ಒಟ್ಟು 5585 ಕಡೆಗಳಲ್ಲಿ , 130 ದಾಸರು , 3539 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೊಂದು ಮನವೆ ಹೊಂದೆÉನ್ನ ಮನವೆ ಪಥ ಬ್ಯಾಗ ಸೇರೆÀನ್ನ ಮನವೆ ಧ್ರುವ ಮೂರೊಂದು ಪಾಲಾಗದಿರೆನ್ನ ಮನವೆ ಮೂರೆರಡು ಬಟ್ಯಾಗದಿರು ಮನವೆ 1 ಪರಿ ಆಗದಿರೆನ್ನ ಮನವೆ ಮೂರೆರಡರಲಿ ಅಡರದಿರು ಮನವೆ 2 ಮೂರು ಸೆರಗ ಹಿಡಿದರೆನ್ನ ಮನವೆ ಮೂರರೊಳಗೆ ತೊಳಲದಿರು ಮನವೆ 3 ಮೂರು ಬಟ್ಟೆಗಳನ್ನು ಮರಿಯೆನ್ನ ಮನವೆ ಮಹಿಪತಿ ಗುರುಪಾದ ಪೊರಿ ಎನ್ನ ಮನª 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹೊನ್ನ ತಾ ಗುಬ್ಬಿ ಹೊನ್ನ ತಾ ಚೆನ್ನ ಗೋಪಾಲ ಚೆಲುವ ಕೃಷ್ಣನ ಕೈಗೆ ಪ. ಆಗಮವನು ತಂದು ಅಜಗಿತ್ತ ಕೈಗೆ ಸಾಗರವನೊತ್ತಿಕ್ಕಿ ಸುಧೆಯಿತ್ತ ಕೈಗೆ ನಾಗಶಯನ ನರಸಿಂಹನ ಕೈಗೆ 1 ಬಲಿಯ ದಾನವ ಬೇಡಿ ಬಂದಂಥ ಕೈಗೆ ಛಲದಿಂದ ಕ್ಷತ್ರಿಯರ ಕೊಂದಂಥ ಕೈಗೆ ಕಲಿ ವಿಭೀಷಣಗಭಯವಿತ್ತಂಥ ಕೈಗೆ ಬಲುಗಿರಿಯ ಬೆರಳಲ್ಲಿ ಆತಂಥ ಕೈಗೆ 2 ಪತಿವ್ರತೆಯರ ವ್ರತವಳಿದಂಥ ಕೈಗೆ ಹಿತವಾಜಿಯನೇರಿ ದುರುಳಮರ್ದನ ಕೈಗೆ ಸತಿ ಶಿರೋಮಣಿ ಲಕ್ಷ್ಮೀಕಾಂತನ ಕೈಗೆ ಚತುರ ಹೆಳವನಕಟ್ಟೆÉ ರಂಗನ ಕೈಗೆ 3
--------------
ಹೆಳವನಕಟ್ಟೆ ಗಿರಿಯಮ್ಮ
ಹೊನ್ನು ಹೆಣ್ಣು ಮಣ್ಣು ಮಾಯೆಯದು ಮೂರು ರೂಪಗಳ ನಾನು ಪೇಳುವೆನು ಹೊನ್ನು ಹೆಣ್ಣು ಮಣ್ಣು ಎಂಬ ಮೂರವುಗಳ್ ಅವುಗಳನು ಹಂಬಲಿಸಿ ಕೆಡಬೇಡ ಮರುಳೆ ನೀನ್ ಅವುಗಳೇ ಮೃತ್ಯುವಿನ ಕಡೆಗೊಯ್ಯುವವುಗಳ್ 52 ಕಷ್ಟದಿಂ ಸೃಷ್ಟಿಯಲಿ ನಗ್ನತೆಯೆ ಸುಂದರವು ಕಷ್ಟದಿಂ ಮರಣದಲಿ ನಗ್ನತೆಯ ದೇಹ ಕಷ್ಟವಿಕ್ಕ್ಕೆಡೆಗಳಲಿ ನಾಸ್ತಿಸುಖ ಮಧ್ಯದಲಿ ಕನಕ ಕನಕವದೆಂದು ಹೊನ್ನ ಪೇಳುವರು53 ಮೋಹಿನಿಯು ತಾನಾಗಿ ದ್ಯೆತ್ಯರನು ವಂಚಿಸಿದ ಮೋಹಿನಿಯು ತಾನಾಗಿ ರುದ್ರ ವಂಚಿತನು ಮೋಹಿನಿಯು ತಾನಾಗಿ ಸುಂದೋಪಸುಂದ ವಧೆ ಮೋಹಿನಿಯು ಪೆಣ್ಣು ಮೋಸವದಲ್ತೆ ಮನುಜ? 54 ಮಣ್ಣಿನಿಂದಲೆ ಹರಿಯು ದೇಹವನು ಸೃಷ್ಟಿಸುವ ಮಣ್ಣೆ ಅನ್ನವದಾಗೆ ಪಾಲಿಸುವ ನಮ್ಮ ಮರಣಕಾಲದಲದುವೆ ಮಣ್ಣನಪ್ಪುವದು ತಿಳಿ ಮಣ್ಣಿಗಾಗಿಯೇ ನೀನು ಹಂಬಲಿಪೆಯೇಕೆ 55 ಪ್ರಾಣದೇವರೆ ನಿನ್ನ ಉಸಿರಾಟ ಕಾರಣರು ಪ್ರಾಣನುಸಿರಾಟವದು ಯಾರಿಂದಲಹದು? ಅವನೆ ಪರಮಾತ್ಮ ತಿಳಿ ದೇವಾಧಿದೇವನವ ನಿನ್ನ ಬಾಳಿಗೆ ಕಾರಣರು ಇಬ್ಬರಹರು56 ಸೂರ್ಯದೇವನು ನೇತ್ರತತ್ವಕ್ಕೆ ಒಡೆಯನವ ಸೂರ್ಯನದು ಕಣ್ಣು ಯಾರಿಂದ ತೋರುವುದು? ಅವನೆ ಪುರುಷೋತ್ತಮನು ಪರಮಾತ್ಮ ಹರಿಯವನು ಆ ವಿಶ್ವರೂಪಿಯೇ ವಿಶ್ವಧಾರಕನು57 ವಾಸದಿಂ ಬೆಳಗಿಸುವ ಕಾರಣದಿ ಭಗವಂತ ವಾಸುದೇವಾತ್ಮಕನು ಸೃಷ್ಟಿಮೂಲನವ ವಸುದೇವಪುತ್ರನಾಗವತರಿಸಿ ಸಿರಿವರನು ಉಡುಪಿಯಲಿ ಪೂಜೆಗೊಂಬನು ನಿಜವ ಪೇಳ್ವೆ 58 ಕೃತಯುಗದ ಭಾರ್ಗವನು ತ್ರೇತೆಯಲಿ ದಾಶರಥಿ ದ್ವಾರಪದ ಕೃಷ್ಣ ನೀನೇಯಿರುವೆ ದೇವಾ ಮಧ್ವವರದನು ನೀನು ಭಾರ್ಗವನ ನೋಡಲ್ಕೆ ಉಡುಪಿಗೇ ಬಂದಿರುವೆ ಪರಮಾತ್ಮ ನೀನು 59 ಪರಶುರಾಮ ಕ್ಷೇತ್ರ ಶ್ರೀಕೃಷ್ಣನ ಕ್ಷೇತ್ರ ಪದ್ಮನಾಭಕ್ಷೇತ್ರ ಶಂಕರಕ್ಷೇತ್ರ ಹಲವಾರು ದೇವತೆಗಳಿಲ್ಲಿ ನೆಲೆಗೊಳ್ಳುತ್ತ ಪಾವನವ ಗೈಯುವರು ಭೂಮಿಯನ್ನಿದನು 60 ತುಲೆಯಲ್ಲಿ ತೂಗಿದಾಗುತ್ತಮವದದರಿಂದ ತುಲು ದೇಶವಿದು