ಒಟ್ಟು 643 ಕಡೆಗಳಲ್ಲಿ , 75 ದಾಸರು , 379 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಂಗನ್ಯಾಕೆ ಮಮತೆಕೊಟ್ಟು ದಣಿಸುವಿಕೃಷ್ಣ ನೀ ಕರುಣದಿ ಪಾಲಿಸೊ ಪ. ತನುವು ತನ್ನದು ಅಲ್ಲ ....ತನುವಿನ ಸಂಬಂಧಿಗಳೆಂಬೊ ಅವರ್ಯಾರೊನಾನ್ಯಾರೊ ಅವರಿಗೆ ಧನ ಮೊದಲಾದ ವಿಷಯಂಗಳಅನುಭವ ಹಿಂದಿನ ದೇಹದಂತರ ಅರಿಯೆವೊ 1 ನಿನ್ನ ಹಂಬಲಿಸದೆ ಅನ್ಯ ವಿಷಯಗಳಿಗೆನ್ನನೊಪ್ಪಿಸುವದು ನೀತವೆಮನ್ನಿಸಿ ದಯದಿ ನೀ ಯನ್ನ ಪಾಲಿಸಲು ನಾನಿನ್ನ ನೇಮಕೆ ಪ್ರತಿಕೂಲನೆ 2 ಇಂದ್ರಿಯಂಗಳು ವಿಷಯಂಗಳಿಗೆಳೆಯೆ ಗೋ-ವಿಂದಯೆನ್ನ ವಶಕೆ ಬಾರದುಇಂದಿರೆಯರಸ ಬ್ರಹ್ಮೇಂದ್ರವಂದಿತ ಸುಖಸಾಂದ್ರ ಭವಮೋಚಕ ನಮೋ ನಮೋ 3 ಅರಿತು ಅರಿತು ಯನಗರೆಲವವಾದರುವಿರಕುತಿ ವಿಷಯದಿ ಬಾರದುಕರುಣಾಸಾಗರ ನಿಮ್ಮ ದರುಶನವಲ್ಲದೆಮರಳು ನೀಗುವ ಬಗೆ ಕಾಣೆನೊ 4 ಭವ ಮೋಚಕ ನಮೋ ನಮೋ 5
--------------
ಗೋಪಾಲದಾಸರು
ರಂಗಪ್ಪ ಬಂದವ್ನೆ ಬಾಗ್ಲಲ್ಲಿ ನಿಂತವ್ನೆ ಸಿಂಗಾರದಿಂದವ್ನೇ ತೆಂಗಿನಕಾಯ್ಬಾಳೆಹಣ್ತಂದು ನೋಡಿರೋ ಹೊಂಗೂಳನೊತ್ತವ್ನೇ ಪ ನಾಕ್ಮಳ ನಿಂತವ್ನೆ ನೀರಲ್ಲಿ ನಿಂತವ್ನೆ ನಾಕೈಯಾ ಪಡೆದವ್ನೇ ಇಕ್ಕೆಲದಲಿ ಸಂಕುಚಕ್ರವ ಹಿಡಿದವ್ನೆ ರಾಕ್ಷಸನ್ನ ಮೆಟ್ಟವ್ನೆ1 ಗಟ್ಟಿ ಬೆನ್ನಿನ ಮ್ಯಾಗೆ ಬೆಟ್ಟವ ಹೊತ್ತವ್ನೆ ಗಟ್ಟಿ ಗದೇ ಹಿಡಿದವ್ನೇ ಮಟ್ಟಸವಾದ ನಾಕ್ಕಾಲಲ್ಲಿ ನಿಂತವ್ನೆ ಸಿಟ್ಟಿಲ್ಲ ನಗತವ್ನೇ 2 ಮೊಳದುದ್ದ ಮೂಗ್ಯ್ಮಾಲೆ ಭೂಮಿಯ ಹೊತ್ತವ್ನೇ ಬೆಳಸವ್ನೇ ಕೋರೆಹಲ್ಲಾ ತೊಳಲಿಬಳಲವನಪ್ಪ ನಮ್ಮಪ್ಪ ರಂಗಪ್ಪ ಯೆಳನಗೆ ನಗ್ತಾನೇ 3 ಮೂಡ್ತವ್ನೆ ಕಂಬ್ದಲ್ಲಿ ನರಸಿಮ್ಮನಾಗವ್ನೆ ಹಿಡಿದವ್ನೆ ದೊಡ್ರಾಕ್ಷಸ್ನಾ ದೊಡ್ದುಗ್ರಲೊಟ್ಟೆಯ ಬಗಿತವ್ನೆ ಸಿಗಿತವ್ನೆ ಕೊಡುತೀನ್ವರವನೆಂತಾನೇ 4 ಗಿಡ್ಡ ಹಾರುವನಂತೆ ಮೂರೆಜ್ಜೆ ಭೂಮಿಯನಡ್ಡಡ್ಡ ಅಳೆದವ್ನೆ ಪಾಡ್ಯದ ಹಬ್ದಲ್ಲಿ ಬಲಿಯ ಕರೆತರುತಾನೆ ಬೇಡಿದ್ದ ಕೊಡುತಾನೇ 5 ಜಯ ಜಯ ಜಯವೆಂತಾನೇ ಕೈಯಲ್ಲಿ ಹಿಡಿದವ್ನೆ ಗಂಡುಗೊಲ್ಲಿಯ ನೋಡೋ ಭಯವಿಲ್ಲ ಕೈಮುಗಿಯೋ 6 ಶಿವನ ಬಿಲ್ಮುರಿದವ್ನೆ ರಾವಣನ ತರಿದವ್ನೆ ಭೂಮಿಯೆಲ್ಲವಾಳ್ತವ್ನೆ ತವಕದಿ ನೋಡಿರೆಲ್ಲಾ 7 ಮಡುವಿಗೆ ಧುಮುಕಿ ಕಾಳಿಂಗನ ತುಳಿದವ್ನೆ ಹಿಡಿದವ್ನೆ ಹೊಂಗೊಳಲಾ ಮಾನವ ಕಡುರೂಪವಂತ ನಮ್ಮ 8 ಮತ್ತರ ಮಡದೀರ ವ್ರತವನು ಕೆಡಿಸಲು ಬೆತ್ತಲೆ ನಿಂತವ್ನೇ ಕೃತ್ತಿವಾಸನ ಕೈಯ್ಯೊಳಿಂಬಾಗಿ ನಿಂದವ್ನೆ ಉತ್ತಮ ದೇವನಮ್ಮ 9 ದುರುಳರನೊದೆಯಾಕೆ ಹೊಂಟವ್ನೇ ಪದಕಮಲಕೆ ಯೆರಗೋ 10 ಮುದ್ದು ರಂಗಪ್ಪನಿಗೆ ಪೊಂಗಲು ನೇವೇದ್ಯ ಸಿದ್ಧ ಮಾಡಿರಯ್ಯಾ ಬದ್ಧವು ಅವ ನಮ್ಮ ಕಾಯೋದು ಸಟೆಯಲ್ಲ ಎದ್ದೆದ್ದು ತಲೆಬಾಗಿರೊ 11 ರಾಮನು ಅವನೇ ಕಾಮನಪ್ಪನು ನಿಸ್ಸೀಮ ನಮ್ಮ ರಂಗನೇ ರಾಮದಾಸನ ಮನದೊಳು ಮನೆ ಮಾಡ್ಯವ್ನೇ ಪಾಮರ ವರದನೆಂಬ ಮಾಂಗಿರಿ 12
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಾಮ ರಾಮೆನ್ನಿರೊ ಸೀತಾಪತಿ ರಾಮ ರಾಮೆನ್ನಿರೊಪ. ಗಂಗೆಯೊಳ್ ಮುಳುಗಲ್ಯಾಕೆ ನಡೆದು ಬಲು ಭಂಗವ ಪಡುವುದ್ಯಾಕೆ ಮಂಗಲದಾತ ನರಸಿಂಗನ ನಾಮವ ಹಿಂಗದೆ ನೆನೆದರಿಷ್ಟಂಗಳ ಕೊಡುವ1 ಉಪವಾಸ ಮಾಡಲ್ಯಾಕೆ ಕಪಟದೊಳು ಗುಪಿತದಿ ಕುಳ್ಳಲ್ಯಾಕೆ ಉಪಮೆರಹಿತ ಶ್ರೀಪತಿ ಕೃಷ್ಣರಾಯನ ಜಪಿಸಿ ಬಂದರೆ ಜನ್ಮ ಸಫಲವಾಗುವುದಲ್ಲೋ2 ಧ್ರುವನು ಸದ್ಗತಿ ಪಡೆದ ಕರುಣದಿಂದ ಪವಮಾನಿಗೆ ಒಲಿದ ಭುವನ ಈರಡಿ ಮಾಡಿ ಬಲಿಯನ್ನು ಸಲಹಿದ ಬವರದೊಳಗೆ ದಾನವರನ್ನು ಮಡುಹಿದ3 ಯಾತ್ರೆಗೆ ಪೋಗಲ್ಯಾಕೋ ಕಾವಡಿ ಪೊತ್ತು ತೀರ್ಥಸ್ನಾನಗಳ್ಯಾತಕೋ ಮಾಧವ ಶತಪತ್ರನಾಭನ ಸಂ- ಕೀರ್ತನಾದಿಗಳೆ ಪರತ್ರಸಾಧನವಲ್ಲೊ4 ಭೂರಿಯಾಯಾಸವ್ಯಾಕೋ ಬರಿದೆ ಸಂ- ಸಾರವ ನಂಬಲ್ಯಾಕೋ ಮಾರಾರಿಸಖ ಲಕ್ಷ್ಮೀನಾರಾಯಣನನ್ನು ಸೇರಿ ಭಜಿಪರ ಉದ್ಧಾರಮಾಡುವ ಶ್ರೀ5
--------------
ತುಪಾಕಿ ವೆಂಕಟರಮಣಾಚಾರ್ಯ
ಲೇಸು ಮಾಡಿದೆ ಮಾತೆ ಪುಣ್ಯದ ರಾಶಿ ಎನಗೊದಗಿತು ಭಲ ಪ ಆಶೆಯನು ಪೂರೈಪೆನಿಂದಿನ ಘಾಸಿಯಾಕೆ ದ್ವಿಜರಿಗಲಾ ಅ.ಪ ಬಂಡಿಯನ್ನವು ಪಾಯಸವುಸುಖಿ ವುಂಡು ತೇಗುತ ಬರುವೆನು1 ಶಾನೆ ಖಾರದಪ್ಪಳ ಸಂಡಿಗೆಯು ನೂರಾರು ಬೆಂಡು ಪುಟ್ಟಿಗೆಗಳು 2 ದೋಸೆ ಕೋಡುಬಳೆಯಪ್ಪಗಳು | ಸೋ- ಮಾಸಿ ಹೂರಗಿ ಮಾಡಿಸು ಸೂಸಲುಪ್ಪಿನಕಾಯಿಗಳನ್ನು ರಾಸಿ ರಾಸಿಯು ತುಂಬಿಸು 3 ಎಲ್ಲವನು ಹೆಚ್ಚಾಗಿ ಮಾಡಿಸು ನಿಲ್ಲದೀಗಲೆ ಪೋಗುತಾ ಸುಳ್ಳಿದಲ್ಲವು ತಿಳಿಯುತ 4 ಕುಡಿವೆ ಭುಜವಪ್ಪಳಿಸಿ ನಾಂ ಸಡಗರವೆನಗೆ ಗೈದ ತಾಂ 5
--------------
ಗುರುರಾಮವಿಠಲ
