ಒಟ್ಟು 13403 ಕಡೆಗಳಲ್ಲಿ , 136 ದಾಸರು , 5923 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾನ್ದಳದ ಬುಡವೆನಗೆ ಅತಿದೂರ ಬೆಳಕೇ ಮನ್ದಿರವು ಶುದ್ಧವಿದೆ ಬಾ ಇದರತಳಕೆ ಪ ಸುಂದರದ ಕಾಂತಿಯನು ಚೆಲ್ಲು ಈ ಮನೆಗೆ ಇಂದು ಬಾ ನಾಳೆಯೆನಬೇಡ ನನ್ನೆಡೆಗೆ ಅ.ಪ ಜನುಮದಂಚಿನ ಬೆಳಕು ನಿನ್ನದೇ ಗೊತ್ತು ನಲಿದು ಬಂದಿಹೆನೊಳಗೆ ನಾ ನಿನ್ನ ಸೊತ್ತು ನಿಲುಕದೆಡೆ ನಿಲಬೇಡ ಬಾ ನನ್ನ ಮುಪ್ಪೆ ಬಲಯುತನ ಮಾಡೆನ್ನ ಸುಜ್ಞಾನಚಿತ್ತೆ 1 ನೀ ಮಾತ್ರವಿತ್ತಲಿರೆ ನನ್ನೈದು ಗೆಳೆಯರು ನೇಮಯುತರಾಗುವರು ಸೊಗಬಾಳ್ವರು ನಾ ಮಾಳ್ಪುದೆಲ್ಲವೂ ನಿನ್ನದೇ ಆಗುವುದು ರಾಮಕೃಷ್ಣರ ನೆನಪು ನನಗೆ ದೊರಕುವುದು 2 ನೀನಿರದ ನನ್ನ ಮನೆ ಕಡುಕತ್ತಲೆಯ ಕೋಣೆ ನೀನಿರದೆ ನಾನಿರಲು ಫಲವೇನು ಕಾಣೆ ಕಾನನದ ಹೂವಿನಂತಿದ್ದೇನು ಫಲವಿಲ್ಲ ಜ್ಞಾನ ಹೊಂಬೆಳಕೆ ಮಾಂಗಿರಿರಂಗ ನೋಡೆ ಭಯವಿಲ್ಲ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಾಬಾ ಭಾಮಿನಿ ಬಾಬಾ ಭಾಮಾಮಣಿ ಪೀಠಕೆ ಪ. ರತ್ನ ಮಂಟಪದೊಳು ಮುತ್ತಿನಮಣೆನ್ಹಾಕಿ ಮಿತ್ರೆಯರ್ ಕರೆವರು ಈಗ ಎತ್ತ ನೋಡಿದರೂ ಸುತ್ತ ಜ್ಯೋತಿಗಳು ಶಿಸ್ತಿಲಿ ಬೆಳಗುತಿಹುದು 1 ವÀರ ಜರತಾರಿ ಪೀತಾಂಬರನುಟ್ಟು ಸರಗಳು ಹೊಳೆಯುತಲೀಗ ಬೆರಳಿನುಂಗುರ ಥಳಥಳಿಸುತಲಿ ಬೆಡಗನು ತೋರುತಲಿ 2 ಕಡಗ ಕಿಂಕಿಣಿ ಕರದಲಿ ಪೊಳೆಯೆ ಅಡಿ ಇಡುತಲಿ ನೀ ಬೇಗ ಮುಡಿದ ಮಲ್ಲಿಗೆ ಎಡಬಲಕುದುರುತ ಒಡೆಯ ಶ್ರೀ ಶ್ರೀನಿವಾಸನ ಮಡದಿ 3
--------------
ಸರಸ್ವತಿ ಬಾಯಿ
ಬಾಯಿ ತೆರೆದ ಬಗಿಯೇನೊ ದೇವದೇವ ತೋಯಜದಳ ನೇತ್ರನೆ ನೀಯೆನಗಿದು ಪೇಳೈ ನಿಜವಾಗಿ ಲಕ್ಷ್ಮೀನಾ ರಾಯಣ ನರಸಿಂಹನೆ ಪ ಅಸುರನ ಉದರವ ಹಸನಾಗಿ ಬಗೆವಾಗ ಬಾಯ ತೆರೆದಿಯಾ ಬಿಸಜ ಭವಾಂಡವು ಬಸುರೊಳಗಿದ್ದ ಉ- ಬ್ಬಸಿಗೆ ಬಾಯ ತೆರೆದಿಯೊ 1 ಮಡದೀಯ ರೂಪಕ್ಕೆ ಮರುಳಾಗಿ ಅದರಿಂದ ಬಿಡದೆ ಬಾಯ ತೆರೆದಿಯಾ ದೃಢದಿ ಪ್ರಹ್ಲಾದನ ಒಡೆಯ ರಕ್ಷಿಸೊ ನುಡಿಗೆ ಬಾಯ ತೆರೆದಿಯೊ 2 ಗುರು ಸತ್ಯಬೋಧರಾಯರ ನಿತ್ಯಭಜನೆಗೆ ಬರಿದೆ ಬಾಯ ತೆರೆದಿಯೊ ವರ ಕದರುಂಡಲಗಿ ಹನುಮಯ್ಯನೊಡೆಯನೆ ಕರವ ಮುಗಿವೆ ಕರುಣಿಸೊ 3
--------------
ಕದರುಂಡಲಗಿ ಹನುಮಯ್ಯ
ಬಾಯಿಂದಾಗುವುದು ಭವಾಭವ ತಿಮ್ಮ ರಾಯನ ನಾಮವ ನುಡಿಯುತಲಿರು ಜೀವಾ ಪ. ರಸನೆಯ ಗೆಲಿದರೆ ವಿಷಯ ನಿವರ್ತಿಸಿ ವಶವಾಹುದಿತರೇಂದ್ರಿಯಗಳೆಂದು ವಸುದೇವ ಸುತನು ವಾಸವಿಗೆಂದು ನುಡಿಯ ಧ್ಯಾ- ನಿಸುತ ಜಾಗೃತನಾಗು ಮುಸುಕಿನೊಳಿಹ ಜೀವಾ 1 ಭವ ಕಂಡು ನಿಂದೆಯ ಮಾಡಿ ಪಿಕವದು ಕೊಂಡಾಡುವುದಾ ಮಾಡದಿದ್ದರೆ ನಗೆಗೀಡಾಹುದಿದರಿಂದ 2 ಮಧ್ವವಲ್ಲಭನಿಗರ್ಪಿತವಾದ ನೈವೇದ್ಯ ಶುದ್ಧ ತೀರ್ಥ ತುಳಸಿಯ ಸಹಿತ ಮೆದ್ದರೆ ಬಹಿರಂತಃ ಶುದ್ಧಿಯಾಗುವುದು ನಿ- ಷಿದ್ಧ ಭಕ್ಷಣದಿಂದ ನೀಚನೆಂದೆನಿಸುವ 3 ಶ್ರೀಯರಸನ ಜಿಹ್ವೆಯಲಿ ಪೊಗಳಲು ಯಮ ರಾಯನಾಳ್ಗಳು ನೋಡಲಂಜುವರು ಮಾಯಾ ಪ್ರಪಂಚದಿ ಮರುಳಾದ ಜನರೊಳು ನ್ಯಾಯವಾಡಲು ನಾನಾಪಾಯವ ಘಟಿಸುವ 4 ಕ್ಷೇತ್ರ ಕಳತ್ರಾದಿಗಳ ಬಿಟ್ಟು ತಿರುಗುವ ತೀರ್ಥಯಾತ್ರೆಯ ಮಾಡುವುದಕಧಿಕಾ ಸ್ತೋತ್ರದಿಂದ ಶ್ರೀ ಕಳತ್ರನ ಕರುಣೈಕ ಪಾತ್ರರ ಮಾಳ್ಪ ವಿಚಿತ್ರ ಸನ್ನಹವಾದ 5 ಹಲವು ಕರ್ಮದ ಶಾಸ್ತ್ರ ನೆಲೆಯರಿಯದೆ ತ- ತ್ಫಲವಾಗಬೇಕೆಂಬ ಛಲವಿಡೀವ ಕಲಿಯೊಳಗುದಿಸಿದ ಜನರಿಗೆ ಗತಿಯಾಗಿ ಜಲಜನಾಭನ ನಾಮ ನೆಲೆಯಾಗಿ ನುಡಿವಂಥ 6 ನಾಮಕೀರ್ತನೆಗೈಯ್ಯೆ ನಲಿವುತ ಬಹ ನಮ್ಮ ಶ್ರೀಮಹೀಯರಸ ವೆಂಕಟರಾಜನು ಕಾಮಿತಾರ್ಥವ ನೀಡಲ್ಲಧಿಕ ಸಾಧನವಿದು ಪಾಮರತೆಯ ಬಿಟ್ಟು ಪರಮಾರ್ಥದ ಗುಟ್ಟು 7
--------------
ತುಪಾಕಿ ವೆಂಕಟರಮಣಾಚಾರ್ಯ
