ಒಟ್ಟು 547 ಕಡೆಗಳಲ್ಲಿ , 72 ದಾಸರು , 346 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹ್ಯಾಂಗಾದರ್ಹಾಂಗಾಗಲಿ ಎ- ನ್ನಿಂಗಿತವ ನೀ ಬಲ್ಲೆ ರಂಗಯ್ಯಪ ಮಂಗಳಾಂಗ ನೀ ಕೊಟ್ಟು ಸಲಹೋ ಶುಭಾಂಗ ಅ- ನಂಗಜನಕ ಭುಜಂಗಶಯನ ಮಾ- ತಂಗವರದ ಶ್ರೀ ರಂಗನಾಥನೇ1 ದೇವಾ ನಾ ಸದ್ಭಾವದಲ್ಲಿ ನಿನ್ನ ಪಾದ ಪದುಮ ನಿರುತ ಧೇನಿಸುವೆ ಪವಮಾನ ಜೀವೋತ್ತಮ ನೀ ಧರ್ಮೋತ್ತಮನೆನ್ನುವ ಭಾವ ಎನಗಾವಕಾಲದಿ ಇರಲಿ ಬೇಡೆನು ಇತರ ಸಂಪದವಾ 2 ಶ್ರೀಶಾ ಶ್ರೀ ವೆಂಕಟೇಶ ನಿರ್ದೋಷ ಗುಣ ವಾಸನೆ ನಿನ್ನ ದಾಸಜನಭವಪಾಶ ಕ್ಲೇಶ- ನಾಶನವ ಗೈಸಿ ಸಲಹುವುದು ಶೇಷಶಯನ ಶ್ರೀ ರಂಗಶಾಯಿ 3
--------------
ಉರಗಾದ್ರಿವಾಸವಿಠಲದಾಸರು
ಹ್ಯಾಗೆ ದೊರಕೀತು ನಿನ್ನ ಚರಣವು ನಾಗಶಯನನೆನ್ನಂಥ ಪಾಪಿಗೆ ಪ ನೀಗಿ ಹೋಯಿತು ಅರ್ಧವಯವು ಆಗಯೀಗಯಾ ವಾಗಲೋ ಹೋಗುವುದು ದೇಹ ಭೋಗದಾಸೆಯು ನೀಗವಲ್ಲದು ಎನಗೆ ಇನ್ನು ಅ.ಪ ಮನದಕ್ಲೇಶವು ಕಡಿಯವಲ್ಲದು ನೀಚತನದ ನೆನವು ಎನ್ನೊಳಳಿಯವಲ್ಲದು ಸಾಚನಾಗಿ ನಿನ್ನ ಧ್ಯಾನದಿ ಮನವುಯೆಂಬುದು ಕ್ಷಣವು ನಿಲ್ಲದು ಕ್ಷಣವು ಬಿಡದೆ ಅನ್ಯರೊಡವೆಯ ಮನದೊಳನುದಿನ ನೆನೆದು ನೆನೆದು ಘನ ಪಾಪಾತ್ಮನಾಗಿ ಚರಿಸುವೆ ಜ್ಞಾನ ಬಾರದು ಎನಗೆ ಇನ್ನು 1 ಒಡವೆವಸ್ತ್ರದ ಆಸೆ ಬಿಡವಲ್ಲದು ಪಾಪಿಮನವು ಮಡದಿ ಮಕ್ಕಳ ಮಮತೆ ತೊರೀವಲ್ಲದು ಒಡನೆ ತಿಳಿದು ಕೆಡುವ ಕಾಯದ ಮೋಹ ಮರೀವಲ್ಲದು ಜಡಮತಿಯು ಬಿಡದು ಎಡರು ಪ್ರಪಂಚ ತೊಡರಿನೊಳು ಮನ ವಡರಿ ಬಿಡದಲೆ ಮಿಡುಕಿ ಮಿಡುಕಿ ಕಡೆಯುಗಾಣದೆ ಕಷ್ಟಬಡುತಿಹೆ ಬಿಡದು ವಿಷಯದಾಸೆ ಎನಗೆ 2 ದಾಸಜನ ವ್ಯಾಸಂಗ ಮೊದಲಿಲ್ಲ ಪಾಪಿಜನುಮ ದೋಷಗುಣಗಳು ಒಂದುಬಿಟ್ಟಿಲ್ಲ ಒಡನೆನುಡಿದ ಭಾಷೆಗಳನು ತಿಳಿದು ನಡೆಸಿಲ್ಲ ಆಸೆ ಹರಿದಿಲ್ಲ ನಾಶಮಾಡಿತು ಹೇಸದಲೆ ಇನ್ನು ಮೋಸಗಾರನ ಪೋಷಿಸುವುದು ಶ್ರೀಶ ಶ್ರೀರಾಮ ನಿನಗೆ ಕೂಡಿತು 3
--------------
ರಾಮದಾಸರು
(ಅನಂತೇಶ್ವರ ದೇವರನ್ನು ನೆನೆದು)ಯಾಕಿಲ್ಲಿ ಬಂದು ಮಲಗಿದೆಯೊ ಎಲಾ ಹರಿಯೇಲೋಕೋತ್ತಮಾನಂತೇಶ್ವರ ದೇವಾಲಯದಿ ಪ.