ಒಟ್ಟು 542 ಕಡೆಗಳಲ್ಲಿ , 82 ದಾಸರು , 461 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಾಲಿಮನುಕುಲತಿಲಕ ಮದನಾರಿವಿನುತ ಲಾಲಿಜನಕಜಾಮಾತ ಜಾನಕೀ ಸಮೇತ ಪ. ಕೌಸಲ್ಯಾಪ್ರಿಯಬಾಲ ಕನಕಮಯ ಚೇಲ ಕೌಶಿಕಕ್ರತುಪಾಲ ಕರುಣಾಲವಾಲ ಪೋಷಿತಾಮರಜಾಲ ಬಾಲೇಂದು ನಿಭಫಾಲ ದಶಕಂಠಮುಖಕಾಲ ಜಾನಕೀಲೋಲ 1 ನಾಕೇಶನುತಚರಣ ನಕ್ತಂಚರಶಮನ ಶ್ರೀಕಾಮಿನೀಸದನ ರಾಜೀವನಯನ ಲೋಕನಾಯಕ ಸರ್ವ ಲೋಕಪಾಲಕ ದಿವ್ಯ ಸಾಕೇತಪುರನಿಲಯ ಸನಕಾದಿಗೇಯ 2 ಈಶಸನ್ನುತ ನಾಮ ನೀಲಮೇಘಶ್ಯಾಮ ಶೇಷಾದ್ರಿಶಿಖರಧಾಮ ಶ್ರೀರಾಮನಾಮ ಕ್ಷೇಶಪಾಶವಿರಾಮ ವಿಶ್ವಜನಸುಪ್ರೇಮ ಕೋಸಲಾಧಿಪರಾಮ ಪರಿಪೂರ್ಣಕಾಮ 3
--------------
ನಂಜನಗೂಡು ತಿರುಮಲಾಂಬಾ
ಲೋಕಪಾಲನೆ ನಾಕವಂದ್ಯನೆ ಸಾಕುಬಿಡು ಚಲವಾ ಯಾಕೆ ಕೋಪ ದೀನ ನಾನೆಲೈ ಶ್ರೀಕರ ಸುಗುಣಾ ಪ ಕಾವರಿಲ್ಲವೋ ದೇವ ದೇವನೆ ಭಾವಜಾತಪಿತನೆ ಜೀವಕೋಟಿಯ ಜೀವರಾಶಿಯ ಪಾವನಾಂಗನೆ ಅ.ಪ ಪರರ ನಾನುಪರಿಚರಿಸಲಿಲ್ಲವೋ ದುರುಳಭಾವದಿ ಪರರ ಹಿಂಸೆಗೈದು ಎನ್ನ ಉದರ ಪೊರೆದೆನೋ 1 ವೇದಗಳ ನಾನೋದಿ ಅರಿಯೇ ಸಾಧು ಸಂಗಮ ಭೇದಗೈದೆ ಗರ್ವದಿಂದೆ ವೇದವೇದ್ಯನೆ 2 ಗಂಗಜನಕ ತುಂಗ ವಿಕ್ರಮ | ಮಂಗಳಾಂಗನೇ ಮಾಂಗಿರೀಶ ನಿನ್ನ ನಾಮಭೃಂಗವ ತೋರೈ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಲೋಕೇಶನೆನಿಪ ಶ್ರೀಗುರು ಸಿದ್ಧೇಶ್ವರಗೆ ಪ ನೀ ಕಮಲಮುಖಿ ಆಋವೈರಿಯ ನೇಕ ಮೈಯ್ಯಾಳು ಸುತ್ತಿಕೊಂಡು ವಿ ವೇಕವಿಲ್ಲದೆ ವಿಷವನುಂಡ ಪಿನಾಕಧರÀನಿಗೆ ಸೋಲುವರೆ ನೀ ಜಗವ ಮೋಹಿಪ ಮಾನಿನೀ ಮಣಿಯೇ ಅ.ಪ. ಶಿರದೊಳು ಶಶಿಯ ಕೆಂಜೆಡೆ ಇಹ ಜೋಗಿ ಸ್ಮರನ ದಹಿಸಿ ಭಸ್ಮ ಹಣೆಗಿಟ್ಟ ಯೋಗಿ ಇರುವರೆ ಸ್ಥಳವಿಲ್ಲದಂತೆ ತಾ ಪೋಗಿ ಮೆರೆವ ಸ್ಮಶಾನ ಮಂದಿರಕನುವಾಗಿ ಮರುಲು ಭೂತ ಪಿಶಾಚ ಯಕ್ಷರ ನೆರವಿಯಲಿ ಕುಣಿಕುಣಿದು ಬ್ರಹ್ಮನ ಶಿರವಿಡಿದು ತಿರಿದುಂಬ ಗೊರವಗೆ ಬರಿದೆ ತಿಳಿಯದೆ ಜಗವ ಮೋಹಿಪ ಮಾನಿನೀ ಮಣಿಯೇ 1 ಮಂಡೆಯೋಳ್ ಜಾನ್ಹವಿ ಶಶಿಯನ್ನೆ ಸೂಡಿ ರುಂಡಮಾಲೆಯ ಕೊರಳೊಳಗಿಟ್ಟಪಚಾಡಿ ಕುಂಡಲಿಗಳಾ ಧರಿಸಿರುವನ ನೋಡಿ ಖಂಡ ಪರಶುವೆಂದು ಅವನ ಕೊಂಡಾಡಿ ಧಿಂಡೆಯಾಗಿಹ ಪ್ರಾಯದವಳು ನೀ ನೀನವನನೊಲಿದೆ ಪ್ರ ಚಂಡೆ ಪಾರ್ವತಿ ಜಗವ ಮೋಹಿಪ ಮಾನಿನೀ ಮಣಿಯೇ 2 ಕರದಿ ತ್ರಿಶೂಲ ಧಮರುಗಳ ಧರಿಸಿರುವಾ ಕಂಚರ್ಮಾಂಬಕ ಪುಲಿದೊಗಲುಟ್ಟು ಮೆರೆವಾ ಹಿರಿಯತನಕೆ ವೃಷಭವನೇರಿ ಬರುವಾ ಶಿರಿಯ ಹೊಗಾಡಿ ಫಕೀರನಂತಿರುವಾ ವಿರಚಿಸಿದ ಲೀಲಾವಿನೋದದ ಪರತರ ಶ್ರೀ ಪ್ರಣವರೂಪನ ಗುರುವಿಮಲಾನಂದ ತೊಟ್ಟಿದ ಗುರು ಸಿದ್ಧೇ ಶ್ವರನೆಂದು ತಿಳಿಯದೆ ಜಗವ ಮೋಹಿಪ ಮಾನಿನೀಮಣಿಯೇ 3
--------------
ಭಟಕಳ ಅಪ್ಪಯ್ಯ
ವಂದಿಸುವೆನು ರಘುವರನಾ ಸುರವಂದಿತ ಚರಣಾಂಬುಜನ ಪ ತಂದೆ ಮಾತಿಗೆ ವನಕ್ಹೋಗಿ ಬಂದವನಾಸುಂದರ ಸಹ ಸೀತೆಯಿಂದ ಅನುಜನಾ ಅ.ಪ ಚಾಪ ಭಂಜಕನಾ 1 ವಾರಿಧಿ ಸೇತು ಬಂಧಕನಾ ಸೀತಾ -ಚೋರನ ಶಿರವಳಿದವನಾಚಾರು ಸಿಂಹಾಸನವೇರುತ ಸರಯು -ತೀರದ ಅಯೋಧ್ಯಾ ವಿಹಾರ ಸುಂದರನಾ2 ಕೇಸರಿ ಸುತಗೆ ತನುಧನಮಣಿಆಶ್ರಯವನು ಕೊಟ್ಟವನಾಕೋಸಲ ಜನರಿಗೆ ಮೋಕ್ಷವವಿತ್ತವನಾಇಂದಿರೇಶ ಸುಖಾತ್ಮ ನಿರ್ದೋಷ ಪುರುಷನಾ 3
--------------
ಇಂದಿರೇಶರು
ವರದೇಂದ್ರ ಮುನಿಪ ದಿಕ್ಷತಿಗಳಂತೆ ಪರಮ ಸಂಭ್ರಮದಿ ರಾಜಿಸುವ ನೋಳ್ಪರಿಗೆ ಪ ಸುರರಾಜನಂತೆ ಭೂಸುರಗಡಣ ಮಧ್ಯದಲಿ ಮೆರೆವ ದುರ್ವಿಷಯಕೆ ಪಾವಕಾ ನಿರುತ ಸದ್ಧರ್ಮ ಶಿಕ್ಷಿಸುವಲ್ಲಿ ವರದಂಡ ಧರನಂತೆ ಇರುವ ದಿಗ್ವಜಿಯಿಸುವ 1 ಜ್ಞಾನಾದಿ ಗುಣದಿ ರತ್ನಾಕರನೆನಿಸಿ ಕುಮತ ಪಾನೀಯಧರಗಳಿಗೆ ಪವಮಾನನೆನಿಪ ದೀನಜನರಿಗೆ ಧನದ ವೈರಾಗ್ಯ ತಪದಲಿ ಕೃಶಾನು ಕೇತನ ತೆರದಲೊಪ್ಪುವನಜಸ್ರ 2 ಸೂರಿಕುಲವರಿಯ ವಸುಧೀಂದ್ರರಾಯ ಕರಸ ರೋರುಹದಿ ಜನಿಸಿ ಪರಮೋತ್ಸಹದಲಿ ಶ್ರೀರಾಮ ವ್ಯಾಸ ಜಗನ್ನಾಥ ವಿಠಲನ ಚರ ಣಾರವಿಂದರ್ಚನೆಯ ಪಡೆದು ಸಂತೋಷಿಸುವ3
--------------
ಜಗನ್ನಾಥದಾಸರು
ವರವಾಮನಾಕಾರ ಪರಮಕರುಣಾಸಾರ ಶರಣಜನಮಂದಾರ ಭಯವಿದೂರ ಶತಯಾಗ ಸಹಜಾತ ದಿತಿಜಾಳಿ ಘನವಾತ ಶತಪತ್ರದಳನೇತ್ರ ಚಾರುಗಾತ್ರ ಕಶ್ಯಪಾತ್ಮಜಯೋಗ ವಶ್ಯ ಸದ್ಗುಣಭೂಷ ನಿತ್ಯ ಮಾಧುರ್ಯವಾಗ್ವಿಹಿತ ಭೇದರಹಿತ ಅನಂತ ಕಲ್ಯಾಣಗುಣಾಪ್ರಮೇಯ ಸನಕಾದಿ ಮುನಿನಿಕರವಂದ್ಯ ಚರಣ ಮನ್ಮೋಹನಾಂಗ ಪರಿಪಾಹಿರಂಗ
--------------
ನಂಜನಗೂಡು ತಿರುಮಲಾಂಬಾ
ವಾಯ ದೇವರ ಮಹಿಮಾ ವರ್ಣನೆ ಮೂರವತಾರ , ಷಟ್ಪದಿ ಶ್ರೀರಮೇಶ ವಿಧೀರ ವಿಪವೃತ್ರಾರಿ ವಿನುತ ಸರ್ವಾಧಾರ ನಿರುಪಮನೆ ಸ್ವತಂತ್ರಗುಣಾರ್ಣವ ಪ್ರಭುವೇ | ಪತಿ ಓಂಕಾರ ವ್ಯಾಹೃತಿ ವಾಚ್ಯ ಸರ್ವಪ್ರೇರಕ ಬಲಸುಭಾಸಕ ಹರಿಯೆ ವಾಗ್ರಸನೆ ನಮಿಪೆ 1 ಆಪ್ತನೆಂದರೆ ಪ್ರಾಣ ಸರಿ ಪರಮಾಪ್ತ ಹರಿಯ ಯಥಾರ್ಥಜ್ಞಾನ ಪ್ರಾಪ್ತಿ ಮಾಡಿಸಿ ವಿಷ್ಣು ಕರುಣವ ಕೊಡಿಸುವನು ತಾನು | ಆಪ್ತ ನೆನ್ನೆಯಥಾರ್ಥ ಪೇಳುವ ಮತ್ತೆ ನಿಶ್ಚಯ ಜ್ಞಾನವುಳ್ಳವ ಶಕ್ತ ಕರುಣ ಪಟುತ್ವಯುತನಿರ್ವಂಚನೆಗಳಿಂದ 2 ಶಿಷ್ಯ ವಾತ್ಸಲ್ಯ ಯುತ ಗುರುಸರಿ ವಿಶ್ವ ಜನಕನ ಪ್ರಥಮ ಭಕ್ತಶ್ವಾಸಗಿಂತಲು ಬೇರೆಯವನಿಲ್ಲ ಪವಮಾನನವ | ದೋಷ ಸಂಶಯ ರಹಿತ ಹರಿ ವಿಶ್ವಾಸ ಪಾತ್ರ ವಿಶೇಷ ಮಹಿಮಸುರಾಶ್ರಯ ನಿವನು ವಂಶನೆ ನಿಸುವ ಸೂತ್ರಗಾನಮಿಪೆ 3 ಯಾವ ಜ್ಞಾನ ಬಲ ಸ್ವರೂಪ ಸುದೇವ ಕ್ರೀಡಾದಿ ಗುಣಯುತ ಭವನಾವಿಕ ಪ್ರಭು ವಾಯುವಿನಗುಣ ಚರಿತೆ ವೃಂದಗಳ | ಪಾವನ ಬಳಿತ್ಥಾದಿ ಶೃತಿಗಳು ಸಾವಧಾನದಿ ಪೊಗಳುವವೊ ಆಭಾವಿ ಬ್ರಹ್ಮನ ಮೂಲ ರೂಪವುಜ್ಞಾನ ಬಲಮಯವು 4 ಮೂಲ ರಾಮಾಯಣ ವಿಶೇಷವ ಪೇಳುವ ಹನುಮನೇ ಪ್ರಥಮ ನಿಹಖೂಳ ದಿತಿ ಜನ ಸೈನ್ಯ ಮಾರಕ ಭೀಮ ನೆರಡೆನ್ನಿ | ಶೀಲ ಸಖಗಳ ನೀವ ಶಾಸ್ತ್ರವ ಪಾಲಿಸಿದ ಗುರು ಮಧ್ವರಾಯರೆ ಮೂಲ ಮುಖ್ಯ ಪ್ರಾಣ ದೇವನ ಮೂರನೆಯ ರೂಪ 5 ಪ್ರಾಣ ನೀತ್ರಯ ರೂಪಗಳು ಸಮವೆನ್ನುವದು ಸರ್ವ ವಿಷಯದಿ ಮುಕ್ಕಣ ಪ್ರಮುಖರ ಜ್ಞಾನ ದಾತೃವಿಗಿನ್ನು ಸಮವುಂಟೆ | ಜ್ಞಾನ ವಾಚಕ ಹನುಮ ಶಬ್ದವು ಪೂರ್ಣ ಹರಿ ಸಂದೇಶವೈದನು ಜಾನಕಿಗೆ ನಿರ್ದೋಷ ವಾಕ್ಯಗಳನ್ನು ಧೀಮಂತ 6 ಪಂಚರಾತ್ರಾಗಮ ಪುರಾಣ ವಿರಂಚಿ ಜನಕನ ತೋರ್ಪವೇದವು ವಂಚಿಸದ ಇತಿಹಾಸಗಳು ಕೂಡುತಲಿ ಸಪ್ತಗಳ | ಮಿಂಚಿಸುತ ಸುಜ್ಞಾನ ಪಾಪದ ಸಂಚಯ ತರಿವ ಕಾರಣದಿ ಬಲಿವಂಚಕನ ಭಕ್ತರು ಕರೆಯುವರು ಸಪ್ತಶಿವ ವೆಂದು7 ಶಾಸ್ತ್ರ ವಚನಕೆ ಮಾತೃ ವೆಂಬರು ಸಪ್ತ್ರ ಶಿವಕರ ಮಾತೃಗಳ ಧರಿಸಿಪ್ಪ ನಿವನೆಂದು | ಖ್ಯಾತನಾಗಿಹ ಭೀಮ ನಾಮದಿ ತೀರ್ಥವೆನ್ನಲು ಶಾಸ್ತ್ರವಿದಿತವು ಮತ್ತೆ ಮಧುವೆನೆ ಸುಖವು ಮುಕ್ತಿಯನೀವ ಶಾಸ್ತ್ರವನು 8 ಇತ್ತ ದೇವನೆ ಮಧ್ವನೆಂಬರು ಸುತ್ತುತೀತ್ರಯ ನಾಮದರ್ಥವ ನಿತ್ಯ ತಿಳಿಯುತ ಪಠಿಸಿ ಪಾಡಲುವಾಯು ದೇವನನು | ಭಕ್ತ ಬಾಂಧವನಾತ ವಲಿಯುತ ತತ್ವವೇತ್ತನ ಮಾಳ್ವ ನಿಶ್ಚಯ ಭೃತ್ಯನಾನೆಂತೆಂದು ಮಧ್ವರ ಸಾರಿ ಭಜಿಸುತಿರಿ9 ಪ್ರೌಢ ಮಧ್ವಗೆ ಪೂರ್ಣ ಪ್ರಜ್ಞನೆ ಈತ ಶ್ರುತಿ ಸಿದ್ದ | ಬೀಡು ಮಾಡಿಹ ವಿದ್ಯೆ ನೂಕುತ ತೊಂಡ ನೆಂದಿವರಡಿಗೆ ಬೀಳಲು ಪಾಂಡುರಂಗನ ಬಿಚ್ಚಿ ತೋರುವ ಗೋ ಸಮುದ್ರದಲಿ10 ಏನ ಪೇಳಲಿ ಏನಪೇಳಲಿ ಜ್ಞಾನನಿಧಿ ಸರ್ವಜ್ಞ ಗುರುವರ ತಾನು ಗೈದ ಮಹೋಪಕಾರವ ಮುಕ್ತಿಯೋಗ್ಯರಿಗೆ | ಜ್ಞಾನ ಬಾಹುದೆ ಬಿಟ್ಟರೀತನ ಶೂನ್ಯವೆ ಸರಿ ಎಲ್ಲ ಆತಗೆ ಮನ್ನಿಸುವನೆ ಅನನ್ಯವನು ಹರಿ ಶರಣು ಆಚಾರ್ಯ 11 ಈತನೇ ಆನಂದ ತೀರ್ಥನು ಈತನೇ ಆಚಾರ್ಯ ನಿಶ್ಚಯ ಈತನೇ ಸರಿಮಾತರಿಶ್ವನು ವಾಯುವಿನರೂಪ | ಈತ ಚರಿಸುವ ಶಾಸ್ತ್ರವ್ಯೂಹದಿ ದೈತ್ಯರಿಂದಾಚ್ಛಾದಿತ ಗುಣಯುತ ಆತ್ಮಪೂರ್ಣಾನಂದ ದೇವನ ಶಾಸ್ತ್ರಮಥಿಸುತಲಿ 12 ಸಾರ ವೃಂದಕ್ಕೆ ಚುಚ್ಚುವನು ದುರ್ವಾದಿ ಮತಗಳ ಕೆಚ್ಚೆದೆಯವನು ಗರ್ಜಿಸುತವೇದೋಕ್ತವಾಕ್ಯಗಳ | ಹೆಚ್ಚು ಹೆಚ್ಚೇ ಸರಿಯು ವಿಷ್ಣುವು ಸ್ವಚ್ಛ ಪೂರ್ಣಾನಂದ ಸುಖಮಯ ಪೃಚ್ಛ ಪರಿವಾರ ಸರಿ ವಿಧ್ಯಾದಿಗಳು ಹರಿಗೆಂದು 13 ಕಚ್ಚಿಲತೆಗಳ ಬಿಸುಡುವಂದದಿ ನುಚ್ಚು ಮಾಡುವ ಪ್ರಶ್ನೆನೀಕವ ಅಚ್ಚನಾರಾಯಣನೆ ಪ್ರೇರಕ ನಿವಗೆ ಜನಕನಿಹ | ಮೆಚ್ಚು ಮಗ ಶ್ರೀ ಲಕ್ಷೀ ದೇವಿಗೆ ರಚ್ಚೆತನುವನು ಕಿತ್ತುವೋಡಿಸಿ ಹೆಚ್ಚಿಸುವ ಸುಜ್ಞಾನ ದೀಪವ ಹರಿಯ ಪ್ರಧಮಾಂಗ14 ಕೊಟ್ಟು ಉಂಗುರ ಸುಟ್ಟುಲಂಕೆಯ ಬಿಟ್ಟು ಕಾಮವ ಮೆಟ್ಟಿಖಳರನು ಜಟ್ಟಿ ಹನುಮನು ಪಟ್ಟ ಪುತ್ರನ ಪದವಿ ಸಾಧಿಸಿದ | ಹುಟ್ಟಿ ಕುಂತಿಲಿ ಕುಟ್ಟಿ ಕುರುಕುಲ ಇಟ್ಟು ಮನದಲಿ ದಿಟ್ಟ ಕೃಷ್ಣನ ಅಟ್ಟಿ ಹಾಸದಿ ಮೆರೆದ ಭೀಮನು ಜ್ಞಾನ ಭಾಸ್ಕರನು15 ಹುಟ್ಟು ಸಾವಿನ ಕಟ್ಟು ಬಿಡಿಸಲು ಘಟ್ಟ ದಡಿಯಲಿ ಭಟ್ಟನೆನಿಸುತ ಬಟ್ಟೆ ತವಕದಿ ಭ್ರಷ್ಟದಸ್ಯುಗಳ | ಕೆಟ್ಟ ಮತಗಳ ಸುಟ್ಟು ವಾದದಿ ಸೂತ್ರ ಭಾಷ್ಯವ ನೆಟ್ಟ ಸಂತರ ಮನದಿ ವಿಷ್ಣುವ ಶ್ರೇಷ್ಠಗುರುಮಧ್ವ16 ಏಕೆ ಭಯ ನಮಗಿನ್ನು ನಿರಯದ ಏಕೆ ಸಂಶಯ ಮುಕ್ತಿ ವಿಷಯದಿ ಏಕೆ ಕಳವಳ ಮಧ್ವರಾಯರ ಶಾಸ್ತ್ರ ಪೀಯೂಷ | ಜೋಕೆಯಿಂ ಪ್ರತಿದಿನವು ಸೇವಿಸೆ ಶ್ರೀಕಳತ್ರನು ಕೈಯ ಬಿಡುವನೆ ನಾಕಪತಿಯಿಂಬಿಟ್ಟು ಸಲಹುವ ಶಾಸ್ತ್ರಸಿದ್ಧವಿದು 17 ಹೆಚ್ಚು ಮಾತೇಕಿನ್ನು ಹರಿಮನ ಮೆಚ್ಚುಯೆನಿಸಿಹ ಮಧ್ವರಾಯರು ಬಿಚ್ಚಿತೋರಿದ ತೆರದಿ ಶೃತಿಗಳ ಭಜಿಸಿಖಳ ಜನಕೆ | ಬಚ್ಚಿಡುತ ವಿಜ್ಞಾನ ಮರ್ಮವ ನುಚ್ಚು ನೂಕುತ ದುರ್ಮತಕಿಡಿರಿ ಕಿಚ್ಚು ಕಮಲೇಶ ನೊಲಿಮೆಗೆ ಬೇರೊಂದು ಪಥವಿಲ್ಲ 18 ನಮ್ಮಹಿರಿಯರ ಖಿನ್ನನುಡಿಗಳ ನೊಮ್ಮನದಿ ನೀವೆಲ್ಲ ಕೇಳಿರಿ ರಮ್ಮೆಯರಸಗೆ ಸಮ್ಮತದ ಸಚ್ಛಾಸ್ತ್ರದರ್ಪಣವ | ಹೆಮ್ಮೆಯಿಂದಲಿ ಕೊಟ್ಟು ಬಂದೆವು ಒಮ್ಮೆಯಾದರು ನೋಡುವರೆ ಈ ನಮ್ಮ ಸಂತತಿ ಹಾ ಹರಿ ಹರೀಯೆಂಬ ಕ್ರಾಂತಿಯುತ19 ಉಣ್ಣಿರುಣ್ಣಿರಿ ಮಧ್ವಕಂದರೆ ಭವ ಹುಣ್ಣುವಳಿಯಿರಿ ಅಣ್ಣ ಪ್ರಾಣನದಯವ ಯಾಚಿಸಿಘನ್ನ ಶಾಸ್ತ್ರಾನ್ನ | ಅನ್ನ ಶೃತಿಗಳು ವಿವಿಧ ಸ್ಮøತಿಪ ಕ್ವಾನ್ನ ಪಾಯಸ ಗೀತೆ ಭಕ್ಷ್ಯಗಳೆನ್ನಿ ಬಗೆ ಬಗೆ ಸರ್ವ ಮೂಲವ ಸೂತ್ರಗಳೆ ಸಾರು 20 ತುಪ್ಪವೆನ್ನಿರಿ ನ್ಯಾಯ ಸುಧೆಯನು ಗೊಪ್ಪರಾಜರ ಗ್ರಂಥ ಹಲ್ಪವು ಅಪ್ಪರಾಯರ ವಾಣಿ ಕ್ಷೀರವು ದಾಸ ಸಾಹಿತ್ಯ | ತಪ್ಪದೆಲೆ ತಿಂಬಂಥ ತಿಂಡಿಯು ಚಪ್ಪರಿಸಿ ಭಾರತದ ಕೂಟನು ವಪ್ಪುವನು ಶ್ರೀ ಕೃಷ್ಣ ದೇವನು ಭಕ್ತ ನುಣ್ಣಲಿವ 21 ಎಂತು ಪೊಗಳಲಿ ನಿಮ್ಮ ಗುರುವರ ಹಂತ ಸುರಗಣ ವೆಲ್ಲ ನಿಮ್ಮಡಿ ನಿಂತು ಪಡೆದರು ಜ್ಞಾನ ಪ್ರಾತರ್ನಾಮಕನೆಶರಣು | ಕಂತೆ ಮತಗಳ ನಾಶಗೈದನ ನಂತ ಮಹಿಮನೆ ದೀನ ನಾನಿಹೆ ಕುಂತಿ ನಂದನ ನೀನೆ ತಿಳಸೈ ಸಕಲ ಶಾಸ್ತ್ರಾರ್ಥ 22 ಮೂರ್ತಳೆನಿಸುವ ಚಂದ್ರಮಾನಿನಿನಾಥ ಸೂರ್ಯ ನೊಳ್ ಆದಿತ್ಯ ನಾಮದಿ ನಿಂತು ದಿಕ್ಪತಿಗಳಿಗೆ ಶಕ್ತಿಗಳ | ಇತ್ತು ಸೃಷ್ಠಿಯ ಕಾರ್ಯ ವೆಸಗುವೆ ಉತ್ತರಾಯಣ ಪಗಲು ಮಾನಿಯೆ- ನಿತ್ಯ ಪ್ರೇರಿತ ನೀಪ್ರಜಾಪತಿನಾಮ ಹರಿಯಿಂದ 23 ಖ್ಯಾತ ಮೂರ್ತಾ ಮೂರ್ತ ಧಾರಕೆ ತತ್ವಪತಿಗಳ ಪೋಷತನುವಲಿ ಮೃತ್ಯುಹಾಗಶನಾಪಿಪಾಸಾಪಾನ ನಾಮಗಳ | ಎತ್ತಿ ನಡಿಸುವೆ ದೇಹ ಕಾರ್ಯವ್ರಾತ ಬಿಡಲೇನೊಂದು ನಡೆಯದು ಮಾತರಿಶ್ವನೆ ನಿಧಿಗು ಆರ್ಯುರ್ದಾತ ನೆನಿಸಿರ್ಪೆ 24 ಅನ್ನ ವಿಧಿಯಿಂ ಕೊಂಬೆ ಸಮಸರಿ ಯನ್ನ ಬ್ರಹ್ಮಗೆ ಜೀವ ಗಣತಾವುಣ್ಣಲಾರರು ನಿನ್ನ ಬಿಡೆ ಪ್ರಾಣದಿ ಪಂಚಕನೆ | ಸ್ವಪ್ನ ನಿದ್ರಾ ಸಮಯದೊಳ್ ಹರಿಯನ್ನು ಕೂಡಿರೆ ಕರಣಪರು ಘನಯಜ್ಞ ನಡಿಸಿ ಸರ್ಮರ್ಪಿಸುವೆ ನೀನೊಬ್ಬ ದೇವನಿಗೆ 25 ನಿನ್ನ ನಂಬಿದ ಭಕ್ತನಿಗೆ ಭವ ಹುಣ್ಣು ಮುಟ್ಟದು ವಿಷ್ಣು ವಲಿಯುತ ಮನ್ನಿಸುವ ಹರಿಯಾಜ್ಞೆಯಿಂಮುಕ್ತಿದನು ನೀ ಹೌದು | ವಿಶ್ವ ವಂಶನೆ ನಿನ್ನ ಮಹಿಮೆಯಗಣ್ಯ ಸಿದ್ಧವು ನಿನ್ನ ಧೊರೆ ಹರಿ ಒಬ್ಬ ಜೀವೋತ್ತುಮನೆ ಅಶರೀರ26 ಜ್ಞಾನ ಬಲ ಐಶ್ವರ್ಯಗಳು ಪರಿಪೂರ್ಣ ಸರಿ ವೈರಾಗ್ಯ ಹಾಗೆಯೆ ಪ್ರಾಣನಿನ್ನಲಿ ಕರಿಸುವೆಯೊ ಆಧ್ಯರ್ಧ ನಾಮದಲಿ | ಮಾನ್ಯ ವಿಷ್ಣುಸಹಾಯ ನಿನಗೈನ್ಯೂನ ವಿಲ್ಲವು ಯಾವ ತೆರದಲುಕಾಣೆ ಅಪಜಯ ಜೀವ ಸಾಧನೆಯೆಲ್ಲ ನಿನ್ನಿಂದ 