ಒಟ್ಟು 515 ಕಡೆಗಳಲ್ಲಿ , 73 ದಾಸರು , 464 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೆಳಗುವಿರಿ ನೋಡೆ ದೇವಕುವರರಂತಿಹಿರಿ ಧೀರ ಗಂಭೀರತರ ಭಾವ ತೋರ್ಪುದು ಮುಖದಿ ನಾರು ವಸ್ತ್ರವ ಧರಿಸಿ ತಿರುಗುವಿರಿ ವನದಿ 1 ಕಂದರ್ಪನನು ಪೋಲ್ವ ಕಮನೀಯ ವಿಗ್ರಹರು ವೈರಿ ನಿಗ್ರಹರು | ಪುಟಕ್ಕಿಟ್ಟ ಚಿನ್ನದಂತೆ ಕಾಂತಿರಂಜಿತರು ಪಟುತರಂಗರು ಗಹನವಿಟದಿ ಪರಿವ್ರಾಜಕರು 2 ಆಜಾನುಬಾಹುಗಳು ಆಜಾನು ಜಂಘಗಳು ಆ ಜಟ ಮಂಡಲವು ರಾಜಿಸುತಲಿಹವು ದೃಢವಾದ ನಿಮ್ಮಡಿಗಳಿಡುವ ಧ್ವನಿಗಳ ಕೇಳಿ ಅಡವಿಯೊಡತನ ಪಡೆದ ಸಿಂಹಗಳು ನಡುಗುವುವು 3 ಧರೆಗಿಳಿದು ಬಂದಿರ್ಪ ರವಿ ಚಂದ್ರರಂದದಲಿ ನೆರೆ ಪ್ರಕಾಶಿಕರಾಗಿ ಕಂಗೊಳಿಸುತಿಹಿರಿ ಗುರುತರದ ಕಾರ್ಯತತ್ಪರರಾಗಿ ಬಂದಿರುವ ನರೆÉಭಾವ ತೋರುವುದು ಕರಿಗಿರೀಶನ ದಯದಿ 4
--------------
ವರಾವಾಣಿರಾಮರಾಯದಾಸರು
ಬೆಳಿಯೋ ಬೆಳಿ ಮನವೇ ಬೆಳಿಕಂಡ್ಯಾ ಬೆಳಿ ಮನವೇ ಬೆಳಿ ನಿನ್ನ ಹೊಲವನು | ಇಳೆಯೊಳು ಯಣಿಗಾಣದ್ಹಾಂಗೆ 1 ಗುರುವಿನಭಯ ಕೊಂಡು ಸತ್ವದಾ ಹೊಲ ಹಿಡಿದು | ಜರಿದು ಸಂಗಿಗಳನ್ನೆಲ್ಲಾ 2 ವಿವೇಕವೇಯಂಬಾ ನೇಗಿಲ ಎಂಟು | ಭಾವವೆಂಬೆತ್ತುಗಳಿಂದ 3 ದೃಢಪಾಶದಿಂದಲಿ ಕಟ್ಟಿ ಯಚ್ಚರವೆಂಬಾ | ಒಡನೆ ಶಿಕ್ಷದಿ ನಡೆಸುತಾ 4 ಜ್ಞಾನ ಭಕ್ತಿ ವೈರಾಗ್ಯ ತಾಳದ ಬಲದಿ | ಅನನ್ಯ ಭಾವ ಕೂರಿಗೆಯಿಂದಾ 5 ಗುರು ಕರುಣ ಮಳೆ ಗರೆಯೆ ವೇದಾಂತ ಬೀಜ | ಭರದಿ ಬಿತ್ತಿ ನಾದುವಂತೆ 6 ಅನುಮಾನ ಕಸ ತೆಗೆದು ಬೋಧವ ಯಡಿಹಾಯ್ದು| ಧನಗಾಳ ತುಂಬಿಡುವಂತೆ 7 ವರಕ್ಷೋಭ ಯಂಬಾ ನುಡಿ ಹಕ್ಕಿ ಬರಗುಡದೆ | ಪರಮ ಜಾಗೃತಿಯ ಕವಣಿಯಿಂದಾ 8 ಬೇರೆ ಬೇರೆ ದೋರ್ವುದೆಲ್ಲಾ ವಬ್ಬುಳಿ ಮಾಡಿ | ಸಾರಿಹ ಶೃತಿ ವಾಕ್ಯದಿಂದ 9 ದೋರುವಾ ದೃಶ್ಯ ಹೆಕ್ಕಲ ಬಿಟ್ಟು ವಳಗಿರುವ | ತೂರಿ ಅಹಂಭಾವ ಹೊಟ್ಟವನು 10 ದೈನ್ಯವನು ಹಿಂಗಿ ಬಳಕೊಂಡು ಅನ್ಯರಾ ಮರೆ ಹೋಗದಂತೆ 11 ಪರಿಪೂರ್ಣಾದ ಬಳಿಕ ಒಕ್ಕಲು ತನಕ | ಮರುಳೆ ನೀ ಸಿಕ್ಕದಿರು ಕಂಡ್ಯಾ 12 ಸಂಚಿತ ಸರ್ವ ಬಿಡಿಸಿಕೊ ಸುತ ಪ್ರಭು ಗುರು ಮಹಿಪತಿ ವಲುಮೆಯಿಂದಾ 13