ಜಗದಿ ವಿಖ್ಯಾತವಹುದು ತುಲು ಲಿಪಿಯೆ ಸರ್ವಮೂಲ ಗ್ರಂಥ ಲೇಖನಕೆ ವೇದಾದ್ರಿಯಾಯಿತಿದು ವೇದಾಂತಭೂಮಿ 61 ಮಧ್ಯಗೇಹದ ಭಟ್ಟರಿಂ ಸೇವೆಯ ಪಡೆದು ವಾಯುದೇವೋತ್ತಮನ ಮಗನಾಗಿ ಕೊಡಿಸಿ ಸಜ್ಜನರ ಹೃದಯದಲಿ ಮುಖ್ಯ ತತ್ವವ ತಿಳಿಸೆ ಸರ್ವಜ್ಞ ಮೂರ್ತಿಯನು ತಂದಿರುವೆ ದೇವಾ62 ಪರಶುರಾಮನ ರೂಪದಿಂ ನೀಂ ತಪಗೈದ ಪಾಜಕ ಕ್ಷೇತ್ರದಲಿ ಭಕುತನವತರಿಸೆ ಜ್ಞಾನರೂಪದ ನೀನು ಅವನ ಹೃದಯವ ಪೊಕ್ಕು ಮಧ್ವಮತವನು ನೀನು ಪಸರಿಸಿದೆ ಹರಿಯೆ 63
--------------
ನಿಡಂಬೂರು ರಾಮದಾಸ
ಹೊನ್ನು ಹೆಣ್ಣು ಮಣ್ಣು ಮೂರನು ಬಿಟ್ಟು ಚರಿಸುವವ ಯೋಗಿ ಬಣ್ಣ ಸಣ್ಣ ಸರ್ವಾಭರಣವಿಟ್ಟು ಮೆರೆವನು ಬೋಗಿ ಪ ನಾರಿಯರದನು ಕಂಡು ಥೂ ಎಂದುಗುಳಿ ತೊಲಗುವಯೋಗಿ ಭೋಗಿ ಘೋರ ತಪವ ಚರಿಸಿ ಅಡವಿಸೇರಿ ಕೊಂಬನು ಯೋಗಿ ಭೋಗಿ 1 ಮಾಯೆಯಳಿದು ವಸ್ತುವರಿತು ಚರಿಸುತಿಹನು ಯೋಗಿ ಜಾಯೆ ಸುತರ ಸಿರಿಯ ನೆಚ್ಚಿ ಹಿಗ್ಗುತಿಹನು ಭೋಗಿ ಬಾಯ ಬಿಡದೆ ಮೌನಿಯಾಗಿ ಜಪಿಸುತಿಹನು ಯೋಗಿ ಭೋಗಿ 2 ಕುಲದಲಾವನೆಂದು ಜನಕೆ ತಿಳಿಯ ಬಾರದವನು ಯೋಗಿ ಹೊಳಲಿನೊಳಗೆ ಸುಳಿದು ಸುಳಿದು ನಲಿಯುತಿಹನು ಭೋಗಿ ಚಲನ ಭವನ ಕೋಣೆ ಲಕ್ಷ್ಮೀರಮಣನು ತಾನೆಯಾಗಿ ಒಳಗು ಹೊರಗು ಬೆಳಗುತಿಹನು ಯೋಗಾನಂದನಾಗಿ 3
--------------
ಕವಿ ಪರಮದೇವದಾಸರು
ಹೊಮ್ಮೆಗಳನ್ನು ಹೇಳುವೆನು ಅಮ್ಮ ಕೈ ಹಾಕುವನೆ ಪ ಕತ್ತಲೊಳಗೆ ಬರುತಿರೆ ಹತ್ತಿರ ಮಲಗೆಂದನೆ 1 ಏಸು ಮಾತುಗಳಾಡಿದ ಕೂಸೇನೆ ನಿನ್ನ ಮಗನು 2 ಹುಟ್ಟು ಬತ್ತಲೊಳಿರಲು ಪುಟ್ಟನೆ ನಿನ್ನ ಮಗನು 3 ಸಂದಿಯೊಳಗೆ ಬರುತಿರೆ ನಂದನ ಕಂದನೇನೇ 4 ಎಂತವನೆ ಕೇಳಮ್ಮಾ ತಿಳಿಸುವೆ ನಾನು 5