ಬಾಯೊಳು ಉಂಗುಷ್ಟವನಿಟ್ಟಮಾಯವ ನÉೂೀಡಮ್ಮಾ ಪ ಶ್ರೀಯರಸನೀಲಮೇಘಛ್ಛಾಯ ಕೃಷ್ಣರಾಯತನ್ನ ಅ.ಪ. ನಿರಂಜನ ತಾ ಲೀಲೆಯಿಂದ1 ಪುಟಿತ ಹಾಟಕ ಮಣಿಘಟಿತ ಕಂಕಣಾಂಗದಕಟಿಸೂತ್ರಗಳನಿಟ್ಟು ನಟನಂದದಿವಟಪತ್ರ ಶಾಯಿ ಓಷ್ಠಪುಟದಿ ಪಾದವನಿಕ್ಕಿಕಟಬಾಯೊಳಮೃತವ ಸ್ಫುಟವಾಗಿ ಸುರಿಸುತ 2 ನಿತ್ಯ ಮಂಗಳ ದೇವಿಯರಗಂಗೆಯ ಪಡೆದ ಶಿವನಂಗ ಶುದ್ಧಿಗೈಸಿದಾತನ3 ಗೋಪಿ ಗೃಹಕರ್ಮರತಳಾಗಿರಲು ಒಮ್ಮನದಿಂದಅಮರಗಣಾರಾಧೀತ ಕ್ಷಮೆಯನಳೆದ ಪಾದಸುಮ್ಮನೆ ಕರದೊಳೆತ್ತಿ ಕಮ್ಮಗಿಹದೆಂದು ತನ್ನ 4 ಕರಪಲ್ಲವಾಮೃತ ಲೋಕವಂದ್ಯರೂಪ ಫಣಿಶೇ-ಖರಾದ್ರಿವಾಸ ಭಕ್ತನಾಕ ಭೂರುಹ ನೀಕರೆಸಿ ದುರಿತವ ಸೋಕದಂತೆ ನಮ್ಮನೀಗಸಾಕುವ ಪರಮ ಕರುಣಾಕರ ಶ್ರೀಕೃಷ್ಣ 5
--------------
ವ್ಯಾಸರಾಯರು
ಬಾರನ್ಯಾತಕೆ ನೀರೆ ನೀ ಕರೆತಾರೆ ಸುಗುಣ ಗಂಭೀರನ ಪ. ತೇಜಿಯನೇರಿ ಮೆರೆವನ ಅ.ಪ. ಕೋಮಲಾಂಗನ ಕಂತುದಹನನ ಸೋಮಾರ್ಕ ಶಿಖಿನೇತ್ರನ ವಾಮದೇವನ ವನಜಭವಸಂಭವ ಮುನಿಸ್ತೋಮ ವಿನುತ ಎನ್ನ ಪ್ರೇಮನ 1 ನೀಲಕಂಠನ ನಿಗಮಸಾರನ ಬಾಲಶಶಿಧರ ಭರ್ಗನ ಶೀಲಸದ್ಗುಣ ಫಾಲನೇತ್ರನ ಕಾಲಾಂತಕ ಎನ್ನ ಕಾಯ್ವನ 2 ಮಂಗಳಾತ್ಮನ ಮಲ್ಲರಿಪುದಲ್ಲಣ ದೇವೋತ್ತುಂಗ ಹೆಳವನಕಟ್ಟೆ ರಂಗಗತಿಸಖನಾದ ನೀಲಗಿರಿ ಲಿಂಗ ಮೂರುತಿಯ3
--------------
ಹೆಳವನಕಟ್ಟೆ ಗಿರಿಯಮ್ಮ
ಬಾರಪ್ಪ ನೀ ಬಾರಪ್ಪಾ ಭಾರತಿರಮಣಾ ಮುಖ್ಯಪ್ರಾಣಾಗೋ'ನದಿನ್ನಿ ಹಣ್ಣಮಪ್ಪಾ ನೀ ಗಾಲವ ಕ್ಷೇತ್ರಕೆ ಬಾರಪ್ಪಾ ಪಗಾಲವಕ್ಷೇತ್ರಕ್ಕೆ ಬಾರಪ್ಪಾ ನೀ ಹೋಳಿಗೆತುಪ್ಪಾ ಹೊಡೆಯಪ್ಪಾಕೃಷ್ಣವೇಣಿಯ ತಟದ ಶಿಲೆಯೊಳು ಒಡಮೂಡುತ ನೀ ಇದ್ದೆಪ್ಪಾ1ಶಿಷ್ಟರಾದ ಶ್ರೀ ಉಮರ್ಜಿ ಆಚಾರ್ಯರ ನಿಷ್ಠೆಗೆ ಒಲಿದು ಬಂದೆಪ್ಪಾಶರಧಿಗೆ ಜಿಗಿದು ಸೀತಾದೇ'ಗೆ ರಾಮಮುದ್ರಿಕೆಯ ಕೊಟ್ಟೆಪ್ಪಾದುರುಳ ರಾವಣನ ಲಂಕಾಪಟ್ಟಣ ಸುಟ್ಟ ಕಪಿವರನು ನೀನಪ್ಪಾದುಷ್ಟ ಕೌರವನ ತೊಡೆಯ ಒಡೆದು ಗದೆಪಿಡಿದ ಭೀಮ ನೀ ಹೌದಪ್ಪಾ 2ದುಃಶಾಸನನ ಕರುಳ ಬಗೆದು ನರಸಿಂಹನ ಪ್ರೀತಿ ಪಡೆದೆಪ್ಪಾಹರಿಯದ್ವೇಗಳ ದುರ್ಮತಗಳನು ಮುರಿದು ಮಧ್ವಯತಿ ಆದೆಪ್ಪಾರಾಶಿ ರಾಶಿ ಸದಗ್ರಂಥ ರಚಿಸಿ ನೀ ವ್ಯಾಸರ ಸನ್ನಿಧಿ ಪಡೆದೆಪ್ಪಾಕೃಷ್ಣವೇಣಿತಟ ನರಾಹರಿ ಇರುವನು ರಾಯರು ಇರುವರು ಬಾರಪ್ಪಾ 3ಎಲ್ಲಿ ನರಹರಿ ಎಲ್ಲಿ ರಾಯರು ಅಲ್ಲಿ ನೀ ಇರಬೇಕಪ್ಪಾಪಾಪಿಷ್ಠರ ಗತಿಭಯಂಕರನು ನೀಪುಣೈವಂತರಿಗೆ ಸುಲಭಪ್ಪಾಭೂಪತಿ'ಠ್ಠಲನ ಭಕ್ತರ ಪೊರೆಯಲು ನೀ ಗಾಲವ ಕ್ಷೇತ್ರಕೆ ಬಾರಪ್ಪಾ 4ರುದ್ರದೇವರು
--------------
ಭೂಪತಿ ವಿಠಲರು
ಬಾರಯ್ಯ ಕೃಷ್ಣ ಬಾರೈ ಬಾಹದಿದ್ದಡೆಕಾರುಣ್ಯನಿಧಿಯೆಂಬ ಕಥೆಯ ಅ-ದಾರು ಬಣ್ಣಿಪರು ವೇದಾಂತದೇವಿಯರೆಮ್ಮದೂರುವರೀಗೆ ಪ. ಕುಂಜರವರದ ನೀಲಾಂಜನವರ್ಣ ನೀಕಂಜನೇತ್ರನೆ ಕಾಮನಯ್ಯಮಂಜುಳಮೂರ್ತಿ ಮನೋಹರಕೀರ್ತಿ ಪ್ರ-ಭಂಜನನೊಡೆಯ ಬಾರೊ 1 ಮಂದರಗಂಧದ ಮಂದಮಾರುತ ಬಂದಚಂದಿರಮುಡಿದ ಚದುರಬಂದಕಂದರ್ಪನರವಿಂದನೆಂಬ ಕಣೆಯ ತೊಟ್ಟ ಮಂದರಧರನೆ ಬಾರೊ2 ನೋಡುವೆ ನುಡಿಸುವೆ ಪಾಡುವೆ ಬಯಕೆಯಬೇಡುವೆ ಹಯವದನನಮಾಡುವೆ ಪೂಜೆಯ ಕೂಡುವೆ ನಿನ್ನೊಡ-ನಾಡುವೆನೊ ಬೇಗನೆ ಕಾಡದೆ ಬೇಗ ಬಾರೊ 3
--------------
ವಾದಿರಾಜ
ಬಾರಯ್ಯ ಬಾ ಬಾ ಬುಧಜನಗೇಯಾ | ಹೇ ಗುರರಾಯಾಸಾರಿ ಬರುವ ಭಕುತರೊಡೆಯ | ಕಾಯಯ್ಯ ಜೀಯಾ ಪ ವಾರಿಜನಾಭನ ವಾರಿಧಿಮಥನನವೈರದಿ ಭಜಿಸಿದ ಪುರಟ ಕಶ್ಯಪನ |ವರ ಉದರೋದ್ಭವ ಹರಿ ಪ್ರಿಯ ಭಕುತನೆಶರಣರ ಪೊರೆಯಲು ತ್ವರ್ಯದಿ ಬಾರೋ ಅ.ಪ. ದಿತಿಸುತ ದೊರೆಯೇ | ಬಾಹ್ಲೀಕ ದೊರೆಯೇ |ಚತುರ ಚಂದ್ರಿಕೆ ಗುರು ಮಂತ್ರಾಲಯ ಗುರುವೇ | ದೊರೆಬಲು ಮೊರೆಯೇ |ವ್ಯಥೆಯಾಕೆನ್ನುತ | ಹಸ್ತವ ಚಾಚುತಹುತ ವಹ ನೊಳು ಬಲಾ | ಜತನಾಗಿರಿಸಿಹ ರತುನವ ಹಾರವ | ಪ್ರೀತಿಲಿ ಕೊಡುತಅತಿಶಯ ತೋರಿದ | ಯತಿ ರಾಘವೇಂದ್ರ 1 ಸುಧೀಂದ್ರರ ಕರಜ ಮಂತ್ರಾಲಯ ನಿಲಯ | ಬಲು ಮಂತ್ರಗಳೊಡೆಯಾ |ಬಧಿರ ಮೂಕರ ಅಂಧರ ಹೊರೆಯಾ | ಪರಿಹರಿಸುವ ದೊರೆಯಾ |ಮಧ್ವಾಂತರ್ಗತ ಮಧು ಕೈಟ ಭಾರಿಯಸಿದ್ಧಾಂತದ ಸವಿ ಹೃದ್ಗತ ಮಾಡಿದ |ವಿದ್ವನ್ಮಣಿಗಳ ಸದ್ವøಂದದ ಖಣಿಸದ್ವಿದ್ಯದ ಸವಿ ಮೋದದಿ ಉಣಿಸಲು 2 ಮನ್ರೋವಿನ ಮನ ತಿಳಿಯುತಲಿನ್ನೂ | ಮುನಿವರ ತಾನೂ |ಸಾನುರಾಗದಿ ತನುವ ತೋರಿದನೂ | ಘನ ಕರುಣಿಯು ತಾನೂ |ಜ್ಞಾನಿಗಮ್ಯ ಗುರುಗೋವಿಂದ ವಿಠಲನಧ್ಯಾನಿಸೆ ಪೊಗುತಲಿ ವೃಂದಾವನವ |ಆನತ ಜನ ಮನದಿಷ್ಟವ ಸಲಿಸುತಮೌನಿವರೇಣ್ಯನೆ ತುಂಗೆಯ ತೀರಗ 3
--------------
ಗುರುಗೋವಿಂದವಿಠಲರು
ಬಾರಯ್ಯ ಬಾರಯ್ಯ ಬಾರೊ ಶ್ರೀ ಹರಿಯೆ ಬಾರಯ್ಯ ಗುರು ಶಿರೋಮಣಿಯೆ 1 ಮಚ್ಛನಹುದು ಗುರು ಸಚ್ಚಿದಾನಂದನೆ ಅಚ್ಯುತಾನಂತ ನೀ ಬಾರಯ್ಯ 2 ಕೂರ್ಮನಹುದು ಗುರು ಧರ್ಮ ಸಹಕಾರನೆ ನಿರ್ಮಳಾನಂದ ನೀ ಬಾರಯ್ಯ 3 ವರಾಹನಹುದು ಗುರು ವಾರಿಜನೇತ್ರನೆ ವರಮುನಿಹೃದಯ ನೀ ಬಾರಯ್ಯ 4 ನರಸಿಂಹನಹುದು ಗುರು ನರಹರಿಯೆ ನಾರಾಯಣನೆ ನೀನು ಬಾರಯ್ಯ 5 ವಾಮನಹುದು ನೀ ಬ್ರಾಹ್ಮಣೋತ್ತಮನೆ ಬ್ರಹ್ಮಾನಂದ ಶ್ರೀ ಗುರು ಬಾರಯ್ಯ 6 ಭಾರ್ಗವರಾಮನಹುದು ಪರಾಕ್ರಮನೆ ಪರಮಪುರಷ ಗುರು ಬಾರಯ್ಯ 7 ರಾಮನಹುದು ಗುರು ಕಾಮ ನೀ ಪೂರಿತ ಸಾಮಗಾಯನ ಪ್ರಿಯ ಬಾರಯ್ಯ 8 ಕೃಷ್ಣನಹುದೊ ಗುರುವಿಷ್ಣು ಪರಮಾತ್ಮನೆ ದೃಷ್ಟ ಮೂರುತಿ ನೀನು ಬಾರಯ್ಯ 9 ಬೌದ್ಧನಹುದು ಗುರು ವೇದಾಂತಮಹಿಮನೆ ಸಿದ್ಧಶಿಖಾಮಣಿ ಬಾರಯ್ಯ 10 ಕಲಿಕ್ಯವತಾರನಹುದು ಮೂಢನಾತ್ಮನೆ ಬಾಲಮುಕಂದ ನೀ ಬಾರಯ್ಯ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರಯ್ಯ ಬಾರಯ್ಯ ಭಕ್ತವತ್ಸಲ ಹರಿ ಶ್ರೀಕೃಷ್ಣ ಪ ಭಕ್ತರು ಬಂದು ದ್ವಾರದಿ ನಿಂದು ಭಕ್ತಿಲಿ ಹಾಡುತ ಪಾಡುತಲಿರುವರು ಮುಕ್ತಿದಾತ ನೀನಲ್ಲದೆ ಸರ್ವ- ಶಕ್ತರಿನ್ಯಾರಿಹರೈ ಎನ್ನುತ ಪೊಗಳ್ವರು 1 ತಾಳಮೇಳದವರೆಲ್ಲರು ನಿನ್ನಯ ಊಳಿಗ ಮಾಡಬೇಕೆನುತಲಿ ಬಂದು ವೇಳೆ ವೇಳೆಗೆ ತಮ್ಮ ಸೇವೆಯ ಸಲಿಸುತ ಭಾಳ ಸಂಭ್ರಮದಿಂದ ಹಾರೈಪರೊ ಹರಿ 2 ತುಂಬುರು ನಾರದರ್ವೀಣೆಯ ನುಡಿಸಲು ರಂಭಾದ್ಯಪ್ಸರ ಸ್ತ್ರೀಯರು ನರ್ತಿಸೆ ವಿಶ್ವ ಕು- ಟುಂಬಿಯೆ ಬಾ ಬಾರೆನ್ನುತ ಸ್ತುತಿಪರು3 ಅಂಬರದಲಿ ದೇವತೆಗಳೆಲ್ಲರು ನೆರೆದು ತುಂಬಿ ಪುಷ್ಪವೃಷ್ಟಿಗಳನೆ ಮಾಡುತ ಕುಸುಮ ಮಳೆ ಗಂಭೀರದಿ ಸುರಿಸುತ ಪ್ರಾರ್ಥಿಸುವರು 4 ಅತ್ರಿ ವಸಿಷ್ಠ ಗೌತಮ ಮೊದಲಾಗಿ ರಾತ್ರಿಹಗಲು ಎಡೆಬಿಡದಲೆ ಸ್ತುತಿಸುತ ವೃತ್ರಾರಿಯ ಸುತನಿಗೆ ಸಾರಥಿಯೆ ವಿ- ಚಿತ್ರ ವ್ಯಾಪಾರಿ ಶ್ರೀಹರಿ ಎಂದು ಪೊಗಳ್ವರು 5 ಅಣುಮಹದ್ರೂಪನೆ ಘನಮಹಿಮನೆ ನಿನ್ನ ಮಣಿದು ಬೇಡಿ ಕೈಮುಗಿಯುತ ಸ್ತುತಿಪರು ಪ್ರಣವ ಪ್ರತಿಪಾದ್ಯನೆ ನಿನ್ನ ಗುಣಗಳ ಎಣಿಸಲಸಾಧ್ಯವೆನುತ ಕೊಂಡಾಡ್ವರು 6 ನವನವ ರೂಪದಿ ನಲಿಯುವ ದೇವನೆ ನವವಿಧ ಭಕುತರು ನಮಿಸುತ ಕರೆವರು ಭುವನ ಮೋಹನ ಸುಂದರಮೂರ್ತಿಯೆ ಎಂದು ಕವಿಗಳು ಪೊಗಳುತ ಕುಣಿಯುತಲಿರುವರು 7 ಎಡಬಲದಲಿ ಶ್ರೀ ಭೂದೇವಿಯರಿರೆ ಬಿಡದೆ ಛತ್ರಚಾಮರಗಳಿಂದೊಪ್ಪುತ ತಡಮಾಡದೆ ಬಾ ಮಡದಿಯರ ಸಹಿತದಿ ದಡ ದಡ ಬಾರೆಂದು ಬಡ ಬಡ ಕರೆವರು 8 ವಿಶ್ವರೂಪಕ ವಿಶ್ವನಾಮಕ ವಿಶ್ವತೋಮುಖ ವಿಶ್ವನಾಟಕ ವಿಶ್ವವ್ಯಾಪಕ ವಿಶ್ವಾಧಾರಕ ವಿಶ್ವ ಕುಟುಂಬಿಯೆ ವಿಶ್ವಾಸದಿ ಬಾ 9 ವಿರೋಧಿಕೃತು ಸಂವತ್ಸರ ಬರುತಿರೆ ಪರೋಪಕಾರವ ಮಾಡುತ ಸುಜನರು ವಿರೋಧಿಗಳ ದೂರಿಡುತಲಿ ಶ್ರೀ ಹರಿ ಸರೋಜದಳ ನೇತ್ರನÀ ಸ್ತುತಿಸುವರು 10 ಕಮಲಾಕ್ಷಿಯ ಒಡಗೂಡುತ ಬಾ ಬಾ ಕಮಲಾಸನ ಜನಕನೆ ಹರಿ ಬಾ ಬಾ ಕಮಲನಾಭ ವಿಠ್ಠಲ ಬೇಗ ಬಾರೆಂದು ಸುಮನಸ ವಂದ್ಯನ ಸ್ಮರಿಸುತ ಕರೆವರು11
--------------
ನಿಡಗುರುಕಿ ಜೀವೂಬಾಯಿ
ಬಾರಯ್ಯ ಬೇಗ ಶ್ರೀ ಶ್ರೀನಿವಾಸ ಭಕ್ತರ ನುಡಿಗೆ ಪ. ಬಾರೋ ನಿನ್ನ ಮುಖ ತೋರೊ ತ್ವರಿತದಲಿ ಸಾರಸಾಕ್ಷ ನಿನ್ನ ಸಾರಿದೆನಯ್ಯ ಅ.ಪ. ವೈಕುಂಠದಿಂದ ಬಂದೆಯೊ ಗಿರಿಗೆ | ಲಕ್ಷ್ಮಿಯು ತಾ ಪೋಗೆ ಬೇಕಾಗಲಿಲ್ಲವೊ ಅರಮನೆ ನಿನಗೆ | ಮುನಿಗಳ ವರದನಿಗೆ ಬೇಕಾದ್ವೈಭವ ನೀ ಕೈಕೊಳುತ ಸಾಕುತಲಿಪ್ಪೆಯೊ ನೀ ಕರೆದವರನು 1 ಶ್ರೀಸ್ವಾಮಿ ಪುಷ್ಕರಣಿಯ ದಡದಲ್ಲಿ | ನೀ ವಾಸಿಸುತಲ್ಲಿ ಸೇವಾದಿಗಳನು ಬಗೆಬಗೆ ಕೊಳ್ಳುತಲಿ | ಸುಜನರ ಪೊರೆಯುತಲಿ ಈ ವಿಧದಿಂದಲಿ ಭಾವಜನಯ್ಯನೆ ಪಾವಕಸಖನೊಳು ಪಾವನನಾಗಿಹೆ 2 ವರ್ಣಿಸಲರಿಯೆ ನಿನ್ನನು ದೊರೆಯೆ | ಲೋಕದಿ ಅಚ್ಚರಿಯೆ ಘನ್ನ ಸುಮಹಿಮನೆ ಬೇಡುವದರಿಯೆ | ನೀನೆ ಕೈಪಿಡಿಯೆ ಮುನ್ನ ಮಾಡಿದ ಘನ್ನ ಪಾಪಗಳು ಇನ್ನಿರಲಾರವೊ ಮನ್ನಿಸಿ ಪೊರೆಯೊ 3 ಜಗಸೃಷ್ಟಿಯಿಂದ ಜೀವರ ಮಾಳ್ಪೆ | ಜೀವರ ಸೃಷ್ಟಿಪೆ ತ್ರಿಗುಣಾದಿಗಳಿಂದ ತಿರುಗಿಸುತಿರ್ಪೆ | ಕರ್ಮದ ತೆರೆಮಾಳ್ಪೆ ವಿಗಡ ದೇಹದೊಳು ಬಗೆ ಬಗೆ ದೇವರು ತಗಲಿ ನಿನ್ನ ಪದನಗಧರ ಕಾಣರೊ 4 ಕಣ್ಣ ಬಿಟ್ಟಿರುವೆ ಬೆನ್ನೊಳೆ ಬೆಟ್ಟವೆ | ಮಣ್ಣ ತಿನುತಿರುವೆ ಚಿಣ್ಣ ನಿನಗೊಲಿದು ಚಿಣ್ಣನಾಗ್ವೆ | ಬೆನ್ನೊಳು ಪರಶುವೆ ಹಣ್ಣು ಕೊಟ್ಟವಳಿಗೆ ಒಲಿದು ಗೋಪಿಯರ ಕಾಯ್ದು ಬಣ್ಣಗೆಟ್ಟು ಹಯವನ್ನೇರಿದೆ5 ಆಕಾಶರಾಯನ ಮಗಳ ತಂದೆ | ಈ ಗಿರಿಯಲಿ ನೀನೆ ಸಾಕುವ ಬಿರುದು ನಿನ್ನದೆಂದೆ | ನೀ ಕಾಯಲೆಬೇಕೆಂದೆ ನೂಕಿ ಎನ್ನ ಭವತಾಪನೀಗಲೆ ಶ್ರೀಕಳತ್ರ ನಿನ್ನ ಭಕ್ತರೊಳಿಡಿಸೊ 6 ಅಪಾರಮಹಿಮ ಅದ್ಭುತಚರಿತ | ಶೇಷಾದ್ರಿಯೊಳ್ ನಿರುತ ವ್ಯಾಪಾರ ಮಾಡುತ ಗುಪ್ತದೊಳಿರುತ | ನಿಜ ಭಕ್ತಗೆ ಕಾಣುತ್ತ ಪರಿ ಅದ್ಭುತ ಚರಿತೆಯ ತೋರುವ ಗೋಪಾಲಕೃಷ್ಣ ವಿಠ್ಠಲನೆ ನೀ ಕಾಯೊ 7
--------------
ಅಂಬಾಬಾಯಿ
ಬಾರಯ್ಯ ಭಾಗಣ್ಣನೇ | ಯನ್ನಯ ಮನಕೆ ಬಾರಯ್ಯ ಭಾಗಣ್ಣನೆಕರೆ ಕರೆ ಮನದ ವಿಷಾದವ ಕಳೆದು ಶ್ರೀಹರಿಯಲಿ ಮನವಿತ್ತು ಕರುಣಿಪುದಯ್ಯ ಅ.ಪ. ಗೋಪಾಲ ವಿಠಲನ ಭಜಕನೇ | ಹೇ ಉಮಾಪತಿಸುತ ಬಲುತ್ಯಾಗ ಶೀಲನೆ |ಶಾಪದಿ ನೊಂದ ಶ್ರೀನಿವಾಸಪ್ಪಗೆಆಪಾರಾಯುಷ್ಯವಿತ್ತು ಸಲಹೀದ 1 ತಡವು ಇನ್ಯಾತಕಯ್ಯಾ | ಗುರುಮಡದಿಯ ಸಲಹಿದ ಹರಿಯಾ |ಒಡಲೊಳು ತೋರಿಸಿ ಸಲಹೆಂದು ಬೇಡುವೆಕಡು ದಯಾನಿಧೆ ಅಡಿಗೆರುಗುವೆನಯ್ಯಾ 2 ಸಕಲ ಶಾಸ್ತ್ರದಿ ಬಲು ನಿಪುಣಾ | ಮಂತ್ರಸಕಲವ ಚಕ್ರದಿ ರಚಿಸಿದ ಧಿಷಣಾ |ಲಕುಮಿಯರಸ ಗುರು ಗೋವಿಂದ ವಿಠಲನೆಸಕಲಕ್ಕು ದೇವನೆಂದರುಹಿದ ಗುರುವೇ 3
--------------
ಗುರುಗೋವಿಂದವಿಠಲರು
ಬಾರಯ್ಯ ಶ್ರೀನಿವಾಸ ಭಕ್ತರ ಬಳಿಗೆ ಪ ತೋರಯ್ಯ ನಿನ್ನ ದಯ ತೋಯಜಾಂಬಕನೆ ಅ.ಪ. ದುರುಳರ ತರಿವಂಥ ವರಚಕ್ರಧಾರಿ ಪರಮಾತ್ಮ ಪರಬೊಮ್ಮ ಪರರಿಗುಪಕಾರಿ1 ಅರಣ್ಯದಿ ಮೊರೆಯಿಟ್ಟು ಕರಿರಾಜಗೊಲಿದಿ ತರಳ ಪ್ರಹ್ಲಾದನ್ನ ವೈರಿಯ ಮುರದಿ 2 ವರ ಷೋಡಶ ಗಿರಿಯಲ್ಲಿ ನಿರುತ ನೀನಿರುವಿ ಹರಿದಾಸರು ಕರೆದರೆ ಎಲ್ಲಿದ್ದರೆ ಬರುವಿ3 ಅನಂತನಾಮನೆ ನಿನ್ನ ಅನಂತ ಸದ್ಗುಣವ ನೆನೆವರಿಗೊಲಿವಂಥ ಪವಮಾನನೀಶಾ 4 ಅಜಭವಾಧಿಪ ನೀನು ವಿಜಯಸಾರಥಿಯೇ ತ್ರಿಜಗವಂದಿತ ಈಶ ವಿಜಯವಿಠ್ಠಲನೇ 5
--------------
ವಿಜಯದಾಸ
ಬಾರಯ್ಯ ಸ್ವಾಮಿ ಬಾರಯ್ಯ ಪ ಬಾರಯ್ಯ ಮುಖವನ್ನು ತೋರಯ್ಯ ತವಪಾದ ವಾರಿಜನಂಬಿದೆ ಮಾರಜನಕ ಬೇಗ ಅ.ಪ ಎಷ್ಟಂತ ಬಳಲಲಿ ನಾನು ಸಂಸಾರ ಕಷ್ಟದ ಕಾಡಿನೊಳಿನ್ನು ಧ್ವಂಸಾಗಿ ಭ್ರಷ್ಟತನದಿ ಬಾಳುವೆನು ಕಂಸಾರಿ ಇಷ್ಟುದಯವು ಬರದೇನು ಆಹ ಶಿಷ್ಟಜನುಮವೆಂದು ಅಟ್ಟಿ ಎನ್ನನು ಇಂಥ ಕೆಟ್ಟ ಬವಣೆಗೆ ಬಲಿಗೊಟ್ಟು ಬಿಡುವರೆ ಈಶ 1 ಜನನಿಜಠರದಲಿ ಎನ್ನ ಏನೆಂ ದೆನುತ ನೂಕಿದಿ ಪೇಳು ಮುನ್ನ ಸಾನಂದನುಪಮನು ತವಚರಣ ಆನಂದನುಕೂಲವಾದಂದಿಲ್ಲೇನ ಆಹ ಅನುಚಿತ್ತವೇನಯ್ಯ ದಿನವು ಪೋಯಿತು ಅರ್ಧ ಮನಕೆತರದಲಿಹಿ ಜನಕನೆ ಕರುಣದಿ 2 ಭಕ್ತವತ್ಸಲನೆಂಬ ಬಿರುದು ಮಾಜ ದ್ಹೊತ್ತು ನಿಖಿಲ ನೀನೆ ಬೆರೆದು ತ್ರಿಜ ಗೆತ್ತಿ ಆಳುವಿ ಮನವರಿದು ನೈಜ ದಿತ್ತು ಪೊರೆವಿ ಭಯತರಿದು ಆಹ ಕರ್ತನೆ ತವಪಾದ ಮರ್ತಿರಲಾರಿನ್ನು ತುರ್ತು ದಯವಾಗೆನ್ನೊಳರ್ತಿಯಿಂ ಶ್ರೀರಾಮ 3
--------------
ರಾಮದಾಸರು