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೇಟೆಯ ನಾಡಿದನೇ | ಶ್ರೀ ಗುರು | ಬೇಟೆಯ ನಾಡಿದನೇ | ಭವದ ಮ | ಮಹಾಟವಿಯೊಳಗಿದ್ದ ಮನವೆಂಬ ಮೃಗದಾ ಪ ಬೋಧ ಕೊಳಲವ | ಸ್ವಾನಂದದಲಿ ಸುಸ್ವರದಲಿ | ತಾನೂದಿ ನಾದವ ಕಿವಿಯೊಳೂಡಿಸಿ ಸು | ಮ್ಮಾನದೀ ನಿಲುವಂತೆ ಮರುಳು ಮಾಡಿದ ಗುರು 1 ಪರಿ ಸಾಧನದಿಂದಲಿ ನವವಿಧ | ಪರಿಯಾದ ಭಕ್ತಿಯ ಪಾಶವನು | ಕೊರಳಿಗೆ ಸಂದಿಸಿ ದೃಢದಿಂದ ಪುನರಪಿ | ಹರಿದಾಡದಂದದಿ ನೆಲೆಗೊಳಿಸಿ ಗುರು 2 ಭಯದಿಂದ ಬೆದರಿ ಭಜ್ಜರಿಕೆಯ ಹಿಡಿದಿರೆ | ಶ್ರಯ ಸುಖದಾಯಕ ನಿಜ ಕರದೀ | ದಯದಿಂದ ಅಭಯವನಿತ್ತು ಬೋಳೈಸಿ ನಿ| ರ್ಭಯ ಮಾಡಿ ಭ್ರಾಂತಿಯ ಚಿಂತಿ ಹರಿಸಿ ಗುರು3 ಸವಿ ಸವಿ ನಾಮಾಮೃತ ಆಹಾರವನಿಕ್ಕಿ | ಜವದಿಂದ ಹೃದಯ ಭೂ ವನದೊಳಗೆ | ತವಕದಿ ವಿಶ್ರಾಂತಿ ಸ್ಥಳದಲಿ ನಿಲ್ಲಿಸಿ | ಅವನಿಲಿ ಸತ್ವ ಚರನ ಬಳಿಯಲ್ಲಿಟ್ಟು ಗುರು4 ಜನವನ ವಿಜನದೊಳಗ ತಾನೇ ತಾನಾಗಿ | ಅನುಮಾನ ಕಳೆಸಿದಾ ಅಂಜುವನಾ | ಅನುದಿನ ಸುಖದೊಳಿಪ್ಪಂತೆ ಮಾಡಿ | ದನು ನಂದನ ನಿಜ ಸಹಕಾರಿ ಮಹಿಪತಿ ಘನಗುರು5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೇಡವೋ ಬ್ರಾಹ್ಮಣ ದ್ರೋಹ ಬೇಡವೋ ಪ ಮಾಡಬೇಡವೋ ನಿನಗೆ | ಕೇಡು ತಪ್ಪದು ಕೊನೆಗೆನಾಡೊಳಗಪಕೀರ್ತಿ | ಗೀಡಾಗಿ ನೀ ಕೆಡ ಅ.ಪ. ಭಾರ ನೀನು - ಅಂಥಅತ್ಯಂತವಲ್ಲವಿದೇನು - ನಿನ್ನ ||ಚಿತ್ತ ದೃಢ ಮಾಡು ಉತ್ತಮ ವಿಪ್ರರವೃತ್ತಿಯ ಸೆಳದು ಉನ್ಮತ್ತನಾಗಿ ಕೆಡ 1 ಸೂಸುವ ನದಿಯೊಳು ಬಿದ್ದು - ಇನ್ನುಈಸಲಾರದೆ ಮುಳುಗೆದ್ದು - ಅಂಜಿ ||ಈಸು ಬುರುಡೆ ಬಿಟ್ಟು ಬೀಸೋ ಕಲ್ಲನೆ ಕಟ್ಟಿಈಸುವ ತೆರನಂತೆ ಭೂಸುರ ದ್ರವ್ಯವು 2 ನೃಗರಾಯನೆಂಬ ಭೂಪತಿಯು - ವಿಪ್ರ-ರಿಗೆ ಗೋದಾನವನಿತ್ತ ಬಗೆಯ ಕೇಳಿ ||ಅಗಲಿ ತಮ್ಮೊಳು ತಾವೆ ಜಗಳ ಪುಟ್ಟಿ ಆ ನೃ-ಪಗೆ ತೊಣ್ಣೆಯಾಗೆಂದ್ಹಗರಣವನೆ ಕೇಳು 3 ರಾವಣನೆಂಬುವ ದುಷ್ಟ - ಅವ-ದೇವತೆಗಳ ಸೆರೆಯಿಟ್ಟ ||ದೇವನರಸಿ ಸೀತಾದೇವಿಯ ನೆಪದಿಂದರಾವಣನ ಕೊಂದು ದೇವತೆಗಳ ಕಾಯ್ದನೊ 4 ಇನ್ನೆಷ್ಟು ಹೇಳಲೊ ಸಾಕ್ಷಿ - ಬ್ರಾಹ್ಮ -ರನ್ನವ ತೆಗೆದರೆ ಶಿಕ್ಷಿ ಮೋ-ಹನ್ನ ವಿಠ್ಠಲರಾಯ ತನ್ನಯ ಭಜಕರಬೆನ್ನ ಬಿಡದಲೆ ಕಾಯ್ವ ಇನ್ನಾದರು ಕೆಡ 5
--------------
ಮೋಹನದಾಸರು
