ಒಟ್ಟು 6439 ಕಡೆಗಳಲ್ಲಿ , 132 ದಾಸರು , 3726 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುವ್ವಿಮಟ್ಟು ಶರಣು ರಾಘವೇಂದ್ರ ಗುರುವೆ ಶರಣು ವ್ಯಾಸರಾಜ ಪ್ರಭವೆ ಶರಣು ನಾರಸಿಂಹ ಭಕ್ತ ಶರಣು ಶರಣು ಶಂಕು ಕರ್ಣನೆ ಪ ನಿರುತ ನಿಮ್ಮ ಚರಣ ಕಮಲ ಗೆರಗಿ ಎರಗಿ ಬೇಡಿ ಕೊಂಬೆ ದುರಿತ ರಾಶಿ ಭರದಿ ಹರಿಯ ಕರುಣ ಕೊಡಿಸು ಕರುಣಿಯೆ ಅ.ಪ ವಿಧಿಯ ಶಾಪ ಧರಿಸಿ ಮುದದಿ ಉದಿಸಿ ಬಂದು ದೈತ್ಯ ಕುಲದಿ ಹೃದಯ ಗತನೆ ವಿಶ್ವವ್ಯಾಪ್ತ ಪದುಮನಾಭನೆಂದು ತೋರ್ದೆಹೋ ಬುಧರ ಮಕುಟ ಭಕ್ತಿ ಶರಧಿ ಮದನ ತೇಜ ಬೋಧ ಮಧ್ವ ಚೇಲ ತ್ರಿದಶ ಮಾನ್ಯ ಪ್ರಹ್ಲಾದ ಬಾಹ್ಲೀಕ 1 ತುಳಿದು ಶೃತಿ ವಿರೋಧ ಬೋಧೆ ಸುಜನ ತತಿಯ ಸುಮತಿ ಚಲುವ ಕುವರ ನೆನಿಸಿ ಬಂದೆ ಹೋ ಬಲಿಸಿ ಕೃಷ್ಣನನ್ನು ಕುಣಿಸಿ ಬಲಿಸಿ ವಾಯು ಮತವ ಮೆರಸಿ ಒಲಿದು ನೃಪಗೆ ರಾಜ್ಯವಾಳಿ ಹಳಿದೆ ವಿಧುವ ಕೀರ್ತಿ ವಿಭವದಿ 2 ಮತ್ತೆ ಬಂದೆ ರಾಘವೇಂದ್ರ ಹತ್ತು ಆರು ಮತ್ತೆ ನಾಲ್ಕು ಮೊತ್ತ ಕಲೆಗಳೆಲ್ಲ ಬಲ್ಲ ಸತ್ಯ ಪ್ರಾಣ ಶಾಸ್ತ್ರ ಮೆಲ್ಲನೆ ಎತ್ತ ಸಾಟಿ ಕಲ್ಪವೃಕ್ಷ ನಿತ್ಯ ವಿವಿಧ ಮಹಿಮೆ ತೋರ್ಪೆ ಇತ್ತು ಪೊರೆವೆ ಜನರ ಬಿಢೆಯ ವಿತ್ತ ನೀಡು ಭೃತ್ಯಗೆ 3 ನಾರಸಿಂಹ ವೇದ ವ್ಯಾಸ ಮೂರುತೀಶ ರಾಮಚಂದ್ರ ಸೂರಿಗಮ್ಯ ಕೃಷ್ಣ ದೇವ ಸುರರು ಎಲ್ಲರು ಸೇರಿ ನಿಮ್ಮ ನಡಿಸಿ ಕಾರ್ಯ ಸೂರೆ ಗೈಸುತಿರಲು ಕೀರ್ತಿ ಪಾರವಿಲ್ಲ ಮಹಿಮೆಗೆಂಬೆ ಈರ ಪಿತನ ಕರುಣ ಭೂಷಿತ 4 ರಾಘವೇಂದ್ರ ನಿಮ್ಮ ನಾಮ ಯೋಗ್ಯ ಜಪಿಸೆ ಭಕ್ತಿಯಿಂದ ಶ್ರೀಘ್ರನಾಶ ಅಘಸಮೂಹ ಹಾಗೆ ಸಿದ್ಧಿ ವಾಂಛಿತಂಗಳು ಯೋಗ ಸಿದ್ಧಿ ಭೋಗ ಸಿಧ್ಧಿ ಯೋಗ ಪತಿಯ ಭಕ್ತಿ ಸಿಧ್ಧಿ ಬೇಗ ಪಡೆದು ಕ್ರಮದಿ ಭವದ ಬೇಗ ನೀಗಿ ಮುಕ್ತಿ ಕಾಂಬುವ 5 ದಾನ ಗೈದನಿಷ್ಟ ಪುಣ್ಯ ಸುಜನ ಶಿಷ್ಯ ತತಿಗೆ ಶ್ರೀನಿವಾಸನನ್ನು ಯಜಿಪ ದಾನ ಶೌಂಡ ನಿಮಗೆ ಸಾಟಿಯ ಕಾಣೆ ಕಾಣೆ ಸತ್ಯ ಸತ್ಯ ನಾನು ಮೂಢ ಪಾಪಿ ಕೃಪಣ ಏನು ಸೇವೆ ಮಾಡಲಾಪೆ ಕಾಯ ಬೇಕೆಂಬೆ 6 ನಿನ್ನ ನೆನೆದ ಮಾತ್ರಕಿನ್ನು ಅನ್ನ ವಸನ ಎಲ್ಲ ಸಿಧ್ಧ ಹೊನ್ನು ಹೆಣ್ಣು ಮಣ್ಣು ಮಿಷಯ ನಿನ್ನ ಕೇಳ್ವ ಜ್ಞಾನಿ ಆಹನೆ ಮನ್ನಿಸೆನ್ನ ದೋಷರಾಶಿ ನಿನ್ನ ಶಿಷ್ಯನೆಂದು ಗ್ರಹಿಸು ಮನ್ನ ಮಾಡು ಭವವ ಬೇಗ ಕಣ್ಣು ನೀಡು ಜ್ಞಾನ ದೆಂಬುವೆ 7 ಜಯ ಸುಧೀಂದ್ರ ಪ್ರೇಮ ಪುತ್ರ ಜಯ ವಿಜೀಂದ್ರವರ ಸುಪೌತ್ರ ಜಯ ಜಯೇಂದ್ರ ಕರುಣ ಪಾತ್ರ ಜಯ ಕವೀಂದ್ರ ಮಧ್ವ ಛಾತ್ರನೆ ಜಯ ಭವಾಭ್ದಿ ಪೋತ ಚರಣ ಜಯ ದಯಾಭ್ದೆ ಸುಗುಣ ಕೋಶ ಜಯ ಯತೀಂದ್ರ ಕಾಮಧೇನು ಜಯವು ಜಯವು ಜ್ಞಾನ ಭಾಸ್ಕರ 8 ಸತ್ಯಸಂಧ ಸತ್ಯ ಸ್ತಂಭ ಭೃತ್ಯ ಸತ್ಯ ವೇತ್ತ ಸತ್ಯನಾಥ ನೊಲಿ ಮೆಯಿಂದ ನಿತ್ಯ ಕಾಂಬನೆ ಸತ್ಯ ಮಾತೆ ಸಿರಿಯ ನಾಳ್ವ ಮುಕ್ತಿದಾತ ಕೃಷ್ಣವಿಠಲ ಚಿತ್ತದಲ್ಲಿ ಸುಳಿಯಲೆಂಬಭೃತ್ಯ ಬಯಕೆ ಸತ್ಯ ಮಾಡ್ಪ್ರಭೋ 9
--------------
ಕೃಷ್ಣವಿಠಲದಾಸರು
ಸುಶಿಲೇಂದ್ರತೀರ್ಥರ ವೈಭವವನು ನೋಡ ಬನ್ನಿರೆ ಜನರು ಹೊಸರಿತ್ತಿ ಧೀರೇಂದ್ರರ ಬಳಿಯಲಿ ಹಸನಾಗಿರುವವರು ಪ. ವರದಾ ತೀರದಿ ನೆಲಸುತ ಹರುಷದಿ ವರಗಳ ಕೊಡುತಿಹರು ಪರಿಪರಿಯಿಂದಲಿ ಸೇವಿಪ ಭ- ಕ್ತರ ಕರುಣದಿ ಪೊರೆಯುವರು 1 ವೃಂದಾವನದಲಿ ದ್ವಾದಶ ವರ್ಷಗ ಳಿಂದಲಿ ನಿಂದಿಹರು ಕುಂದದೆ ಶ್ರೀ ರಾಘವೇಂದ್ರರ ದಯವನು ಚಂದದಿ ಪಡೆದಿಹರು 2 ಕುಷ್ಟಾದಿಗಳನು ದುಷ್ಟ ಗ್ರಹಗಳ ಥಟ್ಟನೆ ತೊಲಗಿಪರು ಇಷ್ಟ ಭಕ್ತರನು ಸಲಹುವ ಗೋಪಾಲಕೃಷ್ಣವಿಠ್ಠಲ ಪ್ರಿಯರು 3
--------------
ಅಂಬಾಬಾಯಿ
ಸುಳಾದಿ ಕೌಸ್ತುಭ ಫಾಲ ಸಿಂಗಾಡಿಯಂತಿಪ್ಪ ಪುರ್ಬುಕೂರ್ಮನಂದದಿಗಲ್ಲ ಚುಬುಕ ಚುಬುಕಾಗ್ರದಿಂಸಿರಿಯರಸ ಹಯವದನ ಶೇಷಗಿರಿ ಅರಸನ ಕಿರೀಟದÀಪರಿಪರಿಯ ಸೊಬಗ ನಾ ಕಂಡು ಕೃತಾರ್ಥನಾದೆ ನಾ 1 ಮಠ್ಯತಾಳ ಇಂದಿನದಿನ ಸುದಿನ ಗೋವಿಂದನ ಕಂಡ ಕಾರಣಹಿಂದಿನ ಪಾಪವೃಂದವು ಬೆಂದುಹೋಯಿತು ಎನಗೆಮುಂದಿನ ಮುಕುತಿ ದೊರಕಿತುತಂದೆ ಹಯವದನನೊಲವಿಂದ 2 ತ್ರಿಪುಟತಾಳ ಪಾದ ಪದುಮದ ನೆನಹೊಂದಿದ್ದರೆ ಸಾಕು 3 ರೂಪಕತಾಳ ಗುರು ಭಕುತಿಯಿರಬೇಕು ಹಿರಿಯರ ಕರುಣವು ಬೇಕುಹರಿಕಥೆಗಳ ನಿತ್ಯದಲಿ ಕೇಳುತಿರಬೇಕುವಿರಕುತಿ ಬೇಕು ವಿಷ್ಣುವಿನಾರಾಧನೆ ಬೇಕುವರಮಂತ್ರ ಜಪಬೇಕು ತಪಬೇಕು ಪರಗತಿಗೆಪರಿಪರಿಯ ವ್ರತಬೇಕು ಸಿರಿಪತಿ ಹಯವದನನಪರಮಾನುಗ್ರಹ ಬೇಕು ವಿಷಯನಿಗ್ರಹಬೇಕು 4 ಝಂಪೆತಾಳ ಹರಿಸಗುಣ ಸಾಕಾರ ಸಕಲಸುರರೊಡೆಯ ನಿ-ರ್ಜರರೆಲ್ಲ ಹರಿಯ ಕಿಂಕರರೆಂದರಿಯಬೇಕುಮರಣಜನನ ದೋಷಗಳಿಗತಿ ದೂರತರನೆನಿಪಸ್ಮರಣೆ ಸಂತತಬೇಕು ದುರಾಚಾರ ಬಿಡಬೇಕುಸಿರಿ ಹಯವದನ ಶೇಷಗಿರಿ ಅರಸನಸ್ಮರಣೆಯಿದ್ದವನು ಸಂಸಾರ ಭಯವನುತ್ತರಿಸುವ 5 ಆದಿತಾಳ ಶ್ರೀನಾಥ ಪ್ರಭುವೆತ್ತ ಹೀನಯೋನಿಗಳೊಳುನಾನಾದುಃಖಗಳುಂಬ ಹೀನ ಮಾನವನೆತ್ತಭಾನುಮಂಡಲವೆತ್ತ ಶ್ವಾನನುಬ್ಬರವೆತ್ತಮಾನವ ಹರಿ ನಾನೆಂಬುದ ನೆನೆಯದಿರುದಾನವಕುಲವೈರಿ ಹಯವದನ ವೆಂಕಟಶ್ರೀನಿವಾಸನ ದಾಸರ ದಾಸನೆನಿಸಿಕೊ 6 ಏಕತಾಳ ಕೈವಲ್ಯವನೀವ ನಮ್ಮಶ್ರೀವಲ್ಲಭನ ಕೈಯಿಂದನೀವೆಲ್ಲ ಕ್ಷುದ್ರವ ಬೇಡಿಗಾವಿಲನ ಪೋಲದಿರಿಸಾವಿಲ್ಲದ ಮುಕುತಿಪಥವಬೇಡಿಕೊಳ್ಳಿರೊನೋವಿಲ್ಲದಂತೆ ಸುಖಿಸಬಲ್ಲಕೋವಿದರೆಲ್ಲರುಪೂವಿಲ್ಲನಯ್ಯ ವೆಂಕಟಪತಿ ಹ-ಯವದನನ್ನ ಪ-ದವಲ್ಲದನ್ಯತ್ರ ದಾವಲ್ಲಿ ಭಯ ತಪ್ಪದು 7 ಅಟ್ಟತಾಳ ಗಾತ್ರವ ಬಳಲಿಸಿ ಸ್ತೋತ್ರವ ಪಾಡುತ್ತಯಾತ್ರೆಯ ಮಾಡಿ ವೆಂಕಟೇಶನ ಮೂರ್ತಿಯನೇತ್ರದಿ ನೋಡಿ ತಮ್ಮಿಷ್ಟವ ಪಡೆವ ಸ-ದ್ಭಕ್ತರ ಕಂಡುನಿನ್ನ ಮನದ ಭ್ರಮೆಯ ಬಿಡುದೈತ್ಯ ಪೌಂಡ್ರಕಮತವ ನೆಚ್ಚಿ ಕೆಡಬೇಡಚಿತ್ರಚರಿತ್ರ ಹಯವದನನೊಲಿಸಿಕೊ 8 ದಿಲ್ಲಿಯರಾಯನ ಕಂಡು ಪುಲ್ಲಿಗೆಯ ಬೇಡುವರೆತಲ್ಲೆಯೂರಿ ತಪಸು ಇದ್ದಲ್ಲಿ ಸಾಧಿಸಿಕೊಳ್ಳಿರೊಕ್ಷುಲ್ಲಕರೆಂಜಲನುಂಡು ಬಾಳ್ವರ ನೋಡು ಲಕ್ಷುಮಿವಲ್ಲಭನಲ್ಲದೆ ಹೀನಫಲದಾಸೆ ಸಲ್ಲದಯ್ಯಚೆಲ್ವ ಹಯವದನ ತಿಮ್ಮನಲ್ಲದೆ ಕೈವಲ್ಯಕೆಹಲ್ಲು ಹಂಚಿಗೆ ಬಾಯಿತೆರೆದಂತೆ ಅಲ್ಲಲ್ಲಿಗೆ ಪೋಗದಿರಿ 9 ರೂಪಕತಾಳ ಹನುಮಂತನ ನೋಡು ತನುಮನಧನಂಗಳಶ್ರೀನರಸಿಂಹಗರ್ಪಿಸಿದಪ್ರಹ್ಲಾದನ ನೋಡುಅನುದಿನ ವನದಲ್ಲಿ ತಪವ ಮಾಡುವಮುನಿಜನರ ಕಂಡು ನಿನ್ನ ಮನದ ಭ್ರಮೆಯ ಬಿಡುಘನಮಹಿಮ ವೆಂಕಟಪತಿ ಹಯವದನನ ಭೃತ್ಯರ ಪರಿಚಾರಕರ ಭೃತ್ಯನೆನಿಸಿಕೊ 10 ಜತೆÀ ತಿರುಮಲೆರಾಯ ತ್ರಿವಿಕ್ರಮಮೂರುತಿಸಿರಿ ಹಯವದನನ [ಚರಣವೆ ಗತಿಯೆನ್ನು]
--------------
ವಾದಿರಾಜ
ಸುಳಾದಿ ತಾಳ-ಝಂಪೆ ನೋಡುವರೆ ನೀರದಶ್ಯಾಮಸುಂದರ ಮೂರ್ತಿ ಪಾಡುವರ ಪರಮಪಾವನ್ನ ಕೀರ್ತಿ ಕೂಡುವರೆ ಕೇವಲಾನಂದ ಚಿನ್ಮಯಗಾತ್ರ ನೀಡುವರೆ ನಿಖಿಳಲೋಕೈಕಪಾತ್ರ ನೋಡಿ ನಮಿಸುವರುಂಟು ಪಾಡಿಹಿಗ್ಗುವರೂಟ ಕೂಡಿ ಸುಖಿಸುವರುಂಟು ನೀಡಿ ನಲಿವವರುಂಟು ನೋಡಿಸುತ ಪಾಡಿಸುತ ಕೂಡಿಸುತ ಬೇಡಿಸುತ ನಾಡದೈವಂಗಳ ಕೊಂಡಾಡಿಸದಲೆ ಬೇಡಿದಿಷ್ಟವ ಕೊಡುತ ಶ್ರೀದವಿಠಲ ದಯ - ಮಾಡಿ ನಮ್ಮನು ಪೊರೆವ ರೂಢಿಗೊಡೆಯ ನಾಡದೈವಂಗಳ ಕೊಂಡಾಡಿಸದಲೆ 1 ತಾಳ-ಮಟ್ಟ ಸಕಲ ಶ್ರುತಿನಿಕರಸಾರಹೋ ಶುಕಮಹಾಮುನೀಂದ್ರ ಸನ್ನುತ ಪ್ರಕಟ ಮಾಡಲ್ಯಾಕೆ ನಿನ್ನನು ಪರಮಪುರುಷ ಪ್ರಕಟಮಾಡಲ್ಯಾಕೆ ನಿನ್ನನು ಭಕ್ತವತ್ಸಲನೆಂಬೆನಲ್ಲದೆ ಮುಕುತವಂದ್ಯ ಶ್ರೀದವಿಠಲ ಯುಕುತಾಯುಕುತವೊಂದನರಿಯದೆ ಪ್ರಕಟಮಾಡಲ್ಯಾಕೆ ನಿನ್ನನು 2 ತಾಳ-ತ್ರಿವಿಡಿ ಆಯನುಭವ ಭಯ ಲಯವರ್ಜಿತ ನಯನೋತ್ಸಹಕಾರಕ ತಾರಕ ಜಯಮಂಗಳ ಮಂಗಳ ಮಂಗಳ ಮಾಯಾ ಮಾಮರ ದೇವರಾÀಟ ಸಯವೇ ಸೈ ಶ್ರೀದವಿಠಲ ನಿ ನ್ನಯ ಚರಣಕೆ ನಮಿಸುವೆ ನಮಿಸುವೆ ಜಯ ಮಂಗಳ ಮಂಗಳ ಮಂಗಳ ಮಾಯಾ ಮಾಮರ ದೇವರಾಟ 3 ತಾಳ-ಅಟ ಬಾರೋ ಬಾರೋ ಭವದೂರ ದೀನಜನ ಭಾರ ನಿನ್ನದಯ್ಯಾ ಅಯ್ಯಯ್ಯಾ ಸಾರಿದೆನೊ ನಾ ನಿನ್ನ ಸಾರಿದೆನೊ ನಿನ್ನ 4 ತಾಳ-ಆದಿ ಶ್ರೀರಮಣ ಶ್ರೀದವಿಠಲ ಸಂ - ಚಾರು ಚರಣಗಳ ಸಾರಿದೆನೊ ನಿನ್ನ ಶಿರಿಗುರವಿತ್ತೆ ಪರಮನ ಪೆತ್ತೆ ಗಿರಿಜೇಶಗೆ ನಿನ್ನ ಮೈ ಇತ್ತೆ ಶರಣಾಗತವತ್ಸಲ ಕರುಣಾಕರ ಶ್ರೀದವಿಠಲ ಸರಿಬಂದರೆ ಸಾಕುವದೆಮ್ಮನು ಶರಣಾಗತವತ್ಸಲ 5 ಜತೆ ಸೋಲು ಶ್ರೀದವಿಠಲ ಸೋಲು ಗೆಲುವು ನಿನ್ನ
--------------
ಶ್ರೀದವಿಠಲರು
ಸುಳಾದಿ ಧ್ರುವತಾಳ ಶ್ರೀನಿವಾಸನೆ ನೀನು ಬ್ಯಾಗನೆ ಬಂದು ಸಾನುರಾಗದಿ ಸಂಸಾರ ಬಿಡಿಸೋ ಭಾನುಕೋಟಿ ಪ್ರಕಾಶಭಾಗ್ಯನಿಧಿಯೆನ್ನ ಮಾನವ ಕಾಯ್ವುದು ಮಂಗಳಾಂಗನೆ ಏನೇನು ಕಾರ್ಯಗಳು ನಿನ್ನಾಧೀನವಾಗಿರಲು ನಾನುನನ್ನದು ಎಂದು ಮಮತೆಯನೆ ಕೊಟ್ಟು ಅನ್ಯಾಯದಿಂದ ಎನ್ನzಣಿಸುವುದು ದಾನವಾಂತಕರಂಗ ಮುದ್ದುಮೋಹನವಿಠಲ ನೀನೆಗತಿಯೆಂದವಗೆ ನಿರ್ಭಯವೊ ಹರಿಯೆ 1 ಮಠ್ಯತಾಳ ಎನ್ನಪರಾಧಗಳು ಅನಂತವಿರುವದನ್ನು ನಿನ್ನಸ್ಮರಣೆ ಒಂದೆ ಸಾಕೊ ಹರಿಯೆ ಬನ್ನ ಬಡಿಸುವದ್ಯಾಕೊ ಮನ್ಮನದಲಿಪೊಳೆದು ಚೆನ್ನಾಗಿ ಸಲಹೋಘನ್ನಮಹಿಮಾ ಮುದ್ದುಮೋಹನವಿಠಲನೇ 2 ತ್ರಿವಿಡಿತಾಳ ಬಿಂಬನೆನೆಸಿಕೊಂಡು ಪ್ರತಿಬಿಂಬಗಳೊಳಗೆಕಾರ್ಯ ಅಂಭ್ರಣಿಸಹಿತವಾಗಿ ನೀಮಾಡಿ ಮಾಡಿ ಸೂವಿ ಅಂಬುಜನಾಭಾನೆ ಎನ್ನಾಡಂಭಕ ಭಕುತಿ ಬಿಡಿಸಿ ಸಂಭ್ರಮದಿಂದ ಕಾಯೊ ಕರುಣಾನಿಧೆ ಶಂಬರಾರಿಯಜನಕ ಮುದ್ದುಮೋಹನವಿಠಲ ಕಂಬದಿಂದಲಿ ಬಂದು ಭಕುತನ್ನಸಲಹಿದ ದೇವ 3 ಅಟ್ಟತಾಳ ಏನೇನುದಾನ ಅನಂತ ಮಾಡಲೇನು ಕಾನನದಲಿ ಪೋಗಿ ತಿರುಗಿತಿರುಗಿದಂತೆ ಜ್ಞಾನದಿಂದಲಿ ತಾರತಮ್ಯಾನುಸಾರ ನಿನ್ನ ಧ್ಯಾನವನ್ನ ಒಂದು ಕ್ಷಣವಾದರೂತೋರಿಸೊ ವಾನರ ವಂದ್ಯ ಮುದ್ದುಮೋಹನವಿಠಲ ನಾನಾವಿಧದಿಂದ ನಂಬಿದೆನೊ ಹರಿಯೇ4 ಆದಿತಾಳ ನೀನೆ ಅನಾಥಬಂಧು ನೀನೆ ಅದ್ಭುತಮಹಿಮ ನೀನೆ ಅಸುರಾಂತಕ ನೀನೆ ಅಮರಾದಿವಂದ್ಯ ನೀನೆ ಭವರೋಗ ವೈದ್ಯ ನೀನೆ ಭಕ್ತವತ್ಸಲ ನೀನೆ ಪರಿಪೂರ್ಣ ಸುಖ ನೀನೆ ಪರಂಜ್ಯೋತಿ ನೀನೆ ಪರಬ್ರಹ್ಮ ನೀನೆ ಪುರುಷೋತ್ತಮ ನೀನೆ ಪುಣ್ಯೈಶ್ವರ್ಯ ನೀನೆ ನಿರ್ಮಲ ಜ್ಞಾನ ನೀನೆ ಶಶಿ ಕೋಟಿಲಾವಣ್ಯ ನೀನೆ ಮುದ್ದುಮೋಹನ ವಿಠಲ ನೀನೆ ವೇಗದಿ ಬಂದು ನೀನೆ ರಕ್ಷಿಸು ಎನ್ನನು 5 ಜೊತೆ ಸ್ವಾಮಿ ಪುಷ್ಕರಣಿವಾಸ ಕಾಮಿತಫಲದಾನೆ ಶ್ರೀಮನೋಹರ ನಮ್ಮ ಮುದ್ದುಮೋಹನ ವಿಠಲ
