ಒಟ್ಟು 4612 ಕಡೆಗಳಲ್ಲಿ , 131 ದಾಸರು , 3293 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯನರಿಯದ ಜನುಮ ಧೆರೆಯೊಳಗಧಮಾಧಮ ಹರಿಯ ನೆನೆಯದ ನರನು ಪಾಮರನು ಧ್ರುವ ಹರಿಗೆ ನಮಿಸದ ಸಿರವು ತೋರುವ ಬೆಚ್ಚಿನ ತೆರವು ಹರಿಗೆ ವಂದಿಸದ್ಹಣಿಯು ಹುಳಕ ಮಣಿಯು ಹರಿಗೆ ಮುಗಿಯದ ಕೈಯು ಮುರುಕ ಕೀಲಿಯ ಕೈಯು ಹರಿ(ಯ) ಕೊಂಡಾಡುವ ನಾಲಿಗೆ ಒಡಕ ಸೊಲಿಗೆಯ 1 ಹರಿಯ ಸ್ತುತಿಸದ ಮುಖ ಚೀರುವ ಚಿಮ್ಮಡಿಯ ಮುಖವು ಹರಿಕಥೆ ಕೇಳದ ಕಿವಿಯು ಹಾಳುಗವಿಯು ಹರಿಯ ನೋಡದ ಕಣ್ಣು ತೋರುವ ನವಲ್ಗರಿಗಣ್ಣು ಹರಿಯ ಆರಾಧಿಸದ ಮನವು ಹೀನತನವು 2 ಹರಿಯ ಸೇವೆಗೊದಗದ ಕಾಲು ಮುರುಕ ಹೊರಸಿನ ಕಾಲು ಹರಿಗೆ ಮಾಡದ ಭಕ್ತಿ ಮೂಢ ಯುಕ್ತಿ ಹರಿಯೆ ಶ್ರೀಗುರುವೆಂದು ಗುರುವೆ ಪರದೈವವೆಂದು ಸಲೆಮೊರೆಹೊಕ್ಕಿಹ ಮೂಢ ಮಹಿಪತಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಯೆ ಎನ್ನ ದೊರೆಯೆ ನಿನ್ನಯ ಮರೆಯಹೊಕ್ಕೆನೊ ಪ ವ್ಯಾಘ್ರಗಿರಿಯೊಳಿರುವ ಸಿರಿನಾರಾಯಣ ಅ.ಪ ಸಕಲ ಲೋಕಗಳನು ನೀನೇ ಸೃಜಿಸುವಾತನು ಸುಖದಿ ಪ್ರಾಣಿಗಳನು ನೀನೇ ಸಲಹುವಾತನು ಪ್ರಕಟವಾದ ಜಗವ ನೀನೆ ಪ್ರಳಯಗೈವನು ನಿತ್ಯ ನೀನೆ ನಿಯಮಿಸುವನು 1 ಸ್ಥೂಲ ಸೂಕ್ಷ್ಮರೂಪ ನೀನೆ ಮೂಲ ಪುರುಷನು ಲೀಲೆಯನ್ನು ಪ್ರಕಟಗೈವ ಕಾಲರೂಪನು ನೀಲಲೋಹಿತಾದಿ ವಿಬುಧಜಾಲವಂದ್ಯನು ಪಾಲಿತಾಖಿಲಾಂಡ ರಮಾಲೋಲ ಸುಗುಣಜಾಲ ಶ್ರೀ 2 ಪರಮಪುರುಷ ಪಂಕಜಾಕ್ಷ ಪತಿತಪಾವನ ಶರಧಿ ಶಯನ ಸಕಲಲೋಕ ಸಂವಿಭಾವನ ವರಗುಣಾಢ್ಯ ವಿಗತಮಾಯ ವಿಶ್ವಮೋಹನ ದುರಿತಗಜ ಮೃಗಾಧಿರಾಜ ವರದವಿಠಲ ವಿಹಗಯಾನ3
--------------
ವೆಂಕಟವರದಾರ್ಯರು
ಹರಿಯೆ ಮೂಜಗದ ದೊರೆಯೆ ನಿನಗಿದು ಸರಿಯೆ ಪ. ಹರಿಯೆ ಮೂಜಗದ ದೊರೆಯೆ ನಿನ್ನನೆ ಮರೆಯಪೊಕ್ಕವರಲ್ಲಿ ಈ ಪರಿ ಬರಿಯ ಪಂಥದಿ ಮರುಗದಿರ್ಪುದು ಸರಿಯೆ ನಿನಗದು ಸರಸವಲ್ಲದುಅ.ಪ. ಉಕ್ಕಿನ ಕಂಬದಿಂದ ಉದಿಸಿ ಬಂದು ರಕ್ಕಸನುರವ ಸೀಳಿ ಕರುಳನು ಬಗೆದು ಉಕ್ಕುವ ಕೋಪದಿಂದ ರಕುತವು ಸುರಿಯೆ ಭಕ್ತ ಪ್ರಹ್ಲಾದನಾದರದಿ ಕಾಯ್ದು ಭಕ್ತ ವತ್ಸಲನೆನಿಸಲಹುದು ಶಕ್ತಿಹೀನತೆಯಿಂದ ಮರೆಹೊಕ್ಕ ಎನ್ನನು [ಕಾಯು]ವುದು 1 ಒಪ್ಪಿಡಿಯವಲಕ್ಕಿಯ ಒಪ್ಪಿಸಿನಿಂದ ವಿಪ್ರನ ನಲವಿಂದ ನೋಡುತಲಂತು ವಿಪುಲಸಂಪದವನ್ನು ಕರುಣಿಸಿದಂಥ ಅಪ್ರತಿಮ ಸಾಹಸಿಯೆನುತೆ ನಿನ್ನೊಳು ತಪಿಸಿ ಬೇಡುವ ಎನ್ನೊಳೀಪರಿ ಒಪ್ಪದೊಪ್ಪದೆನ್ನಪ್ಪ ಕೇಳಿದು ಸರಿಯೇ ಶ್ರೀನರಹರಿಯೇ 2 ಮಾನಿತÀಧ್ರುವ ಬಾಲನಂ ಮನ್ನಿಸಿ ಪೊರೆದೆ ಮಾನಿನಿ ಪಾಂಚಾಲಿಯ ಮಾನದಿ ಕಾಯ್ದೆ ಸಾನುರಾಗದಿಂ ಗಜನಂ ಉದ್ಧರಿಸಿದೆ ಕ್ಷೋಣಿಯೊಳಗತಿ ದೀನರಾದರ ಸಾನುರಾಗದಿ ಪೊರೆವ ಶ್ರೀಧರ ದಾನವಾಂತಕ ಶೇಷಗಿರೀಶನೆ ಸೂನುವೆಂಬಭಿಮಾನ ನಿನಗಿರೆ [ಮಾಣದೆನ್ನನು ಕಾಯೊ] ಹರಿಯೇ ಶ್ರೀನರಹರಿಯೇ3
--------------
ನಂಜನಗೂಡು ತಿರುಮಲಾಂಬಾ
ಹರಿಯೆ ಸರ್ವೋತ್ತಮ ಪರದೈವವೆಂತೆಂಬ ಮರುತ ಮತವ ಸಾರಿರೊ ಪ. ಗರುವಿಕೆಯನೆ ಬಿಟ್ಟು ಪರಮತವನೆ ಸುಟ್ಟು ಹರಿಯ ಸೇವಕರಾಗಿರೊ | ಈ ಜಗದೊಳು ಅ.ಪ. ಪಂಚ ಭೇಧವ ತಿಳಿದು ಪಂಚೇಂದ್ರಿಯವ ಸೆಳೆದು ಪಂಚ ಮೂರ್ತಿಯ ಭಜಿಸಿರೊ ಪಂಚ ಸಂಸ್ಕಾರದಿ ಪಂಚಯಜ್ಞವ ರಚಿಸಿ ಪಂಚ ಮಾರ್ಗವ ಸಾರಿರೊ | ವೈರಾಗ್ಯದಿ 1 ಎಂಟು ಮದಗಳನಳಿದು ಎಂಟು ಮೂರ್ತಿಯ ತಿಳಿದು ಎಂಟು ದಳದಿ ಕಾಣಿರೊ ಎಂಟು ಕರ್ತೃತ್ವವ ಎಂಟು ತತ್ವದಿ ಮಾಳ್ಪ ಎಂಟಕ್ಷರನ ಪಾಡಿರೊ | ಕೊಂಡಾಡಿರೊ 2 ಮೂರು ಗುಣಗಳಿಂದ ಮೂರು ಮಾಳ್ಪ ಜಗವ ಮೂರು ರೂಪವ ನೆನೆಯಿರೊ ಮೂರು ಮೂರು ಭಕ್ತಿ ಮೂರು ಮಾರ್ಗದಿ ರಚಿಸಿ ಮೂರು ಲೋಕವ ಸಾರಿರೊ | ಮೂರನೆ ಗೆದ್ದು 3 ಕಂಡ ದೈವಗಳಿಗೆ ಮಂಡೆಯ ಬಾಗಿಸುತ ಬೆಂಡು ಆಗಲಿ ಬೇಡಿರೊ ಹಿಂಡು ದೈವಗಳಿಗೆ ಗಂಡ ಹರಿಯ ಭಜಿಸಿ ಗಂಡುಗಲಿಯಾಗಿರೊ | ಧೈರ್ಯವ ತಾಳಿ 4 ಗುರುಗಳಿಂದಲಿ ತತ್ವ ಸರ್ವಕಾಲದಿ ತಿಳಿದು ಉರ್ವಿಯೊಳಗೆ ಬಾಳಿರೊ ಸರ್ವಾಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ಸರ್ವಬಿಂಬನೆನ್ನಿರೊ | ಮೂಲರೂಪಿ 5
--------------
ಅಂಬಾಬಾಯಿ
