ಒಟ್ಟು 5292 ಕಡೆಗಳಲ್ಲಿ , 123 ದಾಸರು , 3484 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯಲರಿಯದು ಜನ್ಮ ಗುರುಪಾದವರಿಯದೆ ಧ್ರುವ ಬಯಲು ಭಾವಿಸಿ ನಿರ್ಬೈಲ ನೆಲೆಗೊಳ್ಳದೆ ಭಾವಭಕ್ತಿಯ ಕೀಲು ಹೊಯಿಲು ತಿಳಿಯದೆ 1 ರವಿ ಶಶಿಯನೊಡಗೊಡಿ ಶಿವಸುಖವ ತಿಳಿಯದೆ ಸೂತ್ರ ಸೋಹ್ಯ ಹೊಳಿಯದೆ 2 ಆಧಾರವಂ ಬಲಿದು ಆರೇರಿ ಬೇರಿಯದೆ ಮಹಿಪತಿ ನಿನ್ನೊಳು ಗುರುಗತಿ ಅರಿಯದೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಯೆ ಚಿತ್ರಲೀಲೆಗಳನು ಅರಿಯಲಳವೇ ಸುಲಭದಿ ಪ ನಿರತ ಸೇವೆ ಮಾಡುತಿರುವ ಸಿರಿಯು ತಾನಚ್ಚರಿಯಲ್ಲಿರಲು ಅ.ಪ ಪೊಡವಿಯಲಿ ದುರಿತಗಳನ್ನು ನಡೆನುಡಿಗಳಿಂದರಿಯದಿರುವ ಹುಡುಗರಾಗಿ ನಲಿಯುವರನ್ನು ಸಿಡಿಲಿನಿಂದ ತನ್ನಡಿಗಳಿಗೆಳೆವ 1 ಕ್ಲೇಶದಿಂದ ಗಳಿತವಾದ ಹೇಸಿಗೆಯ ದೇಹದಲ್ಲಿ ಆಸೆ ತೊರೆದು ನರಳುವರಲಿ ಲೇಶ ಕರುಣ ತೋರದೆ ಇರುವ2 ಸತ್ಯ ಸಂಕಲ್ಪನೆಂದರಿತು ನಿತ್ಯನನ್ನು ನೆನೆದು ತಮ್ಮ ಕೃತ್ಯಗಳನು ರಚಿಸಿ ಮುದದಿ ತೃಪ್ತನಾಗುವ ಭಕ್ತರ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಹರಿಯೆ ಮೂಜಗದ ದೊರೆಯೆ ನಿನಗಿದು ಸರಿಯೆ ಪ. ಹರಿಯೆ ಮೂಜಗದ ದೊರೆಯೆ ನಿನ್ನನೆ ಮರೆಯಪೊಕ್ಕವರಲ್ಲಿ ಈ ಪರಿ ಬರಿಯ ಪಂಥದಿ ಮರುಗದಿರ್ಪುದು ಸರಿಯೆ ನಿನಗದು ಸರಸವಲ್ಲದುಅ.ಪ. ಉಕ್ಕಿನ ಕಂಬದಿಂದ ಉದಿಸಿ ಬಂದು ರಕ್ಕಸನುರವ ಸೀಳಿ ಕರುಳನು ಬಗೆದು ಉಕ್ಕುವ ಕೋಪದಿಂದ ರಕುತವು ಸುರಿಯೆ ಭಕ್ತ ಪ್ರಹ್ಲಾದನಾದರದಿ ಕಾಯ್ದು ಭಕ್ತ ವತ್ಸಲನೆನಿಸಲಹುದು ಶಕ್ತಿಹೀನತೆಯಿಂದ ಮರೆಹೊಕ್ಕ ಎನ್ನನು [ಕಾಯು]ವುದು 1 ಒಪ್ಪಿಡಿಯವಲಕ್ಕಿಯ ಒಪ್ಪಿಸಿನಿಂದ ವಿಪ್ರನ ನಲವಿಂದ ನೋಡುತಲಂತು ವಿಪುಲಸಂಪದವನ್ನು ಕರುಣಿಸಿದಂಥ ಅಪ್ರತಿಮ ಸಾಹಸಿಯೆನುತೆ ನಿನ್ನೊಳು ತಪಿಸಿ ಬೇಡುವ ಎನ್ನೊಳೀಪರಿ ಒಪ್ಪದೊಪ್ಪದೆನ್ನಪ್ಪ ಕೇಳಿದು ಸರಿಯೇ ಶ್ರೀನರಹರಿಯೇ 2 