ಒಟ್ಟು 6481 ಕಡೆಗಳಲ್ಲಿ , 135 ದಾಸರು , 4307 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಾಲಿ ಪಾವನ ಚರಣ ಲಾಲಿ ಅಘಹರಣಲಾಲಿ ವೆಂಕಟರಮಣ ಲಲಿತ ಕಲ್ಯಾಣ ಪ ಮಾಧವ ವಸುದೇವ ತನಯಸನಕಾದಿ ಮುನಿವಂದ್ಯ ಸಾಧುಜನಪ್ರಿಯಇನ ಕೋಟಿಶತತೇಜ ಮುನಿಕಲ್ಪ ಭೂಜಕನಕಾದ್ರಿನಿಲಯ ವೆಂಕಟರಾಯ ಜೀಯ 1 ಜಗದೇಕನಾಯಕ ಜಲಜದಳನೇತ್ರಖಗರಾಜವಾಹನ ಕಲ್ಯಾಣ ಚರಿತಸಗರತನಯಾರ್ಚಿತ ಸನಕಾದಿ ವಿನುತರಘುವಂಶ ಕುಲತಿಲಕ ರಮಣೀಯ ಗಾತ್ರ2 ನವನೀತ ಸತಿ ವಿನುತ ವಿಶ್ವಸಂಚಾರನಂದ ಗೋವಿಂದ ಮುಚುಕುಂದ ನುತಸಾರ 3 ಅಖಿಳ ಲೋಕೇಶಲಕ್ಷಣ ಪರಿಪೂರ್ಣ ಲಕ್ಷ್ಮೀ ಪ್ರಾಣೇಶ4 ನರಮೃಗಾಕಾರಿ ಹಿರಣ್ಯಕ ವೈರಿಕರಿರಾಜ ರಕ್ಷಕ ಕಾರುಣ್ಯಮೂರ್ತಿಹರಿ ಆದಿಕೇಶವ ಗುರು ಅಪ್ರಮೇಯಸಿರಿಧರ ಶೇಷಗಿರಿ ವರ ತಿಮ್ಮರಾಯ 5
--------------
ಕನಕದಾಸ
ಲಾಲಿ ಲಾಲೀ ಲಾಲಿ ಮೊದಲಗಟ್ಟೇಶ ಲಾಲಿ ಲಾಲೀ ಲಾಲಿ ತುಂಗಭದ್ರ ತೀರೇಶಾ ಪ. ಆಂಜನೆಯ ಸುತನಾಗಿ ಅಂಬರಕೆ ಹಾರಿ ಕಂಜಾಕ್ಷ ರಾಮರಂಘ್ರಿಗಳನ್ನು ಸಾರಿ ಮಂಜುಭಾಷಿಣಿಗೆ ಹರಿ ಮುದ್ರಿಕೆಯ ತೋರಿ ಶೌರಿ 1 ಕುರುಕುಲದಿ ಜನಿಸಿದ ಕುಂತೀ ಕುಮಾರ ರಣಧೀರನೆನಿಸಿದ ಕುರುಪ ಸಂಹಾರ ಧರೆಯ ಭಾರವ ಕಳೆದೆ ಗದೆಯಿಂದ ಶೂರ ಧುರಧೀರ ಶ್ರೀ ಕೃಷ್ಣನಂಘ್ರಿ ಪರಿಚಾರ 2 ಅನ್ಯಮತಗಳ ಮುರಿದ ಧನ್ಯಮುನಿವರನೆ ಮಾನ್ಯ ಸುರರಿಂದ ಹರಿಗುನ್ನಂತಪ್ರಿಯನೆ ಭವ ಬನ್ನ ಬಿಡಿಸುವನೆ ಘನ್ನ ಗೋಪಾಲಕೃಷ್ಣವಿಠ್ಠಲನ ಸೂನೆ 3
--------------
ಅಂಬಾಬಾಯಿ
ಲಾಲಿ ಶ್ರೀ ಹಯವದನ ಲಾಲಿ ರಂಗವಿಠಲÁಲಿ ಗೋಪೀನಾಥ ಲಕ್ಷ್ಮೀಸಮೇತ ಪ. ಮುತ್ತು ಮಾಣಿಕ ಬಿಗಿದ ತೊಟ್ಟಿಲೊಳಗೊಲ ಮನೆಯೊಳಗೆ ಇರನೀತ ಬಹುರಚ್ಚೆವಂತಮನೆವಾರ್ತೆ ಯಾರು ಮಾಡುವರು ಶ್ರೀಕಾಂತಗುಣಿಗುಣಗಳೊಳಗಿಪ್ಪ ಬಹು ಗುಣವಂತಗುಣಬದ್ಧನಾಗದಿಹÀ ಶ್ರೀ ಲಕ್ಷ್ಮೀಕಾಂತ2 ಕ್ಷೀರಾಂಬುನಿಧಿಯೊಳಗೆ ಸೆಜ್ಜೆಯೊಳಗಿರುವಶ್ರೀರಮಣ ಭಕ್ತರಿಚ್ಚೆಗೆ ನಲಿದು ಬರುವಕಾರುಣ್ಯ ಹಯವದನ ಕಾಯ್ವ ತುರುಕರುವನೀರೆ ಗೋಪಿಯರೊಳು ಮೆರೆವ ಕಡುಚೆಲುವ 3
--------------
