ಒಟ್ಟು 5098 ಕಡೆಗಳಲ್ಲಿ , 128 ದಾಸರು , 3277 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೋಜಿಗದಲಿ ಜೀವಿಸುವರು ಸುಜನರು ಪ ಈ ಜಗದಲಿ ದುಷ್ಟ ಗೋಜಿಗೆ ಸಿಲುಕದೆ ಅ.ಪ ಪರರ ವಿಭವಗಳಿಗೆ ಕರಗಲರಿಯರಿವರು ಕೊರೆಯುವ ಬಡತನಕುರಿಯಲರಿಯರು ಹರಿ ಕರುಣದಿ ತಮಗೆ ಸಿರಿಯು ಬಂದೊದಗಲು ಪರಿಪರಿ ವಿಧದಲಿ ಮೆರೆಯದೆ ದೈನ್ಯದಿ 1 ಕೆಡುಕುತನಗಳನು ಅರಿಯರು ಈ ಜನ ಬಡವರ ಸೌಖ್ಯಕೆ ದುಡಿವರು ಮುದದಲಿ ಕಡುದುರುಳರು ನಿಂದೆ ನುಡಿಗಳಾಡುವರೆಂದು ದುಡುಕದೆ ಅವರಲಿ ಕ್ಷಮೆಯ ತೋರುತ ಸದಾ 2 ಪರರಿಗುಪಕೃತಿಯಲರಿಯರು ಮಿತಿಯನು ಪರರಿಗುಪಕೃತಿಗೆ ಜರಿಯರು ಮತಿಯನು ಶರಣ ಪ್ರಸನ್ನನ ಕರುಣವ ಪೊಂದಲು ವರನೀತಿಗಳಲಿ ನಿರತರಾಗುತ ಸದಾ 3
--------------
ವಿದ್ಯಾಪ್ರಸನ್ನತೀರ್ಥರು
ಸೋಜಿಗವಾಯಿತು ಸದ್ಗುರುವಿನ ಕೃಪೆ ಹೇಳಲೇನು ನಿಜಗುಹ್ಯದ ಮಾತು ಗುರುತವಾಗಿ ಹ್ಯ ಸಾಧು ಬಲ್ಲ ಖೂನ ಧ್ರುವ ನೀಗದ ನೀಗಿತು ಹೋಗದ ಹೋಯಿತು ತ್ಯಾಗಲ್ಯೊಂದು ಬಾಗದ ಬಾಗಿತು ಸಾಗದ ಸಾಗಿತು ಯೋಗಲ್ಯೊಂದು ಆಗದ ಆಯಿತು ಕೂಗದ ಕೂಗಿತು ಈಗಲ್ಯೊಂದು ತೂಗದ ತೂಗಿತು ಸುಗಮ ತಾ ತೋರಿತು ಜಗದೊಳೊಂದು 1 ಹುರಿಯಲೊಂದು ಅರಿಯಿತು ಅರಿವಿಲೊಂದು ಸುರಿಯದ ಸುರಿಯಿತು ಗರೆಯದ ಗರಿಯಿತು ತ್ಯರಿಯಲೊಂದು ಜರಿಯದ ಜರಿಯಿತು ಬೆರಿಯದೆ ಬೆರಿಯಿತು ಕುರಿವಿಲೊಂದು 2 ಜಾರದ ಜಾರಿತು ಮೀರದ ಮೀರಿತು ಹಾರಲೊಂದು ತೋರದ ತೋರಿತು ಸೇರದ ಸೇರಿತು ಸಾರಲೊಂದು ಬೀರದ ಬೀರಿತು ಸಾರಸದೋರಿತು ಕರದಲೊಂದು ತರಳ ಮಹಿಪತಿಗ್ಹರುಷವಾಯಿತು ಗುರುಕರುಣಲಿಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸೋಜೀಗ ರೊಳಗತಿ ಸೋಜೀಗ ರಾಘವೇಂದ್ರಾ ಗುರು ಪ ಸೋಜೀಗ ವಲ್ಲವೆ ರಾಜಾ ಗುರುವು ನೀನು ನೈಜ ರೂಪದಿ ಬಂದು ಮಾಜಾದೆ ಪೊರೆವುದು ಅ.ಪ ಬೆಂಬಲ ನಿನಗೆಂದು ಸ್ತಂಭದಿ ಹರಿ ಬಂದ ಇಂಬು ಪಾಲಿಸು ಗುರುವೇ ನಂಬೀದ ಜನಗಣ ಡಿಂಭದಿ ನೀ ಮೂಡಿ ಅಂಬಕ ದೊಳು ಕಂಡೇ 1 ಇಲ್ಲ ಹರಿಯು ಎಂಬ ಕ್ಷುಲ್ಲ ಸಂಶಯ ವೆಂಬ ಹಲ್ಲು ಮುರಿದು ಭಕ್ತರಲ್ಲಿ ತುಂಬುವೆ ಭಕ್ತಿ ಇಲ್ಲದಿರಲು ನೀನು ಕಳ್ಳ ಕಲಿಯು ಜಗ ವೆಲ್ಲ ತುಂಬುತ ಶೃತಿ ಸುಳ್ಳು ಎನಿಸುತಿದ್ದಾ 