ಒಟ್ಟು 6420 ಕಡೆಗಳಲ್ಲಿ , 135 ದಾಸರು , 4140 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಾಂಭವಿ ದಯಮಾಡೆ ಸಿಟ್ಟು ಬಿಡು | ಮುನಿಯದೆ ಎನ್ನ ಕೂಡ |ಕೋಪವು ಮಾಡಬೇಡ ಎನಗಾರ |ಕರುಣ ದೃಷ್ಟಿಲಿ ನೋಡ ಪ ಮೂರ್ತಿ 1 ರಜ ತಮ ಸಂಗದಲಿ ನಾ ಕೆಟ್ಟೆ | ನಿನ್ನ ಸ್ಮರಣೆಯ ಬಿಟ್ಟೆ | ಕಾಮ ಕ್ರೋಧದಲಿ ಬಹು ಸುಟ್ಟೆ |ತಿಳಿಯದು ನಿನ್ನ ಗುಟ್ಟೇ 2 ಮನಸಿಗೆ ತರದಿರೆ ಎನ್ನ ದೋಷ |ಮಾಡೆನ್ನ ದುರಿತವಿನಾಶಾ |ಕಲಿಕಾಲಸುತನಾ ಭವಪಾಶಾ | ಭಜಿಸುವೆ ನಿನ್ನ ಮಹೇಶಾ 3
--------------
ಭೀಮಾಶಂಕರ
ಶಾಂಭವಿ ಶೈಲಜೆ ಅಂಬಿಕೆ ದೇವಿ ಅಂಬುರು ಹಾಸನೆ ಪಾಲಿಸು ಪ್ರೇಮದಿ ಪ ಅಕ್ಷಯ ರಾಕ್ಷಸನಾಶಿನಿ ಯಕ್ಷಸುಪೋಷಿಣೆ 1 ದಿವ್ಯಸ್ವರೂಪೆ ಭವ್ಯಕಲಾಪೆ ಸ್ತವ್ಯ ಸ್ವರೂಪಿಣಿ ಗರ್ವ ವಿದಾರಿಣೆ 2 ಪಾಲಿಸು ಶಂಕರಿ ಗೌರಿ 3 ಪ್ರೇಮದಿ ಸ್ವರ್ನಸುಗಾತ್ರಿ 4 ಧ್ಯಾನವಗೈಯುವೆ ಧೇನುಪುರೀಶೆ 5
--------------
ಬೇಟೆರಾಯ ದೀಕ್ಷಿತರು
ಶಾಮಸುಂದರ ಪೊರೆಯೊ ರಘುರಾಮಾ ಕಾಮಿತ ಫಲವಿತ್ತು ಪ ಸೋಮಧಾಮ ಸುತ್ತಾಮ ಸುರಾರ್ಚಿತ ಕರುಣದಿ ದಯವಿತ್ತು ಅ.ಪ. ತಟಿತ್ಕೋಟಿ ನಿಭ ಹಾಟಕಾಂಬರನೆ ಘಟಿತವಾದ ಈ ಜಟಿಲ ಶರಧಿಯೊಳು ನಟ ನಡುವೆ ಸಿಲುಕಿ ಗುಟಕ ನೀರು ಕುಡಿದ ಈ ಪುಟ [ಟ್ಟ] ಪುರುಷನ ಮೇಲೆ ದೃಷ್ಟಿ ಇಟ್ಟು ನೋಡಿದರೆ ಪಟುಲವೇನೋ ವಟಪತ್ರಶಯನನೆ ನಟವಳಿಯೊಳು ಈ ಭಕುತ ಕಟಕಿಯ ಮಾಡೆ 1 ಚಂಡ ವಿಕ್ರಮ ಕೋದಂಡ ದೀಕ್ಷಾ ಖಂಡ ಮಹಿಮಾರಾಮಾ ದುರಿತವೇಕೋ ಗಂಡ ಕಂಠೀರವನೆ ಡಿಂಗರಿಗಾತಿ ಪ್ರೇಮಾ ಅಂಡಜವಾಹನ ಪಾಂಡವ ಮೂರುತಿ ಕುಂಡಲಗಿರಿಧಾಮಾ 2 ಘನಚರಿತ ಪ್ರಸನ್ನ ದಯಾಂಬುಧಿ ಇನ್ನಾದರೂ ಈ ಚಿಣ್ಣಗೆ ಚೆನ್ನಾಗಿ ದೃಷ್ಟಿಯಿಟ್ಟು ಕೃಪೆಮಾಡು ಸನ್ನುತಿಸುವೆ ಮುನ್ನಾ ಕಣ್ಣೆತ್ತಿ ನೋಡದೆ ಅನ್ನ ದೈªಂಗಳ ಬಿನ್ನವಿಸುವೆ ನಿನ್ನಾ ಮನ್ಮಥಪಿತ ಭೋ ಮಹಾನಿಧಿವಿಠಲ ಅಹರಹದಿ ನಿನ್ನಾ ಚನ್ನಾ 3
--------------
ಮಹಾನಿಥಿವಿಠಲ
ಶಾರದಾಂಬೆ | ಜಯ ಜಯ | ಶಾರದಾಂಬೆಪ. ಶಾರದಾಂಬೆ ಅ.ಪ ನಿರತವು ನೀ ಮನ| ವೊಲಿಯುತಲೆನ್ನಯ | ಕರುಣಿಯೆ ನೀ ದಯ | ದೋರುತ ಪೊರೆವುದು | ಶಾರದಾಂಬೆ 1 ಹರಿನಾಮಾಮೃತ | ವನುದಿನವೆನ್ನಯ | ರಸನೆಯು ಸೇವಿಸು | ವಂದದಿ ನೀ || ವರಗಳ ನೀ ವಾ| ಗ್ದೇವಿಯೆ ಕರುಣಿಸು | ಶಾರದಾಂಬೆ2 ಮರಣದ ಕಾಲದಿ | ಹರಿಯನು ಬಾಯೊಳು | ಸ್ಮರಿಸುವ ಜ್ಞಾನವ | ನೀಯುತಲಿ || ಶರಣನ ಪೊರೆವುದು | ಪರಮ ಕೃಪಾಕರಿ | ಶಾರದಾಂಬೆ 3 ಮಾಡು ನೀ ಕೃಪೆಯ | ನ್ನನವರತ || ಜೋಡಿಸಿ ಕೈಗಳ | ವಿನಯದಿ ಬೇಡುವೆ | ಶಾರದಾಂಬೆ 4 ವೀಣಾಪಾಣಿ | ಕೋಕಿಲ ವಾಣಿ | ಪನ್ನಗವೇಣಿ | ಬೊಮ್ಮನ ರಾಣಿ || ದೀನನ ನುಡಿಗಭಿ | ಮಾನವನೀವುದು | ಶಾರದಾಂಬೆ 5
--------------
ವೆಂಕಟ್‍ರಾವ್
ಶಾರದೆ ಪೊರೆಯೆನ್ನಾ - ಮಾತೆಯೆತೋರಿಸಿ ತವ ಚರಣಾ ಪ ಶಾರದೆ ತವ ಪದ | ಸಾರಿ ಭಜಿಸುವೆನುದೊರಗೈವುದೆನ್ನ | ಭಾರಿ ಅಜ್ಞಾನವ ಅ.ಪ. ವೀತ ದುರಿತೆ ಖ್ಯಾತೇ | ಶಿವಮಾತೆಯೆ ಸದ್ಗುಣ ಗಣ ವ್ರಾತೇ ||ಶಾತಕುಂಭೋಧರ | ಪ್ರೀತಿ ವಿಷಯ ಜಗನ್‍ಮಾತೆಯೆ ಹರಿಗುಣ | ಗಾಥೆಯ ಗೀತೆಯೆ 1 ಹಯಾಸ್ಯ ಪದದಲಿ 2 ಈಶಾಹಿ ವಿಹಗೇಂದ್ರಾ | ಸ್ವರ್ಗಾಧೀಶಾಧಿಪರು ಛಂದಾ ||ಮೀಸಲು ಮನದಲಿ | ಕ್ಲೇಶಗಳಿಲ್ಲದೆತಾಸು ತಾಸಿಗೆ ನಿನ್ನೆ | ಸೂಸಿ ಭಜಿಸುವರು 3 ನರಹರಿ ಗುರುಭಕ್ತೀ | ಬ್ರಾಹ್ಮೀಸರಸ್ವತಿ ಗಾಯಿತ್ರೀ ||ಅರ ವಿದೂರ ನರ | ಹರಿಯನು ಭಜಿಸುವಸುರ ಚಿರ ವಾಣಿಯ | ಕರುಣಿಸು ವಾಣೀ 4 ಪರ ಬೊಮ್ಮಾ |ಭಾವಜ ಪಿತ ಗುರು | ಗೋವಿಂದ ವಿಠಲನಓವಿ ಭಜಿಸುವಂಥ | ಭಾವವ ನೀಯೇ 5
--------------
ಗುರುಗೋವಿಂದವಿಠಲರು
ಶಿಖರಪುರ ದಾಸಾರ್ಯ ವಂಶದಿ ಶಶಿಯಂತೆ ಉದಿಸಿದ ಶ್ರೀನಿವಾಸಾರ್ಯರೆಂಬ ಪ್ರಚಲಿತ ನಾಮದ ದಾಸಾರ್ಯರ ಚರಿತೆ ಗುರುಗಳ ದಯದಿಂದ ಅರಿತಷ್ಟು ಪೇಳುವೆ ಬುಧ ಜನರು ನಿಷ್ಕಪಟ ಭಾವದಿಂದಲಿ ಕೇಳಿ ಸಿರಿಗುರುತಂದೆವರದಗೋಪಾಲವಿಠ್ಠಲನ ಭಕ್ತರೊಳಗಿವರೊಬ್ಬರು ಕಾಣಿರೊ 1 ಶ್ರೀ ರಮೇಶಕೃಷ್ಣನು ತನ್ನ ಪರಿವಾರ ಸಹಿತಾಗಿ ಓಲಗದಿ ಕುಳಿತಿರಲು ಸಾವಧಾನದಿ ತಾನು ಶ್ರೀದೇವಿ ಋಷಿಯಾಜ್ಞೆಯಿಂದಲಿ ಬಂದು ಶಿರಬಾಗಿ ಧರಣಿಯೊಳು ಭಾಗವತರ ಮಹಿಮೆತಿಳಿದು ಸಾಧನೆಗೈಯ್ಯಬೇಕೆಂಬ ಕುತೂಹಲದಿಂದ ದೇವಾಂಶರ ಬಿಡದೆ ಅವತಾರ ಮಾಡಿದ ಪವಿತ್ರವಂಶದಿ ಬಹುಕಾಲ ಪುತ್ರಾಪೇಕ್ಷೆಯಿಂದಲಿ ಶ್ರೀನಿವಾಸನ ಸೇವೆಗೈದ ಮಾತೆ ಶ್ರೀ ರುಕ್ಮಿಣೀದೇವಿ ಪಿತ ರಾಘವೇಂದ್ರರ ಉದರದಿಂದಲಿ ಜನಿಸಿ ಬಾಲತ್ವ ಕೆಲಕಾಲ ಕಳೆದು ತದನಂತರದಿ ಭೂವೈಕುಂಠಪುರದಲ್ಲಿ ದ್ವಿಜತ್ವವನೆ ಪಡೆದು ಲೌಕಿಕ ವಿದ್ಯೆಗಳನೆಲ್ಲ ಕಲಿಸಿ ಬಳಿಕ ಸಂಗೀತ ವಿದ್ಯೆಯ ಸಾಧನಕೆ ಮಿಗಿಲೆಂದು ಸಾಧಿಸಿ ಬಿಡದೆಲೆ ಪ್ರಾವೀಣ್ಯತೆಯ ಪಡೆದು ಅತಿ ಗೌಪ್ಯದಿಂದಲಿ ಶಿರಿಗುರು ತಂದೆವರದಗೋಪಾಲವಿಠ್ಠಲನ ಸ್ತುತಿಸಿ ಮನದಿ ಅತಿ ಹಿಗ್ಗುತಲಿರ್ದ ಬಗೆ ಕೇಳಿ 2 ಗುರು ಕಾಳಿಮರ್ದನ ಕೃಷ್ಣಾಖ್ಯದಾಸರ ಸಹವಾಸದಿಂದಲಿ ಲೌಕಿಕದಿ ಹುರುಳಿಲ್ಲವೆಂಬ ಮರ್ಮವ ತಿಳಿದು ಮನದಿ ವಿಚಾರಿಸುತಿರಲು ಕಾಲವಶದ ಸೋತ್ತುಮ ರಾಜ್ಯದಿ ಸ್ವರೂಪ ಕ್ರಿಯೆಗಳಾಚರಣೆಗೆ ಮನಮಾಡುತಲಿಹ ಓರ್ವ ದ್ವಿಜನ ಮರ್ಮವ ತಿಳಿಯದೆ ನಿಂದಿಸುವ ಮನವ ಮಾಡೆ ಶ್ರೀವದ್ವಿಜಯರಾಯರುತಮ್ಮ ವಂಶಜನಿವನೆಂದು ಶ್ರೀಮತ್ ರಾಘವೇಂದ್ರ ಮುನಿಗೆ ಬಹು ವಿಧ ಪ್ರಾರ್ಥಿಸಿ ಫಲ ಮಂತ್ರಾಕ್ಷತೆಯನಿತ್ತು ಧ್ಯಾನಕ್ಕೆ ತೊಡಗಿಸಿ ಶ್ರೀಮದ್ ಭಾವಿ ಸಮೀರ ಪದರಜವೇ ಬಹು ಭಾಗ್ಯವೆಂದು ಧೇನಿಪ ಭಕ್ತವರ್ಯರಾದ ತಂದೆವರದಗೋಪಾಲ ವಿಠಲದಾಸರಾಯರ ಪದಪದ್ಮಂಗಳಿಗೊಪ್ಪಿಸಿ ಅಪರಾಧಗಳನ್ನೆಲ್ಲ ದೃಷ್ಟಿ ಮಾತ್ರದಿ ದಹಿಸಿ ಫಣಿಗೆ ಮೃತ್ತಿಕೆ ತಡೆದು ಗುರುಗಳನೆ ಅರುಹಿ ನಿಜ ಮಾರ್ಗದಿಂದ ಶಿರಿಗುರುತಂದೆವರದಗೋಪಾಲವಿಠ್ಠಲನ ಕರುಣಿ ಪಡೆವ ಮಾರ್ಗವನೆ ಪಿಡಿದರು ಜವದಿ 3 ಭವದೊಳು ಬಳಲುವ ಭೌತಿಕ ಜೀವಿಗಳ ಬಹು ಬೇಗದಿಂದಲಿ ಉದ್ಧರಿಸಲೋಸುಗ ಬೋಧಮುನಿ ಕೃತ ಗ್ರಂಥಸಾರವ ಬೋಧಿಪ ಮುನಿಗಳ ದರ್ಶನಗೋಸುಗ ಪೊರಟ ಸಮಯದಲಿ ಶ್ರೀಗುರು ವಾದಿರಾಜ ಮುನಿವರ್ಯ ತನ್ನಯ ಪುತ್ರನ ಮೊರೆಕೇಳಿ ಶ್ರೀಲಕ್ಷ್ಮೀಹಯವದನನ ಮೂರ್ತಿಯ ಪ್ರಾರ್ಥಿಸೆ ರೌಪ್ಯಪೀಠ ಪುರವಾಸಿ ಶ್ರೀಕೃಷ್ಣನ ಕರದಿ ಶೋಭಿಪ ವಸ್ತುವಿನ ಪುರದಿ ಸ್ವಪ್ನದಿ ಬಂದು ತಂದೆವರದವಿಠ್ಠಲನೆಂಬ ಅಂಕಿತವನಿತ್ತು ಅದೇ ಸುಂದರ ರೂಪವ ತೋರಿ ನೈಜಗುರುಗಳ ದ್ವಾರಾ ಭಜಿಸೆಂದು ಬೋಧಿಸಿದ ನಂತರದಿ ಬಹು ಸಂಭ್ರಮದಿಂದಲಿ ಉಬ್ಬುಬ್ಬಿ ತನ್ನ ತನುಮನಧನ ಮನೆ ಮಕ್ಕಳನೆಲ್ಲ ನಿನ್ನ ಚರಣಾಲಯಕೆ ಅರ್ಪಿತವೆಂದು ಅರ್ಪಿಸಿ ಗುರುಗಳ ದ್ವಾರಾ ಸಿರಿಗುರು ತಂದೆವರದಗೋಪಾಲಗೆ ಸದಾ ಧೇನಿಸುತ ಮೈಮರೆತಿರ್ದನೀ ದಾಸವರ್ಯ 4 ಪಾದ ಕರವ ಮುಗಿದು ಸ್ವಾಮಿ ಶ್ರೀಗುರುರಾಜಾತ್ವದ್ದಾಸವರ್ಗಕೆಸೇರಿದ ಬಾಲಕ ದಾಸನೀತಾ ಕರುಣದಿಂದಲಿ ಜವದಿ ಕರುಣ ಕಟಾಕ್ಷದಿ ಈಕ್ಷಿಸಿ ಉದ್ಧರಿಸಬೇಕೆಂದು ಬಹುವಿಧ ಪ್ರಾರ್ಥಿಸಲು ಪರಮ ಕರುಣಾನಿಧಿ ಋಜುವರ್ಯ ಶ್ರೀ ವಾದಿರಾಜಾರ್ಯ ತನ್ನ ಹಂಸರೂಪಿಣಿ ಶ್ರೀ ಭಾವೀ ಭಾರತಿಯಿಂದೊಡಗೂಡಿ ಬಹು ಆನಂದದಿಂದಲಿ ಪಂಚ ಬೃಂದಾವನ ರೂಪದಿ ಮೆರೆವ ತನ್ನಯ ರೂಪವ ತೋರಿ ತುತಿಸಿಕೊಂಡು ಬಹು ಆನಂದಭರಿತರಾಗಿ ಬಹು ಬೇಗ ಸಾಧಿಸುವ ಗೈಸಲೋಸುಗ ಶಿರಿಗುರು ತಂದೆವರದಗೋಪಲವಿಠಲನ ಪ್ರಾರ್ಥಿಸಿ ಸಕಲ ಉತ್ಸವಗಳ ತೋರಿ ಶ್ರೀಮದ್ವಿಶ್ವೇಂದ್ರರ ದ್ವಾರಾ ತವ ಪಾದರೇಣು ಫಲ ಮಂತ್ರಾಕ್ಷತೆಯನಿತ್ತು ಬಗೆಯನೆಂತು ವರ್ಣಿಸಲಿ ಪಾಮರ ನರಾಧಮನು ನಾನು 5 ಕೇವಲ ಲೌಕಿಕ ಜನರಂತೆ ಆಧುನಿಕ ಪದ್ಧತಿಗನುಸರಿಸಿ ದಿನಚರ್ಯವನೆ ತೋರುತಲಿ ಭಾರತೀಶನ ಪ್ರಿಯವಾಗಿಹ ಕರ್ಮಗಳನೊಂದನೂ ಬಿಡದೆ ತಿಳಿದು ಮನದಿ ಮಾಡುತಲಿ ಮಂಕುಗಳಿಗೆ ಮೋಹಗೊಳಿಸಿ ಮಮಕಾರ ರಹಿತನಾಗಿ ದಿನಾಚರಣೆಗೈದು ಶ್ರೀ ಶುಕಮುನಿ ಆವೇಶಯುತರಾದ ಸದ್ವಂಶಜಾತ ಶ್ರೀಕೃಷ್ಣನ ಸೇವೆಗೋಸುಗ ಅವತರಿಸಿದ ವಾಯುದೇವ ಪೆಸರಿನಿಂದಲಿ ಶೋಭಿಪ ಕುಲಪುರೋಹಿತರ ಬಳಿಯಲಿ ಬಹು ವಿನಯದಿಂದಲಿ ಶ್ರೀ ನಿಜತತ್ವಗಳ ಮರ್ಮಗಳ ಕೇಳಿಕೊಂಡು ಮನದಿ ವಿಚಾರಿಸಿ ದೃಢೀಕರಣ ಪೂರ್ವಕ ಪಕ್ವವಾದ ಮನದಿಂದಲಿ ಶ್ರೀಶಶ್ರೀ ಮಧ್ವಮುನಿ ಶ್ರೀಗುರುಗಳ ಕರಣವನೆ ಕ್ಷಣಕ್ಷಣಕೆ ಬಿಡದೆ ಸ್ಮರಿಸುತಾನಂದ ಭಾಷ್ಯೆಗಳ ಸುರಿಸುತ ಭಾಗವತರ ಸಮ್ಮೇಳನದಿ ತತ್ವಗಳ ವಿಚಾರಿಸುತ ಶ್ರೀ ದಾಸಾರ್ಯರಾ ಉಕ್ತಿಗಳ ಆಧಾರವನೆ ಪೇಳುತಲಿ ಮನದಿ ಗುರುಗಳ ಸನ್ನಿಧಿಗೆ ಅರ್ಪಿಸಿ ತತ್ವದ್ವಾರ ತಿಳಿದುಪೂರ್ಣ ಸಾಧನವಗೈದು ಶ್ರೀ ಪ್ರಲ್ಹಾದ ಬಲಿ ಮಾಂಧಾತ ಕರಿರಾಜ ಶಿಬಿಮೊದಲಾದ ಚಕ್ರವರ್ತಿಗಳಲಿ ಬಹುಬೇಗ ಸಾಧನವ ಗೈದರು ಇವರಾರೊ ನಾ ಕಾಣೆ ಶಿರಿ ಗುರುತಂದೆವರದ-ಗೋಪಾಲವಿಠಲನ ಆಣೆ 6 ಸತಿ ವತ್ಸರ ವತ್ಸರ ಸತಿ ಮಾಯಾ ಶುಭ ದಿನದಿ ಸಂಖ್ಯಾ ಕಾಲದಿ ಪ್ರಥಮ ಯಾಮವೆಮಿಗಿಲೆಂದು ಮನದಿ ಲಯ ಚಿಂತನೆಯ ಬಿಡದೆ ಮಾಡುತದೇವತೆಗಳ ದುಂದುಭಿ ವಾದ್ಯಗಾಯನಗಳ ರಭಸದಿಶ್ರೀ ಲಕುಮಿ ದೇವಿಯ ಸೌಮ್ಯ ದುರ್ಗಾ ರೂಪಕೆನಮೋ ನಮೋ ಎಂದು ಶಿರಿಗುರುತಂದೆವರದಗೋಪಾಲ ವಿಠಲನಪುರಕೆ ಪುಷ್ಪಕ ವಿಮಾನ ರೋಹಿಣಿಯನೆ ಮಾಡಿನಲಿನಲಿದಾಡುವ ತೆರಳಿ ಪೋದಾರಿವರು 7 ಜತೆ :ಸತಿದೇವಿ ರಮಣನ ಭಕ್ತನೇ ನಿನ್ನಯಸುಖತನವೆಂದಿಗೂ ಕೊಡಲೆಂದು ಬೇಡಿಕೊಂಬೆಸಿರಿಗುರುತಂದೆವರದಗೋಪಾಲ ವಿಠಲನಿಗೆ 8
--------------
ಸಿರಿಗುರುತಂದೆವರದವಿಠಲರು
ಶಿರಬಾಗಿ ಬೇಡ್ವೆ ಎನ್ನನು ಪೊರೆಯೋ ಹರಿಯೇ ಶರಣ ರಕ್ಷಕನೆಂಬೊ ಬಿರುದುಳ್ಳ ದೊರೆಯೇ ಪ ಘನಮಹಿಮನೇ ನಿನ್ನ ಪಾವನ ಚರಣಕಮಲ ಎಂಬೋ ಮನವ ಆಕರ್ಷಿಸುವ ಪಂಜರದಲಿ ವನಜನಾಭನೆ ಎನ್ನ ಮನವೆಂಬ ರಾಜಹಂಸ ನನ್ನ ಲೋಲ್ಯಾಡಿಸೋ ಅನುದಿನದಲಿ 1 ಇಂದಿನ ದಿನವೇ ಸ್ಮøತಿಯಿಂದ ಇರುವಾಗ ಮು- ಕುಂದ ತವ ಸ್ಮರಿಸುವೆÉ ಕೊಡು ಮೋಕ್ಷವಾ ಮುಂದೆ ಅಂತ್ಯದಲಿ ಕಫ ಪಿತ್ತ ಶೀತಾದಿ ಕಂಠ ಗುಂದಿ ವಿಸ್ಮøತಿಯಾಗಿ ಸ್ಮರಣವಹುದೈಯ್ಯಾ 2 ಶ್ರೀಶ ಹನುಮೇಶವಿಠಲನೇ ನಿನ್ನಾಧೀನ ದಾಸನ ಮನದಪೇಕ್ಷವ ಪೂರಿಸೋ ಕೇಶವನೆ ಶಾಸಕನೆಂದು ಆಶಿಸಿ ಬಂದೆ ಬೇಸರ ಮಾಡದಲೆ ಪೋಷಿಸೈ ಸ್ವಾಮಿ 3
--------------
ಹನುಮೇಶವಿಠಲ
ಶಿರಿ ಮುದ್ದು ಕೃಷ್ಣವಿಠಲ | ಪೊರೆಯ ಬೇಕಿವಳಾ ಪ ಪಾದ | ಸಾರಿ ಭಜಿಸುವಳಾ ಅ.ಪ. ಪರಿಪರಿಯ ವಿಧದಿಂದ | ತೈಜಸನೆ ನೀನಾಗಿವರಸೂ ರೂಪಗಳಿಂದ | ವಸುದೇವ ಸುತನೇತರಳೆಗತಿ ಆಶ್ಚರ್ಯ | ತೋರಿ ಅಡಗಿದೆ ದೇವಶಿರಿಮುದ್ದು ಕೃಷ್ಣನೇ | ಮರುತಂತರಾತ್ಮ 1 ಸುಪ್ತಿಯಲಿ ಗುರುಪಾದ | ಭಕ್ತಿಯಲಿ ನಮಿಸುತ್ತತೀರ್ಥವನೆ ತಕ್ಕೊಂಡು | ಧನ್ಯನಾನೆಂದುಅತ್ಯಂತ ಹರ್ಷದಲಿ | ಸ್ತೋತ್ರವನೆ ಮಾಡುತ್ತಸಕ್ತಿಯನೆ ತೋರಿಹಳು | ದಾಸಪಂಥದಲೀ 2 ಭುವನ ಪಾವನವೆನಿಪ | ಮಧ್ವಮತದಾಸಕ್ತಿಶ್ರವಣಕಾನಂದವೆನೆ | ಕವನ ಸಂಸ್ಪೂರ್ತೀಜೀವೊತ್ತಮರ ಭಕುತಿ | ವಿಷಯದಲಿ ವಿರಕ್ತಿಹವಣಿಸೋ ಶ್ರೀಹರಿಯೆ | ಭವಕರಿಗೆ ಹರಿಯ 3 ಪತಿಸುತರು ಹಿತರಲ್ಲಿ | ಮತಿಮತಾಂವರರಲ್ಲಿರತನು ಶ್ರೀಹರಿಯೆಂಬ | ಸುಜ್ಞಾನವನ್ನುಕೃತಿಪತಿಯ ಕರುಣಿಸುತ | ಸಾಧನವ ಗೈಸುವುದುಚತುರಾಸ್ಯಪಿತ ಹರಿಯೆ | ದುರಿತವನ ದಾವಾ 4 ಮಾನನಿಧಿ ಶ್ರೀಹರಿಯೆ | ಧ್ಯಾನಾನುಕೂಲಿಸುತಸಾನುರಾಗದಿ ನಿನ್ನ | ರೂಪಹೃದ್ಗುಹದೀಕಾಣಿಪಂತಸಗೊ ಗುರು | ಗೋವಿಂದ ವಿಠಲನೆಆವಾದದನ್ಯವನು | ಬೇಡ ಬಂದಿಲ್ಲ5
--------------
ಗುರುಗೋವಿಂದವಿಠಲರು
ಶಿರಿದೇವಿಯೆ ಪೊರಿಯುವದೆನ್ನನು ತಾಯೆ ಭಾ ಸ್ಕರ ಪುರ ನಿಲಯೆ ಪ ಧರಣಿಸುರವರÀನಿಗೊಲಿದು ಶ್ರೀಗಂಧದ ವರ ಶಿಲೆಯೊಳು ನೆಲಿಸಿರುವ ಶುಭಾಂಗಿಯೆ ಅ.ಪ ಲಕುಮಿಯೆ ತವ ದರುಶನ ವರುಷಂಪ್ರತಿ ಮಾಡುವ ನೇಮಾಸಕ್ತ ಶ್ರೀ ಲಕ್ಷ್ಮೀಕಾಂತ ತತ್ಕರಸಂಪೂಜಿತ ಸತಿ 1 ಪದ್ಮೇ ಪ್ರಣಮಾಮಿ ಭವತ್ಪದ ಪದ್ಮೆ ವಾರಿಜದಳ ಸದ್ಮೆ ಪದ್ಮಾನನೆ ಸ್ಮರಿಸುವೆ ಕರಧೃತ ಪದ್ಮೆ ವಾಸಯಿ ಮಮಸದ್ಮನಿ ಪದ್ಮಾವತಿ ಪದ್ಮಜನುತ ಪದಪದ್ಮೇ ಉದ್ಭವಿಸಿದ ಪದ್ಮದಿ ಪದ್ಮನಾಭ ಹೃತ್ಪದ್ಮನಿವಾಸಿನಿ 2 ಸಿಂಹಧ್ವಜ ಶೋಭಿತೆ ಸಾನುರಾಗದಿ ಭಜಿಸುವರಿಗೆ ಪ್ರೀತೆ ಕಾಮಿತ ಫಲದಾತೆ ಜ್ಞಾನಾ ಸದ್ಭಕುತಿಯು ಕರುಣಿಸು ಮಾತೆ ವರದಾಭಯಹಸ್ತೆ ರಾಣೆಯೆ ನಮಿಸುವೆ 3 ವಂದಾರುಜನ ಮಂದಾರಾಮಿಂದಿರಾ ಸುಂದರಾನನಾಂ
--------------
ಕಾರ್ಪರ ನರಹರಿದಾಸರು
ಶಿವಕನ್ಯೇ ಗುಣರನ್ನೇ ಪ ತವಪದ ಪದುಮವ | ಜವದಲೆ ತೋರಿಸುಅ.ಪ. ಕಾಲಕೆ ಮಾನಿಯೆ | ಓಲೈಸುವೆ ಪದಕೀಲಾಲಜವನು | ಪಾಲಿಸು ಎನಗೇ 1 ಪವನ ಮತಾನುಗ | ರವನೆಂದೆನಿಪಗೆಭವ ಪರಿಹಾರಿಕ | ನವ ಭಕುತಿಪ್ರದೆ 2 ಮುಕುತಿಗೆ ಮಾರ್ಗವ | ಭಕುತಿಗೆ ಆಕರೆವ್ಯಕುತಿಯಗೈ ಹರಿ | ಭಕುತಿಗಳೆನ್ನಲಿ 3 ಸ್ತವ ಪ್ರಿಯ ನರಹರಿ | ಸ್ತವನವ ಗೈಯ್ಯುವಹವಣೆಯ ತೋರಿಸು | ಭವನಿಗೆ ಜನನಿಯೆ 4 ಗೋವ ಕಾವ ಗುರು | ಗೋವಿಂದ ವಿಠಲನಭಾವದಿ ತೋರಿಸು | ನೀ ಒಲಿದೆನಗೆ 5
--------------
ಗುರುಗೋವಿಂದವಿಠಲರು
ಶಿವನ ನಾಮಾಮೃತವ ಸವಿದು ಧನ್ಯರಾಗಿರೊ ಜಗದೊಳು ಪ ಶಿವ ಶಿವ ಎಂಬೊ ಎರಡಕ್ಷರವು ಭವರೋಗಕೆ ಇದು ಮೂತೌಷಧವು ಜವನಾಳ್ಗಳ ಭಯ ಲವಲೇಶವಿಲ್ಲವು ಇದು ಸತ್ಯವು 1 ಪಾತಕ ಪಹರಿನಿತು ಪೋತ ಮಾರ್ಕಂಡೇಯಗಾಯುವ ನೀಡಿತು ಭೂತೇಶನ ಪದವಾರಿಜ ಧ್ಯಾನದಿ ಧನ್ಯರಾಗಿರೋ 2 ಹರನ ದಿವ್ಯಪದವಾರಿಜ ಧ್ಯಾನ ಪರ ಚರ ಮುಕುತಿ ಪಥಕೆ ಸೋಪಾನ 3
--------------
ಶಾಮಸುಂದರ ವಿಠಲ
ಶಿಶುಗಳಪರಾಧಕೆ ಶಿಕ್ಷೆ ಕಣ್ಣೀಲಲ್ಲದೇ ಯಶವ ಬಡಿಗೋಲವನು ಎತ್ತುವರೇ ರಂಗಾ ಪ ಇಲಿಗೆ ಹೆಬ್ಬುಲಿಯಾಕೆ|ಮೊಲಕೆ ಮದಗಜವ್ಯಾಕೆ| ಕಳೆತ ಹಣ್ಣಿಗೆ ಮತ್ತೆ ಕರಗಸ್ಯಾಕೆ| ಕಲೆ ಬಿದ್ದ ಕನ್ನಡಿಗೆ ಗುದ್ದಲಿಯ ತರಲೇಕೆ| ಗುಳಲಿ ಕಾಯಿಗೆ ಹೊತ್ತಗಲ್ಲ ವ್ಯಾಕೆ 1 ಹಳ್ಳಗೆ ಹಡಗವ್ಯಾಕೆ|ಕೊಳ್ಳಿಗೆ ಕೊಡ ಜಲವ್ಯಾಕೆ| ಮುಳ್ಳು ಮುರಿದುದಕ ಮೊನೆ ಹಾರಿ ಯಾಕೆ| ಮಲ್ಲಿಗೆ ಹೋವಿಗೆ ಬಂಧ ಹಗ್ಗದಲ್ಯಾಕೆ| ಹಲ್ಲಿ ಬೆದರಿಸೆ ಹೊಡೆವ ಭೇರಿಯಾಕೆ 2 ಜ್ಞಾನಹೀನರ ನಮ್ಮ ತಪ್ಪನೆಣಿಸಿದುರಿತ| ಮೊನೆಗಾಣಿಸುತ ಬನ್ನಿ ಬಡಿಸುವುದುಚಿತವೇ| ದೀನವತ್ಸಲ ತಂದೆ ಮಹಿಪತಿ ಸುತ ಪ್ರಭುವೇ| ನ್ಯೂನಾರಿಸದೇ ನಿನ್ನವನೆಂದು ಸಲಹೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶಿಷ್ಟ ಜನರುಗಳಿಗೆ ಸತತ ಇಷ್ಟಾರ್ಥಗಳನೆ ಕೊಡುವ ಬೈಷ್ಮೀಸತ್ಯಾಸಮೇತ ಕೃಷ್ಣ ನಿನಗೆ ಮಂಗಳಂಪ ಸರ್ವಶಾಸ್ತ್ರಾರ್ಥಗಳನರಿತು ದುರ್ವಾದಿ ಮತವನಳಿದ ಸರ್ವಜ್ಞಾಚಾರ್ಯ ಪೂಜಿತ ಕೃಷ್ಣ ನಿನಗೆ ಮಂಗಳಂ 1 ಲೇಸಾಗಿ ಮಧ್ವಶಾಸ್ತ್ರವ ಭೂಸುರರಲಿ ಅರುಹಿದ ವ್ಯಾಸಾರ್ಯವರಕರಾರ್ಚಿತ ಕೃಷ್ಣ ನಿನಗೆ ಮಂಗಳಂ 2 ಘನ್ನ ಶ್ರೀ ವ್ಯಾಸಯತಿಗಳ ಉನ್ನತ ಪೀಠಪತಿಗಳಿಂ ಚೆನ್ನಾಗಿ ಪೂಜಿಗೊಂಬ ಪ್ರಸನ್ನÀ ಕೃಷ್ಣಗೆ ಮಂಗಳಂ 3
--------------
ವಿದ್ಯಾಪ್ರಸನ್ನತೀರ್ಥರು
ಶುಕ ಮುನಿವಂದ್ಯ ಹರಿ ಮುಖ ಪೀಠದಲಿ ಕುಳಿತೂ ಪ ಸುಖದಿ ನೀ ಪವಡಿಸಯ್ಯಾ ಅ.ಪ ಬೊಮ್ಮ ದಿವಿಜ ಭವರೋಗ ವೈದ್ಯ ನಿಂ ನವಸರದೂಳಿಗ ನವಸುಂದರ ನಿದ್ದೆ ಪೊ ತ್ತವನೇ ನೀ ಪವಡಿಸಯ್ಯಾ 1 ತುಂಬುರು ನಾರದನೆಂಬರು ವೀಣೆಯ ಸಂಭ್ರಮದಿಂ ಮೇಳೈಸಿ ಅಂಬುಜನಾಭ ನೀನೆಂಬ ಗೀತವ ಸವಿ ದುಂಬಿ ಪಾಡಲು ಕೇಳುತಾ ಟುಂಬ ನೀ ಪವಡಿಸಯ್ಯಾ 2 ಪೆಡೆದಲೆಗನ ಮೃದುವಡೆದ ಹಾಸಿನ ಮೇ ಲಿಡಿಕಿರಿ ವಡಸಿಸುವಾ ಯಡಕೆಲೆ ಸಂಭ್ರಮಿಸೇ ಮಡದಿ ರನ್ನಳು ಸೌಮ್ಯನಾಯಕಿ ಯೊಡನೈಗೂಡಿ ಮೃಡನುತನೆ ಪವಡಿಸಯ್ಯಾ 3
--------------
ಬೇಲೂರು ವೈಕುಂಠದಾಸರು
ಶುಕ್ಕುರವಾರದಿ ಭಕ್ತಿಲಿ ಭಜಿಸುವೆ ಲಕ್ಕುಮಿ ದೇವಿಯನುರುಕ್ಮಾಭರಣ ವಿಲಕ್ಷಣ ಶೋಭಿಪ ಸುಲಕ್ಷಣ ಮೂರ್ತಿಯನುರಕ್ಕಸರಿಪು ಬಲಪಕ್ಕದಿ ಕೂತಿಹ ರುಕ್ಮಿಣಿ ದೇವಿಯನು ಪ ಸಂತತ ಭಜಿಸುವ ಸಂತರ ಹತ್ತಿರ ನಿಂತು ರಕ್ಷಿಸುತಿಹಳುಶಾಂತಳು ಸದ್ಗುಣವಂತಳು ಕಮಲಾಕಾಂತನ ಸುಪ್ರಿಯಳೂ ಕರವೀರಪ್ರಾಂತ್ಯದೊಳಿರುತಿಹಳು ಹೃತ್ಕಮಲಂಚಳ ಸಂಸ್ಥಿತಳು 1 ಮಾಧವ ಭೂಮಿಯ ಮಂಗಳ ಮೂರ್ತಿಯು ಸುಖರಾಶಿ2 ಆಸ್ಯಾಂಬುಜತನು ಹಾಸಸುಕುಂತಳೆ ಭೂಷಿತ ಬಿಂಬೋಷ್ಠೀಕೂಸಿಗೆ ಕೊಡು ಇಂದಿರೇಶನ ಸಹಜಗದೀಶಳೆ ತವ ಭೆಟ್ಟಿ3 ಅಗಣಿತ ಮಹಿಮನಸುಗುಣದೊಳಾಡುವ ಮಿಗೆ ಹರುಷವ ಕೊಡುನಗೆಮುಖದವಳೇ 4 ಸಂದರವದನೆ ಸಿಂಧುರಗಮನೆ ಕುಂದದ ಅಸುರರನೆಮಂದರಮಾಲಾ ಭೂಷಿತವೇಣಿ ಇಂದಿರೇಶನ ಪಾದದ್ವಂದ್ವತೋರಿಸು ನಿನಗೊಂದಿಸುವೆನು ಶರದಿಂದು ಸುಮನಸೆ 5
--------------
ಇಂದಿರೇಶರು