ವಾದಿರಾಜ
ಲಾಲಿಸಿ ರಘುವರನ ಚರಿತೆಯ ಸಾರ ಪೇಳುವೆ ಸುಖನಾಥನ ಪ ಶ್ರೀ ಲಲಾಮನು ಸುರರ ಮೊರೆಯನು ಭಾರ ಹರಿಸಲು ಲೀಲೆಯಲು ದಶರಥ ನೃಪಾಲನ ಬಾಲನೆನಿಸುತ ಅವತರಿಸಿದನು ಅ.ಪ. ಕುಶಿಸುತನ ಯಜ್ಞವ ರಕ್ಷಿಸಿ ಪಥದಿ ಋಷಿ ಪತ್ನಿಯ ಶಿಲಾರೂಪವ ಬಿಡಿಸಿದ ದೇವ ಪಶುಪತಿಯ ಕೋದಂಡ ಖಂಡಿಸಿ ಶಶಿವದನೆ ಜಾನಕಿಯ ಕರವನು ಕುಶಲದಲಿ ಪರಿಗ್ರಹಿಸಿ ಲೀಲೆಯ ನಸಮ ಭಾರ್ಗವನೊಡನೆ ತೋರಿದ 1 ತಂದೆ ವಾಕ್ಯವ ಪಾಲಿಸೆ ತಾ ಧರಣಿಗೆ ಬಂದ ಕಾರ್ಯವ ಸಲ್ಲಿಸೆ ಋಷಿಗಳಾಸೆ ತಂದು ತಾ ಮನಕಂಡು ವನಕೆ ಸತಿ ಸೋದರರ ಸಹಿತದಿ ಮುಂದೆ ಗಂಗೆಯ ದಾಟಿ ಭರದ್ವಾಜ ನಿಂದ ಸತ್ಕಾರವನು ಕೊಂಡನು2 ಚಿತ್ರಕೂಟದಲಿರಲು ವಿನಯದಿ ಬಂದು ಭಕ್ತ ಭರತನು ಬೇಡಲು ಪಾದುಕೆಯಿತು ಮತ್ತೆ ದಂಡಕವನ ಪ್ರವೇಶಿಸಿ ದೈತ್ಯರನು ಸಂಹರಿಸಿ ಶರಭಂಗ ಗಿತ್ತು ಮುಕ್ತಿಯ ಕುಂಭಸಂಭವ ನಿತ್ತ ದಿವ್ಯಾಸ್ತ್ರಗಳ ಪಡೆದನು 3 ವರಪಂಚವಟಿಯೊಳಗೆ ಶೂರ್ಪನಖಿಯು ದುರುಳ ಬುದ್ಧಿಯೊಳು ಬರೆ ಕಿವಿಮೂಗ ಕೊಯ್ಸಿ ಹರಿಣರೂಪದಿ ಬಂದ ದೈತ್ಯನ ಹರಣಗೈದಾಶ್ರಮಕೆ ತಿರುಗಲು | ಧರಣಿಸುತೆಯನು ಕಾಣದೆಲೆ ತಾ ನರರ ಪರಿಯಲಿ ಹಂಬಲಿಸಿದನು 4 ವನಜಾಕ್ಷಿ ವೈದೇಹಿಯ ಪುಡುಕುತ ಪಂಪಾ ಸನಿಹಕ್ಕೈತಂದು ವಾಲಿಯ ಸಂಹರಿಸ್ಯವನ ಅನುಜ ಸುಗ್ರೀವನಿಗೆ ಹರುಷದಿ ವಿನುತ ವಾನರ ರಾಜ್ಯದೊಡೆತನ ವನು ಕರುಣಿಸಿದ ಬಳಿಕ ಜಾನಕಿ ಯನು ಪುಡುಕೆ ಕಳುಹಿದನು ಕಪಿಗಳ 5 ಸ್ವಾಮಿಯ ಸ್ತುತಿಗೈಯುತ ಶ್ರೀ ಹನುಮಂತ ಆ ಮಹೋದದಿಯ ದಾಟುತ ಲಂಕೆಯ ಪೊಕ್ಕು ಭೂಮಿಜಾತೆಯ ಕಂಡು ರಾಮನ ಕ್ಷೇಮ ವಾರ್ತೆಯ ತಿಳುಹಿ ಬಹುಜನ ತಾಮಸರ ಸದೆಬಡಿದು ರಾವಣ ನಾ ಮಹಾ ನಗರಿಯನು ದಹಿಸಿದ 6 ಮರಳಿ ರಾಮನ ಬಳಿಗೆ ಬೇಗದಿ ಬಂದು ಮರುತ ಸುತನು ರಾಮಗೆ ಸೀತೆಯ ಕ್ಷೇಮ ವರುಹಿ ಚೂಡಾಮಣಿಯ ನೀಡಲು ಕರದಿ ಕೈಕೊಂಡದನು ನೋಡುತ ನರರ ಪರಿಯಲಿ ಹರುಷಬಾಷ್ಪವ ಸುರಿಸಿದನು ಶ್ರೀ ಕರಿಗಿರೀಶನು 7
--------------
ವರಾವಾಣಿರಾಮರಾಯದಾಸರು