--------------
ಮುದ್ದುಮೋಹನವಿಠಲದಾಸರು
ಸುಳ್ಳಿಗೆ ನಗರೇನೊರಂಗಯ್ಯನಿನ್ನ ಕಳ್ಳತನವ ನೋಡಿ ಪ. ಹಾರುವ ಹದ್ದನೇರಿ ತಿರುಗಾಡುವಿಜಾರಿಬಿದ್ದರೆ ತೆರನೇನೊ ಜಾರಿಬಿದ್ದರೆ ತೆರನೇನೊ ನಿನಗೆ ಬುದ್ಧಿಯಾರು ಹೇಳುವರೊ ಧರೆ ಮ್ಯಾಲ1 ಕ್ಷೀರ ಸಮುದ್ರಶಾಯಿ ಎಂದರೆ ಹಿಗ್ಗುವಿಯಾರು ಅರಿಯರು ನಿನ್ನ ಹುಳುಕುಯಾರು ಅರಿಯರು ನಿನ್ನ ಹುಳುಕು ಅತ್ತೆಮನೆ ಸೇರಿದವನೆಂದು ನಗತಾರೊ 2 ನೀರೊಳು ನಿನ್ನ ಮನೆ ಹಾವಿನ ಮ್ಯಾಲೆ ನಿದ್ರೆ ಹಾರುವ ಹದ್ದನೇರುವಿಹಾರುವ ಹದ್ದನೇರುವಿ ತಿರುತಿಂಬೊಮೂರು ಅಹಂಕಾರ ನಿನಗ್ಯಾಕೊ3 ಮಗಳ ಕೊಟ್ಟೆನೆಂದು ಮಮಕಾರದಿಂದಲೆಸುಗುಣ ಸಮುದ್ರ ಉಳುಹಿದಸುಗುಣ ಸಮುದ್ರ ಉಳುಹಿದ ಕಚ್ಚುವ ಶೇಷಖಗರಾಜನಿಂದ ಕೈಕಾಯ್ದ4 ಕರವ ಕರವ ನೆಗಹಿದ ಕಾರಣ ಹಾರುವ ಗರುಡ ಕೈ ಕಾಯ್ದ5 ಕಾಲ ಯವನನ ಕೂಡ ಕಲಹವ ಮಾಡಿಬಂದು ಮೂಲೆಲೆ ಹೋಗಿ ಅಡಗಿದಿಮೂಲೆಲೆ ಹೋಗಿ ಅಡಗಿದಿ ಮುಚಕುಂದ ರಾಯ ನಿಂತಾಗ ಉಳದೆಲ್ಲೊ6 ಮಧುವೈರಿ ನೀನು ಗೆಲಲಿಲ್ಲಮಧುವೈರಿ ನೀನು ಗೆಲಲಿಲ್ಲ ರಮಿಯರಸ ಮಧೂಕದಿಂದ ಅವರ ಮುಡುಹಿದ 7
--------------
ಗಲಗಲಿಅವ್ವನವರು
ಸುಳ್ಳಿನೊಳಗೆ ನಾ ಬಲು ಸುಳ್ಳ ನನ್ನ ಸುಳ್ಳೆ ನನಗೊಳುಪಿಲ್ಲ ಪ ಸುಳ್ಳು ಹೇಳುವೆನು ಅಳತಿಲ್ಲ ಇದು ಎಳ್ಳಷ್ಟಾದರು ಸುಳ್ಳಲ್ಲ ಅ.ಪ ಸೂಜಿಗಡತರ್ಹೊಗೆಯೇಳ್ವುದ ಕಂಡೆ ಅಗ್ನಿ ಮೂಜಗಡರಿ ಸುಡುವುದು ಕಂಡೆ ಸೋಜಿಗ ಕಂಡೆನು ಉರಿಯೊಳು ಮತ್ತೊಂದು ಬೀಜ ಮೊಳೆತು ತೆನೆಯಾದದ್ದ ಕಂಡೆ 1 ಸಾಸಿವೆಕಾಳಷ್ಟು ಬಟ್ಟಲ ಕಂಡೆ ಇಡೀ ದೇಶ ಅದರೊಳಗಿಟ್ಟಿದ್ದ್ದು ಕಂಡೆ ಹಾಸ್ಯದ ಮಾತಲ್ಲ ತಿರುಗಿ ನೋಡಿ ನಾ ದೇಶದೊಳಗೆ ಆ ಬಟ್ಟಲ ಕಂಡೆ 2 ಮೈಯೆಲ್ಲ ತೂತಿನ ತಿದಿಯ ಕಂಡೆ ಅದು ವಾಯುತುಂಬಿ ಬಾತದ್ದು ಕಂಡೆ ದೀವಿಗೆಯಿಲ್ಲದೆ ಬೆಳಗದುಕಂಡೆ ಮತ್ತು ಕಿವುಡ ಮೂಕರ ಏಕಾಂತ ಕಂಡೆ 3 ಉರಿವುದ ಕಂಡೆನು ಬೆಂಕಿಲ್ಲದೆ ಅದು ಆರಿದ್ದಕಂಡೆನು ನೀರಿಲ್ಲದೆ ಹೊರುವುದ ಕಂಡೆನು ಕೂಲಿಲ್ಲದೆ ಮತ್ತು ಇರಿದುಕೊಲ್ವದು ಕಂಡೆ ಕತ್ತಿಲ್ಲದೆ 4 ಮೇಲಕೆ ಬೇರಿಳಿದ್ವøಕ್ಷ ಕಂಡೆನಲ್ಲಿ ಟೊಂಗೆ ನೆಲಕೆ ಬೆಳೆದದ್ದು ಕಂಡೆ ಕಣ್ಣಿಲಿ ಚಲಿಪದು ಕಂಡೆನು ಎಲ್ಲಿಗೆ ಬೇಕಲ್ಲಿ ಇದರ ಕೀಲಿಕಂಡೆ ಶ್ರೀರಾಮನ ಬಲ್ಲಿ 5
--------------
ರಾಮದಾಸರು
