ಒಟ್ಟು 4310 ಕಡೆಗಳಲ್ಲಿ , 119 ದಾಸರು , 2738 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂಸಾರವೆಂಬ ಸಾಗರವನುತ್ತರಿಸುವರೆಕಂಸಾರಿಯೆಂಬ ನಾಮವೊಂದೆ ಸಾಕು ಮರುಳೆ ಪ.ಯತಿಯಾಗಬೇಡ ವೈರಾಗ್ಯವರಿತು ಸಕಲವ್ರತವ ಮಾಡುವೆನೆಂಬ ನೇಮ ಬೇಡ ||ಶ್ರುತಿ - ಸ್ಮøತಿಗಳನರಿತು ನಡೆವೆನೆನಬೇಡ ಶ್ರೀ -ಪತಿಯ ಶ್ರೀನಾಮವೊಂದೆ ಸಾಕು ಮರುಳೆ 1ತನುವ ದಂಡಿಸಿ ತುದಿಯ ಕೋಡುಗಲ್ಲಿನ ಮೇಲೆವನಿತೆಯನು ಬಿಟ್ಟು ತಪವಿರಲು ಬೇಡ ||ಅನುವರಿತು ನೀರೊಳಗೆ ಬಿಡದೆ ಮುಳುಗಲುಬೇಡ |ವನಜಾಕ್ಷ ನಾಮವೊಂದೇ ಸಾಕು ಮರುಳೆ 2ತೀರ್ಥಯಾತ್ರೆಗೆ ನೀನು ತಿರುಗಿ ಝೊಂಪಿಸಿ ಕೃ -ತಾರ್ಥನಾದೆನೆಂಬ ಹೆಮ್ಮೆ ಬೇಡ ||ಧೂರ್ತಭಂಜನ ನಮ್ಮ ಪುರಂದರವಿಠಲ ಸಂ -ಕೀರ್ತಿನೆಯ ಮಾಡಿ ಮೋಕ್ಷವನೈದು ಮರುಳೆ ** 3
--------------
ಪುರಂದರದಾಸರು
ಸಾಕು ಸಾಕಿನ್ನು ಸಂಸಾರಸುಖವು |ಶ್ರೀಕಾಂತ ನೀನೊಲಿದು ಕರುಣಿಸೈ ಹರಿಯೆ ಪಉದಿಸಿದುವು ಪಂಚಭೂತಗಳಿಂದ ಔಷಧಿಗ-|ಳುದಿಸಿದುವು ಔಷಧಿಗಳಿಂದನ್ನವು ||ಉದಿಸಿದುವು ಅನ್ನದಿಂ ಶುಕ್ಲ-ಶೋಣಿತವೆರಡು |ಉದಿಸಿದುವು ಸ್ತ್ರೀ-ಪುರುಷರಲ್ಲಿ ಹರಿಯೆ 1ಸತಿಪುರುಷರೊಂದಾಗಿ ರತಿಕ್ರೀಡೆಗಳ ಮಾಡೆ |ಪತನವಾದಿಂದ್ರಿಯವು ಹೊಲೆ-ರುಧಿರವು ||ಸುದತಿಯುದರದೊಳೆರಡು ಏಕದಲಿ ಸಂಧಿಸಲು |ಬುದಬುದನೆ ಮಾಸಪರ್ಯಂತರದಿ ಹರಿಯೆ 2ಮಾಸವೆರಡರಲಿ ಶಿರಮಾಸಮೂರರಲಂಗ |ಮಾಸನಾಲ್ಕರಲಿ ಚರ್ಮದ ಹೊದಿಕೆಯು ||ಮಾಸವೈದರೊಳುನಖರೋಮ ನವ ರಂಧ್ರಗಳು |ಮಾಸವೇಳಲಿ ಧಾತು ಹಸಿವು ತೃಷೆಯು 3ತಿಂಗಳೆಂಟರಲಿ ಪೂರ್ವಾನುಭವ ಕರ್ಮಗಳ |ಭಂಗವನು ಪಡಲಾರೆ ಭವಭವದೊಳು ||ಅಂಗನೆಯ ಉದರಕಿನ್ನೆಂದಿಗೂ ಬರೆನೆಂದು |ಹಿಂಗದಲೆ ಧ್ಯಾನಿಸುತ ಕಳೆದೆನೈ ದಿನವ 4ಇನಿತು ಗರ್ಭದೊಳು ನವಮಾಸ ಪರಿಯಂತರದಿ |ತನು ಸಿಲುಕಿ ನರಕದಲಿ ಆಯಾಸಗೊಂಡು ||ಘನಮರುತವೇಗದಿಂ ಅರುಹನಲ್ಲಿಯೆ ಮರೆತುಜನಿಸುವಲಿ ಮೃತಭಾವದೊಳು ನೊಂದೆ ಹರಿಯೆ 5ಧರೆಯಮೇಲುದಿಸಿ ಬಹು ವಿಷ್ಣುಮಾಯೆಗೆ ಸಿಲುಕಿ |ಪರವಶದೊಳಿರಲು ನೀರಡಿಸಲಾಗ ||ಹೊರಳಿ ಗೋಳಿಡುತ ಕಣ್ದೆರೆಯ ಹರಿಯನು ಮರೆವ |ದುರಿತರೂಪದ ತನುವ ಧರಿಸಿದೆನೊ ಹರಿಯೆ 6ಶಿಶುತನದೊಳಿರಲು ನೊಣ ಮುಸುಕಲಂದದಕಳಲು |ಹಸಿದನಿವನೆಂದು ಹಾಲನೆ ಎರೆವರು ||ಹಸು-ತೃಕ್ಷೆಗಳಿಂದಳಲು ಹಾಡಿ ತೂಗುವರಾಗ |ಪಶುವಂತೆ ಶಿಶುತನದೊಳಿರಲಾರೆ ಹರಿಯೆ 7ನಡೆಯಲರಿಯದ ದುಃಖ ಮನಸಿನೊಳು ಬಯಸಿದುದ |ನುಡಿಯಲರಿಯದ ದುಃಖ ವಿಷಮದಿಂದ ||ಅಡಿಯಿಡುತ ಮೆಲ್ಲನೇಳುತ ಬೀಳುತಲಿ ತೊದಲು-|ನುಡಿಯೊಳಿಹ ಬಾಲ್ಯದೊಳಗಿಲಾರೆ ಹರಿಯೆ 8ಬಾಲ್ಯದೊಳು ಕೆಲವು ದಿನ ಬರಿದೆ ಹೋಯಿತು ಹೊತ್ತು |ಗೋಳಿಡುತವಿದ್ಯೆಕರ್ಮಗಳ ಕಲಿತು ||ಮೇಲೆ ಯೌವನದುಬ್ಬಿನೊಳು ಮದುವೆಯಾಗಿ ನಾಬಾಲೆಯರ ಬಯಸಿ ಬಹು ಮರಳಾದೆ ಹರಿಯೆ | 9ಜ್ವರದ ಮೇಲತಿಸಾರ ಬಂದಂತೆ ಯೌವನದಿ |ತರುಣಿಯೊಡನಾಡಿಕೂಡಿದವಿಷಯದಿ ||ತರುಣಿ-ಸುತರ್ಗನ್ನ ವಸ್ತ್ರಾಭರಣವೆಂದೆನುತ |ಪರರ ಸೇವೆಯಲಿ ನಾ ಕಡುನೊಂದೆ ಹರಿಯೆ 10ನೆತ್ತರವು ತೊಗಲು ಮಾಂಸದ ಹುತ್ತು ಜೊತ್ತುಗಳ |ಹತ್ತು ಇಂದ್ರಿಯದ ಬಹುರೋಗದಿಂದ ||ಮತ್ತೆ ಕಾಲನ ಬಾಯತುತ್ತು ಬಹುವಿಧ ಕರ್ಮ-||ಕತ್ತಲೆಯೊಳೀ ದೇಹ ಕರಕಾಯ್ತು ಹರಿಯೆ 11ದಿಟ್ಟತನದಲಿ ಗಳಿಸಿ ತರುವಾಗ ಸತಿಸುತರು |ಕಟ್ಟಿಕಾದಿಹರು ಮುಪ್ಪಡಸಲಾಗ ||ತಟ್ಟನೇ ಕೆಟ್ಟನುಡಿಗಳ ಬಯ್ಯುತಳಲುವರು |ಮುಟ್ಟಿನೋಡರು ಸರಕುಮಾಡರೈ ಹರಿಯೆ 12ಎಷ್ಟವಜೆÕಯ ಮಾಡೆ ಮತ್ತವನಿಗಳಲುತಿರೆ |ಕಟ್ಟಳೆಯ ದಿನತುಂಬಿಮೃತನಾಗಲು ||ಕುಟ್ಟಿಕೊಂಡಳುತ ಹೋಯೆನುತ ಬಂಧುಗಳೆಲ್ಲ |ಮುಟ್ಟದಲೆ ಹೆಣನೆಂದು ದೂರದೊಳಗಿಹರು 13ಸತ್ತ ಹೆಣಕಳಲೇತಕೆಂದು ಬಂಧುಗಳೆಲ್ಲ |ಸುತ್ತಿರ್ದು ಹೊತ್ತು ಹೋಯಿತು ಎನ್ನುತ ||ಹೊತ್ತು ಕೊಂಡಗ್ನಿಯಲಿ ತನುವ ಬೀಸಾಡುವರು |ಮತ್ತೆ ಧರಣಿಯಲಿ ನಾ ಜನಿಸಬೇಡವೊ ಹರಿಯೆ 14ಇನ್ನು ಈ ಪರಿಪರಿಯ ಯೋನಿಮುಖದಲಿ ಬಂದು |ಬನ್ನವನು ಪಡಲರೆ ಭವಭವದೊಳು ||ಜನ್ಮ-ಮರಣಾದಿ ಕ್ಲೇಶಗಳನ್ನು ಪರಿಹರಿಸಿ |ಸನ್ಮತಿಯೊಳಿರಿಸೆನ್ನ ಪುರಂದರವಿಠಲ 15
--------------
ಪುರಂದರದಾಸರು