--------------
ಹೆನ್ನೆರಂಗದಾಸರು
ಹೊಯ್ಯಂದ ಡಂಗುರವ ಪರಂಜ್ಯೋತಿ ಪ್ರಭೆಯ ಭಾಸಿಸುವದು ನೋಡಿ ಹೊ ಅರವ್ಹೆ ಅಂಜನವಾಗಿ ದೋರುತಲದಕೊ ಹೊ ಪರಮ ಪ್ರಕಾಶವು ಪರಿಣಾಮಿಸಿ ನೋಡಿ ಹೊ 1 ಅನಿಮಿಷನೇತ್ರವು ಬಾಗಿಸುವದು ನೋಡಿ ಹೊ ಮನವಿಗೆ ಆರುವಾಗಿ ದೋರುತಲದಕೊಹೊ ನೆನವ ಘನವಾಗಿ ಸೂಸೂತಲಿದಕೊ ಹೊ ಕನಸು ಕಥೆ ಅಲ್ಲ ಕಣ್ಣಾರ ಕಾಂಬೋದು ಹೊ 2 ನಿದ್ರಸ್ಯಕರ್ಣದ ಸಾದ್ಯಶ್ಯ ನೋಡೆಂದು ಹೊ ದ್ವಾದಶ ನಾದವು ಸಾಧಿಸಿ ಕೇಳುದು ಹೊ ಗಾದೆಯ ಮಾತಲ್ಲ ಭೇದಿಸಿ ತಿಳಿಯುದು ಹೊ ಓದುವ ಒಂಕಾರ ನಾದವು ತಿಳಿವದು ಹೊ 3 ಪ್ರಣಮ್ಯ ಮಂತ್ರದ ಪ್ರಚೀದಿನೋಡೆಂದು ಹೊ ಹನ್ನೊಂದು ಹತ್ತುಸಾವಿರದ ನೂರೆಂದು ಹೊ ಕಣ್ಣು ಮುಚ್ಚು ಕುಳಿತು ಮಣಿಯೆಣಿಸುವದಲ್ಲ ಹೊ ಪುಣ್ಯಗತಿಗೈದಿಸುವ ಜಪವಿದು ಹೊ 4 ವಿಶ್ವಹೊಳಗಲ್ಲ ಭಾಸ್ಕರ ಗುರುತಾನೆ ಹೊ ಆಶಿಗೈವವಗಿನ್ನು ಭಾಸಿಸಲರಿಯನು ಹೊ ಮೋಸ ಮುಕುರವಲ್ಲ ಭಾಸಿವ ಪಲ್ಲಟವಲ್ಲ ಹೊ ಹೊಯ್ಯೆಂದ ಡಂಗುರವ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹೊರಗ್ಹೋಗಿ ಆಡಬೇಡವೋ ಕಂದಾ ಮಹಾನಂದಾ ಬಹುಸರಸಿಜಾಕ್ಷಿಯರು ದೂರುವರೋ ಗೋವಿಂದಾ ಬಾ ಮನೆಗೆ ಮುಕುಂದಾ ಪ ಹೆಂಗಸ ಕೊಂದನೆಂಬುವರು ಮನೆ ಅಂಗಳದೊಳಗೆ ಬಚ್ಚಿಟ್ಟು ಕೊಂಬುವರೋಶೃಂಗಾರದಲಿ ಮೋಹಿಸುವರೋ ತಮ್ಮ ಕಂಗಳಿಂದಲಿನೋಡಿ ದೃಷ್ಟಿ ಬಿಡುವರೋ1 ಕಳ್ಳತನವ ಕಲಿಸುವರೋ ಏನ ಬಲ್ಲೆ ಕಂದಮ್ಮ ನೀ ಸುಳ್ಳಕಲಿಸುವರೋಒಳ್ಳೆಯವರಲ್ಲ ಗೋಪಿಯರು ಗ್ರಾಮದಲೆ ನಿಲ್ಲಲು ಕೆಟ್ಟ ಸೊಲ್ಲನಾಡುವರೋ2 ಸುಂದರ ಸೌಭಾಗ್ಯನಿಧಿಯೇ ನಿನ್ನಒಂದು ಕ್ಷಣವು ಬಿಟ್ಟು ಇರಲಾರೆ ಹರಿಯೇ ಇಂದಿರೇಶನಸುರ ದೊರೆಯೇ 3