ಲಾವಣಿ ಖೋಡಿಮನಸು ಇದು ಓಡಿ ಹೋಗುತದಬೇಡೆಂದರು ಕೇಳದು ಹರಿಯೆಜೋಡಿಸಿ ಕೈಗಳ ಬೇಡಿಕೊಂಬೆ ದಯಮಾಡಿಹಿಡಿದು ಕೊಡು ನರಹರಿಯೆ ಪ ಗಾಡಿಕಾರ ನಿನ್ನ ಮೋಡಿಯ ಮೂರ್ತಿಯಕೂಡಿಸಿ ಪೂಜಿಸಲಘ ಹರಿಯೆದೂಡುತ ಹೃದಯದ ಗೂಡಿನೊಳಗೆ ಸ್ಥಿರ ಮಾಡಲು ಹದವನು ನಾನರಿಯೆನೋಡಿಂದ್ರಿಯಗಳ ತೀಡಬಲ್ಲೆ ಮನತೀಡುವ ಯತ್ನವು ಬರೆಬರೆಯೆಬೇಡಬೇಡವೆಂದಾಡುವೆನೆ ನಿನ್ನನೋಡುವುದೆಂತೈ ಜಗದೊರೆಯೆಕೋಡಗನಂತಿದು ಕಿಡಿಗೇಡಿ ಜಿಗಿದಾಡಿ ಪೋಗುವುದು ತ್ವರೆಮಾಡಿಕೂಡಿಸದದು ಬಹುಕಾಡಿ ದಿಟಿಸ್ಯಾಡಿ ನೋಡಲದು ಅಡನಾಡಿಕಾಡಿಕಾಡಿ ಬಲು ಪೀಡಿಸುತಿರುವದುಕಾಡುವುದೇನಿದು ಈ ಪರಿಯಾಜೋಡಿಸಿ ಕೈಗಳ 1 ತುಣುಕು ತುಣುಕು ಮನಸು ಇದು ಕ್ಷಣದೊಳು ಹಿಡಿವುದುತಿಣಿಕಿ ತಿಣಿಕಿ ಗಡ ಇದನ್ಹಿಡಿಯೆ ಹೆಣಗಲ್ಯಾತಕೆಂದು ಗೊಣಗುತಿಹರುಜನ ಗುಣ ಗೊತ್ತಿತ್ತಿಲ್ಲಿದೆ ಗುಣ ಖಣಿಯೆಗುಣರಹಿತನೆ ನಿನ್ನ ಗುಣ ನಾಮಂಗಳನೆಣಿಸುತೆ ನಾಲಗೆ ತಾದಣಿಯೆ ಟೊಣೆದು ನಿಮ್ಮನು ಕ್ಷಣಕ್ಷಣಕೊಂದುಕಣಕೆ ಹಾರುವುದು ಸುರಧರಣಿಯೆಇಣಚಿಹಾಂಗೆ ಚಪಲವೋಧಣಿಯೆಅಣಕಿಸಿದ್ಹಾಂಗ ಕುಣಿಕುಣಿಯೆಬಣಗು ಜನರು ನಮಗದು ಹೊಣಿಯೆಒಣ ಮಾತಿದು ಕೇಳ್ ನಿರ್ಗುಣಿಯೆಮಣಿಯದು ದಣಿಯದು ಹಣಿಯದು ತಣಿಯದುಟೊಣಿಯಲು ನಿನ್ನದು ಅದರಣಿಯೆ 2 ಸ್ಪಷ್ಟ ಹೇಳುವೆನು ಚೇಷ್ಟೆಗಳದರದುಯ ಥೇಷ್ಟವಾಗಿ ಕಣಾ ಕಣಾಶಿಷ್ಯರನೆಲ್ಲಾ ಭ್ರಷ್ಟ ಮಾಡುವುದು ದೃಷ್ಟಿ ಇಂದೊಂದೇ ಕಾರಣಎಷ್ಟು ಮಾತ್ರಕಿವರಿಷ್ಟ ನಡೆಸದಿಂದಿಷ್ಟೇ ಇದರದು ಧೋರಣಾಕಷ್ಟದಿ ಹಿಡಿದಿಟ್ಟ ಅಷ್ಟು ಇಂದಿಯಕಿದೆದುಷ್ಟರುಪದೇಶದ ಪ್ರೇರಣಾನಷ್ಟಮಾಡೋ ಈ ಚೇಷ್ಟೆಗುಣ ಸುಪುಷ್ಟ ಮತಿಯ ಕೊಡೊ ಪೂರಣಮುಷ್ಠಿಯೊಳಗಿಸೊ ತನುಹರಣಸೃಷ್ಟಿಸ್ಥಿತಿಲಯ ಕಾರಣಸೃಷ್ಟಿಯೊಳಗೆ ಉತ್ಕøಷ್ಟ ಗದುಗಿನಶ್ರೇಷ್ಠ ವೀರನಾರಾಯಣ 3
--------------
ವೀರನಾರಾಯಣ
ಲೀಲಾ ಮನೋಹರ ವಿಠಲ | ಪಾಲಿಸೊ ಇವಳಾ ಪ ನೀಲ ಮೇಘ ಶ್ಯಾಮ | ಕಾಳಿಂದಿ ರಮಣಾಅ.