | ವೃಂದ ಸಹಿತ ಸುರ ಶ್ರೇಷ್ಠ ಮೊದಲಾದವರು ಪ ನಾಗಾರಿ ಸುತ ಬಂದ | ನಾಗಾರಿ ಬಂದಾ | ನಾಗಾನ ಧನು ಬಂದ ನಾಗಪುಂಗವ ಬಂದ | ಗಮನ ಬಂದ | ನಾಗ ಬಂದಾ || 1 ನಾಗಶಯ ಮುಖವಾದ ನಾಗವಾಹನ ಮಿತ್ರ | ನಾಗ ಚರ್ಮಾಂಬರ ಸಖನು ಬಂದಾ | ನಾಗಾರಿ ಸುತೆಯಳನಾಳಿದವನು ಬಂದಾ | ನಾಗಾರಿ ಬಾಂಧವ ಬಂದಾ || 2 ನಾಗದ್ವೇಷಿಕನು ನಾಗಾನಾದನನುಜ | ನಾಗಕೇತನನ ಕೊಂದಗ್ರಜನು ಬಂದಾ | ಸಿರಿ ವಿಜಯವಿಠ್ಠಲರೇಯ | ನಾಗವಾಹನನಾಗಿ ಬರುವ ಸಂಭ್ರಮದೊಳು ||3
--------------
ವಿಜಯದಾಸ
ಬಂದಿದ್ದನೆ ರಂಗ ಬಂದಿದ್ದನೆ ಕೃಷ್ಣ ಬಂದಿದ್ದನೆ ಪ. ಬಂದಿದ್ದನೆ ನಮ್ಮ ಮಂದಿರದೊಳು ಬೆಳ ದಿಂಗಳ ತೆರದೊಳು ಬಂದಿದ್ದನೆ ಅ.ಪ. ಗೆಜ್ಜೆ ಕಾಲ್ಕಡಗ ಸಜ್ಜಿನಿಂದಿಟ್ಟು ಕರ ಕ್ಷಿತಿ ತಳ ವಂದಿತ ಸತಿ ಪದುಮಾವತಿ ಲಕುಮಿ ಸಹಿತ ಕೃಷ್ಣ 1 ರವಿಯ ಕಾಂತಿ ಕೋಟಿ ಪ್ರಭೆ ಕಿರೀಟವು ವರದ ಮಾಧವನು2 ಚತುರ ಹಸ್ತದಿ ಶಂಖ ಚಕ್ರಗದಾ ಪದ್ಮ ಸತಿ ತುಳಸಿಯ ಮಾಲಧರನೆ ಜತೆ ತನ್ನ ಭಕ್ತರ ಹಿತದ ಪೂಜೆಯಗೊಂಡು ವಿತತ ವೈಭವದಿಂದ 3 ವರಪ್ರದ ವೆಂಕಟ ವರಗಳ ನೀಡುತ ತನ್ನ ಚರಣ ತೋರುತ ಭಕ್ತರಿಗೆ ಕೇಸರಿ ತೀರ್ಥವ ಕರುಣದಿ ತೋರುತ ಕರಿವರದ ಕೃಷ್ಣ 4 ಪಂಚಾಮೃತದಭಿಷೇಕವ ಕಂಡೆನೆ ಎನ್ನ ಸಂಚಿತಾರ್ಥದ ಪುಣ್ಯದ ಫಲದಿ ಮಿಂಚಿದ ಪಾಪವ ಕಳೆದರತಿಹರುಷದಿ ಹಂಚಿ ವರದ ಹಸ್ತ ಕಂಚಿ ವರದ ತೋರೆ ಬಂದಿದ್ದನೆ 5 ಕಂಕಣ ಕೈಯೊಳು ಧರಿಸಿಹನೆ ದಿವ್ಯ ಹೇಮ ಶೋಭಿತನೆ ಕಿಂಕರ ವರದ ಮಾಂಗಲ್ಯ ಕಟ್ಟಿದ ಸತಿ ಶಂಕರಾದಿ ಸ್ತುತ ವೆಂಕಟರಮಣನು 