27 ಶೇಷಗಸದಳ ನಿನ್ನ ಪೊಗಳಲು ಶೇಷ ಸರಿ ಬಡದಾಸನಹೆ ವಿಶ್ವಾಸದಿಂ ಸಂವತ್ಸರನೆ ನೀಕಾಯಬೇಕೆಂಬೆ | ಏಸು ಜನ್ಮಗಳನ್ನು ಕೊಟ್ಟರು ಶ್ವಾಸ ಪತಿತವ ಮತದಿ ಪುಟ್ಟಿಸಿ ದಾಸ ಭಾಗ್ಯವ ನೀಡು ಹರಿಯೊಳ್ ಶುದ್ಧ ಭಕ್ತಿಯುತ28 ಎರಡು ಸಹ ಮೂವತ್ತು ಲಕ್ಷಣ ವಿರುತಿಹ ಜಗದ್ಗುರುವೆ ವಿಷ್ಣುವಿಗೆರಡು ಎರಡು ಸರಿಯೆಂತೆಂದು ಸ್ಥಾಪಿಸಿ ಎರಡು ವಿದ್ಯೆಗಳಿರವು ತೊರುವ ಲೆರಡು ಸುಖಗಳ ಪಡೆಯೆಸಾಧನ ಮಾರ್ಗ ನೀಡ್ವೆಬತ 29 ಸರ್ವ ಶಕ್ತನೆ ಶರ್ವ ವಿನುತನೆ ಸರ್ವ ಸರ್ವಗ ಹಿರಿಯ ತನಯನೆ ಸರ್ವ ಜಗದಾಧಾರ ಪೋಷಕ ಸರ್ವ ತೋವರನೆ | ಸರ್ವ ಕಾಲದಿ ಸರ್ವ ದೇಶದಿ ಸರ್ವ ಗುಣದಿಂ ಹರಿಯ ಯಜಿಸುವ ಸರ್ವ ಸದ್ಗುಣ ಪೂರ್ಣ ದೋಷವಿದೂರ ಸರ್ವಜ್ಞ 30 ಹಿಂದೆ ಪೂರ್ವಜರೆಲ್ಲ ಕೂಡುತಲೊಂದು ಪಾಯವಗೈದು ಮೃತ್ಯುವತಂದು ದಿವಿಜ ವೃಂದಕೆ ಕುಂದು ವದಗಿಸಲು | ಕಂದುತಳಿಯಲ್ ನಿಖಿಲ ಸುರಗಣ ಕುಂದು ಮೃತ್ಯುವ ಗೈದು ಪುಡಿಪುಡಿ ವಂದನಾರ್ಹನು ಒಬ್ಬನೀನೇ ಯೆಂದು ಸ್ಥಾಪಿಸಿದೆ 31 ಪಾಹಿ ಅಮ ಶುಚಿ ಯೊಗ ಕ್ಷೇಮನೆ ಪಾಹಿ ಅಮರಲಲಾಮ ಅನಿಲನೆ ನಿರವದ್ಯ | ಪಾಹಿ ಸತ್ಯ ವಿಶುದ್ಧ ಸತ್ವನೆ ಪಾಹಿ ಲಕ್ಷ್ಮೀ ಪುತ್ರ ಭೃತ್ಯನೆ ಪಾಹಿ ಜೀವಗ ಬಾದರಾಯಣಪ್ರೀಯ ಮಹರಾಯ 32 ಪಾಹಿ ಹನುಮನೆ ಭೀಮ ಮಧ್ವನೆ ಪಾಹಿ ದುರ್ಮತ ಧ್ವಾಂತ ಸೂರ್ಯನೆ ಪಾಹಿ ನತಜನ ಪಾಲ ಪ್ರಾಣನೆ ಪಾಹಿ ಶ್ರೀಸುತನೆ | ಪಾಹಿ ಜಗದಾಧಾರ ಸೂತ್ರನೆ ಪಾಹಿ ಸಾಮನೆವಂಶ ದೂರನೆ ಪಾಹಿ ಹರಿಯಚ್ಛಿನ್ನ ಭಕ್ತನೆ ಪಾಹಿ ವಿಜ್ಞಾನ 33 ಪಾಹಿ ಋಜುಪತಿ ವಾಯುಕೂರ್ಮನೆ ಪಾಹಿ ಜೀವ ಲಲಾಮ ಗುಣನಿಧಿ ಪಾಹಿ ಶುಚಿ ಸರ್ವಜ್ಞ ಸಾಮಗಭಾವಿ ಶತಮೋದ | ಪಾಹಿ ಸತ್ಯನೆ ಕಲಿವಿದಾರಣ ಪಾಹಿ ಗುರು ಗೋವತ್ಸ ರೂಪಿಯೆ ಪಾಹಿ ಮಿಷ್ಣು ಪದಾಬ್ಜಮಧುಕರ ಭಾರತೀ ಕಾಂತ 34 ಪಾಹಿ ಅಮೃತನೆ ವಿಶ್ವರಜ್ಜುವೆ ಪಾಹಿ ಬೃಹತೀ ಛಂದ ಮಾನಿಯೆ ಪಾಹಿ ಹಂಸೋಪಾಸಕ ಪ್ರಭು ಆಖಣಾಶ್ಮಸಮ | ಪಾಹಿ ಸಾಯಂಖ್ಯಾತ ಜೀವಗ ಪಾಹಿ ಜಗಚೇಷ್ಠಾ ಪ್ರವರ್ತಕ ಪಾಹಿ ಅನಿಲನೆ ಶೇಷವಿಪಶಿವ ವಂದಿತಾಂಘ್ರಿಯುಗ 35 ಪಾಹಿ ಪರಿಸರ ಪಂಚ ಕೋಶಗ ಪಾಹಿ ಗುಣನಿಧಿ ಕೊವಿದೋತ್ತಮ ಪಾಹಿ ನಮಿಸುವೆ ಅಣುಮಹದ್ಘನ ರೂಪ ವಿಖ್ಯಾತ | ಪಾಹಿ ವಿಶ್ವಗ ವ್ಯಸನ ವರ್ಜಿತ ಪಾಹಿ ಹರಿಯನು ನಿತ್ಯನೋಳ್ಪನೆ ಪಾಹಿ ವಿಷ್ಣುದ್ವಾರ ಶರಣೈ ಪಾಹಿ ಹರಿ ಸಚಿವ 36 ಜಯ ಜಯವು ಶ್ರೀ ಹನುಮ ಭೀಮಗೆ ಜಯ ಜಯವು ಶ್ರೀ ಮಧ್ವರಾಯಗೆ ಜಯ ಜಯವು ತತ್ವೇಶರರಸಗೆ ಮುಖ್ಯಪ್ರಾಣನಿಗೆ | ಜಯ ಜಯವು ಜಯತೀರ್ಥ ಹೃಸ್ಥಗೆ
--------------
ಕೃಷ್ಣವಿಠಲದಾಸರು