ಹರಿಯೆ ಸ್ವತಂತ್ರ ಚತುರದಶ ಭುವನಕೆ | ಪರಮೇಷ್ಠಿ ಶಿವಾದ್ಯರಾತಗೆ ದಾಸರೆನ್ನು ಪ ಹರಿಹರರ ಒಂದೇ ಸ್ಥಾನದಲಿ ಕಾಣುವೆನೆಂದು | ಪರಮ ಭಕುತಿಯಿಂದ ಕ್ರೋಧಮುನಿಪ || ಧರಣಿಯೆಲ್ಲ ತಿರುಗಿ ಶುಕ್ಲವತೀ ತೀರಕೆ ಬರಲು | ವಸಂತ ಕಾಲದಂತೆ ಪೊಳಿಯೇ1 ತಪಸಿ ತಪವನೆ ಮಾಡುತಿರಲು ಖರಾಟಖಳ | ಉಪಹತಿ ಕೊಡುತಿಪ್ಪ ವರಬಲದಿ || ವಿಪುಳದೊಳಗಿವಗೆಲ್ಲಿ ಎದುರಾರು ಇಲ್ಲದಿರೆ | ಸುಪರ್ಣಾದಿ ಮೊರೆ ಇಡಲು ಬೊಮ್ಮಗೆ2 ಪರಮೇಷ್ಠಿ ಹರಿಯ ಬಳಿಗೆ ಬಂದು | ಖಳನ ಕೋಲಾಹಲವ ಬಿನ್ನೈಸಲು || ಪುಲಿತೊಗಲಾಂಬರನ ಸಹಿತ ಸರ್ವೋತ್ತಮನ | ಒಲಿಮೆಯಿಂದ ಬಂದು ಸುಳಿದರಾಗಂದು 3 ದಾನವನ ಕೊಂದು ದೇವತೆಗಳ ಸುಖಬಡಿಸಿ | ಜ್ಞಾನಕ್ರೋಢಮುನಿ ಮನಕೆ ಪೊಳೆದು || ಆನಂದದಿಂದಲಿ ನಿಂದು ಮೆರೆದ ಲೀಲೆ | ಏನೆಂಬೆನಯ್ಯ ಹರಿಹರ ವಿಚಿತ್ರಾ 4 ಪ್ರವಿಷ್ಠ ಕೇ| ಶವನು ತಾನೆ ಕಾಣೊ ಸ್ವಾತಂತ್ರನು || ಇವರು ಶಂಕರನಾರಾಯಣನೆಂಬೊ ಪೆಸರಿನಲಿ | ಅವನಿಯೊಳು ಪ್ರಖ್ಯಾತರಾಗಿ ನಿಂದಿಹರೋ 5 ಎರಡು ಮೂರುತಿಗಳು ನೋಳ್ಪರಿಗೆ | ಶ್ರೀ ನಾರಾಯಣಗೆ ಈಶ ಸಮನೇ 6 ಚಕ್ರ ಶಂಖ ಗದೆ ಪದುಮ ಹರಿಗೆ ನೋಡು | ಮುಕ್ಕಣ್ಣಗೆ ಡಮರುಗ ತ್ರಿಶೂಲವು || ಮುಖ್ಯ ದೇವತಿ ಹರಿ ಅವಾಂತರ ಶಿವನು | ಶಕ್ರಾದ್ಯರೊಲಿದು ಭೇದವನು ಪೇಳುವರು 7 ಸತ್ಯಂ ವದವೆಂಬ ಶ್ರುತಿವರದು ಪೇಳುತಿದೆ | ಭೃತ್ಯ ರುದ್ರನು ಕಾಣೊ ಲಕುಮಿವರಗೆ || ಸತ್ಯದಲಿ ಸಿದ್ಧವಯ್ಯ ಎಂದು ತಿಳಿದು | ಸ್ತೌತ್ಯ ಮಾಡಿದವಗೆ ವೈಕುಂಠ ಪದವಿ 8 ಕ್ರೋಢ ಪರ್ವತವಿದೆ ತೀರ್ಥ ಪಾವನಕರ | ನಾಡೊಳಗೆ ಕ್ಷೇತ್ರ ಉತ್ತಮ ಮಾನವಾ || ಪಾಡಿದರೆ ವಿಜಯವಿಠ್ಠಲರೇಯ ಒಲಿದು |ಕೂಡಾಡುವನು ದೃಢ ಭಕುತಿಯಿತ್ತು ಅನುದಿನಾ 9
--------------
ವಿಜಯದಾಸ
ಹರಿಯೆನೀನು ಒಲಿದಮೇಲೆ ಪರರ ಭಯವುಂಟೇ ಪ ಪÀರುಷವೇದಿ ಸೋಂಕಿದ ಕಬ್ಬಿಣ ಹೊನ್ನಲ್ಲವೇ ಸುರನದಿ ಭಾಗೀರಥಿಯೊಳು ಮಿಂದೂ ಪಾಪಿಯೇ1 ಗರುಡದೇವನಿದಿರೊಳು ಉರಗಬಾಧೆಯಿರುವುದೇ ಧರೆಯೊಳ್ ರವಿಯು ಉದಯನಾಗೆ ರಾತ್ರಿ ನಿಲ್ವುದೇ2 ಗುರುವಿನ ದಯೆಯಿರುವರೇ ಕುಲದವರೇಂ ಗಯ್ಯುವರು ಉರಿವ ಕಿಚ್ಚಿನಿದಿರೊಳಗೆ ಚಳಿಯ ಭೀತಿಯೇ 3 ಸಂಜೀವನ ಪಿಡಿದವಂ ಮರಣಕೆ ತಾನಂಜುವನೇ ಕಂಜನಯನ ಕಾಯ್ವನಿರಲು ಶನಿಯು ಹಿಂಸಿಪನೇ 4 ರಾಜತನ್ನವನಾಗಿರಲ್ ವಿರಾಜಿಸುತ್ತಲಿರುವನೈ ಜಾಜೀಶ ಕೇಶವನೇ ನಾನು ನಿನ್ನವನೈ 5
--------------
ಶಾಮಶರ್ಮರು