ಸುಳ್ಳುಗಳ ಬೋಧಿಸಿ ನೀ ಪೊಳ್ಳಾಗದಿರಲೊ ಪ ನೀರ್ಗುಳ್ಳೆಯಂಥ ದೇಹ ನಂಬಿ ನಿಜಭಕ್ತ ನಾನೆಂದೂ ಅ.ಪ ಎಳ್ಳುಕಾಳಿನಷ್ಟಾದರೂ ಈಶನಲ್ಲಿ ಭಕ್ತಿಕಾಣೆ ಡೊಳ್ಳತುಂಬುವದಕೆ ನಾಲ್ಕಲ್ಲಿ ಇಲ್ಲಿ ಕಲಿತುಕೊಂಡು 1 ಪರರಿಗೆ ಹೇಳುವಂತೆ ನೀ ನಡೆಯುವೆಯೇನೊ ಪರಗತಿಯಾಗದು ನಿಜ ನಿಜ ನಿಜ ಕಾಣೊ 2 ನಿನ್ನಯೋಗ್ಯತಾನುಸಾರ ನೀನರಿಯಲೊ ಬನ್ನಬಡುವದೆ ಸಾಕ್ಷಿ ಪುಣ್ಯವೇನಿದರೊಳು 3 ಹಿಡಿ ಹಿಡಿ ಹಿಡಿ ಹಿಡಿ ಹಿರಿಯರ ಪಾದವ 4 ಶರಣ ಜನರ ನೋಡಿ ಶಾಂತನಾಗುತ ಗುರುರಾಮವಿಠಲನ ಗುರುತರಿಯದೇ ನೀ 5
--------------
ಗುರುರಾಮವಿಠಲ
ಸುಳ್ಳೆಭ್ರಮಿಸಿ ಕೆಡಬೇಡವೋ ಹೇ ಮುಳ್ಳುಮನುಜ ಎಲ್ಲ ಮಿಥ್ಯೆಜಗದ ಬಾಳವ್ಯೋ ಪ ನಿಲ್ಲದಳಿಕೆ ಪೋಗ್ವುದಿದು ಜಲದಮೇಲಿನ ಲಿಖಿತತೆರದಿ ಪಾದ ದುರ್ಭವದ ಭಂಗವೋ ಅ.ಪ ಬಂಧುಬಳಗರೆಂಬರೆಲ್ಲರು ನಿನ್ನೊಳಿರುವತನಕ ತಿಂದು ಉಂಡು ಸೇವೆ ಮಾಳ್ಪರು ನೀನುಹೋಗುವಕಾಲ ಸಂದಿಸಲಾಗ ಆರುಬಾರರು ಹಿಂದೆ ಉಳಿವರು ಮಂದಗಮನೆ ಸತಿಯು ತನ್ನ ಮುಂದಿನ ಗತಿಗೆ ಅತ್ತುಕರೆದು ಮಿಂದು ಮುಟ್ಟುಚಟ್ಟು ತೊಳೆದು ಚಂದದ್ಹೋಳಿಗೆ ತುಪ್ಪ ಉಂಬಳು 1 ಜನರಗೋಣು ಮುರಿದು ಹಲವು ಹಂಚಿಕ್ಹಾಕಿ ಬಿಡದೆ ಬಿನುಗುಯೋಚನದನುದಿನವು ಶೋಧಮಾಡಿ ನಾನಾರೀತಿಯಲಿ ಗಳಿಸಿದ ಧನವು ನಿನಗೆ ಎರವು ಕನಿಕರಿಲ್ಲದೆ ಜವನದೂತರು ಹಣಿದು ಎಳೆದಾಡೊದೆಯುವಾಗ ಮನೆಯೊಳ್ಹೊಳಿದಳದೆ ಧನವು ಬಂದು ನಿನಗೆ ಸಹಾಯ ಮಾಳ್ಪುದೇನೋ 2 ಭೂಮಿಸೀಮೆ ತನ್ನದೆನುತ ಶಾಸನವ ಬರೆಸಿ ನೇಮವಿಲ್ಲದೆ ಕಷ್ಟಬಡುತ ನಿಜಸುಖವ ಮರೆದು ತಾಮಸದೊಳಗೆ ಮುಳುಗಿ ಕೆಡುತ ಪ್ರೇಮದೊರಲುತ ಭೂಮಿಗಧಿಕ ಭಕ್ತಜನರ ಪ್ರೇಮಮಂದಿರ ಸ್ವಾಮಿ ಶ್ರೀರಾಮ ಮುನಿದು ನೋಡಲಾಗ ಭೂಮಿ ಸೀಮೆ ಕಾಯ್ವುದೇನೋ 3
--------------
ರಾಮದಾಸರು
ಸೂತ್ರ ಸುತ ಪ್ರಥಿವ ದೇವ ಪ ಪೃಥುವ್ಯಾಖ್ಯ ಸೌಪರಣಿ ಪ್ರಿಯ ಗರುಡ ದೇವಾ ಅ.ಪ. ಅಮೃತ ಕಲಶವನುಸನುಮತದಿ ನೀ ತೋರಿ | ನಿನ ತಾಯ ಸೆರೆ ಕಳೆದೇ 1 ಗರುಡದೇವನೆ ನೀನು | ಹರಿಗೆ ವಾಹನನಾಗಿಹರಿಯ ಪಾದಗಳ್ ಧರಿ5 ಕ5À5Àಡರಲೀ |ಹರಿಬಿಂಬ ಕಾಣುತ್ತ | ಚರಣ ನಖ ಪಂಕ್ತಿಯಲಿಹರಿಯ ಸ್ತೋತ್ರವ ಮಾಳ್ಪ | ಸುರ ಕುಲಾಗ್ರಣಿಯೆ 2 ಕಾಲ ನೀಗಿದೆ ನಾನುಕಾಲ ನೀಯಾಮಕನ | ಘಳಿಗೆ ಸ್ಮರಿಸದಲೆಕಾಲಾತ್ಮ ಗುರು ಗೋ | ವಿಂದ ವಿಠಲನ ಸಾರ್ವಕಾಲದಲಿ ನೆನೆವಂಥ | ಶೀಲ ಮನವೀಯೋ 3
--------------
ಗುರುಗೋವಿಂದವಿಠಲರು