ಮಾನಿತÀಧ್ರುವ ಬಾಲನಂ ಮನ್ನಿಸಿ ಪೊರೆದೆ ಮಾನಿನಿ ಪಾಂಚಾಲಿಯ ಮಾನದಿ ಕಾಯ್ದೆ ಸಾನುರಾಗದಿಂ ಗಜನಂ ಉದ್ಧರಿಸಿದೆ ಕ್ಷೋಣಿಯೊಳಗತಿ ದೀನರಾದರ ಸಾನುರಾಗದಿ ಪೊರೆವ ಶ್ರೀಧರ ದಾನವಾಂತಕ ಶೇಷಗಿರೀಶನೆ ಸೂನುವೆಂಬಭಿಮಾನ ನಿನಗಿರೆ [ಮಾಣದೆನ್ನನು ಕಾಯೊ] ಹರಿಯೇ ಶ್ರೀನರಹರಿಯೇ3
--------------
ನಂಜನಗೂಡು ತಿರುಮಲಾಂಬಾ
ಹರಿಯೆ ಸರ್ವೋತ್ತಮ ಪರದೈವವೆಂತೆಂಬ ಮರುತ ಮತವ ಸಾರಿರೊ ಪ. ಗರುವಿಕೆಯನೆ ಬಿಟ್ಟು ಪರಮತವನೆ ಸುಟ್ಟು ಹರಿಯ ಸೇವಕರಾಗಿರೊ | ಈ ಜಗದೊಳು ಅ.ಪ. ಪಂಚ ಭೇಧವ ತಿಳಿದು ಪಂಚೇಂದ್ರಿಯವ ಸೆಳೆದು ಪಂಚ ಮೂರ್ತಿಯ ಭಜಿಸಿರೊ ಪಂಚ ಸಂಸ್ಕಾರದಿ ಪಂಚಯಜ್ಞವ ರಚಿಸಿ ಪಂಚ ಮಾರ್ಗವ ಸಾರಿರೊ | ವೈರಾಗ್ಯದಿ 1 ಎಂಟು ಮದಗಳನಳಿದು ಎಂಟು ಮೂರ್ತಿಯ ತಿಳಿದು ಎಂಟು ದಳದಿ ಕಾಣಿರೊ ಎಂಟು ಕರ್ತೃತ್ವವ ಎಂಟು ತತ್ವದಿ ಮಾಳ್ಪ ಎಂಟಕ್ಷರನ ಪಾಡಿರೊ | ಕೊಂಡಾಡಿರೊ 2 ಮೂರು ಗುಣಗಳಿಂದ ಮೂರು ಮಾಳ್ಪ ಜಗವ ಮೂರು ರೂಪವ ನೆನೆಯಿರೊ ಮೂರು ಮೂರು ಭಕ್ತಿ ಮೂರು ಮಾರ್ಗದಿ ರಚಿಸಿ ಮೂರು ಲೋಕವ ಸಾರಿರೊ | ಮೂರನೆ ಗೆದ್ದು 3 ಕಂಡ ದೈವಗಳಿಗೆ ಮಂಡೆಯ ಬಾಗಿಸುತ ಬೆಂಡು ಆಗಲಿ ಬೇಡಿರೊ ಹಿಂಡು ದೈವಗಳಿಗೆ ಗಂಡ ಹರಿಯ ಭಜಿಸಿ ಗಂಡುಗಲಿಯಾಗಿರೊ | ಧೈರ್ಯವ ತಾಳಿ 4 ಗುರುಗಳಿಂದಲಿ ತತ್ವ ಸರ್ವಕಾಲದಿ ತಿಳಿದು ಉರ್ವಿಯೊಳಗೆ ಬಾಳಿರೊ ಸರ್ವಾಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ಸರ್ವಬಿಂಬನೆನ್ನಿರೊ | ಮೂಲರೂಪಿ 5
--------------
ಅಂಬಾಬಾಯಿ
ಹರಿಯೆ ಹದಿನಾಲ್ಕು ಲೋಕದ ದೊರೆಯೆ ಪ ಕಮಲ ಷಟ್ ಚರಣನೆನಿಸಿ ಎನ್ನ ಪೊರೆವುದು ಸಂತತ ಅ.ಪ ವೀರಭಕ್ತ ಪ್ರಹ್ಲಾದ ವರದ ಕರುಣಾರಸ ಪರಿಪೂರ್ಣ ಭವ ಸನ್ನುತ ಚಾರ ಚರಣನಳಿನ ಸಾರಿದ ಪ್ರಣತ ಜನಾರ್ತಿನಿವಾರಣ ಘೋರದುರಿತ ಮದಗಜ ಪಂಚಾನನ ನಾರದ ಮುನಿವರ ಸೇವಿತ ಚರಣ ಸಾರಸಾಕ್ಷಿ ಶ್ರೀ ಕರಿಗಿರಿ ನಿಕೇತನ 1
--------------