ಸಾಯುಧ ಚತುರ್ವಿಂಶತಿ ವಿಷ್ಣುರೂಪ ಸ್ತೋತ್ರ46ಬಲದ ಅಜಾನುಕರ ಮೊದಲು ಪ್ರದಕ್ಷಿಣದಿಸಲಿಲಜಾದಿಧರರಮಾಪತೇ ನಮಸ್ತೇ ಪಅರವಿಂದ -ಶಂಖ ಸುದರ್ಶನ ಕೌಮೋದಕೀಧರನಮೋ ಕೇಶವ ಶ್ರೀಶ ಬ್ರಹ್ಮೇಶ 1ದರಾಂಬುಜಗದಾಚಕ್ರಧರಶ್ರೀಶ ನಮೋನಾರಾಯಣ ದೋಷದೂರಗುಣಪೂರ್ಣ 2ಕೌಮೋದಕೀಚಕ್ರದರಕಮಲಹಸ್ತನೇನಮೋಮಾಧವಲಕ್ಷ್ಮೀರಮಣ ಮಾಂಪಾಹಿ3ಚಕ್ರ ಕೌಮೋದಕೀ ಪ್ರಫುಲ್ಲ ಅರವಿಂದಶಂಖ ಧರ ಗೋವಿಂದ ನಮೋ ವೇದವೇದ್ಯ 4ಗದಾಸರೋರುಹಶಂಖಚಕ್ರಧರವಿಷ್ಣೋಮೋದಮಯ ಸರ್ವತ್ರ ಬಹಿರಂತವ್ರ್ಯಾಪ್ತ 5ಸಹಸ್ರಾರ ಶಂಖಾಬ್ಜ ಗದಾಧರ ನಮಸ್ತೇಪಾಹಿಮಧುಸೂಧನ ಮಹಾರ್ಹ ಹಯಶೀರ್ಷ6ಅಂಬುಜಗದಾಚಕ್ರ ಶಂಖೀ ತ್ರಿವಿಕ್ರಮನೆಪುಷ್ಪಜಾರ್ಚಿತ ತ್ರಿಪದ ನಮೋ ವಿಶ್ವರೂಪ 7ಶಂಖಾರಿ ಕೌಮೋದಕೀ ಪದ್ಮ ಹಸ್ತನೇಮಂಗಳ ಸುಸೌಂದರ್ಯ ವಾಮನ ನಮಸ್ತೇ 8ಇಂದೀವರಾರಿಗದಾಶಂಖೀ ನಮಸ್ತೇಶ್ರೀಧರ ಸದಾ ನಮೋ ಶ್ರೀವತ್ಸಪಾಹಿ9ಗದಾ ಚಕ್ರ ಪದ್ಮಧರಾಹಸ್ತಹೃಷಿಕೇಶಇಂದ್ರಿಯ ನಿಯಾಮಕ ದೇವದೇವೇಶ 10ಶಂಖಾಬ್ಜರಿಗದಾಧರಪದ್ಮನಾಭಅಕಳಂಕ ಮಹಿಮ ಜಗಜ್ಜನ್ಮಾದಿಕರ್ತ 11ಕಮಲಧರ ಕೌಮೋದಕೀ ಚಕ್ರೀ ಈಶದಾಮೋದರ ದೇವ ಸುಜ್ಞಾನದಾತ 12ಕೌಮೋದಕೀ ಶಂಖ ಅಬ್ಜಾರಿಪಾಣಿನ್ಮಮ ಪಾಪಹರ ಸಂಕರ್ಷಣ ಜಯೇಶ 13ಗದಾಶಂಖ ಚಕ್ರಾಬ್ಜಹಸ್ತ ಮಾಯೇಶಸದಾ ನಮೋ ಳಾಳುಕ ಡರಿವಾಸುದೇವ14ರಥಾಂಗಕಂಬುಗದಾ ಕಮಲಧರ ಪ್ರದ್ಯುಮ್ನಕೃತಿದೇವಿರಮಣ ನಮೋ ಭಾಸ್ವ ಮದ್ ಹೃದಯೇ 15ರಥಾಂಗಗದಾಕಂಬುಕಮಲಹಸ್ತನಮೋಶಾಂತೀಶ ಅನಿರುದ್ಧ ಶರಣು ಮಾಂಪಾಹಿ16ಅರಿಕಮಲಶಂಖ ಗದಾಧರ ಪುರುಷೋತ್ತಮಕ್ಷರಾ ಕ್ಷರೋತ್ತಮ ಪೂರುಷ ಸ್ವತಂತ್ರ ನಮೋಪಾಹಿ17ಪದ್ಮ ಗದಾ ಶಂಖಾರಿಧರಅಧೋಕ್ಷಜನಮೋಮೋದಮಯ ಕಪಿಲ ಭಾಮನ ಡರಕವಿಶ್ವ18ಚಕ್ರಾಬ್ಜ ಗದಾ ಶಂಖ ಭಕ್ತ ರಕ್ಷಕ ನಮೋಸದಾನಂದ ಚಿನ್ಮಯಅನಘಅವಿಕಾರಿ19ಅಬ್ಜಾರಿ ಶಂಖ ಗದಾಧರ ಜನಾರ್ಧನ ನಮೋಅಜಿತಅಜಸಂಸಾರ ಬಂಧ ಹರ ಸುಖದಾ20ದರಗದಾಅರಿಅಬ್ಜಧರ ಉಪೇಂದ್ರ ನಮೋಇಂದ್ರಾನುಜನೇ ಬ್ರಹ್ಮ ರುದ್ರಾದಿ ವಂದ್ಯ 21ದರಸುದರ್ಶನಕಮಲಕೌಮೋದಕೀ ಪಿಡಿದಹರಿಶ್ರೀಯಃಪತಿಅಭಯವರದನೇ ಶರಣು22ಶಂಖ ಕೌಮೋದಕೀ ಅಬ್ಜಾರಿಧರ ಕೃಷ್ಣಸುಖಜ್ಞಾನ ಚೇಷ್ಟಾರೂಪನಮೋ ಶ್ರೀಶ23ಮಧ್ವ ಹೃದ್ವನಜಸ್ಥ ಚತುರ್ವಿಂಶತಿರೂಪಉದ್ದಾಮ ಪರಮಾರ್ತಹರಿಶ್ರೀಶ ಶರಣು24ಮತ್ಸ್ಯಕೂರ್ಮಕ್ರೋಡನರಸಿಂಹವಟುರೇಣು-ಕಾತ್ಮಜ ಶ್ರೀರಾಮ ಕೃಷ್ಣ ಶಿಶು ಕಲ್ಕಿ 25ಆನಂದಚಿನ್ಮಯ ಅನಂತ ರೂಪನೇ ನಮೋವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸನೇ ನಮೋ 26
--------------
ಪ್ರಸನ್ನ ಶ್ರೀನಿವಾಸದಾಸರು
ಸುಣ್ಣವಿಲ್ಲ ಭಾಗವತರೆ |ನುಣ್ಣನೆಯ ಗೋಡೆಗೆ ನಿನ್ನ ತೊಡೆದು ಬಿಟ್ಟೆ......... ಪ.ವೀಳೆಯ ಹಾಕುವನಲ್ಲ ವ್ಯಾದಿಷ್ಠ ನನಗಂಡ ||ಬಾಳುಗೇಡಿ ಎನ್ನ ಬಾಯನೋಡಿ ||ಹಾಳಾದ ಮನೆ ಹೊಕ್ಕು ಗೋಳುಗರಿಯತ್ತೇನೆ |ಕೇಳಿದ ಬಳಿಕಿನ್ನು ಹೇಳದೆ ಫಲವೇನು......... 1ಮದ್ದು ಮದ್ದು ತಿಂದು ಮನೆಯೆಲ್ಲ ಬರಿದಾಯ್ತು |ಹೊದ್ದಿತು ಮೂದೇವಿ ಮೈದುನಗೆ ||ಬದ್ಧತನದಿ ಸಂಜೆಭಂಗಿ ಮುಕ್ಕುವಭಾವ |ಒದ್ದು ಕೊಳ್ಳುತಾನೆ ಒಳಗೆ ಕದವನಿಕ್ಕಿ 2ಅನ್ನೆಕಾರಿ ಅತ್ತೆ ತೊನ್ನು ಬಡಕ ಮಾವ |ಗನ್ನ ಘಾತಕಿರಂಡೆಅತ್ತಿಗೆ ಮುಂಡೆ ||ಎನ್ನ ಗೋಳು ತಾಗಿ ಎಂದಿಗೆ ಹೋದಾರು |ಪನ್ನಗಶಯನ ಶ್ರೀ ಪುರಂದರವಿಠಲ 3
--------------
ಪುರಂದರದಾಸರು
ಸುಪುತ್ರನು ಎಂಬುವನಿವನುಸುಪುತ್ರನನು ಹೇಳುವೆ ನಾನುಪತಂದೆ ತಾಯಿಗಳ ಪೂಜಿಸುವಬಂಧುಗಳಿಗೆ ಬಹು ಪ್ರಿಯನಾಗಿ ಇರುವಎಂದಿಗೂ ಕೆಟ್ಟದ್ದ ನುಡಿಯ ಆವ-ಬಂದವರಿಗೆಲ್ಲ ಅನ್ನವ ಕೊಡುವ1ಕುಲದ ಆಚಾರವ ತಪ್ಪಿಸನುಹಲವು ವ್ರತಗಳನವ ತಾ ಬಿಡನುಬಲು ತಿಳುವಳಿಕೆಯನು ತಿಳಿದಿಹನುನೆಲೆಯಿಲ್ಲದ ತಪಮಾಡುವನು2ಅಣ್ಣ ಅತ್ತಿಗೆಗೆ ಉತ್ತರಕೊಡನುಪುಣ್ಯ ಕಥೆಯನು ಕೇಳ್ವುದ ಬಿಡನುತನ್ನ ದೇಹವ ಪೋಷಣೆ ಮಾಡನುಭಿನ್ನ ಬುದ್ಧಿಯನೆಂದಿಗು ತೋರನು3ತತ್ವ ವಿಚಾರವೆಂಬುದೆ ಜೀವನಿತ್ಯಅನಿತ್ಯವ ತಿಳಿದು ಅವನೀವಸತ್ಪುರುಷರೊಳು ಒಡನಾಡುವಎಲ್ಲಮಿಥ್ಯೆಎಂದರಿವ4ಸಂಶಯ ಸಂಕಲ್ಪನೀಗಿಧ್ವಂಸ ಮಾಡಿ ವಾಸನೆಯೆಲ್ಲವಶಿಂಶುಮಾರದ ಚಕ್ರಕೆ ಹೋಗಿಹಂಸ ಚಿದಾನಂದ ಗುರುವಾಗಿ5
--------------
ಚಿದಾನಂದ ಅವಧೂತರು
ಸುಮ್ಮನೆ ಬಾಹೂದೆ ಮುಕುತಿ - ನಮ್ಮ |ಚೆನ್ನಾದಿ ಕೇಶವನ ದಯವಾಗದನಕ ಪ.ಮನದಲ್ಲಿ ದೃಢವಿರಬೇಕು - ದುರ್ |ಜನರ ಸಂಗತಿಯನು ನೀಗಲುಬೇಕು ||ಅನಮಾನಂಗಳ ಬಿಡಬೇಕು - ತನ್ನ |ತನು - ಮನ ಹರಿಗೆ ಒಪ್ಪಿಸಿ ಕೊಡಬೇಕು 1ಕಾಮ - ಕ್ರೋಧವ ಬಿಡಬೇಕು -ಹರಿ |ನಾಮಸಂಕೀರ್ತನೆ ಮಾಡಲುಬೇಕು ||ಹೇಮದಾಸೆಯ ಸುಡಬೇಕು - ತ |ನ್ನಾ ಮನ ಹರಿಯ ಪಾದದಲಿಡಬೇಕು 2ಪಾಪಗಳನೆ ಕಳೆಯಬೇಕು - ಜ್ಞಾನ |ದೀಪ ಬೆಳಕಿನಲಿ ಲೋಲಾಡ ಬೇಕು ||ತಾಪ ರಹಿತಗೈಯಬೇಕು - ನಮ್ಮಓಪ ಪುರಂದರವಿಠಲನೊಲೆಯ ಬೇಕು 300