ಲೋಕನೀತಿ ಏನು ಮಾಡಿದರೇನು ಹಾನಿಯಾಗದು ಪಾಪ ಶ್ರೀನಿಕೇತನನ ದಿವ್ಯನಾಮ ನೆನೆಮನವೆ ಪ ಕ್ಷಣ ಪದಕಮಲಗಳ ಸ್ಮರಿಸಿ ಮನದೊಳಗೆ ಪ್ರತಿ ಕ್ಷಣಕ್ಷಣದಿ ಹರಿ ಮಹಿಮೆ ಭಜಿಸಿ ಭಕ್ತಿಯಲಿ ತೃಣ ಘನದೊಳಿಹನು ಹರಿ ಎನುತ ಚಿಂತಿಸಿ ಮನದಿ ಪ್ರಣವ ಪ್ರತಿಪಾದ್ಯನಂಘ್ರಿಯ ಭಜಿಸದನಕ 1 ಕಪಟನಾಟಕ ಸೂತ್ರಧಾರಿ ಶ್ರೀ ಹರಿಯ ಗುಣ ಅಪರಿಮಿತ ಮಹಿಮೆಗಳ ಭಜಿಸಿ ಹಿಗ್ಗುತಲಿ ಚಪಲ ಬುದ್ಧಿಗಳಿಂದ ತಪಿಸಿ ಕಂಗೆಡದೆ ಮನ ಅಪರೂಪ ಹರಿನಾಮ ಜಪ ಮಾಡದನಕ 2 ದಾನಧರ್ಮಗಳಿಂದ ಧನ್ಯನಾದೆನು ಎನಲು ಹಾನಿಯಾಗೋದು ಆಯು ಪ್ರತಿ ನಿಮಿಷದಿ ಸ್ನಾನ ಜಪತಪದೊಳಗೆ ಯಾರೆನಗೆ ಸರಿ ಎನದÉ ಮೌನದಿಂದ್ಹರಿ ನಾಮ ಧ್ಯಾನಿಸುವತನಕ 3 ಕ್ಲೇಶ ಆನಂದಗಳು ಈಶನಾಜ್ಞೆ ಇದೆಂದು ವಾಸುದೇವನೆ ಜಗತ್ಪ್ರೇರಕನು ಎಂದು ಶ್ವಾಸ ಬಿಡುವ ಶಕ್ತಿ ಲೇಸು ತನಗಿಲ್ಲ ಸ- ರ್ವೇಶ ನಿನ್ನಧೀನವೆಂದರಿವ ತನಕ4 ಗಾತ್ರ ಶೋಷಣೆಯಾಕೆ ಪಾರ್ಥಸಖನಂಘ್ರಿಗಳ ಕೀರ್ತಿಸುತ ಮನದಿ ರಾತ್ರಿ ಹಗಲು ಕಮಲನಾಭ ವಿಠ್ಠಲನ ಶ್ರೀಮೂರ್ತಿಯನೆ ನೆನೆನೆನೆದು ಸುಖಿಯಾಗೊ ಮನವೆ5
--------------
ನಿಡಗುರುಕಿ ಜೀವೂಬಾಯಿ
ಲೋಕಪಾಲನೆ ನಾಕವಂದ್ಯನೆ ಸಾಕುಬಿಡು ಚಲವಾ ಯಾಕೆ ಕೋಪ ದೀನ ನಾನೆಲೈ ಶ್ರೀಕರ ಸುಗುಣಾ ಪ ಕಾವರಿಲ್ಲವೋ ದೇವ ದೇವನೆ ಭಾವಜಾತಪಿತನೆ ಜೀವಕೋಟಿಯ ಜೀವರಾಶಿಯ ಪಾವನಾಂಗನೆ ಅ.ಪ ಪರರ ನಾನುಪರಿಚರಿಸಲಿಲ್ಲವೋ ದುರುಳಭಾವದಿ ಪರರ ಹಿಂಸೆಗೈದು ಎನ್ನ ಉದರ ಪೊರೆದೆನೋ 1 ವೇದಗಳ ನಾನೋದಿ ಅರಿಯೇ ಸಾಧು ಸಂಗಮ ಭೇದಗೈದೆ ಗರ್ವದಿಂದೆ ವೇದವೇದ್ಯನೆ 2 ಗಂಗಜನಕ ತುಂಗ ವಿಕ್ರಮ | ಮಂಗಳಾಂಗನೇ ಮಾಂಗಿರೀಶ ನಿನ್ನ ನಾಮಭೃಂಗವ ತೋರೈ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವನಜಾಕ್ಷ ಎನಗ್ಯಾಕೆ ಘನತರ ಅಪರಾಧ ಎನಗೆ ಆಧೀನವೇನು ವಿಶ್ವವ್ಯಾಪಕ ನೀನೆ ಪ ನಾ ನುಡಿವುದೆಲ್ಲ ನಿನ್ನ ನಿಜವಾದ ಮಂತ್ರವು ನಾ ನಡೆವುದೆಲ್ಲ ನಿನ್ನ ಯಾತ್ರವೆಲೋ ದೇವನೆ ನಾ ಬೇಡುವುದೆಲ್ಲ ನಿನ್ನ ವಿಮಲಾತ್ಮ ಪ್ರಸನ್ನತೆ ನಾ ತೊಡುವುದೆಲ್ಲ ನಿನ್ನ ಪರಮಕೃಪಾಕವಚ 1 ನಾನುಂಬುವುದೆಲ್ಲ ನಿನ್ನ ಕರುಣ ಪ್ರಸಾದವು ನಾ ಕುಡಿವುದೆಲ್ಲ ನಿನ್ನ ಚರಣ ಉದಕವಯ್ಯ ನಾ ಬಯಸುವುದೆಲ್ಲ ನಿನ್ನ ಪ್ರೇಮಾಮೃತವು ನಾನಿರುವುದೆಲ್ಲ ನಿನ್ನ ಭಜನಮಂದಿರವು 2 ನಾ ಕೇಳುವುದೆಲ್ಲ ನಿನ್ನ ಧರ್ಮಕಥಾಶ್ರವಣವು ನಾ ಪೇಳ್ವುದೆಲ್ಲ ನಿನ್ನ ಚರಣಸುಚರಿತ ನಾನು ಮಾಡುವುದೆಲ್ಲ ನಿನ್ನ ಪೂಜೆಯು ನಾನನುಭವಿಪುದು ಎಲ್ಲ ಶ್ರೀರಾಮನಾಟವು 3
--------------
ರಾಮದಾಸರು
ವಾಸನ್ಹಿಂಗದವನ ಬಲುಮಡಿ ಮೀಸಲ್ಯಾಕೆ ಆಸೆಬಿಡದವನ ಹರಿದಾಸತ್ವವ್ಯಾಕೆ ಪ ಚಿತ್ತಶುದ್ಧಯಿಲ್ಲದವನ ತತ್ವ ಉಪದೇಶವ್ಯಾಕೆ ಕುತ್ತಿಗೆಯ ಕೊಯ್ವವನ ಭಕ್ತಿಭಾವ್ಯಾಕೆ ಹೆತ್ತವರ ಬಯ್ವವನ ಸತ್ಯರೊಡನಾಟವ್ಯಾಕೆ ಉತ್ತಮರ ಹಳಿವವನ ನಿತ್ಯನೇಮವ್ಯಾಕೆ 1 ಭೇದಕಡಿಯದವನ ಪರಸಾಧನೆಯು ಯಾತಕ್ಕೆ ವಾದಬಿಡದವನ ಸುವೇದ ಓದ್ಯಾಕೆ ಕ್ರೋಧದೊಳುರುಳುವನ ಸಾಧುತ್ವ ಯಾತಕ್ಕೆ ಜಾದುಗಾರನ ಸುಬೋಧವದು ಯಾಕೆ 2 ನಾನೆಂಬುದಳಿಯವ ಜ್ಞಾನಭೋದ್ಯಾಮೃತವ್ಯಾಕೆ ಹೀನಗುಣ ಬಿಡದವನ ಮೌನತ್ವವ್ಯಾಕೆ ದೀನರನು ಬಾಧಿಪರ ದಾನಧರ್ಮವು ಯಾಕೆ ನಾನಾ ಬಯಕ್ಯುಳ್ಳವನ ಧ್ಯಾನವು ಯಾಕೆ 3 ಕುಟಿಲತ್ವ ಸುಡದವನ ಜಟೆ ಕೌಪೀನ್ಯಾತಕೆ ಸಟೆಬೊಗಳಿ ಬದುಕುವನ ಪಟ್ಟೆನಾಮವ್ಯಾಕೆ ದಿಟವರಿಯದಧಮನ ನಿಟಿಲದಲಿ ಭಸಿತ್ಯಾಕೆ ದಿಟ್ಟೆಯರಿಗೆ ಸೋಲುವನ ಹಠಯೋಗವ್ಯಾಕೆ 4 ಯತಿಗಳನು ನಿಂದಿಪನ ಸ್ಮøತಿಶಾಸ್ತ್ರ ಯಾತಕ್ಕೆ ಸತಿಗಳುಕಿ ನಡೆಯುವನ ಅತಿಜಾಣ್ಮೆ ಯಾಕೆ ಸತತ ಖಲು ಕುಹಕನಲಿ ಅತಿಸ್ನೇಹ ಯಾತಕೆ ಕ್ಷಿತಿಯೊಳ್ ಶ್ರೀರಾಮನ ನುತಿಸದವನ್ಯಾಕೆ 5
--------------
ರಾಮದಾಸರು
ವಾಸುದೇವನ ನೆನೆದು ನೀ ಸುಖಿಯಾಗು ಮನವೆ | ಈ ಶರೀರದ ಭ್ರಾಂತಿ ಇನ್ಯಾಕೆ ಮನವೆ ಪ ಕಾಲುಗಳು ಕುಂದಿದವು ಕಣ್ಣದೃಷ್ಟಿ ಹಿಂಗಿದವು | ಮೇಲೆ ಯೌವನ ಹೋಗಿ ಮುಪ್ಪಾಯಿತು || ಕಾಲ ಕರ್ಮಂಗಳು ಒದಗಿದಾಕ್ಷಣದಲಿ | ಬೀಳುವ ತನುವಿನಾಶೆ ಇನ್ಯಾತಕೆಲೆ ಮರುಳೆ 1 ಧಾತುಗಳು ಹಿಂಗಿದವು ದಂತಗಳು ಸಡಲಿದವು | ಕಾಂತೆಯರು ನೋಡಿ ವಾಕರಿಸುವರು || ಭ್ರಾಂತಿ ಇನ್ಯಾಕೆ ಬಯಲಾದ ದೇಹಕ್ಕೆ ಇನ್ನು | ಅಂತರ ಮಾಡದೆ ಹರಿಯ ನೆನೆ ಮನವೆ 2 ನೀರ ಬೊಬ್ಬುಳಿಯಂತೆ ನಿಜವಲ್ಲ ದೇಹ | ಧಾರಣಿಯನು ಮೆಚ್ಚಿ ಮರುಳಾಗಿ ಕೆಡದೆ || ಶ್ರೀರಮಣ ವಿಜಯವಿಠ್ಠಲರಾಯ | ಸೋರಿ ಹೋಗುತಿದೆ ಸ್ವರ್ಗ ಸುಮ್ಮನಿರಬೇಡಾ 3
--------------
ವಿಜಯದಾಸ
ವಿಜಯ ಗುರು ತವಪಾದರಜವ ಕರುಣಿಸಿ ಎನಗೆ ಭುಜಗಶಯನನ ಧ್ಯಾನ ಭಜನೆ ನೀಡುವುದು ಪ. ತವ ಶಿಷ್ಯವಂಶ ಸಂಜಾತಳೆನ್ನುತಲಿ ಬಹು ತವಕದಲಿ ಕರುಣಾರ್ದ ದೃಷ್ಟಿಯಿಂದ ತವ ಸೇವೆ ಎನಗಿತ್ತು ತವ ಕೀರ್ತನೆಯ ನುಡಿಸಿ ಮೂರ್ತಿ ತೋರೆನ್ನ ಭವತಾಪ ಹರಿಸಯ್ಯ 1 ನಿನ್ನ ಮಹಿಮೆಯ ಗುಟ್ಟು ವರ್ಣಿಪರು ಯಾರಿನ್ನು ನಿನ್ನ ಚರ್ಯೆಯ ಚರಿತೆ ಬರೆದವರ್ಯಾರೊ ನಿನ್ನ ನಿಜ ಸಂಕಲ್ಪ ಇನ್ನು ಅರಿಯುವರುಂಟೆ ಬನ್ನ ಭವ ಉಂಟೆ 2 ಆ ದೇವಮುನಿ ಆಜ್ಞೆ ಮೋದದಲಿ ಸ್ವೀಕರಿಸಿ ಪಾದನ್ಯೂನತೆ ಕವನ ಪೂರ್ಣಗೊಳಿಸಿ ವೇದಶಾಸ್ತ್ರಗಳರ್ಥ ಸುಲಭದಲಿ ತಿಳಿಸುತಲಿ ಹಾದಿ ತೋರಿದೆ ಶಿಷ್ಯರಾದ ಸುಜನರಿಗೆ 3 ಸತ್ಕರ್ಮ ಫಲಗಳನು ನಿತ್ಯದೊಳಗರ್ಪಿಸಲು ಉತ್ತಮನು ಆರೆಂಬ ಚಿತ್ತದಳಲ ಮುಕ್ತಿಯೋಗ್ಯರಿಗೆ ಬಹು ಯುಕ್ತಿಯಿಂದಲಿ ತೋರಿ ಉತ್ತಮನು ಹರಿಯೆಂದು ಶಕ್ತಿಯಿಂ ಸ್ಥಾಪಿಸಿದ 4 ವೈಕುಂಠಪುರದೊಳಗೆ ಶ್ರೀ ಕರನ ವಕ್ಷಕ್ಕೆ ಸೋಕಿಸಿದೆ ಚರಣವನು ಜೋಕೆಯಿಂದ ಈ ಕಾರ್ಯಕಾರಣವ ನಾ ಕೇಳಿ ನುಡಿವಂಥ ವಾಕು ಲಾಲಿಸುತ ವಿವೇಕ ಮತಿ ಕರುಣಿಪುದು 5 ಆ ಕಮಲನಾಭನಾ ಹೃದಯ ಕರುಣಾಮೃತವು ಸೋಕಿ ತುಂಬಿಹುದು ತವ ಚರಣ ಕಮಲದಲಿ ನಾ ಕೇಳ ಬಂದೆನಾ ಕರುಣಾಮೃತದ ಕಣವ ಯಾಕೆ ಮರೆಮುಚ್ಚಿನ್ನು ನೀ ಕೊಡೈ ತವಕದಲಿ 6 ಪಾದ ರೂಢಿಗೊಡೆಯಗೆ ಲಕುಮಿ ಓಡಿದಳು ಕರವೀರಪುರಕೆ ಸ್ವಾಮಿ ಬೇಡಾಗೆ ವೈಕುಂಠ ನೋಡಿ ಆನಂದಾದ್ರಿ ಮಾಡಿದನು ಮಂದಿರವ ಕೂಡಿ ಪದ್ಮಿನಿಯ 7 ನೋಡಿ ವೈಕುಂಠದೊಳು ನಾಡಿಗೊಡೆಯನ ಚರ್ಯ ರೂಢಿಯೊಳು ಜನಿಸಿ ಭೂಸುರವಂಶದಿ ದುರಿತ ಈಡಾಡಿ ಹರಿದಾಸ್ಯವನು ಬೇಡಿ ಬಯಸುತ ಪೊಂದಿ ನಾಡಿನೊಳು ಮೆರೆದೆ 8 ಪ್ರತಿವರ್ಷ ಬಿಡದೆ ತಿರುಪತಿ ಯಾತ್ರೆ ಭಕ್ತಿಯಲಿ ಪತಿತಪಾವನನ ಓಲೈಸಿ ಮೆರೆದೆ ಕ್ಷಿತಿಯಕ್ಷೇತ್ರ ಅಪ್ರತಿಮಹಿಮ ಸಂಚರಿಸಿ ಕ್ಷಿತಿಗೆ ತೋರಿದೆ ನಿನ್ನ ಮಹಿಮೆ ಜಾಲಗಳ 9 ಅಂಕಿತವದಲ್ಲದೆ ದಾಸತ್ವ ಸಿದ್ಧಿಸದು ಕಿಂಕರಗೆ ಅಂಕಿತವೆ ಕುರುಹು ಎಂದು ಅಂಕಿತವ ಪಡೆದು ಚಕ್ರಾಂಕಿತನ ಗುಣ ಮಹಿಮೆ ಶಂಕಿಸದೆ ಪೇಳ್ದೆ ತವ ಕಿಂಕರೋದ್ಧಾರಕನೆ 10 ನಿನ್ನ ಮಹಿಮಾದಿಗಳ ವರ್ಣಿಸಲು ಎನ್ನಳವೆ ಚನ್ನ ಗುರು ವಿಜಯವಿಠ್ಠಲನ ಪದಕಮಲ ಚನ್ನಾಗಿ ಕಂಡು ಹೃನ್ಮಂದಿರದಿ ಸತತದಲಿ ತನ್ಮಂತ್ರ ಕಿರಣವೆಮ್ಮಲ್ಲಿ ಬೀರಿದ ಕರುಣಿ 11 ವಿಕ್ರಮ ಕಾರ್ತೀಕ ಶುದ್ಧ ದಶವಿೂ ದಿವ್ಯ ಶುಕ್ರ ನಾಮರು ವಾರ ಶುಭದಿನದಿ ಇಂದು ಅಕ್ಕರದಿ ಕರಸಿಲ್ಲಿ ಉಕ್ಕಿಸಿದೆ ತವ ಸ್ತೋತ್ರ ಮಕ್ಕಳಂದದಿ ಪೊರೆವ ಅಕ್ಕರೆಯು ಉಂಟೊ 12 ಮಧ್ವರಾಯರ ಕುಲದಿ ಉದ್ಭವಿಸಿದಂಥ ಈ ಶುದ್ಧ ವೈಷ್ಣವ ಕುಲದಿ ಜನಿಸಿ ಬಂದೆ ಶುದ್ಧ ದಾಸತ್ವದ ಮುದ್ರಾಂಕಿತದ ರತ್ನ ಪಾದ ಕಂಡೆ 13 ಪಾಪಿ ಜನರುದ್ಧರಿಪ ಪಾವನಗಾತ್ರನೆ ಆ ಪಯೋಜಾಸನರ ತರತಮ್ಯವ ಸ್ಥಾಪಿಸಿದ ಮಹಿಮನೆ ಸದ್ಗುಣಾಂಬುಧಿ ನಿಲಯ ಗೋಪಾಲಕೃಷ್ಣವಿಠ್ಠಲನ ಪದಭೃಂಗ 14
