ಒಟ್ಟು 7928 ಕಡೆಗಳಲ್ಲಿ , 135 ದಾಸರು , 4955 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳಂ ಸುಗುಣಾಭಿರಾಮಗೆ ಮಂಗಳಂ ಶ್ರೀರಾಮಗೆ ಪ ಮಂಗಳಂ ಲೋಕಾಭಿರಾಮಗೆ ಮಂಗಳಂ ಗುಣಧಾಮಗೆ ಅ.ಪ. ದಶರಥನ ಸುತನಾಗಿ ಮುನಿವರ ಕುಶಿಕಯಜ್ಞವ ಪಾಲಿಸಿ ಶಶಿಮುಖಿಯ ಸೀತೆಯನು ಒಲಿಸಿದ ದಿಶಿಸುಭಾಸುರ ನಾಮಗೆ 1 ತಂದೆಯಾಜÉ್ಞಯ ಪೊಂದುತಾಗಲೆ ಬಂದು ವನದಲಿ ನೆಲಸಿದ ಛಂದದಿಂದಲಿ ಕಂದಭರತನಿಗಂದು ಪಾದುಕೆ ಇತ್ತಗೆ 2 ದಂಡಕಾವನದಲ್ಲಿ ನೆಲಸುತ ಖಂಡಿಸುತ ರಾಕ್ಷಸರನು ಭಂಡರಾವಣ ಹರಿಸೆ ಸೀತೆಯ ಚಂಡ ಹನುಮನ ಕಂಡಗೆ 3 ವೀರ ವಾಲಿಯ ಕೊಂದು ರಾಜ್ಯವ ಸೂರ್ಯಸುತನಿಗೆ ಪಾಲಿಸಿ ವಾರಿಜಾಕ್ಷಿಯ ಪುಡುಕಲೋಸುಗ ವೀರರನು ಕಳುಹಿಸಿದಗೆ 4 ಮಾರುತಾತ್ಮಜನಿಂದ ಸೀತಾ ನೀರಜಾಕ್ಷಿಯ ವಾರ್ತೆಯಂ ಸಾರಿ ಮದನು ಪೊಂದಿ ದಯದಿಂ ವೀರ ಕಪಿವರಗೊಲಿದಗೆ 5 ಧೀರರಾವಣನನ್ನು ಕೊಂದು ನಾರಿ ಸೀತೆಯನೊಲಿಸುತ ಸಾರಿ ಸಾಕೇತವನು ಮುದದಿಂ ವೀರ ಪಟ್ಟವನಾಳ್ದಗೆ 6 ಜಾನಕೀ ಲಕ್ಷ್ಮೀ ಸಮೇತಗೆ ಮೌನಿವರಗಣ ಸೇವ್ಯಗೆ ಮಾನವಾಂಬುಧಿ ಪೂರ್ಣ ಚಂದ್ರಗೆ ಧೇನುಪುರ ಶ್ರೀರಾಮಗೆ 7
--------------
ಬೇಟೆರಾಯ ದೀಕ್ಷಿತರು
ಮಂಗಳವೆನ್ನಿ ಮಾಲಕ್ಷುಮಿಗೀಗ ಶ್ರೀ- ರಂಗನರಸಿ ರಮಾದೇವಿಗೆ ಬ್ಯಾಗ ಪ ಸಿಂಧುನಂದನೆ ನಂದನಂದನನೆದೆಯಲ್ಲಿ ಹೊಂದಿಕೊಂಡಿರುವಂಥ ಸುಂದರ ಸಿರಿಗೆ 1 ವೈಜಯಂತಿ ಹರಿಯ ಶ್ರೀವತ್ಸದಲ್ಲಿ ಸರಸವಾಗಿರುವಂಥ ವರಮಹಾಲಕ್ಷುಮಿಗೆ 2 ಹೆರಳು ಬಂಗಾರ ರಾಗಟೆ ಗೊಂಡ್ಯ ಕ್ಯಾದಿಗೆ ಅರಳು ಮಲ್ಲಿಗೆಮೊಗ್ಗು ವರವ ಕೊಡೆನಗೆ 3 ರಂಗನರಸಿ ಬೆಳ್ಳಿ ಬಂಗಾರವೆನಗಿತ್ತು ಕಂಗಳಿಂದಲಿ ನೋಡಿ ಮಂಗಳ ನೀಡೆ 4 ಆದಿನಾರಾಯಣನಾನಂತಗುಣ ಪರಿಪೂರ್ಣ- ನಾದ ಭೀಮೇಶಕೃಷ್ಣನರಸಿ ಲಕ್ಷುಮಿಗೆ5
--------------
ಹರಪನಹಳ್ಳಿಭೀಮವ್ವ
ಮಂಗಳವೆನ್ನಿ ಮುದವೆನ್ನಿ ಶೋಭಾನೆ ಪ ಸಿರಿ ಲತಾಂಗಿ ಹುತ್ಕುಮಲಾಲಯ ಕು ಹಸೆಯ ಜಗಲಿಗೇ 1 ಇಂದಿರೆ ಸಹೋದರೆ ಸುನಿಭಾನನೆ ಶ್ರುತಿಗೀತೆ ಮಂಗಳ ದೇವಿ ಹಸೆಗೇಳು 2 ಅತುಲಮಹಿಮ ಅಜರಾಮರಣನೆ ಪತಿತ ಪಾವನ್ನ ಹಸೆಗೇಳೋ 3 ಉದ್ಯದ್ರವಿ ಸನ್ನಿಭೆ ಆಗಮ ವೇದ್ಯಳೆ ವಿನತಾತ್ಮಜ ಧ್ವಜರಿ ನಪ್ರಿಯೆ ಹಸೆಗೇಳು 4 ಸಾರಥಿ ವ್ರಾತೋತ್ತಮ ವ್ರಜಭವ ನಾರೇರ ದಾಮೋದರ ಜಗನ್ನಾಥ ವಿಠ್ಠಲ ಹಸೆಗೇಳೋ 5
--------------
ಜಗನ್ನಾಥದಾಸರು
ಮಂಗಳಾಂಗ ಮನ್ನಿಸು ತಪ್ಪನು ರಂಗನಾಥ ರಕ್ಷಿಸೈ ತಂದೆ ಯೆನ್ನನು ಪ ಅಮಿತ ಕಮಲ ರವಿತನಾಗದ ಮನುಜನೇಕೆ1 ಕಣ್ಣು ಇಲ್ಲದ ರೂಪು ಯಾಕೆ | ರಂಗನಾಥ ಹೊನ್ನು ಇಲ್ಲದ ಬಾಳು ಯಾತಕೆ | ಮುನ್ನ ಮೂಗು ಇಲ್ಲದ ಮೊಗವು ಮಣ್ಣು ತಿಂದು ಹೋದರೇನು ಅಣ್ಣ ನಿನ್ನ ಭಕುತಿ ಇಲ್ಲದ ಸಣ್ಣ ಮನುಜ ಸತ್ತರೇನು 2 ದಾನವಿಲ್ಲದ ಧನವಿದೇತಕೆ | ರಂಗನಾಥ ಜ್ಞಾನವಿಲ್ಲದ ವಿದ್ಯೆ ಯಾತಕೆ ಆಣೆಯಿಲ್ಲದ ಅರಸು ತಾನು ಅಡವಿಪಾಲು ಆದರೇನು ದೀನಬಂಧು ನಿನ್ನ ನಂಬದ ಮಾನಹೀನ ಮನುಜನೇಕೆ 3 ಮಕ್ಕಳಿಲ್ಲದ ಮನೆಯು ಯಾತಕೆ | ರಂಗನಾಥ ಅಕ್ಕರಿಲ್ಲದ ಊಟ ಯಾತಕೆ ಸೊಕ್ಕಿ ನಡೆವ ಬಂಟನೇಕೆ ಮಿಕ್ಕು ಮೀರ್ವ ಶಿಷ್ಯನೇಕೆ ರಕ್ಕಸಾರಿ ನಿನ್ನ ಸೇರದ ಸೊಕ್ಕು ನರ ಜನ್ಮವೇಕೆ ? 4 ಕಾಕು ಮಾಡಿಯೆ ವೈಕುಂಠ ನಗರದೊಡೆಯ ನಾರಸಿಂಹ ಏಕಭಕ್ತಿಯಿಂದಲಿರುವೆ ಏಕೆ ಕೈಯ ಬಿಡುವೆ ದೊರೆಯೆ 5
