ಒಟ್ಟು 8092 ಕಡೆಗಳಲ್ಲಿ , 130 ದಾಸರು , 4966 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾರೊಡನುಸುರವೆನೋ ಕಡಲಶಾಯಿ ಬಿಡದೆ ನಿನ್ನನು ಅಡಿಗಡಿಗೆ ಕೊಂಡಾಡುವ ಹುಡಗನ ಮೇಲಿಷ್ಟು ಕರುಣವಿಲ್ಲದರಿಂದ ಪ ಪೊಡವಿಯೊಳಗೆ ಜನಿಸಿರುವರೊಳಗೆ ನಾನೆ ಕಡೆ ಈಗ ಬಸುರಿನೋಳ್ ಪಡೆದ ಮಗನು ತನ್ನ ಮಡದಿ ಮಕ್ಕಳನು ಎನ್ನೊಡನಿತ್ತು ನಾಕಕೆ ನಡೆದನೆನಗೆ ನಡುಮರಣವ ಹೊರಸಿ 1 ಕೆಟ್ಟ ಬದುಕ ಕಾಣಲಾರೆ ಮಾಳ್ಪರೆ ಎನ್ನ ರಟ್ಟೆ ಬಲವು ತಗ್ಗಿ ಹೋಯ್ತು ಮೊಮ್ಮಕ್ಕಳ ಅಟ್ಟುಳಿ ಬರಿಸನ್ನವಸ್ತ್ರಾಭರಣಕೆಂದು ಕುಟ್ಟಿ ಕೊಂಬರು ಎನಗಿದಿರಾಗಿ ಶಿವನೇ 2 ನಾನು ಎಂಬುವರಿಲ್ಲ ಗೃಹಕೃತ್ಯದೊಳಗೆನ್ನ ಮಾನಿನಿಯೊರ್ವಳುಂಟಿದರೊಳು ಸೊಸೆಯಷ್ಟು ಏಕೆಂದ ರೇನು ಸಂಸಾರವಿದನು ಪವಮಾನ ಸುತನ ಕೋಣೆ ಲಕ್ಷ್ಮೀಶ ನಡೆಸು 3
--------------
ಕವಿ ಪರಮದೇವದಾಸರು
ಯೆಂದು ಪಿಡಿಯುವಿ ಕೈಯ್ಯ ಇಂದಿರೇಶ ಚಲುವ ಕೃಷ್ಣನೆ ಪ ಮುಂದೆ ಹೋಗಲು ಬಂಧಮಾಡುತ ಕುಂದು ಅಳಿಯುತ ತಂದೆ ದಯೆತೊರಿ ಅ.ಪ ಮಂದ ನಾನಯ್ಯ ಕಂದಿ ಕುಂದಿದೆ ಭವದಿ ಕೇಳಯ್ಯ ಬಂಧು ಬಳಗವು ಯಾರು ಇಲ್ಲಯ್ಯ ನಿಂದು ಮುಂದಿನ ದಾರಿ ನಡೆಸಯ್ಯ ಜೀಯಾ ಅಂದು ಸಭೆಯೊಳು ಮಂದಗಮನೆಯ ಒಂದು ನೊಡದೆ ಬಂದು ಸಲಹಿದ ಸಿಂಧು ಶಯನಾನಂದ ಮೂರುತಿ ನಂದನಂದನ ಶ್ಯಾಮಸುಂದರ ಬಂಧು ಸರ್ವರ ಬಂಧಮೋಚಕ ಮಂದರಾದ್ರಿ ಧರನೆ ಯದುಕುಲ ಚಂದ್ರ ಶೋಭಾಸಾಂದ್ರ ಕೃಷ್ಣನೆ ಬಂದು ಚಂದದಿ ಸಲಹಿ ಎನ್ನನು 1 ಬಾಲತನದಲ್ಲಿ ಲೀಲೆಗೋಷ್ಠಿಲಿ ಮೆರೆದೆ ನಾನಲ್ಲಿ ಮೇಲೆ ಯೌವನ ಒಡನೆ ಬಂತಲ್ಲಿ ಲಲನೆ ಕೇಳಿಲಿ ಮುಳುಗಿ ಹೋದೆನು ಅಲ್ಲಿ ಮೆಲ್ಲಮೆಲ್ಲನೆ ಮುಪ್ಪು ಬಂತಲ್ಲಿ ಕಾಲಕಳೆದೆನು ಪಗಡೆ ಜೂಜಿನಲಿ ಮಲ್ಲಮರ್ದನ ಮಾತುಲಾಂತಕ ಚಲ್ವಸೂಕರ ಪುಲ್ಲಲೊಚನ ಪುಲ್ಲನಾಭನೆನಲ್ಲ ಸರ್ವರ ಬಿಂಬರೂಪನೆ ಎಲ್ಲ ಕಾಲದಿ ಎಲ್ಲಮಾಡುತ ನಿಲ್ಲದೆಜಗ ಸಾರ ಶ್ರೀ ನಲ್ಲ ನಿನ್ನಯ ಎಲ್ಲ ಬಲ್ಲವರಿಲ್ಲ ಎಲ್ಲಿಯೂ ಬುದ್ಧ ಕಲ್ಕಿಯೆ ಸೊಲ್ಲು ಲಾಲಿಸಿ ಒಲಿದು ಬಂದ ನಾರಸಿಂಹನೆ ಇಲ್ಲ ಸಮರು ಅಧಿಕರೈಯ್ಯ ಪೂರ್ಣದೇವನೆ2 ಮೂರು ತಾಪವ ಹರಿಪ ಬಗೆಯೇನೋ ವೈರಿ ಆರರ ಭರದಿ ತರಿ ನೀನೂ ಮೂರು ಋಣಗಳು ಉಳಿಯೆಗತಿಯೇನು ಮೂರು ಕರ್ಮದಿ ಬಿಡಿಸಿ ಹೊರೆಯನ್ನು ಭಕ್ತಸುರಧೇನು ಸಾರಸಜ್ಜನ ಪ್ರಾಪ್ಯ ಶುಭಗುಣ ಸಾರ ಕರುಣಾ ಪೂರ್ಣವಾರಿಧಿ ಮಾರಜನಕನೇ ಋಷಭಮಹಿದಾಸ ತೋರು ಜ್ಞಾನವ ಬಾದರಾಯಣ ಮೀರಲಾರೆನು ವಿಷಯವಾಸನೆ ಭಾರತೀಶನ ಒಡೆಯ ಕೃಷ್ಣನೆ ಭಾರ ನಿನ್ನದು ಎನ್ನ ಪೊರೆವದು ಮತ್ಸ್ಯ ವಾಮನ ಧೀರ ಧೃವನಾ ಪೊರೆದ ವರದನೆ ಬೀರಿ ಭಕ್ತಿ ಜ್ಞಾನ ವೈರಾಗ್ಯ 3 ಎನ್ನ ಯೋಗ್ಯತೆ ನೋಡಿ ಫಲವೇನು ನಿನ್ನ ಘನತೆ ತೋರಿ ಪೊರೆ ನೀನು ನಿನ್ನ ದಾಸನ ಮಾಡು ಎನ್ನನ್ನು ಅನ್ಯಹಾದಿಯ ಕಾಣೆ ನಾ ನಿನ್ನು ಬೆನ್ನು ಬಿದ್ದೆನು ಇನ್ನೂಮುನ್ನೂ ಮಾಧವ ವಿಶ್ವ ತೈಜಸ ಪ್ರಾಜ್ಞತುರಿಯ ಹಂಸ ವಿಷ್ಣುವೇ ಜ್ಞಾನ ಭೋಧಕ ಸನತ್ಕುಮಾರನೇ ಮೌನಿ ದತ್ತಾತ್ರೇಯ ಹಯಮುಖ ದೀನವತ್ಸಲ ಯಜ್ಞ ಧನ್ವಂತ್ರಿ ಶ್ರೀನಿವಾಸ ರಾಮ ಕಪಿಲನೆ ಜ್ಞಾನ ನಿಧಿ ಮುನಿ ನಾರಾಯಣನೆ ನೀನೆ ಅನಿರುದ್ಧಾದಿ ರೂಪನು ಧ್ಯಾನಗೊಚರ ಶಿಂಶುಮಾರನೆ ಸಾನುಕೂಲದಿ ನೀನೆ ವಲಿಯುತ ಕರ್ಮ ಸಂಚಯ4 ಆದಪೊದ ಮಾತು ಏಕ್ಕಯ್ಯ ಮಧ್ವರಾಯರ ಪ್ರೀಯ ಶೃತಿಗೇಯ ಮೋದದಾಯಕ ಮುಂದೆ ಸಲಹೈಯ್ಯ ಪಾದಪದ್ಮದಿ ಶರಣು ಅಲ್ಲದೆ ಏನು ಮಾಡಲಿ ಜೀಯ ಅಯ್ಯ ತಿದ್ದಿ ಮನವನು ಕದ್ದು ಅಘವನು ಒದ್ದು ಲಿಂಗವ ಶುದ್ಧಜ್ಞಾನದ ಸಾಧು ಜಯಮುನಿ ವಾಯುವಂತರ ಮಾಧವ ಶ್ರೀ ಕೃಷ್ಣವಿಠಲನೆ ಪಾದ ಮಧುಪರ ವೃಂದ ಮಧ್ಯದಿ ವೇದ ಸಮ್ಮತ ಗಾನ ಸುಧೆಯನು ಶುದ್ಧಭಕ್ತಿ ಜ್ಞಾನದೊಡಗೂಡಿ ಮೆದ್ದು ಪಾಡುತ ಕುಣಿವ ಭಾಗ್ಯವ ಮುದ್ದು ಕೃಷ್ಣನೆ ನೀನೆ ಎನಗಿತ್ತು 5
--------------
ಕೃಷ್ಣವಿಠಲದಾಸರು
ಯೇನು ನೆಲೆ ಯೆನುತಿಹೆ ಮನುಜಾ ನಿ ಧಾನಿಸು ಗತಿಯಚ್ಯುತನಲ್ಲದುಂಟೇ ಪ ಹುಲ್ಲುಹನಿಯು ಗಾಳಿಗಿಟ್ಟ ಸೊಡರು ನೀರ ಗುಳ್ಳೆಗಳದು ತಾ ಸ್ಥಿರವೆನಿಪಾ ಜಳ್ಳು ಜವ್ವನವ ನಿಶ್ಚಯವೆಂದು ಕಾಲನ ಭಲ್ಲೆಯಕೆದೆಯನೊಡ್ಡುವೆಯಾತಕೆ ನೀ 1 ಮಿಂಚಿನ ಬಲೆಯ ರಕ್ಷೆಯ ಮನ ಸುದತಿಯಾ ಚಂಚಲತೆಯ ಜೀವರ ಗೆಲಿದೂ ಪ್ರ ಪಂಚಿನ ಸಿರಿಯ ನಿಶ್ಚಯವೆಂದು ಬಗೆದು ನೀ ಮುಂಚುವೆಯೇಕೆ ನರಕಪತಿ ಕರೆಗೇ 2 ಸುರಚಾಪವೋಲೀ ದೇಹದ ಸಂ ಗರದಿ ಸೋಲುವ ಶರೀರವ ನಂಬೀ ನರಕಕೂಪಕ್ಕಿಳಿಯದೇ ವೇಲಾಪುರ ದರಸ ವೈಕುಂಠ [ಕೇಶವ] ಶರಣೆನ್ನೇ 3
--------------
ಬೇಲೂರು ವೈಕುಂಠದಾಸರು
