ಒಟ್ಟು 300 ಕಡೆಗಳಲ್ಲಿ , 66 ದಾಸರು , 273 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಮಂದಿರಹರಿಮಂದಿರ ಈ ಸ್ಥಳವುಹರುಷದಿ ಚಿಂತಿಪರಿಗೆ ಪಹರಿಹರ ಬ್ರಹ್ಮಾದಿಗಳು ಪೊಗಳುತಿರೆಸುರಮುನಿ ನಾರದ ಋಷಿಗಳು ಸ್ತುತಿಸಲುಸುರರುಪುಷ್ಪ ವೃಷ್ಟಿಯ ಕರೆಯಲು ಅ-ಪÀ್ಸರಸ್ತ್ರೀಯರುನರ್ತನ ಮಾಡುವ ಸ್ಥಳಅ.ಪಸಿರಿನಾರಾಯಣ ಶೇಷಶಯನದಲಿಶಯನಿಸಿ ನಿದ್ರಿಸುತಿರೆಸಿರಿಭೂದುರ್ಗಾಂಬ್ರಣಿಯರು ಸೇವಿಸಲುನಾಭಿ ಕಮಲದಲಿಸರಸಿಜೋದ್ಭವ ಸ್ತುತಿಸುತ ಧ್ಯಾನಿಸಲುಕರಜೋಡಿಸಿ ಸುಜನರು ನಮೋ ನಮೋ ಎನೆಭರದಿ ಜಾಗಟೆಭೇರಿತಾಳ ತುತ್ತೂರಿಯುಕರದಿ ಶಂಖು ಗಂಟೆ ನಾದ ಮೊಳಗೆಹರಿಭಜನೆ ಮಾಡುತ ತದ್ಧಿಮಿಕೆನ್ನುವ ಸ್ಥಳ 1ಹರಿವೈಕುಂಠದಿ ಸಿರಿಯೊಡಗೂಡಿರಲುಭೃಗುಮುನಿ ತಾಡನದಿಸಿರಿದೇವಿ ಕೋಪಿಸಿ ಹರಿಯನು ಬಿಡಲುಸಿರಿಇಲ್ಲದೆ ಒಬ್ಬನೆ ಇರಲಾಗದೆ ವೆಂಕಟಗಿರಿಗಿಳಿತರಲುಸರಸಿಜಾಕ್ಷ ಕರಿಬೇಟೆಯ ನಾಡುತಬರುತ ಪದ್ಮಾವತಿಯನು ಮೋಹಿಸಿಕೊರವಿರೂಪತಾಳುತ ಕಣಿ ಹೇಳಲುಭರದಿ ಕಲ್ಯಾಣವು ನಡಸಿದ ಸ್ಥಳವಿದು 2ಸುರರುಅಸುರರು ಶರಧಿಯ ಮಥಿಸಿರಲುಅಮೃತವನೆ ಕಂಡುಹಿರಿ ಹಿರಿ ಹಿಗ್ಗುತ ನುಗ್ಗೆ ದಾನವರುಶ್ರೀಹರಿತಿಳಿದು ತ್ವರದಿಂದ ಮೋಹಿನಿರೂಪ ತಾಳಿಬಿರಿಬಿರಿ ನೋಡುತಲಿರೆ ದಾನವರುಸುರರಿಗೆ ಅಮೃತವನುಣಿಸುತ ಮೋಹಿನಿಪರವಶದಲಿ ಮೈ ಮರತಿರೆ ಅಸುರರುಸುರರಿಗೆ ಅಭಯವ ನೀಡಿದ ಸ್ಥಳವಿದು 3ವಿಶ್ವಾಸದಿ ತಪಗೈದ ಸುರನ ನೋಡಿಮಹದೇವರು ಒಲಿದುಭಸ್ಮಾಸುರ ಬೇಡಿದ ವರಗಳ ಕೊಡಲುನಿಜ ನೋಡುವೆನೆಂದು ಭಸ್ಮಾಸುರ ಬೆನ್ನಟ್ಟುತ ಬರುತಿರಲುವಿಶ್ವವ್ಯಾಪಕಹರಿತಾ ತಿಳಿದುತಕ್ಷಣ ಸ್ತ್ರೀ ರೂಪವ ಧರಿಸುತ ಬರೆಭಸ್ಮಾಸುರ ತನ್ಹಸ್ತದಿ ಮೃತಿಸಲುಭಕ್ತರನುದ್ಧರಿಸಿದ ಈ ಸ್ಥಳವು 4ಲೋಕ ಲೋಕದ ಜನರೆಲ್ಲರು ಕೂಡಿಪ್ರಜಾ ಕಂಟಕನಾದಮೂಕಾಸುರನನು ಗೆಲ್ಲಲು ಸಾಗದಲೆಶ್ರೀಕಾಂತನ ಪ್ರಾರ್ಥಿಸೆಮೂಕಾಂಬಿಕೆ ನಾಮದಿಂದಲಿ ಪ್ರಜ್ವಲಿಸಿಮೂಕಾಸುರನನು ವಧಿಸಿದ ಶ್ರೀ ಕೋಲಾ-ಪುರದಲಿ ವಾಸಿಸುತಲಿ ಸಂತತಶ್ರೀಕರ ಕಮಲನಾಭ ವಿಠ್ಠಲಏಕಾಂತದಿ ಭಕ್ತರ ಸಲಹಿದ ಸ್ಥಳವಿದು 5