ಬೇಡಿಕೊಂಬೆನೊ ಗೋಪಾಲ ನಿನ್ನ ಬೇಡಿಕೊಂಬೆ ಕರಗಳೆರೆಡ ಪ ಜೋಡಿಸಿ ನಿನ್ನೊಳು ಸುದೃಢ ಭಕುತಿ ಮಾಡಿ ಸತತ ಭಜಿಸುವಂಥ ರೂಢಿ ಎನಗೆ ಕೊಡು ನೀನೆಂದು ಅ.ಪ ಕ್ಲೇಶಪಡಿಸದೆ ಸಲಹೆನ್ನ ಜಗಂಗಧೀಶ ಮರೆಯದೆ ಬಾರದ್ಯಾಕೊ ಕರುಣ ಲೇಶಗುಣನಿಧೆ ಆಶಾಪಾಶ ಬದ್ಧನಾಗಿ ದೇಶ ದೇಶ ತಿರುಗಿ ಕರುಣ ದುರುಳ ವಸುಮತೀಶರೊಳ್ ಬೇಡಿಸದಂತೆ 1 ಇಂದುವzನÀನೆ ಮುನಿವರ್ಯಹೃದರ ವಿಂದಸದನೆ ವರಗೋಪಯುವತಿ ಬೃಂದಮದನನೆ ಇಂದಿರೇಶ ನಿನ್ನ ಪಾದಾರವೃಂದಗಳನು ಹೃದಯವೆಂಬೊ ಮಂದಿರದೊಳಗೆ ನಿಲ್ಲಿಸಿ ಚಿದಾ- ನಂದಮೂರ್ತಿಯ ಪೂಜಿಪೆನೆಂದು 2 ಧೀರ ಚರಣನೆ ಮುರಾರಿ ಧರಣಿ ಭಾರಹರಣನೆ ಭುಜಗೇಶಫಣಿ ವಿದಾರಿ ಚರಣನೆ ಮಾರಜನಕ ನೀರಜಾಕ್ಷ ನಾರಸಿಹ್ಮ ನಾಮಗಿರೀಶ ಸಾರ ಎನಗೆ ತಿಳಿಬೇಕೆಂದು 3
--------------
ವಿದ್ಯಾರತ್ನಾಕರತೀರ್ಥರು
ಬೇಡಿದವರಿಗೆ ದೊರೆವುದೇನೆಲೊ ಸಜ್ಜನರ ಸಂಗ ಬೇಡಿದವರಿಗೆ ದೊರೆವುದೇನೆಲೊ ಪ ಬೇಡಿದವರಿಗೆ ದೊರೆವುದೇನೆಲೊ ಗಾಢಮಹಿಮನ ಭಕ್ತರಾವಾಸ ಸುಕೃತ ಫಲವು ಕೂಡಿಬಂದ ಕೋವಿದರಿಗಲ್ಲದೆ ಅ.ಪ ದೃಢಕರಡಿಯಿಟ್ಟ ಭುವನವೆ ಕ್ಷೇತ್ರ ದೃಢಕ ಜನರಡಿಯೇ ಸುಯಾತ್ರಾ ಸಿದ್ಧ್ದಾಂತ ಮಾತಿದು ದೃಢಕರಾಡಿದ ಮಾತೆ ನಿಜಮಂತ್ರ ಇದೆ ಮೂಲಶಾಸ್ತ್ರ ದೃಢಕರು ನಿಂತ ಸ್ಥಳವೆ ಬದರಿ ದೃಢಕರು ಕೂತಸ್ಥಾನ ಮಧುರೆ ದೃಢಕರೊಟನಾಟ ಲಭ್ಯವೆಂದರೆ ಪಡೆದ ಪುಣ್ಯ ಮಹಭಾಗ್ಯಗಲ್ಲದೆ 1 ಭಕ್ತ ಜನಮಿಂದದೆ ತೀರ್ಥವು ನಿಖಿಲರರಿವುದೆ ಭಕ್ತ ಜನರುಂಡಸ್ಥಳ ಸಿರಿಯಾವಾಸವು ದೊರೆಯದಾರಿಗೆ ಭಕ್ತ ದರ್ಶನ ಪರಮ ಮಂಗಲವೋ ಶುಭಕೆ ಶುಭಕರವು ಭಕ್ತಜನರಿಹ್ಯ ಸಭೆಯೆ ಹರಿಸಭೆ ಭಕ್ತರೊಪ್ಪಿಗೆ ಹರಿಯ ಒಪ್ಪಿಗೆ ಮೃತ್ಯುದೂರ ಮಾಳ್ಪ ಸರ್ವೋತ್ತಮನ ಭಕ್ತರ ಪ್ರೇಮದೊಲುಮೆ 2 ದಾಸರ್ವಾಸವೆ ಕಾಶಿಕೇಂದ್ರವು ಸತ್ಯ ಸತ್ಯವಿದು ದಾಸರಿರುವುದೆ ಪರಮ ವೈಕುಂಠವು ಮತ್ರ್ಯರರಿವುದೆ ದಾಸಗಿತ್ತದ್ದು ಹರಿಗೆ ಅರ್ಪಣವು ಪರಮ ಸುಖಕರವು ದಾಸರೊರ್ಣವು ತೀರದಾರಿಗೆ ಶ್ರೀಶ ಶ್ರೀರಾಮನಡಿಯಕಮಲ ದಾಸರಿಜನರಡಿ ಪಿಡಿದು ಸುಸಹ ವಾಸದಿರುವುದೆ ಮುಕ್ತಿಸಂಪದ3
--------------
ರಾಮದಾಸರು
ಬೇಡುವೆನೋ ಗೋವಿಂದಾ ಬೇಡಬೇಡವೀ ಬಂಧ ಪ ಪಾಡಿಪಾಡಲಾನಂದಾ ನೋಡಿ ನೋಡಲತ್ಯಾನಂದ ಅ.ಪ ಕಡವರವೀಯಬೇಡ ಪೊಡವಿಯ ಸುಖಬೇಡ ಕಡುಲೋಭ ಮೋಹಬೇಡ ದೃಢ ಭಕ್ತಿಯನು ಮಾತ್ರ 1 ನರಕದ ಬಾಧೆಯು ಪರಿಹರಿಸಲು ಬೇಡ ನಿರುತ ನಿಮ್ಮಯ ನಾಮ ಸ್ಮರಣೆ ಸುಖವು ಮಾತ್ರ 2 ಜನನ ಮರಣಗಳ ಕೊನೆಗಾಣಿಸಲಿ ಬೇಡ ಅನಿತು ಜನುಮದಿ ನಿನ್ನ ನೆನೆವ ಬುದ್ಧಿಯು ಮಾತ್ರ 3 ಮಾಂಗಿರಿಯರಸನೆ ತುಂಗ ಕೃಪಾಂಗನೆ ಹಿಂಗದೆ ನೀನೆನ್ನಂತರಂಗದೊಳಿರುವುದ ಮಾತ್ರ4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೊಮ್ಮ ಮೃಡ ಮುಖ್ಯ ಸುರರಿಗೆಡೆಯನೆನಿಪ ಮುದ್ದು ಉಡುಪಿಯ ಕೃಷ್ಣನ ಪ. ಪೊಡವಿಯೊಳಗೆ ತನ್ನ ಅಡಿಗಳ ಧೇನಿಪ-ರಡಿಗಡಿಗವರ ವಾಂಛಿತ ವÀಸ್ತುವಕಡೆದು ಕೊಡುವೆನೆಂದು ಕಡೆಗೋಲ ನೇಣನೆಪಿಡಿದಿಹ ಸಿರಿಯರಾ ದೃಢಕೆ ಮೆಚ್ಚಿದನ 1 ಹರಿಸರ್ವೋತ್ತಮನೆಂಬೊ ಪರಮಸಿದ್ಧಾಂತಕ್ಕೆ ಮ-ಚ್ಚರಿಸುವ ಕುಮತದ ಕುಜನರಭರದಿ ಬಂಧಿಸಿ ಬನ್ನಂಬಡಿದು ಶಿಕ್ಷಿಪೆನೆಂದುವರಪಾಶದಂಡಧಾರಿಯಾಗಿ ತೋರಿಪ್ಪನ 2 ಭಕ್ತವತ್ಸಲನೆಂಬೊ ಸುಲಭೋಕ್ತಿಯನು ಬಂದನಿಕರಕ್ಕೆ ಪೇಳಲು ದ್ವಾರಕಾಪುರಿಯಸುಖತೀರ್ಥಮುನಿಗೆ ಸುಖಕರನಾಗಿ ಬಂದಅಕುಟಿಲ ಕೃಷ್ಣ ಹಯವದನರಾಯನ 3
--------------
ವಾದಿರಾಜ
ಭಕುತಿ ಸುಲಭವಲ್ಲ ಶ್ರೀ ಹರಿ ಭಕುತಿ ಸುಲಭವಲ್ಲ ಪ ಮುಕುತಿಗೆ ಯುಕುತಿ ಬೇರೆಯಿಲ್ಲ ಶ್ರೀ ಹರಿ ಅ.ಪ ಉರುತರ ಕ್ಲೇಶಕೆ ಗುರಿಯಾಗುತಿರಲು ಹರಿ ಹರಿಯೆನ್ನುತ ಕಿರುಚುತ ಸತತವು ಕ್ಲೇಶ ಹರಿಯನು ಸುಲಭದಿ ಮರೆವುದು ಭಕುತಿಯ ತರವಾಗುವುದೇ 1 ಭುವಿಯಲಿ ಬಹು ವಿಧ ಸುವಿನೋದಗಳ ಸವಿಯನು ಪೊಂದಲು ವಿವಿಧ ಭಾಗ್ಯಗಳ ಸುವಿನಯದಲಿ ಮಾಧವನನು ಬೇಡಲು ಹವನ ಹೋಮಗಳು ಭಕುತಿಯಾಗುವುದೇ 2 ಶ್ರವಣ ಮನನ ವಿಧಿಧ್ಯಾಸಗಳಿಂ ಸಿರಿಪತಿ ಗುಣಗಣದಲಿ ದೃಢಮತಿಯನು ಮಾಡುತ ತನುಮನಗಳನÀರ್ಪಣೆಯನು ಮಾಡುತ ಮನಸಿಜ ಜನಕ ಪ್ರಸನ್ನನಾಗುವಂಥ 3
--------------
ವಿದ್ಯಾಪ್ರಸನ್ನತೀರ್ಥರು
ಭಜಿಸಿ ಬದುಕೆಲೋ ಮಾನವ ಶ್ರೀಹರಿನಾಮ ತಾರಕಮಂತ್ರವ ಪ. ದುರಿತಕೋಟಿಗಳಂ ಪರಿಹರಿಸಿ ನಿಜಪದ ಸರಸೀರುಹದೊಳಗಿರಿಸಿ ಪೊರೆವನ 1 ದುರ್ಜನ ನಿಂದೆಗೆ ಲಜ್ಜಿತನಾಗದೆ ದುರ್ಜನ ದಮನನ ಧ್ಯಾನದೇ ನೀಂ 2 ಪೊಗಳಲು ಹಿಗ್ಗದೆ ತೆಗಳಲು ತಗ್ಗದೆ ಬಗೆಕುಂದದೆ ಸಮ್ಮೋದದೇ ನೀಂ 3 ಅಷ್ಟಮದಂಗಳ ಕಟ್ಟುತೆ ದೃಢದಿ ದೃಷ್ಟಿನಿಲ್ಲಿಸಿ ನಿಷ್ಠೆಯೋಳ್ ನೀಂ4 ದೋಷರಹಿತ ಶ್ರೀಶೇಷಗಿರೀಶನ ದಾಸರವಾಸನೆನ್ನಿಸಿ ಸಂತತಂ 5
--------------
ನಂಜನಗೂಡು ತಿರುಮಲಾಂಬಾ
