ಒಟ್ಟು 8605 ಕಡೆಗಳಲ್ಲಿ , 133 ದಾಸರು , 4891 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳಂ ಶುಭಮಂಗಳಂ ಪ ಅಂಜನೆ ಗರ್ಭದಿಂ ಬಂದವಗೆ ಕಂಜಾಕ್ಷಿ ವಾರ್ತೆಯ ತಂದವಗೆ ಸಂಜೀವನ ತಂದು ರಾಮನ ರಂಜನೆಗೈದ ಮುಖ್ಯಪ್ರಾಣಗೆ 1 ಕುಂತಿಯ ಕಂದನೆಂದೆನಿಸಿದವಗೆ ದಂತಿ ಸಾಸಿರ ಬಲವಂತನೆಗೆ ಕಂತು ಪಿತನ ಮಂತ್ರಿಯೆನಿಸಿ ಕುರುಕುಲ ಅಂತಕನಾದ ಭೀಮಸೇನಗೆ 2 ನಡುಮನೆ ವೇದವತಿ ವರಸುತಗೆ ಉಡುದಾರ ಉಪವೀತ ತೊರೆದವಗೆ ಸಿರಿ ರಂಗೇಶವಿಠಲನ ಬಿಡದೆ ಪೂಜಿಪ ಮಧ್ವರಾಯಗೆ 3
--------------
ರಂಗೇಶವಿಠಲದಾಸರು
ಮಂಗಳಂ ಶ್ರೀ ಪಾರ್ಥಸಾರಥಿಗೆ ಮಂಗಳಂ ಸಂಕರ್ಷಣನಿಗೆ ಅನಿರುದ್ಧ ಸಾತ್ಯಕೀಸಹ ಬಂದು ನಿಂದವಗೆ ಪ ವಸುಧೆ ಭಾರವನಿಳುಹಲೆಂದು ದೇವಕೀ ವಸುದೇವರುದರದಿ ಶಿಶುವಾಗಿ ಅಸುರ ಪೂತನಿಯಸುವ ನೀಗಿದ ಕುಸುಮನಾಭಗೆ 1 ವಾತಾಸುರನಕೊಂದು ಬಾಯೊಳುಮಾತೆಗೆ ಬ್ರಹ್ಮಾಂಡತೋರ್ದಗೆ 2 ಒತ್ತಿ ಕಾಳಿಯ ಶಿರವನಾಗ ಸುತ್ತಿದಾ ಕಿಚ್ಚನ್ನು ನುಂಗಿ ಎತ್ತಿ ಗೋವರ್ಧನಗಿರಿಯ ಹತ್ತಿ ಗೋಮಂತವನು ಹಾರ್ದಗೆ 3 ಕೇಶಿಯನು ಸಂಹರಿಸಿ ದುಷ್ಟದ್ವೇಷಿಯಾದ ವೃಷಭನನು ಕೊಂದು ದಾಸಿ ತಂದ ಗಂಧವನು ಪೂಸಿ ಮೆರೆದ ಕ್ಲೇಶನಾಶಗೆ 4 ಬಿಲ್ಲು ಮುರಿದು ಬೀದಯಲ್ಲಿ ಎಲ್ಲರಿಗೆ ತಕ್ಕ ರೂಪ ತೋರಿ ಮಲ್ಲರನು ಮರ್ಧಿಸುತ ಮಾವನ ಸೊಲ್ಲನಡಗಿಸಿದ ಪುಲ್ಲನಾಭಗೆ 5 ರುಕ್ಮಿಣೀ ಸತ್ಯಭಾಮೆ ಕಾಳಂದಿ ಜಾಂಬವತಿಯು ಮೊದಲಾದ ಲಕ್ಷ್ಮಣೆ ಸತ್ಯಭದ್ರೆ ಮಿತ್ರವಿಂದೆಯು ತಂದ ಲಕ್ಷ್ಮೀರಮಣಗೆ 6 ಕೊಂದು ನರಕನ ಹದಿನಾರುಸಾವಿರ ಸ್ತ್ರೀಯರನು ಬೇಗ ತಂದು ದ್ವಾರಕಿಯಲ್ಲಿ ಸತಿಸಹ ಆನಂದದಿಂದಲಿ ನಿಂದಕೃಷ್ಣಗೆ 7 ಹೇಮದಾಭರಣವಿಟ್ಟು ರುಕ್ಮಿಣಿ ನೇಮದಿಂದಲೆ ಬೀಸುತಿರಲು ಪ್ರೇಮಕಲಹದಿ ಬೀಳಲಾಕ್ಷಣ ವಿರಾಮವಿಲ್ಲದೆ ಎತ್ತಿದವಗೆ8 ಎತ್ತಿ ಅಂಕದೊಳಿಟ್ಟು ಪ್ರೇಮದಿ ಅರ್ಥಿಯಿಂದಲೆ ಕುರುಳನೇವರಿಸಿ ತತ್ವವಾಕ್ಯವನ್ನು ಹೇಳಿದ ಮುಕ್ತಿದಾಯಕ ಮುದ್ದು ಕೃಷ್ಣಗೆ 9 ಜಾಣತನದಲಿ ಕಾಶಿಯನುಸುಟ್ಟು ಪೌಂಡ್ರಕನಪ್ರಣಾಪಹರಿಸಿದವಗೆ 10 ಮಿಥುಳವಾಸಿಗೆ ಮುಕ್ತಿಯನಿತ್ತು ಸುತನ ತಂದು ವಿಪ್ರನಿಗಿತ್ತು ಹತವಮಾಡಿ ವೃಕಾಸುರನ ಶ್ರುತಿಗಗೋಚರನಾದ ಸ್ವಾಮಿಗೆ 11 ಅರಗಿನಮನೆಯಿಂದ ರಕ್ಷಿಸಿ ದ್ರೌಪದಿ ಸುಭದ್ರೆಯ ಸಾಧಿಸಿತ್ತಗೆ 12 ನೆತ್ತವಾಡಿ ಕೌರವರೊಡನೆ ಅರ್ಥವನು ಸೋಲಲು ಪಾಂಡವರು ಭಕ್ತವತ್ಸಲನೆನ್ನೆ ದ್ರೌಪದಿಗೆ ವಸ್ತ್ರವಿತ್ತು ಕಾಯ್ದ ಕೃಷ್ಣಗೆ 13 ವನವಾಸದಲ್ಲಿ ಪಾಂಡವರು ಉಲ್ಲಾಸದಿಂದಲೆ ಇರುತಿರಲು ಪಾಶುಪತ ವನು ಪಾರ್ಥನಿಗೆ ಈಶನಲಿ ಕೊಡಿಸಿದ ಸರ್ವೇಶಗೆ 14 ವೇಷವನ್ನು ಮರೆಸಿಕೊಂಡು ವಿರಾಟನಗರದಿ ವಾಸ ಮಾಡಲು ಮೋಸದಿಂದಲೇ ಕೀಚಕಾದಿಗಳ ನಾಶಮಾಡಿಸಿದ ವಾಸುದೇವಗೆ 15 ಆನಂದರೂಪವ ತೋರಿದವಗೆ 16 ತೋರಿದವಗೆ 17 ಜಾಹ್ನವೀಸುತನ ಯುದ್ಧವನ್ನು ತಾಳಲಾರದೆ ಜನರ್ಧನಗೆ ಪೇಳೆ ಜಾಣತನದಲಿ ಶಿಖಂಡಿಯನುತೋರಿ ಬಾಣಮಂಚದಿ ಮಲಗಿಸಿದವಗೆ 18 ಸುಭದ್ರೆ ಪುತ್ರನ ಯುದ್ಧದಲ್ಲಿ ಪದ್ಮವ್ಯೂಹವ ಪೋಗಿಸಲಾಗ ಮುದ್ದುಬಾಲಕನ ಕೊಲಿಸಿದವಗೆ 19 ಸಿಂಧುರಾಜನ ಕೊಲ್ಲುವೆನೆಂದು ನರನು ಪ್ರತಿಜ್ಞೆಮಾಡಲು ತಂದಚಕ್ರವ ರವಿಗೆತೋರಿಸಿ ಸೈಂಧವನ ಕೊಲ್ಲಿಸಿದಸ್ವಾಮಿಗೆ 20 ದೃಪತಿಯತೋರಿದವಗೆ 21 ಕರ್ಣನು ಘಟ್ಟಿಯಾಗಿ ರಥವನೊತ್ತಿ ದಿಟ್ಟತನದಲಿ ಶಿರವ ಕಾಯ್ದಗೆ 22 ಮದ್ರರಾಜನ ಕೊಲ್ಲುವೆನೆಂದು ಸಮುದ್ರಶಯನನ ಸಹಾಯದಿಂದ ಭದ್ರಗಜವನು ಏರೆ ಧರ್ಮಜ ಕಾಲರುದ್ರನಂದದಿ ಕೊಲಿಸಿದವಗೆ 23 ಭೀಮ ದುರ್ಯೋಧನರು ಯುದ್ಧದಿ ಹೇಮದ ಗದೆಯನ್ನು ಪಿಡಿದು ಪ್ರೇಮದಿಂದಲೆ ಕಾದುತಿರಲು ನಿರ್ನಾಮವನು ಮಾಡಿಸಿದ ಸ್ವಾಮಿಗೆ 24 ಗೃಧ್ರ ಉಲೂಕದ ವೃತ್ತಿಯ ನೋಡಿ ಭದ್ರೆದ್ರೌಪದಿ ಪುತ್ರನನ್ನು ನಿದ್ರೆಕಾಲದಿ ಕೊರಳಕೊಯ್ಯಲು ಶಿರದಲಿದ್ದ ಮಣಿಯ ತೆಗೆಸಿದವಗೆ 