ಹರಿಯೆನ್ನ ನರಜನ್ಮ ವ್ಯರ್ಥವಾಯ್ತು ಪರಮ ಭಕ್ತಿಯೊಳಿನ್ನು ಭಜಿಸುವೆನು ಕಾಯೋ ಪ ತೊಡೆಯ ಮೇಲಾಡುತಿಹ ಶಿಶುವಿನಾನುಡಿ ಕೇಳಿ ಕಡು ಮೂರ್ಖತನದಿಂದ ಭ್ರಮೆಗೊಂಡೆನೋ ಸಡಗರದಿ ಕಿವಿಗೊಟ್ಟು ಕಿಂಕಿಣಿಯ ದ್ವನಿಗಳನು ಎಡಬಿಡದೆ ಕೇಳುತಿಹ ಹರಿಣನಂತಾದೇ 1 ತೊಡೆಗÀುಹ್ಯ ಕುಚಗಳಿಗೆ ಅನುದಿನವು ನಲಿಯುತ್ತ ಮಡದಿಯರ ಅಂಗ ಸಂಗದ ನಂಬುತಾ ಒಡಲ ಶಾಂತಿಯಗೊಳಿಸೆ ಬಡಿಗೋಲು ಕೆಡಹಿಕೊಂ ದಡಗುತಿಹ ಮೂಷಕನ ತೆರದಲ್ಲಿ ಕಳೆದೇ 2 ನಿರುತದಿಂ ಪರಸತಿಯ ಲಾವಣ್ಯವನು ನೋಡಿ ಚರಿಸಿತೆನ್ನಯ ಮನವು ಅವಳ ಕೂಟಕ್ಕೇ ಉರಿವ ದೀಪವ ಕಂಡು ಕನಕ ಮಣಿಯೇಯೆಂದ ಎರಗುತಿಹ ಹುಳದಂತೆ ಹಾಳಾದೆ ಬರಿದೇ 3 ಜರಿದು ನಿಜವೃತ್ತಿಯನು ಪರದಾಸ್ಯದಲಿ ಮುಳುಗಿ ಪೊರದೆ ಹೊಟ್ಟೆಯನಾ ಪರಾನ್ನ ಭಕ್ಷದಲೀ ಹರುಷದಿಂ ಬಲೆಯತುದಿ ಮಾಂಸಕ್ಕೆ ಮೆಚ್ಚಿದಾ ಮರುಳಾ ಮೀನಿನ ಗತಿಯು ಯನಗಾಯ್ತು ನಿಜದೀ4 ನಾರಿಯರ ಜಾಲಕ್ಕೆ ಪ್ರತಿದಿನವು ಸಿಲುಕುತ್ತ ಮಾರಿಯರ ಸಾಕಿ ನಾ ಫಲವ ತಿಂದೆ ಭ್ರಮರ ಸಂಪಿಗೆಯಸಳ ಸಾರಿ ಕೊಡಲೆ ಮೃತ್ಯುವಶವಾಗುವಂತೇ 5 ಮೂರಾರು ಶತ್ರುಗಳು ತರಿದೆನ್ನ ಮನವನ್ನು ಗಾರು ಮಾಡುತಲಿಹವು ತಿಳಿಯದಾ ಹರಿಯೇ ನರಸಿಂಹನೇ ಐದು ಇಂದ್ರಿಯವ ಗೆಲಲಾರೆ ಭೂರಿ ಭಕ್ತಿಯೊಳೆರಗಿ ಮರೆಹೊಕ್ಕೆ ಕಾಯೋ 6 ಪನ್ನಗಶಯನ ಶ್ರೀ ವೇಣುಗೋಪಾಲನೆ ಚನ್ನಿಗಕೇಶವನೇ ದೂರ್ವೇಶನೇ ನಿಂನನಾ ಬಿಡಲಾರೆ ಮಾರಮಣ ಪೊರೆಯಂನ ಯೋನಿ ಜನ್ಮಕೆ ಮುಂದೆ ಬರದಂತೆ ಮಾಡೋ 7
--------------
ಕರ್ಕಿ ಕೇಶವದಾಸ
ಹರಿಯೆನ್ನೋ ಹರಿಯೆನ್ನೋ ಹರಿಯೆನ್ನೋ ಖೋಡಿ ಹರಿಯದಾಸರ ಸಿರಿಸಂಪದ ನೋಡಿ ಪ ಎರವಿನ ಸಿರಿಗೆ ನೀ ಮರುಳಾದಡಿ ಹರಿಯೆಂದು ನುಡಿಲಿಕ್ಕೆ ನೀನಗೇನು ಧಾಡಿ ಧರೆಯೊಳಾರಿಲ್ಲ್ಹರಿದಾಸರ ಜೋಡಿ ಮರುಳ ಯಮದೂತರಂಜಿ ಹೋಗುವರೋಡಿ 1 ಭವಚಕ್ರದೊಳುಬಿದ್ದು ಬೆಂಡಾದೆ ಕಾಗಿ ಅವನಿಸುಖ ನೀನಿನ್ನು ತಿಳಿವಲ್ಲಿ ಗೂಗಿ ಭವಹರನರ್ಚಿಸಿ ನೋಡೋ ದೃಢಮಾಗಿ ಭವತಾಪ ನಿನಗೆಂದಿಗಿರದೋ ನಿಜವಾಗಿ 2 ಮತಿಶೂನ್ಯನಾಗಧೋಗತಿ ಕಾಣಬೇಡೋ ಮತಿಯಿಂದ ನಿಜಸ್ಥಿತಿ ವಿಚಾರಮಾಡೋ ಕೃತಕೃತ್ಯರೆನಿಪ ಹರಿದಾಸರೊಳಾಡೋ ಪತಿತ ಶ್ರೀರಾಮನರಸಿ ಮುಕ್ತಿಯ ಕೂಡೋ 3
--------------
ರಾಮದಾಸರು
ಹರಿಯೇ ಕಾವುದು ಕಾವದು ನೀ ಪ ಕಾವುದು ಕಾವದು ಸಾದರದಿಂದಲಿ ದೇವನೆ ಯನ್ನ ಸದಾ | ಪಾದ ಯುಗ್ಮ ಪದಾ ಅ.ಪ ಸ್ವರ್ಗದ ಸಾಸಿರ ಮಡಿಸುಖ ಭಕ್ತಿಯ ಮಾರ್ಗವ ನರಿಯದೇ | ದುರ್ಗುಣದಲಿ ತನು ಧನ ಸಿರಿಮದದಿಂ ಆರ್ಗೆಯ ಮನ್ನಿಸದೇ ಮಾರ್ಗಣವೆಸನುದರವ ಪೊರೆವುತ ಷಡ್ವರ್ಗರ ಬಲಿವಿಡಿದೇ| ಅರ್ಗಳಿಗೆಯು ನೆನಿಯದೆ ಬಹ ಜನ್ಮದಿ ದುರ್ಗತಿ ಭೋಗಿಸಿದೇ 1 ನಾ ಪೂರ್ವದಿ ಮಾಡಿದ ಬಹು ದುಷ್ಕøತ ಆ ಫಲದಿಂದ ಲೀಗ | ಮಹಾಪಯ ನಿಧಿಯೊಳಗೆ | ಧಡಿಗೆ | ಶ್ರೀಪತಿನಾವಿಕನಾಗಿ ನೀ ದಾಟಿಸಲೀಪಸುಗಳೆಂದನಗೆ | 2 ಕಂದನ ಗುಣದೋಷಂಗಳ ಆರಿಸೆ ತಂದೆಗಿದು ಚಿತವೆ | ನೀ ಬಂದು ಜಗದ್ಧರುವೆ | ಪತಿತರ ವೃಂದ ಉದ್ದರಿಸುವೆ | ಮಂದರ ಗಿರಿಧರ ತಂದೆ ಮಹಿಪತಿ ನಂದನವರ ಪ್ರಭುವೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಯೇ ಸರ್ವಸಾರವೆಂದು ಸಾರುವರು |ತೆರೆದು ಹೇಳಿ ತತ್ತ್ವವನು ತಾರಿಸುವರು ಪ ಮೊರೆ ಹೊಕ್ಕವರ ಮನದ ಮಲಕು ಬಿಡಿಸುವರು |ಹರಿದು ಹೋಗುವವಗೆ ಕರೆದು ಕಡೆಗ್ಹಾಕುವರು1 ಧರೆಯೊಳವರೇ ಸಾಧು ಪುರುಷರೆನಿಸುವರು |ಸಿರಿಗೆ ಸೆರಗೊಡ್ಡಿ ಸಿರಬಾಗಿ ನಡಿಯದವರು 2 ಬರಿಯ ತರ್ಕದಿಂದ ಖಂಡಿಸದವರು |ಸರಿಗೆ ಬಂದರೆ ಸುಮ್ಮನೆ ಸಹಿಸುವರು 3 ಕಾಯ ಕದ್ದು ಕರ್ಮಪಾಶ ಕಳೆದವರು |ರಾಯ ರಂಕರಿಗೆ ಸರಿ ತಿಳಿದವರು 4 ಮಾಯದ ಮೂಲವಾದ ಭೇದವಳಿದವರು |ಲಯದ ಮನೆಯ ಮೆಟ್ಟಿ ಭಯ ಮೀರಿದವರು 5 ಅರಿತು ಅರಿಯದವರಂತೆ ತೋರುತಿಹರು |ಮರೆತು ಮರವಿಗೆ ತಾವೆ ಮರವಾಗಿಹರು6 ಗುರು ರುಕ್ಮಭೂಷಣನಂತ ತೋರಿಸುವರು |ತ್ವರಿತದಿ ತಮ್ಮ ನೆಲೆಯ ಕೊಡದವರು 7
--------------
ರುಕ್ಮಾಂಗದರು
ಹರಿಯೇಕಾಯೋ ಶರಧಿಶಯನನೇ ಸಿರಿದೇವಿಯರಸ ಪರಮಾತ್ಮ ಪರಾತ್ಪ್ಪರನೇ ಪ ಬಿರುದ ಧರಿಸಿ ಮೆರೆಯವೆ ನೀ ಧರೆಯೊಳು ಶುಭಚರಿತನೆ ಅ.ಪ ವರರುಕ್ಮಾಂಗದ ಪ್ರಹ್ಲಾದರು ದ್ರೌಪದಿ ವಿಭೀಷಣಶ- ಸಿರಿ ನಾಮದ ಮಹಿಮೆಯು 1 ಬುದ್ಧಿವಂತರೆಲ್ಲ ಮನವ ತಿದ್ದಿಕೊಳುತಲಹರ್ನಿಶಿಯಲಿ ವುದ್ಧವಪ್ರಿಯ ನಿನ್ನಪಾದ ಪದ್ಮಮಧುಪರೆನಿಪರು 2 ಗಹನವಳವಡುವಡಲ್ಲವು ಮಹಿಯೊಳು ಪಾಮರರಿಗೆ 3 ಪರ ಸುಖವನು ತಾವ್ಕೋರದೆ ಸದ್ಭಕುತಿಯಿಂದ ಸೇವಿಪರು 4 ಹೊರಳಿ ಹೊರಳಿ ನೋಯ್ವರು ಶ್ರೀ ಗುರುರಾಮ ವಿಠಲನೇ 5