--------------
ಅನ್ಯದಾಸರು
ಮಂಗಳಾಂಗನ ಭಜಿಸೆ ಹಿಂಗಿಸುವ ಭವವ ಎನ್ನಂಗದೊಳಡಗಿಹನೊ ಶ್ರಿಂಗಾರ ಮೂರುತೀ ಪ. ಧ್ಯಾನಕೆ ತಂದು ನಿಧಾನದಲಿ ಯೋಚಿಸು ಜ್ಞಾನಿಗಳರಸನ ಮಾನಸದೊಳಗೆ ಕಾನನದೊಳು ವೃದ್ಧ ಶಬರಿಯೆಂಜಲನುಂಡು ದಾನಶೀಲನು ರಾಮ ಕೈವಲ್ಯವನಿತ್ತಾ 1 ದುಷ್ಟ ಕಂಸನ ಹರಿಸಲು ಉತ್ಕøಷ್ಟ ಕೃಷ್ಣ ಬರೆ ಸೃಷ್ಟಿಗೊಡೆಯಗೆ ಗಂಧವಿತ್ತಳಾ ಕುಬ್ಜಿ ದಿಟ್ಟ ರೂಪವ ಉಂಗುಷ್ಠದಿಂದೊತ್ತುತ್ತ ಭಕ್ತ ರಿಷ್ಟವನು ಸಲಿಸಲು ಕಷ್ಟವೇ ಹರಿಗೆ 2 ಯಾವಾಗ ಸ್ತುತಿಸಿದರು ಮತ್ತಾವಲ್ಲಿ ಕರೆದರೂ ಧಾವತಿಗೊಂಡು ಬಹ ಶ್ರೀ ಶ್ರೀನಿವಾಸ ಹಾವಭಾವದ ತೆರದಿ ದೇವ ಬಂದೊದಗುವ ಮತ್ತಾವ ದೇವರ ಕಾಣೆ ಶ್ರೀವರನಲದೇ 3
--------------
ಸರಸ್ವತಿ ಬಾಯಿ
ಮಂಗಳಾಂಬಕೀ ವರಲಕ್ಷ್ಮೀ ಮಂಗಳಂ ಜಯ ಪ ಅಂಗಜಾದಿ ಪ್ರೇಮಜನನಿ ಭೃಂಗವೇಣಿಯೆ ಜಯ ಅ.ಪ. ಬಿಂಬರದನವಸನ ಭೂಷ್ಯೆ ಅಂಬುಜಾಂಬಕಿ ಅಂಬ ಪಾಹಿಮಾಂ ಜಯ 1 ಕುಂಕುಮಾಕ್ತ ಫಾಲಶೋಭೆ ಕಿಂಕಿಣೀರವೆ ಪಂಕಜಾತ ಶೋಭಮಾನ ಹಸ್ತಪಲ್ಲವೆ ಜಯ 2 ರತ್ನನಿಚಯ ಭಾಸಮಾನ ರತ್ನಕಿಂಕಿಣೀ ರತ್ನರಾಜಪುತ್ರಿ ಕಮಲೆ ಭಕ್ತವತ್ಸಲೆ ಜಯ 3 ನಿತ್ಯ ನಿನ್ನನು ಯತ್ನದಿಂದ ಧೇನುನಗರ ವಾಸೆ ಪಾಲಿಸು 4
--------------
ಬೇಟೆರಾಯ ದೀಕ್ಷಿತರು
ಮಂಗಳಾರತಿ ಎತ್ತಿರೀತಗೆ ಮಾನಿನೀಯರು ಹರಿಗೆ ಪ ಕೃಷ್ಣಗೆ ಮಾನಿನೀಯರು ಕಂಗಳಿಂದಲೆ ನೋಡಿಸುಖಿಸಿ ಕಮಲಮುಖಿಯರು ಅ.