--------------
ಇಂದಿರೇಶರು
ಹೊರಿಯೋ ನರಹರಿಯೆ ಧ್ರುವ ಕರುಣಾಗುರು ಜ್ಞಾನಸ್ಫುರಣ ಪರಮಪುಣ್ಯಚರಣ ಶರಣರಾಭರಣ 1 ದೂರ ಧರ್ಮದ ಸಹಾಕರ ಕರ್ಮ ಪರಿಹಾರ ನಿರ್ಮಳಾಕಾರ 2 ಧೀರ ಪರಮ ಉದಾರ ಕರುಣಾಸಾಗರ ಗುರು ಮುರಹರ 3 ಅರುಣ ಘನಕೋಟಿ ಕಿರಣ ದೀನ ಉದ್ಧರಣ ಆನಂದಪೂರ್ಣ 4 ದೇವ ದೇವ ಸಂಜೀವ ಭಾವಿಕರ ಕಾವ ಶ್ರೀವಾಸುದೇವ 5 ಮಾತಾ ಮಹಿಪತಿಯ ಪಿತ ದಾತ ನೀನೆ ಶ್ರೀನಾಥ 6
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹೊಲೆಯರಿಲ್ಲದ ಊರೊಳು ಇರಬಾರದು ಪ ಹೊಲೆಯರು ಬೆಳೆದರೆ ಉಣಲುಂಟು ಉಡಲುಂಟು ಅ.ಪ. ಶುಭ ಶೋಭನ ಉಂಟುಹೊಲೆಯರ ನಿಂದಕನು ನಿರ್ಭಾಗ್ಯನುಹೊಲೆಯರಿಗೆ ಉಣಲಿಕ್ಕಿದವನ ಫಲಕ್ಕೆನೆಲೆಗಾಣೆ ನೆಲೆಗಾಣೆ ಧರೆಯೊಳಗೆ ನಾನು 1 ಹೊಲೆಯರು ಮುನಿದರೆ ನೆಲೆಯಿಲ್ಲ ನಿಭ ಇಲ್ಲಹೊಲೆಯರು ಒಲಿದರೆ ಕಷ್ಟವಿಲ್ಲಹೊಲೆಯರೇ ನಮ್ಮ ಸಲಹಲಿ ಸಾಕಲಿ ಎಂದುಫಲ್ಗುಣನ ಸಾರಥಿಯ ಪ್ರಾರ್ಥಿಸಿಕೊಳ್ವರು 2 ಹೊಲೆಯರಿಂದಲಿ ಸಕಲ ದೇವತೆಗಳ ಪೂಜೆಹೊಲೆಯರಿಂದಲಿ ಸಕಲ ಬಂಧು ಬಳಗಹೊಲೆಯರಿಗೆ ಸ್ವಾಮಿ ಮೋಹನ್ನ ವಿಠ್ಠಲಧೊರಿಯೆ ಪಾಂಡವರ ಪ್ರಿಯನೆಂದೆನ್ನು 3
--------------
ಮೋಹನದಾಸರು
ಹೊಸಗಣ್ಣು ಎನಗೆ ಹಚ್ಚಲಿಬೇಕು ಜಗದಂಬಾವಸುದೇವ ಸುತನ ಕಾಂಬುವೆನು ಪ ಭವ ವಿಷಯ ವಾರುಧಿಯೊಳಗೆಶಶಿಮುಖಿಯೆ ಕರುಣದಿ ಕಾಯೆ ಅ.