ಒಟ್ಟು 5363 ಕಡೆಗಳಲ್ಲಿ , 130 ದಾಸರು , 3529 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯೇ ಎನ್ನ | ಮರೆತಿರುವರೆ ಇದು ಸರಿಯೇ ಪಾಲಿಸು ನೀ ದೊರೆಯೇ | ತರಳತನದಿ ನಾ ಮರೆತೆನೆಂದು ನೀ ಜರೆದು ಬಿಟ್ಟರೆ ಮುಂದೆ ಪೊರೆವರಾರೈ ಶ್ರೀ ಪ ಒಡೆಯ ನೀನಾಗಿ ಸಲಹುವುದೀಗ ನಿನ್ನಯ ಪದ ಜಡಜಕೆರಗುವೆ ನಾ ಬೇಗ ಕಡು ದಾರಿದ್ರ್ಯದ ಕಡಲೊಳು ಮುಳುಗಿದೆ ತಡಿಯ ಕಾಣಿಸೋ ಜಗದೊಡೆಯ ದಯದಿ ಶ್ರೀ 1 ದುರುಳ ಬಾಧಿಸುತಿರೆ ಭರದೊಳಕ್ಷಯವಿತ್ತುದ್ಧರಿಸಲಿಲ್ಲವೆ ಶ್ರೀ 2 ಪರಮೇಷ್ಠಿ ಜನಕ ಶ್ರೀ 3 ತಂದೆ ನೀನಲ್ಲವೆ ಜಗದೀಶ ಪಾಲಿಸು ನಿನ್ನ ಕಂದನಲ್ಲವೆ ಸರ್ವೇಶ ಹಿಂದ ಮುಂದನಾನೊಂದನರಿಯೆ ದಯ ದಿಂದ ಕಾಯೋ ಮುಚುಕುಂದವರದ ಶ್ರೀ 4 ಮಂಗಲ ಪುರವಾಸ ಶ್ರೀ ವೆಂಕಟೇಶ | ಅಂಗಜ ಜನಕ ರಮೇಶ | ಮಂಗಲಾಂಗ ನಿನ್ನಂಘ್ರಿ ಸೇವಕರ ಸು-ಸಂಗವ ಪಾಲಿಸು ಗಂಗಾಜನಕ ಶ್ರೀ 5
--------------
ಅನ್ಯದಾಸರು
ಹರಿಯೇ ಕಾವುದು ಕಾವದು ನೀ ಪ ಕಾವುದು ಕಾವದು ಸಾದರದಿಂದಲಿ ದೇವನೆ ಯನ್ನ ಸದಾ | ಪಾದ ಯುಗ್ಮ ಪದಾ ಅ.ಪ ಸ್ವರ್ಗದ ಸಾಸಿರ ಮಡಿಸುಖ ಭಕ್ತಿಯ ಮಾರ್ಗವ ನರಿಯದೇ | ದುರ್ಗುಣದಲಿ ತನು ಧನ ಸಿರಿಮದದಿಂ ಆರ್ಗೆಯ ಮನ್ನಿಸದೇ ಮಾರ್ಗಣವೆಸನುದರವ ಪೊರೆವುತ ಷಡ್ವರ್ಗರ ಬಲಿವಿಡಿದೇ| ಅರ್ಗಳಿಗೆಯು ನೆನಿಯದೆ ಬಹ ಜನ್ಮದಿ ದುರ್ಗತಿ ಭೋಗಿಸಿದೇ 1 ನಾ ಪೂರ್ವದಿ ಮಾಡಿದ ಬಹು ದುಷ್ಕøತ ಆ ಫಲದಿಂದ ಲೀಗ | ಮಹಾಪಯ ನಿಧಿಯೊಳಗೆ | ಧಡಿಗೆ | ಶ್ರೀಪತಿನಾವಿಕನಾಗಿ ನೀ ದಾಟಿಸಲೀಪಸುಗಳೆಂದನಗೆ | 2 ಕಂದನ ಗುಣದೋಷಂಗಳ ಆರಿಸೆ ತಂದೆಗಿದು ಚಿತವೆ | ನೀ ಬಂದು ಜಗದ್ಧರುವೆ | ಪತಿತರ ವೃಂದ ಉದ್ದರಿಸುವೆ | ಮಂದರ ಗಿರಿಧರ ತಂದೆ ಮಹಿಪತಿ ನಂದನವರ ಪ್ರಭುವೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಯೇ ಗತಿ ಭರ್ತನು ಜಗಕೇ|ನರ ಹರಿಯೇ ನೆಂಟ ಭಕುತ ಜನಕೇ ಪ ಆರು ಸಲಹುವರ ನಾಥ ದೀನಜನ| ಘೋರಪಾತಕಿ ಬಧಿರಾಂಧರನು| ವಾರಿಜಾಸನ ಮುಖ್ಯ ದೇವತೆಗಳಲಿ|ವಿ ಚಾರಿಸೆ ಅನ್ಯದೊರೆಗಳುಂಟೆ 1 ಕಮಲ ಬಾಂ ಧವ ವರುಣರು ಮೃತ್ಯುಗಳೆಲ್ಲ| ಭಾವಿಸೆ ನೇಮದಲಿರುತಿಹರು 2 ಅವನ ರೋಮರೋಮದಿ ಬ್ರಹ್ಮಾಂಡವು | ಅವುದುಂಬರ ಫಲದಂತಿಹುದು | ಭುವನದಿ ಗುರುಮಹೀಪತಿ ಸ್ವಾಮಿಯು ಜಗ ಕಾವ ಕೊಲುವ ನಿರ್ಮಿಸುತಿಹನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಯೇ ನಮ್ಮ ಪರದೈವಾ ಹರಿಯೇ ತ್ರಿಭುವನ ಕಾವಾ ಹರಿಯೇ ಇಹಪರ ನೀವಾ ಜಗದೊಳಗೆ ಪ ಬಿಟ್ಟು ತಾಯ ತಂದೆಗಳ ನೆಟ್ಟನಡವಿಗೆ ಪೋಗಿ | ಮುಟ್ಟಿ ಭಜಿಸಲಾಗಿ ದಯವಿಟ್ಟು ಬಂದನು | ವಿಠಲ ನಚಲ ಪದವಿಯ ಕೊಟ್ಟು ಸಲಹಿದಕ | ಧಿಟ್ಟ ಧ್ರುವರಾಯ ಸಾಕ್ಷಿ ಅಂಬರದಲಿ 1 ಶರಧಿ ದಾಟ ಬಂದು ರಘು | ಪತಿ ಕರಿಸಿದನು | ಧರಿಯದುಳ್ಳನಕಾ ಲಂಕಾಪುರದ ಪದವಿಕೊಟ್ಟು ಕಾಯ್ದಾ | ಮೆರೆವಾ ವಿಭಿಷಣÁ ಸಾಕ್ಷಿ ಮೃತ್ಯುಲೋಕದೀ 2 ಧರೆಯ ನೆಳೆದು ಕೊಟ್ಟರಂಘ್ರಿ ವೆರಡರಿಂದ ಮುಚ್ಚಲಾಗಿ | ಶರಣ ತೃತಿಯ ಪಾದಕ ಶಿರಸವ ನೀಡಲು | ಹೊರೆದನೆಂದು ಬಲಿಸಾಕ್ಷಿ ಪಾತಾಳದಲಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಲೀಲೆ ಹರಿಲೀಲೆ ಪ ಜಗದೊಳು ಸುಜನರು ಬಳಲುತಲಿರುವುದು ಅ.ಪ ಉಚ್ಚಕುಲದಿ ಪುಟ್ಟಿ ಸ್ವಚ್ಛ ಜ್ಞಾನದಿಂದ ಅಚ್ಯುತನಂಘ್ರಿಯ ಪೂಜಿಸುತಿರಲು ತುಚ್ಛ ಜನರುಗಳು ಸ್ವೇಚ್ಭೆಯಿಂದಲಿ ಹುಚ್ಚು ಹರಟೆಗಳ ಹರಟುವುದೆಲ್ಲವು 1 ಪಂಡಿತರೆಲ್ಲ ಅಖಂಡ ಕಲೆಗಳಿಗೆ ಮಂಡನರೆನಿಸಿ ಭೂಮಂಡಲದಿ ಭಂಡಿ ಭಂಡಿ ಧನರಾಶಿಗಳಿರಲಾಗಿ ಪಿಂಡಕ್ಕಿಲ್ಲದೆ ತಿರುಗುತಲಿರುವುದು 2 ಮನವ ತೊರೆಯುತ ಕಾಮಿನಿಯರುಗಳು ಗಾನವ ಮಾಡಲು ಆನಂದಿಪರು ಜ್ಞಾನಿ ದಾಸರುಗಳು ಭಕುತಿಯಿಂದ ಹರಿ ಗಾನವ ಮಾಡಲು ಮಾನಸದಿರುವುದು 3 ಪನ್ನಗಶಯನನು ತನ್ನ ಭಕುತರಿಗೆ ಹೆಣ್ಣು ಹೊನ್ನು ಮಣ್ಣಿನ ಆಸೆ ಯನ್ನು ಬಿಡಿಸಿ ಅವರನ್ನು ಉದ್ಧರಿಸಿ ಪ್ರ ಸನ್ನನಾಗುವೆ ನಾನೆನ್ನುತ ಪೇಳ್ವುದು 4
