ಒಟ್ಟು 680 ಕಡೆಗಳಲ್ಲಿ , 90 ದಾಸರು , 588 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಂಥ ಬೇಡವೊ ಲಕ್ಷ್ಮಿಕಾಂತ ಎನ್ನಯ ಮನದ ಚಿಂತಿತಾರ್ಥವನೀಯೊ ಸಂತತಂ ಕಾಯೊ ಪ ಚರಣ ಕಮಲವ ಕಂಡು ಶರಣು ಹೊಕ್ಕೆನು ನಾನು ಕರುಣದಿಂದನುದಿನವು ಕಾಯಬೇಕೆನುತ ಸ್ಮರಣೆಪೂರ್ವಕವಾಗಿ ಹರಣವನೆ ಹರಸಿಹೆನು ಹರಿಣನೊಳು ಬಿಲುಗಾರ ಕರುಣ ಬಿಟ್ಟಂತೆ 1 ನರಜನ್ಮವೆಂಬುದಿದು ಕರಕಷ್ಟವಾಗಿರುವ ಉರಿಯ ಮನೆಯನು ಹೊಗುವ ತೆರನಲ್ಲವೆ ಪರಿಪರಿಯ ದುಃಖಗಳು ಬರುವ ಸಮಯಾಂತರದಿ ಮರೆಯಾಗದಿರು ಎನ್ನಸ್ಥಿರದಿ ಮೈದೋರು 2 ತಪ್ಪುಗಳು ಹೊರತಾಗಿ ಅಪ್ಪ ಸೇರುವುದುಂಟೆ ಒಪ್ಪುಗೊಂಬವರಾರು ಸರ್ಪಶಯನ ಬೊಪ್ಪ ಬಹ ದುರಿತಗಳ ತಪ್ಪಿಸಿಯೆ ಕಳೆದೆನ್ನ ಮುಪ್ಪುಗಳ ಪರಿಹರಿಸೊ ಅಪ್ಪಗಿರಿವಾಸ 3 ಉರಗ ಗಿರಿವಾಸ ನಿನ್ಸೆರಗವಿಡಿವೆನು ನಾನು ಕರಗಿ ಹೋಯಿತು ಇರವು ಕಾವರಿಲ್ಲ ಮರುಗಿದರೆ ಧೈರ್ಯವನು ತಿರುಗಿ ಹೇಳುವರಿಲ್ಲ ಕುರಿ(ಗಾ)ಯ್ವ ತೆರನಂತೆ ಕೈಗೆ ಸಿಲುಕಿದೆನು 4 ಇಹಪರದ ಸೌಖ್ಯಗಳ ಕರೆದಿತ್ತು ಕರವಿಡಿದು ಸಹವಾಸವಾಗಿರ್ದು ಸಲಹಿಕೊಂಡು ವಹಿಲದಲಿ ವರವೀವ ವರಾಹತಿಮ್ಮಪ್ಪ ಬಹುಭಾರವನು ತಾಳ್ದು ಸಲಹೆನಿಸೊ ನೀನು 5
--------------
ವರಹತಿಮ್ಮಪ್ಪ
ಪನ್ನಗಾಚಲ ವಾಸ - ಪದುಮಿನೀಶಾ ಪ ಬನ್ನ ಬಡಿಸುವ ರೋಗವನ್ನು ಕಳೆ ಶ್ರೀಶಾ ಅ.ಪ. ತನುವ ರಥವನೆ ಮಾಡಿ ತತ್ಸೂತ ನೀನೆನಿಸೀಮನ ಆದಿ ಕರಣವೆಂಬಶ್ವಗಳ ಬಿಗಿಸೀ ||ಗುಣವೆನಿಪ ವಾಗಭಿ - ಮಾನಿಯನೆ ಬಂಧಿಸೀಚನ್ನ ರಥವನು ಚರಿಪೆ ಜೀ | ವನ್ನ ಕುಳ್ಳಿರಿಸೀ 1 ಸೂತ್ರಾಂತರಾತ್ಮಕನೆ | ಸೂತ್ರಧಾರಿಯೆ ನೀನುಮಾತ್ರಾದಿ ಸುಖ ದುಃಖ | ಸಮವೆಂದು ತಿಳಿಸೋ ||ಧಾತೃ ಪಿತ ನೀನಹುದೊ | ಮಾತರಿಶ್ವ ಪ್ರಿಯನೆಗಾತ್ರ ಬಳಲಿಸ ಬೇಡ | ಪ್ರಾರ್ಥಿಸುವ ನಿನ್ನಾ 2 ಘನ್ನ ಮಹಿಮನೆ ನಿನ್ನ | ಏನು ಬೇಡಲಿ ನಾನುನಿನ್ನ ನಾಮ ಸ್ಮರಣೆ | ಅನ್ನಂತ ವೀಯೋನಿನ್ನೊಲಿಮೆ ಉಳ್ಳನಕ | ಇನ್ಯಾವ ಭಯವಯ್ಯಪನ್ನಂಗ ಶಯನ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಪಂಪಾಪುರನಿವಾಸ ಪ್ರಮಥರೇಶಾ ಪ ತ್ವಂ ಪಾಹಿ ಪಾಹಿ ತ್ರಿಪುರಾರಿ ತ್ರಿನೇತ್ರ ಅ.ಪ. ಕೈಲಾಸಸದ್ಮ ಚಿತಿಚೇಲ ಭೂಷಣ ಮನೋ ಮೈಲಿಗೆಯ ಪರಿಹರಿಸೊ ನೀಲಕಂಠ ಕಾಲ ಕಾಲಗಳಲ್ಲಿ ಕಾಲನಿಯಾಮಕನ ಲೀಲೆಗಳ ತುತಿಪ ಸುಖ ನಾಲಿಗೆಗೆ ಕೊಡು ಸತತ 1 ಪಾರ್ವತೀರಮಣ ನೀ ಮೋಹಶಾಸ್ತ್ರವ ರಚಿಸಿ ಶಾರ್ವರೀಚರರ ಮೋಹಿಸಿದೆ ಹಿಂದೆ ಶುಕ ವ್ಯಾಧ ಜೈಗೀಷ ರೂಪದಲಿ ಈರ್ವಗೆ ಚರಿಯದಲಿ ಹರಿಯ ಮೆಚ್ಚಿಸಿದೆ 2 ಸುರನದೀಧರ ನಿನ್ನ ಚರಿತೆಗಳ ವರ್ಣಿಸಲು ಸುರಪಮುಖ ಸುಮನಸಾದ್ಯರಿಗಸದಳಾ ಸ್ಮರನಪಿತ ಶ್ರೀ ಜಗನ್ನಾಥ ವಿಠ್ಠಲನ ಸಂ ಸ್ಮರಣೆಯನು ಕೊಟ್ಟು ಉದ್ಧರಿಸು ದಯದಿಂದ 3
--------------
ಜಗನ್ನಾಥದಾಸರು
ಪಯಸಾಗರ ಶಯನನೆ ಭಜಿಪೆನು ನಿನ್ನ ಭವಸಾಗರದಾಟಿಸು ಶ್ರೀಹರಿ ಎನ್ನ ಪ. ಹಿಂದೆ ಮುಂದೆ ಗತಿ ನೀನೆಂದು ನಂಬಿರುವೆ ಇಂದಿರೆಯರಸನೆ ಎಂದಿಗಾದರು ಕಾಯೊ ತಂದೆ ಬಂದು ಎನ್ನ ಬಂಧನ ಬಿಡಿಸೊ 1 ಕರುಣಾಸಾಗರ ವರದಮೂರುತಿ ನಿನ್ನ ಸ್ಮರಣೆಯೆನಗೆ ನೀ ನಿರುತದಿ ನುಡಿಸು ಪರಮಪಾಮರನಿಗೆ ನಿನ್ನ ಚರಣವ ತೋರೊ 2 ಪುಟ್ಟಿಸಿದವನೀ ಕಷ್ಟ ಪಡಿಸುವುದು ಇಷ್ಟವೆ ನಿನಗದು ಕೃಷ್ಣಮೂರುತಿ ಸೃಷ್ಟೀಶ ಶ್ರೀ ಶ್ರೀನಿವಾಸ ದೊರೆಯೆ 3
--------------
ಸರಸ್ವತಿ ಬಾಯಿ
ಪರತತ್ವ ವಿಠಲನೇ | ಪೊರೆಯ ಬೇಕಿವಳಾ ಪ ದುರಿತ ರಾಶಿಯ ತರಿದು | ಕರಪಿಡಿಯ ಬೇಕೋ ಅ.ಪ. ಕಾಲ ಕಾಲ ರೂಪಾತ್ಮಾ 1 ಗುರು ಕರುಣವಿಲ್ಲದಲೆ | ಹರಿಯೊಲಿಯನೆಂದೆಂಬಪರಮರಾಹಸ್ಯವನು | ಅರುಹಿ ಪ್ರೀತಿಯಲೀಕರುಣಿಸೋ ತವನಾಮ | ಸ್ಮರಣೆ ಸುಖ ಸಖ್ಯವನುಮರುತಾಂತರಾತ್ಮ ಹರಿ | ದುರಿತವನದಾವಾ 2 ಹರಿದಾಸ್ಯವತಿ ಕಷ್ಟ | ವಿರುವುದೆಂದರಿತಾಗ್ಯುಪರಿ ಪ್ರಶ್ನೆ ಭಕ್ತಿಯಲಿ | ಮೊರೆಯನಿಡುತಿರುವಾ |ತರಳೆ ಗಂಕಿತ ವಿತ್ತೆ | ವರ ಸ್ವಪ್ನ ಸೂಚ್ಯದಲಿಹರಿಯೆ ನಿನ್ನಾದೇಶ | ವಿರುವುದೆಂದರಿತು 3 ಪರಿ ಪರಿಯಗೈಯ್ಯುವಲಿಹರಿಯೆ ತವ ಸಂಸ್ಮರಣೆ | ಮರೆಯದಂತಿರಿಸೋ 4 ಜೀವೇಶ ಸನ್ನುತನೆ | ಜೀವರಂತರ್ಯಾಮಿಗೋವತ್ಸದನಿ ಗಾವು | ಧಾನಿಸೂವಂತೇ |ಕೈವಲ್ಯ ಪ್ರದ ಗುರೂ | ಗೋವಿಂದ ವಿಠ್ಠಲನೆಭಾವುಕಳ ಮಾಡಿವಳ | ನೀವೊಲಿಯ ಬೇಕೋ 5
--------------
ಗುರುಗೋವಿಂದವಿಠಲರು
ಪರಸುಖದಿರವನು ಕರುಣಿಸು ಎನಗೆ ಪರಮಪಾವನ ತವಚರಣಸೇವೆಯೆಂಬ ಪ ಅರಿಷಡ್ವರ್ಗದ ಉರುಬಾಧೆ ತಪ್ಪಿಸಿ ಮೆರೆವೆಂಟುಕೋಣಗಳು ಶಿರತರಿದ್ಹಾರಿಸಿ ಜರೆಮರಣೆಂದೆಂಬ ಉರುಲನು ಜೈಸಿದ ಹರಿಶರಣರ ಮಹ ಕರುಣಕಟಾಕ್ಷವೆಂಬ 1 ಹತ್ತು ಇಂದ್ರಿಯಗಳು ಒತ್ತಿ ಮುರಿದು ನೂಕಿ ಸುತ್ತಿಸುಳಿವ ಕಪಿನ್ಹತ್ತಿರ ಬಂಧಿಸಿ ಭವ ಕತ್ತರಿಸೊಗೆದ ಚಿತ್ತಜತಾತನ ಭೃತ್ಯಂ ನಡೆಯೆಂಬ 2 ಹರಣಪೋದರು ನಿನ್ನ ಚರಣಸ್ಮರಣೆಯನ್ನು ನೆರೆನಂಬಿ ಬಿಡದಂಥ ಪರಮದಟವ ನೀಡೋ ಶಿರದಿ ಹಸ್ತವನಿತ್ತು ವರದ ಶ್ರೀರಾಮ3
--------------
ರಾಮದಾಸರು
ಪರಿಪಾಲಿಸುವುದು ಎಮ್ಮನು ಪರಮಾತ್ಮನ ರಾಣಿ ಕರುಣಾಕರನ ಪಾದಸ್ಮರಣೆಯನೆ ಕೊಟ್ಟು ಪ ಅಮರೇಶ ವಂದ್ಯಳೆ ಕಮಲಾಲಯೆ ನೀಬಂದು ಶ್ರಮವಿಲ್ಲದೆಯನ್ನೆಯ ಮಮತೆಯನು ಬಿಡಿಸು 1 ವಸುದೇವಸುತನ ರಾಣಿ ಅಸುರ ಸಂಹಾರಳೇ ನಿನ್ನ ವಶವಾದ ಮೇಲೆ ಅಂಭ್ರಣಿಯೆ ನಸುನಗುತ ಈಗ 2 ಮಂದರೋದ್ಧಾರಎನ್ನ ಸಂದುಸಂದಲಿ ಕಾರ್ಯವ ನಿಂದುಮಾಡಿಸುವಂಥದನ್ನು ಚಂದದೀಬೋಧವಕೊಟ್ಟು 3 ಮಂಗಳಾಂಗಿಯೆ ನಿನ್ನ ಮುಂಗಾಣದೆಸೊರಗಿದೆ ಅಂಗಜಪಿತನ ಜಾಯೇ ಭಂಗಪಡಿಸದೆಬೇಗಾ 4 ಪದ್ಮಸಂಭವನಮಾತೆ ಮುದ್ದುಮೋಹನವಿಠಲ ಪದ ಪದ್ಮಗಳನೀನೊಲಿದು ಹೃತ್ಪದ್ಮದಲಿ ಕಾಣಿಸುತ 5
--------------
ಮುದ್ದುಮೋಹನವಿಠಲದಾಸರು