ಸೂತ್ರನಾಮಕ | ಸುಂದರನೇಕ | ಸೂತ್ರನಾಮಕ ಪ ಸತ್ಪಾತ್ರ ವಿನುತ ಶುಭಗಾತ್ರ ಪವಿತ್ರ ಅ.ಪ. ರಾಮಪದ ಭೃಂಗಾ | ರಾವಣ ಮದಭಂಗ | ಗಜಸಿಂಗಾತಾಮಸ ಕುಲಕೆ ನೀ ಧೂಮಕೇತು ಬುಧಸೌಮನಸಾಗ್ರಣಿ ಕಾಮಿತ ಫಲದಾ 1 ಪಾಂಡುನಂದನಾ | ಪಾಲಿಸು ಯನ್ನಾ | ಖಂಡ ಪಾವನಾಅಂಡಜಾಧಿಪನ ಕಂಡು ಭಜಿಸಿ ದೋ-ರ್ದಂಡ ಖಳ ಕುಲ ಚಂಡ ಪ್ರಚಂಡಾ 2 ಜ್ಞಾನದಾಯಕಾ | ಆನಂದತೀರ್ಥ | ದೀನ ಪೋಷಕಭಾನುಕೋಟಿ ತೇಜ ವ್ಯಾಸ ವಿಠಲನಧ್ಯಾನದೊಳಿಹ ಮಮ ಮಾನಸ ಹಂಸಾ 3
--------------
ವ್ಯಾಸವಿಠ್ಠಲರು
ಸೂತ್ರನಾಮಕಪ್ರಾಣ ಜಗತ್ರಾಣ ಸೂತ್ರನಾಮಕ ಜಗಸೂತ್ರನೆ ಹರಿಕೃಪಾ ಪಾತ್ರ ನೀನಹುದೋ ಸರ್ವತ್ರದಿ ನೀನೆ ಪ ದೇವಾ ನೀನಿಲ್ಲದಿರೆ ಜಗವೆಲ್ಲವು ತಾ ನಿರ್ಜೀವ ಜೀವ ಕೋಟಿಗಳೆಲ್ಲ ಕಾವ ಪಾವನಾತ್ಮಕ ಸಂಜೀವ ಲವಕಾಲ ಬಿಡದೆ ಎಮ್ಮೊಳಿರುವ ಭೋ ದೇವ ಅ.ಪ ಸಾಟಿ ಯಾರೆಲೆ ತ್ರಿಕೊಟಿರೂಪನೆ ನಿಶಾಚರ ಕುಲಕೆ ಕುಠಾರಿ ಅಜಾಂಡ ಖರ್ಪರದಿ ಸೃಷ್ಟಿಯೊಳು ಸಂಚಾರಿ ಪಟುತರ ತ್ರಿವಿಕ್ರಮ ಚಟುಲ ಮೂರುತಿ ಮನತಟದಲಿ ಭಜಿಸಿದ ಶ್ರೇಷ್ಠನೆ ನಿಜಪರಮೇಷ್ಠಿಪದವನು ತೊಟ್ಟು ಪಾಲಿಪೆ ನಿಂದು ಬ್ರಹ್ಮಾಂಡ ಪೊತ್ತು ಅಂದು ಜಗಭಾರ ವಹಿಸಿದೆಯೊ ದಯಾಸಿಂಧು ಎಂದೆಂದೂ 1 ಸರುವ ತತುವೇಶರ ವ್ಯಾಪಾರ ಧೀರ ನೀ ನಡೆಸೆ ಜಗಸಂಸಾರ ಕಾರಣನು ಜಗಕಾರ್ಯ ಕಾ ವೈರಾಗ್ಯ ಐಶ್ವರ್ಯ ನಿನ್ನಯ ಗುಣ ಸ್ವರೂಪತನುಕರಣೇಂದ್ರಿಯ ಕರ್ಮಫಲವನು ಜೀ ವರುಗಳಿಗುಣಿಪ ಅನಿಲರೂಪನೆ ತನುಗೋಳಕದಲಿ ನೀ ನೆಲ ಅಂದು ಸೃಷ್ಟಿಯೊಳು ಬಂದೂ ಪೊಂದಿ ಸರ್ವರೊಳು ನಿಂದು ಹಿಂದೂ ಇಂದೂ ಇನ್ನು ಮುಂದೂ ಕರುಣಾಸಿಂಧು ಎಂದೆಂದೂ 2 ಪ್ರಾಣಪ್ರಾತರ ಸಾಯಂಬೀತೆರ ಅಭಿಧಾನ ಗುಣಸ್ತವನ ಮಾಳ್ಪರೆಲ್ಲ ಸುರ ಗಣಾ ಮಣಿದು ಬೇಡುವರೆಲ್ಲ ಅನುದಿನಾ ಎಣೆಯುಂಟೆ ನೀನಮಿತ ಗುಣಗಣಾ ಶ್ರೀ ಮುಖ್ಯ ಪ್ರಾಣಾ ಜಗಬಂಧಕೆ ಮಹಾರಜ್ಜು ರೂಪ ನೀ ಚಿತ್ಸುಖಮಯ ವಪುಷ ಖಗಪ ಶೇಷ ಶಿವ ಶಕ್ರಾದೀ ಜಗ ಬದ್ಧವು ಕೇಶ ನಖಾಗ್ರ ಪರ್ಯಂತ ಚಿತ್ಸುಖ ಗಭೇದ ನೀ ಛಂದ ಶಾಸ್ತ್ರದಿ ತನು ತ್ವಗ್ರೋಮ ಉಷ್ಣಿಕ್ ಗಾಯತ್ರಿ ನರ ಮಾಂಸನುಷ್ಟುಪ್ ಅನುಷ್ಟಪು ಅಸ್ತಿಮಜ್ಜಾ ಜಗತೀ ಪಂಕ್ತಿ ಬೃಹತಿನಾಮಕ ಘನ್ನಾ ಉರಗಾದ್ರಿವಾಸ ವಿಠಲನ್ನ 3
--------------
ಉರಗಾದ್ರಿವಾಸವಿಠಲದಾಸರು
ಸೂರೆಮಾಡೆ ವರಗಳ ಹೊಸೂರ ದೇವತೆ ತೋರೆ ನಿನ್ನ ದಯವ ತುಂಬಿಕೊಂಡು ನಾ ಪೋಗುವೆನು ಮನೆಗೆ ಪ ಶೀಘ್ರದಿಂದ ನಿನ್ನ ಸಾಲಿಗ್ರಾಮವುಳ್ಳ ನೇತ್ರದಿಂದ ಅ- ನುಗ್ರ (ಹ) ಮಾಡಿ ನೋಡೆ ಎನ್ನ ಶಿರಬಗ್ಗಿಸ್ವಂದನೆ ಮಾಡುವೆನು 1 ರೇಣುಕಾಂಬ ನಿನ್ನ ಪಾದರೇಣು ತೋರೆ ಕರುಣದಿಂದ ಕಾಣೆ ನಿನ್ನ ಸರಿ ಲೋಕದೊಳಗೆ ಪಾಣಿ ಹಿಡಿಯೆ ಪಾಲಿಸೆನ್ನ 2 ಸತ್ಯವಂತೆ ಕಳೆಯೆ ಈ ತಾಪತ್ರಯ ದಾರಿದ್ರ್ಯ ದೋಷ ನಿತ್ಯದಲಿ ನಾ ನಿನ್ನ ಭಾಳ ಭಕ್ತಿಯಿಂದ ಬೇಡಿಕೊಂಬೆ3 ಬಾಳೆದಂಡಿಗೆ ಪಾಯಸ ನಿನ್ನ ಭಾಳ ಮಹಾತ್ಮ್ಯಗಳನೋಡಿ ಅ- ಕುಸುಮ ಕುಂಕುಮ ಬೇಡುವೆ ಪ್ರಸಾದವನ್ನು 4 ಜಮದಗ್ನಿಸತಿಯೆ ನೀ ಭೀಮೇಶಕೃಷ್ಣನಾದ ಭಾರ್ಗವ- ರಾಮನ ಮಾತೆಯೆ ಕರುಣದಿ ಕಾಮಿತಾರ್ಥವ ಕೊಟ್ಟು ಕಾಯೆ 5
--------------
ಹರಪನಹಳ್ಳಿಭೀಮವ್ವ
ಸೂರ್ಯ ಪುತ್ರೀ |ತ್ರಿವಿಧ ತಾಪಂಗಳನು ಕಳೆವ ಶುಭಗಾತ್ರೀ ಪ ಕಾಳಕೂಟವ ಮೆದ್ದು ದೇವತತಿ ಸಲಹಿದಗುಕಾಲಾಖ್ಯ ಗರುಡಂಗು ಕಾಳ ಉರಗನಿಗೂ |ನೀಲಾಖ್ಯೆಯಂದದಲಿ ಪಂಚಗುಣದಿಂ ನ್ಯೂನಕಾಳಿಂದಿ ದೇವಿಯರಿಗಾ ನಮಿಪೆ ಸತತ 1 ಸಂಚಿತ ಸುಪಾಪಕ್ಕೆ ಅನುತಾಪವೆಂಬುವುದುಚಿಂತಿಸುವ ತತ್ವಗಳ ನಿರ್ಣಯಾದಿಗಳ |ಇಂತಪ್ಪ ಸತ್ಕರ್ಮ ಸಂತರಿಂ ತಿಳಿಸುತ್ತಚಿಂತಿಪುದೆ ಸತ್ತಪವು ಚಿತ್ತ ನಿಗ್ರಹವೆಂಬ 2 ಮೂರ್ತಿ ಕಾಣದಿಹ ಕಂಗಳಿನ್ನೇಕೇ 3 ಹರಿ ಕಥೆಯ ಕೇಳದವ ಬಧಿರನೇಸರಿ ಅವನುಹರಿಯೆ ನಿರ್ಮಾಲ್ಯ ಮೂಸದಿಂದ್ರಿಯ ವ್ಯರ್ಥ|ಹರಿಯ ನೈವೇದ್ಯಗಳ ರುಚಿಸದಿಹ ನಾಲಗೆಯುಹರಿಯಂಗ ಸ್ಪರ್ಶಿಸದ ಇಂದ್ರಿಯವು ವ್ಯರ್ಥ 4 ಮೂರ್ತಿ ಧ್ಯಾನಿಸದ ಮನಿಸಿನಿಂದ್ರಿಯ ವ್ಯರ್ಥಇನಿತು ದಶ ಕರಣಗಳ ವ್ಯಾಪಾರವಾ |ಗುಣಿಸಿ ತಪವೆಂದೆನುತ ಹರಿಯರ್ಪಣೆಂಬುವುದೆಘನ ತಪವು ಎಂದೆನುತ ಚಿಂತಿಪ ಸುಗಾತ್ರೀ 5 ಕಮಲ ದರ್ಶನವು ಎನಗೆಂದುಪರಿ ಪರಿಯ ಚಿಂತಿಸುತ ಚರಿಸಿ ಸತ್ತಪವಾ |ಹರಿಯ ದರ್ಶನ ಪಡೆದು ಹರಿಯನುಗ್ರಹದಿಂದಹರಿ ಮಡದಿ ನೀನಾಗಿ ಹರಿಗೆ ಪ್ರಿಯಳಾದೇ 6 ನಿತ್ಯ ಭಿನ್ನವಿಪೇ 7
--------------
ಗುರುಗೋವಿಂದವಿಠಲರು
ಸೂರ್ಯ ಯತಿವರ್ಯ | ಮ ಧ್ವಾರ್ಯರ ಸುಮತ ಸರೋಜಕೆ ಸುಶೀಲೇಂದ್ರ ಪ ಬುಧಜನ ವಂದಿತ ಸುಧಿ ಸುವೃತೀಂದ್ರರ ಸದಮಲ ಘನ ಸದ್ ಹೃದಯಾ ಕಾಶಕೆ 1 ಧರಣಿ ಸುರಾಗ್ರಣಿ ಗುರು ಸುವೃತೀಂದ್ರರ ಸುರಚಿರ ಸರಸಿಜಕರ ಪೂರ್ವಾದ್ರಿಗೆ 2 ಭೂಸುರ ಸೇವಿತ ಪೂಶರ ನಿರ್ಜಿತ ಭಾಸುರ ವರ ಸನ್ಯಾಸ ಸುಚ್ಭಾಯಕೆ 3 ಬಗೆ ಬಗೆಯಿಂದಲಿ ನಿಗವೋಕ್ತಿಯಲಿ ರಘುವರನರ್ಚಿಪ ಸುಗುಣವೆಂಬ್ಹಗಲಿಗೆ 4 ಶಾಮಸುಂದರನ ನಾಮ ಪೊಗಳಿದ ಪಾಮರ ಮತಿ ಜನಸ್ತೊಮ ಯಾಮಿನಿಗೆ 5
--------------
ಶಾಮಸುಂದರ ವಿಠಲ