ಬಿಡದೆ ಪಾಲ್ಗಡಲೊಳಗೆ ಕಡು ವೈಭವದಿ ತಡಿಗೆಝಡಿದು ಬರುತಿಹುದು ಭೋರ್ಗುಡಿಪ ತೆರೆಯಝಡಿವ ನಾದಕೆ ಒಡಂಬಡದೇಕಾಂತದಿ ಬಂದುಮಡದಿ ಶ್ರೀದೇವಿ ಸಹಿತೊಡನೆ ಮಲಗಿದೆಯೋ 1ನೀರೊಳಗೆ ಮುಳುಗಿ ವೇದವÀ ತಂದು ಬೆನ್ನಿನೊಳುಭಾರವನು ಪೊತ್ತು ಬಹಳಾಲಸ್ಯವೋಧಾರುಣಿಯ ಸಲಹೆ ಭೋರ್ಗುಡಿಸಿ ಸ್ತಂಭದಿ ಬಂದಕ್ರೂರತನಕಿದುವೆ ವಿಸ್ತಾರ ಸಮಾಧಾನತೆಯೋ 2ರೂಢಿಗೊಡೆಯ ತಾನಾಗಿ ಮೋಡಿಯೊಳು ಭೂದಾನ-ಬೇಡಿದೆನು ಎಂಬ ನಾಚಿಕೆಯ ಮನವೋಖೋಡಿನೃಪತಿಯರ ಹೋಗಾಡಿಸುತ ಕಾಡಿನೊಳುಕೋಡಗರ ಕೂಡಿ ರಥ ಓಡಿಸಿದ ಬೇಸರವೋ 3ಲೋಲಾಕ್ಷಿಯರ ವ್ರತವ ಹಾಳುಮಾಡುತ ಕಲಿಯಕಾಲದೊಳು ಗೈವಂತಮೇಲುಕಾರಿಯದಕಾಲೋಚಿತವ ಮನದೊಳಾಲೋಚಿಸುತ್ತಹಿಯಮೇಲೆ ಪವಡಿಸಿ ನಿದ್ರಾಲೋಲನಾಗಿಹೆಯೋ 4ಯುಗಯುಗದೊಳವತಿರಿಸ ಜಗದ ಭಾರವನಿಳುಹಿಬಗೆಬಗೆಯ ನಾಟಕದಿ ಮಿಗೆ ಪಟ್ಟ ಶ್ರಮವತೆಗೆಯಲೋಸುಗ ಚರಣಯುಗವ ಮೃದುಕರದಿ ಶ್ರೀಸೊಗಸಿನಿಂದೊತ್ತುವ ಸೊಂಪೊಗರಿತೋ ನಿನಗೆ 5ಲಲಿತ ವೈಕುಂಠದೊಳಗೆ ಜಲಜಭವಮುಖ್ಯಸುರ-ಗಲಭೆಯುಂಟೆಂದಲ್ಲಿ ನಿ¯ದೆ ಈಗಲಲನೆಯಳ ಕೂಡೆ ಸರಸಗಳನಾಡಲು ತನಗೆಸ್ಥಳವಿಲ್ಲವೆನುತಿಲ್ಲಿ ನೆಲಸಿಕೊಂಡಿಹೆಯೋ 6ಸೇರಿರ್ದ ಶರಣ ಸಂಸಾರಿ ನೀನೆಂದುಶ್ರುತಿಸಾರುವುದು ಕರುಣವನು ತೋರೆನ್ನ ದೊರೆಯೇದಾರಿದ್ರ್ಯದೋಷವಪಹಾರಿಸುತ ಇಷ್ಟಾರ್ಥ-ಸೇರಿಸೈ ಶ್ರೀ ಲಕ್ಷ್ಮೀನಾರಾಯಣನೆ ಹರಿಯೇ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಗ್ರಾಮ ಭಾಷೆಯಲ್ಲಿ)ದಂಗೈನಿ ಗೋಪಮ್ಮ ನಿಮ್ಮ ಮಗನೊಂಚುಮನಿಗೆ |ಹಂಗರೀಸು ಬುದ್ಧಿ ಹೇಳುಗಾಗ್ದ ಕೃಷ್ಣೈಯ್ಯಂಗೆ ||ವಂಗಲ್ಸೀ | ಕೇಣ್ಗತಾಯೆ | ಹೇಳ್ಕುತೀನಿಂಪಾದ್ದಂಗೆಂ |ರಂಗಯ್ಯಾನ ಲೂಟಿ ತಡ್ಕಂಬುಕಾತ್ತಿಲ್ಯೇ ನಮ್ ಕೈಯ್ಯಂಗೇ ಪಮೋಳ್ ಬೆಕ್ಕಿನಾಂಗ ಬಂದು ನಮ್ಮ ನೆಂಗಿದ್ದೆಲ್ಲಾ |ಹಾಲ್ ಮೊಸರ್ ಕುಡ್ಕ ಹ್ವಾರ್ | ಕೊರ್ಲಾಣಿ ಸುಳ್ಳಲ್ಲಾ ||ಮಾಳ್ಗಿಲದ್ ತುಪ್ಪ ನೊಂದ್ ಚಿಪ್ಪಾರ್ ಬೆಚ್ಲಿಲ್ಲೇ |ಅಳ್ಗಿಲಿದ್ ಬೆಣ್ಣೆ ಬರ್ಚಿ | ಬಾಯ್ಮೇಲ್ ಹ್ಯಾಕ ಹೋರಲೆ 1ಗೊಲ್ಲರೆಣ್ಗಳ್ ಮನಿಯಂಗಿ ವೃದ್ | ಗುಲ್ಲೆ ಗುಲ್ಲ್ ತಾಯಿ |ಎಲ್ ಗಂಟಿಂ ಕೇಂಡ್ರು ಬರು ಹೈಲೇ ಹೈಲ್ |ಮುಲ್ಲಿಂದ್ ಮುಲ್ಲಿ | ಗ್ ವಾಂಜಿಲಾಡುದೆಂತ್ ಚಲ್ಲೇಚಲ್ಲ್ ||ಮೆಲ್ಲಂಕ್ಯಾಂಡ್ರ ಹೇಳುದ್ ಪೂರ ಸುಳ್ಳೇ ಸುಳ್ಳ್ 2ಶಣ್ಣರಂತ್ರಿ ನಿಮ್ ಮಗ ಪೂತನೀನ್ ಹ್ಯಾಂಕೊಂದ್ರು ||ಶಂಣ್ ಕಾಲಂಗೆ ತೊಳ್ದಿ | ಕಿದಡ್ ಗಾಡಿನ್ಯಾಂಗೆ ಮುರದ್ರ್ |ಮಣ್ ತಿಂದ್ ಬಾಯಾಂಗೆಲ್ಲ | ಲೋಕನ್ಯಾಂಗೆ ತೋರ್ಸ್ರ್|ಕಣ್ ಮಾಯಾಕ ಮಾಡಿ | ಹಾರ್ಸರೆ ತಿರ್ಣವರ್ತನ ತೀರ್ಸರ್ 3ಜಿಡ್ಡಿ ಒರ್ಲಿಗ ಕಟ್ರಕಾಣಿ | ಅಡ್ದೆ ಹ್ಯಾಕ ಎಳ್ದ್ರ್ |ದಡ್ ದಡ್ ಮತ್ತಿಮರು | ಎಯ್ಡ್ ಮುರ್ದುಕೆಡ್ದ್ರು |ಕಡ್ಡಿದೊಣ್ಣೆ ಹಿಡ್ಕ ಆಡೋ ಮಕ್ಕಳಂತ್ರಿ ಕಾಂತ್ |ಗಡ್ಡ ಹಣ್ಣಾದ್ಯತಿಗಳ್‍ವ್ರಿಗಡ್ಡ ಬದ್ದಿಕಿ ಹೋತ್‍ರಿ 4ಸಿಟ್ ಗಂಡಳ್‍ಂದ್ ನನ್ನ ತೊಟ್‍ಕಾ ಮುತ್ ಕೊಟ್ರು |ಹೊಟ್ಟೆ ಮೇಲ್ ಹೊಟ್ಟೆ ಬೆಚ್ಚಿ | ಲೊಟ್ಟಿಂಗ್ ಪಟ್ಟಂಗ್ ಕುಟ್ರು |ಕೆಟ್ಟಾರ್ ಬೈದನನಗಂಡ| ಕೇಂಡ್ರೆ ವಿರಾಣ ಬೆಚ್ಚ್ರೆ |ಸಿಸ್ಟಿಪತಿ ಗೋವಿಂದ್ಮೂರ್ತಿದಾಸರ್‍ಗೆಲ್ಲಾ ಶ್ರೇಷ್ಟ್ರ್5
--------------
ಗೋವಿಂದದಾಸ
ಅನುದಿನಭವಾಬ್ಧಿಯಲ್ಲಿ ಭವತರಂಗ ರಾಶಿಯಲ್ಲಿಮುಳುಗುತಿಹೆ ಕೈಯ ಪಿಡಿಯೊ ಜನಕ ಕೃಷ್ಣಯ್ಯ ಪ.ಶ್ರೀನಿವಾಸ ನಿನ್ನ ಭಕ್ತಿ ಮಾಡದ ಅಘವಂತನೆಂದುಹೀನ ಜನರ್ಪಾಳಕಿಟ್ಟರೇನ ಹೇಳಲೊನೀನು ಪಾಲಿಪ ರಾಜ್ಯದಲ್ಲಜ್ಞಾನಿ ದೇಶಿಗನೊಬ್ಬ ಕೆಡಲುಹಾನಿ ಹೆಚ್ಚಳ ನಿನ್ನದಲ್ಲೆ ದೀನದಯಾಳು 1ಚಿತ್ತವೇಗಕ್ಕವಧಿ ಇಲ್ಲ ಹೊತ್ತುಕೊಂಡು ಕಂಡ ಕಡೆಗೆಸುತ್ತುತಿದೆ ತನ್ನ ದಳವ ಕೂಡಿ ರಂಗಯ್ಯಕರ್ತನಿನ್ನ ಪಾದದೆಡೆಯೆ ಒತ್ತಿ ನೀನಿದನಾಳಬೇಕುಹೆತ್ತ ತಾಯಿ ನೀನೆ ಗಡಾನೆತ್ತಿಕೊಳ್ಳಯ್ಯ 2ಹಳುವಗಳು ದಾರಿಕಾಣೆ ಸೆಳವಿನೊಳಾಶ್ರಯ ಕಾಣೆನಳಿನನೇತ್ರ ನೀನೆ ಕಾಯೊ ಸುಲಭರೊಡೆಯನೆಲೆಯ ತೋರಾತಂಕಹಾರಿ ಒಲಿದು ವರಾಭಯವ ಬೀರಿಒಲಿಯೊ ಪ್ರಸನ್ವೆಂಕಟಾದ್ರಿನಿಲಯ ಉದಾರಿ 3
--------------
ಪ್ರಸನ್ನವೆಂಕಟದಾಸರು
ಅಮ್ಮ ಬಾರೊ ರಂಗಮ್ಮ ಬಾರೊ ಪುಟ್ಟತಮ್ಮ ಬಾರೊ ಮುದ್ದಿನುಮ್ಮ ತಾರೊ ಪ.ಅಯ್ಯ ಬಾರೊಅಜನಯ್ಯಬಾರೊ ಚಿನುಮಯ್ಯ ಬಾರೊ ಬೆಣ್ಣೆಗಯ್ಯ ಬಾರೊ 1ಕಂದ ಬಾರೊ ಪೂರ್ಣಾನಂದ ಬಾರೊ ಸುರವಂದ್ಯ ಬಾರೊ ಬಾಲ್ಮುಕುಂದ ಬಾರೊ 2ಅಣ್ಣ ಬಾರೊ ತಾವರೆಗಣ್ಣ ಬಾರೊ ಎನ್ನಚಿನ್ನ ಬಾರೊ ಶಿಶುರನ್ನ ಬಾರೊ 3ನಲಿದು ಬಾರೊ ಕರುಣಾಜಲಧಿ ಬಾರೊ ಆಡಿಬಳಲ್ದೆ ಬಾರೊ ಕರೆದರೊಲಿದು ಬಾರೊ 4ಶ್ರೀಶ ಬಾರೊ ಹಸುಗೂಸೆ ಬಾರೊಪರಿತೋಷ ಬಾರೊ ಪ್ರಸನ್ವೆಂಕಟೇಶ ಬಾರೊ 5
--------------
ಪ್ರಸನ್ನವೆಂಕಟದಾಸರು