ಪ. ಚಾರು ಚರಣಗಳ ಮೊರೆ ಹೊಕ್ಕೆಕರುಣದಿ ಕಣ್ಣೆತ್ತಿ ನೋಡೆ 1 ಮಂದಹಾಸವೇ ಭವಸಿಂಧುವಿನೊಳಗಿಟ್ಟುಚಂದವೇ ಎನ್ನ ನೋಡುವುದುಕಂದನಂದದಿ ಬಾಲ್ಯದಿಂದ ಸೇರಿದೆ ನಿನ್ನಮಂದರಧರನ ತೋರಮ್ಮ 2 ಅಂದಚಂದಗಳೊಲ್ಲೆ ಬಂಧು ಬಳಗ ಒಲ್ಲೆಬಂಧನಕೆಲ್ಲ ಇವು ಕಾರಣವುಇಂದಿರೇಶನ ಪಾದದ್ವಂದ್ವವ ತೋರಿ ಹೃನ್ಮಂದಿರದೊಳು ಬಂದು ಬೇಗ 3
--------------
ಇಂದಿರೇಶರು
ಹೊಳೆವೊ ಮಂದಿರವ ಪ. ರಂಗಗೆ ರಚಿಸಿದ ಶೃಂಗಾರದ ವೈಕುಂಠ ಮಂಗಳಾದೇವಿಯರು ಇಳಿಯಲಿ1 ವೀತದೋಷಗೆ ದಿವ್ಯ ಸೇತು ದ್ವೀಪವ ರಚಿಸಿ ಪ್ರೀತಿ ಮಡದಿಯರು ಇಳಿಯಲಿ2 ರನ್ನಮಾಣಿಕದ ಅರಮನೆ ಪನ್ನಿಯರು ಬಂದು ಇಳಿಯಲಿ 3 ಪಟ್ಟೆ ಮುತ್ತುಗಳ ಬಿಗಿದು ಇಟ್ಟಾವ ಕನ್ನಡಿ ಧಿಟ್ಟ ತೋರೋದೆ ಜನಕೆಲ್ಲ ಅಷ್ಟು ಮಡದಿಯರು ಇಳಿಯಲಿ 4 ಹಸಿರು ಪಚ್ಚವ ಬಿಗಿದ ಕುಸುರಾದ ಗಿಳಿಬೋದು ದೇವಕಿ ವಸುದೇವ ಬಂದು ಇಳಿಯಲಿ5 ಜತ್ತು ತೋರುವುದು ಜನಕೆಲ್ಲ ಜತ್ತು ತೋರುವುದು ಜನಕೆಲ್ಲ ಸರಸ್ವತಿ ಮತ್ತೆ ಚತುರ್ಮುಖನು ಇಳಿಯಲಿ 6 ಎದ್ದು ತೋರುವುದು ಜನಕೆಲ್ಲ ಎದ್ದು ತೋರುವುದು ಜನಕೆಲ್ಲ ಪಾರ್ವತಿ ರುದ್ರಾದಿಗಳೆಲ್ಲ ಇಳಿಯಲಿ 7 ಕುಂದಣ ರತ್ನಗಳಿಂದ ಹೊಂದಿ ಕಟ್ಟಿದರಮನೆ ಅಂಬರಕೆ ಮ್ಯಾಲೆ ತುಳುಕುವ ಶಚಿದೇವಿ ಇಂದ್ರಾದಿಗಳೆಲ್ಲ ಇಳಿಯಲಿ 8 ರೇವತಿ ಬಲರಾಮರು ಬಂದು ಇಳಿಯಲಿ9 ಒಂಭತ್ತು ಬಗೆ ರತ್ನ ತಂಬಿ ರಚಿಸಿದ ಮನೆ ಅಂಬರಕೆ ಮೇಲೆ ತುಳುಕುವ ಅಂಬರಕೆ ಮೇಲೆ ತುಳುಕುವರತಿದೇವಿಸಾಂಬ ಪ್ರದ್ಯುಮ್ನರು ಇಳಿಯಲಿ10 ಚಂದ ತೋರುವುದು ಜನಕೆಲ್ಲ ಚಂದ ತೋರುವುದು ಜನಕೆಲ್ಲಭಾನು ಮಾನು ಬಂದ ಜನರೆಲ್ಲ ಇಳಿಯಲಿ 11
--------------
ಗಲಗಲಿಅವ್ವನವರು
ಹೋಗಿ ಬರತೇವ ಸಾಗರನ ಮಗಳೆ ಹೋಗಿ ಬರತೇವ ಪ. ರುಕ್ಮಿಣಿದೇವಿ ನಿನ್ನ ದುರ್ಗೆರೂಪವ ಕಂಡು ಅಬ್ಬರಿಸುತಾರೆ ಜನರೆಲ್ಲ ಅಬ್ಬರಿಸುತಾರೆ ಜನರೆಲ್ಲ ಮುಯ್ಯಕ್ಕೆನಿರ್ಭಯದಿಂದ ಬರಬೇಕು ಸಖಿಯೆ 1 ಹಿಂಡು ಹಿಂಡು ಕರೆಸಿ ಕುಣಿಸುತ ಖ್ಯಾತಿಲೆ ಮುಯ್ಯ ತಿರುಗಿಸೆ ಸಖಿಯೆ2 ಹಿಂಡು ಕರೆಸವ್ವ ಸಖಿಯೆ 3 ರಂಭೆ ಸತ್ಯಭಾವೆ ಸಂಭ್ರಮದಿ ಬರುವಾಗ ಒಂಭತ್ತು ವಾದ್ಯ ನಿನಗೆಲ್ಲೆಒಂಭತ್ತು ವಾದ್ಯ ನಿನಗೆಲ್ಲೆ ಮುಯ್ಯಕ್ಕೆಡೊಂಬರ ಡೊಳ್ಳು ಹೊಯಿಸವ್ವ ಸಖಿಯೆ 4 ಹಿಂಡು ಬರಲೆವ್ವ ಸಖಿಯೆ 5 ಆವ್ವ ರುಕ್ಮಿಣಿ ನಿನಗೆ ದಿವ್ಯವಾಹನ ವೆಲ್ಲಿಸಿಂಹ ಶಾರ್ದೂಲ ಕರೆಸವ್ವಸಿಂಹ ಶಾರ್ದೂಲ ಕರೆಸಿ ಏರಿಕೊಂಡುಬಾವಾನ ಹಾಂಗೆ ಬಾರವ್ವ ಸಖಿಯೆ 6 ಕೋಗಿ¯ ಸ್ವರದಂತೆ ರಾಗದಿ ರಾಮೇಶನ ಪಾಡಿ ಕೊಂಡಾಡಿ ಅರಿತಿಲ್ಲಪಾಡಿ ಕೊಂಡಾಡಿ ಅರಿತಿಲ್ಲ ಒಡಗೂಡಿ ಕಾಗೆ ಕೂಗಾಡಿ ಬರಲೆವ್ವ ಸಖಿಯೆ7
--------------
ಗಲಗಲಿಅವ್ವನವರು
ಹೋಗುತಾದೋ ಹೊತ್ತು ಹೋಗುತಾದೋ ಸಾಗಿ ಮುಂಚೆ ಮತ್ತೆ ತಿರುಗಿ ಬಾರದಂತೆ ಪ ಹಿಂದಿನ ಸುಕೃತದಿಂದ ಒದಗಿದಂಥ ಸುಂದರಮಾದ್ಹೊತ್ತು ಎಂದೆಂದು ಸಿಗದಂತೆ 1 ಅರ್ತುಕೊಂಡವರಿಗೆ ಸಾರ್ಥಕಗೊಳಿಸುತ್ತ ಮರ್ತಕರಿಗೆ ಮತ್ತೆ ಗುರ್ತು ತೋರದಂತೆ 2 ಎಷ್ಟೆಷ್ಟೋ ಯೋನಿಯೊಳ್ಹುಟ್ಟ್ಹುಟ್ಟಿ ಬಲಗೋ ಳಿಟ್ಟು ಪಡೆದ ಹೊತ್ತು ನಷ್ಟವಾಗುತ ವ್ಯರ್ಥ 3 ಅಘನಾಶಗೊಳಿಸಿ ಬಹು ಮಿಗಿಲಾದ ಪದವೀನ ಸಿಗದಂಥ ವಸ್ತಿದು ಅಗಲಿ ತಾ ಸುಮ್ಮನೆ 4 ನೇಮವಲ್ಲೆಲೋ ಮತ್ತೆ ಆ ಮಹ ಸಮಯವು ಪಡಿ 5
--------------
ರಾಮದಾಸರು