ಪ. ಕುಂಡಲ ಹಾರ ಪದಕ ಧರಿಸಿ ಕುಳಿತಿಹಾಪದಕ ಧರಿಸಿ ಕುಳಿತಿಹಾಸರಸಿಜಾಕ್ಷನೋಳ್ಪಜನನೆ ಹರುಷ ಕೊಡುತಿಹಾ 1 ಕಡಗ ಕಂಕಣ ವಂಕಿ ನಾಗಮುರಿಗೆ ಪೊಳೆವುದುನಾಗಮುರಿಗೆ ಪೊಳೆವುದುಜರದಗೊಂಡೆ ತಾಯತ ಮುತ್ತು ಸಿರಿಯು ತೂಗೊದು 2 ಕಾಲಕಡಗ ರುಳಿಯು ಗೆಜ್ಜೆ ಸಾಲು ಚರಣದಿಗೆಜ್ಜೆ ಸಾಲು ಚರಣದಿಭಾಳ ದನಿಯ ಮಾಡುತಿಹುದು ಕೇಳಿ ಕರ್ಣದಿ 3 ಕನಕ ವಸನ ಹೀರ ಕಾಂಚಿ ಕಟಿಯ ತಟದಲಿಕಾಂಚಿ ಕಟಿಯ ತಟದಲಿಮಿಂಚಿನಂತೆ ಮಿನುಗುತಿಹದೊ ನೋಡಿ ಸುಖದಲಿ 4 ಬೊಟ್ಟು ಹಿಡಿದು ಬಾಲನಿಂದ ಚರಿಸಿದಂದದಿಹಿಡಿದು ಬರಿಸಿದಂದದಿಕೃಷ್ಣ ವಿಷ್ಣು ಜಯದ ಸಿರಿಯು ಕೃಷ್ಣ ಜನ್ಯದೀ 5 ಕರವ ಪಿಡಿದು ಹಯದ ಷಣಶ ತಿರುಗುವಾ 6 ಹರಣ ಹರಣ ಮಾಡಿದಧುರದಿ ಪಾರ್ಥನ ಹೆಸರು ಮಾಡಿ ಹರಿಯ ನಡೆಸಿದಾ7 ಹರಿಯು ಮುಖವ ನೋಡಿ ರಾಜರು ಹರುಷಬಟ್ಟರುರಾಜರು ಹರುಷಬಟ್ಟರುಮುಖವ ದಯದಿ ಮೋಕ್ಷದ ಸಿರಿಯನುಂಡೆಯೋ 8 ನಿತ್ಯ ತಂದು ಸುಖಿಸುವೆ 9
--------------
ಇಂದಿರೇಶರು
ಮಂಗಳಾರತಿ ನಮ್ಮ ರಂಗನಾಥನಿಗೆ ಜಂಗಮಾರ್ಚಿತಪಾದ ಕಲುಷವಿಭಂಗರಂಗನಿಗೆ ಪ ಜಾಜಿಯ ಪುಷ್ಪಂಗಳಂ ದಿವ್ಯ ಸ ಭಾಜ ಭಜಂತ್ರಿಗಳಿಂ ಮೂಜಗದೊಯನೆ ಮುಕ್ತಿಕೃಪಾಕರ ಶ್ರೀಜಯವೆನ್ನುತಲಿ 1 ವಾರುಧಿ ಶಯನನಿಗೆ ದಿವ್ಯ ಸು ಚಾರುಸನಯನಗೆ ನಮ್ಮ ನಾರಿಯರೆಲ್ಲರು ನಮಿಸುವ ಲಕ್ಷ್ಮೀ ನಾರಾಯಣನಿಗೆ 2 ರಾಧಾರುಕ್ಮಿಣಿ ಜಯಪತಿಗೆ ಸಂತೆ ಸರಗೂರೊಳಗಿಹ ನಮ್ಮಯ ಶ್ರೀ ಗುರು ತುಳಸೀರಾಮನಿಗೆ 3
--------------
ಚನ್ನಪಟ್ಟಣದ ಅಹೋಬಲದಾಸರು