ಆ ರಣಾಗ್ರದಿ ಭೀಮಗಡ್ಡಯಿಪರಾರು? |ವಾರಿಧಿಮೇರೆದಪ್ಪಲು ನಿಲ್ಲಿಸುವವರಾರು?ಪನಾನಾ ದೇಶದ ಭೂನಾಯಕರಿದ್ದರಲ್ಲವೆತಾನು ದುಶ್ಯಾಸನನ ತತ್ತರಿವಾಗ ||ಮೌನಗೊಂಡರಲ್ಲದೆ ಮುಂಕೊಂಡು ಬಿಡಿಸಿದರೆಆನೆಯ ಕೈಯ ಕಬ್ಬಿಗೆ ಅಂಗಯಿಸುವರಾರು? 1ಘುಡುಘುಡಿಸುತ ರಾಯ ಕುರುಪತಿಯನು ಕೆಡಹಿತೊಡೆಗಳನು ಗದೆಯಿಂದ ತುಂಡಿಸುವಾಗ ||ಕಡುಕೋಪದವ ಹಲಧರನೇನ ಮಾಡಿದ?ಬಡವನ ಕೋಪ ದವಡೆಗೆ ಮೃತ್ಯುವಲ್ಲವೆ? 2ಸಂದಿಗೆ ಸಾವಿರ ಸಿಂಹಸತ್ತ್ವದ ಕೀಚಕನಕೊಂದು ಬಿಸುಡುವಾಗ ಮುಂಕೊಂಡರುಂಟೆ? ||ಚೆಂದದಿಪುರಂದರವಿಠಲದಾಸರು ಮನದಂದಕೆ ಬಂದಂತೆ ನಡೆದುದೆಮಾರ್ಗ3
--------------
ಪುರಂದರದಾಸರು
ಆ ಸುಖ ಹರಿಮರೆದವಗಯ್ಯದೋಷಾಂಧಃತಮದೊಳಗೇನು ಸುಖ ಪ.ಕಂಠತ ವ್ಯಸನ ಹೊಲಬಿಲ್ಲದೆ ಧರ್ಮಕಂಟಕಶಾಸ್ತ್ರವಿಚಾರಕಗೆಎಂಟುವೃಷಭಹೂಡಿ ಮಹಾಶ್ರಮಿಸಿ ಬರೆದಂಟು ಬೆಳೆದವನಿಗೇನು ಸುಖ 1ಅನಿರುದ್ಧಗಖಿಳವರ್ಪಿಸಿದಾನಲ್ಪಗುಣದೆ ಮತಿ ದೃಢವಿಲ್ಲದ ಮಾನವಗೆಹಣ ವೆಚ್ಚಿಸಿ ರಿಣದೆಗೆದಿಟ್ಟ ಧಾನ್ಯವತೃಣಸಮ ವಿಕ್ರಿಸಲೇನು ಸುಖ 2ಶಂಖಪಾಣಿಯ ನಿಂದಿಸಿ ಕರ್ಮಶಕ್ತಿಯಶಂಕರ ರವಿಗಣೋಪಾಸಕಗೆಸಂಖ್ಯೆ ಇಲ್ಲದ ವಸ್ತು ನಿಶ್ಶೇಷದಿಸುಂಕಕೆ ತೆತ್ತಿದರಾವ ಸುಖ 3ಆಧ್ಯಾತ್ಮಾನುಭವ ಗುರುಕೃಪೆ ಇಲ್ಲದೆವಿದ್ಯೋನ್ಮತ್ತ ದಯಾಶೂನ್ಯಗೆನದ್ಯೋಲ್ಲಂಘಿಸಿ ದಡದಲಿ ನಾವೆ ಮುಳುಗಿದರೆ ಪ್ರಾಣಿಗಳಿಗೇನು ಸುಖ 4ಪ್ರಸನ್ನವೆಂಕಟ ಪದಸರೋರುಹಗಳಪ್ರಸನ್ನೀಕರಿಸದೆ ಸಾಹಸಬಡುವಅಶುಭದನುಜರು ತಪಮಾಡಿ ತುದಿಯಲಿವಿಷಮಗತಿಗ್ಹೋಗಲೇನು ಸುಖ 5
--------------
ಪ್ರಸನ್ನವೆಂಕಟದಾಸರು
ಆಗಮವ ತಮನೊಯ್ಯೆ | ಅವನ ಪಾತಾಳದಲಿ |ತಾಗಿದಲೆವರಿದು ವೇದಾವಳಿಗಳಾ |ಆಗ ತಂದ್ದತ್ತ ಮಚ್ಛಾಮಾರನೆ ವುದಯವಾಗುತಿದೆವುಪ್ಪುವಡಿಸೊ ಪಹರಿಯ ಭಾಗೀರಥಿ ಪಿತನೆ |ಭಾಗವತ ಜನಪ್ರಿಯನೆ |ಯೊಗಧೆಯ ವಪ್ಪುವಡಿಸೊ ಹರಿಯೆ | ಭಾಗೀರಥಿ ಪಿತನೆ 1ದೇವಾಸುರರು ಶಿಂದ್ಧು | ಮಥನದಲಿ ಗಿರಿ ಮುಳುಗೆ |ದೆವಾ ರಾಕ್ಷಿಸುತಾ ಕ್ಷಿಶನ ಉಳಿದೂ |ಆನೊಯಲು ವಾಗಿರಿಯ | ನಂತ ಕೂರ್ಮನೆ ವುದಯವಾಗುತಿದೆವಪ್ಪುವಡಿಸೊ ಹರಿಯೆ 2ಭೂತಳವ ಕಾದ್ದೊಯಿದ | ಹರಂಣ್ಯಕ್ಷನೆಂಬ ನರಪಾತಳದ |ಲೊರಶಿನಿಲಿಶಿದ ಜಗಂಗಳಾ | ಖ್ಯಾತಿ ಪಡೆದ ಪ್ರತಿಮ |ವರಹಾರೂಶಪನೆ ಸುಪ್ರಭಾತದಲಿವುಪ್ಪವಡಿಸೊ ಹರಿಯೇ 3ಭೂದೇವದೆವರನು | ಭಾಜಿಸುವ ಶಿವುವ ಪ್ರಹ್ಲಾದಗಾ | ಗಾಹವನುಕವಲುಗಿಶಿ ಉಗದೆ | ತೂದ ಕರುಳಿನಮಾಲೆ |ಯಪ್ಪನರಶಿಂಹ ಕಾರುಣೋದಯದೊ ವಪ್ಪವಡಿಸೊ ಹರಿಯೆ 4ಬರಿ ಭಕತಿಯಿಂದ ಮೊರಡಿನೆಲನ ಮಾತು ಕೂಡೆ |ನೆಲ ನಭನೆ ನೀರಡಿಯ ಮಾಡಿ ಬೆಳೆದೆ |ನಳಿನ ಜಾಂಡವನೊಡದೆ | ವಾಮನ ತ್ರಿವಿಕ್ರಮನೆಬೆಳಗಾಯಿತುಪ್ಪವಡಿಸೋಹರಿಯೆ 5ಕಾತ್ರ್ತವಿಯ್ರ್ಯಾರ್ಜುನನ ಕಡಿದು ಕ್ಷತ್ರಿಯ ಕುಮುದು |ಮಾತ್ರ್ತಂಡನಾದೆ ಮಾತೆಯ ಮಾತಿಗೆ ಆತ್ರ್ತಜನಬಂಧುವೆ | ಪರಶುರಾಮನೆ ಬ್ರಾಹ್ಮಿ ಮೂಹೋರ್ತದಲ್ಲಿವುಪ್ಪವಡಿಸೊ ಹರಿಯೆ 6ಪಂಪಾದಿಪನವರದ | ಅಮರಪತಿಯಾದ ಷ್ಕಂಪ್ಪರಾವಣನಗೆಲಿದವನನುಜಗೆ ಸಂತ್ಪಾರಂಪರೆಯಯಿತ್ತರಘುರಾಮದೆಶೆ | ಕೆಂಪಾಯಿತುಪ್ಪ ವಡಿಸೊಹರಿಯೆ 7ಯಿಂದು ರವಿಕುಲಗಳಲಿ | ಜನಿಶಿದಮಜರಾಜ| ಬೃಂದಾರಿಯಾಗಿಭೂಭರವಿಳಿಪಿದೆ | ನಂದನಂದನ ಕೃಷ್ಣ |ಆಂಗಯಗರಗಾಣ ಬಂದವಿದವುಪ್ಪ ವಡಿಸೊ ಹರಿಯೇ 8ತ್ರಿಪುರದಮಕಾರಿಗಳ | ಸತಿಯರಿಗೆವುಪಸತಿಗಳುಪದೆಶಗಳ ತೊಟ್ಟುಭ್ರಮಗೊಳಿಶಿದುತ್ರಿಪುರ ಹತಗಂಬಾದೆ |ತ್ರಿಪುರ ಸಾಧಕ ಜಾದ್ಕ ತಪ ನವಿದೆವುಪ್ಪವಡಿಸೊ ಹರಿಯೆ9ಆಶಿ ಖಾಡವಿಡಿದಾಶ್ವವೇರಿ ಕೋಪದಿ ವಿಷ್ಣು |ಯಶಶಿನಲಿ ಕಲ್ಕ್ಯಾವ | ತಾರನಾದೆ |ಕುಶಿರಿದರಿದಶಸುವೇಪದಶ್ಯೂಗಳಗೆಲಿದೆ | ಬಿಶಿಲಾಯಿತುಪ್ಪವಡಿಸೊ ಹರಿಯೆ 10ಯಿಂದ ಚಂದ್ದ್ರ್ಯಾದಿಗಳ್ ಬ್ರಹ್ಮ ರುದ್ದ್ರಾದಿಗಳುಪೇಂದ್ರಜಯ |ಜಯಯೆನುತ ಬಂದೈಧರೆ | ವೀಂದ್ದ್ರವಾಹನ ಪುರಂದರವಿಠಲಸೌಭಾಗ್ಯ ಸಾಂದ್ದ್ರನಿಧಿ ವುಪ್ಪವಡಿಸೊ ಹರಿಯೆ 11
--------------
ಪುರಂದರದಾಸರು
ಆಟಪಾಟವ ನೋಡಿ ಧನ್ಯರು ರಂಗಯ್ಯನಾಡ್ವಆಟಪಾಟವ ನೋಡಿ ಧನ್ಯರು ಪ.ಹೊಕ್ಕಳಲ್ಲಿರೊ ಮಗನು ಕಂಡರೆನಕ್ಕಾನೆಂಬ ಹೇಯ ಬಿಟ್ಟುಚಿಕ್ಕರೊಡನೆ ನಂದವ್ರಜದಿಮಕ್ಕಳಂತಲಿಪ್ಪ ರಂಗನಾಟ 1ಅಂಗಳದಲ್ಲಿದ್ದ ಪಂಕದಲ್ಲಿಮುಂಗೈಯ ಮುರಾರಿ ಕೃಷ್ಣಸಂಗದೆಳೆಯ ಮಕ್ಕಳೊಡನೆಹಿಂಗದೆ ಬೈಯ್ಯಾಟವಾಡುವಾಟ 2ಚಿನ್ನ ಬಾ ನೀ ಹಸಿದೆಯೆಂದುಚೆನ್ನ ನೀ ಉಣಿಸಿದರೊಲ್ಲದೆಕನ್ನವಿಕ್ಕಿ ಗೊಲ್ಲರ ಮನೆಯಬೆಣ್ಣೆಮೊಸರಸೂರ್ಯಾಡಿಮೆಲ್ಲುವಾಟ3ರಂಬಿಸಿಗೋಪಿನೀಲವರ್ಣದಬೊಂಬೆ ಬಾಲ ತೋಟಿ ಬೇಡೆನೆಕೊಂಬು ಕೊಳಲು ಸೆಳೆದು ಹೆಟ್ಟಿಕುಟ್ಟುವಡೆÉೂಂಬಿಕಾರ ವೀರಧೀರನಾಡುವಾಟ 4ಅಡಗಿದರ್ಭಕರ ಬಲ್ಪಿನಿಂದಲೆಹಿಡಿದುತಂದು ಚಿಣ್ಣಿ ಚಂಡನಾಡುತಬಡಿದು ಸೋಲಿಸಿ ದೂರು ಬರುವ ಮುನ್ನೆಹುಡಿಯ ಹೊರಳೇಳುವ ತೊಂಡೆಕಾರ ದೇವನಾಟ 5ಮೃತ್ತಿಕೆಯನುಂಬ ಮಗನ ಕಂಡುಮತ್ತೆಶೋದೆ ಅಕ್ಕಟೆಂದುತುತ್ತಿಸಿದ ಮಣ್ಣ ತೆಗೆಯಲಾಗಳೆಮತ್ರ್ಯನಾಕವಿಸ್ತಾರ ತೋರಿದ6ಹಲವು