--------------
ನಿಡಗುರುಕಿ ಜೀವೂಬಾಯಿ
ಹರಿಯಲ್ಲದನ್ಯ ದೈವಂಗಳು ಕೈವಲ್ಯವೀವವೇನೈ ಶ್ರೀಹರಿಯ ಕರುಣಾಸಾಗರಕೆ ಕೂಪವಾಪಿಯು ಹೋಲ್ವವೇನೈ ಪ.ಹಳುವದ ಬಿದಿರಮೃತದ ಮಳೆಯಲಿ ಇಕ್ಷುವಹದೇನೈಹಲಕಾಲವರೆಯ ಬೇಯಿಸಿದರೆ ಮೃದುರುಚಿಯಹದೇನೈ 1ಕೆಸರು ಮಳಲು ಮೆದ್ದರೊಡಲಗ್ನಿ ತಣ್ಣಸವಹದೇನೈಬಿಸಿಲ ತೊರೆಗೆ ಮಂಜುವನಿಗೆ ಧಗೆಯತೃಷೆಹೋಹದೇನೈ2ಮಲಯಜಲೇಪಕೆ ಬಲವತ್ತರ ಭವತಾಪ ಶಾಂತವೇನೈಎಳೆಗರು ಮಣ್ಣಾವಿನ ಮೊಲೆಯುಂಡು ಜೀವಿಪುದೇನೈ 3ಹರಿಯೊಪ್ಪದಿರದಾ ಹಲವು ಧರ್ಮಕರ್ಮದ ಕಾರಣೇನೈಕರಿಯುಂಡ ಬೆಳವಲ ಹಣ್ಣಿನ ತಿಳಲೆಂದಿಗುಳಿವುದೇನೈ 4ಏಕೋ ನಾರಾಯಣ ಆಸೀತ್ ಹಾಗಂದಿಲ್ಲವೇನೈಸಾಕು ನ ಬ್ರಹ್ಮಾ ನ ಚ ಶಂಕರ:ಎಂಬೊ ಮಾತದೇನೈ 5ವಾಸುದೇವನ ಡಿಂಗರರಿಗೆ ಅಶುಭ ಹೊಂದಬಲ್ಲದೇನೈಕ್ಲೇಶಾಧಿಕವು ನೋಡಿ ಅವ್ಯಕ್ತಾಸಕ್ತರಿಗಲ್ಲವೇನೈ 6ಪ್ರಸನ್ನವೆಂಕಟಪತಿ ಅರ್ಚನೆದಾರಿಲಿ ಕಂಟಕೇನೈಹುಸಿಯಲ್ಲ ಧ್ರುವಬಲಿವಿಭೀಷಣರೆ ಸಾಕ್ಷಿ ನಂಬಿರಿನ್ನು7
--------------
ಪ್ರಸನ್ನವೆಂಕಟದಾಸರು
ಹರಿಯೆಗತಿಸಿರಿವಿರಿಂಚಿ ಶಿವರಿಗೆನರ -|ಹರಿಯೆಗತಿಸುರಪತಿ ಸುರರಿಗೆಪರುಕುಮಣಿದೇವಿಯ ಶಿಶುಪಾಲಗೀವೆನೆಂದು |ರುಕುಮ ಸಂಭ್ರಮಿಸಲು ಕೃಷ್ಣ ಬಂದು ||ಸಕಲ ರಾಯರುಗಳು ಸನ್ನದ್ಧರಾಗಿರೆ |ರುಕುಮಿಣಿದೇವಿಯ ವರಿಸಿ ಆಳಿದನಾಗಿ 1ಹಯ್ಯಾಸನೆಂಬವ ವೇದವ ಕದ್ದೊಯ್ಯೆ |ಹಯಗ್ರೀವನಾಗಿ ಹರಿಯವನ |ಕಾಯವ ಖಂಡಿಸಿ ಅಜಗೆ ವೇದವನಿತ್ತು |ಕಾಯ್ದ ಕರುಣಿ ಕಮಲಾಕ್ಷನೆ ದೈವವೆಂದು 2ಭಸುಮಾಸುರನಿಗೊಂದಸಮದ ವರವಿತ್ತು |ತ್ರಿಸೂಲಧರನು ಓಡಿ ಬಳಲುತಿರೆ |ಬಿಸಜಸಂಭವನಯ್ಯ ಭಸುಮಾಸುರನನು |ಭಸುಮವ ಮಾಡಿ ಭಕ್ತನ ಪಾಲಿಸಿದನಾಗಿ 3ಸುರಪನ ರಾಜ್ಯವ ಬಲಿಯಾಕ್ರಮಿಸಲು |ಹರಿಯೆ ದಾನವ ಬೇಡಿ ನೀನವನ ||ಧರೆಯಈರಡಿ ಮಾಡಿ ಪಾತಾಳಕೆ ಮೆಟ್ಟ |ಸುರಪಗೆ ರಾಜ್ಯವನಿತ್ತು ಸಲಹಿದನಾಗಿ 4ಸುರ - ಭೂಸುರರನು ಅಸುರ ಬಾಧಿಸುತಿರೆ |ಹರಿಯವತರಿಸಿ ನೀನಸುರರನು ||ಶಿರಗಳ ಚಂಡಾಡಿ ಸುರರ ಭೂಸುರರನುಪೊರೆಯುತ್ತಲಿಪ್ಪ ನಮ್ಮ ಪುರಂದರವಿಠಲ 5
--------------
ಪುರಂದರದಾಸರು