--------------
ಗುರುರಾಮವಿಠಲ
ಹರಿಸರ್ವೋತ್ತಮನೆಂದರಸುವರು ಪ ಹರಿದಾಸರಿವರು ಧರೆಯೊಳಿವರಿಗೆ ಸರಿಗಾಣೆ ಕೇಳಮ್ಮ ಜಾಣೆ ಅ.ಪ ಸಾಧುಸಜ್ಜನರಿಗೆ ಬಾಗುವರು ವೇದಕೆ ನಮಿಸುವರು ವಾದವಾಂಛಲ್ಯವ ತೊಡದಿಹ್ಯರು ಭೇದಿಲ್ಲದಿವರು 1 ಕಾಮ ಕ್ರೋಧಾದಿಗಳು ಜೈಸಿಹ್ಯರು ತಾಮಸಬಿಟ್ಟಿಹರು ಭೂಮಿ ಮೋಹಾದಿಗಳನಳಿದಿಹ್ಯರು ಸ್ವಾಮಿನ ಭಜಿಸುವರು 2 ಕ್ಲೇಶಪಂಚಕದಿಂದುಳಿದಿಹ್ಯರು ಮೋಸಕೆ ಒಳಪಡರು ಅಶಪಾಶಗಳೆಲ್ಲ ತುಳಿದಿಹ್ಯರು ವಾಸನೆ ತೊಳೆದಿಹ್ಯರು 3 ಮೆಚ್ಚದೆ ಸಂಸಾರ ತುಚ್ಛೀಕರಿಸಿಹ್ಯರು ಎಚ್ಚರಗೊಂಡಿಹ್ಯರು ಅಚ್ಚುತಾನಂತನೆ ಗತಿಯೆಂಬುವರು ಬಚ್ಚಿಟ್ಟು ನೆನೆಯುವರು 4 ಹರಿಯೆ ಪರದೈವವೆಂದರಿತಿಹ್ಯರು ಹರಿಯ್ಹೊರತಿಲ್ಲೆಂಬುವರು ಸರುವ ಜಗಭರಿತನೆಂದವರು ಸಿರಿರಾಮನ್ನ ತಿಳಿದಿಹ್ಯರು 5
--------------
ರಾಮದಾಸರು
ಹರಿಹರರಿಬ್ಬರು ಒಲಿದು ಮಾತಾಡಲು ಕೊಳವ ಕಂಡಲ್ಲಿ ಎಲೆತೋಟ ಕೊಳವ ಕಂಡಲ್ಲಿ ಎಲೆತೋಟದೊಳಗಾಡುವ ಹೆಣ್ಣಿನ ಕಂಡು ಹರ ಮರುಳಾದ ಪ. ತೆಂಗಿನ ತಿಳಿಗೊಳ ನಿಂಬೆ ಕಿತ್ತಲೆ ಬಾಳೆ ಹೊಂಬಾಳೆ ಅಡಿಕೆ ಬನಗಳು ಹೊಂಬಾಳೆ ಅಡಿಕೆ ಬನದೊಳಗಾಡುವ ರಂಭೆಯ ಕಂಡು ಹರ ಮರುಳಾದ 1 ಅರಿಸಿನ ತಿಳಿಗೊಳ ಹಲಸು ಕಿತ್ತಲೆ ಬಾಳೆ ಬೆರಸಿ ಮಲ್ಲಿಗೆಯ ಬನದೊಳು ಬೆರಸಿ ಮಲ್ಲಿಗೆಯ ಬನದೊಳಗಾಡುವ ಸರಸಿಜಾಕ್ಷಿಯ ಕಂಡು ಹರ ಮರುಳಾದ 2 ಮೊಲ್ಲೆ ಮಲ್ಲಿಗೆ ಜಾಜಿ ಅಲ್ಲೆ ಪಾರಿಜಾತ ನಿಲ್ಲದೆ ನುಡಿವೊ ಗಿಳಿಗಳು ನಿಲ್ಲದೆ ನುಡಿವೊ ಗಿಳಿಗಳು ನುಡಿಗಳ ಚೆಲುವೆಯ ಕಂಡು ಹರ ಮರುಳಾದ 3 ಸೋಗೆ ನವಿಲುಗಳು ಗಿಳಿಹಿಂಡು ತುರುಗಳು [ಕೋಗಿಲೆ ನಲಿಯೊ ಪಂಸೆಗಳು] [ಕೋಗಿಲೆ ನಲಿಯೊ ಪಂಸೆಯೊಳಾಡುವ] ಸೊ- ಬಗಿಯ ಕಂಡು ಹರ ಮರುಳಾದ 4 ಚೆಲುವ ಚರಣಗಳು ಜಂಘೆ ಜಾನೂರು ಕಟಿ ವಳಿಪಂಙÂ್ತ ಜಠರ ವಕ್ಷಸ್ಥಳವು ವಳಿಪಂಙÂ್ತ ಜಠರ ವಕ್ಷಸ್ಥಳಗಳ ಹೆಣ್ಣಿನ ಸ್ತನವ ವರ್ಣಿಸಲಾರಿಗಳವಲ್ಲ 5 ಕಾಲುಂಗುರ ಅಕ್ಕಿ ಪಿಲ್ಯ ಜೋಡುಮೆಂಟಿಕೆಗಳು ವೀರಮುದ್ರಿಕೆಯು ಕಿರುಪಿಲ್ಯ ವೀರಮುದ್ರಿಕೆಯು ಕಿರುಪಿಲ್ಯ ನಿಟ್ಟಿದ್ದ ಬಾಲೆಯ ಕಂಡು ಹರ ಮರುಳಾದ 6 ನಡು ಬಳುಕಿ ಮುಡಿ ಸಡಲಿ ಉಡಿಗಂಟೆ ಹೊಳೆಯುತ ಕೊರಳ ಪದಕ ಹಾರ ಒಲೆಯುತ ಕೊರಳ ಪದಕ ಹಾರ ಒಲೆಯುತ ಹೆಣ್ಣಿನ ಇರವ ವರ್ಣಿಸಲಾರಿಗಳವಲ್ಲ 7 ಹಸಿರು ಕುಪ್ಪಸಗಳು ಮುಂಗೈನಗಗಳು ನಳಿತೋಳುಬಂದಿ ಬಳೆಗಳು ನಳಿತೋಳುಬಂದಿ ಬಳೆಗಳು ಹೆಣ್ಣಿನ ಥಳುಕು ವರ್ಣಿಸಲಾರಿಗಳವಲ್ಲ8 ಹಾರ ಹೀರಾವಳಿ ಕೇಯೂರ ಕಂಕಣ ತೋಳ ಭಾಪುರಿ ಭುಜಕೀರ್ತಿ ತೋಳ ಭಾಪುರಿ ಭುಜಕೀರ್ತಿನಿಟ್ಟಿಹ ಇಂದುಮುಖಿಯ ಕಂಡು ಹರ ಮರುಳಾದ 9 ಅರಳೋಲೆ ಮೂಗುತಿ ಹಣೆಯ ಹಚ್ಚೆಯ ಬೊಟ್ಟು ಕದಪು ಕನ್ನಡಿಯು ಕುಡಿಹುಬ್ಬು ಕದಪು ಕನ್ನಡಿಯು ಕುಡಿಹುಬ್ಬು ಹೆಣ್ಣಿನ ಬೆಳಕÀ ವರ್ಣಿಸೆ ಹರಗಳವಲ್ಲ 10 ನೊಸಲು ಕಸ್ತೂರಿಗಳು ಎಸೆವ ಬೈತಲೆಗಳು ಕುರುಳು ಕೂದಲುಗಳು ಕುಂತಲಗಳು ಕುರುಳು ಕೂದಲುಗಳು ಕುಂತಲಗಳು ಹೆಣ್ಣಿನ ಜಡೆಯ ವರ್ಣಿಸಲಾರಿಗಳವಲ್ಲ 11 ಕುಂಭಕುಚದ ಮೇಲೆ ಗಂಧವ ಪೂಸಿದಳೆ ಅಂದಕೆ ಹಿಡಿದಳೆ ಕಮಲವ ಅಂದಕೆ ಹಿಡಿದಳೆ ಕಮಲವ ಕಡೆಗಣ್ಣ ಚಂದ ಬಂದ್ಹರನ ಕಂಗೆಡಿಸಿತು 12 ತÉೂೀರ ಕುಚದ ಮೇಲೆ ಸಾದು ಗಂಧವ ಪೂಸಿ ಆಯಕೆ ಹಿಡಿದಳೆ ಕಮಲವ ಆಯಕೆ ಹಿಡಿದಳೆ ಕಮಲವ ಕಡೆಗಣ್ಣ ಢಾಳ ಬಂದ್ಹರನ ಕಂಗೆಡಿಸಿತು 13 ಕಕ್ಕಸ ಕುಚದಮೇಲೆ ಅಷ್ಟಹಾರಗಳು ಹೊಳೆಯೆ ಹಸ್ತಕಟ್ಟುಗಳು ಹೊಳೆಯುತ ಹಸ್ತಕಟ್ಟುಗಳು ಹೊಳೆವುತ್ತ ಹೆಣ್ಣಿನ ದೃಷ್ಟಿ ಬಂದ್ಹರನ ಕಂಗೆಡಿಸಿತು 14 ಅಮ್ಮಾಲೆ ಆಡೋಳು ಒಮ್ಮೊಮ್ಮೆ ನೋಡೋಳು ತÀನ್ನೊಳಗೆ ತಾನು ನಗುವೋಳು ತÀನ್ನೊಳಗೆ ತಾನು ನಗುವೋಳು ಬೊಮ್ಮನ ಮಗನ ಮರುಳು ಮಾಡಿ ನಡೆದಳು 15 ನೋಡಳು ನುಡಿಯಳು ಹರನ ಕೂಡೆ ಮಾತಾಡಳು ಓಡುತ್ತ ಚೆಂಡ ಹೊಯ್ವಳು ಓಡುತ್ತ ಚೆಂಡ ಹೊಯ್ವವೇಗವ ಕಂಡು ಮೂರುಕಣ್ಣವನು ಮರುಳಾದ 16 ಕೆದರಿದ ಕೆಂಜೆಡೆ ಕೊರಳ ರುದ್ರಾಕ್ಷಿ ಕರದಿ ತ್ರಿಶೂಲ ಹೊಳೆಯುತ ಕರದಿ ತ್ರಿಶೂಲ ಹೊಳೆಯುತ ಹೆಣ್ಣಿನ ನುಡಿಸುತ್ತ ಹಿಂದೆ ನಡೆದನು 17 ರೂಢಿಗೊಡೆಯನ ಕೂಡೆ ಆಡುವ ವನಿತೆ ನೋಡೆ ನೀ ಎನ್ನ ಕಡೆಗಣ್ಣ ನೋಡೆ ನೀ ಎನ್ನ ಕಡೆಗಣ್ಣ ಹೆಣ್ಣಿನ ಕಾಡುತ ಹಿಂದೆ ನಡೆದನು 18 ಪೀತಾಂಬರದ ಮುಂಜೆರಗನು ಕಾಣುತ್ತ ಸೋತೆ ಬಾರೆಂದು ಕರೆದನು ಸೋತೆ ಬಾರೆಂದು ಕರೆದ ಧ್ವನಿಯ ಕೇಳಿ ಕಾಂತೆ ಬನದೊಳು ಮರೆಯಾದಳು 19 ಮಂಗಳ ಮಹಿಮಗೆ ಅಂಜಿಕೆ ಇಲ್ಲದೆ ಗಂಗೆ ಪೊತ್ತವನ ತಿರುಗಿಸಿದ ಗಂಗೆಪೊತ್ತವನ ತಿರುಗಿಸಿದ ತನ್ನಯ ಮುಂದಣ ಅಂದವೆಲ್ಲ ಇಳುಹಿದ 20 ಸೃಷ್ಟಿಯನೆಲ್ಲ ಹೊಟ್ಟೆಯೊಳಿಂಬಿಟ್ಟು ವಟಪತ್ರ ಶಯನನಾಗಿ ಮಲಗಿದ ವಟಪತ್ರ ಶಯನನಾಗಿ ಮಲಗಿದ ಉಡುಪಿನ ಕೃಷ್ಣನೆಂದ್ಹರನು ತಿಳಿದನು 21 ಭೂಮಿಯನೆಲ್ಲ ಈರಡಿ ಮಾಡಿದ ಆಲದೆಲೆ ಮೇಲೆ ಮಲಗಿದ ಆಲದೆಲೆ ಮೇಲೆ ಮಲಗಿದ ಶ್ರೀಹಯ- ವದನನೆಂದು ಹರ ತಿಳಿದನು 22
--------------
ವಾದಿರಾಜ
ಹರಿಹರಿ ಎನ್ನಿ ಹರಿವದು ಪಾಪ ಧರೆಯೊಳು ಧರೆಯೊಳು ಕರಮುಗಿದು ಗುರುವಿಗೆ ಕೇಳುವುದು ಬಲುಮೇಲು ಧ್ರುವ ಮೂಢಗೆ ಉಪಾಯ ಹೇಳಿದರೆ ತಿಳುವದೆ ತಿಳುವದೆ ಖೋಡಿಗೆ ಸುಲಕ್ಷಣದ ಮಾತು ಹೊಳೆವದೆ 1 ಬಿಸಲು ಬೀಳುದೆ ಬೀಳುದೆ ಗೂಢ ಗುರುವಿನ ಮಾತಿದು ನಾಡಿಗೆ ತಿಳುವದೆ 2 ವಿಷ ಕಚ್ಚಿದ ಮನಕೆ ಸುಘನ ಭಾಸುದೆ ಭಾಸುದೆ ತುಸು ಝರಿ ಇಲ್ಲದೆ ಬಾವಿಲಿ ನೀರು ಸೂಸುದೆ ಸೂಸುದೆ 3 ಹಸಗೆಟ್ಟಹ್ಯ ಕುಕ್ಕಡಿನೂಲ್ಹಾಸಿಗೆ ಬಾಹುದೆ ಬಾಹುದೆ ಕಸಕಡ್ಡಿಲ್ಲದ ಮುಗಿಲೆಂದಿಗೆ ತಾ ಮಾಸುದೆ 4 ಮೀಸಲ ಮನ ಒಂದಾದರೆ ಸಾಕು ತಿಳಿಕೊಳ್ಳಿ ತಿಳಿಕೊಳ್ಳಿ ಭಾಸ್ಕರ ಗುರುರಾಯನ ಶ್ರೀಪಾದಕೆ ಬಲಗೊಳ್ಳಿ ಬಲಗೊಳ್ಳಿ 5 ಲೇಸಿನ ನಿಜಸುಖ ನೆರೆಗೊಳ್ಳು ಮಹಿಪತಿ ನಿನ್ನಲ್ಲಿ ನಿನ್ನಲ್ಲಿ ಹೇಸಿ ಮುಖದೋರದೆ ಹೋಗುವುದು ಭವದ ತಳ್ಳಿ 6
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಹರಿ ಕೊಡು ನಿನ್ನಯಚ್ಚರನು ಶರಣವಾ ಧೃಡದಲಿ ಬಂದೆನಾನು ಪ ಅವಿದ್ಯೆಮಬ್ಬಿನಲಿ ಹರಿಬಂದ ಹಾವಿನ ಪರಿಯಾಗಿ ವಿವೇಕ ಯವಿಮುಚ್ಚಿಕಂಗಾಣದೆ ಸೇವೆಗೆ ಹೊರತಾದೆ 1 ನ್ಯೂನವ ನಾಲಿಸಲು ತಪ್ಪಿಗೆ ತಾನೆಣಿಕೆಗಳಿಲ್ಲಾ ಏನರಿಯದ ಮೂಢಾ ಇವನೆಂದು ನಿನುದ್ಧರಿಸೆನ್ನಾ 2 ಎಂದೆಂದು ಪ್ರೇಮದಲಿಂದಾ ಗೆಳೆತನಾ ಛೆಂದವೆನಗ ನಿನಗ | ಎಂದೇ ಮನೆಯೊಳಿದ್ದು ಮಾತಾಡದೇ ನಿಂದುದುಚಿತವಲ್ಲ 3 ಕಡೆಗಣ್ಣಿಲಿ ನೋಡೋ ಉದಾಸೀನ ನುಡಿಯ ಮಾಡಲಿಬೇಡ | ಒಡೆಯಾ ನಿನ್ನಂಘ್ರಿಮದಾ ದಾಸರಾ ಅಡಿಗಳಾಶ್ರಯದಲಿಡೋ 4 ಕಾಲಬಿದ್ದರವು ರಾಕುಡುವರು ಕೆಳೆಲೋ ಗಾದಿಯನು ಪಾಲಿಸೋಮಹಿಪತಿ ಸುತ ಪ್ರಭು ಒಲುಮೆಯಾ ಸುಖನೀಡೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು