ಒಟ್ಟು 4540 ಕಡೆಗಳಲ್ಲಿ , 127 ದಾಸರು , 2949 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರೆಯದಿರು ಮರೆಯದಿರು ಗುರುರಾಯನ |ಲೋಕ ಪರಿಪಾಲಿಸುವಗುರುಸಾರ್ವಭೌಮನ್ನಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಪರಮೇಶ್ವರನು ತಾನೆಪರಮಪ್ರೇಮದಿಂದಗುರುರೂಪವನುಧರಿಸಿ ಧರೆಗೆ ಬಂದು, ತ್ವರದಿಂದ ಮಾನವರ ಮರವೆಯನುಪರಿಹರಿಸಿ | ಸ್ಥಿರ ಮುಕ್ತಿ ಸುಖವಿತ್ತು ಪೊರೆವ ಗುರುವರನ1ಕರುಣದಿಂ ಜನರ ರಕ್ಷಿಸುವ ಸದ್ಗುರುವರನ | ಶರಣು ಪೊಕ್ಕರೆಕೃಪಾ ಸುಧೆಗರೆವನ | ನಿರುತದಲಿ ಭಕುತರಿಗೆ |ನಿರತಿಶಯಸೌಖ್ಯವನು ಸರಿದಂತೆ ವರವಿತ್ತು | ಮೆರೆವ ದೇಶಿಕನ2ಕುವರ ಬಾರೆಂದಭಯಕರವಶಿರದಲ್ಲಿರಿಸಿ |ನೆರೆಸುಬೋಧೆಯಗೈದು ನರಭಾವ ಕಳೆದು |ಮರಣ ಭಯ ಹರಸಿ | ಬಹು ಹರುಷದಿಂದಿರುಎಂದ ಚಿರ ಸಿಂಧುಗಿಯವಾಸ |ಗುರುಶಂಕರನಪಾದ3
--------------
ಜಕ್ಕಪ್ಪಯ್ಯನವರು
ಮರೆಯದಿರು ಶ್ರೀ ಹರಿಯನು ಪ.ಮರೆಯದಿರು ಶ್ರೀ ಹರಿಯ ಮರಣಾತುರದಿ ಮಗನಕರೆದವಗೆ ಸಾಯುಜ್ಯವಿತ್ತ ನಾರಾಯಣನಸ್ಮರಣೆಯನು ಮಾಡುವರಚರಣ ಸೇವಕರಿಂಗೆಪರಮಪದವೀವ ಹರಿಯಅಪದೇವಕಿಯ ಬಂಧುವನು ಪರಿದವನ ಪೂತನಿಯಜೀವರಸವೀಂಟಿದನ ಮಾವನನು ಮಡುಹಿದನಪಾವನ ತರಂಗಿಣಿಯ ಪದನಖದಿ ಪಡೆದವನಗೋವರ್ಧನೋದ್ಧಾರನ ||ದಾವಾನಲನ ಪಿಡಿದು ನುಂಗಿದನ ಲೀಲೆಯಲಿಗೋವತ್ಸ ಗೋಪಾಲ ರೂಪವನು ತಾಳ್ದವನದೇವಮುನಿ ಮುಖ್ಯ ಸುರರಾರಾಧಿಸುವನ ಶ್ರೀ ಪಾದವನುಭಜಿಸು ಮನವೆ 1ಕಂಜಸಂಭವಪಿತನ ಕರುಣಾಪಯೋನಿಧಿಯಕುಂಜರನ ನುಡಿಕೇಳಿ ಒದಗಿದನ ರಣದೊಳು ಧ-ನಂಜಯನ ಜೀವವಂ ಕೃಪೆಯಿಂದ ಕಾಯ್ದವನಆಂಜನೇಯನ ನಾಳ್ದನ ||ರಂಜಿಸುವ ಕೌಸ್ತುಭವಿಭೂಷಣನ ಜಲಧಿಯಲಿನಂಜಿನೊಡೆಯನ ಮೇಲೆ ಮಲಗಿದನ ತಮದೊಳಗೆ ಪ -ರಂಜ್ಯೋತಿಮಯನಾಗಿ ಬೆಳಗುವನಶ್ರೀ ಚರಣಕಂಜವಂ ಭಜಿಸು ಮನವೆ 2ವಾರಿಧಿಯೊಳಾಡಿದನ ವರಗಿರಿಯ ತಾಳಿದನಧಾರಿಣಿಯ ತಂದವನ ದೈತ್ಯನನು ಕೊಂದವನಮೂರಡಿಯಲಳೆದವನ ಮೊನೆಗೊಡಲಿ ಪಿಡಿದವನ ನೀರಧಿಯಬಂಧಿಸಿದನ||ದ್ವಾರಕೆಯನಾಳ್ದವನ ತ್ರಿಪುರಗಳ ಜಗುಳ್ದವನಚಾರುಹಯವೇರಿದನ ಸಕಲ ಸುಜನರ ಪೊರೆವಧೀರ ಪುರಂದರವಿಠಲನ ಚರಣಕಮಲವನುನಂಬಿ ನೀ ಭಜಿಸು ಮನವೇ 3
--------------
ಪುರಂದರದಾಸರು
ಮಹಾದೇವ ಶಿತಿಕಂಠ ದಾಸ ಕಲ್ಪಮಹೀಜ ಬಿನ್ನವಿಪೆ ನಿರ್ದೋಷ ||ಆಹಾ ||ಕುಹಕಾರಿ ಹರಿಪಾದ ಮಹಿಮೆ ಕೊಂಡಾಡಿಸೊ |ಗಹನವಿಕ್ರಮಭೀಮ ಮಹೀಧರಪ ಜಾಧವ ಪಸ್ಫಟಿಕಾಭ ಶ್ರೀಕಂಠ ದಕ್ಷ ಧ್ವಂಸಿ |ನಿಟಿಲಲೋಚನ ಸುರಪಕ್ಷ ಹೇ || ಧೂ |ರ್ಜಟ ಹೀನ ವಿಷಯಾಖ್ಯ ಕಕ್ಷವಹ್ನಿ|ಕುಟಿಲತ್ವ ಬಿಡಿಸತಿ ದಕ್ಷ ||ಆಹಾ||ಕಠಿಣ ಸಂಸಾರದಿತ್ರುಟಿಮಾತ್ರ ಸುಖ ಕಾಣೆ |ವಟುರೂಪಿ ಭಕುತರ ಕಟಕದೊಳಿರಿಸೆನ್ನ1ಇಳಿರಥ ನಗಶರಸೋಮಮೌಳಿ|ನಳನಂದಿನಿಪ ಸುತ ರಾಮ ನಾಮಾ |ನಲಿದು ಪಾಡುವ ಗುಣಧಾಮ ರೌಪ್ಯಾ |ಬಲಾವಾಸಾನಂಗ ವಿರಾಮಾ ||ಆಹಾ||ಹಲವರಾಶ್ರಯಿಸಿ ನಾ ಬಲು ನೊಂದೆನೋರ್ವರು ಕಾಯ್ವ |ಸುಳಿವು ಕಾಣೆನೋ ಹೇ ಗರಳಕಂಠ ಪೊರೆಯೆನ್ನ 2ಪಂಚ ಸುಸ್ಮಿತ ಯುಕ್ತ ವದನಾ ನಿಷ್ಪ್ರ |ಪಂಚ ಗಜಾಸುರ ಹನನಾ ಏಕಪಂಚಾಸ್ಯ ಜನಕ ಕೇಶವನಾ ಪ್ರೀತಿ |ಮಂಚ ನೀನಾಹೆ ಖಳರನಾ ||ಆಹಾ||ಹಿಂಚಾಗಿ ಅಳಿವಂಥ ಹಂಚಿಕೆಯಲಿವರ|ಮುಂಚೆ ಕರೆದು ಕೊಟ್ಟು ವಂಚಿಪೆ ಅತ್ರಿಜ 3ಅಹಂಕಾರಾಧೀಶ ನಭೇಶತಾತ|ಮಹಾ ಮುನಿ ವಂದ್ಯಾಮರಾಸ್ಯ ಚಂದ್ರ |ದಿನಪತೇಕ್ಷಣನೆ ಅಶೇಷಾಮೋದ|ಬಹುಮೋದಸಕ್ತಾಯನ್ನಾಶಾ ||ಆಹಾ||ದಹಿಸೊಜಠರಪೋಷ ವಹಿಸಿ ಬೆಂಡಾದೆನೊ |ಅಹಿಮಲಾಂಧಕಾಸುರ ಗುಹಹ ಅಶ್ವತ್ಥಾಮ 4ಶಕ್ರಾವರಜ ಶ್ರೀ ಪ್ರಾಣೇಶ ವಿಠ್ಠಲ |ನಕ್ರಾಹನಂಘ್ರಿಯನಿಶದಲ್ಲಿ |ವಕ್ರವಿಲ್ಲದೆ ಸೇವಿಪೀಶ ಹೇ ತ್ರಿ- |ವಿಕ್ರಮಕರವ್ಯೋಮಕೇಶ||ಆಹಾ||ಶುಕ್ರಪೂಜಿತಪಾದಅಕ್ರೂರಯನ್ನೊಳಿ |ದ್ದ ಕ್ರಮವೆಣಿಸದೆ ಸುಕೃತವೊದಗಿಸೊ5
--------------
ಪ್ರಾಣೇಶದಾಸರು
ಮಹಾಲಕ್ಷ್ಮಿ50ದಯಮಾಡಮ್ಮ ದಯಮಾಡಮ್ಮಹಯವದನನ ಪ್ರಿಯೆ ಪವಿನಯದಿಂದ ಬೇಡುವೆನೆ ಕಮಲನೇತ್ರೆಯೆ ಅ.ಪಶಂಬರಾರಿಪಿತನ ರಾಣಿ ನಂಬಿಸ್ತುತಿಸುವೆಅಂಬುಜನಾಭನ ಧ್ಯಾನಸಂಭ್ರಮಎನಗೀಯೆ1ಗೆಜ್ಜೆಪಾದ ಧ್ವನಿಗಳಿಂದ ಮೂರ್ಜಗ ಮೋಹಿಸುತ್ತಸಜ್ಜನರ ಸೇವೆಗೊಳ್ಳುತ ಜನಾರ್ದನನ ಪ್ರೀತೆ 2ತ್ರಿಗುಣಾಭಿಮಾನಿಯೆ ನಿನ್ನ ಪೊಗಳುವ ಭಕ್ತರಬಗೆ ಬಗೆ ತಾಪತ್ರಯಗಳ ಕಳೆದುಮಿಗೆ ಸೌಖ್ಯವ ನೀಯೆ 3ಪದ್ಮಾಕ್ಷಿಯೆ ಪದ್ಮಸದನೆ ಪದ್ಮಪಾಣಿಯೆಪದ್ಮನಾಭನಗೂಡುತಲಿ ಹೃತ್ಪದ್ಮದಲಿ ಪೊಳೆಯೆ 4ಕನಕಾಭರಣಗಳಿಂದಲಿ ಪೊಳೆಯುವ ಕಮಲನೇತ್ರೆಯೆಕಮಲನಾಭವಿಠ್ಠಲನ ಕೂಡಿಕರುಣದಿ ಬಾರೆತಾಯೆ 5
--------------
ನಿಡಗುರುಕಿ ಜೀವೂಬಾಯಿ
ಮಾತು ಸುಳ್ಳಾಗೊದೆ ದುರಿತಾರಿ | ಯನ್ನನಾಥನಿಂದಿಗೆ ರಕ್ಷಿಸೇ ಗೌರಿ ಪಮಾತೆ ನಿನ್ನಯಪಾದಪ್ರೀತಿಂದ ಭಜಿಸಿದ್ದ |ಕ್ಕೀತ ಸಿಕ್ಕಿದ್ದನು ಚಾತುರ್ಯ ಪುರುಷ 1ಧಾತಾಜನಾಡೀದ ಮಾತೀಗೆ ಕೋಪಾದಿ |ಈ ತೆರ ಮಾಡಿದ ತಾತನು ನೊಂದೂ 3ಪೋರಾನಲ್ಲಮ್ಮಿವಾ ಆರೆಂದು ಹೇಳಾಲಿ |ಶೌರಿಯ ಮೊಮ್ಮಗನೀರಜನೇತ್ರೆ 3ಭೃತ್ಯಾರ ಅಭಿಮಾನ ಮತ್ರ್ಯಾಪಗುಂಟಲ್ಲೆ |ಅತ್ತತ್ತವಾದೀನೆ ಹೆತ್ತವ್ವ ನಿನಗೇ 4ಪ್ರಾಣೇಶ ವಿಠಲನು ಬಾಣನ ಶಿಕ್ಷಿಸಿ |ತಾನೆ ಯೀವಂದಾಗಿ ನೀನೊಲಿಯವ್ವಾ 5