ಹೋಗುತಿದೆ ಹೊತ್ತು ಬರಿದೆ ವ್ಯರ್ಥವಾಗಿಹರಿಗುರುಗಳ ನೆನೆಯದೆ ಪ. ನರರ ನೂರಮೂವತ್ತೆರಡುಕೋಟಿವರುಷ ದಿವಸವೊಂದೆ ಬೊಮ್ಮಗೆಪರೀಕ್ಷಿಸಲು ಬ್ರಹ್ಮಕಲ್ಪಸಾಸಿರ ಕೋಟಿನರಕದೊಳಗೆ ಬಿದ್ದು ಮರಳಿ ಭವದಿ ಬಂದು1 ಒಂದೊಂದಕೆ ಇಪ್ಪತ್ತೊಂದುಲಕ್ಷ ಯೋನಿಎಂದೆನಿಸುವ ಸ್ವೇದಜ ಉದ್ಬಿಜಬಂದು ಜರಾಯುಜಾಂಡಜ ಕುಲದಿ ಪುಟ್ಟಿನೊಂದೆ ಎಂಬತ್ತುನಾಲ್ಕುಲಕ್ಷ ಯೋನಿಯಲಿ 2 ಮಾಸ ಒಂಭತ್ತು ಮತಿಗೆಟ್ಟು ಗರ್ಭದಿಹೇಸದೆಬಂದು ಜೀವಿಸಿ ಬಳಲಿಮೋಸವನರಿಯದೆ ಮುನ್ನಿನ ಕರ್ಮದಿಘಾಸಿಯಾದೆನೊ ಯೌವನಮದದಿ ಸೊಕ್ಕಿ 3 ಕೆಲಹೊತ್ತು ಚದುರಂಗÀ ಪಗಡೆ ಆಟಗಳಿಂದಕೆಲಹೊತ್ತು ಹಸಿವೆ ನಿದ್ರೆಗಳಿಂದಲಿಕೆಲಹೊತ್ತು ಕಾಕಪೋಕರ ಕತೆಗಳಿಂದಕೆಲಹೊತ್ತು ಪರನಿಂದೆ ಪರವಾರ್ತೆಗಳಿಂದ 4 ಕಾಲವು ಕಡೆಯಾಗಿ ಹರಿ ನಿಮ್ಮನರ್ಚಿಸೆವೇಳೆಯಿಲ್ಲದೆ ಹೋಯ್ತು ಬಂಜೆಯಾಗಿಜಾಲಿಸಿಹೋಗುತಿದೆ ಈ ವಿಧದಿ ಹೊತ್ತು ಬೇಗನೆಪಾಲಿಸಿ ದಯಮಾಡೊ ಸಿರಿಹಯವದನ 5
--------------
ವಾದಿರಾಜ
ಹೋದುದಿನ್ಯಾರಿಗೆ ಹೇಳೋಣ ಹೊಲಮೆದ್ದರಾರಿಗೆ ಹೇಳೋಣ ಪ ಎದ್ದನು ದುರ್ಜನ ಬಿದ್ದಬಿನುಗು ಪ್ರಜೆ ಉದ್ದ ಗುದ್ದಗಳೆಲ್ಲ ಸಮನಾಯಿತು ಇದ್ದ ಹೆಣ್ಮಕ್ಕಳ ಮೈಮೇಲಕೆ ಒಂದು ಉದ್ದಿನ ಕಾಳಷ್ಟು ಚಿನ್ನಗಳಿಲ್ಲ 1 ಕಂಚು ತಾಮ್ರವು ಮಾರಿಹೋಯಿತು ಕೊಂಚ ತಣ್ಣೀರ ಕೊಳ್ಳಲಿಕ್ಕಿಲ್ಲ ಸಂಚ ಕಾರವು ಪ್ರಾಣಕಾಯಿತು ನಾವಿನ್ನು ಪಂಚತ್ವವ ನ್ನೈದಿದರೊಳ್ಳಿತು ಎಂಬರು 2 ಭೂರಿ ಹೇಮರಜತಗಳ ಮಾರಿಯಾಯಿತು ಭಾರಿ ತೆರಿಗೆ ಶ್ರಮಸೀಮೆ ಪ್ರಜೆಗಳಿಗಾಯ್ತು ಭೀಮನ ಕೋಣೆ ಲಕ್ಷ್ಮೀರಮಣನ ನಂಬಿ ಭಿಕ್ಷೆಗೆ ಮನವ ತಾಳಿರಣ್ಣ 3
--------------
ಕವಿ ಪರಮದೇವದಾಸರು