--------------
ಅಂಬಾಬಾಯಿ
ಶರಣರೆಳಕಂದಿ ನೀನ್ಯಾಕೆ ಕರುಣಿಸಲೊಲ್ಲಿ | ದುರಿತ ಭಯ ಪರಿಹರಿಸಿ ಸಲಹೆನ್ನ ತಂದೆ ಪ ಬಂದರ ವಿಭೀಷಣಗ ಅಭಯಕರವಿತ್ತೇ | ಬಂಧನಕ್ಕೋಳಗಾದ ಗಜರಾಜನನು ನೆಗಹಿ | ಛಂದದಭಿಮಾನುಳಿಹಿ ದ್ರೌಪದಿಯ ಕಾಯ್ದೆ 1 ಕಲುಷವಾರಿಸಿ ಮುನಿ ಸತಿಯ ನೀನುದ್ದರಿಸಿ | ಒಲಿದು ಧ್ರುವಗಾನಂದ ಪದವಿತ್ತೆ ಧರಿಲಿ | ಸಿಲುಕಿರಲು ಲಾಕ್ಷಗೃಹದಿ ಪಾಂಡವರನುಳುಹಿ | ಲಲನೆ ಗರ್ಭದಿ ಪರೀಕ್ಷಿತನ ಕಾಯ್ದೆ ಸ್ವಾಮಿ 2 ಅವರ ದಾಸಾನುದಾಸರ ಭಾಗ್ಯವೆಮಗಿಲ್ಲಾ | ತವನಾಮಧಾರಕೆನಿಸಿದ ಬಿರುದಿಗಿಂದು | ಕುವಲಯ ಶ್ಯಾಮ ಗುರು ಮಹಿಪತಿ ಸುತ ಪ್ರಭುವೆ | ಯಮನ ಬಾಧೆಯ ಬಿಡಸೋ ಬ್ಯಾಗೊದಿಗಿ ಬಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶಾರದೇಂದುಮುಖಿ ನೀರಜನಯನಳೆ ಬಾರೆಲೆ ಬಾಗಿಲ ತೆಗಿಯಲೆ ಭಾಮೆ ಪ ಯಾರಯ್ಯ ಬಾಗಿಲ ಹೊರಗೆ ನಿಂತಿರುವನು ಜಾರ ಪುರುಷನಂತೆ ತೋರುವೆ ನೀನು ಅ.ಪ ಜಾರನಾದರೆ ನಿಂಗೆ ಜಾರನಲ್ಲವೆ ಮೀನಾ ಕಾರ ಧರಿಸಿರುವ ಹರಿಯಲೆ ಭಾಮೆ ಮೀನನಾದರೇ ಬಲು ಮೌನದಲಿರದಂತೆ ಮಾನವರಂತೆ ಮಾತು ಯಾವುದೋ ನಿನಗೆ 1 ಮಂದರಗಿರಿಯ ಬೆನ್ನಿಂದ ಧರಿಸಿರುವ ಅಂದ ಕೂರ್ಮನಲ್ಲವೇನೆ ಭಾಮೆ ಕೂರ್ಮ ನೀನಾದರೆ ಕೂಪದೊಳಿರುವುದೆ ಧರ್ಮವೆಂಬುವುದನು ಮರೆತೆಯಾ ನೀನು 2 ನೀಲವೇಣಿಯೆ ಕೇಳೆ ಕೋಲರೂಪದಿ ಬಂದು ಕ್ಷಿತಿ ತಂದೆನೆ ಭಾಮೆ ಪೋತರೂಪನೇ ನಿಜ ಧಾತ್ರಿಯ ಭೇದಿಸಿ ಗಾತ್ರ ರಕ್ಷಣೆ ಮಾಡು ಹೋಗೆಲೊ 3 ಸ್ತಂಭ ಭೇದಿಸಿ ರಿಪು ಡಿಂಭನ ಕಾಯಲು ಜಂಭದಿ ಖಳನನು ಕೊಂದೆನೇ ಭಾಮೆ ಸ್ಥಂಭ ಭೇದಿಸಿದ ನಾ ನಂಬುವುದಿಲ್ಲವೊ ಡಂಭದಿ ಬಾಗಿಲು ಭೇದಿಸಿ ಬಾರೊ 4 ವಾಮನನೆಂದು ವಟುರೂಪದಿ ಬಂದು ಸಾರ್ವ ಭೌಮನಲ್ಲಿ ಭೂಮಿ ಬೇಡಿದೆ, ಭಾಮೆ ವಟುರೂಪನಾದರೆ ಕುಟಿಲಾಕ್ಷಿಯರಲಿಂಥ ಚಾಟುವಚನಗಳು ಯಾಕೆಲೊ 5 ದುರುಳನೃಪರ ಪರಿಹರಿಸಿದ ಭೃಗುಮುನಿ ವರಕುಲಜಾತ ಶ್ರೀ ರಾಮನೇ ಭಾಮೆ ಮುನಿವರಸುತನಾಗಿ ಸ್ವನಿಯಮಗಳ ಬಿಟ್ಟು ವನಿತೆಯರಲ್ಲಿಂಥಾ ಸರಸವೆ ನಿನಗೆ 6 ದಶರಥ ನೃಪತಿಯ ಮನೆಯೊಳವತರಿಸಿ ದಶಶಿರರನು ಕೊಂದ ರಾಮನೆ ಭಾಮೆ ಪರ ಕಾಮಿನಿಯರೊಳಿಂಥಾ ಪ್ರೇಮ ಮಾಡುವುದುಂಟೆ ಯೋಚಿಸೊ ನೀನು 7 ನೀರಜಾಕ್ಷಿ ಕೇಳೆ ಜಾರಚೋರತೆಯಲ್ಲಿ ಸಿರಿ ಕೃಷ್ಣನೇ ಭಾಮೆ ಚೋರನಾದ ಮೇಲೆ ಸೇರಿಸುವುದು ಹೇಗೆ ಭಾರಿ ಆಭರಣಗಳಿರುವುವೊ 8 ಮುಗ್ಧೆ ಕೇಳೆ ಇದಬದ್ಧವಲ್ಲದೆ ಅತಿ ಶುದ್ಧನಾದ ಬುದ್ಧರೂಪನೆ ಬುದ್ಧರೂಪನೆ ನಿನ್ನ ನಡತೆಯ ಕೇಳಲು ಶುದ್ಧಿಯು ಲೋಕಪ್ರಸಿದ್ಧವು9 ಸರಸಿಜಮುಖಿ ವರತುರಗವನೇರಿದ ನೃಪರ ಗೆಲ್ವ ಕಲ್ಕಿಯೇ ಭಾಮೆ ದುರುಳ ಜನರು ಇಲ್ಲಿ ಸೇರುವುದಿಲ್ಲವೊ ತರಳೆಯರಲಿ ದುಷ್ಟ ಕಾರ್ಯವೇ ಪೋಗೊ10 ಪರಿ ಸರಸವನಾಡುವ ನಾಮಗಿರಿ ನರಹರಿ ರೂಪ ರಮಾ ರಮೇಶರು ವಿಹರಿಪ ಬಗೆಯನು ಸ್ಮರಿಸುವ ಸುಜನರ ಪರಮಪುರುಷ ಹರಿ ಪೊರೆವುದು ನಿಜ 11
--------------
ವಿದ್ಯಾರತ್ನಾಕರತೀರ್ಥರು
ಶಿಶುಗಳಪರಾಧಕೆ ಶಿಕ್ಷೆ ಕಣ್ಣೀಲಲ್ಲದೇ ಯಶವ ಬಡಿಗೋಲವನು ಎತ್ತುವರೇ ರಂಗಾ ಪ ಇಲಿಗೆ ಹೆಬ್ಬುಲಿಯಾಕೆ|ಮೊಲಕೆ ಮದಗಜವ್ಯಾಕೆ| ಕಳೆತ ಹಣ್ಣಿಗೆ ಮತ್ತೆ ಕರಗಸ್ಯಾಕೆ| ಕಲೆ ಬಿದ್ದ ಕನ್ನಡಿಗೆ ಗುದ್ದಲಿಯ ತರಲೇಕೆ| ಗುಳಲಿ ಕಾಯಿಗೆ ಹೊತ್ತಗಲ್ಲ ವ್ಯಾಕೆ 1 ಹಳ್ಳಗೆ ಹಡಗವ್ಯಾಕೆ|ಕೊಳ್ಳಿಗೆ ಕೊಡ ಜಲವ್ಯಾಕೆ| ಮುಳ್ಳು ಮುರಿದುದಕ ಮೊನೆ ಹಾರಿ ಯಾಕೆ| ಮಲ್ಲಿಗೆ ಹೋವಿಗೆ ಬಂಧ ಹಗ್ಗದಲ್ಯಾಕೆ| ಹಲ್ಲಿ ಬೆದರಿಸೆ ಹೊಡೆವ ಭೇರಿಯಾಕೆ 2 ಜ್ಞಾನಹೀನರ ನಮ್ಮ ತಪ್ಪನೆಣಿಸಿದುರಿತ| ಮೊನೆಗಾಣಿಸುತ ಬನ್ನಿ ಬಡಿಸುವುದುಚಿತವೇ| ದೀನವತ್ಸಲ ತಂದೆ ಮಹಿಪತಿ ಸುತ ಪ್ರಭುವೇ| ನ್ಯೂನಾರಿಸದೇ ನಿನ್ನವನೆಂದು ಸಲಹೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶುಭ ಮಂಜುಳಗಾತ್ರ್ರೆಕುಂಜರದಂತೆ ಗಮನೆ ರಂಜಿತಾಂಗಿ ನಿರಂಜನಾಂಗಿ ಪ ಧರೆಯ ಮ್ಯಾಲೆ ಹಿರಿಯಳು ನಾ-ನಿರಲು ಲಜ್ಜೆ ತೊರೆದು ನೀನುಸರಸವಾಡೋದೆ ಮುರಹರನಕರೆದು ಭಾಮಿನಿ ಸುಗುಣೆ ಕಾಮಿನಿ 1 ಪತಿಯ ಪ್ರೀತಿ ಎನ್ನ ಮ್ಯಾಲೆಅತಿಶಯದಿ ಇರಲು ಜ್ಯೇಷ್ಠಸತಿಯಳೇನೇ ನೀನು ನೋಡುಮತಿಯ ರುಕ್ಮಿಣಿ ಸುಪದ್ಮಗಂಧಿನಿ2 ಒಂದು ಕಾಲದಲ್ಲಿ ದಾಸಿ-ಯಿಂದ ಪತಿಯು ಸರಸವಾಡಲುಬಂದಳೇನೇ ಅರಸಿ ಸಮ-ಳೆಂದು ಭಾಮಿನಿ ಸುಗುಣೆ ಕಾಮಿನಿ 3 ದಾಸಿ ಸಮಳು ನಾನು ಅಲ್ಲ ದೋಷ ಮಾತನಾಡಬೇಡಶ್ರೀಶನ ದಯರಾಶಿ ಇರಲುದಾಸಿಯೆ ರುಗ್ಮಿಣಿ ಸುಪದ್ಮಗಂಧಿನಿ 4 ಸಾರೆ ಕೃತ್ಯವಾರೆ ಹೂಡಿದ್ವಾರಾವತಿಯಿಂದ ಎನ್ನಸಾರೆ ಬಂದ ಪ್ರೀತಿಯು ಅ-ಪಾರೆ ಭಾಮಿನಿ ಸುಗುಣೆ ಕಾಮಿನಿ5 ಕಡಲಶಾಯಿ ತಡೆದರಿನ್ನುದಿಡುಗು