ಮಂಗಳಾರತಿಯ ತಂದೆತ್ತಿರೆ ಶುಭಮಂಗಳ ಜಗದಾದಿದೇವಿಗೆ ಪ ಮಧುಕೈಟಭಾಸುರ ಮರ್ದನ ದೇವಿಗೆಮದನ ಕೋಟಿ ರೂಪ ಮಹಾದೇವಿಗೆಸದಮಲ ಬ್ರಹ್ಮರ ಹೃದಯದ ಆತ್ಮಗೆಮದನಾರಿ ಭೂತೆಗೆ ಆರತಿ ಎತ್ತಿರೆ 1 ಭಾನು ಸಾಸಿರ ಕೋಟಿ ತೇಜ ಮಹಾತ್ಮಳಿಗೆದಾನವಾಂತಕಳಾದ ದಯಾಶೀಲಗೆಮಾನನಿಧಿ ಭಕ್ತರನು ಮರೆಯದೇ ರಕ್ಷಿಪಬಾಣಾರಿ ಜನನಿಗೆ ಆರತಿಯನೆತ್ತಿರೆ 2 ರಕ್ಷಬೀಜಾರಿಗೆ ರಾಕ್ಷಸಧ್ವಂಸಿಗೆಭಕ್ತರ ಸಲಹುವ ಬಗಳಾಂಬೆಗೆಮುಕ್ತಿ ಸದ್ಗುರು ಚಿದಾನಂದವಧೂತಗೆಮುತ್ತಿನಾರತಿಯನೆತ್ತಿರೆ3
--------------
ಚಿದಾನಂದ ಅವಧೂತರು
ಮಂಗಳಾರತಿಯ ಪಾಡಿರೆ ಮಾನಿನಿಯರು ಪ ಅಂಧಕನನುಜನ ಕಂದನ ತಂದೆಯಕೊಂದನ ಶಿರದಲಿ ನಿಂದವನಚಂದದಿ ಪಡೆದವನ ನಂದನೆಯಳ ನಲವಿಂದ ಧರಿಸಿದ ಮುಕುಂದನಿಗೆ 1 ರಥವನಡರಿ ಸುರ ಪಥದಲಿ ತಿರುಗುವನಸುತನಿಗೆ ಶಾಪವನಿತ್ತವನಖತಿಯನು ತಡೆದನ ಸತಿಯ ಜನನಿ ಸುತನಸತಿಯರನಾಳಿದ ಚತುರನಿಗೆ 2 ಹರಿಯ ಮಗನ ಶಿರ ತರಿದನ ತಂದೆಯಹಿರಿಯ ಮಗನ ತಂದೆಯ ಪಿತನಭರದಿ ಭುಜಿಸಿದವನ ಶಿರದಲಿ ನಟಿಸಿದವರ ಕಾಗಿನೆಲೆಯಾದಿಕೇಶವಗೆ 3
--------------
ಕನಕದಾಸ
ಮಂಗಳಾರತಿಯೆತ್ತಿ ಪಾಡಿರೆ ರಂಗನಾಥನ ನೋಡಿರೇ ಪ. ಅಂಗನಾಮಣಿಯನ್ನು ಸಲಹಿದ ಪಾಂಡುರಂಗನ ಭಜಿಸಿರೆ ಅ.ಪ. ನೆರೆದಸಭೆಯೊಳು ಸೆರಗನೆಳೆಯಲು ತರಳೆಭೀತಿಯ ತಾಳಲು ದುರುಳನೆರಿಗೆಯ ಸೆಳೆಯಲು ಶರಣು ನೀನೇ ವರದನೆನ್ನಲು ವರವನಿತ್ತಗೆ ಭರದೊಳು ಕರಣವಾರ್ಧಿಗೆ ಮುದದೊಳು 1 ಅಕ್ಷಯಾತ್ಮಕ ರಕ್ಷಿಸೈ ಶ್ರೀವತ್ಸ ದೀನಳ ಮಾನಮಂ ಕಮ ಲಾಕ್ಷ ಬೇಡುವೆ ದೈನ್ಯದಿಂ ರಕ್ಷನೀನೆನೆ ಚಪಲಾಕ್ಷಿ ಆಕ್ಷಣಂ ರಕ್ಷಿಸಿದೈ ಕರುಣದಿಂ ಅಕ್ಷಯಪ್ರದಾನದಿಂ 2 ನಿತ್ಯನಿರ್ಮಲ ನಿರ್ವಿಕಲ್ಪ ನಿತ್ಯತೃಪ್ತನ ಭಜಿಸಿರೆ ಭಕ್ತ್ಯಧೀನನ ಬೇಡಿರೆ ಸತ್ಯವಿಕ್ರಮ ಶೇಷಶೈಲ ನಿಕೇತಗೆ ಜಯವೆನ್ನಿರೇ ಚಿತ್ತಶುದ್ಧಿಯ ಪಡೆಯಿರೇ 3
--------------
ನಂಜನಗೂಡು ತಿರುಮಲಾಂಬಾ
ಮಂಗಳೆಂದು ಪಾಡಿಕೆ ಶ್ರೀರಂಗನಿಗೀಗ ಭೃಂಗಾಲಕಿಯರು ಕೂಡಿ ಶೃಂಗಾರದಿ ಬೇಗ ಪ ದೇವಾಧಿದೇವ ಹರಿಗೆ ದೇವೌಷ ವಂದ್ಯಗೆ ಗೋವರ್ಧನಾದ್ರಿಧರಗೆ ಗೋವೃಂದ ಪಾಲಗೆ ಪವಳಿಸಿದವಗೆ ಭೃಂಗಾಲಕಿಯರು 1 ಮೀನಾಗ ಫಾಣಿಕಿಟಗೆ ಶ್ರೀನಾರಿಸಿಂಹಗೆ ಕ್ಷೋಣಿಯ ತೊರೆದ ದಶಾನನಾರಿಗೆ ಸ್ಥಾಣು ಬಾಣ ಘೋಟಕಧ್ವಜಗೆ ಭೃಂಗಾಲಕಿಯರು 2 ಪ್ರೇಮಾಬ್ಧಿ ಪವನ ಪಿತಗೆ ಹೇಮಾಂಬಕಾರಿಗೆ | ಸಾಮಜೇಂದ್ರ ಪ್ರಿಯಗೆ ತ್ರಿಧಾಮ ದೇವಗೆ ಶಾಮಸುಂದರ ವಿಠಲ ಸುಧಾಮ ಸಖಗೆ ಭೃಂಗಾಲಕಿಯರು 3
--------------
ಶಾಮಸುಂದರ ವಿಠಲ
ಮಗುವು ಕಾಣಯ್ಯ ಮಾಯದ ಮಗುವು ಕಾಣಯ್ಯ ಸುಗುಣಾ ವಾದಿರಾಜರೆ ಮೂಜಗವಾನುದರದೊಳಿಟ್ಟ ಪ ಏಕಾರ್ಣವಾಗಿ ಸಕಲ ಲೋಕವಾಕಾರವಳಿಯಲೂ ಏಕಮೇವಾದ್ವಿತೀಯವೆಂಬಾಗಮಕೆ ಸಮವಾಗೀ ಶ್ರೀಕರಾಂಬುಜದಿಂ ಪಾದಾಂಗುಲಿಯ ಪಿಡಿದು ಬಾಯೊಳಿಟ್ಟು ಶ್ರೀಕಾಂತ ವಟದೆಲೆಯ ಮೇಲ್ಮಲಗಿ ಬ್ರಹ್ಮನ ಪಡೆದಾ 1 ಮಾಯಾಪೂತನೀಯ ಕೊಂದು ಕಾಯವ ಕೆಡಹಿ ಶಕಟನನು ಸಾಯಬಡಿದು ವತ್ಸನ ಧೇನುಕನ ವೃಷಭನ ನೊಯ್ಯನೊದ್ದು ಯಮಳಾರ್ಜುನರಿಗೆ ಸಾಯುಜ್ಯವನಿತ್ತು ತನ್ನ ತಾಯಿಗೆ ತಾ ಮಣ್ಣುಮೆದ್ದು ಬಾಯಿ ಬಿಚ್ಚಿ ತೋರಿಸಿದಾ 2 ಕಡಹದಾ ಮರವನೇರಿ ಸಂಗಡಿಗರೊಂದಿಗೆ ಕಾಳಂದಿಯ ಮಡುವಲಿ ಧುಮುಕಿ ಕಲಕಿ ಜಲವಾ ಆ ಕಾಳಿಂಗನಾ ಪೆಡೆಯ ತುಳಿದು ಜಡಿಯಲವನಾ ಮಡದಿಯರು ಬೇಡಿಕೊಳ್ಳೆ ಕಡಲಿಗಟ್ಟಿ ಬಂದು ಎನ್ನ ತೊಡೆಯ ಮೇಲೆ ಮಂಡಿಸಿದ 3 ಬಳ್ಳಿಗಟ್ಟದುಡಿಯಲ್ಲಿ ಗುಲ್ಲಿಯ ಚೀಲಾವ ಸಿಕ್ಕಿಸಿ ಕಲ್ಲಿಗಟ್ಟ್ಯೊಗರ ಕಂಬಳಿಯ ಕೋಲು ತುದಿಯೊಳು ನಿಲ್ಲಿಸಿ ಹೆಗಲೊಳು ಕೊಂಬು ಕೊಳಲನು ಪಿಡಿದೂದುತ್ತ ಗೊಲ್ಲರೊಡಗೂಡಿ ಆಡುತೆಲ್ಲ ಗೋವುಗಳ ಕಾಯ್ದಾ 4 ಶ್ರುತಿತತಿಗಗೋಚರನು ಚುತಿದೂರನಾದಿಮೂರ್ತಿ ಚತುರ್ಮುಖಾದಿಶೇಷ ದೇವಾರಾಧ್ಯ ದೇವನು ಪತಿ ವೈಕುಂಠಕೇಶವನು ಯತಿಯೆ ನೀ ನೋಡಲು ಶರಣಾಗತನ ತೊಡೆಯೊಳು 5
--------------
ಬೇಲೂರು ವೈಕುಂಠದಾಸರು
ಮಗುವು ಕಾಣಿರಯ್ಯ | ಮಾಯದ | ಮಗುವು ಕಾಣಿರಯ್ಯ ಪ ಸುಗುಣ ವಾದಿರಾಜರೆ ಮೂಜಗವನು ತನ್ನುದರದೊಳಿಟ್ಟಅ ಮಾಯಾ ಪೂತನಿಯ ಕೊಂದು ಕಾಯವ ಕೆಡಹಿ ಶಕಟನ್ನಸಾಯಬಡಿದು ಧೇನುಕನ ವೃಷಭಾಸುರನನೋಯ ನೋಡದ್ಯಮಳಾರ್ಜುನಂಗೆ ಸಾಯುಜ್ಯವನೆ ಇತ್ತು ತನ್ನತಾಯಿಗೆ ತಾ ಮಣ್ಣ ಮೆದ್ದು ಬಾಯ ಬಿಟ್ಟು ತೋರಿಸಿದ1 ಏಕವರ್ಣವಾಗಿಯೆ ಸಕಲಲೋಕವು ಆಕಾರವಳಿಯೆಏಕಮೇವಾದ್ವಿತೀಯನೆಂಬಾಗಮಕೆ ಸರಿಯಾಗಿಶ್ರೀಕರಾಂಬುಜದಿಂ ಪಾದಾಂಗುಲಿಯಂ ಪಿಡಿದು ಬಾಯೊಳಿಟ್ಟುಶ್ರೀಕಾಂತ ವಟಪತ್ರದ ಮೇಲೊರಗಿ ಬ್ರಹ್ಮನ ಪಡೆದ2 ಕಡಹದ ಮರನೇರಿ ಸಂಗಡಿಗರೊಡನೆ ಕಾಳಿಂದಿಯಮಡುವ ಧುಮುಕಿ ಧುಮುಕಿ ಕಲಕಿ ಆ ಕಾಳಿಂಗನಪೆಡೆಯ ತುಳಿದು ಜಡಿಯಲವನ ಮಡದಿಯರು ಬೇಡಿಕೊಳ್ಳೆಕಡಲಿಗಟ್ಟಿ ಬಂದು ತಾಯ ತೊಡೆಯ ಮೇಲೆ ಮಲಗಿದಂಥ 3 ಕಲ್ಲಿಗಟ್ಟಿ ಗೂಡೆಯಲಿ ಗೋಲಿಯ ಚೀಲವನಿಕ್ಕಿಹಿಲ್ಲಿ ಕಟ್ಟೋಗರ ಕಡಕಲಕ್ಕಳೆಯಾ ತುದಿಯಲಿನಿಲ್ಲಿಸಿ ಪೆಗಲೊಳು ಕೊಂಬು ಕೋಲನೆ ಪಿಡಿದುಗೊಲ್ಲರೊಡಗೂಡಿ ನಮ್ಮೆಲ್ಲರ ಗೋವುಗಳ ಕಾಯ್ದ 4 ಪತಿ ವೈಕುಂಠ ಕೇಶವನುಯತಿಯೆ ನೀ ನೋಡಯ್ಯ ಶರಣಾಗತನ ತೊಡೆಯಿಂ ಮಾಯವಾದ 5
--------------
ಕನಕದಾಸ
