ಒಟ್ಟು 1722 ಕಡೆಗಳಲ್ಲಿ , 107 ದಾಸರು , 1032 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣಾ ಬಿಡು ದಾರಿ ದಾರಿ ದಾರಿ ಪ ನೀನೊಲಿದೆನ್ನಕೂಡ ಸರಸವ ನಾಡುವರೆ | ನಾನೆರೆ ಗಂಡುಳ್ಳ ನಾರಿ ನಾರಿ ನಾರಿ ನಾರಿ 1 ಮಾರಲು ಬಂದಿಹ ನೆರೆದ ಗೊಲ್ಲತೆಯರಾ | ಸೂರಿ ಸೂರಿ 2 ಗುರು ಮಹಿಪತಿ ಪ್ರಭು ಕಣ್ಣಿಲೆ ಕಂಡವರ | ಕರವ ಬಿಡವನಲ್ಲಾ ಜಾರಿ ಜಾರಿ ಜಾರಿ ಜಾರಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೆಟ್ಟು ಹೋಯಿತು ಪ್ರಜೆಗಳು ಎಲ್ಲಾ ಬಾಯ ಬಿಟ್ಟುಪಾಯವ ಹೇಳುವರಿಲ್ಲ ಪ ಹಲ್ಲ ಬಿಡುವರು ಎಲ್ಲ ತಾಮ್ರಗಳ ಮಾರಿದರೆಲ್ಲ 1 ಚೊಚ್ಚಲಾಕಳು ಎಮ್ಮೆಗಳಿಂದ ಕೋರಡೆಯಿಂದ 2 ಕೊಡುವೆನೆಂಬುವರಿಲ್ಲ ಚಿಕ್ಕ ದೊಡ್ಡವರೆಲ್ಲ 3 ಸರಕಿನ ಮಾರು ಮಾರ್ಗವು ಕೆಟ್ಟು ಮೆಣಸಿನ ಸೆರೆಯ ಮಾರಲಿಕಿಲ್ಲದೆ ಕೆಟ್ಟು ಮತ್ತರ ಮನೆಗದರ ಪ್ರಜೆ ಬಾಯಿಬಿಡುತಿದೆ ಬಾಯನು ಬಿಟ್ಟು 4 ನರಗುರಿಯಾಯ್ತ ಪ್ರಜೆಗಳು ಎಲ್ಲ ದೊರೆಗಳಿಗಳ್ಳೆಷ್ಟು ಕರುಣವಿಲ್ಲ ಹರಿಸೂನು ಕೋಣೆ ಲಕ್ಷ್ಮೀಶನೆ ಬಲ್ಲ 5
--------------
ಕವಿ ಪರಮದೇವದಾಸರು
ಕೆಳದಿ ಕೇಳುವ ಬಾರೆ ನಳಿನಾಕ್ಷ ವನದಲ್ಲಿ ಕೊಳಲನೂದುವ ಬಗೆಯ ನಳಿನಜಾಂಡವು ತಾನೆ ತಲೆದೂಗುತಲಿದೆ ಕುಳಿತಿರೆ ವಶವಲ್ಲವೆ ಪ ಸರಸಿಜ ನಯನಾಳೆ ಧರೆಯ ಭಾಗ್ಯವ ನೋಡೆ ತರುಗುಲ್ಮಾಲತೆ ನೆವದಿ ಭರದಿ ಪುಲಕಿತಳಾಗೆ ಪರಿಪರಿ ಸುಮದಿಂದ ನೆರೆ ನಸುನಗುತಿಪ್ಪ ಮರುಳೆ ಕಣ್ಣಿಲಿ ನೋಡೆ ವರ ವಿಮಾನಗಳು ಸಂ- ಚರಿಸಿ ಮೆರೆವ ವೈಭವ ಧರೆಯೆಲ್ಲಾ ತಿಳಿಯದು ಲೋಲ್ಯಾಡದೆ ಬಿಡರು 1 ವಾಮಾಲೋಚನೆ ಸುರರ ಧಾಮಾವೆಂಬಿಯಾ ಇದು ಕಾಮತನಯ ಕಾಮದೇವ ಸೋಮಶೇಖರ ತಾನು ತಾಮರಸಾಸನ ಪ್ರೇಮಾದಿ ನಲಿಯುವ ಆ ಮಹರಾದಿ ಲೋಕವೆ ಸಾಮಜಗಮನೆ ಕೇಳೆ ನೀ ಮರುಳಾಗ ಬ್ಯಾಡಾ ಆ ಮುಕುತಿ ಸ್ಥಾನವೆ ಸೇವೆ ಮಾಡುವರು 2 ದೂರ ಜನರಿಗೆ ಸಾಲೋಕ್ಯ ಊರಲಿಪ್ಪರಿಗೆ ಸಾಮೀಪ್ಯ ಗೋರಕ್ಷಕರಿಗೆ ಸಾರೂಪ್ಯ ಸೇರಿದ ಯುವತಿಗೆ ಭರದಿ ಸಾಯುಜ್ಯವೆ ಮೀರಿದೆ ಮುಕುತಿಗಿದು ಭಾರಿ ಭಾರಿಗೆ ಸಾಮಾ ಪೂರೈಸಿ ಮುಕುತರು ತೋರುವರಿಲ್ಲಿ ಆನಂದ ಈ ರಭಸದಿ ವೇಣು ಪೂರೈಸಿ ಸುಖವೀವ ಧೀರ ವಾಸುದೇವವಿಠಲ 3
--------------
ವ್ಯಾಸತತ್ವಜ್ಞದಾಸರು