--------------
ಪುರಂದರದಾಸರು
ಸುರ ಮುನಿಜನನುತಪಾದನಿನ್ನಶರಣು ಪೊಕ್ಕೆನೊ ಗೋವಿಂದ ನೀಚರಕೈಯಲಿ ಕೊಡದಿರೊ ಎನ್ನ ಮೇಲ್ಗಿರಿ ಶ್ರೀನಿವಾಸಪಾವನ್ನಪ.ದುಷ್ಟದೂಷಕ ಸಂಗದಿಂದೆ ನನ್ನನಿಷ್ಠೆ ಜಾರುತಲಿದೆ ತಂದೆ ಸಲೆಭ್ರಷ್ಟನಾಗುವುದೇನು ಚಂದೆ ಬಲುಕಷ್ಟಿಸಿ ಭವದಲಿ ನೊಂದೆ 1ಅಮಿತ ದುರ್ಗುಣ ದೋಷಹಾರಿಶುಭಅಮಲ ಮುಕ್ತಿದಾತ ಉದಾರಿ ಎನ್ನಭ್ರಮಣ ನೀಗಿಸು ಹೊರೆ ಸ್ವಾಮಿ ಹೃತ್ಕಮಲದಿ ಪ್ರಕಟಿಸು ಪ್ರೇಮಿ 2ಅರಿಯೆನರಿಯೆ ಅನ್ಯಮರೆಯೆ ನಿನ್ನಸ್ಮರಣೆಗೆಚ್ಚರವಿತ್ತು ಹೊರೆಯೊಸಿರಿಗುರು ಆನಂದಮುನಿ ದೊರೆಯೆನಿತ್ಯಪರಸನ್ನ ವೆಂಕಟ ಭಕ್ತರ ಸಿರಿಯೆ 3
--------------
ಪ್ರಸನ್ನವೆಂಕಟದಾಸರು
ಸುರನರರ ಸಹಸಕ್ಹರಿ ಸಹಾಯ ಬೇಕುನರಹರಿಯು ಕೊಡದನಕ ದೊರೆವುದೇನು ಪ.ಹರಿಕೊಡದೆ ಅಜಭವರಿಗರಸುತನವೆಲ್ಲಿಯದುಹರಿಕೊಡದೆ ಸಿರಿಸಂಪದೆರವು ತನಗೆಹರಿಕೊಡದೆ ಸಕಳ ಜೀವರಿಗಶನ ದುರ್ಲಭವುಹರಿಕೊಡುವನಿರಲು ಅನ್ಯರಿಗೆ ಸ್ವಾತಂತ್ರ್ಯಿಲ್ಲ 1ಹರಿಯೆ ಜಡಚೇತನರ ಹೊರೆದುದ್ಭವಿಸಿ ಅಳಿವಹರಿಯಾವ ಕಾರ್ಯಕ್ಕೆ ಬೆರೆದು ಬರುವಹರಿಅಂತರ್ಬಹಿರದೊಳು ಭರಿತನಾಗಿಹ ತತ್ವಹರಿಯಿಲ್ಲದಾವ ತಾಣಿಲ್ಲ ನಂಬು ಹರಿಯ 2ಹರಿನುಡಿಯದಾರಿಗುತ್ತರಗುಡಲು ಬಲವಿಲ್ಲಹರಿನುಡಿಯನಾಲಿಪರು ಸಿರಿದಿವಿಜರುಹರಿನುಡಿಯೆ ಗತಿಮತಿಯು ಹರಿಯೆನ್ನ ದಾತಾರಹರಿಪ್ರಸನ್ವೆಂಕಟಪ ನಿರುತ ಬಿಡನೆನ್ನ3
--------------
ಪ್ರಸನ್ನವೆಂಕಟದಾಸರು
ಸುರನಾರಿಯರ ಮಹಿಮೆಪರಿಪರಿ ಹೊಗಳುತಬಿರುದಿನಕೋಲಹೊಯಿದೇವಕೋಲ ಪ.<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಉಮಾದಿಗಳಿಗೆಲ್ಲಬೊಮ್ಮ ಹ್ಯಾಂಗ ಶಪಿಸಿದಅಮ್ಮಾ ಇದು ಒಂದುಕೌತುಕಕೋಲಅಮ್ಮಾ ಇದುಕೌತುಕ ಹೇಳೆಂದಝಮ್ಮನೆ ದೂತೆ ನುಡಿದಳುಕೋಲ 1ಭಾರತಿ ದೇಹದಲ್ಲಿ ಸೇರಿದರ್ಹಾಂಗಮ್ಮಪಾರ್ವತಿದೇವಿ ಮೊದಲಾದಕೋಲಪಾರ್ವತಿದೇವಿ ಮೊದಲಾದ ಕೆಲದಿಯರುನಾರಿರುಕ್ಮಿಣಿ ಎನಗ್ಹೇಳಕೋಲ2ಪಾಂಚಾಲಿದೇವಿ ತಾನು ಪಂಚಪಾಂಡವರ ಕೂಡಿಕೆಂಚಿತಾ ಹ್ಯಾಂಗ ರಮಿಸೋಳುಕೋಲಕೆಂಚಿತಾ ಹ್ಯಾಂಗ ರಮಿಸೋಳುಮಹಿಮೆಯ ಕಿಂಚಿತ್ತಾಗಿ ಎನಗ್ಹೇಳಕೋಲ3ಇಂದುಮುಖಿಯರ ಜನ ಚಂದಾಗಿ ಹೇಳಮ್ಮಸಂದೇಹಬ್ಯಾಡ ಎನಕೂಡಕೋಲಸಂದೇಹಬ್ಯಾಡ ಎನಕೂಡ ಅದಕೇಳಿಆನಂದವ ಬಡುವೆಅನುಗಾಲಕೋಲ4ಮತ್ತೆ ರಾಮೇಶನ ಅತ್ಯಂತ ಭಕ್ತಳಉತ್ತಮ ಕಥೆಯ ಎನಗ್ಹೇಳಕೋಲಉತ್ತಮ ಕಥೆಯ ಎನಗ್ಹೇಳ ಹರುಷದಿಬಿತ್ತಿ ಬೆಳೆದೇವಧರೆಮ್ಯಾಲೆಕೋಲ5
--------------
ಗಲಗಲಿಅವ್ವನವರು
ಸುಳಾದಿಧ್ರುವತಾಳಏನೋ ನಿನ್ನ ಮಹಿಮೆ ಆನೇನು ಕೊಂಡಾಡುವೆಮಠ್ಯತಾಳಎಲ್ಲಿ ನೋಡಲು ನೀನು ಅಲ್ಲಲ್ಲಿ ವ್ಯಾಪ್ತನುತ್ರಿಪುಟತಾಳನಿನ್ನ ಜ್ಞಾನವಂತನೆಂದು ಇನ್ನು ಜ್ಞಾನ ಸಂಪಾದಿಸುವೆಅಟ್ಟತಾಳಹೀನರ ಒಳಗೆಲ್ಲ ಹೀನನು ನಾ ಬಲುಆದಿತಾಳಜನರಲ್ಲಿ ಮನ ಹೋಗೆ ನಿನಗೆ ಹೋಯಿತು ಇನ್ನುಜತೆನೀನು ಅನಾದಿಸ್ವಾಮಿ ನಾನು ಅನಾದಿಭೃತ್ಯ
--------------
ಗೋಪಾಲದಾಸರು
ಸುಳಾದಿಧ್ರುವತಾಳಬಾಲ ಸೂರ್ಯನಿಭಮಣ್ಯಾಂಕಮೌಳಿಹೀಲಿಯ ಪಿಂಛಪ್ರವಾಳಗುಚ್ಛಮ್ಯಾಲಲರದಂಡೆ ಝೇಂಕರಿಪಾಳಿಬಾಲರಯ್ಯನ ಮೊಗದ ಶೋಭೆಭ್ರೂಲತೆ ವಿಲಾಸ ನೋಟದಿಮಕರಕುಂಡಲವಿಶಾಲೇರಿ ಸಿರಿವತ್ಸಕೌಸ್ತುಭನೀಲಮಾಣಿಕ ವಜ್ರವಲಯ ವೈಜಂತಿವನಮಾಲೆ ತುಲಸಿ ಗಂಧ ಮೌಕ್ತಿಕ ಸರಗಳನೀಲನದ ರತುನದಾಮಪೊನ್ನಚೇಲನೂಪುರ ಕಿರುಗೆಜ್ಜೆಯ ಗೋಪಾಲ ಪರಸನ್ನವೆಂಕಟ ಕೃಷ್ಣ ಶಾಮಲಕಾಯ 1ಮಠ್ಯತಾಳನಂದವ್ರಜದ ಗೋವರ ವೃಂದಾಂಬುಧಿಗೆ ಪೂರ್ಣೇಂದು ನÀಂದಸೂನು ಲಾಸ್ಯವಾಡೆಒಂದೊಂದು ಲಯದಗತಿಹೊಂದ್ಯಮರದುಂದುಭಿಗಳ್ದಂ ಧಳಧಂ ಧಂದಳೆನ್ನೆಗಂಧರ್ವ ತುಂಬುರರು ನಾರಂದ ಮಹತೀಗೀತ ಪ್ರಬಂಧ ಹೇಳೆ ನಂದರಸದಿಂದಾಡುತಿರೆ ಗೋವಿಂದ ದಂದಂ ದಂದಂ ಧಿಮಿಕೆನ್ನಲಂದದಿ ಮದ್ದಳೆ ತಾಳಬಂದಿಮೊಗ ? ತುತ್ತುರಿ ಕಹಳೆ ಕಂಬುವೇಣುಗೂಡಿಅಂದಾಡಿದ ಪ್ರಸನ್ವೆಂಕಟ ಕೃಷ್ಣ ನಲವಿಂದ 2ತ್ರಿವಿಡಿ ತಾಳಶ್ರೀಕಮಲ ಭಭೂರ್ವಪಿನಾಕಿವಿಪಾಹಿಪನಾಕಜಾದ್ಯರ ಚೇಷ್ಟಕಶ್ರೀಕರ ಪ್ರಸನ್ನವೆಂಕಟ ಕೃಷ್ಣಆಕಳಕಾವರ ವಶಗ ಹಾಹಾ 3ಅಟ್ಟತಾಳಅನಂತನಿಗಮನಿಕರಕೆ ನಿಲುಕದಅನಂತಾನಂತ ಗುಣಪರಿಪೂರ್ಣಗೆಧÉೀನುಕಾವರ ಪಳ್ಳಿ ಗೋಟಲೆತೀಯಂ ತೀಯಂ ವೈಯ್ಯ ಅಯ್ಯಾಧೇನುಕಾವರ ಪಳ್ಳಿ ಗೋಟಲೆಜ್ಞಾನಿಜನಕೆಮೋದಹಾನಿ ಖಳರ್ಗೀವಜ್ಞಾನಾನಂದ ಬಾಲ ಪ್ರಸನ್ನವೆಂಕಟ ಕೃಷ್ಣಗೆ 4ಏಕತಾಳವೈಕುಂಠ ವಾರಿಜಾಕ್ಷ ಲೋಕರಕ್ಷತೋಕವೇಷಧರಮುರಹರಶ್ರೀಧರಶ್ರೀಕರ ಗುಣನಿಧೆ ಪುರಾಣಪುರುಷ ಹರೇ ಹರೇಗೋಕುಲಪತೆ ಗೋವರ್ಧನಧರಪಾಕಹ ಮದನಿಕಾರಕರ ಪ್ರಸನ್ವೆಂಕಟ ಕೃಷ್ಣನೆಲೊ ಭಕ್ತವತ್ಸಲ 5ಜತೆಶುಭಕೀರ್ತನೆ ಜಿಹ್ವೆಗೆ ಶುಭಕಥೆ ಕಿವಿಗಳಿಗೆಶುಭಮೂರ್ತಿ ಕಣ್ಗೀಯಯ್ಯ ಪ್ರಸನ್ವೆಂಕಟಕೃಷ್ಣಯ್ಯ
--------------
ಪ್ರಸನ್ನವೆಂಕಟದಾಸರು
ಸೊಕ್ಕು ನೋಡಿ ಯೋಗೀಶನ ಸೊಕ್ಕು ನೋಡಿಮಿಕ್ಕು ಮೀರಿ ಮೂರಕ್ಕರಗಳಕಂಡುನಕ್ಕು ಪಶ್ಚಿಮಗಿರಿ ಪೊಕ್ಕು ಬೆಳಗಿ ಜನಪಮೂರಕಟ್ಟಿಮೂರನು ಅರಶೀರಗುಟ್ಟಿಆರು ಎಂಟನೆ ಅಟ್ಟಿ ಐದು ಏಳನು ಮೆಟ್ಟಿತೋರುವ ಎರಡು ನಾಲ್ಕನು ತೊಲಗಿಸಿದಾತನ1ಲೋಕದ ಕೂಡ ಕೂಡಿಯೆ ವಿವೇಕ ಬೇಡಏಕವೆಂಬುದು ಬಿಡ ಅನೇಕವೆಂಬುದ ನಾಡಮೂಕ ಪದಗಳೆಂದು ನಿರಾಕರಿಸುತಲಿಹನು2ಅಕ್ಷಯಮುಚ್ಚಿ ತೆರದು ತೆರದಕ್ಷಯ ಮುಚ್ಚಿರಕ್ಷಿಸುತಿಪ್ಪ ಭಾಳೇಕ್ಷಣ ತಾನೆಂದು-ಪೇಕ್ಷೆಮಾಡುತ ಸರ್ವವ ನಿರೀಕ್ಷಿಸುತಿರುವವನ3ಮತಗಳ ನೆನೆದು ಶಾಸ್ತ್ರಗಳ ಗೆಲಿದುಪಾತಾಳಕಿಟ್ಟ ಮತಿ ಮೋಕ್ಷಗಳ ಬಿಟ್ಟ ತಿರುಗಿಸಿ ತಿರುಗಿಸಿ ಹುಟ್ಟಸತತ ಕಾಲದಿ ತನ್ನ ಮತಿ ಹಿಡಿಯೆಂಬನ4ಏನುಪಾಯ ಈ ಯೋಗಿಗೆ ಇನ್ನೇನು ನ್ಯಾಯತಾನಾಗದಗುರುಚಿದಾನಂದನ ತಾ ಕಂಡುತಾನೆ ತಾನಾಗಿ ತೋರುವ ನಿಜ ಯೋಗಿಯ5
--------------
ಚಿದಾನಂದ ಅವಧೂತರು
ಸ್ನಾನ ಮಾಡಿರಯ್ಯ ಜಾÕನತೀರ್ಥದಲಿನಾನು ನೀನೆಂಬಹಂಕಾರವ ಬಿಟ್ಟು ಪ.ತನ್ನೊಳು ತಾನೆ ತಿಳಿದರೊಂದು ಸ್ನಾನಅನ್ಯಾಯಗಾರಿ ಕಳೆದರೊಂದು ಸ್ನಾನಅನ್ಯಾಯವಾಡದಿದ್ದರೊಂದು ಸ್ನಾನಚೆನ್ನಾಗಿ ಹರಿಯ ನೆನೆದರೊಂದು ಸ್ನಾನ 1ಪರಸತಿಯ ಬಯಸದಿದ್ದರೆ ಒಂದು ಸ್ನಾನಪರನಿಂದೆ ಮಾಡದಿದ್ದರೆ ಒಂದು ಸ್ನಾನಪರದ್ರವ್ಯ ಅಪಹರಿಸದಿರೆ ಒಂದು ಸ್ನಾನಪರತತ್ವತಿಳಿದುಕೊಂಡರೆ ಒಂದು ಸ್ನಾನ2ತಂದೆತಾಯಿಗಳ ಸೇವೆ ಒಂದು ಸ್ನಾನಮುಂದಿನಮಾರ್ಗ ತಿಳಿದರೊಂದು ಸ್ನಾನಬಂಧನವನು ಬಿಡಿಸಿದರೊಂದು ಸ್ನಾನಸಂಧಿಸಿ ತಿಳಿದುಕೊಂಡರೆ ಸೇತು ಸ್ನಾನ 3ಅತ್ತೆ ಮಾವನ ಸೇವೆಯೊಂದು ಸ್ನಾನಭರ್ತನ ಮಾತು ಕೇಳುವುದೊಂದು ಸ್ನಾನಕ್ಷೇತ್ರಪಾತ್ರರ ಸಹವಾಸ ಒಂದು ಸ್ನಾನಪಾರ್ಥಸಾರಥಿ ನಿಮ್ಮ ಧ್ಯಾನವೆ ಧ್ಯಾನ 4ವೇದ ಶಾಸ್ತ್ರಗಳನೋದಿದರೊಂದು ಸ್ನಾನಭೇದಾಭೇದ ತಿಳಿದರೊಂದು ಸ್ನಾನಸಾಧು ಸಜ್ಜನರ ಸಂಗ ಒಂದು ಸ್ನಾನಪುರಂದರವಿಠಲನ ಧ್ಯಾನವೆ ಸ್ನಾನ 5