ಪ. ಆಪನ್ನ ಪಾಲಾ |ನಿನ್ನವಾಳೆಂದೆನುತ | ಮನ್ನಿಸೀ ತಪ್ಪುಗಳಘನ್ನ ಮಹಿಮನೆ ಕಾಯೊ | ಕಾರುಣ್ಯ ಮೂರ್ತೇ1 ಸತ್ಸಂಗದಲಿ ಇಟ್ಟು | ಸತ್ಸಾಧನೆಯಗೈಸಿಮತ್ಸರಾದ್ಸರಿಗಳನ | ಕತ್ತರಿಸಿ ಹಾಕೀಉತ್ಸಹದಿ ಸಂಸಾರ | ಯಾತ್ರೆಗಳ ಚರಿಸಯ್ಯಮತ್ಸ್ಯ ಮೂರುತಿ ಹರಿ | ಸತ್ಯವ್ರತ ಪಾಲಾ 2 ತರತಮಾತ್ಮಕ ಜ್ಞಾನ | ಸದನದಲಿ ತಿಳಿ ಪಡಿಸಿಹರಿ ಭಕ್ತಿ ವೈರಾಗ್ಯ | ಎರಡು ಅನುಸರಿಸೀ |ಬರುವಂತೆ ಗೈದು ಉ | ದ್ಧರಿಸೊ ಹರಿ ಇವಳನ್ನನರಹರೀ ಮಾಧವನೆ | ಪರಿಪೂರ್ಣ ಕಾಮಾ 3 ಕಾಮ ಜನಕನೆ ದೇವ | ಕಾಮಿನಿಯ ಮನ ಬಯಕೆಪ್ರೇಮದಲಿ ನೀನಿತ್ತು | ಭೂಮ ಗುಣಧಾಮಾ |ಈ ಮಹಾ ಕಲಿಯುಗದಿ | ನಾಮ ಸ್ಮರಣೆಯ ಸುಖವಾನೇಮದಲಿ ನೀನಿತ್ತು | ಪಾಮರಳ ಉದ್ಧರಿಸೋ 4 ಕೈವಲ್ಯ ಪದದಾತಭಾವುಕಳ ಪೊರೆಯೆಂದು | ಭಾವದಲಿ ಬೇಡ್ವೇ |ಭಾವ ಜನಯ್ಯ ಗುರು | ಗೋವಿಂದ ವಿಠ್ಠಲನೆಭಾವದಲಿ ನೀ ತೋರಿ | ಹರುಷವನೆ ಪಡಿಸೋ 5
--------------
ಗುರುಗೋವಿಂದವಿಠಲರು
ಲೋಕ ಭರಿತನೊ ರಂಗಾನೇಕಚರಿತನೊ ಪ. ಕಾಕುಜನರ ಮುರಿದು ತನ್ನಏಕಾಂತಭಕ್ತರ ಪೊರೆವ ಕೃಷ್ಣ ಅ.ಪ. ರಾಜಸೂಯ ಯಾಗದಲ್ಲಿ ರಾಜರಾಜರಿರಲು ಧರ್ಮ-ರಾಜಸುತನುಯೀತನೇ ಸಭಾಪೂಜ್ಯನೆಂದು ಮನ್ನಿಸಿದನಾಗ 1 ಮಿಕ್ಕನೃಪರ ಜರಿದು ಅಮಿತವಿಕ್ರಮ ಯದುವರನೆ ತನಗೆತಕ್ಕ ರಮಣನೆಂದು ರುಕ್ಮಿಣಿ ಉಕ್ಕಿ ಮಾಲೆಯಿಕ್ಕಿದಳಾಗ2 ಜ್ಞಾನಶೂನ್ಯನಾಗಿ ಸೊಕ್ಕಿ ತಾನೆ ವಾಸುದೇವನೆನಲುಹೀನ ಪೌಂಡ್ರಕನ ಶಿರವ ಜಾಣರಾಯ ತರಿದನಾಗ 3 ಉತ್ತರೆಯ ಗರ್ಭದಲ್ಲಿ ಸುತ್ತಮುತ್ತಿದಸ್ತ್ರವನ್ನುಒತ್ತಿ ಚಕ್ರದಿಂದ ನಿಜಭಕ್ತ ಪರೀಕ್ಷಿತನ ಕಾಯ್ದ4 ತನ್ನ ಸೇವಕಜನರಿಗೊಲಿದು ಉನ್ನಂತ ಉಡುಪಿಯಲ್ಲಿ ನಿಂತುಘನ್ನಮಂದಿರ ಮಾಡಿಕೊಂಡ ಪ್ರಸನ್ನ ಹಯವದನ ಕೃಷ್ಣ 5
--------------
ವಾದಿರಾಜ
ಲೋಕನೀತಿ 1 ಕಾಮಧೇನು ಕಲ್ಪತರು ಕಾಮಿತಾರ್ಥವನೀವ ಹರಿಯೇ ಎನಗಿರೆ ಎನಗ್ಯಾತಕೆ ಚಿಂತೆ ಕಾಮಿತಾರ್ಥವನೀವ ದೊರೆಯಿರಲು ಯನಗ್ಯಾತರ ಕೊರೆತೆ ಹರಿಕಾವದೇವ ನೀನಿರಲು ಕೋಳಿ ತನ್ನ ಮರಿಗೆ ಹಾಲುಕೊಟ್ಟು ಸಾಕುವದೆ ಕಾಳ ರಾತ್ರಿಯು ಕಳೆದು ಹರಿ ಉದಿಸುವನೆಂದು ಕೋಳಿಕೂಗಿದರೂ ಏಳದೆ ಮಲಗಿ ಕಾಲಕಳೆವರು ಮನುಜರುಹರಿಯೆ ಕಾಲಕೂಟ ಸಮ ಕಾಮಿತಾರ್ಥವ ಬೇಡುವರು ಕಾಲದೂತರು ಬರುವ ವ್ಯಾಳೆತನಕ ನಿನಧ್ಯಾನಿಸದೆ ಕಾಲಕಳೆವರು ಮನುಜರು ಕಾಲಮೂರುತಿ ನೀನೆ ಎಂದರಿಯರು ಹರಿ ಕಾಲ ಅಕಾಲ ನಿನಗುಂಟೆ ಎನಗುಂಟೆ ದೇವ ನೀ ಎನಗೆ ಇಂಥಾ ಕೀಳು ಬುದ್ಧಿಯ ಕೊಡದಿರೊ, ಏಳು ಬೆಟ್ಟದ ಒಡೆಯ ಶ್ರೀ ಶ್ರೀನಿವಾಸ 2 ಬೆಳಗೆದ್ದು ಹರಿ ನಿನ್ನ ಧ್ಯಾನಿಸದೆ ಪರಧ್ಯಾನ ಪರನಿಂದೆಯಲ್ಲಿಹರು ನಿತ್ಯ ನಿನ್ನ ಧ್ಯಾನ ಬಿಟ್ಟು ಬೆಳಗಾಗೆ ನಿನ್ನ ಸೂರ್ಯರಶ್ಮಿ ಬಿದ್ದರೂ ಏಳರು ಶಯನ ಬಿಟ್ಟು ಈ ಜಗದಿ ದೇವ ಈ ಕಲಿ ಜನರು ಇಂಥಾ ಬೆಳಗ ಎನಗೀಯದೆ ನೀ ಎನ್ನೊಳಗಿದ್ದು ಬೆಳಗಿನ ಜಾವದಿ ನಿನ್ನ ಕಳೆಕಳೆರೂಪ ಎನಗೆ ತೋರೋ ಘಳಿರನೆ ಶ್ರೀ ಶ್ರೀನಿವಾಸ 3 ಎರಡನೆ ಜಾವದಲಿ ಹುಂಜ ಹರಿಪೂರ್ವದಲಿ ಬರುವ ಏಳಿರೆಂದು ಕೂಗಲು ಸತಿ ಸಹಿತ ಕಾಮಕೇಳಿಯಲಿಹರು ಮೂರನೆ ಝಾವದಲಿ ಹರಿ ಉದಿಸಿ ಬ್ರಾಹ್ಮೀಮುಹೂರ್ತದೊಳು ಹರಿ ಬೆಳಕೀವ ಲೋಕಕೆ ಎಂದು ಕೂಗುವುದು ಕೋಳಿ ಕೇಳಿ ಕರ್ಣದಲಿ ಶಯನ ಬಿಟ್ಟೇಳರೊ ಈ ಜಗದಿ ಮೂರೆರಡು ಶತಶ್ವಾಸ ಜಪ ಮಾಡಿಸುವ ಹರಿಭಕ್ತ ಹನುಮನೆಂದರಿಯದೆ ಮಲಗಿ ಕಾಲ ಎರಗಿ ಬರುವುದು ಆಯುಷ್ಯವೆಂದರಿಯದೆ ಭಾರತೀಪತಿ ಅಂತರ್ಯಾಮಿ ನಿನ್ನಧ್ಯಾನಿಸದೆ ಇಹರಲ್ಲೋ ಈ ಜಗದಿ ಶ್ರೀ ಶ್ರೀನಿವಾಸ ಎನ್ನ ನೀನವರ ಸಂಗ ಸೇರಿಸದೆ ಕಾಯೊ ಹರಿಯೆ ಎನ್ನ ದೊರೆಯೆ 4 ಸೂರ್ಯನಂತರ್ಯಾಮಿ ನೀನಲದೆ ಮತ್ಯಾರಿಹರು ಹರಿ ಸೂರ್ಯಾಂತರ್ಗತ ಸೂರ್ಯನಾರಾಯಣ ಸೂರ್ಯಕೋಟಿ ತೇಜದಿ ಮೆರೆವೆ ಸೂರ್ಯ ಸಹಸ್ರ ಉದಿಸಿದಂತೆ ಬರುವೆ ಕರ್ಮ ನೀ ಮಾಡಿಸಿ ಪೆರ್ಮೆಯಿಂದವರ ಕಾಯ್ವ ಶರ್ವಾದಿವಂದಿತ ಗರ್ವರಹಿತ ವೈಕುಂಠಪತಿ ನೀ ನಿನ್ನವರ ಕಾಯಲು ಸರ್ವದಾ ಅವರಿಗೆ ವಲಿದು ಕಾವೆ ಆದಿನಾರಾಯಣ ಶ್ರೀ ಶ್ರೀನಿವಾಸ ಕಾಯೆನ್ನ ಸೂರ್ಯಾಂತರ್ಗತ ವೆಂಕಟೇಶಾ 5 ಹಗಲಿರುಳು ಎನ್ನದೆ ನಿನ್ನ ಸ್ತುತಿಪರು ಭಕ್ತರು ಅಘಹರನೆ ನಿನ್ನ ಪ್ರೇರಣೆಯಿಂದಲವರಿರಲು ಬಗೆಬಗೆಯ ರೂಪದಿ ಬಂದವರ ಸಲಹುವೆ ನಗೆ ಮೊಗದ ಶ್ರೀ ರಮೆಯರಸ ಲಕ್ಷ್ಮೀಶ ನಿನ್ನ ಬಗೆ ಅರಿತಿಹರಾರಿರೀಜಗದಿ ಪಗಲಿರುಳೆನ್ನದೆ ನೀನವರಲ್ಲಿದ್ದು ಸಲಹಲು ಬಗೆವರೆ ಅನ್ಯರಿಗೆ ಅಲ್ಪರಿವರೆ ನಿನ್ನವರು ಜಗದಾಖ್ಯ ವೃಕ್ಷನೀನಿರಲು ನಿನ್ನ ಭಕ್ತರು ನಿನಗಲ್ಲದೆ ಜಗದೊಡೆಯ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ಲೋಕನೀತಿ ಅಂತರಂಗದ ರೋಗ ಯಾವುದು ಅದುಚಿಂತೆಯಲ್ಲದೆ ಮತ್ತ್ಯಾವುದು ಪ. ಸಂತತ ಶ್ರೀಹರಿನಾಮದಿಂದ್ಹೋಹುದುಅಂತ್ಯಕೊದಗಿತಜಮಿಳನಿಗಿನ್ನಾವುದು ಅ.