ವರಾವಾಣಿರಾಮರಾಯದಾಸರು
ಹರಿಯೆಂದು ಮನವೆ ನೀ ಸ್ಮರಿಸೋ ದೃಢದಿಂದ ಸ್ಮರಿಸಿದಾಕ್ಷಣ ಬಂದು ಒದಗುವ ಗೋವಿಂದ ಕರುಣದಿಂದಲಿ ನೋಡಿ ಹಿಂಗಿಸುವ ಭವಬಂಧ ಪರಮದಯಾನಿಧಿಯು ಶ್ರೀಹರಿ ಮುಕುಂದ 1 ಸ್ಮರಿಸಿದಾಕ್ಷಣ ಪುಣ್ಯಗತಿಗೈದಜಾಮಳ ಮರೆಯದೆ ಸ್ಮರಿಸಿದ ಧ್ರುವ ಯೈದಿದಢಳ ಹರಿಯೆಂದು ಪ್ರಹ್ಲಾದ ಪುಣ್ಯಗೈದ ಸಬಳ ಸ್ಮರಿಸಿದವರ ಕಾವ ಶ್ರೀಹರಿ ಗೋಪಾಲ 2 ಗಜ ಭಯ ಸ್ಮರಿಸಿದಾಕ್ಷಣ ಮೊರೆ ಇಟ್ಟು ದ್ರೌಪದಿಗಾಯಿದಭಿಮಾನ ಸ್ಮರಿಸಿದ ಪಾಂಡವರ ರಕ್ಷಿಸಿದ ಪ್ರಾಣ ಪರಮಭಕ್ತರ ಜೀವ ಶ್ರೀಹರಿ ನಾರಾಯಣ 3 ಹರಿನಾಮದಿಂದಾಯಿತು ಅಹಲ್ಯೋದ್ಧಾರಣ ಸ್ಮರಣೆ ಸಕಲವೆಲ್ಲ ತರಿಸಿತು ಪೂರ್ಣ ಸುರಮುನಿಜನರಿಗೆ ಇದೇ ನಿಜಭೂಷಣ ಪರಮ ವೈಷ್ಣವರಿಗೆ ಇದೇ ಜೀವ ಪ್ರಾಣ 4 ಹರಿಯೆಂದು ನೆನಿಯೋ ನೀ ಗುರು ಕೃಪೆಯಿಂದ ಸ್ಮರಿಸೊ ಮನವೆ ದೃಢಭಾವ ಭಕ್ತಿಯಿಂದ ನಿತ್ಯ ನಿಜಾನಂದ ತೋರುವ ಶ್ರೀಹರಿನಾಮ ಸುಖ ಸದಾನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಯೆನ್ನ ನರಜನ್ಮ ವ್ಯರ್ಥವಾಯ್ತು ಪರಮ ಭಕ್ತಿಯೊಳಿನ್ನು ಭಜಿಸುವೆನು ಕಾಯೋ ಪ ತೊಡೆಯ ಮೇಲಾಡುತಿಹ ಶಿಶುವಿನಾನುಡಿ ಕೇಳಿ ಕಡು ಮೂರ್ಖತನದಿಂದ ಭ್ರಮೆಗೊಂಡೆನೋ ಸಡಗರದಿ ಕಿವಿಗೊಟ್ಟು ಕಿಂಕಿಣಿಯ ದ್ವನಿಗಳನು ಎಡಬಿಡದೆ ಕೇಳುತಿಹ ಹರಿಣನಂತಾದೇ 1 ತೊಡೆಗÀುಹ್ಯ ಕುಚಗಳಿಗೆ ಅನುದಿನವು ನಲಿಯುತ್ತ ಮಡದಿಯರ ಅಂಗ ಸಂಗದ ನಂಬುತಾ ಒಡಲ ಶಾಂತಿಯಗೊಳಿಸೆ ಬಡಿಗೋಲು ಕೆಡಹಿಕೊಂ ದಡಗುತಿಹ ಮೂಷಕನ ತೆರದಲ್ಲಿ ಕಳೆದೇ 2 ನಿರುತದಿಂ ಪರಸತಿಯ ಲಾವಣ್ಯವನು ನೋಡಿ ಚರಿಸಿತೆನ್ನಯ ಮನವು ಅವಳ ಕೂಟಕ್ಕೇ ಉರಿವ ದೀಪವ ಕಂಡು ಕನಕ ಮಣಿಯೇಯೆಂದ ಎರಗುತಿಹ ಹುಳದಂತೆ ಹಾಳಾದೆ ಬರಿದೇ 3 ಜರಿದು ನಿಜವೃತ್ತಿಯನು ಪರದಾಸ್ಯದಲಿ ಮುಳುಗಿ ಪೊರದೆ ಹೊಟ್ಟೆಯನಾ ಪರಾನ್ನ ಭಕ್ಷದಲೀ ಹರುಷದಿಂ ಬಲೆಯತುದಿ ಮಾಂಸಕ್ಕೆ ಮೆಚ್ಚಿದಾ ಮರುಳಾ ಮೀನಿನ ಗತಿಯು ಯನಗಾಯ್ತು ನಿಜದೀ4 ನಾರಿಯರ ಜಾಲಕ್ಕೆ ಪ್ರತಿದಿನವು ಸಿಲುಕುತ್ತ ಮಾರಿಯರ ಸಾಕಿ ನಾ ಫಲವ ತಿಂದೆ ಭ್ರಮರ ಸಂಪಿಗೆಯಸಳ ಸಾರಿ ಕೊಡಲೆ ಮೃತ್ಯುವಶವಾಗುವಂತೇ 5 ಮೂರಾರು ಶತ್ರುಗಳು ತರಿದೆನ್ನ ಮನವನ್ನು ಗಾರು ಮಾಡುತಲಿಹವು ತಿಳಿಯದಾ ಹರಿಯೇ ನರಸಿಂಹನೇ ಐದು ಇಂದ್ರಿಯವ ಗೆಲಲಾರೆ ಭೂರಿ ಭಕ್ತಿಯೊಳೆರಗಿ ಮರೆಹೊಕ್ಕೆ ಕಾಯೋ 6 ಪನ್ನಗಶಯನ ಶ್ರೀ ವೇಣುಗೋಪಾಲನೆ ಚನ್ನಿಗಕೇಶವನೇ ದೂರ್ವೇಶನೇ ನಿಂನನಾ ಬಿಡಲಾರೆ ಮಾರಮಣ ಪೊರೆಯಂನ ಯೋನಿ ಜನ್ಮಕೆ ಮುಂದೆ ಬರದಂತೆ ಮಾಡೋ 7
--------------
ಕರ್ಕಿ ಕೇಶವದಾಸ
ಹರಿಯೇ ಕಾವುದು ಕಾವದು ನೀ ಪ ಕಾವುದು ಕಾವದು ಸಾದರದಿಂದಲಿ ದೇವನೆ ಯನ್ನ ಸದಾ | ಪಾದ ಯುಗ್ಮ ಪದಾ ಅ.ಪ ಸ್ವರ್ಗದ ಸಾಸಿರ ಮಡಿಸುಖ ಭಕ್ತಿಯ ಮಾರ್ಗವ ನರಿಯದೇ | ದುರ್ಗುಣದಲಿ ತನು ಧನ ಸಿರಿಮದದಿಂ ಆರ್ಗೆಯ ಮನ್ನಿಸದೇ ಮಾರ್ಗಣವೆಸನುದರವ ಪೊರೆವುತ ಷಡ್ವರ್ಗರ ಬಲಿವಿಡಿದೇ| ಅರ್ಗಳಿಗೆಯು ನೆನಿಯದೆ ಬಹ ಜನ್ಮದಿ ದುರ್ಗತಿ ಭೋಗಿಸಿದೇ 1 ನಾ ಪೂರ್ವದಿ ಮಾಡಿದ ಬಹು ದುಷ್ಕøತ ಆ ಫಲದಿಂದ ಲೀಗ | ಮಹಾಪಯ ನಿಧಿಯೊಳಗೆ | ಧಡಿಗೆ | ಶ್ರೀಪತಿನಾವಿಕನಾಗಿ ನೀ ದಾಟಿಸಲೀಪಸುಗಳೆಂದನಗೆ | 2 ಕಂದನ ಗುಣದೋಷಂಗಳ ಆರಿಸೆ ತಂದೆಗಿದು ಚಿತವೆ | ನೀ ಬಂದು ಜಗದ್ಧರುವೆ | ಪತಿತರ ವೃಂದ ಉದ್ದರಿಸುವೆ | ಮಂದರ ಗಿರಿಧರ ತಂದೆ ಮಹಿಪತಿ ನಂದನವರ ಪ್ರಭುವೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಯೇ ನಿನ್ನಯ ಭಕ್ತಿಯದರವೊಂದುಳಿದು ನಾ ಸಿರಿಯರಸನೆ ನಿನ್ನೊಳನ್ಯ ಕೇಳೆನು ರಂಗಾ ಪ ಪತಿ ಬೇಡ ಸುತೆ ಬೇಡ ಸತತ ಶ್ರೀ ಹರಿ ನಿನ್ನ ದ್ಯಾನವ ಕೊಡಲೋ 1 ಭವ ಬೇಡ ಪತಿತ ಪಾವನ ನಿನ್ನ ಸ್ತೋತ್ರವ ಕಲಿಸೋ 2 ಕರಿ ಬೇಡ ಹಣ ಬೇಡ ಮನೆ ಬೇಡ ಸಿರಿ ಚೆನ್ನಕೇಶವನ ಮಹಿಮೆಯ ತಿಳಿಸೋ 3
--------------
ಕರ್ಕಿ ಕೇಶವದಾಸ
ಹರಿವಾಸರದ ಮಹಿಮೆಯೆನು ಅರಿತಷ್ಟು ಪೇಳುವೆನು ತರಳರಾಡುವ ನುಡಿಯೆಂದು ಗುರುಜನರು ಮನ್ನಿಸಿರಿನ್ನು ಪ. ಹಿಂದೆ ತಾನಜಾಮಿಳನು ಮಂದಮತಿಯಾಗಿ ಜಗದಿ ನಿಂದಿತಾಚಾರದಲಿ ಮನವಿರಿಸಿ ನಲಿದು ಬಂಧುಮಿತ್ರರ ನುಡಿಗೊಂದಿಷ್ಟು ಕಿವಿಗೊಡದೆ ಮನ ಬಂದಂತೆ ಚರಿಸಿದರನು ಮದಮೋಹದಿಂದ 1 ಮಂದಿರವ ನೊಳಪುಗಲು ಗಂಗೆಯಂತು ದಂದುಗದಿನೊಂದು ಮಡದಿ ಮಕ್ಕಳಿಗಾಗಿ ನಿಂದಂತೆ ತಾನುಪವಾಸ ಜಾಗರದಿ ಕಳೆದು ಮರುದಿನ ದ್ವಾದಶೀ2 ಮರಣದಾಹದಿ ಹರಿವ ನೀರ ಕುಡಿಯೇ ಹರಿಗರ್ಪಿಸಿದ ತುಳಸಿದಳವೊಂದದರೊಳಿರೆ ದುರಿತಕೋಟಿಗಳೆಲ್ಲ ದೂರಸಾರೆ 3 ಅಂತ್ಯಕಾಲದೊಳೈತಂದ ಅಂತಕನದೂತರಂ ಕಂಡು ಇಂದಿರೇಶನಾಣತಿಯಂತೆ ಕಿಂಕರರು 4 ಅರಿಯದಾಚರಿಸಿದೊಡಂ ಹರಿವಾಸರದ ಮಹಿಮೆ ಪರಮಪದನಾಥನೇ ವಶನಪ್ಪನಯ್ಯಾ 5 ಹರಿಭಕ್ತ ರುಕ್ಮಾಂಗದನ ಪರಿಭವಿಸೆ ಬರೆ ಮೋಹಿನಿ ತರಳ ಧರ್ಮಾಂಗದನ ಶಿರವತೆಗೆಯೆಂದೆನಲು ವರಧರ್ಮದೇವನೇ ಕರವಿಡಿದು ಪೊರೆದಂ6 ದಶಮಿ ದ್ವಾದಶೀ ದಿನದಲ್ಲಿ ಅಶನವೊಂದೇಸಾರಿ ಏಕಾ ಕುಸುಮನಾಭನಾ ಶೇಷಗಿರಿವಾಸ ಕೈಬಿಡನೊ 7
--------------
ನಂಜನಗೂಡು ತಿರುಮಲಾಂಬಾ
ಹರಿವಾಸರದುಪವಾಸದ ಫಲವು ಕಂಡವರಿಗೆ ದೊರಕುವುದೆ ಪ. ಹಿರಿದು ಜನ್ಮಗಳಲಿ ಹರಿಯನಾರಾಧಿಪ ಪರಮ ಭಾಗವತರ ಭಕ್ತರಿಗಲ್ಲದೆ ಅ.ಪ. ಸ್ನಾನಸಂಧ್ಯಾನವು ಮೊದಲಾದ ಕರ್ಮ ನ್ಯೂನದ ಪಾಪಂಗಳು ದೀನತ್ವದಿಂದ ತುಚ್ಛರಕೈಯ ಹಿಡಿದ ದು ರ್ದಾನದ ಪಾಪಂಗಳು ಭಾನುಬಿಂಬವ ಕಂಡ ಹಿಮದಂತೆ ಚಿದಾನಂದವಾದ ವ್ರತಕೆ ಸರಿ ಬಾರದು 1 ಪರಸತಿಯರ ನೋಡಿ ಮನವಿಟ್ಟ ಪಾಪವು ಪರದೂಷಣೆಯ ಪಾಪವು ಪರಮಾತ್ಮನ ಹೊಗಳುವ ನಾಲಗೆಯಲ್ಲಿ ನರರ ಹೊಗಳುವ ಪಾಪವು ಪರ ವಸ್ತುಗಳನಪ- ಹರಿಸುವ ಪಾಪಂಗಳು ಕರಿ ಓಡುವಂತೆ ದುರಿತ ಕೋಟಿಗಳನು ಪರಿಹರಿಸುವ ಶ್ರೀ 2 ಆಡುವ ಅನೃತವಾಕ್ಯಗಳಿಂದ ಸಂಭವವಾಗುವ ಪಾಪಂಗಳು ನೋಡಿಕೊಳ್ಳದೆ ದುರಾನ್ನವನುಂಬ ದುರ್ದಾನದ ಪಾಪಂಗಳು ಮಾಡಬಾರದ ದಿನದಲಿ ಸ್ತ್ರೀಗೋಷ್ಠಿಯ ಮಾಡಿದ ಪಾಪಂಗಳು ಓಡುವುದಘಸಂಘ ಉತ್ತಮವಾಗಿಹ3 ಮತ್ತೆ ಈ ಬಹಳ ಪಾಪಗಳಿಗೆಲ್ಲ ತಾ ಪಕ್ಷ ಪ್ರಾಯಶ್ಚಿತ್ತವು ಉತ್ತಮವಾದ ವ್ರತಗಳಿಗೆಲ್ಲ ತಾ ಉತ್ತಮವೆನಿಸುವುದು ಚಿತ್ತಶುದ್ಧಿಯನಿತ್ತು ಜ್ಞಾನವೈರಾಗ್ಯದಿ ಭಕ್ತಿ ಮಾರ್ಗವನೀವುದು ಮುಕ್ತಿಗೆ ಸೋಪಾನವಾಗಿ ಭವಾಭ್ಧಿಯ ದಾಟಿಸಿ ಹರಿಯ ಸನ್ನಿಧಿಗೆ ದಾರಿಯನೀವ 4 ತೋರುವ ದಶಮಿ ದ್ವಾದಶಿಗಳು ಸಂಪುಟಾಕಾರದಿ ಹರಿದಿನವು ಮೂರುದಿನದ ವ್ರತ ನಾಲ್ಕು ಹೊತ್ತಿನ ಆಹಾರಗಳು ವರ್ಜಿತವು ಊರುದಾರಿಗಳ ನಡೆಯದೆ ತಾಂಬೂಲ ಚರ್ವಣಂಗಳೊರ್ಜಿತವು ಜಾಗರ ಮಾಡಿ ವ್ರತವಾಚರಿಸುವ 5 ಅತಿಶಯವಾದ ಶ್ರೀಹರಿದಿನದಿ ಪಿತೃತರ್ಪಣಗಳು ವಜ್ರ್ಯವು ಪ್ರತಿವರುಷದಲಿ ಆಚರಿಸುವ ತಾಯಿತಂದೆ ತಿಥಿಗಳೆಲ್ಲ ವಜ್ರ್ಯವು ಸತತವು ಮಾಡುವ ಯಜ್ಞಪುರುಷಗೆ ಆಹುತಿಗಳೆಲ್ಲ ವಜ್ರ್ಯವು ಇತರ ಭೋಗ ಕೃತ್ಯಗಳನೆಲ್ಲ ವರ್ಜಿತಮಾಡಿ ಈ ವ್ರತವನಾಚರಿಸುವ 6 ಹಲವು ವ್ರತಗಳಾಚರಿಸಿ ದಾನಂಗಳ ಹಲವು ಮಾಡಿದರೇನು ಹಲವು ಪುಣ್ಯತೀರ್ಥನದಿಯಲ್ಲಿ ಸ್ನಾನವÀ ಮುದದಿ ಮಾಡಿದರೇನು ಹಲವು ಪುರಾಣಂಗಳ ಹಲವು ಶಾಸ್ತ್ರಂಗಳ ಹಲವು ಕೇಳಿದರೇನು ಶ್ರೀಹಯವದನನ್ನ ದಿನಕೆ ಸರಿಬಾರದು 7
--------------
ವಾದಿರಾಜ
ಹರಿವಾಸುದೇವನೆ ಬ್ಯಾಸರಿಲ್ಲದೆ ದಾಸನ ಮೊರೆ ಕೇಳು ಜಗದೀಶ ನನ್ನ ಸಮಾನ ಕರುಣಾಭೂಪರುಂಟೆ ಪೇಳು ಪ. ಕಾಲಕಾಲಕೆ ಪೇಳಲಂಜುವೆ ಶ್ರೀಲಲಾಮ ಹರಿಯೆ ಆದರೆ ಬೀಳಗೊಳಿಸುವ ದೇಹಬಾಧೆಯು ತಾಳಲಾಪ ಹೊರೆಯೆ ಎರಡೇಳು ಭಕ್ತಿಯ ಮ್ಯಾಳವರಿಯದೆ ಹಾಳು ಮೋಹ ತೆರೆಯೆ ಮುಳಿಗೇಳಲಾರೆನು ಮಾಧವನೆ ಕರುಣಾಳು ಕಾಯೊ ದೊರೆಯೆ 1 ಯಾರ ಧನವಿನ್ಯಾರ ಭೂಮಿಯು ಯಾರ ವಸ್ತುಗಳಿವು ಕುಂಬಾರ ಭಾಂಡಗಳಂತೆ ನಶ್ವರ ತೋರಲ್ಯಾಕೆ ಫಲವು ಲಘು ನೀರಗುಳ್ಳೆಯ ಪೋಲ್ವ ದೇಹಕೆ ಸೇರಿದ ಸನ್ನಹವು ಬಿಳಿ ಭಾರ ಪೊತ್ತ ಥರವು 2 ಅದರಿಂದ ವೆಂಕಟಮಂದಿರನೆ ನಿನ್ನಿಂದ ಮಾತ್ರ ತಿಳಿಸು ಮೂರ್ತಿ ತಾಪಗಳಿಂದ ಬ್ಯಾರೆಗೊಳಿಸು ದ್ವಿಜ ವೃಂದ ರಕ್ಷಕನೆಂಬ ಬಿರುದನು ಎಂದೆಂದಿಗು ಘಳಿಸು ಭವ ಬಂಧ ಮೋಚಕ ನಿನ್ನ ಸೇವಾನಂದವಾರ್ಧಿಗಿಳಿಸು 3
--------------
ತುಪಾಕಿ ವೆಂಕಟರಮಣಾಚಾರ್ಯ
ಹರಿಸೇವೆ ಕೈಂಕರ್ಯ ಪರಮ ನಿಷಾತೆ |ಪರಿಹರಿಸು ಭವತಾಪ ಜಾಂಬುವತಿ ಮಾತೇ |5 ಭೃತ್ಯ ಜಾಂಬುವಂತನ ತನುಜೆಶ್ರೀ ಮಹಿಳೆಯಂದದಲಿ ಕೃಷ್ಣ ಪ್ರಿಯಳಾದೇ 1 ಮಿಕ್ಕ ಮಹಿಳೆಯರಿಂದ ಲಕ್ಕುಮಿಯ ಆವೇಶಪೊಕ್ಕು ನಿನ್ನಲಿ ಅಧಿಕ ಸರ್ವಕಾಲದಲೀ |ಅಕ್ಕರದಿ ಇದಕೆ ಮಿಗೆ ಲಕ್ಕುಮಿಯು ಇರಲಾಗಚೊಕ್ಕ ಮಾತೆಯು ನೀನು ಶೇಷ ಸಮಳೆನಿಪೇ 2 ಆವೇಶ ನಿನ್ನಲ್ಲಿ ಇಲ್ಲದಿಹ ಸಮಯದಲಿದೇವಿಯರು ಮಿಕ್ಕೈದು ಮಂದಿ ಸಮ ನೀನು |ದೇವಿ ಶಿರಿ ಆವೇಶ ಅಲ್ಪವಿಹ ಸಮಯದಲಿದೇವ ಕಾಮಾದಿಗಳಿಗಧಿಕ ವಿಂಶತಿ ಗುಣದೀ 3 ನಿರ್ಮಲೈ ಕಾಂತಿತ್ವ ವಿಮಲ ಭಕ್ತ್ಯಾದಿಗುಣಅಮಮ ನಿನ್ನಲಿ ಇಹುದು ನೈಜರೂಪಾ |ವಿಮಲ ಸಚ್ಚಾರಿತ್ರೆ ಈ ಮಹಿಯ ಸಂಚಾರನಿರ್ಮಮದಿ ಗೈದಿರ್ಪೆ ಬಧಿರಾಂಧರಂತೇ 4 ದೇಹ ಮಮತೆಯಲಿಂದ ಮನಸೋತು ಕಷ್ಟಕ್ಕೆವಾಹನಾದಿಗಳೇರಿ ತೀರ್ಥಯಾತ್ರೆಗಳಾ |ಬಹುವಾಗಿ ಗೈದಾಗ್ಯು ಪುಣ್ಯ ಹೀನವು ಎಂದುಮಹಿಳೆ ನೀ ವರ್ಣಿಸಿಹೆ ಭಕುತರುಪಕಾರೀ 5 ಪಾದ ದರ್ಶನವೆಂದುಸಾರ್ವಕಾಲದಿ ನೀನು ಚಿಂತಿಸುತಲಿರಲೂ 6 ಕಂಡು ಶ್ರೀಹರಿಯನ್ನು ಅಪರೋಕ್ಷದಲಿ ನೀನುಬಂಡುಣಿಯು ಹರಿಪಾದ ಕಮಲಕ್ಕೆ ಆಗೀ |ಹಿಂಡು ದೈವರ ಗಂಡ ಪಾಂಡುರಂಗನೆ ಎಂದುಮಂಡಿಸಿದೆ ಪರತತ್ವ ತೊಂಡರುಪಕಾರೀ 7 ಕರದಲ್ಲಿ ಧನ್ವಂತ್ರಿ ಪಿಡಿದಮೃತ ಕಲಶದಲಿಹರಿನಯನ ಆನಂದ ಜಲಬಿಂದು ಉದರೇ |ತುರರೂಪಿಯಾದ ಶ್ರೀ ತುಳಸಿಯಲಿ ನೀನರಲುಹರಿ ನಿನ್ನ ಅಗಲದಿಹ ಸರ್ವ ಪೂಜೆಯಲೀ 8 ಶಾಂಭವಿಯುನುತೆ ದೇವಿ ಜಾಂಬುವತಿ ಶ್ರೀ ಹರಿಯಕಾಂಭಂಥ ಸುಜ್ಞಾನ ಭಕುತಿ ವೈರಾಗ್ಯ |ಹಂಬಲದಿ ನಿನ್ನಂಘ್ರಿ ನಮಿಪೆ ತೋರ್ವುದು ಹೃದಯಅಂಬರದಲಿಹ ಗುರು ಗೋವಿಂದ ವಿಠ್ಠಲನ 9
--------------
ಗುರುಗೋವಿಂದವಿಠಲರು