--------------
ಪ್ರಾಣೇಶದಾಸರು
ಮಾತೆ ಸರಸ್ವತಿ ಮಂಜುಳ ಮೂರುತಿಚೇತನಾತ್ಮಕಿಭಾರತಿಪ.ಪ್ರೀತಿಯಿಂದೀವುದು ಪೀತಾಂಬರಧರನಸಾತಿಶಯದ ಭಕುತಿ ಅ.ಪ.ಗುರುಹಿರಿಯರ ಕಂಡು ಬಿರುನುಡಿ ನುಡಿಸದೆಕರುಣಿಸೆನಗೆಸನ್ಮತಿಪರಮಪಾವನ ವೈಷ್ಣವರ ಪಾದಾಂಬುಜ ಮಧು-ಕರದಂತಿರಲಿ ಮದ್ರತಿ 1ಶ್ರೀಶನಮೂರ್ತಿತಾರೇಶನಂದದಿ ಹೃದಯಾ-ಕಾಶದೊಳು ಕಾಣುತಿದೂಷಣ ಕಾಮಾದಿ ಕ್ಲೇಶವ ಬಿಡಿಸುತ್ತಗೈಸಮ್ಮ ಹರಿಯ ಸ್ತುತಿ 2ಮನುಜರ ರೂಪದಿ ದನುಜರು ಭೂಮಿಯೊಳ್ಜನಿಸಿದರ್ಜಲಜನೇತ್ರಿಅನಘಲಕ್ಷುಮಿನಾರಾಯಣನ ದಾಸರಿಗೆಲ್ಲಜನನಿಯೆ ನೀನೆಗತಿ3ಭಾರತಿದೇವಿಯ ಸ್ತುತಿ
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಾಮಝ ಭಾಪುರೆ ಭಳಿರೆ ಹನುಮಂತರಾಮಪದ ಸೇವಿಪ ವೀರ ಹನುಮಂತ ಪಹುಟ್ಟುತಲೆ ಹೊನ್ನ ಕಚ್ಚುಟವ ಕುಂಡಲವೆರಸಿನಿಷ್ಠೆಯಲಿ ರಘುಪತಿಯ ಪಾದವನೆ ಕಂಡು ||ದಿಟ್ಟಿ ಹರಿದಾಡಿ ಮನಮುಟ್ಟಿ ಪೂಜಿಸಲಜನಪಟ್ಟಕನುವಾದ ಸಿರಿವಂತ ಹನುಮಂತ 1ಅಂಬರಕೆ ಪುಟನೆಗೆದು ಅಂಬುಧಿಯನೆರೆದಾಟಿಕುಂಭಿನಿಯ ಮಗಳಿಗುಂಗುರವನಿತ್ತು |ಬೆಂಬಿಡದೆ ಲಂಕೆಯನು ಸಂಭ್ರಮದಿ ಸಖಗಿತ್ತೆಗಂಭೀರ ವೀರಾಧಿವೀರ ಹನುಮಂತ 2ಅತಿದುರಳ ರಕ್ಕಸನು ರಥದ ಮೇಲಿರಲು ರಘು-ಪತಿಯು ಪದಚರಿಯಾಗಿ ನಿಂತಿರಲು ನೋಡಿ ||ಪೃಥವಿ- ಗಗನಕೆ ಬೆಳೆದು ರಥವಾದೆ ಒಡೆಯನಿಗೆಅತಿ ಭಯಂಕರ ಸತ್ತ್ವವಂತ ಹನುಮಂತ 3ಒಡೆಯ ಉಣಕರೆಯಲಂದಡಿಗಡಿಗೆ ಕೈಮುಗಿದುದೃಢಭಕ್ತಿಯಿಂದ ಮೌನದಿ ಕುಳಿತು ||ಎಡಿಯಕೊಂಡೆದ್ದೋಡಿ ಗಗನದಿ ಸುರರಿಗೆಕೊಡುತ ಸವಿದುಂಡ ಗುಣವಂತ ಹನುಮಂತ 4ಪ್ರಥಮದಲಿ ಹನುಮಂತ ದ್ವಿತೀಯದಲಿ ಕಲಿಭೀಮತೃತೀಯದಲಿಗುರುಮಧ್ವಮುನಿಯೆನಿಸೀ ||ಪ್ರತಿಯಿಲ್ಲದಲೆ ಮೆರೆದೆಪುರಂದರವಿಠಲನಸುತ್ತ ನಿನಗಾರು ಸರಿ -ವಿಜಯಹನುಮಂತ5