2 ನಿರುತ ನೀಡುತ ಹರಿಕೆ ಕರೆದು ಪೊರೆವೆ ಜನರ ಸರಿಯು ಕಾಣೆನು ನಿನಗೆ ಹರಿಯ ಕಿಂಕರ ಶರಣು ಮರುತ ದೇವನ ಮತ ಮೆರೆಸಿ ಕುಣಿಸುತ್ತಿರುವೆ ಶರಣ ಜನರ ಪೊರೆವ ಪರಮಾಪ್ತ ಸಿದ್ಧವೋ 3 ಹುಣ್ಣು ಅಳಿಸಿ ಭಕ್ತಿ ಹಣ್ಣು ತಿನ್ನಿಸಿ ಜ್ಞಾನ ಕಣ್ಣು ಪಾಲಿಪ ಗುರು ಮಣ್ಣು ಗೂಡಿಸೊ ಭವವ ಸಣ್ಣವರೆಮ್ಮ ಶಂಕು ಕರ್ಣನೆ ಸಲಹೈಯ್ಯ ಗಣ್ಯರೊಳಗೆ ಗಣ್ಯ ಪೂರ್ಣ ಪ್ರಜ್ಞರ ಪ್ರೀಯಾ 4 ಹಿಂದೆ ಹೋಯಿತು ಹೊತ್ತು ಮುಂದೆ ಕಾದಿದೆ ಮೃತ್ಯು ಇಂದು ಭಾರವ ಪೊತ್ತು ಕಂದರೆಮ್ಮನು ಕಾಯೋ ಇಂದ್ರ ತಾತನ ಹೃದಯ ಮಂದೀರದಲಿ ನಲಿವ ಇಂದಿರೇಶ ಕೃಷ್ಣವಿಠಲ ರಾಯನ ತೋರು 5
--------------
ಕೃಷ್ಣವಿಠಲದಾಸರು
ಸೋದಾಕ್ಷೇತ್ರವೆ ದಿವ್ಯ ಕ್ಷೇತ್ರ ಬಂದ ಜನರಿಗಿಷ್ಟವನೀವ ಕ್ಷೇತ್ರ ವೀರಶೈವರ ಗೆದ್ದ ಕ್ಷೇತ್ರ ಪ ಒಂದು ಭಾಗದಿ ರೂಪ್ಯಪೀಠ ಮ- ತ್ತೊಂದು ಭಾಗದಿ ಸೋದಾಕ್ಷೇತ್ರ ಕುಂದು ಎಳ್ಳಷ್ಟಿಲ್ಲದೆ ತೋರ್ಪು ದೆಂದು ಹರಿಭಕ್ತರಾದರಿಸುವರು 1 ವೈಕುಂಠನಂತಾಸನಗಳು ಚೆಂದವೇನೆಂದು ಪೇಳಲಿ ಮನವೆ 2 ರಾಜೇಶ ಹಯಮುಖ ಚರಣ ಕಂಜ ಮಧುಪನಂತಿರುವ ಶ್ರೀಭಾವಿ- ಕಂಜಜಾತನ ಪದಕರುಹ ವಾದಿರಾಜರಾಯರ ದಿವ್ಯ ಕ್ಷೇತ್ರ 3
--------------
ವಿಶ್ವೇಂದ್ರತೀರ್ಥ
ಸೋಮ ಸುರ್ಯೋಪರಾಗದಲಿ ಗೋಸಹಸ್ರಗಳ ಭೂಮಿದೇವರಿಗೆ ಸುರನದಿಯ ತಟದಿ ಶ್ರೀ ಮುಕುಂದಾರ್ಪಣವೆನುತ ಕೊಟ್ಟ ಫಲವಕ್ಕು ಈ ಮಧ್ವನಾಮ ಬರೆದೋದಿದವರಿಗೆ 1 ಪುತ್ರರಿಲ್ಲದವರು ಸತ್ಪುತ್ರರೈದುವರು ಸ ರ್ವತ್ರದಲಿ ದಿಗ್ವ್ವಿಜಯವಹುದು ಸಕಳ ಶತ್ರುಗಳು ಕೆಡುವರಪಮೃತ್ಯು ಬರಲಂಜುವುದು ಸೂತ್ರನಾಮಕನ ಸಂಸ್ತುತಿ ಮಾತ್ರದೀ 2 ಶ್ರೀ ಪಾದರಾಯರು ಪೇಳಿದ ಮಧ್ವ ನಾಮ ಸಂ ತಾಪ ಕಳೆದಖಿಳ ಸೌಖ್ಯನೀವುದೂ ಶ್ರೀಪತಿ ಜಗನ್ನಾಥವಿಠಲನ ತೋರಿ ಭವ ಕೂಪಾರದಿಂದ ಕಡೆಹಾಯಿಸುವುದು 3
--------------
ಜಗನ್ನಾಥದಾಸರು
ಸೋಹಮೆಂದು ಸುಖಿಸು ವಿಗತ ಮೋಹದಿಂದ ಸಂತತಂದೇಹ ದೇಹದೊಳಗೆ ತೋರ್ಪನೀ ಹಿತಾತ್ಮನೀತ ಪರಮ ಪಘನದ ರತುನಮಂಟಪವನು ಶುನಕವೇರಿ ತನ್ನ ನೆಳಲಕನಲಿ ನೋಡಿ ಗಳಹಿ ತಾನಿದೆಂಬುದರಿಯದೆಮನದೊಳನ್ನವೆಂದು ಭ್ರಮಿಸಿ ಮತ್ತೆ ಕಡಿಯಲದರೊಳೊಡದು*ನೆನೆವ ತನ್ನ ರಕುತವನ್ನು ಸವಿವ ರೀತಿಯಲಿವಿನುತ ಜೀವ ತನ್ನ ಛಾಯೆಯನು ಸಮಸ್ತರೊಳಗೆ ನೋಡಿನೆನೆದಿದನ್ಯವೆನುತ ಭ್ರಾಂತನಾಗಿ ಮಾಯೆುಂದನುಭವಿಸುವೆನಿದನಿದೊಲ್ಲೆನೆನುತ ಭೇದ ಬುದ್ಧಿುಂದಮನುಮಥಾಗ್ನಿುಂದ ಬೆಂದು ಮನದಲಿದ್ದ ಕಾರಣಂ 1ನರರು ಗಜವ ಪಿಡಿಯೆ ಕಪ್ಪ ಕೊರವುತದರ ನಡುವೆ ತಿಟ್ಟನಿರಿಸಿ ಕಣ್ಣಿಯಲ್ಲಿ ಕಟ್ಟಿಯದರ ಸುತ್ತಲೂನೆರಹಿ ಕಾಷ್ಠ ಮೃತ್ತುಗಳನು ನಿಜದಪ್ಪಿರಮಾಡೆ ಭ್ರಮಿಸಿಕರಿಣಿಗಾಗಿ ಬಂದು ಗಜವು ಮರೆದು ಬಿದ್ದ ರೀತಿುಂದುರೆ ವಿರಿಂಚಿ ಕೂಪ ಸಾಮ್ಯವಾದ ನರಶರೀರಮಂಮರೆಸಲದರ ಮೇಲೆ ಚರ್ಮವೆನಿಪ ಮಾಯೆುಂದ ನರರುಮರೆತು ತಾವಿದೆನ್ನುತದರಲಿದ್ದ ಕಾರಣಂ 2ಮರೆದು ತನ್ನ ತಾಣವನ್ನು ಮೆರೆದುಲಂಘಿಸುತಲಿ ಭೇಕವಿರಲು ಹೊಂಚಿ ಪಿಡಿದು ಪಾವು ಪಿರಿದು ದೇಹಮಂನೆರೆದು ನುಂಗಲಾರದಿರುತಲಿರಲು ಭೇಕ ತನ್ನ ಹಸಿವಿಗಿರದೆ ಬಾಯ ತೆಗೆದು ನೊಣನನರಸಿ ಪಿಡಿವ ರೀತಿುಂನರರು ತಮ್ಮ ಕಾಲಸರ್ಪ ಉರುಬಲದನು ಮರೆತು ಭೋಗಪರತೆುಂದ ಕಾಮರೋಷ ವಿರಸರಾಗುತಿರಲು ನೀನರಿದನಿತ್ಯವೆಲ್ಲವೆಂದು ಮೆರೆದು ಗೋಪಾಲಾರ್ಯ ಪದವನೆರೆದು* ಭಕತಿುಂದ ನೋಡಿ ಪಾಡಿ ಹರುಷದಿಂದ ನೀ 3
--------------
ಗೋಪಾಲಾರ್ಯರು
ಸೌಪರ್ಣಿ ಪತಿ ಪಕ್ಷಿಪದ | ಪದ್ಮಕ್ಕೆ ಶರಣೆಂಬೆ | ಸದ್ಮದೊಳಗೆ ಹರಿಪದ್ಮಪದವ ತೋರು || ಕರುಣವ ನೀ ಬೀರು ಪ ನಿತ್ಯ ಹರಿಯ ಸ್ಮøತಿಯಿತ್ತು ಕಾವುದೆನ್ನ | ಬಂದ ಪ್ರಪನ್ನನ ಅ.ಪ. ಮೋದ ಪಾದ ತೋರಿಸು 1 ಯೋನಿ ಬರೆ ಭಯ | ವೇನು ಹರಿಸ್ಮøತಿ | ಸಾನು ಕೂಲಿಸಮ್ಮ 9 ಪಾಪಕಂಜೆ ದ | ಯಾ ಪಯೋನಿಧಿ | ಗೋಪ ಗುರು ಗೋ | ವಿಂದ ವಿಠಲನರೂ¥5Éೂೀರೆ ಹೃ | ತ್ಕೂಪದೊಳು ಭವ ಕೂಪ ದಾಟ5 ಸೌಪರ್ಣಿದೇವಿ 3
--------------
ಗುರುಗೋವಿಂದವಿಠಲರು
ಸ್ತುತಿಸಿ ಪ್ರಾರ್ಥಿಪೆ ನಿನ್ನನು ಸರಸ್ವತಿ ಸ್ತುತಿಸಿ ನಮಿಪೆ ನಿನ್ನನು ಪ. ಸ್ತುತಿಸಿ ನಮಿಸಿ ನಿನ್ನ ಜತನ ಮಾಡುತ್ತ ವದನದಿ ಸ್ತುತಿಸುವ ಭಾಗವತರನು ತೋರಮ್ಮಾ ಅ.ಪ. ಅಕ್ಷರಕ್ಷರ ರೂಪದಿ ಶ್ರೀಹರಿಯಾ ಅಕ್ಷಯ ನಾಮವನು ಸ್ತುತಿಯ ಮಾಳ್ಪ ಸುಕ್ಷೇಮ ಪಡೆದಿಹ ಮಾತೆ ಸರಸ್ವತಿ ಪ್ರತಿ ಅಕ್ಷರವನು ಅರಿವಾ ಭಾಗ್ಯವ ತೋರೆ 1 ರಾಗರಾಗದಿ ಭಜಿಪೆ ಶ್ರೀ ಹರಿಯಾ ಅನು ರಾಗಕೆ ಪಾತ್ರಳಾಗಿ ವಲಿಸಿಹೆ ಭಾಗವತಾಗ್ರಣಿ ಶ್ರೀಹರಿ ನಾಮವ ಶೀಘ್ರದಿ ಸ್ತುತಿಸುವ ಭಾಗವತರ ತೋರೆಂದು 2 ಅಗಣಿತ ಮಹಿಮೆಯನೂ ಬಲ್ಲವಳು ನೀ ಸುಗುಣಿ ಸರಸ್ವತಿಯೆ ಶ್ರೀ ಶ್ರೀನಿವಾಸನ ಅಗಣಿತ ಗುಣಗಳ ಪೊಗಳುವ ಮತಿಯಿತ್ತು ಅಘಹರ ಹರಿಭಕ್ತರಾ ಲಗುಬಗೆಯಲಿ ತೋರೆ 3
--------------
ಸರಸ್ವತಿ ಬಾಯಿ
ಸ್ಥಿರವೆಂದು ನಂಬಿ ಕೆಡಬೇಡ ಮನುಜಾ ಧರಣಿ [ಬಾಳು] ಕರುಣೆಯಿಹುದು ಮಾ[ಂಗಿರೀಶನ] [ನಂಬಿದರೆ] ಪ ಕ್ಷೀರಾಬ್ಧಿಗೈದು ಮುದದಿ ಪೊರೆವನು ಸ್ತನ್ಯದಿಂ ಹೀರಿ ತೇಲುತ ಬೆಳೆದು ತೋರಮುತ್ತುಗಳಾ ಹಾರ ಪದಕಗಳಿಂದ ಚಾರುಭೂಷಣದಿಂದ ಮಾರಸುಂದರನೆನಿಪ | ಮೂರು ದಿನದ ಬಾಲ 1 ಬಾಲತನ ಪೋಗಲು ಮೇಲೆ ಯೌವನವೊದಗಿ ಬಾಲೆಯೋರ್ವಳಕರವ ಘಳಿಲದೊಳು ಹಿಡಿದು ಮೇಲಾದ ಸೌಭಾಗ್ಯವಲ್ಪಕಾಲವಿರುವಾಗ ಕಾಲದೂತರು ಪಿಡಿಯಲೊಡನೆ ಬ[ರುವ]ವರಿಲ್ಲ 2 ಉಕ್ಕುವ ಯೌವನದ ಸೊಕ್ಕಿಲ್ಲ ಮರುದಿನ ಉಕ್ಕುಕ್ಕಿ ಬಸವಳಿದು ಶಕ್ತಿಗುಂದಿ ಸುಕ್ಕು ಸುಕ್ಕಿನ ದೇಹ[ಭಾ]ವವಿಲ್ಲದ ಬಾಳ ಭಕ್ತಿಗೆ ಮನಮರೆಯೆ ಭಕ್ತಗತಿಯದರಿಂದ 3 ಧನವ ದಾಯಾದಿಗಳು ಮನವ ಕಾಮಾದಿಗಳು ಸನುಮತ ಜ್ಞಾನವನ್ನು ದುರಿತಕಾರ್ಯ ತನುಜ ತನುಜೆಯರೆಲ್ಲರವರವರ ಸೌಖ್ಯವನು ಸನಿಹದಿಂ ಸೂರೆಗೈವರಿನ್ನೇತರಾಸೆ 4 ಕುಂಟು ಜೀವವಿರುವನಕ ನೆಂಟರಿಷ್ಟರು ಹಣವ ಗಂಟನುಂಗಲು ಬರುತಲೆಂಟೆಂಟುದಿನವಿಹರು ಗಂಟು ತೀರಿದ ಬಳಿಕ ಪಾಪಪುಣ್ಯಗಳ ಹೊರತು [ಏ ನುಂಟು ಈಭವದ ನಂಟಿನಲಿ ಯದರಿಂದ 5 ಜೀವ ತಾ ಜನಿಪಂದು ರವೆಯಷ್ಟು ತರಲಿಲ್ಲ ಅವನಿಯಾ ಬಿಡುವಂದು ಜವೆಯಷ್ಟ ಹೊರಲಿಲ್ಲ ಭಾವಶುದ್ಧಿ ಬೇಕನಿಶ ಮಾವಿನಾಕೆರೆರಂಗನ ಸೇವಿಸಿದೊಡಾ ರಂಗ ಭವವೆಲ್ಲ ಕಳೆವಾ 6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸ್ಮರಿಸಿ ಬೇಡುವೆ ಹರಿಯ ಮುರಾರಿಯ ಸ್ಮರ ಕೋಟಿತೇಜನ ಸುರಮುನಿವಂದ್ಯನ ಪ ಮನ್ಮಥಕೋಟಿ ಲಾವಣ್ಯರೂಪದಿ ಮೆರೆವ ಮನ್ಮಥಯ್ಯನ ಪೊಗಳುತ್ತಲಿ ಚಿನ್ಮಯರೂಪನ ಚಿದ್ರೂಪನಾದನ ಹೃನ್ಮನದಲಿ ಪಾಡಿಪೊಗಳಿ ಕೊಂಡಾಡುತ ಅ.ಪ ಮನ್ಮನÀದೊಳು ಸ್ಮರಿಸಿ ಸ್ಮರಿಪ ಭಾಗ್ಯವು ಮುನ್ನ ಕರುಣಿಸಿ ಸಲಹು ಬಲು ಸಂ- ಪನ್ನ ನಿನಗೆದುರಿಲ್ಲ ಧರೆಯೊಳು ಪನ್ನಗಾದ್ರಿ ನಿವಾಸ ಶ್ರೀಶನ1 ವಿಶ್ವವ್ಯಾಪಕ ನೀನೆ ವಿಶ್ವಮೂರುತಿ ನೀನೆ ವಿಶ್ವ ನೀನೆ ಶ್ರೀ- ವಿಶ್ವವಸುನಾಮ ಸಂವತ್ಸರದೊಳು ಮೆರೆವ ವಿಶ್ವಮೂರುತಿ ಶ್ರೀ ಸರ್ವೇಶ್ವರ ನೀನೆಂದು2 ವಿಶ್ವಮಯ ವಿಶ್ವೇಶ ಶ್ರೀಹರಿ ವಿಶ್ವನಾಮಕ ವಿಮಲ ಸುಖಮಯ ವಿಶ್ವವನು ಉದರದೊಳು ಧರಿಸಿದ ವಿಶ್ವವನು ವದನದಲಿ ತೋರ್ದನ 3 ಕಮಲದಳಾಕ್ಷನ ಕಮನೀಯ ರೂಪನ ಕಮಲ ಸಂಭವನ ಪೆತ್ತಿಹ ಧೀರನ ಕಮಲಮುಖಿಯ ಕರಕಮಲದಿ ಪೂಜ್ಯನ ಕಮಲೆಯೊಡಗೂಡುತ ನಲಿವನ 4 ಕಮಲ ಕರದೊಳು ಪಿಡಿದ ಕಮಲೆಯ ಕಮಲನಾಭನ ಪಿತನೆ ಮುದದೊಳು ಕಮಲೆಯನು ಕೈಪಿಡಿದು ಮೆರೆಯುವ ಕಮಲನಾಭವಿಠ್ಠಲನ ಪ್ರತಿದಿನ5
--------------
ನಿಡಗುರುಕಿ ಜೀವೂಬಾಯಿ
ಸ್ಮರಿಸಿದದರಘನನಾಶನ ಸ್ಮರಿಸಿದವರಘನಾಶಸ್ಮರನಯ್ಯನಂಘ್ರಿ ಯುಗ ಸರಸಿಜವ ಪೂಜಿಸುವಗುರು ವಿಜಯರಾಯರ ಚರಣಾಬ್ಜ ಸಾರಿದವದುರಿತಾಬ್ಧಿ ಮೀರಿದವ ಹರಿಪುರವ ಸೇರಿದವನೊ ಪ ಅಘ ಬಂಧ ಪರಿಹರ ಮಾಡುತಾ ಜನರು 1 ಇನಿತು ಜನಸಮುದಾಯದೊಳು ಯಿರುತಿರ್ದ ಇಭವರದ ನನುದಿನವು ಗಾಯನದಿ ಕೊಂಡಾಡಿ ಮನಮುಟ್ಟಿವಿನಯಾತಿಶಯದಲ್ಲಿ ಗುರುವರ್ಯರಾ ಸೇವೆ ಘನವಾಗಿ ಮಾಡಿ ಮುದದಿ ||ತನುವೆತ್ತಿ ವರಸರಿತ ತೀರದಾ ಅಣು ಬದರಿಜನ ಶ್ರೇಷ್ಠರೊಳು ಹರಿಯ ದಾಸ ಪೆಸರಲಿ ಬಂದುಘನ ಯಾದವಾದ್ರಿ ಪಟ್ಟಣದೊಳಗೆ ಯಿದ್ದು ಬಗೆ ಜನನಿ ಅನುಜಾತಿ ಸಹಿತ 2 ಕೆಲವು ದಿನ ಸಂಸಾರ ಗಲಭಿಯೊಳು ಯಿರುತಿರ್ದುಜಲದೊಳಗೆ ಅಂಬುಜವು ಮಿಳಿತವಾಗಿದ್ದ ತೆರಹಳಿದು ದುಷ್ಟಾಸಿಯನು ಕಳೆದು ಕಡು ಮಮತೆಯನು ಪುಳಕೋತ್ಸ ಮನದಿ ತಾಳಿ ||ಜಲದೊಳುತ್ತಮವಾದ ಭಾಗೀರಥೀ ಯಾತ್ರಿಛಲ ಭಕುತಿಯಿಂದಲಿ ಮಾಡಿ ಮೋದದಿ ಹರಿಯಹಲವು ಬಗೆ ಲೀಲೆಯನು ಹರುಷದಿಂದಲಿ ಯಿನ್ನು ತಿಳಿದು ಗುರು ಕರುಣ ಬಲದಿ 3 ಮೂರ್ತಿ ಮನದೊಳು ಕಂಡು ಸುಖವನಧಿಯಲ್ಲಿ ಲೋಲ್ಯಾಡಿಕೊಳುತ ||ಅಲ್ಲಿಂದ ತೆರಳಿ ಗಿರಿಯಲ್ಲಿದ್ದ ವೆಂಕಟನಸಲ್ಲುವಾ ಭಕುತರೊಳು ಸಲೆ ಶ್ರೇಷ್ಠನೆಂದೆನಿಸಿಮಲ್ಲ ಮರ್ದನನಾದ ಮುರಹರನ ಮಹಿಮೆ ಮನ ಬಲ್ಲನಿತು ವಿಸ್ತರಿಸುತ ಜನರು 4 ಈ ತೆರದಿ ಇಭವರದನಾತುಮದೊಳಗೆ ತಂದುಭೂತಳದ ಬಲು ವಿಧದ ತೀರ್ಥಕ್ಷೇತ್ರಗಳಲ್ಲಿಪ್ರೀತಿಯಿಂದಲಿ ಪರಮ ಪುರುಷನ್ನ ಧೇನಿಸುತ ಖ್ಯಾತಿ ಮಹಿಯೊಳಗೆ ಮೆರದು ||ವಾತಜಾತನ ಮತದ ವೊಳಗಿಪ್ಪ ವೈಷ್ಣವರತಾತನೆಂದೆನಿಸಿ ಸುಖವ್ರಾತದೊಳಗಿಡುವಲ್ಲಿಚಾತುರ್ಯದಿಂದ ಬಲುದಾತನೆನಿಸುತಲಿ ಭವತೀತರನ ಮಾಡಿ ಪೊರವ ಜನರು 5 ಆ ಬಗೆಯಲೀ ಕಮಲನಾಭ ಕರುಣಿಸಿ ಯಿವರಈ ಭುವನದೊಳು ಯಿಟ್ಟು ಜನರ ವುದ್ಧರಿಸುವಲೋಭದಿಂದಲಿ ಸಕಲ ಸಜ್ಜನರ ಸನ್ಮಾರ್ಗ ಲಾಭದೊಳು ಸೇರಿಸಿದನೊ ||ತ್ರ್ರಿಭುವನದೊಡೆಯನ್ನ ಕಥೆಯ ತಿಳಿಸುವ ಜನಕೆಶೋಭಿಸುವ ಗಾಯನದ ಸೊಬಗಿನಿಂದಲಿ ಕೇಳಿಶ್ರೀಭೂರಮಣ ವೊಲಿದು ಪಾಲಿಸುವನಾಮೇಲೆ ಶೋಭನ ಗತಿಯ ನೀವನೊ 6 ಕಲುಷ ವಾಕು ವುಪಜೀವರಿಗೆ ಏಕ ಮನದಿಂದಿರುವದೇ ಈ ಕಲಿಯುಗದಲಿಸಾಕಾರ ಗುಣಪೂರ್ಣ ಶ್ರೀನಿವಾಸನು ಬಿಡದೆ ಸಾಕುವನು ಸಮ್ಮೊಗದಲಿ ಜನರು 7 ದೇವಮುನಿ ನಾರದನು ಜೀವಿಗಳನುದ್ಧರಿಪಭಾವದಲಿ ಯಮಪುರಿಯ ದೇವನಲ್ಲಿಗೆ ಪೋಗಿಸಾವಧಾನದಿ ಸಕಲ ಸತ್ಕಾರಕೊಳಗಾಗಿ ನೋವು ಬಡವರನೀಕ್ಷಿಸಿ || ಸಾವಧಾನದಿ ಕೇಳಿ ಕಲಶಾರುಣೀ ಭಕ್ತ- ರಾವಳಿಯ ಸಲಹುವ ದೇವ ದೇವೇಶನನುತಾ ವದರಿ ಕೂಗಲಾ ಜೀವರೆಲ್ಲರು ಕೇಳಿ ಪಾವಿತ್ರವನೆಗೈದರೊ ಜನರು 8 ಭವ ಸಿರಿ ಚರಣಕೆ ಜನರು 9 ಸಿರಿ ತರಣಿ ಶರಧಿ ಶಯನನ ತೋರುವ ಜನರು 10 ದಾನವಾಂತಕ ದನುಜರನ್ನು ಸಂಹರಿಸುವಾಜ್ಞಾನಪೂರ್ಣನು ಗುಪ್ತ ತಾನಾಗಿ ಜಗದೊಳಗೆಹಾನಿ ವೃದ್ಧಿಂಗಳಿಗೆ ಹೊರಗಾಗಿ ಜೀವಿಗಳ ಮಾಣದಲೆ ಪರಿಪಾಲಿಪ ||ಕ್ಷೋಣಿಯೊಳು ಭಕುತರಘ ಹಾನಿಗೈಸುವ ಬಗಿಗೆಈ ನಿರುದ್ಧಕೆ ಯಿವರಧೀನ ಮಾಡಿದ ನಮಗೆವೇಣುಗೋಪಾಲ ವಿಠಲರೇಯ ತಾನೊಲಿದು ಸ್ವಾನಂದವನೆ ವುಣಿಸುವ ಜನರು 11
--------------
ವೇಣುಗೋಪಾಲದಾಸರು
ಸ್ಮರಿಸಿರೊ ನಮ್ಮ ನರನ ಸಾರಥಿಯ ಪರಿಹರಿಸುವನು ತಾಪತ್ರಯ ವ್ಯಥೆಯ ಪ. ರಣಮಂಡಲದಲ್ಲಿ ಗುಣಗುವ ಕುಂತಿಯ ತನುಜನ ನೋಡುತ ವಿನಯದಿಂದ ಘನತತ್ವವನು ಪೇಳಿ ಅಣುಮಹದ್ಗತ ವಿಶ್ವ- ತನುವ ತೋರಿದ ಸತ್ಯ ವಿನಯ ಶ್ರೀ ಕೃಷ್ಣನ 1 ಸುರನದೀ ತನುಜನ ಶರದಿಂದ ರಕ್ತವ ಸುರಿವಂದ ತೋರಿ ಶ್ರೀಕರ ಚಕ್ರವ ಧರಿಸಿ ಓಡುತ ತನ್ನ ಚರಣ ಸೇವಕನೆಂಬ ಹರುಷ ತಾಳಿ ಬೇಗ ತಿರುಗಿ ಬಂದವನ 2 ವಿಜಯ ಸಾರಥಿಯಂದು ಭಜಿಸುವ ದಾಸರ ವಿಜಯ ಪೊಂದಿಸುವನಂಡಜ ರಾಜಗಮನ ಅಜ ಭವವರದ ಕಂಬುಜನಾಭ ಕಮಲೇಶ ಭುಜಗ ಧರಾಧೀಶ ಭಜನೀಯಪಾದನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ಮರಿಸುವ ನರನೇ ಧನ್ಯ ಸನ್ಮಾನ್ಯ ಪ ಸ್ಮರಿಸುವರಿಗೆ ಸುರತರುಕಲ್ಪ ವಿಭರಾಮ ಪುರದಿ ಶ್ರೀಹರಿ ಧ್ಯಾನಪರ ಶ್ರೀ ಕೃಷ್ಣಾಚಾರ್ಯರ ಅ.ಪ ಭರತ ಭೂಮಿಯೊಳವತರಿಸಿ ದೇವಾಂಶದಿ ಪುರುಹೂತನಂತೆ ಗಜಾಂತ ವೈಭವದಿಂದ ಮೆರೆಯುತ ತಮ್ಮಯ ಚರಣಾರಾಧಕರನು- ದ್ದರಿಸಲೋಸುಗದಿ ಸಂಚರಿಸುತ ಮುದದಿ ಸಂದರುಶನದಿಂಧಾಘವ ಕಳೆದು ಬಲು ಕರುಣದಲಿಷ್ಟಾರ್ಥವ ಗರಿದು ಬಹು ಶರಣು ಜ- ನರ ಪೊರೆವ ಭೂಸುರರೊಳು ಮರುತ ಮತಾಬ್ಧಿ ಚಂದಿರನೆನಿಸಿದವರ 1 ವರ್ಣಿಸಲೊಶವಲ್ಲ ಚರಣಯುಗ್ಮಾರಭ್ಯ ಶಿರಪರಿಯಂತರ ಗುರುಗಳಾಕೃತಿಯನ್ನು ನಿರುತ ಧ್ಯಾನಿಪರಿಗೆ ಪರಮ ಮಂಗಳವೀವ ಪರಿಶೋಭಿಸುವ ರತ್ನಾಭರಣದಿಂದೋಪ್ಪುವ ಸ್ವರ್ಣತುಲಸಿ ಮುಕ್ತಹಾರ ಭೂಷಿತ ಕಂಧರ ಸುಂದರವಾದ ಮುಖದೊಳು ಮಂದಸ್ಮಿರ ಕಸ್ತೂರಿಯಂತೆ ಪರಿಮಳಾನ್ವಿತ ಶರೀರ ಮಂತ್ರಾಲಯ ಗುರುರಾಘವೇಂದ್ರರ ಕರುಣಾಸುಪಾತ್ರರ2 ಚಿರಕಾಲ ಶೇವಿಪ ಪರಮ ವಂಧ್ಯರಿಗೆಲ್ಲ ವರಪುತ್ರ ಸೌಖ್ಯವ ಕರುಣಿಸುವರು ಸತ್ಯ ಅಪರಿಮಿತ ಮಹಿಮರೆಂದರಿಯದೆ ಇವರನ್ನು ಜರಿಯಲಾಕ್ಷಣದಲಿ ಅರಿತು ಭೀಕರವಾದ ಉರಗರೂಪವ ತೋರುತ ತ್ಯಜಿಸಿ ಮತ್ತೆ ನಿಜರೂಪದಿಂದಿರುತ ನೋಳ್ಪರಿಗತ್ಯಾಶ್ಚರ್ಯ ಸದ್ಗುಣ ಭರಿತ ಕಾರ್ಪರ ನರಹರಿಯ ಪರೋಕ್ಷದಿ ನಿರುತ ಸುಖಿಪರಂಘ್ರಿ 3
--------------
ಕಾರ್ಪರ ನರಹರಿದಾಸರು
ಸ್ಮರಿಸುವರ ಪಾಲಿಪ ಬಿರುದು ಭಕುತರ ಪೊರೆವ ಕರುಣಿಯೆಪ ಪರಿಪರಿವಿಧದಲಿ ಪರಿತಪಿಸುವರನು ಕರವಿಡಿದುದ್ಧರಿಸುತ ಸಂತೈಸುವ ಉರಗಾದ್ರಿವಾಸ ವಿಠ್ಠಲ ಸಂತೈಸು ಚರಣಕಮಲಗಳಿಗೆರಗಿ ಭಿನ್ನೈಸುವೆ1 ಮಂದಮತಿಯು ನಾನೆಂದು ವಂದಿಪರ ಬಂಧನ ಕಳೆಯುತ ಮುಂದೆ ಗತಿಯು ತೋರಿ ತಂದೆ ವೆಂಕಟೇಶ ವಿಠ್ಠಲ ಭಕುತರ ಸಂದಣಿ ಪೊರೆಯುವರೆಂಬ ಬಿರುದು ದೇವ 2 ಆಶಾಪಾಶಗಳಿಗೊಳಗಾಗಿಹ ಮನ- ದಾಸೆ ಪೂರೈಸುತ ನೀ ಸಲಹೈ ಗುರು ವಾಸುದೇವ ವಿಠ್ಠಲ ಹರಿ ಭಕುತರ ದಾಸ್ಯವ ಕೊಟ್ಟು ಉಲ್ಲಾಸ ಒದಗಿಸುತ 3 ಮೊದಲೆ ನಿನ್ನಯಪಾದ ಹೃದಯದಿ ಭಜಿಸದೆ ಒದಗಿದ ಪಾಪದಿ ಹೆದರÀುತಲಿದೆ ಮನ ಪದುಮಜಾಂಡ ಸೃಜಿಸಿದ ಪರಮಾತ್ಮನಿ- ಗದ್ಭುತವೇ ಪಾಮರರನು ಪೊರೆವುದು 4 ಮಣಿದು ಬಿನ್ನೈಸುವೆ ಪವನಮತವÀ ತೋರಿ ಬಿನಗು ಬುದ್ಧಿಗಳ ಗಮನಕೆ ತಾರದೆ ಕಮಲನಾಭ ವಿಠ್ಠಲ ತವ ಕರುಣದಿ ಮನದ ಕ್ಲೇಶಗಳ ಕಳೆದು ಉದ್ಧರಿಸುತ 5
--------------
ನಿಡಗುರುಕಿ ಜೀವೂಬಾಯಿ