6 ಸುರವರÀ ವಂದ್ಯಗೆ ಆರತಿ ಎತ್ತಲು ಕೇಸರಿ ತೀರ್ಥವ ನೀಡಿದನೆ ವರ ಪ್ರಸಾದದ ಮಹಿಮೆಯ ತೋರುತ ಶರಧಿ ಗಂಭೀರನು 7 ಉರುಟಣಿಯ ಮಾಡಿದ ವರಸತಿ ಜತೆಯಲಿ ವರ ಶೇಷಾಚಲನು ತಾನೆ ಹರುಷವ ಬೀರುತ ವರ ಶೇಷನ ಮೇಲೆ ಮೆರೆವ ಶಯನಗೊಂಡು ಹರುಷದಿ 8 ಗಂಧ ಪುಷ್ಪ ತಾಂಬೂಲವಗೊಂಡನೆ ತಂಡ ತಂಡ ಭಕ್ತರ ವಡೆಯ ಉದ್ದಂಡ ಭಕ್ತರಿಗೆ ಉದ್ದಂಡ ವೆಂಕಟ 9 ನಾಟಕಧಾರಿ ತಾ ವಧೂಟಿ ಭೂಪ ಲಕ್ಷ್ಮಿ ಸಹ ನೋಟಕರಿಗೆ ಆನಂದ ತೋರಿದನೆ ಧಾಟಿಧಾಟಿ ರಾಗದಿ ಭಕ್ತರು ಸ್ತುತಿಸೆ ಸಾಟಿಯಿಲ್ಲದ ವೈಭವವ ತೋರುತ ಕೃಷ್ಣ 10 ಕರವ ಮುಗಿದು ಸ್ತೋತ್ರವ ಮಾಡಿದೆನೆ ಎನ್ನ ಕರೆದಾದರಿಸು ಹರಿಗೆ ನಿರುತ ಎಮ್ಮನು ಹಯನೇರಿದನೆ ಭಯಕೃದ್ಭಯ ಹಾರಿ 11
--------------
ಸರಸ್ವತಿ ಬಾಯಿ
ಬಂದು ನಿಲ್ಲೆಲೊ ಮನಮಂದಿರದೊಳು ಹರಿ ಇಂದುವದನ ಆನಂದದಿಂದ ಪ. ಮುಂದಗಮನೆರ ಅಂದದಿ ಕೂಡ್ಯರ- ವಿಂದ ಮಧ್ಯದಿ ಬಹು ಸುಂದರ ವೆಂಕಟ ಅ.ಪ. ಗಜವ ಪಾಲಿಸಿದಂಥ ಭುಜಗಶಯನ ಹರೆ ತ್ರಿಜಗದೊಳಗೆ ದಿಗ್ವಿಜಯ ಮೂರುತಿ ಗೋ- ವ್ರಜವ ಪಾಲಿಸಿ ಭೂಭುಜರ ಪೊರೆದೆ ಅಂ- ಬುಜನೇತ್ರ ಅಜಪಿತ ಭಜಿಸಲಾಪೆನೆ ನಿನ್ನ ಭುಜಗ ಭೂಷಣವಂದ್ಯ ರಜ ತಮೊ ಸತ್ವದಿ ತ್ರಿಜಗವ ಸೃಷ್ಟಿಪೆ ಕುಜನರ ಶಿಕ್ಷಿಪೆ ರಜ ತಮೊ ದೂರನೆ ಸುಜನರ ಪೊರೆಯುವ ಋಜುಗಣವಂದಿತ 1 ವ್ಯಾಪ್ತಾ ಜಗದಿ ನಿರ್ಲಿಪ್ತ ಗುಣಗಳಿಂದ ಆಪ್ತ ಜೀವಕೆ ಸುಷುಪ್ತಿ ಕಾಲದಿ ನೀ ಗುಪ್ತನಾಗಿ ಪೊರೆವ ಶಕ್ತನಹುದೊ ತ್ರಿ- ಸಪ್ತ ಇಂದ್ರಿಯಗಳ ತೃಪ್ತಿಗೊಳಿಸು ನಿನ್ನೊಳ್ ಸಪ್ತ ಋಷಿಗಳಿಂದ ಗುಪ್ತರ್ಚನೆಗೊಂಬೆ ಸಪ್ತಜಿಹ್ವನೊಳು ವ್ಯಾಪ್ತನಾಗಿ ಸುರರ ತೃಪ್ತಿಪಡಿಸುವ ವ್ಯಾಪ್ತ ಮೂರುತಿಯೆ ಸಪ್ತ ಸಪ್ತ ಭುವನೇಶ ಪ್ರಕಾಶ 2 ವೇದಸುತಗೆ ಇತ್ತು ಆದರದಿ ಸುಧೆ ಮೋದದಿ ಸುರರಿಗುಣಿಸಿ ಭೂದೇವಿಯನು ಕಾಯ್ದೆ ಬಾಧಿಸೆ ಖಳ ಸುತನ ಭೇದಿಸಿ ಕಂಭ ಬಂದೆ ಪಾದದಿ ಗಂಗೆ ಪೆತ್ತು ಬಾಧೆ ಕ್ಷತ್ರಿಯರಿಗಿತ್ತೆ ಆದರದಲಿ ಸುಗ್ರೀವನ ಪೊರೆದೆ ಯಾದವ ವಂಶ ಮಹೋದಧಿ ಚಂದ್ರ ಸಾಧಿಸಿ ತ್ರಿಪುರರ ಛೇಧಿಸಿ ಕಲಿಮುಖ- ರಾದ ದುಷ್ಟರ ಸೀಳಿ ಬಾಧೆಯ ಬಿಡಿಸಿದೆ 3 ಪದ್ಮನಾಭನ ತೋರೊ ಪದ್ಮಸಂಭವ ಜನಕ ಪದ್ಮನಾಭನೆ ಹೃತ್ಪದ್ಮ ಮಧ್ಯದಿ ವಾಸ ಪದ್ಮ ಬಾಂಧವ ತೇಜ ಪದ್ಮ ನಯನಕರ ಪದ್ಮದಿಂದಲಿ ನೀ ಪದ್ಮಾವತಿಯ ಕೂಡ್ದೆ ಪದ್ಮವೈರಿಯ ಕೋಟಿ ಮುದ್ದು ಮುಖದ ತೇಜ ಪದ್ಮ ಉದರ ಷಟ್ಪದ್ಮದಿ ವಾಸ ಪದ್ಮ ಸರೋವರ ತೀರವಾಸ ಹೃ ತ್ಪದ್ಮ ಮಧ್ಯದಿ ಭೂಪದ್ಮಿನಿ ಸಹಿತ 4 ಆಪಾರ ಮಹಿಮನೆ ಗೋಪಾಲಕೃಷ್ಣವಿಠ್ಠಲ ಭೂಪರೈವರ ಕಾಯ್ದೆ ದ್ರೌಪದಿ ಮಾನದೊಡೆಯ ನೀ ಪ್ರೀತಿಯಿಂದ ಪೋಗಿ ತಾಪವ ಬಿಡಿಸಿದೆ ವ್ಯಾಪಕನೊ ಜಗಸ್ಥಾಪಕನೊ ಬಹು ರೂಪಕನೊ ದುಷ್ಟತಾಪಕನೊ ಹರಿ ಪಾಪ ಹರಿಸಿ ಕರ್ಮಲೇಪನ ಮಾಡದೆ ಪರಿ ಪರಿಯಿಂದ ಕಾಪಾಡೊ ಭಕ್ತರ5
--------------
ಅಂಬಾಬಾಯಿ
ಬಂದು ನಿಲ್ಲೋ ಶ್ರೀಹರೇ-ಬಂದುನಿಲ್ಲೊ ಪ ಇಂದು ಹಿಂದು ನೀನೆಂದಿಗು ತಂದೆ ಗೋ- ವಿಂದ ಅನಿಮಿತ್ತಬಂಧು ಕಣ್ಣಮುಂದೆ ಅ.