ಹಗ್ಗದಿಂ ಕಟ್ಟಿದಗೋಪಿಲಲನೆಗಚ್ಚರಿಯಾಗಿ ಉಲೂಖಲನ ಎಳೆದು ಮತ್ತಿಯ ಮರಗಳಛಲದಿ ಮುರಿದ ವಿಚಿತ್ರ ಚರಿತ್ರನ 7ಕರುಣದೋರಿ ಗೋಪಾಂಗನೇರತೋರದ ಮೊಲೆಯುಂಡ ವರಶಿಶುಗಳಉರುಳಗೆಡಹ್ಯವರೊಳು ನಲಿವದುರುಳಮಾಯಕಾರಖಿಳರೊಡೆಯನ8ಆರ ಪುಣ್ಯವೆಂತಂತೆ ಲೀಲೆಯತೆÉೂೀರಿ ಮುದ್ದು ಮೋಹವ ಬೀರಿದಸಾರಿದ ಭಕ್ತವತ್ಸಲ ನಮ್ಮಜಾರಚೋರ ಪ್ರಸನ್ವೆಂಕಟೇಶನಾಡುವ ಆಟ 9
--------------
ಪ್ರಸನ್ನವೆಂಕಟದಾಸರು
ಆಡ ಹೋಗಲು ಬೇಡವೊ-ರಂಗಯ್ಯ |ಬೇಡಿಕೊಂಬೆನು ನಿನ್ನನು ಪಆಡ ಹೋಗಲುಬೇಡ ಗಾಡಿಕಾರ್ತಿಯರೊಳು |ಕೂಡಿ ಕೆಡಲು ಬೇಡವೊ-ರಂಗಯ್ಯ ಅ.ಪನೀರೊಳು ಮುಳುಗೆಂಬರೊ-ನಿನ್ನನು ದೊಡ್ಡ |ಭಾರವ ಹೊರು ಎಂಬರೊ ||ಕೋರೆದಾಡೆಗಳಿಂದ ಸೀಳಿ ರಕ್ಕಸನೊಡಲ |ಹಾರವ ಹಾಕೆಂಬರೊ-ರಂಗಯ್ಯ 1ಪೊಡವಿಯನಳೆಯೆಂಬರೊ-ನಿನಗೆ ದೊಡ್ಡ |ಕೊಡಲಿಯ ಪಿಡಿಯೆಂಬರೊ ||ಕಿಡಿಗಣ್ಣ ರುದ್ರನ ವರದ ದಶಕಂಠನ |ಮಡುಹಿ ನೀ ಬಾರೆಂಬರೊ-ರಂಗಯ್ಯ 2ಬೆಟ್ಟವನೆತ್ತಂಬರೊ-ನಿನ್ನನು ಬರಿ-|ಬಟ್ಟಾಗಿ ತಿರುಗೆಂಬರೊ ||ಪುಟ್ಟ ತೇಜಿಯನೇರಿ ನಲಿನಲಿದಾಡುತ |ದಿಟ್ಟ ಪುರಂದರವಿಠಲ-ರಂಗಯ್ಯ3
--------------
ಪುರಂದರದಾಸರು
ಇಂಥಾ ದೂರುವುದೊಳಿತಲ್ಲವರೆಮ್ಮ ರಂಗಯ್ಯನು, ಹಾವಳಿ |ಅಂಥಾದು ಏನು ಮಾಡಿದನಮ್ಮ ಎಂದೆಂದಿಗು ನಮ್ಮ ||ಸಂತತಿಯೊಳು ಗುಣವಂತರೇ ಕೃಷ್ಣ ನಿ-ರಂತರ ಬಡವರನೆಂತು ದಣಿಸುವ ಪಕಣ್ಣೇ ಬಿಡುವನು ಬೆದರಿಸೆ ಮಾತರಿಯ ವನದೊಳಗಡಗಿಹ |ಮಣ್ಣು ತಿಂಬುವ ಬಾಯ್ದೆರೆವನಾರ್ಯ ಹಿತಕರ್ಮಗಳರಿಯ ||ಅನ್ನ ತಿನ್ನಲರಿಯ ಬೆಣ್ಣೆ ಮೆಲುವ ಬಲು |ಹೆಣ್ಣು ನೆರೆದು ಮತ್ತನ್ಯರೊಳು ಕಲಹೆ 1ಎಲ್ಲ್ಯಾಡೊದು ದುರ್ಗಂಧವು ಕಠಿಣಾಂಗ ನೆಲಗೆದರುವ ಶ್ರಿಂಗ |ರಿಲ್ಲದೆ ರಹದೆರೆವರ್ಭಕ ರಂಗ ಪಾಪವರಿಯ, ಮಂಗ- ||ರೊಲ್ಲಭ ಅಹಿಫಣೆಯಲ್ಲಿ ಕುಣಿದು ವಸ- |ನಿಲ್ಲದೆ ತಿರುಗುವಗೆಲ್ಲಿದೊ ವಾಚಿ2ಮೀನ ಕೂರ್ಮದಂತ್ಯುದಕದೊಳಗೆ ಆಡುವ ಕೆಸರೊಳಗೆ |ಶ್ರೀನಾರಸಿಂಹ ಸಣ್ಣವರೊಳಗೆ ಆಡುವ ತನ್ನೊಳಗೆ ||ತಾನೇ ಅಗ್ನಿಯ ನುಂಗಿ ನಭಕೇಶಗೆಮಾನವಕೊಟ್ಟಾನೆ ಪ್ರಾಣೇಶ ವಿಠಲನ 3
--------------
ಪ್ರಾಣೇಶದಾಸರು
ಇವನ ಹಿಡಿದುಕೊಂಡು ಹೋಗಲೊ ಜೋಗಿ |ಇವ ನಮ್ಮ ಮಾತು ಕೇಳದೆ ಪುಂಡನಾದನು ಪಆಡುಲಾಡುತ ಬಂದು ಮಡುವಿನೊಳ್ ಮುಳುಗಿದ |ಬೇಡವೆಂದರೆ ಬೆಟ್ಟ ಬೆನ್ನಲಿ ನೆಗಹಿದ ||ಓಡುತೋಡುತ ಬಂದು ದಾಡೆಯಿಂದ ಸೀಳ್ವ |ನೋಡ ಹೋದರೆ ಕಣ್ಣ ತರೆದಂಜಿಸುವ 1ಹುಲ್ಲಲಿ ಬ್ರಾಹ್ಮಣನ ಕಣ್ಣು ಕುಕ್ಕಿದ ಬುದ್ಧಿ ||ಅಲ್ಲವೆಂದರೆ ಕೊಡಲಿಯ ಪಿಡಿದೆತ್ತಿದ ||ಬಿಲ್ಲನು ಎಡದ ಕೈಯಿಂದಲಿ ಎತ್ತಿದ |ಬಲ್ಲಿದಮಾವನ ಶಿರವನರಿದು ಬಂದ2ಬತ್ತಲೆ ಕುದುರೆಯ ಹತ್ತಬೇಡೆಂದರೆ |ಹತ್ತುವ ಶ್ರೀಕೃಷ್ಣ ಚೆಂದದಿಂದ ||ಭಕ್ತವತ್ಸಲ ನಮ್ಮ ಪುರಂದರವಿಠಲನ |ಅತ್ತ ಹಿಡಿದು ಕೊಂಡು ಹೋಗಯ್ಯ ಜೋಗಿ 3
--------------
ಪುರಂದರದಾಸರು
ಉಪ್ಪವಡಿಸಯ್ಯ ಕೃಷ್ಣ ಪ.ಉಪ್ಪವಡಿಸೈ ಬೊಮ್ಮನಪ್ಪ ಭುವನಾವಳಿಯಸ್ವಪ್ಪನಾದಿ ತ್ರಯವನಪ್ಪಿ ಪಾಲ್ಗಡಲ ಮಗಳಪ್ಪಿ ಅಹಿವರನ ಸುಪ್ಪತ್ತಿಗೆಲಿ ಒರಗಿಪ್ಪತಿಮ್ಮಪ್ಪವ್ರಜದಿ ದಯದಿಅ.ಪ.ಅರುಣಮೂಡಣವೇರೆ ತ್ವರಿತ ತಮಕುಲ ಜಾರೆಹರಿದವಭ್ರದ ತಾರೆ ತರಣಿಕರ ಬಳಿ ಸಾರೆಸರಸಿಜವಿಕಸತೋರೆ ಮರುತ ಪರಿಮಳ ಬೀರೆ ನೆರೆದುಹರುಷ ದಿವಿಗಣ ಬೀರೆ ಮೊರೆಯುತಿವೆ ಸುರಭೇರೆಪರಮಹಂಸರು ಮೇರೆ ಮರೆದು ಸ್ಮರಿಸುತಲೈದಾರೆಸರ್ವವೇದ ಘೋಷ ಹರಿಪರವೆನುತಲೈದಾರೆ ಕರುಣದಲಿವಸುಧ್ಯೆರೆದಕಾಷ್ಠಗಂಧಕುಸುಮಸರ ತಂದಿಹಳುಬಿಸಜಲೋಚನ ನಿಮ್ಮ ಸೊಸೆ ವಾಣಿ ಭಾರತಿಯುಲ್ಲಸದಿ ಪೊಂಭಾಂಡದಲಿ ಬಿಸಿನೀರು ತುಂಬಿಹರುಪಶುಪಸುಸುಪರ್ಣವಸನಉರಗೇಶ ರತುನನಾಸನಮಾಲ್ಯಸುರಪತಿಕಲಶ ವಹಿಸಿ ವರುಣಸ್ಮರತಿಲಕಹಸನ ಮಾಡುವ ಪಾವುಗೆಶಶಿಧರಿಸಿ ನಿಂದ ಸಂತಸದಿಸ್ವರ್ಧುನಿಯು ಗೋದೆ ಗೋವರ್ಧಿನಿಯು ಗಾತ್ರೆಅಜನರ್ಧಾಂಗಿ ಸರಸ್ವತಿ ಶ್ರೀವರ್ಧಿನಿಯು ಕಾವೇರಿನಿರ್ದೋಷಿ ಸರಯು ತುಂಗಭದ್ರೆ ಕಾಳಿಂದಿ ನರ್ಮದ್ಯೆಮರ್ದಿತಘೌಘೆಯು ಕುಮುದ್ವತಿ ವಂಜರೆ ಭೀಮೆನಿರ್ಧೂತಕಲಿಮಲಕಪರ್ದಿನಿಯು ತಾಮ್ರಪರ್ಣಿಊಧ್ರ್ವಗತಿಪ್ರದ ನದಿ ಬಂದಿರ್ದವಿದೆ ತೀರ್ಥ ಕ್ರಮಕಿನ್ನರರು ಸುರನಾಯಕ ಮನ್ನೆಯರು ಸಲೆ ದೇವಗನ್ನೆಯರುಕಿಂಪುರುಷಪನ್ನಗರು ವಿದ್ಯಾಧರನಿಕರ ತುಂಬುರರು ನಿನ್ನಗುಣಕೀರ್ತನೆಯ ಮಾರ್ಗೋನ್ನತದಚೆನ್ನ ಭೂಪಾಳಿ ದೇವ ಧನಶ್ರೀ ದೇಶಾಕ್ಷಿಸನ್ನುತವಸಂತ ಮಲಹ ನವೀನ ಮಾಳ್ಪ ಶ್ರೀಘನ್ನ ಸ್ವನಾಮಂಗಳನು ಪಾಡುವರಿದಕೋ ಧನ್ಯ ಸಂಗೀತಲೋಲ4ಸುರಮುನಿ ಭೃಗು ವಸಿಷ್ಠ ನರಪಋಷಿ ಸನಕಾದ್ಯಮರೀಚ್ಯತ್ರಿ ಪುಲಸ್ತ್ಯ ಆಂಗಿರ ಚ್ಯವನ ಸೌಭರಿಯು ಭಾರಧ್ವಾಜಗಸ್ತ್ಯ ಪರಾಶರ ಕಶ್ಯಪ ಜಮದಗ್ನಿ ಗಾಗ್ರ್ಯಮಾರ್ಕಂಡೇಯ ಬಕದಾಲ್ಭ್ಯ ಕರಂಧಮೋದ್ಧಾಲಕನುವರದಾಂಕ ಜಹ್ನುಮುನಿ ವರ್ಣಿಕುಲದಗಣಿತರುನೆರೆನೆರೆದುತುತಿಸಿಸುಖಭರಿತರಾಗುತ ನಿಮ್ಮ ಚರಣದೂಳಿಗಕ್ಷಿತಿಪರೊಳು ಮರುತ ಪ್ರಿಯವ್ರತ ಪ್ರಾಚೀನ ಬರ್ಹಿಪ್ರಥು ಗಯ ಧ್ರುವಿಕ್ಷ್ವಾಕು ದಿತಿಜಸುತ ಮಾಂಧಾತಪ್ರತಿಸಗರ ನಹುಷಬಲಿಶತಧನ್ವಿದೇಹಿ ದಶರಥಶ್ರುತಕೀರ್ತಿ ಶಿಬಿ ದೇವವ್ರತ ಅಂಬರೀಷನು ಭರತದ್ವಯ ಪುರೂರವ ಯಯಾತಿ ರಂತಿದೇವ ಪರೀಕ್ಷಿತನು ಮುಚುಕುಂದ ನಳ ಶತಪುಣ್ಯಶ್ಲೋಕ ನೃಪರತಿನಂದಗೋಕುಲದ ಗೋವಿಂದಗಾರ್ತರು ನಿದ್ರೆಹೊಂದೆದ್ದಾನಂದದಿಂ ದೀಪಗಳ ಪ್ರಜ್ವಲಿಸಿಮಿಂದು ಬ್ರಾಹ್ಮಿಯಲುಟ್ಟು ಪೊಂದೊಡಿಗೆ ಮಣಿದೊಡಿಗೆವಂದಿಸುತ ಗೃಹದೇವರ ದಧಿಮಥಿಸಿ ಬೆಣ್ಣೆಯಇಂದಿರೆರಮಣ ಮೆಲ್ಲಲೆಂದು ತೆಗೆದಿಡಲರುಹಬಂದಿಹರು ಗೋವಳರು ಮುಂದೆದ್ದು ತಮ್ಮ ಏಳೆಂದುಶ್ರೀಪತಿಯೆ ಬ್ರಹ್ಮಾದಿ ತಾಪಸರ ಪ್ರಭು ಏಳುದ್ವೀಪ ದ್ವೀಪಾಂತರದ ಭೂಪರರಸನೆ ಏಳುಕಾಪುರುಷ ಕಾಳ ಕುಮುದಾಪಹರಹರಿಏಳು ಕೋಪಹೇಪಾರ್ಥಸಖಸುಪ್ರತಾಪ ಜಗ ಎರಡೇಳುವ್ಯಾಪಕನೆ ವಿಬುಧಕುಲಸ್ಥಾಪಕನೆ ಮೂರೇಳುಕೂಪಕುಲನಾಶಕ ಚಮೂಪ ಸಂಹರ ಏಳು ದ್ರೌಪದೀ ಬಂಧು ಏಳು 8ಶ್ರುತಿಯ ತರಲೇಳು ಭೂಭೃತವ ಹೊರಲೇಳುಶುಭಧೃತಿಯನಾಳೇಳು ದುರ್ಮತಿಯ ಸೀಳೇಳಮರತತಿಯ ಸಲಹೇಳು ನಿಜಪಿತನ ಕಾಯೇಳು ಮಹಿಸುತೆಗೆಸತಿಯರಾಳೇಳು ಪತಿವ್ರತೆರ ಗೆಲಲೇಳುಕಲಿಖತಿಯ ಕಳಿಯೇಳು ಪಂಡಿತರುಳುಹಲೇಳು ನಮಗತಿಶಯ ಪ್ರಸನ್ನವೆಂಕಟಪತಿ ಕೃಷ್ಣ ಸದ್ಗತಿದಾತ ತಾತಯೇಳೈ 9
--------------
ಪ್ರಸನ್ನವೆಂಕಟದಾಸರು
ಎಂದಪ್ಪಿಕೊಂಬೆ - ರಂಗಯ್ಯ ನಿನ್ನ |ಎಂದಪ್ಪಿಕೊಂಬೆ........................... ಪಎಂದಪ್ಪಿಕೊಂಬೆ ನಾನೆಂದು ಮುದ್ದಾಡುವೆ |ಎಂದಿಗೆ ಸವಿಮಾತನಾಡಿ ನಾ ದಣಿವೆನೊ ಅ.ಪಅರಳೆಲೆಮಾಗಾಯಿ ಕೊರಳ ಪದಕ ಸರ |ತರಳರನೊಡಗೂಡಿ ಬೆಣ್ಣೆಯ ಮೆಲುವನ............... 1ಅಂದುಗೆಪಾಯ್ವಟ್ಟು ಗೆಜ್ಜೆ ಘಿಲುಘಿಲು ಕೆನೆ |ಚೆಂದದಿ ಕುಣಿವ ಮುಕುಂದನ ಚರಣವ................ 2ಹೊನ್ನಿನ ಉಡುದಾರ ರನ್ನದ ಚೌಕುಳಿ |ಚಿನ್ನದುಂಗುರವಿಟ್ಟಜಾಹ್ನವಿಜನಕನ.......................3ಅಪ್ಪಣ್ಣ ಭಾಗವತನ ರೂಪವು ತಾನಾಗಿ |ತುಪ್ಪದ ಬಿಂದಿಗೆ ತಂದ ವಿಠಲನ...................... 4ಪರಿಪರಿ ಭಕುತರ ಮರೆಯದೆ ಸಲಹುವ |ಪುರಂದರವಿಠಲನ ಸಿರಿಪಾದ ಪದುಮನ 5
--------------
ಪುರಂದರದಾಸರು