--------------
ಪುರಂದರದಾಸರು
ಸ್ವಾಮಿ ನೀ ಮಾಡಿದುಪಕಾರಾ ಕಿಂತು ಪಾಮರನಪ್ರತಿಉಪಕಾರಾ | ಭೀಮಾಶಂಕರ ಗುರುವಾಗುವ ಪ್ರಕಾರಾ |ಈ ಮನಕೆ ಎಂದಿಗೆ ತೋರದಾಕಾರಾ ||ಸ್ವಾಮಿ||ಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಲಕ್ಷ ಎಂಬತ್ತು ಮೂರೊಂದನು |ಯೋನಿಕುಕ್ಷಿಯೊಳಗೆಹೊಕ್ಕು ಬಂದೆನೊ | ಭಕ್ಷ್ಯಾಭಕ್ಷ್ಯವ ಮೆದ್ದೆನು |ಅನುಪೇಕ್ಷಿಯೊಳಗೆ ಮುಳುಗಿದ್ದೆನೋ | ಭಿಕ್ಷುಕರೊಡೆಯನಿರೀಕ್ಷಿಸಿ ಕೃಪಾ ಕಟಾಕ್ಷದಿ ಸದ್ಗುರು ರಕ್ಷಿಸಿದಂಥಾ1ನೀರೊಳು ಜೀವಿಸುತಿದೆ ಮೀನಾ |ನೀರು ಕಾರಣವರಿಯದು | ಆ ಮೀನಾ |ಪಾರವಿಲ್ಲದಂಥದೀ ಮೀನಾ |ಪರವಸ್ತುಖೂನನರಿಯದು ಮನ ಮೀನಾ |ನಾರೇರ ನೋಟಕ್ಕೆ ಸೇರಿ ತಾ ಹೋದೀತು |ಸಾರವಸ್ತುವ ತಂದು ತೋರಿಸಿದಂಥ2ತನುವು ತನ್ನೊಳಗೆ ತಾ ತೋರದು |ತನು ಮನದ ವೃತ್ತಿಗೆ ತಾ ಬಾರದು |ಜನನ ಮೃತ್ಯಂಗಳು ದೋರದು |ಎನಗೆ ಸಾಧು ಸಜ್ಜನ ಸಂಗ ದೊರಕದು |ಘನಗುರುಶಂಕರ ಚಿನುಮಯರೂಪ- |ದನುಭವಕೆ ತಂದು ಎನಗೆ ನೀ ಕೊಟ್ಟಂಥ3
--------------
ಜಕ್ಕಪ್ಪಯ್ಯನವರು
ಸ್ವಾಮಿ ಶಂಕರನಿರಲಿಕ್ಕೆಕಾಮದಕಳವಳಿಕೇಕೆಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಗುರುನಾಮ ನಿಧಾನಿರಲಿಕ್ಕೆ | ಎನಗಿಲ್ಲೆಂಬುವದೇಕೆ ಅ.ಪ.ಅನಾಥ ಬಂಧುಅನುದಿನಎನಗಿರೆ |ಅನುಕೂಲದ ಚಿಂತ್ಯಾಕೆ |ತನುಮನಧನದೊಳು ತಾನೆ ತಾನಿರಲು |ಅನುಮಾನಿಸಲಿನ್ಯಾಕೆ ಸ್ವಾಮಿ1ದಾತನೊಬ್ಬ ಶ್ರೀನಾಥ ಎನಗಿರಲು |ಯಾತಕೆ ಪರರ ದುರಾಶೇ |ಮಾತು ಮಾತಿಗೆ ತೋರುವಸದ್ಗುರು ತೇಜಃ ಪುಂಜಗಳ್ಯಾಕೆ ಸ್ವಾಮಿ2ದೊಡ್ಡದು ಸಣ್ಣದು ಧಡ್ಡನು ಜಾಣನು |ಎಂದೆಣಿಸುವದಿನ್ಯಾಕೆ | ಗುಡ್ಡದ್ಹಾಂಗಶ್ರೀ ಶಂಕರನಿರಲು ದುಡ್ಡಿನ ಹಂಗುಗಳ್ಯಾಕೆ ಸ್ವಾಮಿ3
--------------
ಜಕ್ಕಪ್ಪಯ್ಯನವರು