25 ದ್ರೋಣಪುತ್ರನ ಬಾಣದಿಂದಲೆ ತ್ರಾಣಗೆಟ್ಟ ಶಿಶುವ ನೋಡಿ ಜಾಣತನದಲಿ ಚಕ್ರವಪಿಡಿದು ಪ್ರಾಣವನು ರಕ್ಷಿಸಿದ ಸ್ವಾಮಿಗೆ 26 ಏಳುಹನ್ನೊಂದು ಸೇನೆಗಳನೆಲ್ಲ ಹಾಳುಮಾಡಿ ಹದಿನೆಂಟುದಿವಸದಿ ಖೂಳಕೌರವರನೆಲ್ಲ ಕೊಂದು ಧರ್ಮನಲಿ ರಾಜ್ಯವಾಳಿಸಿದಗೆ 27 ಸೌಪ್ತಿಕದಲಿ ಪುತ್ರನ ಕೊಲ್ಲಿಸಿ ಸ್ತ್ರೀಪರ್ವದಿ ಭೂಮಿ ಭಾರವಡಗಿಸಿ ಶಾಂತಿಪರ್ವದಿ ಧರ್ಮರಾಯಗೆ ಪಟ್ಟಾಭಿಷೇಕವ ಮಾಡಿಸಿದಗೆ 28 ಮುಸಲದಲಿ ಯಾದವರನಡುಗಿಸಿ ಅನುಶಾಸನದಿ ಧರ್ಮಪೇಳಿಸಿ ಅಶ್ವಮೇಧ ಮಹಾಪ್ರಸ್ಥ ಸ್ವರ್ಗಾರೋಹಣವ ಮಾಡಿಸಿದಗೆ 29 ಅಂದುಪಾರ್ಥಗೆ ಸಾರಥ್ಯವಮಾಡಿ ಬಂಧುಗಳ ಸ್ವರ್ಗವಾಸಮಾಡಿಸಿ ಬಂದು ಬೃಂದಾರಣ್ಯದಲ್ಲಿ ಇಂದಿರೇ ಸಹನಿಂದ ಸ್ವಾಮಿಗೆ 30 ಅನಿರುದ್ಧ ಸಾತ್ಯಕಿ ರುಕ್ಮಿಣಿ ಸಹಿತಲೆ ಬಂದು ನಿಂದವಗೆ 31 [ವರ] ಕಲಿಯುಗದೊಳಗುಳ್ಳ ದುಷ್ಟಕರ್ಮಿಗಳನೆಲ್ಲ ಸಲಹುವೆನೆಂದು ಕೈರವಿಣಿತೀರದಲಿನಿಂದ ಕರುಣಿ ವೆಂಕಟಕೃಷ್ಣನಂಘ್ರಿಗೆ ಮಂಗಳಂ 32
--------------
ಯದುಗಿರಿಯಮ್ಮ
ಮಂಗಳ ಶ್ರೀ ಯತಿವರಗೆ ಮಂಗಳ ಶ್ರೀ ಹರಿಸುತಗೆ ಶೋಣಿತ ಪುರಧೀಶÀಗೆ ಮಂಗಳ ಗುರುವರಗೆ ಪ ಹರಿಸರ್ವೋತ್ತಮನೆಂದು ಪರಮ ಭಕ್ತಯಲಿಂದು ಹರುಷದಿ ಶ್ರೀ ನರಹರಿಯನು ಖಂಬದಿ ತ್ವರದಲಿ ಕರೆದವಗೆ 1 ಪರಿಮಳ ಗ್ರಂಥವ ಮಾಡಿ ಹರಿಯ ಪಾದಕೆ ನೀಡಿ ಪರಮ ಸುಧೀಂದ್ರರ ಕರದಲಿ ಯತಿ ಆಶ್ರಮ ಪಡೆದವಗೆ 2 ಭಕ್ತರ ಭಾಗ್ಯನಿಧಿಗೆ ನಿತ್ಯಸುಖಾ ಪಡೆದವಗೆ ಮುಕ್ತಿಯ ದ್ವಾರವ ತೋರುವ ಗುರುರಾಘವೇಂದ್ರನಿಗೆ 3 ಕರುಣಾಸಾಗರನೀತಾ ಕರೆದಲ್ಲೆ ಬರುವಾತಾ ಪೊರೆಯಂದೊದರಲು ಭಕ್ತರ ಪಿಡಿಯುವ ಮೀರದೇ ಕಾಯ್ವವಗೆ 4 ವರಧೀರ ಹನುಮೇಶವಿಠಲನಾ ನಿಜದಾಸಾ ಸರಸದಿ ಅರ್ಚನೆಗೊಳ್ಳುವ ಮಂತ್ರಾಲಯ ಪುರವಾಸನಿಗೆ 5
--------------
ಹನುಮೇಶವಿಠಲ
ಮಂಗಳಂ ಶ್ರೀ ಲಕ್ಷ್ಮೀದೇವಿಗೆ ಜಯ ಮಂಗಳಂ ಪಕ್ಷಿವಾಹನರಾಣಿಗೆ ಪ. ಮಂಗಳಂ ಮಂತ್ರಮೂರುತಿಗೆ ಶುಭ ಮಂಗಳಂ ಪರತಂತ್ರರೂಪಿಣಿಗೆ ಅ.ಪ. ಭಾರ್ಗವಿಗೆ ಭಾಗ್ಯದಾಯಿನಿಗೆ ಭಾಗವತರ ಪೂಜೆ ಕೈಗೊಂಬಳಿಗೆ ನಾಗವೇಣಿಗೆ ವರನಾಗಪೂಜಿತೆಗೆ ವರ ಭೋಗಿಭೂಷಣಸುತೆ ಯೋಗೇಶ್ವರಿಗೆ 1 ಸೀತೆಗೆ ಮಂಗಳಗೀತೆಗೆ ಭುವಿ ಜಾತೆಗೆ ಮಂಗಳಂ ಪವನಜಸೇವಿತೆಗೆ ಮಾತೆಗೆ ಸದ್ಗುಣ ಪೂತೆಗೆ ವರಪ್ರ ದಾತೆಗೆ ನಿತ್ಯನಿರ್ಮಲೆಗೆ 2 ವರಶೇಷಗಿರಿವರನ ಉರದಲ್ಲಿ ನೆಲೆಗೊಂಡು ಶರಣಾಗತರಂ ಪರಿಭಾವಿಸಿ ಪರತರ ಸುಖಸೌಭಾಗ್ಯವ ಕರುಣಿಸಿ ಪೊರೆವ ಕಾರುಣ್ಯಮೂರುತಿಗೆ 3
--------------
ನಂಜನಗೂಡು ತಿರುಮಲಾಂಬಾ
ಮಂಗಳಂ ಶ್ರೀ ಶ್ರೀನಿವಾಸಗೆ ಶೃಂಗಾರರೂಪಗೆ ಮಂಗಳಂ ಶ್ರೀ ಶ್ರೀನಿವಾಸಗೆ ಪ. ಪದ್ಮನಾಭ ಪದ್ಮ ಮುಖಗೆ ಪದ್ಮಪಾದಗೆ ಪದ್ಮವತಿಯ ವರಿಸಿದವಗೆ ಪದ್ಮೋದ್ಭವನ ಸೇವೆ ಕೊಂಬಗೆ 1 ಆರ್ತ ಜನರ ಪೊರೆಯುವನಿಗೆ ಪಾರ್ಥಸಾರಥಿಗೆ ಕೀರ್ತಿಸುವರ ಕಾಯ್ದೆನೆಂದು ಅರ್ಥಿಯಿಂದ ನಿಂತಿರುವಗೆ 2 ಯೋಗಿಗಳಿಗೆ ನಿಲುಕದವಗೆ ಭೋಗಿಶಯನಗೆ ಭಾಗವತರು ಸ್ತುತಿಸಲು ಅನು- ರಾಗದಿಂದ ಲಾಲಿಪನಿಗೆ 3 ಭಕ್ತ ಜನರ ಕಾಯುವನಿಗೆ ಮುಕ್ತಿದಾಯಕನಿಗೆ ನಿತ್ಯಮುಕ್ತ ನಿಗಮವೇದ್ಯ ಸತ್ಯಸಂಕಲ್ಪ ಹರಿಗೆ 4 ಭೂಪರೈವರ ಪೊರೆದವಗೆ ತಾಪಹರನಿಗೆ ಗೋಪಾಲಕೃಷ್ಣವಿಠ್ಠಲಗೆ ಶ್ರೀಪತಿ ಶ್ರೀ ಶ್ರೀನಿವಾಸಗೆ 5
--------------
ಅಂಬಾಬಾಯಿ
ಮಂಗಳಂ ಶ್ರೀಕೃಷ್ಣವೇಣಿಗೆ ಜಯ ಮಂಗಳಂ ಜಗದುದ್ಧಾರಳಿಗೆ ಪ ರಂಗನ ಪಾದದಿ ಗಂಗೆ ಉದ್ಧವಿಸಲು ಅಂಗದಿಂದಾಗಲೆ ತಾನುದಿಸಿ ಬಂದು ಗಂಗಾಧರನ ದೇಹದಿ ಬಂದು ವೇಣಿಯ ಸಂಗಮವಾಗಿ ಬಂದ ದೇವಿಗೆ ಅ.ಪ ಮುನ್ನೂರು ಅರವತ್ತು ನದಿಗಳೆಲ್ಲ ಕೂಡಿ ಕನ್ಯಾರಾಶಿಗೆ ಗುರು ಬಂದಿರಲು ವಾಸವ ಮಾಡಲು ಅವರ ಪಾಪವ ಕಳೆದ ಶ್ರೀ ಕೃಷ್ಣವೇಣಿಗೆ 1 ಇಂದ್ರನ ಪಾಪವ ನದಿಗಳಿಗೆ ಬಿಡಲು ನಿಂದಿತರಾಗಿ ದುಃಖಿಸುತ ಪೋಗಿ ಬಂದ ಕೃಷ್ಣವೇಣಿಗೆ ಗಂಗಾದೇವಿಗೆ 2 ವೇಣುಶೂರ್ಪಗಳಲ್ಲಿ ನಾನಾ ಫಲಗಳ ಇಟ್ಟು ನೇಮದಿಂ ಬಾಗಿನಂಗಳ ಕೊಡಲು ಮಾನಿನಿಯರೆಲ್ಲ ಮೌನದಿಂ ಕೊಡಲು ಮಾಂಗಲ್ಯವಿತ್ತು ಸಲುಹುವ ದೇವಿಗೆ 3 ಕೃಷ್ಣತೀರದಲ್ಲಿದ್ದ ವೃಕ್ಷದೇವತೆಗಳು ಋಷಿಗಳು ಪಾಷಾಣವಾಗಿರಲು ನಕ್ರ ಮೊದಲಾದ ಜಂತುಗಳೆಲ್ಲ ಯಕ್ಷರು ವಾಲೂಕ ಹರಿದ ಧೂಲಿಯಾಗಿಹರು 4 ಇಂದ್ರದಂಡಕ ದಂತ್ರಿಪಾಲ ಸೋಮಕ ಧರ್ಮ ನಂದನ ನಳ ಹರಿಶ್ಚಂದ್ರರೆಲ್ಲ ಬಂದು ಸ್ನಾನವ ಮಾಡೆ ಅವರ ಪಾಪಗಳ ಆ ನಂದದಿಂ ಕಳೆದ ಕೃಷ್ಣವೇಣಿಗೆ 5 ಮಲಾಪಹಾರಿ ಭೀಮೆ ತುಂಗಭದ್ರೆಯು ಮೊ [ಒಲವಿ]ಂದ ಸ್ನಾನಪಾನವ ಮಾಡಿದವರಿಗೆ [ಲೋಲ] ಶ್ರೀನಿವಾಸನ ಪಾದತೋರ್ಪ ಕೃಷ್ಣವೇಣಿಗೆ 6
--------------
ಯದುಗಿರಿಯಮ್ಮ
ಮಂಗಳಂ ಶ್ರೀರಾಮಚಂದ್ರಗೆ ಜಯ ಮಂಗಳಂ ಸೀತಾಸಮೇತನಿಗೆ ಪ. ಮಚ್ಛಾವತಾರಗೆ ವೇದವ ತಂದಗೆ ಕೂರ್ಮರೂಪದಿ ಜಲದೊಳು ಪೊಕ್ಕವಗೆ ಹಿರಣ್ಯಾಕ್ಷಸುರನ ಗೆಲಿಯೆ ಬಂದು ಮೆಚ್ಚೆ ವರಹರೂಪ ತೋರಿದಗೆ 1 ಛತ್ರಿಯ ಪಿಡಿದು ಭರತ ನಿಂದಿರಲಾಗ ಶತ್ರುಘ್ನ ಚಾಮರವನು ಬೀಸಲು ಮತ್ತೆ ಲಕ್ಷ್ಮಣ ಮಡುದೆಲೆ ಕೊಡುತಿರಲಾಗಿ ವಿಸ್ತಾರ ವೈಭೋಗ ರಘುರಾಮಗೆ 2 ತಮ್ಮ ಲಕ್ಷ್ಮಣ ಸಹ ಒಲ್ಮೆಯಿಂದಲಿ ಬಂದ ನಮ್ಮ ಶ್ರೀರಘುರಾಮಚಂದ್ರನಿಗೆ ಸನ್ಮಾನದಲಿ ರಾಮ ಸಾಗರಶಯನಾಗೆ ಚೆನ್ನ ಚುಂಚನಕಟ್ಟೆಸ್ಥಿರವಾಸಿಗೆ 3 ಎಡದ ಕರದಿ ಬಿಲ್ಲು ಬಲದ ಕರದಿ ಬಾಣ ಕರದ ಕಮಲದೊಳಗಿಪ್ಪವನಿಗೆ ಸಿರಿ ಸೀತೆಯ ಧರಿಸಿದ ಚದುರ ಶ್ರೀ ಕಲ್ಯಾಣ ಚಂದ್ರನಿಗೆ 4 ಹರುಷದಿ ದೇವತೆಗಳಿಗೊರವಿತ್ತಗೆ ದುರುಳ ರಕ್ಕಸರ ಸಂಹರಿಸಿದಗೆ ಪರಮ ಭಕ್ತನಿಗೆ ಸ್ಥಿರರಾಜ್ಯವನೆ ಕೊಟ್ಟ ಹಯವದನಮೂರ್ತಿ ಎಂದೆನಿಸಿದಗೆ 5
--------------
ವಾದಿರಾಜ
ಮಂಗಳಂ ಶ್ರೀರಾಮಚಂದ್ರಗೆ ಮಂಗಳಾಂಗಗೆ ಪ ಭೃಂಗವೇಣಿ ಜನಕಜಾಂತರಂಗ ಲೋಲಗೆಅ.ಪ. ರಾವಣಾದಿ ದನುಜಮಥನ ಕಾಲರೂಪಗೆ ಪಾವಮಾನಿ ಹೃದಯ ಕಾಮುದ ಪೂರ್ಣ ಚಂದ್ರಗೆ 1 ದೇವತಾಳಿ ಗೀಯಮಾನ ದಿವ್ಯ ಚರಿತೆಗೆ ಭೂ ವಧೂ ಪರಿಪಾಲನೈಕ ದರ್ಮನಿರತಗೆ2 ಕಮಲ ಹಂಸ ರೂಪಗೆ ಧೇನುನಗರ ನಾಥ ವೇಂಕಟೇಶ ರೂಪಗೆ 3
--------------
ಬೇಟೆರಾಯ ದೀಕ್ಷಿತರು
ಮಂಗಳವೆನ್ನಿ ಮುಖದಲೆ ಜಯಾಮಂಗಳಾರತಿಗಳ ಎತ್ತಿ ಕರದಲೇ ಪ ಮಂಗಳ ಶ್ರೀನಿವಾಸನಿಗೆ ಜಯಮಂಗಳ ತದ್ವಕ್ಷವಾಸಿ ಲಕ್ಷುಮಿಗೆಮಂಗಳ ಸರಸಿಜ ತನುಜಗೆ ಜಯಮಂಗಳ ಮೂರವತಾರ ಮೂರುತಿಗೆ 1 ಮಂಗಳ ವಾಣಿ ಭಾರತಿಗೆ ಜಯಮಂಗಳ ಗರುಡಹ ಪಾರ್ವತೀಶ್ವರಗೆಮಂಗಳ ಷಣ್ಮಾಹೇಶರಿಗೆ ಜಯ 2 ಮಂಗಳ ನಾರದ ಮುನಿಗೆ ಜಯಮಂಗಳ ರಾಘವೇಂದ್ರಾಯ ಯತಿಗೆಮಂಗಳ ದಾಸಮಂಡಳಿಗೆ ಜಯಮಂಗಳ ಇಂದಿರೇಶನ ಭಜಕರಿಗೆ 3
--------------
ಇಂದಿರೇಶರು
ಮಂಗಳವೆನ್ನಿ ಮುದವೆನ್ನಿ ಶೋಭಾನೆ ಪ ಸಿರಿ ಲತಾಂಗಿ ಹುತ್ಕುಮಲಾಲಯ ಕು ಹಸೆಯ ಜಗಲಿಗೇ 1 ಇಂದಿರೆ ಸಹೋದರೆ ಸುನಿಭಾನನೆ ಶ್ರುತಿಗೀತೆ ಮಂಗಳ ದೇವಿ ಹಸೆಗೇಳು 2 ಅತುಲಮಹಿಮ ಅಜರಾಮರಣನೆ ಪತಿತ ಪಾವನ್ನ ಹಸೆಗೇಳೋ 3 ಉದ್ಯದ್ರವಿ ಸನ್ನಿಭೆ ಆಗಮ ವೇದ್ಯಳೆ ವಿನತಾತ್ಮಜ ಧ್ವಜರಿ ನಪ್ರಿಯೆ ಹಸೆಗೇಳು 4 ಸಾರಥಿ ವ್ರಾತೋತ್ತಮ ವ್ರಜಭವ ನಾರೇರ ದಾಮೋದರ ಜಗನ್ನಾಥ ವಿಠ್ಠಲ ಹಸೆಗೇಳೋ 5
--------------
ಜಗನ್ನಾಥದಾಸರು
ಮಂಗಳಾ ವರಯೋಗಿ ರಾಯಗೆ | ಮಂಗಳಾ ಪರಮ ಅವಧೂತಗೆ |ಮಂಗಳಾ ಪರಮಾತ್ಮ ಶ್ರೀ ಗುರು ಸಿದ್ಧ ಬಸವಂಗೆ | ಜಯ ಜಯ ಮಂಗಳಾ ಪ ಆದಿ ಮಧ್ಯಾವಸಾನವಿಲ್ಲದ ನಾದ ಬಿಂದು ಕಲಾ ಶೂನ್ಯಗೆ |ಸಾಧಿಸುವ ಸಿದ್ಧಾಂತ ಅಗಣಿತವಾದ ಬ್ರಹ್ಮವನು | ವೇದ ವೇದಾಂತವ ವಿಚಾರಿಸಿ ನಾದ ಋಷಿ ಅಪಾರ ಚಿಂತ್ಯನು | ಮೇದಿನಿಯ ಭಕ್ತರನುಗ್ರಹಕಿತ್ತ ಬಂದ ಬಸವರಾಜಯೋಗದಲಿ 1 ಮತ್ಸ್ಯ ಕೂರ್ಮ ವರಾಹನಾದ ಮಾಧವಗೆ 2 ಮಾಧವ ಕಲಿಯೊಳಗವತರಿಸಿದ ಬಳಿಕಾ ಬಾಲಕೃಷ್ಣಂಗೆ 3 ನೋಡಿದರೆ ದುರಿತವನು ಕೆಡುವನು, ಬೇಡಿದರೆ ಸಾಯೋಜ್ಯನೀವನು ಮಾಡಿ ಪಾದದ ತೀರ್ಥಕೊಂಡಡೆ ಮರಳಿ ಪುಟ್ಟಗಡ | ಖೇಡನಾಗದೆ ನಾಮಕೀರ್ತಿಯ ಮಾಡು ಮರುಳೆ ಆದಿಪುರುಷನರೂಢಿಯೊಳು ಈಡ್ಯಾಡಿ ಮೆರೆದ ಬಸವರಾಜಯೋಗದಲಿ 4 ಇಂತು ಭಕ್ತರ ಭಕ್ತಿಗೋಸುಗ ಅಚಿಂತ್ಯ ಮಹಿಮನು ಶರೀರವತಾ- ನಂತು ಧರಿಸಿಹನಿಲ್ಲದಿದ್ದಡೆ ದೇಹ ತಾನೇ ತಾ |ಕಂತು ಹರನವತಾರವಲ್ಲದೆ ಭ್ರಾಂತಿ ಬಿಡಿಸಿದ ಕೊಳಕೂರದಲಿಸಂತತವೆ ನೆಲೆಸಿಹನು ಬಸವರಾಜಯೋಗದಲಿ 5
--------------
ಭೀಮಾಶಂಕರ
ಮಂಗಳಾಂಗ ಮನ್ನಿಸು ತಪ್ಪನು ರಂಗನಾಥ ರಕ್ಷಿಸೈ ತಂದೆ ಯೆನ್ನನು ಪ ಅಮಿತ ಕಮಲ ರವಿತನಾಗದ ಮನುಜನೇಕೆ1 ಕಣ್ಣು ಇಲ್ಲದ ರೂಪು ಯಾಕೆ | ರಂಗನಾಥ ಹೊನ್ನು ಇಲ್ಲದ ಬಾಳು ಯಾತಕೆ | ಮುನ್ನ ಮೂಗು ಇಲ್ಲದ ಮೊಗವು ಮಣ್ಣು ತಿಂದು ಹೋದರೇನು ಅಣ್ಣ ನಿನ್ನ ಭಕುತಿ ಇಲ್ಲದ ಸಣ್ಣ ಮನುಜ ಸತ್ತರೇನು 2 ದಾನವಿಲ್ಲದ ಧನವಿದೇತಕೆ | ರಂಗನಾಥ ಜ್ಞಾನವಿಲ್ಲದ ವಿದ್ಯೆ ಯಾತಕೆ ಆಣೆಯಿಲ್ಲದ ಅರಸು ತಾನು ಅಡವಿಪಾಲು ಆದರೇನು ದೀನಬಂಧು ನಿನ್ನ ನಂಬದ ಮಾನಹೀನ ಮನುಜನೇಕೆ 3 ಮಕ್ಕಳಿಲ್ಲದ ಮನೆಯು ಯಾತಕೆ | ರಂಗನಾಥ ಅಕ್ಕರಿಲ್ಲದ ಊಟ ಯಾತಕೆ ಸೊಕ್ಕಿ ನಡೆವ ಬಂಟನೇಕೆ ಮಿಕ್ಕು ಮೀರ್ವ ಶಿಷ್ಯನೇಕೆ ರಕ್ಕಸಾರಿ ನಿನ್ನ ಸೇರದ ಸೊಕ್ಕು ನರ ಜನ್ಮವೇಕೆ ? 4 ಕಾಕು ಮಾಡಿಯೆ ವೈಕುಂಠ ನಗರದೊಡೆಯ ನಾರಸಿಂಹ ಏಕಭಕ್ತಿಯಿಂದಲಿರುವೆ ಏಕೆ ಕೈಯ ಬಿಡುವೆ ದೊರೆಯೆ 5
--------------
ಅನ್ಯದಾಸರು
ಮಂಗಳಾಂಗ ಶ್ರೀಕೃಷ್ಣಗೆ ಸುದತಿಯರು ಮಂಗಳಾರತಿ ಎತ್ತಿರೆಪ ಭವ ಭಯ ಭಂಗ ಶುಭಗುಣಸಾಂದ್ರನಿಗೆ ಜಯ ಅ.ಪ ಕೂರ್ಮ ಕ್ರೋಡ ನೃಹರಿಗೆ ದಾನವ ಬೇಡಿದಗೆ ಮಾನದಿ ಭೃಗು ಶ್ರೀರಾಮ ಶ್ರೀಕೃಷ್ಣಗೆ ಬುದ್ಧ ಕಲ್ಕ್ಯನಿಗೆ ಜಯ 1 ಅನಿರುದ್ಧ ಮೂರುತಿಗೆ ಪಕ್ಷಿವಾಹನ ಹರಿಗೆ ಕುಕ್ಷಿಯೊಳೀರೇಳು ಜಗವನಿಂಬಿಟ್ಟಗೆ ಲಕ್ಷ್ಮೀನಾರಾಯಣ ಶ್ರೀ ಶ್ರೀಶನಿಗೆ ಜಯ 2 ಗೋಕುಲದೊಳು ಗೋಪಾಲಕರೊಡಗೂಡಿ ಗೋವ್ಗಳ ಕಾಯ್ದವಗೆ ಗೋವರ್ಧನಗಿರಿ ಎತ್ತಿದ ಧೀರಗೆ ಗೋಪಿದೇವಿಗೆ ಬಾಲಲೀಲೆಯ ತೋರ್ದಗೆ 3 ವೃಂದಾವನದಿ ಮೃತ್ತಿಕೆ ಮೆಲ್ಲುವೆನೆಂದು ವೃಂದಾರಕರು ನುಡಿಯೆ ನಂದ ಯಶೋದೆಯರು ಬಂದು ತೋರೆನಲು ಛಂದದಿಂದ ವಿಶ್ವರೂಪವ ತೋರ್ದಗೆ 4 ಕಾಳಾಹಿವೇಣಿಯರೊಡಗೂಡಿ ನಲಿವಗೆ ಕಾಳಿಂದಿ ರಮಣನಿಗೆ ಕಾಲಕರ್ಮಕೆ ಈಶನಾದ ಸ್ವಾಮಿಗೆ ಕಾಳಿಮರ್ದನ ಕಮಲನಾಭವಿಠ್ಠಲನಿಗೆ 5
--------------
ನಿಡಗುರುಕಿ ಜೀವೂಬಾಯಿ
ಮಂಗಳಾಂಗನ ಭಜಿಸೆ ಹಿಂಗಿಸುವ ಭವವ ಎನ್ನಂಗದೊಳಡಗಿಹನೊ ಶ್ರಿಂಗಾರ ಮೂರುತೀ ಪ. ಧ್ಯಾನಕೆ ತಂದು ನಿಧಾನದಲಿ ಯೋಚಿಸು ಜ್ಞಾನಿಗಳರಸನ ಮಾನಸದೊಳಗೆ ಕಾನನದೊಳು ವೃದ್ಧ ಶಬರಿಯೆಂಜಲನುಂಡು ದಾನಶೀಲನು ರಾಮ ಕೈವಲ್ಯವನಿತ್ತಾ 1 ದುಷ್ಟ ಕಂಸನ ಹರಿಸಲು ಉತ್ಕøಷ್ಟ ಕೃಷ್ಣ ಬರೆ ಸೃಷ್ಟಿಗೊಡೆಯಗೆ ಗಂಧವಿತ್ತಳಾ ಕುಬ್ಜಿ ದಿಟ್ಟ ರೂಪವ ಉಂಗುಷ್ಠದಿಂದೊತ್ತುತ್ತ ಭಕ್ತ ರಿಷ್ಟವನು ಸಲಿಸಲು ಕಷ್ಟವೇ ಹರಿಗೆ 2 ಯಾವಾಗ ಸ್ತುತಿಸಿದರು ಮತ್ತಾವಲ್ಲಿ ಕರೆದರೂ ಧಾವತಿಗೊಂಡು ಬಹ ಶ್ರೀ ಶ್ರೀನಿವಾಸ ಹಾವಭಾವದ ತೆರದಿ ದೇವ ಬಂದೊದಗುವ ಮತ್ತಾವ ದೇವರ ಕಾಣೆ ಶ್ರೀವರನಲದೇ 3
--------------
ಸರಸ್ವತಿ ಬಾಯಿ
ಮಂಗಳಾಚರಣ ಜಯ ಜಯ ರಮಾಕಾಂತ ಜಯತು ದೈತ್ಯಕೃಪಾಂತ ಜಯ ಸರ್ವ ವೇದಾಂತ ಜಯತು ನಿಶ್ಚಿಂತಾ ಪ. ಬ್ಯಾಡ ವೇಷವ ತಾಳಿ ಓಡಿಸುತ ತುರಗವನು ಹೂಡೆ ಪದ್ಮಾವತಿಯ ನೋಡಿ ನಸುನಗುತ್ತ ಜೋಡಾತು ತನಗೆಂದು ಗಾಡಿಕಾರನ ಮಾತ- ನಾಡಿ ಕ್ರೋಡಾಲಯಕೆ ಓಡಿ ಬಂದವನೆ 1 ತಾಯಿ ಬಕುಳೆಯ ಕಳುಹಿ ಮಾಯಕದ ಕೊರವಂಜಿ ಕಾಯದಿಂದಾಕಾಶ ರಾಯನರಮನೆಗೆ ಜೋಯೆಂದು ಪೋಗಿಸದುಪಾಯಗಳ ನಡಿಶಿ ತ- ನ್ನಾಯ ಕೈಕೊಂಡು ಕಮನೀಯ ಮೂರುತಿಯೆ 2 ಶುಕಮುನಿಯ ಮುಖದಿಂದ ಸುಖವಾರ್ತೆಯನು ಕೇಳಿ ಸಕಲ ದೇವೋತ್ತಮರ ನಿಕರವನು ನೆರಹಿ ಅಕಳಂಕ ಲಗ್ನದಲಿ ಸುಕವೋಲೆಗೊಲಿದುರಗ ಶಿಖರಿಯಲಿ ನೆಲೆಯಾದ ಲಕುಮಿವಲ್ಲಭನೆ ಜಯ ಜಯ 3
--------------
ತುಪಾಕಿ ವೆಂಕಟರಮಣಾಚಾರ್ಯ