--------------
ವಿದ್ಯಾಪ್ರಸನ್ನತೀರ್ಥರು
ಹರಿವಾಯುಗಳು ಮೂರಕ್ಕರದ ದೇವ ಮೂರು ವಸ್ತುವ ಬೆರಸಿ ಮೂರು ಮೂರಾಗಿಸೆಯೆ ಪಾಲಿಸುವ ನಮ್ಮ ಎರಡು ವಸ್ತುವು ಸೇರಿ ದೇಹಕ್ಕೆ ಚಲನೆಯದು ಹರಿವಾಯುಗಳ ಒಲುಮೆ ದೇಹ ರಕ್ಷಕವು4 ಅವ್ಯಾಕೃತಾಕಾಶ ರೂಪದಲಿ ತಾನಿಹನು ವಿಶ್ವಂಭರಾತ್ಮಕನು ದೇವ ನಿಜದಿಂದ ಸೃಷ್ಟಿಗವನೇ ಮೂಲ ವಾಸುದೇವಾತ್ಮಕನು ಮಧ್ವಹೃದಯನಿವಾಸಿ ಸರ್ವಮೂಲನವ 5 ಪೃಥಿವಿಯಪ್ ತೇಜಸ್ಸು ಮೂರು ಭೂತಾಣುಗಳು ತುಂಬಿಯಾಗಸದಲ್ಲಿ ವ್ಯಾಕೃತವದಹುದು ತುಂಬಿ ವಾಯುವಿನಣುಗಳ್ ಒಂದೆಡೆಯೆ ತಾನಹುದು ವ್ಯಾಕೃತಾಕಾಶ 6 ಆಗಸದಿ ವಾಯುವಿನ ಪರಮಾಣು ಒತ್ತಡವೆ ದೃಶ್ಯವಾಯುವು ತಾನೆ ಹರಿವುದಾಗಸದಿ ದೃಶ್ಯವಾಯುವಿನ ಪರಮಾಣುವೊತ್ತಡದಿ ನಿಜ ತೇಜವುದಯಿಸುವುದದರಲ್ಲಿ ಮೂರಿಹವು 7 ತೇಜದಿಂದಲೆ ನೀರು ಜಗಕೆಯಾಧಾರವದು ನೀರಿನಿಂದಲೆ ಭೂಮಿ ಉದಯಿಸುವದದರಿಂ ಪಂಚಭೂತಂಗಳಿವು ಭೂಮಿಯಲಿ ತೋರುವವು ಪಂಚಭೂತಾತ್ಮದ ಪ್ರಕೃತಿಯಿದು ಸತ್ಯ 8 ಇವುಗಳಿಗೆ ಒಡತಿಯಾ ಪ್ರಕೃತಿದೇವಿಯು ಸತ್ಯ ಪ್ರಕೃತಿಯೆದೆಯಲ್ಲಿರುವ ದೇವರೂ ಸತ್ಯ ಪ್ರಕೃತಿ ಪುರುಷರ ಲೀಲೆ ಮಧ್ವಮತದಾ ತಿರುಳು ಮಧ್ವ ಸದ್ಗ್ರಂಥಗಳು ಸರ್ವಮೂಲಗಳು 9 ಭೂತಕೃತ್ತೂ ಅವನೆ ಭೂತಪಾಲಕನವನೆ ಭೂತಭಾವದಲಿದ್ದು ಪ್ರೇರಕನು ಅವನೆ ಆತ್ಮಾಂತರಾತ್ಮವೆಂದೆರಡು ರೂಪಗಳವಗೆ ಹೃದಯದಾಕಾಶದಲಿ ವಾಸವಾಗಿಹನು 10 ಪಂಚಭೂತಗಳು ಪಂಚೇಂದ್ರಿಯಗಳು ಪಂಚ ಕರ್ಮೇಂದ್ರಿಯಗಳ ರಚಿಸಿ ಹರಿಯು ಪಂಚಾತ್ಮಕನು ದೇವ ಪಂಚವಾಯುಗಳಿಂದ ಪಂಚತನ್ಮಾತ್ರಗಳ ಜ್ಞಾನವೊದಗಿಪನು11 ಸುಖ ರತಿ ಪ್ರೇರಕನು ತಾನಾಗಿ ಸಿರಿವರನು ಶಾರೀರ ಪುರದಲ್ಲಿ ನೆಲೆಯಾಗಿ ಇಹನು ಬೆಳಗುತ್ತ ದೇಹವನು ಬೆಳಗಿಸುವ ದೇವತೆಗ ಳವನ ಬಳಿಯಿದ್ದು ಸೇವೆಯ ಗೈಯುತಿಹರು 12 ವಿಶ್ವ ದರ್ಶನಕಾಗಿ ವಿಶ್ವಜನರೊಳು ಕಣ್ಣಿನಲ್ಲಿ ನೆಲೆನಿಂತು ವಿಶ್ವಸಾಕ್ಷಿಯು ಸೂರ್ಯನಲ್ಲಿಯೂ ತಾನಿದ್ದು ವಿಶ್ವವನು ಬೆಳಗಿಸುತ ಜ್ಞಾನವೊದಗಿಪನು 13 ಸೂರ್ಯನೊಂದೆಡೆಯಿದ್ದು ತಾನ್ ಬೆಳಗಿ ಲೋಕವನು ತನ್ನ ಕಿರಣಂಗಳಿಂ ಬೆಳಗಿಸುವ ತೆರದಿ ಕಣ್ಣು ಮೊದಲಾದಿಂದ್ರಿಯಗಳಲಿ ತಾನಿದ್ದು ಅವುಗಳನು ಬೆಳಗಿಸುತ ರಕ್ಷಿಪನು ನಮ್ಮ14 ತೈಜಸದ ದೇವನವ ತೇಜದಾರೂಪದಲಿ ಕಂಠಗತನಾಗಿದ್ದು ದೇಹದಲಿ ಬೆಳಗಿ ಹುಲಿ ಕರಡಿ ಮೊದಲಾದ ಜಂತುಗಳ ಸೃಷ್ಟಿಸುತ ಸ್ವಪ್ನಲೋಕವನು ಮಾನಸಕೆ ತೋರಿಸುವ 15 ಪ್ರಾಜ್ಞರೂಪದ ದೇವನಪ್ಪಿ ಜೀವಾತ್ಮನನು ಮಾಯೆಯಾ ಮುಸುಕಿನಿಂದಜ್ಞಾನಬರಿಸಿ ಜೀವನಿಗೆ ತೋರದುದರಿಂದ ಪ್ರಾಜ್ಞನದಾಗಿ ಜಗಕೆ ತನ್ನಯ ಮಾಯೆಯನು ತೋರಿಸುವನು 16 ನಾಲ್ಕನೆಯ ರೂಪವದು ತುರ್ಯ ನಾಮದಲಿಹುದು ಮುಕ್ತರಿಗೆ ಮಾತ್ರವೇ ತೋರುವುದು ಪೇಳ್ವೆ ಜಾಗರಾದಿಯವಸ್ಥೆಗಳ ನಾಲ್ಕು ಪೇಳಿದನು ಮಾಯಾವಿ ಪರಮಾತ್ಮನದು ಲೀಲೆಗಳಿವು 17
--------------
ನಿಡಂಬೂರು ರಾಮದಾಸ
ಹರಿವಾಸರದ ಮಹಿಮೆಯೆನು ಅರಿತಷ್ಟು ಪೇಳುವೆನು ತರಳರಾಡುವ ನುಡಿಯೆಂದು ಗುರುಜನರು ಮನ್ನಿಸಿರಿನ್ನು ಪ. ಹಿಂದೆ ತಾನಜಾಮಿಳನು ಮಂದಮತಿಯಾಗಿ ಜಗದಿ ನಿಂದಿತಾಚಾರದಲಿ ಮನವಿರಿಸಿ ನಲಿದು ಬಂಧುಮಿತ್ರರ ನುಡಿಗೊಂದಿಷ್ಟು ಕಿವಿಗೊಡದೆ ಮನ ಬಂದಂತೆ ಚರಿಸಿದರನು ಮದಮೋಹದಿಂದ 1 ಮಂದಿರವ ನೊಳಪುಗಲು ಗಂಗೆಯಂತು ದಂದುಗದಿನೊಂದು ಮಡದಿ ಮಕ್ಕಳಿಗಾಗಿ ನಿಂದಂತೆ ತಾನುಪವಾಸ ಜಾಗರದಿ ಕಳೆದು ಮರುದಿನ ದ್ವಾದಶೀ2 ಮರಣದಾಹದಿ ಹರಿವ ನೀರ ಕುಡಿಯೇ ಹರಿಗರ್ಪಿಸಿದ ತುಳಸಿದಳವೊಂದದರೊಳಿರೆ ದುರಿತಕೋಟಿಗಳೆಲ್ಲ ದೂರಸಾರೆ 3 ಅಂತ್ಯಕಾಲದೊಳೈತಂದ ಅಂತಕನದೂತರಂ ಕಂಡು ಇಂದಿರೇಶನಾಣತಿಯಂತೆ ಕಿಂಕರರು 4 ಅರಿಯದಾಚರಿಸಿದೊಡಂ ಹರಿವಾಸರದ ಮಹಿಮೆ ಪರಮಪದನಾಥನೇ ವಶನಪ್ಪನಯ್ಯಾ 5 ಹರಿಭಕ್ತ ರುಕ್ಮಾಂಗದನ ಪರಿಭವಿಸೆ ಬರೆ ಮೋಹಿನಿ ತರಳ ಧರ್ಮಾಂಗದನ ಶಿರವತೆಗೆಯೆಂದೆನಲು ವರಧರ್ಮದೇವನೇ ಕರವಿಡಿದು ಪೊರೆದಂ6 ದಶಮಿ ದ್ವಾದಶೀ ದಿನದಲ್ಲಿ ಅಶನವೊಂದೇಸಾರಿ ಏಕಾ ಕುಸುಮನಾಭನಾ ಶೇಷಗಿರಿವಾಸ ಕೈಬಿಡನೊ 7
--------------
ನಂಜನಗೂಡು ತಿರುಮಲಾಂಬಾ
ಹರಿವಾಸುದೇವನೆ ಬ್ಯಾಸರಿಲ್ಲದೆ ದಾಸನ ಮೊರೆ ಕೇಳು ಜಗದೀಶ ನನ್ನ ಸಮಾನ ಕರುಣಾಭೂಪರುಂಟೆ ಪೇಳು ಪ. ಕಾಲಕಾಲಕೆ ಪೇಳಲಂಜುವೆ ಶ್ರೀಲಲಾಮ ಹರಿಯೆ ಆದರೆ ಬೀಳಗೊಳಿಸುವ ದೇಹಬಾಧೆಯು ತಾಳಲಾಪ ಹೊರೆಯೆ ಎರಡೇಳು ಭಕ್ತಿಯ ಮ್ಯಾಳವರಿಯದೆ ಹಾಳು ಮೋಹ ತೆರೆಯೆ ಮುಳಿಗೇಳಲಾರೆನು ಮಾಧವನೆ ಕರುಣಾಳು ಕಾಯೊ ದೊರೆಯೆ 1 ಯಾರ ಧನವಿನ್ಯಾರ ಭೂಮಿಯು ಯಾರ ವಸ್ತುಗಳಿವು ಕುಂಬಾರ ಭಾಂಡಗಳಂತೆ ನಶ್ವರ ತೋರಲ್ಯಾಕೆ ಫಲವು ಲಘು ನೀರಗುಳ್ಳೆಯ ಪೋಲ್ವ ದೇಹಕೆ ಸೇರಿದ ಸನ್ನಹವು ಬಿಳಿ ಭಾರ ಪೊತ್ತ ಥರವು 2 ಅದರಿಂದ ವೆಂಕಟಮಂದಿರನೆ ನಿನ್ನಿಂದ ಮಾತ್ರ ತಿಳಿಸು ಮೂರ್ತಿ ತಾಪಗಳಿಂದ ಬ್ಯಾರೆಗೊಳಿಸು ದ್ವಿಜ ವೃಂದ ರಕ್ಷಕನೆಂಬ ಬಿರುದನು ಎಂದೆಂದಿಗು ಘಳಿಸು ಭವ ಬಂಧ ಮೋಚಕ ನಿನ್ನ ಸೇವಾನಂದವಾರ್ಧಿಗಿಳಿಸು 3
--------------
ತುಪಾಕಿ ವೆಂಕಟರಮಣಾಚಾರ್ಯ
ಹರಿಸರ್ವೋತ್ತಮನೆಂದರಸುವರು ಪ ಹರಿದಾಸರಿವರು ಧರೆಯೊಳಿವರಿಗೆ ಸರಿಗಾಣೆ ಕೇಳಮ್ಮ ಜಾಣೆ ಅ.ಪ ಸಾಧುಸಜ್ಜನರಿಗೆ ಬಾಗುವರು ವೇದಕೆ ನಮಿಸುವರು ವಾದವಾಂಛಲ್ಯವ ತೊಡದಿಹ್ಯರು ಭೇದಿಲ್ಲದಿವರು 1 ಕಾಮ ಕ್ರೋಧಾದಿಗಳು ಜೈಸಿಹ್ಯರು ತಾಮಸಬಿಟ್ಟಿಹರು ಭೂಮಿ ಮೋಹಾದಿಗಳನಳಿದಿಹ್ಯರು ಸ್ವಾಮಿನ ಭಜಿಸುವರು 2 ಕ್ಲೇಶಪಂಚಕದಿಂದುಳಿದಿಹ್ಯರು ಮೋಸಕೆ ಒಳಪಡರು ಅಶಪಾಶಗಳೆಲ್ಲ ತುಳಿದಿಹ್ಯರು ವಾಸನೆ ತೊಳೆದಿಹ್ಯರು 3 ಮೆಚ್ಚದೆ ಸಂಸಾರ ತುಚ್ಛೀಕರಿಸಿಹ್ಯರು ಎಚ್ಚರಗೊಂಡಿಹ್ಯರು ಅಚ್ಚುತಾನಂತನೆ ಗತಿಯೆಂಬುವರು ಬಚ್ಚಿಟ್ಟು ನೆನೆಯುವರು 4 ಹರಿಯೆ ಪರದೈವವೆಂದರಿತಿಹ್ಯರು ಹರಿಯ್ಹೊರತಿಲ್ಲೆಂಬುವರು ಸರುವ ಜಗಭರಿತನೆಂದವರು ಸಿರಿರಾಮನ್ನ ತಿಳಿದಿಹ್ಯರು 5
--------------
ರಾಮದಾಸರು
ಹರಿಸ್ಮರಣೆ ಪೂರಣ ಕರತನ್ನಿ ಧ್ರುವ ಕರತನ್ನಿರೊ ವರಗುರು ಕೃಪೆಯಿಂದ ಗುರುವರ ಮೂರುತಿ ಕರುಣಾನಂದ 1 ಕರುಣಿಸಿ ನೋಡಲು ಬಾಹುದು ಪುಣ್ಯ ಶರಣ ಜನರಿಗಿದು ತಾರ್ಕಣ್ಯ 2 ತಾರ್ಕಣ್ಯಂಬುದು ತರ್ಕರಹಿತ ಸರ್ಕನೆ ತಿಳಿವದು ತನ್ನೊಳು ಗುರುತ 3 ಗುರ್ತವಾಗಲು ನಿಜ ಹಿತಾರ್ಥ ಅರ್ತವಗಿದು ಸ್ವಸುಖ ಪರಮಾರ್ಥ 4 ಪರಮಾರ್ಥವು ಪರಗತಿ ಸಾಧನ ಪರಲೋಕಕೆ ಐದುವ ಸೊಪಾನ 5 ಸೋಪಾನವೆ ಸುಲ್ಲಭ ಸುಪಥ ಉಪಾಯದಲಿ ತಿಳಿಯಲು ಸ್ವಹಿತ 6 ಸ್ವಹಿತ ಮಾರಿಕೊಂಬುದೇ ಸುಖ ಸಾಹ್ಯ ಮಾಡುವ ಶ್ರೀ ಗುರುಕುಲತಿಲಕಾ 7 ಶ್ರೀಗುರು ಸೇವೆಯ ಮಾಡಿರೊ ಬ್ಯಾಗ ಜಗದೊಳಗಿದು ಮಹಾ ಪುಣ್ಯದ ಯೋಗ 8 ಯೋಗವೆ ಮಹಾ ನಿಜ ಭಕ್ತರ ಪ್ರಾಣ ಸುಗಮ ಸುಪಥ ಸದ್ಗತಿ ಸಾಧನ 9 ಸಾಧನ ಪಡೆವದು ಗುರುದಯ ಕರುಣ ಸದಮಲ ಸುಖ ಸುಜ್ಞಾನದ ಸ್ಪುರಣ10 ಸ್ಪುರಣ ಸುಫಲಿತ ಸುಜನರ ಹೃದಯ ಸುರ ಮುನಿ ಜನರಾನಂದದ ಉದಯ 11 ಉದಯವಾಯಿತು ಮಹಿಪತಿ ಮನದೊಳಗೆ ಸದೋದಿತವಾಯಿತು ಗುರುಕೃಪೆಲೆನಗೆ 12 ಎನ್ನೊಳು ದೋರಿತಾನಂದದಲಹರಿ ತನ್ನಿಂದಲಿ ತಾನೊಲಿದ ಶ್ರೀ ಹರಿ 13
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರುಷದಿ ತಾರೆ ಆರುತಿಪುರವೈರಿ ಗೌರೀಶಾ ಧವಳಾಂಗಗೆ ಪ ಅಶುಭನೇತ್ರ ಶಶಿಧರಗೆ | ವೃಷಭೇಂದ್ರ ಶ್ಯಂದನಗೆಕುಸುಮಬಾಣ ಮದಹರಗೆ ಬಿಸಜಾಕ್ಷಗೆ 1 ಭುಜಗಮಾಲಾ ಖಳಕಾಲಾ | ವಿಜಿತ ಗೋ ಶಂಕರಗೆರಜತ ಶೈಲ ಮಂದಿರಗೆ | ಕಮಲಾಂಬಿಕೆ 2 ಮಣಿ 3
--------------
ಶಾಮಸುಂದರ ವಿಠಲ
ಹರೇ ಹರೇ ಕೃಷ್ಣ ಹರೇ ಕೃಷ ಹರೇ ಹರೇ ಹರೇ ಪ ಕೌಸಲ್ಯ ವರವಂಶೋದ್ಭವ ಸುರ ಸಂಸೇವಿತ ಪದರಾಮ ಹರೇ ವಂಶೋದ್ಭವ ಶ್ರೀ ಕೃಷ್ಣಹರೇ 1 ಮುನಿಮಖರಕ್ಷಕ ದನುಜರಶಿಕ್ಷಕÀ ಘಣಿಧರ ಸನ್ನುತರಾಮಹರೇ ಘನವರ್ಣಾಂಗ ಸುಮನಸರೊಡೆಯ ಶ್ರೀ - ವನಜಾಸನ ಪಿತ ಕೃಷ್ಣ ಹರೇ 2 ಶಿಲೆಯ ಪಾದರಜದಲಿ ಸ್ತ್ರೀ ಮಾಡಿದ ಸುಲಲಿತ ಗುಣನಿಧಿ ರಾಮ ಹರೇ ಬಲುವಕ್ರಾಗಿದ್ದ ಬಲೆಯ ಕ್ಷಣದಲಿ ಚಲುವೆಯ ಮಾಡಿದ ಕೃಷ್ಣ ಹರೇ 3 ಹರಧನುಭಂಗಿಸಿ ಹರುಷದಿಜಾನಕಿ ಕರವಪಿಡಿದ ಶ್ರೀರಾಮ ಹರೇ ಸಿರಿ ರುಕ್ಮಿಣಿಯನು ತ್ವರದಲಿ ವರಿಸಿದ ಶರಣರ ಪಾಲಕ ಕೃಷ್ಣ ಹರೇ 4 ಜನಕ ಪೇಳೆ ಲಕ್ಷ್ಮಣ ಸೀತಾ ಸಹ ವನಕೆ ತೆರಳಿದ ರಾಮ ಹರೇ ವನಕೆ ಪೋಗಿ ತನ್ನಣುಗರೊಡನೆ ಗೋ - ವನು ಪಾಲಿಪ ಶ್ರೀ ಕೃಷ್ಣ ಹರೇ5 ತಾಟಕೆ ಖರಮಧು ಕೈಟಭಾರಿಪಾ ಪಾಟವಿ ಸುರಮಖ ರಾಮಹರೇ ಆಟದಿ ಫಣಿಮೇಲ್ ನಾಟ್ಯವನಾಡಿದ ಖೇಟವಾಹ ಶ್ರೀ ಕೃಷ್ಣ ಹರೇ 6 ಚದುರೆ ಶಬರಿಯಿತ್ತ ಬದರಿಯ ಫಲವನು ಮುದದಿ ಸೇವಿಸಿದ ರಾಮ ಹರೇ ವಿದುರನ ಕ್ಷೀರಕೆ ವದಗಿ ಪೋದ ಶ್ರೀ ಪದುಮನಾಭ ಜಯ ಕೃಷ್ಣ ಹರೇ 7 ಸೇವಿತ ಹನುಮ ಸುಗ್ರೀವನ ಸಖಜಗ - ತ್ಪಾವನ ಪರತರ ರಾಮಹರೇ ದೇವ ದೇವ ಶ್ರೀ ಕೃಷ್ಣ ಹರೇ 8 ಗಿರಿಗಳಿಂದ ವರಶರಧಿ ಬಂಧಿಸಿದ ಪರಮ ಸಮರ್ಥ ಶ್ರೀರಾಮ ಹರೇ ಗಿರಿಯ ತನ್ನ ಕಿರಿ ಬೆರಳಿಲೆತ್ತಿ ಗೋ - ಪರನ ಕಾಯ್ದ ಶ್ರೀ ಕೃಷ್ಣ ಹರೇ 9 ಖಂಡಿಸಿದಶಶಿರ ಚಂಡಾಡಿದ ಕೋ - ದಂಡಪಾಣಿ ಶ್ರೀ ರಾಮ ಹರೇ ಪಾಂಡುತನಯರಿಂ ಚಂಡಕೌರವರ ದಿಂಡುಗೆಡಹಿಸಿದ ಕೃಷ್ಣ ಹರೇ 10 ತವಕದಯೋಧ್ಯಾ ಪುರಕೈದಿದ ತ - ನ್ಯುವತಿಯೊಡನೆ ಶ್ರೀ ರಾಮ ಹರೇ ರವಿಸುತ ತನಯಗೆ ಪಟ್ಟವಗಟ್ಟಿದ ಭವತಾರಕ ಶ್ರೀ ಕೃಷ್ಣ ಹರೇ 11 ಭರತನು ಪ್ರಾರ್ಥಿಸಲರಸತ್ವವ ಸ್ವೀ - ಕರಿಸಿದತ್ವರದಲಿ ರಾಮ ಹರೇ ವರಧರ್ಮಾದ್ಯರ ಧರಿಯೊಳು ಮೆರೆಸಿದ ಪರಮಕೃಪಾಕರ ಕೃಷ್ಣ ಹರೇ 12 ಧರೆಯೊಳಜ್ಞಜನರನು ಮೋಹಿಪುದಕೆ ಹರನ ಪೂಜಿಸಿದರಾಮ ಹರೇ ಹರನ ಪ್ರಾರ್ಥಿಸಿವರವನು ಪಡೆದಾ ಚರಿತೆಯಗಾಧವು ಕೃಷ್ಣ ಹರೇ 13 ಅತುಳಮಹಿಮ ಸದ್ಯತಿಗಳ ಹೃದಯದಿ ಸತತ ವಿರಾಜಿಪÀರಾಮಹರೇ ಸಿತವಾಹನ ಸಾರಥಿಯೆನಿಸಿದ ಸುರತತಿ ಪೂಜಿತ ಪದ ಕೃಷ್ಣ ಹರೇ 14 ರಾಮ ರಾಮ ಯಂದ್ನೇಮದಿ ಭಜಿಪರ ಕಾಮಿತ ಫಲದ ಶ್ರೀ ರಾಮಹರೇ ಪ್ರೇಮದಿ ಭಕ್ತರ ಪಾಲಿಪ ಶ್ರೀ ವರ - ದೇಶವಿಠಲ ಶ್ರೀ ಕೃಷ್ಣ ಹರೇ 15
--------------
ವರದೇಶವಿಠಲ
ಹಸೆಗೆ ಕರೆಯುವ ಹಾಡು ಇಂದಿರಾ ದೇವಿಯ ರಮಣ ಬಾವೃಂದಾರಕ ಮುನಿ ವಂದ್ಯ ಬಾ ಶೋಭಾನೇ ಪ ಸಿಂಧು ಶಯನ ಗೋವಿಂದ ಸದÀಮಲಾನಂದ ಬಾತಂದೆಯ ಕಂದ ಬಾ ಮಾವನಾ ಕೊಂದ ಬಾ ಗೋಪಿಯಕಂದ ಬಾ ಹಸೆಯ ಜಗುಲಿಗೇ ಅ.ಪ. ಕೃಷ್ಣವೇಣಿಯ ಪಡೆದವನೆ ಬಾಕೃಷ್ಣನ ರಥ ಹೊಡೆದವನೆ ಬಾಕೃಷ್ಣೆಯ ಕಷ್ಟವ ನಷ್ಟವ ಮಾಡಿದ ಕೃಷ್ಣನೆ ಬಾ ||ಯದುಕುಲ ಶ್ರೇಷ್ಠ ಬಾಸತತ ಸಂತುಷ್ಟನೆ ಬಾಉಡುಪೀಯ ಕೃಷ್ಣ ಬಾ ಹಸೆಯ ಜಗುಲಿಗೇ 1 ನಾಗಾರಿ ಮಧ್ಯಳೆ ಹೊಂತಕಾರಿ ಬಾ ||ಬಲು ದುರಿತಾರಿ ಬಾಬಹು ವೈಯ್ಯಾರಿ ಬಾಸುಂದರ ನಾರೀ ಬಾ ಹಸೆಯ ಜಗುಲಿಗೇ 2 ಮಣಿ ಖಣಿಯೇ ಬಾಸೌಭಾಗ್ಯದ ಪನ್ನಗವೇಣಿ ಬಾ ||ಪರಮ ಕಲ್ಯಾಣಿ ಬಾನಿಗಮಾಭಿಮಾನೀ ಬಾಭಾಗ್ಯದ ನಿಧಿಯೇ ಬಾ ಹಸೆಯ ಜಗುಲಿಗೇ 3 ಸಿರಿ ಮೋಹನ ವಿಠಲನ ಸತಿಯೇ ಬಾವೇದಾವತಿಯೇ ಬಾಬಲು ಪತಿವ್ರತೆಯೇ ಬಾ ಹಸೆಯ ಜಗುಲಿಗೇ 4
--------------
ಮೋಹನದಾಸರು
ಹಾರವ ಕಟ್ಟಿ ಕೊಡುವೆ ಲಕ್ಷ್ಮೀ ವರ ಭಕುತಿಯ ಪ. ಮಾರಮಣನಿಗೆ ಹಾರ ಹಾಕಿ ತೋರಿಪೆ ಪಥವೆಂದು ಅ.ಪ. ರಾಮ ಅಮೃತವೆಂಬ ನೇಮದ ಗಂಗೆಯ ಕಾಮಿಸಿ ತಂದು ನಿರಾಮಯ ಕೃಷ್ಣಗೆಂದು ಪ್ರೇಮದ ನಾರನು ಕಾಮಿತ ಪುಷ್ಪ ಮಂದಾರ ಮಲ್ಲಿಗೆಯನು ಸ್ವಾಮಿಗೆ ಸಲಿಸೆಂದು 1 ಅಗಣಿತ ಮಹಿಮಗೆ ಸೊಗವಿನ ತುಳಸಿಯ ಚಿಗರಿನ ಹಾರವ ಜಗಿದಾನಂದದಿ ಸೊಗಸಿನ ರೋಜವ ಬಗೆಬಗೆ ಭೋಗಗ ಳೊಗೆದುಗೆಂಡಸಂಪಿಗೆ ಚಿಗಿಚಿಗಿದಾಡುತ 2 ಯುಕ್ತಿಯ ಮರುಗ ಶಕ್ತಿ ಸ್ವರೂಪಳೆ ಭಕ್ತ ವತ್ಸಲನಿಗೆ ಇತ್ತಪೆ ನಾನೀಗ ಸ್ತುತ್ಯ ಶ್ರೀ ಶ್ರೀನಿವಾಸ ದೇವಕ್ಕಳಿಂ ನೀನೆಂದು 3
--------------
ಸರಸ್ವತಿ ಬಾಯಿ
ಹಿಂಗದೆ ಮನದಣಿಯ ರಂಗನ ಭಜಿಸೊ ಪ ರಂಗನ ಭಜಿಸೊ ಕೃಷ್ಣನ ಭಜಿಸೊ ಅ ಯಾತಕೆ ಸುಮ್ಮನಿರುವೆಪಾತಕ ಹೆಚ್ಚಿ ಮೆರೆವೆನೀತಿಯ ತಪ್ಪಿ ನೀನಿರುವೆಭೂತಳ ಭೋಗ ಸ್ಥಿರವೆ 1 ಗೆಜ್ಜೆಯ ಕಟ್ಟಿ ಆಡೊಲಜ್ಜೆಯ ಬಿಟ್ಟು ಪಾಡೊಮುಜ್ಜಗನ ಕೊಂಡಾಡೊಸಜ್ಜನರ ಜೊತೆಗೂಡೊ2 ಪನ್ನಗರಾಜ ಶಯನನಪನ್ನಗಭೂಷಣ ನುತನಉನ್ನಂತ ಗುಣದವನಚೆನ್ನಾದಿ ಕೇಶವನ3
--------------
ಕನಕದಾಸ