ಸ್ಮರಿಸುವೆನು ಗುರುರಾಯ ವರಮಂತ್ರ ಪುರಾಧಿಪ ಪೊರೆಯೊ ಎನ್ನನು ಜೀಯಾ ತವ ಮಹಿಮ ವರ್ಣಿಸ ಲರಿಯ ಮುರಹರಪ್ರೀಯಾ ಅಧ ಮಾಧಮನ ಮಮ ಪರಿಯ ನೀ ಬಲ್ಲೆಯ್ಯಾ ತೋರಯ್ಯಾ ದಯ ವರದ ಚರಿತೆಯ ಅರುಹುವದಕೆ ಪರವಾಕ್ಯರಣಿಯನು ಪಾಲಿಸಿ ನಿರುತ ಹರಿಗುರು ಚರಣದಲಿ ರತಿ ತ್ವರಿತ ಕರುಣಿಸು ರಾಘವೇಂದ್ರನೆ ಪ ಹಿಂದೆ ಕೃತಯುಗದಲಿ ಪ್ರಹ್ಲಾದ ನಾಮದಿ ತಂದೆ ಹಿರಣ್ಯಾಕ್ಷನಲಿ ಸರ್ವೋತ್ತಮನು ಹರಿ ದ್ವಂದ್ವ ಕರ್ಮವನಲಿ ಅರ್ಪಿಸಲು ಮಹದಾ ನಂದ ಪೊಂದುವರಲ್ಲಿ ಎಂದು ಪೇಳುತಿರೆ ಮಂದ ದೈತ್ಯವನಂದ ಮಾತಿಗೆ ಬಂಧನಾದಿಗ ಳಿಂದ ಶಿಕ್ಷಿಸೆ ಬಂದ ದುರಿತವನಂದು ಕಳೆದಾ ಕಂದನನು ಹರಿಪೊರೆಯೆ ದಿತಿಜನು ಒಂದೂ ತಿಳಿಯದೆ ಮಂದಿರ ಗೋವಿಂನೆಲ್ಲಿಹ ನೆಂದು ಕೇಳುತ ಮಂದರರೋದ್ಧಾರ ನಿಲ್ಲದಿಹ ಸ್ಥಳ ವಂದೂ ಇಲ್ಲವೂ ಎಂಂದು ಸಾರಿದೆ ತಂದು ತೋರಿಸು ಸ್ತಂಭದಲಿ ತವ ಇಂದಿರಾಪತಿಯೆಂದು ಗರ್ಜಿಸೆ ಕಂದನಾಡಿದ ಮಾತುಗಳನು ನಿಜ ವೆಂದು ನರಹರಿ ಪೊರೆದೆ 1 ಶ್ರೀಶನಾಜ್ಞೆಯ ವಹಿಸಿ ದ್ವಿತೀಯಾವತಾರದಿ ವ್ಯಾಸರಾಯನು ಎನಿಸಿ ಬ್ರಹ್ಮಣ್ಯರÀಲಿ ಸ ನ್ಯಾಸವನು ಸ್ವೀಕರಿಸಿ ಸರ್ವಜ್ಞ ಶಾಸ್ತ್ರಾಭ್ಯಾಸವನು ಪೂರೈಸಿ ವ್ಯಾಸತ್ರಯ ರಚಿಸಿ ದೇಶದೇಶಗಳನ್ನು ಚರಿಸುತ ಆ ಸಮಸ್ತ ಕುವಾದಿಗಳ ಮತ ನಾಶಗೊಳಿಸಿ ರ ಮೇಶ ಶ್ರೀ ವೆಂಕಟೇಶನನು ಬಹುದಿನವು ಪೋಜಿಸಿ ವಾಸಿಸುತ ಗಜರಾಮ ಪುರಧಾಧೀಶರಾಯನ ಕುಹಯೋಗವ ಪುರಂದರ ದಾಸರಿಂದೊಡಗೂಡಿ ಕೃಷ್ಣನುಪಾಸನೆಯ ಭಕ್ತಿಯಲಿ ಗೈಯುತ ವಾಸುದೇವನ ಶಿಲ್ಪ ಶಾಸ್ತ್ರದ ಶಾಸನಕೆ ಪ್ರತಿಯಾಗಿ ನಿಲ್ಲಿಸಿ ತೋಷಿಸಿದ ಸೌಭಾಗ್ಯ ವೈಭವ 2 ಪದುವ ಸಂಭವ ಜಾತ ಶ್ರೀ ರಾಘವೇಂದ್ರ ಸು ಪದವ ಪಡೆದ ಪ್ರಖ್ಯಾತ ಜಯತೀರ್ಥ ಮುನಿಕೃತ ಸುಧೆಗೆ ಪರಿಮುಳ ಗ್ರಂಧ ರಚಿಸಿ ಮೆರೆದಾತ ಬಧಿರ ಮೂಕಾಂಧ ವ್ಯಂಗ್ಯರು ವಿಧ ವಿಧಿದ ಘನರೋಗಗ್ರಸ್ತರು ಸದಯ ನೀಗತಿಯೆಂದು ಸೇವಿಸೆ ತ್ರಿದಶ ಭೂರುಹದಂತೆ ಸಲಹುವಿ ಕುಧರ ತೀರದಿ ಮೂಲ ರಘುಪತಿ ಪದವ ಪೂಜಿಸುತಲಿ ಸಜೀವದಿ ಮುದದಿ ವೃಂದಾವನ ಪ್ರವೇಶಿಸಿ ಪದುಮನಾಭ ಶ್ರೀ ಶಾಮಸುಂದರ ಮಧು ವಿರೋಧಿಯನು ಧ್ಯಾನಿಸುತ ಶಿರಿ ಸದನನು ವಲಿಸುತ್ತ ಕರುಣಾ ನಿಧಿಯು ಭಜಕರ ಪೊರೆವ ಮಹಿಮೆಯ 3
--------------
ಶಾಮಸುಂದರ ವಿಠಲ