ಹರಿಸ್ಮರಣೆ ಪೂರಣ ಕರತನ್ನಿ ಧ್ರುವ ಕರತನ್ನಿರೊ ವರಗುರು ಕೃಪೆಯಿಂದ ಗುರುವರ ಮೂರುತಿ ಕರುಣಾನಂದ 1 ಕರುಣಿಸಿ ನೋಡಲು ಬಾಹುದು ಪುಣ್ಯ ಶರಣ ಜನರಿಗಿದು ತಾರ್ಕಣ್ಯ 2 ತಾರ್ಕಣ್ಯಂಬುದು ತರ್ಕರಹಿತ ಸರ್ಕನೆ ತಿಳಿವದು ತನ್ನೊಳು ಗುರುತ 3 ಗುರ್ತವಾಗಲು ನಿಜ ಹಿತಾರ್ಥ ಅರ್ತವಗಿದು ಸ್ವಸುಖ ಪರಮಾರ್ಥ 4 ಪರಮಾರ್ಥವು ಪರಗತಿ ಸಾಧನ ಪರಲೋಕಕೆ ಐದುವ ಸೊಪಾನ 5 ಸೋಪಾನವೆ ಸುಲ್ಲಭ ಸುಪಥ ಉಪಾಯದಲಿ ತಿಳಿಯಲು ಸ್ವಹಿತ 6 ಸ್ವಹಿತ ಮಾರಿಕೊಂಬುದೇ ಸುಖ ಸಾಹ್ಯ ಮಾಡುವ ಶ್ರೀ ಗುರುಕುಲತಿಲಕಾ 7 ಶ್ರೀಗುರು ಸೇವೆಯ ಮಾಡಿರೊ ಬ್ಯಾಗ ಜಗದೊಳಗಿದು ಮಹಾ ಪುಣ್ಯದ ಯೋಗ 8 ಯೋಗವೆ ಮಹಾ ನಿಜ ಭಕ್ತರ ಪ್ರಾಣ ಸುಗಮ ಸುಪಥ ಸದ್ಗತಿ ಸಾಧನ 9 ಸಾಧನ ಪಡೆವದು ಗುರುದಯ ಕರುಣ ಸದಮಲ ಸುಖ ಸುಜ್ಞಾನದ ಸ್ಪುರಣ10 ಸ್ಪುರಣ ಸುಫಲಿತ ಸುಜನರ ಹೃದಯ ಸುರ ಮುನಿ ಜನರಾನಂದದ ಉದಯ 11 ಉದಯವಾಯಿತು ಮಹಿಪತಿ ಮನದೊಳಗೆ ಸದೋದಿತವಾಯಿತು ಗುರುಕೃಪೆಲೆನಗೆ 12 ಎನ್ನೊಳು ದೋರಿತಾನಂದದಲಹರಿ ತನ್ನಿಂದಲಿ ತಾನೊಲಿದ ಶ್ರೀ ಹರಿ 13
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಹರಾ | ಪಾಲಿಸೊ ಎನ್ನ | ಭವಹರಾ ಪ ಸುರರು ಭೂಸುರರೆಲ್ಲಕರವ ಮುಗಿದು ನಿನ್ನ ವರಗಳ ಬೇಡೋರು ಅ.ಪ. ಸಿರಿ | ಪತಿಯು ಮತ್ತೆ ಪಶುಪತಿಯಿಂದಲೂ ತಾನೂ | ಹತನಾಗದವನಂತೆ 1 ಪರ | ಮೇಷ್ಠಿ ಪಿತನೆ ನಮ್ಮಕಷ್ಟವ ಕಳೆದು ಸಂ | ತುಷ್ಟಿಯ ಪಡಿಸಯ್ಯ 2 ಸುರರ ಭೂಸುರರ ಜಂಗಳಿಯ | ನೋಡಿಪೊರೆವೆನೆಂದವರಿಗೆ ಅಭಯ | ವಿತ್ತುಹರಿಯು ತಾನೇ ರೂಪದ್ವಯ | ದಿಂದಹರಿಹರಾಭಿಧತಾನೆ ಖರೆಯ | ಆಹಸುರರು ರೂಪವ ನೋಡಿ | ಉರುತರದಾಶ್ಚರ್ಯಭರವಾ ಮೈಮರೆಯುತ | ಕರವನೆ ಮುಗಿದರು 3 ಕಾಲ ನಿರೀಕ್ಷಿಸುತ್ತಿದ್ದು | ಬಲ್ಕರಾಳ ರೂಪನ ತಾನು ಗೆದ್ದು | ತಲೆಕಾಲಿನೊಳಗೆ ಮೆಟ್ಟುತಿದ್ದೂ | ಪಾ-ತಾಳಕ್ಕವನ ತಾನು ಒದ್ದು | ಆಹಕಾಲಮೀರುವ ಮುನ್ನ | ಕೇಳಲೊ ವರವನ್ನೆಫಾಲಾಕ್ಷ ಹರಿಯನ್ನು | ಕೇಳಿದನೀಪರಿ 4 ಮಲ್ಲಮರ್ದನ ಗುರು | ಗೋವಿಂದ ವಿಠಲನು ಸಲ್ಲೀಸೂವ ಭಕ್ತ | ರೆಲ್ಲರಭೀಷ್ಟವ 5
--------------
ಗುರುಗೋವಿಂದವಿಠಲರು