ಭಜಿಸುವೆನು ನಾನಿನ್ನ ಭಕ್ತಾಧೀನ ಅಜಹರನುತ ಅಗಣಿತಚರಿತ ಹರಿ ಪ ಅಂದು ಮುನಿಸತಿ ಶಾಪದಿಂದ ಶಿಲೆಯಾಗಿರೆ ಛಂದದಿ ಚರಣಾರವಿಂದ ಸ್ಪರ್ಶವಾಗಲು ಕುಂದು ಪರಿಹಾರವಾಗಿ ಸುಂದರ ಮಣಿಯಾದಳೆಂದು ನಿಮ್ಮಯ ಪಾದದ್ವಂದ್ವ ಬಿಡದಲೆ ನಾ 1 ಕಂದ ಕರೆಯಲು ಶ್ರೀ ಗೋವಿಂದ ಘನ ಸ್ತಂಭದೊಳ್ ಬಂದು ದೈತ್ಯನ ಕೊಂದ ಇಂದಿರಾರಮಣ ಕಂದರ್ಪ ಜನಕ ಮುಚುಕುಂದ ವರ ಕೃಷ್ಣಾ ಮಂದರಧರ ಸಲಹೆಂದು ಅನವರತ 2 ದೃಢ ಧ್ರುವರಾಯನ ಬಿಡದೆ ಮಲತಾಯಿ ತಾ ಅಡವಿಗೆ ನೂಕಿಸಲು ಕಡು ಮುದದಿ ಕಡಲಶಯನ ಜಗದೊಡಿಯನೆ ಕಾಯ್ದೆ ಗರುಡವಾಹನನೊಡನೆ ನುಡಿಯಯ್ಯ 3 ದುರುಳ ರಾವಣನ ದಶಶಿರಗಳು ಖಂಡಿಸಿ ಶರಣೆಂದು ವಿಭೀಷಣ ಗೇ ಸ್ಥಿರದಿ ಪಟ್ಟವನಿತ್ತು ಪರಮಪುರುಷ ಶಿರಿವರ ನರಹರಿ ಶೌರಿ ಮೊರೆ ಹೊಕ್ಕೆ ರಕ್ಷಿಸೋ ಮುರಹರ ಕರುಣಾಂಬುಧೆ 4 ಕರಿಸರೋವರದಿ ಮಕರಿಯ ಬಾಧೆಗೆ ಸಿಕ್ಕು ಹರಿನೀನೆ ಗತಿಯೆಂದು ಸ್ಮರಿಸುತಲಿರಲು ಭರದಿಪೋಗಿ ಕಷ್ಟಪರಿಹರಿಸಿ ಪೊರೆದಿ ಶ್ರೀಧರವರÀ ಹೆನ್ನೆಯಪುರ ಲಕ್ಷ್ಮೀನರಸಿಂಗ 5
--------------
ಹೆನ್ನೆರಂಗದಾಸರು
ಭವ ಬಿಡಿಸಯ್ಯ ಹರಿ ನಿನ್ನ ನಾಮ ದೃಢವಾಗಿ ನುಡಿಸಯ್ಯ ಬಿಡದೆ ಸನ್ಮಾರ್ಗದಿ ನಡೆಸಯ್ಯ ದೇವ ಗಡ ನಿನ್ನ ಕೃಪಾಕವಚ ತೊಡಿಸಯ್ಯ ಪ ಹಾಳು ಭ್ರಾಂತಿಗಳೆಲ್ಲ ಕೆಡಿಸಯ್ಯ ಎನ್ನ ಕೀಳುಯೋಚನೆ ಸರ್ವ ಕಡಿಸಯ್ಯ ಜಾಳು ಪ್ರಪಂಚದಾಸೆ ತಿಳಿಸಯ್ಯ ಸ್ವಾಮಿ ಮೂಳಮಾನವರ ಮಾತು ಮರೆಸಯ್ಯ 1 ನಿತ್ಯ ಸುಜನರೊಳಿರಿಸಯ್ಯ ಎನ್ನ ಸತ್ಯ ಶರಣರೊಳಾಡಿಸಯ್ಯ ಅರ್ತಿಯಿಂ ತತ್ವರ್ಥ ತಿಳಿಸಯ್ಯ ಎನ್ನ ಮಿಥ್ಯಗುಣಂಗಳನ್ನು ಹರಿಸಯ್ಯ 2 ಕೋಪತಾಪಂಗಳ ವಧಿಸಯ್ಯ ಎನ್ನ ಪಾಪ ಮಾಫಿಗೊಳಿಸೆನ್ನಯ್ಯ ಕೋಪಿ ಪಾಪಿಗಳಿಂದುಳಿಸಯ್ಯ ನಿನ್ನ ಗೌಪ್ಯದ ಧ್ಯಾನ ಮುನ್ನ ತಿಳಿಸಯ್ಯ 3 ಭೂತಪ್ರೇತದಂಜಿಕ್ಹರಿಸಯ್ಯ ತಂದೆ ಜಾತಿಭೀತಿ ಮೊದಲ್ಹಾರಿಸಯ್ಯ ನೀತಿಶಾಂತಿ ಸ್ಥಿರ ನಿಲ್ಲಿಸಯ್ಯ ಎನ್ನ ತಾತ ಮಾತೆ ನೀನೆ ನಿಜವಯ್ಯ 4 ನರರಿಗೆ ಎರಗಿಸದಿರಯ್ಯ ಎನ್ನ ಶಿರ ನಿನ್ನ ಚರಣದಿ ಇರಿಸಯ್ಯ ಪರಲೋಕಸಾಧನ ತೋರಿಸಯ್ಯ ಎನ್ನ ಶರಣ ನೀನಾಗು ಶ್ರೀರಾಮಯ್ಯ 5
--------------
ರಾಮದಾಸರು
ಭಾರ ನಿನ್ನದು ತಂದೆ ಸಿಂಧು ಎಂದೆಂದು | ಗುರುವರ್ಯ ಬಂದು ಕರುಣಿಸುವನು ಮದ್ಬಂಧೊ 1 ಮಂಗಳಾತ್ಮನೆ ಎನ್ನ ಅಂಗದಲಿ ನೀನಿಂದು ಪೊಂಗಳಧರನ ತೋರಯ್ಯ | ಅಜರಾಯ ಭಂಗಬಡಲಾರೆ ಭವದೊಳÀು 2 ನಾರಾಯಣನ ಪುತ್ರ ನಾರಾಯಣಗೆ ಮಿತ್ರ ನಿರವದ್ಯ | ನೀಡಭಯ ಕರುಣಾತ್ಮ ಗುರುವೆ ಒಲಿದಿಂದು 3 ಕಾಮರೂಪನೆ ಹರಿಯನೇಮದಲಿ ಕಪಿಯಾಗಿ ಆ ಮಹಿಮೆಗುಂಗುರ ಅರ್ಪಿಸಿ | ಅಗ್ನಿಯಲಿ ತಾಮಸರ ಹುರಿದೆ ಪುರದಲ್ಲಿ 4 ಮರಳಿ ಶರಧಿಯ ದಾಂಟಿ ಭರದಿ ರಘುಪತಿ ಚರಣ ಸರಸಿಜದಿ ಚೂಡಾಮಣಿಯನ್ನು | ಒಪ್ಪಿಸಿ ಹರಿ ಅಂಗ ಸಂಗ ಪಡೆದಯ್ಯ 5 ಸಿಂಧÀುವನು ಬಂಧಿಸಿ ಬಂದ ವಿಭೀಷಣಗೆ ಕುಂದದೆ ಅಭಯ ಕೊಡಿಸಿದೆ | ದಯಸಿಂಧು ನಿಂದೆನ್ನ ಒಳಗೆ ಮುದವೀಯೊ 6 ದೇವೇಶನಾಜ್ಞೆಯಲಿ ಜೀವೇಶ ಸಂಜೀವ ಪರ್ವತ ತಂದು ಕಪಿಸೈನ್ಯ | ಎಬ್ಬಿಸಿ ಮೊದಲೆಡೆಗೆ ಬಗೆದ ಕುಶಲಾತ್ಮ 7 ದಶಶಿರನ ಕೊಲ್ಲಿಸಿ ವಸುಧಿಪುತ್ರಿಯ ತಂದು ನಸುನಗುತ ರಾಮಚಂದ್ರಾಗೆ | ಒಪ್ಪಿಸಿ ವಿ ಭೀಷಣಗೆ ರಾಷ್ಟ್ರ ಕೊಡಿಸಿದೆ 8 ಪ್ರೇಮದಿ ಭರತನು ಸ್ವಾಮಿ ಬರಲಿಲ್ಲೆಂದು ಕಾಯ ಬಿಡುತೀರೆ | ಉಳುಹಿದೆ ಶ್ರೀ ರಾಮನಾಗಮನ ತಿಳುಹೀಸಿ9 ತುಷ್ಟನಾದೆನು ಹನುಮ ಇಷ್ಟ ನೀ ಬೇಡೆನಲು ಪಾದ ಪಿಡಿಯಲು | ಭಕ್ತಿಯಲಿ ಪಟ್ಟಾಭಿರಾಮ ತನ್ನಿತ್ತ 10 ಆಖಣಾತ್ಮಕಾಯನೆ ಅಕಳಂಕ ಗುಣಧಾಮ ನಿಖಿಲಾತ್ಮ ಹರಿಯ ಪೂಜಿಪ | ದೃಢಮಹಿಮ ಶ್ರೀಕೃಷ್ಣ ಭಕ್ತಾ ಕಲಿಭೀಮ 11 ಶಿಶುಭಾವದಲಿ ನೀನು ಶತಶೃಂಗ ಗಿರಿವಡೆದು ನಸುನಗುತ ಜನನಿಗಭಯವ | ನಿತ್ತಂಥ ಪಶುಪಾಲ ಪರನೆ ಪೊರೆಯೆನ್ನ 12 ದುರ್ಯೋಧನನ ತ್ರಾಣ ತಂತುಗಳ ಹರಿದಾಡಿ ಸರ್ವೇಶ ಹರಿಗೆ ಪ್ರಿಯಮಾಡಿ | ನಲಿದಂಥ ಸರ್ವಜ್ಞ ಭೀಮ ಬಿಡೆ ನಿನ್ನ 13 ದುಶ್ಯಾಸನನ ಮಹಾದುಶ್ಯೀಲ ಸ್ಮರಿಸುತ್ತ ಪಶುವಂತೆ ವಧೆಯ ಮಾಡಿದಿ | ರಣದೊಳು ಸುಸ್ವಾದ ಗುಣಸಾರ ಮಹವೀರ 14 ಮಾನಿನಿಯ ಸಂಕಲ್ಪ ತ್ರಾಣನೀ ಪೂರೈಸಿ ಪ್ರಾಣಸಖನಾಗಿ ಸಲಹಿದೆ | ಜಯಭೀಮ ಪಾಣೆ ಪಿಡಿಯೆನ್ನ ಮಹಘನ್ನ 15 ದುರಾರಾಧಕ ದುಷ್ಟ ಜರಸಂಧನ ಸೀಳಿ ಮುರಾರಿ ಮತ್ಪ್ರೀತಿ ಬಿಡಿಸಿದೆ | ದೀಕ್ಷೆಯಲಿ ತ್ರಿ ಪುರಾರಿ ವಂದ್ಯಾಗತಿ ನೀನೆ 16 ನಾರಾಯಣಾಸ್ತ್ರವನು ವೀರ ಗುರುಸುತ ಬಿಡಲು ಚೀರಿ ನಮೋಯೆನ್ನೆ ನೃಪರೆಲ್ಲ | ಸ್ಮøತಿ ತಪ್ಪೆ ಧೀರ ಎದುರಾಗಿ ನೀ ನಿಂತೆ 17 ಗರಡಿಯಲಿ ಕೀಚಕನ ಮುರಿದು ಮುದ್ದೆಯ ಮಾಡಿ ಮರಿಯದೆ ಅವನ ಅನುಜರ | ಸದೆಬಡಿದು ಮೋದ ನೀನಿತ್ತೆ 18 ಉರಗ ಬಂಧವ ಹರಿದು ಕರಿ ಮುಂದೆ | ನೀನಿಂತೆ ಸರ್ವನಿತ್ಯಾತ್ಮ ಕೃಷ್ಣಾತ್ಮ 19 ಮಧುವೈರಿ ಧ್ಯಾನದಲಿ ಕುದುರೆ ಆಟವನಾಡಿ ಮುದದಿಂದ ಕುರುಪನ್ಹೆಗಲೇರಿ | ಹುದುಗ್ಯವನ ಮುದದಿಂದ ನಲಿದೆ ಕಮಲಾಕ್ಷ 20 ಅರಗಿನ ಮನೆಯಲ್ಲಿ ವೈರಿಜನರ ಕೊಂದು ಪೊರೆದೆ ನೀ ಜನನಿ ಅನುಜರ | ಪಂಜರನೆ ಧರೆಯೊಳಗೆ ಎನ್ನ ಸಲಹಯ್ಯ 21 