ಯೋಗನಿದ್ರೆಯ ಮಾಡುತಿಹನು ಕ್ಷೀರಸಾಗರಮಧ್ಯದಿ ಭೋಗಿಶಯನನು ಪಏಳು ಸುತ್ತಿನ ಪುರವಿದನೂ ಎಂಟುಪಾಲಾಗಿ ರಮಣಿ ತಾ ಕಾದಿರಲದನುಬಾಲಕನೊಬ್ಬ ಪಾಲಿಪನೂ ಮಂತ್ರಿನಾಲುವರೊಪ್ಪಿರೆ ಶ್ರೀಹರಿ ತಾನು 1ಕಾಲಜ್ಞಾನಿಗಳೈವರಿಹರೂ ಅವರೂಳಿಗಕೈವರು ಕಾದುಕೊಂಡಿಹರುವೇಳೆ ವೇಳೆಯ ಬಲ್ಲ ಭಟರು ತಮ್ಮಊಳಿಗವನು ಬಂದು ಪೇಳುತ್ತಲಿಹರು 2ಸಕಲ ಲೋಕಂಗಳ ಸೃಜಿಸಿ ಅಲ್ಲಿ ಸಕಲ ಲೋಕೇಶನು ತಾನೆ ವಿಶ್ರಮಿಸಿಸಕಲವ ತನ್ನೊಳಗಿರಿಸಿುೀಗಮುಕುತಿದಾಯಕ ವೆಂಕಟೇಶ ಶ್ರೀ ವೆರಸಿ 3ಕಂ||ಹರಿ ಪವಡಿಸೆ ಹರೆದೋಲಗಸುರರೆಲ್ಲರ್ ಸ್ಥಾನಕೈದಲಾನಂದಾಂಬುಧಿತೆರೆುಳಿದು ತಿರುಪತೀಶನಚರಣವೆ ತಾನಾಗಿ ನಿಂದುದೆನ್ನೆದೆಮನೆಯೊಳ್ ಓಂ ವೇದವೇದ್ಯಾಯ ನಮಃ
--------------
ತಿಮ್ಮಪ್ಪದಾಸರು
ಯೋಗಿ ವಲ್ಲಭನ ಅನುರಾಗವನು ಪಡೆದವಗೆ ಲಾಗವೆಲ್ಲವು ದೊಡ್ಡ ಯೋಗವಾಗುವುದು ಪ ಹೋಗಿ ಗಂಗೆಯ ತೀರದಲಿ ಬಾವಿ ತೋಡಿದರೂ ಬೇಗ ಸಿಗುವುದು ದಿವÀ್ಯ ಬಲಮುರಿಯ ಶಂಖವು ಅ.ಪ ಮಾಧವನ ಪರಮ ಕರುಣವ ಪಡೆದ ಮನುಜನಿಗೆ ಹೋದ ಕಡೆಗಳಲಿ ದೊರೆಕುವುದಾದರೆ ಮೂದಲಿಸುವರ ಮನವು ಕಾದ ಬೆಣ್ಣೆಯು ಕರಗಿ ಹೋದ ತೆರದಲಿ ಕ್ಷಣದಿ ಸಾಧುವಾಗುವುದು 1 ವೇದಾಂತ ರಾಜ್ಯದಲಿ ಜ್ಞಾನಭಕುತಿಗಳಿಂದ ಮೋದ ಪಡಿಸುವನು ಕಾದ ಮರುಭೂಮಿಯಲಿ ಸಕಲ ಸಂಪತ್ತುಗಳ ಸಾಧಿಸುವ ಬೇಧಿಸುವ ವಿಘ್ನರಾಶಿಗಳನ್ನು 2 ಕುರುಡ ನೋಡುವನೆಲ್ಲ ಕಿವುಡ ಕೇಳುವನೆಲ್ಲ ಗುರುವರ ಪ್ರಸನ್ನ ನೀ ಮರುಕ ತೋರಿದರೆ ಕರಡಿ ಕೈ ಗೊಂಬೆಯಾಗುವುದು ಕೈಗೊಂಬೆಯು ತ್ವರಿತದಲಿ ಕಲ್ಪತರುವಾಗಿ ಕೊಡುವುದು ಫಲವ 3
--------------
ವಿದ್ಯಾಪ್ರಸನ್ನತೀರ್ಥರು
ಯೋಗಿ ವ್ಯಾಸರಾಯರೆಂಬ ವಿಚಿತ್ರ ಮೇಘ ಬೇಗ ವಿಷ್ಣುಪದವ ತೋರುಸುತ್ತ ಬಂತಿದೆಕೊ ಪ ಮಾಯಿಮತವೆಂಬ ತಾರಾಮಂಡಲವ ಮುಸುಕುತ್ತ ವಾಯುಗತಿಯಂತೆ ಗಮಿಸುತಲಿ ಹೇಯ ಕಾಮಾದಿಗಳೆಂಬ ರಜವನಡಗಿಸುತ ನಾಯಕನುಪೇಂದ್ರನಾಜ್ಞೆಯ ಪಡೆದು 1 ಅಂಗಜನಯ್ಯನೆ ಪರನೆಂದು ಫುಡಿಫುಡಿಸುತ್ತ ಕಂಗಳೆಂಬ ಮಿಂಚನೆ ನೆರಹಿ ಲೋಕದಿ ಹಿಂಗದೆ ಪರಿವ ಅಜ್ಞಾನವೆಂಬ ಕತ್ತಲೆಯ ಭಂಗಿಸಿ ಸುರಪಥವ ತೋರಿಸುತ್ತ 2 ಸಿರಿಯರಸನ ಸಮ್ಯಕ್ಜ್ಞಾನವೆಂಬ ಪೈರಿಗೆ ಬೇರುಬಿಡಿಸಿ ಹರಿಕಥೆಯೆಂಬ ಮಳೆಗರೆದು ನೆರೆ ಶಿಷ್ಯಮನವೆಂಬ ಕೆರೆತುಂಬಿಸಿ ಕರಗಳೆಂಬ ಭರಕೋಡಿ ಹರಿಸುತ ವಿಜಯೀಂದ್ರನ ಗುರು 3
--------------
ವಿಜಯೀಂದ್ರತೀರ್ಥರು
ರಕ್ಷಿಸು ಮಹಮಾಯೆ ಕರುಣ ಕ- ಟಾಕ್ಷದಿಂದಲಿ ತಾಯೆ ಪ. ದಾಕ್ಷಾಯಿಣಿ ದೈತ್ಯಾಂತಕಿ ವರ ನಿಟಿ- ಲಾಕ್ಷನ ರಾಮಿ ನಿರೀಕ್ಷಿಸು ಜನನೀಅ.ಪ. ವಾಸವಮುಖವಿನುತೆ ರವಿಸಂ- ಕಾಶೆ ಸುಗುಣಯೂಥೇ ಭಾಸುರಮಣಿಗಣಭೂಷೆ ತ್ರಿಲೋಕಾ- ಧೀಶೆ ಭಕ್ತಜನಪೋಷೆ ಪರೇಶೆ1 ಗುಹಗಣಪರಮಾತೆ ದುರಿತಾ- ಪಹೆ ದುರ್ಜನ ಘಾತೆ ಬಹುಕಾಮಿತಪ್ರದೆ ಭಜಕಜನೋರ್ಜಿತೆ ಮಹಿತೆ ಯೋಗಿಹೃದ್ಗುಹನಿವಾಸಿನಿಯೆ2 ಶುಂಭಾಸುರಮಥಿನಿ ಸುರನಿಕು- ರುಂಬಾರ್ಚಿತೆ ಸುಮನಿ ರಂಭಾದಿಸುರನಿತಂಬಿನೀ ಜನಕ- ದಂಬಸೇವಿತಪದಾಂಬುಜೆ ಗಿರಿಜೆ3 ಅಷ್ಟಾಯುಧಪಾಣಿ ಸದಾಸಂ- ತುಷ್ಟೆ ಸರಸವಾಣಿ ಸೃಷ್ಟಿಲಯೋದಯಕಾರಿಣಿ ರುದ್ರನ ಪರಾಕು ಕಲ್ಯಾಣಿ4 ನೇತ್ರಾವತಿ ತಟದ ವಟಪುರ- ಕ್ಷೇತ್ರಮಂದಿರೆ ಶುಭದಾ ಸುತ್ರಾಣಿ ಲಕ್ಷ್ಮೀನಾರಾಯಣಿ ಸ- ರ್ವತ್ರ ಭರಿತೆ ಲೋಕತ್ರಯನಾಯಕಿ5
--------------
ತುಪಾಕಿ ವೆಂಕಟರಮಣಾಚಾರ್ಯ
ರಕ್ಷಿಸು ಶ್ರೀ ಲಕ್ಷ್ಮೀವೆಂಕಟರಮಣ ರಾಕ್ಷಸ ಸಂಹರಣ ಪಕ್ಷೀಂದ್ರವಾಹನ ವಾಸುಕಿಶಯನ ವಾರಿಜದಳನಯನಪ. ತ್ರ್ಯಕ್ಷಾದಿ ವಿಬುಧಪಕ್ಷ ಪರಾತ್ಪರ ಸುಕ್ಷೇಮನಿಧಿ ಕೃಪೇಕ್ಷಣದಿಂ ಸದಾಅ.ಪ. ವೇದಬಾಹಿರರಾಗಿ ಖಲರು ಬಹು ಬಾಧಿಸುವರು ಸಾಧನೆಯೆಲ್ಲ ಕೆಡಿಸುವರು ರಿಪುಗಳಾರ್ವರು ಆದಿಮೂರ್ತಿ ತವಪಾದಾಶ್ರಯ ಸು- ಬೋಧಾಮೃತರಸ ಸ್ವಾದುಗೊಳಿಸುತಲಿ1 ಸರ್ವಾಪರಾಧಂಗಳ ನೀ ಕ್ಷಮಿಸು ಸುಜನರನುದ್ಧರಿಸು ಪೂರ್ವಾರ್ಜಿತ ಪಾಪಂಗಳ ಪರಿಹರಿಸು ಸದ್ಭಕ್ತಿಯೊಳಿರಿಸು ಸರ್ವತ್ರ ವ್ಯಾಪ್ತ ಸಂತಕೃತ ಸ್ತೋತ್ರ ದುರಿತ ದುರ್ಗನಿಗ್ರಹನೆ2 ಸತ್ಯಾತ್ಮ ಪಾವನ ಪಂಕಜನಾಭ ನೀಲಾಭ್ರದಾಭ ಸತ್ವಾದಿಗುಣವರ್ಜಿತ ಮಹಾಶೋಭ ಶರಣಾಗತ ಸುಲಭ ಚಿತ್ತವಾಸ ಶ್ರೀವತ್ಸಾಂಕಿತ ಪರ- ಮಾರ್ಥಬೋಧ ಮಹತ್ತತ್ತ್ವನಿಯಾಮಕ3 ಪವಮಾನಾಂತರ್ಗತ ಪಾಪ ವಿನಾಶ ಪೊರೆಯೊ ಜಗದೀಶ ಅವಿಕಾರ ಲೀಲಾನಂತವಿಲಾಸ ಶತಸೂರ್ಯ ಪ್ರಕಾಶ ಕವಿಜನಾನಂದಭವನ ಭವಭಯಾ- ಮಾಧವ ಮಧುಸೂದನ4 ಚಿತ್ರಾಖ್ಯಪುರಮಂದಿರ ಸುಖರೂಪ ಯಾದವ ಕುಲದೀಪ ಕರ್ತಾಕಾರಯಿತ ಸುಗುಣಕಲಾಪ ಪರಮ ಪ್ರತಾಪ ಸುತ್ರಾಣ ಲಕ್ಷ್ಮೀನಾರಾಯಣ ಪರ ವಸ್ತು ಶಾಶ್ವತ ಪವಿತ್ರ ಚರಿತ್ರ5
--------------
ತುಪಾಕಿ ವೆಂಕಟರಮಣಾಚಾರ್ಯ
ರಕ್ಷಿಸು ಶ್ರೀ ವೆಂಕಟೇಶಾ ನಿನ್ನ ನಂಬಿದೆನೈ ಶ್ರೇಷಗಿರಿವಾಸಾ ಪ ಶ್ರೀ ಹರಿ ಮಲಗಿರಲಂದೂ ತಾಡನೆ ಮಾಡಿದನೆಂದೂ 1 ಅದು ಕೇಳಿ ಸಿರಿದೇವಿ ಸೈರಿಸಲಾರದೆ ತಿಳಿದು ಹರಿಬೇಗಾ ಧರೆಗಿಳಿದನು ಆಗಾ 2 ಸುರಮುನಿವಂದ್ಯ ಶರಣು ಗೋವಿಂದಾ 3 ದೇಶದೇಶಗಳಿಂದಾ ಭಕ್ತಜನರು ಬಂದೂ ಮಹಾನುಭಾವಾ ಪಾಲಿಸುದೇವಾ 4 ಅಪ್ಪಲು ಅಕಿರಸಿ ಒಪ್ಪದಿಂದಲಿಮಾರಿ ಸರಿಯಾರಿಲ್ಲ ಕಂದ್ಯ5 ಮೋಸ ಹೋಗುವನಲ್ಲಾ ಭವಪಾಶ ಬಿಡಿಸಲು ಬಲ್ಲ ಇದಕೆ ಸಂಶಯವಿಲ್ಲ 6 ಬೇರೆ ದೈವಗಳನ್ನ ಬಯಸಲ್ಯಾತಕೆ ಹೇಳು ದೀನ ದಯಾಳೂ ಭಕ್ತಕೃಪಾಳೂ 7 ನಿನ್ನ ಹೊರತು ಪೊರೆವರನ್ಯರಕಾಣೆನು ಘನ್ನ ಮಹಿಮಾ ಮನಮಾಡೋ ಮೋಹನ್ನಾ 8 ಭಕ್ತ ವತ್ಸಲ ನೀನಭಯವಿತ್ತ ಮೇಲೆ ಭಯವ್ಯಾಕೊನಮಗಿನ್ನು ಭಕ್ತರಭಿಮಾನೀ ಸತ್ಯ ನಿನವಾಣೀ ನಿನ್ನ ಸಮರ್ಯಾರೊದಾನೀ 9 ಆದರದಿಂಧ ಪೊರೆವಾಪ್ರೇಮಸುಧೆಯ ಕರೆವಾ ಕನಕಾದ್ರಿಯೊಳಿರುವಾ ಕೀರ್ತಿಯೊಳ್ ಮೆರೆವಾ 10 ವೆಂಕಟವಿಠಲಾ ಕರುಣಾಲವಾಲಾ ಪದ್ಮಿನಿಲೋಲಾ 11
--------------
ರಾಧಾಬಾಯಿ
ರಕ್ಷಿಸೆನ್ನನು ಶಾರದಾಂಬೆ ನೀನುಪಕ್ಷಿವಾಹನ ಸುತ ಮನಃಪ್ರತಿಬಿಂಬೆ ಪಆದಿಮಧ್ಯಾಂತರ'ತಳೆ ಅನಾದಿ ವಸ್ತು'ನಲ್ಲಿ ಭೇದರ'ತಳೆವಾದಿಜನರಿಗಗೋಚರಳೆ ನಿನ್ನ ಪಾದವೆ ಗತಿಯೆಂದರಾದರಿಸುವಳೆ 1ಚಿದ್ರೂಪೆಯಾಗಿಪ್ಪೆ ನಿಜದಿ ಹರಿ ಮುದ್ರಿತೆಯಾಗಿ ನಾದದಿ ತೋರ್ಪೆ ಮುದದಿ ಇದ್ದು ನೀ ಚಕ್ರಸಪ್ತಕದಿ ನಾಲ್ಕ ಹೊದ್ದಿ ನಾಮವನದ ಪ್ರPಟಿಪೆ ಕ್ರಮದಿ 2ಪರವೆಂದು ನಾಭಿಯಲಿರುವೆ ಮತ್ತೆ ಮೆರೆವೆ ಹೃದಯದಲ್ಲಿ ಪಶ್ಯಂತಿ ಭಾವೆಕೊರಳಲ್ಲಿ ಬಿಡದಿರುತಿರುವೆ ಮಧ್ಯಮೆವರ ನಾಮ ವೈಖರಿುಂದ ತೋರಿಸುವೆ 3ಗೀತೆ ಭಾಗವತರೂಪಿನಲಿ ನೀನು ಮಾತೆಯಂದದಲರ್ಥಗಳನು ಪ್ರೀತಿಯಲಿ ಮಾತು ಬೋಧಿಸಿ ಪರಮನಲಿ ನಿತ್ಯ ಪ್ರೀತಿಯನುಂಟು ಮಾಡಿದೆ ಮನಸಿನಲಿ 4ಮಂದಬುದ್ಧಿಯ ನೆರೆ ಬಿಡಿಸು 'ಂದೆ ಬಂಧಿಸಿ ಬಂದಕರ್ಮವ ಕಡೆಗೊಳಿಸುತಂದೆ ಕೃಷ್ಣನ ಮುಂದೆ ನಿಲಿಸು ುನ್ನೂ ಸಂದೇಹವೇಕೆ ನೀನೇ ಬಂದು ನೆಲಸು 5ತೋರಿಸು ಮತಿಗೆ ಜ್ಞಾನವನು ಇದು ಜಾರದಂದದಲರ್ಥಗಳನು ಪ್ರೀತಿಯನುಸೇರಿ ಚಿತ್ತದಲಿನ್ನು ನೀನು ಮಂದ ಬಾರದ ಹಾಗೆ ಮಾಡೆನ್ನ ಮುಕ್ತನನು 6ಕರುಣಾಪೂರಿತದ್ಟೃುಂದ ನಿನ್ನ ಚರಣದಲಿಂಬಿಟ್ಟು ಕೊಳಲದರಿಂದನೆರೆ ಧನ್ಯನಹೆನು ನಿನ್ನಿಂದ ಕೂಡೆ ತಿರುಪತಿ ವೆಂಕಟನೊಲವದರಿಂದ 7ಓಂ ಕಮಲಾನಾಥಾಯ ನಮಃ || 2 ||ಗುರುಸ್ತುತಿಗಳು:
--------------
ತಿಮ್ಮಪ್ಪದಾಸರು
ರಕ್ಷಿಸೊ ಜಾನಕಿ ಕಾಂತ ಶಾಂತ ಪ ತಕ್ಷಣದಲಿ ಉಪೇಕ್ಷೆಯ ಮಾಡದೆ ಅ.ಪ ದಕ್ಷ ನಾನಲ್ಲವೊ ಪೊಗಳಲು ಶಾಸ್ತ್ರ ವಿ ಚಕ್ಷಣೆಯರಿಯೆನೋ ಲಕ್ಷ್ಮೀನಾಥ1 ಸಂತತಪಡುತಿಹ ಚಿಂತೆಯ ಬಿಡುತಲಿ ಶಾಂತಿಯ ಪೊಂದುವ ತಂತ್ರವ ತೋರುತ 2 ಬೇಡುವ ವಿಧದಲಿ ರೂಢಿಯಿಲ್ಲದೆ ಬಲು ಪಾಡುಪಡುತಿಹೆನೋ ನೀಡುತ ಕರವನು 3 ಕ್ಷೀಣಿಸೆ ಉರುತರ ತಪಗಳಿಂ ತನುವನು ತ್ರಾಣವಿಲ್ಲವೋ ರಮಾಪ್ರಾಣನಾಥನೆ 4 ಕೆಟ್ಟಯೋಚನೆ ಎನ್ನ ಮುಟ್ಟದೆ ಮನವನು ಘಟ್ಟಿಯ ಮಾಡುತ ಶಿಷ್ಟ ಪ್ರಸನ್ನನೇ 5
--------------
ವಿದ್ಯಾಪ್ರಸನ್ನತೀರ್ಥರು
ರಕ್ಷಿಸೊ ಶ್ರೀಶ ಶ್ರೀನಿವಾಸ ಪ ರಕ್ಷಿಸೆನ್ನ ಪದ್ಮಾಕ್ಷ ತ್ರಿಜಗದ ಧ್ಯಕ್ಷ ಖಳ ಜನಶಿಕ್ಷ ಪಾಂಡವ ಪಕ್ಷ ಕರುಣ ಕಟಾಕ್ಷದಲಿ ನೀ ವಾಹನ ಅ.ಪ. ಕೊಂಚ ಮತಿಯಲಿ ಕುಜನರ ಸೇರಿ ಸಂಚರಿಸುತಲಿ ದೀನನಾದೆ ಪಂಚಶರಸ್ಮರ ವಂಚಿಸುತ ಬಿಡೆ ಚಂಚಲಾಕ್ಷೇರ ಸಂಚು ನೋಟದ ಮಿಂಚಿಗೆನ್ನ ಮನ ಚಂಚಲಾಗುತೆ ವಂಚಿಸೆ ಯಮನಂಚಿಗೆ ಸಿಲುಕಿದೆ 1 ಕಿಟ್ಟಗಟ್ಟಿದ ಕಬ್ಬಿಣದಂತೆ ಕೆಟ್ಟ ಕಿಲ್ಬಿಷದ ರೂಪದಿ ಬಿದ್ದು ದಿಟ್ಟ ನಿನ್ನಯ ಗುಟ್ಟು ತಿಳಿಯದೆ ಪೊಟ್ಟೆ ಗೋಸುಗ ಕೆಟ್ಟ ಕುಜನರ ಘಟ್ಟನಾ ಕಾಲ್ಗಟ್ಟೆ ಬಹುಶ್ರಮ ಪಟ್ಟು ಭವದಿ ಕಂಗೆಟ್ಟೆ ಪ್ರತಿದಿನ 2 ಶ್ರೀ ಕಮಲೇಶ ಹೃತ್ಪದ್ಮದಿನೇಶ ಪ್ರಕಾಶ ಬೇಗನೆ ಬಂದು ಯಾಕೇ ತಡೆವೆನ್ನ ವಾಕ್ಕುಲಾಲಿಸಿ ಕರವ ಪಿಡಿ ದಾ ಕುಚೇಲನ ಸಾಕಿದಾಪರಿ ಕರ ಜಗನ್ನಾಥ ವಿಠಲ 3
--------------
ಜಗನ್ನಾಥದಾಸರು
ರಕ್ಷಿಸೊ ಸ್ವಾಮಿ ನೀ ಪಕ್ಷಿ ಸುವಾಹನ ಭಿಕ್ಷೆ ಸುನೀಡೊ ನೀ ಲಕ್ಷ ಸುಸಾಧನ ಅಕ್ಷಯಾನಂದ ನೀ ಲಕ್ಷುಮಿ ಜೀವನ ಪಕ್ಷ ನೀ ಪ್ರಾಣಕ ಈಕ್ಷಿಸಿದವನ 1 ಸೃಷ್ಟಿಗಧಿಕ ನೀ ವಿಷ್ಣು ಜನಾರ್ಧನ ಕಷ್ಟ ನೀ ಹಿಂಗಿಸೊ ದುಷ್ಟರ ಮರ್ದನ ಶಿಷ್ಟರ ಪಾಲಕ ಶ್ರೇಷ್ಠ ನಾರಾಯಣ ದೃಷ್ಟಿಸಿ ನೋಡೊ ನೀ ಕೃಷ್ಣ ಕೃಪಾಘನ2 ಈಶನೆಂದರಿಯದೆ ದೋಷದ ರಾಶಿ ನಾ ವಾಸನೆ ಪೂರಿಸೊ ದಾಸರ ದಾಸ ನಾ ಏಸು ತಾ ಜನ್ಮಕೆ ಬಂದು ಸೂಸಿದೆನೊ ಹೇಸಿತು ಜೀವನ ಸ್ಮರಿಸಬೇಕೆಂದು ನಾ 3 ನಿಮ್ಮನೆ ನೋಡಬೇಕೆಂದು ಬಂದೆ ನಾ ಘಮ್ಮನೆ ಪೂರಿಸೊ ಭಾವನೆ ಕಂದನ ತಮ್ಮನೆ ಬೇಡಿಕೊಂಬುದು ತಾ ವಂದನ ಅಮ್ಮ ನಮ್ಮಪ್ಪನೆ ಬಂಧು ನೀ ಎಂದೆ ನಾ 4 ಕಾಣದ ಪಾಮರ ಹೀನ ಸೂಕರ ಏನು ತಾ ಬಲ್ಲದು ಲೂನದ ಸೂಕರ ನೀನೆ ದಯಾನಿಧೆ ಜ್ಞಾನದ ಸಾಗರ ನ್ಯೂನ ನೋಡದೆ ತಾರಿಸೊ ಶ್ರೀಧರ 5 ಪಾರ ನೀ ಗೆಲಿಸೊ ದ್ವಾರಕಿನಾಥನೆ ಸಾರಿ ನೀ ಬೋಧವ ತಾರಿಸೊ ದಾತನೆ ತೋರಿ ನೀ ಪಾದವ ಬೀರು ಸ್ವಹಿತನೆ ಸಿರಿ ಲೋಲನೆ ನೀಕರುಣಿಸಿ ಮಾತನೆ 6 ಪಾಲಿಸೊ ಪ್ರಾಣವ ಬಾಲಮುಕುಂದನೆ ಲಾಲನೆ ನೋಡು ಗೋಪಾಲ ಗೋವಿಂದನೆ ತ್ಯಕ್ತ ನಾ ತಾಳು ನೀ ಸಚ್ಚಿದಾನಂದನೆ ಕೀಲನೆ ಹೇಳು ನೀ ಭಕ್ತಿಯ ವಂದನೆ 7 ದೇವರ ದೇವನೆ ಕಾವ ಕರುಣನೆ ಜೀವದ ಜೀವ ನೀ ಸ್ವಾಮಿ ಸರ್ವೇಶನೆ ಭಾವದ ಭಾವ ನೀ ಸಾವಿರ ನಾಮನೆ ಸೇವೆಗೆ ಯೋಗ್ಯನ ಮಾಡು ಸರ್ವೋತ್ಮನೆ 8 ಹಿಂಡ ದೈವಕೆ ಪ್ರಚಂಡ ಪರೇಶನೆ ಗಂಡು ಹೆಣ್ಣಿಗೆ ತಾ ಒಬ್ಬ ಸರ್ವೇಶನೆ ಮಂಡಿ ಮರೆಯಲಿಹನೆ ಮಹೇಶನೆ ಕಂಡುಕಾಂಬ ಸುಖದೋರು ದೇವನೆ 9 ವೇದಕ ನಿಲ್ಕದಾಭೇದ್ಯ ಪುರುಷನೆ ಸಾರ ಸುರಸನೆ ಅದಿಗಿಂದತ್ತಲ್ಯಾನಾದಿ ನಿರ್ವಿಶೇಷನೆ ಹಾದಿದೋರಿಕೊಡೊ ಭಕ್ತಿಗೊಂದೀಶನೆ 10 ಮಹಿಪತಿಗೆ ನೀ ಸ್ವಾಮಿ ಶ್ರೀನಾಥನೆ ಬಾಹ್ಯ ಅಂತ್ರಕೆ ನೀನೆವೆ ಸುದಾತನೆ ಸೋಹ್ಯದೋರಿಕೊಡೊ ಸಾಹ್ಯವುಳ್ಳಾತನೆ ತ್ರಾಹಿಯಂದವನ ಮಾಡು ಸನಾಥನೆ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ರಕ್ಷಿಸೋ ಜಗನ್ನಾಥದಾಸ ರಕ್ಷಿಸೋ ರಕ್ಷಿಸು ಗುರು ಜಗನ್ನಾಥದಾಸ ಪಕ್ಷಿವಾಹನನ ನಿಜದಾಸ ಮು ಮುಕ್ಷು ಮಾರ್ಗವ ತೋರ್ದಧೀಶ ನೀನೆ ಪ್ರ ತ್ಯಕ್ಷ ಪ್ರಹ್ಲಾದನನುಜ- ||ಅಹಾ|| ಈ ಕ್ಷಿತಿಯೊಳು ಸುರಶ್ರೇಷ್ಠನೆನಿಸಿ ವಿ ಶಿಷ್ಟರ ಮನೋಭೀಷ್ಟವನಿತ್ತ ಹರಿದಾಸ 1 ವೇದವಂದ್ಯನ ನಿಜತತ್ತ್ವ ನಿಜ ನಿತ್ಯ (ಸತ್ಯ) ಪೂರ್ಣ ಬೋಧರ ಗ್ರಂಥ ತತ್ತ್ವ ನೀತಿ ತ ಪ್ಪದೆ ಪೇಳ್ದೆ ಮಹತ್ವ ||ಅಹಾ|| ಮೋದಪಡಿಸಿ ಮೋದತೀರ್ಥರ ಮತ ದು ಗ್ಧಾಬ್ಧಿಸುಧೆಯನಿತ್ತ ಬಾದರಾಯಣನ ದಾಸ 2 ಪ್ರಕೃತಿಬಂಧಕರಾದ ಜನರು ನಿನ್ನ ಪ್ರಾಕೃತಗ್ರಂಥನೊಡಿ ಮೋದಿಪರು ಸತತಾ ಪ್ರಾಕೃತನ ತಾ ವಂದಿಪರು ಜನ್ಮ ಸುಕೃತಕ್ಕೆ ತಾವು ಸಾಧಿಪರು ||ಅಹಾ|| ಸಂಸ್ಕøತ ಭಾಷೆಯ ಪ್ರಕರಣಗಳನೆಲ್ಲ ಪ ರಿಷ್ಕøತ ಪಡಿಸಿ ನೀ ಪ್ರಾಕೃತದೊಳು ತೋರ್ದೆ3 ವಿಪ್ರವರೇಣ್ಯನೆ ನೀನು ಜಗದಿ ಅಪ್ರಮೇಯನ ಪ್ರಮೇಯವನ್ನೂ ಅದಕ್ಕೆ ಸಪ್ರಮಾಣಗಳೆಲ್ಲವನ್ನೂ ತೋರಿ ದಿ ಕ್ ಪ್ರದರ್ಶನ ಮಾಡಿ ಇನ್ನೂ ||ಅಹಾ|| ಸ್ವಪ್ರಯೋಜನ ರಹಿತ ಅಪ್ರಮೇಯನ ಮಹಿಮೆ ಕ್ಷಿಪ್ರ ಭೋಧೆಯಾಗಲ್ ತ್ವತ್ಪ್ರಸಾದವನಿತ್ತೆ4 ನಿನ್ನುಪಕಾರದ ಪರಿಯಾ ನಾನು ಜನ್ಮಜನ್ಮಾಂತರಕೆ ಮರೆಯೆ ನೀನೆ ಘನ್ನ ಶ್ರೀಹರಿದಾಸಾಗ್ರಣಿಯೇ ಇನ್ನು ನಿನ್ನ ಹರಿಕಥಾಮೃತಸಾರಕ್ಕೆಣೆಯೇ ||ಅಹಾ|| ಇನ್ನಿಲ್ಲ ನಿನ್ನಂಥ ಘನ್ನ ಕವಿಗಳ ಕಾಣೆ ಪನ್ನಂಗಶಯನ ಶ್ರೀ ವೆಂಕಟೇಶನ ದಾಸಾ 5
--------------
ಉರಗಾದ್ರಿವಾಸವಿಠಲದಾಸರು