ಪ. ಶ್ರವಣ ಮನನ ಸಾಧನ ನವವಿಧಭಕ್ತಿಭವಬೇರ ಕಡಿವುದೆಂದರಿಯಬೇಕುರವಿಕುಲಾಂಬುಧಿಸೋಮ ರಾಮನ್ನ ಚಿಂತಿಸಿಭವವಾರಿಧಿಯ ದಾಟುವರೆಲ್ಲರು ಕೇಳಿ 1 ಜರಾಮರಣಾದಿ ದುಃಖಗಳ ಪರಿಹರಿಸಿಪರಿಪರಿಯಾನಂದ ಕೊಡುವುದಿದುಮರೆಯದೆ ಮನದಲಿ ಒಮ್ಮೆ ನೆನೆದು ಪಾಡೆಸರುವಾಭೀಷ್ಟವ ಕೊಡುವುದಿದೊಂದೆವೆ 2 ಭಯಗಳ ಬಿಡಿಸಿ ಅಭಯಗಳ ಕೊಡಿಸುವಭವದೂರ ಗೋವಿಂದನೆಂದರಿತುಹಯವದನನೆ ಎನ್ನ ಉದ್ಧರಿಸೊ ಎಂದುನಯದಿಂದ ಬೇಡುವರ ಭಾಗ್ಯವೆ ಭಾಗ್ಯ 3
--------------
ವಾದಿರಾಜ
ಲೋಕನೀತಿ ಅಧಿಕಾರಿಯಾಗಬೇಕು ಅದಕಾಗಿ ದುಡಿಯಬೇಕು ಪ ಅಧಿಕಾರಿಯಾಗುವುದು ಸುಲಭವಲ್ಲ ಎದೆಚಾಚಿ ಜಗದಿ ಹೆಮ್ಮೆಯ ತೋರುವ ಅ.ಪ ಶಾಶ್ವತವಿರಬೇಕು ಅದನೀಶ್ವರ ಕೊಡಬೇಕು ವಿಶ್ವವಿದ್ಯಾನಿಲಯವ ಸೇರುತಲಿ ಶಶ್ವದಿ ಪರವಿದ್ಯಾಶಾಖೆಯಲಿ 1 ಭೂಷಣವೆನಗೆಂದು ನೀ ಮೋಸ ಹೋಗಬೇಡ ಸಾಸಿರ ಸಾಸಿರ ಸ್ಥಾನಗಳಿಗೆ ನೀ ಆಸೆ ಪಡದೆ ಹರಿಶಾಸನ ಸಭೆಯ 2 ಕಮ್ಮಿಯ ಪ್ರತಿಫಲಕೆ ನೀ ಸಮ್ಮತಿ ಕೊಡದಿರೆಲೊ ಮರ್ಮವರಿತು ಪರಲೋಕವ ಪಡೆಯಲು ಹಮ್ಮನು ಮುರಿಯುವ ಕಾರ್ಮಿಕ ಸಭೆಯ 3 ಕಾಲವರಿತು ಸತತ ನೀ ಮೇಲಕೇಳಬೇಕು ಬಾಲಗೋಪಾಲನು ನೆಲೆಸುವುದಕೆ ಹೃದ ಯಾಲಯ ರಚನೆಯ ಚತುರ ಶಿಲ್ಪಿಯ 4 ಶ್ರವಣ ಮಾಡಬೇಕು ಶಾಸ್ತ್ರವ ಮನನ ಮಾಡಬೇಕು ಶ್ರವಣ ಮನನ ನಿಧಿ ಧ್ಯಾಸನದಿಂದ ಪ್ರ ಸನ್ನ ಹರಿದಯದಿ ಸಿಗುವ ಮುಕುತಿಗೆ 5
--------------
ವಿದ್ಯಾಪ್ರಸನ್ನತೀರ್ಥರು
ಲೋಕನೀತಿ ಇತ್ತಿತ್ತ ಬಾರೆಂದು ಕರೆಯುವವರಿಲ್ಲದಿರೆ ವ್ಯರ್ಥವಲ್ಲವೆ ಜನ್ಮವು ಪ. ಅತ್ತತ್ತ ಹೋಗೆಂಬ ನುಡಿ ಕೇಳಿ ಜಗದೊಳಗೆ ಮತ್ತೆ ಇರಬಹುದೆ ಹರಿಯೆ ಅ.ಪ. ಆರಿಗಾರಾಗುವರೊ ಪ್ರಾರಬ್ಧ ನೀಗದಲೆ ಶೌರಿ ದಾರಿಯ ತೋರನು ಈ ರೀತಿಯರಿತು ಹೇ ದುರ್ಮನವೆ ನರಹರಿಯ ಆರಾಧನೆಯನೆ ಮಾಡೊ 1 ಏಕಾದಶ್ರೇಂದ್ರಿಯವ ಶ್ರೀ ಕಳತ್ರನೊಳಿಟ್ಟು ಏಕ ಮನದಲ್ಲಿ ಭಜಿಸು ಏಕೆ ತಲ್ಲಣಿಸುವೆ ಶೋಕಕ್ಕೆ ಒಳಗಾಗಿ ನೂಕು ಭವತಾಪ ಜಗದಿ 2 ಗೋಪಾಲಕೃಷ್ಣವಿಠ್ಠಲನೆ ಗತಿ ಎಂತೆಂದು ಈ ಪರಿಯಿಂದ ಭಜಿಸು ಶ್ರೀ ಪರಮ ಕಾರುಣ್ಯ ಗುರುಗಳಂತರ್ಯಾಮಿ ತಾಪ ಹರಿಸುವನು ಭವದಿ 3
--------------
ಅಂಬಾಬಾಯಿ
ಲೋಕನೀತಿ ಎಲ್ಲಿಗೇತಕೆ ಪೋಗಿ ತಲ್ಲಣಿಸುವೆಯೊ ಮನವೆ ಇಲ್ಲೆ ಶ್ರೀಹರಿಯಿಲ್ಲವೆ ಪ ಬಲ್ಲವರ ಹೃದಯಗುಹೆಯಲ್ಲಿ ಪ್ರಕಟಿಸುತ ಜನ ತುಂಬಿ ಸೂಸುತಲಿರುವ ಅ.ಪ ಕಾಶಿ ರಾಮೇಶ್ವರ ಬದರಿ ತಿರುಪತಿಯೆಂದು ಘಾಸಿಗÉೂಳ್ಳುವೆ ಏತಕೋ ವಾಸನೆಯ ನೀಗದವನಾಶೆಪಾಶಗಳಿಂದ ಬೇಸತ್ತು ಚರಿಸಲೇಕೋ ಈಶನಾವಾಸವೀಜಗವೆಲ್ಲವಿಲ್ಲಿಲ್ಲ ವಲ್ಲಿರುವನೆಂಬುದೇಕೋ ಶ್ರೀಶ ಶ್ರೀಹರಿಯ ನೀನಿರುವಲ್ಲೆ ಶೋಧಿಸುವ ಆಸೆಯುದಯಿಸಲಿಲ್ಲವೇಕೋ 1 ಅಣುಮಹತುಗಳಲ್ಲಿ ತೃಣಜೀವಕೋಟಿಯಲಿ ಗುಣ ಮಹಿಮನರಿಯ ಬಯಸೋ ಎಣಿಸಲಾಗದನಂತಗುಣನ ಪ್ರಾಣಿ ಸಮೂಹ ಗಣಗಳೊಳು ಕಾಣಬಯಸೋ ಅಣುವಿಗಣುವೆನಿಸಿ ಮಹತಿಗೆ ಮಹತ್ತಹನ ಕಣ್ದಣಿಯೆ ಕಾಣುತ ಭಾವಿಸೊ ಗುಣನಿಧಿಯು ನಿನ್ನ ಶ್ರದ್ಧಾಭಕ್ತಿಗಳಿಗೊಲಿದು ಕ್ಷಣದಿ ಕಾಣಿಸುವನಿದನರಿತು ನೀ ಚರಿಸೋ 2 ವ್ರತನಿಯಮಗಳ ಕಾಮ್ಯ ಫಲದಾಸೆಯಿಂ ಮಾಡೆ ಫಲವೇನು ವ್ಯರ್ಥಶ್ರಮವೋ ಸತತ ನಿನ್ನಯ ವ್ಯಾಪ್ತ ಮಹಿಮೆಯರಿಯದೆ ಪೂಜೆ ಮಾಡಿದರು ವ್ಯರ್ಥಶ್ರಮವೋ ಮತಿವಿಕಳ ಕೋಪ ತಾಪದ ದಾಸನವ ಮಾಳ್ಪ ದಾನವದು ವ್ಯರ್ಥಶ್ರಮವೋ ಅಕಳಂಕಮಹಿಮ ರಘುರಾಮವಿಠ್ಠಲನೆಂದು ನಂಬಿ ನಡೆವುದೆ ಸಾರ್ಥಕವೋ 3
--------------
ರಘುರಾಮವಿಠಲದಾಸರು
ಲೋಕನೀತಿ ಏನು ಮಾಡಿದರೇನು ಹಾನಿಯಾಗದು ಪಾಪ ಶ್ರೀನಿಕೇತನನ ದಿವ್ಯನಾಮ ನೆನೆಮನವೆ ಪ ಕ್ಷಣ ಪದಕಮಲಗಳ ಸ್ಮರಿಸಿ ಮನದೊಳಗೆ ಪ್ರತಿ ಕ್ಷಣಕ್ಷಣದಿ ಹರಿ ಮಹಿಮೆ ಭಜಿಸಿ ಭಕ್ತಿಯಲಿ ತೃಣ ಘನದೊಳಿಹನು ಹರಿ ಎನುತ ಚಿಂತಿಸಿ ಮನದಿ ಪ್ರಣವ ಪ್ರತಿಪಾದ್ಯನಂಘ್ರಿಯ ಭಜಿಸದನಕ 1 ಕಪಟನಾಟಕ ಸೂತ್ರಧಾರಿ ಶ್ರೀ ಹರಿಯ ಗುಣ ಅಪರಿಮಿತ ಮಹಿಮೆಗಳ ಭಜಿಸಿ ಹಿಗ್ಗುತಲಿ ಚಪಲ ಬುದ್ಧಿಗಳಿಂದ ತಪಿಸಿ ಕಂಗೆಡದೆ ಮನ ಅಪರೂಪ ಹರಿನಾಮ ಜಪ ಮಾಡದನಕ 2 ದಾನಧರ್ಮಗಳಿಂದ ಧನ್ಯನಾದೆನು ಎನಲು ಹಾನಿಯಾಗೋದು ಆಯು ಪ್ರತಿ ನಿಮಿಷದಿ ಸ್ನಾನ ಜಪತಪದೊಳಗೆ ಯಾರೆನಗೆ ಸರಿ ಎನದÉ ಮೌನದಿಂದ್ಹರಿ ನಾಮ ಧ್ಯಾನಿಸುವತನಕ 3 ಕ್ಲೇಶ ಆನಂದಗಳು ಈಶನಾಜ್ಞೆ ಇದೆಂದು ವಾಸುದೇವನೆ ಜಗತ್ಪ್ರೇರಕನು ಎಂದು ಶ್ವಾಸ ಬಿಡುವ ಶಕ್ತಿ ಲೇಸು ತನಗಿಲ್ಲ ಸ- ರ್ವೇಶ ನಿನ್ನಧೀನವೆಂದರಿವ ತನಕ4 ಗಾತ್ರ ಶೋಷಣೆಯಾಕೆ ಪಾರ್ಥಸಖನಂಘ್ರಿಗಳ ಕೀರ್ತಿಸುತ ಮನದಿ ರಾತ್ರಿ ಹಗಲು ಕಮಲನಾಭ ವಿಠ್ಠಲನ ಶ್ರೀಮೂರ್ತಿಯನೆ ನೆನೆನೆನೆದು ಸುಖಿಯಾಗೊ ಮನವೆ5
--------------
ನಿಡಗುರುಕಿ ಜೀವೂಬಾಯಿ
ಲೋಕನೀತಿ ಮನವೇ ನೀ ಭಜಿಸು| ರಾಮನಾಮವನು ಘನ ಮುಕ್ತಿಸಾಧನೆ | ಪಾದನಾಮವನು ಪ ಅಂದದ ನಾಮ| ಚಂದದ ನಾಮ|| ವಂದಿಸೆ ಮನಕಾ| ನಂದದ ನಾಮ 1 ಕೋಮಲ ನಾಮ| ನಿರ್ಮಲ ನಾಮ| ಕಾಮಿತವೀವ ಸು| ಪ್ರೇಮದ ನಾಮ 2 ಪಾವನ ನಾಮ| ಶ್ರೀವರ ನಾಮ|| ಪವನಸಂಜಾತನು ಸ್ಮರಿಸುವ | ನಾಮ 3 ಅಗಣಿತ ಮಹಿಮ|| ಜಗದಭಿರಾಮನ | ಘನಗುಣ ನಾಮ 4 ಭಕ್ತಾದಿ ಜನರು| ಭಜಿಸುವ ನಾಮ| ಮುಕ್ತಿಸಾಧನವಾದ| ಭಕ್ತಿಯ ನಾಮ 5
--------------
ವೆಂಕಟ್‍ರಾವ್
ಲೋಕನೀತಿ ಮಾನವ ಭ್ರಾಂತಿಸುಖವ ಪ. ನಂಬಲಾಗದು ಮಣ್ಣಬೊಂಬೆಯಂದದ ದೇಹ ಡಂಭ ಮೋಹಗಳಿಂದ ಮದಿಸುತ ಹಂಬಲಕ್ಕೀಡಾಗುವಂತಿದ ಅ.ಪ. ನೀರಮೇಲಣಗುಳ್ಳೆ ತೋರಿಹಾರುವ ಬಗೆ ಮಾರನಾಟಿದೊಳಾಡುತ ನಲಿಯುತಲಿಕೆ ಸಾರಿಬರೆ ತನಗಪಮೃತ್ಯುಕಾಲವು ಮೀರಿದುಬ್ಬುಸವಾಂತು ಮಿಡುಹುತ ಬೋರಿಡುತ ಬೊಬ್ಬರಿಸಿ ತರಳರ ಸಾರಿಕೂಗುವ ಕಾಯಧಿರವನು 1 ನಾನು ನನ್ನದಿದೆಂದಭಿಮಾನದಿಂ ಮತಿಗೆಟ್ಟು ಜ್ಞಾನವಿಲ್ಲದೆ ಭುವಿಯೊಳ್ ದೀನನಾಗಿ ನಾನಾಪರಿಯಿಂ ಸೊರಗಿ ನರಳುತಿಹ ನೀ ನಿಜವೆಂದು ನಂಬದೆ ಜ್ಞಾನ ಲಾಭದಿ ಮನುಜನೆನ್ನಿಸೆ 2 ಕಾಮಕ್ರೋಧವ ಬಿಟ್ಟು ರಾಮನೊಳ್ ಮನವಿಟ್ಟು ತಾಮಸಬುದ್ಧಿಯನೀಡಾಡುತೆ ಮತ್ತೆ ಶಮದಮಾದಿಗಳನಭ್ಯಸಿಸುತೆ ಕ್ಷಮೆಯನಾಶ್ರಯಿಸುತೆ ಸುಖದುಃಖದೊಳ್ ಕಮಲನಯನ ಶೇಷಾದ್ರಿನಾಥನ | ವಿಮಲ ಪದದೊಳೈಕ್ಯನಾಗಲು ಅಮಭಕ್ತಿಯೆ ಮುಖ್ಯ ಸಾಧನ ನಮಗೆ ಈ ಭ್ರಾಂತಿ ಸಲ್ಲದು 3
--------------
ನಂಜನಗೂಡು ತಿರುಮಲಾಂಬಾ