ಹಿಡಿಂಬನ ಕೊಂದು ವರ ಹಿಡಿಂಬಿಯ ಕೈಪಿಡಿದು ನಡೆದೇಕ ಚಕ್ರಪುರದಲ್ಲಿ | ಬಕನೊರಸಿ ನಡಕ ಬಿಡಿಸೀದಿ ಸುಜನರ 22 ವ್ಯಾಸದೇವನ ಕಂಡು ಸೂಸಿದ ಸದ್ಭಕ್ತಿ ಪಾಶದಲಿ ಕಟ್ಟಿ ಒಳಗಿಟ್ಟು | ಪೂಜಿಸುತ ಲೇಸಾಗಿ ಮುಂದೆ ನಡೆದಯ್ಯ 23 ನೀ ಸ್ವಯಂವರ ಸಭೆಯ ವೇಷಾಂತರದಿ ಪೊಕ್ಕು ವಾಸುದೇವನ ಕಂಡು ಆನಂದ | ತುಳುಕುತ್ತ ಆ ಸತಿಯ ತಂದೆ ವಿಜಯಾತ್ಮ 24 ರಾಜರೆಲ್ಲರ ಹಿಡಿದು ರಾಜಸೂಯಯಾಗವನು ಪೂಜೆಯನು ಮಾಡಿ ಮೆರದಯ್ಯ 25 ಲಕ್ಷ್ಮೀವನಕ್ಹೋದಂತೆ ಪಕ್ಷಿಯರ ಒಡಗೂಡಿ ದಕ್ಷನೆ ನೀನು ವನವಾಸ | ಅಜ್ಞಾತ ಪಕ್ಷವ ಕಳೆದು ಮರಳಿದೆ26 ಸಂಗರವ ನೀ ಹೂಡಿ ಭಂಗಿಸಿ ಕೌರವನ ರಂಗನ ಮುಂದೆ ಅರ್ಪಿಸಿ | ವಂದಿಸಿ ಮಂಗಳಾತ್ಮಕನೆ ಸಲಹೆಮ್ಮ 27 ನಿರ್ಮಲ ರಾಜ್ಯವನು ಧರ್ಮಂಗೆ ನೀನಿತ್ತೆ ನಿರ್ಮೂಲಗೈದು ಅರಿಗಳ | ಕೊಂದ ಪರ ಧರ್ಮಪರರನ್ನು ಪೊರೆದಯ್ಯ 28 ಮಧ್ವಾಖ್ಯ ಮಹವೀರ ಶುದ್ಧ ಸತ್ವ ಶರೀರ ಉದ್ಧರಿಪುದೊಂದೆ ವ್ಯಾಪಾರ | ಕೈಕೊಂಡ ವಿದ್ಯಾಧಿಪತಿಯೆ ಸಲಹೆನ್ನ 29 ಶ್ವಾಸ ನಿಯಾಮಕ ಪ್ರಭುವಾಸವೆ ನಿನ್ನಿಂದ ಉಸರಲೇನಯ್ಯ ನಿನ್ನಲ್ಲಿ | ಜೀವೇಶ ಸೂಸುವ ಭಕ್ತಿ ನೀಡಯ್ಯ 30 ವೇದ ಚೋರನ ಮಡುಹಿ ಸಾದರದಿ ಸುಜನಕ್ಕೆ ಬೋಧ ಮಾಡೆಂದು ಶ್ರೀ ವಿಷ್ಣು | ಕಳುಹಿದ ಮಧ್ವಾಖ್ಯ ಗುರುವೆ ಪರಿಪಾಹಿ 31 ಸುರರು ದುಂದಭಿ ಮೊರೆಯೆ ದುರುಳರ ಎದೆಯು ನಡುಗಲು | ಹರುಷದಲಿ ಮೆರೆದು ನೆರೆದರು ಸುಜನರು 32 ಕೈವಲ್ಯ ನೀನಿತ್ತೆ ಶ್ರೀವಲ್ಲಭನ ಪ್ರಥಮಾಂಗ | ಪ್ರಸನ್ನ ನೀವಲಿದು ಹರಿಯ ತೋರಯ್ಯ 33 ಹುಣಿಸೆ ಬೀಜದಿ ಪಿತನ ಘನೃಣವ ತೀರಿಸಿದಿ ಅಣಿಮಾದಿ ಸಿದ್ಧಿ ತೃಣವಯ್ಯ | ನಿನಗಿನ್ನು ಗುಣಪೂರ್ಣ ಹರಿಯ ಪ್ರತಿಬಿಂಬ 34 ಶಿವಭಟ್ಟನನು ಗೆದ್ದು ಜಯಾಂಕ ರಸ ತೋರೆ ವಿಪ್ರ ಸುರರು ಪೂಜಿಸೆ | ನಲವಿಂದ ಅವನಿಯೊಳು ಪೊಳೆದೆ ರವಿಯಂತೆ 35 ವಿದ್ಯಾಧಿಪತಿ ಗುರುವೆ ವಿದ್ಯೆ ಪೇಳಿದ ದ್ವಿಜಗೆ ಸದ್ಭಕ್ತಿ ದಕ್ಷಿಣೆ ನೀನಿತ್ತೆ | ಕರುಣಾತ್ಮ ಉದ್ಧರಿಸು ಎನ್ನ ದ್ವಿಜರತ್ನ 36 ಜನನಿ ಜನಕರು ತಡಿಯೆ ಅನುವಾದ ಸುತನಿತ್ತು ಘನವಾದ ತುರ್ಯ ಆಶÀ್ರಮ | ಕೈಗೊಂಡು ಸುನವ ಪದ್ಧತಿಯ ತೋರಿದೆ 37 ಅಚ್ಯುತ ಪ್ರೇಕ್ಷಕರಿಗೆ ಹೆಚ್ಚಾದ ದಯದಿ ಹರಿ ನಿನ್ನ | ವೊಯ್ದಿತ್ತ ಅಚ್ಚುಮೆಚ್ಚುವ ನೀ ಹರಿಗೆಂದು 38 ವಾದಿಗಳ ಭಂಗಿಸಲು ಸಾದರದಿ ಯತಿ ಕರಿಯೆ ಛೇದಿಸಿ ಖಳರ ಮದವನ್ನು | ಹರಿಸಿದೆ ಸ್ವಾದ ಗುಣಸಿಂಧು ಮದ್ಬಂಧು 39 ಬಾಳೆಗೊನೆಗಳ ಮೆದ್ದು ಬಾಡಲೇತಕೆ ಉದರ ಪೇಳೆಂದ ಯತಿಗೆ ಜಠರಾಗ್ನಿ | ಬ್ರಹ್ಮಾಂಡ ಕೊಳ್ಳುವದುಯೆಂದು ವರದಯ್ಯ 40 ವಾದಗಳ ಪರಿಹರಿಸಿ ಬೋಧಿಸಲು ಆ ದ್ವಿಜರು ಪಾದಕ್ಕೆ ಎರಗಿ ನಮೋ ಎಂದು ಅಮರರಿಗೆ ಆ ಬೋಧವೊ ಮಹಿಮೆಯೆಂದಾರು 41 ಬದರಿಯಾತ್ರೆಯಲಿ ಸುರನದಿಯು ತಾ ಮಹಿಪಡೆದು ಮುದದಲ್ಲಿ ಬಂದು ನಮಿಸಲು | ಶಿಷ್ಯಜನ ಯೈದಿ ಭಕ್ತಿಯನು ನಮೋ ಎಂದು 42 ಹರಿಯಂತೆ ನರಿಗಳನು ತುರಕ ದೂತರ ಜರಿದು ನರಪನಿಂದರ್ಧ ಮಹಿಮೆಯನ್ನು | ಪಡೆದಂಥ ಯರಡೇಳು ಭುವನ ಅಧಿಪತಿ 43 ಸತ್ಯತೀರ್ಥರ ಬಳಿಗೆ ದೈತ್ಯ ವ್ಯಾಘ್ರನು ಬರಲು ಮೃತ್ಯುವಿನ ಪುರಕೆ ಕಳುಹಿದೆ | ಲೀಲೆಯಲಿ ಭೃತ್ಯತ್ವಯೆನಗೆ ನೀಡಯ್ಯ 44 ಸೂಸುವಾ ಭಕ್ತಿಯಲಿ ವ್ಯಾಸದೇವನ ಕಂಡು ಈಶ ಸಲಹೆಂದು ಎರಗಲು | ಮನವುಬ್ಬಿ ಬಾ ಸುತನೆ ಎಂದು ತಬ್ಬಿದ 45 ಆನಂದ ಮೂರ್ತಿಯ ಆನಂದ ಸಂಗವನು ಆನಂದದಿಂದ ನೀ ಯೈದಿ | ನಂದ ಆನಂದ ತೀರ್ಥ ಕೊಟ್ಟೆಯೊ 46 ನಾರಾಯಣನಲಿ ಕರೆದೊಯ್ಯೆ ಬದರಿಪನ ಚರಣಾಬ್ಜಕೆರಗಿ ಹರಿಲೀಲೆ | ಸ್ಮರಿಸಿದ ಗುರುರತ್ನ ಸಲಹೊ ಧನ್ಯಾತ್ಮ 47 ಅಚ್ಯುತನ ಸಂಗದಲಿ ಚಿತ್ಸುಖವ ಉಂಡುಬ್ಬಿ ಹೆಚ್ಚಿನ ಪದವಿ ಇಲ್ಲೆಂದು | ನಲಿದಂಥ ಅಚ್ಯುತಾತ್ಮಾನೆ ಸಲಹೆನ್ನ 48
--------------
ಜಯೇಶವಿಠಲ
ಭಾರತಿ ಭರತನ ರಮಣಿ ಶಿರಬಾಗುವೆ ತ್ರಿಜಗಜ್ಜನನಿ ಪ. ಭಾರತ ಭಾಗವತಾರ್ಥ ಬೋಧಿನಿ ಶಾರದೇಂದುನಿಭವದನಿ ಅ.ಪ. ಹರಿಗುರುಗಳಲಿ ಸದ್ಭಕ್ತಿ ದೃಢ ಕರುಣಿಸು ಸರಸಿಜನೇತ್ರಿ ಗಿರೀಶಾದಿ ಸರ್ವಸುರೌಘಪ್ರಣೇತ್ರಿ ಶರಣು ಶರಣು ಸುಪವಿತ್ರಿ 1 ಕಾಳಿ ದ್ರೌಪದಿ ಸುನಾಮೆ ನಮ್ಮ ಪಾಲಿಸು ಭೀಮಪ್ರೇಮ ಶ್ರೀ ಲಕ್ಷ್ಮೀನಾರಾಯಣನ ಭೃತ್ಯೆ ಕಾಲತ್ರಯ ಕೃತಕೃತ್ಯೆ 2
--------------
ತುಪಾಕಿ ವೆಂಕಟರಮಣಾಚಾರ್ಯ
ಭಾವ ನೆಲೆಗೊಳ್ಳಿ ಸಾಧಿಸಿ ದೃಢದಲ್ಲಿ ದೈವ ಪ್ರಕಟಾಗಿ ಒಲಿವುದು ಘನದಲಿ ಧ್ರುವ ಮಾಡಿ ಚಿತ್ತಶುದ್ಧ ನೋಡಿ ಸ್ವತ:ಸಿದ್ಧ ಗೂಢ ಗುಪ್ತ ಘನ ಕೈಗೂಡಿ ತಾಂ ಪ್ರಸಿದ್ದ 1 ನಡಿಯ ಪಡಕೊಳ್ಳಿ ಸದ್ಗುರು ದಯದಲಿ ಕಡೆದು ಹೋಗುವದು ಭವಪಾಶ ಮನದಲಿ 2 ಭಾವಕತಿ ಪ್ರಿಯ ಭಾನುಕೋಟಿ ಉದಯ ಪಾವನ್ನಗೈಸುತಿಹ ನೋಡಿ ಮೂಢ ಮಹಿಪತಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು