ಒಟ್ಟು 13659 ಕಡೆಗಳಲ್ಲಿ , 138 ದಾಸರು , 6755 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪತಿ ತನಯೇ ಪ ಆರು ನಿನಗೆ ಸರಿ ಮೂರು ಲೋಕದೊಳುವೃತ್ರಾರಿಗಳಿಂದಾರಾಧಿತಳೇ ಅ.ಪ. ಅಗಜೆ ಎನ್ನ ವದನಾ | ಮಾಡಲಿ | ನಗಧ5ಗುಣಸ್ತವನಾಖಗ ವಹ ಸಖ ಶಿವ | ಮೃಗ ಪಾಣಿಯ 5iÉುಹಗಲಿರುಳಲಿ ಹರಿ ಗಾಯನ ಮಾಡಿಸೇ 1 ಮನಸಿಜಾರಿಯ ಜಾಯೇ | ಮನ್ಮನ | ಚಪಲ ಬಿಡಿಸು ತಾಯೇಕನಸಿಲಿ ಮನಸಿಲಿ ಘನ ವಿಷಯಂಗಳನೆನೆವ ಕೊಡದೆ ಹರಿ ಧ್ಯಾನವನೀಯೇ 2 ಲೋಕ ಪಾವನ ಮೂರ್ತೇ | ಪಾಲಿಸು | ಏಕದಂತನ ಮಾತೇನೋಕನೀಯ ಗುರು ಗೋವಿಂದ ವಿಠಲನಜೋಕೆಯಿಂದ ನೆನೆ ನೆನೆಯುವ ಮಾತೇ 3
--------------
ಗುರುಗೋವಿಂದವಿಠಲರು
ಪತಿ ತನುಜ ಕರುಣಿಸೋ ಹರಿ ನಿನ್ನವ ನೆನಿಸೋ | ಸಿರಿಪತಿ ತವ ನಾಮಾಮೃತ ಫಲನುಣಿಸೋ ಪ ನಿನ್ನ ದಾಸರ ಸಂಗವನುದಿನ ಬಲಿಸೋ | ಘನ ವಿಚಾರಕ ಮನವೆನ್ನ ನಿಲಿಸೋ 1 ಮಂಗಳಂಘ್ರಿಯ ಕುಂಬ ಕಂಗಳದೆರಿಸೋ | ರಂಗಭಕುತಿ ಅಂತರಂಗ ದೆಚ್ಚರಿಸೋ 2 ಜನುಮಕ ಬಹಭವ ಪರಿಹರಿಸೋ | .........................................3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪತಿ ಪಿತ | ಅರವಿನುತಗೆ (ಮಾರುತನುತಗೆ) 1 ಕಾಲಜನನುಜಗ ಕಾಕಾದಲಯ ಕಾಲದುರಿತರಿದ ಕಾಲಕಾಲಗ 2 ಕಾಲಿಂದಿ ನದಿ ಯೊಳು ಕಾಳಿಯಸಿರದಲಿ ಕಾಲಲಿ ಕುಣಿದ ಲೋಕಾವಳಿ ವ್ಯಾಪಕಗ 3 ಕಾಳರೂಪದಿ ಗಜಕಾಲ್ವಿಡಿದ ಮಕರಿ ಕಾಲ ಜಲದ ಭಗ 4 ಪತಿ ಜನಗ ತಂದೆ ಮಹಿಪತಿನಂದನ ಪಾಲ ಮುಕುಂದ ಶ್ರೀಹರಿಗೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪತಿತ ಪಾವನ ನೀನೆ ಗತಿಯೆನಗೆ ಕೇಳು ಅತಿ ನೀಚ ತರತಮನಾದವಗೆ ಪ. ಸಾರಥಿ ಸ್ಥಿರವಲ್ಲವು ದುರುಳ ದಶೇಂದ್ರಿಯಾಶ್ವಗಳಿರವು ಹುರುಳಿಲ್ಲದಂತೆ ದುರ್ವಿಷಯಾಂಧಕೂಪಕೆ ಸರಿದು ಪೋಗುತಲೆನ್ನ ಕೆಡಹುವವು 1 ಅನ್ಯರಿಗುಸುರೆ ಲಜ್ಜಾಕರದ ಅನ್ಯಾಯ ಕೃತ್ಯದಿಂದಲಿ ನೆರೆದ ಮುನ್ನಿನ ನರಕಯಾತನೆಗಳ ತರಿವದ ನಿನ್ನ ಚರಣಕೊಪ್ಪಿಸಿದೆ ವರದ 2 ದಾಸದಾಸ್ಯವನೆಲ್ಲ ದಯಮಾಡು ಪ- ರೇಶ ಪರಾತ್ಪರ ಮೂರುತಿಯೆ ಲೇಶಾಯಾಸವಿಲ್ಲದೆ ಸಲಹುವ ಜಗ- ದೀಶ ಶೇಷಾಚಲವಾಸಿ ಹರೇ 3
--------------
ತುಪಾಕಿ ವೆಂಕಟರಮಣಾಚಾರ್ಯ
ಪತಿತ ಪಾವನರಂಗ ಸತತ ಕಾಯೊ ಗತಿಯಾರು ನಿನ್ನುಳಿದು ಶ್ರುತಿವಿನುತ ಗೋಪಾಲ ಪ ಆದಿಮೂಲನು ನೀನು ಆದಿರಹಿತನೆ ಸ್ವಾಮಿ ಸೇವ್ಯ ಸೇವಕನ ಕೃಷ್ಣ ಭಾದ್ಯ ಭಾಧಕ ರಮಾರಾಧ್ಯ ಚಿತ್ಸುಖ ಸುಖ ಸಿಂಧು ಕಾದುಕೋ ನಿನ್ನವನ ಆದಿರೋಗವÀ ಕಳೆದೂ 1 ನಾರಿ ದ್ರೌಪದಿ ಮಾನ ಕಾಯ್ದ ವಿಖ್ಯಾತನೆ ಶೌರಿ ಕ್ರೂರ ನಕ್ರನ ಕೊಂದು ಕರಿಯ ಪೊರೆದೆ ಹಾರಿ ಹಾವಿನ ಹೆಡೆಯ ಮೆಟ್ಟಿ ನರ್ತನಗೈದೆ ಸನ್ನುತ ಪಾಹಿ 2 ಪೋತಧ್ರುವ ಪ್ರಹ್ಲಾದ ಪುಂಡರೀಕರ ಪಾಲ ಖ್ಯಾತ ಅಜಮಿಳನ ವಿಜಯಸೂತ ಭೀತಿ ರಹಿತನ ಮಾಡು ಮಾಶತರೀಶ್ವನ ದೇವ ದಾತ ಜಯೇಶವಿಠಲ ನೀ ಅಭಯ ಪಾಲಿಸೊ ದೊರೆಯೆ 3
--------------
ಜಯೇಶವಿಠಲ
ಪತಿತನ್ನ ಪಾವನ ಮಾಡುವ ರಂಗಾ | ಗತಿಯಿಲ್ಲದವರಿಗೆ ಗತಿಯೇ ನೀನೇ ಗತಿ ಪ ನಿಂದಿರಲು ನೆರಳಿಲ್ಲ ನಿಲ್ಲಲು ನೆಲೆಯಿಲ್ಲ | ತಂದಿ-ತಾಯಿಯೆಂಬೋರು ಮೊದಲೆ ಇಲ್ಲ|| ಒಂದು ಸಂಗತಿ ಇಲ್ಲ ಪಡದಾನಂದನರಿಲ್ಲ | ಬಂದು-ಬಳಗದವರು ಆರಿಲ್ಲ ಹರಿಯೇ 1 ಕುಡಿಯಲು ನೀರಿಲ್ಲ ಕಾಲಿಡಲು ಇಂಬಿಲ್ಲಾ | ಪಿಡಿವೆನೆಂದರೆ ಮೇಲೆ ಕೊಡೆಯಿಲ್ಲ || ಒಡನೆ ಬರುವರಾರಿಲ್ಲ ಸಂಗಡದಿ | ಆಡಿವೆನೆಂದರೆ ವಳ್ಳಿಗಾಯಿತೊ ಹರಿಯೆ 2 ಧೈರ್ಯ ಕೊಡುವವರು ಇಲ್ಲ ದಾತರೊಬ್ಬರಿಲ್ಲ | ಕಾರ್ಯವೆಂದರೆ ಕೇಳಿ ಅರಿವರಿಲ್ಲಾ || ವೀರ್ಯವು ಎನಗಿಲ್ಲ ವಸಿಷ್ಠನು ನಾನಲ್ಲ | ಧೈರ್ಯವು ದು:ಖವು ವೆಗ್ಗಳಿಸಿತೋ ಹರಿಯೆ 3 ತನ್ನವರು ತನಗಿಲ್ಲ ತಾಳು ಎಂಬುವರಿಲ್ಲ | ಸಣ್ಣ ಮನಸ್ಸು ಅಲ್ಲದೇ ಘನವು ಯಿಲ್ಲ || ಕರ್ಮ ಬೆನ್ನ ತೊಲಗಲಿಲ್ಲ | ಇನ್ನು ಜನ್ಮ ವ್ಯರ್ಥವಾಯಿತೊ ಹರಿಯೇ 4 ಪಾದ | ಸಾಕಾರ ಮಾಡಿಕೊಂಬುವರ ಸಂಗಡ || ಶ್ರೀಕಾಂತ ವೆಂಕಟ ವಿಜಯವಿಠ್ಠಲರೇಯ | ನೀ ಕರುಣಸಿದರೆ ಸಕಲಾರ್ಥವಹುದು 5
--------------
ವಿಜಯದಾಸ
ಪತಿತಪಾವನ ನಾಮ ಪೂರ್ಣಕಾಮಾ | ಗತಿಯ ಪಾಲಿಸೊ ಎನಗೆ ಗುರುಸಾರ್ವಭೌಮಾ ಪ ಹದಿನಾರು ಸಾವಿರ ಸುದತಿಯರೆಲ್ಲರು | ತ್ರಿದಶವಿರೋಧಿಯ ಸದನದಲ್ಲಿ || ಮದದಿಂದ ಸೆರೆಬಿದ್ದು ಹದುಳ ಕಾಣದೆ | ಸುತ್ತಿಸಿದರು ಮನದೆ ನಾರದನಿಂದ ನಲಿದಾಡಿ1 ಕಾರ್ತಿಕ ಮಾಸದಲಿ ಕಾಂತೆಯ ಒಡಗೂಡಿ | ಕಾರ್ತರಥವನೇರಿ ಕೀರ್ತಿಪುರುಷಾ || ಧೂರ್ತನ ಕೊಂದು ಬಾಲೆಯರಾರ್ತವ ಪರಿಹರಿಸೆ | ತೀರ್ಥಧರಾದಿಗಳು ನರ್ತನದಲಿ ಪೊಗಳೆ 2 ಇಂದುಮುಖಿಯರ ಬಂಧನ ತರಿದವರು | ಅಂದು ಉತ್ಸಾಹದಿಂದ ದ್ವಾರಾವತಿಗೆ || ಮಜ್ಜನ ಮಾಡೆ | ಮಂದಾರ ಮಳೆ ನಭದಿಂದ ಸುರಿಯೆ 3 ದೇವ ಶೃಂಗಾರವಾಗೆ ವೇದಾದಿಗಳು ನಿಂದು | ತಾವೆಲ್ಲ ಮಣಿಭೂಷಣಾವಳಿಯಿಟ್ಟು || ನೋವ ಪೋಗಾಡಿಸಿ ಪಾವನರಾಗಿ ಸುಖ- | ವನಧಿಯೊಳು ಮೀಯುತ್ತ ಕೊಂಡಾಡೆ 4 ನರಕಾಸುರನ ಕೊಂದು ಇರಳು ಈ ಪರಿಯಲ್ಲಿ | ಹರಿಮಾಡಿದ ಚರಿತೆ ತಿಳಿದುದನು- || ಚ್ಚರಿಸಿದವನ ಕುಲ ನರಕದಿಂದುದ್ಧಾರ | ಮೊರೆಹೊಕ್ಕೆ ಇದÀಕೇಳಿ ವಿಜಯವಿಠ್ಠಲರೇಯಾ 5
--------------
ವಿಜಯದಾಸ
ಪತಿತಪಾವನಹುದೋ ಸ್ವಾಮಿ ಧ್ರುವ ಯತಿಮುನಿಜನವನ ಅತಿಶಯಾನಂದ ನೀ ಶ್ರುತಿಗಗೋಚರನಹುದೋ ಸ್ವಾಮಿ 1 ಕ್ಷಿತಿಯೊಳು ಗೌತಮ ಸತಿಯಳುದ್ಧರಿಸಿದ ಅತಿ ದಯಾಳನಹುದೋ ಸ್ವಾಮಿ 2 ನಷ್ಟಾ ಜಮಿಳನ ದೃಷ್ಟಿಸಿ ನೋಡಿನ್ನು ಶಿಷ್ಟತನವ ಮಾಡಿದ್ಯೋ ಪ್ರಾಣಿ 3 ಎಷ್ಟೆಂದು ಪೊಗಳಲಿ ಸೃಷ್ಟಿಯೊಳಗೆ ನಿಮ್ಮ ದುಷ್ಟಮರ್ದನನಹುದೋ ಸ್ವಾಮಿ 4 ಅತಿ ಮಂದಮತಿ ಮಹಿಪತಿಗೆ ಸದ್ಗೈಸಿನ್ನು ಪತಿತಪಾವನ ಮಾಡಿದ್ಯೋ ಸ್ವಾಮಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪತಿಮಂದಿರದಲಿ ನೀ ಸುಖವಾಗಿ ಬಾಳು ನಿನ್ನ ಪತಿಗಹಿತಕರ ಸಂಗ ತ್ಯಜಿಸಮ್ಮ ಮಗಳೆ ಪ ಉದಯ ಪೂರ್ವಕೆ ಎದ್ದು ಹರಿಯ ಸ್ಮರಣೆಯ ಮಾಡು ಮುದದಿ ಗುರುಹಿರಿಯರಿಗೆ ವಂದನೆಯ ಮಾಡು ಮದನನಯ್ಯನ ಭಜಕರನು ಕಂಡು ನಲಿದಾಡು ಪದುಮನಾಭಗೆ ಪಟ್ಟದರಸಿಯಾಗಮ್ಮ1 ರತ್ನಾಕರನು ತಂದೆ ಎನುತ ಗರ್ವಿಸಬೇಡ ಮತ್ತೆನಗೆ ಸರಿಯಾರು ಎಂದೆನಲು ಬೇಡ ಚಿತ್ತಜನಯ್ಯನ ಮನವರಿತು ನಡೆಯಮ್ಮ ಹೊತ್ತು ಹೊತ್ತಿಗೆ ಪತಿಯ ಸೇವೆ ನಿರತಳಾಗಿ2 ಬಿಟ್ಟಕಂಗಳು ಮುಚ್ಚದವನು ಎಂದೆನಬೇಡ ಬೆಟ್ಟ ಬೆನ್ನಿಲಿ ಪೊತ್ತನೆನಲು ಬೇಡ ಗಟ್ಟಿ ನೆಲವನು ಕೆದರಿ ಅಲಸಿದನೆನಬೇಡ ಹೊಟ್ಟೆಯ ಕರುಳನು ಬಗೆದವ ನೆನೆಬೇಡ 3 ಕಡುಲೋಭಿದಾನ ಬೇಡಿದನು ಎಂದೆನಬೇಡ ಪೊಡವಿಪಾಲಕರ ಕೆಡಹಿದನು ಎನಬೇಡ ಮಡದಿಯ ತಂದ ಕಪಿವಡೆಯನು ಎನಬೇಡ ತುಡುಗತನದಿ ಪಾಲ್ಬೆಣ್ಣೆ ಚೋರನೆಂದೆನಬೇಡ 4 ಉಡಿಗೆ ಉಡದ ಮಾನಗೇಡಿ ಇವನೆನಬೇಡ ತುಡಗತನದಿ ರಾಹುತನಾದನೆನಬೇಡ ಕಡಲಶಯನ ಕಮಲನಾಭ ವಿಠ್ಠಲನ ಗುಣ ಒಡೆದು ಪೇಳದೆ ಗುಟ್ಟಾಗಡಗಿಸಿ ನಡೆಯಮ್ಮ 5
--------------
ನಿಡಗುರುಕಿ ಜೀವೂಬಾಯಿ
ಪತಿಯ ಮಂದಿರದಲಿ ಸುಖವಾಗಿ ಬಾಳಮ್ಮ ಮತಿವಂತೆ ಎನಿಸಿ ಸನ್ಮತಿ ಪಡೆದು ಪ ಚತುರಳೆ ನಿನ್ನ ಸಖಿಯರೆಲ್ಲರು ಅತಿಶಯದಿ ನಿನ್ನ ಪತಿಯ ಗುಣಗಾನ ಕಥನ ಮಾಡುತ ನಿನ್ನೆದುರಿನಲಿ ಸ್ತುತಿಸಿ ಹಿಗ್ಗಿ ಪೊಗಳುವರೆ ಪಾರ್ವತಿ ಅ.ಪ ವಸತಿ ಇಲ್ಲದೆ ಸ್ಮಶಾನದಲಿ ವಾಸಿಪನೆಂದು ಅಪಹಾಸ್ಯ ಮಾಡುವರೆ ವಸನ ಪೀತಾಂಬರವನುಡುವುದನರಿಯದೆ ಹಸಿಯ ಚರ್ಮವನುಡುತಿಹನೆಂಬರೆ ಅಸನಕಿಲ್ಲದೆಗರಳ ವಿಷವನುಂಬುವನೆಂದು ಗುಸುಗುಸು ನುಡಿಯುವರೆ ಅಸಮನೇತ್ರನು ಭಸುಮ ಲೇಪಿಸಿ ವೃಷಭರಾಜನ ಏರಿ ಬರುವನು ಶಶಿಮುಖಿಯೆ ನೀನರಿಯದಲೆ ಈ ಪಶುಪತಿಗೆ ಸತಿಯಾದೆ ಎಂಬರು 1 ಸರಿಸವತಿಯ ತನ್ನ ಸಿರಮೇಲಿರಿಸಿದಿ ಗಿರಿಜೆ ತರವಲ್ಲ ಕೇಳೆ ಪರಿಪರಿ ರತ್ನಾಭರಣಂಗಳರಿಯದೆ ಉರಗಗಳ ಭೂಷಿತನಾದ ನಮ್ಮ ಗÀರಳ ಕಂಠನಿಗೆ ನೀನರಿಯದೆ ಸತಿಯಾದೆ ಎಂದು ತರಳರೆಲ್ಲರು ಹಾಸ್ಯ ಮಾಡುವರೆ ಸರಸವಾಡುತ ನೋಡು ಕಂಠದಿ ಸಿರದ ಮಾಲೆಯ ಧರಿಸಿಕೊಂಡಿಹ ಪರಮ ಆಶ್ಚರ್ಯದಲಿ ನಾವೆಲ್ಲ ಅರುಹಲೀಗ ಬಂದಿಹೆವು ಎನುವರು 2 ಅಂದು ಮೋಹಿನಿ ರೂಪವ ಕಂಡು ಪರಶಿವನು ಇನ್ನೊಮ್ಮೆ ನೋಡಲು ಬೇಡೆ ಪರಮಾತ್ಮನಾ ಸುಂದರಾಕೃತಿಯ ನೋಡುತ ಪಿಡಿಯಲು ಪೋಗಿ ನಂದ ಕಂದನ ರೂಪ ನೋಡಿದನು ಹಿಂದೆ ಮೂಕಾಸುರನೆಂಬ ದೈತ್ಯನ ಕೊಲಿಸಿದ ಇಂದಿರೇಶನಿಗೆ ಸೇವಕನಾದ ಶಿವನು ಇಂದು ಶಿವನನು ನಿಂದಿಸಿದೆವೆಂದೆನಲು ಬೇಡ ಶ್ರೀ- ತಂದೆ ಕಮಲನಾಭ ವಿಠ್ಠಲನ ಚಂದದಲಿ ಭಜಿಸುವನು ಎನುವರು3
--------------
ನಿಡಗುರುಕಿ ಜೀವೂಬಾಯಿ
ಪತಿಯಿಂದಲೆ ಸದ್ಗಿತಿಯೆಂಬುವಳು ಅತಿಮತಿಯೆನ್ನುವಳು ನಮ್ಮ ಶ್ರೀದೇವಿ ಪ ಕ್ಷಿತಿಯೊಳು ತನ್ನಯ ಪತಿಯೊಳು ಸಲ್ಲದೆ ಇತರವನೆಣಿಪಳೆ ಮೂದೇವಿ ಅ.ಪ ಗಂಡನು ಪುಂಡನು ಕುರುಡನು ಕುಂಟನು ಭಂಡಾಂಗನೆಯಂ ಕಲಹಿಪಳೆ ಮೂದೇವಿ 1 ಅತ್ತೆಮಾವನ ಹೇಳಿಕೆಗೆ ಪ್ರ ತ್ಯುತ್ತರಳಲ್ಲ ಶ್ರೀದೇವಿ ಕತ್ತೆಯಂತೆ ತಾ ಬಗಳುವ ಕಳ್ಳ ಚಿತ್ತಿನಿ ಹವುದೆಲೊ ಮೂದೇವಿ 2 ಅರಿಸಿನ ಕುಂಕುಮ ಹಣೆಯೊಳಗಿಡುವಳು ಅಡಿಯಾ ಗಿರುವಳು ಶ್ರೀದೇವಿ ಅನು- ಕರಿಸಲು ಬಾರದೆ ಕಳವಳಗೊಳುವಳು ಕರಠೆಕಮಾನಳು ಮೂದೇವೀ 3 ಶಿರಬಾಗಿ ತನ್ನರಸನ ಸೇವೆಯ ಹರುಷದೊಳಿರುಪವಳೆ ಶ್ರೀದೇವೀ ಕರಸಲು ಬಾರದೆ ಕಳವಳಗೊಳುವಳು ಕರಟಕ ತನುವಳು ಮೂದೇವೀ 4 ಇರುವ ಅತಿಥಿ ಅಭ್ಯಾಗತಗಳಿಗುಪ ಚರಿಸುವಳೆ ನಮ್ಮ ಶ್ರೀದೇವಿ ಗುರುವು ತುಲಶಿರಾಮಯೆಂದೆನ್ನುತ ಭಜಿಸದೆ ಯಿರುವಳೆ ಮೂದೇವೀ 5
--------------
ಚನ್ನಪಟ್ಟಣದ ಅಹೋಬಲದಾಸರು
ಪತಿಯೆ ಪರದೇವತೆಯು ಸತಿಯರಿಗೆ ಜಗದಿ ಮತಿಯರಿತು ಭಜಿಸಿ ಪರಗತಿಯ ಸಾರುವುದು ಪ. ಉದಯಕಾಲದೊಳೆದ್ದು ಸದಮಲ ಶುಧ್ಧಿಯಲಿ ಪಾದ ಮನದಿ ಸ್ಮರಿಸುತಲಿ ಪತಿ ಹೃದಯದಲಿರುವನು ಎಂದು ಪತಿ ಪದಕರ್ಪಿಸುವುದು 1 ಆದರದಲಿ ಪತಿಯ ಪಾದವನೆ ತೊಳೆದು ಆ ಸ್ವಾದೋದಕವ ಪಾನಗೈದು ಸುಖಿಸುವುದು ವೇದಗೋಚರ ಹರಿಯೆ ನೀ ದಯವ ಮಾಡೆಂದು ಆದರದಿ ಪತಿಯ ಮನವರಿತು ನುಡಿಯುವುದು 2 ಸ್ವಚ್ಛದಲ್ಲಿ ಮನದ ತುಚ್ಛ ವಿಷಯವ ತೊರೆದು ಇಚ್ಛೆಯಿಂದಲಿ ಹರಿಯ ನಾಮಗಳ ಭಜಿಸಿ ಅಚ್ಯುತಾನಂತ ಗೋವಿಂದನೆನ್ನುತ ಸತತ ಮಚ್ಚಾದ್ಯನೇಕ ಅವತಾರ ನೆನೆಯುವುದು 3 ಪತಿಯೆ ಹರಿಯೆಂದರಿತು ಪತಿಯೆ ಗುರುವೆಂದರಿತು ಪತಿಯ ಪೂಜೆಯನು ಅತಿ ಹಿತದಿ ಗೈಯ್ಯುವುದು ಪತಿಯಂತರ್ಗತನೆ ಎನ್ನತಿಶಯದಿ ಪೊರೆಯೆಂದು ಪತಿವ್ರತವ ನಡೆಸುತಲಿ ಹಿತದಿ ಬಾಳುವುದು 4 ಪತಿಯ ನಿಂದಕಳಿಗೆ ಗತಿಯಿಲ್ಲ ಪರದಲ್ಲಿ ಅತಿ ಬಾಧೆಪಡಿಸುವನು ಯಮನು ನಿರ್ದಯದಿ ಪತಿವ್ರತವ ಸಾಧಿಸುವ ಸತಿಯರಿಗೆ ಅನವರತ ಚ್ಯುತರಹಿತ ಪದವೀವ ಗೋಪಾಲಕೃಷ್ಣವಿಠಲ5
--------------
ಅಂಬಾಬಾಯಿ
ಪತಿವ್ರತೆ ಹ್ಯಾಂಗಿರಬೇಕು ನಿಜವಾಗಿ ಪ ರತಿಪತಿಪಿತನನ್ನು ಪತಿಯಲ್ಲಿ ನೆನೆಯುತ್ತ ಅ.ಪ. ಹೊತ್ತಾರೆ ಏಳಬೇಕು ಪತಿಗೆ ವಂದಿಸಬೇಕು ನಿತ್ಯತುಳಸಿಗೆರಗಿಕೃತ್ಯಮಾಡಲಿಬೇಕು ಅತ್ತೆಮೆಚ್ಚಿಸಬೇಕು ತೊತ್ತಿನಂತಿರಬೇಕು ರತಿಯ ನೀಡುತ ಪತಿಗೆ ಹಿತದಿಂದ ಬಾಳಬೇಕು 1 ಮಿತಮಾತು ಇರಬೇಕು ಸುತರ ಪಾಲಿಸಬೇಕು ಮತಿಮತದಿ ನಡಿಬೇಕು ಅತಿಥಿ ಪೂಜಿಸಬೇಕು ವ್ರತನೇಮ ವಿರಬೇಕು ಗತಿ ಹರಿಯೆ ತಿಳಿಬೇಕು ಮಾತ್ಸರ್ಯಬಿಡಬೇಕು ತೃಪ್ತಿಯಿರಲಿಬೇಕು 2 ನೆರೆಹೊರೆ ಗಂಜಬೇಕು ತಿರುಗೋದು ಬಿಡಬೇಕು ತಿರಿ ತಿಂಡಿ ಬಿಡಬೇಕು ಹರಟೆಗಳ ಬಿಡಬೇಕು ಹರಿಕಥೆ ಕೇಳಬೇಕು ಹರಿದಿನ ಮಾಡಬೇಕು ಹರಿಯ ಪಾಡಲಿಬೇಕು 3 ನೆಟ್ಟಕುಂಕುಮ ಬೇಕು ಕೆಟ್ಟವರ ಬಿಡಬೇಕು ಕಟ್ಟಿ ಆಶೆಯ ಬಿಟ್ಟು ತೃಪ್ತಿಯಿಂದಿರಬೇಕು ಕಷ್ಟಬಂದರು ಬಹು ಗುಟ್ಟಿನಿಂದಿರಬೇಕು ನೆಂಟರೊಡನೆ ಕಠಿಣ ನಿಷ್ಟೂರ ಬಿಡಬೇಕು 4 ಚುಚ್ಚಬಾರದು ಚಾಡಿ ಬಿಚ್ಚಬಾರದು ಗಾಡಿ ಹಚ್ಚಬಾರದು ವಿಷಯ ಕೊಚ್ಚಬಾರದು ಜಂಭ ಹುಚ್ಚಳಂತಿರದ್ಹಾಂಗೆ ಸ್ವಚ್ಚನಡತೆಯು ಬೇಕು 5 ಪಾಪವ ತೊರಿಬೇಕು ಲೇಪನವ ಬಿಡಬೇಕು ಕೋಪವ ಬಿಡಬೇಕು ಕಪಟತ್ವ ಬಿಡಬೇಕು ರೂಪ ಮದವ ಬಿಟ್ಟು ಚಪಲತ್ವ ತೊರಿಬೇಕು ವಿಪರಿತ ಮಡಿಬಿಟ್ಟು ಶ್ರೀ ಪತಿಯ ನೆನಿಬೇಕು 6 ಅಂಗ ಶುದ್ಧಿಯು ಬೇಕು ಶೃಂಗಾರ ರಸಬೇಕು ನಗೆಮೊಗವಿರಬೆಕು ಸವಿಮಾತು ಗುಣಬೇಕು ಭಂಗಾರ ವಿಡಬೇಕು ರಂಗಗೆನ್ನಲಿ ಬೇಕು ಮಂಗಳಾಂಗ ನಮ್ಮ “ಶ್ರಿ ಕೃಷ್ಣವಿಠಲ” ನ್ನ ಹಿಂಗದೆ ನೆನೆಬೇಕು ಅಂಗಿನೀಗಲಿ ಬೇಕು 7
--------------
ಕೃಷ್ಣವಿಠಲದಾಸರು