ಪ ಸ್ವಾಂಶದಿಂದ ಅಭಿವ್ಯಕ್ತಿಯಾದೆ ಪಂ- ಚಾಂಶತೋರಿ ಸರಸ ಜನನ ಮಾಡಿದೆ ಸ್ವಾಂಶನಾಗಿ ಅವತರಿಸಿ ಮೆರೆವ ಸ- ರ್ವಾಂಶದಿಂದಿಹ ತ್ರಿಂಶ ರೂಪನೇ 1 ಸ್ವಗತಭೇದವಿವರ್ಜಿತನೆನಿಸಿ ತ್ರಿಗುಣಮಯದಿ ಬ್ರಹ್ಮಾಂಡ ನಿರ್ಮಿಸಿ ಅಗಣಿತಮಹಿಮಾಧಾರನಾಗಿ ನಿಂದು ಮಿಗೆ ಶೋಭಿಸುವ ವಿರಾಟಮೂರುತಿಯೆ2 ಕಾರಣನೆನಿಸಿದ ಕರ್ಮನಿವೃತ್ತಿಗೆ ಸಾರವಾದ ಜ್ಞಾನಯೋಗ ಮಾರ್ಗವ ನಾರದಾದಿ ಮಹಾಮುನಿಗಳಿಗರುಹಿದ ನರನಾರಾಯಣ ಬದರಿ ಆಶ್ರಯನೇ 3 ಹಂಸಕಪಿಲ ದತ್ತಾತ್ರೇಯ ರೂಪನೆ ಹಂಸರಹಸ್ಯಗಳೆಲ್ಲವ ಪೇಳಿ ಸಂಶಯ ಬಿಡಿಸಿದೆ-ಜೀವಪರಮಾತ್ಮರ ಅಂಶಗಳರುಹಿದ ಹಂಸಮೂರುತಿಯೆ4 ಅಜಪಿತ ನೀ ಗಜರಾಜನ ಸಲಹಿದೆ ಭಜಿಸಿದ ವಾಲಖಿಲ್ಯರ ಕಾಯ್ದೆ ಅಜಹತ್ಯವು ವೃತ್ರವಧೆಯಿಂದ ಕಾಯ್ವ ಬಿ- ಡೌಜನ ಸಲಹಿದ ಗಜರಾಜ ವರದಾ5 ಪುರುಹೂತನ ಅಹಂಕಾರ ಖಂಡಿಸಿ ಕಿರುಬೆರಳಲಿ ಗೋವರ್ಧನಗಿರಿ ಎತ್ತಿ ಪರಿಪಾಲಿಸಿ ಗೋಬೃಂದವನೆಲ್ಲವ ಸುರರಿಂದ ಪೊಗಳಿಸಿಕೊಂಡೆ ಗೋವಿಂದ6 ಬುಧರರಿಯುಲು ಆ ವೇದ ವಿಭಾಗಿಸೆ ಉದಯಿಸಿ ಮುದದಿಂದ ಬದರಿಯ ಸದನದಿ ಬೋಧಿಸುತ್ತಲಿಹ ಬಾದರಾಯಣನೇ7 ಅಖಿಳಾಂಡಕೋಟಿಬ್ರಹ್ಮಾಂಡನಾಯಕ ವಿಕುಂಠಳೆಂಬೊ ಉದರದಿ ಜನಿಸಿ ಲಕುಮಿರೂಪಿಯಾದ ಸುಂದರಿಯ ಕೂಡ ಭೂ- ವೈಕುಂಠ ನಿರ್ಮಿಸಿದ ವೈಕುಂಠಮೂರುತಿಯೆ 8 ಸತ್ಯವ್ರತನೆಂಬೊ ಮನುವಿನುದ್ಧರಿಸಿ ಉತ್ತಮ ಔಷಧಿಗಳೆಲ್ಲವ ಸಲಹಿದೆ ದೈತ್ಯನಾದ ಉನ್ಮತ್ತನ ಕೊಂದು ಶ್ರುತಿಯ ತಂದಿತ್ತ ಮತ್ಸ್ಯಮೂರುತಿಯೆ 9 ಸುರಭಿನೆವನದಿ ಶರಧಿಮಥಿಸೆ ತಾ ಭರದಿ ಬೆನ್ನೊಳು ಧರಿಸಿಹೆ ಮಂದರ ಗಿರಿಧರನೆನಿಸಿದೆ ಕಮಠರೂಪನೆ 10 ಪ್ರಳಯ ಜಲಧಿಯೊಳು ಇಳೆಯನು ಕದ್ದಾ ಖಳಹಿರಣ್ಯನಾ ಶಿರವ ಚೆಂಡಾಡಿ ಜಲಧಿಯ ಶೋಧಿಸಿ ಇಳೆಯನು ತಂದು ಜಲಜಸಂಭವಗಿತ್ತ ಕ್ರೋಢರೂಪನೆ 11 ದುರುಳತನದಿ ತನ್ನ ತರಳನ ಬಾಧಿಪ ಹಿರಣ್ಯಕಶಿಪುವಿನ ಉದರವ ಬಗೆದು ಶರಣನಿಗಭಯವ ಕರುಣಿಸಿ ತೋರಿದ ಸರ್ವವ್ಯಾಪ್ತನೆಂದರುಹಿದ ನರಹರಿಯೇ12 ಬಲಿಯಿಂದಪಹೃತವಾದ ಸಾಮ್ರಾಜ್ಯವ ಸುಲಭದಿಂದಲಿ ಪುರಂದರಗಿತ್ತು ಸಲಹಿದೆ ಒಲಿದು ಬಲಿಯ ಭಕ್ತಿಗೆ ನೀ ಬಾ- ಗಿಲ ಕಾಯ್ದ ವಟು ವಾಮನನೆ 13 ದುರುಳತನದಿ ಆ ಹೈಹಯರೆಂಬ ನರಪರದುರ್ಮದ ಮರ್ದಿಸಲೋಸುಗ ನೃಪರ ಶಿರವನೆಲ್ಲ ತರಿದು ನಿಗ್ರಹಿಸಿದ ಭಾರ್ಗವ ಮೂರ್ತೇ 14 ಶರಧಿ ಬಂಧಿಸಿ ಸೇತುಕಟ್ಟಿ ಕಪಿ- ವೀರರೊಡನೆ ಆ ರಾವಣನಡಗಿಸಿ ಭೂ ಭಾರವನಿಳುಹಿಸಿ ಭೂಮಿಜೆಯನು ತಂದ ಅ- ಸುರ ಮರ್ದನ ದಾಶರಥಿ ರಾಘವ 15 ವಸುಮತಿಭಾರವನಿಳುಹಲೋಸುಗ ವಸುದೇವಸುತ ಶ್ರೀಕೃಷ್ಣನೆನುತಲಿ ಶಿಶುಪಾಲಾದಿಗಳಾಂತಕನೆನಿಸಿದ ಶಶಿಮುಖಿರುಕ್ಮಿಣಿ ಸಹಿತ ಶ್ರೀಕೃಷ್ಣ 16 ವೇದ ಕರ್ಮಗಳಿಗನರ್ಹರೆಲ್ಲರು ಸಾದರದಿಂದಲಿ ಅಧಮರೆಸಗುತಿರೆ ವೇದವಿರುದ್ದವಾದಗಳಿಂದಲೇ ಮೋಹವ ತೋರಿದೆ ಬುದ್ಧಸ್ವರೂಪನೆ17 ದುರುಳತನದಿ ಇಳೆಯಾಣ್ಮರುಗಳು ಕ್ರೂರತನದಿ ಪರಪೀಡಕರಾಗಿರೆ ಪರಿಹರಿಸಲು ಭೂಭಾರಕ್ಕಾಗಿ ಅವ- ತರಿಸಿ ಮೆರೆಯುವ ಕಲ್ಕಿರೂಪನೆ 18 ಏಕರೂಪ ಅನೇಕರೂಪನೆ ಏಕಮೇವ ನೀ ಪ್ರಕಟ ಮಾಡುವೆ ಪಿನಾಕಿ ಪ್ರಮುಖರು ಏಕದೇಶದಿ ಸಾಕಲ್ಯವ ತಿಳಿಯರೊ 19 ದೋಷದೂರ ಶೇಷಾಚಲವಾಸ ಪೋಷಿಸೊ ನಿನ್ನಯ ದಾಸಜನರ ಸರ್ವ ದೋಷಕಳೆದು ಮನೋಕಾಶದಲಿ ನಿಲ್ಲೊ ಶೇಷಗಿರೀಶ ಶ್ರೀ ವೆಂಕಟೇಶನೆ 20
--------------
ಉರಗಾದ್ರಿವಾಸವಿಠಲದಾಸರು