ರಕ್ಷಿಸೋ ಪವಮಾನ ಸದ್ಗುರುವರಾ ಪ ಜೀವರ ಬಂಧಗಳಿಂದ ಎಲ್ಲ ಪಾವನ ಮಾಳ್ಪದರಿಂದ ದೇವ ಪಾವನಮೂರ್ತಿಯು ನಿನ್ನ ಮುಖದಿ ಜಗ ತ್ಪಾವನ ಮಾಳ್ಪುದರಿಂದ ಪವನನೆಂಬೋರೆ ನಿನ್ನ ಅ.ಪ ಜ್ಞಾನೈಶ್ವರ್ಯ ವೈರಾಗ್ಯ ನಿನಗೆ ನಿನ್ನ ಸ್ವರೂಪ ಸ್ವಭಾವಕೆ ಯೋಗ್ಯ ನಿಜ ಘನ್ನ ಮಹಿಮ ನಿನ್ನ ಭಾಗ್ಯ | ಆಹಾ ತನು ಚತುಷ್ಟಯದೊಳಗನವರತ ವ್ಯಾಪ್ತನೋ ಇನ್ನೂ ಮುನ್ನೂ ಜಗತ್ಕಾರ್ಯ ನಿನ್ನದೋ ದೇವಾ1 ಬೃಹತಿನಾಮಕ ಕರುಣಾಳು ನಿನ್ನ ದೇಹದಿ ಭಗವದ್ರೂಪಗಳೂ ನಿತ್ಯನೋಡುತ ಅನೇಕಂಗಳು | ಆಹಾ ಬೃಹತಿ ಛಂದಸ್ಸು ಅನ್ನವು ಶ್ರೀಹರಿಗೆ ಛಂದಸ್ಸಿನಿಂದಾಚ್ಛಾದಿತ ತ್ವದ್ಗಾತ್ರನೊ2 ಪ್ರಾಣಾಪಾನ ವ್ಯಾನೋದಾನ ಸಮಾನಾದಿ ಪಂಚಪ್ರಾಣ ಜೀವ ಶ್ರೇಣಿಗಳೊಳಗೆ ನೀ ಪ್ರವೀಣ ಜಗತ್ರಾಣ ನೀನಹುದೋ ಸದ್ಗುಣ |ಆಹಾ ಪ್ರಾಣಾಪಾನದಿಂದ ದೇಹದ ಸ್ಥಿತಿ ಕಾರ್ಯಕ್ಷಣ ತಪ್ಪಲು ಕುಣಪನೆಂದಪರೋ ಈ ದೇಹಕೆ3 ಇಪ್ಪತ್ತೊಂದು ಸಾವಿರದಾರುನೂರು ಶ್ವಾಸ ತಪ್ಪದೆ ಜೀವರು ಮಾಡಿ ಅಹರ್ನಿಶಿ ದೇಹವ ಧರಿಪರೋ ನಿನ್ನ ಒಪ್ಪಿಗೆಯಂತೆ ಸಾಧಿಪರೋ | ಹಾ ಅಹೋರಾತ್ರಿ ಶ್ವಾಸನಿಯಾಮಕ ಜೀವರ್ಗೆ ಅಯುಮಾನವ ನೀವ ಮಾತರಿಶ್ವದೇವಾ 4 ನಿನ್ನಂತರದಿ ಇಟ್ಟು ಅವಸ್ಥಾಭೋಗ್ಯವನಿತ್ತು ತ್ವರದಿ | ಆಹಾ ಪಾವನ ಮೂರ್ತಿಗೆ ಅರ್ಪಿಸುತ್ತ ಶ್ರೀಪತಿ ಕರವ ಮುಗಿದು ನಿಂದಿಹೆ 5 ಪರಿಶುದ್ದ ಸತ್ವಾತ್ಮಕವಾಗಿ ಇನ್ನು ನಿರುತ ಪೂರ್ಣಪ್ರಜ್ಞನಾಗೀ ಜೀವ ಸ ರ್ವರೊಳು ಶುಚಿತಮನಾಗಿ ಇರ್ಪ ಮಾರುತ ನಿನ್ನೊಳು ಅನುವಾಗಿ |ಆಹಾ ಹರಿಯು ನಿನ್ನ ಶುಚಿ ತನುವಿನೊಳಿದ್ದು ಶುಚಿಹೃತ್ ಎಂದು ತಾ ನಿಂದು ನಲಿವನಯ್ಯ6 ಅಂಡಾವರಣದ ಗುಣತ್ರಯ ಕಂಡಿಹೆ ವ್ಯಾಪ್ತಸದ್ಗುಣ ಉ ದ್ದಂಡ ಮಹದ್ರೂಪನೆ ಮಹಘನ್ನ ಇನ್ನು ಮೃಡನಾಪೇಕ್ಷ ಶತಗುಣ | ಆಹಾ ತನುರೂಪದೊಳೆಲ್ಲ ಅಣುರೂಪವಾಗಿಹೆ ತೃಣಮೊದಲು ಸರ್ವಜೀವರೊಳು ವ್ಯಾಪ್ತನೊ7 ಅಂದು ತ್ರಿಕೋಟಿರೂಪದಲಿ ನಿಂತು ನಿಂದ ತ್ರಿವಿಕ್ರಮಾವತಾರದಲೀ ಸೇವೇ ಆ ನಂದದಿ ಸಲಿಸುತ್ತಲಲ್ಲಿ ಇನ್ನು ನಿಂದು ಅಂ ಡದ ಬಹಿರ್ಭಾಗದಲಿ |ಆಹಾ ಅಂಡ ಖರ್ಪರ ಉದ್ದಂಡ ಮೂರುತಿಯೊ 8 ವಾಯುಕೂರ್ಮನಾಗಿ ನಿಂದೇ ಜಗದಾದ್ಯಭಾರವು ಎಲ್ಲ ನಿನ್ನಿಂದೇ ಎಂದು ಕಾಯಜಪಿತ ತರುವ ಮುಂದೇ ನಿನ್ನ ಗಾಯತ್ರೀಪತಿಯ ಪಟ್ಟಕೆಂದೇ | ಆಹಾ ಶ್ರೀಯರಸಾ ಶ್ರೀ ವೇಂಕಟೇಶಾತ್ಮಕ ಉರಗಾದ್ರಿವಾಸವಿಠಲನ ನಿಜದಾಸ 9
--------------
ಉರಗಾದ್ರಿವಾಸವಿಠಲದಾಸರು