ದೇಹ ಬಿಡುವೆನೆಂಬೊನುಡಿಯ ಕೇಳಿ ಪಿಡಿದನೆಬಿಡದೆ ರುಗ್ಮಿಣಿ ಸುಪದ್ಮಗಂಧಿನಿ 6 ಮಂದರಧರನು ಪ್ರೀತಿ-ಯಿಂದ ನಿನ್ನ ಪಡೆದನೇನೆಒಂದು ಮಣಿಯ ಕಾರಣದಿಬಂದೆ ಭಾಮಿನಿ ಸುಗುಣೆ ಕಾಮಿನಿ7 ಸುಮ್ಮನೆ ಬಂದವಳಿಗೆಬ್ರಹ್ಮ-ಲಗ್ನದಿ ಬಂದೆನಗೆಸಾಮ್ಯವೇನೆ ಯಾಕೆ ನಿನಗೆಹೆಮ್ಮೆ ರುಗ್ಮಿಣಿ ಸುಪದ್ಮಗಂಧಿನಿ. 8 ಮಾನಾದಿ ಭಕ್ತಿಯು ಕನ್ಯಾ-ದಾನವು ಲೋಕದೊಳಗುಂಟುಏನು ನಿನ್ನ ತಾತ ಕೊಟ್ಟದೀನ ಭಾಮಿನಿ ಸುಗುಣೆ ಕಾಮಿನಿ 9 ಎನ್ನ ಹಂಗದೆಂದುಪ್ರಸನ್ನ ಕೇಳಿ ಶತಧನ್ವನಬೆನ್ನಟ್ಟಿ ಕೊಂದನೇ ನೀ-ಚೆನ್ನ ರುಗ್ಮಿಣಿ ಸುಪದ್ಮ ಗಂಧಿನಿ 10 ವೀರ ಅರಸರ ಸ್ವಭಾವಚೋರರ ಕೊಲ್ಲಬೇಕೆಂಬೋಸಾರ ಪ್ರೀತಿಯದರಿಂದತೋರಿ ಭಾಮಿನಿ ಸುಗುಣೆ ಕಾಮಿನಿ11 ಇಂದ್ರಾದಿ ದೇವತೆಗಳೊಳುಸಾಂದ್ರಯುದ್ಧವನ್ನೆ ಮಾಡಿವೀಂದ್ರ ಎನಗೆ ಪಾರಿಜಾತತಂದ ರುಗ್ಮಿಣಿ ಸುಪದ್ಮಗಂಧಿನಿ12 ಕ್ಲೇಶ ನೋಡಿ ತಂದತರುವ ಭಾಮಿನಿ ಸುಗುಣೆ ಕಾಮಿನಿ13 ನಿಜಳೆಂದು ರಂಗನು ಎನ್ನವಿಜಯಯಾತ್ರೆಯಲ್ಲಿ ತನ್ನಭುಜಗಳಿಂದಾಲಂಗಿಸಿದಸುಜನೆ ರುಗ್ಮಿಣಿ ಸುಪದ್ಮಗಂಧಿನಿ 14 ಅರಸರ ಸ್ವಭಾವ ತಮ್ಮಅರಸೇರ ಮನೆಯೊಳಗಿಟ್ಟುಸರಸ ದಾಸೇರಿಂದ್ಹೋಗೋದುಸ್ಮರಿಸೆ ಭಾಮಿನಿ ಸುಗುಣೆ ಕಾಮಿನಿ 15 ಸಾರವಚನ ಕೇಳಿ ಭಾಮೆಮೋರೆ ಕೆಳಗೆ ಮಾಡುತಿರಲುನಾರಿ ರುಕ್ಮಿಣಿ ಭಾಮೆಯರನ್ನುವೀರ ಕರೆದನು ತಾ ಸೇರಿ ಮೆರೆದನು16 ಮಂಗಳಾಂಗ ಮಹಿಮ ಕೇಶವಾ-ಲಿಂಗಿಸಿದ ಭೈಷ್ಮಿಯನ್ನುತುಂಗಗುಣ ಗೋಪೀರಮಣರಂಗವಿಠಲನು ಅನಂಗಜನಕನು 17
--------------
ಶ್ರೀಪಾದರಾಜರು
ಶೇಷಾಚಲನಿಲಯನಾಗಿರುತ ಭಕುತರ ಪೋಷಿಸುತಿಹನ್ಯಾರೆ ಪೇಳಮ್ಮಯ್ಯ ಪ ದೋಷರಾಸಿಗಳನು ನಾಶ ಮಾಡುತಲಿ ಶೇಷಸುರಸೇವ್ಯ ಶ್ರೀನಿವಾಸ ಕಾಣಮ್ಮ ಅ.ಪ. ಕಲಿಯುಗದೊಳು ಪ್ರಜ್ವಲಿಸುತಿರುವೀ ಗಿರಿ- ಗಿಳಿದು ಬಂದನ್ಯಾಕೆ ಪೇಳಮ್ಮಯ್ಯ ನಲಿಯುತ ಸ್ತುತಿಪ ಜನರ ಕಲುಷವ ಕಳೆಯಲು ಒಲಿದು ಬಂದ ದಯದಿಂದಲಿ ಕೇಳಮ್ಮ 1 ಸ್ವಾಮಿ ಪುಷ್ಕರಿಣಿ ತೀರದಿ ನಗುತ ನಿಂದಿಹ ಕೋಮಲಾಂಗನವನ್ಯಾರೇ ಪೇಳಮ್ಮಯ್ಯ ಕಾಮಿನಿ ಪದುಮಾವತಿ ತಾ ಮೋಹಿಸುತಲಿ ಪ್ರೇಮದಿ ವರಿಸಿದ ಭೂಮಿಪ ಕಾಣಮ್ಮ 2 ಬಂಗಾರ ನವರತ್ನ ಮಂಡಿತನಾಗಿ ವಿ ಹಂಗವೇರ್ದನ್ಯಾರೇ ಪೇಳಮ್ಮಯ್ಯಾ ಗಂಗಾಜನಕ ಪಾಂಡುರಂಗನೆನಿಪ ಆ ರಂಗೇಶವಿಠಲನೆ ಇವ ಕಾಣಮ್ಮ 3
--------------
ರಂಗೇಶವಿಠಲದಾಸರು