ವಾಸುದೇವ ಎನ್ನ ಘಾಸಿಗೊಳಿಸದೆ ನೀ ಸಲಹಲಿ ಬೇಕೊ ಪ. ಈ ಶರೀರದೊಳು ಮಾಯಾಸಹಿತ- ದಿ ಶ್ವಾಸನಾಡಿಯೊಳು ವಾಸವಾಗಿಹ ಅ.ಪ. ಅನಿರುದ್ಧ ನಾಮದಿ ಅನುದಿನ ಸಲಹುತಲಿ ದನುಜನಾದ ಪಾಪಾತ್ಮನ ನಾಭಿಯೊಳ್ ಅನಿಲನಿಂದಲಿ ಶೋಷಿಸುವೆ ಪ್ರದ್ಯುಮ್ನ 1 ಹೃದಯದಿ ರಕ್ತವರ್ಣದಲಿ ನೀನಿರುತಲಿ ಸಂಕರ್ಷಣನೆನಿಸಿ ಪದೋಪದಿಗೆ ಪಾಪಾತ್ಮಕನನು ಸುಟ್ಟು ಸದಮಲ ಹೃದಯವ ಶುದ್ಧಿಗೈಯ್ಯುವ 2 ಮಧ್ಯದಿ ನಾಡಿಯ ಮಧ್ಯದ ಹೃದಯ ಪದ್ಮ ಮಧ್ಯ ಎಂಟು ದಳದಿ ವಿದ್ಯಮಾನನಾಗಿ ಬಿಂಬನೆನಿಸಿ ನಿನ್ನ ಪೊದ್ದಿಹ ಜೀವರ ಭಾವನೆಯಂತೆ ಕಾಂಬೆ 3 ಕೊಳಲನೂದುವ ನಿನ್ನ ಚಲುವರೂಪದ ಕಾಂತಿ ಪೊಳಲೆಲ್ಲ ತುಂಬುವುದೊ ನಳಿನಾಕ್ಷಿಯರ ಕೂಡಿ ಥಳಥಳಪ ನಿನ್ನ ಬಲು ಸಂಭ್ರಮದೊಳು ಸುರರೆಲ್ಲ ಸ್ತುತಿಪರೊ 4 ಸಿರಿ ಸಹಿತದಿ ಇರುವೆ ವರನಾಡಿ ಮಾರ್ಗದಿ ಅರಿತು ಭಜಿಸೆ ಮುಕ್ತಿ ಪೊರೆಯುವ ಬಿರುದುಳ್ಳ ಗೋಪಾಲಕೃಷ್ಣವಿಠ್ಠಲ5
--------------
ಅಂಬಾಬಾಯಿ
ವಾಸುದೇವ ವಾರಿಜಾಕ್ಷನಾ ಸ್ತುತಿಸು ಮನದಿ ಪ ಸಾಸಿರನಾಮದೊಡೆಯ ಸಕಲಲೋಕಕರ್ತನಾದ ಸುಜನ ಪೋಷಕ ಭಕ್ತವಿಲಾಸ ಅ.ಪ ಪಂಕಜೋದರ ಪರಮ ಪಾವನ ಸರ್ವಜಗವ ಬಿಂಕದಿಂದ ಪೊರೆವ ದೇವನಾ ಶಂಕೆಯಿಲ್ಲದ ದನುಜ ಮರ್ದನನಾದ ತನ್ನ ಕಿಂಕರರÀನು ಬಿಡದೆ ಕಾಯುವಾ ವೆಂಕಟಾದ್ರಿ----ದ ವೇಣುನಾದದಲಿ ಬುಧವಂದ್ಯ ಶಂಕರಾದಿ ದೇವ ದೇವ ಶರಧಿಶಯನ ಶಾಶ್ವತನಾದ 1 -----ಶ್ವ ರೂಪನಾ ಎಂದು ಎಂದಾನಂದ ದಿಂದ ಅನುದಿನ ಚಂದದಿಂದ ---ಸನಾ |----ಭವ ಬಂಧಕವನೆ ಪರಿಹರಿಸುವನಾ ಕಂದ ಕೂಗಲು ಕಂಭದಿಂದಾ ಬಂದ ನಾರಸಿಂಹನ ಮೂರ್ತಿ 2 ----------ಮಹಾನುಭಾವ ಕಂಡ ಮುನಿಗಳಂತರ್ಭಾವನಾ ಕುಂಡಲೀಶÀ ಭೂಷಣ ಪ್ರೀಯನಾಕರ ಘನಾ ಕೋದಂಡಧರ ಶ್ರೀರಾಮನಾದನಾ ಪುಂಡಲೀಕ ವರದಹರಿ-----ತನಾದ ವೇದವೇದ್ಯ ಅಂಡಜನ--------ಹರಿ 'ಹೊನ್ನಯ್ಯ ವಿಠ್ಠಲ’ ನಾದ 3
--------------
ಹೆನ್ನೆರಂಗದಾಸರು
ವಿಘ್ನೇಶ ಪ್ರಿಯ ವಿಠಲ | ಸದ್ಗುಣಾರ್ಣವನೇ ಪ ದುರಿತ | ಉದ್ಧರಿಸೊ ಇವನಾ ಅ.ಪ. ಮೂಲ ಕಾರಣ ಜಗಕೆ | ಪಾಲಾಬ್ಧಿಶಯ ನಿನ್ನ ಲೀಲೆಗಳ ತೋರುತ್ತ | ಸಲಹೊ ಇವನಾಕೀಲಾಲ ಜಾಸನುತ | ಮಾಲೋಲ ಶ್ರೀ ಹರಿಯೆವ್ಯಾಳ್ಯ ವ್ಯಾಳ್ಯಕೆ ಪಾಪ | ಜಾಲಗಳ ಹರಿಸೋ 1 ಆಪ್ತ ಸತಿಸುತರಲ್ಲಿ | ವ್ಯಾಪ್ತ ನಿಹ ಹರಿಯೆಂದುಸೂಕ್ತೋಪಚಾರಗಳ | ಪ್ರಾಪ್ತಿಗೈಸುತಲೀ |ಮೌಕ್ತಿಕೋ | ಪಾಯವೇ | ದೋಕ್ತಸಮನಿಸುತಕೀರ್ತಿಕೊಡಿಸಿವಗೆ ಶ್ರೀ | ಕಾಂತ ಮೂರುತಿಯೇ2 ಪಾಂಚ ಭೌತಿಕ ದೇಹ | ಪಂಚತ್ವ ಪಡೆವುದನೆಸಂಚಿಂತನೆಯ ಕೊಟ್ಟು | ಪಂಚ ಪಂಚಾತ್ಮಾಮುಂಚೆ ತಿಳಿಸಿವಗೆ ಸ | ತ್ಪಂಚ ಭೇದ ಜ್ಞಾನವಾಂಛಿತಾರ್ಥದನಾಗೊ | ಅಂಚೆವಹಪಿತನೇ 3 ನಂದ ಮುನಿ ಮತದ ಮಕ | ರಂದ ಉಣಿಸುತ ಇವಗೆಸಂದೇಹ ಕಳೆದು ಆ | ನಂದಗಳ ನೀಯೋಇಂದಿರಾರಾಧ್ಯ ಪದ | ಮಂದಾಕಿನೀ ಜನಕಕಂದನನು ಕಾಪಾಡು | ಯೆಂದು ಪ್ರಾರ್ಥಿಸುವೇ 4 ಕಾಲ | ಯಾವ ಸಮಯದಲಿರಲಿದೇವತವ ಸಂಸ್ಮರಣೆ | ಭಾವದಲಿ ಮಾಳ್ವಾಭಾವ ಪಾಲಿಸುತಿವಗೆ | ನೀವೊಲಿಯ ಬೇಕೆಂದುದೇವ ಪ್ರಾರ್ಥಿಪೆ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಿಜಯವಿಠಲರಾಯಾ | ನಂಘ್ರಿಯುಗ ಭಜಿಸುವ ವಿಜಯರಾಯನೆ ಜೀಯ ರಜದೂರ ತವಪದ ಭಜಕ ನಾನೆನಿಸಯ್ಯ ಋಜುರಾಜ ಪ್ರೀಯ ಕುಜನ ಸಂಗದಿ ಬೆರೆದು ಮನಹರಿ ಭಜನೆಗೊದಗದು ಎಷ್ಟು ಬೇಡಲು ದ್ವಿಜವರೇಣ್ಯನೆ ಎಮ್ಮ ಬಾಂಧವ ಸೃಜಿಸು ಶ್ರೀಧರನೊಲಿಮೆ ಶಕ್ತಿಯ 1 ಸೂನು ಎನಿಸಿದೆ ನಾನು ಕುಲಸ್ವಾಮಿ ಕೃಷ್ಣನ ಧ್ಯಾನ ಪಾಲಿಸು ಇನ್ನು ದಾನಿ ಸುರಧೇನು ಜ್ಞಾನ ಭಕ್ತಿ ಧ್ಯಾನಯೋಗದಿ ವೇಣುಗೋಪಾಲನ್ನ ಹೃದಯ ಪ್ರ ಧಾನ ನಾಡಿಯ ಮಧ್ಯ ಕುಣಿಸುವ ತ್ರಾಣ ತರಿಸು ತೀವ್ರ ಮಹಿಮನೆ 2 ಲೋಕನಾಥನ ಪ್ರೇಮ | ಭೋಗಿಸುವ ಯೋಗಿಯೆ ಸಾಕು ಸದ್ಗುಣಧಾಮ ಬಾಗಿದಿನೊ ನಿನ್ನ ಅಂಘ್ರಿಗೆ | ಶೋಕ ಸಲ್ಲದೊ ನೇಮ ಸ್ವೀಕರಿಸು ಎಮ್ಮ ಏಕ ಭಕ್ತಿಯ ಭಾಗ್ಯ ಪಾಲಿಸು ಶ್ರೀ ಕಳತ್ರನ ಸಂಗಮತ್ತನೆ ಅ- ನೇಕ ಭಕ್ತಗ್ಹರಿಯ ತೋರಿದೆ ನಾಕ ತರು ಕರುಣಾಳು ಗುರುವರ 3 ದಾಸ ವರ್ಗದ ದೊರೆಯೆ | ಲಜ್ಜೆಯಾಗುತಿದೆನ್ನ ದೋಷರಾಶಿಗಳೊರಿಯೆ ಹಸಗೆಟ್ಟು ಬಗೆ ಬಿನ್ನೈಸಲಾಗದೊ ಖರಿಯೆ ಬ್ಯಾಸರದ ಪೊರಿಯೆ ಕಾಸು ಬಾಳದ ಎನ್ನಕರಗಳ ಶ್ರೀಶ ಪಿಡಿವನು ಲೇಸು ಕರುಣದಿ ವಾಸುದೇವಗೆ ದಾಸ ಜನರೊಳು ಸೂಸಿ ಸುರಿವುದು ಸ್ನೇಹ ಸಂತತ 4 ದಾತರೊಳು ಸರಿದಾರೊ | ಹರಿದಾಸವರ್ಯನೆ ಆತುಮಪ್ರದ ತೋರೋ ನಿನ್ನಂಥ ದಾತರ ನಾ ತಿಳಿಯ ದಯ ಬೀರೊ ಆರ್ತಿಯನು ಹೀರೋ ಖ್ಯಾತ ನಿನ್ನಯ ಮಾತು ಒಮ್ಮೆಗು ಮಾತರಿಶ್ವನನಾಥ ಮೀರನು ಆತುರದಿ ನಿನ್ನಂಘ್ರಿಗೆರಗುವೆ ಭೂತ ಪಾಲಿಸು ಹರಿಯ ಒಲುಮೆಗೆ 5 ಸುರತರು ಚಿಂತಾಮಣಿಗಳಂದದಿ ಮಹ ವರಗಳೀವ ಶ್ರೀಮಂತ ಭಾರತೀಶನ ಶ್ರೀ ಚರಣ ಬಿಡದಿಹ ಸ್ವಾಂತ ಪರಮ ನಿಶ್ಚಿಂತ ಚರಣ ಕಮಲದಿ ಮೊರೆಯನಿಟ್ಟನ ಕರದ ಶಿಶುಗಳಂತೆ ಪಾಲಿಸಿ ಮರುತ ಮಂದಿರ ಜಯೇಶವಿಠಲನ ಭರದಿ ತೋರಿದ ಕರುಣ ಸಾಗರ 6
--------------
ಜಯೇಶವಿಠಲ
ವಿಠಲಾ ಕಳೆಮದವಿದ್ಯಾ ಪಟಲಾ |ನಿಟಲಾಕ್ಷನ ಸಖಸಂ | ಕಟ ಕಳೆ ನಿಮ್ನಟಲನ ಮಾಡುತ ಪ ತುರಗ ಗ್ರೀವಾಭಿಧನೆಂಬಸುರಾ | ವೇದಾಪಹಾರನೆರೆವೇರಿಸೆ ಸ್ವೀಕರಿಸವತಾರಾ | ಹಯಮುಖನಾಕರ |ಅರಿಶಿರ ಸರಸದಿ ತತ್ತರಿಸುತ ನೀಸುರರುಗಳನು ಬಹು ಪರಿಪೋಷಿಸಿದ್ದೆ 1 ಧರೆಯನಪಹರಿಸಲು ಸುರವೈರೀ | ವರಾಹಾವತಾರಿತ್ವರದಿ ಹಿರಣ್ಯಾಕ್ಷನ ಸಂಹಾರೀ | ನೀನಾದೆ ಮುರಾರಿ |ಧರಣಿಯ ಕೋರೆಯ ದಾಡಿಯಲೆತ್ತುತ್ತಸುರ ಜೇಷ್ಠಗೆ ತಂದೊಪ್ಪಿಸಿದ್ಯೆಯ್ಯ | 2 ತುರಗವ ನೀನೇರುತ ಬಂದೂ | ನಿನಪುರದೊಳಂದುಇರೆ ಧೇನೂಪಲಾರ್ಯರು ಅಂದು | ನೋಡಿ ಚಕಿತರಂದೂಗುರು ಗೋವಿಂದ ವಿಠಲಾಲೇನಾಹಿ ಎಂದುಬರಿದೋಡಿದೆ ನೀ ದರುಶನ ಕೊಡದೇ 3
--------------
ಗುರುಗೋವಿಂದವಿಠಲರು
ವಿದ್ಯಾ ಪ್ರಸನ್ನ ಶ್ರೀ ಯತಿಕುಲ ಗುರುರನ್ನ ಸದ್ವ್ಯೆಷ್ಣವ ಘನ್ನ ಪ. ಸಿದ್ಧಸಾಧನ ಮಧ್ವಮುನಿಯ ಚಿನ್ಹ ಧರಿಸಿದ ಬಹುಮಾನ್ಯ ಅ.