ಒಟ್ಟು 17313 ಕಡೆಗಳಲ್ಲಿ , 134 ದಾಸರು , 7747 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ದಾಸನು ನಾನು ಎಂತಾಹೆನಯ್ಯಅನ್ನಂತ ಅಪರಾಧಕಾಕರಾದವನು ಪ. ಅರುಣೋದಯವ ಜರಿದು ಆಹ್ನಿಕ ಕರ್ಮವ ತೊರೆದುಪೊರೆವ ನಿನ್ನಡಿಯ ಮರೆದುದುರುಳರಿಗೆ ಬಾಯ್ದೆರೆದು ದೈನ್ಯದಲಿ ಪಲ್ಗಿರಿದುಮರಿಯಾದೆಗೆಟ್ಟು ತಿರಿದುಇರುಳು ಹಗಲೆನ್ನದೆ ಈ ವಿಧದಿ ಹೊಟ್ಟೆಯಹೊರೆದು ಇದು ಪುಣ್ಯ ಇದು ಪಾಪವೆಂದರಿಯದವ 1 ಜಟ್ಟಿಗಳ ಮನೆಯ ನಾಯಂತೆ ಒಳ್ಳೆಬಟ್ಟೆಗಳತೊಟ್ಟವರ ಹಿಂದೆ ತಿರುಗಿಅಟ್ಟುಂಡು ಬಾಳಿಬದುಕಿದ ತಮ್ಮ ಹಿರಿಯರುಕೆಟ್ಟು ಮುರಿದುದನು ಪೇಳಿಉಟ್ಟ ಅರಿವೆಯ[ಕೋರಿ] ಹೊಟ್ಟೆ ಬಾಯನೆ ತೋರಿಕೊಟ್ಟುದಕೆÉ ತೃಪ್ತನಾಗದೆ ಅವರ ಬಯ್ವವನು 2 ವೃತ್ತಿ ಅಲ್ಲದ ಶೂದ್ರ ವೃತ್ತಿಗಳನನುಸರಿಸಿ ಅ-ಕೃತ್ಯ ಶತಗಳನು ಮಾಡಿಸತ್ಯ ಶೌಚಂಗಳ ಬಿಟ್ಟು ಶ್ರವಣ ಮನನಾದಿ ಪ್ರ-ಸಕ್ತಿಗಳ ಹೋಗಲಾಡಿಉತ್ತಮರು ತಾಯಿತಂದೆ ಗುರುಹಿರಿಯರುಗಳಅರ್ಥಗಳನಪಹರಿಸಿ ಅವರ ನಿಂದಿಸುವನು 3 ಪರ್ವ ಉಪರಾಗ ದ್ವಾದಶಿ ಅಯನಗಳಲ್ಲಿಸರ್ವವಿಹಿತಗಳ ಮೀರಿಉರ್ವಿಯೊಳು ಉಳ್ಳ ಯೋಗ್ಯರನೆಲ್ಲ ಹಳಿದೆನ್ನನಿರ್ವಾಹಗಳನೆ ತೋರಿದುರ್ವಿಚಾರದಿ ಸ್ವಲ್ಪಧನಕಾಗಿ ಎನ್ನೊಳಿಹಪೂರ್ವಸಂಚಿತಮಂತ್ರ ತುಚ್ಛರಿಗೆ ಮಾರಿದವ 4 ಛಲ ಚಾಡಿ ಡಂಭ ಮಿಥ್ಯಾಜ್ಞಾನ ದುರ್ವಿಷಯಕುಲಸತಿಯ ಕೂಡೆ ಕಲಹಕಳವು ಕಠಿಣೋಕ್ತಿ ದುಷ್ಟಾನ್ನಭೋಜನ ಮದುವೆ-ಗಳ ಮುರಿವ ಪಾಪಚಿಂತೆಹಳಿವ ಹರಿವಾಸರ ವ್ರತಭಂಗದಿಂದ ನಾನಾಗಿಸುಲಭ ಹಯವದನನ್ನ ಮರೆತ್ಹಾಳುಹರಟೆಯವ 5
--------------
ವಾದಿರಾಜ
ನಿನ್ನ ದಾಸರ ದಾಸನೆನಿಸೂ ಶ್ರೀಕೃಷ್ಣ || ಪ ನಿನ್ನ ಕೃಪೆಯೊಳು ಜನ್ಮ ಸುಪವಿತ್ರವಹುದೂ 1 ನಿನ್ನ ಕೃಪೆಯಿರಲು ಸಂಸಾರ ಸುಖವಹುದೂ 2 ನಿನ್ನ ಕೃಪೆಯಿರಲು ಸತ್ಕೀರ್ತಿ ದೊರಕುವುದೂ 3 ನಿನ್ನ ಕೃಪೆಯೊಳಗಾಯುರಾರೋಗ್ಯ ಸಿದ್ಧಿಪುದು | ನಿನ್ನ ಕೃಪೆಯೊಳು ಕಾಮ್ಯದಿಂ ಮೋಕ್ಷವಹುದೂ 4 ಭವ ನಿನ್ನ ಕೃಪೆಯೊಳು ಸದಾನಂದ ಸುಖವಹುದೂ 5
--------------
ಸದಾನಂದರು
ನಿನ್ನ ದಾಸಾನುದಾಸನು ನಾ ಸುಪ್ರ- ಸನ್ನಾತ್ಮ ನಿಗಮಸನ್ನುತನೆ ಪ. ಎನ್ನನಂತಪರಾಧಗಳ ಕ್ಷಮಿಸು ಪೂರ್ಣೇಂದುವಕ್ತ್ರ ಪನ್ನಗಶಯನಅ.ಪ. ಸಂತಾಪಘ್ನಾನಂತಮಹಿಮ ಜಗ- ದಂತರ್ಯಾಮಿ ಪರಂತಪನೆ ಮಂತ್ರಾತ್ಮ ರಮಾಕಾಂತ ಕಲಿಮಲ- ಧ್ವಾಂತ ಧ್ವಂಸನಾಚಿಂತ್ಯ ಸ್ವತಂತ್ರನೆ 1 ಬಟ್ಟೆಯೊಳ್ ಕೆಂಡವ ಕಟ್ಟಿ ಸ್ವಗೃಹದಿ ಬ- ಚ್ಚಿಟ್ಟಂತೆ ಕಾರ್ಯ ದುಷ್ಟರದು ಪರಮೇಷ್ಠಿ ಜನಕ ನಿನ್ನ ಭ್ರಷ್ಟರಾಚರಣೆಗೆಷ್ಟೆಂಬುವದ್ಯೆ 2 ಏಳೆರಡು ಲೋಕಪಾಲಕರು ಸರ್ವ ರೂಳಿಗದ ಜನರು ಮೂಲೇಶ ಶ್ರೀಲಕ್ಷ್ಮೀನಾರಾಯಣ ನಿರ್ಗುಣ ಕಾಲನಿಯಾಮಕ ದೈತ್ಯಾಂತಕ ಜಯ3
--------------
ತುಪಾಕಿ ವೆಂಕಟರಮಣಾಚಾರ್ಯ
ನಿನ್ನ ಧ್ಯಾನವ ಕೊಡು ಎನ್ನ ಧನ್ಯನ ಮಾಡು ಚೆನ್ನ ಶ್ರೀ ಶೇಷಾದ್ರಿ ಸನ್ನಿವಾಸಾ ಪ ಭೀಷಣವಾಗಿಹ ಭವಸಾಗರದೊಳು ನಾಶಗೊಳಿಪುವರು ನೆಗಳಿಗಳು ಬೀಸುವವನುದಿನ ಮೂರು ಘಾಳಿಗಳು ಈ ಸಂಖ್ಹ್ಯಾಂಗ ಕೈಪಿಡಿಯೋ ಕೃಪಾಳು1 ಭವವೆಂಬ ಕಿಚ್ಚನ್ನ ಸಹಿಸುವ ಪರಿಯೇನೋ ಯುವತೀ ವಿಷಯ ಸುಖಲುಬ್ಧನಾಗಿಹೆನೋ ಹವ್ಯವಾಹನನೆನ್ನನಾಡು ಮಾಡಿದೆಯೇನೋ ಪವನನೈಯಾತ್ವತ್ಪದಾಪದ್ಮ ಭೃಂಗನೋ2 ಪರಿಪರಿ ದುರಿತಂಗಳಿಂದ ಮನದೆಡೆಯೊಳು ಹರಿಸೇವಾರ್ಚನೆಗಳಿಗೆ ಅನುವಿಲ್ಲವು ಪರಮ ಭಾಗವತರ ಜರೆವ ಖಳ ಜನರಾ ನೆರೆಯಿರದಂತೆ ಮಾಡೊ ನರಸಿಂಹವಿಠ್ಠಲಾ 3
--------------
ನರಸಿಂಹವಿಠಲರು
ನಿನ್ನ ನಂಬಿದ ನರಗೆ ಅನ್ಯರಾಶ್ರಯವೇಕೋಚನ್ನ ಗುರು ವಿಜಯರಾಯ ||ಬನ್ನ ಬಡುವೆನೊ ಜೀಯ ಘನ್ನ ಭವದೊಳು ಶಿಲ್ಕಿಇನ್ನು ಕಡೆಗ್ಹಾಕೋ ಬ್ಯಾಗ ಈಗ ಪ ಸುರನದಿ ನರನ ಸುತ್ತ ಪರಿಯಲು ನೀರಿಗಾರ್ತನಾಗುವುದುಚಿತವೆ ||ಮತ್ತೆ ಸುರಧೇನುವಿನ ಹತ್ತಿಲಿರುವ ಯಿನ್ನುಹಸ್ತು ಬಳಲುವುದುಚಿತವೆ ||ನಿತ್ಯ ಸುಖದಾರಿ ವಿಚಿತ್ರ ನೀ ತೋರೆ ನಾಹಸ್ತ ನರಗೊಡ್ಡುವುದು ಯತ್ನ ಉಚಿತವೆ ಗುರುವೆ 1 ಕ್ಷೀರವಾರಿಧಿ ಸೇರಿ ನೀರ ಮಜ್ಜಿಗೆಗಾಗಿಚೀರಿ ವರಲುವುದುಚಿತವೆ ||ನೂರಾರು ವಸನದ ಹೇರು ಮನೆಯೊಳಗಿರಲುಕೋರಿ ವುಡುವುದು ವುಚಿತವೆ ||*ವಾರವಾರಕೆ ಹರಿಯ ತೋರುವರನ ಬಿಟ್ಟುಕ್ರೂರ ವನ ಸೇವಿಸುವ ದಾರಿಗುಚಿತವೊ ಗುರುವೆ 2 ಸಾಕಿ ಸಲಹೆಂದು ಅತಿ ವ್ಯಾಕುಲದಿ ಬಂದವನನೂಕಿ ಬಿಡುವುದುಚಿತವೆ ||ಬೇಕಾದ ವರವು ನೀ ಲೋಕರಿಗೆ ಕೊಡುವೆನ್ನಕಾಕುಗೊಳಿಸವುದುಚಿತವೆ ||ಏಕ ಬುದ್ಧಿಯಿನಿತ್ತು ಜೋಕೆ ಮಾಡೆ ಮನ-ನೇಕ ಮಾಡುವದುಚಿತವೆ ||ಶ್ರೀಕಾಂತ ವೇಣುಗೋಪಾಲ ವಿಠಲ ನಿನ್ನವಾಕು ಮನ್ನಿಸಲು ನಾ ಕೆಡುವದುಚಿತವೆ ಗುರುವೆ 3
--------------
ವೇಣುಗೋಪಾಲದಾಸರು
ನಿನ್ನ ನಂಬಿದವರಿಗೆ ಇನ್ನು ಕೊರತೆಗಳುಂಟೆ ಪನ್ನಗಾದ್ರಿನಿವಾಸ ಶ್ರೀ ವೆಂಕಟೇಶ ಪ. ಬನ್ನ ಬಡಿಸದೆ ಎನ್ನ ಧ್ಯಾನವನ್ನು ಮರೆವರು ಭಕ್ತರಂದು ಬನ್ನ ಬಿಡಿಸಿ ಪೊರೆವೆ ಕರುಣದಿ ಅ.ಪ. ಅಧಿಕ ಸಂಸಾರದಿ ಪದೆಪದೆಗೆ ತೊಡರುಗಳ ಬದಿಗನಾಗಿದ್ದವರಿಗೆ ಕೊಟ್ಟು ಸದಮಲಾನಂದ ಪರೀಕ್ಷಿಸುವೆ ತವಕದಿ ಚದುರಿಸುತ ಮನವನ್ನು ಅದುಭುತನೆ ನಸುನಗುತ ನೀನೋಡುತ್ತ ಹೆದರಿ ಬೆದರಿ ನಿನ್ನ ಧ್ಯಾನಕ್ಕೊದಗಲಿ ಮನವೆಂಬೆಯಲ್ಲದೆ ಮಧುರವಾಣಿಯ ತೋರಿ ಸಲಹಲು ವದಗಿ ಕಾಯುವೆ ಭಕ್ತರನ್ನು (ಚದುರ ನಿನಗೆಣೆಗಾಣೆ ಜಗದೊಳು) 1 ಜಾಣರೊಳತಿ ಜಾಣತನ ತೋರುತ್ತ ಕಾಣಿಸಿ ಕಾಣದಂತಿರುತ ಭಕ್ತರೊಳು ಗಾಣಕೆ ಸಿಲ್ಕಿದ ಎಳ್ಳು ಸಚ್ಛದೆಣ್ಣೆ ಮಾಣದೆ ಬರುವ ತೆರ ತೋರುವೆ ಜನಕೆ ಕಾಣದಿಹ ಕಾಮಕ್ರೋಧದ್ಹಿಂಡಿಯ ಮಾಣದೆ ಬೇರ್ಪಡಿಪೆಯಲ್ಲದೆ ಇದು ಕಾಣ್ವರು ನಿನ್ನ ಚರಣದಂಘ್ರಿಯ ಕಾಣುತಲೆ ಸ್ತುತಿಮಾಡಿ ಹಿಗ್ಗುತಲಿಹರು 2 ದಿಟ್ಟಮೂರುತಿ ಕೇಳೊ ಕೊಟ್ಟರೊಳ್ಳಿತು ಕಷ್ಟ ಉತ್ಕøಷ್ಟವಾಗಲಿ ಹರಿಯೆ ಎನ್ನ ದೊರೆಯೆ ಕಟ್ಟಕಡೆ ನಿನ ಧ್ಯಾನ ಕೊಟ್ಟು ಕಾಯುವ ಭಾರ ಘಟ್ಟಿ ಕಂಕಣ ಕಟ್ಟಿ ನಿಂತಿಹೆ ಶ್ರೀ ಶ್ರೀನಿವಾಸ ಎನ್ನ ದುಷ್ಟತನವೆಲ್ಲ ಕುಟ್ಟಿ ಕೆಡಹುವೆ ಕಟ್ಟಕಡೆಗೆ ನಿನ್ನ ಪಾದಾಂಗುಷ್ಠ ಸೇರಲಿಯೆಂದಾ ಭಕ್ತರ ಬೆಟ್ಟದೊಡೆಯನೆ ಸಲಹುತಿರುವೆ ಉತ್ಕøಷ್ಟ ಮೂರುತಿ ಭಕ್ತರಿಷ್ಟದಾಯಕ 3
--------------
ಸರಸ್ವತಿ ಬಾಯಿ
ನಿನ್ನ ನಂಬಿದೆ ಶಾರದೇ | ಭಕ್ತಿಗೆ ಮತಿ- | ಯನ್ನು ಪಾಲಿಸ ಬಾರದೇ ಪ ನಿನ್ನ ನಂಬಿದೆ ನಾನು | ಎನ್ನ ಜಿಹ್ವೆಯೊಳ್ ನೀನು | ಖಿನ್ನತ್ವಗೊಳ್ಳದೆ | ಸನ್ನುತೆ ನೆಲಸವ್ವ ಅ.ಪ ಜಡಮತಿಯನು ತ್ಯಜಿಸಿ | ನೀ ದಯದಿಂದ | ದೃಢಮತಿಯನು ಪಾಲಿಸಿ || ಕಡಲ ಶಯನ ಸೊಸೆ | ಪೊಡವಿಗಧಿಕವಾದ | ಮೃಡನ ಸ್ಮರಿಪ ಜ್ಞಾನ | ತಡೆಯದೆ ಕರುಣಿಸು 1 ತ್ವತ್ಸಂಗವನು ಪಾಲಿಸಿ | ನೀ ದಯದಿಂದ | ದುಸ್ಸಂಗವನು ಛೇದಿಸಿ || ಸತ್ಸಂಗವೆನಗಿತ್ತು | ಮತ್ಸಂಗ ನೀನಾಂತು | ತ್ವತ್ಸುಗುಣ ನುಡಿಗಳ | ಹೃತ್ಸರೋಜದೊಳಿರಿಸೆ 2 ಸನುಮತ ಪಥಗಾಣಿಸಿ | ಕಏತೆಗಳ | ಮನದಲ್ಲಿ ಸ್ಥಿರಗೊಳಿಸಿ || ಜನನ ಮರಣವೆಂಬ | (ವನ) ದೊಳಗೆನ್ನನು | ವಿನಯದಿ (ಂದಲಿ) ಪಾರ | ಗಾಣಿಸೆ ಶಾರದೆ 3 ದಾಸನೆಂದೆನಿಸೆಯೆನ್ನ | ಕೀತಿ9ಗಹಿತ | ದೋಷವ ತ್ಯಜಿಸೆ ಮುನ್ನ || ಕ್ಲೇಶಗೈವರ ಮನ | ಲೇಸಿನೊಳ್ ವಂಚಿಸಿ | ವಾಸವ ಕರುಣಿಸೆ 4 ಚಿನುಮಯಾತ್ಮಕನಿರುವ | ವೈಕುಂಠದ | ಘನತರ (ಸತ್) ಪದವಿಯ || ಪತಿ | ಪಿತ ಶ್ರೀನಿವಾಸನ | (ಅನುಯಾಯಿ) ಸೇವೆಗ | ಳೆನಗಿತ್ತು ಪಾಲಿಸೆ 5
--------------
ಸದಾನಂದರು
ನಿನ್ನ ನಂಬಿದೆನೊ ಬ್ರಹ್ಮಣ್ಯತೀರ್ಥಾರ್ಯಾ ಸನ್ನುತಚರಣಪಾವನ ಸುಚರ್ಯಾ ಪ ಘನ್ನ ಭವದ ಭಯವನ್ನು ಕಳೆದು ಯತಿ ರನ್ನ ಎನ್ನನು ಧನ್ಯನ ಮಾಡೋ ಅ.ಪ. ಪುರುಷೋತ್ತಮ ಸುತೀರ್ಥರ ಪ್ರಿಯ ಸುಕುಮಾರ ದುರಿತೌಘಜೀಮೂತ ಚಂಡ ಸಮೀರ ಸುರುಚಿರ ತುಳಸಿ ಪಂಕಜಮಣಿಹಾರ ಧರಿಸಿ ಮೆರೆವೊ ದಿನಕರನವತಾರ ಕರುಣದಿ ತವ ಶ್ರೀಕರಚರಣಾಂಬುಜ ದರುಶನವನು ಕೊಡು ಗುಣಗಣನಿಧಿಯೇ 1 ಸೇವಕಜನರಿಗೆ ದೇವತರುವೆನಿಪ ಶ್ರೀವಿಠಲನಪಾದತಾವರೆ ಮಧುಪ ಕೋವಿದ ಜನರು ಸಂಭಾವಿಸಿ ಸ್ತುತಿಪ ಪಾವನ್ನ ಪಾದಾರ್ಚಿತ ಭಾವಜ ಮುನಿಪ ಪಾವನ ಸುಮತರ ಜೀವರ ಚಂದ್ರನೆ ಪಾವನ ಮತಿ ಕೊಡು ನೀ ಒಲಿದೆನಗೆ 2 ಪರ ತತ್ವಜ್ಞಾನ ವರವ ಪಾಲಿಸು ಸರ್ವವಿದ್ಯಾಪ್ರವೀಣ ನರಸಿಂಹವಿಠಲ ಶ್ರೀಹರಿ ಸನ್ನಿಧಾನ ಕರುಣಾಪಾತ್ರನೆ ದಿವ್ಯವರಪೂರ್ಣಜ್ಞಾನ ಹರಿಗುರುಭಜನ ತ್ವತ್ಪದ ವ್ಯಾಸಾರ್ಯರ ಗುರುವೆಂದೆನಿಸಿದೆ ಧರೆಯೊಳು ಮೆರೆದೆ 3
--------------
ನರಸಿಂಹವಿಠಲರು
ನಿನ್ನ ನಾ ಬಿಡುವನಲ್ಲಾ ಗೋಪಾಲಾ ನಿನ್ನ ಬಿಡುವನಲ್ಲ ಎನ್ನ ರಕ್ಷಿಸದಿರೆ ಪನ್ನಗಾದ್ರಿಯವಾಸ ಪರಮಪುರುಷರಂಗಾ ಪ ನಾಗಾರಿ ರೂಪನಾದ ಪರಮಾನಂದ ಭೋಗಿಶಯನ ವಿನೋದ ಭಕ್ತವತ್ಸಲ ಸಾಗರನಳಿಯ ಭೂಸುರಧೇನು ಪೋಷಕ ಭಾಗವತರ ಪ್ರಿಯಾ ಯೋಗಿಗಳರಸ1 ಜಲಜಾಕ್ಷ ನಳಿನನಾಭ ಜಾನಕೀರಮಣ ಜಲನಿಧಿಶಯನ ದೇವಾ ಜಗದೋದ್ಧಾರ ಜಲಜಬಾಂಧವ ಕುಲ ಶ್ರೇಷ್ಠಾದಿ ಮೂರುತಿ ಒಲಿದೆನ್ನ ದುಷ್ಕರ್ಮನಳಿದು ಪೋಷಿಸದಿರೆ 2 ಶಂಬರಾರಿಯ ಪಿತನೆ ಜಗನ್ನುತ ಕುಂಭಿನೀಧವನಾದನೇ ಗೋವಿಂದ ಶ್ರೀ ಕಂಬುಕಂಧರ ಕೃಷ್ಣಾ ಅಂಬುಧಿ ಬಂಧಿಸಿ ಅಂಬುಜಾಕ್ಷಿಯ ತಂದ ಹರಿ 'ಹೆನ್ನ ವಿಠ್ಠಲಾ’ 3
--------------
ಹೆನ್ನೆರಂಗದಾಸರು
ನಿನ್ನ ನಾ ಮರೆತರೂ ಎನ್ನ ಕೈ ಬಿಡದಿರು ಕರುಣಿಚನ್ನಕೇಶವ ಶ್ರೀ ವೆಂಕಟಾದ್ರಿನಿಲಯ ಪ ಎನ್ನ ತಪ್ಪುಗಳ ನಾನು ಮರೆಯಲೆಂತು ಎನ್ನಬೆನ್ನ ನೋಡಿಕೊಳ್ಳಲಹುದೆ ಎನ್ನಿಂದ ಅ ಮಂಜು ಮರೆಯಾಗುವುದು ಮಾರ್ತಾಂಡ ಮೂಡೆಕಂಜಲೋಚನ ನಿನ್ನ ಪದಕಮಲ ಸ್ಮರಣೆರಂಜಿಸಿ ಮನವನು ಪಾರಾಗಿಪುದು ಪಾಪಗಳಅಂಜಿಕೆಯ ಬಿಡಿಸುತ ಅನುಗ್ರಹಿಪ ಕರುಣಿ 1 ದಯೆ ನಿನ್ನದಿರೆ ಭಯ ಎನಗಿಲ್ಲ ಹರಿಮಾಯೆ ಮೋಹಗಳಿಗೆ ಮರುಳಾಗಿಹ ಬೊಂಬೆಜಯವಾಗಿಸಿ ಈ ಜನ್ಮ ಕೃತಾರ್ಥವ ಮಾಡುತೋಯಜಾಕ್ಷ ಶ್ರೀ ನೆಲೆಯಾದಿಕೇಶವರಾಯ2
--------------
ಕನಕದಾಸ
ನಿನ್ನ ನಾನೇನೆಂದೆನೋ ರಾಮೇಶ್ವರನಿನ್ನ ನಾನೇನೆಂದೆನೋ ಸಕಲ ಲೋಕವನ್ನು ಪೊರೆವ ಪಾರ್ವತೀಶನೆಂದೆನಲ್ಲದೆ ಪ ತಾರಕಾಸುರನ ಪುತ್ರರ ಬಾಧೆಯನು ತಾಳಲಾರದೆ ಹರಿಮುಖ್ಯ ನಿರ್ಜರರುಶ್ರೀರುದ್ರ ಸಲಹೆಂದು ಪಾದಕೆ ಮಕುಟವ-ನೂರೆ ಪೊರೆದ ತ್ರಿಪುರಾರಿಯೆಂದೆನಲ್ಲದೆ ವಿಧಿ ಶಿರವ ಕೈ-ಯ್ಯಾರೆ ಕಡಿದನೆಂದೆನೆ ಭಕ್ತವತ್ಸಲವಾರಿಜಭವನುತಿಲೋಲನೆಂದೆನಲ್ಲದೆ 1 ನಾರದಸಹಿತ ಮತ್ಯಾರು ಕಾಣದಂದದಿಓರುಗಲ್ಲರಸಿನ ಮನೆಗೆ ಪೋಗಿತೋರುವ ಭಿತ್ತಿಯ ಕೊರೆದಾತನಿಷ್ಟವಪೂರಿಸಿದನುಪಮಮಹಿಮನೆಂದೆನಲ್ಲದೆಚೋರರ ಗುರುವೆಂದೆನೆ ಪಾರ್ಥಚಾಪದಿಂ-ದೇರುವಡೆದನೆಂದೆನೆ ಬತ್ತಲೆಮದವೇರಿ ಕುಣಿದನೆಂದೆನೆ ಅರ್ಜುನಗೊಲಿದಾರಾಜಿಸುವ ಮಹಾನಟನೆಂದೆನಲ್ಲದೆ2 ಸುರರು ದಾನವರೆಲ್ಲ ನೆರೆದು ವಾದಿಸಿ ಕ್ಷೀರಶರಧಿ ಮಥನವ ವಿರಚಿಸಲುಉರು ಹಾಲಾಹಲಮೊಗೆದುರುಹಲು ಸರ್ವರಪೊರೆದ ಶ್ರೀನೀಲಕಂಧರನೆಂದೆನಲ್ಲದೆಗರವ ಕುಡಿದನೆಂದೆನೆ ಪೆಣ್ಣಿತ್ತನಶಿರವನರಿದನೆಂದೆನೆ ಊರೂರೊಳುತಿರಿದುಗರುವನೆಂದೆನೆ ದುಷ್ಟ ಶಿಕ್ಷಕವರ ಕೆಳದಿಯ ರಾಮೇಶ್ವರನೆಂದೆನಲ್ಲದೆ3
--------------
ಕೆಳದಿ ವೆಂಕಣ್ಣ ಕವಿ
ನಿನ್ನ ನೀ ತಿಳಿದು ನೋಡೊ ಪ್ರಾಣಿ ಧ್ರುವ ನಿನ್ನ ನೀ ತಿಳಿಯೊ ನೀ ಭಿನ್ನಬೇದವಳಿದು ಚೆನ್ನಾಗ್ಯನುಭವದಲಿ ಉನ್ಮನವಾಗಿ 1 ನಾನಾರು ಎಂದು ನೀ ಖೂನ ತಿಳಿದು ನೋಡೊ ಘನ ಗುರು ಕೃಪೆಯಿಂದಲಿ ತನುವಿನೊಳು 2 ಎಲ್ಲಿಂದ ಬಂದ್ಯೊ ನೀ ಎಲ್ಲಿಗ್ಹೋಗುವಿ ಮುಂದೆ ಇಲ್ಲೆವೇ ತಿಳಿದು ನೋಡೊ ಸುಲಭದಿಂದ 3 ಬಂದೆ ನಾ ತಂದೆ ನಾ ಬಂದು ಘಳಿಸಿದೆ ನಾ ಹೊಂದಿಕಿ ಹೊಲಬು ನೋಡೊ ಸಂಧಿಸಿ ಘನ 4 ನಡೆದೆ ನಾ ನುಡಿದೆ ನಾ ಹಿಡಿದೆ ನಾ ಪಡೆದೆ ನಾ ಒಡನೆ ನಿನ್ನೊಳು ನೀ ನೋಡೊ ಪಿಡಿದು ನಿಜ 5 ತಾನೇನು ತನುವೇನು ತನ್ನೊಳಗಿಹುದೇನು ಮನಮುಟ್ಟಿ ಘನವ ನೋಡೊ ಚಿನ್ನುಮಯನ 6 ಏನುಂಟು ಏನಿಲ್ಲ ಅನಿಮಿಷದಲಿ ನೋಡೊ ಘನಕ ಘನವ ಬೆರೆದು ಸನ್ಮತವಾಗಿ 7 ಮರ ಹುಟ್ಟಿ ಮರಬಿದ್ದ ತೆರನಾಗದಿರೊ ನೀನು ಎರಗೊ ಶ್ರೀಗುರುಪಾದಕ ಕರಿಗಿ ಮನ 8 ಎಡಬಲ ನೋಡದೆ ಪಿಡಿದು ಸದ್ಗುರು ಪಾದ ಬೋಧ ನೋಡಿ ನಿನ್ನೊಳು9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿನ್ನ ನೆನೆಯುವುದೆ ಭಾಗ್ಯ ನಿನ್ನ ನೋಡುವುದೇ ಕಂಗಳಿಗೆ ಹಬ್ಬ ನಿನ್ನ ಬಳಿ ನಲಿದಾಡುವುದೇ ಭಕ್ತರಿಗಿಷ್ಟ ನಿನ್ನಗಲಿ ಇಹದೊಂದು ಘಳಿಗೆಯೂ ಅವರ ಮನಸಿನಲಿ ಅಖಿಳ ದೇವೇಶ ನಿನ್ಹೊರತು ಗತಿಯಮಗಾರೆಂಬರೊ ನಿನ್ನ ಭಕ್ತರು ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ನಿನ್ನ ನೋಡಲಿ ಬಂದೆ ಘನ್ನ ಮಹಿಮನೆ ಕೃಷ್ಣಾ ಮನ್ನಿಸಿ ಕೃಪೆಯ ಮಾಡೊ ಪ. ನಿನ್ನ ದರುಶನವಿತ್ತು ಎನ್ನ ಪಾಪವ ಕಳೆದು ನಿನ್ನ ಪಾದವನೆ ತೊರೋ ಸ್ವಾಮಿ ಅ.ಪ. ರಜತಪೀಠಾಪುರದಿ ರಮ್ಯ ಮಂದಿರದಲ್ಲಿ ರಾಜಿಸುತ್ತಿಹ ದೇವನೆ ಕುಜನಮರ್ಧನ ಎನ್ನ ರಜ ತಮೋಗುಣ ಕಳದು ನಿಜಭಕ್ತರೊಡನಾಡಿಸಿ ಸುಜನವಂದಿತ ನಿನ್ನ ಭಜನೆಯಿಂದಲಿ ನಲಿದು ನಿಜರೂಪ ನೋಡುವಂತೆ ವಿಜಯಸಾರಥಿಯೆ ನೀ ಈ ತೆರದಿ ಪೊರೆಯದಿರೆ ಭಜಿಸಲ್ಯಾತಕೆ ನಿನ್ನನು ದೇವ 1 ಶ್ರೀ ತಂದೆ ಮುದ್ದುಮೋಹನದಾಸರೆಂತೆಂಬ ನೀತ ಗುರುದ್ವಾರದಿಂದ ನಾ ತಿಳಿದು ಬಂದೆ ನಿನ್ನಯ ಮಹಿಮೆ ಜಾಲಗಳ ಪ್ರೀತನಾಗಿ ಕಾಯೋ ನೀತಿಯಲ್ಲವು ನಿನಗೆ ಮಹಿಮೆ ತೋರದೆ ಎನ್ನ ಘಾತಿಗೊಳಿಸುವರೆ ಹೀಗೆ ನಾಥ ನಿನ್ನಗಲಿ ನಾನರಘಳಿಗೆ ಇರಲಾರೆ ಸೋತು ಬಂದಿಹೆನೊ ಭವದಿ ಮನದಿ 2 ಸತ್ಯಸಂಕಲ್ಪ ನೀನಾದಡೆ ಎನಗಿನ್ನು ಅತ್ಯಧಿಕ ರೂಪ ತೋರೊ ಮೃತ್ಯು ಬೆನ್ಹತ್ತಿ ಆಯುಷ್ಯವ ಪರಿಹರಿಸುವುದು ಎತ್ತ ಪೋದರು ಬಿಡದೆಲೊ ಭೃತ್ಯತನವನೆ ವಹಿಸಿ ನಿನ್ನ ತೋರೆಂದೆನಲು ಮತ್ತೆ ಕರುಣವಿಲ್ಲವೆ ಚಿತ್ತಜಾಪಿತ ನಿನ್ನ ಒಲುಮೆ ಮಾರ್ಗವನರಿಯೆ ಚಿತ್ತಕ್ಕೆ ತಂದು ಕಾಯೊ ಕೃಷ್ಣ 3 ಆನಂದಮುನಿವರದ ಆನಂದ ಕಂದನೆ ಆನಂದನಿಲಯವಾಸ ಆನಂದರತ್ನಪ್ರಭಾದಿಂದ ರಾಜಿತನೆ ಆನಂದಮೂರ್ತಿ ಕೃಷ್ಣ ಆನಂದಗೋಕುಲದಿ ಆನಂದದಲಿ ಮೆರೆದು ಆನಂದ ಸುಜನಕಿತ್ತೆ ನೀನಿಂದು ಎನ್ನ ಮನಕೆ ಆನಂದವನೆ ಇತ್ತು ಆನಂದರೂಪ ತೋರೊ ಕೃಷ್ಣ 4 ಥರವಲ್ಲ ನಿನಗೆನ್ನ ಕರಕರೆಗೊಳಿಸುವುದು ಪೊರೆವರಿನ್ಯಾರು ಜಗದಿ ಮರೆತು ಗರ್ವದಿ ಎನ್ನ ಮರೆವರೆ ನೀನ್ಹೀಗೆ ಗುರುಗಳಂತರ್ಯಾಮಿಯೆ ಸರ್ವನಿಯಾಮಕ ಸರ್ವವ್ಯಾಪಕನೆಂಬ ಬಿರುದು ಪೊತ್ತಿಲ್ಲವೇನೊ ಕರುಣಾಳು ಗೋಪಾಲಕೃಷ್ಣವಿಠ್ಠಲ ನಿನ್ನ ಪರಿಪರಿಯ ರೂಪ ತೋರೊ ಕೃಷ್ಣ 5
--------------
ಅಂಬಾಬಾಯಿ
ನಿನ್ನ ನೋಡಿ ಧನ್ಯನಾದೆನೊ ಹರಿ ಶ್ರೀನಿವಾಸ ಪ ನಿನ್ನ ನೋಡಿ ಧನ್ಯನಾದೆಎನ್ನ ಮನಸು ನಯನ ಸುಪ್ರಸನ್ನವಾಯಿತು ದಯವ ಮಾಡಿಮುನ್ನ ಸಲಹಬೇಕು ಸ್ವಾಮಿ ಅ ಸುಜನ ಪಕ್ಷಾ 1 ವಾಸುದೇವ 2 ಕಂತು ಜನಕ ಎನ್ನ ಮೊರೆಯನಾಂತು ವಿಹಿತದಿಂದ ಸೇವೆಅಂತರವಿಲ್ಲದೆ ದಯಪಾಲಿಸೊಶಾಂತ ಮೂರ್ತಿಯಾದಿ ಕೇಶವ ಮುದ್ದು ವಿಠಲ 3
--------------
ಕನಕದಾಸ