ಕೇಳಿರೋ ಕೇಳಿರೋ ಆಲಿಸಿ ಜನರು | ಕಲಿಯುಗದೊಳಗ ಒಡಿಯ ನಾಟವನು ಪ ಫುಲ್ಲನಾಭನ ಭಕ್ತಿ ಎಳ್ಳೆನಿತಿಲ್ಲಾ | ಹುಲ್ಲು ಕಲ್ಲು ದೈವಕ ಎರಗಿ ನಡೆವರು | ಬೆಲ್ಲವು ಕಹಿಯಾಗಿ ಸಿಹಿ ಬೇವಾಯಿತು | ಅಲ್ಲ-ಹುದೆಂಬುದು ಬಲ್ಲವರಾರು 1 ಸಾಧು ಸಂಗಕ ಕಾಲು ಏಳುವು ನೋಡಿ | ಸಾಧಿಸಿ ದುರ್ಜನರಾ ನೆರಿಯ ಸೇರುವರು | ಮಾಧವ ನಾಮ ಉಣ್ಣಲು ಮುಖರೋಗ | ಭೂದೇವಿ ನಿಸ್ಸಾರವಾದಳು ನೋಡಿ2 ನೀಚರಿಗುದ್ಯೋಗ ಊಚರಿಗಿಲ್ಲ | ಆಚಾರ ಸದ್ಗುಣ ಆಡವಿ ಸೇರಿದವು | ಯೋಚಿಸಿ ಒಬ್ಬರಿ ಗೊಬ್ಬರು ಕೇಡಾ | ಭೂಚಕ್ರದೊಳು ಎಲ್ಲಾ ತೀರಿ ತಿಂಬುರೈಯಾ3 ಇಲಿಯು ಹೆಗ್ಗಣ ಹೆಚ್ಚಿ ತೋಳ ಬಡಿದು | ದಾಳಿಯಿಟ್ಟವು ಲಂಕಾ ಯೋಧ್ಯದ ನಡುವೆ | ಇಳಿಯೊಳು ಹತ್ತೆಂಟು ಕಾಲ-ವೀಪರಿಯಾ | ತಲಿ ತಲಿಗಿನ್ನು ನಾಯಕರಾಗಿ ಇರಲು 4 ಮ್ಯಾಲೊಬ್ಬ ನಿಂದಲಿ ಸುಖದಲಿ-ರಲಿಕ್ಕೆ | ಕುಲ ಅನ್ಯ ಇಲ್ಲದ ರಾಜೇಶನಾ | ಕಾಲಿಲಿ ಸರ್ವ ಸಂಕರ ವಾಗುತಿರಲು | ಹೊಳೆವನು ಗುರುಮಹಿಪತಿ ಸುತ ಸ್ವಾಮಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳು ಒಳ್ಳೆವರ ಕೂಡಾ ನಿನ್ನ ಹಿತವ ಪ್ರಾಣೀ | ತಾಳಿ ನರದೇಹದಿಂದ ಮಾಡುವರೇ ಹಾನಿ ಪ ಮುತ್ತಿನಂಥಾ ದಿನವಿದು | ಸಿಕ್ಕದಣ್ಣಾ ಮುಂದ | ಚಿತ್ತ ಸ್ಥಿರವಾ ಮಾಡಿ ಹರಿಯ ನೆನೆಯಬೇಕು ಇಂದ 1 ಬಾಲನಾಗಿ ಕೆಲವು | ದಿನದಿಂದ ಯೌವನದಿ | ಮ್ಯಾಲ ಯೆಚ್ಚರವ ಬಿಟ್ಟು | ಹರಿಗೆ ವಿಮುಖನಾದಿ 2 ಜರೆಯು ಬಂದ ಕಾಲದಲ್ಲಿ | ತನುವು ತನ್ನದಲ್ಲಾ | ಸರಕು ಮನೆಯೊಳಿಲ್ಲಾ 3 ಈಗಳವೆ ಯಚ್ಚರಿತು | ಹರಿಯಾ ಬಲಗೊಂಡು | ಹಿಂಡು 4 ಶರಣು ಹೋಗುವಾ | ಭಾವಭಕ್ತಿಯಲ್ಲಿ ದಾವಪ್ರೇಮಿ | ತಾರಿಸುವಾ ಗುರು ಮಹಿಪತಿಸುತ ಸ್ವಾಮಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳು ಹಿತವಾ ಬಾಳು ಮನವೇ ಸಾಧು ಸಂಗ ಮಾಡು | ಹೇಳತೀರದ ಸ್ವಾನಂದದ ಸುಖಭಾವಿಕಗ ಬಲು ಪಾಡು ಪ ಹೀನ ಕೀಟಕ ಸಂಗದಿಂದ ಭೃಂಗಿಯಾಗಲಿಲ್ಲಾ | ತಾನು ಕಬ್ಬಿಣ ಪರಸವ ಮುಟ್ಟಿ ಚಿನ್ನವಾದುದಲ್ಲಾ 1 ಹಳ್ಳ ಕೊಳ್ಳ ಬಂದು ಕೂಡಿ ಗಂಗೆಯಾಗುವಂತೆ | ಎಲ್ಲ ವೃಕ್ಷವು ಸಂಗದಿಂ ಚಂದನಾಗುದು ಗಾದೆಯ ಮಾತೆ 2 ಕೋಟಿಗೆಂದೇ ಮಾತು ಕೇಳು ನಾಡ ಸಾಧನ್ಯಾಕ | ಪುನರಪಿ ನೀ ಬರಬೇಕ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳೆಲೋ ಪ್ರಾಣಿ ನಂಬಿ ಪೂಜಿಸು ಹರಿಯ ಪಾದಾ | ಪಾಲಿಸುವಾ ಗರದು ಅನುಭವ ಬೋಧಾ ಪ ಗುರುವಿನಾ ಬಲಗೊಂಡು ಬಲಿಯೋ ಸ್ವಸುಖ ಪಡಕೋ | ಹರಿಯದೇ ನಾನಾ ಮಾರ್ಗವ ಕಂಡು 1 ಕಂಡ ದೈವಕ ಹಲ್ಲಾ ದೆರೆದು ಬಾಗುವದಲ್ಲಾ | ಮಂಡೆ ದಡವಲ್ಲದೇ ಮತ್ತೇನಿಲ್ಲಾ 2 ಇರಲು ಮನಿಲಿ ಧರಿಲುಳ್ಳಾ ಬಯಸಿದವಟಗಳೆಲ್ಲಾ | ತಿರುಕವ ಬೇಡಿ ಉಂಬುದು ಸಲ್ಲಾ 3 ನೀರಡಿಸಿ ಬರಿಗೈಯ್ಯಾ ನೆಕ್ಕಿದರೇನು ಶ್ರಯಾ | ಗುರುವಿನ ಕೇಳು ಸ್ವಹಿತೋಪಾಯ 4 ಹತ್ತು ಕಟ್ಟುವಕಿಂತ ಮುತ್ತು ಕಟ್ಟಬೇಕೆಂದೇ | ಅರ್ತರೊಲುವನು ಮಹಿಪತಿಸುತಂದೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೊಡಿಸೆ ಭಕ್ತರ ಒಡಂಬಡಿಸೆ ಮೊಲೆಯುಣ್ಣಿಸಿ ತೊಟ್ಟಿಲೊಳ್ ಮಾಯೆ ನೀನೊಬ್ಬಳೆ ತಾಯೆ ಭಕ್ತರ ಸಂತತ ಕಾಯೆ ಶಾಂತೇಶ್ವರಿ ಮಾಹಾಮಾಯೆ ನಾನಿನ್ನ 1 ಸಪ್ತಸ್ವರ ಭೇದವ ತಿಳಿಸಿದ್ಯಾಕೆ ನೀನು ಪೇಳುವ ನುಡಿ ಪುಸಿಯಲ್ಲ ನಾನಿನ್ನ 2 ವರಕೊಲ್ಲಾಪುರದ ಶ್ರೀ ದುರ್ಗಾಂಬಾ ನಾನಿನ್ನ ಪಾದದ ಸ್ಮರಣೆ ಬಿಡೆನು ಶ್ರೀ ಮೂಕಾಂಬಾ ಅಡಿಗಡಿಗೆ ನಾ ಶ್ರೀ ಮೂಕಾಂಬೆ ನಾನಿನ್ನ 3
--------------
ಭಟಕಳ ಅಪ್ಪಯ್ಯ
ಕೊಡಿಸೊ ಅಂಕಿತವಾ ಗುರುರಾಯಾ ನಿನ್ನ ಅಡಿಗಡಿಗೆರಗಿ ನಾ ಬೇಡುವೆನಯ್ಯಾ ಪ ನಾ ಶರಣೆಂಬೆ ತಂದೆ ದರುಶನ ನುಡಿಯ ಪಾಲಿಸೋದಯದಿಂದ 1 ಎಂದು ಬಿಡದಲೇ ಕಾಡಿ ನೀ ದಯ ಮಾಡಿ 2 ಬೇಡ್ವೆ ಈ ಭಾಗ್ಯ ಯೋಗಿ 3 ಇಷ್ಟಾ ಪೂರೈಸೋ ನೀನು ನೋಡೊ ಸುರ ಕಾಮಧೇನು 4 ಅಂತರ್ಯಾಮಿ ಬಲ್ಲ ಇತ್ತರೆ ನಿನ್ನ ಕೇಳ್ವರಿಲ್ಲಾ 5
--------------
ಹನುಮೇಶವಿಠಲ
ಕೊಡುವುದಿಲ್ಲದೆ ಪೋದ ಕಣ್ಣು ನಾಲಗೆಯಾ ಎ- ನ್ನೊಡೆಯನಲ್ಲಾನು ಊಳಿಗನಲ್ಲವೆ ಚನ್ನಾ ಪ ಕೊಂದು ಬಳಲಿಸುತಿರುವುದಿದು ಧರ್ಮವೇ ಮುಂದೆ ನಂಬುವರಿಗೆ ಅದೃಢವಾಗದಿರು ದೇವ ಕಂದರ್ಪಪಿತನೆ ಕಮನೀಯಮೂರುತಿಯೆ 1 ನೋಡುವುದೆಂತೊ ಕಣ್ಣಿಲ್ಲದಿರೆ ನಿನ್ನ ತುತಿ ಮಾಡುವುದೆಂತೊ ನಾಲಿಗೆಯುಡುಗಲು ಬೇಡುವುದೆಂತೊ ಕೈವಲ್ಯಂಗನೆಯನು ದಯ ಮಾಡೆನ್ನ ನಲ್ಲ ದಾಸರೊಳುತ್ತಮೊತ್ತಮ ನೇ 2 ಕಮಲ ಮಧ್ಯದೊಳಾವಾಗ ವಾಸವಾಗಿಪ್ಪ ಸರ್ವೇಶ್ವರನೇ ಘಾಸಿಬಡಿಸಲು ಅವರ ನೋವು ನಿನಗಲ್ಲವೇ ಕೇಶವ ಮುರಾರಿ ಅಚ್ಚುತದಾಸನಿಗೆ ಬೇಗ3 ಕೇಳಿದನೆ ನಿನ್ನಿತರ ಹಲವು ಚಿಂತೆಯಲಿ ತೊಳಲಿ ನೆಲೆಯರಿಯದಜ್ಞಾನಿಯಾಗಿ ಬಳಲುವತಿಚಂಚಲಗೀ ಮಾರ್ಗವಿರಿಸಿದೇಕೋ ನಳಿನಾಕ್ಷ ಭಕ್ತವತ್ಸಲ ಕೃಪಾಸಿಂಧೂ 4 ಶರಣರಕ್ಷಕನೆಂಬ ಬಿರುದಾರದೆಲೆ ದೇವ ಇರಿಸು ಎಂದಿನವೋಲಚ್ಚುತದಾಸನಾ ಹರಿಯದಿದ್ದರೆನ್ನ ಕಣ್ಣು ನಾಲಿಗೆಯ ಕಿ ತ್ತಿರಿಸುವೆನು ಮುಂದೆ ವೈಕುಂಠವಿಠಲ ಚನ್ನಿಗರಮಣ5
--------------
ಬೇಲೂರು ವೈಕುಂಠದಾಸರು
ಕೊಂಬುವರಿಲ್ಲೆನ್ನ ಸರಕ | ಇಂಬಿಲ್ಲ ಇಡಲಿಕ್ಕೆ |ಹೂರಲಾರೆ ಮುದುಕ ನಾ ಪ ಸುರರು ಸೇವಿಸಲಿನ್ನು | ಸೆರೆ ಸಿಕ್ಕಿರುವರಲ್ಲಾ | ಧರೆಯೊಳು ಲೋಗರಿಗೆ |ಗುರುತಿಲ್ಲಾ ಇದರೊಳು 1 ಕೊಂಡವರಿಗೆ ಲಾಭವು ಒಂದಕ್ಕೆ ನಾಲ್ಕು | ಇಸಗೊಂಡವರಿಗೆಂಟು ಮಡಿಯಹುದು || ಪುಂಡತನದಲಿ ಕಸಗೊಂಡೇನೆಂದವರಿಗೆ | ಮಂದಮತಿಗಳಿಗೆಂದಿಗೂ ದೊರೆಯದು 2 ತಂದೆ ಸದ್ಗುರು ಭವತಾರಕನ ಭಜಕ- | ರಿಂದು ಈ ವಾರ್ತೆಯನು ಕೇಳಿದರೆ | ಬಂದು ವಂದಿಸೆನ್ನ || ಆನಂದವ ಬಡಿಸುವರು | ಎಂದು ಆಗುವದೋಹಾಗೆಂದು ಯೋಚಿಸುವೆ 3
--------------
ಭಾವತರಕರು
ಕೊರವಂಜಿ ಪದ ಬಾರೆ ಸತ್ಯಭಾಮೆ ತೋರೆ ನಿಮ್ಮ ಸುಹಸ್ತದ ಠೇವೆ ಧ್ರುವ ಸರ್ಕನೆ ಬಾರವ್ವಾ ಅರಿಕ್ಯುಳ್ಳ ಗರತಿ ಕರವ ಕೊರವತಿ ತಾರ್ಕಣ್ಯ ಬರುತಾದ ಪರಮ ಸುವಾರ್ತಿ ತರ್ಕರಹಿತ ವಸ್ತು ಕರಕೊ ಸುಮೂರ್ತಿ 1 ಓಯವ್ವ ಅವ್ವ ಬಾರೆ ನಮ್ಮವ್ವ ದೈವುಳ್ಳ ಗರತಿ ನೀನವ್ವ ದೈವ ಬರುದೆ ನಿನ್ನೊಳಗವ್ವ ಕೈದೋರೆ ಕೈದೋರೆ ಕೈದೋರೆ ನಿಮ್ಮ 2 ಕೈದೋರೆ ಕೈದೋರೆ ಕೈದೋರೆ ನಿಮ್ಮ ಕೈಯ ಲಕ್ಷಣ ನೋಡಿ ಹೇಳುವೆನಮ್ಮ ಅಯ್ಯ ಬರುತಾನೆ ಆಶೇಲಿ ನಿಮ್ಮ ಕೈಗೊಟ್ಟು ಕೇಳೆ ನಿಜ ಗುಹ್ಯವರ್ಮ 3 ಸುಳ್ಳು ಮಾತನಾಡಿ ಒಡಲ ಹೊರಳವಲ್ಲ ಬಲ್ಲಷ್ಟು ಬೊಗಳುವೆ ವಿಷಯ ದಾಸ್ಯವಳಲ್ಲ ಉಳ್ಳಷ್ಟು ಹೇಳುವೆ ಕೇಳೆ ಶಿವ ಸೊಲ್ಲ ಹೇಳುವ ಮಾತಿದು ಘನ ಗುರು ತಾ ಬಲ್ಲ 4 ಕೊರವಂಜಿ ಮಾತಿದು ಕಿವಿಗೊಟ್ಟು ಕೇಳಮ್ಮ ಬರುತಾನ ಉದರಲಿ ಹುಟ್ಟಿ ಸಗುಣ ನಿಮ್ಮ ತಾರಿಸುವ ಸ್ವಾಮಿ ಪತಿತ ಪಾವನ ನಿಮ್ಮ ಹರಷದೋರುವ ನಿತ್ಯಾನಂದೋ ಬ್ರಹ್ಮ 5 ಎಂದ ಮಾತನೆ ಕೇಳಿ ಬಂದಳು ಭಾವೆಮ್ಮ ಚೆಂದ ಉಳ್ಳ ಸುರಸ ವಾಕ್ಯ ಕೇಳಿದಳೊಮ್ಮೆ ಬಂದು ಹರುಷದಿ ಪೂರ್ಣ ಸಂದಿಸಿಟ್ಟಳು ಪ್ರೇಮ ಒಂದೆ ನಿಜಸುಮಾತ್ಹೇಳ್ಯೆಂದಳು ನೇಮ 6 ಎಲ್ಲಿಂದ ಬಂದೆವ್ವ ಸೊಲ್ಲ ಬೀರುತ ಶಿವ ಬಲ್ಲ ಮಹಿಮಳೆಂದು ನಾನರಿಯೆನವ್ವ ಇಲ್ಲೆವೆ ಕಂಡೆ ನಾ ಸೊಲ್ಲಿನ ಮಹಿಮರು ಎಲ್ಲ ನೆಲೆನಿಭೇಳೌವ್ವ 7 ಸರಿಯ ಬಂದರ ನಿನ್ನ ಮರಿಯೆನವ್ವ ಎಂದು ಖರೆ ಉಳ್ಳ ಮಾತನೆ ಹೇಳೆ ನಿಜ ಒಂದು ಹಿರಿಯರಗೀ ಮಾತು ಸರಿಯ ಬಾವ್ಹಾಂಗಿಂದು ಬೀರವ್ವ ನಿಜಸಾರವಿಂದು 8 ಲಕ್ಷ ಎಂಬತ್ತುನಾಲ್ಕು ಗ್ರಾಮವ ನೋಡಿ ಲಕ್ಷಿಸುತ ಬಂದ ಲಕ್ಷಣ ನಿಜಗೂಡಿ ಲಕ್ಷುಮಿ ಕರದೋರುತದ ನಿಮ್ಮೊಳೊಡಮೂಡಿ ಅಕ್ಷಯಾನಂದ ಬರುತಾನೆ ಇದರಿಡಿ 9 ಕರ ಕೊಟ್ಟಳು ಸುಶೀಲೆ ವರ ಕೃಪೆಯಲಿ ಕೊರವಂಜಿ ಮಾತಲಿ ಅರಿತಳು ತಾ ತನ್ನಲಿ ಪರಮಾನಂದ ಲೀಲೆ ಬೆರದಳು ಕೇಳಿ 10 ನುಡಿಯುವ್ವ ಸಲಲಿತವಾದ ನಿಜವಾಕ್ಯ ಬಡುವಂತೆ ಹರುಷವು ನೋಡಿ ತ್ರಯಲೋಕ್ಯ ಬಡಸವ್ವ ನನಗಿಂದು ಇದೆ ನಿಜ ಮುಖ್ಯ ಕುಡಲಿಕ್ಕೆ ನಿನಗಿದು ಶಕ್ಯ 11 ಮನದಂತೆಯಾದರ ನೆನದೇನವ್ವ ನಿಮ್ಮ ಅನುಕೂಲಾಗುವ ಪುಣ್ಯ ಪೂರ್ವಾರ್ಜಿತ ನಮ್ಮ ಸಾನುಕೂಲಾಗುವಂತೆ ಬೇಡಿಕೊಳ್ಳಮ್ಮ ನೆನಿ ಎಕನಾತಿ ಎಲ್ಲಮ್ಮ 12 ಒಡಮೂಡಿ ಬಂದರ ಉಡಿಯ ತುಂಬೇನವ್ವ ಜಡಿತಾಭರಣದುಡಿಗಟ್ಟೆ ನಿನಗವ್ವ ಹಿಡಿಯದೆ ಅನುಮಾನ ನುಡಿ ನಿಜ ಸಾರವ್ವ ಕುಡಲಿಕ್ಕೆ ನಿಧಾನದವ್ವ 13 ಕೈಯ ಲಕ್ಷಣದಲಿ ಶ್ರೇಯ ತೋರುತಲ್ಯದ ದಯ ಉಳ್ಳ ಮಹಿಮದ ಸೋಹ್ಯ ಬೀರುತಲ್ಯದ ಭಯವಿಲ್ಲದ ಭಾಗ್ಯ ಅಚಲ ತಾನಾಗ್ಯದ ಜಯಜಯಕಾರ ಭಾಸುತದ 14 ಪುಣ್ಯ ಪ್ರಭೆಯ ಚೆನ್ನಾಗಿ ಭಾಸುತಲ್ಯದೆ ಕಣ್ಣಿಗೆ ಸುಚಿನ್ಹ ಹೊಳವುತದೆ ಚಿನ್ನುಮಯದ ಸುಪುತ್ಥಳಿ ಬರುತದೆ ಬಣ್ಣ ಬಣ್ಣದ ಸುಖ ಬೀರುತದೆ 15 ಅಂಗದೊಳಗ ನಿಮ್ಮ ರಂಗ ಬರುತಾನಮ್ಮ ಕಂಗಳಿಗಿದರಿಡುತದೆ ಹರುಷವು ನಿಮ್ಮ ಭವ ಬಂಧದ ದುಷ್ಕರ್ಮ ಮಂಗಳಕರಾನಂದೊ ಬ್ರಹ್ಮ 16 ನಿನ್ನ ಭಾಗ್ಯಕ ಸರಿ ಇಲ್ಲೆ ಸಂಜೀವನಿ ಚೆನ್ನಾಗಿ ಕೇಳೆ ನೀ ಭಾವೆಗುಣಮಣಿ ಧನ್ಯವಾಯಿತು ನಿನ್ನಂದೆವೆ ಯತಿಮುನಿ ನಿನ್ನೊಳಗುಂಟು ದೇವಶಿಖಾಮಣಿ 17 ಭಾವೆ ನಿನ್ನಿಂದ ಪಾವನ್ನವಾಯಿತು ಜಗ ದೇವಾಧಿದೇವ ಮೂಡುವ ನಿನ್ನೊಳಗೀಗ ಕಾವಕರುಣ ಪ್ರತ್ಯಕ್ಷವಾಗುವ ಯೋಗ ಸುವಿದ್ಯ ಭಾಸುವ ದಿವ್ಯಭೋಗ 18 ಉಂಡ ಊಟ ಕಂಡ ಕನಸು ಪಿಂಡಲಕ್ಷಣ್ಹೇಳುವೆ ಮಂಡಲೊಳಗ ಮಂಡಿಸಿಹ್ಯ ಮಹಿಮೆ ನೀನಗ್ಹೇಳುವೆ ಹಿಂಡದೈವದೊಡಿಯ ನಿನ್ನೊಡಲೊಳಗ ತಾಳುವೆ ಪಂಡಿತರಿಗೆ ಪ್ರಿಯವಾದಾಗ್ಯ ಖಂಡನೀನೆ ಬಾಳುವೆ 19 ನೀನೆ ಜಗಕ ತಾರಿಸುವ ದೈವದೋರಿಕುಡುವೆ ನೀನೆ ಭಕ್ತಜನರ ಜನ್ಮಸಾರ್ಥಕವು ಮಾಡುವೆ ಜ್ಞಾನಗಮ್ಯವಾದ ವಸ್ತುಹಿಡದು ನೀನೆ ಕುಡುವೆ ನಿತ್ಯ ಆಡುವೆ 20 ಅಮ್ಮ ನಿಮ್ಮೊಳು ಘಮ್ಮನ್ಹೊಳುವ ತಮ್ಮ ಬರುತಾನ ಸುಮ್ಮಾನಿಹ್ಹಾ ಸಮೀಪಲೆ ಧಿಮ್ಮ ಹಿಡಿದ ಹಮ್ಮಿನೊಳು ಘುಮ್ಮವಾದರು ಬ್ರಹ್ಮಾದಿಗಳೆ ನಮ್ಮ ನಿಮ್ಮದೆಂಬು ಭ್ರಮೆ ಸುಮ್ಮನ್ಯಾಕಿದೊ ಅಮ್ಮಕೇಳೆ 21 ಬಯಕಿ ಲಕ್ಷಣ ನಿನ್ನ ಹೇಳ್ಹೆನವ್ವಾ ತಾಯಿ ಮಾಯಿಕ ಗುಣ ಸುಟ್ಟು ತಿಂದೇನೆಂಬುದು ಬಾಯಿ ಕೈಕಚ್ಚಿಲೆ ಶುದ್ದಿಲ್ಲಾದವರ ತಾಳದು ಸೋವಿ ಐರಾವತ ಬರುತಾನ ನಿನ್ನೊಳು ಪನ್ನಂಗಶಾಯಿ 22 ಬಾಹ್ಯನಿಷ್ಟರ ಕಂಡು ಬದಿಗೆ ಬರಗುಡಿ ನೀನು ಅಹಂಭಾವಕ ಹೇಸಿ ವಾಕರಿಸುವೆ ನೀನು ಗುಹ್ಯ ಹೇಳುವೆ ನಾನು ಸಾಹ್ಯ ಮಾಡುವ ಶ್ರೀಗುರು ತಾನು 23 ಕಾಮಕ್ರೋಧ ಕರದು ತಿಂದೇನೆಂಬುದು ಬಯಕಿ ನೇಮದಿಂದಲಿ ಮದ ಮತ್ಸರನೆ ನೂಕಿ ಪ್ರೇಮವಿಲ್ಲದವರ ಎಂದಿಗಾದರ ಸೋಕಿ ವರ್ಮಿಕರಿಗೆ ನೀ ಕೈಯಗುಡುವಾಕಿ 24 ಆಸಿ ಎಂಬುದು ಅಟ್ಟುಅರದೇನೆಂಬುದು ಬ್ಯಾಗ ಹುಸಿನುಡಿವೆಂಬದು ಹುರವಾದೀಗ ಹಸನಾದ ಬಯಕೀದು ಋಷಿ ಮುನಿಗಳ ಯೋಗ ಲೇಸು ಲೇಸು ನಿನ್ನ ಅಂತರಂಗ 25 ಧನ್ಯವಾದ ರಾಜಯೋಗವ ಬಯಸುದು ಉನ್ಮನವಾಗಿ ಊರ್ಜಿತವಾದೇನೆಂಬುದು ಸ್ವಾನುಭವದ ಸುಖ ಸೂರ್ಯಾಡೇನೆಂಬುದು ಭಿನ್ನ ಭೇದಕ ಕಣ್ಣ ತ್ಯರಿಯದಿದು 26 ವಾಸುದೇವನ ಭಕ್ತಿ ಆಶ್ರೈಸೇನೆಂಬುದು ಶ್ವಾಸೋಚ್ಛ್ವಾಸಕ ಒಮ್ಮೆ ಬಯಸುವುದು ವಿಷಯ ಪ್ರಪಂಚಕ ಹೇಸಿ ತಾ ಜರೆವುದು ಕುಸುಮನಾಭನ ಸೇವೆ ಇಚ್ಛಿಸುವದು 27 ಒಮ್ಮೆ ಸರಸ್ವತಿ ಕೂಡ ಸರಸಾಡೇನೆಂಬುದು ಒಮ್ಮೆ ಲಕ್ಷುಮಿ ಕೂಡ ಲೋಲಾಡೇನೆಂಬುದು ಒಮ್ಮೆ ಪಾರ್ವತಿ ಕೂಡ ಪವಡೀಸೆನೆಂಬುದು ಒಮ್ಮೆ ಏನುನೊಲ್ಲ್ಯೆನೆಂಬುದು 28 ಹೇಳೇನೆಂದರೆ ನಿನ್ನ ಬಯಕಿಯ ಉಲ್ಹಾಸ ತಿಳಿಯದಿನ್ನೊಬ್ಬರಿಗ ಗರ್ಭದ ಸುವಾಸ ಉಲವುತದೆ ನಿನ್ನೊಳು ಸುಪ್ರಕಾಶ ಥಳಥಳಗುಡುತಿಹ್ಯ ಬಾಲವೇಷ 29 ಧನ್ಯ ಧನ್ಯ ನಿನ್ನ ಗರ್ಭಹೊಳುವ ಹೊಂಬಣ್ಣವು ಒಡಲು ನಿನ್ನ ಪುಣ್ಯ ಪಾವನ್ನವು ಧನ್ಯ ಧನ್ಯ ನಿನ್ನ ದರುಷಣದ ಜೀವನವು ಧನ್ಯ ಧನ್ಯ ನಿನ್ನ ಕಂಡ ಜನರ ಜೀವಪ್ರಾಣವು 30 ಭಾವೆ ನಿನ್ನಿಂದ ಖ್ಯಾತಿಪಡೆದ ಪ್ರಹ್ಲಾದನು ದೇವ ದೇವ ಬಂದು ಸ್ತಂಭದೊಳು ಮೂಡಿದನು ಆವಾವ ಠಾವಿನೊಳು ಬಂದು ರಕ್ಷಿಸಿದನು ಜೀವ ಜೀವ ತಾನೆ ಅಗಿ ಪ್ರಾಣನುಳಹಿದನು 31 ನಿನ್ನ ಬಲಗೊಂಡು ದ್ರೌಪದಿಯ ಖ್ಯಾತಿಪಡೆದಳು ಪುಣ್ಯ ಉಳ್ಳ ಮಹಿಮನಂಘ್ರಿ ಕಣ್ಣಾರ ಕಂಡಳು ಚೆನ್ನಾಗಿ ಬಂದು ಸ್ವಾಮಿ ಲಜ್ಜೆಗಾಯ್ದು ಸಭೆಯೊಳು ಬಣ್ಣ ಬಣ್ಣ ವಸ್ತ್ರ ಪೂರಿಸಿದಾನೇಕಗಳು 32 ಸ್ತುತಿಯು ಮಾಡಲು ನಿನ್ನ ಯತಿಮುನಿಗಳವಲ್ಲ ಗತಿಯ ಪಡೆದರು ಸಕಲ ಮುನಿಜನರೆಲ್ಲ ಅತಿ ಹರುಷವು ಕೂಡಿದರು ಜಗದೊಳಗ್ಯಲ್ಲ ಹಿತದೋರುತಿದೆ ವಸ್ತು ಮಯವೆಲ್ಲ 33 ಹೊಳೆವ ಸುಳಿವ ಚೆಲುವ ನಿನ್ನೊಳಗ ನಲುವನೆ ಕಳವಿಲೊಯಿದ ವೇದನುಳುಹಿದವನು ಬೆಳೆವನೆ ಭಾರ ತಾಳಿದವನು ಉಲುವನೆ ನೆಲವ ಗೆದ್ದ ಬಲಿಯು ನಿನ್ನೊಳಗೆ ಒಲುವನೆ 34 ಸೀಳಿ ದೈತ್ಯನ ಕೊಂದ ಶೂರ ಘಮಗುಡತಾನೆ ಅಳದು ಭೂಮಿಯ ಕೊಂಡು ಬೆಳದವ ಬರುತಾನೆ ತಿಳಿದು ಪಿತರ ಸೂಡುಕೊಂಡವ ಬರುತಾನೆ ಬಲುಪರಾಕ್ರಮದವ ತೋಳುತಾನೆ 35 ತಾಂ ಸಂಚರಿಸ್ಹ್ಯಾನ ನಿನ್ನೊಳಗ ಮೂಡಿ ಬರುತಾನೆ ಬ್ಯಾಗೆ ನಗುತ ಬರುತಾನೆ ಈಗ ಕೈಯಗೊಟ್ಟು ಬರುತಾನೆ ನಿನಗೆ 36 ಸಾಧೀಸಿ ಕೇಳೆ ಕಿವಿಗೊಟ್ಟು ಒದುಗುವ ತಾಂ ಇದರಿಟ್ಟು ಉದಿಯವಾಗುವ ದಯವಿಟ್ಟು ಸದ್ಬಕ್ತರಿಗೆ ಕೈಯಗೊಟ್ಟು 37 ಹುಟ್ಟುವ ಶಿಶುವಿನ ಘಟಣಿಯ ಬಹಳ ಗುಟ್ಟೊಡಿಯಲು ತಾಂ ಮುಟ್ಟನು ತಾಳ ಕಟ್ಟುವ ದೈತ್ಯರ ದಿಟ್ಟ ಮಾ ಸಾಳ ದೃಷ್ಟಿಸಿ ನೋಡುವ ನಿಷ್ಠರ ಮೇಳ 38 ಶಿಶುವಿನ ಲಕ್ಷಣ ಬಲು ಅಗಾಧ ಪರಿ ಮಾಟವು ಋಷಿಗಳ ಬೋಧ ಹಸು ನೀರಡಿಸರವುದು ಶ್ರೀಪಾದ ಬಸುರಿನ ಬಯಕಿದು ಬಲುಸುಸ್ವಾದ 39 ಘಮಗುಡುತದೆ ಅನಾಹತದ ಧ್ವನಿಯು ಕ್ರಮ ತಿಳಿವದು ಸುಯೋಗದ ಮನಿಯು ಧಿಮಿಗುಡುತದ ಆನಂದದ ಖಣಿಯು ಭ್ರಮ ಬಿಡಿಸುವ ಘನ ಚಿಂತಾಮಣಿಯು 40 ಹುಟ್ಟಿ ಬರುತಾನಿವ ಶಿಷ್ಟರ ಮನಿಲಿವ ದುಷ್ಟ ಮರ್ದನ ದೇವ ನಿಷ್ಠರಿಗೆ ಕಾವ ಎಷ್ಟೆಂದ್ಹೇಳಲವ್ವ ಸೃಷ್ಟಿಗಧಿಕನಿವ ಮುಟ್ಟಿ ಮುದ್ರಿಸುವ ದಿಟ್ಟೆದೆ ಕೂಸವ್ವ 41 ವರ್ಣಿಸಲಾಗದು ಶಿಶುವಿನ ವಿವರಣ ದಣಿಯಿತು ಕೊಂಡಾಡಿ ವೇದಸುಪುರಾಣ ಖೂನ ತಿಳಿಯದು ತಾನು ಶಾಸ್ತ್ರಕ ಸಂಪೂರ್ಣ ದ್ಯಾನ ಮೋನಕ ದೂರಗಮ್ಯ ಸ್ಥಾನ 42 ಗುಟ್ಟು ತಿಳಿಯದ ವಸ್ತು ಹುಟ್ಟಿಬಾಹುದು ಕೇಳಿ ಉಂಟಾಗುವದು ನಿನ್ನೊಳು ನೆನದಾಗಳೆ ಘಟ್ಯಾಗಿ ಅನುಭವಿಸುತ ನೀನೆ ಬಾಳೆ ದೃಷ್ಟಿಯೊಳೀಗುಟ್ಟು ಆರೀಗ್ಹೇಳೆ 43 ಬಸುರು ಬಯಕೆಂಬುದು ಹೆಸರಿಸಲಳವಲ್ಲ ಹಸನಾಗಿ ಅನುಭವಿಸುವ ಪುರುಷನೆ ಬಲ್ಲ ವಾಸುದೇವನ ಕಾಣದಿಹ್ಯದೆ ಕಣ್ಣಲ್ಲ ಆಸಿ ಅಳಿದವರೆ ತಾಂ ತಿಳಿದರೆಲ್ಲ 44 ಹುಟ್ಟುವ ಲಕ್ಷಣ ಕೇಳೆ ನೀ ಕಿವಿಗೊಟ್ಟು ಮುಟ್ಟಿ ಮುದ್ರಿಸಿಹ್ಯ ಗುರು ಕಟಾಕ್ಷವ ಕೊಟ್ಟು ಇಟ್ಟುಕೊ ಈ ಮಾತು ಆರಿಗ್ಹೇಳೆ ಬಿಟ್ಟು ಗಂಟು ಕಟ್ಟಿದ ಮಾತು ಹೇಳೆಬಿಟ್ಟು 45 ಆಲಕ್ಷವೆಂಬ ಸುನಕ್ಷತ್ರದಲಿ ಪುಟ್ಟಿ ಸುಲಕ್ಷಣದಲಿ ಬರುತಾನೆ ಜಗಜಟ್ಟಿ ನೆಲಯುಗೊಂಡಾಡಿಸಿ ಮನಮುಟ್ಟಿ 46 ಜನ್ಮನಾಮೆಂಬುದು ಕೂಸಿನ ನಿರ್ಗುಣ ಸಮಸ್ತರಿಗೆ ನಡವ ನಾಮವೆ ಸಗುಣ ಬ್ರಹ್ಮಾನಂದದಿ ಲೋಲ್ಯಾಡುವ ಪರಿಪೂರ್ಣ ಕಮಲನಯನ ಸ್ವಾಮಿ ರಮಾರಮಣ 47 ಕೂಸು ಎಂದರ ತಾನು ಕೂಸು ಎನಲಾಗದು ವಾಸವಾಗ್ಯಾಡುದು ವಿಶ್ವಲಿದು ಹೆಸರನೇಕಪರಿಯಲಿ ಕರಿಸಿಕೊಂಡು ಲೇಸು ಲೇಸಾಗಿ ತಾ ಆಡುವುದು 48 ಹಿಂದ ಅಡಿದ ಆಟ ಮಂದದೆ ಆಡುದು ಎಂದಿಗ್ಯದರ ಗುಟ್ಟು ತಿಳಿಯಗುಡುದು ಒಂದಿಸಿದವರ ತನ್ನೊಳು ಕೂಡಿಕೊಂಬುದು ಒಂದೆ ವಸ್ತುವಾಗಿ ತೋರುವುದು 49 ಹೇಳುವೆ ಕೇಳೆ ಶಿಶುವಿನ ಆಟ ತಿಳಿಯಲು ಜಗದೊಳು ಬಲು ಅವ್ಹಾಟ ನೆಲಿ ತಿಳಿದವರಿಗೆ ತೋರುದದು ನೀಟ ನಲಿನಲಿದಾಡುವ ಸಲಲಿತದಾಟ 50 ಒಮ್ಮೆ ನೀರನೆ ಚಲಿಪಿಲಿ ಮಾಡುವ ಒಮ್ಮೆ ಬಾಗಿ ಜಗನೆಗುವ ಒಮ್ಮೆ ಹಲ್ಲಿಲೆ ಬೇರನೆ ಅಗಳುವ ಒಮ್ಮೆ ಬರುತಲಿ ಗುರುಗುಡುವ 51 ಒಮ್ಮೆ ಬಲು ಗಿಡ್ಡಾಗಿ ತೋರುವ ಒಮ್ಮೆ ಪರಾಕ್ರಮ ಹಿಡುವ ಒಮ್ಮೆ ವನದೊಳಗಾಡುತ ಹೋಗುವ ಒಮ್ಮೆ ಕಡವ ಬೆಣ್ಣೆಯ ಮೆಲುವ 52 ಒಮ್ಮೆ ಬತ್ತಲೆ ತ್ರಿಪುರದಲಿ ಸುಳಿವ ಒಮ್ಮೆ ಏರುವ ತಾ ಹಯವ ಒಮ್ಮೊಮ್ಮಾಗುವ ತಾನೆವೆ ಸಗುಣವ ಒಮ್ಮೊಮ್ಮಾಗುವ ನಿರ್ಗುಣವ 53
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಳಲನೂದೆಲೋ ಕೃಷ್ಣ ಕೊಳಲನೂದೆಲೊ ಪ ಕೊಳಲನೂದು ಮನದ ದುಗುಡಕಳೆದು ಮತ್ತೆ ಮನಕೆ ಪ್ರಶಾಂತೆತಳೆಯುವಂತೆ ನಿತ್ಯಮಂ_ಜುಳ ಸ್ವರಗಳನ್ನು ತೆಗೆದು ಅ.ಪ. ತುಂಬಿ ನಳಿನಬೆರಳುಗಳು ತೂತು ಮುಚ್ಚಿತೆರೆದು ಸವಿಯ ನಾದದಲ್ಲಿ ನಿಸಾರ ನಿ ದ ಪ ಮ ಪ ನಿ ಎಂದು 1 ಇಲ್ಲಿ ಪೀಠದಿ ಎದ್ದು ನಿಲ್ಲು ಥಾ7ಟದಿಮಲ್ಲಿಗೆ ವನಮಾಲೆ ಕೊರಳೊಳಲ್ಲಾಡುತಿರಲು ರೂಪದಲ್ಲಿ ಮನವಿನೈಕ್ಯವಾಗಿತಲ್ಲೀನರಾಗುವಂತೆ ಕೃಷ್ಣಾ 2 ಎದ್ದುನಿಂತು ಮಾಟದಿ ನಿಂತು ಮುದ್ದು ನೋಟದಿಬಿದ್ದವರನು ನೋಡಿ ನಮಗೆಶುದ್ಧ ಬುದ್ಧಿ ಕೊಟ್ಟು ನಮ್ಮದುದ್ಧರಿಪುದು ಗದುಗಿನ ಪ್ರಸಿದ್ಧ ವೀರನಾರಾಯಣ 3
--------------
ವೀರನಾರಾಯಣ
ಕೊಳಲನೂದೋ ಇನ್ನೊಮ್ಮೆ ರಂಗಯ್ಯಾ ಕೊಳಲನೂದೋ ಇನ್ನೊಮ್ಮೆ ಕೃಷ್ಣಯ್ಯಾ ಪ ಕೊಳಲನೂದೋ ದ್ವಾರಕಾ ಪುರನಿಲಯಾ ಅ.ಪ. ಎಡಹೆಗಲಲ್ಲೆಡಗಲ್ಲಂವ ನೀಡೀ ಕುಡಿ ಹುಬ್ಬುಗಳಲ್ಲಾಡಿಸುತ್ತ 1 ಮೃದುತರ ತುದಿ ಬೆರಳಿಂದೊತ್ತುತ ಮಧುರಾಧರದಲ್ಲಿಟ್ಟು ರಂಗಯ್ಯ2 ನಾದ ಮೂರುತಿ ಗೋಪೀಜನಲೋಲಾಶ್ರೀದವಿಠಲ ಗೋಪಾಲಬಾಲ3
--------------
ಶ್ರೀದವಿಠಲರು
ಕೊಳಲೇನು ಪುಣ್ಯವ ಮಾಡಿ ರಂಗನ ಬಳಿಗೆ ಬಂದಿತೇ ಪ ನಳಿನ ನೇತ್ರೆಯರ ಮನಸು ಎಲ್ಲಾ ಸೆಳೆದು ಪೋದೀತೇ ಅ.ಪ. ವನಜನಾಭನು ಯಮುನೆಯಲ್ಲಿ ಕೊಳಲನೂದುವಮನಸು ನಿಲ್ಲದ ನಡೀರೆ ಪೋಗೋಣ ಕೇಳಿ ನಾದವ 1 ಇಂದು ಗೋವುಗಳ 2 ಎಂಥ ರಾಗ ಮಾಡುವೋನು ಕಂತುಪಿತನುಅಂತರಂಗಕೆ ಸುಖವನಿತ್ತು ಭ್ರಾಂತಿಗೊಳಿಸುವ 3 ಕುಂಡಲ ಹಾರಪದಕ ಧರಿಸಿ ಕುಳಿತಿಹಸರಸಿಜಾಕ್ಷಿಯರೆ ನೋಳ್ಪ ಜನಕೆ ಹರುಷ ಕೊಡುತಿಹ 4 ಸಿರಿಯು ಬಂದು ಮುರಳಿಯಾಗಿ ಮರುಳು ಮಾಡುವನೆಪರರಿಗಿಂಥ ಸುಖವುಂಟೆಂದು ಭ್ರಾಂತಿಗೊಳಿಸುವನೆ ] 5 ಇಂದು ನಮ್ಮೊಳು ಸರಸವಾಡುವನೆ 6
--------------
ಇಂದಿರೇಶರು