ಪರಿಪಾಲಿಸೈ ವರ ವೆಂಕಟೇಶ ಚರಣಾಬ್ಜಯುಗ ಸ್ಮರಣೆಯನಿತ್ತು ಪ ದುರಿತಾಧಿದೂರ ಪರತತ್ವಸಾರ ಪರಮಾತ್ಮನೆ ಪೊರೆ ಎನ್ನುತ ಕರಿರಾಜ ಮೊರೆಯಿಡುತಿರಲು ನೀ ಗರುಡನ ಏರಿ ತ್ವರೆಯಿಂದ ಬಂದೆ ಪರಮ ದಯಾಕರ ಶ್ರೀನಿವಾಸ 1 ಪಾಪಿಷ್ಠನು ಅಜಾಮಿಳನೆಂದು ಕೋಪದಿ ಯಮ ಭಟರೆಳೆಯುತಿರೆ ತಾಪಕೆ ತನ್ನ ಪುತ್ರನ ಕೂಗುತಲಿರೆ ಕೃಪೆಯಿಂದ ನಿಜಪುರಕೆ ಒಯ್ದೆ 2 ಕನಕಾಚಲನಿಧಿ ಲಕ್ಷ್ಮೀಕಾಂತ ಪ್ರಣತಾರ್ಥಿಹರ ಆನಂದಕರ ವನಜಾಸನಾದಿ ಅಮಿಷಪಾಲ ಯೋಗಿ ಮನ ಕುಮುದಲೋಲ 3
--------------
ಲಕ್ಷ್ಮೀನಾರಯಣರಾಯರು
ಪವನಾಂತರ್ಗತ ಹರಿಯ ಸ್ಮರಣೆಯಮಾಡಿ ಪ ವಿವಿಧ ಭಕುತರು ಕೂಡಿ ಹರುಷದಿ ಪ್ಲವನಾಮ ಸಂವತ್ಸರದಲಿ ಸವಿನಯದಿ ಭಜನೆಗಳ ಮಾಳ್ಪರು ಹರಿಯ ಗುಣ ಕಾರ್ಯಗಳ ಸ್ಮರಣೆಯ ಅ.ಪ ಪಕ್ಷಿವಾಹನ ಹರಿಯು ಶ್ರೀ ಲಕುಮಿದೇವಿಯ ಲೆಕ್ಕಿಸದಿಹನಂತೆ ಹೀಗಿರಲು ಬ್ರಹ್ಮನ ಪೊಕ್ಕುಳಲಿ ಪಡೆದನಂತೆ ಸೊಕ್ಕಿದ ಅಸುರರನು ಬಡಿಯಲು ಮಿಕ್ಕ ಸುರರನು ಪೊರೆಯಲೋಸುಗ ರಕ್ಕಸಾಂತಕ ಹರುಷದಿಂದಲಿ ಚೊಕ್ಕ ಸ್ತ್ರೀ ರೂಪಾದನಂತೆ 1 ಇಂದುಶೇಖರ ಕೇಳಿದ ಸ್ತ್ರೀರೂಪ ನೋಡಲು ಬಂದು ಬೇಡಿದನಂತೆ ಅದು ಕೇಳಿ ಶ್ರೀಶನು ಸುಂದರ ಸ್ತ್ರೀಯಾದನಂತೆ ನಿಂದು ನೋಡುತ ಚಂದ್ರಶೇಖರ ಮಂದಹಾಸದಿ ಪಿಡಿಪೋದನಂತೆ ಮಂದಗಮನೆಯು ಸಿಗದೆ ದೂರದಿ ನಿಂದು ಕಣ್ಮರೆಯಾದಳಂತೆ2 ವಿಸ್ಮಯವಾದನಂತೇ ಪಶುಪತಿಯ ಸಿರದಲಿ ಹಸ್ತ ನೀಡಿದನಂತೇ ಮತ್ತೆ ರಕ್ಷಕರಿಲ್ಲವೆಂದು ತತ್ತರಿಸಿ ಭಯಪಟ್ಟನಂತೆ ತಕ್ಷಣದಿ ಶ್ರೀ ಕಮಲನಾಭ ವಿಠ್ಠಲ ರಕ್ಷಿಸಿ ಪೊರೆದನಂತೆ 3
--------------
ನಿಡಗುರುಕಿ ಜೀವೂಬಾಯಿ
ಪವಮಾನ-ಪಾವನಮೂರ್ತಿಯು ನೀನು ಕಾವುದೆಮ್ಮನು ಪ ಭುವನ ಚತುರ್ದಶದಲ್ಲಿಹ ಜೀವರ ಜೀವನ ನಿನ್ನದೋ ದೇವವರೇಣ್ಯಅ.