ಮಟ್ಟುದೊರಿತು-ನಿನ್ನ ಗುಟ್ಟು ಹಾರಿತು ಪ ಸಿಟ್ಟುಗೊಳ್ಳಬೇಡವೆನ್ನ ದೃಷ್ಟಿಯಿಂದ ನೋಡಿ ಕಂಡೆ ಅಷ್ಟಸಿದ್ಧಿಗಳಿದ್ದರೂ ವೊಂದಿಷ್ಟುಕೊರತೆ ಕೃಷ್ಣನೆಂಬ 1 ಹೇಯ ಗುಣವಿಲ್ಲ ಮುನಿ-ಗೇಯ ನಿನ್ನೊಳೆಂಬ ಜನರ ಬಾಯ ಮುಚ್ಚಿಸುವೆನೆಂದತ್ಯಾಯಸಪಡುವನೆಂಬ ||ಮಟ್ಟು|| 2 ಸತ್ಯಕಾಮನಹುದು ನೀನು ಸತ್ಯಸಂಕಲ್ಪನು ನಿನಗೆ ದತ್ಯಧಿಕ-ಕೊರತೆಯೆಂಬ ||ಮಟ್ಟು|| 3 ಜ್ಞಾನವಂತನೆಂದು ಬಹುಮಾನವಂತನಾದರೂ ಅ ಜ್ಞಾನ ಶೂನ್ಯನೆಂಬ ದೊಡ್ಡ ಹಾನಿಯೊಂದಿರುವದೆಂಬ4 ಎಲ್ಲ ವಸ್ತುಗಳುಂಟು ನಿನಗೆ ಪುಲ್ಲನಾಭ ನಿನ್ನ ಬಳಿಯೋ ಳಿಲ್ಲವೆಂಬ ಶಬ್ದಮಾತ್ರವಿಲ್ಲವೆಂಬ ಮಾತು ಬಂದಿಹ5 ಪಾಪವೆಂಬ ಕತ್ತಲೆಗೆ ದೀಪನಾಗಿದ್ದರು ಜನರ ಪಾಪಗಳ ನಪಹರಿಪ ದೀಪನಾ ಬಿಡದು ಎಂಬ ||ಮಟ್ಟು||6 ಜ್ಯೋತಿಗಳಿಗೆಲ್ಲ ಪರಂಜ್ಯೋತಿಯಾಗಿರುವ ನಿನಗೆ ಆ ಜ್ಯೋತಿಗಳೆತ್ತಿದಾರತೀ ಪ್ರೀತಿಯೆಂದು ಜನರು ಪೇಳ್ವ ||ಮಟ್ಟು||7 ಹಾನಿವೃದ್ಧಿ ಶೋಕಮೋಹ ಜ್ಞಾನ ನಿನ್ನೊಳಿಲ್ಲವೆಂಬ ಹೀನವಾಕ್ಯವ ಪೇಳ್ವರೆಲ್ಲ ಮಾನನಿಧಿಗಳೆಂತೆಂಬ ||ಮಟ್ಟು||8 ನಿತ್ಯ ತೃಪ್ತನಾದರೂ ನಿಜ-ಭೃತ್ಯರನ್ನು ಪಾಲಿಸುವ ನಿತ್ಯ ಕರ್ಮದಲ್ಲಿ ಕೃತಕೃತ್ಯನು ನೀನಲ್ಲವೆಂಬ 9 ಕಷ್ಟಪಡಬೇಡವೆನ್ನೊ-ಳೆಷ್ಟು ದುರ್ಗುಣಂಗಳಿಹ ವಷ್ಟನು ವೊಪ್ಪಿಸಿ ನಿನಗಿಷ್ಟನಾಗಬೇಕೆಂಬ ||ಮಟ್ಟು|| 10 ಕ್ಷೀರದಧಿನವನೀತ-ಚೋರನಾಗಿರಲಿ ಗೋಪೀ ಜಾರನಾಗಿರಲಿ ಸಂಸಾರವೈರಿಯು ನೀನೆಂಬ ||ಮಟ್ಟು||11 ಕೊರತೆಯೆಂಬಾಜನರಿಗೆಲ್ಲ-ವರವನಿತ್ತು ಪೊರೆವೆನೆಂಬ ವರದವಿಠಲನೆಂಬ ||ಮಟ್ಟು|| 12
--------------
ಸರಗೂರು ವೆಂಕಟವರದಾರ್ಯರು