ಪ. ವಿದ್ಯಾರತ್ನಾಕರ ಯತಿ ಕರಕಮಲದಿ ಜಾತ ಮುದ್ದು ಕುವರನೀತ ವಿದ್ಯಾವಾರಿಧಿ ಮುನಿಕರ ಸಂಜಾತ ಯತಿವರನಾದಾತ ಮಧ್ವಗ್ರಂಥಗಳ ಮನನ ಮಾಡಿದಾತ ಬಹುಮತಿಯುತನೀತ ಬುದ್ಧಿಕುಶಲದಿ ಬುಧರನು ಪೊರೆವಾತ ಸುಜನರ ಮನದಾತ 1 ವ್ಯಾಸತೀರ್ಥನ ಆಸ್ಥಾನಕೊಡೆಯರಾಗಿ ದುರ್ಗುಣಗಳ ನೀಗಿ ಆಸೆಯಿಂದ ಶ್ರೀ ಕೃಷ್ಣನ ಚನ್ನಾಗಿ ಪೂಜಿಸುತಲಿ ಬಾಗಿ ದಾಸತ್ವದ ಲಕ್ಷಣ ತಿಳಿದವರಾಗಿ ವಿಷಯ ಸಂಗ ತ್ಯಾಗಿ ಪಸನ್ನ ಕೃಷ್ಣನೆಂಬಂಕಿತವನೆ ಇಟ್ಟು ಪದರಚಿಸಿದ ಗುಟ್ಟು 2 `ವಿ' ಎನ್ನಲು ನರವಿಷಯ ಸಂಗದೂರ `ಧ್ಯಾ' ಎನೆ ಧ್ಯಾನವರ `ಪ್ರ' ಎನಲು ಸದ್ಗುಣನು `ನ್ನ' ಎನ್ನಲು ಶ್ರೀ ನರಹರಿ ತಾನೊಲಿವ `ತೀ' ಎನೆ ತೀರ್ವ ಭವ `ರ್ಥಾ' ಎನ್ನಲು ಪುರುಷಾರ್ಥ ಪಡೆದ ಭೋಗಿ `ರು' ಎನೆ ರುಜುಮಾರ್ಗಿ 3 ವಿದ್ಯಾಪ್ರಸನ್ನತೀರ್ಥರು ಎಂದೆನ್ನುತಲಿ ಸ್ಮರಿಪರ ಸಲಹುತಲಿ ಮುದ್ದುಕೃಷ್ಣ ಪಟ್ಟಾಭಿರಾಮನಂಘ್ರಿ ಸಚ್ಚರಿತ ಪ್ರಸಂಗಿ ಸದ್ವಿದ್ಯಗಳಿಗೆ ಗರ್ವರಹಿತ ಭಾವ ಬಹು ಸರಳ ಸ್ವಭಾವ ಹೃದ್ವನಜಸÀ್ಥನ ಕಾಂಬ ಮುನಿವರೇಣ್ಯ ಸದ್ಭಕ್ತ ಶರಣ್ಯ 4 ಮಂದ ಮತಿಯು ನಾನು ಕ್ಷಮಿಸು ತಂದೆ ನೀನು ಕುಂದನೆಣಿಸದೆ ಗುಣಗ್ರಹಿಸುತಲಿನ್ನು ಶ್ರೀ ಹರಿ ನುಡಿಸಿದನು ತಂದೆ ಮುದ್ದುಮೋಹನರ ಕೃಪೆಯಿಂದ ರಚಿತ ಪದದಂದ ಮಂದರಧರ ಗೋಪಾಲಕೃಷ್ಣವಿಠ್ಠಲ ಗರ್ಪಿತ ಗುಣಮಾಲ 5
--------------
ಅಂಬಾಬಾಯಿ
ವಿವಿಧ ದೈವ ಸ್ತುತಿ ಜಲರುಹ ಮೋಹನ ವಿಶಾಲ ನೇತ್ರ ಪ ಗಾನಾನಂದ ಲೋಲ ಬಂಧುರ ಗಾನಾನಂದ ಲೋಲಾ ಗೋಪಾಲ ವನಮಾಲ ಗೋಕುಲ ಗೋಪಾಲ ವನಮಾಲ ಅ.ಪ ದಶರಥ ನಂದನ ವಿಶಾಲಹೃದಯ ಸತ್ಯಧರ್ಮಶೀಲ ರಾಘವ ಸತ್ಯಧರ್ಮಶೀಲ ಖಲಾಳಿಕುಲಶೂಲ ರಾಘವ ಖಲಾಳಿಕುಲಶೂಲಾ 1 ಪುರಹರ ಶಂಕರ ಕೃಪಾ ಸಮುದ್ರ ನಾಟ್ಯನಾದ ಚತುರ ಶ್ರೀಕರ ನಾಟ್ಯನಾದ ಚತುರ ಪಿನಾಕ ಶಶಿಶೇಖರ 2 [ಶ್ರೀರಾಮಪ್ರಿಯ ಭಕ್ತಾಗ್ರೇಸರ] ಪವನಾತ್ಮಜ ಶೂರ ಹನುಮಾನ್ ಪವನಾತ್ಮಜ ಶೂರ ಮರಕತ ಮಣಿಹಾರ ಮಾರುತಿ ಮರಕತ ಮಣಿಹಾರ 3 ಶರಣ ಜನಾನುತ ಗಿರೀಶ ಸದೃಶ ಸತ್ಯಸಾಯಿಬಾಬ ಪಾಲಯ ಸತ್ಯಸಾಯಿಬಾಬ ಪರಮದಯಾಹೃದಯಾ ಸವಿನಯ ಪರಮದಯಾಹೃದಯ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವೆಂಕಟಾಚಲ ನಿವಾಸಾ-ಜಗದೀಶ ಸಂಕಟ ಹರಿಸೋ ಶ್ರೀಶಾ ಪ ಪಂಕಜಾಸನ ಪ್ರಮುಖ ಶಶಾಂಕಸುರವರಪೂಜಿತ ಅಕಳಂಕಮಹಿಮ ಖಗಾಂಕ ಚಕ್ರಗದಾ ಶಂಖಶ್ರೀಕರಕಂಜಧರಪಾಣೀ ಅ.ಪ ಲೋಕನಾಥ ಲೋಕಬಂಧು-ದಯಾಸಿಂಧು ಭಕುತರನಿಮಿತ್ತಬಂಧು-ಎಂದೆಂದೂ ಭಕುತರ ಬೆಂಬಲನು ಎಂದೂ-ಇಂತೆಂದೂ ಪಾಕಶಾಸನಪೂಜ್ಯ ಪಿನಾಕಿಪಿತ ಸುರಜೇಷ್ಠವಂದ್ಯ ಏಕಮೇವ ನೀ ಕೈಬಿಡದೆ ಕರ್ಮ- ಪಾಕಮಾಡಿಸೋ-ಕಾಲನಾಮಕ1 ಬಂಧಕಗಳ ತಂದೊಡ್ಡೀ-ಭಕುತರ ಮನ ಪರಿ ಧೃಢಮಾಡಿ-ಪರಿಯುನೋಡಿ ಬಂದ ಬಂಧವ ಹರಿಸಿ-ಹೃದ್ವಾಸೀ ಹಿಂದುಮುಂದೂಕಾಣದ ಮಹ- ಅಂಧಕಾರಣ್ಯದಲಿ ಸಲಹಿದೆ ಬಂಧ ಮೋಚಕನಹುದೋ ಅನಾಥ ಬಂಧು ನೀನೆಂದು ನಂಬಿದೇ 2 ಕರುಣಾಸಾಗರನೇ ನಿನ್ನಾ-ನಾ ನಂಬಿದೆ ಸ್ಮರಣೆಯೊಂದನೆ ಪಾಲಿಸೋ ಈ ಜನುಮದೀ ಪರಮಸಾಧನ ಕಾಣದೇ-ಪರಿತಪಿಸುವೇ ನಿರುತ ಭವಸಂಕೋಲೆಯಾ ಕಡಿದು ಪೊರೆಯುವುದೋ ಶ್ರೀ ವೆಂಕಟೇಶನೆ ಸ್ಮರಿಪರಘ ಪರಿಹರಿಪ ಶ್ರೀ- ಉರಗಾದ್ರಿವಾಸವಿಠಲ ಪ್ರಭೋ 3
--------------
ಉರಗಾದ್ರಿವಾಸವಿಠಲದಾಸರು