ಪ ತೃಣಜೀವರಾದಿ ಸರ್ವರೊಳು ನಿಂತು ಗುಣಕಾಲಕರ್ಮಕ್ಕನುಗುಣನಾಗಿಹ ಫಲವ ನೀನಿತ್ತು ಕ್ಷಣ ಬಿಡದೆಲೆ ನೀನಗಣಿತ ಕಾರ್ಯವ ದಣಿಯದೆ ಮಾಡಿಸಿ ಧಣಿಗರ್ಪಿಸುವಿಯೊ1 ಶ್ರೀ ಜಗದ್ಗುರುವರೇಣ್ಯನೆ ನೀನು ಋಜುಸಾರ್ವಭೌಮ ನಿಜ ಪಾದಾಂಬುಜವ ತೋರಿಸೊ ಇನ್ನು ಈ ಜಗ ಕಾರ್ಯ ನಿವ್ರ್ಯಾಜದಿ ಮಾಡುತ ನೀ ಜಯಾಪತಿಗರ್ಪಿಸಿ ಅಜಪದ ಪಡೆದೆಯೊ2 ಕೋಟಿತ್ರಯರೂಪನೆ ಕಾಯುವುದಯ್ಯ ದಾಟಿಸು ಭವಶರಧಿಯಾ ಪಾಟುಪಟ್ಟದ್ದೆಲ್ಲ ನೀನರಿಯಾ ಸಾಟಿಯುಂಟೆ ಲಲಾಟನೇತ್ರ ಬೆ ನ್ನಟ್ಟಿ ಬರಲು ಕೇದಾರಕೆ ಅಟ್ಟಿದೆ 3 ಮರಣ ಜನುಮಂಗಳು ಬಂದರೆ ಬರಲಿ ಹರಿಗುರುಗಳಲಿ ಸ್ಮರಣೆಯು ತಪ್ಪದೆ ನಿಶ್ಚಲವಿರಲಿ ಉರುತರ ಹರಿಸರ್ವೋತ್ತಮವೆಂಬುವ ತರತಮ ಭೇದವು ನಿರುತವು ಇರಲಿ 4 ಶ್ರವಣ ಮನನಾದಿ ಭಕುತಿಯನ್ನು ಪವಮಾನ ನೀ ಕೊಡು ಅನುಮಾನಿಸಬೇಡವೋ ನೀ ಇದಕ್ಕಿನ್ನು ಭವಮೋಚಕ ಶ್ರೀ ವೇಂಕಟೇಶ ಇನ್ನೊಳಹೊರಗಿಹನೆಂಬುವುದನು ತೋರೋ 5
--------------
ಉರಗಾದ್ರಿವಾಸವಿಠಲದಾಸರು
ಪಾಪ ಕರ್ಮವ ಮಾಡಬ್ಯಾಡಾ ನರಕಕೂಪದೊಳಗೆ ಬಿದ್ದು ಹೊರಳಾಡಬ್ಯಾಡಕಾಕಪುರುಷರ ಸಂಗ ಕೇಡಾ ನಮ್ಮಶ್ರೀಪತಿಯ ಸ್ಮರಣೆ ಮಾಡದೆ ಬಿಡಬ್ಯಾಡಾ 6 ವಿಹೀತ ಕರ್ಮಗಳನ್ನು ಮಾಡೋ ನೀನುಅಹಿತಲ್ಪನೊಲಿಸಿ ಸದ್ಗತಿಯನ್ನು ಬೇಡೊಅಹಿತ ವಿಷಯ ಸುಖ ದೂಡೋ ಲೋಕ ದಹಿತನ ಸೇವೆಗೆಯುತಲಿ ಕೊಂಡಾಡೊ 7 ಸತ್ಯವಚನದಿಂದ ಬಾಳೊ ಬಲುಭಕ್ತಿಪೂರ್ವಕದಿ ಸಚ್ಛಾಸ್ತ್ರ ಕೇಳೊಚಿತ್ತದಿ ಶಾಂತಿಯ ತಾಳೊ ದುಷ್ಟ_ರುಕ್ತಿ ಕೇಳದೆ ನಿನ್ನ ಕಿವಿ ಮುಚ್ಚಿಕೊಳ್ಳೊ 8 ಪಂಚಭೇದ ಪ್ರಪಂಚವು ನಿಜವೆನ್ನೊ ಮೂಢಾ 9 ಜೀವೇಶಾರೊಂದೆಂಬೊ ಹೊಲಿಯಾ ಪರಿಭಾವಿಸೂ ದ್ವಾಸುಪರ್ಣವೆಂಬೊ ಶ್ರುತಿಯಾಕಾವನಯ್ಯನೆ ಜಗದೊಡೆಯಾ ನಮ್ಮಜೀವಾತ್ಮ ಭೃತ್ಯನೊ ಖರಿಯಾ 10 ಅದ್ವೈತರೊಡನಾಟ ಬ್ಯಾಡ ನಮ್ಮಮಧ್ವಮತದ ಪದ್ಧತಿ ಬಿಡಬ್ಯಾಡಾಖದ್ಯೋತಸುತಗಂಜಬ್ಯಾಡಾ ನೀನುಪೊಂದು ಐಹೊಳಿಯ ವೆಂಕಟನಂಘ್ರಿಗಾಢಾ 11
--------------
ಐಹೊಳೆ ವೆಂಕಟೇಶ
ಪಾರ್ವತಿದೇವಿ ಕರುಣದಿ ಕಾಯೆ ತಾಯೆ ಕರುಣಾಭರಣೆ ವಿಶ್ವಂಭರಣೆ ಪ. ಕರುಣಿಸಿ ಕಾಯೆ ತಾಯೆ ಮರೆಯದೆ ನಿನ್ನಯ ಚರಣಸ್ಮರಣೆಯಿತ್ತು ಭರದಿ ಕಾಪಾಡೆ ಅ.ಪ. ಅಂಬಾ ಲೋಕೇಶ್ವರಿ ಅಂಬಿಕೆ ನಿನಪಾದ ನಂಬಿದವರಿಗೆ ಕಷ್ಟಗಳುಂಟೆ ತಾಯೆ ನಿನ್ನ ಕಂಬುಕಂಠನರಾಣಿ ಬೆಂಬಿಡದಲೆ ಕಾಯೆ ಸಂಭ್ರಮದಲಿ ನಿನ್ನ ಇಂಬ ತೋರಿಸುತ 1 ಅಖಿಳಾಂಡನಾಯಕಿ ಸುಖಪ್ರದಾಯಕಿ ಸಖ ಶಂಕರನೊಳು ಸುಖಿಪ ಕಲ್ಯಾಣಿ ಅಕಳಂಕ ಮಹಿಮಳೆ ಸಕಲಕಾಲದಿ ನಿನ್ನ ಭಕುತಿಯೊಳ್ ಪೂಜಿಪÀ ಸಖರೊಳಗಿರಿಸೆ 2 ಭಕ್ತ ಮಂದಾರೆ ಭಕ್ತಿ ಮುಕ್ತಿಯನೀಯೆ ಸಹೋದರಿ ಕಾಯೆ ಭುಕ್ತಿಗೋಸುಗ ನಿನ್ನ ಸ್ಮರಣೆ ನಾನೊಲ್ಲೆನೆ ಶಕ್ತಿ ಸ್ವರೂಪಿಣಿ ಶಂಕರಿ ಶುಭಕರಿ 3
--------------
ಸರಸ್ವತಿ ಬಾಯಿ
ಪಾರ್ವತೀ - ಶರ್ವನ ಜಾಯೆ - ಪಾರ್ವತೀ ಪ ದಿವಿಜ ಧ್ವಂಸ | ಶರ್ವಾದಿ ದಿವಿಜೇಡ್ಯಸಾರ್ವಭೌಮನ ಸ್ಮøತಿ | ಸಾರ್ವಕಾಲದಲೀಯೆ ಅ.ಪ. ಪತಿ ಮಾರ ಜನನಿ ತಾಯೇ 1 ಸುರಪ ಗಣಪರ ಮಾತೆ ಶರ್ವೇ | ನಿನ್ನವರ್ಣಿಸಿ ಪೊಗಳಲೆನ್ನಳವೇ | ನೀನೆಕರುಣದಿ ಪೇಳಿಸೆ ಬರೆವೇ | ಎನ್ನಉರುತರ ಅಜ್ಞಾನವ ಬಲ್ಲೆ | ಆಹಕರಣಗಳೊಳು ನಿಂತು | ನಿರುತ ಪ್ರೇರಕಳಾಗಿಹರಿಗುಣ ದ್ಯೋತಕ | ಸ್ಮರಣೆ ಸುಖವ ನೀಯೆ 2 ಮೃಡನಂತರಂಗಳೆ ತಾಯೇ | ಎನ್ನಕಡು ಕರುಣದಿಂದಲಿ ಕಾಯೇ | ಇನ್ನುಧೃಡ ಹರಿ ಭಕುತಿಯ ನೀಯೆ | ಅನ್ಯಬೇಡೆನು ನಾ ಪಾರ್ವತೀಯೇ | ಆಹಮೃಡವಂದ್ಯ ಗುರು ಗೋ | ವಿಂದ ವಿಠ್ಠಲನನಡು ಹೃದಯದಿ ನೋಳ್ಪ | ಧೃಡಮತಿಯನು ಕೊಡೆ 3
--------------
ಗುರುಗೋವಿಂದವಿಠಲರು
ಪಾಲಿಸಯ್ಯಾ ಫಣಿಗಿರಿವಾಸಜೀಯಾ ಪ. ಪಾಲಿಸೈ ಪಾಲಾಬ್ಧಿಶಾಯಿ ಸುಳೀನೀರದನಿಭಶರೀರ ಶ್ರೀ ಕಾಲ ಕಾಮಿತಫಲಪ್ರದಾಯಕ ಅ.ಪ. ಮುನ್ನ ಮಾಡಿದ ಕರ್ಮದಿಂದಲಿ ಬನ್ನಪಟ್ಟೆನು ಶ್ರೀಹರಿ ಇನ್ನು ನಿನ್ನಯ ಚರಣಯುಗವನು ನಿರ್ಣಯದಿ ನಂಬಿದ ಪರಿ ಉನ್ನತೋನ್ನತವಪ್ಪ ತೆರದಲಿ ಮನ್ನಿಪುದು ನೀ ಕೃಪೆದೋರಿ ಬನ್ನ ಪಡುವುದು ಸಾಕು ಸಂತತ ನಿನ್ನನೆ ನೆರೆನಂಬಿದೆನು ಹರಿ 1 ವಾತಪಿತ್ತಕಫಾದಿ ರೋಗದ ವ್ರಾತದಿಂದ ಬಲು ನೊಂದೆನು ಧಾತುಬಲವತಿ ತಗ್ಗಿ ಉಷ್ಣೋಪೇತದಿಂದಲಿ ಬೆಂದೆನು ಚಾತುರ್ಥಿಕ ಜ್ವರಾತಿಶಯದಲಿ ಶೀತಸ್ಥಾನದಿ ನಿಂದೆನು ಈ ತೆರದ ಕಷ್ಟಗಳು ಬಾರದ ರೀತಿಯಲಿ ಪರಿಹರಿಸು ಸಂತತ 2 ನಿನ್ನನೆ ಮರೆಹೋಗುವ ತೆರದಲಿ ನಿನ್ನ ಸ್ಮರಣೆಯ ಮಾಡುವ ನಿನ್ನ ಭಕ್ತರ ಮೇಳದಲಿ ಸಂಪನ್ನನಾಗುತ ಕೂಡುವ ನಿನ್ನ ಮೂರ್ತಿಯ ನೊಡುವದು ಮತ್ತೆನ್ನ ಕಾಮಿತ ಬೇಡುವ ನಿನ್ನನೇ ಧ್ಯಾನಿಸುವ ಮತಿಸಂಪನ್ನವನು ನೀನಿತ್ತು ಕರುಣದಿ3 ಮಾರುತಿಯ ಚರಣಾರವಿಂದದದಿ ಸೇರಿ ನಿನ್ನನು ಧರೆಯಲಿ ಭೂರಿ ಮಹಿಮೆಯ ವರ್ಣಿಸುವ ಸಾಕಾರ ಮತಿಯನು ಎನ್ನಲಿ ಪ್ರೇರಿಸುತ ಕರುಣಾರಸಾಮೃತ ಬೀರಿ ಭೀತಿಯ ಪರಿಹರಿಸುತ್ತಲಿ4 ಕೊಂಚ ಧನವನು ಕೊಟ್ಟು ಎನಗೆ ಪ್ರಪಂಚವಹ ಗೃಹ ಗೈದಿಸಿ ಮುಂಚೆಮಾಡಿದ ಪಾಪವನು ನಿರ್ಲಚದಿಂದಲೆ ಛೇದಿಸಿ ಮಿಂಚಿಯೆನ್ನೊಳು ಮೋದಿಸಿ ಪಂಚಬಾಣನ ಪಿತನೆ ಮಂಗಳ ವಾಂಛಿತವನೆನಗಿತ್ತು ವಿಭವದಿ5 ಕಷ್ಟದಲಿ ನಿನ್ನ ಧ್ಯಾನ ಬಾರದು ತುಷ್ಟಿಯಲಿ ನಾ ಧ್ಯಾನಿಪೆ ಇಷ್ಟವೇ ನೀನಿತ್ತೆಯಾದರೆ ಕಷ್ಟಗಳ ನಾ ದೂಷಿಪೆ ಶ್ರೇಷ್ಠ ಕಾರ್ಕಳ ಪುರದಿ ಭಕ್ತರ ಒಟ್ಟುಗೂಡುತ ತೋಷಿಪೆ ಭ್ರಷ್ಟಲೋಭದ ಬಂಧುಗಳು ಎನ್ನೊಳಿಷ್ಟವಾಗುವ ತೆರದಿ ದ್ರವ್ಯವ6 ಕಾಲಭೈರವ ಪೇಳಿದಂದದಿ ನಾಲಿಗೆಯೊಳು ತಪ್ಪು ನೋಡದೆ ಪಾಲಿಸುತ ಇಷ್ಟಾರ್ಥವನು ಕೈ ಮೇಳವಿಸು ತಪ್ಪು ನೋಡದೆ ನೀಲಗಿರಿ ಸಮನಾಗಿ ಕಾರ್ಕಳದಾಲಯವ ನೀ ಮಾಡಿದೆ ಪಡುತಿರುಪತಿ ಪುರೇಶನೆ 7
--------------
ತುಪಾಕಿ ವೆಂಕಟರಮಣಾಚಾರ್ಯ
ಪಾಲಿಸು ಪರಮಪಾವನ ಪದ್ಮಾವತೀರಮಣ ಪಾಲಿಸು ಪಯವಾರಿಧಿವಾಸ ಪದ್ಮಗದಾಧರ ಕೌಸ್ತುಭಭೂಷ ಪ. ಪಾಹಿಪಾರ್ಥಸಾರಥಿಅ.ಪ. ಮದನಜನಕ ಮಹಿಮಾಂಬುಧಿ ನಿನ್ನ ಪದಕಮಲವ ನಾ ಸ್ಮರಿಸದೆ ಎನ್ನ ಮದಮುಖತನವನು ಒದರುವದೆನ್ನ ಪದುಮನಾಭ ರಕ್ಷಿಸು ನೀ ಮುನ್ನ ಸದಯಾಂಬುಧಿ ನೀನಲ್ಲವೆ ನಿನ್ನೊಳು ಕ್ರೋಧ ಉದುಭವಿಸುವುದು ನಿಜವೇ ಭಕ್ತವಾತ್ಸಲ್ಯ ಇದಕೆ ನೀ ಊನ ತರುವೆ ಸಾಕು ಈ ಮರವೆ ಒದಗಿಸು ಸರ್ವಮನಸಿನೊಳ್ ಪುದು- ಗಿದಿಷ್ಟಾರ್ಥಗಳ ನೀ ದಯವಿಡುತ ಇಹಪರಗತಿಗಾ- ಸ್ಪದವಾದ ಸಂಪದವ ನೀ ಕೊಡು ತ್ವರಿತ ತ್ರೈಲೋಕ್ಯದಾತ ಮಧುಸೂದನ ಮಂದರಗಿರಿಧರ ನೀ- ರದ ನಿಭ ನಿರ್ಮಲ ನಿಜರೂಪ ಗುಣ ಸದನಾಚ್ಯುತ ರವಿಕುಲದೀಪ ನಿರ- ವಧಿ ಆನಂದ ರಸಾಲಾಪ ಬುಧಜನೋಪಲಾಲಿತ ಲೀಲಾಯತ ಉದಧಿಶಾಯಿ ಮಾನದ ಮಧುಸೂದನ1 ನಾಮಸ್ಮರಣೆಯೆ ನರಕೋದ್ಧಾರ ನೇಮವಿಲ್ಲೆಂಬುದು ನಿನ್ನ ವಿಚಾರ ಸಾಮಾರ್ಥದ ಗುಣಕೆಲ್ಲನುಸಾರ ಪಾಮರ ಮನಕಿದು ಈ ಗುಣಭಾರ ಶ್ರೀಮನೋಹರನೆ ಲಾಲಿಸೊ ಚಾತುರ್ಥಿಕ ಜ್ವರದಿ ಭ್ರಾಮಕನಾದೆ ಪಾಲಿಸೊ ದಾರಿದ್ರ್ಯವೆಂಬ ಸೀಮೆಯಿಂದಲಿ ದಾಟಿಸೊ ಸುಕೀರ್ತಿಯ ಮೆರೆಸೊ ಸಾಮಗಾನಲೋಲ ಸುಜನ ಸ್ತೋಮ ಭಾಗ್ಯನಿಧಿಯೆ ಎನ್ನ ಮನದ ಅಜ್ಞಾನವೆಂಬ ತಾಮಸ ಪರಿಹರಿಸಿ ಜ್ಞಾನೋದಯದ ಸದಾನಂದ ಈ ಮಹಾಭಾಗ್ಯಗಳೆಲ್ಲ ನೀನಿತ್ತಿರೆ ನೀ ಮಾಡುವುದೆಲ್ಲವು ಸಹಜ ಗುಣ ಧಾಮಾಶ್ರಿತ ನಿರ್ಜರಭೂಜ ಸುಜನ ಸ್ತೋಮಾರ್ಕಾಮಿತ ವಿಭ್ರಾಜ ಶ್ರೀಮಚ್ಛೇಷಾಚಲ ಮಂದಿರ ಸು- ತ್ರಾಮಾರ್ಚಿತ ಸದ್ರಾಮ ಶ್ರೀರಾಮ2 ಉಡುವ ಸೀರೆಯ ಸೆಳೆಯಲು ದ್ರುಪಜೆಯ ಕೊಡಲಿಲ್ಲವೆ ಬಹುವಸನ ಸಂತತಿಯ ಹಿಡಿಯವಲಕ್ಕಿಗೆ ದ್ವಾರಕ ಪತಿಯ ಕಡು ಸರಾಗವಾಯ್ತಿಂದಿನ ಪರಿಯ ಬಿಡುತ ಬೆಟ್ಟದ ಮಧ್ಯದಿ ನಿಂತರೆ ನಿನ್ನ ಬಿಡುವರ್ಯಾರಯ್ಯ ಶೀಘ್ರದಿ ಮನಸಿನಿಷ್ಟ ಕೊಡು ದಯವಿಟ್ಟು ಮುದದಿ ಕರುಣಾವುದಧಿ ಕಡುಲೋಭಿತನ ಬಿಡು ಮಹರಾಯ ಅಡಿಗಳಿಗೆರಗುವೆನು ಜಗದಯ್ಯ ಪೂರ್ವಾರ್ಜಿತ ಕರ್ಮ ವಡಂಬಡಿಸಿ ರಕ್ಷಿಸು ದಮ್ಮಯ್ಯ ಪಂಢರಿರಾಯ ಒಡೆಯ ಶ್ರೀ ಲಕ್ಷ್ಮೀನಾರಾಯಣ ನಡುನೀರೊಳು ಕೈಬಿಡುವೆಯ ನೀ ತೊಡಕೊಂಡ ಬಿರುದೇನಯ್ಯ ಈ ಕಡು ಕೃಪಣತನ ಸಾಕಯ್ಯ ಪೊಡವಿಯೊಳಗೆ ಪಡುತಿರುಪತಿಯೆಂಬ ದೃಢಕಾರ್ಕಳದೊಡೆಯ ಶ್ರೀನಿವಾಸನೆ3
--------------
ತುಪಾಕಿ ವೆಂಕಟರಮಣಾಚಾರ್ಯ