--------------
ಪುರಂದರದಾಸರು
ಮುಕ್ತಿ ಬೇರಿಲ್ಲಯ್ಯ ಸಾಯುಜ್ಯಮುಕ್ತಿ ಬೇರಿಲ್ಲವೋಮುಕ್ತಿ ಬೇರಿಲ್ಲ ಭಕ್ತಾ ಭಕ್ತ ವಿರಕ್ತರಪಾದನೆನೆಹು ಎಂಬುದು ನಿಜಪನಿತ್ಯನಿರ್ಗುಣಧಾರನ ನಿರಾಲಂಬಪ್ರತ್ಯಯ ಮಂಗಳಕಾರನಸತ್ಯಸಂಪದನಿಂದ ಸುಗುಣಾದಿವರ್ಧಿಪನಿತ್ಯಾನಂದರ ನೆನಹು ಎಂಬುದು ನಿಜ1ಆಶಾಪಾಶಗಳಳಿದುದುಅಹಂಎಂಬವಾಸನೆಯ ಕಳೆದು ದೋಷರಹಿತವಾದದಾಸರ ದಾಸನೆಂದೆನಿಪ ಸುದಾಸನೆಂಬುವನೆ ನಿಜ2ತರಣಿಕಿರಣಾಬ್ಧಿಯ ತಾಳಿರುವಂಥಗುರುಚಿದಾನಂದ ಮೂರ್ತಿಯಸಿರಿಚರಣವ ಕಂಡು ಶೀಘ್ರದಿ ಪೂಜಿಸೆಗುರುತಾನದನೆ ಗುಣನೆನೆವುದೆ ನಿಜ3
--------------
ಚಿದಾನಂದ ಅವಧೂತರು
ಮುಖ್ಯ ಪ್ರಾಣನೆ ಕೈಯ ಮುಗಿದು ಬೇಡುವೆನಯ್ಯಭಕ್ತಿಪಾಲಿಸು ಹರಿಯ ಪಾದಬಳಿಯನಿನ್ನ ಮತ ಪೊಂದಿಸು ನಿನ್ನ ಚಿಹ್ನೆಯ ಧರಿಸುನೀನು ಪಿಡಿಯಲು ಹರಿಯು ತಾನು ಪಿಡಿವನುನವವಿಧ ನೀನು ಮುಖ್ಯಾಭಿಮಾನಿ
--------------
ಗೋಪಾಲದಾಸರು
ಮುಟ್ಟು ಮುಟ್ಟೆನ್ನುತ ಮೂರ್ನಾರು ಹೊರಲೆಮುಟ್ಟಲಿ ಬಂತೆ ಬಿಕನಾಶಿಪಮುಟ್ಟೋ ನೀನೇ ಮಡಿಯೂ ನೀನೇಕೆಟ್ಟಿತು ನಿನಮಡಿ ಮೊದಲೇ ಜಲದಲಿ ನೀ ಮುಳುಗೆಕಡೆಯಲಿ ಆ ಉದಕವನೇ ತರುವೆದೇವರಿಗಿಂದಭಿಷೇಕವ ಮಾಡುತಅಹಂನ ಬಿಡು ನಿನ ಬಿಕನಾಶಿ1ಎಲುಬು ಚರ್ಮದಿ ಮಲಮೂತ್ರದ ಗೂಡಲಿನಲಿಯುತಲಿದ್ದೆ ಬಿಕನಾಶಿನೆಲೆಗೊಂಡಾ ನವ ದ್ವಾರದ ಜಲದೊಳುತೊಳಲುತ ಬಿಕನಾಶಿ2ಹುಟ್ಟುತಸೂತಕಹೊಂದುತಸೂತಕನಟ್ಟ ನಡುವೆ ಬಿಕನಾಶಿಪಟ್ಟಣದಾ ಕಾವೇರಿ ಮುಳುಗಲುಮುಟ್ಟು ತೇಲಿಯಿತೆ ಬಿಕನಾಶಿ3ಉತ್ತಮ ಹತ್ತಿ ಬತ್ತಿರಲಾಂಜನವೃಕ್ಷದಿ ಬೆಳೆವುದೆ ಬಿಕನಾಶಿಉತ್ತಮ ರೋಧನ ಭಾರವ ಕೆಡಿಸಲುಕೆಟ್ಟಿತು ನಿನ ಮಡಿ ಬಿಕನಾಶಿ4ನಾನಾ ಶಾಸ್ತ್ರವನೋದಿ ನಾ ನಿನ್ನ ಮರೆವೆನುಹೀನವ ಬಿಡು ನಿನ್ನ ಬಿಕನಾಶಿನಾನಾ ಶಾಖದಲಿ ಇರಲಾದರೂರ್ವಿಅದುರುಚಿತಿಳಿವುದೆ ಬಿಕನಾಶಿ5ಚರ್ಮವು ತೊಳೆದರೆ ಕರ್ಮವು ಹೋಯಿತೆಕರ್ಮವು ಬಿಡದು ನಿನ್ನ ಬಿಕನಾಶಿಒಮ್ಮೆ ಚಿದಾನಂದ ಪಾದವ ಸ್ಮರಿಸಲುನಿರ್ಮಲವಾದೆಯ ಬಿಕನಾಶಿ6
--------------
ಚಿದಾನಂದ ಅವಧೂತರು
ಮುತ್ತೈದೆಯಾಗಿರಬೇಕು ಮುದದಿಂದಲಿ |ಹತ್ತುನೂರು ನಾಮದೊಡೆಯಹರಿನಮ್ಮ ಪತಿಯೆಂದುಪ.ಗುರುಮಧ್ವಶಾಸ್ತ್ರವನು ಓದುವುದೆ ಮಾಂಗಲ್ಯ |ವರವೈರಾಗ್ಯವೆಂಬ ಒಪ್ಪುವ ಮೂಗುತಿ ||ತಾರತಮ್ಯದರಿಮೆ ತಾಯಿತಿ ಮುತ್ತುಸರ |ಕರುಣರಸಗಳೆಉಳ್ಳಕಟ್ಟಾಣಿಕಟ್ಟಿಕೊಂಡು1ಹರಿಕಥೆಯ ಕೇಳುವುದೆ ಕಿವಿಗೆ ಮುತ್ತಿನ ಓಲೆ |ನಿರುತ ಸತ್ಕರ್ಮವೇ ನಿಜಕಾಂತಿಯು ||ಪರಮ ಭಕ್ತರ ಪಾದರಜ ಹರಳು ಬಂಗಾರ |ಗುರುಭಕುತಿಯೆಂಬಂಥ ಗಂಧ ಕುಂಕುಮ ಧರಿಸಿ 2ಪೊಡವಿಯೊಳು ಪರಹಿತದ ಪಟ್ಟವಾಳಿಯನುಟ್ಟು |ಕೊಡುವ ಧರ್ಮವೆಂಬ ಕುಪ್ಪಸವ ತೊಟ್ಟು ||ಬಿಡದೆ ಎನ್ನೊಡೆಯ ಶ್ರೀ ಪುರಂದರವಿಠಲನ |ಧೃಡ ಭಕ್ತಿಯೆಂಬಂಥ ಕಡಗ - ಬಳೆ ಇಟ್ಟುಕೊಂಡು 3
--------------
ಪುರಂದರದಾಸರು
ಯತಿಗಳು-ದಾಸರು72ವ್ಯಾಸರಾಯರ ದಿವ್ಯ ಪಾದಕಮಲವನು ಸೇವಿಸುವ ಭಕುತರಿಗೆಪನ್ನಗಶಯನನಪರಮಆಜÕದಿ ತಾನುಶಾಪಾನುಗ್ರಹ ಸಮರ್ಥಿಕೆಯುಳ್ಳ ಚೆಲುವ ನಿಜಸ್ನಾನವನು ಮಾಡಿ ಅಸಂಪ್ರಜ್ಞಾತ ಸಮಾಧಿಯಲಿನಾನಾಪರಿ ಗ್ರಂಥ ನ್ಯಾಯಾಮೃತ ಚಂದ್ರಿಕೆ-ಎರಡು ನಾಲ್ಕುಮಂದಿ ಪರಮಶಿಷ್ಯರು ಆದದಾನ ಮಾನವು ವ್ಯಾಖ್ಯಾನ ಸುಳಾದಿಗಳಮಧ್ವಮತವೆಂತೆಂಬೊ ಅಬ್ಧಿಯಲಿ ಚಂದ್ರನಂ-
--------------
ಗೋಪಾಲದಾಸರು
ಯಾಕಿಂತು ಬಳಲುವೆಯೊ |ಈ ಕಷ್ಟಗಳಲೀಗ |ಲೋಕ ಮಾತೆಯ ಭಜಿಸಿ |ಸುಖಿಯಾಗು ಮನವೆ |ಸಾಕು ಸುಡು ಸಂಸಾರ |ಬಿಡು ಮನವೆ ಅಹಂಕಾರ |ಇಂದ್ರಿಗಳಿಗುಪಚಾರಗೈದು ಬಂದೆ1ನೋಡುದೇವಿಯಚರಣ|ಮಾಡುದೇವಿಯ ಪೂಜೆ |ಓಡು ದೇವಿಯ ಸ್ಥಳಕೆ |ನೀಡು ದೇವಿಗೆ ಫಲ ಪುಷ್ಪ ನೈವೇದ್ಯ |ಹಾಡು ದೇವಿಯ ಚರಿತೆ ||ಆಡು ದೇವಿಯ ಮುಂದೆ |ಬೇಡು ದೇವಿಯೊಳ್ ಮುಕ್ತಿ |ಕೂಡು ದೇವಿಯ ಭಕ್ತ ಜನರ ತಂಡಾ2ಕೇಳು ದೇವಿಯ ಕಥೆಯ |ಪೇಳು ದೇವಿಯೊಳ್ ಸ್ಥಿತಿಯ |ಗೋಳು ದೇವಿಗೆ ತಿಳಿಸಿ |ಬೀಳು ದೇವಿಯ ಪಾದದ್ವಯಗಳಲ್ಲಿ ||ಬಾಳು ದೇವಿಯ ಕೃಪೆಯೊಳ್ |ತಾಳು ದೇವಿಯ ವ್ರತವ |ನಾಳೆ ದೇವಿಯ ಸೇರಿ | ಆಳುದೇವಿಯು ಕೊಟ್ಟ ಸೌಭಾಗ್ಯಪದವಿ3ದೇವಿ ಪದ ತೀರ್ಥಕುಡಿ|ದೇವಿ ಪ್ರಸಾದಪಡಿ|ದೇವಿ ಚರಣವನು ಹಿಡಿ |ದೇವಿ ಮೂರ್ತಿಗೆ ಪ್ರದಕ್ಷಿಣೆಯ ಮಾಡಿ ||ದೇವಿ ನಿರ್ಮಾಲ್ಯ ಮುಡಿ |ದೇವಿ ಗಂಧ ಮೈಗೆ ಬಡಿ |ದೇವಿ ಸೇವೆಮಾಡು|ದೇವಿ ನೆವೇದ್ಯ ಉಣಲಿಷ್ಟಪಡು ನೀನು4ಮನೆಯು ನಿನ್ನದು ದೇವಿ |ಧನವು ನಿನ್ನದು ದೇವಿ |ತನಯನಿನ್ನವ ದೇವಿ |ತನುಮನವು ನಿನ್ನದೆಂದರ್ಪಿಸಲು ದೇವಿ ||ದಿನ ದಿನವು ದೇವಿ ನಿನ್ನ |ಘನದಿಮನ್ನಿಸುವಳೈ | ಅನುಮಾನ ಬೇಡ |ಗೋವಿಂದದಾಸನ ಒಡತೀ|ಶ್ರೀ ಲಕ್ಷ್ಮೀದೇವಿ5<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಯಾಕೆ ಬೆಟ್ಟವನೇರಿ ನಿಂದೆಅವನಿವೈಕುಂಠವೆಂದೆ ಆವಿಧಿಸ್ಮರರ ತಂದೆಪ.ತಮನೆಂಬರಿಯ ತರಿದು ತರಿದು ನಿಗಮವ ತಂದುಕ್ರಮದಿ ಕಮಲೋದ್ಭವಗೆ ಕೊಡುವೆನೆಂದೇರಿದೆಯೊಕಮಲವ್ವೆ ಬರೆ ಕಂಡು ಕಲ್ಲ ಭಾರವನಿಳುಹಿಭ್ರಮಿಸಿರುವಭಾವತೋರಿದೆಯೊ ಖಳೋತ್ತಮನ ದಾಡೆಯಲರಿದು ಈ ತಾಣವೇರಿದೆಯೊ 1ಧೀರ ಶಿಶುವಿನಹಗೆವಿದಾರಿಸುತ ದಶದಿಶದಿಸಾರಿದ ನಿಜರ ನೋಡಿ ಸಲಹಲಿಲ್ಲೇರಿದೆಯೊಮೀರಿ ಮೆರೆವನ ತಲೆಯ ಮೆಟ್ಟಿ ಪಾತಾಳಕಿಳುಹಿತೋರಿದೆಯೊ ತ್ವತ್ಪಾದದಿರವ ಧರೆಯಪಾರುವರಿಗೊಲಿದಿತ್ತ ಪರಿಯಲೇರಿದೆಯೊ 2ಅಸುರ ನೊಯಿದರಸಿಯಳ ಅರಸ ತಂದೇರಿದೆಯೊಪಶುಗಾವಿ ಯೋಗಗಳ ಪುರವ ಪೊಗಲೇರಿದೆಯೊಹೊಸಧರ್ಮಹೊಲಬುತೋರಿದೆಯೊ ಇದರಪೆಸರರುಹಿ ಪೊರೆಯೆನ್ನ ಪ್ರಸನ್ವೆಂಕಟೇಶ 3
--------------
ಪ್ರಸನ್ನವೆಂಕಟದಾಸರು
ಯಾದವರನ್ನ ಪಾಲಿಸುವ ಮುನ್ನಕರುಣ ಕಟಾಕ್ಷದಿನೀ ದಯ ಮಾಡೊ ಪ.ಮತ್ತೆ ಭಾಗೀರಥಿ ಜಲವಮಿತ್ರೆ ದ್ರೌಪತಿ ಎರಿಯೆಅರ್ಥಿಲೆಪಾದತೊಳೆದರುಅರ್ಥಿಲೆಪಾದತೊಳೆದು ಪ್ರಾರ್ಥಿಸಿದರುಚಿತ್ತಕ್ಕೆ ತಂದು ಕೈಕೊಳ್ಳೊ 1ಹರದಿರುಕ್ಮಿಣಿಗೆರಗಿದ್ರೌಪತಿ ಭದ್ರಾಆದರದಿಂದಪಾದತೊಳೆದರುಆದರದಿಂದಪಾದತೊಳೆದು ಪ್ರಾರ್ಥಿಸಿದರುಶ್ರೀದೇವಿ ಪೂಜೆ ಕೈಕೊಳ್ಳೆ 2ಪಂಚ ಭಕ್ಷ್ಯಪರಮಾನ್ನಪಾಂಚಾಲಿ ಬಡಿಸಿದಳುಪಂಚಪಾಂಡವರ ಸಹಿತಾಗಿಪಂಚಪಾಂಡವರ ಸಹಿತಾಗಿ ಶ್ರೀಕೃಷ್ಣಚಂಚಲಾಗದಲೆ ಸವಿದುಂಡ 3ಅಕ್ಕ ರುಕ್ಮಿಣಿ ಭಾಮೆಮಿಕ್ಕ ತಂಗಿಯರ ಸಹಿತಸಖ್ಯ ಭಾವದಲಿ ಉಣುತಿರೆಸಖ್ಯ ಭಾವದಲಿ ಉಣುತಿರೆ ಹರುಷದಿದೇವಕ್ಕÀಳು ನೋಡಿ ಬೆರಗಾಗಿ 4ಇಂದುರಾಮೇಶ ತಾನುಮಿಂದು ಮಡಿಯನುಟ್ಟುಬಂಧು ಜನಸಹಿತ ಸವಿದುಂಡಬಂಧು ಜನಸಹಿತ ಸವಿದುಂಡ ಐವರಿಗೆಆನಂದ ಬಡಿಸಿದನು ಅತಿ ಬ್ಯಾಗ 5
--------------
ಗಲಗಲಿಅವ್ವನವರು