ಪಥ ನಡೆಯದಯ್ಯ ಪರಲೋಕ ಸಾಧನಕೆ - ಮ-ನ್ಮಥನೆಂಬ ಖಳನು ಮಾರ್ಗವ ಕಟ್ಟಿ ಸುಲಿಯುತ್ತಿರೆ ಪ ಗಜ ಕಾಯ ಕಾಂತಾರವೆಂಬ ಮಾರ್ಗದಿಸ್ತನದ್ವಯ ಕಣಿವೆಯ ಮಧ್ಯೆ ಸೇರಿಹನು 1 ಮದನ ಮಾರ್ಗವ ಕಟ್ಟಲುಬಲವುಳ್ಳ ಭಕ್ತ ಮುನಿ ಸಂನ್ಯಾಸಿ ಯೋಗಿಗಳುಸುಲಿಸಿಕೊಂಡರು, ಕೆಲರು ಸಿಕ್ಕಿದರು ಸೆರೆಯ 2 ಸುರರು ದಾನವರು - ಕ-ಟ್ಟಾಳು ಮನ್ಮಥನ ಛಲದಂಕ ಬಿರುದುಪೇಳಲೆನ್ನಳವೆ ಬಡದಾದಿಕೇಶವರಾಯ-ನಾಳ ಸಂಗಡ ಹೋದರಾವ ಭಯವಿಲ್ಲ 3 * ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
--------------
ಕನಕದಾಸ
ಪಥವ ಬಿಡು ಬಿಡು ದೇವ ಪಥದಿ ಮಲಗುವರೆಗತಿ ಚಿದಾನಂದನಿರೆ ಗತಿಗೆಡುವೆನೆ ಭಯಕೆ ಪ ಭವ ಹರಿದುನಿಲ್ಲದಲೆ ನಾನೀಗಲೈ ತರಲಿಕೆಇಲ್ಲಿ ಸರ್ವವೆ ಆಗಿ ನೀ ಬಂದು ಮಲಗಿರುವೆಸುಳ್ಳನಿತು ಸೇರದಿದು ನಿನ್ನವಗೆ ಬಿಡು ಪಥವ1 ಮನುಜ ಸಂಗವನಳಿದು ಮಹದರಣ್ಯವ ಹೊಕ್ಕುಅನಂತರದ ಪುಣ್ಯದಾಶ್ರಮವ ನೋಡಿಸನುಮತದಿ ಪೂಜೆಯನು ಮಾಳ್ಪೆನಾನೆಂದು ಬರೆಘನಸರ್ಪವಾಗಿ ನೀನಡ್ಡ ಬಿದ್ದಿಹೆ ದೇವ 2 ಸಕಲ ಸಂಗವನುಳಿದು ಸ್ವಾನುಭಾವಗಳಿಂದಅಖಿಲ ಮೃಗಗಳ ಕೂಡಿ ನಿಶ್ಚಲತೆಯಿಂದಭಕುತಿಯಲಿ ನಿನ್ನನು ಭಜಿಪೆನೆಂದೈದುತಿರೆಭಕುತನಿಗೆ ಸರ್ಪನಂತಿಹುದಿದೇನೈ ಸ್ವಾಮಿ3 ಏಕಾಂತ ಗೃಹಗಳಲಿ ಏಕಾಂತ ಸ್ಥಳಗಳಲಿಏಕಾಂತವಾಗಿ ನಿನ್ನನೆ ಪೂಜಿಸಿಏಕಾಂತ ಸರ್ವಸಾಧನವೆನುತಲೈದುತಿರೆಏಕಾಂತ ಮಾತೇಕೆ ಪಥವ ಬಿಡು ಎಲೆ ದೇವ 4 ಶುಕಗೆ ಪಂಜರದಂತೆ ಸಾಕ್ಷಿಯೆನಗಿರುತಿರಲುಅಖಿಲ ಚಿಂತೆಯ ಗಿಡುಗ ಬರಲಹುದೆಮುಕುತಿದಾಯಕ ಚಿದಾನಂದ ಗುರು ಕೇಳೆನಗೆಯುಕುತಿಯುಂಟೇ ಬೇರೆ ಬಿಡುಬಿಡಿರೆ ಬಿಡು ಪಥವ5
--------------
ಚಿದಾನಂದ ಅವಧೂತರು